ಒಟ್ಟು 2526 ಕಡೆಗಳಲ್ಲಿ , 119 ದಾಸರು , 1558 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ಗರವು ನೋಡಮ್ಮಯ್ಯರುಕ್ಮಿಣಿಗೆಂಥ ಗರವು ನೋಡಮ್ಮಯ್ಯಕಂತುನಯ್ಯನ ಎನಗಂತ್ರವ ಮಾಡಿದ ಮಂತ್ರವ ಮಾಡಿದಳಮ್ಮಯ್ಯ ಪ. ಹಿಡಿದ ವೀಳ್ಯವ ನಾನು ಕೊಡುವೊ ಸಮಯದಿಬಂದು ಕಿಡಿ ಹಾಕಿದಳು ನೋಡಮ್ಮಯ್ಯಭಾವೆ ಕಿಡಿಯ ಹಾಕಿದಳು ನೋಡಮ್ಮಯ್ಯ ಹುಡುಗೆ ವೀಳ್ಯಕೆ ಮುಖಕೊಡಬಹುದುಕೃಷ್ಣನು ಬಿಡನು ಇವಳದೇನಮ್ಮಯ್ಯಇಂಥ ಭಿಡೆಯು ಇವಳದೇನಮ್ಮಯ್ಯ 1 ಮೋದ ಇಟ್ಟವಳಿಗೆಆದರವಿಲ್ಲ ನೋಡಮ್ಮಯ್ಯಏನೂ ಆದರವಿಲ್ಲ ನೋಡಮ್ಮಯ್ಯ ಕಾಡುತ ಕೊಟ್ಟ ವೀಳ್ಯವ ಮಾಧವಗೆಕೊಟ್ಟರೆ ಹೋದೀತು ಬುದ್ದಿ ನೋಡಮ್ಮಯ್ಯರುಕ್ಮಿಣಿಯಲ್ಲೆ ಹೋದೀತು ಬುದ್ಧಿ ನೋಡಮ್ಮಯ್ಯ 2 ಥಾಟು ಥೀಟಿನ ಭಾವೆ ಮಾಟ ಮಾಡಿದಳೇನಮ್ಮಯ್ಯಬೂಟಕತನ ನೋಡಮ್ಮಯ್ಯಬೂಟಕಗುಣದವಳ ಕೂಟಕೆ ಮೆಚ್ಚಿದಹರಿಯ ಆಟವÀ ನೋಡಮ್ಮಯ್ಯಮರುಳಾಟವ ಹರಿಯ ನೋಡಮ್ಮಯ್ಯ3 ಸೃಷ್ಟ್ಯಾದಿಕರ್ತಗೆ ಇಟ್ಟಳು ಮದ್ದಾನೆ ಧಿಟ್ಟತನವ ನೋಡಮ್ಮಯ್ಯರುಕ್ಮಿಣಿಯ ದಿಟ್ಟತನವ ನೋಡಮ್ಮಯ್ಯಎಷ್ಟು ಧೈರ್ಯವೆಂದು ಕೃಷ್ಣತಾ ಬೆರಗಾಗಿ ಬಿಟ್ಟನುವೀಳ್ಯವ ನೋಡಮ್ಮಯ್ಯ4 ವಟಪತ್ರ ಶಾಯಿಗೆ ಕುಟಿಲ ಮಂತ್ರವಮಾಡೊ ಚಟುಲತನ ನೋಡಮ್ಮಯ್ಯ ಭಾವೆಯ ಚಟುಲತನವ ನೋಡಮ್ಮಯ್ಯಸಟಿಯಲ್ಲ ಇವಳೆದೆ ಕಠಿಣತಿಶÀಯವೆಂದು ಮಿಟಿಮಿಟಿ ನೋಡಿದನಮ್ಮಯ್ಯಕೃಷ್ಣ ಮಿಟಿಮಿಟ ನೋಡಿದನಮ್ಮಯ್ಯ 5 ಭಾಳೆ ದಯಾಳು ಎಂದು ಹೇಳುವ ಶೃತಿಗಳುಕೇಳಿ ಆಟವು ನೋಡಮ್ಮಯ್ಯಹರಿಯ ಕೇಳಿ ಆಟವು ನೋಡಮ್ಮಯ್ಯಕಾಳ ಕೂಟವ ಕೈತಾಳವ ಹಿಡಿದಂತೆಆಳುವನಿವಳ ನೋಡಮ್ಮಯ್ಯಕೃಷ್ಣ ಆಳುವನಿವಳ ನೋಡಮ್ಮಯ್ಯ6 ಸರ್ವದಾ ತನ್ನ ಕೂಡ ಇರಬೇಕೆಂದೆನುತಲಿಎರೆದಳು ತೈಲವ ನೋಡಮ್ಮಯ್ಯಹರಿಗೆ ಎರೆದಳು ತೈಲವಮ್ಮಯ್ಯಭರದಿ ಕೋಪಿಸಿ ಕಣ್ಣು ತೆರೆದು ನೋಡುವರೆನ್ನಧರಿಸಲಿನ್ನೆಷ್ಟು ನೋಡಮ್ಮಯ್ಯನಾ ಧರಿಸಲಿನ್ನೆಷ್ಟು ನೋಡಮ್ಮಯ್ಯ 7 ಪುಂಡರೀಕಾಕ್ಷನ ಕೊಂಡಾಡಿ ಸುಖಿಸುವಹೆಂಡಿರು ಕಡಿಮೆಯೇನಮ್ಮಯ್ಯಹರಿಗೆ ಹೆಂಡಿರು ಕಡಿಮೆಯೇನಮ್ಮಯ್ಯಕೆಂಡವ ತುಂಬಿದ ಮಂಡಿ ತೋರಿಸಿದಂತೆಚಂಡಿಯನಾಳುವ ನಮ್ಮಯ್ಯಕೃಷ್ಣ ಚಂಡಿಯನಾಳುವ ನಮ್ಮಯ್ಯ8 ಧಿಟ್ಟಿಯರಿಬ್ಬರು ಕೋಪ ಬಿಟ್ಟರೆ ಇವರಿಗೆಎಷ್ಟು ಒಲುಮೆ ನೋಡಮ್ಮಯ್ಯನಾ ಎಷ್ಟು ಒಲುಮೆ ನೋಡಮ್ಮಯ್ಯಧಿಟ್ಟ ರಾಮೇಶನಲೆ ಇಟ್ಟರೆ ಇವರಿಗೆಎಷ್ಟರೆ ಗರ್ವ ನೋಡಮ್ಮಯ್ಯಬೇಡಿದ್ದು ಎಷ್ಟರೆ ಗರ್ವ ನೋಡಮ್ಮಯ್ಯ 9
--------------
ಗಲಗಲಿಅವ್ವನವರು
ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇಇಂಥ ದುರ್ದೆಸೆಗೆನ್ನ ಎಳೆತಂದು ಬಿಡಲಿಕ್ಕೆ ಪ ಉದಯ ಕಾಲದೊಳೆದ್ದು ಉದರ ಪೋಷಣೆಗಾಗಿಹದವನರಿಯದೆ ಬಳಲಿ ಅಂತಿಂತು ಬಡೆದಾಡಿಬದುಕು ತಂದೊಡಲ ಹೊರಕೊಂಡು ಸಲೆನನ್ನಪದವ ನೆನೆಯಲು ಸ್ವಲ್ಪ ಸಹ ವೇಳೆ ಸಿಗದಂತೆ 1 ಹಿಡಿದ ಕಾರ್ಯಗಳೆಲ್ಲ ಬಿಡದೆ ನಿಷ್ಫಲವಾಗಿಒಡವೆ ಇಲ್ಲದ ಬರಿಯ ಒಡೆತನಕೆ ಅಣಿಮಾಡಿಮಡದಿ ಮಕ್ಕಳ ಬಿರುಸು ನುಡಿಗೇಳಿ ಮನನೊಂದುಸುಡುಬಾಳ್ವೆ ಇದನೆಂದು ಮುಡುಕುವಂದದು ಗೈಸಿ 2 ನಂಬಿದವರನು ಹರಿಯು ಬೆಂಬಿಡನು ಎಂದೆಂದುಎಂಬ ಬಿರುದನು ತೊರೆದು ಇಂಬುಗೊಡದಿರಲಿಕ್ಕೆಅಂಬುಜಾಕ್ಷನೆ ನಿನಗೆ ಸಂಬಂಧವಿರದೇನುಹಂಬಲಿಪ ದುಃಸ್ಥಿತಿಗೆ ತುಂಬ ತಂದಿಡಲಿಕ್ಕೆ 3 ಅಣುಗರಿಗೆ ಉಣಿಸಲಿಕೆ ಹಣವೆತ್ತ ಗಳಿಸಲಿಫಣಿಶಯನ ನಿನಗಿನ್ನು ಗುಣವೆತ್ತ ತೋರಿಸಲಿಮಣಿಗಳನು ಎಣಿಸುತ್ತ ಪ್ರಣವೆತ್ತ ಧೇನಿಸಲಿಹಣಿವ ಭವದೊಳು ಸಿಲುಕಿ ಕ್ಷಣವು ಸಹ ಸಿಗದಾಯ್ತು 4 ಬಾಳಿನೊಳು ಸೌಖ್ಯವೇ ಆಳವೈಶ್ವರ್ಯವೆತೋಳಿನೊಳು ದಾಢ್ರ್ಯವೆ ಚಿತ್ತದೊಳು ಸ್ಥೈರ್ಯವೆಹೇಳು ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಎಂಥಾ ದಯಾ ನಿಧಿಯೇ | ಸಂತತ ಭಕ್ತಿ ವಿಶ್ರಾಂತಿಯ ದೋರಿದ ಪ ಜ್ಞಾನಾಂಜ ನುಡಿದಾ | ಕಾಣಿಸಿ ಇದರ್ಹಿಡಿದಾ 1 ಮೂಲ ಮಂತ್ರದಳುದಿಂದಾ | ಹೇಳಲಿನ್ನೇನದ ಸ್ವಾನುಭವದ ಘೋಷಾ | ಫೇಳಗುಡಿಸಿ ನೋಡಿದಾ2 ಮುಂದತಿಯೊಳು ನೀಡಿದಾ | ಇಂದು ಧನ್ಯನ ಮಾಡಿದಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾದರು ಬಂದರು ಚಿಂತೇ ಇಲ್ಲಾ ಪಂಥವು ಸರಿಯಲ್ಲಾ ಪ ಚಿಂತೆ ಎಂದೆಂಬುದೆ ಮನಸಿನ ರೋಗಾ ಸಂತಸ ಸಂತ್ಯಾಗ ಎಂಥೆಂಥ ಮಿಂಚುವ ದೇಹವಿದೀಗ ಕೃಂತನ ವಿಧಿಭಾಗ ಎಂತಲ್ಲಿ ನೆಲೆಸಿ ಹವಣಿತ ರೋಗಾ ಸಂತತ ಜಡ ಬೀಗಾ ನೀ ನೆನ್ನೊ 1 ಹಿತಾಹಿತವೆಂದಿಗೂ ಕೈಶೇರಿಲ್ಲಾ ಕೃತಿಪತಿ ತಾ ಬಲ್ಲಾ ಮತಿಗೆಟ್ಟು ಸತಿಯೇ ಗತಿಯೆಂದೆಲ್ಲಾ ಸುತಮೋಹ ಬಿಡಲಿಲ್ಲಾ ಮಿತಿಮೀರಿ ಪಣ ಭಂಡಾರದೊಳೆಲ್ಲಾ ರತಸುಖರೆ ಡಿಲ್ಲಾ ಕೇಸರಿ ಸುಖಗುರಿ ಮುರಿಯಲು ಧೃತಿಗೆಟ್ಟು ಬಳಲುವ ಸಂಗತಲ್ಯಾರು ತಿಳಿಯೋ 2 ನೀರಿನ ಬುದ್ಬುದ ಪರಿಸಂಸಾರಾ ದುಃಖದ ಆಗಾರಾ ಶ್ರೀರಾಮ ಮಂತ್ರದ ಸಾರಾ ನಿಜ ಸೌಖ್ಯದ ದ್ವಾರಾ ಶೇರಿ ಹಣ ಹೊನ್ನು ಹೆಂಣ ವಿಚಾರಾ ಗಂಜಾಸಮ ತಾರಾ ನಿಜಸುಖವನು ಪಡೆಯೇ 3
--------------
ನರಸಿಂಹವಿಠಲರು
ಎಂದಿಗೆ ನೀ ಯೆನ್ನ ಮುಂದಕೆ ಬರುವೆಯೊ ಸುಂದರ ಮೂರುತಿಯೆ ನಂದದಿ ಭಕುತರ ವೃಂದಗಳೆಲ್ಲವ ಸಂದೇಹವಿಲ್ಲದೆ ಮುಂದಕೆ ಕರದೊಯ್ವೆ ಪ ಪಂಕಜಾಕ್ಷನೆ ನೀನು ಕಿಂಕರ ಜನರಾ- ತಂಕಗಳೆಲ್ಲವ ಶಂಕಿಸದೆ ವೆಂಕಟನಾಮಕ ಸಂಕಟಪರಿºರವಿವ- ಳಾಂಕರನÀರವ ನಿಶ್ಶಂಕೆಯಿಂದಲಿಯಿತ್ತು 1 ಆರುವೈರಿಗಳೆನ್ನ ಗಾರುಮಾಡುವರಯ್ಯಾ ಆರು ಕಾವರು ಇಲ್ಲಾ ಮಾರಜನಕನೆ ಪಾರುಗಾಣಿಸದೆ ನೀ ದೂರಗೈಸಲು ಯನ್ನ- ನಾರು ರಕ್ಷಿಪರೊ ದೋಷವಿದೂರನೆ ಪೇಳೋ 2 ಯರಬೆರಡೆನಾಗಿತ್ತು ಪೊರಿಯೋ ದೇವರ ದೇವ ಕರುಣಾಬ್ಧಿ ನೀನೆಂದು ವರವೋದು ಶ್ರುತಿಯು ಶರಣಾಗತನನ್ನು ಪೊರೆಯದೆ ಬಿಡುವಂದು ಸರಿಯೇನೋ ಕರುಣಾಳು ಸಿರಿವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಎಂದೆಂದಿಗೂ ಕುಂದದೆ ಸಲಹು ಎನ್ನ ಪ ಮಂದರಧರಸುರ ನರ ಹರಿಯೇಇಂದಿರೆಯರಸರವಿಂದ ಲೋಚನಮಂದನು ನಾನೆಂದರಿಯೆ ಅ.ಪ ಶಿರಿಗರುವದ ಭರದಿಂದ ಬರಸಿ |ಅನ್ಯರೊಳಿರಲು ಬಲು ನಾ ಚರಿಸಿ |ಶಿರಿಕರ ಕರಿವರ ವರದನ ವಿರುದ್ಧವ |ನಿರುವರ ನೆರೆಯಲಿ ಮೆರಿಸಿ 1 ಕರುಣಾಘನ ಕರುಣಾಲಯ ವರ್ಣ ಸು - |ಪರ್ಣಯಾನ ಯದುಕುಲ ಮಣಿಯೇ ||ಶರಣಾಗತ ಪರಿಪಾಲಿಪನೆಂದು |ಪರಿಪರಿ ಪಾಡುತ ನಾ ದಣಿಯೆ 2 ಭವ ಭವ ಬಿಡಿಸಿ3
--------------
ರುಕ್ಮಾಂಗದರು
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎದ್ದುನಿಂತ ಬಂದು ನಿಂತ ಮುಂದೆ ನಿಂದಂಥಮಾರಾಂತರ್ಗೆ ಕೃತಾಂತ ನಿಶ್ಚಿಂತ ಹನುಮಂತಬಲವಂತ ಯೆದೆಗೊಂತ ತನಪಂಥ ಸಲಲೆನುತಸÀಂತರಿಗೆ ಸಂತತ ಶಾಂತ ನಿಂತ ಮಾರಾಂತ ಕೃತಾಂತ ಪ. ದುರುಳ ರಾವಣನ ವನದ ತರುವಿನ ಕೊನೆಯೇರಿದಕರಚರಣಗಳ ಘಾಯದಿ ಮರಂಗಳ ಮುರಿದಅರಿಗಜ ಗಂಡಭೇರುಂಡನೆಂಬ ತನ್ನ ಬಲುಬಿರುದಮೆರೆದು ಮಾರುತಿ ಪ್ರತಿಭಟರ ಶಿರಂಗಳ ತರಿದ 1 ಸೀತೆಗೆ ಉಂಗುರವನ್ನಿತ್ತು ಮತ್ತೆ ಕೈಗಳ ಮುಗಿದಪ್ರೀತಿಯಿಂ ಪೊನ್ನಕಚ್ಚುಟಕ್ಕಿಟ್ಟ ಗಂಟನು ಬಿಗಿದಖ್ಯಾತ ಮಂಡೋದರಿಕುವರನ ಬಸುರನು ಬಗಿದವಾತಸುತನು ವೈರಿಪುರವ ಸುಡಲು ತೊಡಗಿದ 2 ನಲಿದು ಲಂಘಿಸಿ ನಳನಳಿಸುವ ಬಾಲವನೆತ್ತಿಖಳರೆದೆ ಶೂಲ ಹುಬ್ಬುಗಳ ಗಂಟಿಕ್ಕಿ ನೋಡುವ ಅರ್ಥಿಆಳುತಲಿಹ ಅಬಲೆಯರ ಭಯಂಕರಮೂರ್ತಿಸುಳಿದನು ಕೇರಿಕೇರಿಯಲಸುರರ ನುಗ್ಗೊತ್ತಿ 3 ಲಂಕಾನಗರಿಯ ಪುಚ್ಚದ ಕಿಚ್ಚಿಂದ ಸುಟ್ಟಹುಂಕರಿಸುತ ಅಹಿತರ ಬೇಗ ತೆಗೆದೊಗದಿಟ್ಟಕಂಕಣ ಮಕುಟ ಹಾರಂಗಳಿಂದೊಪ್ಪುವ ಬಲುದಿಟ್ಟಶಂಕೆಯಿಲ್ಲದನಿಲಜ ಶತ್ರುಗಳಿಗಿಂತರ್ಥಿಯ ಕೊಟ್ಟ 4 ಹೋಗೆಲೊ ಕಪಿಯೆನೆ ಹೊಕ್ಕು ರಕ್ಕಸರನು ಬಿಗಿದಕಾಗೆಯ ಬಳಗಕೆ ಕಲ್ಲನಿಟ್ಟಂದದಿ ಮಾಡಿದಆಗಲೆ ಕಂಡ ದಶಮುಖನೆಂಬ ಕಳ್ಳನ ನೋಡಿದಬೇಗ ಜಾನಕಿಯನ್ನು ಬಿಡು ಬಿಡುಯೆನಲು ತೊಡಗಿದ 5 ಮೂರರದೊಂದು ಪಾಲು ಖಳರ ಜನಂಗಳ ಕೊಂದಮೀರಿದ ಸೇನೆ ನಮ್ಮ ರಘುಪತಿಗಿರಲೆಂದು ನಿಂದನೂರುಯೋಜನದ ವಾರಾಶಿಯ ತೀರಕೆ ಬಂದಹಾರಿದನು ಗಗನಕೆ ಹನುಮನು ಭರವಸದಿಂದ ನಿಂದ 6 ಕುಂಭಿನೀ ಸುತೆಯ ಕುರುಹಿನ ಸನ್ಮಣಿಯ ತಕ್ಕೊಂಡಅಂಬುಧಿಯನು ಬೇಗ ದಾಟಿ ಶ್ರೀರಾಮರ ಕಂಡತ್ರ್ಯಂಬಕ ಮೊದಲಾದ ಸುರರ ತಂಡದಲಿ ಪ್ರಚಂಡಕಂಬುಕಂಧರ ಹಯವದನನ ಭಕ್ತಿರಸಾಯನ ಉಂಡ 7
--------------
ವಾದಿರಾಜ
ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ ಪ ಕನಸಿನೊಳಗ ಕಂಡ ಪರಿಯಾರೂಪದ ದೋರಿ ದಾವ ತೇಜಮುಸುಕಿತು ಧರಿಯೇ | ತ್ರೈ ಭುವನವ ರಕ್ಷಿಸ ಬಂದಾ ಹರಿಯೇ | ಮುಜ್ಜೆಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಅಡಿಯಿಟ್ಟುನಲಿದು ಬರುವ ರಾಮೋ ಘಮ್ಮನೇ ಪರಬೊಮ್ಮನೆ4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನ ಸಲಹುದೋ ರಂಗಾ ಎನ್ನ ಸಲಹು| ನಿನ್ನ ಚರಣ ಕಮಲದೋರಿ| ಗಮನ ರಂಗಾ ಪ ನಷ್ಟ ಪರಮ ಪತಿತ ಗತಿಯ|ಗೆಟ್ಟು ಅಜಮಿಳ ತನ್ನ| ಕಷ್ಟ ಬಡುವ ಕಾಲದಲ್ಲಿ ಸುತನ ಪೆಸರನು| ಮುಟ್ಟಿ ಕರಿಯೇ ತೃಪ್ತನಾಗಿ|ಅಷ್ಟರಿಂದ ಅವಗ ನಿನ್ನ| ಪಟ್ಟಣಕ ನೀ ಅಟ್ಟಿ ಗತಿಯ|ಕೊಟ್ಟು ಸಲುಹಿದೆ ರಂಗಾ 1 ಸಂಧಿಸಿ ಮಧ್ಯರಾತ್ರಿಯೊಳಗ|ಬಂದು ದೂರ್ವಾಸನ್ನವ ಬೇಡ| ಲಂದು ದೃಪದ ನಂದನೆ|ನಿನ್ನೆ ಸ್ಮರಿಸೆ ತ್ವರಿತದಿ| ಬಂದು ನಿಂದು ಬೇಡಿದುದನು|ಛಂದದಿಂದಲಿತ್ತು ದ್ವಿಜರಾಜ| ನಂದ ಬಿಡಿಸಿ ಐವರ ಮಾನ ಕುಂದಂತೆ ಕಾಯ್ದೆ ರಂಗಾ 2 ಐದು ವರುಷ ಹಸುಮಗನಾ|ಬೈದು ಮಲತಾಯಿ ಪೊರಗೆ| ಹಾಕಲಾಗ ಧೃವನು ನಿನ್ನ ಕುರಿತು ಧ್ಯಾನವಾ| ಗೈಯ್ಯಲಾಗಿ ಅಚಲ ಪದಕ|ಒಯ್ದು ಇಟ್ಟು ನೀನು ಅವನ| ಕಾಯ್ದೆ ಮಹಿಪತಿ ನಂದನೊಡೆಯನಾದ ದೇವ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನ ಸಲಹೋ ಚರಣವನ್ನು ದೋರಿ ಪರಮ| ನಿನ್ನ ಕಿಂಕರನೆಂದು ಘನ್ನದಯವನು ಬೀರಿ ಎನ್ನಾ ಪ ಶರಣ ಜನ ಮಾನ ರಕ್ಷಕನೇ ವರಕಮಲ ಕರಕಮಲ ಪದವಿಮಲ ಮಹಿಮನೇ ಸಕಲ ಗುಣಧಾಮ ಘನಶ್ಯಾಮ ಸುರ ರಿಪು ಮಥನ| ಗೋಕುಲರಿ ಸೋದರಾನಂತ ಗುಣಾ ಶ್ರೀ ಹರಿ ಭಕ್ತರ ವಸರಕೊದಗುವೆ ನೀ ಪರೋಪರಿ| ಸುಕಲ್ಪತರು ದನುಜ ಕುಲಸಂಹಾರ ಸರ್ವದುರಿತ ನಿವಾರಾ 1 ಅಖಿಳ ಶೃತಿ ಸ್ಮøತಿ ನಿಕರಲಿಂದ ನುತಿಸಿಕೊಂಬೆ| ವಿಕಸಿತನುಪಮ ವದನಬ್ಜ ಕುಲ ಅಬ್ಜರವಿ ಪ್ರಕಟದೊಳೊದಗಿ ಬಂದೆ ಸರಸೀರುಹ ನಯನ ಜಗದ ತಂದೇ| ಸಿರಿನಂದ ನಂದನ ಪರಮುದಾರೇ| ಸುರವೃಂದ ರಕ್ಷಕ ವರ ಮುರಾರೇ 2 ಶರಣಾಗತ ಜನರ ಪಾಲಾ| ಸಿರಿ ಉರಗಾರಿಗಮನ ಸೂರಾರಿ ಸಿಬಿಕುಲ| ಶೌರಿ ನರಸಹಕಾರಿ ಗಿರಿಧರನೇ| ಕರುಣಾಕರ ತ್ರಯದಿ ಸ್ಮರಣ ಮಾಳ್ಪರ ಭಯವ| ಹರಣ ಶರಣ ಕೌಸ್ತುಭಾಭರಣ ನೀಲವರಣಾನಂದ3 ವರ ಶ್ರೀರಮಣ ದೇವ ಜಗಜೀವ ಮಹಿಪತಿ ನಂದ ನೊಡಿಯ| ಪರಮಾನಂದ ಜೀವದೊರಿಯೇ| ಭವ ವಿನುತ ಮತಿ ಚರಿತಾ ಸಿಂಧೂರ| ನವನೀತ ಚೋರ ಜಗದೀಶ ಹರಿಯೇ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನನುದ್ಧರಿಸಲಾಗದೆ ಚೆನ್ನರಾಯ ಪ. ಎನ್ನನುದ್ಧರಿಸಲಾಗದೆ ಚೆನ್ನರಾಯ ಬಿನ್ನೈಸುವೆಇನ್ನು ಬೇರೆ ಗತಿಯ ಕಾಣೆ ನಿನ್ನ ಚರಣಕಮಲದಾಣೆ ಅ.ಪ. ನಿಗಮ ಉಸುರುತಿರಲು ನಿನ್ನಚರಣವನ್ನು ಶಿರದೊಳಾಂತೆ ಎನ್ನ ಮೇಲಣಕರುಣವಿಲ್ಲದದೇನುಕಾರಣ ಸಲಹಬೇಕುಸುರರ ಮಸ್ತಕದ ಸುಭೂಷಣ 1 ಹಿಂದೆ ನಾನನಾಥನಾಗಿ ಒಂದೆರಡ[ಲ್ಲಾ]ನೇಕ ಜನ್ಮದಿಬಂದು ನರಕಯಾತನೆಯಲ್ಲಿ ನೊಂದು ಬೆಂದು ಬಾಯಬಿಡುತಬಂದೆ ನಿನ್ನ ಪೆಸರುಗೊಂಡೆನೊ ಸನಾಥನಾಗಿಮುಂದೆ ನಾಮಸುಧೆಯನುಂಡೆನೊ ನೀ ಕೃಪಾಳುಎಂದು ನುಡಿವರನ್ನು ಕಂಡೆನೊ 2 ಹಲವು ಮಾತನಾಡಲೇನು ಒಲಿವುದಿನ್ನು ಹರಿಯೆ ನಿನ್ನಸಲಿಗೆಯೊಳೀ ಬಿನ್ನಪವನು ಸಲಿಸುತಿಹೆನು ಮುಂದಕಿನ್ನುಜಲುಮ ಬಾರದಂತೆ ವರವನು ಇತ್ತು ಎನ್ನಸಲಹೊ ದೊರೆಯೆ ನಿನ್ನ ಕರೆಯೆನೊ ಮುಂದೆ ಮುಕುತಿ-ಲಲನೆಯೊಡನೆ ಸುಖದಲಿರುವೆನು 3 ದೇಶವರಿಯೆ ನಾನು ನಿನ್ನ ದಾಸನೆಂದು ಡಂಗುರವನು ಹೊ-ಯಿಸಿ ತಿರುಗುತಿರÀಲು ಮೋಹಪಾಶವೆನ್ನ ಸುತ್ತಿಕೊಂಡುಘಾಸಿ ಮಾಡುತಿರಲು ಬಿಡಿಸದೆ ಇರುವ ಪಂಥವಾಸಿಯೇನು ಇನ್ನು ಅಲೆಸದೆ ಸಲಹೊ ಸ-ರ್ವೇಶ ನಂಬಿದವನ ಕೆಡಿಸದೆ 4 ಎನ್ನ ದುರ್ಗುಣವನ್ನು ಮರೆದು ನಿನ್ನ ಸದ್ಗುಣದಿ ಪೊರೆದುಮನ್ನಿಸಿದರೆ ಲೋಕದೊಳಗೆ ಧನ್ಯನಹೆನು ಜನಮವೆತ್ತಿಉನ್ನತಾಹುದು ನಿನ್ನ ಕೀರುತಿ ನಾಶವಾಹುದುಎನ್ನ ಭವದ ಬಹಳ ಧಾವತಿ ಸಲಹೊಚೆನ್ನ ಹಯವದನಮೂರುತಿ 5
--------------
ವಾದಿರಾಜ
ಎನ್ನಳವೆ ಯೋಗದಭ್ಯಾಸ ಹರಿಯೇ ಎನ್ನಕೈ ನೀ ಪಿಡಿಯದಿಹುದು ಸರಿಯೇ ಪ ದಿವ್ಯಯೋಗದ ಬಗೆಯ ಪೇಳಿದೈ ಗೋಪಾಲ ಸವ್ಯಸಾಚಿಯ ಧನ್ಯನೆನಿಸಿದೈ ಶ್ರೀಲೋಲ ಭವ್ಯವಾದಾಕೃತಿಯ ತೋರ್ದೆ ಗೋಪಿಬಾಲಾ ಅವ್ಯಯಾನಂದ ಮಾಂಗಿರಿರಂಗ ವಿಠಲ 1 ನಿರ್ಮಮತೆಯೇ ಬೀಜ ಸರ್ವಸೇವೆಯೇ ಬೇರು ಕರ್ಮದೊಳಗುತ್ಸಾಹವಿರಲದೇ ಸುರಿನೀರು ಮರ್ಮವಿಲ್ಲದ ಹೃದಯವೈಶಾಲ್ಯವೇ ಕುಸುಮ ನಿರ್ಮಲತೆಯೇ ಫಲವು ಇದು ಕರ್ಮಯೋಗ 2 ಭಕ್ತಿಯೆಂಬುದೆ ಬೀಜ ಸಮ್ಮತಿಯೆ ತಾಬೇರು ಭಕ್ತಜನರ ಸೇವೆಯೇ ಮೇಲೆರೆವ ನೀರು ಏಕಾಗ್ರಚಿತ್ತವೇ ಸರಸಪರಿಮಳಪುಷ್ಪ ಮುಕ್ತಿಯೇ ಫಲಮಿದೆ ಭಕ್ತಿಯೋಗ3 ಆಸನವೇ ಬೀಜ ಪ್ರಾಣಾಯಾಮವೇ ಬೇರು ಆಸೆಯಿಂ ಗೈವ ದಿನಚರ್ಯೆಯೇ ನೀರು ಮಾಸದಿರುವಾರೋಗ್ಯ ಪುಷ್ಪತಾನೊಮ್ಮನಮೆ ಭಾಸಿಪಾ ಫಲಮಿದೆ ಹಟಯೋಗವಯ್ಯ 4 ಯಮನಿಯಮಗಳೆ ಬೀಜಧಾರಣವೆ ತಾಂಬೇರು ಕ್ರಮಮಾದಘ್ರಣಿದಾನ ಮೇಲೆರೆವ ನೀರು ವಿಮಲಮಾಗಿಹ ಧ್ಯಾನ ಪೂರ್ವಸಂಪ್ರಜ್ಞತಾ ಕ್ರಮಸಮಾಧಿಯೆ ಫಲವು ಇದು ರಾಜಯೋಗ 5 ವರವಿವೇಕ ಬೀಜ ವೈರಾಗ್ಯವೇ ಬೇರು ಗುರುಕರುಣಮೆಂಬುದೇ ಮೇಲೆರೆವ ನೀರು ಪರಬ್ರಹ್ಮ ಜ್ಞಾನವೇ ಪರಿಮಳಿಸುವ ಪುಷ್ಪ ವರಮೊಕ್ಷವೇ ಫಲವು ಇದು ಜ್ಞಾನಯೋಗ 6 ಯೋಗಮಾರ್ಗವ ತಿಳಿದು ಅನುಸಂಧಿಯಿಂ ಸಕಲ ತ್ಯಾಗ ಮಾಡುವ ನಿಯಮವೆನಗಸಾದ್ಯ ಆಗಾಗ ನಿನ್ನ ನಾಮಂಗಳನು ಪೇಳ್ವುದೇ ಯೋಗವೆಂದೆನಿಸುವ ಮಾಂಗಿರಿರಂಗ ನೀಲಾಂಗ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎನ್ನೊಡನೆ ಹುಟ್ಟಿದ ಹರಿಯೆ ಪಾಹಿ ಪ ಅನ್ನಂತ ಗುಣವನಧಿ ಎನ್ನಂತೆ ನಟಿಸುವಿ ಅ.ಪ ಸೃಷ್ಟಿಕಾಲದ ಮೊದಲು ಇಷ್ಟು ಪರಿಯಂತರದಿ ಅಷ್ಟು ಕಾಲವು ನಿನ್ನ ನಾಮ ಧರಿಸೆ ತುಷ್ಟಿ ಪೂರ್ಣನೆ ನೀನು ಮಂದಿ ಮೋಹಿಸಿ ಎನ್ನ ಕಷ್ಟಕೆ ಗುರಿಮಾಳ್ಪುದುಚಿತವೇ ನಿನಗೆ 1 ಒಳಗಿದ್ದು ಎನ್ನಲ್ಲಿ ಎಂತೆಂತು ನೀನಾದೆ ತಲೆ ಮಣಿದು ನಾನಂತು ಮಾಡಬೇಕೊ ಮಲಗುವುದು ನಿಲ್ಲುವುದು ನಿದ್ದೆಗೈವುದು ಮತ್ತೆ ತಿಳಿವುದು ತಿನ್ನುವುದು ನಿನ್ನ ಶ್ರೀಯವೊ ದೇವ 2 ಬಿಂಬನೀ ಪ್ರತಿಬಿಂಬ ನಾ ನಿನಗೆ ಎಂದೆಂದು ಸದನ ಜಯೇಶವಿಠಲರಾಯ ಡಿಂಬದಲಿ ನಡೆದ ಶ್ರೇಯ ನಿನ್ನದೆಂಬೊಜ್ಞಾನ ಬೆಂಬಿಡÀದೆ ಪಾಲಿಸಿ ಬಿಂಬ ದರುಶನ ನೀಡೊ 3
--------------
ಜಯೇಶವಿಠಲ
ಎನ್ನೊಳು ನ್ಯೂನವಾರಿಸದೇ ಸಲಹಯ್ಯಾ ಪ ಕಾಮಕ್ರೋಧ ಸಂಗವ ಮಾಡೀ | ತಾಮಸ ಲೋಭದಿ ಮೋಹವ ಕೂಡಿ | ತಾಮದ ಮತ್ಸರದಲಿ ಬೆರೆದಾಡೀ | ನೇಮದಿಗೆಟ್ಟೆ ವೃಥಾಯಕ1 ವಿಷಯೇಂದ್ರಿಯ ಸುಖ ವಿಷಯೆಂದರಿಯದೆ | ವಿಷಯದಿ ನಿಸಿದಿನಗಳೆದೆನು ಹರಿಯೇ | ಕುಶಲದ ಕರ್ಮದ ದಾರಿಯ ವಿಡಿಯೆ | ಘಸಣಿಗೆ ಬಿದ್ದೆನು ಭವದಿಂದ2 ತಂದೆ ಮಹಿಪತಿ ನಂದನ ಪ್ರಾಣಾ | ಮುದದಿ ಕೈಯನು ಪಿಡಿಯಲೋ ಪೂರ್ಣಾ | ಛಂದದಿ ತೋರಿಸಿ ನಾಮದ ಖೂನಾ | ಇಂದಿಗೆ ಧನ್ಯನ ಮಾಡು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು