ಒಟ್ಟು 483 ಕಡೆಗಳಲ್ಲಿ , 77 ದಾಸರು , 433 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೆ ಭಾಗ್ಯದ ನಿಧಿಯೆ | ಬಾರೆ ಜಾನಕಿಯೆ ಪ ಚಕೋರ ಸುಖಾಗ್ರಣೆ ಸೇರಿದೆ ತವಪದ ವಾರಿಜ ನಿಲಯೆ ಅ.ಪ ಕೃತಿ ಶಾಂತಿ ಜಯ ಮಾಯೆ ಕ್ಷಿತಿಜಕೋಮಲ ಕಾಯೆ ಶಿತಕಳೆವರ ವಿಧಿಶತಕ್ರತು ಸುಮನಸ ತತಿನುತೆ ಪಾವನೆ ರತಿಪತಿ ತಾಯೆ 1 ಮಂಗಳೆ ಮುದ ಭರಿತೆ ಇಂಗಡಲಜೆ ಕೃಪಾಂಗಿಯೆ ಎನ್ನಂತ ಮಾನವ ಸಿಂಗನ ತೋರೆ 2 ಶಾಮಸುಂದರ ರಾಣಿ ವಾಮಾಕ್ಷಿ ಕಾಲ್ಯಾಣಿ ಕಾಮಿನಿ ಮಣಿ ಸತ್ಯಭಾಮೆ ರುಕ್ಮಿಣಿ ಗೋಮಿನಿ ರಮೆ ಶುಭನಾಮ ಲಲಾಮೆ 3
--------------
ಶಾಮಸುಂದರ ವಿಠಲ
ಬಾರೆ ವೆಂಕಟರಮಣಿ ಶ್ರೀದೇವಿ ನೀ ಬಾರೆ ವೆಂಕಟರಮಣಿ ಪ ನಿತ್ಯ ಅ.ಪ. ಏನು ಪುಣ್ಯವೆ ನಂದು ಪಾರಾಯಣನೀನು ಕೇಳುವಿ ಬಂದುಹೀನ ಮಾನವನಿಗೆ ನೀನು ಬರುವಿ ಎಂಬೊಜ್ಞಾನವಿಲ್ಲದೆ ಉಚ್ಚ ಸ್ಥಾನದೊಳಗೆ ಬಾರೆ 1 ಸ್ವಪ್ನದೊಳಗೆ ಬರುವಿ ಶ್ರೀದೇವಿ ನೀಕ್ಷಿಪ್ರದಿಂದಲಿ ಪೋಗುವಿಸರ್ಪಶಯನ ನಮ್ಮಪ್ಪ ಗೋಕುಲ ಬಾಲಅಪ್ಪಿಕೊಳ್ಳುವ ಸುಖ ಒಪ್ಪಿಸಬೇಕಮ್ಮ 2 ಸಿರಿ ರಂಗನಂಕದಿ ಕೂತುಭೃಂಗಕುಂತಳೆ ಹೃದಯಂಗಳದೊಳಗಾಡೆ 3 ಎಲ್ಲ ದೇವತೆಗಳನೆ ತಪಾದಿಯೆಪುಲ್ಲ ವಾರಿಜನಯನೆಗೊಲ್ಲ ಬಾಲನಪಾದ ಪಲ್ಲವ ನೋಡದೆನಿಲ್ಲಲೊಲ್ಲದು ಮನಸೊಲ್ಲು ಲಾಲಿಸೆ ತಾಯೆ4 ಇಂದಿರೇಶನ ರಾಣಿ ಎನ್ನಯ ಮನೋ-ಮಂದಿರದೊಳು ಬಾ ನೀನಂದಗೋಕುಲ ಬಾಲಾನಿಂದು ಕರದೊಳೆತ್ತಿತಂದು ತೋರಿಸೆ ಅರವಿಂದನಿಲಯೆ ಲಕ್ಷ್ಮಿ 5
--------------
ಇಂದಿರೇಶರು
ಬಾರೆ ಸಖಿ ವಾರಿಜ ಮುಖಿ ಬಾರೆ ಬಾರೆ ಸಖಿ ಬಾರೆ ಕೋಪಿಸೋರೆ ಹೀಗೆ ಯಾರುಪದೇಶವುಮುರಾರಿಯ ಮುಖ್ಯ ಬಲರಾಮನ ಸಖಿಯೆಬಾರೆ ಬಾರೆ ವಾರಿಜ ಮುಖಿಯೆ ಪ. ಪುಟ್ಟ ಸುಭದ್ರಾ ನಿನಗೆ ಸಿಟ್ಯಾಕ ಒದಗಿತಇಟ್ಟ ಮುದ್ರಿಗಳು ತಡವಾಗಿಇಟ್ಟ ಮುದ್ರಿಗಳು ತಡವಾಗಿ ಮುಯ್ಯವಇಷ್ಟು ಹೊತ್ತನಾಗೆ ತರಬಹುದೆ 1 ಕೇಳೆ ಸುಭದ್ರಾ ಮುಯ್ಯಾ ಕಾಳ ರಾತ್ರಿಲೆ ತಂದುಭಾಳ ಕೋಪಿಸುವ ಬಗಿ ಹೇಳಭಾಳ ಕೋಪಿಸುವ ಬಗಿ ಹೇಳ ಮುತ್ತಿನ ತೋಳುತಾಯಿತವ ಕೊಡುವೆನ 2 ಧಿಟ್ಟ ಸುಭದ್ರಾ ಮುಯ್ಯಾ ಇಷ್ಟೊತ್ತ್ತಿನಾಗ ತಂದು ಸಿಟ್ಟು ಮಾಡಿದ ಬಗಿ ಹೇಳಸಿಟ್ಟು ಮಾಡಿದ ಬಗಿ ಹೇಳ ಮುತ್ತಿನ ಕಟ್ಟಾಣಿ ಕೊಡುವೆ ನಿನಗಿನ್ನು3 ಲೋಕನಾಯಕಿ ಕೃಷ್ಣ್ಣಿ ಕೋಪವ್ಯಾ ಕೊದಗಿತಹಾಕಿದ ಮುದ್ರಿ ತಡವಾಗಿ ಹಾಕಿದ ಮುದ್ರಿ ತಡವಾಗಿ ಮುಯ್ಯವ ಈ ಕಾಲದೊಳಗೆ ತರಬಹುದೆ4 ಕೆಂಡದಂಥವಳ ಗುಣ ಕಂಡೇವ ಸಭೆಯೊಳು ಚಂಡಿತನವನೆ ಬಿಡು ಕೃಷ್ಣಿಚಂಡಿತನವನೆ ಬಿಡು ಕೃಷ್ಣಿ ಮುತ್ತಿನ ದಂಡೆ ಕೊಡುವೆ ಬಿಡುಕೋಪ5 ಬೆಂಕಿಯಂಥವಳ ಗುಣ ಶಕ್ಯವೆ ವರ್ಣಿಸಲು ಶಂಕರಾದ್ಯರಿಗೆ ವಶವಲ್ಲಶಂಕರಾದ್ಯರಿಗೆ ವಶವಲ್ಲ ಮುತ್ತಿನ ವಂಕಿಯ ಕೊಡುವೆ ನಿನಗಿನ್ನು 6 ಸತಿಯು ಸುಭದ್ರೆ ನೀನು ಯತಿಯ ಬೆನ್ಹತ್ತಿದಾಗ ಅತಿಭೀತಿ ಎಲ್ಲಿ ಅಡಗಿತ್ತಅತಿಭೀತಿ ಎಲ್ಲಿ ಅಡಗಿತ್ತ ನಾವುನಿನ್ನ ಪತಿವ್ರತ ತನವ ಅರಿವೆನೆ7 ಮಿತ್ರೆಯರು ನಾವೆಲ್ಲ ತುಪ್ಪಅನ್ನವನುಂಡುಪುತ್ರರ ಸಹಿತ ಸುಖನಿದ್ರೆಪುತ್ರರ ಸಹಿತ ಸುಖನಿದ್ರೆ ಗೈವಾಗ ಮತ್ತ ನೀ ಮುಯ್ಯ ತರಬಹುದೆ8 ಲೋಲ ರಾಮೇಶನು ಹಾಲು ಅನ್ನವನುಂಡುಬಾಲರ ಸಹಿತ ಸುಖನಿದ್ರೆಬಾಲರ ಸಹಿತ ಸುಖನಿದ್ರೆ ಗೈವಾಗಮ್ಯಾಲೆ ಮುಯ್ಯ ತರಬಹುದೆ9
--------------
ಗಲಗಲಿಅವ್ವನವರು
ಬಾರೈ ಭೂಶಿರಿವರ ವೆಂಕಟದೊರೆಯೇ | ಕರಿವರದ ಶ್ರೀ ಹರಿಯೇ | ದೋರೈ ಶ್ರೀಕರ ಶುಭಸುರ ಕುಲದೊರೆಯೇ | ಪರತರ ನರಹರಿಯೇ ಪ ಅರುಣಾ ವಾರಿಜಪರಿಚರಣಾ | ಚರಣಾ ಶರಣಾಗತ ಕರುಣಾ | ಕರುಣಾ ಕೋಟ್ಯರುಣಪತಿಯ ಹಿಮಕಿರಣಾ | ಕಿರಣ್ಹೊಳೆವ ಸುವರಣಾ | ವರಣಾ ಪೀತಾಂಬರ ಮಂದರೋದ್ದರಣಾ | ಧರಣಾಗತ ಕರುಣಾ | ಕರುಣಿಸೋ ನಿರುತರ ಕೌಸ್ತುಭಾಭರಣಾ | ಮೊರೆ ಹೋಗುವೆನು ಶರಣಾ 1 ಮಂಗಳ ಮಹಿಮಶಯನ ಭೂಜಂಗಾ | ಜಂಗಮಾ ಅಂತರಂಗಾ | ರಂಗಾ ಲೀಲಾವಿಗ್ರಹ ತುರಂಗಾ | ವಿಹಂಗ | ಶುಭ ಅಂಗಾ | ಅಂಗಾ ಜಯಸು ಸಂಗಾ | ಸಂಗಾರಹಿತ ದೇವತೆಗಳ ಶೃಂಗಾ ಭವ ಭಂಗಾ 2 ಸುಂದರಿಂದಿರಾ ರಮಣಾನಂದಾ | ನಂದ ಗೋವೃಂದಾ | ವೃಂದಾರ ಕಾದಿಹ ರಕ್ಷಕಚಂದಾ | ಚೆಂದದಿ ಆನಂದಾ | ನಂದಾ ಸುನಂದ ನಮಿತ ಪದದ್ವಂದ್ವಾ | ದ್ವಂದ್ವಾ ಮುಕ್ಕುಂದಾ | ಕುಂದರ ವದನಾ ಗುರುಕೃಷ್ಣನ ಕಂದಾ | ನೊಡೆಯ ಗೋವಿಂದಾ 3 ಅಂಕಿತ-ಗುರುಕೃಷ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೊ ಗೋವಿಂದ ಹೃತ್ಸರೋಜಕ್ಕೆ ಪ ಗಾರ ಗುಣಪೂರ್ಣ ಮಾರಜನಕನೆ ಅ.ಪ ಅಂಡಜವಾಹನ ಬ್ರಹ್ಮಾಂಡ ಗುಣಪೂರ್ಣ ತೊಂಡರ ಪಾಲಿಪೊ ಪುಂಡರೀಕಾಕ್ಷನೆ 1 ತುಂಗವಿಕ್ರಮನೆ ಸಂಗೀತಲೋಲನೆ ಮಂಗಳಮಹಿಮನೆ ಗಂಗೆಯ ಪಿತ ಹರಿ 2 ಸಿರಿ ಸಹಿತ ನಿಲಯನೆ ಶೌರಿ ವಾರಿಜದಳ ನಯನ 3 ವಿಜಯ ರಾಮಚಂದ್ರವಿಠಲರಾಯನೆ ಅಜವಂದಿತ ನಿನ್ನ ಭಜನೆಯ ಪಾಲಿಸೊ 4
--------------
ವಿಜಯ ರಾಮಚಂದ್ರವಿಠಲ
ಬಾರೊ ನೀ ಭಕುತರ ಸುರಧೇನು ಪ ಕರಗಳ ಮುಗಿವೆನು ಅ.ಪ. ಮೂರು ಲೋಕದ ದೊರೆ ನೀನಾಗಿರೆ ನೀರಿನೊಳೀಪರಿಯಾಟವು ತರವೆ ಕೂರುಮ ರೂಪದಾಕಿಟಿ ನರಮೃಗದಾ ಕಾರನೆನುತ ಪರಿಹಾಸವ ಮಾಳ್ಪರು 1 ಪೋರ ನಗುತ ಬಲಿಯನು ವಂಚಿಸಿ ಮೀರಿದ ಕೋಪದಿ ಮಾತೆಯನಿರಿದು ನಾರಿಯ ನೀಗುತ ಮಾವನ ಕೊಂದು ಜಾರಿದ ವಸನದ ರಾಹುತನೆಂಬರು2 ವಾರಿಧಿಯೊಳು ನಿನಗಾಟವು ಸಲ್ಲದು ಕೋರಿದ ಕೊಡುವೆನು ಬಾರೆನ ದೊರೆಯೆ ವಾರಿಜಾಭನೆ ಕರೆ ಕರೆ ಮಾಡದೆ ಶ್ರೀರಂಗೇಶವಿಠಲನೆ ಬೇಗದಿ 3
--------------
ರಂಗೇಶವಿಠಲದಾಸರು
ಬಾರೊ ಭಾಗ್ಯದ ನಿಧಿಯೆ, ದಯಾಂಬುಧಿಯೆ ಪ ಸಾರಿದವರ್ಗಿತ್ತೆ ಸುಧೆವಾರಿಜಾರಿ ಕೌಮುದಿವಾರಿಜಧರ ಮುದದಿಸಾರಸ ಹೃದಯದಿಕೇರಿ ಕೇರಿಯಲಿ ಶೃಂಗಾರದಿ ಮೆರೆವ ಅಪಾರ ದಯಾನಿಧಿ ಅ ಪಾದ ಸಾರಥಿ ಪರ ರವಿಜನ ನೀ ಸೋಲಿಸಿತ್ರಿಜಗ ವಿಜಯ ವೇಷ ವಿಜಯಗಿತ್ತು ಮೆರೆದೆವಿಜಯ ಮೂರುತಿಯೆ 1 ದಶಶಿರ ಸಂಹರದಶರೂಪದಲಿ ಖಳದಶನ ಮೂರುತಿಯೆಂದುಹೆಸರು ಹೇಳುವರು2 ಪದುಮನಾಭ ಪದ್ಮೇಶ ಪದುಮಮಾಲಿ ಪದ್ಮಾಕ್ಷಪದುಮ ಪಾಣಿ ಪದ್ಮಾಂಘ್ರಿ ಪದುಮಸಖ ತೇಜಿಪದುಮ ಕಲ್ಪದಿ ನಾಭಿ ಪದುಮದಿ ಚತುರ್ಮುಖಪದುಮ ಜನ ಪಡೆದು ಪದುಮಜಾಂಡವಡೆದಿಪದುಮ ಪೀಠನ ಹೃತ್ಪದುಮದಿ ನಿನ್ನಪದುಮ ತೋರುತ ಬಾರೊ ಕಾಗಿನೆಲೆಯಾದಿಕೇಶವಹದುಳದಿಂದ ಬಾರೊ ಭಾಗ್ಯದ ನಿಧಿಯೆ 3
--------------
ಕನಕದಾಸ
ಬಾರೋ ಬರೋ ರಂಗಯ್ಯಾ ನೀ ಬಾರೋ | ನಿನ್ನ | ಮೂರುತಿ ಹೃದಯಕ ತಾರೋ ಪ ಬೀರೋ ಬೀರೋ ಕರುಣಾರಸ ಬೀರೋ | ಪದ | ವಾರಿಜ ಶರಣರ ತೋರೋ 1 ಪಥ ಸಾರೋ | ಹಗೆ| ತೀರಿದೆ ಭವಭಯ ಬಾರೋ 2 ಗುರುವರ ಮಹಿಪತಿ ಪ್ರಭು ಬಾರೋ | ಮರಹು | ಹಾರಿಸಿ ಸಲಹುವರಾರೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ಬಾರಿಗೆ ಕರೆವೆ ನಿನ್ನ ಮೋರೆ ತೋರೆಲೋ ಪ ಪುಟ್ಟ ಪಾದವ ಕ್ಷಿತಿಯೊಳಿಟ್ಟು ಮೋದವ ಕೊಟ್ಟು ಭಕ್ತರಿಗೆ ತೋರೋ ಕೃಷ್ಣ ರೂಪವಾ 1 ಸಿಂಧು ಮಥಿಸಿದಿ ಸುಧೆಯ ತಂದು ಬಡಿಸಿದಿ ಕೃಷ್ಣಾಚಂದದಿಂದ ದೇವತೆಗಳ ವೃಂದ ಸಲಹಿದಿ 2 ಇಂದು ವದನನೆ ಶಾಮಸುಂದರಾಂಗನೇಆನಂದದಿಂದ ತೋರೋ ಎನಗೆ ಕುಂಜಹೃದಯನೇ 3 ಇಂದಿರೇಶನೆ ಭವೇಂದ್ರ ವಂದ್ಯನೆ ಕೃಷ್ಣಾ ನಿನ್ನಕಂದನೆಂದು ಕರೆಯೋ ಎನ್ನ ನಂದ ಬಾಲನೇ4
--------------
ಇಂದಿರೇಶರು
ಬಾರೋ ಬಾರೋ ಪ್ರಾಣಕಾಂತ ತೋರೊ ಮುಖವ ನೋಡುವೆ ತೋರಿ ತೋರಿ ನಿನ್ನ ಪದವಾರಿಜವ ನಂಬಿದೆ ಪ ಮಾರ ಎನ್ನ ಘೋರಿಸುತಿರುವನು ಗಾರು ಮಾಡಬೇಡ ಎನ್ನ ಸೇರಿ ಆನಂದ ನೀಡೊ 1 ಕಂತು ಜನಕ ಲಾಲಿಸೊ ಅಂತರಂಗದ ಬಾಧಿಗೆ ನಾ ಚಿಂತೆ ಪಡುತಿರುವೆ 2 ವಾಸುದೇವವಿಠಲ ನಿನ್ನ ದಾಸಿಯಲ್ಲವೆ ನಾನು ಆಶೆಯಿಂದ ಬಂದೆ ಪರಿಹಾಸ ಮಾಡಬೇಡ 3
--------------
ವ್ಯಾಸತತ್ವಜ್ಞದಾಸರು
ಬಾರೋ ಬಾರೋ ಬಾರೋ ರಂಗಾ | ಬಾರೋ ಶುಭಾಂಗಾ| ವರಶೌರಿ ಪರೋಪರಿದೋರ್ವಲೀಲೆ | ವೀರ ದೀರ ಶೂರುದಾರಿ ವಾರಿಜಾರಿ ವಂಶಜಾ ಪ ಉತ್ಸಹದಗೆ ತ್ಯಾವಿನಾ | ವತ್ಸವ ಗಾಯಿದೇ ಪ್ರಾಣಾ | ಪರ ಸಂಹಾರಾ | ಮತ್ಸ್ಯಾವ ತಾರಾ | ಸಿರಿ ವತ್ಸ ಚಿತ್ಸ್ವರೂಪನೇ 1 ಕಾಯಜಕೋಟಿ ಲಾವಣ್ಯಾ | ಕಯಾದು ಸುತಪಾಲನಾ | ತ್ರಯಭುವನ ವ್ಯಾಪಕಾ | ತೃಯಾಕ್ಷ ಸಖಾ | ದಯ ತೋಯಧಿ ಶ್ರೀ ಯದುನಾಯಕನೇ | ತೋಯಜಾಯತಾಕ್ಷಾಕ್ಷಯ ಪಯಧೀಯ ವಾಸನೇ 2 ಮಂದಮತಿಯೆಂದು ನೋಡೋ | ಕುಂದನನಾರಿಸಬ್ಯಾಡೋ | ಬಂದು ಕೊಡೋ ಮಹಿಪತಿಯಾ | ನಂದನ ಪ್ರಿಯಾ | ಎಂದೆಂದಿಗೆ ಸದ್ವಂದ ರಕ್ಷಕ ಶ್ರೀ - ನಂದ ಕಂದ ಇಂದಿರೇಶಾನಂದನೀವಾ ನಂದನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬೇಗನೆ ಶ್ರೀಧರ ಗುಣಾಕರ ಪ ಬಾರೋ ಬೇಗನೆ ಪಾದವಾರಿಜಕೆರಗುವೆ ಚಾರು ಪರಿಯಂಕಕ್ಕೆಅ.ಪ ಶೌರಿ ಅಗ್ರಜನಾಗಿ ಕ್ರೂರರ ಸದೆದು ಭೂ ಭಾರವನಿಳುಹಿದ ಶೌರ್ಯದ ಮಂಚಕೆ1 ರಾಮನ ಶೇವಿಸಿ ಪ್ರೇಮವನು ಪಡೆದಂಥ ಸೌಮಿತ್ರಿಯೆಂಬ ಸುನಾಮದ ಹಾಸಿಗೆಗೆ 2 ಸಾಸಿರವದನದಿ ಶ್ರೀಶನೆ ತವಗುಣ ಲೇಶ ವರ್ಣಿಸುವಂಥ ಭಾಸುರ ತಲ್ಪಕೆ 3 ಇಂದಿರದೇವಿಯು ನಿಂದಿರುವಳು ತವ ಸುಂದರ ಚರಣಾರವಿಂದವ ತೋರಿಸು 4 ಶರಣರ ಪೊರೆವ ಕಾರ್ಪರನರಶಿಂಹನೆ ಹರಗೆ ಭೂಷಣವಾದ ಉರಗಪರ್ಯಂಕಕೆ5
--------------
ಕಾರ್ಪರ ನರಹರಿದಾಸರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾರೋ ವಾರಿಜ ಚರಣಾ ಪ ಭೂರಿ ದುರಿತ ಹರಣಾ 1 ಕ ರುಣಾ 2 ದ್ವಿಜರಾಜ ಕುಲಾಭರಣಾ 3 ಸುರಪಾರಿ ನಂದನನ ಕಾಯಿದೇ ಹರಿಣಾ | ಸುರಪಾದಿ ಮುನಿ ಸ್ಪುರಣಾ 4 ಗುರು ಮಹಿಪತಿ ಸುತ ಪ್ರಭು ಕೇಯೂರಾಭರಣಾ | ಇಹಪರಾನಂದ ಪೂರಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಹೃದಯ ಸದನಾ ಮುಖ್ಯ ಪ್ರಾಣ ಪ ಬಾರೋ ಹೃದಯದೊಳು ವಾರಿಜಾಸನ ಪದಏರುವಾತನೆ ದಿವ್ಯ ಕಾರುಣ್ಯ ಸಾಗರ ಅ.ಪ. ಹರಿಭಕ್ತರೊಳು ನೀನು ಹಿರಿಯನೆಂಬುವ ವಾರ್ತೆಪರಿಪರಿ ಕೇಳುತ ಶರಣು ಬಂದೆನೊ ನಿನ್ನ1 ಮಂದಗಮನೆ ಕೊಟ್ಟ ಇಂದ್ರಮಾಣಿಕ ಮಾಲೆಕಂಧರದೊಳಗಿಟ್ಟ ಇಂದ್ರಶಯನ ಪ್ರೀಯಾ 2 ಕಾಳಿ ರಮಣ ಧರ್ಮನಾಳೆ ಎನಲು ಧನ-ನೀಲ ಮಾಣಿಕ್ಯ ಭೂಷಲೋಲ ಭೂಸುರಗಿತ್ತೆ 3 ಮಾಧವನಾಜ್ಞದಿ ಮೇದಿನಿಯೊಳು ಬಂದುಬಾದರಾಯಣ ಮತ ಸಾಧನೆ ಮಾಡಿದ 4 ಪಾದ ಮುಂದೆ ಸೇವಿಸಿ ನಿತ್ಯಾನಂದತೀರ್ಥರೇ ನೀವು ಸಂದೇಹವಿಲ್ಲದೆ 5
--------------
ಇಂದಿರೇಶರು