ಒಟ್ಟು 2552 ಕಡೆಗಳಲ್ಲಿ , 114 ದಾಸರು , 1940 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ. ಯತಿವರ್ಯ ನಮನ ಮಧ್ವರಾಯರಿಗೆ ನಮೋ ನಮೋ ಗುರು ಮಧ್ವಸಂತತಿಗೆನಮೋ ನಮೋ ಪ ಸಂತತ ಶುಭವಾದೆನುತ ದಾಸಜನರಿಗೇಕ ಚಿತ್ತದಿಂದವಂದಿಸಿ ಬೇಡುವೆ ಅ.ಪ. ಕುಸುಮನಾಭರ ಸಮ ನಾಲ್ವರುಯೆಂದೆನಿಪಹಸನಾದ ಗುರುಗಳ ಸ್ಮರಿಸುತಾನ್ಯಾಯಸುಧಾಕಾರರಿಗೆ ನಮೋ ನಮೋ 1 ರಘುಕುಲನಂದನ ಸುಬ್ರಮಣ್ಯತೀರ್ಥ ಕರದಿ ಪಾಲಿತಗೆಬಿಡದೆ ಬೋಧಿಸಿದ ತಲೆಗೆ ನಮೋ ನಮೋ 2 ರಘೋತ್ತುಮಾಖ್ಯರ ಕಾರುಣ್ಯಪರೆಂದೆನಿಪರಿಗೆಸೂರಿತಾರೇಶ ಜಾತ ವಿಜೇಂದ್ರತನಯನೆನಿಪಶ್ರೀ ಸುಧೀಂದ್ರ ಪೋಷಿತ ಸದ್ಗುರು ರಾಘವೇಂದ್ರತಾತಗೆನಮೋ ನಮೋ 3 ಗುರುಪುರಂದರ ದಾಸರ ಸುಜಾತರ್ಗೆ ನಮೋ ವೈಕುಂಠದಾಸರಿಗೆ ನಮೋ ನಮೋ ಚನ್ನ ಚಿಕ್ಕಬದರಿನಿಲಯನ್ನ ಕಂಡರ್ಗೆ ಕರುಣಾಪಾತ್ರರುಯೆನಿಪವರದಗುರುಗೋಪಾಲ ಸು ಜಗನ್ನಾಥರಾಯರಿಗೆನಮೋ ನಮೋ 4 ತತ್ವಮಸಿ ವ್ಯಾಸ ಶ್ರೀಧರ ಶ್ರೀಗುರು ಶ್ರೀಪತಿ ಪ್ರಾಣೇಶಗುರು ವಿಜಯ ರಾಮಚಂದ್ರದಾಸರಿಗೆ ನಮೋ ನಮೋಬಾದರಾಯಣಗುರು ವೆಂಕಟ ಶ್ರೀನಿವಾಸ ಜಯಜಯೇಶತಂದೆವರದಗೋಪಾಲವಿಠಲನ ದಾಸರಿಗೆ ನಮೋ ನಮೋ5
--------------
ತಂದೆವರದಗೋಪಾಲವಿಠಲರು
ಈ) ರುದ್ರದೇವರು ವೃಷಭನೇರಿದ ವಿಷಧರನ್ಯಾರೆ ಪೇಳಮ್ಮಯ್ಯ ಪ ಹಸುಳೆ ಪಾರ್ವತಿಯ ತಪಸಿಗೆ ಮೆಚ್ಚಿದಜಟಾಮಂಡಲಧಾರಿ ಕಾಣಮ್ಮ ಅ.ಪ. ಕೈಲಾಸಗಿರಿಯ ದೊರೆಯಿವನಮ್ಮ-ಅದು ಅಲ್ಲದೆ ಕೇಳೆಬೈಲು ಸ್ಮಶಾನದಿ ಮನೆಯಿವಗಮ್ಮ-ಸಂಕರ್ಷಣನೆಂದುಕೇಳೆ ಮಹಿಯೊಳು ಜನ ಪೊಗಳುವರಮ್ಮ-ಇದು ನಿಜವಮ್ಮನಾಲಿಗೆ ಸಾಸಿರ ಫಣಿಭೂಷಣ ನಮ್ಮರಮೆಯರಸಗೆ ಇವ ಮೊಮ್ಮಗನಮ್ಮ 1 ಪತಿ ಇವನಮ್ಮ-ಮಾವನ ಯಾಗದಲಿಬ್ಹಾಳ ಕೃತ್ಯಗಳನು ನಡೆಸಿದನಮ್ಮ-ಸಾಗರದಲಿ ಹುಟ್ಟಿದಕಾಳಕೂಟವ ಭಕ್ಷಿಸಿದನಮ್ಮ-ರಾಮನ ದಯವಮ್ಮಮೇಲೆ ಉಳಿಯಲು ಶೇಷಗರಳವುನೀಲಕಂಠನೆಂದೆನಿಸಿದನಮ್ಮ2 ಹರನೊಂದಿಗೆ ವೈಕುಂಠಕೆ ಬರಲು-ತಾತಗೆ ವಂದಿಸುತತರುಣೀರೂಪವ ನೋಡ್ವೆನೆನಲು-ಹರಿ ತಾ ನಸುನಗುತಕರೆದು ಸೈರಿಸಲಾರೆ ನೀ ಎನಲು-ಹಠದಿ ಕುಳ್ಳಿರಲುಕರುಣೆಗಳರಸನು ಹರನ ಮೊಗವ ನೋಡಿಅರುಣೋದಯಕೆ ಬಾರೆಂದು ಕಳುಹಿದ 3 ಅರುಣೋದಯಕೆ ಗಂಗಾಧರ ಬರಲು-ಹದಿನಾರು ವರುಷದ ತರುಣೀರೂಪದಿ ಹರಿ ವನದೊಳಗಿರಲು-ಚರಣನಖಾಗ್ರದಿಧರಣೀ ಬರೆಯುತ್ತ ನಿಂತಿರಲು-ಸೆರಗ ಪಿಡಿಯೆ ಬರಲುಕರದಿ ಶಂಖ ಗದೆ ಚಕ್ರವ ತೋರಲುಹರನು ನಾಚಿ ತಲೆತಗ್ಗಿಸಿ ನಿಂತ4 ಮಂಗಳಾಂಗನೆ ಮಾರಜನಕ-ನಾ ಮಾಡಿದ ತಪ್ಪಹಿಂಗದೆ ಕ್ಷಮಿಸೊ ಯದುಕುಲ ತಿಲಕ-ವಕ್ಷದಲೊಪ್ಪುವ ನಿನ್ನಂಗನೆ ಅರಿಯಳು ನಖಮಹಿಮಾಂಕ-ಹೀಗೆನುತಲಿ ತವಕರಂಗವಿಠಲನ ಪದಂಗಳ ಪಿಡಿದು ಸಾಷ್ಟಾಂಗವೆರಗಿ ಕೈಲಾಸಕೆ ನಡೆದ 5
--------------
ಶ್ರೀಪಾದರಾಜರು
ಈಗಿದ್ದ ಇರವೇ ಮನುಜರಿಗೆ ಈಗಿದ್ದ ಇರವೇ ? ಪ ಮಾಯಾಪ್ರಪÀಂಚದ ಬಲೆಯ ಪಾಶಕ್ಕೆ ಸಿಕ್ಕಿ ಕಾಯದೊಳಿಹ ಪರಮಾತ್ಮನನರಿಯದೆ ಅ.ಪ. ನರರ ಯೋನಿಗೆ ಬಂದು ನಡತೆ ಸಜ್ಜನರೆಂದು ಬರಿಯ ಬನ್ನಣೆಯೊಳು ಬೆರೆತಿಹರಲ್ಲದೆ ಶರೀರ ಸುಖವನ್ನೆಲ್ಲ ಮರೆತು ತನ್ನಾತ್ಮನೊಳಿರುವ ಸುಖವು ತಾನು ಬಯಸಬೇಕಲ್ಲದೆ ಈಗಿದ್ದ 1 ಮಂದಮತಿಗಳಾಗಿ ಮಮತೆಮಾರ್ಗಕೆ ತಾಗಿ ಅಂದಣದೈಶ್ವರ್ಯ ಬಯಸುವವರಲ್ಲದೆ ಹೊಂದಿಸಿ ಸಚ್ಚಿದಾನಂದ ಬ್ರಹ್ಮದಿಮನ ಬಂದಾಗಿ ನಲಿಸಿ ವಿರಕ್ತಿಯ ಬಂದಿಯೊಳ್ಬಲಿಸಿ ನಿಂದು ನಿಜದ ನಿರುಪಮನೆ ನಿತ್ಯಾತ್ಮನೆ ಎಂದು ಕುಂದದೆ ಸಹಜಾನಂದನಾಗದ ಮೇಲೆ ಈಗಿದ್ದ 2 ಪರಮಪುರುಷರಾದ ಪ್ರಹುಢ ಸಂತರ ಪಾದ ಸ್ಮರಣೆಯ ನಿರುತ ಮಾಡಿರಬೇಕಲ್ಲದೆ ಪರತತ್ವಮಯನಾದ ಗುರುಮಹಾರಾಯನ ಕರುಣವ ಪಡೆದು ಕಣ್ಣಿನೊಳು ಶ್ರೀ ಚರಣವ ಪಿಡಿದು ಬರಿಯಮಾತಲ್ಲವೆಂದರಿತು ಪೂರ್ಣ ಬ್ರಹ್ಮ ಗುರುವಿಮಲಾನಂದ ಭರಿತನಾಗದ ಮೇಲೆ ಈಗಿದ್ದ 3
--------------
ಭಟಕಳ ಅಪ್ಪಯ್ಯ
ಈತ ರಂಗನಾದ ಹರಿಯು ಆತ ಲಿಂಗನಾದ ಹರನು ಪ. ಗಿರಿಜಾಪತಿಯಾದನಾತ ಗಿರಿಯ ಬೆನ್ನಲಿ ತಾಳಿದನೀತ ಸ್ಮರನ ಮಡುಹಿದಾತನಾತ ಸ್ಮರನ ಜನಕನಾದನೀತ 1 ಶೇಷಭೂಷಣನಾದನಾತ ಶೇಷಶಾಯಿಯಾದನೀತ ಪೋಷಿಪ ಭಕ್ತರನಾತ ದೋಷದೂರನಾದನೀತ 2 ಕಂಗಳು ಮೂರುಳ್ಳವನಾತ ಮಂಗಳ ದೇವೇಶನೀತ ತುಂಗ ಹೆಳವನಕಟ್ಟೆ ರಂಗನೀತ ಲಿಂಗನಾತ 3
--------------
ಹೆಳವನಕಟ್ಟೆ ಗಿರಿಯಮ್ಮ
ಈತನೆಂಥಮಹಿಮೆ ನೊಡಿರೆ ರಂಗಯ್ಯ ರಂಗ ಈತನೆಂಥ ಮಹಿಮ ನೋಡಿರೆ ಪ ಈತನೆಂಥ ಮಹಿಮ ಓರ್ವ ಮಾತೆಯುದರದಿ ಜನಿಸಿ ಮತ್ತೊಬ್ಬ ಮಾತೆಕೈಯಿಂದ ಬೆಳೆದು ಗೋಕುಲ ನಾಥ ನವನೀತಚೋರನೆನಿಸಿದ ಅ.ಪ ಕಾಳಕೂಟ ವಿಷವ ಕುಡಿಸಿದ ಆ ಮಾಯದೈತ್ಯಳ ಕಾಲನ ಆಲಯಕೆ ಕಳುಹಿದ ಮಡುವನ್ನು ಧುಮುಕಿ ಕಾಳಿ ಹೆಡೆಮೆಟ್ಟಿ ನಾಟ್ಯವಾಡಿದ ಗೋವುಗಳ ಕಾಯ್ದ ಬಾಲನೆಂದೆತ್ತೊಯ್ಯಲು ಬಂದ ಖೂಳ ಶಕಟನ ಸೀಳಿ ಒಗೆದು ಕಾಳಗದಿ ಧೇನುಕನ ತುಳಿದು ಬಾಲಲೀಲೆಯ ತೋರಿ ಮೆರೆದ 1 ಪರಿಪರಿಯ ಮಾಯದಿಂ ಕಾಡ್ವ ಭೂಭಾರಿಯಾಗಿ ಧರಣಿಜನರತಿಶಯದಿ ಬಳಲಿಸುವ ಪರಮಕಂಟಕ ದುರುಳ ಕಂಸನೆಂಬುವನ ಶಿರವ ತರಿದ ಮಾಧವ ಧರಣಿತಾಪವನ್ನೆ ಕಳೆದು ಸೆರೆಯ ಬಿಡಿಸಿದ ಜನನಿ ಜನಕರ ಮಹಿಮೆ ತೋರ್ದ 2 ಗೊಲ್ಲ ಬಾಲರ ಸಮೂಹವನು ನೆರೆಸಿ ಮನೆಯಲ್ಲಿ ಯಾರು ಇಲ್ಲದ ಸಮಯವನೆ ಸಾಧಿಸಿ ಮೆಲ್ಲಮೆಲ್ಲನೆ ಎಲ್ಲ ಬಾಲರ ಒಳಗೆ ತಾ ಹೊಗಿಸಿ ಪಾಲ್ಮೊಸರು ಸವಿಸಿ ಕಳ್ಳ ಕೃಷ್ಣೆಮ್ಮ ನಿಲ್ಲಗೊಡನೆಂದು ಗೊಲ್ಲಸ್ತ್ರೀಯರು ಗುಲ್ಲುಮಾಡಲು ನಿಲ್ಲದೋಡಿ ತಾ ಪುಲ್ಲನಾಭನು ಎಲ್ಲಿ ನೋಡಿದರಲ್ಲೆ ತೋರುವ 3 ಶಿಶುವು ಈತನೆಂದು ಮುದ್ದಿಸುವಾಗ ಕುಶಲದಿಂದಪ್ಪಿ ಅಧರ ಸವಿಯುವ ಎಂಥ ಶಿಶುವನೆ ಹಸುಮಗಾಗೆಳೆದೊಯ್ದು ರಮಿಸುವ ಮಿಸುಗಗೊಡನಿವ ಕಸಿದು ಭಾಂಡ ದೆಸೆದೆಸೆಗೆ ಎಳೆದು ವಸುಧೆಯೊಳು ತನ್ನ ಅಸಮ ಮಹಿಮೆಯ ಪಸರಿಸಿದ ಹರಿ4 ಮಣ್ಣು ತಿಂದು ತಾಯ ಬಳಿಗೈದಕಂದ ಏನಿದು ಮಣ್ಣು ತಿನ್ವರೆ ಉಗುಳೆಂದೆಶೋದೆ ಕಣ್ಣು ತಿರುವÀಲು ತನ್ನ ಬಾಯೊಳ್ಬ್ರಹಾಂಡ ತೋರಿದ ಭಿನ್ನವಿಲ್ಲದ ತನ್ನ ತಾನು ಅರಿಯದೆಶೋದಿನ್ನು ಈರೂಪವಡಗಿಸೆನ್ನಲು ಸಣ್ಣಮಗುವಾಗಿ ಚಿಣುಫಣುವಿಡಿದುನ್ನ - ತೋನ್ನತ ಆಟವಾಡಿದ 5 ಪರಿಪರಿಯಲಿ ಕಾಡ್ವ ಕೃಷ್ಣನ್ನ ವರದೇವಿ ತಡೆಯದೆ ಸರವೆನಡುವಿಗ್ಹಚ್ಚಿ ತರಳನ್ನ ಸರಸರನೆ ಬಿಗಿದು ಒರಳಿಗ್ಹಾಕಿ ಕಟ್ಟಿ ಮುರಹರನ ಮರೆಯಾಗಲಾಕ್ಷಣ ಊರುತಂಬೆಗಾಲು ಊರಬೀದಿಲಿ ಒರಳನೆಳೆಯುತ ಹೊರಗೆ ಹೋಗಿ ತರಗುಳಿರಕಿಲದೊರಳ ಸೇರಿಸಿ ಮುರಿದು ಶಾಪದಿಂ ಮುಕ್ತಮಾಡಿದ 6 ಪುಂಡತನದಿಂ ಸೊಕ್ಕಿಮರೆಯುವ ಆ ರುಗ್ಮನಿಡಿಕೈಯ ಬಂಡಿಗಾಲಿಗೆ ಕಟ್ಟಿ ಶ್ರೀಧರ ರುಗ್ಮಿಣಿಯನ್ನು ಕೊಂಡು ಗೋಕುಲ ಸೇರಿ ವೈಭವ ನಡೆಸಿ ಯಾದವ ರ್ಹಿಂಡಲಿಗೂಡಿಸಿ ಪುಂಡದೇವಿಯುದ್ದಂಡತನದಿ ಕೈ ಕೊಂಡ ಕಲ್ಯಾಣ ಗಂಡುಗಲಿಗಳ ಗಂಡನೆನಿಸಿದ ಹಿಂಡುದೇವರ ಸಾರ್ವಭೌಮ 7 ಚರಣದಾಸರ ಒಡೆಯ ತಾನಾದ ವರ್ಣಿಸಲಳವಲ್ಲ ಚರಣದಾಸರ ದಾಸನೆನಿಸಿದ ಪುಸಿಯಲ್ಲ ಕೇಳಿರಿ ನರನ ಕುದುರೆಯ ವಾಘೆಯನು ಪಿಡುದು ರಥವ ನಡೆಸಿದ ಕರೆಯಲೋಡಿದ ಸರಸಿಯಲ್ಲಿಗೆ ಭರದಿ ಒದಗಿದ ಕುರುಪಸಭೆಯಲ್ಲಿ ಪರಮ ನಿಗಮಗಳ್ಗಿರುವನಗೋಚರ ಸ್ಮರಿಸಿದವರಿಗೆ ಭರದಿ ನೆರವಾದ 8 ತಾಳಿಬಂದ ನಾರಾಯಣಾವತಾರ ಪಾಲಿಸಲು ಜಗವಂ ಬಾಲಗೋಪಾಲ ಭಕ್ತರಾಧಾರ ಗೊಲ್ಲನೆನಿಸಿ ಲೀಲೆನಡೆಸಿದ ಶಾಮಸುಂದರ ಭವಜಾಲಪರಿಹರ ಕಾಳರಕ್ಕಸರೊಳು ಕಾದಿ ನಿರ್ಮೂಲಮಾಡಿ ಜಗಪಾಲಿಸಿದ ತ್ರಿ ಜಾನಕಿಲೋಲ ಶ್ರೀರಾಮ 9
--------------
ರಾಮದಾಸರು
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ ಪ ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ1 ಕಲುಷ ಮಾಧವ 2 ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ 3 ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ 4 ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ 5 ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಮಾಡಿಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ 6 ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ 7 ಸದನ ಮಾಡು ಮುದದಿ ಶ್ರೀಧರ 8 ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ 9 ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ10 ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ 11 ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ12 ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ 13 ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ 14 ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ 15 ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ಚರಣದಲ್ಲಿ ಕ್ಷೇಮ ಪುರುಷೋತ್ತಮ 16 ಅಧೋಕ್ಷಜ 17 ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ 18 ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ19 ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ 20 ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ 21 ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ22 ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ23 ಸತ್ಯವಾದ ನಾಮಗಳನು ನಿತ್ಯದಲ್ಲಿ ಪಠಿಸುವವರಅರ್ತಿಯಿಂದ ಕಾಯದಿರನು ಕರ್ತೃ ಕೇಶವ 24 ಮರೆತು ಬಿಡದೆ ಹರಿಯ ನಾಮ ಬರೆದು ಓದಿ ಕೇಳುವರಿಗೆಕರೆದು ಮುಕ್ತಿ ಕೊಡುವ ಬಾಡದಾದಿಕೇಶವ 25
--------------
ಕನಕದಾಸ
ಉ. ತತ್ವ ವಿವೇಚನೆ ಹರಿಯಾದರೇನು ತಾ ಹರನಾದರೇನು ಮೂರ್ತಿ ದೊರಕಿ ಫಲವೇನು ಪ ಪಿತನೊಳಗೆ ಸೇರದಿಹ ಸುತನಿಂದ ಫಲವೇನು ಸತಿ ಇದ್ದರೇನು ಮತಿಹೀನ ಗುರು ತಾನು ಜೊತೆಯಾಗಿ ಇದ್ದರೇನು ಮತ ಮೀರಿ ನಡೆವಾತ ಯತಿಯಾದರೇನು 1 ಸಾಯವಿಲ್ಲದ ನ್ಯಾಯ ಸತ್ಯವಾದರೆ ಏನು ಬಾಯಸವಿಯಿಲ್ಲದ ರಸಾಯನದಲೇನು ಕಾಯ ಕುಂದಿದ ಮೇಲೆ ಜೀವದಾಶೆಯದೇನು ಮಾಯವಾದಿಯ ಮಾತು ಮತ್ತೆ ದೃಢವೇನು 2 ಋಣವ ಮಾಡಿದ ತಾತ ಗುಣವಂತನಾದರೇನು ಭಣಿತೆ ತಪ್ಪಿದ ತಾಯಿ ರಕ್ಷಿಣಿಯು ಆದರೇನು ಎಣಿಕೆ ಬಾರದ ಮನುಜ ಕರಣಿಕನಾದರೇನು ಫಣಿರಾಜನೊತ್ತಿನೊಳು ಹಣವಿದ್ದರೇನು 3 ವಿಪ್ರ ವೇದ ಓದಿದರೇನು ಮಾದಿಗನು ತಾ ಮಡಿಯನುಟ್ಟರೇನು ಬೂದಿಮುಚ್ಚಿದೆ ಕೆಂಡವಾದ ಸೋದರವೇನು ಸಾಧಿಸುವ ಊರೊಳಗೆ ಆದ ಫಲವೇನು 4 ಹರಿಯನರ್ಚಿಸದಿರ್ದ ಕರವಿರ್ದು ಫಲವೇನು ಹರಿಯ ಸ್ಮರಣೆಯ ಮಾಡದರಿಯದವನೇನು ಸಿರಿಯು ನಿಲ್ಲದ ಗೃಹದ ಪರಿಯ ಸೌಖ್ಯವದೇನು ಮರೆಯಾದ ಮನುಜನೊಳು ವ್ಯವಹಾರವೇನು 5 ವಾರಿಯಿಲ್ಲದ ಊರ ಸೇರಿರ್ದು ಫಲವೇನು ಚೋರನೊಡನೇ ದಾರಿ ನಡೆವುದೇನು ಬೇರು ಇಲ್ಲದ ವೃಕ್ಷ ಏರಿ ನೋಡುವುದೇನು ಮಾರಿ ಮನೆಯೊಳಗಿರಲು ಸಾಕಾರವೇನು 6 ಲಕ್ಷಣದ ಮೂರ್ತಿಯಿರಲಕ್ಷಯವ ತೋರುವುದು ಪಕ್ಷಿವಾಹನ ಲಕ್ಷ್ಮ್ಯಪೇಕ್ಷೆಯಾಗಿಹರು ಲಕ್ಷಣವಿರಹಿತ ನರ ಪ್ರದಕ್ಷಿಣದಿ ಬಳಲಿದರು ಭಿಕ್ಷುಕನೇ ಸರಿಯಾತನೀಕ್ಷಿಸರು ಜನರು 7 ಬುದ್ದಿವಂತರ ಕೈಯ ಶುದ್ಧವಾದೆರಕದಲಿ ತಿದ್ದಿರ್ದ ಮೂರ್ತಿಯನು ಕದ್ದುಕೊಂಡು ಹೊದ್ದಿ ಬಲವಂತನೊಳು ಬದ್ದವಾಗಿರುತಿರ್ದು ಎದ್ದು ಹೋಗದ ಸ್ಥಳದಿ ಮುದ್ದನಾಗಿಹುದು 8 ಕಾಮಿತಾರ್ಥನೀವ ಸೀಮೆಯಲಿ ಕೌರವನು ರಾಮರಾಜ್ಯದಿ ಬೇಡಿಕೊಳಲು ಕೊಡುತಿಹನು ಪ್ರೇಮದೊಳು ವರಾಹತಿಮ್ಮಪ್ಪ ಮನದಣಿಯೆ ಸೌಮನಸ್ಯವೀವ ಬರಿದೆ ಬಳಲದಿರು 9
--------------
ವರಹತಿಮ್ಮಪ್ಪ
ಉಗಾಭೋಗ ಪರಮಪುರುಷ ಕೇಳು ಒರೆದ ಮಾತಿಗೆ ನಾನು ನೆರೆ ತಪ್ಪುವನಲ್ಲ ವಂಚನೆ ಲೇಶವಿಲ್ಲ ಉರುದೈವ ವ್ಯಾಪಾರಕ್ಕೇನ ಮಾಡಲಿ ನಾನು ಸರ್ವವು ನಿನಗೆಂದು ಒಪ್ಪಿಸಿಹೆನಲ್ಲ ನರಕವಾಸಕೆ ನಾನು ಅಂಜÀುವನಲ್ಲವು ಮರಣಪಾಶಕೆಯಿನ್ನು ಅಂಜುವ ನಾನಲ್ಲ ಸರ್ವಸ್ವ ಹೋದರೂ ಚಿಂತೆ ಎನಗಿಲ್ಲ ಥರಥರ ಅಂಜುವೆ ನೊಂದೆ ವಿಷಯಕ್ಕೆ ಅರಿಯಲು ಅನೃತಕ್ಕೆ ಅಂಜುವೆ ನಾನಿನ್ನು ಸಿರಿ ಪರಾಕ್ರಮ ಶೌರ್ಯ ಇವುಗಳಿಂದಲಿ ಕೂಡಿ ಗರುವಪಡುತ ನಾನು ಮದಾಂಧನಾಗಿದ್ದೆ ಉರು ಶಿಕ್ಷೆ ಎನಗಿತ್ತು ಉದ್ಧಾರ ಮಾಡಿದೆ ಕುರುಡಗೆ ನೇತ್ರವು ದೊರೆತಂತೆ ಆಯಿತು ಪರಮ ಭಕ್ತನು ಆತನೆ ಪ್ರಹ್ಲಾದನು ಪರಿ ಪೀಡೆಗೆ ಗುರಿಯಾಗಿದ್ದರು ನಿನ್ನ ಸ್ಮರಿಸಿ ತಾನುತ್ತಮ ಗತಿಯನ್ನು ಪಡೆದನು ಸಿರಿಮದ ಕಳೆದೆನ್ನುನುದ್ಧಾರ ಮಾಡಿದೆ ಪರಮಪುರುಷ ನಿನಗೆ ಪ್ರಣಾಮ ಮಾಡುವೆ ಕರಿಗಿರೀಶನೆ ಕರುಣಿ ಕಾಯಬೇಕೆನ್ನನು
--------------
ವರಾವಾಣಿರಾಮರಾಯದಾಸರು
ಉಡುಪಿಯ ಶ್ರೀಕೃಷ್ಣ ನುಡಿಯ ಲಾಲಿಸು ಮಾಧವ ನುಡಿಯ ಲಾಲಿಸು ಪಾಲಕಡಲಶಯನ ದೇವ ಕಡಗೋಲ ಪಿಡಿದ ನಮ್ಮುಡುಪಿಯ ಶ್ರೀಕೃಷ್ಣ ಪ. ಮಾನವ ಮದವನ್ನು ಮಸರಂತೆ ಮಥಿಸಿದ ಭಾವನ ತೋರುವಿಯೊ ಹಾಗಲ್ಲದಿದ್ದರೆ ದೇವತಗಳಿಗಮೃತವನುಣಿಸಿದನೆಂಬ ಸೋವನು ಸೂಚಿಪೆಯೊ ಸೌಭಾಗ್ಯ ಸಿರಿಯೊ ಸೇವಕರ ಸೇವಾನುಗುಣಫಲ ನೀವ ತರತಮ ಭಾವವೊ ಭವ ನಾವ ನಡೆಸುವ ನಿಪುಣತೆಯೊ ದುರಿ ತಾವಳಿಯ ದೂರೋಡಿಸುವೆಯೊ1 ಕಲಿಯ ಬಲದಿ ಜ್ಞಾನಕಲೆಯಡಗಲು ದೇವ- ರ್ಕಳು ಬಂದು ಸ್ತುತಿಸಲಂದು ಸಕಲಸುರ ತಿಲಕ ವಾಯುವಿನ ಭೂವಲಯದೊಳವ- ಗೊಳುವರೆ ಪೇಳ್ವೆನೆಂದು ನೀ ಮನಕೆ ತಂದು ಹಲವು ಭವದಲಿ ಭಜಿಪೆ ಸಜ್ಜನ ಕುಲಕೆ ಮೋಕ್ಷಾಂತದ ಚತುರ್ವಿಧ ಫಲವ ನೀಡುವೆನೆಂದು ಪವನನಿ- ಗೊಲಿದು ಬಂದೀ ನಿಲಯದೊಳಗಿಹೆ 2 ಸರ್ವಜ್ಞ ಮುನಿಕೃತ ಸಕಲ ಪೂಜೆಗಳನ್ನು ನಿವ್ರ್ಯಾಜದಲಿ ಕೊಳ್ಳುತ ನಿರ್ವಾಹಗೊಳುತ ದುರ್ವಾದಿಪಟಲಾದ್ರಿ ಗರ್ವಾಪಹರ ಶತ ಪರ್ವ ಶಾಸ್ತ್ರವ ಕೇಳುತ ಸಂತೋಷಪಡುತಾ ಪೂರ್ವಸುಪರ್ವ ರಿಪುಗಳ ನಿರ್ವಿಯೊಳಗಡಿಯಿಡಗೊಡದ ಸುರ ಸಾರ್ವಭೌಮ ಶುಭೋನ್ನತಿ ಪ್ರದ 3 ಶ್ರೀನಿಕೇತನ ಸರ್ವ ಪುರುಷಾರ್ಥದಾಯಿಯೆ ನೀನೆಲ್ಲೆ ನೆಲೆಯದೋರಿ ಇರಲಿನ್ನು ಭಜಿಸದೆ ನಾನಾ ದೈವಗಳ ಸೇರಿ ಹಲ್ಲುಗಳ ತೋರಿ ಏನನುಸುರುವೆ ಕೃಷ್ಣ ಬುದ್ಧಿ ವಿ- ಹೀನತೆಯನದನೊ ಮಾನಿಸೆನ್ನ ಕಡಪಾನಿಧಿಯೆ ಪವ- ಪಾದ ಪಲ್ಲವ 4 ದ್ವಾರಾವತಿಯೊಳು ಸಂಸಾರಿ ಭಾವವನೆಲ್ಲ ತೋರಿದ ಕಾರಣದಿ ಅಲ್ಲಿಂದ ಭರದೀ ವಾರುಧಿ ಮಾರ್ಗದ ಸ್ವಾರಿಯ ನೆವನದಿ ಪಾರಿವ್ರಾಜರ ಸೇರಿದಿ ತದ್ಭಕ್ತಿಗೊಲಿದಿ ದೂರ ಭಯದಲಿ ವೆಂಕಟಾದ್ರಿಗೆ ಬಾರದಿಹ ಸಜ್ಜನರ ಮೇಲ್ಕರು- ಣಾರಸಾಮೃತ ಸೂಸುತ್ತಿಲ್ಲಿ ಸರೋರುಹಸ್ಮಿತ ಮುಖ ತೋರುವಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಉತ್ತೀರ್ಣವಾಗಲರಿಯರು | ತಮ್ಮ | ನಿತ್ಯನಿಂದಕ ದುರ್ಜನರಿಗೆ ಸುಜನರು ಪ ಕೂಲಿಯ ಕೊಂಡು ವಸ್ತ್ರಂಗಳ ರಜಕನು | ಇಳಯೊಳು ವಗೆವನು ಕೈಗಳಿಂದಲ್ಲದೇ | ಮಲಿನವಗುಣ ಮೈಲಿಗೆ ಕಾಸು ಕೊಳದೇ | ಚಲಿಸದೆ ನಾಲಿಗೆಯಿಂದ ತೊಳೆವರಾಗಿ 1 ತ್ರಯದ ಬಾಡಿಗಿಕೊಂಡು ಹೆಚ್ಚುಗಂಟವ ಕೊಳ್ಳ | ವೈವನು ಹೆಜ್ಜೆಯ ಪಯಣದ ಮುಂದಕ | ನಯದಿಂದಿವರ ನಿಂದೆ ದೋಷ ಭಾರವ ಹೊತ್ತು | ಭಯವಹಾನಂತ ಜನ್ಮವ ಸೋಸುವರಾಗಿ 2 ಧರೆಯೊಳು ತಮ್ಮನ್ನ ತಾ ಉಂಡು ಬುಧರಿಗೆ | ಪರಮಸುಖವ ಕೊಟ್ಟು ದುಃಖವ ಕೊಂಬರು | ಗುರು ಮಹಿಪತಿಸುತ ಪ್ರಭು ಸ್ಮರಣೆಯನು ಬಿಟ್ಟು | ಇರಳ್ಹಗಲುದ್ಯೋಗ ಇದೇ ಮಾಡುವರಾಗಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉದಯ ಕಾಲವದಗಿತೀಗಲೂ ನಿನ್ನಿನ್ನಂತೆ ರವಿ ಪಪದುಮನಾಭನ ಸ್ಮರಿಸುತ ಮೋ-ದದಿಯಾನ್ಹೀಕ ಬುಧರು ಮಾಳ್ಪ ಅ.ಪಅಪರಾತ್ರಿಯಲ್ಲಿ ಎದ್ದುಚಪಲಚಿತ್ತರಾಗದಲೆ ಸು-ರಪನ ದೆಸೆಯ ನೋಡಿ ನಮಿಸಿಸುಫಲಗಳನು ಪಡೆಯುವರಿಗೆ 1 ಕಣ್ಣುತೆರೆದು ಕೈಗಳುಜ್ಜಿ ಕನ್ನಡಿಯನು ನೋಡಿ ಶೌಚ ವನ್ನು ತೀರಿಸಿ ಸ್ನಾನ ಸಂಧೆÀ್ಯಗ- ಳನ್ನು ಮಾಳ್ಪ ಸದ್ವಿಜರಿಗೆ2 ಬ್ರಂಹ್ಮಯಜ್ಞ ಜಪವು ಮುಖ್ಯ ಕರ್ಮಗಳಿಂ ಸವಿತೃನಾಮಕ ಒಮ್ಮನದಲಿ ಧ್ಯಾನಿಸುವರಿಗೆ 3
--------------
ಗುರುರಾಮವಿಠಲ
ಉದಯದಲೆದ್ದು ಶ್ರೀಹರಿಯ ನಾಮಂಗಳನು | ವದನದಿಂದುಚ್ಚರಿಸಿ ಪಾಡುವ ನರರು ದುರಿ | ಮುದದಿಸದಮಲಾನಂದ ಸುಖವ ಪ ಕೃಷ್ಣ ಕಮಲೇಶ ಕಂಜಾಕ್ಷ ಕರುಣಾಬ್ಧಿ ಶ್ರೀ | ವಿಷ್ಣು ವಿರಂಚಿಪಿತ ವಿಮಲ ವಿಶ್ವೇಶ ಭ್ರಾ | ತುಷ್ಣಿಕರ ಕೋಟಿತೇಜಾ || ವೃಷ್ಣಿ ಕುಲತಿಲಕ ವೃಂದಾವನ ವಿಹಾರಿ ಗೃಹ | ಜಿಷ್ಣು ಸುರಸೇವೆ ಸಜ್ಜನ ಪ್ರಿಯ ಸರ್ವೇಶನ | ಅಭಿಮಾನಿ ಎಂದು1 ಪರಮ ಪುರುಷೋತ್ತಮ ಪರಂಧಾಮ ಪರಬ್ರಹ್ಮ | ಪರಮಾತ್ಮ ಪರಂಜ್ಯೋತಿ ಪರತರಾನಂದ ಗುಣ ಪರಿಪೂರ್ಣ | ಪದ್ಮನಾಭ | ಮುರಮಥನ ಮದನಮೋಹನ ಮುರಲಿಲೋಲ ಮಧು | ಹರಹಲಾಯುಧ ಹಯವದನ ಸ್ಮರಹರಾರ್ಚಿತ | ಚರಣ ಸಚರಾಚರ ವ್ಯಾಪ್ತ ಚಿದ್ವನರೂಪ ಚಾರುಚರಿತ ಚಲರದಹಿತನೆಂದು 2 ಕಾಮಜಿತರೂಪ ಕೌಸ್ತುಭಧಾರಿ ತ್ರಿ | ಧಾಮ ತ್ರಿವಿಕ್ರಮ ತ್ರಿಕಾಲಙ್ಞ ತ್ರಿಜಗನುತ | ಹರಣ || ಶುಭ | ನಾಮ ನಾರದ ಪ್ರಿಯ ನಾರಾಯಣ ಜನಕ | ಕಾಮಪೂರಿತನೆಂದ 3 ಅನಿರುದ್ಧ ಧೋ ಕ್ಷಜಾಕ್ಷರತೀತಕ್ಷಯ ಗದಾಂ | ಪವನಜ ಪ್ರಿಯ ನರಕಾಂತಕಾ | ಗಜಗತಿಪ್ರದ ಗರುಡಗಮನ ಗೋವಿಂದ ಗೊ | ವ್ರಜಪಾಲ ವನಮಾಲಿ ವಸುದೇವಸುತ ಶಾರಂಗಿ | ಕುಜಹರ ಕಿರೀಟಧರ ಜಂಭಾರಿಧೃತ ಚತುರ್ಭುಜ ಭುವನ ಭರಿತನೆಂದು4 ಶ್ರೀರಂಗ ಮುನಿಸಂಗ ಸುರತುಂಗ ಗೋಪಾಂಗ | ನಾರಿಮಣಿ ನೀಲಾಂಗ ಕಾಳಿಂಗ ಮದಭಂಗ | ಸಹಕಾರನೆಂದು | ನೂರೆಂಟು ನಾಮಾವಳಿಯ ರತ್ನಮಾಲಿಕೆಯ | ನಾರುಧರಿಸುವರವರ ಇಷ್ಟಾರ್ಥಗಳ ಕೊಟ್ಟು | ಸಹಕಾರ ನಿಜಪದವಿತ್ತು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉದಯವಾಯಿತು ಹೃದಯ ಕಮಲದೊಳಗೆ ಧ್ರುವ ಗುರುಕರುಣಾನಂದಬೋಧ ಅರುಣೋದಯವಾಯಿತು ಸ್ಮರಣಿಗರವು ದೊರೆಯಿತು ಹರಿಯ ಚರಣದ 1 ಸಮ್ಯಜ್ಞಾನದ ಪ್ರಭೆ ಸಮ್ಯವಾಗಿದೋರಿತು ತಾಮಸನಿದ್ರೆ ಹರಿಯಿತು ತಿಮಿರಾಂಧದ 2 ಥಳಥಳಿಸುವ ರವಿಕೋಟಿ ಬೆಳಗಾಯಿತು ಹೊಳೆಯುತ ತೇಜೋನ್ಮಯವು ಒಳಗೊರಗೆಲ್ಲ 3 ಒದಗಿ ಬಂತೆದುರಿಟ್ಟು ಮೊದಲೆ ಪುಣ್ಯದ ಘಲ ಉದಯವಾಯಿತದೃಷ್ಟವು ಸದೃಷ್ಟವಾಗಿ 4 ಸದ್ಗತಿ ಸುಖವಿದು ಸದೋದಿತವಾಯಿತು ಸಾಧಿಸಿ ಮಹಿಪತಿಗೆ ಸದ್ಗರು ಕೃಪೆಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉದಯಾದ್ರೀಶ ವಿಠಲ ಮುದವನಿತ್ತವನೀಗೆಉದ್ಧರಿಸ ಬೇಕೆಂದು ಪ್ರಾಥಿಸುವೆ ಹರಿಯೇ ಪ ಸದಯ ನೀನಿರೆದೇವ ಸಂಸ್ಕøತಿಯ ಶೃಂಖಲೆಗೆಬೆದರಿಕಿಲ್ಲವೊ ಇವಗೆ ನರಹರಿಯೆ ಸ್ವಾಮಿಅ.ಪ. ಸ್ವಾಪದಲಿ ನಭದಲ್ಲಿ ರೂಪವನೆ ತೋರಿದ ಯೊಪಯೋನಿಧಿಯಾಗಿ ಮೆರೆವೆ ವೆಂಕಟೇಶ |ಆಪಯೋಜಾಸನ ವಿಷಾದ್ಯರಿಗೆ ನಿಲುಕದಅಪಾರ ತವಮಹಿಮೆ ನಾ ಪೇಳಲೊಶವೇ 1 ಸಾರನಿಸ್ಸಾರವೆನೆ ಜಗದೊಳಗೆ ನೀನೊಬ್ಬಸಾರತಮನೆಂದೆಂಬ ಪಾರಮಾರ್ಥಿಕವ |ತಾರತಮ್ಯ ಜ್ಞಾನ ಮೂರೆರಡು ಭೇಧಗಳಸಾರವನೆ ತಿಳಿಸಿ ಸಂಸಾರ ನಿಧಿ ದಾಟಿಸೋ 2 ಗರ್ವರಹಿತನು ಇವಗೆ ಕವನ ಶಕ್ತಿಯನಿತ್ತುಸರ್ವತ್ರ ಸರ್ವದಾ ಸರ್ವಕಾರ್ಯಗಳಲ್ಲಿಸರ್ವೇಶ ತವನಾಮ ಸ್ಮøತಿಯನ್ನೆ ಕರುಣಿಸುತದರ್ವಿ ಜೀವನಕಾಯೊ ಸರ್ವಾಂತರಾತ್ಮಾ 3 ಶ್ರೀದ ಶ್ರೀ ವೆಂಕಟನ ನೋಡಿದೆ ಎಂಬಂಥಮೋದದಾಯಕ ಪದವು ಉದಯ ವಿಠಲಾಂಕಿತವಾದಿರಾಜರ ಶಿಷ್ಯ ಪಾಡಿ ಪೂರೈಸುತಿರೆನೀದಯದಿ ತವರೂಪ ತೋರ್ದುದನು ಮರೆ ಮಾಡಿದೆ4 ಪಾವಮಾನಿಯ ಪ್ರೀಯ ಭಾವುಕರ ಪರಿಪಾಲಗೋವತ್ಸ ಧ್ವನಿ ಕೇಳಿ ಧಾವಿಸೀ ಬರುವಂತೆತೀವ್ರುಪಾಸನೆ ಇತ್ತು ಇವನ ಹೃತ್ಕಂಜದಲಿದೇವ ಗುರು ಗೋವಿಂದ ವಿಠಲ ತವರೂಪ ತೋರೊ5
--------------
ಗುರುಗೋವಿಂದವಿಠಲರು
ಉದರ ಪೂರ್ತಿಯ ಕೊಡದಿರು ಉದಧಿಶಯನ ಪ ಮುದದಿ ನಿನ್ನನು ನೆನೆದು ಮಲಗುವೆನೊ ಸುಖದಿ ಅ.ಪ ಮುದದಿ ನಿನ್ನ ಚರಣವನು ಸ್ಮರಿಸುವುದು | ಪರಿಹಾರವು ಬಹು ಗರ್ವ ಹೆಚ್ಚುವುದು ಎನಗೆ | ಅರವಿಂದನಾಭ ಹರಿ ವರವಿದೆ ನಿನ್ನ ಕೇಳ್ವೆ | ಪರಿಹಾಸ್ಯ ನುಡಿಯಲ್ಲ ಪರಮ ಪಾವನಗೆ 1 ತನುಮನವು ನಿನ್ನ ವಿಷಯಕ್ಕೆರಗಲಿ | ಅನುಮಾನವಿದ್ದ ಪರಿಯೆಲ್ಲ ತೊಲಗಿ || ವನಜಸಂಭವನೈಯ್ಯ ವೈಕುಂಠಪತಿ ನಿನಗೆ | ಅನವರತ ದೊರೆ ಎಂಬೊ | ಘನತೆ ತಪ್ಪದೆ ಇರಲಿ2 ಗಜಮದದಿ ಕಂಗೆಟ್ಟ ಪರಿಯನ್ನ ಮಾಡದೇ | ಅಜಮಿಳಗೆ ಒಲಿದಂತೆ ಎನಗೆ ವೊಲಿದೂ || ಸುಜನ ರಕ್ಷಕನೆಂಬೊ ಬಿರುದು ಬೇಕಾದರೆ | ನಿಜವಾಗಿ ದಯಮಾಡೊ ವಿಜಯವಿಠ್ಠಲನೇ3
--------------
ವಿಜಯದಾಸ