ಒಟ್ಟು 1057 ಕಡೆಗಳಲ್ಲಿ , 98 ದಾಸರು , 821 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲಮುಖಿಯೆ ಕಮಲಾಲಯೆ ಕಮಲೆಕಮಾಲಾಕ್ಷಿಯೆ ಕೋಮಲೆ ಪ. ಕಮಲನಾಭನ ಪಾದಕಮಲಯುಗಳ ಮಧುಪೆಕಮಲಜ ಜನನಿಯೆ ಕಮಲಮಿತ್ರೆ ಸುಪ್ರಭೆ ಅ.ಪ. ಅರುಣನ ಪೋಲುವ ಚರಣವು ಬಾಲಚಂದಿರನ ಸೋಲಿಪ ನಖವುಬೆರಳಲ್ಲಿ ಪಿಲ್ಲಿ ಕಾಲುಂಗುರ ಮೆಂಟಿಕೆ ಕಿರುಗೆಜ್ಜ್ಯಂದಿಗೆ ಪೆಂಡೆಯುಕರಿಯ ದಂತದಂತೆ ಜಾನುದರ್ಪಣ ಜಂಘೆ ಉಟ್ಟ ದಟ್ಟಿಯು ನೆರಿಗೆಯುಹರಿನಡು ಕಿಂಕಿಣಿ ಭರದಿ ಒಡ್ಯಾಣವು ಉದರ ತ್ರಿವಳಿರೇಖೆ ವರ ಕಂಚುಕಧಾರಿ1 ಉರೆ ವೈಜಯಂತೀ ಮಂದಾರಮೆರೆವ ಚುಬುಕ ಬಿಂಬಾಧರ ಕೂರ್ಮಕದಪು ಕಿರಿದಂತ ರತುನದ ಕರಡಿಗೆ ವದನೆ 2 ಸುರಭಿ ಚಂಪಕನಾಸಿಕ ಮೂಗುತಿ ಶಾಂತ ಪರಮ ಕರುಣ ನೋಟದಹರಿಣನಯನೆ ಪುಬ್ಬುಸ್ಮರನ ಚಾಪದಂತೆ ಕರ್ಣಾಭರಣಲಂಕಾರ ಸಿರಿಕುಂಕುಮ ಕಸ್ತೂರಿ ತಿಲಕದ ಮೇಲೆ ಅರಳೆಲೆ ಬೈತಲೆಯ ಸರ ಕುರುಳುಸುಳಿಯು ಪರಿಪರಿ ರತ್ನ ಖಚಿತದ ವರ ಮಕುಟವು ಕೋಟಿ ತರಣಿಯಂತೊಪ್ಪುವ 3 ತೆತ್ತೀಸಕೋಟಿ ದೇವತೆಗಳು ವಾಣಿ ಭಾರತಿ ಪಾರ್ವತಿ ಮೊದಲಾದಉತ್ತಮಸ್ತ್ರೀಯರು ಛತ್ರಚಾಮರನೆತ್ತಿ ಬೀಸುವಲಂಕಾರಸುತ್ತಗಂಧರ್ವರು ತುಂಬುರ ನಾರದರು ಸ್ವರವೆತ್ತಿ ಪಾಡುವ ಝೇಂಕಾರತತ್ತರಿತರಿಘಟ್ಟ ಝಣುತ ಝಣುತ ಎಂದು ಎತ್ತ ನೋಡಿದರತ್ತ ತಥೈ ಎಂಬೊ ಶಬ್ದ 4 ಅಜ ಫಾಲಾಕ್ಷ ಸುರವಿನುತೆಮೋಕ್ಷದಾಯಕಿ ಲೋಕರಕ್ಷಕಿ ರಮಾದೇವಿ ಇಕ್ಷುಧನ್ವನ ಜನನಿಅಕ್ಷಯಫಲದ ಗೋಪಾಲವಿಠಲನ ಪ್ರತ್ಯಕ್ಷ ತೋರಿಸೆನ್ನಪೇಕ್ಷೆ ಪೂರೈಸೆ ತಾಯೆ 5
--------------
ಗೋಪಾಲದಾಸರು
ಕಮಲಾಲಯ ಕೈಹಿಡಿದೆನ್ನ ಪಾಲಿಸುಮುನ್ನ ಕರುಣ ಕಟಾಕ್ಷದಿ ಎನ್ನಕಮಲಾಲಯ ಪ ಸ್ವಾಮಿ ಭೃತ್ಯನ್ಯಾಯ ಅರಿಯದೆ ನಾ ನಿನ್ನಪರವÀು ಪಾಮರನೆಂದು ನುಡಿದೆನು ಪರಮ ಪಾಮರನೆಂದು ನುಡಿದ ಅಪರಾಧವ ಸ್ವಾಮಿ ಚಿತ್ತದಲೆ ಹಿಡಿಬ್ಯಾಡ 1 ಗುಣನಿಧಿ ನೀ ಎಂದು ಗುಣಕೆ ಕೀರ್ತನೆ ಗೈದೆಎಣಿಸದಿರೆನ್ನ ಅಪರಾಧಎಣಿಸದಿರೆನ್ನ ಅಪರಾಧ ಎನುತಲೆ ಮಣಿದು ಸಾಷ್ಟಾಂಗ ಕ್ಕೆರಗಿದಳು2 ನಿನ್ನವರ ಅಪರಾಧ ಇನ್ನೇನು ನೋಡದೆಮನ್ನಿಸ ಬೇಕೊ ಕಮಲಾಕ್ಷಮನ್ನಿಸ ಬೇಕೊ ಕಮಲಾಕ್ಷ ಎನುತಲಿ ಕನಿದ್ರೌಪತಿ ನುಡಿದಳು3 ಬಡನಡ ಬಳಕುತ ಕುಚಗಳಲ್ಲಾ ಡುತ ಮುಡಿದಿದ್ದ ಪುಷ್ಪ ಉದುರುತಮುಡಿದಿದ್ದ ಪುಷ್ಪ ಉದುರುತ ಸುಭದ್ರೆಅಣ್ಣನ ಅಡಿಗೆರಗಿದಳು4 ಹೆಣ್ಣು ಕೊಟ್ಟ ಮ್ಯಾಲೆ ಹಿತವ ಚಿಂತಿಸಬೇಕು ಇನ್ನು ನುಡಿದಲ್ಲಿ ಫಲವೇನೊಇನ್ನು ನುಡಿದಲ್ಲಿ ಫಲವೇನೊ ಅಣ್ಣಯ್ಯಎನ್ನ ಮುಖವ ನೋಡಿ ಕರುಣಿಸೊ 5 ಎನ್ನವ್ವ ಸುಭದ್ರಾ ಈ ನುಡಿನಿನಗ್ಯಾಕೆ ನೀನು ನಿಮ್ಮಿಂದ ನಿಮ್ಮವರುನೀನು ನಿಮ್ಮಿಂದ ನಿಮ್ಮವರಿಗೆ ಪ್ರಾಣವ ನಾನು ಕೊಡುವೆನು 6 ಮೊದಲೆ ಅತ್ತೆಯ ಮಗ ಆದರದಿಂದ ನಿನ್ನ ಕೊಟ್ಟೆ ಹೆದರೋನೆ ಅವನು ನಮಗಿನ್ನುಹೆದರೋನೆ ಅವನು ನಮಗಿನ್ನು ಎನುತಲೆಮುದದಿ ರಾಮೇಶ ನುಡಿದನು7
--------------
ಗಲಗಲಿಅವ್ವನವರು
ಕರುಣ ಪಡೆಯಬೇಕು ಮನುಜ ಗುರುಗಳಾ ಪ. ಕರುಣ ಪಡೆಯಿರೊ ಗುರು ಮಧ್ವರಾಯರ ಹರುಷದಿ ಹರಿಯನು ನಿರುತದಿ ಸ್ಮರಿಸುವ ಗುರು ಅ.ಪ. ಸ್ಮರಿಸಿದ ಮಾತ್ರದಿ ಶರಧಿಯ ದಾಟುತ ವರಪ್ರದ ರಾಮನ ತÀರುಣಿಗುಂಗುರವಿತ್ತು ಹರಿ ಕರುಣಾಮೃತವೆರಡು ರಾಮರ ಚರಣ ಸ್ಮರಣೆಯನು ನಿರುತ ಕೊಡುವ ಗುರು 1 ಕಂತುಜನಕನ ಅಂತರವರಿತು ನಿಂತು ಕೌರವ ಕುಲ ಸವರುತಲೆ ಅಂತಕಗಿತ್ತಾ ಕಾಂತೆ ದ್ರೌಪದಿಯ ಪಂಥವ ಸಲಿಶಿದ ಕುಂತಿತನುಜ ಗುರು 2 ಮಧ್ವ ಮುನಿಗಳಾಧ್ವರ ಪಾಲಕ ಮುದ್ದು ಕೃಷ್ಣನ ಹೃದ್ಗಮಲದೊಳಿಟ್ಟ ಅದ್ವೈತಿಗಳ ಸುವಾದಿಸಿ ಗೆದ್ದು ಶುದ್ಧ ಶ್ರೀ ಶ್ರೀನಿವಾಸನ ಭಕ್ತರ ಗುರು 3
--------------
ಸರಸ್ವತಿ ಬಾಯಿ
ಕರುಣಾಲವಾಲ ಜಿಷ್ಣುಪರಿಪಾಲ ವಿಷ್ಣು ವಿಶ್ವವ್ಯಾಪಿಸಕಲ ದೃಷ್ಟಾದೀಶ ಕೃಷ್ಣಲೋಲ ಪ. ಪೊಳೆವ ಗರುಡ ಸ್ಕಂಧವೇರಿ ಘಳಿರನೆ ಪೋಗಿ ಜಲಜವ ಹರಿಸೆ ದೈತ್ಯ ಬಲವಕೊಂಡು ಬಂದ ಮುರನ ಥಳಥಳಿಪ ಚಕ್ರದಿಂದ ತಲೆಯ ಭೂಮಿಗಿಳಿಸಿ ಮೆರೆದ 1 ಧುರದಿ ಮಂತ್ರಿ ಸುತರ ತರಿದು ಕರಿಯನೇರಿ ಖತಿಯ ತಾಳ್ದ ನರಕನನ್ನು ನಳಿನಾಂಬಕಿಯ ಕರದಿ ಭಂಗಿಸಿ ಸರಸಿಜ ಸಂಭವದತ್ತ ವರದಿ ಸಕಲ ಸುರರ ಗೆಲಿದ ಗರುವನನ್ನು ನಿಲಿಸಿ ಕ್ಷಣದಿ ಶಿರವ ಚಂಡನಾಡಿದವನೆ 2 ಧಾತ್ರಿದೇವಿ ಬಂದು ನಾನಾ ಸ್ತೋತ್ರ ಗೈಯೈ ಕರುಣದಿಂದ ಪಾತ್ರಗೊಲಿದು ಸತ್ರಾಜಿತನ ಪುತ್ರಿ ಒಡಗೊಂಡು ಸುತ್ರಾಮ ಮಂದಿರವನೈದಿ ಚಿತ್ರ ತಾಟಂಕಗಳ ದಿತಿಗೆ ಪುತ್ರ ತಾನೆಂದಿತ್ತ ಶ್ರೀಕಳತ್ರ ನಿನ್ನ ನಂಬಿರುವೆನು 3 ಸೌಂದರ್ಯಸಾರೈಕ ನಿಲಯಾ ನಂದಬೋಧಾಧಾರಮೂರ್ತಿ ಇಂದಿರಾವತಾರೆ ಭಾಮೆ ಎಂದ ನುಡಿ ಕೇಳಿ ಮಂದಹಾಸದಿಂದ ನಗುತ ಮಂದವಾಯು ಸುಳಿವ ಸುರರ ನಂದನದೊಳಿಂದುಕಿರಣ ಛಂದದೊಳಾನಂದಗೊಂಡ 4 ವಾರಿಜಾಕ್ಷಿಯೆಂದ ನುಡಿಗೆ ಧೀರತನವ ತೋರಿ ದೇವ ಪಾರಿಜಾತ ವೃಕ್ಷವ ಸರ್ಪಾರಿ ಮೇಲಿರಿಸಿ ಸಾರೆ ಸ್ವರ್ಗನಾಥ ಸ್ವಪರಿವಾರ ಸಹಿತ ತಡಿಯೆ ಗೆದ್ದು ದ್ವಾರಾವತಿಗೆ ಪೋಗಿ ಮೆರದ ನೀರಜಾಕ್ಷ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸುವುದು ಎನ್ನಾ ಕರಿವರದ ಕೇಶವ ಕರಪಿಡಿದು ಸುಖಪೂರ್ಣಾ ನಿನ್ನಡಿಗಳಂಬುಜ ಸ್ಮರಿಪರಲ್ಲಿಡ ಮುನ್ನಾ ಪರಿಹರಿಸು ಬನ್ನಾ ಪ ಸರಸಿಜಾಪತಿ ಸರಸಿಜೋದ್ಭವ ಹರಸುರಾಧಿಪ ವಂದ್ಯ ನಿನ್ನಯ ಎರವು ಮಾಡದೆ ತ್ವರ್ಯ ಸೌಖ್ಯವುಗರದು ಕರುಣದಿ ಅ.ಪ. ಜನನಿ ಜಠರದಿಂದ ನಿನ್ನಾಜ್ಞದಲಿ ನಾ ಜನಸಿದೆನೊ ಗೋವಿಂದಾ ಬಾಲತ್ವ ಕೆಲದಿನ ಕಳೆದೆನೊ ಮುಕುಂದಾ ಯೌವ್ವನವು ಬರುತಲೆ ವನಿತೆ ಮುಖ ಅರವಿಂದಾ ನೋಡುತಲೆ ಬಲು ಛಂದಾ ಮನವು ನಿಲ್ಲದು ಮಮತೆ ವಿಷಯದಿ ಮುನಿದು ಸಜ್ಜನರ ಸೇವಿಸಿ ಕೊನೆಯಗಾಣದೆ ಮಣಿವೆ ಅಂಘ್ರಿಗೆ ವನದಿಗಳ ವಮ್ಮನೆ (?) ನಡಿಸು ವೆಂಕಟಾ ಘನತೆ ನಿನಗಿದು ತಿಳಿದು ವೇಗದಿ ಅನುದಿನದಲಿ ಸಲಹುತಿಪ್ಪನೆ ಅನಿಮಿಷರ ಆಧಾರ ಮೂರುತಿ 1 ಮೊರೆಯ ಲಾಲಿಸು ಜೀಯಾ ಅರೆ- ಮೊರೆಯ ಮಾಡಲು ಪೊರೆವರ್ಯಾರೆಲೊ ಕಾಯಾ ಅ- ನ್ಯರನು ಕಾಣದೆಯರಗಿದೆನು ಸುರ ಸಹಾಯ ಸುರಧೇನು ಮನೆಯೊಳಗಿರಲು ವಿಠ್ಠಲರೇಯಾ ಮಾಯಾ ಬಲ ತಡದು ನಿಕ್ರವ ತರಲು ಜನರೊಳು (?) ಯರಗಿರಲು ನಿನಗೆಂದಿಗಾದರು ಅರಿದು ಅಗ್ಗಕೆ ಪೊರೆದು ಮಾನವ ಕರಿಯು ಕರೆಯಲು ಬರುವುದುಂಟೇ ಕರುಣಾಸಾಗರನೆಂಬೊ ನಿನ್ನಯ ಬಿರುದು ಉಳ್ಳದಕೊಂಡು ಸಾಧನೆ ಧರೆಯ ದುಷ್ಟರ ಬಾಧೆ ತಪ್ಪಿಸಿ ಹರುಷವನು ಅತಿಗರೆದು ನಿರುತದಿ 2 ಬಿಡೆನೊ ಕಡಲೊಡಗಾಡಿ ಬಿಂಕದಲಿ ಅದ್ರಿಯ ನಿಡಲಿ ಬೆನ್ನಲಿ ನÉೂೀಡಿ ಪಾದಗಳ ಎಳೆಯುತ ನಡೆದು ಕೋಪವ ಮಾಡಿಬಿಡು ದೈನ್ಯದಲಿ ಪೊಡವಿ ದಾನವ ಬೇಡಿ ಬಿಡೆ ನೋಡಡವಿಯೊಳ್ ಕಾಡಿನ ಮಡುವಿನೊಳು ಗಿಡವೇರಿ ಧುಮುಕಲು ಅಂಬರ ಬಿಟ್ಟು ಖಡ್ಗವ ಪಿಡಿದು ವಾಜಿಯನೇರಿದನು ಜರ ಕಡಿಯಪೋಗಲು ಕಂಡು ನಿನ್ನನು ಬಿಡೆನೊ ನಿನಗೆಂದಿಗಾದರು ಪೊಡವಿಪತಿ ಶ್ರೀದವಿಠ್ಠಲ ವಡಿಯ ನೀನೆಂತೆಂದು ನಂಬಿದೆ 3 (ಈ ನುಡಿಯ ಅರ್ಥ ಸ್ಪಷ್ಟವಾಗುತ್ತಿಲ್ಲ-ಅಶುದ್ಧ ಪ್ರತಿಯ ಕಾರಣದಿಂದ.)
--------------
ಶ್ರೀದವಿಠಲರು
ಕರೆಯೆ ಯಶೋದ ಕೃಷ್ಣನ ಕರೆಯೆ ಪ ನರಹರಿಯೆ ನಂದಗೋಪನ ಮರೆಯೆ ಮಾತಲಿ ಮಹಾ ದೊರೆಯೆ ಇವನ ಗುಣ- ವರಿಯೆವು ನೋಡಲಾಶ್ಚರ್ಯವಾಗೋದು ನಿ- ನ್ನರಮನೆಗೀತನ ಕರೆಯೆ 1 ನೋಡೆ ಈತಗೆ ಇನ್ಯಾರೀಡೇ ಕೋಪವ ಮಾಡಬ್ಯಾಡೆ ಮಾತಿಗೆ ಮಾತ- ನಾಡಿಂದಿರಾಪತಿ ಗಾಡಿಕಾರನೆಂದಾಡಿಕೊಂಬೆವೆ ನಮ್ಮ ಕಾಡುವೋದುಚಿತವೆ 2 ಬಾಲಗೋಪಾಲ ಕೃಷ್ಣ ಲೀಲೆಮಾಡುವೊ ದೊಡ್ಡಿ ್ವ ಶಾಲ ಉದರಕ್ಕೆ ಬೆಣ್ಣೆ ಪಾಲುಕುಡಿದು ನಮ್ಮಾಲಯದೊಳು ಬಂದು ಕಾಲಂದಿಗೆ ಧ್ವನಿ ಆಲಿಸಿ ಕೃಷ್ಣನ 3 ರೂಪನೋಡಿದರೆ ಸಣ್ಣ ಪೋರನೆನಿಸುವ ಅಪಾರಮಹಿಮ ಕೃಷ್ಣನ ವ್ಯಾಪಾರವ ನಾನಾಪರಿಯಿಂದಲಿ ಗೋಪನ ಮುಂದ್ಹೇ- ಳೀಪುರ ಬಿಡುವೆವೆ 4 ತುರುವ ಕಾಯುತ ಭಾಳಾತುರ ವಾರಿಜಾಕ್ಷ ನಮ್ಮ ತುರುವ ಪಿಡಿದು ನಿಂತ ತುರುವ ಭಾರಕೆ ಸೀರೆ ಜರಿದು ಬೀಳುತಲೆ ಸರಿಜನರೊಳು ಮಾನ ತೊರೆದಂತಾಯಿತು 5 ಕಾಂತರಿದ್ದಂಥ ಏಕಾಂತದೊಳಗೆ ಬಂದು ನಿಂತರಿಬ್ಬರೊಳಗ- ಭೃಂತರ ತಿಳಿಯದೆ ಭ್ರಾಂತಳಾದೆ ಎನ್ನ ಕಾಂತನೋ ಇವ ಶ್ರೀಕಾಂತನೊ ತಿಳಿಯದು 6 ನಂದನಂದನ ನಿನ್ನ ಕಂದ ಮಾಡುವೋದು ಬಾ- ಯಿಂದ ಹೇಳಿದರೆನ್ನ ಬಂಧು ಜನರು ಭೀಮೇಶಕೃಷ್ಣಗೆ - ನ್ನೊ ್ಹಂದಿಸಿಬಿಡುವೋರು ಸಂದೇಹವಿಲ್ಲದೆ 7
--------------
ಹರಪನಹಳ್ಳಿಭೀಮವ್ವ
ಕರ್ಪೂರದಾರತಿಯ ತಂದೆತ್ತಿರೆ ಚೆಲ್ವಸುಪ್ರಕಾಶಗೆ ಸುಜನರ ಕಾಯ್ವಗೆಪಾಂಡವಭಾವಗೆ ದೇವರ ದೇವಗೆನಿರ್ಜರೇಂದ್ರನ ಬಲಿ ಗರ್ಜಿಸುತಿರೆ ಕಂಡುಅರ್ಜುನಪ್ರಿಯ ತಾನು ಕುಬ್ಜನಾಗಿಹೆÉಜ್ಜೆ ಭೂಮಿಯ ಬೇಡಿ ಬಲಿಯ ಗರ್ವವನುನಿರ್ಜಿಸಲು ಬಂದ ವಾಮನಗೆ ನಿಸ್ಸೀಮನಿಗೆ ಪೂರ್ಣ ಕಾಮನಿಗೆ 1 ನಳಿನನಾಭನೆಂದು ತಿಳಿದು ಬೇಗನೆ ಬಲಿಕೆಳದಿಯ ಕರೆದುದಕವತರಿಸಿಚಲುವ ಪಾದವ ತೊಳೆದಿಳೆಯ ದಾನವ ಮಾಡೆನಳಿನಜಾಂಡಕ್ಕಾಗಿ ಬೆಳೆದವಗೆ ಬಹು ತಳೆದವಗೆ-ಭೂಮಿಯಳೆದವಗೆ 2 ಬಲಿಯ ಭಕ್ತಿಗೆ ಮೆಚ್ಚಿ ಚೆಲುವ ಉಡುಪಿನ ಕೃಷ್ಣಉಳಿದ ಭೂಮಿಯ ತೋರೆನ್ನುತ ನುಡಿಯೆಸತಿ ನಾಚಿಕೆಯಿಂದ ತನ್ನಳೆದುಕೋ ಎನ್ನತಲೆಯ ಮೆಟ್ಟಿದ ಬಹು ವಿಕ್ರಮಗೆ ಪರಾಕ್ರಮಗೆ ತ್ರಿವಿಕ್ರಮಗೆ3
--------------
ವ್ಯಾಸರಾಯರು
ಕರ್ಮ ಬೆನ್ನ್ಹತ್ತಿ ಕಾಡಲು ನೀ ಮಾಡುವುದೇನೊ ರಂಗ ಪ ಕೊಟ್ಟು ಕುದಿದೆನು ಮನದಿ ಇಟ್ಟ್ಹಂಗಿಸಿದೆ ಜವÀದಿ ಬಿಟ್ಟುಂಡೆನತಿಥಿಗಳೆಷ್ಟೆಷ್ಟೋ ನಾನು ಕೆಟ್ಟ ಕೃತ್ಯವ ಮಾಡಿ ಕೊಟ್ಟೆ ಪರರಿಗನಿಷ್ಟ ನಿಷ್ಠವಂತರ ಕಂಡು ನಿಷ್ಠೂರವಾಡಿದೆ 1 ಮತಿಭ್ರಷ್ಟನಾಗಿ ಪರಸತಿಯರಿಗೆ ಮನಸೋತೆ ಇತರ ವನಿತೆಯ ಗರ್ಭ ಪತನಗೈಸಿದೆನೊ ಕೃತಿಮಥನದಿ ಬಲುಹಿತಬೋಧವನೆ ಬೋಧಿ ಸುತ ನಾಶಗೈದೆನ್ನಹಿತಕಾಗಿ ಪರರ 2 ಕೊಡುವರಿಗೆ ಕಿಡಿಯಿಟ್ಟೆ ಬಡವರನು ಬಳಲಿಸಿದೆ ಒಡನುಡಿದ ಭಾಷೆಯ ನಡೆಸಲಿಲ್ಲೊಂದು ಒಡಗೂಡಿರ್ದರರೊಳು ಕೆಡಕುಹುಟ್ಟಿಸಿ ನಾನು ಜಡತನದಿ ದಿನಗಳೆದೆ ಕಡುಭ್ರಷ್ಟನಾಗಿ 3 ಪರಧನಪಹರಿಸಿದೆ ಪರರ ಗೃಹ ಮುರಿದೆನು ವರ ಮಾತಾಪಿತರ ಬಲ್ಪರಿಯಿಂ ನೋಯಿಸಿದೆ ಗುರುಹಿರಿಯರ ಜರೆದೆ ಪರನಿಂದೆಗೆಳಿಸಿದೆ ಗರುವದಿಂ ಚರಿಸಿದೆ ಶರಣಜನರೊಂದಿಸದೆ 4 ಕೃಪಣತ್ವ ಕಳಿಲಿಲ್ಲ ಚಪಲ ಚೇಷ್ಟಳಿಲಿಲ್ಲ ಚಪಲಾಕ್ಷನ ದಿನದಿ ಉಪವಾಸ ಗೈಯಲಿಲ್ಲ ಸುಪಥದಿ ಮನವಿಟ್ಟು ಶಪಿಸುತಲೆಡೆವಿಡದೆ ಜಪಿಸಿ ಶ್ರೀರಾಮಪಾದ ಕೃಪೆಯ ಪಡೆದವನಲ್ಲ 5
--------------
ರಾಮದಾಸರು
ಕಲಿರಾಯ ಬಂದಿಹನು ಕಾಣಿಕೆಯ ಪಿಡಿದು ಚೆಲುವಿನಿಂದನುಸರಿಸಿ ಕುಲವನುದ್ಧರಿಸಿ ಪ ಮೂರು ಯುಗದೊಳು ತಾನು ಸೇರಿಕೊಂಡನು ವನವ ಚೋರರಾಯರ ಸಂಗ ಬೇಡವೆನುತ ವೀರನಾಗಿಯೆ ಬಂದ ನಾಲ್ಕನೆಯ ಯುಗದೊಳಗೆ ಸಾರಿ ಬನ್ನಿರೊ ನಮ್ಮ ದೊರೆಯ ಮನ್ನಿಸಲು 1 ಮದಮುಖರ ಕಾಣುತಲೆ ಮುದದಿಂದ ಮನ್ನಿಸುತ ಕದನಕರ್ಕಶರನ್ನು ಕಾಮಿಸುವನು ಒದಗಿದನ್ಯಾಯಗಳನೊಲಿಸಿಕೊಂಬನು ತಾನು ಬೆದರಿಕೆಯು ಬೇಡ ನೀವಿದಿರುಗೊಳ ಬನ್ನಿ 2 ಸತ್ಯವೆಂಬುದನೆಲ್ಲ ಹತ್ತಿಸಿದ ಬೆಟ್ಟವನು ಮಿಥ್ಯ ನಿರ್ಮಳಕೆಲ್ಲ ಕುತ್ತಿಗೆಗೆ ಬಂತು ಒತ್ತಿಯಾಳುವ ಧರ್ಮ ಸತ್ತು ಹೋದನು ಹಿಂದೆ ಮೃತ್ಯು ಭಯ ನಮಗಿಲ್ಲ ಹತ್ತಿರಕೆ ಬನ್ನಿ 3 ತಪ್ಪಿ ಹೋಯಿತು ಶಾಸ್ತ್ರ ತಪ್ಪಾಯ್ತು ಪೌರಾಣ ಮುಪ್ಪು ಬಂದುದು ವೇದ ಕಪ್ಪಾದನಗ್ನಿ ತುಪ್ಪನ್ನ ಬೇಡವಗೆ ಇಪ್ಪ ಭಯಗಳು ಹೋಯ್ತು ಒಪ್ಪಿ ಕಾಣಿಸಿಕೊಂಡು ಸುಖಿಯಪ್ಪ ಬನ್ನಿ 4 ಸ್ನಾನವೆಂಬುದು ಯೆಲ್ಲ ಮಾನಿನಿಯ ಅಡಿಗೆಯೊಳು ಮೌನ ಜಪಗಳನೆಲ್ಲ ಕೃಷಿಕೊಂಡನು ಹಾನಿಯಾದರು ಯಜ್ಞಹೀನರಾದರು ಪಿತೃಗ ಳೇನ ಮಾಡುವರಿವರು ಅನುಮಾನ ಬೇಡೆನುತ 5 ದಯಯೆನಿಪವನು ಹೋಗಿ ಕೊಯ್ಸಿಕೊಂಡನು ಕೊರಳ ಭಯವಿಲ್ಲ ಹಿರಿಯರೂ ವ್ಯಯವ ಸೇರಿದರು ನಯನೀತಿ ಹೇಳುತಿಹ ಗುರುವಿನೊಳು ಕಣ್ಣಿಲ ್ಲ ಜಯವಾಯ್ತು ದೇಶದೊಳು ಹೊಯ್ಸಿ ಡಂಗುರುವ 6 ಶಿವನು ದುರ್ಗವ ಬಲಿದ ಜವನು ದಂಡವನಿಟ್ಟ ಬವಣೆಬಡುವನು ಕಮಲಭವನು ತನ್ನೊಳಗೆ ಹವಣನರಿಯದೆ ವಿಷ್ಣು ತವಕಿಸುವ ಮನದೊಳಗೆ ಕವಲು ಮನ ಬೇಡಿರಲು ಬಹುದು ಇವನೊಳಗೆ 7 ಪತಿಯ ಮರೆತಳು ಸತಿಯು ಸುತ ಮತಿಯ ತಪ್ಪಿದನು ಯತಿ ಸತತ ಮನದೊಳಗೆ ಖತಿಗೊಂಬನು ಚತುರವರ್ಣಾಶ್ರಮವ ಜೊತೆಯಾಗಿ ನಡೆಸುತಿಹ ಮತಿಯುತನು ದೃಢವೆಂದು ಕಾಯವನುಸರಿಸಿ8 ತಾಯಿ ತಂದೆಯ ಕೊಂದು ಜೀವ ಹಾನಿಯ ಮಾಡಿ ಬಾಯ ಹೊಯ್ದರು ಕೇಳ ಬಡವರನ್ನು ಮಾಯವಾದಿಯ ಮಾತು ಕೂಡಿಸುವ ಜೀವವನು ರಾಯರಾಯರ ಮುಂದೆ ನಡೆಸುತ್ತಲಿಹರು 9 ಆಡಿಗಾರರ ತಂದು ನಾಡ ಊಳಿಗಕಿಡುವ ನೋಡಿದನ್ಯಾಯ ಮಾತುಗಳ ಹಿಡಿತರುವನು ಕೂಡಿಸುವ ಜೀವವನು ಎಳೆನೀರು ಸಕ್ಕರೆಯು ಬೇಡಿದಿಷ್ಟಾರ್ಥದೊಳು ನೋಡಿ ನಡೆಸುವನು 10 ಕೆಟ್ಟನೀತಿಯ ಒಳಗೆಯಿಟ್ಟುಕೊಂಡರೆ ನಿಮ್ಮ ಗಟ್ಟಿಬಡಿಸುವ ದೊರೆಯು ದೃಷ್ಟಿಯಲಿ ನೋಡ ಕಷ್ಟವಿಲ್ಲದೆ ಸುಖದಿ ಹೊಟ್ಟೆಯನು ಹೊರಕೊಂಡು ಸೃಷ್ಟಿಯೊಳು ವರಪತಿಯ ಮುಟ್ಟಿ ಸೇವಿಪುದು 11 ಕಾಲದರಸಿನ ನೋಡಿ ಮೂಲ ಪಡಕೊಂಬುವರು ಆಲಸ್ಯವನು ಬಿಟ್ಟು ಸೇವಿಸುವುದು ಶಾಲು ಸಕಲಾಭರಣ ತೋಲಾಗಿ ಬರುತಿಹುದು ಜಾಲರೂಪವದಾಗಿ ಮನಕೆ ತೋರುವುದು 12 ತಾಯಿ ತಂಗಿಯರನ್ನು ಮೋಹಿಸಲು ದೊರೆರಾಯ ಬಾಯಹೊಯಿಯೆಂದೆನುತ ನೋಯನುಡಿ ಪೇಳ ಆಯವಾಗಿಹ ಪುರುಷ ಸಾಯಲಾಕ್ಷಣ ಬಂದು ಕಾಯವನು ಬಳಸುವನು ಮೋಹವನು ತೋರಿ13 ಹೀಗೆಂದು ಚರನೋರ್ವ ಕೂಗಿ ಕರೆಯಲು ಬಂದು ಅಗಲೇ ಎದ್ದು ಇದಿರಾಗಿ ಪರಿಜನವು ಬೇಗದೊಳಗನುಸರಿಸಿ ಭೋಗವನು ಕೈಕೊಂಡು ರಾಗದೊಳಗಿದ್ದರಾ ಭವಜಲದ ನಡುವೆ 14 ಹೇಡಿಗಳು ಬರಬೇಡಿ ಮೂಡ ಗುಡ್ಡೆಯ ಸೇರಿ ಕಾಡಫಲವನು ಮೆದ್ದು ಕೋಡಗಲ್ಲಿನೊಳು ಆಡುತಿಹ ವರಾಹತಿಮ್ಮಪ್ಪನ್ಹತ್ತಿರದಿ ಬೇಡಿಕೊಳ್ಳಿರೊ ಎನುತ ನೋಡಿ ನಗುತಿಹರು 15
--------------
ವರಹತಿಮ್ಮಪ್ಪ
ಕವಿ ಕವಿದು ಪೊಳೆವ ಭುವನಪಾವನ ಚರಿತ ಇಂದೀವರಾಕ್ಷ ಪ ತವಪೂರ್ಣ ನಿಜ ಒಲಿಮೆ ಪ್ರಭುಪೂರ್ಣ ಕವನದಲಿ ಮೋದ ಕರಿವರದ ಭವಭಂಗ ಪರಿಹಾರ ಕವನ ವೋದಿದ ಮಾತ್ರ ಧವಳ ಕೀರುತಿ ಬೆಳುದಿಂಗಳನು ಮೀರಿಹುದೊ 1 ತವಪೂರ್ಣ ಗುಣ ಕ್ರಿಯೆ ರೂಪ ಘನ ಭಾವಗಳು ಲವಲವಿಕೆ ಎಮ್ಮ ಚೇತನಕೆ ಕೊಟ್ಟು ಭವಭೀತಿಗೆ ಭೀತಿ ತಂದೊಡ್ಡುವುದೊ ಕಮಲೇಶ ಸವಿದುಣ್ಣುವಾ ಜನಕೆ ಜಡದಲ್ಲೂ ನೀ ಬರುವೆ 2 ಶ್ರವಣ ಮಾತ್ರಕೆ ಮೈಮರೆಸುವುದು ಮಹಸಿರಿಯು ಶುಕ ಪಿತ ಸವಿದ ರುಚಿಯು ಇಹುದು ಪವಮಾನ ಕೃಷ್ಣಾರ್ಯ ರಾಮಾರ್ಯರತಿ ವಲುಮೆ | ಶ್ರವಿಸುವುದು ಪಠಿಪರನು ಭಕ್ತಿಮತ್ತರ ಮಾಡಿ 3 ಕವಲುಮತಿಯಲಿ ಮುಳುಗಿ ಚಲಿಸದಿರು ಇದರಿಂದ ಭವಮೂಲಕುನ್ಮೂಲ ಇದರ ಮಹಿವi ಅವಲಿಯನು ತಿಂದವನು ಅಗಲಿರದೆ ಒಡನಿಹನು ಜವನ ದೂತರು ತಲೆಮಣಿದು ಓಡುವರೊ 4 ತತ್ವಾಭಿಮಾನಿಗಳಿಗಾಹಾರವಿದು ಸತ್ಯ ತತ್ವಾರ್ಥ ಬಲು ಸುಲಭದಲ್ಲೆ ಮನಕವಗಾಹ್ಯ ಸತ್ಕøತಿಯ ಮಾಡಿ ಚಿತ್ಸುಖವ ಉಣು ನಿತ್ಯ ವಾತಾತ್ಮ ಗುರು ಶ್ರೀ ಜಯೇಶವಿಠಲನ ನೋಡು 5
--------------
ಜಯೇಶವಿಠಲ
ಕಳವಳಿಪುದೆನ್ನ ಮನ ಕಮಲಾಕ್ಷ ಬಾರದಿರೆ ಪ ನಳಿನಸಂಭÀವ ಲಿಖಿತವೇನಿಹುದೊ ಸಖಿಯೆ ಅ.ಪ. ಪೋದ ವಿಪ್ರನು ಬರದಿರಲು ಏನು ಕಾರಣವೊ ಹಾದಿಯಲಿ ವಿಘ್ನ ತಾನೊದಗಿತೊ ಮಾಧವನಿಗೆನ್ನೊಳು ಮಮತೆ ಬಾರದೆ ಹೊಯ್ತೆ ಮೇದಿನಿಯೊಳೇಕೆ ನಾ ಪುಟ್ಟಿ ಬಂದನೆ ಸಖಿಯೆ 1 ನಿನ್ನ ಹೊರತೆನಗಿನ್ನು ಅನ್ಯಗತಿಯಿಲ್ಲೆಂದು ಭಿನ್ನವಿಸಿಕೊಂಡಿದ್ದೇನಾಯಿತೆ ಕರ್ಮ ಬಲವಂತವಾಗಿರಲು ಬನ್ನಪಡಿಸುತಲೆನ್ನ ಬಳಲಿಪುದು ಸರಿಯೆ 2 ವಸುದೇವ ಸುತನಾಗಿ ಶಿಶುತನದ ಕ್ರೀಡೆಯೊಳ್ ಅಸುರರನು ಸಂಹಾರ ಮಾಡಿದವಗೆ ಶಿಶುಪಾಲನಾಕಾಲದ ವಶಮಾಡಲಸದಳವೆ ಕುಸುಮಾಕ್ಷಿ ಕರಿಗಿರೀಶನೆ ಗತಿಯು ಸಖಿಯೆ 3
--------------
ವರಾವಾಣಿರಾಮರಾಯದಾಸರು
ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಕಾಯೊ ಬಾರೊ ಹರಿಯೆ ಕರುಣಾ ಪಯೋಂಬುಧಿ ಪ. ಕಾಯೊ ಬಾರೊ ಕರುಣಾಂಬುಧಿ ಕಮಲದ- ಳಾಯತ ನೇತ್ರ ರಸಾಯನ ಸುರಿವುತ ಅ.ಪ. ಸಿಲುಕಿ ಬಾಧೆಗೊಂಡು ಬಹು ಬೆದರುವ ದಾಸನ ಕಾದುಗೊಳ್ಳು ಕಂಬ್ವರಿಗದಾಬ್ಜಧರ ಮಾಧವ ಮಧುಮಥನ ಮನದಿ ವಿನೋದಿಸುವ ಕಥನ ಶ್ರೀ ಪದಾಬ್ಜಾಮೋದಯುಗ ಸಾಸ್ವಾದನಾತ್ಮಕ ವಿನೋದ ನಲಿವುತ 1 ಕತ್ತಲೆ ಮುಸುಕಿರುವ ಸಮಯದಿ ಸುತ್ತ ವ್ಯಾಘ್ರವಿರುವ ವನದಲಿ ಸತ್ವಹೀನವಾದೆತ್ತಿನ ಕೆಡಹುವದುತ್ತಮವೆ ಪುರುಷೋತ್ತಮ ನಿನ್ನಯ ತತ್ವಮಾರ್ಗ ತಿಳಿಸಿ ತ್ರಿಕರಣವೆತ್ತಿ ಬೋಧೆಗೊಳಿಸಿ ಜನೋತ್ತಮನೆನಿಸುತ 2 ಇಂದಿರೇಶ ನಿನ್ನ ಚರಣವನೆಂದಿಗು ನಂಬಿದನ ಬಂಧ ಬಿಡಿಸಿ ಕೃಪೆಯಿಂದ ಪೊರೆವನೆಂಬಂದಕಪಾಯವ ಕರುಣಾಸಿಂಧು ನಿನ್ನ ಕೀರ್ತಿ ಮನೋಗತ ಸಂದಣಗೊಳಿಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೋ ಪ್ರಾಣೇಶ ಕೀಶಕುಲೇಶ ವಾಯುಸುತನೆಂದು ಮೆರೆವ ಜೀವೇಶ ಪ ಅಂಜನಾದೇವಿಯೊಳ್ ಜನಿಸಿಕೊಂಡಿರುವಿ ಅಂಜದೆ ಲಂಕೆಗೆ ಬೆಂಕಿ ಹಚ್ಚಿರುವಿ ಸಂಜೀವನವ ತಂದು ಕಪಿಗಳನುಳಿಸಿದಿ ಕಂಜಾಕ್ಷಿ ಸೀತೆಗುಂಗುರವ ತಂದಿತ್ತೆ 1 ಕುಂತಿದೇವಿಯ ಗರ್ಭದೊಳಗುದ್ಭವಿಸಿದಿ ಪಾರ್ಥರೊಳ್ನೀನಗ್ರಗಣ್ಯನೆಂದೆನಿಸಿ ಪಂಥದಿ ಮಗದಾಧಿಪತಿಯ ಸಂಹರಿಸಿ ಕಾಂತೆಯ ತಲೆಯ ಕೂದಲನೆ ಕಟ್ಟಿಸಿದಿ2 ಪಾಜಕ ಕ್ಷೇತ್ರದೊಳ್ ನೀನವತರಿಸಿ ರಾಜತಾಸನದಿ ಶ್ರೀಕೃಷ್ಣನನಿರಿಸಿ ರಾಜೇಶ ಹಯಮುಖ ಕಿಂಕರನೆನಿಸೀ ಮೂಜಗದಲಿ ಶ್ರೇಷ್ಠಗುರು ನೀನೆಂದೆನಿಸಿ 3
--------------
ವಿಶ್ವೇಂದ್ರತೀರ್ಥ