ಒಟ್ಟು 1173 ಕಡೆಗಳಲ್ಲಿ , 101 ದಾಸರು , 907 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕವಿ ಅಭಯ ಬೇಡೋ ಸುಮನ ಸುಂದರ ಶ್ರೀ ಹರಿಯ ಪ್ರಿಯ | ಅಭಯ ಬೇಡೋ ಸುಮನ ಸುಂದರ ಪ ಅಭಯ ಬೇಡೋ ಪ್ರಿಯ ರಮಾವಿಭು ಜಗನ್ನಿವಾಸನೊಡನೆ ಉಭಯ ಸುಖವ ನೀವ ಚೆಲ್ವ ಅಂಬುಜನೇತ್ರ ಸೊಬಗನೆಂದು ಅ.ಪ ಚಾರು ಮಾರ ಪಿತನ 1 ನೊಂದು ವಾರಣೇಂದ್ರ ತನ್ನ ದಂದುಗದಲಿ ನುತಿಸಲು | ಬಂದು ರಕ್ಷಿಸಿದ ಮುಕುಂದ ಸಿಂಧುಶಾಯಿಯೆಂದು ಹರಿಯ 2 ಪರಾಕು ಎನುತ 3 ಕಿಂಕರೌಘ ಸುಪ್ರಸನ್ನ ಸಂಕಟೌಘಧ್ವಂಸನ ವೆಂಕಟೇಶವರದ ಒಳಲಂಕೆಯಧಿಪ ಗುರು ನೃಹರಿಯ 4
--------------
ಅನ್ಯದಾಸರು
ಕಷ್ಟ ತನುವಿನಲಿ ಹುಟ್ಟಿ ತೊಳಲುವಂಥಎಷ್ಟೆಂದು ತಾಳುವೆನೊ ಶ್ರೀರಂಗ ಪ ಅಷ್ಟರೊಳೆಂದೆನ್ನ ಅವಗುಣವೆಣಿಸದೆ ಕಷ್ಟ ಪಡಿಸುವುದೇನು ಶ್ರೀರಂಗ ಅ ನರಜನ್ಮವನು ಎತ್ತಿ ನರಕದೊಳಗೆ ಸುತ್ತಿಗುರಿ ಗೊತ್ತು ಕಾಣೆನಯ್ಯ ಶ್ರೀರಂಗಪರಮಪಾತಕನಾಗಿ ಹರಿ ನಿಮ್ಮ ಸ್ಮರಣೆಯನುಮರೆದು ಪಾಮರನಾದೆ ಶ್ರೀರಂಗ1 ಮಂದ ದು-ರ್ಮತಿಗೆ ಮರುಳಾದೆನೊ ಶ್ರೀರಂಗಅತುಳ ಪ್ರಪಂಚಕ್ಕೆ ಹಿತನಾಗಿ ದುಷ್ಟ ಸಂ-ಗತಿಯ ನಾನರಿದಿದ್ದೆನೊ ಶ್ರೀರಂಗ 2 ಮಿತಿಮೀರಿ ಮನ ಹರಿ ಪದವ ನೆನೆಯದೆ ಪರಸತಿಯರಿಗಳುಪಿದೆನೊ ಶ್ರೀರಂಗಕೃತಬುದ್ಧಿಯೊಳು ಉನ್ನತನಾಗಿ ತಾನೆರೆದುಸ್ತುತಿ ಮಾಡಿಕೊಂಡಿದ್ದೆನೈ ಶ್ರೀರಂಗ 3 ಆಶಾಪಾಶಗಳೆಂಬ ದೇಹಕ್ಕೆ ಸಿಲ್ಕಿ ಸ-ದ್ವಾಸನೆಯನು ಬಿಟ್ಟೆನು ಶ್ರೀರಂಗಮೋಸದಿಂದಾತ್ಮಘಾತುಕನಾಗಿ ಅಪರಾಧವೇಸೊಂದು ಮಾಡಿದೆನಯ್ಯ ಶ್ರೀರಂಗ 4 ಈಸಲಾರದೆ ಹೊಳೆಯಲಿ ಕಾಸಲಾರದೆ ಒಲೆಯಲಿಸೋಸುತ್ತ ಕುಳಿತಿಹೆನು ಶ್ರೀರಂಗವಾಸುಕಿ ಶಯನ ನೆಲೆಯಾದಿಕೇಶವ ನಿಮ್ಮಾಶ್ರಿತದಾಸರ ದಾಸನಯ್ಯ ಶ್ರೀರಂಗ 5
--------------
ಕನಕದಾಸ
ಕಷ್ಟಪಡಲಾರೆನೋ ಸೃಷ್ಟೀಶ ಶ್ರೀಶಾ ದುಷ್ಟದಮನ ದೀನವತ್ಸಲ ನಾರಾಯಣ ಪ ಒಡಲು ಕ್ಷಣಗಳು ಬಿಡದೆ ಬಾಧಿಸೆ ನಿನ್ನ ಅಡಿಯಕಾಣಿಸದಿವೆ ಕೆಡಿಪ ದುರಾಶೆಯ ಸುಡುತಲಿ ನೂಕು ದುಡುಕುವ ಮನವಂ ಸಡಲಿಸಬೇಕು ಕಡುಮುದದಿಂದಲಿ ಕಾಯುತ ಸಾಕು ಪರಾಕು 1 ಲೋಕಿಗರೊಳು ನಾನನೇಕದುಶ್ಚರ್ಯೆಯ ವಿ- ವೇಕವಿಲ್ಲದೆ ಮಾಡಿ ಕಾಕುಮನುಜನಾದೆ ಘೂಕದ ಪರಿಯೀ ಭವಸಂಸಾರ ನಾಕವಾದರೂ ಬಹು ನಿಸ್ಸಾರ ಜೋಕೆಯೊಳಿದಬಿಟ್ಟು ಒಟ್ಟು ಬಂದನೆ ತೋರಾ ಶೋಕಸಾಗರವಾ ಶೋಷಿಪಶೂರ 2 ಇಷ್ಟ ಮೂರುತಿ ನಿನ್ನ ನಿಷ್ಠೆಯಿಂ ಕಾಣುವೆ ಎಷ್ಟು ಮೊರೆಯಿಟ್ಟರೂ ದೃಷ್ಟಿಸದಿರುವೇ ಅಷ್ಟಮದಗಳನಿತಿಷ್ಟೂ ನಿಲ್ಲವೋ ಭ್ರಷ್ಟಗುಣಗಳ ನಿಷ್ಠುರಗೈವುದೋ ವಿಷ್ಣು ಶ್ರೇಷ್ಠಪದ ಕೊಟ್ಟು ಕರುಣಿಸೋ ಕೃಷ್ಣ ಕೃಪಾಳು ಹೆಜ್ಜಾಜೀಶಾ 3
--------------
ಶಾಮಶರ್ಮರು
ಕಂಸಾರಿ ಪ. ಶೌರಿ ಸುರ ನರವಂದಿತ ಚರಣವ ಕೋರಿ ಪರಿಪರಿ ಬೇಡುವೆ ನಿನ್ನೆಡೆ ಸಾರಿ ಅರಿಯದ ಕಂದನ ಪೊರೆ ದಯೆತೋರಿ ಅರಿಯೆನದಾರನು ಮರೆಯೆನು ನಿನ್ನನು ಕರುಣಾಕರನೆಂಬೀ ಬಿರುದುಳಿಸಿನ್ನು 1 ಮನ್ಮಥಪಿತ ಬಾ ಸುಂದರಕಾಯ ಮನ್ನಿಸು ಎನ್ನಪರಾಧವ ಜೀಯ ಚಿನ್ಮಯರೂಪನೆ ಚೆನ್ನಿಗರಾಯ ಅನ್ಯರ ನೆರೆಯೆನು ನೀ ಕೇಳಯ್ಯ ಎನ್ನೊಳಗೀಪರಿ ಛಲವೇಕಯ್ಯ ಇನ್ನಾದರು ಕೈಪಿಡಿ ದಮ್ಮಯ್ಯ 2 ಮಂದರಗಿರಿಧರ ಗೋವಿಂದನೆ ಬಾ ನಂದಕುಮಾರನೆ ತಡೆಯದೆ ನೀ ಬಾ ನಂದಿನಿಗೊಲಿದಾನಂದವ ಕೊಡು ಬಾ ವೃಂದಾವನ ವಿಹಾರನೇ ಬಾ ಬಾ ಇಂದಿರೆಯರಸನೆ ಶೇಷಗಿರೀಶನೆ ಇಂದೆನಗೊಲಿದೈ ತಂದೆಯೆ ಭಳಿರೆನೆ 3
--------------
ನಂಜನಗೂಡು ತಿರುಮಲಾಂಬಾ
ಕಂಸಾರಿ ಬೇಗ ಬಾರೋ ಹರಿ ಭೇಷಜ ಕೃಷ್ಣ ಪ. ಸಾಗರ ಶಯನ ಮನೋಗತ ಫಲಕಾರಿ ಅಕ್ರಮದಲಿ ಬರುವ ಭಯಂಕರ ವಕ್ರ ಮುಖವ ತೋರುವ ಹರಿವು ಚಕ್ರವ ಕರಧೃತ ಚಕ್ರದಿ ತರಿದು ಪರಾಕ್ರಮವ ತೋರಿ 1 ದಾಸರ ರಕ್ಷಿಪುದು ಎಂದಿಗು ಶ್ರೀನಿ- ವಾಸ ನಿನ್ನಯ ಬಿರುದು ದ್ವೇಷಿ ಜನರ ಮೂಲ ನಾಶಗೈದನುಗಾಲ ಶ್ರೀಶತ್ವದ ಸೇವಾವಾಸನ ಬೆಳಸುತ್ತ 2 ನೀ ನೆಟ್ಟು ಬೆಳಸಿರುವ ವೃಕ್ಷವನು ನಿ- ಧಾನದಿಂದಲಿ ಪೊರವ ಮಾನ ನಿನ್ನದು ಪದ್ಮಮಾನ ವೆಂಕಟರಾಜ ದೀನ ಬಂಧು ನಿನಗೇನ ಪೇಳುವದಿನ್ನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಪಾಡು ಕಾಪಾಡು | ಕಾಪಾಡು ಗುರುವೇ ಪ ಶ್ರೀ ಪತಿಯ ಪರಮಾತ್ಮ | ಅಪದ್ಹರ ಗುರುವೇ ಅ.ಪ. ಕೃಪಣ ವತ್ಸಲ ಗುರುವೆ | ಕೋಪಸಲ್ಲದು ನಿಮಗೆಕಾಪಥವ ನೈದುವನು | ತವಕೃಪೆ ವಿಹೀನಾ ||ಅಪರಾಧ ವೆಣಿಸದಲೆ | ಕೃಪೆಮಾಡಿ ಕೈ ಪಿಡಿದುಸುಪಥದಲ್ಲಿರಿಸುತ್ತ | ಆಪವರ್ಗದನ ತೋರೊ 1 ತಂದೆ ತಾಯಿಯು ನೀವೆ | ಬಂಧು ಬಳಗವು ನೀವೆಎಂದೆಂದಿಗೂ ಎನಗೆ ಗುರುವು ನೀವೆ ||ಕಂದ ಮಾಡಿದ ತಪ್ಪ | ತಂದೆಯೆಣಿಸುವರೇನೊಪೊಂದಿ ಭಜಿಸುವೆ ಕಾಯೊ | ತಂದೆ ಕೃಪ ಸಾಂದ್ರಾ 2 ತಂದೆ ಮುದ್ದು ಮೋಹನ್ನ | ವಂದಿಸುವೆ ನಿಮ್ಮಡಿಗೆಇಂದು ತವ ದರ್ಶನವ | ಸಂಧಿಸಲಿ ಬೇಕೋ ||ಇಂದಿರಾಪತಿ ಗುರು | ಗೋವಿಂದ ವಿಠ್ಠಲನಛಂದಾಗಿ ಭಜಿಸುವ | ತಂದೆ ಕೈ ಪಿಡಿಯೋ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಮಿತಾರ್ಥದಾಯಿ ಸೀತಾರಾಮರಾಜ ರಾಜ ಸ್ವಾಮಿಯೆನ್ನ ಕಾಯೊ ಖಳನಿರ್ನಾಮ ಭಕ್ತಕಲ್ಪಭೂಜ ಪ. ಸಾಕೇತಪುರದಿ ವಾಸಪ್ರಾಕೃತ ಲೀಲಾ ವಿಲಾಸ ಸ್ವೀಕೃತ ರಕ್ಷಾವಿಭೂಷ ಯಾಕೆನ್ನೊಳುಪೇಕ್ಷೆ ಶ್ರೀಶಾ ಬೀಕೃತಿಗಳ ದೂರೀಕರಿಸುವ ಕರು ಣಾಕರ ಭಕ್ತ ಪರಾಕ ಪರಾತ್ಪರ 1 ಪಾತಕಿ ಜನೋದ್ಧಾರೈಕ ಹೇತುವ ತೋರುವೆನೆಂದು ಸೇತು ನಿರ್ಮಿಸಿದ ರಘುನಾಥ ನೀನೆ ದೀನ ಬಂಧು ವಾತಜಾತನಿಗೊಲಿದು ಸಂಪ್ರೀತಿಯೊಳಂಬುಜ ಜಾತನಪದವಿಯನಾತಗೆ ಸಲಿಸಿದ 2 ಪಾಮರ ಪಾವನದಿವ್ಯ ನಾಮದೇವ ಸಾರ್ವಭೌಮ ಸೀಮಾಹಿತಸದ್ಗುಣೈಕ ಧಾಮಾ ಸೀತಾಪೂರ್ಣಕಾಮಾ ತಾಮರಸಾಸನವಂದ್ಯ ಶೇಷಗಿರಿ ಧಾಮ ದಯಾಂಬುಧಿ ದಶರಥ ರಾಮಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯ ಪ ಗತಿ ನೀನೆ ಎನಗೆ ಸಂತತ ಪರಂಧಾಮಾ ಅ ಕೃಪಣ ವತ್ಸಲನೆ ಎಮ್ಮಪರಾಧಗಳ ನೋಡಿ ಕುಪಿತನಾಗುವರೇನೋ ಸುಫಲದಾಯೀ ನೃಪಗನಿರುದ್ಧ ಬಿನ್ನಪವ ಮಾಡುವೆ ನಿನಗೆ ಚಪಲ ಚಿತ್ತರಾದ ಕಾಶ್ಯಪಿಸುರರನ ಕಾಯೋ 1 ಮಾನ್ಯಮಾನದನೆ ಬ್ರಹ್ಮಣ್ಯದೇವ ನೀನೆಂದು ಉನ್ನತ ಶ್ರುತಿಗಳು ಬಣ್ಣಿಸುವುವು ಸನ್ನುತ ಮಹಿಮನೆ ನಿನ್ನ ಪೊಂದಿದವರ ಬನ್ನ ಬಡಿಸುವುದು ನಿನಗಿನ್ನು ಧರ್ಮವು ಅಲ್ಲ 2 ಹಲವು ಮಾತುಗಳಾಡಿ ಫಲವೇನು ಬ್ರಾಹ್ಮಣರ ಕುಲಕೆ ಮಂಗಳವೀಯೋ ಕಲುಷದೂರ ಸುಲಭ ದೇವೇಶ ನಿನ್ನುಳಿದು ಕಾವರ ಕಾಣೆ ಬಲಿಯ ಬಾಗಿಲ ಕಾಯ್ದ ಜಗನ್ನಾಥ ವಿಠಲಾ 3
--------------
ಜಗನ್ನಾಥದಾಸರು
ಕಾಯಯ್ಯ ರಘುನಾಥ ಧೀನಜನೋದ್ದಾರಿ ಪ ಕೇವಲ ಪತಿತ ಪಾಮರ ನಾನು ಕೇವಲ ಪಾವನ ಮೂರುತಿ ನೀನು ಕೇವಲ ಘನ ಅಪರಾಧಿಯು ನಾನು ದೇವನೀ ಕರುಣಾ ಸಾಗರ 1 ಭಾವ ಭಕ್ತಿಯ ಕೀಲವ ನರಿಯೇ ವಿವೇಕ ಮತಿ ನೀ ನೀಡುವ ಧೊರೆಯೇ ಆವಾಗ ವಿಷಯಾ ಸಕ್ತನು ಹರಿಯೇ ಕಾದ ದೈವನು ನೀನೈ 2 ನತ ನಾದೇ ತರಳನ ಕುಂದಾಲಿಸದಿರು ತಂದೇ ಗುರು ಮಹಿಪತಿ ಪ್ರಭು ನಮೋಯಂದೇ ಶರಣಾಗತ ಸಹಕಾರೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯಯ್ಯ ರಘುರಾಮ ದೀನಜನೋದ್ದಾರಿ ರಘುರಾಮ ಧ್ರುವ ಕೈವಲ್ಯಾವನ ಮೂರುತಿ ನೀನು ಕೇವಲ ಘನ ಅಪರಾಧಿಯುನಾನು ದೇವನೆ ಕರುಣಾಸಾಗರ ನೀನು 1 ಭಾವ ಭಕುತಿಕೀಲವ ನಾನರಿಯೆ ವಿವೇಕಾಮೃತ ನೀಡುವ ದೊರೆಯೆ ಅವಾಗ ವಿಷಯಾಸಕ್ತನು ಹರಿಯೆ ಕಾವ ದೈವ ನೀನೆ ಶ್ರೀ ಹರಿಯೆ 2 ಚರಣವೆ ಗತಿಯೆಂದಾತನ ತಂದೆ ತರಳನ ಕುಂದನಾರಿಸದಿರು ತಂದೆ ತರಳ ಮಹಿಪತಿ ಪ್ರಭು ನಮೋ ಎಂದೆ ಶರಣ ರಕ್ಷಕ ನೀನಿಹುದೆಂದೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕರುಣಕಾರ ಗೋವಿಂದ ಕಾಯೊ ನಮ್ಮ ಕೃಪಾಸಿಂಧು ಹರಿ ಮುಕುಂದ ಧ್ರುವ ಬೊಮ್ಮನಾ ಪಡೆದ ಪರಾವರ ದೊರಿಯೆ ಸಮ್ಯಜ್ಞಾನವಿತ್ತು ಕಾಯೊ ಮುರಾರಿಯೆ ನಿಮ್ಮ ವಿನಾ ಅನ್ಯಪಥವ ನಾನರಿಯೆ ನಮ್ಮ ದೈವ ನೀನಹುದೊ ನರಹರಿಯೆ 1 ದುರಿತ ಪರಿಹರಿಸೊ ಭಾವ ಭಕ್ತಿಯೊಳೂ ಮನಪೂರ್ಣವಿರಿಸೊ ಕಾವಕರುಣನೆ ನಿಮ್ಮ ದಯ ಬೀರಿಸೊ ದಿವಾರಾತ್ರೆಯಲಿ ನಿಮ್ಮ ಸ್ಮರಣಿಲಿರಿಸೊ 2 ಕಾಯೊ ಕಾಯೊ ಕೊಟ್ಟು ನಿಮ್ಮ ನಿಜಧ್ಯಾನವ ಕಾಯೊ ಕರುಣಿಸಿ ಎನ್ನ ಜೀವನದ ಕಾಯೊ ದಯದಿಂದ ಎನ್ನ ಅಭಿಮಾನ ಕಾಯೊ ನಿಜ ದಾಸ ಮಹಿಪತಿ ಪ್ರಾಣವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೋ ಕರುಣ ಕೃಪೆಯಿಂದ ಹರಿ ಮುಕುಂದ ಧ್ರುವ ಕರುಣಾನಂದದ ಸಾಗರ ಕರಿವರ ಶರಣಾಗತಜನರ ಮಂದಾರ ಪರಮ ಉದ್ಧಾರ ಸುರ ಸಂಸಾರಾಯದಾಗರ ಪರಾತ್ಪರ ತರಣೋಪಾಯದಾಧಾರ 1 ಅನಾಥ ಜನರಾಶ್ರಯ ನೀನೆ ನಿಶ್ಚಯ ಅನುಭವಾನಂದಾ ಹೃದಯ ಘನಮಯ ದಿನಕರಕೋಟಿ ಪ್ರಭೆಯೆ ಜನವನಲಿಹ್ಯ ಮುನಿಜನರ ಹೃದಯ ಅನುದಿನದಲಕ್ಷಯ 2 ವಿಹಿತವಿಚಾರದ ವಿವರ ಈಹ್ಯಶ್ರೀಧರ ಸ್ವಹಿತ ಸುಖದ ಸುಸಾರ ಬಾಹ್ಯಾಂತರ ಮಹಿಮೆ ನಿನ್ನದು ಅಪಾರ ಮಹೇಶ್ವರ ಇಹ್ಯ ಪರದ ದಾತಾರ ಮಹಿಪತಿ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೋ ಪರಮಾನಂದಾ ನಾರಾಯಣಾ | ತೋಯಜಾದಳ ನಯನ ಗರುಡ ಗಮನಾ ಪ ಕರವರಗ ದುಷ್ಟ ಜಲಚರ ಬಂದು ಪಿಡಿಯಲ್ಕೆ | ಭರದಿಂದ ನಿನ್ನ ಸ್ಮರಣೆಯಾ ಮಾಡಲು | ತ್ವರಿತದಿಂದಲಿ ದೇವ ಬಂದು ಆತನ ಮಹಾ | ದುರಿತವನು ಪರಿಹರಿಸಿ ಕಾಯಿದೆ ಹರಿಯೇ1 ಅರಗಿನಾ ಮನಿಯೊಳುಪಾಂಡವರುಸಿಲುಕಿರಲು | ಹರಿ ನೀನೇ ಗತಿಯೆಂದು ಸುಮ್ಮನಿರಲು | ಸಿರಿಲೋಲ ಅದುಕೊಂದು ಪಾಯವನು ರಚಿಸಿದಾ | ವರಕಡಿಗೆ ಪೊರಮಡಿಸಿಕಾಯಿದೆ ಹರಿಯೇ2 ಶರಣ ಪ್ರಲ್ಹಾದಂಗ ದನುಜ ಪೀಡಿಸುತಿರಲು | ಕರುಣ ಸಾಗರ ನಿಮ್ಮ ಧ್ಯಾನಿಸಲ್ಕೆ | ಕರುಳ ಬಗೆದುಕಾಯಿದೆ ಹರಿಯೇ | ನರಹರಿಯ ರೂಪದಿಂದ ಸ್ಥಂಬದೊಳಗುದ್ಭವಿಸಿ3 ದ್ರುಪದ ತನು ಸಂಭವಿಯ ಸೀರೆಯನ್ನು ಸೆಳೆಯಲ್ಕೆ | ತ್ರಿಪುರಾರಿ ಸಖ ನಿಮಗೆ ಮೊರೆಯಿಡಲು | ಕಪಟನಾಟಕ ದಯಾನಂದ ಹರಿಯೆ 4 ಈ ರೀತಿಯಲ್ಲಿ ಬಹು ಭಕ್ತರನು ಕಾಯಿದೆ | ಮುರಹರಿ ಧ್ಯಾನ ಸ್ಮರಣೆ ಯಂಬನದನು | ದಾರಿಯನು ಅರಿಯದ ಅಜ್ಞಾನಿಯ ಪರಾಧವನು ಸೈ ರಿಸುದು ಮಹಿಪತಿ ಸುತ ಪ್ರಿಯನೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾರ್ತಿಕೇಯ ಮಹಾಸೇನ ನಿಜ ಭೃತ್ಯರೊಳಾಗು ಪ್ರಸನ್ನ ಪ. ಚಿತ್ತಸಾಕ್ಷಿ ಹರಿಭಕ್ತಿಜ್ಞಾನಮ- ನಿತ್ತು ಕಾಯೊ ಷಡ್ವದನ ಅ.ಪ. ತಂದೆ ತಾಯಿ ಕುಲಸ್ವಾಮಿ ಹರಿ- ಯೆಂದು ಭಜಿಸುವೆನು ಪ್ರೇಮಿ ಸ್ಕಂದನಾಮಕ ನೀನಂತರ್ಯಾಮಿ ಸುಂದರ ಮಯೂರಗಾಮಿ 1 ಪಾರ್ವತಿ ಶಿವಸಂಜಾತ ಪರಿ- ಪಾಲಿತ ಸುಜನವ್ರಾತ ಸರ್ವಗೀರ್ವಾಣ ಸೇನಾಧ್ಯಕ್ಷ ಸರ್ವೋತ್ತಮ ಹರಿಪಕ್ಷ2 ತಾರಕದ್ಯೆತ್ಯಸಂಹಾರ ಸುವಿ- ಚಾರೈಕಪರಾಧಾರ ಪ್ರಾರಂಭಗೈದ ಕಾರ್ಯ ಸಫಲಿಪುದು ಭಾರ ನಿನ್ನದು ರಣಧೀರ 3 ಪಾವಂಜಪುರನಿವಾಸ ನಃ ಪಾತು ಶಿವಗಣಾಧೀಶ ದೇವ ಲಕ್ಷ್ಮೀನಾರಾಯಣದಾಸ ಪಾವನಚರಿತ ವಿಲಾಸ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ತಿಕೇಯ ಮಹಾಸೇನ ನಿಜ ಭೃತ್ಯರೊಳಾಗು ಪ್ರಸನ್ನಪ. ಚಿತ್ತಸಾಕ್ಷಿ ಹರಿಭಕ್ತಿಜ್ಞಾನಮ- ನಿತ್ತು ಕಾಯೊ ಷಡ್ವದನಅ.ಪ. ತಂದೆ ತಾಯಿ ಕುಲಸ್ವಾಮಿ ಹರಿ- ಯೆಂದು ಭಜಿಸುವೆನು ಪ್ರೇಮಿ ಸ್ಕಂದನಾಮಕ ನೀನಂತರ್ಯಾಮಿ ಸುಂದರ ಮಯೂರಗಾಮಿ 1 ಪಾರ್ವತಿ ಶಿವಸಂಜಾತ ಪರಿ- ಪಾಲಿತ ಸುಜನವ್ರಾತ ಸರ್ವಗೀರ್ವಾಣ ಸೇನಾಧ್ಯಕ್ಷ ಸರ್ವೋತ್ತಮ ಹರಿಪಕ್ಷ 2 ತಾರಕದ್ಯೆತ್ಯಸಂಹಾರ ಸುವಿ- ಚಾರೈಕಪರಾಧಾರ ಪ್ರಾರಂಭಗೈದ ಕಾರ್ಯ ಸಫಲಿಪುದು ಭಾರ ನಿನ್ನದು ರಣಧೀರ 3 ಪಾವಂಜಪುರನಿವಾಸ ನಃ ಪಾತು ಶಿವಗಣಾಧೀಶ ದೇವ ಲಕ್ಷ್ಮೀನಾರಾಯಣದಾಸ ಪಾವನಚರಿತ ವಿಲಾಸ 4
--------------
ತುಪಾಕಿ ವೆಂಕಟರಮಣಾಚಾರ್ಯ