ಒಟ್ಟು 18608 ಕಡೆಗಳಲ್ಲಿ , 136 ದಾಸರು , 8432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(4) ಕೆಂಗಲ್ಲು ಆಂಜನೇಯ ಕೆಂಗಲ್ಲ ಹನುಮಂತರಾಯ ನಮ್ಮ ರಂಗನಾಥಗೆ ಬಹು ಪ್ರಿಯ ಪ ಮಂಗಳಕರ ವಜ್ರಕಾಯ ಉ ತ್ತುಂಗ ವಿಕ್ರಮ ಪೊರೆ ಜೀಯ ಅ.ಪ ಶ್ರಾವಣ ಕಡೆ ಶನಿವಾರ ಬರೆ ಭಾವಿಸಿ ಭಕ್ತರು ಸೇರೆ ಆವಾವೆಡೆ ಜನ ಮೀರೆ ನಿನ್ನ ತೀವಿದ ಮನದಿ ಪಾಡುವರೊ ದೊರೆ 1 ಬಹುಭಜಕರು ಕುಣಿದಾಡಿ ಗುಣ ಸಾಹಸ್ರಗಳ ಕೊಂಡಾಡೀ ಶ್ರೀಹರಿ ವೈಭವ ನೋಡೀ ಮಹದಾನಂದದೊಳಗೋಲಾಡಿ2 ಪರಿ ವ್ಯಾದಗಳಿಂದ ಸಿರಿ ವರನುತ್ಸವ ಬಹುಚಂದ ತಿರುಪತಿ ಯಾತ್ರಿಕರಿಂದ ನೆರೆದೆಸೆವ ಕಲ್ಯಾಣ ಬೃಂದ 3 ತಾಳ ತಂಬೂರಿ ಮದ್ದಳೆಯ ಮೇಳ ತಮ್ಮಟೆಗಳ ಬಹು ಘೋಷ ಭೂಲೋಕದಿಂ ಸ್ವರ್ಗಕೈದಿ ಶ್ರೀ ಲೀಲೆಯ ತೋರ್ಪುದು ನಿಜದಿ 4 ವರಜಾಜಿ ಕೇಶವನ ನಾಮವನು ನಿರುತ ನೆನೆವ ಶರಣ ಪ್ರೇಮ ಕರುಣದಿ ಪೊರೆ ಪುಣ್ಯಧಾಮ ಸಿರಿ ಜಯಚಾಮನೃಪಸ್ತುತ್ಯ ಭೀಮ 5
--------------
ಶಾಮಶರ್ಮರು
(40ನೇ ವರ್ಷದ ವರ್ಧಂತಿ) ಕ್ಷಿಪ್ರ ಪ್ರಸಾದಕರ ದೊರೆಯೆ ಅಜಭವಾ- ದ್ಯ ಪ್ರಮೇಯಾ ಸಂತಸುಗುಣಾಬ್ಧಿ ಹರಿಯೆ ಪ. ಇಳೆಯೊಳಗೆ ನಾ ಬಂದು ಕಳೆದೆ ನಾಲ್ವತ್ವರುಷ ಉಳಿದ ಪರಿಮಿತಿಯರಿಯೆ ಗಳಿತವಾಯಿತು ದೇಹ ಬಳಲಿದೆನು ಬಯಲಾಸೆ ಬಲೆಯೊಳಿಂದಿನವರೆಗು ನಳಿನನಾಭನೆ ನಿನ್ನ ನಂಬಿದೆನು ಮನವರಿತು ಮುಳುಗಲಾರೆನು ಮೋಹ ಕಡಲ ಮಾಧವನೆ ತಿಳಿಯದೆ ನಿನಗೆ ಪೊನ್ನೊಡಲ ಮುಂದಿಂತು ದುರಿತ ಸಿಡಿಲ 1 ದೇವಾಧಿದೇವ ತವ ಸೇವಾನುಕರನ ಹೊ- ನ್ನಾವರದೊಳಿರಿಸಲಿನ್ಯಾವನರಸಲಿ ಕೃಷ್ಣ ಭಾವ ಶುದ್ಧಿಯನರಿತು ಭಜನೆ ಮಾಡುವದೆಂತು ಸಾವಕಾಶವಿದ್ಯಾಕೆ ಸಾಹಿತ್ಯಗಳು ಜೋಕೆ ನಿತ್ಯ ಕೈಗೊಂಬ ಕೀರ್ತಿ ಸಂ- ಭಾವನಾ ಸುಖವ ನಾನುಂಬಾ ತರವ ಸಂ- ಭಾವಿಸು ದಯಾಂಬೋಧಿ ದೀನಾವಲಂಬ 2 ರಕ್ಕಸಾಂತಕ ನೀನೆ ದಿಕ್ಕೆಂದು ನಿನ್ನಿದಿರು ಬಿಕ್ಕಿ ಬಿರಿದಳಲುವೆನು ಸೊಕ್ಕಿ ಕಾಡುವ ದೊಡ್ಡ ಜಕ್ಕಣಿಯ ಕಾಲಿಂದ ತಿಕ್ಕಿ ತೀರಿಸು ನಿನಗ- ಶಕ್ಯವಾವುದು ಸ್ವರ್ಣಪಕ್ಷ್ಯೇಂದ್ರಗಮನಕರ ಚಕ್ರಭೂಷಣ ವೆಂಕಟೇಶದಾಸ ಜನ ಕಕ್ಕರದಿ ತೋರು ಸಂತೋಷ ಭಕ್ತಿಫಲ ದಕ್ಕುವಂದದಿ ಮಾಡು ದುರಿತಾಬ್ಧಿಶೋಷ 3
--------------
ತುಪಾಕಿ ವೆಂಕಟರಮಣಾಚಾರ್ಯ
(41ನೇ ವರ್ಷದ ವರ್ಧಂತಿ) ಸತ್ಯ ಸಂಕಲ್ಪಾನುಸಾರದಿ ನಡೆಸುವುದುತ್ತಮ ಬಿರುದಾದರು ಭೃತ್ಯನ ಬಿಟ್ಟನೆಂಬಪಕೀರ್ತಿ ಬರದಂತೆ ಚಿತ್ತದಲ್ಲಿರಲಾದರು ಪ. ಕಳೆದಿತು ಐದೆಂಟು ಮೇಲೊಂದು ವತ್ಸರ ಬೆಳೆದಿತು ಬಲು ಮತ್ಸರ ನೆಲನ ಮೇಲಡಿಯಿಡಲಿಲ್ಲ ಶಕ್ತಿಯು ಇಂಥ ಛಲದಿ ತೋರುವಿ ತಾತ್ಸಾರ ಬಳುಕಿ ಬಾಡಿದ ದೇಹವುಳುಹಲುತ ಸೇವಾ ಫಲಕೆ ಕಾರಣವೆಂಬೆನು ನಳಿನನಾಭನೆ ನಿನ್ನ ಮನವೆಂತಿರುವುದೆಂದು ತಿಳಿಯದೆ ಬಳಲುವೆನು 1 ವಯಿನು ತಪ್ಪಿದ ಬಳಿ- ಕ್ಯಾತರಗುಣವಪ್ಪುದು ಭೂತಪಂಚಕ ಸನ್ನಿಪಾತ ಸೂಚಿಸುವಂತೆ ಕಾತರತೆಯು ತಪ್ಪದು ಈ ತೆರದಲಿ ದೇಹ ರೀತಿಯಾಗಿರುವುದ ನೀ ತಿಳಿದಿರಲೆನ್ನಯ ಮಾತ ಕೇಳದೆ ಲಕ್ಷ್ಮೀನಾಥ ತಾತ್ಸಾರವಿಂತು ನೀತಿಯಾಗದು ಚಿನ್ಮಯ 2 ಜನನ ಮರಣ ಜೋಡಾಗಿರುವುದೆಂಬ ಸಿದ್ಧ ನಿನಗಿದು ಸುಲಭಸಾಧ್ಯ ಮನೆವಾರ್ತೆ ಮಡದಿ ಮಕ್ಕಳು ಮುಂತಾದುದಕೆಲ್ಲ ವನಜಾಕ್ಷ ನೀನೆ ಬಾಧ್ಯ ಕನಸಿಲಾದರು ನಿನ್ನ ನೆನವ ತಪ್ಪಿಸದಿರು ವಿನಯ ವೆಂಕಟರಾಯನೆ ನಿನಗಿಲ್ಲದಪಕೀರ್ತಿ ಎನಗಿಲ್ಲ ಮಹದಾರ್ತಿ ಘನಕಲ್ಪ ಸುರಭೂಜನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(5) ದೇವರಹೊಸಹಳ್ಳಿ ಆಂಜನೇಯ (ಕೆಂಗಲ್ಲು ಸಮೀಪ) ಪರಿಪಾಹಿ ಸಂಜೀವರಾಯ ಜೀಯ ಕರವ ಮುಗಿವೆ ವಜ್ರಕಾಯ ಪ ವರ ಜಾಜಿ ಕೇಶವ ಪ್ರೇಮ ಧಾಮ ಅ.ಪ ರಾಮಾವತಾರದಿ ಹರಿಗೇ ನೀನು ನೇಮ ಸೇವಕನಾದೆ ಭರದೇ ಆ ಮಹೀಜಾತೆಗೆ ಮುದ್ರೆ ಸ್ವಾಮಿ ಪೇಳ್ದಂತೆ ನೀನು ಯಿತ್ತೆ 1 ಅಂಜನದೇವಿಕುಮಾರ ಶ್ರೀಮ ದಾಂಜನೇಯ ಗಂಭೀರ ಸಂಜೀವನಾದ್ರಿಯ ತಂದೆ ಪ್ರ ಭಂಜನ ಸೌಮಿತ್ರಿಗಂದೇ 2 ರಾಮನಾಮ ಧ್ಯಾನನಿರತ ಸುಖ ಶ್ಯಾಮನ ಕ್ಷೇಮ ಸುವಾರ್ತ ವ್ಯೋಮದಿ ಭಕುತಗೆ ಪೇಳ್ದೆ ಸುಪಿ ತಾಮಹ ಪದವಿಯ ಪಡೆದೆ 3 ವ್ಯಾಸಯತೀಂದ್ರ ಕರಪೂಜ್ಯಾ ನಿತ್ಯ ದಾಸರಪೊರೆವ ಸಾಮ್ರಾಜ್ಯ ದೋಷ ಶೋಷಣ ಪ್ರಭಾವ ಗುಣ ಭೂಷಣ ಸಜ್ಜನ ಜೀವ 4 ಭೂತ ಪ್ರೇತ ಬ್ರಹ್ಮ ಪಿಶಾಚಂಗ ಳಾತುರದಿಂ ಬಾಧಿತರು ಖ್ಯಾತಿಯ ಮಾರುತಿ ನಾಮಾಮೃತವ ಪ್ರೀತಿಯಿಂ ಸವಿವರೋ ಭೀಮಾ 4 ಹಿಂದಣ ಜನ್ಮದ ಪಾಪದಿಂದ ನೊಂದರು ಪ್ರಾರ್ಥಿಸಿ ತಂದೆ ಭಾವದುರಿತಂಗಳನಂದು ನಿ ರ್ಬಂಧಿಸಿ ಕಳೆಯುವೆ ಬಂಧು 5
--------------
ಶಾಮಶರ್ಮರು
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(6) ವೀರನಗೆರೆ (ಮೈಸೂರು) ಮೂರುತಿ ಮಾರುತಿರಾಯನೆ ಸಾರಗುಣಾನ್ವಿತ ಶ್ರೀರಘುರಾಮನ ಪ್ರಿಯ ಭಕ್ತ ಪ ಭಂಜನ ಖಿಲಭವ ರಂಜಿಪ ಮಾರುತಿ ಪೊರೆಯೆನ್ನ 1 ಹರಿಪದ ಕಮಲವ ನಿರುತವು ಪೂಜಿಪ ಉರುತರ ಪದವಿಯ ಕೊಡು ನನಗೆ 2 ವೀರನಗೆರೆ ಗುರು ಮಹಾಶೂರದೊರೆ ಸಾರುತ ಮಣಿವೆನು ಮರೆಯದಿರೈ 3 ಜಾಜೀಕೇಶವ ಸನ್ನಿಧಿ ಸೇವಕ ಮೂಜಗದೊಡೆಯಾ ಪೊರೆಯಯ್ಯಾ 4
--------------
ಶಾಮಶರ್ಮರು
(Iೂ) ಕ್ಷೇತ್ರ ವರ್ಣನೆ (1) ಶ್ರೀರಂಗ, ತಿರುಪತಿ, ಕಂಚಿ,ಮೇಲುಕೋಟೆ, ಹೆಜ್ಜಾಜಿ ಮಂಗಳವು ಶ್ರೀರಂಗ ಅಂಗನೆ ಮಣಿದೇವಿಗೆ ಪ ಅಂಗಿಯಾದ ಆದಿಶೇಷ ಉ- ತ್ತುಂಗ ವರ ವಿಭೀಷಣನಿಗೆ ಅ.ಪ ಸಪ್ತಗಿರಿ ಶ್ರೀನಿವಾಸ ಅಪ್ಪೀರ ಅಲರ್‍ಮೇಲಮ್ಮಗೆ ಗುಪ್ತವಾಗಿ ಉಭಯ ರಕ್ಷ ಸುಪ್ತ ಗೋವಿಂದರಾಜಗೆ 1 ಕಂಚಿ ವರದರಾಜನಿಗೆ ಮಂಚದ ಪೆರುನ್ದೇವಿಗೇ ಹೊಂಚಿ ಬ್ರಹ್ಮಯಜ್ಞದಲ್ಲಿ ಮಿಂಚುವ ದೇವರಾಜಗೇ 2 ಯದುಶೈಲ ಚೆಲ್ವರಾಯ ಮುದದಿ ಯದುಗಿರಿಯಮ್ಮಗೆ ಪಾದ ಸಂಪತ್ತೆ ಅದುಭುತರು ಯತಿರಾಜಗೆ 3 ಹೆಜ್ಜಾಜಿ ಕೇಶವನ ಪೀಠ ಅಜ್ಜ ಶ್ಯಾಮನ ವಿರಜೆಯಲ್ಲಿ ಮಜ್ಜನಗೈಸಿ ಸೇವೆಗಾಗಿ ಸಜ್ಜುಗೈದ ವೈಕುಂಠಕೆ 4
--------------
ಶಾಮಶರ್ಮರು
(ಅ) ಆತ್ಮನಿವೇದನಾ ಕೃತಿಗಳು ಏನು ಹೇಳಲಯ್ಯ ರಂಗ ಎಲ್ಲಿ ಹೋಗಲಯ್ಯ ನನ್ನಮನಸು ಮಂಗವಾಗಿ ದೂರ ತಳ್ಳಿಹುದಯ್ಯ ಪ ಎಲ್ಲೆಯಿಲ್ಲದ ಎನ್ನವನು ನೀ ಎಂತುನಿಂತಿಹೆ ಸುಮ್ಮನೆ ಎಲ್ಲವಾಗಿಕೂಡಿಕೊಂಡಿಹೆನಿನ್ನಚರಣಭರಿಸುಮಾಪತೇ ಕ- ಮಲಾಪತಿ ನೀ ಕರುಣದಿಂದಲಿ ನಡೆಸಲಾರೆಯಾ ನನ್ನನು ಅ.ಪ ನಡೆಯಲಾರದೆ ಕಾಲುಬಿದ್ದಿದೆ ಕೋಪಗೊಳ್ಳದೆ ಬಂದು ನನ್ನಲಿ ನಿಂತು ಸಲಹೈ ದೇವನೇ ಅಪ್ಪಶೆಲ್ವನೆ ನಿನ್ನ ಬಿಟ್ಟರೆ ಕಾದು ಕುಳಿತಿಹರಾರಯ್ಯ 1
--------------
ಸಂಪತ್ತಯ್ಯಂಗಾರ್
(ಅಃ) ಕಾಮದೇವ ಕರುಣದಿಂದಲಿ ಒಲಿದು ಕಂಡನಾತುರದಲಿ ಪ ಇಂದ್ರಸಮಾನ ದೇವತೆಯೆ ರತಿಪತಿಯೇ | ಮಾರ || ಬಂದು ಕಲ್ಪದಲಿ ಸುಂದರನೆನಿಸಿಕೊಂಡಿರ್ದ | ಬಂಧುವೇ ಅಹಂಕಾರ ಪ್ರಾಣನಿಂದಧಿಕನೆ 1 ವನಜ ಸಂಭವನು ಸೃಷ್ಟಿ ಸೃಜಿಪಗೋಸುಗ | ಮನದಲ್ಲಿ ಪುಟ್ಟಿಸೆ ಚತುರ ಜನರ || ಮುನಿಗಳೊಳಗೆ ನೀ ಸನತ್ಕುಮಾರನಾಗಿ ಜನಿಸಿ | ಯೋಗ ಮಾರ್ಗದಲ್ಲಿ ಚಲಿಸಿದ ಕಾಮಾ 2 ತಾರಕಾಸುರನೆಂಬ ಬಹು ದುರುಳತನದಲ್ಲಿ | ಗಾರುಮಾಡುತಲಿರಲು ಸುರಗಣವನು || ಗೌರಿಮಹೇಶ್ವರರಿಗೆ ಪುತ್ರನಾಗಿ ಪುಟ್ಟಿ | ಧಾರುಣಿಯೊಳಗೆ ಸ್ಕಂದನೆನಿಸಿದೆ 3 ಮತ್ಸ್ಯ ಉದರದಲಿ | ಪೊಕ್ಕು ಶಿಶುವಾಗಿ ಸತಿಯಿಂದ ಬೆಳೆದು || ರಕ್ಕಸ ಶಂಬರನೊಡನೆ ಕಾದಿ ಗೆದ್ದು ಮರಳಿ | ಚಕ್ಕನೆ ಸಾಂಬನೆನಿಸಿದೆ ಜಾಂಬವತಿಯಲ್ಲ 4 ಜನಪ ದಶರಥನಲ್ಲಿ ಭರತನಾಗಿ ಪುಟ್ಟಿದೆ | ಮನೋ ವೈರಾಗ್ಯ ಚಕ್ರಾಭಿಮಾನಿ || ಎನಗೊಲಿದ ವಿಜಯವಿಠ್ಠಲರೇಯನಂಘ್ರಿ | ಅರ್ಚನೆ ಮಾಡುವ ಸುಬ್ರಮಣ್ಯ ಬಲು ಧನ್ಯ 5
--------------
ವಿಜಯದಾಸ
(ಅ) ದೇವ; ದೇವತಾ ಸ್ತುತಿ ಗಣೇಶ ವಂದಿಸುವೆ ಮುದದಿಂದ ನಂದಿವಾಹನ ಸುತಗೆ ಪ ಬಂದ ದುರಿತವ ಕಳೆದಾನಂದವೀಯುತ ಮನಕೆಇಂದಿರೇಶನ ಚರಣದ್ವಂದ್ವ ತೋರೆಲೋ ಬೇಗ1 ಹೀನಜನರೊಡಗೂಡಿ ಕಾಣದಾದೆನು ಹಾದಿಸಾನುರಾಗದಿ ಪೊರೆಯೊ ಸನಕಾದಿ ಮುನಿವಂದ್ಯ 2 ಸಾರ ಕರುಣದಲಿ ಅರುಹಯ್ಯಶರಧಿಶಯನ ತಂದೆವರದವಿಠಲ ಪ್ರಿಯ 3
--------------
ಸಿರಿಗುರುತಂದೆವರದವಿಠಲರು
(ಅಂ) ಪಾರ್ವತೀದೇವಿ ಉಮಾ ಕಾತ್ಯಾಯನೀ ಗೌರಿ ದಾಕ್ಷಾಯಣಿ | ಹಿಮವಂತ ಗಿರಿಯ ಕುಮಾರಿ ಪ ನಿತ್ಯ | ಅಮರವಂದಿತೆ ಗಜಗಮನೆ ಭವಾನಿ ಅ. ಪ. ಪನ್ನಗಧರನ ರಾಣಿ ಪರಮಪಾವನಿ | ಪುಣ್ಯಫಲ ಪ್ರದಾಯಿನಿ || ಪನ್ನಗವೇಣಿ ಶರ್ವಾಣಿ ಕೋಕಿಲವಾಣಿ | ಉನ್ನತ ಗುಣಗಣ ಶ್ರೇಣಿ | ಎನ್ನ ಮನದ ಅಭಿಮಾನ ದೇವತೆಯೆ | ಸ್ವರ್ಣಗಿರಿ ಸಂಪನ್ನೆ ಭಾಗ್ಯ ನಿಧಿ || ನಿನ್ನ ಮಹಿಮೆಯನು ಬಿನ್ನಾಣದಲಿ ನಾ | ಬಣ್ಣಿಸಲಳವೆ ಪ್ರಸನ್ನ ವದನಳೆ 1 ಮುತ್ತಿನ ಪದಕ ಹಾರ ಮೋಹನ ಸರ | ಉತ್ತಮಾಂಗದಲಂಕಾರ || ಜೊತ್ಯಾಗಿ ಇಟ್ಟ ಪಂಜರದೋಲೆ ವಯ್ಯಾರ | ರತ್ನಕಂಕಣದುಂಗುರ || ತೆತ್ತೀಸ ಕೋಟಿ ದೇವತೆಗಳ್ ಪೊಗಳುತ | ಸತ್ತಿಗೆ ಚಾಮರವೆತ್ತಿ ಪಿಡಿಯುತಿರೆ || ಸುತ್ತಲು ಆಡುವ ನರ್ತನ ಸಂದಣಿ | ಎತ್ತ ನೋಡಿದರತ್ತ ಕಥ್ಥೈ ವಾದ್ಯ2 ಕಂಚುಕ ತಿಲಕ | ನಾಸಿಕ || ಕಳಿತ ಮಲ್ಲಿಗೆ ಗಂಧಿಕ ಮುಡಿದ ಸೂಸುಕ | ಸಲೆ ಭುಜ ಕೀರ್ತಿಪಾಠಿಕ || ಇಳೆಯೊಳು ಮಧುರಾ ಪೊಳಲೊಳು ವಾಸಳೆ | ಅಳಿಗಿರಿ ವಿಜಯವಿಠ್ಠಲ ಕೊಂಡಾಡುವ || ಸುಲಭ ಜನರಿಗೆಲ್ಲ ಒಲಿದು ಮತಿಯನೀವ | ಗಳಿಕರ ಶೋಭಿತೆ ಪರಮಮಂಗಳ ಹೇ 3
--------------
ವಿಜಯದಾಸ
(ಅ) ಶ್ರೀಹತಿಸ್ತುತಿಗಳು ಜಗದುದರನು ಹರಿ ಸೂತ್ರಧಾರಂ ನಗಿಸುವ ಅಳಿಸುವ ಕಾರಕನಿವ ತಾಂ ಪ ಪರಿಪರಿ ಸೃಷ್ಟಿಸುತಾ ಸಲಹುವನು ಅರಿವಿಂದವುಗಳ ಲಯಗೈಸುವನು ಭರಿತನು ಸಕಲ ಚರಾಚರಂಗಳಲಿ ನಿರುತವೆಲ್ಲ ತರತಮದಿಂದಾರಿಸಿ ಇರುವನು ಪರಮಾತ್ಮನು ಸರ್ವೇಶಂ 1 ನಿತ್ಯನಿರ್ಮಲನು ಸತ್ಯಸನಾತನು ಅತ್ಯಂತನು ಗುರುವನಂತನು ಮೃತ್ಯುನಿಯಾಮಕ ಮುಕ್ತಿಪ್ರದನು ಭೃತ್ಯವರ್ಗ ಸಂರಕ್ಷ ಶಕ್ತನು ಮತ್ತೊಂದಕು ಸಹ ಮೂಲನು 2 ಅಣೋರಣೀವನು ಮಹತೋಮಹೀಮನು ಗುಣಗಣಭರಿತನಗಣ್ಯನು ಕ್ಷಣಮಾದಲನು ಕಂಟಕನು ಕಾಲನು ತೃಣಮೊದಲು ಬ್ರಹ್ಮಾಂಡನು ಧೀರನು ಘನಮಹಿಮನು ಶ್ರೀ ಜಾಜೀಶಂ 3
--------------
ಶಾಮಶರ್ಮರು
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
(ಅನಂತಚತುರ್ದಶಿಯ ದಿನದ ಪ್ರಾರ್ಥನೆ) ಪದ್ಮನಾಭ ಪರಿಪಾಲಿಸು ದಯದಿಂದ ಪದ್ಮಜಾದಿ ವಂದ್ಯ ಪರಮ ದಯಾಳೊ ಪದ್ಮಿಯಳರಸ ಹೃತ್ಪದ್ಮನಾಮಕ ಸ್ವರ್ಣ ಸದ್ಮ ವೃತ್ತಿಪದಪದ್ಮವ ತೋರೊ ಪ. ಚಿಂತಿತದಾಯಕ ಸಂತರ ಕುಲದೈವ ಕಂತು ಜನನಿಯೊಡಗೂಡಿ ನೀನು ನಿಂತು ಎನ್ನಲಿ ಕೃಪೆ ಮಾಡೆಂದು ನಮಿಪೆ ಧು- ರಂತ ಮಹಿಮ ನಿನ್ನ ಚರಣಾಬ್ಜಯುಗಲಾ 1 ಆದಿ ಮಧ್ಯಾಂತವಿದೂರ ನಿನ್ನಲಿ ಮಹ ದಾದಿ ತತ್ವಗಳೆಲ್ಲ ನಿಂತಿಹವು ಆದಿ ಭೌತಿಕ ಮೊದಲಾದ ತಾಪಗಳನ್ನು ಶ್ರೀದ ನೀ ಬಿಡಿಸಲು ಸದರವಾಗಿಹವು 2 ಒಂದರಿಂದೊಂದಾದರಿಂದ ಮೂರು ಮೂರ್ತಿ ಇಂದಿರೆ ಸಹಿತಾವಿರ್ಭೂತನಾಗಿ ಮುಂದಿನ ಮಹದಾದಿ ತತ್ವವ ನಿರ್ಮಿಸಿ ನಿಂದನಂತಾಸಂತರೂಪನಾದವನೆ 3 ಭವ ಚಕ್ರದೊಳು ತಂದು ನವ ನವ ಕರ್ಮಗಳನೆ ಮಾಡಿಸಿ ಅವರ ಯೋಗ್ಯತೆ ಮೀರದಲೆ ಫಲಗಳನಿತ್ತು ನಿತ್ಯ ತೃಪ್ತನಾಗಿರುವಿ 4 ಮಛ್ವಾದ್ಯನಂತವತಾರಗಳನೆ ಮಾಡಿ ಸ್ವೇಚ್ಛೆಯಿಂದ ಸುಜನರ ಸಲಹಿ ಕುಚ್ಛಿತ ಜನರಿಗೆ ತುಚ್ಛಗತಿಯನೀವೆ ಸ್ವಚ್ಛ ಬ್ರಮ್ಹಾದಿಕ ವಿವ್ಛಾ(?)ವಿಷಯನೆ 5 ನಾನಾವತಾರದಿ ನಂಬಿದ ಸುರರಿಗೆ ಆನಂದವಿತ್ತು ರಕ್ಷಿಪೆ ಕರುಣದಿ ದಾನವರಿಗೆ ಅಧ:ಸ್ಥಾನವ ನೀಡುವಿ ಮಾನವರನು ಮಧ್ಯಗತರ ಮಾಡಿಸುವಿ 6 ಹಿಂದೆ ಮುಂದಿನ ಭವದಂದವ ತಿಳಿಯದ ಮಂದಾಗ್ರೇಸರ ನಾನಾದೆಂಬುದನು ಅಂಧಕರಾರಣ್ಯದಿಂದ ಮೂಢನಾದಂ ದಿಂದ ಬಿನ್ನೈಪೆನು ಇಂದಿರಾಧವನೆ 7 ಮಾಡುವ ಕರ್ಮವು ನೋಡುವ ವಿಷಯಗ- ಳಾಡುವ ಮಾತು ಬೇಡುವ ಸೌಖ್ಯವು ನೀಡುವ ದಾನವೋಲ್ಯಾಡುವ ಚರ್ಯವ ನೋಡಲು ತಾಮಸ ಪ್ರಹುಡನಾಗಿಹೆನು 8 ಆದರು ನಿನ್ನಯ ಪಾದಾರವಿಂದ ವಿ- ನೋದ ಕಥಾಮೃತ ಪಾನದೊಳು ಸ್ವಾದ ಲೇಶದಾದರ ತೋರ್ಪದ- ನಾದಿ ಮೂರುತಿ ನೀನೆ ತಿಳಿಸಬೇಕದನೂ 9 ಇದರಿಂದಲೇ ಮುಂದೆ ಮದನನಯ್ಯನೆ ನಿನ್ನ ಪದವ ಕಾಣುವೆನೆನುತೊದರುವೆನು ಹೃದಯ ಮಂಟಪದಿ ನೀ ಹುದುಗಿರುವುದರಿಂದ ಕದವ ತೆರೆದು ತೋರೊ ವಿಧಿಭವವಿನುತಾ 10 ಕನ್ನೆ ಸುಶೀಲೆಯ ಕರಸೂತ್ರ ರೂಪದ ನಿನ್ನ ತಿಳಿಯದೆ ಕೌಂಡಿಣ್ಯನಂದು ಮನ್ನಿಸದಿರೆ ಮದ ಮೋಹಗಳೋಡಿಸಿ ನಿನ್ನ ರೂಪವ ತೋರ್ದ ನಿಜಪೂರ್ಣ ಸುಖದಾ 11 ಬ್ರಹ್ಮಾದಿಗಳನೆಲ್ಲ ನಿರ್ಮಿಸಿ ರಕ್ಷಿಸಿ ತಮ್ಮ ತಾವರಿಂiÀiದ ನಿಮ್ಮ ಸ್ತುತಿಪರೆ ಕು- ಕರ್ಮಿ ನಾನೆಂದಿಗಾದರೂ ಶಕ್ತನಹುದೆ 12 ಅದು ಕಾರಣದಿಂದ ಪದುಮನಾಭ ನಿನ್ನ ಪದ ಕಮಲಗಳಲಿ ರತಿಯನಿತ್ತು ಸದರದಿ ಸಲಹಯ್ಯ ವಿಧುಶೇಖರಾರ್ಚಿತ ಮದನನಯ್ಯ ಮರುದಾದಿ ವಂದಿತನೆ 13 ದೋಷರಾಶಿಗವಕಾಶನಾದರೂ ಯೆನ್ನ ಶ್ರೀಶ ನಿನ್ನ ದಾಸದಾಸನೆಂದು ಘೋಷವಾದುದರಿಂದ ಪೋಷಿಸಬೇಕಯ್ಯ ಶೇಷಗಿರೀಶ ಸರ್ವೇಶ ನೀ ದಯದಿ 14
--------------
ತುಪಾಕಿ ವೆಂಕಟರಮಣಾಚಾರ್ಯ
(ಅನಂತಪದ್ಮನಾಭ ಪ್ರಾರ್ಥನೆ) ಚಿಂತಿತದಾಯಿ ನಿರಂತರ ಸುಖದಾನಂತಪದ್ಮನಾಭಾ ಸಕಲಸುಜನಾಂತರ ಫಲದಾ ಪ. ಯಾಕೆಂದರೆ ಪೂರ್ಣಾ ನಂದನೀನೊಲಿಯಲು ಎಂದಿಗು ಕುಂದನು ಹೊಂದದಲಿರುವೆ ಸುಂದರ ವಿಗ್ರಹ ಸುಲಭದಿ ಸಕಲಾನಂದ ವಾರಿಧಿಯೊಳಿಳಿವೆ ಭವ ಬಂಧನ ಬಿಡಿಸುವ ದೊರೆ ನಿನ್ನರಿಯದೆ ಮಂದ ಬುದ್ಧಿಯಿಂದಿರುವುದು ಥರವೆ1 ನೀಲಾಳಕ ಪರಿಶೋಭಿತ ಮುಖಕಮಲಾಲಿಸು ಬಿನ್ನಪವÀ ಲೀಲಾಮೃತರಸ ಕುಡಿಸುತ ಕರುಣದಿ ಪಾಲಿಸು ವರಸುಖವಾ ಪದದೊಳಗಿರಿಸಿದ ದುರಿತ 2 ಹೆಂಡತಿ ಜನಿಸಿದ ಮನೆಯೊಳಗಿರುವುದೆ ಪುಂಡರೀಕನಾಥಾ ಪಂಡಿತರುಗಳಿದ ಕಂಡರೆ ನಗರೆ ಬ್ರಹ್ಮಾಂಡಕೋಟಿಭಾಸಾ ಅಂಡಲೆಯದೆ ಹೃನ್ಮಂಡಲದೊಳು ಶುಭಕುಂಡಲ ರಮೆಯೊಡಗೊಂಡು ಬೇಗದಲಿ ನಿಭ ಕುಂಡಲಿಗಿರಿಗ 3
--------------
ತುಪಾಕಿ ವೆಂಕಟರಮಣಾಚಾರ್ಯ