ಒಟ್ಟು 4153 ಕಡೆಗಳಲ್ಲಿ , 123 ದಾಸರು , 2573 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂತರೆನಬಹುದುದಯ್ಯ ಇಂತಿವರಿಗೆ ಅಂತರಂಗಲಿ ಹರಿಯ ಏಕಾಂತ ಭಕ್ತರಿಗೆ ಧ್ರುವ ಸುಖಕ ಮೈಯವ ಮರಿಯಾ ದು:ಖಗಳಿದಿರಿಡೆ ನೋಯಾ ಚಕಿತನಾಗನು ಕುಮತಿ ವಿಕಳ ನುಡಿಗೆ ಪ್ರಕಟಸ್ತೋತ್ರಕ ಹಿಗ್ಗ ನಿರಹಂಕೃತಿಯನ್ನುಳ್ಳರಿಗೆ 1 ಕ್ಲೇಶ ಕರ್ಮಗಳಿರಲು ಈ ಶಿರಿಯ ಸುಖದ ಮನದಾಶೆವಿರಲು ವಾಸುದೇವನ ಪದ ಧ್ಯಾಸದನುಭವ ದಿಟ ವೇಶ ಹರಿ ಸಂಸಾರ ಲೇಶದೋರ್ವರಿಗೆ 2 ಪರಮ ಭಾಗವತೆನಿಸಿ ಪರರ ಮನಗಳಿಗ್ಹೋಗಿ ಕರ ವಿಕರ ಪರಸತಿಯರಿಗೆ ಕೂರವು ಪರನಿಂದೆಗೆ ಮೂಕ ಪರವಶಾದರಿಗೆ 3 ಹರಿಯ ನಾಮವ ನೆನಿದು ಹರಿದು ಕೀರ್ತನೆಯಲ್ಲಿ ಹರುಷಗುಡಿಗಟ್ಟಿ ತನುಮರದು ನಿಂದು ಬರುದೆ ಪ್ರೇಮಾಂಜಲಿಗೆ ಭರಿತ ಲೋಚನನಾಗಿ ತರಿಸಿ ತಾರಿಸುವಂದ್ಯನ ಕರುಣವಂತರಿಗೆ 4 ಇಂತು ದುರ್ಗಮವಿರಲು ಸಂತರಾವು ನೀವೆಂದು ಸಿರಿತರವ ಹೋಗಿ ಜನ ಸಿಂತರಿಸುವಾ ಭ್ರಾಂತವೇಷಕ್ಕೆ ಸಿರಿಕಾಂತ ಮೆಚ್ಚನಲ್ಲಾ ಶಾಂತಗುಣ ಮಹಿಪತಿ ಸ್ವಂತಗೆಂದಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತಿ ಸರಸದಿ ಶಾಲೆಯೊಳು ಬಂದು ಪ ಪಿತನಿಂದಲಿ ಪತಿನಿಂದ್ಯವ ಕೇಳಿದನೆಂದು ಬಂದು ಅ.ಪ. ಧಡಿಗೆ ಬಿಡುಬಿಡುತಲಿ ಕಣ್ಣೀರಿಡುತಲಿ ಕೆಂಡದಿ ಧುಮುಕಲುಜಡೆಧರ ಕೇಳಿದಾಕ್ಷಣ ಜಡೆ ಅಪ್ಪಳಿಸಲು ಮೇದಿನಿಗೆ ಸಂದುದಿತ ಸದಾಶಿವನೆ ಬಂದು ಭಂಜಿಸಲು ಮತ್ತೆಮೇಲು ಬಂದು 1 ಮಾವನ ಶಿರವಳಿದಾ ಮತ್ತೆ ಮಾವನಿಂದಲಿ ತುತಿಸಿಕೊಂಡ ಮಂದಜಾಸನ ಬಂದು ಬಹುಪರಿ ಪೇಳಿದಾಮಂದ ಜನರ ಪೊರೆದಾ ಮಾರನಯ್ಯನಾ ಕರುಣವ ಪಡೆದಾಮತ್ತೆ ಮಾರನ ಮದ ಮುರಿದಾ ಮಾರನ ಬದುಕಿಸಿಮಾರಿಗೆ ವರವಿತ್ತು ನಾರಿಗೆ ತೋರಿಸೆ ಬಂದು2 ನಸುನಗುತಲಿ ಬಸವನು ಭೃಗು ಋಷಿಗಳ ಮೀಸೆಗಳ್ಳುದಾ ಬಸುಮಾದರ ಬಹುಪರಿಯಾಗದ ಬಸುಮಗೈದಾಳಳಿದಾ ಭಾರ್ಯಳ ಮೊರೆಕೇಳಿ ಭಾರವನಿಳುಹಿಪ ಪರಭಾರೆಪುರಕೆ ಪೋದಾಭಾರತೀಶ ಪಿತ ತಂದೆವರದಗೋಪಾಲವಿಠಲನಭಜಿಸುತ ಬಂದು 3
--------------
ತಂದೆವರದಗೋಪಾಲವಿಠಲರು
ಸತಿ ಸಹಿತ ಕಶ್ಯಪರು ರತುನದಾರತಿ ಪಿಡಿದು ರತಿಪತಿಪಿತನಿಗೆ ಅತಿಹರುಷದಿ ಅತಿಶಯದ ಮಹಿಮೆಗಳ ಪೊಗಳುತಲಿ ಶ್ರೀಹರಿಗೆ ಕುಶಲದಾರತಿ ಎತ್ತಿಬೆಳಗಿದರು ನಿತ್ಯ ಶುಭ ಮಂಗಳಂ 1 ಅನಸೂಯ ಸಹಿತ ಅತ್ರಿಯರು ಬೇಗನೆ ಬಂದು ನಳಿನಾಕ್ಷನ ಚರಣಕ್ಕೆರಗಿ ನಿಂದು ವಿಧವಿಧದ ಆಟಗಳ ಆಡಿದ ಶ್ರೀಹರಿಗೆ ಪದುಮದಾರತಿ ಎತ್ತಿ ಬೆಳಗಿದರು ನಿತ್ಯ ಶುಭಮಂಗಳಂ 2 ಶೀಲವತಿಯಾದ ಸುಶೀಲೆ ಸಹಿತ ಭಾರದ್ವಾಜ ಋಷಿಗಳು ತಮ್ಮ ಆಶ್ರಮದಲಿ ಶ್ರೀಲಕುಮಿವಲ್ಲಭಗೆ ಶೀಘ್ರದಿಂದಲಿ ತಾವು ಗೋಮೇಧಿಕದಾರುತಿ ಬೆಳಗಿದರು ನಿತ್ಯ ಶುಭಮಂಗಳಂ 3 ಕುಮುದ್ವತಿ ಸಹಿತ ವಿಶ್ವಾಮಿತ್ರ ಋಷಿಗಳು ಕನಕ ಮಂಟಪದಿ ಮೆರೆಯುವ ದೇವಗೆ ಸನಕಾದಿವಂದ್ಯನಿಗೆ ವನಜಾಕ್ಷಿಯರಸನಿಗೆ ಕನಕದಾರತಿ ಎತ್ತಿ ಬೆಳಗಿದರು ನಿತ್ಯ ಶುಭಮಂಗಳಂ 4 ಪ್ರಹ್ಲಾದವರದನಿಗೆ ಅಹಲ್ಯೆಯ ಸಹಿತದಿ ಫುಲ್ಲಲೋಚನಪ್ರಿಯಗೆ ಋಷಿಗೌತಮ ಮಲ್ಲಿಗೆಹಾರಗಳು ಧರಿಸಿ ಶೋಭಿಪ ಹರಿಗೆ ಚಲ್ವನವರತ್ನದಾರತಿ ಎತ್ತುತಾ ನಿತ್ಯ ಶುಭಮಂಗಳಂ 5 ರೇಣುಕಾ ಸಹಿತ ಜಗದಗ್ನಿ ಋಷಿಗಳು ತಮ್ಮ ಧ್ಯಾನಗೋಚರನಾದ ಪರಮಾತ್ಮನ ಮಾನಿನಿಮಣಿ ಲಕುಮಿಯೊಡನೆ ಶ್ರೀಕೃಷ್ಣನಿಗೆ ನೀಲಮಾಣಿಕ್ಯದ ಆರತಿ ಎತ್ತುತ ನಿತ್ಯ ಶುಭಮಂಗಳಂ 6 ಸತಿ ಸಹಿತ ವಶಿಷ್ಠ ಋಷಿಗಳು ಇಷ್ಟಮೂರುತಿಯಾದ ವರಕಮಲನಾಭ ವಿಠ್ಠಲನ ಸ್ಮರಿಸುತ ನಿತ್ಯ ನವರತ್ನದಾರತಿ ಬೆಳಗಿದರು ನಿತ್ಯ ಶುಭಮಂಗಳಂ 7 ಮಂಗಳಂ ಸಪ್ತಋಷಿಗಳು ಪರ್ಣಶಾಲೆಯೊಳು ಗಾಂಗೇಯನುತನ ಪೂಜಿಸಿ ಹರುಷದಿ ಸಂಗೀತಲೋಲನಿಗೆ ಶೃಂಗಾರ ಪುರುಷನಿಗೆ ರಂಗಿನಾರತಿಯೆತ್ತಿ ಬೆಳಗಿದರು ನಿತ್ಯ ಶುಭಮಂಗಳಂ 8
--------------
ನಿಡಗುರುಕಿ ಜೀವೂಬಾಯಿ
ಸತ್ತವರಿಗೆ ನೀನಳುತಲಿರುಮೆನ್ನೂಮತ್ತನಾಗಿ ಮಂದಜೀವಾ ಪಮೃತ್ಯುವೆಂಬರಿಪು ಕುತ್ತಿಕೆಡಹಿದಾಗಮತ್ತಾರಿಗಳುವೆಯೊ ಜೀವಾ ಅ.ಪನೆತ್ತಿಯ ಬಡುಕೊಂಬೆ ಜೀವಾಕತ್ತೆಯಂತೊದರದೆ ಬಿಡದೆ ಕಾಂತೆಯ ಬೆನ್ನಹತ್ತಿ ಹೋಗುತ್ತಿಹೆ ಜೀವಾ 1ಕತ್ತಲೆಯಂತಿಹ ನಿನ್ನ ವಿದ್ಯೆಯನುತೊತ್ತಳದುಳಿವರೆ ಜೀವಾಉತ್ತಮ ಜನ ಸಂಗವ ಮಾಡು ನಿನ್ನನೀನೆತ್ತಿಕೊ ಭವಕೂಪದಿಂದಾ 2ಏಳು ಶ್ರವಣ ಮನನವ ಮಾಡು ನೀನಿಂತುಘೋಳಿಟ್ಟರೆ ಫಲವೇನೂಬೀಳು ಗುರುವಿನ ಚರಣ ಕಮಲಗಳಲ್ಲಿನಾಳೆ ಮುಕ್ತಿ ಸುಖವುಂಟೂ 3ತಾಳು ಶೀತೋಷ್ಣಾದಿ ದೇಹಧರ್ಮಗಳನುಮೂಳ ಸುಮ್ಮನೆ ಕೆಡಬೇಡಾನಾಳೆ ನಾಡಿದ್ದು ಸಾಧಿಸುವೆನೆಂದೆನುತಲೆಹಾಳಾಗಬೇಡೆಲೊ ಜೀವಾ 4ಇತ್ತಲತ್ತ ಹಿಂದೆಮುಂದೆ ಕೆಳಗೆ ಮೇಲೆಉತ್ತಮ ಬೊಮ್ಮವೆಂದೆನುತಾಸತ್ಯವೆಂದು ಶೃತಿಬ್ರಹ್ಮಪುರಸ್ತಾದೆನುತ್ತ ಸಾರುತ್ತಿದೆ ಜೀವಾ 5ಮನೆಮಾರು ಧನ ನಿನ್ನತನು ಮೊದಲಾದವುಇನಿತು ನಿತ್ಯವಲ್ಲ ಜೀವಾಘನ ವಿರತಿಯ ಮಾಡು ಮನದಲ್ಲಿ ಧ್ಯಾನಿಸುವಿನುತ ಚೈತನ್ಯವ ಜೀವಾ 6ಅನುದಿನ ನಿನ್ನ ನಿಜವ ನೀತಿಳಿದರೆಳ್ಳನಿತುಶೋಕಮೋಹವಿಲ್ಲ ಜೀವಾಸನುಮತಿುಂದ ಗೋಪಾಲಾರ್ಯನ ಸೇರಿಚಿನುಮಯನಾಗೆಲೊ ಜೀವಾ 7
--------------
ಗೋಪಾಲಾರ್ಯರು
ಸತ್ಯಧ್ಯಾನತೀರ್ಥರು ಇಷ್ಟು ಸುಲಭದಲಿ ಈ ಮುದ್ದು ಯತಿ ವರರಿಗೆ ಪ್ರೇಷ್ಠತಮ ನೀ ನೊಲಿದ ಬಗೆಯೇನೋ ರಾಮಾ ಪ ಪಟ್ಟ ಪುತ್ರನ ಶ್ರೇಷ್ಠ ಪೀಠದಲಿ ಕುಳಿತಿಂದು ಮುಟ್ಟಿ ಪೂಜಿಪ ಭಾಗ್ಯಗಿಟ್ಟಹುದೆ ಏನೆಂಬೆ ಅ.ಪ. ಚಿಕ್ಕತನದಲೆ ನೂಕಿ ವಿಷಯ ವಿದ್ಯೆಗಳನ್ನು ಚೊಕ್ಕ ಶಾಸ್ತ್ರಗಳಲ್ಲಿ ಇಕ್ಕಿ ದಾಸರ ಮನವಲಿದ್ಯೋ ಕಕ್ಕಸವುಭವವೆಂದು ವೈರಾಗ್ಯ ಧರಿಸುತಲಿ ಭಕ್ತಿ ಮಾಳ್ಪುದ ನೋಡಿ ಮುಕ್ತರಾಶ್ರಯ ವಲಿದ್ಯೋ 1 ದಾನಶೂರರು ಬಹು ನಿದಾನ ವಂತರು ಹಾಗೆ ಮಾನ ಸಾಗರರೆಂದು ಜ್ಞಾನಿ ಪ್ರಾಪ್ತನೆ ವಲಿದ್ಯೋ ದೀನ ಜನ ಮಂದಾರ ಮಾನ್ಯ ಮುನಿಕುಲ ತಿಲಕ ಶೂನ್ಯವಾದಧ್ವಾಂತ ಭಾನು ವೆಂದೊಲಿದ್ಯೋ 2 ಮೋದವಿತ್ತರು ಸತ್ಯಧ್ಯಾನ ತೀರ್ಥರು ಹಿಂದೆ ಸಾಧಿಸುತ ಸುಖಮತದ ಜಯ ಭೇರಿ ಜಗದೀ ಸಾಧು ಜನರ ಜ್ಞಾನ ಖೇದವಳಿಯುತ ಪ್ರಮೋದ ವೀಯುವರೀಗೆ ಸಿದ್ದವೆಂದೊಲಿದ್ಯೋ 3 ಹಿಂದಿ ನ್ಹಿರಿಯರ ವಲವೊ ಮಂದಿ ಪುಣ್ಯವೊ ಮತ್ತೆ ತಂದೆ ಕರುಣವೊ ಕಾಣೆ ಬಂದುದೀ ಪೀಠದಲಿ ವಿಧಿ ವಿನುತ ರಾಮ ನಿನ್ನೊಲಸಿಹ ಪ್ರ ಮೋದ ತೀರ್ಥರುಸತ್ಯ ಪಾಮರರಿಗಾಗುವುದೆ ಸ್ತುತಿಸೆ 4 ಸಾಧು ಸಜ್ಜನ ಪ್ರಾಪ್ಯ ಬಾದರಾಯಣ ಶರಣು ಮೋದ ಮಯ ನಿರ್ದೋಷ ವೇದ ವೇದ್ಯನೆ ಶರಣು ಮಾಧವ ಶ್ರೀ ಕೃಷ್ಣ ವಿಠಲರಾಯನೆ ಶರಣು ಗಾಧವರ್ಜಿತ ಮಹಿಮ ಶ್ರೀ ರಾಮ ಶರಣು ಶರಣು 5
--------------
ಕೃಷ್ಣವಿಠಲದಾಸರು
ಸತ್ಯವತಿಸೂನು ವೇದವ್ಯಾಸ ಲಕುಮಿಶಾ | ನಿತ್ಯ ನಿನ್ನ ನೆನೆಸುವ ಭೃತ್ಯರೊಡನೆ ಪೊಂದಿಸು ದೇವ ಪ ವಾಸುಕಿ ಇಲ್ಲಿ ಮದನಾರಿಯ ವಲಿಸಿ | ತನ್ನ ಬದುಕುವಗೋಸುಗ ಉಪಾಯದಲಿ ನಿಂದರೆ | ವೈರಿ ತಾರಕನ್ನ ಸದೆದು | ಇಂದ್ರಾದ್ಯರ ಕೂಡ ಮುದದಿಂದ ಸ್ಥಿರವಾಗಿ ಮೆರೆದ 1 ಷಣ್ಮೊಗನು ಸತತ ತಾನು ಅನ್ನದಾನ ಮಾಡುತ ಹಾ | ವನ್ನನಾಗುದಕ್ಕೆ ಪ್ರಸನ್ನ ಮೋದದಲಿ | ನಿನ್ನ ಪೊಲಿಸಿಲ್ಲಿಗೆ ಬಾಹಾ | ದೆನ್ನ ಭಕುತಿಗೆ ಮೆಚ್ಚಿ | ವಾಸುದೇವ 2 ಕಲಿಯುಗದೊಳಗೆ ವಿಪ್ರಕುಲದಲಿ ಮಾರುತಿ ಎನಿಸಿ | ಬಲು ಮಾಯಿಗಳ ಮೋಹನ ಶಾಸ್ತ್ರವಳಿದು ಬದರಿಯ | ಬಳಿಗೆ ಬಂದು ಶಿಲಾಪ್ರತಿಮೆಗಳನೆ ಪಡೆದು ತಂದು | ಪೊಳೆವಂದದಲಿ ಇಳೆಯೊಳಗೆನಲು 3 ಅಂದಿನಾರಭ್ಯ ಪಾರ್ವತಿನಂದನ ಕುಕ್ಕೆಪುರದಲ್ಲಿ | ನಿಂದು ಸರ್ವರಿಂದ ಪೂಜೆ ಚಂದದಿ ಕೊಳುತಾ | ಮಂದ ಕುಷ್ಟರೋಗಗಳ ಹಿಂದುಮಾಡಿ ಓಡಿಸಿ | ಗೋ ಪಾದ ಧ್ಯಾನದಿಂದ ಲೋಲಾಡುತಲಿರೆ 4 ಮರುತದೇವ ಸಂಪುಟಾಕಾರವಾದ ನೀನದರೊಳು | ಚಾರು ಸಿಲೆ ರೂಪವಾದ ಪಾರಾಶರ ಋಷಿ | ಧಾರುಣಿಗೆ ರಹಸ್ಯವ ತೋರಿಕೊಳುತಲಿ | ಮಾರ ಗೊಲಿದ ವಿಜಯವಿಠ್ಠಲಾ 5
--------------
ವಿಜಯದಾಸ
ಸತ್ಯಸಂಕಲ್ಪ ತ್ವಚಿತ್ತಾನುಸಾರ ತ್ವ ಚಿತ್ತ ವೃತ್ತಿಯು ನಿನಗೆ ಸರ್ವÀತ್ರದಿ ಪ ಉತ್ತಮೋತ್ತಮ ನೀನೆಗತಿ ಎಂ- ಉತ್ತರಿಸು ಭವಶರಧಿಯಲಿ ಎತ್ತಿ ಕಡೆಹಾಯಿಸುವುದೀಗಲೆ ಅ.ಪ ಜಗದಾಖ್ಯವೃಕ್ಷಕ್ಕೆ ಆದಿಕಾರಣನಾಗಿ ಜಗದೇಕವಂದ್ಯ ನೀನಾಧಾರನೋ ತ್ವಗಾದಿ ಜ್ಞಾನೇಂದ್ರಿಯಗಳೆಂಬೀ ಐದು ಬಿಳಲುಗಳೂ ಪಡೂರ್ಮಿಗಳೂ ಮೇಧ ಹೊದಿಕೆಗಳು ಪಂ ಮನ ಅಹಂಕಾರವೆಂದು ಪೊಟ್ಟರೆಗಳು 1 ಪ್ರಾಣಾದಿಪಂಚಕವು ಕೂರ್ಮ ಕೃಕಳಾದಿ ಪಂಚವಾಯುಗಳು ಪರ್ಣಗಳು ಹತ್ತೆನಿಸಿ ವೃಕ್ಷಕೆ ದುಃಖ ಸುಖವೆಂಬೆರಡು ಮೋಕ್ಷಗಳೆಂಬÉೂ ರಸಗಳು ಪಕ್ಷಿಗಳು ವಿಹರಿಸುತಲಿಹವು ಕರ್ಮಫÀಲವನು ಕಟಾಕ್ಷವಿಲ್ಲದೆ 2 ಅಡಿ ಮೇಲಾಗಿಹ ಗಿಡದೊಡೆಯ ನೀ ಗಿಡದೊಳು ಅಡಿಗಡಿಗೆ ಜೀವರೊಡಗೂಡಿ ಬಂದವರನು ನಿನ್ನೊಡಗೂಡಿ ಒಂದೇ- ಕಡೆಯಾಡುತಿಹ ಬಡಜೀವಿ ನಾನಯ್ಯ ಪಡೆದ ಫಲವದು ಬೆಂಬಿಡದೆ ಭೋಗಕೆ ಬರುತಲಿಹುದಯ್ಯ ಬಡಿದು ಉಣಿಸುವೆಯೊ ಬಿಡದಿರುವೆ ಎನ್ನೊಡೆಯಾ ಒಡೆಯ ನಿನ್ನೆದುರಿನಲಿ ನಾ ಪರಿಹರಿಸಿ ರಕ್ಷಿಸೊ ಮೃಡನುತ ಶ್ರೀ ವೇಂಕಟೇಶಾ 3
--------------
ಉರಗಾದ್ರಿವಾಸವಿಠಲದಾಸರು
ಸತ್ರಾಜಿತ ಕುಮಾರಿ ಗೃಹಕೆ ಪಕ್ಷಿವಾಹನ ತನ್ನ ಅಚ್ಛದ ಸತಿಯ ಕಾರಣನೆಲ್ಲೂ ಭಾಮೆ ಇಚ್ಛೆಯಿಂದಲಿ ಬಂದನಿಲ್ಲೆ 1 ಮಚ್ಛಲೋಚನೆ ನಗುತ ಅಚ್ಚಮುತ್ತಿನ ದ್ವಾರ್ಯ ಮುಚ್ಚುಕದವ ತೆಗೆಯದೆ ಭಾಮೆ ಅಚ್ಚುತನ ಕೂಡ ವಿನಯದಿ 2 ಮದಗಜಗಮನೆ ಕೇಳೆ ಗಜವರದನು ನಾನೆ ಕದವ ತೆಗೆಯೆ ಕಮಲಾಕ್ಷಿ ಭಾಮೆ ಮುದದಿ ನೋಡೆನ್ನ ನಿರೀಕ್ಷೆ 3 ಗಜವರದನೆ ಗಜವ ವಧೆ ಮಾಡಿದವನು ನಿನ್ನ ನೆಲೆಯ ಬಲ್ಲವರು ನಾವಲ್ಲ ಕೃಷ್ಣ ಕದವ ತೆಗೆಯೋರ್ಯಾರಿಲ್ಲ4 ಉದಕÀದೊಳು ಮುಣುಗಿ ಬ್ಯಾಗ ಮದಕದಿಂದ್ಹಯನ ಕೊಂದು ತವಕದಿ ವೇದವ ತಂದೆ ನಾನು ಭಾಮೆ ಮತ್ಸ್ಯ ನಾನೆ 5 ಹೊಳೆವೊ ಮತ್ಸ್ಯನಾದರೆ ಶರಧಿ ಹುಡುಕುತ ಹೋಗೊ ನಿನಗಾವಾಸಸ್ಥಾನಯಿದಲ್ಲ ಕೃಷ್ಣ ಜಲವೆನ್ನ ಮನೆಯೊಳಗಿಲ್ಲ 6 ಅಂಬುಧಿ ಮಥಿಸಿ ಅಮೃತ ತಂದು ಸುರರಿಗಿಟ್ಟು ಮಂದರವ ಬೆನ್ನಲಿ ತಾಳಿದೆನೆ ಭಾಮೆ ಸುಂದರ ಕೂರ್ಮನು ನಾನೆ 7 ಸುರರಸುರರ ಯುದ್ಧ ಬಿಟ್ಟು ಮೋಹಿನ್ಯಾಗಲ್ಲಿ ನಡೆ ನಾ ಸ್ತ್ರೀರೂಪ ನೋಡೋಳಲ್ಲ ಕೃಷ್ಣ ಛಲದಿಂದ್ವಂಚಿಸು ಹೋಗವರನೆಲ್ಲ 8 ಮಣ್ಣು ಕೆದರುತಲ್ಹೋಗ್ಹಿ- ರಣ್ಯಾಕ್ಷನ್ನ ಸೀಳಿ ಮನ್ನಿಸ್ಯವನಿಯ ತಂದೆ ನಾನೆ ಭಾಮೆ ವರಾಹ ನಾ ಬಂದೀನೆ 9 ವರಾಹ ನೀನಾದರೆ ಗರಿಗಂಹರವ ಸೇರೊ ಮನೆಗೆ ಬರುವೋದುಚಿತಲ್ಲ ಕೃಷ್ಣ ಮೆಲುವ ಬೇರೆನ್ನ ಮನೆಯೊಳಿಲ್ಲ 10 ತರಳ ಕರೆಯಲು ಕಂಬ ಒಡೆದಸುರನ ಒಡಲ ಕಡು ಕೋಪವನ್ನು ತಾಳಿದನೆ ಭಾಮೆ ವರಲಕ್ಷ್ಮೀನರಸಿಂಹ ನಾನೆ 11 ಕರುಳಾಧಾರಕ ಕೇಳೊ ಕರಾಳವದನಕ್ಕಂಜುವೆನು ಕಡುಕೋಪ ಎನ್ನೊಳು ತರವಲ್ಲ ಕೃಷ್ಣ ತರಳರಂಜುವರು ಲಕ್ಷ್ಮೀನಲ್ಲ 12 ಅಂಜೋದ್ಯಾತಕೆ ಚಿಕ್ಕ ಕÀಂದ ವಟುವು ಚೆಲ್ವ ಸುಂದರ ವಾಮನನು ನೋಡೆ ಭಾಮೆ ಬಂದೆನ್ನ ಗುಣವ ಕೊಂಡಾಡೆ 13 ಕಪಟ ರೂಪದಿ ದಾನ ತ್ರಿಪಾದ ಭೂಮಿ ಬೇಡಿದ ವಿಪರೀತ ಮಾಯವ ಕಂಡವಳಲ್ಲ ಕೃಷ್ಣ ಅಪರ್ಮಿತ ಗುಣ ಬಲಿ ಬಲ್ಲ 14 ಸರಸಿಜಮುಖಿ ಕೇಳೆ ನಿರುತ ಜಪತಪಾಚರಿಸಿ ಪರಶುರಾಮನು ನಾ ಬಂದೆನೆ ಭಾಮೆ ಶರಥ ಮಾಡದಿರೆನ್ನೊಳು ನೀನೆ 15 ನಿರುತ ನಿಷ್ಠೆಯ ಬಲ್ಲೆ ಗುರುತು ಮಾತೆಯ ಕೊಂದೆ ಸರಸವಾಡುವೋಳು ನಾನಲ್ಲ ಕೃಷ್ಣ ಶರಥÀ ಕ್ಷತ್ರಿಯರಲ್ಲಿದು ಹೋಗೆಲ್ಲ 16 ಎರಡೈದು ಶಿರಗಳ ಕಡಿದು ಜಾನಕಿದೇವಿ ಒಡಗೊಂಡಯೋಧ್ಯವನಾಳಿದೆನೆ ಭಾಮೆ ಪೊಡವಿಗೊಡೆಯ ರಾಮ ನಾನೆ 17 ಅಡವಿ ಅರಣ್ಯ ತಿರುಗಿ ಮಡದಿಗಪನಿಂದ್ಯವ ಕಟ್ಟಿ ಅಡವಿಗಟ್ಟ್ಯಂತಃಕರಣವಿಲ್ಲ ಕೃಷ್ಣ ಬಿಡು ನಿನ್ನ ಸುಳ್ಳು ವಚನವಿದೆಲ್ಲ 18 ಯದುವಂಶದೊಳು ಜನಿಸಿ ವಧೆಮಾಡಿ ದೈತ್ಯರ ನಿರ್ಭಯದಿಂದ ಬೆಳೆದೆನೆ ಭಾಮೆ ಮಧು ಮುರಾಂತಕÀ ಕೃಷ್ಣ ನಾನೆ 19 ಕಲಹ ಮಾಡುತ ಕಾಲ- ಯಮನಿಂದಲೋಡಿ ಬಂದು ನಿರ್ಭಯದಿಂದ ಬೆಳೆಯಲು ನಿಂದೆಲ್ಲ ಕೃಷ್ಣ ಮಲಗಿದ ಮುಚುಕುಂದ ಬಲ್ಲ 20 ನಿಗಮ ನಿಂದ್ಯವ ಮಾಡಿ ಬಗೆಯಿಂದ ತ್ರಿಪುರರ ಚೆದುರೆಯರನು ಒಲಿಸಿದೆನೆ ಭಾಮೆ ಸುಗುಣ ಶರೀರ ಬೌದ್ಧ ನಾನೆ 21 ತ್ರಿಪುರ ಸತಿಯರನೆಲ್ಲ ವಶಮಾಡಿದಂಥ ಶೂರ ವಸನರಹಿತಾಗಿ ತಿರುಗೋದÀಲ್ಲ ಕೃಷ್ಣ ಶಶಿಮುಖಿಯರು ನಗುವರೆಲ್ಲ 22 ಚೆಲುವ ತುರುಗನೇರಿ ಹೊಳೆವೋ ಕತ್ತಿಯ ಶೂರ ಖಳರ ಮರ್ದನ ಮಾಡುವೆನೆ ಭಾಮೆ ಥಳಥಳಿಸುವ ಕಲ್ಕ್ಯ ನಾನೆ23 ಕಲಿಯ ಸಂಹಾರ ಕೇಳೊ ನಿನ್ನ ಕತ್ತಿಗಂಜುವರ್ಯಾರೊ ಕಟಿಪಿಟ್ಯೆನ್ನೊಳು ತರವಲ್ಲ ಕೃಷ್ಣ ಕಲಿಗಳೆನ್ನರಮನೆಯೊಳಿಲ್ಲ 24 ಜಾಂಬವಂತನ್ನ ಗೆದ್ದು ತಂದೆ <
--------------
ಹರಪನಹಳ್ಳಿಭೀಮವ್ವ
ಸತ್ಸಂಗದ ಫಲ ಸದ್ಭಾವಿಯಾದವ ಸೇವಿಸಿಕೊಂಬುವನೈ | ಮತ್ಸರ ಮದದಲಿ ಯಚ್ಚರಗೊಳದಾಧಮ ಬದಿಲಿದ್ದೆ ನೈ ಪ ಬದಿಲಿಹ ಮಂಡೂಕಗೇನೈ | ಶ್ರೀಮಂತರು ಹಾಲವಕರಕೊಂಬರು | ಉಣ್ಣಿಗೆ ಫಲವೇನೈ 1 ಬಿದಿರು ಬೊಬ್ಬುಹಳಿಗೇನೈ | ಆಗಮಜ್ಞರ ವಿದ್ಯಾ ವ್ಯುತ್ಪನ್ನಗಲ್ಲದೇ ಜಡಮತಿಗಳಿಗೇನೈ | 2 ಭೂಗತ ಧನವದು ವಂಶಜಗವಲ್ಲದೇ | ಕಾದಿಹ ಫಣಿಗೇನೈ | ನುಡಿಯಿದು ನಂದನು ಸಾರಿದನೈ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸದ್ಗುರು ದಯಾ ಸಾಧ್ಯವಾಗದೇ ಜ್ಞಾನವಿಲ್ಲಾ | ಸದ್ಗತಿ ಕೀಲರಿತವನೇ ಬಲ್ಲಾ ಪ ಖಟಪಟ ವೃತದೊಳಿಲ್ಲಾ | ಘಟಮಟ ಶಬ್ದದೊಳಿಲ್ಲಾ | ಥಟ್ಟನೆ ಸಂಸಾರ ತೊರೆದರಿಲ್ಲಾ 1 ಬಹೂನಾಂ ಜನ್ಮನಾ ಜಾಯಂತೆ | ಜ್ಞಾನವಾನ್ ಮಾಂ ಪ್ರಪದ್ಯತೆ | ಶ್ರೀ ಹರಿ ಹೇಳಿದ ಗಾದಿಮಾತೆ 2 ವಸುಧಿಯೊಳೆಲ್ಲಾ ಜನಕೆ | ಹಿಂಗಾದರ ಸಾಧನ ಬೇಕು | ಋಷಿಮುನಿಗಳು ಸಾಹಸಬಡುವರ್ಯಾಕ 3 ಮನುಷ್ಯಣಾಂ ಸಹಸ್ರೇಷು | ವೆಂಬಾ ಗೀತೆಯ ನುಡಿಲೇಸು | ಜನದಲಿ ಗರ್ವಾಭಿಮಾನಿಗೆ ಬಿರುಸು 4 ಅಂಬು ತಾನು | ಎರಗುದೇ ಗುರಿಯಾ ಸ್ಥಳವನು | ಗುರುಮಹಿಪತಿ ನಂದನು ಸಾರಿದ ನಿಜನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸನ್ನುತ | ವಿಠಲ ಪೊರೆ ಇವಳಾ ಪ ಯಜನ ಯಜ್ಞಾಭಿದನೆ | ಗಜವರದ ಹರಿಯೇ ಅ.ಪ. ಗುರು ಹಿರಿಯರ ಸೇವೆ | ಈ ನೆರೆಮಾಳ್ವಳೇಕನ್ಯೆಕರ ಪಿಡಿದು ಪೊರೆ ಇವಳ | ಕಾರುಣ್ಯ ಸಿಂಧೋತರತಮಾತ್ಮಕ ಜ್ಞಾನ | ಮೂರೆರೆಡು ಭೇದಗಳಅರಿವಾಗುವಂತೆಸಗೊ | ಮರುತಾಂತರಾತ್ಮಾ 1 ದುರಿತ ರಾಶಿಗಳಳಿದು | ವರಸುವೈರಾಗ್ಯವನುಕರುಣಿಸುತ ಪೊರೆ ಇವಳ | ಧರೆಯಮರ ವಂದ್ಯಾಇರಿಸಿ ಸತ್ಸಂಗದಲಿ | ನೆರೆಸು ಸಾಧನಗೈಸೊಪರಮಾತ್ಮ ಪರಮೇಶ ಪರಿಪೂರ್ಣ ಹರಿಯೇ 2 ವನಧಿ ಉತ್ತರಿಸೊ | ಭವದೂರ ಹರಿಯೇಸವನತ್ರಯದಲಿ ನಿನ್ನ | ತವ ನಾಮ ಸ್ಮøತಿಯಿತ್ತುಅವನತಳ ಪೊರೆಯೊ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಸನ್ನುತ ವಿಠಲ | ಇವನ ಪೊರೆಯೋ ಪ ಅವಿಕಾರಿ ಆದ್ಯ ನಿರ | ವದ್ಯ ಎಲೊ ಹರಿಯೆ ಅ.ಪ. ತೈಜಸನೆ ನೀನಾಗಿ | ಮಾಜದಲ್ಯುಪದೇಶಯೋಜಿಸುವೆನೆಂದೆನುತ | ಪೇಳ್ದುದಕ್ಕಾಗೀಆರ್ಜವದ ಮನದಲ್ಲಿ | ಪ್ರಾರ್ಥಿಸಲು ಸ್ವಪ್ನದಲಿಯೋಚಿಸಿಹೆ ಅಂಕಿತವ | ಹೇ ನೈಜಮೂರ್ತೇ 1 ಚಿಣ್ಣನಿರುವನು ಇವನು | ಕಣ್ಣೆಗೆವೆಯಂದದಲಿಇನ್ನೀವನ ಕಾಯುವುದು | ಬನ್ನಬಡಿಸದಲೇಅನ್ನ ಆರೋಗ್ಯಕ್ಕೆ | ನಿನ್ನನೆ ಮೊರೆಯಿಡಲಿಅನ್ಯ ಹಂಬಲ ನೀಗೊ | ಪನ್ನಂಗ ಶಯನಾ 2 ತೊಡರು ಬರಲಿ | ಬಿಡದೆ ನಿನ್ನಂಘ್ರಿಯನುಧೃಡಭಕ್ತಿಯಿಂ ಸ್ಮರಿಪ | ಮುದ ಮನವ ನೀಯೋ |ಎಡಬಲದಿ ನೀನಾಗಿ | ಬಿಡದೆ ಬೆಂಬಲ ವಿರಲುಕಡು ಭವಾರ್ಣವವೆಲ್ಲ | ಅಡಿಯ ಪರಿಮಿತಿಯೋ 3 ಸಿರಿ ವಾಯು ಮೊದಲಾದಸುರರೆಲ್ಲ ಹರಿಯ ಕಿಂಕರರೆಂಬ ಮತಿಯಿತ್ತುಪೊರೆವುದಿವನನ ಎಂದು | ಹರಿಯೆ ಭಿನ್ನವಿಪೆ 4 ನಾಮ ಸ್ಮರಣೆ ಯೆಂಬ | ವಜ್ರಕವಚವ ತೊಡಿಸಿಈ ಮಹಾ ಕಲಿಯುಗದಿ | ಸಾಧನವ ಗೈಸೋಶ್ರೀ ಮನೋಹರ ಗುರು | ಗೋವಿಂದ ವಿಠಲಯ್ಯಈ ಮಹತ್ತುಪಕಾರ | ನಾ ಮರೆಯನಯ್ಯ 5
--------------
ಗುರುಗೋವಿಂದವಿಠಲರು
ಸನ್ನುತ ನಮೋಸ್ತು ಜಗದಾಧಾರಾ ಪ ನಮೋಸ್ತು ಮೀನ ಶರೀರಾ ಅ.ಪ ನಮೋಸ್ತು ಕೌಸ್ತುಭಧರಾ ಕೂರ್ಮ ಶರೀರಾ 1 ಮೃಗೇಂದ್ರ ಸದ್ಯುಶಾ ಶ್ರೀಪತೇ ವರಾಹ ರೂಪ ನಮೋಸ್ತುತೇ 2 ತಲ್ಪ ವಿರಾಜಿತೇ ಸನ್ನುತ ನೃಸಿಂಹರೂಪ ನಮೋಸ್ತುತೇ 3 ಪುರಂದರ ಫಲಪ್ರದಾ ಸಕಲೇಷ್ಟದಾ ನಮೋಸ್ತು ವಾಮನ ಶ್ರೀಕರಾ4 ರಮಾಮನೋಹರ ಶ್ರೀಹರೇ ಭಂಜನ ನಮೋಸ್ತು ಪರಶುಧರಾಹರೇ 5 ಪ್ರದೀಪ ಹನುಮತ್ಸೇವಿತ ಭವ ವಿನಾಶ ಭೂಮಿಸುತಾನ್ವಿತಾ 6 ಕೃಪಾಕರಾ ಪಶುಪಾಲಕಾ ಪ್ರವೀಣ ಗೋಪಬಾಲಕಾ 7 ಪಿತಾಯ ವ್ರತ ನಿರ್ಮೂಲತೇ ಬುದ್ಧ ಶರೀರತೇ 8 ಧರ್ಮೋದ್ಧರಾಯ ತುರಂಗ ವಿರಾಜತೇ ಗಮನ ಸುರೇಶ ಕಲ್ಕಿ ಮಹಾತ್ಮತೇ 9 ಪರ್ವತಧರ ಧರಾಯ ನೃಸಿಂಹತೇ ಪ್ರಬುದ್ಧಕಲ್ಕಿ ದಿಶಾಕಲತೇ 10 ಶುಭಾಂಗ ಗರುಡ ತುರಂಗತೇ ನಾರಾಯಣಾಯ ಭಕ್ತೋದ್ಧಾರತೇ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸನ್ಮಾರ್ಗಪಿಡಿದು ಸದ್ವಸ್ತಿಯೊಳು ಬೆರೆದಿಹ ಸದ್ಬ್ರಹ್ಮರಿಗೆ ನಮಸ್ಕಾರ 1 ಸದ್ಗುರು ಕೃಪೆಯಿಂದ ಸದ್ಗತಿಯ ಪಡೆದಿಹ ಸದ್ಭಕ್ತರಿಗೆ ನಮಸ್ಕಾರ 2 ಅಧ್ಯಾತ್ಮವಿದ್ಯ ಸಾದ್ಯ ಮಾಡಿಕೊಂಡಿಹ ಬುದ್ಧಿವಂತರಿಗೆ ನಮಸ್ಕಾರ 3 ಸಿದ್ಧಾಂತ ಅನುಭವದ ಸಾಧನವು ಬಲಿದಿಹ ಶುದ್ಧ ಬುದ್ಧರಿಗೆ ನಮಸ್ಕಾರ 4 ಇದೆ ನಿಜತಿಳಿದಿಹ ಸದ್ಬೋಧದಲ್ಲಿ ಪೂರ್ಣ ಸದ್ಭಾವಿಗಳಿಗೆ ನಮಸ್ಕಾರ 5 ಆದಿತತ್ವದ ನೆಲೆಯು ಭೇದಿಸಿ ಬೆರೆದಿಹ ಬುದ್ದಜನರಿಗೆ ನಮಸ್ಕಾರ 6 ಕ್ರೋಧ ಕಳೆದು ಸದಾ ಶಾಂತಪದಹೊಂದಿದ ಸಾಧುರಿಗೆ ನಮಸ್ಕಾರ 7 ಭಿನ್ನ ಭೇದವನಳಿದು ತನ್ನ ತಾ ತಿಳಿದ ಸುಜ್ಞಾನಿಗಳಿಗೆ ನಮಸ್ಕಾರ 8 ಮೇಲ್ಗಿರಿಯೊಳಗಿಪ್ಪ ಮೂಲಮೂರ್ತಿಯ ತಿಳಿವ ನೆಲೆವಂತರಿಗೆ ನಮಸ್ಕಾರ 9 ಮಾಯಮೋಹವನಳಿದು ಸೋಹ್ಯ ಸೊನ್ನೆಯ ತಿಳಿದ ಮಹಾಮಹಿಮರಿಗೆ ನಮಸ್ಕಾರ 10 ಆರುಮೂರನೆ ಗೆದ್ದು ಏರಿ ತ್ರಿಪುರ ದಾಟಿ ಮೀರಿಹರಿಗೆ ನಮಸ್ಕಾರ 11 ಮನಕರಗಿ ಘನ ಬೆರೆದು ತಾನೆ ತಾನಾಗಿಹ ಮೋನ ಮುಗ್ಧರಿಗೆ ನಮಸ್ಕಾರ 12 ತತ್ವಮಸಿ ಅರ್ಥದಿತ್ಯರ್ಥವನು ತಿಳಿದಿಹ ಮುಕ್ತಜನರಿಗೆ ನಮಸ್ಕಾರ 13 ತಾನರಿತು ಸುಖಿಯಾಗಿ ಇನ್ನೊಬ್ಬರಿಗೆ ಕಣ್ದೆರೆಸುತಿಹರಿಗೆ ನಮಸ್ಕಾರ 14 ತರಳ ಮಹಿಪತಿ ಹೊರೆವ ಅರುಹು ಕುರುಹವನಿತ್ತ ಗುರುಹಿರಿಯರಿಗೆ ನಮಸ್ಕಾರ 15
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಪ್ತಕೋಟಿ ಮಹಾಮಂತ್ರಾರ್ಥ ಹೃದಯಾಬ್ಜ ಚಕ್ರಮಂಡಲದೊಳು ಪ್ರತಿಪಾದ್ಯ ಪ ಮುದದಿಂದ ಜ್ಞಾನೇಛ್ಛಾ ಕ್ರಿಯಾ ಶಕ್ತಿ ತ್ರಯಗಳು ತದಭಿಮಾನಿಗಳ ನೆನೆದುದಳದಿ ಸೂರ್ಯ ಕರಿ ಅಜ ರಥ ವೀಥಿಗಳಧಕರಿಸಿ ಅದರ ಮೇಲೊಂದು ಮಂಡಲ ನಿರ್ಮಿಸಿ ಷÀಟ್ಸರೋ- ಜದಳಗಳನೆ ರಚಿಸಿ ಇದರೋಳು ಪೂರ್ಣ ಜ್ಞಾನ್ವೆಶ್ವರ್ಯ ಪ್ರಭಾನಂದ ತೇಜ ಸತ್ಯಮೂರ್ತಿಗಳ್ಚಿಂತಿಸೀ ಮಾಸ ತಾರಾರಾಶಿಗಳ ಗುಣಿಸಿ ಬದಿಯಲಿ ಏಕಾ ಪಂಚಾಶದ್ವರ್ಣ ತಿಳಿಯೋದಿದು ವ್ಯಾಪ್ತಿ 1 ಮೇಲೊಂದು ಮಂಡಲದ ಅಷ್ಟದಳಗಳಲಿ ಅಷ್ಟ ಬೀಜಾಕ್ಷರಗಳನೆ ರಚಿಸೀ ಶನಿ ರಾಹು ಗುರು ಬುಧ ಶುಕ್ರ ಸೋಮ ಮಂಗಳ ಕೇತುಗಳ ನಿರ್ಮಿಸಿ ವಲಯದಿ ಪ್ರಣವದಷ್ಟಕ್ಷರಗಳ ನಿರ್ಮಿಸಿ ವಿಶ್ವಾದ್ಯಷ್ಟರೂಪನನೆ ಚಿಂತಿಸಿ ಅದರಿಂದಭಿವ್ಯಕ್ತ ವರ್ಣಗಳ್‍ಭಜಿಸೀ ವರ್ಗಕೆ ತತ್ವತನ್ಮಾನಿಗಳನೆ ಚಿಂತಿಸಿ ಅಷ್ಟಾಕ್ಷರಾತ್ಮಕನ ದೃಢಮನಸಿನಿಂದ ಸ್ತುತಿಸಿ ಇದು ವ್ಯಾಪ್ತಿ2 ಮೇಲೊಂದು ಮಂಡಲ ದ್ವಾದಶದಳದೊಳ್ ದ್ವಾದಶ ಬೀಜಾಕ್ಷರ ಕೇಶವಾದಿ ದ್ವಾದಶನಾಮ ವರ್ಣವಿಭಾಗವು ರಾಶಿಗಳ ವಿವರ ವಲಯದಿ ತಾರಾಯೋಗಗಳ್ವಿಸ್ತಾರ ಮೇಲ್ಮಂಡಲದೊಳು ಚತುರ್ವಿಂಶತಿ ಬೀಜಾಕ್ಷರ ಕೇಶವಾದಿನಾಮ ತಾರೆರಾಶಿಗಳೆಣಿಸೀ ಮೇಲೆ ಐವತ್ತೊಂದು ಅಜಾದಿಗಳ ಚಿಂತಿಸಿ ಅಲ್ಲಿಹ ಶ್ರೀ ವೇಂಕಟೇಶಾತ್ಮಕ ಶ್ರೀ ಉರಗಾದ್ರಿವಾಸವಿಠಲ 3
--------------
ಉರಗಾದ್ರಿವಾಸವಿಠಲದಾಸರು