ಒಟ್ಟು 2782 ಕಡೆಗಳಲ್ಲಿ , 120 ದಾಸರು , 1941 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆಣಗಿದರಾಗದು ಒಣತರ್ಕದಲಿದಣಿದರೆ ಕೂಡದು ಭಕುತಿವನಜಾಕ್ಷನ ಕೃಪೆ ಮನಸ್ಸಾಕ್ಷ್ಯಾದರೆತನ ತಾನಾಹದು ಮುಕುತಿ ಪ.ಸೂಕ್ಷ್ಷ್ಮತತ್ವದಿ ದಕ್ಷನೆನಿಸದೆದೀಕ್ಷಿತ ನಾಮಿದ್ದೇನುಅಕ್ಷರಬಲದಲಿ ಲಕ್ಷವು ವೃಥಾಗುರುಶಿಕ್ಷಿಲ್ಲದ ಜನುಮೇನುಭಿಕ್ಷುಕ ಧಾನ್ಯದ ಲಕ್ಷ್ಷ್ಯದಲಿ ಪದ್ಮಾಕ್ಷನ ಪೊಗಳಿದರೇನುಕುಕ್ಷಿಯ ಲಾಭವುಅಕ್ಷಯತೋಷದಮೋಕ್ಷೋಪಾಯವದೇನು 1ದ್ರವ್ಯಾದಿವ್ರಯ ಹವ್ಯಾದಿಕ್ರಯಅವ್ಯಯಜೀವ ಸ್ವಭಾವಾಖ್ಯಕಾವ್ಯರಚನೆ ಶಬ್ದ ವ್ಯಾಕರಣದಹವ್ಯಾಸವು ಇಹ ಸೌಖ್ಯಅವ್ಯಾಕೃತ ನಾಮಾವ್ಯವಹಾರಿಲ್ಲದನವ್ಯ ಕಥಾಜನಸಖ್ಯದಿವ್ಯಮೂರುತಿ ವೇದವ್ಯಾಸಜಭವಸೇವ್ಯನ ನಿಷ್ಠೆಯೆ ಮುಖ್ಯ 2ಕಡು ಆದರದೊಳು ಕಡಲಳಿಯನ ಪದವಿಡಿಯದವನ ಶ್ರುತಿಶಾಸ್ತ್ರನಡುಹೊಳೆ ದಾಟುತ ತಡಿಯಲಿ ನಾವೆಯುಬುಡಮೇಲಾಯಿತು ವ್ಯರ್ಥದೃಢ ಪ್ರಸನ್ವೆಂಕಟ ಒಡೆಯನಾಚ್ಛಿನ್ನ ದಯಪಡೆದನುಗುರುಸುಖತೀರ್ಥನುಡಿಗಳ ಮಾಲೆಯ ತುಡುಗರ ತಮಸಕೆಬಡಿದಟ್ಟುವನು ಸಮರ್ಥ 3
--------------
ಪ್ರಸನ್ನವೆಂಕಟದಾಸರು
ಹೇಗೆ ಉದ್ಧಾರ ಮಾಡುವನು - ಶ್ರೀಹರಿ|ಹೀಗೆ ದಿನಗಳೆದುಳಿದವನ ಪರಾಗದಿಂದಲಿ ಭಾಗವತರಿಗೆ |ಬಾಗದಲೆ ತಲೆ ಹೋಗುವಾತನ ಅ.ಪಅರುಣೋದಯಲೆದ್ದು ಹರಿಯೆನ್ನದಲೆ ಗೊಡ್ಡು |ಹರಟೆಯಲಿ ಹೊತ್ತು ಏರಿಸಿದವನ ||ಸಿರಿತುಲಸಿಗೆ ನೀರನೆರೆದು ನಿರಂತರ |ಧರಿಸದೆಮೃತ್ತಿಕೆತಿರುಗುತಲಿಪ್ಪನ ||ಗುರುಹಿರಿಯರ ಸೇವೆ ಜರೆದು ನಿರಂತರ |ಪರನಿಂದೆಯ ಮಾಡಿ ನಗುತಿಹನ ||ಪರಹೆಣ್ಣು ಪರಹೊನ್ನು ಕರಗತವಾಗಲೆಂದು |ಪರಲೋಕ ಭಯಬಿಟ್ಟು ತಿರುಗುವನ ||ತರುಣಿ ಮಕ್ಕಳನು ಇರದೆ ಪೋಷಿಸಲೆಂದು |ಪರರ ದ್ರವ್ಯ ಕಳವು ವಂಚನೆ ಮಾಳ್ಪನ2ನಡೆಯಿಲ್ಲ ನುಡಿಯಿಲ್ಲ ಪಡೆಯಲಿಲ್ಲ ಪುಣ್ಯವ |ಬಿಡವು ನಿನ್ನ ಪಾಪಕರ್ಮಗಳೆಂದಿಗು ||ಸಡಲಿದಾಯುಷ್ಯವು ಕಡೆಗೂ ಸ್ಥಿರವೆಂದು |ಕಡುಮೆಚ್ಚಿ ವಿಷಯದೊಳಿಪ್ಪನ ||ಒಡೆಯ ಶ್ರೀಪುರಂದರ ವಿಠ್ಠಲರಾಯನ |ಅಡಿಗಳ ಪಿಡಿಯದೆ ಕಡೆಗೂ ಕೆಟ್ಟವನ 3
--------------
ಪುರಂದರದಾಸರು
ಹೇಮದ ತೊಟ್ಟಿಲ ಭಾಮೆಯರ್ಹೂಡಿಕೋಮಲ ಕಾಂಚನಧಾಮವ ಮಾಡಿಕಾಮಜನಕನೊಳು ಕಾಮಿತ ಬೇಡಿಪ್ರೇಮದಿ ತೂಗಿದರ್ನಾಮದಿ ಪಾಡಿ ಜೋ ಜೋ 1ಚೆನ್ನಿಗರರಸ ಮೋಹನ್ನ ಸುಶೀಲಕನ್ನಡಿ ಕದಪಿನಕಮನೀಯಬಾಲಪುಣ್ಯವೃಕ್ಷಗ ಫಲ ಪೂರ್ಣೇಂದು ಲೀಲನಿನ್ನ ರಕ್ಷಿಸಲಿ ಪ್ರಸನ್ನ ಗೋಪಾಲ ಜೋ ಜೋ 2ಕೆಂದಾವರೆಯಂತೆ ಚೆಂದುಳ್ಳಚರಣಚಂದಿರವದನ ಗೋವಿಂದನ ಶರಣಮುಂದಿನ್ನು ಸೌಭಾಗ್ಯ ಹೊಂದೆನ್ನ ತರುಣಕಂದ ಕಂದರ್ಪನ ಸುಂದರಾಭರಣ ಜೊ ಜೋ 3ಶ್ರೇಯಾರೋಗ್ಯ ದೀರ್ಘಾಯು ಸಂಪೂರ್ಣನ್ಯಾಯ ನೀತಿ ಸದುಪಾಯ ಸಂಪನ್ನಪ್ರೀಯನೆ ಕರ್ಣಾಂತಾಯತನಯನಕಾಯಲಿ ಲಕ್ಷ್ಮೀನಾರಾಯಣ ನಿನ್ನ ಜೋ ಜೋ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹೇಮಾಂಬರವನುಟ್ಟು ತತ್ವವ ಕೇಳುತ ಕೈಮುಗಿದಿಹಳವಳಾರೆಭೂಮಿಗೆ ಕರ್ತಾ ಬ್ರಹ್ಮಾಂಡ ಕೋಟಿಗೆ ತಾಯಿಯಾದ ಬಗಳೆ ವೀರೆಪಹರಡಿಯ ತಿರುವುತ ಹೂಗಳ ಬೀರುತಹರಿದಾಡುತಿಹಳವಳಾರೆಪರಮಬಗಳೆ ಚಿದಾನಂದ ಗುರುವ ಕಾಯ್ದುಇರುಳು ಹಗಲು ಇಹವೀರೆ1ಮುಸಿ ಮುಸಿ ನಗುತಲಿ ಕರುಣೆಯ ತೋರುತಹೊಸಬಳು ಇಹಳವಳಾರೇಶಶಿಜೂಟೆ ಬಗಳ ಚಿದಾನಂದ ನೆಡಬಲಅಸಿಯ ಹಿಡಿದುಕಾವವೀರೆ2ಘುಲು ಘುಲು ನಡೆಯುತ ಢಾಲು ಕತ್ತಿಯ ಹಿಡಿದುಗಾಳಿ ಹಾಕುತಳಿಹಳವಳಾರೆಖಳನಾಶ ಬಗಳೆ ಚಿದಾನಂದನಲಿಬಳಿಕ ಮನ್ನಣೆ ಪಡೆದ ವೀರೆ3
--------------
ಚಿದಾನಂದ ಅವಧೂತರು
ಹೊಲೆಯ ಹೊರಗಹನೆ ಊರೊಳಗಿಲ್ಲವೆಸಲೆ ಶಾಸ್ತ್ರವನು ತಿಳಿದು ಬಲ್ಲವರು ನೋಡಿ ಪ.ಭಾಳದಲಿ ಭಸಿತ ಭಂಡಾರವಿಡದವ ಹೊಲೆಯಕೇಳಿ ಸಲೆ ಶಾಸ್ತ್ರವನು ತಿಳಿಯದವ ಹೊಲೆಯಆಳಾಗಿ ಅರಸರಿಗೆ ಕೈಮುಗಿಯದವ ಹೊಲೆಯಸೂಳೆಯರ ಕೊಡುವಾತನೇ ಶುಧ್ಧ ಹೊಲೆಯ 1ಇದ್ದ ಧನ ದಾನ - ಧರ್ಮವ ಮಾಡದವ ಹೊಲೆಯಕದ್ದು ತನ್ನೊಡಲ ಹೊರೆವಾತನೇ ಹೊಲೆಯಬದ್ಧವಹ ನಡೆ - ನುಡಿಗಳಿಲ್ಲದಿದ್ದವ ಹೊಲೆಯಮದ್ಧಿಕ್ಕಿ ಕೊಲುವವನೆ ಮರಳು ಹೊಲೆಯ 2ಆಶೆಯನು ತೋರಿ ಭಾಷೆಗೆ ತಪ್ಪುವವ ಹೊಲೆಯಲೇಸು ಉಪಕಾರಗಳನರಿಯದವ ಹೊಲೆಯಮೋಸದಲಿ ಪ್ರಾಣಕ್ಕೆ ಮುನಿಯುವವನೇ ಹೊಲೆಯಹುಸಿಮಾತನಾಡುವವನೇ ಸಹಜ ಹೊಲೆಯ3ಕೊಂಡ ಋಣವನು ತಿರುಗಿ ಕೊಡಲರಿಯದವ ಹೊಲೆiÀುಭಂಡ ಮಾತುಳಾಡುವವನೆ ಹೊಲೆಯಗಂಡ - ಹೆಂಡಿರ ನಡುವೆ ಭೇದಗೈವವ ಹೊಲೆಯಹೆಂಡರಿಚ್ಚೆಗೆ ನಡೆವ ಹೇಡಿ ಹೊಲೆಯ 4ಪರಧನಕೆ ಪರಸತಿಗೆ ಅಳುಪಿದವನೇ ಹೊಲೆಯಗುರು ಹಿರಿಯರನು ಕಂಡು ಎರಗದಿದ್ದವ ಹೊಲೆಯಅರಿತು ಆಚಾರವನು ಮಾಡದಿದ್ದವ ಹೊಲೆಯಪುರಂದರವಿಠಲನನು ನೆನೆಯದವ ಹೊಲೆಯ 5
--------------
ಪುರಂದರದಾಸರು
ಹ್ಯಾಂಗೆ ಶೋಭಿಸುವ ನೋಡೆ ಯಾದವ ಕೃಷ್ಣಹ್ಯಾಂಗೆ ಶೋಭಿಸುವ ನೋಡೆ ಪಮಂಗಳ ಮಹಿಮ ಶ್ರೀರಂಗ ತನ್ನವರಿಗೆ ಅ.ಪಘಲುಘಲು ಘಲುರೆನ್ನುತ ಕಾಲ್ಗಡಗ ನೂ-ಪುರಗೆಜ್ಜೆ ಸರಪಣಿಯುಸರಿಗೆಳೆಯರ ಕೂಡಿ ಮುರಳಿಯ ಧರಿಸುತಹರುಷದಿಂದಲಿ ಸಪ್ತಸ್ವರಗಳ ನುಡಿಸುತ್ತ 1ಉಟ್ಟ ಪೀತಾಂಬರವು ನಡುವಿಗೆ ಜರದಪಟ್ಟೆಯ ಚಲ್ಲಣವುಗಟ್ಟಿ ಕಂಕಣ ಕೈಗಳಿಟ್ಟು ಕಟಿಯ ಮೇಲೆಭಕ್ತವತ್ಸಲ ಸ್ವಾಮಿ ಸೃಷ್ಟಿಪಾಲಕ ಕೃಷ್ಣ 2ಎಳೆ ತುಳಸಿಯ ಮಾಲೆಯು ಕಂಠದಿ ಮೆರೆವಪದಕಕೌಸ್ತುಭಮಣಿಯುನಳಿನಲೋಚನೆಯ ಉರದಲ್ಲಿ ಧರಿಸಿಕೊಂಡುಚಲುವ ಚನ್ನಿಗನಾಗಿ ಹೊಳೆಯುವ ದೇವನು 3ಕೋಟಿ ಸೂರ್ಯರ ಸೋಲಿಪ ಮುಖಕಾಂತಿಯಸಾಟಿಯಾರುಂಟವಗೆನೀಟಾಗಿ ಕರ್ನಕುಂಡಲ ಕಿರೀಟವು ಹೊಳೆಯೆಲಲಾಟದಿ ಕಸ್ತೂರಿ ತಿಲುಕವು ಹೊಳೆಯುತ್ತ 4ಕಂಗಳ ಕುಡಿನೋಟದಿ ಸಜ್ಜನರ ಪಾ-ಪಂಗಳ ಪರಿಹರಿಸಿಮಂಗಳ ಮಹಿಮ ಶ್ರೀರಂಗ ಮೂರುತಿ ಸಾಧುಸಂಗ ವಂದಿತಸಿರಿಕಮಲನಾಭ ವಿಠ್ಠಲ5
--------------
ನಿಡಗುರುಕಿ ಜೀವೂಬಾಯಿ