ಒಟ್ಟು 1634 ಕಡೆಗಳಲ್ಲಿ , 111 ದಾಸರು , 1347 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲಿಗೆ ಪೋದಪೆ ಮಲ್ಲಿಮರ್ಧನ ಕೃಷ್ಣ ಗೊಲ್ಲಗೋಪಾಲನೀ ಬಲ್ಲೆನಾನಿದನು ಪ. ದೇವಕಿಯುದರದಿ ಜನಿಸಿ ಯಶೋದೆಯ ಕುವರನೆಂದೆನಿಸಿ ಮೆರೆದಂಥ ಸಾಹಸಿ 1 ಮಧುರೆಯೊಳುದಿಸಿ ನಂದವ್ರಜದಿ ಗೋವ್ಗಳ ಕಾಯ್ದು ಮದಿಸಿದಸುರರ ಸದೆವಡೆದ ಧೀರ 2 ಮಾತೆಯ ಮನಕಂದು ಪ್ರೀತಿಪಡಿಸಲೆಂದು ಮಾತುಲನನೆ ಕೊಂದು ತಾತಗೆ ನೆಲವಿತ್ತ 3 ರುಕ್ಮನ ಭಂಗಿಸಿ ರುಕ್ಮಿಣಿಯನುವರಿಸಿ ಚಕ್ರಧರ ಕೃಷ್ಣ 4 ತರುಣಿಯ ಮಾನಕಾಯ್ದು ನರಗೆ ಸಾರಥಿಯಾಗಿ ಧರೆಯಭಾರವೆಲ್ಲ ಪರಿದುಬಂದ ಮಲ್ಲ 5 ವರಶೇಷಗಿರಿದೊರೆ ನಿನಗೆ ನಾ ಹೊರೆಯೆ ಕರಿ ಧ್ರುವರನೆ ಪೊರೆದ ವರದನೆಂಬುದ ಮರೆಯೆ 6
--------------
ನಂಜನಗೂಡು ತಿರುಮಲಾಂಬಾ
ಎಲ್ಲಿಗ್ಹೋಗುವೆ ಎಲೊ ಹರಿಯೇ ಮನದಲ್ಲಿ ನಿಲ್ಲೋ ಒಂದರಘಳಿಗೆ ಹೇ ಧೊರೆಯೆ ಪ ವಾರಿವಿಹಾರದಿ ನಿಂದು-ಗಿರಿಭಾರ ಕಳೆದು ನೀನಡಗಿದೆ ಅಂದು ಧಾರುಣಿಯನೆ ಬಗೆದು ನಿಂದು-ಧೀರ ಪೋರನ ಮಾತನ ಸಲಹಬೇಕೆಂದು 1 ವರವಟುವೇಷವ ಧರಿಸಿ-ದುಷ್ಟನೃಪರಕುಲಗೇಡಿಗನೆಂದೆನಿಸಿ ನಾರಿಯನಟವಿಯೊಳರಸಿ-ಪುರನಾರಿಯರ ಮನವನ್ನೆಅಪಹರಿಸಿ 2 ಓಡುವೆಯೊಮುಂದು ಉರಗಾದ್ರಿವಾಸ ವಿಠಲ ದಯಾಸಿಂಧು 3
--------------
ಉರಗಾದ್ರಿವಾಸವಿಠಲದಾಸರು
ಎಷ್ಟು ದಿನದ ಪೂಜೆ ಹಿಡಿದೆಣ್ಣಾ ಸತಿಯೆಂಬ ಮಾರಿದಿ- ನ್ನೆಷ್ಟು ದಿನ ಪೂಜೆ ಮಾಡಬೇಕಣ್ಣಾ ಪ ಎಷ್ಟು ದಿನದ ಪೂಜೆ ಹಿಡಿದಿ ನ್ನೆಷ್ಟುದಿನ ಮುಂದೆ ಬಾಕಿ ಉಳಿದಿದೆ ಕಷ್ಟಕಂಜದೆ ಬಿಡದೆ ಅನುದಿನ ನಿಷ್ಠೆಯಿಂದ ಪೂಜೆ ಮಾಡುವಿ ಅ.ಪ ಒಬ್ಬರ ಮನೆ ಮುರಿದು ತರುವಿ ಅವಳಿಗೇನೆ ಹಬ್ಬಮಾಡಿ ಉಣಿಸುತಿರುವಿ ಮತ್ತು ಇನ್ನು ಒಬ್ಬರೈತರ ಬೊಬ್ಬೆ ಹೊಡೆಯುವಿ ದಬ್ಬಿ ಓಡಿಸುವಿ ಹಬ್ಬ ಹುಣ್ಣಿಮೆ ಬರಲು ವೈಭವದುಬ್ಬಿಉಬ್ಬಿವಸ್ತ್ರ ಒಡವೆ ಅಬ್ಬರದಿಂದುಡಿಸಿ ತೊಡಿಸಿ ಮಬ್ಬಿನಿಂದ ಹಿಗ್ಗುತಿರುವಿ 1 ಧನವ ತಂದು ಅವಳಿಗರ್ಪಿಸಿ ಮತ್ತು ನಿನ್ನಯ ಮನವ ಅವಳ ವಶಕೆ ಸಲ್ಲಿಸಿ ಎಂಟುಗೇಣಿನ ತನುವು ಅವಳಾಧೀನದಲ್ಲಿರಿಸಿ ಕುಣಿವಿ ಪಶುವೆನಿಸಿ ಪಾಲಿಸಿ ದಿನಗಳೆಯುವಿ ನೋಡಿಕೊಳ್ಳದೆ 2 ಬಂದಕಾರ್ಯ ಮರೆದುಬಿಟ್ಟ್ಯಲ್ಲ ಹೆಡತಲೆಮೃತ್ಯು ಹಿಂದೆ ನಿಂತು ನಲಿಯುತಾಳಲ್ಲ ಹೇ ಪಾಪಿ ನೀನು ಒಂದೂ ವಿಚಾರ ಮಾಡಿ ಅರೀಲಿಲ್ಲ ಮಂದನಾದೆಲ್ಲ ತಂದೆ ಶ್ರೀರಾಮನ್ನಂತಂಘ್ರಿಗೊಂದಿ ಭಜಿಸಿ ದಾಸನಾಗಿ ಅಂದಮಾದ ನಿತ್ಯಮುಕ್ತಿ ಪಡೆವ ಸುಸಂಧಿ ನಡುವೆ ಹೋಗುತಾದರ್ಲ3
--------------
ರಾಮದಾಸರು
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿನ್ನ ವಿ- ಶಿಷ್ಟ ಮಹಿಮೆಗಳನು ಭಕ್ತರಿಗೆ ಬಂದಾ ಕಷ್ಟ ಕಳೆಯುವೆಯೋ ನೀನು ಸುರಕಾಮಧೇನು ವಿಷ್ಣುವೇ ಪರದೈವವೆಂದು ದುಷ್ಟರಾಕ್ಷಸರನ್ನೆ ಕೊಂದು ಸೃಷ್ಟಿಪಾಲಿಪ ಶ್ರೀ ರಮೇಶನೇ ಇಷ್ಟ ಭಕುತರೊಳು ಶ್ರೇಷ್ಠನೆನಿಶಿದಿ ಪ ತಾಯಿಯೂ ಬಂದು ಸೇವೆಗೆ ರಘುಪತಿ ರಾಯನಲೆ ನಿಂದು ಬಯಸಲಿಲ್ಲಾ ಒಂದು ಶ್ರೀಹರಿಗೆ ಬಂದು ಕಾಯಬೇಕು ಸುಗ್ರೀವನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯ ಉ- ಪಾಯದಿಂದಲಿ ಕೊಲಿಸಿ ರವಿಜಗೆ ಸ- ಹಾಯ ಮಾಡಿದಿ ವಾಯುತನಯನೆ 1 ಕಡಲ ಬೇಗನೆ ಹಾರೀ ಶ್ರೀರಾಮನ ಮಡದಿಗುಂಗುರ ತೋರಿ ಅಲ್ಲಿದ್ದ ಅಸುರರ ಜಡಿದೆ ಬಲು ಹೊಂತಕಾರಿ ಮಾಡಿಯೊ ಸೂರಿ ಒಡೆಯಗ್ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರ ಹೊಡೆಸಿದಾಕ್ಷಣ ಲೋಕಮಾತೆಯ ಒಡಗೂಡಿಸಿದೆಯೋ ಶ್ರೀರಾಮಚಂದ್ರಗೆ 2 ಮೂರು ರೂಪವ ತಾಳ್ದಿ ಮಹಯೋಗ್ಯ ಜನರಿಗೆ ಸಾರ ತತ್ವವ ಪೇಳ್ದಿ ಶರಣ್ಹೊಕ್ಕ ಜನರಪಾರ ದುಃಖವ ಶೀಳ್ದಿ ಮೊರೆಯ ಕೇಳ್ದಿ ಧೀರ ಕದರುಂಡಲಗಿ ಹನುಮಯ್ಯ ಸೇರಿದೆನೊ ನಿನ್ನಂಘ್ರಿ ಕಮಲವ ಗಾರು ಮಾಡದೆ ಸಲಹೊ ಕರುಣವಾರಿಧಿ ನೀಯೆನ್ನನೀಗಲೆ 3
--------------
ಕದರುಂಡಲಗಿ ಹನುಮಯ್ಯ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿಮ್ಮ ವಿ- ಶಿಷ್ಟ ಮಹಿಮೆಗಳನು ಸುಜನರಿಗೆ ಬಂದ ಕಷ್ಟವಳಿಯಲ್ಕೆ ನೀ ಸುರಕಾಮಧೇನು ಪ ವಿಷ್ಣುವೆ ಪರಮದೈವವೆಂದು ದುಷ್ಟ ರಾಕ್ಷಸರ ಕೊಂದೆ ಸೃಷ್ಟಿಸಿ ಪಾಲಿಪ ಶ್ರೀರಾಮರ ಇಷ್ಟ ಭಕ್ತರೊಳು ಶ್ರೇಷ್ಠನೆಂದೆನಿಸಿದೆ ಅ ತಾಯಿಯಪ್ಪಣೆಗೊಂಡು ಸೇವೆಗೆ ರಘುಪತಿ ರಾಯನಲ್ಲಿ ನಿಂದು ತನ್ನಾತ್ಮ ಸುಖ ಬಯಸೆನೆಂದು ಶ್ರೀ ಹರಿಗೆ ನುಡಿದುಕಾಯಬೇಕು ಸುಗ್ರೀವನನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯನು ಪಾಯದಿಂದಲಿ ಕೊಲ್ಲಿಸಿ ರವಿಜಗೆ ಸ- ಹಾಯ ಮಾಡಿದೆ ವಾಯುತನಯ1 ಶೌರಿ ಒಡೆಯಗೆ ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರವ ನೊಡಿಸಿದಾಕ್ಷಣ ಲೋಕಮಾತೆಯ ನೊಡಗೂಡಿಸಿದೆ ಶ್ರೀವಾಸುದೇವರಿಗೆ 2 ಸಾರ ತತ್ತ್ವವ ಪೇಳ್ದೆ ಶರಣು ಹೊಕ್ಕ ಮನುಜರ ಘೋರ ದುರಿತವ ಸೀಳ್ದೆ ಧೀರ ತನು ಧುರದುಂಡಿ ಹನುಮಯ್ಯರಿಂ ಸೇವಿಸಿದ ನಿಮ್ಮಂಘ್ರಿ ಕಮಲವದೂರ ಮಾಡದೆ ಎನ್ನ ಸಲಹಯ್ಯ ಕರುಣಾವಾರಿಧಿ ಕಾಗಿನೆಲೆಯಾದಿಕೇಶವ ಮುತ್ತತ್ತಿ ದೊರೆಯೆ3
--------------
ಕನಕದಾಸ
ಎಷ್ಟೋ ಅಪರಾಧಿ ಯಾವುದು ಬಟ್ಟೆಯೋ ಕರುಣಾಬ್ಧಿ ಪ. ದುಷ್ಟರಾರು ಜನ ಒಟ್ಟುಗೂಡಿ ಎನ್ನ ಮೆಟ್ಟಿ ಕುಟ್ಟಿ ಪುಂಡಿಗುಟ್ಟುವರೈ ಹರಿ ಅ.ಪ. ಲೇಶ ಪುಣ್ಯವಿಲ್ಲ ಪಾಪದ ರಾಶಿ ಬೆಳೆಯಿತಲ್ಲ ಆಶಾವಶ ಹರಿದಾಸನೆಂದೆನಿಸಿದೆ ದೂಷಣ ಜನರ ಶಭಾಸಿಗೆ ಮೆಚ್ಚಿದೆ 1 ಕುಲಕಲ್ಮಷ ಬಹಳ ದೇಹದಿ ನೆಲೆಸಿತು ಶ್ರೀಲೋಲ ಜಲಜನಾಭ ನಿನ್ನೊಲುಮೆಯೆ ಮುಖ್ಯವು ಕುಲಕೆಟ್ಟ ಅಜಮಿಳ ಪಾವನನಾದ 2 ಹೀನರೈವರ ಸಂಗದಿಂದಲೆ ಹಾನಿಯಾದೆನೊ ರಂಗ ಪ್ರಾಣವು ನಿನ್ನಾಧೀನವಾದ ಮೇಲೆ ನೀನೆ ಗತಿ ಲಕ್ಷ್ಮೀನಾರಾಯಣ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಷ್ಟೋ ಆಪರಾಧಿ ಯಾವುದು ಬಟ್ಟೆಯೋ ಕರುಣಾಬ್ಧಿ ಪ. ದುಷ್ಟರಾರು ಜನ ಒಟ್ಟುಗೂಡಿ ಎನ್ನ ಮೆಟ್ಟಿ ಕುಟ್ಟಿ ಪುಂಡಿಗುಟ್ಟುವರೈ ಹರಿ ಅ.ಪ. ಲೇಶ ಪುಣ್ಯವಿಲ್ಲ ಪಾಪದ ರಾಶಿ ಬೆಳೆಯಿತಲ್ಲ ಆಶಾವಶ ಹರಿದಾಸನೆಂದೆನಿಸಿದೆ ದೂಷಣ ಜನರ ಶಭಾಸಿಗೆ ಮೆಚ್ಚಿದೆ1 ಕುಲಕಲ್ಮಷ ಬಹಳ ದೇಹದಿ ನೆಲೆಸಿತು ಶ್ರೀಲೋಲ ಜಲಜನಾಭ ನಿನ್ನೊಲುಮೆಯೆ ಮುಖ್ಯವು ಕುಲಕೆಟ್ಟ ಅಜಮಿಳ ಪಾವನನಾದ 2 ಹೀನರೈವರ ಸಂಗದಿಂದಲೆ ಹಾನಿಯಾದೆನೊ ರಂಗ ಪ್ರಾಣವು ನಿನ್ನಾಧೀನವಾದ ಮೇಲೆ ನೀನೆ ಗತಿ ಲಕ್ಷ್ಮೀನಾರಾಯಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಏಣನಯನೆ ಏಣಭೋಜ ಮಧ್ಯಳೆ ತೋರೆಏಣಾಂಕ ಬಿಂಬ ಮುಖಿಏಣವೈರಿಯ ವೈರಿಯ ಶಿರಕುಚಯುಗೆ ಕರೆತಾರೆಏಣಾಂಕಧರ ಸಖನ ಪ ಚಳಿಯ ಮಗಳ ತಾಯಳಿಯನ ತನಯನಇಳುಹದೆ ಪೊತ್ತಿಹನಬಳಿದುಣ್ಣಲೀಸದೆ ಸೆಳೆದುಂಡನಣ್ಣನಸಲಹಿದಾತನ ಸುತನಕಳದೊಳು ತಲೆ ಚೆಂಡಾಡಿದ ಧೀರನಬಳಿ ವಾಘೆಯನು ಪಿಡಿದನಇಳೆಯ ಮೊರೆಯನು ಕೇಳಿ ಖಳರುತ್ತಮಾಂಗವನಿಳುಹಿದಾತನ ತೋರೆಲೆ 1 ಇಪ್ಪತ್ತುನಾಲ್ಕು ನಾಮಗಳೊಳಗೇಳನುತಪ್ಪದೆಣಿಸಿ ಕಳೆದುಬಪ್ಪ ಎಂಟನೆಯ ನಾಮದ ಪೆಸರಿನೊಳ್‍ಇಪ್ಪ ಕಡೆಯ ಬೀಡಲಿಅಪ್ಪ ಜಯದರಸನ ಕೂಡೆ ಜನಿಸಿದಕಪ್ಪು ವರ್ಣದ ಮೈಯಳಅಪ್ಪನ ಮಿತ್ರನ ಮಗನೆಂಬ ಬೊಮ್ಮನಬೊಪ್ಪನ ತೋರೆನಗೆ2 ಬಿಡುಗಣ್ಣ ಬಾಲೆ ತನ್ನೊಡೆಯನ ನುಡಿಗೇಳಿದೃಢದಿಂದ ನಡೆದು ಬಂದುಜಡಿವ ಕೋಪಕೆ ಶಾಪ ಪಡೆದುಕೊಂಡಾಕ್ಷಣನುಡಿದ ದಿನವು ದಾಟಲುಪಡೆಯನೆಲ್ಲವ ನಡು ರಣದಲಿ ಸೋಲಿಸಿಜಡಿದು ಗೋವುಗಳನೆಲ್ಲಒಡನೆ ತನ್ನಯ ಪುರಕೆ ಹೊಡೆತಂದ ಧೀರನಒಡೆಯನ ತೋರೆನಗೆ 3
--------------
ಕನಕದಾಸ
ಏತಕೆ ಬಾರದೊ ಹರಿಯೆ ನೀತವೆ ಇದು ಸರಿಯೆ ಪ ನಿಗಮ ಸಂಗೀತನಾಮ ಜಲ ಜಾತನಯನ ಬಹುಪ್ರೀತಿ ಮಾಡಿದರು ಅ.ಪ ಕುಂದರದನ ಕುರುವಿಂದಾಧರ ಪೂ ರ್ಣೇಂದು ವದನ ಮುನಿವಂದ್ಯ ಎಂದಿಗೆ ಈ ಭವಬಂಧ ಬಿಡಿಸಿ ದಯ ದಿಂದ ತೋರುವಿಯಾನಂದ ಕುಂದುಗಳೆಣಿಸದೆ ಚಂದದಿ ಸಲಹಲು ಎಂದೆಂದಿಗು ನೀ ಗತಿಯೆಂತೆಂದರು 1 ಮಾರಜನಕ ಗಂಭೀರ ಹೃದಯ ಸಂ ಚಾರ ಭಜಕ ಮಂದಾರ ತೋರು ನಿನ್ನ ಪದ ಸಾರಸವನು ಮುನಿ ನಾರದಾದಿ ಪರಿವಾರ ಘೋರ ಶರಧಿಯೊಳು ಸೇರಿದವರಿಗಿ ನ್ನಾರು ಬಂದು ಉದ್ಧಾರ ಮಾಡುವರು 2 ಶ್ರೀಶ ಯದುಕುಲಾಧೀಶ ಮೇಘ ಸಂ ಕಾಶ ರೂಪ ಸರ್ವೇಶ ಘಾಸಿಪಡಿಪ ವಿಷಯಾಸೆಗಳೆಲ್ಲವ ನಾಶಗೈಸೊ ಶ್ರೀನಿವಾಸ ದಾಸ ಜನರಿಗುಲ್ಲಾಸವ ಕೊಡುತಿಹ ವಾಸುದೇವವಿಠಲಯ್ಯನೆ ಎನ್ನೊಳು 3
--------------
ವ್ಯಾಸತತ್ವಜ್ಞದಾಸರು
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನು ಕಡಿಮೆ ನಿನಗೆ ಗಣಪತಿ ಜ್ಞಾನವ ಕೊಡು ಎನಗೆ ಪ ನೀಲ ಮೇಘದ ಕಾಂತಿ ಬಾಲಕೇಳಿ ವಿಲಾಸ ನೀಲ ಕಂಠನ ಸುತ ಸ್ಥೂಲಶರೀರಿ 1 ಹೊನ್ನಾ ಭರಣ ಶೃಂಗಾರ ಕಟಿಗೆ ಚಿನ್ನದ ಉಡುದಾರ | ಚೆನ್ನಾಗಿ ಸುತ್ತಿದ ಪನ್ನಗಭೂಷಣ ಹೊನ್ನ ಕಡಗ ಕೈಯ ಬೆರಳ ಉಂಗುರವು 2 ಹೊತ್ತು ನಡೆವ ಮೂಷಿಕವು 3 ಹೊಂದಿಕೆಯಿಂದ ಕಿವಿಯಲಿಟ್ಟ ಕುಂಡಲ ಗಂಧ ಚಂದನ ಸರ್ವಾಂಗ ಲೇಪಿತನ 4 ಪರಿ ನೀಧೀರ ಉದಾರ 5
--------------
ಕವಿ ಪರಮದೇವದಾಸರು
ಏನು ಕಾರಣ ಬಂದೆ ಗಂಗೆ | ನಾನೇನು ಪುಣ್ಯವನು ಮಾಡಿದವನಲ್ಲ ಪ ಕಾಸೀಪುರದಿಂದಲಿ ದೇಶ ನೋಡಲು ಬಂದ್ಯೋ | ಬೀಸಿ ಬಿಸುಟುವಂಥ ಅಸ್ಥಿಗಾರದೆ ಒಂದ್ಯೋ | ದಾಸರ ಮಹಿಮೆಯನು ನೋಡುವೆನೆಂದು ಬಂದ್ಯೋ | ದೋಷವರ್ಜಿತ ವಾರಣಾಸಿ ಕಡಿಯದಲೆ | ಲೇಸಾಗಿ ತಿಳಿಪುವದು ಭೀಷ್ಮನ ಜನನೀ 1 ತಿಲನೀರು ಕುಡಿದು ಧರಿಸಲಾರದೆ ಬಂದ್ಯೋ | ಮಲಜನರ ದೋಷವನು ಕಳೆವೆನೆಂದು ಬಂದ್ಯೋ | ಕಲಿಯುಗಕೆ ಈ ಕೃಷ್ಣಾ ಅಧೀನಳೆಂದು ಬಂದ್ಯೋ | ಸುಲಭ ತ್ರಿದದೇಶ್ವರಿ ಗಂಗೆ ತಡೆಯದಲೆ | ನೀರಜ ನಯನೇ 2 ನಿತ್ಯ ಕರ್ಮಗಳು ನೋಡಲಿ ಬಂದ್ಯೋ | ಮಜ್ಜನವ ಮಾಡಿಸಿ ಎನ್ನ ಪೊರಿಯಲು ಬಂದ್ಯೋ | ಮೂಜಗದೊಳು ಪೆಸೆರಾಗಿಪ್ಪೆನೆಂದು ಬಂದ್ಯೋ | ನಿರ್ಜನ ತಟನಿ ನಿರ್ಗುಣಸಾಂದ್ರೆ ತಡಿಯದಲೆ | ನಿಜವ ತಿಳುಪುವದು ವಿಜಯವಿಠ್ಠಲಸುತೆ 3
--------------
ವಿಜಯದಾಸ
ಏನು ಕಾರಣ ಬಾಯಿ ತೆರೆದಿ - ಪೇಳೆಲೊದಾನವಾಂತಕ ಅಹೋಬಲ ನಾರಸಿಂಹನೆ ಪ ನಿಗಮ ಚೋರನ ಕೊಲಲು ತೆರೆದೆಯೋ ಈ ಬಾಯನಗವ ಬೆನ್ನಲಿ ಹೊತ್ತು ನಡುಗಿ ತೆರೆದೆಯೋ ಬಾಯ ಭೂ-ಮಿಗಳ್ಳನ ಕೊಂದು ಬಳಲಿ ತೆರೆದೆಯೋ ಬಾಯಜಗವರಿಯೆ ಪೇರುರವಿರಿದ ಪ್ರಹ್ಲಾದವರದಅಹೋಬಲ ನಾರಸಿಂಹನೆ1 ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯಮರೆತು ಮಾವನ ಕೊಂದು ನಿಂದೆ - ಇಂಥಇಳಿಯ ಬಾರದ ಭೂಮಿಗಿಳಿದ ನಾರಸಿಂಹ2 ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ ಬಾಯಏರಿ ಅಶ್ವವ ಮೆಟ್ಟಿ ಅಳಲಿ ತೆರೆದೆಯೊ ಬಾಯಮಾರಪಿತ ಕಾಗಿನೆಲೆಯಾದಿಕೇಶವ ರಂಗಧೀರ ಶ್ರೀನಾಥ ಭವನಾಶ ಪೇಳೋ ಪೇಳುಏತಕೆ ಅಹೋಬಲ ನಾರಸಿಂಹನೆ 3
--------------
ಕನಕದಾಸ
ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5
--------------
ವೆಂಕಟದಾಸರು