ಒಟ್ಟು 3112 ಕಡೆಗಳಲ್ಲಿ , 114 ದಾಸರು , 2158 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆ ಪ ಸಿಂಧು ಸಂಭೂತೆ | ಪೂರ್ಣ ಚಂದಿರ ಮುಖಿ ಸುಖದಾತೆ ಅ.ಪ ಇಂದೀವರಾಕ್ಷಿಯೆ | ಪೊಂದಿ ತ್ವತ್ವಾದಕೆ ವಂದಿಪೆ ಮನ್ಮನ ಮಂದಿರದೊಳು ಬಾರೆ || ಕೃತಿ ಶಾಂತಿ ಜಯಮಾಯೆ ಸೀತೆ ದೇವಿ ಪತಿತಪಾವನೆ ಕ್ಷಿತಿಜಾತೆ | ವಿಧಿ ಶಿತ ಕಂಧರಾದಿ ನಮಿತೆ | ಮಹ | ಪತಿವ್ರತೆ ಪರಮವಿಖ್ಯಾತೆ ಆಹಾ ಶೃತಿವಿನುತಳೆ ಸದಾ | ನುತಿಸಿ ಬೇಡಿ ಕೊಂಬೆ ಅತಿಹಿತದಲಿ ತವ ಪತಿಯ ಪಾದವ ತೋರೋ 1 ಹರಿಣಲೋಚನೆ | ಶ್ರೀರುಕ್ಮಿಣೀ | ಮದ ಕರಿ ಮಂದಗಮನೆ ಕಲ್ಯಾಣಿ ದ್ವಿಜ ಪರಿವಾರ ಸಂಸ್ತುತೆ ಜಾಣೆ | ಚಾರು ಚರಿತೆ ಚಂಚರೀಕ ಸುವೇಣಿ || ಆಹಾ || ಸಿರಿ ಸತ್ಯಭಾಮೆಯ | ಮರೆಯದೆ ಎನ್ನಯ ದುರಿತ ವಿಚ್ಛೇದಿಸಿ | ಹರಿಸ್ಮರಣೆ ನೀಡೆ 2 ಕಂಬು ಕಂಧರೆ ಕಾಮನ ತಾಯೆ ಅರ ಭವ ಚಂದನ ಗಂಧಿಯೆ | ನಂದ ನಂದನ ಶಾಮ ಸುಂದರವಿಠಲನ್ನ ಸಂದರುಶನವೀಯೆ 3
--------------
ಶಾಮಸುಂದರ ವಿಠಲ
ಇಂದಿರೆ ಅರಸ ಚಂದ್ರಮಂಡಲಮಂದಿರಾಖಿಳವಂದ್ಯ ಹಯಮುಖಎಂದೆಂದೆನ್ನ ಮನದಿಂದಗಲದಿರುಮಂದರಾದ್ರಿಧರ ಪ. ತುಂಗಮಹಿಮ ತುರಂಗವದನ ಶು-ಭಾಂಗ ರಿಪುಕುಲಭಂಗ ಸುಜನರಸಂಗ ಎನ್ನಂತರಂಗ ಮಲಿನವಹಿಂಗಿಸುವುದೆಂತೊಮಂಗಳಾಬ್ಧಿತರಂಗದುಬ್ಬಿಗೆತಿಂಗಳೆನಿಸುವ ಅಂಗಜನ ತಂದೆರಂಗ ನಿನ್ನ ಪಾದಕೆಂಗಮಲದಲ್ಲಿಭೃಂಗನಪ್ಪುದೆಂತೊ 1 ವಾರಿಜಾಕ್ಷ ಮುರಾರಿ ಮದವೆಂಬೋಮಾರಿ ಮುಸುಕಿತು ಸಾರಿ ಮತ್ಸರಮಾರನೊಡಗೂಡಿ ದಾರಿ ತಪ್ಪಿಸಿಗಾರುಮಾಡಿತೆನ್ನ ನಾ-ನಾರೆ ಕ್ರೋಧಮಹೋರಗನ ವಿಷ-ಧಾರೆಗೆ ಭಯಕಾರಿ ಹರಿ ನಿನ್ನಚಾರುಚರಣವ ಸಾರಿದೆನಿಂದುತೋರಿ ಸಲಹಬೇಕು 2 ಧsÀನ್ಯ ಸುರರಜೀವನ್ನ ಕರುಣಸಂ-ಪನ್ನ ನಿತ್ಯಪ್ರಸನ್ನ ಚಿನುಮಯಪನ್ನಗಾರಿವಾಹನ್ನ ಶಶಿಸಮ-ವರ್ನ ಹಯವದನನಿನ್ನ ಪಾದಪಾವನ್ನಸುರತರು-ವಿನ್ನ ನೆಳಲೊಳಿಟ್ಟೆನ್ನ ಸಲಹಬೇ-ಕನ್ಯಥಾ ಗತಿಶೂನ್ಯ ನಾನೆಲೊಪೂರ್ಣಪುರುಷರನ್ನ 3
--------------
ವಾದಿರಾಜ
ಇಂದಿರೆ ಇಂದೀವರಾಕ್ಷಿ- ಸುಂದರಿ ಅರ- ವಿಂದ ಮಂದಿರೆ ಪೂರ್ಣೆ | ಪ ಇಂದುವದನೆ ಅಮರೇಂದ್ರ ವಂದಿತೆ | ಸಿಂಧುಸುತೆ ಆನಂದ ಫಲದೆ ಅಪ ರಾರರಮಣನ ಸೋಲಿಪ ನಖದಕಾಂತಿ | ಚಾರು ಚರಣತಳ ವಾರಿಜಾಂಕುಶ ಧ್ವಜ | ವಾರಣ ಕನಕ ಮಂಗಳರೇಖೆವೊಪ್ಪೆ | ನೂ- ಪುರ ಕಡಗ ಪೆಂಡ್ಯೆ ಪರಡೆ ಜಾನು ಜಂಘೆ | ಕಟಿ ನಾಭಿ ಉದರ ತ್ರಿವಳಿ | ಧಾರ ಶೋಭನವಾದ ಹೊನ್ನುಡಿ | ಧಾರ ಕಿಂಕಿಣಿ ತೋರಮುತ್ತಿನ- ಹಾರ ಉರವಿಸ್ತಾರ ಗುಣವಂತೆ 1 ಕಂಬು - ಗ್ರೀವ ಸರಿಗೆ ದಿವ್ಯಚಂದನ ಲೇಪಿಸಿ | ಕಂಚುಕ ಹಸ್ತಕಡಗ ಮುದ್ರೆ ಪ್ರವಳಮಣಿಯು ಕೇಯೂರ ದಂಡೆಯ ಸರ | ಬೇವಿನೆಸಳಂತೆ ಪುಬ್ಬು ಢಾಳಿಪ | ತಾವರೆಯ ಫಣೆಯೂ ಸಂಪಿಗೆ | ನಾಸಿಕ ವೇಣಿ | ಹಾವಿನಂದದಿ ಒಪ್ಪುತಿರೆ ದೇವಿ 2 ವಾಲೆಮೂಗುತಿ ಹೊನ್ನಹೂವು ತೂಗುವ ತುಂಬು | ಕದಪು ಮುಂಗೂದಲು | ಮೇಲೆ ರ್ಯಾಕಟೆ ಚೌರಿ ಮುಡಿದ ಕುಸುಮವು | ಸಾಲು ಮುತ್ತಿನ ಜಾಳಿಗೆ ಗೊಂಡ್ಯ ಶಿರದಲ್ಲಿ | ಪಾಲ ಸಾಗರ ಶಾಯಿ ವಿಜಯವಿ- ಠ್ಠಲರೇಯನ ಉತ್ಸಾಹದಲಿ | ತೋಳಿನಲ್ಲಿ ಬಿಗಿದಪ್ಪಿ ಪವಳಿಪ | ಶ್ರೀ ಲಕುಮಿ ತ್ರೈಲೋಕ್ಯ ಮಾತೆ 3
--------------
ವಿಜಯದಾಸ
ಇಂದಿರೆ ಇಂದುವದನೇ ಸರಸಿಜಸದನೇ ನಿಂದಿತ ಜನಸೂದನೆ ಪ ವಂದಿಸುವೆನೆ ಅರವಿಂದಗಂಧಿನಿ ಮಂದಿರದಲಿ ಗೋವಿಂದನ ತೋರಿಸೆ ಅ.ಪ. ಮೂಲೋಕಮಾತೆ ವಿಖ್ಯಾತೆ ಕೈವಲ್ಯದಾತೆ ಕಾಲ ದೇಶದಿ ವ್ಯಾಪಿತೆ ಭಜಕರಪ್ರೀತೆ ಶೀಲೆ ಸಂಪೂರ್ಣ ಗುಣವ್ರಾತೇ ಫಾಲನಯನ ತ್ರಿದಶಾಲಯ ಪ್ರಮುಖರ ಪಾಲಿಸುತಿಹೆ ಮಂದಜಾಲಜನಕೆ ರಮೇ ಶ್ರೀಲತಾಂಗಿ ನಿನ್ನಾಳುಗಳೊಳು ಹರಿ ಲೀಲೆಯ ಮನದಲಿ ಅಲೋಚನೆ ಕೊಡೆ 1 ಲೋಕನಾಯಕಿ ಲಕುಮಿ ಶ್ರೀ ಸಾರ್ವ ಭೌಮೆ ಶೋಕರಹಿತ ಸುನಾಮೆ ನಾಕಜವನಧಿ ಸೋಮೆ ದೇವಲಲಾಮೆ ಸಾಕಾರವಂತೆ ಗುಣ ಸÉ್ತೂೀಮೆ ನೀ ಕರುಣಿಸಿ ಅವಲೋಕಿಸಿ ಎನ್ನಯ ಕಾಕುಮತಿಯ ಕಳೆದೇಕಾಂತದಿ ನಿತ್ಯ ಏಕ ಮನದಿ ಹರಿ ಶ್ರೀ ಕರಪದಧ್ಯಾನ ನೀ ಕರುಣಿಸು ನಿರಾಕರಿಸದಲೆ 2 ಜಾತರಹಿತ ಜಯವಂತೆ ದೈತ್ಯಕೃತಾಂತೆ ಸೀತಾಂಶುಕೋಟಿ ಮಿಗೆಕಾಂತೆ ಪಾತಕದೂರೆ ನಿಜಪಂಥೆ ನಿತ್ಯಾ ನಿಶ್ಚಿಂತೆ ನೀತದೂರಾದಿ ಮಧ್ಯಾಂತೆ ಪುರುಹೂತ ಮುಖಾವರ ವ್ರಾತ ವಿನುತೆ ಅತಿಪ್ರೀತಿಯಿಂದಲಿ ನಮ್ಮ ವಾತಜನಕ ಜಗನ್ನಾಥ ವಿಠಲನ ಮಾತು ಮಾತಿಗೆ ನೆನೆವಾತುರ ಮನ ಕೊಡೇ 3
--------------
ಜಗನ್ನಾಥದಾಸರು
ಇಂದಿರೆ ಪಾಲಿಸು ಎನ್ನ ಪ ಇಂದಿರೆ ನಿನ್ನನು ವಂದಿಸಿ ತುತಿಸುವೆ ವಂದಿಪ ಜನಕಾನಂದ ನೀಡುವ ದೇವೀ ಅ.ಪ ಮಂದಜಾಸನ ಮುಖ ಸುರರಾ ಕರುಣ ದಿಂದಲಿ ಪಾಲಿಪೆ ಅವರ ಸದರ ಸದಾ ಪೊಂದಿದ ಜನಕೆ ಅಧಾರಾ ಆಹ - ಳೆಂದು ನಿನ್ನಯ ಪಾದದ್ವಂದ್ವಜಲಜ ಮನೋ - ನಿತ್ಯ ವಂದಿಪೆ ಹರಿರಾಣೀ 1 ಸ್ಮರಣೆ ಮಾಳ್ಪರ ಪಾಪಹÀರಣ ಪರಿ - ಹರಿಸಿ ಮಾಡುವಿ ಪೂರ ಕರುಣಾ ಆಹಾ ಸರಿಯಿಲ್ಲ ನಿನಿಗಿನ್ನು ಹರಿಗೆ ಸಮಾಸಮೆ ತ್ವರಿತಾದಿ ಎನ್ನನು ಮರೆಯದೆ ಪೊರೆಯೆಂದೆ2 ಮಾತೆ ದಾರಿದ್ರ್ಯವ ಕಳೆದು ನಿನ್ನ ದೂತ ನಾನೆಂದು ನೀನೊಲಿದು ಮಾತು ಲಾಲಿಸಿ ಭಾಗ್ಯಗರಿದು ಎನಗೆ ನೀತವಾಗಿ ಸುಖ ಸುರಿದು ಆಹಾ ದಾತಗುರುಜಗನ್ನಾಥವಿಠಲ ನೀ - ಕೇತನ ಸುಖ ಎನಗೆ ಈ ತೆರ ನೀಡಮ್ಮಾ3
--------------
ಗುರುಜಗನ್ನಾಥದಾಸರು
ಇಂದಿರೆಯರಸನಾಡಿದ ಆಟನೋಡಿ|ನಲಿದಾಡಿ| ಬಂದರಜಮುಖ್ಯರೋಡಿ|ಬಹುಜನ ಕೂಡಿ ಪ ಅರುಣ ತಳದಿರಂಜಿಪ ದ್ವಯ|ಚರಣದಿಂದ ಕಾಳಿ ಅಹಿ| ವರನಸಿರವ ಮೆಟ್ಟಿಸೂರ್ಯ|ಕಿರಣದಂತೆ ಪೊಳೆವಾ| ಸ್ಪುರಣಗೆಜ್ಜಯ ಝಣ ಝಣ|ಝಣಕು ಝಣಕೆಂಬ ತೆರದಿಂದ| ಕರುಣ ಧಿಗಿ ಧಿಗಿಯೆಂದು|ವಾರುಣದಲಿ ಕುಣಿಯೇ 1 ವೀಣೆಯಲಿತಾಸರಿಗ ಮಪಧನಿ|ಸೆಂಬಮೆಟ್ಟಿಕೆಯೊಳ| ತ್ರಾಣದಿಂದ ಝಿಂ ಝಿಂ ಝಿಂ ಝಿಂ ಕೆನಿಪ ದ್ವನಿಯಗಳನು| ಮಾಣುತಲಿ ಸಿರಿರಾಗ ಘನಮಲಾಹರ ಮೊದಲು| ವಾಣಿಪತಿಸುತ ಪಾಡಿದ ನಾನಾ ರಾಗದಲಿ 2 ಅಂಬುಜಾಕ್ಷಪ್ರಿಯನಾದ|ಅಂಬುಜಭವ ಪದ ಕರ್ತ| ಕುಂಭಿಯೊಳಹಸ್ತಿನಿಕು|ರಂಬಾರಿ ಕೋಟಿ ದ್ವನಿ| ವೆಂಬಂತೆ ಕಹಳೆಗಳು|ತುಂಬಿ ಪೂರೈಸಿದನು| ಭುಂ ಭುಂ ಭುಂ ಭುಂ|ಭುಂ ಮೆಂದು ಗಂಭೀರ ಸಪರದಿ 3 ತತ್ತಥೈಯ್ಯಾ ಥೈಯ್ಯಾ ಥರಿಕೆಂದು|ಧತ್ತೆರಿಕುಥಲಿ| ಒತ್ತಿ ಖಿಣಿ ಖಿಣಿ ಖಿಣಿಲೆಂಬ|ಮೊತ್ತತಾಳು ವಿಡಿದು| ಮತ್ತ ಏಕತಾಳ ಝಂಪೆ|ತಾಳ ಅಟ್ಟತಾಳಗಳು| ಉತ್ತುಮದಾ ಕರದಿ ಹರ ಅರ್ಥಿಯಲಿ ನಿಂದಾ 4 ಇಂದೀವರಜ ಮದ್ಯಸ್ಥಲ ಒಂದು ನೆಗೆದು ಜವದಿಂದಾ| ದಂ ದಂ ದಂ ದಂ ದಮುಕೆಂದು|ಛಂದದಿ ಮುಟ್ಟಿದನು| ಧಿಂಧಿಂಧಿಂಧಿಂಧಿಮಿಕೆಂದು|ದುಂಧುಂಪೊಡದರು ಸುರರು| ತಂದೆ ಮಹಿಪತಿ ನಂದನ ವಂದ್ಯನೊಲುವಂತೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಕೂಡಿದೆ ಎನ್ನ ಮನದ ಪ್ರೀಯರ ಪ ಚರಣ ಕಮಲವು ಕಾಣುತಾಕ್ಷಣಹರುಷವಾಯ್ತು ಪೂರ್ಣ ಎನ್ನ ಮನಸಿಗೆ |ಶರಧಿ ಎಬ್ಬಿದ ಪರಿಯ ಎನ್ನೊಳುಪರಮ ಚಿದ್ಘನಾನಂದ ತುಳುಕಿತು 1 ಅಮಿತ ಸುಖವನುಭಾಲಲೋಚನನೆ ಬಲ್ಲ ಇದರ ಬಗೆಯನು |ಕೀಳ ಜನರಿದನೇನು ಬಲ್ಲರುಹಾಳ ಬದುಕುವದಿಂದೇತರದಿವರ ಜನ್ಮವು 2 ಪಾದ ಮೂರ್ತಿ ಜ್ಞಾನಬೋಧನೊಡೆಯನೀವನು 3
--------------
ಜ್ಞಾನಬೋದಕರು
ಇಂದು ಶ್ರೀರೂಪವ ಛಂದಾದಿಂದಲಿ ನೋಡುವೆನು ಆನಂದ ಪಡುವೆನು ಪ. ಬಿಳಿಯ ಕುಪ್ಪುಸವಾ ತೊಟ್ಟಳು ನೋಟವ ನೋಡುವಳು 1 ಪಾದಾಕೊಪ್ಪುವ ಋಳಿ ಪೈಜಣಿ ಕಾಲುಂಗರದಂದಾ ಸಾಲಿನೊಳಗೆ ಅಘಾದ ಪರಿಪೂರ್ಣ 2 ಗಳದಿ ಕಠಾಣೆಯಕಟ್ಟಿ ಅದರ ಮೇಲ್ ಗೆಜ್ಜೆಯ ಟೀಕಿ ಪುಥಲಿಸರ ಚಂದ್ರಹಾರಗಳು ವೈಯಾರದಿ ಬರುವೋಳೂ 3 ಮುದ್ದು ಮುಖಕ್ಕೆ ತಕ್ಕ ಮುಖುರೆ ಬುಲಾಕು ದ್ರಾಕ್ಷಝೂಲರ ಬುಗುಡಿಯ ಬೆಳಕು ಆನಂದ ಸುರಿಯೋಳು ಇವಳು ಮನಕ 4 ಚವರಿ ಚಂದ್ರಾ ಜಡಿ ಭಂಗಾರದ ರಾಗುಟಿ ಬೈತಲ ಮುತ್ತನಿಟ್ಟ ಹೇಳ ಭಂಗಾರ ಗೊಂಡೆವ ಕಟ್ಟಿ ಇವಳ್ಯಾರು ಧಿಟ್ಟಿ 5 ಮಂದರ ಮಲ್ಲಗಿ ಸುಗಂಧಿಯು ತ್ಯಾದಿಗಿ ನೂತನದ ಪಾರಿಜಾತವನ್ನು ಇಂದು ತಾಂಬೂಲ ಮೆಲುವುತ ಮುಗುಳು ನೆಗಿಯು ನಗುತ 6 ತರುಣಿಯೆನ್ನದಿರು ಹರಿಯಾ ರೂಪಾವ ವ್ಹಾ ನೋಡು ಛಂದಾಮನ ಕಾನಂದಾ 7 ನೀನು ಶ್ರೀರಂಗನಾಯಕನೆ ಕಾಳಿಂಗಶಯನನೆ ನರಶಿಂಗನೋ 8 ಯೇಷ್ಟುನೋಡಿದರು ಈ ಧಿಟ್ಟ ಮೂರುತಿಯ ದೃಷ್ಟಿ ತಾಕುವ ದಯ್ಯ ಕಾಳಿಯ ಮರ್ಧನ ಕೃಷ್ಣರಾಯಾ 9
--------------
ಕಳಸದ ಸುಂದರಮ್ಮ
ಇಂದು ಇಂದು ಇಲ್ಲಿ ಚಂದ್ರವದನೆ ಇಂದಿರಾದೇ'ಗಂಡುಗಲಿಯ ವೇಶತಾಳಿ ಗೆಂಡಾಸುರನ ಕೊಂದು ನಗುತಅ.ಪಜಗದೀಶನ ಮಡದಿಯಂತೆ ಮಗಗೆ ನಾಲ್ಕು ಮುಖಗಳಂತೆಮಗನ ಮಗ ಬೈರಾಗಿಯಂತೆ ಅಗಜೆ ಅವಗೆ ಒಲಿದಳಂತೆ 1ಹರಿಯ ಹೃದಯದಲ್ಲಿ ಸದಾ ಅಗಲದೆ ತಾ ಇರುಳಂತೆಆದಿಮಾಯಾ ಶಕ್ತಿಯಾಗಿ ಜಗದ ವ್ಯಾಪಾರ ಮಾಡುವಳಂತೆ 2ಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರಸೇವೆಸಾಟಿಇಲ್ಲದೆ ಮೂಡಿ ಪೂರ್ಣ ನೋಟದಿಂದ ಸುಖಿಪಳಂತೆ 3ಛಕ್ರಚಾಮರ ವ್ಯಜನ ಪರ್ಯಂಕ ಪಾತ್ರರೂಪದಲ್ಲಿನಿಂತುಚಿತ್ತಚರಿತನಾದ ಹರಿಯ ನಿತ್ಯ ಸೇವೆ ಮಾಡುವಳಂತೆ4ಗಂಡ ಹೆಂಡಿರ ಜಗಳವಂತೆ ಕೊಲ್ಹಾಪುರದಿ ಇರುವಳಂತೆಗಂಡ ವೈಕುಂಠ ಮಂದಿರಬಿಟ್ಟು ವೆಂಕಟಗಿರಿಯಲಿ ಇರುವನಂತೆ5'ೀರಪುರುಷ ವೇಷವಂತೆ ಕ್ರೂರ ದೈತ್ಯನ ಸೀಳಿದಳಂತೆಯಾರಿಗು ಗೊತ್ತಾಗದಂತೆ ರಾತ್ರಿ ಊರೊಳಗೆ ಬರುವಳಂತೆ 6ಭಾರತಹುಣ್ಣಿಮೆ ಜಾತ್ರಿಯಂತೆ ಭಾರಿಜನರು ಕೂಡುವರಂತೆಭಾರಿ ಡೊಳ್ಳು ಹೊಡಿವರಂತೆ ಭೂಪತಿ'ಠ್ಠಲ ನಗುವನಂತೆ 7ಹನುಮಂತದೇವರು
--------------
ಭೂಪತಿ ವಿಠಲರು
ಇಂದು ಕಂಡೆ ನಾ ಇಂದಿರಾಪತಿ ತಂದೆ ತಾಯಿ ಗೋವಿಂದನ ಬಂಧು ಬಳಗೆನಗೆಂದು ನಾ ನಂದ ಕಂದ ಮುಕುಂದನ 1 ಕಾಮಪೂರಿತ ಕಂಜಲೋಚನ ಸ್ವಾಮಿ ಕಾವನೈಯನ ಸಾಮಗಾಯನ ಪ್ರಿಯನ ಸೋಮಶೇಖರ ಧ್ಯೇಯನ 2 ಸಾನುಕೂಲ ಸಕಲಕ ಸಾಧನ ಭಾನುಕೋಟಿ ಪ್ರಕಾಶನ ಜ್ಞಾನಗಮ್ಯ ವಿನಾಶನ ದೀನ ಮಹಿಪತಿ ಈಶನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಕಣ್ಣಿಲೆ ಕಂಡಿತು ಧ್ರುವ ಆಯಿತು ವಸ್ತು ಒಂದು ಕಣ್ಣಿಗೆ ಕಣ್ಣು ಕಾಣಬಂದು ಕಾಣಿಸಿ ನಿಜಪುಣ್ಯಗೈಸಿತು ಎನಗಿಂದು 1 ಹೊಳೆಯುತಿಹ್ಯದು ನಿಜಘನ ನೋಡಲಿಕ್ಕಾಯಿತುನ್ಮನ 2 ಕಣ್ಣುಗುರುತಾದ ಪೂರ್ಣಗುರುಬೋಧ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮ ಮನಿಲಿ ಬ್ರಹ್ಮಾನಂದ ಬಂದು ಭಾವ ಪೂರಿಸಿದ ಮುಕುಂದ ಧ್ರುವ ಎನ್ನಮನಕೆ ಮಾಡಿದ ಮನೋಹರ ಚೆನ್ನಾಗೊಲಿದು ದೋರಿದ ಸಹಕಾರ ಮನ್ನಿಸೆನಗೆ ಬೀರಿದ ನಿಜಸಾರ ಇನ್ನೊಬ್ಬರಿಗ್ಹೇಳುದಲ್ಲೀ ವಿಚಾರ 1 ದಯದಿಂದ ಪಿಡಿದು ಎನ್ನ ಕೈಯ ಶ್ರೇಯ ಸುಖ ನೀಡಿದ ಪ್ರಾಣಪ್ರಿಯ ತ್ರಯ ಗುಣಾತೀತದ ಸುಖಾಶ್ರಯ ತ್ರೈಲೋಕದೊಳೆನಗೆ ವಿಜಯ 2 ಕಣ್ಣು ಪಾರಣಗೈಸಿದೆನ್ನ ನೋಡಿ ಎನ್ನೊಳನುಭವಾಮೃತಸಾರ ನೀಡಿ ಚಿಣ್ಣಮಹಿಪತಿ ಕೈವಶಗೂಡಿ ಧನ್ಯಧನ್ಯಗೈಸಿದ ದಯಮಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮ ಸಲಹಯ್ಯಾ ಸಿರಿರಮಣಾ| ದುರಿತ ನಿವಾರಿಸು ಪೂರ್ಣ| ಮಂದಮತಿಗಳಾ ನೋಡದೆವೆ ನ್ಯೂನಾ| ಛಂದದಿಂದ ಕೊಡು ನಿನ್ನ ಚರಣ ಧ್ಯಾನಾ ಪ ಹಿಂದ ವ್ಯಾಧನೊಬ್ಬ ಹರಿಣಿ ಹಿಡಿಯಲಿ| ನಿಂತು ಚತುರ್ವಿಧ ಬಲಿಯಾನೊಡ್ಡಿರಲಿ| ಮೃಗ ಮೊರೆಯಿಡಲಿ| ಬಂದು ಕರುಣಿಸಿ ರಕ್ಷಿಸಿದ ಪರಿಲಿ 1 ಬಸಿರೊಳಗಿದ್ದ ಪರೀಕ್ಷಿತಗೆಂದು| ಎಸೆಯಲು ಬಾಣಗಳ ದ್ರೋಣಿ ಮುಳಿದು| ಬಿಸಜಾಕ್ಷ ನಿನ್ನ ಚಕ್ರ ಮರೆವಿಡಿದು| ಪರಿ ಬಂದು 2 ದಿನ ವತ್ಸಲ ದಯಾನಿಧಿ ಎನುವಾ| ಖೂನದೋರಿಸಯ್ಯಾ ಬಿರುದಿನ ಅನುವಾ| ನಿನೇ ತಾಯಿ ತಂದೆ ಬಂಧು ಸಖದೈವ| ಘನಗುರು ಮಹಿಪತಿ ಸುಖ ಜೀವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದು ಬಲು ಸುಖದಾಟ ಸಾಧಿಸಿ ನೋಡಿರೋ ನೀಟ ಧ್ರುವ ಕರ್ಮಕಮಂಧವಿಲ್ಲ ವರ್ಮ ತಿಳಿದವ ಬಲ್ಲ ಧರ್ಮ ಗುರುವಿನ ಸರಿ ಇಲ್ಲ ನಿರ್ಮಲ ನಿಜವೆಲ್ಲ 1 ಅನುಭವಕನುಭವದ ಅನಂದೋ ಬ್ರಹ್ಮದ ಬೋಧ ಏನೇಂದ್ಹೇಳಲಿ ಸುಸ್ವಾದ ತಾನೆ ತಾನಾದ 2 ಸಾಧಿಸಿದಲ್ಲದೆ ಖೂನ ಇದರಿಟ್ಟು ಮಹಿಪತಿ ಪೂರ್ಣ ಒದಗಿ ಕೈಗೂಡದು ಧನ ಸದ್ಗುರು ಚರಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಭಾಸ್ಕರ ಪುಣ್ಯ ಪ್ರಭೆಯ ಕೂಡಿ ಧ್ರುವ ಪುಣ್ಯ ಎದುರಿಟ್ಟು ಬಂದು ಮುಂದೆ ಕಣ್ಣಾರೆ ಕಂಡು ತ್ರಾಹಿ ಎಂದೆ ಸಣ್ಣ ದೊಡ್ಡದರೊಳು ವಸ್ತು ಒಂದೆ ಬಣ್ಣ ಬಣ್ಣಾ ಗೀಹ್ಯದರಿಂದೆ 1 ಹೇಳಬಾರದಯ್ಯ ನಿಜವರ್ಮ ಕೇಳಿ ಶ್ರೀಸದ್ಗುರು ಪಾದಧರ್ಮ ಅಳಿಯಿತು ನೋಡಿ ಪೂರ್ವ ಕರ್ಮ ಹೊಳಿಯಿತೆನ್ನೊಳು ಘನ ಬ್ರಹ್ಮ 2 ಸೋಹ್ಯ ದೋರಿ ಕೊಟ್ಟೆನಗಿಂದು ಮಹಿಪತಿಸ್ವಾಮಿ ತಾನೆ ಬಂದು ಈಹ್ಯಪರ ಪೂರ್ಣ ಕೃಪಾಸಿಂಧು ಸಾಹ್ಯ ಮಾಡುತೀಹ್ಯ ದೀನ ಬಂಧು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು