ಒಟ್ಟು 3125 ಕಡೆಗಳಲ್ಲಿ , 116 ದಾಸರು , 2227 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುಮಾನ ಆರದು ಇನ್ನ್ಯಾಕೆಹರಿನಾಮದ ಬಲವೊಂದಿರಲಿಕ್ಕೆ ಪಸ್ವಾಮಿಮಾಧವನ ಪ್ರೇಮಪಡೆದು ಮಹನಾಮಮೃತದ ಸವಿಯುತಲಿರುವರ್ಗೆ ಅ.ಪರೊಚ್ಚಿಗೆದ್ದು ಮಾಡುವುದೇನೋ ಜನಸ್ವಚ್ಛದಿ ಒಡಗೂಡಿದರೇನೋಮೆಚ್ಚಿ ಕೊಡುವಫಲ ಇವರೇನೋ ಅತಿಹುಚ್ಚ ನೆಂದರಾಗುವುದೇನೋನಿಶ್ಚಲಚಿತ್ತದಿ ಅಚ್ಯುತಾನಂತನಬಚ್ಚಿಟ್ಟು ಮನದೊಳು ಉಚ್ಚರಿಸುವರಿಗೆ 1ಸತಿಸುತರಿವರಿಂದ್ಹಿತವೇನೊ ತನ್ನಪಿತಮಾತೆ ಮುನಿದರೆ ಕೊರತೇನೋಅತಿಸಂಪತ್ತಿನಿಂದ ಗತಿಯೇನೋ ಈಕ್ಷಿತಿಜನ ಮೆಚ್ಚಲು ಬಂತೇನೋರತಿಪತಿಪಿತನಂ ಅತಿ ಗೂಢತ್ವದಿಸತತದಿ ನುತಿಸುವ ಕೃತಕೃತ್ಯರಿಗೆ 2ಭೂಮಿಪ ಕೋಪಿಸಲಂಜುವರೆ ಈತಾಮಸರಿಗೆ ತಲೆ ಬಾಗುವರೇಭೂಮಿ ದೈವಗಳ ಬೇಡಿದರೆ ಮನಕಾಮಿತವನ್ನು ಪೂರೈಸುವರೇಕಾಮಿತಾರ್ಥನೀಗಿ ಮಹಾಮಹಿಮನನೇಮದಿ ಪಠಿಪ ಶ್ರೀರಾಮದಾಸರಿಗೆ 3
--------------
ರಾಮದಾಸರು
ಗುರುಪದವ ನಂಬಿ ಹರಿಪದವ ಕಾಂಬೆಮರುತ ಸಂತತಿಗೆ ನಮಿಸುವೆ ನಮಿಸುವೆ ಪ.ಹರಿಪದಕೆ ಅಚ್ಛಿನ್ನ ಭಕುತಿ ಪರಿಪೂರ್ಣ ಶ್ರೀಹರಿಕಾರ್ಯದಲಿ ಧುರಂಧರನೆನಿಸುವಹರಿಭೃತ್ಯಜನಕೆ ಹಿತಕಾರಿ ಔದಾರಿ ಜಗದ್ಗುರು ಪರಮಹಂಸ ಮಧ್ವತ್ರಿರೂಪಿಯ 1ತತ್ವಸಾಗರ ತಿಮಿಂಗಿಲ ಪದ್ಮನಾಭಮುನಿಕರ್ತಮೂಲರಾಮ ಮೆಚ್ಚಿದ ನರಹರಿಯಮತ್ರ್ಯ ಮಾಯಿಜನ ತುಹಿನರವಿಭಮಾಧವಾಭಿಜÕ ಅಕ್ಷೋಭ್ಯತೀರ್ಥೆನಿಪ ಮಲ್ಲರ 2ಸುಖತೀರ್ಥಗಂಭೀರ ವಾಕ್ಯವಾರಿಧಿಚಂದ್ರಅಕಳಂಕ ಜಯವರ್ಯ ಯತಿಸಮೂಹಮಕುಟಮಣಿ ವಿದ್ಯಾಧಿರಾಜ ನಿರ್ಮಲಕಾಯಸುಕವೀಂದ್ರ ವಾಕ್ಸಿದ್ಧ ವಾಗೀಶರ 3ಗುರುಭಕುತಿ ನಿಸ್ಸೀಮ ರಾಮಚಂದ್ರಾಖ್ಯಯತಿಗುರುಆಜ್ಞಾಪಾಲ ವಿದ್ಯಾನಿಧಿಗಳದುರುವಾದಿಗಜಮೃಗಪ ರಘುನಾಥ ತೀರ್ಥಶ್ರುತಿಪರಮಾರ್ಥ ಪರಿಚರ್ಯ ರಘುವರ್ಯರ 4ವೈರಾಗ್ಯ ವೈಭವಾನ್ವಿತ ರಘೋತ್ತಮ ಮುನಿಪವೈಷ್ಣವ ತತ್ವಜÕ ವೇದವ್ಯಾಸರಕೈವಲ್ಯಮಾರ್ಗಜÕ ವಿದ್ಯಾಪತಿಯು ಹೊನ್ನಮೈಯ ಮರುತಂಶ ವಿದ್ಯಾಧೀಶರ 5ವೇದಾಮೃತಾಬ್ಧಿಯೊಳು ಮಗ್ನ ವೇದನಿಧಿಗಳಸಾಧುನಿಕರಲಲಾಮ ಸತ್ಯವ್ರತರಬಾದರಾಯಣರಾಮಪಾದರತ ಸತ್ಯನಿಧಿಮೇದಿನಿಗೆ ಕಲ್ಪತರು ಸತ್ಯನಾಥರ 6ಶ್ರೀ ಸತ್ಯನಾಥರತ್ನಾಕರಕರೋದ್ಭವಕುಮುದಅಶೇಷಯಾಚಕ ಸುಖದ ಸುಗುಣಶ್ರೀ ಸತ್ಯಾಭಿನವ ಮುನಿ ಭಾಗವತೇಢ್ಯಜÕಶಾಶ್ವತ ಪರೋಕ್ಷ ಗುರುಪದನಿಷ್ಠರ 7ದುಷ್ಟ ಪರವಾದಿ ನರಕುಲಿಶ ಜಿತಕಾಮ ತಪೋನಿಷ್ಠ ವಿದ್ಯೋನ್ನತ ವಿಚಾರಶೀಲಶಿಷ್ಟ ಜನಪಾಲಶ್ರುತಿಜಲಾಭ್ಧಿ ಕಲ್ಲೋಲಇಷ್ಟಾರ್ಥದಾತ ಸತ್ಯಾಧೀಶರ 8ಕೃಷ್ಣ ಪಾದಾಸಕ್ತ ಗುರುಕೃಪಾಸಂಯುಕ್ತಇಷ್ಟಾರ್ಥದಾತ ಸತ್ಯಾಧಿರಾಜರಸೃಷ್ಠೇಶ ಪ್ರಸನ್ನವೆಂಕಟಪತಿಯಅನವರತತುಷ್ಟೀಕರಿಸುವ ವಾಯುಮತ ಮಹಿಮರ 9
--------------
ಪ್ರಸನ್ನವೆಂಕಟದಾಸರು
ಗುರುರಾಯರ ನಂಬಿರೋ-ಮಾರುತಿಯೆಂಬ ಪಗುರುರಾಯರ ನಂಬಿ ಬಿಡದೆ ಯಾವಾಗಲು |ದುರಿತವ ಕಳೆದು ಸದ್ಗತಿಯ ಪಡೆವರೆಲ್ಲ ಅ.ಪವನಧಿಯ ಮನೋವೇಗದಿಂದ ಲಂಘಿಸಿ ಮಹಿ-ತನುಜೆಯ ಶೋಕತಾಪವ ಕಳೆದು ||ವನವ ಬೇರೊಡನೆ ಕಿತ್ತೀಡಾಡಿ ಎದುರಾದದನುಜರ ಸದೆದು ಲಂಕೆಯ ತನ್ನ ಸಖಗಿತ್ತ 1ಕೌರವ ಬಕ ಹಿಡಿಂಬಕ ಕೀಚಕರೆಂಬ |ಕ್ರೊರಸಂತತಿಯೆಲ್ಲ ನುಗ್ಗಲೊತ್ತಿ ||ಘೋರಪಾತಕಿದುಶ್ಯಾಸನ ರಕುತವಹೀರಿ ಮುದದಿ ಮುರವೈರಿಯ ಭಜಿಸಿದ 2ಜೀವೇಶರೊಂದೆಂಬ ದುರ್ವಾದಿಗಳ ಕು-ಭಾವಶಾಸ್ರ್ತಗಳೆಲ್ಲ ತರಿದೋಡಿಸಿ ||ಕೋವಿದರಿಗೆ ಸದ್ಛಾಷ್ಯ ಸುಧೆಯನಿತ್ತುದೇವ ಪುರಂದರವಿಠಲ ಸೇವಕನಾದ 3
--------------
ಪುರಂದರದಾಸರು
ಗುರುವೆ ಭಾರತಿನಾಥ | ಶರಣು ಲಾಲಿಸೋ ಮಾತ |ಹರಿಪದಾರ್ಚನೆ ಕೊಟ್ಟು ಪೊರೆಯೋ ದಯೆಯಿಟ್ಟು ಪರಾಮ ಸೇವಕನಾಗಿವಾನರಕಟಕನೆರಹಿ |ನೀಂ ಮುದದಿ ಲವಣಾಬ್ಧಿ ದಾಟಿ ಪೋಗಿ ||ಭೂಮಿ ತನುಜೆಳಿಗೆ ವಾರ್ತೆಯನೆ ಪೇಳಿ | ರಾಗಟಿಯಸ್ವಾಮಿಗರ್ಪಿಸಿದ ಬಲವಂತ ಹನುಮಂತ 1ರಾಜಸೂಯವ ಮಾಡುವದಕೆ ಮಾಗಧನ ಕೊಂದೆ |ಮಾಜಿಸಿದೆ ಕುರುಪತಿಯ ಸಂತತಿಯನು ||ಸೋಜಿಗವು ನಿನ್ನ ಲೀಲೆಯು ಆಯುಜಾತ ಬಿ |ಡೌಜ ರಕ್ಷಕ ದ್ರೌಪದೀಶ ಬಲವಂತ 2ಬುಧಮಧ್ಯಗೇಹನಲಿ ಅವತರಿಸಿ ಕುಮತಗಳ |ಬೆದರಿಸಿತ್ರಿದಶಸಪ್ತ ಗ್ರಂಥ ಮಾಡಿ ||ಸುದಯದಿಂದುತ್ತಮರಿಗಿತ್ತು ಮತವನು ನಿಲಿಸಿ |ಬದರಿಯೋಳ್ ಪ್ರಾಣೇಶ ವಿಠಲನಲ್ಲಿರುವೆ 3
--------------
ಪ್ರಾಣೇಶದಾಸರು
ಗುರುಸತ್ಯಾಧಿರಾಜಸುಜನತಾರಾರಾಜಪೊರೆಎನ್ನ ಕಲ್ಪಭೂಜಸ್ಮರನಯ್ಯನ ಸಿರಿಚರಣಕಮಲಭೃಂಗವಿರತ್ಯಾದಿ ಗುಣೋತ್ತುಂಗ ಶುಭಾಂಗ ಪ.ಕರಿವಿಂಡು ಶಂಕೆಯಿಲ್ಲದೆ ತಿರುಗುತ ಕೇಸರಿಯ ಕಂಡೋಡುವಂತೆಧರೆಯೊಳು ದುರ್ವಾದಿಗಳು ನಿನ್ನಿದಿರು ಸಂಚರಿಸಲಂಜುವರಮ್ಮಮ್ಮ ಮಹಿಮ 1ಕಾಲವರಿತ ಸ್ನಾನ ಮೌನ ಜಪ ಸೃಕ್ಜಾಲವ್ಯಾಖ್ಯಾನಗಳಪೇಳಿ ಶ್ರೀರಾಮನ ಮೆಚ್ಚಿಸುವಪೂತಶೀಲ ತತ್ವಕಲ್ಲೋಲ ವಿಶಾಲ 2ಹಾಟಕಕುವಧುಕಾಂಕ್ಷೆರಹಿತ ಪ್ರಸನ್ನವೆಂಕಟಪತಿ ಪದದ್ವಯವತ್ರುಟಿಯೊಳಗಲ ಸತ್ಯಾಭಿನವ ತೀರ್ಥಕರಕಟ ಸಂಜಾತ ಸುಪ್ರೀತ 3
--------------
ಪ್ರಸನ್ನವೆಂಕಟದಾಸರು
ಗೋಕುಲದೊಳಗೆಲ್ಲ ಕೊಳಲೂದಲು |ಬೇಕಾದ ಧ್ವನಿಗಳು ಕೂಡಿ ಕೃಷ್ಣ-ಗೋ- ||ಪಿಕಾಸ್ತ್ರೀಯರುತವಕದಿಂದ ನೋಡ- |ಬೇಕೆಂದು ನಡೆಯೆ ನೂಕ್ಯಾಡುತ ಪಎಂತೆಂತು ಪೊರಟರಂತು ನಾರಿಯರು |ಇಂಥ ವಿಪರೀತ ಯಿಂತಿಲ್ಲ ಮುಂದಿಲ್ಲ |ಸಂತೋಷವಹದು ಚಿಂತೆ ಪೋಗುವುದು |ಸಂತರು ಕೇಳಲುತಂತುಮಾತ್ರಾ ||ಭ್ರಾಂತರಾಗಿ ಯೇನು-ಎಂತು ತಿಳಿಯದೆ |ನಿಂತು ನಿಲ್ಲಲಾರದಂತರದಲೆವೆ |ಧ್ವಾಂತಕಿರಣನಂತಾನ ಮುತ್ತೂರು |ಅಂತರವಿಲ್ಲದ ಸಂತೆಯಂತೆ 1ಚಿಕ್ಕಟುಯೆಂದು ಒಬ್ಬಕ್ಕನು ಗಂಡನ |ತೆಕ್ಕೆಲಿ ಪಿಡಿದುಕಕ್ಕಸಬಡುತ |ಪೊಕ್ಕಳಿಗೆ ಬಟ್ಟನಿಕ್ಕಿ ಒಬ್ಬವಳು |ಅಕ್ಕಿಯ ನುಚ್ಚನೆ ಸಕ್ಕರೆಂದು ||ಮಕ್ಕಳಿಗೀವುತ ಮಿಕ್ಕವರೆಲ್ಲರು |ನಕ್ಕು ತಂತಮ್ಮೊಳಗೆ ಗುಕ್ಕುತ ತಲೆಯ |ಹಿಕ್ಕುತ ಬಂದರು ಫಕ್ಕನೆ ಈಕ್ಷಿಸ-ರಕ್ಕಸ ದಲ್ಲಣನಕ್ಕರದಿ 2ತತ್ತರಿಸಿ ಕರವೆತ್ತಿಗೆ ಬಿಟ್ಟರು |ಮುತ್ತಿನ ಕಟ್ಟಾಣಿವೊತ್ತಿ ಮುಡಿಗಿಟ್ಟು |ನೆತ್ತಿಗೆ ಸೀರೆಯ ಸುತ್ತಿಕೊಂಡು ಬರೆ |ಸುತ್ತಲಂಗನೆರು ಬತ್ತಲಾಗಿ ||ತುತ್ತು ಮಾಡಿ ಮಾಡಿ ಹತ್ತಿಸೆ ಎದೆಗೆ |ಹೊಸ್ತಲಿ ದಾಟಲಿ ಗತ್ತಿಡಲಾರದೆ |ಹತ್ತೆಂಟು ಮಂದಿಯು ಚಿತ್ತಪಲ್ಲಟಾಗಿ |ಉತ್ತಮಾಂಗನಿಗೆ ಸುತ್ತಿದರೊ 3ಹಾಲಿಗೆ ಪಿಲ್ಲೆಯು ಫಾಲವಿದೇಯೆಂದು |ಕಾಲಿಗೆ ಕುಂಕುಮ ವಾಲಿಟ್ಟು ಮೂಗಿಗೆ |ಮೇಲಾದ ಹೂವಿನ ಮಾಲಿಕೆ ಕಟಿಗೆ |ತೋಲಾದ ಸರಿಗೆ ಬಾಳಿಗಿಟ್ಟು ||ಹೇಳುವ ಮಾತನುಕೇಳಿಕೇಳದಂತೆ |ಇಳೆಗೆ ಅಗಾಧ ಧೂಳಿಯ ಮುಚ್ಚುತ |ಜಾಲಸಂಭ್ರಮದಿ ವಾಲಯ ಬಂದರು |ಜಾಲಜಾನಾಭನ ವಾಲಗಕ್ಕೆ 4ಭೋರೆಂಬ ಶಬ್ದವ ಮರೆತಳೆಮುನೆ |ಗಿರಿಯು ಬ್ಯಾವಿಯೆ ? ತುರುವು ಮೇವನು |ತೊರೆಯೆ, ಫಣಿಯು ಶಿರವ ತೂಗಿತು |ತೆರೆಯ ಕಟ್ಟಿತು ಶರಧಿಯು ||ಸುರರುನಭದಿ ನೆರೆದು ಪೂಮಳೆ |ಗರೆಯೆದುಂದುಭಿಮೊರೆಯೆ ಸುಖವ |ಸುರಿಯೆ ಪ್ರಾಣೇಶ ವಿಠಲ ಕೊಳಲ |ತ್ವರನುಡಿಸುವ ಸ್ವರಗೇಳಿ 5
--------------
ಪ್ರಾಣೇಶದಾಸರು
ಗೋಪಾಲ ಶ್ರೀಕೃಷ್ಣ ಮೂರುತಿ ನೀನೇಕಾಪಾಡೆನ್ನನುಜಿಷ್ಣುಸಾರಥಿ ಪತಾಪತ್ರಯದೊಳ್ ನೊಂದೆ ತಪಗೈಯ್ಯಲರಿಯೆನು ನೀಕೃಪೆಯೊಳನುದಿನರೂಪತೋರಿಸು ದೇವಾ ಅ.ಪದೇವಕಿಯುದರದಿ ಜನಿಸಿಗೋಪಿದೇವಿಗೆ ತನಯನೆಂದೆನಿಸಿಜೀವ ಘಾತಕೆ ಬಂದ ಪೂತನಿಯಸು ಹೀರಿಗೋವುಗಳನು ಮೇಸಿದೆ 1ದೈತ್ಯರ ಕೊಂದು ಗೋವರ್ಧನವೆತ್ತಿದೇಕಾಮದಿ ಬಂದ ಬಾಲಕಿಯರನು ಕೂಡಿದೇಹಾವಿನ ಹೆಡೆಯ ಮೇಲೆ ನಲಿದು ಬಿಲ್ ಹಬ್ಬದಿಮಾವ ಕಂಸನ ಮುರಿದು ಕರುಣದಿತಾಯಿ ತಂದೆಯ ಸೆರೆಯ ಬಿಡಿಸಿದೆ 2ಶರಧಿಮಧ್ಯದಿ ಮನೆಮಾಡಿದೇಅಲ್ಲಿಭರದಿಂದಷ್ಟಮ ಸ್ತ್ರೀಯರಲಿ ಕೂಡಿದೇನರಮುರಶಾದ್ಯರ ಮುರಿದು ಷೋಡಶ ಸಹಸ್ರತರುಣಿಯರೊಡಗೂಡಿದೇ ಪಾರಿಜಾತತರುವ ನೀನೊಲಿದು ತಂದೆ ಪಾಂಡವರೊಳುಭರಿತ ಕೃಪೆಯ ತೋರಿದೆಧುರದಿಮಾಗಧಚೈದ್ಯ ಧರಣಿಪಾಲರ ಗೆಲ್ದುತರುಣಿ ದ್ರೌಪದಿಗ್ವರವ ಪಾಲಿಸಿನರಗೆ ಸಾರಥಿಯಾದೆ ಶ್ರೀಹರೀ 3ಸಂಧಾನವೆಸಗಿ ಪಾಂಡವರಕರ-ದಿಂದ ಕೊಲ್ಲಿಸಿದೆ ಕೌರವರಚಂದ ಧರ್ಮರಾಯಗೆ ಪಟ್ಟ ಕಟ್ಟಿಸೀನಿಂದಶ್ವಮೇಧಗೈಸಿ ನೀ ಸುರಗಣವೃಂದ ಸಂತಸ ಬಡಿಸಿ ಯಾದವಕುಲ ಮುಗಿಲದಿಂದಲಿಸುಂದರಾಂಗವ ಬಿಟ್ಟು ಕ್ಷೀರಸಿಂಧುವಿಗೈದೆಚಂದದಲಿ ಗೋವಿಂದದಾಸನೆಬಂದು ಮಂಗಲ ಮುಖವ ತೋರಿಸೋ 4
--------------
ಗೋವಿಂದದಾಸ
ಗೋಪಿಹೇಳೆ ರಂಗಗೆ ಬುದ್ಧಿ ಪಗೋಪಿಹೇಳೆ ರಂಗಯ್ಯಗೆ ಬುದ್ಧಿ ಪುರದೊಳು |ರಾಪು ಮಾಡುವದು ವೆಗ್ಗಳವಮ್ಮ ಅ.ಪ.ಪೋರರ ಒಡಗೂಡಿ ಬಂದು ಎಲ್ಲರು ನೋಡಸೀರೆಯಸೆರಗುಪಿಡಿವರೇನೇ ||ಜಾರೆ ಹೆಂಗಳೆರಾದರೊಳ್ಳತು ತಾಂ ತಡವಲುಈ ರೀತಿಯೆ ಪತಿಯಿದ್ದವರ ಕೂಡ 1ಹಿರಿಯಣ್ಣಗಿಟ್ಟಿದ್ದ ಮೀಸಲ ತುಪ್ಪವಸುರಿದು ಗಡಿಗೆ ವಡದೋಡಿದ |ಗೋಪಿ||ಥರವೆ ನಿಮ್ಮಮ್ಮನಲ್ಲಿಗೆ ಬಾರೋ ಎಂದರೆಸೆರಗ ಕೊಸರಿಮಾನಕೊಂಬನೆ | ಗೋಪಿ 2ಕತ್ತಲೊಳಗೆ ಮಕ್ಕಳಂತೆ ಸಣ್ಣವನಾಗಿಹತ್ತಿಲಿ ಬಂದೊರಗುವನಮ್ಮ |ಗೋಪಿ||ಇತ್ತತ್ತ ಬಾ ಕಂದಯೆಂದಪ್ಪಿಕೊಳಲವಕೃತ್ಯವ ಮಾಡಿ ಓಡುವನಮ್ಮ | ಗೋಪಿ 3ಆಕಳ ಮೊಲೆಯುಂಡು ತರುವಾಯ ಕರುಬಿಟ್ಟುತಾ ಕೂಗುವನೆ ಕರಕೊಳಿರೆಂದು |ಗೋಪಿ||ಗೋಕುಲದೊಳು ಬಹು ದಿವಸವಾಯಿತು ದುಡ್ಡುತೂಕ ಕ್ಷೀರವಮಾರಕಾಣೆವೇ | ಗೋಪಿ 4ಬಚ್ಚಲೊಳಗೆ ಪ್ರಾಯದವಳು ಕುಳಿತು ಎಣ್ಣೆಹಚ್ಚಿಕೊಂಡೆರಕೊಳ್ಳುತಿದ್ದೆವೆ |ಗೋಪಿ||ಎಚ್ಚರಿಸದೆ ಬಂದು ಎದುರಿಗೆ ನಿಲ್ಲುವಹುಚ್ಚನೆ ಬಹು ಜಾಲಗಾರನು | ಗೋಪಿ 5ಪುರುಷಗೆ ಸಂಶಯ ನಮ್ಮ ಮನೆಗೆ ಕೃಷ್ಣಬರುವನೆಂಬು ಮಜ್ಜನಕೆ ಜಲ |ಗೋಪಿ||ಬೆರಸಿಟ್ಟರೆಲ್ಲವು ಚೆಲ್ಲಿ ಪೋಗುವಗಂಡಕರೆಕರೆಮಾಡುವ ಪರಿಪರಿ | ಗೋಪಿ 6ಪೋಗಲಿನಿತೂ ಮುಂದೆ ಪ್ರಾಣೇಶ ವಿಠಲಗೆಹೀಗಿರುಯೆಂದು ನೀ ಪೇಳಮ್ಮಾ |ಗೋಪಿ||ಈಗುಸುರಿದ ಮಾತು ಸರಿಬಾರದಿದ್ದರೆಸಾಗಿರೆಂದಪ್ಪಣೆ ಕೊಡಿರೆಮ್ಮ | ಗೋಪಿ 7
--------------
ಪ್ರಾಣೇಶದಾಸರು
ಚರಣಕಮಲವನ್ನು ನೆನೆವೆ ನಾಸುರದ್ವಿಜವೇಷದಿಂದುದಿತನ್ನ ತ್ರಾಣಿಪರಮತಗಳನು ಖಂಡ್ರಿಸಿದನ್ನ ಸತ್ಯಪರಿಪರಿ ವ್ರತಾಚರಿಸಿದನ್ನ ಮನೋಶುದ್ಧಾದ ಸಂಪ್ರದಾಯಕನನ್ನ ತತ್ವಪರಸತಿ ಪರಧನ ತೊರೆದನ್ನ ತನ್ನದೂರದರ್ಶಿ ಸರ್ವಕಂಡನ್ನ ನಿಜವೈಷ್ಣವ ಸಿದ್ಧಾಂತ ಒರೆದನ್ನ ಆತಪಸೆ ಸಂಗರವೆಂದರಿದನ್ನ ತನ್ನವಿಜಯವಿಠಲದಾಸನ್ನ ತನ್ನ
--------------
ಗೋಪಾಲದಾಸರು
ಜನನಿರುದ್ರಾಣಿ ರಕ್ಷಿಸು ಎನ್ನಜಗದೀಶನ ರಾಣಿ ಪ.ವನಜಭವಸುರಮುನಿಕುಲಾರ್ಚಿತೆಕನಕವರ್ಣಶರೀರೆ ಕಮಲಾ-ನನೆ ಕರುಣಾಸಾಗರೆ ನಮಜ್ಜನ-ಮನಮುದಾಕರೆ ಮಾನಿತೋದ್ಧರೆ ಅ.ಪ.ಆದಿಕೃತಾಯುಗದಿ ಪ್ರತಿಷ್ಠಿತ-ಳಾದೆ ಧರಾತಳದಿಆದಿತೇಯರ ಬಾಧಿಸುವ ದಿತಿ-ಜಾಧಮರ ಭೇದಿಸಿದೆ ಸಜ್ಜನ-ರಾದವರ ಮನ್ನಿಸಿದೆ ತ್ರೈಜಗ-ದಾದಿಮಾಯೆ ವಿನೋದರೂಪಿಣಿ 1ಖಂಡ ಪರಶುಪ್ರೀತೆ ನಿಖಿಲಬ್ರ-ಹ್ಮಾಂಡೋದರಭರಿತೆಚಂಡಮುಂಡವೇತಂಡದಳನೋ-ದ್ದಂಡಸಿಂಹೆ ಅಖಂಡಲಾರ್ಚಿತೆಪಾಂಡುತನುಜಕೋದಂಡವಿತರಣೆಚಂಡಿಕೇ ಕರದಂಡಲೋಚನಿ 2ಸಿಂಧೂರಸಮಯಾನೆ ಸರಸ ಗುಣ-ವೃಂದೆ ಕೋಕಿಲಗಾನೆಸುಂದರಾಂಗಿ ಮೃಗೇಂದ್ರವಾಹಿನಿಚಂದ್ರಚೂಡಮನೋಜೆÕ ಸತತಾ-ನಂದಪೂರ್ಣೆ ಮುನೀಂದ್ರನುತೆ ಸುಮ-ಗಂಧಿ ಗೌರಿ ಶಿವೇ ಭವಾನಿ 3ಲಂಬೋದರಮಾತೆ ಲಲಿತ ಜಗ-ದಂಬಿಕೆ ಗಿರಿಜಾತೆಕಂಬುಕಂಠಿ ಕಾದಂಬನೀಕು-ರುಂಬಜಿತಧಮ್ಮಿಲ್ಲೆ ತವ ಪಾ-ದಾಂಬುಜವ ನಾ ನಂಬಿದೆನು ಎನ-ಗಿಂಬು ಪಾಲಿಸೆ ಶುಂಭಮರ್ದಿನಿ 4ಘನವೇಣುಪುರವಾಸೆ ಸರ್ವಾರ್ಥದಾ-ಯಿನಿ ತ್ರೈಜಗದೀಶೆಸನಕನುತೆ ಶ್ರೀಲಕ್ಷುಮಿನಾರಾ-ಯಣಭಗಿನಿ ಶ್ರೀಮಹಿಷಮರ್ದಿನಿಮನಮಥಾಮಿತರೂಪೆ ಕಾತ್ಯಾ-ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯ ಜಯ ಜಯ ದಯಾನಿಧೆಭಯನಿವಾರಕ ಭಕ್ತನಿಚಯ ನಿತ್ಯಸೇವ್ಯನೆ ಪ.ದ್ರುಹಿಣಸಮೀರಗರುಡಹಿನಾಥ ಮೃಡೇಂದ್ರಸಹನುತ ಪದಸರೋರುಹನಿತ್ಯಜಯ1ಮದನಜನಕ ಸಿಂಧುಸದನ ದಾನವಜಿತಕದನಮಾನವಮೃಗವದನ ಹರೆ ಜಯ2ದಶಾನನ ಹರಸುರ ಘೋಷಣನೀಲಸತತಪ್ರಸನ್ವೆಂಕಟಗಿರಿವಾಸ ನಮೋ ತೇ ಜಯ 3
--------------
ಪ್ರಸನ್ನವೆಂಕಟದಾಸರು
ಜಯ ಮಂಗಳಂ ಮಹಾ ಶುಭಮಂಗಳಂಮಂಗಳಂ ಮಧುಹರಗೆ ಮಾವರನಿಗೆ ಪ.ಶ್ರುತಿಹೃತ ವಿಹೃತನಾದಗೆಕ್ಷಿತಿಭೃತ ವಿಭೃತನಾದಗೆಧೃತಿಜಿತವಿಜಿತ ಕುಪಿತಗೆ ವಿತರಣಾಂತಗೆಪತಿತತನು ಕ್ಷತಕೃತಗೆಕೃತಪೂತಹಿಸತಿನುತಗೆಪತಿವ್ರತ ಮೋಹಿತ ತುರಗಯುತವ್ಯಾಕೃತಗೆ 1ತತ್ವಾಮೃತ ಸತ್ಯವ್ರತಗೆಮಥÀನಾಮೃತ ದಿತಿಜಾತರ್ಗೆಕಥಾಮೃತ ಸುಮತಿಗೆ ಕೃಪಾಮೃತ ದೈತ್ಯಜಗೆಭ್ರಾತಪಿತ ಸ್ತ್ರೀಸತಿವ್ರಾತಕೆಭೂತಪತಿಗೆ ಜಾತಧರ್ಮಕೆಹಿತಾಮೃತ ತಾಮೃತೋಪೇತಗೆ ಮೂತ್ರ್ಯಮಲನಿಗೆ 2ಅನಿಮಿಷಾನಿಮಿಷ ಮಾನಿಗೆಕನಕಾಕ್ಷಕನಕಕಶ್ಯಪುವಿನ ನಿಘಘ್ನ ಅಕ್ಷಯತನುಗೆ ಜನನಿಜಘ್ನುಗೆಆನನದಶದಾನವಮಾನಿನಿಹನನಶೀಲ ಮೋನಾನ್ವಿತಗೆಜ್ಞಾನಜನೇಶ ಪ್ರಸನ್ವೆಂಕಟ ಅನಾಥನಾಥಗೆ 3
--------------
ಪ್ರಸನ್ನವೆಂಕಟದಾಸರು
ಜಯ ಮಂಗಳಂ ಮಹಾ ಶುಭಮಂಗಳಂಮಂಗಳಂ ಮಧುಹರಗೆ ಮಾವರನಿಗೆ ಪ.ಶ್ರುತಿಹೃತ ವಿಹೃತನಾದಗೆಕ್ಷಿತಿಭೃತ ವಿಭೃತನಾದಗೆಧೃತಿಜಿತವಿಜಿತ ಕುಪಿತಗೆ ವಿತರಣಾಂತಗೆಪತಿತತನು ಕ್ಷತಕೃತಗೆಕೃತಪೂತಹಿಸತಿನುತಗೆಪತಿವ್ರತ ಮೋಹಿತ ತುರಗಯುತವ್ಯಾಕೃತಗೆ 1ತತ್ವಾಮೃತ ಸತ್ಯವ್ರತಗೆಮಥÀನಾಮೃತ ದಿತಿಜಾತರ್ಗೆಕಥಾಮೃತ ಸುಮತಿಗೆ ಕೃಪಾಮೃತ ದೈತ್ಯಜಗೆಭ್ರಾತಪಿತ ಸ್ತ್ರೀಸತಿವ್ರಾತಕೆಭೂತಪತಿಗೆ ಜಾತಧರ್ಮಕೆಹಿತಾಮೃತ ತಾಮೃತೋಪೇತಗೆ ಮೂತ್ರ್ಯಮಲನಿಗೆ 2ಅನಿಮಿಷಾನಿಮಿಷ ಮಾನಿಗೆಕನಕಾಕ್ಷಕನಕಕಶ್ಯಪುವಿನ ನಿಘಘ್ನ ಅಕ್ಷಯತನುಗೆ ಜನನಿಜಘ್ನುಗೆಆನನದಶದಾನವಮಾನಿನಿಹನನಶೀಲ ಮೋನಾನ್ವಿತಗೆಜ್ಞಾನಜನೇಶ ಪ್ರಸನ್ವೆಂಕಟ ಅನಾಥನಾಥಗೆ 3
--------------
ಪ್ರಸನ್ನವೆಂಕಟದಾಸರು
ಜಯಜನನೀ ಶಾರದೆ ಜನನಮೃತಿಭಯಭಿದೆ ಪ.ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ.ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2ಅನಘಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯಮಂಗಳಂನಿತ್ಯಶುಭಮಂಗಳಂಪ.ಗುರುಭಕ್ತಿಯೆಂತೆಂಬ ಗಮಕದೋಲೆಯನಿಟ್ಟುಹರಿಧ್ಯಾನವೆಂಬ ಆಭರಣವಿಟ್ಟು ||ಪರತತ್ತ್ವವೆಂತೆಂಬ ಪಾರಿಜಾತವ ಮುಡಿದುಪರಮಾತ್ಮ ಹರಿಗೆ ಆರತಿಯೆತ್ತಿರೆ 1ಆದಿ ಮೂರತಿಯೆಂಬ ಅಚ್ಚ ಅರಿಸಿಣ ಬಳೆದುವೇದ ಮುಖವೆಂಬ ಕುಂಕುಮವನಿಟ್ಟು ||ಸಾಧು - ಸಜ್ಜನ ಸೇವೆಯೆಂಬ ಸಂಪಿಗೆ ಮುಡಿದುಮೋದದಿಂ ಲಕ್ಷ್ಮೀಗಾರತಿಯೆತ್ತಿರೆ 2ತನುವೆಂಬ ತಟ್ಟಿಯಲಿ ಮನದ ಸೊಡರನು ಇಡಿಸಿಘನಶಾಂತಿಯೆಂಬ ಆಜ್ಯವನುತುಂಬಿ ||ಆನಂದವೆಂತೆಂಬ ಜ್ಯೋತಿಯನು ಹಚ್ಚಿತುಚಿನುಮಯ ಹರಿಗೆ ಆರತಿಯೆತ್ತಿರೆ 3ಕಾಮಾಂಧವಳಿದಂತ ಕಮಲದ ತಟ್ಟೆಯಲಿನೇಮವೆಂತೆಂಬ ಹರಿದ್ರವನು ಕದಡಿ ||ಆ ಮಹಾಸುಜ್ಞಾನವೆಂಬ ಸುಣ್ಣವ ಬೆರಸಿಸೋಮಧರವರದಗಾರತಿಯೆತ್ತಿರೆ 4ನಾರದವಂದ್ಯಗೆನವನೀತ ಚೋರಗೆನಾರಾಯಣಗೆ ಶ್ರೀ ವರಲಕ್ಷ್ಮೀಗೆ ||ಸಾರಿದವರನು ಪೊರೆವ ಪುರಂದರವಿಠಲಗೆನೀರಜಮುಖಿಯರಾರತಿಯೆತ್ತಿರೆ5
--------------
ಪುರಂದರದಾಸರು