ಒಟ್ಟು 729 ಕಡೆಗಳಲ್ಲಿ , 88 ದಾಸರು , 609 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧ್ಯಾನವನೆ ಮಾಡಿ ನವರತ್ನ ಸಿಂಹಾಸನಸಾನಂದದಿಂದ ನಿಮಗರ್ಪಿಸುವೆನುಶ್ರೀ ನಿಧಿಯೆ ಪಾದ್ಯಾಘ್ರ್ಯ ಮಧುಪರ್ಕಗಳನು ಸು-ಮ್ಮಾನದಿಂದರ್ಪಿಸುವೆ ಗೌರಿ ದೇವಿ ಜಯ 1 ತುಂಗಭಧ್ರಾ ಸರಸ್ವತಿ ಯಮುನೆ ಕಾವೇರಿಗಂಗಾದಿ ಶುಭತೀರ್ಥ ಸಲಿಲದಿಂದಮಂಗಲಸ್ನಾನವನೆ ರಚಿಸಿ ಜಡೆವೆಣೆದು ಕುಸುಮಂಗಳಂ ಮುಡಿಗೆ ಮುಡಿಸುವೆನಂಬಿಕೆ 2 ಚಂದ್ರಗಾವಿಯ ಸೀರೆ ಕುಪ್ಪಸವ ತೊಡಿಸುವೆನುಚಂದದಿಂದರಿಸಿನವ ಲೇಪಿಸುವೆನುಚಂದ್ರಕಸ್ತೂರಿ ತಿಲಕ ಕುಂಕುಮದ ರೇಖೆಯನುಅಂದದಿಂದಿಡುವೆ ಶ್ರೀ ಗೌರಿ ನಿಮಗೆ3 ಕಣ್ಣ ಕಪ್ಪಿಟ್ಟು ಕರಯುಗಕೆ ಗಂಧವ ತಿವುರಿಚಿನ್ನದಾಭರಣ ನಿಕರವನಿಡುವೆನುರನ್ನ ದುಂಗುರ ಹಾರ ಪದಕದಿಂದ ಶೃಂಗರಿಸಿನಿನ್ನ ಪದಯುಗವ ಪೂಜಿಪೆನು ಗೌರಿ ಜಯ4 ಚಾರು ಪುನ್ನಾಗ ಪೂಗಸಿರಿಸ ಸುರಹೊನ್ನೆ ಸಂಪಗೆ ಮೊದಲಾದ ಪೂಸರವ ಸಿರಿಮುಡಿಗೆ ಮುಡಿಸುವೆನು ಗೌರಿ ಜಯ 5
--------------
ಕೆಳದಿ ವೆಂಕಣ್ಣ ಕವಿ
ಧ್ಯಾನಿಸೋ ಮಾನವಾ ದೀನೋದ್ಧಾರಿ ವಿಜಯದಾಸರನಾ | ದೇವಮಾನಿತರು ಧೇನು ಸಮ ಪ. ಭೃಗುಮುನಿಯೆ ಈ ಜಗದಿ | ಸಂಜನಿಸಿ ಮದಪಾಲಿಸಿ ಘೋರ ಭವಕ್ಲೇಶ ಪರಿಹರಿಸಿ ಸುಖವಾ ಬೀರಿದಾ1 ಗುರುಪವನ ಶಾಸ್ತ್ರವ ಕನ್ನಡದಿ ವಿರಚಿಸಿ | ಜ್ಞಾನಪಥ ತೋರಿ ಶಿರಿವದನ ಮಹಿಮೆ ಸಾರಿದಾ2 ಶ್ರೀವರ ಶಾಮಸುಂದರನ ಸ್ತವಿಸಿ ಸಂಸೇವಿಸಿ | ಭಾವದಲಿ ನೋಡಿ ನಲಿದವರು ಕರುಣಾಶಾಲಿ 3
--------------
ಶಾಮಸುಂದರ ವಿಠಲ
ಧ್ರುವತಾಳ ಬಂದೆನ್ನ ಕಾಯೊ ಕರುಣದಿಂದ ಕೈಪಿಡಿದು ದೀನ ಬಂಧುವೆ | ಒಂದೂರು ಮಂದಿರಾರ್ಯ | ಸಂದೇಹವ್ಯಾಕೆ ನಿನ್ನ ಪೊಂದಿದ ಸತ್ಯಶಿಷ್ಯವೃಂದದೊಳಗೆ ನಾ ಕಡೆಯವನೋ ತಂದೆ ನೀನಗಲಿದಕೆ ನೊಂದೆನೊ ನಾ ಭವ ಬಂಧದೊಳಗೆ ಬಿದ್ದು ಬಹುವಿಧದಿ ನಮಗಿನ್ನು ಹಿಂದು ಮುಂದು ಮನಕೆ ನೀ ತಾರದಲೆ ಕಣ್ಣೆರೆದು ಈಕ್ಷಿಸಿ ಎನ್ನೊಳಿದ್ದ | ಮಂದಮತಿಯ ಬಿಡಿಸಿ ಮಧ್ವಶಾಸ್ತ್ರವ ತಿಳಿಸೋ | ಮಂದರಕುಜ ಭಕ್ತಸಂದೋಹಕೆ | ಹಿಂದೆ ವರದಾತನೆಂದೆನಿಸಿದ ಕರ್ಮಂದಿಗಳರಸರ ಕ್ಷೇತ್ರದಲ್ಲಿ | ಬಂದ ಸಮಯವೆನ್ನ ಬಿನ್ನಪ ಚಿತ್ತಕೆ | ತಂದು ತವಕದಿಂದ ಭೂಸುರರ ಸಂದಣಿಯಲ್ಲಿ ನಿನ್ನ ಮಹಿಮೆ ಪ್ರಕಟಿಸಿ ಇಂದುವಿನಂತೆ ಪೊಳೆದು ಮೆರೆದ ಕರುಣೀ ಅಂದಿನಾರಭ್ಯ ನೀನೆ ಸ್ವರೂಪೋದ್ಧಾರಕರ್ತನೆಂದು ದೃಢನಾಗಿ ನಂಬಿ ತ್ವತ್ವಾದಕೆ ವಂದಿಸಿ ಮೊರೆ ಇಡೆ ಇಂದು ನೀನು ನಮ್ಮ ಛಾತ್ರಮಾಲೆಯಲ್ಲಿ ಸಂದವನೆಂದು ಮನದಿ ಭಾವಿಸಿದೆವು | ಎನುತ ಛಂದದಿ ಸಿಂಧು ಪೋಲುವ ಕರುಣಿ ಸುಜ್ಞಾನ ಸದ್ಭಕ್ತಿ ಕುಂದದ ವೈರಾಗ್ಯ ಭಾಗ್ಯವ ಕೊಟ್ಟು ಧಾಮ ಶಾಮಸುಂದರವಿಠಲನ ಒಂದೇ ಮನದಿ ಭಜಿಪಾನಂದ ಭಾಗ್ಯವ ನೀಡೋ 1 ಮಟ್ಟತಾಳ ಅನುಪಮಸುಚರಿತ್ರ | ಅನುದಿನದಲಿ ಎನ್ನ ಅಣುಗನೆಂದರಿತೊಂದು ಕ್ಷಣವಗಲದೆ ಇದ್ದು ಬಿನುಗು ಬುದ್ಧಿಯ ಕಳದು | ಧನದಾಶೆಯ ಕಡಿದು ಮನದ ಚಂಚಲ ಬಿಡಿಸಿ | ಹನುಮ ಭೀಮಾನಂದ ಮುನಿಕೃತ ಪಾದವನಜ ಸೇವಿಪುದಕೆ ತನುವಿಗೆ ಬಲವಿತ್ತು ದಿನದಿನದಲಿ ನೆನೆಯುವ ಸಂಪದ ಗುಣನಿಧಿಯನುಗ್ರಹಿಸೋ 2 ತ್ರಿವಿಡತಾಳ ಭವ ಮೊದಲಾದ ಬುಧರು ಹರಿಯಾಜ್ಞೆಯಲಿ ಮದಡಾರುದ್ಧರಿಸಲು ಜಗದಿ ಬಂದು | ಸುಧೆಯಂತೆ ಸವಿಯಾದ ಮಧುರ ಕನ್ನಡದಲ್ಲಿ | ಮುದದಿ ರಚಿಸಿದಂಥ | ಪದಸುಳಾದಿಗಳಲ್ಲಿ ಹುದುಗಿದ ವೇದಾರ್ಥ ತ್ವತ್ವಾದಾಶ್ರಿತರಿಗೆ | ವಿಧ ವಿಧದಿಂದಲಿ ಬೋಧಿಸುತಾ | ವದಗಿದ ಅಜ್ಞಾನ ಸದೆದು ಸುಮತಿ ಕೊಟ್ಟು ಸದಾಚಾರ ಸಂಪನ್ನನೆನಿಸಿ | ಅವರ ಬದಿಗನು ನೀನಾಗಿ ಸುಕ್ಷೇಮ ಚಿಂತಿಸಿ | ಅಧಮರಿಂದಲಿ ಬಾಧೆ ಬಾರದಂತೆ ಸದಯನೆ ಸಲಹಿದ ಕಾರಣದಿಂದಲಿ | ವಿದಿತವಾಯಿತು ನಿನ್ನ ಮಹಿಮೆ ಮನಕೆ ಪದೆ ಪದೆ ಪ್ರಾರ್ಥಿಪೆ ಸದಮಲಗಾತ್ರನೆ ಅಧೋಗತಿ ತಪ್ಪಿಸಿ ಬಿಡದೆ ಒಲಿದು | ಯದುಕುಲೋದ್ಭವ ಪೊಳೆವಂತೆ ಕೃಪೆಮಾಡು 3 ಅಟ್ಟತಾಳ ಗುರುವರ ಶ್ರೀ ನರದ್ವಿರದಾರಿ ನಾಮಕ | ವರ್ಣಿಸಲಳವಲ್ಲ ನಿನ್ನುಪಕಾರವು | ಜ್ವರಬಹುಜನರಿಗೆ ಪರಿಹಾರ ಮಾಡಿದಿ ತುರಗ ಕಚ್ಚಿದ ಘಾಯ ತಕ್ಷಣ ಮಾಯಿಸಿದಿ | ಶರಣಗೆ ಬಂದಪಮೃತ್ಯು ಓಡಿಸಿದಿ | ಅರಿಯದರ್ಭಕಿ ಹೋಮಕುಂಡದಿ ಬೀಳೆ | ತ್ವರಿತಭಿಮಂತ್ರಿಸಿ | ಭಿಸ್ಮವಲೇಪಿಸಿ ಉರಿತಂಪುಗೈಸಿದಿ || ಪುರದವರ ಮೊರೆ ಕೇಳಿ ಮಾರಿಯ ಭಯ ಕಳೆದಿ | ತರುಳರು ದಕ್ಕದ ದೀನಕುಟುಂಬಕ್ಕೆ ಚಿರಕಾಲ ಬಾಳುವ ಸಂತಾನ ನೀಡಿದಿ | ಸ್ಮರದೂರ ನಿಮ್ಮಾಜ್ಞೆ ಮೀರದ ಕಿಂಕರನ ತರುಣಿಗೆ ಸೋಂಕಿದ ಭೂತವ ಬಿಡಿಸಿದಿ | ನೆರೆನಿನ್ನ ಪದವನುಸರಿಸೀದ ಸುಜನಕ್ಕೆ ವರಭಾಗವತಶಾಸ್ತ್ರ ಅರುಹೀದಿ ಸಲುಹೀದಿ | ಹರಿಕಥಾಮೃತಸಾರವ ಸಾರೀದಿ | ತರತಮದ ಭೇದಜ್ಞಾನವ ಬೀರಿದಿ | ವರದಾಯಕ ಸತ್ಯದೇವನ ಪಾವನ ಚರಿತೆ ವಿಚಿತ್ರವಾಗಿ ಪರಿಪರಿ ಪೇಳುತ್ತ ಪೊರೆದೆ ನಿನ್ನವರನ್ನು ಧರೆ ಋಣ ತೀರಿದ ಕುರುಹು ಅರಿತು ಒಬ್ಬರಿಗೆ ಸೂಚಿಸದೆ ಪರಲೋಕಯಾತ್ರೆಗೆ ತೆರಳಿದದಕೆ ನಿನ್ನ ಪರಿವಾರದ ನಾವೆಲ್ಲರೂ ನಿತ್ಯಸಿರಿಯ ಕಳೆದುಕೊಂಡ ಲೋಭಿಗಳಂದದಿ ಶರಧಿ ಕಾಯ ತೊರೆದರೇನಾಯಿತು ಮರೆಯಾದೆ ಗೋವತ್ಸನ್ಯಾಯದಂತೆ ನೀ ದರುಶನ ಸ್ವಪ್ನದಿಗರೆದು ಸಂತೈಸುತ ನಿರಯಕೆ ನಮ್ಮನು ಗುರಿಮಾಡದೆ ಪೊರೆ ತರುಳಗೊಲಿದ ಶಾಮಸುಂದರವಿಠಲ ಸರಸಿಜಾಂಘ್ರಿಯುಗ್ಮ ಮಧುಪನೆಂದೆನಿಸಿ 4 ಆದಿತಾಳ ಭೂಮಿ ವಿಬುಧವರ ರಾಮವಿಠಲಾರ್ಯರ ಶ್ರೀ ಮುಖದಿಂದ ಸಕಲಶಾಸ್ತ್ರಮನನಮಾಡಿ | ಶ್ರೀಮತ್ಸು ಶೀಲೇಂದ್ರಸ್ವಾಮಿಗಳಿಂದಲಿ ನೀ ಮಾನಿತನಾಗಿ ಕಾಮಿತಫಲಪ್ರದ ರಾಯರ ದಯಪಡೆದು ಕಾಮಾದಿ ಷಡ್ರಿಪುವರ್ಗ ಜಯಿಸುತಲಿ | ನೇಮನಿಷ್ಟೆಯಲಿ ಜಪತಪಾಚರಿಸುತ ಹೇಮರಜತಧನ ತೃಣಸಮಾನೆನಿಸುತ ಸಾಮಜವರದನ ಕಳೆಯದೆ ಪಾಮರ ಜನರನು ಪ್ರೇಮದಿಂದದ್ಧರಿಸಿ | ಸಾಮಗಾನಪ್ರೇಮ ಶಾಮಸುಂದರನ ಧಾಮವ ಸೇರಿದ ಹೇ ಮಹಾಮಹಿಮನೆ 5 ಜತೆ ನಿನ್ನೊಡೆಯನ ದ್ವಾರಾ ಶ್ರೀ ಶಾಮಸುಂದರನ ಎನ್ನಂತರಂಗದಿ ನೋಳ್ವಂತೆ ಕರುಣಿಸೋ ||
--------------
ಶಾಮಸುಂದರ ವಿಠಲ
ನಂದ ಯಶೋದೆಯರಲ್ಲಿ ಬಂದು ಅವತರಿಸಿದ ಇಂದಿರಾಪತಿಯ ಮಹಿಮೆಯನಲುವಿನಿಂದ ಚಂದವನೆಲ್ಲ ರಚಿಸಿದ ಪ. ದೇವನಾರಾಯಣ ಭೂದೇವಿ ಮೊರೆ ಕೇಳಿ ದೇವಕಿಯಲ್ಲಿ ಅವತರಿಸಿದ ದೇವಕಿದೇವಿಯಲ್ಲಿ ಅವತರಿಸಿದ ಧರಾದೇವಿ ಭಾರವನೆಲ್ಲ ಇಳಿಸಿದ1 ದುಷ್ಟ ದೈತ್ಯರನಟ್ಟಿ ಆಪನೊಳು ಮನೆಕಟ್ಟಿಪಟ್ಟದ ರಾಣಿಯರ ಒಯ್ದಿಟ್ಟಪಟ್ಟದ ರಾಣಿಯರ ಒಯ್ದಿಟ್ಟ ಶೌರ್ಯವ ಎಷ್ಟು ವರ್ಣಿಸಲ್ಪಶವಲ್ಲ 2 ಹರಿಯು ವೈಕುಂಠದ ಪರಿಯ ತೋರುವೆನೆಂದುಧರೆ ಮೇಲಾಗ ಜನಿಸಿದ ಧರೆ ಮೇಲಾಗ ಜನಿಸಿದ ದ್ವಾರಕಾಪುರನಿರ್ಮಿಸೆಂದು ಜಲದೊಳು 3 ದೊರೆ ಕೃಷ್ಣಯ್ಯನ ಹಿರಿ ಮಡದಿಮನೆಪರಿಯ ವರ್ಣಿಸಲು ವಶವÀಲ್ಲಪರಿಯ ವರ್ಣಿಸಲು ವಶವಲ್ಲ ದ್ವಾರಕಾಸಿರಿಕೇಳಿ ಬ್ರಹ್ಮ ಬೆರಗಾದ4 ಅಪ್ಪ ರಾಮೇಶನು ಇಪ್ಪಂಥ ಅರಮನೆಯುಅಪ್ರಾಕೃತ ವೈಕುಂಠಅಪ್ರಾಕೃತ ವೈಕುಂಠ ವೆಂಬೋದುಸುಪ್ರಕಾಶವಾಗಿ ಹೊಳೆದೀತು5
--------------
ಗಲಗಲಿಅವ್ವನವರು
ನದಿಗಳ ಸ್ತೋತ್ರ ಕಾವೇರಿ ಕಲುಷ ಸಂಹರಳೆ ಕಾವೇರಿ ಪ ವಿಧಿ ಸುತೆ ನಮ್ಮ | ಕಾವುದು ಬಿಡದಲೆ ಅ.ಪ. ಅಮಿತಾಭ ಕವೇರ ನೃಪನು | ಪುಣ್ಯಶಮದಮದಿಂದಯುತನು | ಸಾರಿಹಿಮನಗ ತಪ್ಪಲುಗಳನು | ದಿವ್ಯಸಮಶತದಶ ವರ್ಷಗಳನು | ಆಹಸುಮನ ಸೋತ್ತಮನಾದ | ಬೊಮ್ಮನ ಧೇನಿಸಿಅಮಮಸುಘೋರವು | ವಿಮಲ ತಪವ ಗೈದ 1 ಬೊಮ್ಮ | ಅಚ್ಚ್ಯುತ ಮಾಯ ತನ್‍ಇಚ್ಛೆಯ ಸುತೆ ನಿನ | ಮೆಚ್ಚು ಪುತ್ರಿಯಹಳು 2 ಸ್ಮರಣೆ ಮಾತ್ರದಿ ವಿಷ್ಣುಮಾಯಾ | ದಿವ್ಯತರುಣಿ ರೂಪದಿ ಬ್ರಹ್ಮರಾಯ | ನೆದುರುಕರವ ಮುಗಿದು ಪೇಳು ಜೀಯಾ | ಎನೆಬರೆದನಾ5ದು ಕವೇರ್ಕನ್ಯಾ | ಆಹಸರಿತು ರೂಪದಿ ಮೋಕ್ಷ | ವg್ವ5ರ ವಹುದು ನೀಸರುವ ತೀರಥ ಮಯಿ | ಪರಿವುದು ಈ ಪರಿ 3 ಎರಡು ಅಂಶವು ನಿನಗಿಹುದೂ | ಒಂದುಸರಿತಾಗಿ ಪ್ರವಹಿಸುವೂದು | ಮತ್ತೆತರುಣಿ ರೂಪದಿ ಪತ್ನಿಯಹುದು | ಮುನಿವರ ಕುಂಭ ಸಂಭವಗಹುದು | ಆಹಕರೆಸಿ ಲೋಪಾಮುದ್ರೆ | ಮೆರೆವುದು | ಪತಿವ್ರತೆಶಿರೋಮಣಿ ಎನಿಸಿ ನೀ | ಮೆರೆವುದು ಭುವಿಯಲ್ಲಿ 4 ವರವಿತ್ತು ಮರೆಯಾಗೆ ಅಜನು | ನೃಪವರ ಸುತೆಯೊಡನೆ ಪೊರಟನು | ಕಾಲಕರ ಮರತನದಿ ಕಳೆದಾನು | ಮುಂದೆವ್ಯೆರಾಗ್ಯದಿಂ ಪೇಳಿದಾನು | ಆಹಪರಿಶುದ್ಧನಿಹೆ ನಿನ್ನ | ದರುಶನ ಮಾತ್ರದಿಪರಮ ನಿಷ್ಕಾಮದ | ಕರ್ಮವನೆಸಗುತ್ತ 5 ಹರಿಧ್ಯಾನದೊಳು ಬಲುರತ | ನಿರೆನರಪತಿ ಹರಿಲೋಕ ಗತ | ನಾಗೆತರುಣಿ ಕಾವೇರಿಯು ಸ್ಥಿತ | ಘೋರವರ ತಪವನ್ನು ಗೈಯ್ಯುತ್ತ | ಆಹಇg5ರಲೀ ಪರಿ ಪರಿ ಪರಿ ಬೇಡಿದಳ್ 6 ಸರಿದ್ರೂಪಳಾಗಿನ್ನು ಪರಿದೂ | ಹರಿಶರಣರ ಪಾಪವ ತರಿದೂ | ಮತ್ತೆಸರುವರ ತಾಪವ ಕಳೆದೂ | ಇನ್ನುಸರಿತು ಗಂಗಾದಿಗೆ ಹಿರಿದೂ | ಆಹವರ ಕೀರ್ತಿಯಿಂದಲಿ | ಮೆರೆಯುತ ಲೋಕೋಪಕರಳೆನಿಸಿ ಪ್ರವಹಿಸಿ | ಶರಧಿಯ ಸೇರ್ವಂಥ 7 ಸ್ಮರಣೆ ಮಾತ್ರದಿ ಪಾಪನಾಶಾ | ಮಾಳ್ಪಗಿರಿಯುಂಟು ಸಹ್ಯ ಆದ್ರೀಶ | ಅಲ್ಲಿತರು ರೂಪಮಲಕ ದೊಳ್ವಾಸಾ | ನಿನ್ನಚರಣ ಕಮಲವ ವಾಣೀಶಾ | ಆಹವಿರಜೆ ಪುಣ್ಯದ ಜಲ | ವರ ಕಂಬುವಿಲಿ ತುಂಬಿಎರದಭಿಷೇಚಿಸೆ | ಪರಿವುದದರ ಸಹ 8 ವರ ದತ್ತಾತ್ರೇಯ ನೆಂದೆನಿಸಿ | ತವಶಿರ ಸ್ಥಾನದಲ್ಲಿ ವಾಸೀಸಿ | ಎನ್ನಶರಣರ ಅಘಗಳ ಹರಿಸೀ | ನಿನ್ನವರ ದಕ್ಷಗಂಗೆಂದು ಕರೆಸೀ | ಆಹವರ ತವೋತ್ಸಂಗದಿ | ಶಿರವಿಟ್ಟು ಮಲಗುತ್ತಸರಿದ್ವರಳೆನಿಸುತ್ತ | ಮೆರೆಸುವೆ ನಿನ್ನನು 9 ಮಂಗಳ ಜಪತಪ ಸ್ನಾನ | ಮಿಕ್ಕಗಂಗಾದಿ ತೀರ್ಥಾನುಷ್ಠಾನ | ನಾಲ್ಕ್ಯುಗಂಗಳೊಳಗೆ ಮಾಳ್ಪ ನಾನಾ | ಕರ್‍ಮಂಗಳ್ತವೋತ್ಸುಂಗ ಶಿರಸ್ಥಾನ | ಆಹಮಂಗಳಾಮಲಕ ಜಲಂಗಳಿಗ ಸಮ ಕ-ಳೆಂಗಳ್ಷೋಡಶಕ್ಕೊಂದಂಗ ಸರಿ ಬರೆದು 10 ದಾತ | ತನ್ನಕಾಮಂಡುಲಿನೊಳ್ ನಿನ್ನ ಧೃತ | ಆಹನೇಮದಿಂದೊಂದಂಶ | ಲೋಪಾ ಮುದ್ರೆಯು ಆಗಿಆ ಮಹ ಮುನಿಯನ್ನ | ಪ್ರೇಮದಿ ವರಿಸುವೆ 11 ವರವಿತ್ತು ಮರೆಯಾಗೆ ಹರಿಯು | ಅತ್ತವರ ಮುನಿ ತಪಸಿನ ಧಗೆಯು | ಕಂಡುಸುರಜೇಷ್ಠ ಅವನೆದುರು ಹೊಳೆಯು | ಆಗಬರೆದನು ಜೀವನ ಧೊರೆಯು | ಆಹಹೊರಲಾರದವ ತಾನು | ವರ ಸನ್ಯಾಸದಿ ಮನವಿರಸಿರುವುದು ನಿರಾ | ಕರಿಸುತ್ತ ಪೇಳ್ದನು 12 ಚಕ್ರಧರ | ತುಂಬಿದ ಮನದಿಂದಹಂಬಲಿಸಿ ಕೈಗೊಂಡು | ಬೆಂಬಿಡದೆ ಸಲಹುವ 13 ಮುನಿವರಗಸ್ತ್ಯನು ಅಜನ | ಮಾತಮನವಿಟ್ಟು ಕೇಳುತ್ತ ವಚನ | ಪೇಳ್ದಅನುಕೂಲ ಭಾರ್ಯಳಾಳ್ವುದನ | ಯೋಗಅನುಕೂಲಿಸುವುದೆಂಬ ಹದನ | ಆಹವನಜ ಗರ್ಭನು ತನ್ನ | ತನುಜೆಯ ಸುಕನ್ಯಾಮಣಿಯ ಕಾವೇರಿಯ | ವಿನಯದಿ ವರಿಸೆಂದ 14 ನಗ ಶೃಂಗದಿರಿಸುತ್ತಮಿಗೆ ಚೆಲ್ವ ಸರಿತಾಗಿ | ಪೋಗಲನುಗ್ರಹಿಸು 15 ಮೋದ ತಾಳುತ್ತಸುಗುಣೆಯ ಬೆಸಸೀದ | ನಗು ಮುಖದಿಂದಲಿ 16 ಹೊರ ಮುಖಳಾದಳ್ ಕಾವೇರಿ | ಮುನಿವರನ ಸತ್ಕರಿಸಲು ನಾರಿ | ದ್ವಿಜವರ ಪೇಳೆ ಬ್ರಹ್ಮಗನುಸಾರಿ | ಆಕೆವರಗಳ ಬೇಡಲು ಭಾರಿ | ಆಹಸುರಜೇಷ್ಠ ನ್ವೊರೆದಂತೆ | ವರಗಳ ನೀಯಲುಸುರಕನ್ಯಾಮಣಿಯಾಗ | ವರಿಸಿದಳಾ ಮುನಿಯ 17 ವಾಹನ ಪತ್ನಿ ಸೇರಿ | ಶಿರಿಕಂಸಾರಿ ಗರುಡನ್ನ ಏರಿ | ಕ್ರತುಧ್ವಂಸಿ ಉಮಾ ನಂದಿ ಏರಿ | ಇಂದ್ರಶಂಸಿ ಸೈರಾವತನೇರಿ | ಆಹಸಾಂಶರು ಯೋಗ್ಯ ನಿರಂಶರು ಸೇರಿ ಪ್ರ-ಶಂಸನ ಗೈಯುತ್ತ ವೈವಾಹ ನಡೆಸಿದರ್ 18 ಮದುವೆ ವೈಭವ ಪೇಳಲಾರೆ | ಜಗದುದಯಾದಿ ನಡೆಪರಿಹಾರೆ | ಹರಿಮುದ ಪೊಂದಲಿನ್ನೆದುರ್ಯಾರೆ | ಎಲ್ಲರ್ವೊದಗಿ ಆಶೀರ್ವದಿಶ್ಯಾರೆ | ಆಹವಿಧ ವಿಧ ದುಡುಗೊರೆ | ಅದ ಪೇಳಲಳವಲ್ಲಅದುಭುತ ಜರುಗಿತು | ಉದ್ವಾಹ ಕಾರ್ಯವು 19 ಗಮನ | ಮತ್ತೆಕಾವೇರಿ ಸಹ ಮುನಿ ಹಿಮನ | ಕೇಳ್ಕೆಭಾವಿಸುತಲ್ಲೆ ಕೆಲದಿನ | ಆಹಆವಾಸಿಸಿರೆ ಋಷಿ | ಸಾರ್ವರ ಮನ ತಿಳಿದುಆಹ್ವಾನ ವಿತ್ತಳು | ಸಹ್ಯಾದ್ರಿ ಸನಿಯಕ್ಕೆ 20 ಗಮನ | ಆಹಇಂಬಿಟ್ಟನ್ನೊಂದಂಶ | ಲೋಪಾಮುದ್ರೆಯು ಕುಂಭಸಂಭವ ಸಹ ಸಹ್ಯ ಅದ್ರಿಗೆ ಗಮಿಸಿದಳ್ 21 ಉತ್ತರ ಹಿಮನಗ ಬಿಡುತ | ವನಸುತ್ತುತ ವಿಂಧ್ಯ ಮೀರುತ್ತ | ಹಾಂಗೆಉತ್ತಮ ಸಹ್ಯಾಚಲೇರುತ್ತ | ಅಲ್ಯುನ್ನತ್ತ ಬ್ರಹ್ಮಗಿರಿ ಸಾರುತ್ತ | ಆಹಉತ್ತಮ ಕ್ಷೇತ್ರದಿ ಜತ್ತಾಗಿ ಕಮಂಡಲಒತ್ತಟ್ಟಿಗಿರಿಸುತ್ತ ಪತ್ನಿಗೆ ಬೆಸಸಿದರ್ 22 ಕಾಲ ಮುದದಿ ಕರಕದಿಂದಅದುಭೂತವೆನೆ ಸರಿದ್ವರಳಾಗಿ ಪ್ರವಹಿಸು 23 ಪರಿ ಕಾಲ ಸಮೀಪವಾಗಲು ಸುರಪ 24 ಹರಿ ಮನೋಭಾವಾನು ಸಾರಿ | ಮಳೆಗರೆಯಲನ್ಯತರುವ ಸಾರಿ | ಶಿಷ್ಯರುಗಳಾಶ್ರಯಿಸಲು ಮೀರಿ | ಕುಂಡಸರುವೆ ತೀರಥಗಳು ಉಸುರಿ | ಆಹಪರ್ವ ಕಾಲವು ಇದು | ಪೊರಮಡು ಕಾವೇರಿಪರಿವೆವು ನಿನ ಪಿಂತೆ | ತೀರ್ಥಗಳಗ್ರಣಿಯೆ 25 ವಿಧಿ ಬಂದ ಹಂಸವನೇರಿ | ಆವಮುದದಿಂದ ವನಗಳ್ ಸಂಚಾರಿ | ಇನ್ನುಅದುಭೂತಾಮಿತ ತೀರ್ಥ ಗಿರಿ | ಕಂಡುಒದಗಿ ಕರಕದ ಜಲ ಭಾರಿ | ಆಹಮುದದಿ ಮೀಯುತ ಜಪ ಅದುಭೂತಾಷ್ಟಾಕ್ಷರಪದುಮ ಸಂಭವ ಹರಿಧ್ಯಾನದಿ ರತನಾದ 26 ಮಂದ ಮಾರುತ ಬೀಸೆ ವಿಮಲ | ಧಾತ್ರಿಗಂಧ ವೆಂದೆನುತಲಿ ಬಹಳ | ಮುದದಿಂದೆಚ್ಚರಗೊಂಡು ಕಂಗಳ | ಮುಂದೆಸುಂದರಾಮಲಕಾ ಕೃತಿಗಳ | ಆಹಎಂದು ಕಾಣದ ದೃಶ್ಯ | ವೆಂದೆನುತಲಿ ಮನದಿಂದ ಧೇನಿಸೆ ಅದು | ಛಂದದಿ ಮರೆಯಾಯ್ತು27 ಸಿರಿ ಹರಿಯು | ಸಿರಿವತ್ಸಾಂಕಿತನು ಬಾಹು ದ್ವಿದ್ವಯು | ಇಂದಮೆಚು5Àೂಪವ ತೋರೆ ವಿಧಿಯು | ಆಹ |ಸಚ್ಚರಿತೆಯ ಪಾಡೆ | ನಿಚ್ಚಳಾಮಲಕದಉಚ್ಚರೂಪವ ಕಂಡು | ಅರ್ಚಿಸಿದನು ಬಹಳ 28 ಗಾತ್ರ ಪಾದ | ಬಿಸಜಗಳ್ವಂದಿಸಿಬಿಸಜ ಸಂಭವ ಗೈದ | ಅಸಮ ಸಂಪೂಜೆಯ 29 ಧಾತಾ ಸ್ವ ಕುಂಡಿಕಾಸ್ಥಿತ | ವಿಮಲ ತೀರ್ಥವು ವಿರಜೆಯಿಂ ಹೃತ | ಶಂಖಪೂರ್ತಿಸಿ ಪೂಜಾ ಪದಾರ್ಥ | ಪ್ರೋಕ್ಷಿಸಿಪೂತಾತ್ಮಾಮಲಕದಿ ಸ್ಥಿv5 ಆಹಶ್ರೀ ತರುಣೀಶನ | ದತ್ತಾತ್ರೇಯನ ರೂಪಖ್ಯಾತ ಪೂಜಿಸುತಿರಲಶರೀರ ವಾಕ್ಕಾಯ್ತು 30 ಪರಿ ಗೈಯ್ಯುವ ಭಾಮಾ ಮಣಿಕುರಿತು ಪೇಳಿತು ವಾಣಿ ನೇಮ | ನೀನುಶರಧೀ ಸೇರುವ ಮನೋ ಕಾಮಾ | ಆಹಪರಿಪೂರ್ಣವಹುದೀಗ | ವರ ತುಲಾಪರ್ವದಿಶರತ್ಕಾಲ ಮುಕ್ತಿದ | ಪರಿವುದು ಕಾವೇರಿ31 ತತುಕ್ಷಣ ಮುನಿಯ ಕಮಂಡ್ಲು | ದೊಳುಸ್ಥಿತ ಸರ್ವ ತೀರ್ಥಮಾನಿಗಳೂ | ಪೇಳೆತುತುಕಾಲ ಕವೇರ ತನುಜಳೂ | ಶೀಘ್ರಉತು ಪತ್ತಿ ತಾಳಿ ಪರಿದಾಳೂ | ಆಹಇತರ ತೀರಥಗಳು | ಸರಿತು ರೂಪದಿ ಹಿಂದೆಅತಿ ತ್ವರೆಯಲಿ ಪ್ರವ | ಹಿತರಾಗಿ ಪೋದರು 32 ಋಷಿವರ್ಯ ಸ್ನಾನವ ಮಾಡಿ | ಪರಿಕ್ಷಿಸಲಾಗ ವಿಸ್ಮಯ ಕೂಡಿ | ಶಿಷ್ಯರಿಗುಸರಲಾಕ್ಷೇಪದ ನುಡಿ | ಅವರುಸಿರಿದರ್ ಮಳೆಯ ಗಡಿಬಿಡಿ | ಆಹರಸ ರೂಪದಲಿ ಪರಿವ | ಅಸಮ ಪತ್ನಿಯ ಕೂಗೆಋಷಿಗೆ ಶಾಂತಿಯ ಸೊಲ್ಲ | ಒಸೆದು ಪೇಳಿದಳವಳೂ 33 ಸುರವರ ಪೂಜ್ಯ ಧಾತ್ರಿಯು | ಇನ್ನುತರುವು ಆ ಮಲಕದ ಬಳಿಯು | ತೀರ್ಥವರ ಶಂಖ ಸಂಜ್ಞಿತ ತಿಳಿಯು | ಇಲ್ಲಿವಿರಜೆಯ ದೊಂದಿಹ ಕಳೆಯು | ಆಹವರ ನಭೊ ಗಂಗೆಯು | ಸರಿ ಸಹ್ಯಾಮಲಕವುವರಣಿಸಲಳವಲ್ಲ | ಸರಿದ್ವರ ಮಹಿಮೆಯ 34 ಕೈವಲ್ಯ | ದಾತನ ಒಲಿಮೆಯು 35 ಗಂಗಾನದೀಗಗಳು ತಮ್ಮ | ಪಾಪಹಿಂಗಿಸಲೋಸುಗವಮ್ಮ | ತುಲಾಮಂಗಳ ಮಾಸದಲಮ್ಮ | ಒಂದುತಿಂಗಳಿಹರಿಲ್ಲಿ ಸಂಭ್ರಮ್ಮಾ | ಆಹಗಂಗೆ ದಕ್ಷಿಣಾಖ್ಯೆ | ಮಂಗಳೆ ಜನಗಳಘಂಗಳ ಕಳೆಯುತ್ತ | ತುಂಗೋಪಕಾರಿಯೆ 36 ಕಾವೇರಿ ಪ್ರವಹಿಸಿ ಭರತ | ವರ್ಷಪಾವಿಸುತಿಹಳು ತಾ ನಿರುತ | ಬಂದುಸೇವಿಸೂವರ ಪಾಪ ತ್ವರಿತ | ದೂರಗೈವಳೆಂಬುವದೆ ನಿಶ್ಚಿತ | ಆಹಈ ವಿಧ ಮಹಿಮೆಯ ಓವಿ | ಪಾಲಿಸಿದನು |ಶ್ರೀವರ ಶ್ರೀ ಗುರು | ಗೋವಿಂದ ವಿಠಲಯ್ಯ 37
--------------
ಗುರುಗೋವಿಂದವಿಠಲರು
ನಂಬಿದೆ ನಿನ್ನ ನೀರಜಪಾದ | ಇಂಬಿನಲ್ಲಿಟ್ಟು ಸಲಹೊ ಪ್ರಸಾದ ಪ ಅಂಬರೀಷನ ಶಾಪ ಹಿಂಗಿಸಿ ಕಳೆದ ದ- | ಯಾಂಬುಧಿ ನೀನೆಂದು ಹಂಬಲಿಸಿದೆ ಹರಿಯೆ ಅ.ಪ ಉಗ್ರನ್ನ ಖಳವಂಚಿಸಿ ತನ್ನ ಕ- | ರಾಗ್ರವಾ ಶಿರದಲ್ಲಿ ಇಡಬರಲು || ಅಗ್ರೇಶ ಕಾಯೆಂದು ಅವನೀಗ ಮೊರೆಯಿಡೆ | ಶೀಘ್ರದಿಂದಲಿ ಬಂದು ಕಾಯ್ದು ಕರುಣಿಯೆಂದು1 ಕಾಲದೂತರು ಅಜಾಮಿಳನೆಳೆಯಲು | ನಾಲಿಗೆಯಿಂದ ನಾರಗÀನೆನ್ನಲು || ಆಲಸ್ಯ ಮಾಡದೆ ನಿನ್ನ ದೂತರನಟ್ಟಿ | ಓಲಗ ವೈಕುಂಠವಿತ್ತ ಭಾಂದವನೆಂದು 2 ಭೂತಳದೊಳು ನಿನ್ನನು ಪೋಲುವ | ದಾತರ ನಾನೆಲ್ಲಿ ಕಾಣೆ ಶ್ವೇತವಾಹನ || ದಾತ | ವಿಜಯವಿಠ್ಠಲನಹುದೆಂದು ದೃಢವಾಗಿ 3
--------------
ವಿಜಯದಾಸ
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನರನಾಗಿ ಜನಿಸಿ ಫಲವೇನು ಜಗದಿ ಹರಿಪಾದ ಸ್ಮರಣೆಯ ಅರಿಯದ ಮನುಜ ಪ ಕಮಲಪೀಠಪಿತನ ವಿಮಲಶ್ರೀಪಾದಗಳ ಅಮಿತ ಮಹಿಮೆ ಪೊಗಳಿ ಯಮಪಾಶ ಗೆಲಿಯುವ 1 ಭುವನವೀರೇಳಕ್ಕೆ ಜೀವಾಳುಯೆನಿಸಿದ ಭವದೂರನರ್ಚಿಸಿ ಭವಮಾಲೆ ಗೆಲಿಯದ 2 ಪಕ್ಷಿಗಮನ ಪರಮಮೋಕ್ಷದಾಯಕ ಭಕ್ತ ಪಕ್ಷ ಶ್ರೀರಾಮನೊಲಿಸಿ ಮೋಕ್ಷವ ಪಡೆಯದ 3
--------------
ರಾಮದಾಸರು
ನರಸಿಂಹಾವತಾರ ಕಮಲ ಸ ಮಾಧಿರೂಢ ಪದಾಬ್ಜ ಪೂರ್ಣ ಸು ಭಂಜನ ಮಾಧವ ಮುರಾರೆ ವ್ಯಾಧಿ ಪೀಡೆಯ ಪರಿಹರಿಸು ಮಹ ದಾದಿ ತತ್ವಯಂತ್ರೆ ನುತ ಪ್ರ ಲ್ಹಾದ ರಕ್ಷಕ ನರಹರಿಯೆ ದಹಿಸಖಿಳ ಶತ್ರುಗಳ 1 ಪ್ರಳಯಕಾಲದ ರವಿ ಸಮೂಹದ ಕಳೆಗು ಮಿಗಿಲಾಗಿರುವ ಮುಖದೊಳ್ ಥಳತಳಿಪ ದಂಷ್ಟ್ರಗಳ ತೋರುತ ಕಳೆದು ವದನವನು ಛಲದಿ ಚೀರುತ ದಾನವನ ಕಂ- ಗಳನು ಮುಚ್ಚಿಸಿ ಪಿಡಿದು ತಿಕ್ಕಿದ ಬಲ ಪಯೋನಿಧಿ ನರಹರಿಯೆ ದಹಿಸಖಿಳ ಶತ್ರುಗಳ 2 ಕಂಭದೊಳಗಂದಾದ ರವ ಕೇ- ದಿವಿಜ ಕ- ದಂಬ ಭಯಗೊಂಡಂಬರದ ಮೇಲಿಂಬುಗೊಂಡಿರಲು ಜಂಭ ವೈರಿಯ ಜರಿದು ಕೆಡಹಿದ ಕುಂಭಿ ಕುಂಭ ಭುಜದ್ವಯನ ಮುರಿ ದಂಬುಜಾಲಯರಮಣ ನರಹರಿ ದಹಿಸಖಿಳ ಶತ್ರುಗಳ 3 ಅಡಿಯಿಡುವ ರಭಸಕೆ ದಿಗಿಭಗಳು ನಡು ನಡುಗಲು ನಿಶಾಮುಖದಿ ಕೆಂ ಗಿಡಿಯನುಗುಳುತಲಾದಿ ದೈತ್ಯನ ಪಿಡಿದು ಖತಿಯಿಂಗ ತೊಡೆಯೊಳಿಕ್ಕೀರೈದು ಖರತರ ಕೊಡಲಿಯಂತಿಹ ನಖಗಳಿಂದ ನೊಡಲ ಬಗೆದಿಹ ನರಹರಿಯೆ ದಹಿಸಖಿಳ ಶತ್ರುಗಳ 4 ವರರಥಾಂಗಾದಿಗಳ ದ್ವಾದಶ ಕರದಿ ಧರಿಸುತಲೆರಡು ಕರದೊ ಳ್ಕರುಳಮಾಲೆಯ ಪಿಡಿದು ಮಿಕ್ಕಾದೆರಡು ಹಸ್ತಗಳ ಬೆರಳ ಕೊನೆಗಳ ತಿರುಹಿ ದಾನವ ಸುರವರನಖ ಮುಖದಿಂದ ಬಿಚ್ಚಿದ ನಿರವಧಿಕ ಬಲಪೂರ್ವ ನರಹರಿ ದಹಿಸಖಿಳ ಶತ್ರುಗಳ 5 ದತ್ತ ಸ್ವಾತಂತ್ರ್ಯವನು ಮೀರ್ದಾ ಪತ್ತು ಘಟಿಸುವ ಕಾಲದಲಿ ಪುರು- ಷೋತ್ತಮನ ನೆನೆದವರ ಕೈಪಿಡಿದೆತ್ತುತಿಹನೆಂದು ನಿತ್ಯ ಶಾಸ್ತ್ರಾದಿಗಳ ಶೋಧಿಸು ತುತ್ತುಮರು ಮೊದಲೆಂದ ಪೌರಾ- ಣೋಕ್ತಿಗಳ ನಿಜದೋರು ನರಹರಿ ದಹಿಸಖಿಳ ಶತ್ರುಗಳ 6 ಶೇಷಶಿಖರನಿವಾಸ ತತ್ಪದ ದಾಸರನು ಕಾಪಾಡಿ ಸಲಹುವ ಭಾಷೆಯನು ನೀ ಮರೆಪರೆ ಮದುಪಾಸ್ಯ ಸರ್ವೇಶ ಈಷದಂಜದ ದ್ವೇಷಿ ದುರ್ಜನ ನಾಶಗೈಸುವುದುಚಿತವೈ ಸವ ಕಾಶವ್ಯಾತಕೆ ನರಹರಿಯೆ ದಹಿಸಖಿಳ ಶತ್ರುಗಳ 7
--------------
ತುಪಾಕಿ ವೆಂಕಟರಮಣಾಚಾರ್ಯ
ನರಹರಿ ತೀರ್ಥಯತಿವರ್ಯ ಇಷ್ಟೆಂದೊ ಚರಿಯ ಪ ಸುರವಿನುತ ಪದಹರುಷತೀರ್ಥರ ಕರಕಮಲ ಸಂಜಾತರೆನಿಸುತ ಧರೆಯೊಳಗೆ ಸಿರಿಸಹಿತರಾ ಮನ ಕರೆದು ಧರೆಸುರ ಜನಕೆ ತೋರಿದ ಅ.ಪ ಚರಿಸುತ ಬರಲು ಗಜಪುರದಿ ಪುರ- ದರಸನಿಲ್ಲದಿರೆ ಯೋಚಿಸುತ ಕರಿಕರದಿ ವರಮಾಲಿಕೆಯ ಕೊಡಲಾಕ್ಷಣದೀ ಯತಿ ವರರ ಕಂಠದಲಿ ಹಾಕಲು ಜನ ಸಭದಿ ಪುರಜನದ ಪ್ರಾರ್ಥನದಿ ದ್ವಾದಶ ವರುಷ ಪ್ರಜರನು ಪೊರೆದು ಕೋಶದೊಳಿ- ರುವ ಧರಿಜಾಸಹಿತ ರಾಮನ ತರಿಸಿ ಪೊರಟರು ಕುದುರೆಯೇರುತ1 ಆ ಮಹಾಮುನಿಪರು ತ್ವರದಿ ಬಂದು ಶ್ರೀ ಮದಾನಂದ ತೀರ್ಥರ ಪದಯುಗದಿ ಪ್ರೇಮವಂದನ ಪೂರ್ವಕದಿ ಸೀತಾ ರಾಮಮೂರ್ತಿಯ ನೊಪ್ಪಿಸಿದರು ಕರದೀ ಶ್ರೀ ಮನೋಹರ ನಂಘ್ರಿಯುಗಲವ ಪ್ರೇಮದಿಂದಲಿ ಪೂಜಿಸುತಲಿರೆ ಈ ಮಹಾತ್ಮರ ಕರೆದು ಕೊಟ್ಟರು ನೇಮದಿಂದರ್ಚಿಸಿರಿ ಎನುತಲಿ 2 ಭಾಸುರ ಹೇಮಮಂಟಪದಿ ನಿತ್ಯಾ ಶ್ರೀಸೀತಾರಾಮನರ್ಚಿಪರು ವೈಭವದೀ ಭೂಸುರ ಕೃತ ವೇದಘೋಷದಿ ಮತ್ತೆ ವ್ಯಾಸಸೂತ್ರಗಳ ನಾಮಾವಳಿ ಪಠಣ ದಿ ದೇಶ ದೇಶಗಳಲ್ಲಿ ಚರಿಸುತ ತೋಷತೀರ್ಥರ ಮತವ ಬೋಧಿಸಿ ಸಿರಿ ನರ ಕೇಸರಿಗೆ ಪ್ರಿಯದಾಸರೆನಿಸಿದ 3
--------------
ಕಾರ್ಪರ ನರಹರಿದಾಸರು
ನರ್ತನಗೋಪ ಕೃಷ್ಣ | ವಿಠಲ ಪೊರೆ ಇವನಾ ಪ ಅರ್ತು ನಿನ್ನಂಘ್ರಿಯಲಿ | ದಾಸ್ಯ ಕಾಂಕ್ಷಿಪನಾ ಅ.ಪ. ಪತಿ ಸುಪ್ರೀಯ | ಮಧ್ವಾಂತರಾತ್ಮಸದ್ಧರ್ಮರತಿಯಿತ್ತು | ತಿದ್ದಿ ಸಂಸ್ಕತಿಗಳನುಶ್ರದ್ಧಾಳು ವೆಂದಿನಿಸು | ಸಿದ್ಧಾಂತ ಸಥದೀ 1 ಬೋಧ ಓದಗಿಸಿಕಾಯೋ | ಬಾದರಾಯಣದೇವಮೋದದಿಂ ಪ್ರಾರ್ಥಿಸುವೆ | ಹೇ ದಯಾಪೂರ್ಣ 2 ಧ್ಯಾನುಪಾಸನವಿತ್ತು | ಶ್ರೀನಿವಾಸನಮನದಿಕಾಣುವ ಸುವಿಜ್ಞಾನ | ನಿನಾಗಿ ಕೊಡುತಾಮೌನಿಕುಲ ಸನ್ಮಾನ್ಯ | ಜ್ಞಾನದಾಯಕ ಹರಿಯೆದೀನಜನ ಮಂದಾರ | ನೀನಾಗಿ ಪೊರೆಯೊ 3 ಪಿತೃ ಮಾತೃ ಪರಿವಾರ | ವ್ಯಾಪ್ತ ಹರಿಮೂರ್ತಿಯನುಅರ್ಥಿಯಿಂದಲಿ ಭಜಿಪ | ಮತಿಯ ಪಾಲಿಸುತಾಕರ್ತೃತ್ವ ಭ್ರಾಂತಿಯನು | ಹತಮಾಡಿ ಶ್ರೀಹರಿಯೆಕೀರ್ತಿವಂತನ ಗೈಯ್ಯೋ | ಆರ್ತರುದ್ಧರಣಾ 4 ಮುನ್ನವೇ ತ್ಯೆಜಸನು | ನನ್ನೆಯಿಂ ಸೂಚಿಸಿಹಚೆನ್ನ ಅಂಕಿತವನ್ನೆ | ಇನ್ನು ಸ್ಥಿರಪಡಿಸೀಘನ್ನ ಉಪದೇಶವನು | ಚಿತ್ಗಾನಿಗೆ ಇತ್ತಿಹೆನೋಮನ್ನಿಸೀಕೃತ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಳಿನನಾಭ ಸುಂದರ ಸುಗುಣಾಕರ ಕಮಲೇಶ ಜಗದೀಶ ಪ ಚಲಿಸಬಲ್ಲರೇ ನಿನ್ನ ಬಲವಿಲ್ಲದಿರಲು ಸಕಲ ಸುರನರರು ಅ.ಪ ಬ್ರಹ್ಮಾದಿಗಳು ನಿನ್ನ ಸಮ್ಮತಿಯಲಿ ಈ ಬ್ರಹ್ಮಾಂಡದಲಿ ತಮ್ಮ ಕರ್ಮರಚಿಸಿ ನಿನ್ನ ಮರ್ಮವನರಿಯಲು ತಮ್ಮ ಕಾಲವ ಕಳೆಯುವರು 1 ಅಜ್ಞಾನದೂರನೆ ಸುಜ್ಞಾನ ಮೂರುತಿ ಯಜ್ಞನಾಮಕ ಪರಮಾತ್ಮ ನಿನ್ನ ಜಿಜ್ಞಾಸದಿಂ ಸುಪ್ರಜ್ಞೆಯ ಪೊಂದದ ಅಜ್ಞಾನಿ ಇದನರಿಯುವನೇ 2 ಸರ್ವತ್ರ ವ್ಯಾಪ್ತನೆ ಸರ್ವಾಗಮಾರ್ಥನೆ ಸರ್ವ ಪ್ರೇರಕ ಸರ್ವೇಶ ಗರ್ವ ತೊರೆದು ನೀನೋರ್ವ ಸ್ವತಂತ್ರನೆಂ ದರಿವ ಜನಕೆ ಸುಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ನಾಚಿಸಿದೆಯ ದೇವಯನ್ನ ಎಲ್ಲಈ ಚರಾಚರ ತುಂಬಿಹ ವ್ಯುತ್ಪನ್ನ ಪ ಶ್ರೀಗಿರಿ ನೋಡುವೆನೆಂದು ನಾಸಾಗಿ ಪಯಣಗೊಂಡು ಬಂದುರಾಗವುದಿಸಿ ಮನಕಿಂದು ಮುಂದೆಭೋಗ ತರದ ಮನ ತೂರಿತು ನಿಂದು 1 ಮಧ್ಯಾಹ್ನ ಬಿಸಿಲೊಳು ನಡೆಯೆ ನಾನುಅದ್ವಯವಿಲ್ಲದೆ ಹಾದಿ ನೀರ್ಗುಡಿಯೆಇದ್ದ ಚೈತನ್ಯ ತಾ ನುಡಿಯೆ ಇಂತುಹೊದ್ದ ಶರೀರ ಬಳಲಿ ನೆಲಕೆಡೆಯೆ 2 ಧರಣಿಯ ಸುರರೂಪ ತಾಳಿ ನೋಡೆವರಣ ವರಣ ರುದ್ರಾಕ್ಷಿ ಚಾಳಿಚರಣ ಕಿರಣದಲ್ಲಿ ಹೂಳಿ ನಾನುಗುರುವೆ ಎಂದು ನುಡಿವುದ ಕೇಳಿ 3 ಎಲ್ಲಿ ಪೋಗುವೆ ಎಂದು ಕೇಳೆಮಲ್ಲಿಕಾರ್ಜುನನ ನೋಡಿಯೇ ಬಹೆನೆಂದುಸೊಲ್ಲುಡುಗಲು ನಾನಿತ್ತೆಂದು ಗುರುಸುಳ್ಳು ಆದನೆ ಸರ್ವ ಪೂರಿತನಿಂದು 4 ಸರ್ವರೂಪದು ಮೃಷೆಯಾಯ್ತು ಎಲ್ಲಸರ್ವಜನರಿಗೆ ಬೋಧಿಸುವಡೇನಾಯ್ತುಸರ್ವತಾನೆನಿಪುದೇನಾಯ್ತು ಎಲ್ಲಸರ್ವರನುಳಿದು ಬಂದಿಹುದೊಳಿತಾಯ್ತು 5 ಇಂತು ಬುದ್ಧಿಗಳಿಂದ ಝಡಿಯೆ ಎಲ್ಲಅಂತು ಕೇಳುತ ನೀವು ಆರೆಂದು ನುಡಿಯೆನಿಂತಲ್ಲಿ ದೃಶ್ಯವ ಪಡೆಯೆ ಕಂಡುಸಂತೋಷದಿಂ ನಾ ಸಾಷ್ಟಾಂಗವೆರಗೆ 6 ಆನಂದ ತೊರೆಯೊಳು ಮುಳುಗಿ ಚಿ-ದಾನಂದ ಗುರುವ ಕಾಣದೆ ಮನಮರುಗಿಧ್ಯಾನದಿ ಕಂಗಳು ತಿರುಗಿ ನೋಡಿತಾನೇ ತಾನಾದ ಘನದಿ ಮನ ಕರಗಿ7
--------------
ಚಿದಾನಂದ ಅವಧೂತರು
ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ ಪೋರತನದವನು ಎರೆಡು ತೆರೆಗಳಲ್ಲಿ ದೂರಾಗಿ ಮೊರೆಯು ಅಲ್ಲವೆಂದು ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ ಧೀರ ತಾ ಕರವನು ಪಿಡಿದ ಬಳಿಕ 1 ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ ಅಗದಂಕರನು ತಾನು ಬಳಿಗೆ ಬಂದು ಬಗೆಬಗೆಯಿಂದಲಿ ಸುರಸ ಪದಾರ್ಥಗಳು ಸೊಗಸಾಗಿ ಉಣಿಸಲು ಚಿಂತೆಯುಂಟೆ2 ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ ಕರ್ಣಧಾರನು ತಾನೆ ಬಂದು ನಿಂದು ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3 ತನ್ನಯ ಹಿತವು ತಾ ವಿಚಾರಿಸಲವಂಗೆ ಚನ್ನಾಗಿ ಪರಮ ಗುರು ತಾನೆ ಬಂದು ಸನ್ಮಾರ್ಗವನು ತಾನೆ ಪೇಳುವೆನೆನಲು ಇನ್ನು ಆಯಾಸವುಂಟೆ ಅವನಿಗೆ 4 ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು ಪಾದ ಪದುಮ ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ ಈ ಸುಗುಣ ಗುರುರಾಯ ಎನಗೆ ಒಲಿದ 5
--------------
ವ್ಯಾಸತತ್ವಜ್ಞದಾಸರು
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ