ಒಟ್ಟು 564 ಕಡೆಗಳಲ್ಲಿ , 86 ದಾಸರು , 441 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ 1 ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸÀಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ ರಿಪು ಚನ್ನಾಗಿ ಒಲಿದದು ನೋಡಿದೆ 2 ತಿಳುಹಿದನು ಪೂರ್ವದಲಿ ಈ ಫಣಿ ಖಳನು ಕಾಣೊ ಇವನಿಂದು ಅಳಿದು ಪೋದದು ಲೇಸು ಭೂಸುರ ಕುಲಕೆ ಸಂತೋಷವಾಯಿತು ಒಲುಮೆಯಲಿ ಸತ್ಕಾರ ವಿಧ ವೆ ಗ್ಗಳವಾಗಿ ಸುಯಾಗವ ಸುಲಭ ಮನದಲಿ ಮಾಡೆನಲು ನಿ ಶ್ಚಲ ಭಕುತಿಲಿ ಸ್ತುತಿಸಲು 3 ಇಂದಿರಾಪತಿ ಕರುಣಿಸೆಂದು ಅಂದಿಗಾ ರಾಮ ಭೋಜನು ಒಂದು ಕ್ರೋಶದ ಅಗಲ ರಜತಾ ಚಂದದಾಸನ ಮಾಡಿಸಿ ತಂದು ದೇವನ ಕುಳ್ಳಿರಿಸಿ ಆ ನಂದದಲಿ ಓಲಾಡುತಾ ಕುಂದದಲೆ ಮೇಧವನು ಮುಗಿಸಿ ಗೋ ವಿಂದನ ಪ್ರೀತಿಪಡಿಸಿದಾ 4 ಭೂತಳದೊಳು ರಜತಪೀಠಾಖ್ಯ ಖ್ಯಾತಿ ಆಯಿತು ಸರ್ವದಾ ಆ ತರುವಾಯದಲ್ಲಿ ಭಾರ್ಗವ ಭೂತನಾಥನ ನಂದದಿ ವಾತ ಭಕ್ಷನ ನಡುವೆ ನಿಂದನು ಮಾತುಯಿದು ಪುಶಿಯಲ್ಲವೊ ಪೂತುರೆ ಮೋಹಕವೆ ತೋರಿದ ಜಾತ ರಹಿತಗೆ ನಮೋ ನಮೋ 5 ಪರಿ ಇರಲು ಗಂಗೆಯ ಕಾಂತ ಮಹಾ ತಪವನೆ ಮಾಡಿ ಸಂತತ ಗೋಪಾಲಕೃಷ್ಣನ ಸಂತೋಷವನು ಬಡಿಸಿದಾ ಚಿಂತೆಯಲಿ ವಿದೂರನಾದನು ಮುಂತೆ ನಡೆದ ಕಥೆ ಕೇಳಿ ಕಂತುಹರನನ ಒಲಿಸಿ ಉಡುಪಾ ಕಾಂತ ವರವನೆ ಐದಿದಾ 6 ಮೂರು ಯುಗದಲಿ ಈ ಪರಿಯಾಗೆ ಮಾರುತ ಮಧ್ಯಗೇಹನ ಚಾರು ಮನೆಯಲಿ ಜನಿಸಿ ವೈಷ್ಣವಾ ಚಾರ್ಯ ಈ ದುಶ್ಯಾಸ್ತ್ರವ ಹಾರಿಸಿದ ಹರುಷದಲಿ ರುಕ್ಮಿಣಿ ದ್ವಾರಕೆಲಿ ಪೂಜೆ ಮಾಡಿದ ಮೂರುತಿಯ ಸ್ಥಾಪಿಸಿದ ಲೀಲೆಯು ಆರು ಬಣ್ಣಿಸಲಾಪರು 7 ಇದೇ ರಜತಪೀಠ ಅಜಕಾನನವಿದೆ ಇದೇ ಉಡುಪಿ ಇದೇ ಶಿವಕುಲ್ಲ್ಯ ಅದರ ಬಳಿಯಲಿಯಿಪ್ಪ ತೀರ್ಥವ ಅದುಭುತವ ವರ್ಣಿಸುವೆನು ಇದೇ ಅನಂತ ಸರೋವರವು ಮ ತ್ತಿದೇ ವಾರುಣ್ಯಚಂದ್ರಮತೀರ್ಥ ಇದಕೆ ಮಧ್ವಸರೋವರ ವೆಂ ಬದು ಕಾಣೊ ಶ್ರುತಿ ಉಕ್ತಿಲಿ 8 ಸಕಲ ದೇಶದ ಜನರು ತ್ರಿವಿಧ ಸುಖವಾರಿಧಿಯೊಳು ಸೂಸುತಾ ಅಖಿಳ ವೈಭವದಿಂದ ಬಪ್ಪ ಅಕಟ ಸಂದಣಿಗೇನೆಂಬೆ ಸೂರ್ಯ ಬಂದ ಕಾ ಲಕೆ ಕೃಷ್ಣನ ನೋಡುವೆನೆಂದು ಚಕ್ಕನೆ ನಿಲ್ಲದೆ ಬಂದು ನೆರದಂದು ಮುಕ್ತಾರ್ಥ ಹರಿಪ್ರೇರಕಾ 9 ಸಜ್ಜನರ ಸಿರಿಚರಣ ರಜದಲಿ ಮಜ್ಜನವ ಗೈವುತ ಹೆಜ್ಜಿಹೆಜ್ಜಿಗೆ ಕೃಷ್ಣ ಕೃಷ್ಣ ಅಬ್ಜನಾಭ ನಾರಾಯಣ ಮೂಜಗತ್ಪತೆ ಎಂದು ಸ್ತೋತ್ರ ನಿ ರ್ಲಜ್ಜನಾಗಿ ಪಠಿಸುತಾ ರಜ್ಜುಪಾಣಿಯ ಬಹಿರದಿಂದ ನಿ ವ್ರ್ಯಾಜ್ಯ ಭಕುತಿಲಿ ನೋಡಿದೆ 10 ಮೊದಲು ನಮಿಸಿದೆ ಚಂದ್ರಶೇಖರ ಪದುಮಗರ್ಭನ ಮಗನೆಂದು ಅದರ ತರುವಾಯದಲ್ಲಿ ಮಾಯಿಯ ಸದಬಡೆದ ಪೂರ್ಣಬೋಧರು ಸದಮಲಾ ಕುಳುತಿಪ್ಪ ಸ್ಥಾನವ ಒದಗಿ ನೋಡಿ ಕೊಂಡಾಡುತಾ ಮದನ ಜನಕಾನಂತ ಸ್ವಾಮಿಯ ಪದಯುಗಳವನು ನೋಡಿದೆ11 ರತುನ ಗರ್ಭದೊಳಧಿಕವಾದ ತೀ ರಥವಿದು ಮಧ್ವಾಖ್ಯದಿ ಸತತ ಬಿಡದಲೆ ಇಲ್ಲಿ ಭಾಗೀ ರಥಿವಾಸ ನದಿಗಳ ಕೂಡಿ ನುತಿಸಿ ಮೆಲ್ಲನೆ ಮುಟ್ಟಿ ಮಿಂದು ಮತ್ತೆ ಕರ್ಮದ ಚರಿಯವ ಹಿತ ಮನಸಿನಲ್ಲಿ ಮಾಡುವಂಥ ಕೃತ ಕಾರ್ಯವನು ನೋಡಿದೆ 12 ಅಲ್ಲಿಂದ ನವರಂಧ್ರಗಳು ಕಂಡು ಪುಲ್ಲಲೋಚನ ಕೃಷ್ಣನ ಸೊಲ್ಲಿನಿಂದಲಿ ಪಾಡಿ ಭಾರತಿ ವಲ್ಲಭನ ಕೊಂಡಾಡುತಾ ಮೆಲ್ಲ ಮೆಲ್ಲನೆ ದ್ವಾರವನೆ ಪೊಕ್ಕು ನಿಲ್ಲದಲೆ ಸಮೀಪಕೆ ಬಲ್ಲವನು ಗುಣಿಸುತ್ತ ಭಕುತ ವ ತ್ಸಲನಂಘ್ರಿ ನೋಡಿದೆ13 ಮೂರು ಬಗೆ ಭೂಷಣವ ಧರಿಸಿದ ಮೂರುತಿ ಇದೇ ಕಾಣಿರೊ ಪಾರುಗಾಣರು ಈತನ ಅವ ತಾರ ಗುಣಕ್ರಿಯೆ ಮಹಿಮೆಯಾ ವಾರಿಜೋದ್ಭವ ಶಿವ ಮುಖಾದ್ಯರು ಸಾರಿ ಹಾಹಾ ಎಂಬರೊ ಧಾರುಣಿಗೆ ಇದೇ ದೈವ ನವನೀತ ಚೋರನ ಕೊಂಡಾಡಿದೆ 14 ತ್ರಾಹಿ ತ್ರಯಾವಸ್ಥೆ ಪ್ರೇರಕ ತ್ರಾಹಿ ತ್ರಯಗುಣ ವಿರಹಿತಾ ತ್ರಾಹಿ ತ್ರಯಧಾಮ ವಾಸ ಸರ್ವೇಶ ತ್ರಾಹಿ ತ್ರಯ ರೂಪಾತ್ಮಕಾ ತ್ರಾಹಿ ತ್ರಯವನು ಗೆದ್ದ ಪ್ರಸಿದ್ಧ ತ್ರಾಹಿ ತ್ರಯವನು ಕೊಡುವನೆ ತ್ರಾಹಿ ತ್ರಯಗಣ್ಣ ವನಪಾಲಕ ತ್ರಾಹಿ ತ್ರಯಲೋಕಾಧಿಪಾ 15 ಪಾಹಿಪರಮಾನಂದ ಗೋವಿಂದ ಪಾಹಿ ಪರತರ ಪರಂಜ್ಯೋತಿ ಪಾಹಿ ಪತಿತ ಪಾವನ್ನ ಮೋಹನ್ನಾ ಪಾಹಿ ಪಾಲಾಂಬುಧಿಶಾಯಿ ಪಾಹಿ ಜಗದತ್ಯಂತ ಭಿನ್ನಾ ಪಾಹಿ ನಿರ್ಭಿನ್ನ ಸ್ವರೂಪ ಪಾಹಿ ನಖಶಿಖ ಜ್ಞಾನ ಪೂರ್ಣನ ಪಾಹಿ ಎನ್ನಯ ಪ್ರೇಮನೆ 16 ನಮೋ ನಮೋ ಚತುರಾತ್ಮ ಗುಣನಿಧಿ ನಮೋ ನಮೋ ಪುನ್ನಾಮಕ ನಮೋ ನಮೋ ವಟಪತ್ರಶಾಯಿ ನಮೋ ನಮೋ ಪುಣ್ಯಶ್ಲೋಕನೆ ನಮೋ ನಮೋ ಸಮಸ್ತ ಸರ್ವಗ ನಮೋ ನಮೋ ಸರ್ವ ಶಬ್ದನೆ ನಮೋ ನಮೋ ಅವ್ಯಕ್ತ ವ್ಯಕ್ತಾ ನಮೋ ನಮೋ ನಾರಾಯಣ 17 ಜಯ ಜಯತು ಕರಿವರದ ವಾಮನ ಜಯತು ನಾರದ ವಂದ್ಯನೆ ಜಯ ಜಯತು ಪ್ರಹ್ಲಾದ ರಕ್ಷಕ ಜಯ ಜಯತು ಪಾರ್ಥನ ಸಾರಥೆ ಜಯ ಜಯತು ಅಂಬರೀಷ ಪರಿಪಾಲಾ ಜಯತು ಪರಾಶರನುತಾ ಜಯ ಜಯತು ಪಾಂಚಾಲಿ ಮಾನ ಕಾಯ್ದನೆ ಜಯ ಜಯತು ಗೋಪಿಕಾ ವಲ್ಲಭಾ18 ಇನಿತು ಬಗೆಯಲಿ ತುತಿಸಿ ದೇವನ ಮನದಣಿಯ ಕೊಂಡಾಡುತಾ ಕ್ಷಣಬಿಡದೆ ತನ್ನ ನೆನೆಸಿದವರಿಗೆ ಹೊಣೆಯಾಗಿ ಪಾಲಿಸುವನು ಜನುಮ ಜನ್ಮದಲಿಂದ ಮಾಡಿದ ಘನದುರಿತ ಪರ್ವತಗಳು ಚಿನಿಗಡೆದು ಸಾಧನವೆಲ್ಲ ವೇಗ ತನಗೆ ತಾ ಮಾಡಿಸುವನು 19 ವ್ಯಾಧ ಭೂಸುರ ವೇಷವು ಭೇದ ಮಾಡಿದ ನಾರಾಯಣಿ ಸುಪ್ರಸಾದ ನಿರ್ಮಲರೂಪವು ಆದಿವಾರವು ವಿಡಿದು ಎರಡು ಐದು ದಿನ ಪರಿಯಂತವು ಶ್ರೀಧರೇಶನು ವೇಷ ಧರಿಸಿದ್ದು ಸಾಧು ಸಂಗಡ ನೋಡಿದೆ20 ಉದಯಕಾಲದ ಪೂಜೆಯಾಗಲು ಮುದ ನಿರ್ಮಾಲ್ಯ ವಿಸರ್ಜನೆ ಇದೆ ಪೂರೈಸಲು ಮತ್ತೆ ಪಂಚ ಸುಧ ಪೂಜೆ ಉದ್ವಾರ್ಥನೆ ಒದಗಿಯಾಗಲು ಮೇಲೆ ಸುಧ ವಿಧುದಂತೆ ಬೆಣ್ಣೆ ಶರ್ಕರ ಇದೆ ಮಹ ಪೂಜೆ ನೋಡಿದೆ 21 ಗಂಧ ಪರಿಮಳ ತುಲಸಿ ಪುಷ್ಪಾ ನಂದ ಭೂಷಣ ಧರಿಸಿಪ್ಪ ಒಂದು ಕೈಯಲಿ ದಾಮ ಕಡಗೋ ಲಂದದಲಿ ತಾಳಿದಾ ಮಂದರಿಗೆ ಇದು ಸಾಧ್ಯವಲ್ಲವು ಮುಂದೆ ಯತಿಗಳು ಮಂತ್ರವ ಮಂದ ನಗಿಯಲಿ ಪೇಳುತಿಪ್ಪ ಚಂದವನು ನಾ ನೋಡಿದೆ 22 ಎತ್ತುವ ಧೂಪಾರತಿಗಳು ಹತ್ತೆಂಟು ಬಗೆ ಮಂಗಳಾ ರುತ್ತಿ ನಾನಾ ನೈವೇದ್ಯ ಷಡುರಸ ಮೊತ್ತಂಗಳು ಪರಿವಿಧಾ ಉತ್ತಮ ಶಾಖಾದಿ ಘೃತದಧಿ ತತ್ತಕ್ರಫಲ ಪಕ್ವವು ಸುತ್ತಲು ತಂದಿಟ್ಟು ಅರ್ಪಿ ಸುತ್ತಲ್ಲಿಪ್ಪುದು ನೋಡಿದೆ 13 ಮಂತ್ರ ಘೋಷಣೆ ಭಾಗವತಜನ ನಿಂತು ಗಾಯನ ಮಾಡಲು ಅಂತವಿಲ್ಲದೆ ವಾದ್ಯಸಂದಣಿ ಚಿಂತಿಸುವ ನಿಜದಾಸರು ವಂತು ವಾಳೆಯಿಲ್ಲದಾ ಜನ ಸಂತೋಷದಲಿ ನಲಿವುತಾ ತಂತ್ರ ಸಾರೋಕ್ತದ ಪೂಜೆ ಅತ್ಯಂತವನು ನಾ ನೋಡಿದೆ 24 ತೀರ್ಥ ಪ್ರಸಾದ ಗಂಧ ಅಕ್ಷತೆ ಅರ್ಥಿಯಲ್ಲಿ ಕೊಡುವರು ವ್ಯರ್ಥವಲ್ಲಿವು ಇಲ್ಲಿ ಒಂದು ಮು ಹೂರ್ತವಾದರು ಎಂದಿಗೂ ಶುಭ ಪ ದಾರ್ಥ ಬಡಿಸಲು ಉಂಡು ಕೃ ತಾರ್ಥನಾದೆನು ಜ್ಞಾನವಧಿಕ ಸಾರ್ಥಕರನ ನೋಡಿದೆ25 ತರಣಿ ಮಕರಕೆ ಬರಲು ಗೋಪಾಲ ಮೆರೆವ ವೈಭವವೆಂಬೆನೇ ಗಜ ತುರಗ ಹರಿ ಗರುಡ ಶ್ರೀ ಹನುಮಂತನಾ ವರ ರೂಢನಾಗಿ ಮೆರೆದು ಆಮೇಲೆ ಮಿರುಗುವ ರಥವನೇ ಏರಿ ಪರಮ ವೇಗದಿ ಚತುರ್ವೀಧಿಯ ತಿರುಗಿ ಬಪ್ಪದು ನೋಡಿದೆ 26 ಓಕಳಿಯ ಸಂಭ್ರಮವೆ ಪೇಳಲು ಗೋಕುಲಕೆ ಸಮನೆನಿಸಿತು ವಾಕು ಕೇಳ್ ಸುರ ಮುನಿಗಳೊಡನೆ ಲೋಕಕ್ಕಾಶ್ಚರ್ಯ ತೋರುತಾ ಸೋಕಿ ಸೋಕದ ಹಾಸೆ ಓಕುಳೀ ಹಾಕಿ ಆಡುವ ಲೀಲೆಯ ಈ ಕಲಿಯುಗದಲ್ಲಿ ಸೋಜಿಗ ಈ ಕಥೆಯಾದುದು ನೋಡಿದೆ 27 ವಾಲಗ ಎಡಬಲದಲಿ ಪಂಜು ಕಟ್ಟಿಕೆಕಾರರು ರಂಜಿಸುವ ಪಲ್ಲಕ್ಕಿ ಸೇವಿಪ ರಂಜಳವಾಗಿ ಒಪ್ಪಲು ಕುಂಜರಾರಿಯ ಪೀಠದಮೇಲೆ ಕಂಜಲೋಚನ ಕುಳ್ಳಿರೆ ನಿ ರಂಜನದಲಿ ಪೂಜಿಸುವ ಮತಿ ಪುಂಜ ಯತಿಗಳ ನೋಡಿದೆ 28 ಶ್ರುತಿ ಪುರಾಣಗಳುಪನಿಕ್ಷತ್ ವೊ ಸತು ಶಾಸ್ತ್ರ ಪ್ರಬಂಧವು ಭಾಗವತ ಸುಸಂ ಗೀತಿಯಲಿ ರಾಗ ಭೇದವು ಶ್ರುತಿ ಕಥಾಭಾಗ ಪದ್ಯ ಅಷ್ಟಕ ಮಿತಿಯಿಲ್ಲದಲಿಪ್ಪ ಪ್ರಸಂಗ ತತುವ ಮಾರ್ಗದಿ ನುಡಿವ ಬಲು ಉ ನ್ನತ ಮಹಿಮರ ನೋಡಿದೆ 29
--------------
ವಿಜಯದಾಸ
ನೋಡಿದೆನೊ ಮನದಣಿಯ ನಳಿನಭವಾದ್ಯರ ಕ್ರೀಡಾಮೃಗವನೆ ಮಾಡಿ ಆಡಿಸುವ ವಿಚಿತ್ರ ಮಹಿಮ ಗೋಪಾಲಗ ಈಡುಗಾಣೆನೊ ಎಲ್ಲೆಲ್ಲಿ ಆವಲ್ಲಿ ಪ ಕಾಲಲಂದಿಗೆ ಗೆಜ್ಜೆ ಸರಪಳಿ ಉಡುದಾರ ಮೇಲು ಕಿರಿಗೆಜ್ಜೆ ಘಂಟೆ ತೋಳು ರಕ್ಷಾಮಣಿ ನಾಗ ಮುರಿಗೆ ಬಂದಿ ಸಾಲು ತಾಯಿತ ಕಟ್ಟಿರೆ ವಜ್ರ ಉಂಗುರದ ಬೆರಳು ಸು ಫಾಲದಲಿಯಿಟ್ಟ ತಿಲಕಾ ಲಾಲಿಸುವ ಬಾಲಕರೂಪದಿಂದಲಿ ಪ್ರಾತಃ ಇಂದು 1 ಮುಂಗೈ ಮುರಾರಿ ಪವಳದ ಬುಲಿಗೆಜ್ಜೆ ಬಂಗಾರ ಕೊರಳಲ್ಲಿ ಹಾ ರಂಗಳನು ಶೋಭಿಸುವ ಮಾಗಾಯಿ ಕರ್ಣದಲಿ ಉರ ಕೌಸ್ತಭ ಕಂಗೊಳಿಪ ಎಣೆನೂಲು ಹುಲಿಯುಗುರು ತಾಳಿಸರ ಹಿಂಗದಲೆ ಪಚ್ಚೆ ಪದಕಾ ಶೃಂಗಾರದರಳೆಲೆ ಶಿರದಿ ಜಾವಳ ಜಡೆ ಇಂದು 2 ಮಕರ ಕಡಗೋಲ ನೇಣನ್ನೆ ಕರದಲಿ ಪಿಡಿದು ಉರ ಪಾಣಿಗಳು ಬೆಣ್ಣೆ ಮೊಸರಿಲಿ ತೋದಿರೆ ಚನ್ನನಾಸಾ ಮಣಿತೂಗೆ ಅದರ ಭಾಗ್ಯ ಬಣ್ಣಿಪಲರಿದು ತಿಳಿದು ಚಿನ್ಮಯ ವಿಜಯವಿಠ್ಠಲ ವಿಶ್ವರೂಪ ಪಾ ಇಂದು 3
--------------
ವಿಜಯದಾಸ
ನೋಡಿದ್ಯ ರಂಗೈಯನ ನೋಡಿದ್ಯ ಪ ನೋಡಿದ್ಯ ಮನವೆ ನೀನಿಂದು ಕೊಂ- ಡಾಡಿದ್ಯ ಎದುರಲ್ಲಿ ನಿಂದು ಆಹ ಮಾ- ತಾಡಿದ್ಯ ವರಗಳ ಬೇಡಿದ್ಯ ನಿನ್ನೊಳು ಕೂಡಿ ನಲಿನಲಿದಾಡುವ ಶ್ರೀ ರೂಪ ಅ.ಪ. ಚರಣತಳದಲ್ಲಿ ಕೆಂಪು- ಶುದ್ದ ಅರವಿಂದ ಧ್ವಜ ವಜ್ರಸೊಂಪು- ಸ್ತುತಿ ಪÀರಿಗೆ ಸುರಂಘ್ರಿಪ ತಂಪು- ನೋಡ- ಲರಸಿ ಕಾಣದೊ ವೇದಗುಂಪು, ಆಹ ಹರಡಿ ಹಿಂಬಳೆ ಸಾಲ್ಬೆರಳೈದರ ಮೇಲೆ ಸುರುಚಿರ ರೇಖೆ ಚಂದ್ರಮನ ಸೋಲಿಪ ನಖ1 ಸರಸ ನೂಪುರ ಗೆಜ್ಜೆ ಪೆಂಡ್ಯ - ಹೊನ್ನ ಸರಪಳಿ ಪಾಡಗ ಕಂಡ್ಯ - ಹಿಂದೆ ಧರೆಗೆ ಮುಟ್ಟಿದ ಜಡೆಗೊಂಡ್ಯ - ಇದು ತರುಣಿ ಎನ್ನದಿರು ಕಂಡ್ಯ - ಆಹ ಬೆರಳಲ್ಲಿ ಇಟ್ಟ ಸುಂದರ ಪಿಲ್ಲಿಮೆಂಟಿಕೆ ಕಿರಿಪಿಲ್ಲಿ ಅಡಿಮೆಟ್ಟು ಮೆರೆವ ಕಾಲುಂಗರ2 ಝಣ ಝಣ ಗೆಜ್ಜೆನಾದ - ವನ್ನು ಎಣಿಸಲಾರದು ನೋಡಿ ವೇದಾ - ನಂತ - ಮೋದ - ಇದು ಅಣುರೇಣು ತೃಣಕಾಷ್ಠ ಭೇದ, ಆಹ ಪ್ರಣತಾರ್ತಿ ಹರವಾದ ಮಿನುಗುವ ಜಾನುದ - ರ್ಪಣ ನಾಚಿಪ ಜಂಘೆ ಎಣೆಗಾಣೆ ಸ್ತ್ರೀರೂಪ 3 ಊರುದ್ವಯಂಗಳು ರಂಭಾ - ಸ್ತಂಭ ಚಾರು ಪೊಕ್ಕುಳ ಸುಳಿಗುಂಭ - ತಂತ್ರಾ - ಸಾರೋಕ್ತದಿ ಪೂಜೆಗೊಂಬ - ವಿ ಸ್ತಾರ ಮಹಿಮೆ ಗುಣತುಂಬ, ಆಹ ನಾರಿ ಲಾವಣ್ಯದ ಪಾರ ಮೀರಿದ ಕಾಂತಿ ಆರಾರ ಮನಸಿಗೆ ತೋರದ ಪೆಣ್ಣಿನ4 ಉದಯರಾಗದ ದಿವ್ಯವಸನ - ಮೇಲೆ ಉದರ ತ್ರಿವಳಿ ಬಂದಿ ಹಸನ - ಕೇಳು ಮುದದಿಂದ ವಡ್ಯಾಣ ಬೆಸನ - ನೋಡು ಯದುಕುಲ ಜಾತ ಮಾನಿಸನ, ಆಹ ಮದಕರಿಯಂದದಿ ವಲಿದೊಲಿದಾಡಲು ಮದನಾರಿ ಮರುಳಾದ ಅದುಭುತ ಚರಿಯನ್ನ 5 ದೋರ್ಯ ಹರಡಿ ಕೈಕಟ್ಟು - ಚೂಡ್ಯ ಈರೈದುಂಗುರವುಳ್ಳ ಬೆಟ್ಟು - ಬಂ - ಗೀರು ಗಂಧವು ಗಂಬೂರ ಕರ್ಪೂರ ಕ- ಸ್ತೂರಿ ಲೇಪನ ಶೃಂಗಾರ ತ್ರಿವಳಿಯ 6 ತಾಯಿತು ಮುತ್ತ ಕಟ್ಟಾಣಿ - ತೋಳ ಮಣಿ - ವಂಕಿ ಕೇಯೂರ ಪಲ್ಲವ ಪಾಣಿ - ಉ ಪಾಯದಲ್ಲಿ ಘಟ್ಟಿ ಕಾಣಿ, ಆಹ ನೋಯದೆ ಸುರರಿಗೆ ಪೀಯೂಷ ವುಣಿಸಿ ದೈ- ತೇಯರ ಮಡುಹಿದ ಮಾಯದ ಕನ್ನಿಕೆ 7 ಸರಿಗೆ ಮುತ್ತಿನ ಚಿಂತಾಕ - ಕುಚ- ಕಂಚುಕ - ತೊಟ್ಟ ಭರದಿ ತೂಗುವ ಪಚ್ಚೆಪದಕ - ಕೆಳಗೆ ಹರಿ ನಡುಕಿಂಕಿಣಿ ಕನಕ, ಆಹ ಹರಳು ಕೆತ್ತಿದ ಚಿತ್ತರ ಮಾಟ ಕಟಿಸೂತ್ರ ಧರೆಗೆ ಶೋಭಿಪ ಸೀರೆ ನೆರೆಯ ವೈಭವವನು 8 ರನ್ನ ಪವಳ ಸರ ಥಳಕು - ಜೋಡು ಕನ್ನಡಿ ಹಾಕಿದ ಮಲಕು - ನೋಡು ಅನ್ನಂತ ಸೂರ್ಯರ ಝಳಕು - ಲೋಕ ಚನ್ನಾಗಿ ತುಂಬಿದ ಬೆಳಕು ಹೇಮ ಸಣ್ಣ ಮುತ್ತಿನ ಮೋ ಹನ್ನ ಏಕಾವಳಿ ಚಿನ್ನದ ಸರಗಳು 9 ಸಿರಿವತ್ಸ ಕೌಸ್ತಭ ಹಾರ-ವೊಪ್ಪೆ ವೈಜಯಂತಿ ಮಂದಾರ - ಮೇಲೆ ತರುಣ ತುಲಸಿ ಜನಿವಾರ - ಇಟ್ಟು ವರಭುಜಕೀರ್ತಿ ಕುಂಜರ, ಆಹ ಕರದಂತೆರಡು ತೋಳು ಎರಡೊಂದಾರು ಸಾ- ವಿರ ರೂಪನಾಗಿ ಶರೀರದೊಳಿಪ್ಪನ 10 ಕೂರ್ಮ ಕದಪು - ಕಣ್ಣಿ- ಗಿಕ್ಕಿದ ಸೊಬಗಿನ ಕಪ್ಪು - ತಲೆ - ಹಿಕ್ಕಿ ಬಾಚಿದ ಕೇಶ ಥಳಪು - ಸರ್ವ ಲಕ್ಕುಮಿ ದೇವಿಯ ಲೆಕ್ಕಿಸದೇ ಮಗನ ಪೊಕ್ಕುಳಿಂದಲಿ ವೆತ್ತ ಅಕ್ಕಜದಬಲೆಯ11 ಸೂಸುವ ದಾಡಿಯ ದಂತ - ಪಙÂ್ತ- ನಾಸ ಮೂಗುತಿಯಿಟ್ಟ ಶಾಂತ - ಸುಖ ಲೇಸು ಹಾಸ ಜಗದಂತ - ರಂಗ ಭಾಸ ಮಿಗಿಲು ಚಂದ್ರಕಾಂತ, ಆಹ ಸುಷುಪ್ತಿಯಲ್ಲಿ ಭೂಶ್ವಾಸ ಬಿಡುವರನ್ನು ಲೇಸಾಗಿ ಸಲಹುವ ದೋಷನಾಶನ ರೂಪ12 ಎಸೆವ ಪಂಜರದೋಲೆ ಕಿವಿಯ-ಹೊನ್ನ ಕುಸುಮ ಕೂಡಿದ ಬಾವಲಿಯ - ತಿದ್ದಿ ಕುಸುರಿಯಿಕ್ಕಿದ ಸರಪಣಿಯ - ಚಿನ್ನ ಸೋಸಲು ಕುಂಕುಮ ರ್ಯಾಕಟೆಯ, ಆಹ ಎಸಳು ಕೇದಿಗೆ ಬಹು ಕುಸುಮವ ಮುಡಿದದ್ದು ವಶವಲ್ಲ ಚೌರಿ ಅರಸಿನ ಪೂಸಿದ ಹೆಣ್ಣ13 ಕಪೋಲ - ಪೊಸ- ಮೌಳಿ ಕೈಯಲ್ಲಿ ಕಡೆÀಗೋಲ - ನೇಣು ಪಾಲಯ ಪಿಡಿದ ಸುಶೀಲ - ಧರೆಯ - ಶೂಲಿಯ ನೆಲೆಸಿದ ಖೂಳನ ಸದೆದು ಹಿ- ಯ್ಯಾಳಿಸಿ ಮೆರೆದ ಗೋಪಾಲನೆಂಬ ಹೆಣ್ಣ14 ರಜತ ಪೀಠ ಪುರಾಧೀಶ - ನಂದ ವ್ರಜದೊಳಾಡಿದ ಸರ್ವೇಶ - ನಮ್ಮ ವಿಜಯವಿಠ್ಠಲ ನಾರಿವೇಷ - ತನ್ನ ನಿಜಭಕ್ತ ಮಧ್ವಮುನೀಶ, ಆಹ ತ್ರಿಜಗ ಮಧ್ಯದಲಿ ನಿಜ ಪದವಿಯನಿತ್ತು ಸುಜನರಿಗೊಲಿದನ್ನ15
--------------
ವಿಜಯದಾಸ
ಪಕ್ಷಿ ಬಂದಿದೆ ಗಂಡಭೇರುಂಡ - ತನ್ನಕುಕ್ಷಿಯೊಳು ಈರೇಳು ಜಗವನಿಂಬಿಟ್ಟಂಥ ಪ ಜಾತಿ ಸೂತಕವೆಂಬ ತ್ರಿಮಲಕ್ಕೆ ಶೂಲದಂತಿಹ ಪರವಸ್ತು ಅ ತಿರುಮಂತ್ರೋದಯವೆಂಬಾಸನವನೆ ಪೊತ್ತು ತಾಹರುಷದಿಂದ ವೈಷ್ಣವರೆಡೆಯ ಪಾಡಿಪರವ ತೋರುವೆನೆಂದು ಪಾಕವನೆತ್ತುತಾಹರಿಹರ ಬ್ರಹ್ಮಾದಿಗಳ ಪುಟ್ಟಿಸಿದಂಥ1 ಅಕಾರ ಉಕಾರ ಮಕಾರ ಸಾಕಾರದಿಂದಪರಮ ರೂಪವ ತಾಳಿಆಕಾರ ಕ್ರಿಯಾ ನಾಮ ಮಕಾರವನುಓಂಕಾರದಿಂದ ಪುಟ್ಟಿಸಿದಂಥ ಪರವಸ್ತು 2 ಪತಿ ತಿರುವಕೋವಲೂರಿನೊಳಿರುವಂಥಾದಿಕೇಶವರಾಯ ತಾನಾದ ಪರವಸ್ತು 3
--------------
ಕನಕದಾಸ
ಪಟ್ಟಿಯು ಬಂದಿಲ್ಲ ಕೃಷ್ಣ ಪಟ್ಟಿಯು ಬಂದಿಲ್ಲ ಪಟ್ಟಿಯು ಬಾರದೆ ಕಟ್ಟಲು ಸಾಧ್ಯವೆ ಪ ನಿಷ್ಠುರ ಮಾಡದೆ ಇಷ್ಟ ಬಂದುದ ಮಾಡೊ ಅ.ಪ ಬುದ್ಧಿಯು ಸಾಲದೆ ಬಿದ್ದೆನೋ ಸಾಂಕೆ ಬದ್ದನಾಗಿರುವೆನೋ ತೀರಿಸಲು ಇದ್ದು ಇಲ್ಲೆಂಬುವ ಸುದ್ದಿಯ ಪೇಳುವ ಕ್ಷುದ್ರ ನಾನಲ್ಲವೋ ಉದ್ಧರಿಸಯ್ಯ 1 ಕೊಟ್ಟ ಭಾಗ್ಯವನು ದೂಷ್ಯ ರೀತಿಯಲಿ ಕುಟ್ಟಿ ಕೋಲಾಹಲ ಮಾಡಿದೆನೊ ಇಷ್ಟು ದಿನವು ಬಡ್ಡಿ ಕಟ್ಟಲಿಲ್ಲವೆಂದು ಸಿಟ್ಟು ಮಾಡಿದರೆ ಕೆಟ್ಟು ಹೋಗುವೆನೊ 2 ಭೃತ್ಯರ ಸಲಹುವ ಸತ್ಯ ಸಂಕಲ್ಪನೆ ಭೃತ್ಯನಾಗಿ ನಾ ಸೇವೆಯ ಮಾಡುವೆ ಭಕ್ತರು ಈ ಜನ ಭಕ್ತ ಪ್ರಸನ್ನ ನಾ ನಿತ್ತ ಸಾಲಗಳು ಉತ್ತಾರಾಯಿತೆಂಬೊ 3
--------------
ವಿದ್ಯಾಪ್ರಸನ್ನತೀರ್ಥರು
ಪತಿ ಎನಿಸಿ | ವೀಣೆಯನು ಪಿಡಿಯುತ್ತಲೀ ||ಕ್ಷೋಣಿ ಬೆಳಗಾವಿ ಬ್ರಾಹ್ಮಣ | ಶ್ರೇಣಿಯಲಿ ನೀ ನಿಂತೆಯೋ ||ಕಾಣೆನೊ ನಿನಗೆಣೆಯ | ಕಾಣೆ ಕರುಣಿಗಳರಸ ಜ್ಞಾನಿ ಜನ ಮನೊವಾಂಛಿತಾ |ಮಾಣದಲೆ ನೀ ನೀವೆ | ಪ್ರಾಣ ಪದಕನೆ ಹನುಮಜ್ಞಾನ ಭಕುತಿಯ ಬೇಡುವೇ 1 ವಾತ ವ್ರಾತ ಕಿನ್ನಣೆಯುಂಟೆಮಾತುಳಾರಿಯ ದೂತ ಜಯೆ ಜಾತಾ ||ಸೋತು ಬಲು ಭವದೊಳಗೆ | ಆರ್ತನಾಗುತ ನಿನ್ನ ಕಾತುರೆತಲಿಂ ಪ್ರಾರ್ಥಿಪೇ 2 ವೃಂದಾವನಾರ್ಯರಿಂದ್ವಂದಿತವು ಎಂದೆನಿಪ ವೃಂದಾವನಿಲ್ಲಿ ಇಹುದೂ |ವೃಂದಾರ ಕೇಂದ್ರ ಜನ | ಬಂದಿಲ್ಲಿ ರಾಜರ |ವೃಂದಾವನರ್ಚಿಸುವರೋ |ನಂದನನು ದಶರಥಗೆ | ನಂದನನು ದೇವಕಿಗೆ | ನಂದನನು ಸತ್ಯವತಿಗೇ |ಒಂದೊಂದು ಹಯಶೀರ್ಷ | ಅಂದರೂಪಗಳಿಂದ ನಂದನನು ಭಕ್ತ ಜನಕೇ 3 ಜೀವಾಂತರಂಗದಲಿ | ಜೀವಾಂತರಾತ್ಮನನ ದ್ವೈವಿಧ್ಯ ರೂಪ ಸೇವಾ |ತಾವಕದಿ ನೀ ಮಾತರಿಶ್ವಾಖ್ಯನೆಂದೆನಿಸಿ ಸೇವಿಸುವೆ ಘರ್ಮೋಕ್ತದಿ ||ಜೀವ ಸಕಲೋತ್ತಮನೆ | ದಾವ ಶಿಖಿ ಭವವನಕೆದೇವ ಬಲಿಭುಜ ಮಾರುತೀ |ದೇವಾದಿ ವಂದ್ಯ ಗುರು | ಗೋವಿಂದ ವಿಠ್ಠಲನಭಾವದಲಿ ತೋರಿ ಪೊರೆಯೊ 4
--------------
ಗುರುಗೋವಿಂದವಿಠಲರು
ಪತಿ ವಿಠಲ | ಶ್ರೀನಿವಾಸ ಪ ದೀನ ಜನ ಮಂದಾರ | ನೀನಿವನ ಸಲಹೋ ಅ.ಪ. ಮೋದ ಉಣಿಸಿವಗೇ 1 ಪ್ರಾಚೀನ ಕರ್ಮಾಂಧ | ಕೂಪದಲಿ ಬಿದ್ದಿಹೆನೊಖೇಚರೊತ್ತಮ ಪ್ರಾಣ | ಮತದಿ ಬಂದಿಹನೋವಾಚಿಸುತ ಇವನಲ್ಲಿ | ನಿಚೋಚ್ಚ ತರತಮನಮೋಚಿಸೋ ದುಷ್ಕರ್ಮ | ಕೀಚಕಾರಿ ಪ್ರಿಯಾ 2 ದಾಸ ದೀಕ್ಷೆಯಲಿ ಮನ | ದಾಶಿ ಬಲು ಇಟ್ಟಿಹೆನೊಶ್ರೀಶ ತ್ಯೆಜಸನೀನೆ | ಲೇಸು ಸತ್ಪಂಥಾ |ಸೂಸಿ ತೋರಿಹೆ ಹರಿಯೇ | ಹೇ ಸದಾಶಿವ ವಂದ್ಯಕ್ಲೇಶ ನಾಶನ ಕಾಯೊ | ವಾಸವಾನುಜನೇ 3 ತೈಜಸನೆ ನೀ ತೋರ್ದ | ತೇಜರೂಪೋಪಾಸಾಮಾಜದಲೆ ಪೇಳಿರುವೆ | ವಾಜಿವದನಾ |ಸೋಜಿಗದ ತರಳನಿಗೆ | ಓಜಸ್ಯ ಪಾಲಿಸುತರಾಜಿಸೋ ಇವನಲ್ಲಿ | ಮೂಜಗತ್ಪತಿಯೇ 4 ಸರ್ವಾಂತರಾತ್ಮ ತವ | ದಿವ್ಯ ಸಂಸ್ಕøತಿಯನ್ನಸರ್ವತ್ರ ಸರ್ವದಾ | ಓವಿ ಪಾಲಿಪುದೋ |ದುರ್ವಿ ಭಾವ್ಯನೆ ಗುರೂ | ಗೋವಿಂದ ವಿಠಲಯ್ಯದರ್ವಿ ಜೀವಿಯ ಕಾಯೊ | ಬಿನ್ನವಿಪೆ ಹರಿಯೇ 5
--------------
ಗುರುಗೋವಿಂದವಿಠಲರು
ಪತಿತಪಾವನಾನಾಥ ಬಂಧು ಪ ಗತಿಶೂನ್ಯನಾಗಿ ಮನದಿ ಗತಿ ಏನೆಂದಳಲಿದೆನು ಗತಿನೀನೆ ಎಂಬಜನರ್ಯಾವತ್ತು ಭಾರವಹಿಸೀದಭವ 1 ಸತತ ನೀನೆ ಗತಿಯು ಎಂದು ನುತಿಪಭಕ್ತಿರ್ಹಿತದಬಂಧು ಬಟ್ಟೆ ವ್ಯರ್ಥ ದೇವ 2 ತಂದೆ ನೀನೆಗತಿಯೆನ್ನಲು ಬಂದಿ ಕಂಬ ಒಡೆದು ನೀನು ಮಂದರೋದ್ಧರ ಕರುಣಾಮಂದಿರನೆಂದು ನಂಬಿದೆ ಶ್ರೀರಾಮ3
--------------
ರಾಮದಾಸರು
ಪತಿಯ ಮಂದಿರದಲಿ ಸುಖವಾಗಿ ಬಾಳಮ್ಮ ಮತಿವಂತೆ ಎನಿಸಿ ಸನ್ಮತಿ ಪಡೆದು ಪ ಚತುರಳೆ ನಿನ್ನ ಸಖಿಯರೆಲ್ಲರು ಅತಿಶಯದಿ ನಿನ್ನ ಪತಿಯ ಗುಣಗಾನ ಕಥನ ಮಾಡುತ ನಿನ್ನೆದುರಿನಲಿ ಸ್ತುತಿಸಿ ಹಿಗ್ಗಿ ಪೊಗಳುವರೆ ಪಾರ್ವತಿ ಅ.ಪ ವಸತಿ ಇಲ್ಲದೆ ಸ್ಮಶಾನದಲಿ ವಾಸಿಪನೆಂದು ಅಪಹಾಸ್ಯ ಮಾಡುವರೆ ವಸನ ಪೀತಾಂಬರವನುಡುವುದನರಿಯದೆ ಹಸಿಯ ಚರ್ಮವನುಡುತಿಹನೆಂಬರೆ ಅಸನಕಿಲ್ಲದೆಗರಳ ವಿಷವನುಂಬುವನೆಂದು ಗುಸುಗುಸು ನುಡಿಯುವರೆ ಅಸಮನೇತ್ರನು ಭಸುಮ ಲೇಪಿಸಿ ವೃಷಭರಾಜನ ಏರಿ ಬರುವನು ಶಶಿಮುಖಿಯೆ ನೀನರಿಯದಲೆ ಈ ಪಶುಪತಿಗೆ ಸತಿಯಾದೆ ಎಂಬರು 1 ಸರಿಸವತಿಯ ತನ್ನ ಸಿರಮೇಲಿರಿಸಿದಿ ಗಿರಿಜೆ ತರವಲ್ಲ ಕೇಳೆ ಪರಿಪರಿ ರತ್ನಾಭರಣಂಗಳರಿಯದೆ ಉರಗಗಳ ಭೂಷಿತನಾದ ನಮ್ಮ ಗÀರಳ ಕಂಠನಿಗೆ ನೀನರಿಯದೆ ಸತಿಯಾದೆ ಎಂದು ತರಳರೆಲ್ಲರು ಹಾಸ್ಯ ಮಾಡುವರೆ ಸರಸವಾಡುತ ನೋಡು ಕಂಠದಿ ಸಿರದ ಮಾಲೆಯ ಧರಿಸಿಕೊಂಡಿಹ ಪರಮ ಆಶ್ಚರ್ಯದಲಿ ನಾವೆಲ್ಲ ಅರುಹಲೀಗ ಬಂದಿಹೆವು ಎನುವರು 2 ಅಂದು ಮೋಹಿನಿ ರೂಪವ ಕಂಡು ಪರಶಿವನು ಇನ್ನೊಮ್ಮೆ ನೋಡಲು ಬೇಡೆ ಪರಮಾತ್ಮನಾ ಸುಂದರಾಕೃತಿಯ ನೋಡುತ ಪಿಡಿಯಲು ಪೋಗಿ ನಂದ ಕಂದನ ರೂಪ ನೋಡಿದನು ಹಿಂದೆ ಮೂಕಾಸುರನೆಂಬ ದೈತ್ಯನ ಕೊಲಿಸಿದ ಇಂದಿರೇಶನಿಗೆ ಸೇವಕನಾದ ಶಿವನು ಇಂದು ಶಿವನನು ನಿಂದಿಸಿದೆವೆಂದೆನಲು ಬೇಡ ಶ್ರೀ- ತಂದೆ ಕಮಲನಾಭ ವಿಠ್ಠಲನ ಚಂದದಲಿ ಭಜಿಸುವನು ಎನುವರು3
--------------
ನಿಡಗುರುಕಿ ಜೀವೂಬಾಯಿ
ಪದ್ಮೇಶ ವಿಠ್ಠಲನೆ | ಪೊರೆಯ ಬೇಕಿವನಾ ಪ ಸನ್ಮುದವ ನೀನಿತ್ತು ಪ್ರೇಮದಲಿ ಸಲಹೋ ಅ.ಪ. ಮನೊಮಾನಿ ಒಡೆಯನೇ | ಮನಸಿನಲಿ ನೀನಿದ್ದುಮನೊ ವಿಕಾರಕ್ಕೆಡೆಯು | ಉಚಿತವೇ ಹರಿಯೇ |ಮನಶಾಂತಿ ಕರುಣಿಸುತ | ಘನ್ನ ಸಾಧನಗೈಸೆಗುಣ ಉಳ್ಳವನು ಇವನು | ಅನಿಲಾಂತರಾತ್ಮಾ 1 ಆದಿ ಮೂರುತಿ ಹರಿಯೆ ಭೇಧ ಪಂಚಕತಿಳಿಸಿಮೋದ ತೀರ್ಥರ ಶಾಸ್ತ್ರ | ಭೋಧ ವದಗಿಸುತಾಸಾಧನ ಸುಮಾರ್ಗದಲಿ | ನೀದಯದಲಿಡು ಇವನವೇದಾಂತ ವೇದ್ಯ ಹರಿ | ಬಾದರಾಯಣನೇ 2 ತೈಜಸನು ನೀನಾಗಿ | ಯೋಜಿಸಿದ ಅಂಕಿತವಮಾಜದಲೆ ಇತ್ತಿಹೆನೊ | ಕಾರುಣ್ಯಮೂರ್ತೇಮೂಜಗಜ್ಜನ್ಮಾದಿ | ಕಾರಣನೆ ಸಂಸಾರಗೋಜುಗಳ ಬಿಡಿಸೊ ನಿ | ವ್ರ್ಯಾಜ ಮೂರುತಿಯೇ 3 ಸಾಧು ಸತ್ಸಂಗಗಳ | ನೀ ದಯದಿ ಕೊಟ್ಟವಗೆಕಾದುಕೋ ಕೈ ಬಿಡದೆ | ಯಾದವರೊಡೆಯಾಬಾಧೆ ಮನಸಿಗೆ ಬಂದಿ | ಹುದ ಕಳೆದು ಸಂತವಿಸುಮೋದ ಮುನಿ ಸಂಪ್ರೀಯ | ಧನ್ವಂತ್ರಿ ದೇವಾ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪರಮಾತ್ಮನ ನೆನೆಯಲು ಬೇಕು ಪರತರಸುಖವನು ಪಡೆಯುವನಿದರಿಂ ದುರಿತಗಳೆಲ್ಲವ ನೀಗಲು ತಾ ಪ ಮೊದಲನೆ ಕಾರ್ಯವು ಜೀವರೆಲ್ಲರಿಗೆ ಇದು ಬಲು ಸುಲಭವು ಸಾಧನಗಳಲೀ ಪದುಮನಾಭನನು ನೆನೆಯದಿರುವವ ಅಧಮನು ಜಗದಿ ವ್ಯರ್ಥ ಜೀವಿಸುವ 1 ಎಲ್ಲ ವೇದಗಳು ಎಲ್ಲ ಶಾಸ್ತ್ರಗಳು ಎಲ್ಲ ಸಾಧನೆಗಳು ಆತನ ಪ್ರಾಪ್ತಿಗೆ ಬಲ್ಲವರಿಂದಲಿ ತಿಳಿದು ವಿಚಾರಿಸಿ ನಿಲ್ಲದೆ ಸಾಧನೆ ಕೈಕೊಳ್ಳುವುದು 2 ಕೇಳುವದೈ ಪರಮಾತ್ಮನ ತತ್ವವ ತಿಳಿವುದು ತನ್ನೊಳು ತಾನೇ ನಿರುತಾ ಪೇಳಲೇನು ಧ್ಯಾನಿಸುವುದಾತನ ಮೇಳವಿಸುವದೈ ಜೀವನ್ಮುಕುತಿ 3 ನಾರಾಯಣನೇ ಪರಮಗತಿಯು ಈ ನರಜನ್ಮಕೆ ಬಂದಿರೆ ಲಾಭವಿದೇ ಅರಿತು ಇದನು ತಾ ಸಾಧನೆ ಮಾಳ್ಪುದು ಗುರುಶಂಕರನಾ ಬೋಧಸಾರವಿದು 4
--------------
ಶಂಕರಭಟ್ಟ ಅಗ್ನಿಹೋತ್ರಿ
ಪವಮಾನವಿಠಲ | ಕಾಪಾಡೊ ಇವನಾ ಪ ಭುವಿ ಭವ್ಯ ಮರುತಮತ | ದೀಕ್ಷೆಯುಳ್ಳವನಾ ಅ.ಪ. ಭಾವಿಮಾರುತರ ದಿವ್ಯ | ಪಾದಗಳನಾಶ್ರಯಿಸಿದೇವ ಗುಹ್ಯವು ಎಂಬ | ಆಖ್ಯಾನ ಪಠಿಸೀಭಾವಭಕ್ತಿಯಲಿಂದ | ಪೂರಿತನು ತಾನಾಗಿಧಾವಿಸಿ ಬಂದಿಹನೊ | ಎನ್ನ ಬಳಿಗಾಗಿ1 ಗುರುವನುಗ್ರಹ ಪಡೆದು | ಗುರುದತ್ತ ಅಂಕಿತವನೆರವಿನಾ ಸಾಧನವ | ವಿರಚಿಸಲು ಮಾರ್ಗಅರಿಯದಲೆ ಪ್ರಾರ್ಥಿಸುವ | ಕರುಣಪಯೋನಿಧಿಯೇಪೊರೆಯ ಬೇಕಿವನ ಪರಿಯ | ಮರುತಾಂತರಾತ್ಮ 2 ತರತಮಜ್ಞಾನವನು | ಹರಿಗುರು ಸದ್ಭಕ್ತಿಪರಿಪರಿಯಲಿಂ ವೃದ್ಧಿ | ಗೈಸಿವಗೆ ಹರಿಯೇಗುರು ಕರುಣ ಕವಚದಿಂ | ಹರಿಯ ಸರ್ವೊತ್ತಮತೆಅರಿವಾಗಲಿವಗೆಂದು | ಪ್ರಾರ್ಥಿಸುವೆ ಹರಿಯೆ 3 ಮೂರ್ತಿ | ಕೃತಿರಮಣ ದೇವ 4 ಮಧ್ವ ರಮಣನೆ ದೇವ | ಹೃದ್ಯ ಹರಿ ನಿನಕಾಂಬಹೃದ್ಯ ಸಾಧನ ಗೈಸಿ | ಉದ್ದರಿಸೊ ಇದನಾಶುದ್ಧ ಮೂರುತಿ ಗುರು | ಗೋವಿಂದ ವಿಠಲನೆಬುದ್ಧಿಯಲಿ ನೀನಿಂತು | ಶುದ್ಧ ಮತಿ ಈಯೋ 5
--------------
ಗುರುಗೋವಿಂದವಿಠಲರು
ಪಾದ ನೋಡಿದೆ ಪ ಚೆನ್ನದೇವಿಯ ಪಾದಕೆರಗಿದೆ ಮನ್ನಿಸೆಂತೆಂದವಳ ಬೇಡಿದೆ ಅ.ಪ. ಚರಣ ಯುಗಳಲಿ ಮೆರೆವ ನೂಪುರಧರಿಸಿ ಪೀಠದೊಳಿಂದಿರೆಜರದ ಶೀರೆಯನುಟ್ಟು ನಡುವೊಳುಹಿರಿದು ಒಡ್ಯಾಣದೊಳು ನಿಂದಿರೆ 1 ಕುಂಡಲ ಮೂಗು ಮುಕುರವುಪರಮ ತೇಜದ ಸೊಬಗ ತಂದಿರೆ 2 ಹೊಳೆವ ಕಂಗಳು ಹಣೆಯ ಕುಂಕುಮಥಳಿಸೆ ಸರಸಿಜ ಮಂದಿರೆಬಿಳಿಯ ಕೊಡೆಯನು ಹಿಡಿವ ತೆರದಲಿಎಳೆಯ ನಾಗವು ಹಿಂದಿರೆ 3 ಬೆರಳೊಳುಂಗುರ ಕುರುಳು ಸುಂದರಹೆರಳು ಸಿಂಗರದಿಂದಿರೆತಿರುಳು ಗಂಧದ ಸರಳ ಮೂರ್ತಿಯತರಳೆ ಎನ್ನಾಯ ಮುಂದಿರೆ 4 ಧೀರ ಭಕುತರ ಪೊರೆವುದಕೆ ಕರವೀರ ಪುರದೊಳು ಬಂದಿರೆಧಾರುಣೀಯೊಳು ಮೆರೆವ ಗದುಗಿನವೀರನಾರಾಯಣನ ಚಂದಿರೆ5
--------------
ವೀರನಾರಾಯಣ
ಪಾದಂಗಳ ತೋರಿಸೋ ನಾರಾಯಣ ಪಾದಂಗಳ ತೋರಿಸೊ ಪ ಸಾದರ ಭಕುತಿಯ ನಿನ್ನಲಿ ಇರಿಸೋಮೋದದಿ ಭಜಿಪಂತೆ ನನ್ನದು ಪ್ರೇರಿಸೊ ಅ.ಪ. ನಾಗಾದಿ ಕಪ್ಪತ್ತ ಗಿರಿಯನ್ನೆ ಚಿನ್ನವನ್ನಾಗಿಸಿ ಬಿಡಲೆಂದು ಯತ್ನಿಸುತ್ತಿದ್ದನಾಗಾರ್ಜುನನ ನೀಗಲು ಭುವಿಯೊಳುಬೇಗದಿ ಬಂದಿ ವೀರನಾರಾಯಣ 1 ಮೈಯೊಳು ಕವಚವ ಶಿರದಿ ಕಿರೀಟವಕೈಯೊಳು ಚಕ್ರ ಗದಾ ಶಂಖ ಧರಿಸಿರಯ್ಯನೆ ಗದುಗಿನೊಳಿಳಿದು ಆ ದೈತ್ಯನಹೊಯ್ಯಲು ಬಂದ ಶ್ರೀ ವೀರನಾರಾಯಣ 2 ತೋರ ಕನ್ನಡದಲ್ಲಿ ವರ ಕವಿಯಾದ ಕುಮಾರ ವ್ಯಾಸನಿಂದ ಭಾರತ ರಚಿಸಿದಿಧೀರ ಶ್ರೀ ಪುರಂದರದಾಸರು ಕರೆದಿಹಭಾರತಮಲ್ಲ ಶ್ರೀ ವೀರನಾರಾಯಣ 3
--------------
ವೀರನಾರಾಯಣ
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು