ಒಟ್ಟು 3136 ಕಡೆಗಳಲ್ಲಿ , 126 ದಾಸರು , 2157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಣ್ಣಿಸಲಳವೆ ನಿನ್ನ |ಪನ್ನಗಶಯನಪ್ರಪನ್ನವತ್ಸಲ ರಂಗ ಪಮಧು ಕೈಟಭಾಂತಕನೆ ಮಧುರಾಪತಿ ಜಿತನೆ |ಮಧುಸಖಜನಕನೆ ಮಧುಮಾಂಶ್ರಿಯಾಂಬಕನೇ1ಋಷಿ ಪತ್ನಿಯರ ಮೋಹಕ, ಋಷಿ ಪತ್ನಿಯತಾರಕ|ಋಷಿ ಪತ್ನಿಯ ನಾಶಕ ಋಷಿ ಪತ್ನೀ ಬಾಲಕ 2ಪದುಮ ಸಂಭವನಯ್ಯ ಪದುಮೇಶಕವಿಗೇಯ |ಪದುಮಾವರದಜೀಯಪದುಮಜಾಂಡದೊಡೆಯ3ಭಾನುಕೋಟಿ ಪ್ರಕಾಶ ಭಾನುಲೋಚನಾಧೀಶ |ಭಾನುಪ ಸುತ ಪೋಷ ಭಾನುಪಾಣಿ ನಿರ್ದೋಷ 4ಹರಿಪ್ರಾಣೇಶ ವಿಠಲಯ್ಯಹರಿಶಯನ ಮತ್ಪ್ರಿಯ |ಹರಿಯಾಸ್ಯ ನರದೇಹ ಹರಿಸುವುದಘ ತ್ವರಿಯಾ 5
--------------
ಪ್ರಾಣೇಶದಾಸರು
ಬಂದನಕ್ರೂರ ವ್ರಜಕೆ ಗೋಪೀ ಕಂದನ ಚರಣಾರ |ವಿಂದ ಕಾಂಬುವೆ ನಿಂದಿನ ದಿನ ಸುದಿನೆಂದು ಪಎಷ್ಟು ಜನ್ಮದಸುಕೃತಒದಗೀತೋ ಈ |ದುಷ್ಟನ ಸಂಗದಿಂದ ||ಬಿಟ್ಟು ಇಚ್ಛಾನುಸಾರದಿ ಗೋಕುಲದಮಾರ್ಗ|ಮೆಟ್ಟಿದೆಹರಿದಯೆಯಾದದ್ದು ನೋಡೆಂದು 1ಒಂದೊಂದು ಹೆಜ್ಜೆಗಳ ಬರುತ ಕ್ರಮ- |ದಿಂದ ಯಮುನೆಯ ದಾಟಿ ||ವೃಂದಾವನದ ಭೂಮಿ ಕಾಣುತ ಬಹು ಮುದ- |ದಿಂಧರಿ ಹರಿಯೆಂದು ನಯನೋದ (ಕ)ಸುರಿಸುತ್ತ 2ಇಲ್ಲೆಲ್ಲ ಸಂಚಾರವ ಮಾಡಿಹ ಖಳ- |ದಲ್ಲಣನೆಂದು ಧೂಳೀ- |ಯಲ್ಲ್ಯುರುಳುತ ಪೊಗಳುತ ಶ್ರೀ ಪ್ರಾಣೇಶ ವಿ- |ಠಲಗೆರಗಿ ಕೈ ಮುಗಿದು ನಿಂದ ತುತಿಸುತ 3
--------------
ಪ್ರಾಣೇಶದಾಸರು
ಬಂದೆಯಾ ಪರಿಣಾಮದಿ ನಿನ್ನಬಂಧು ಬಳಗವನೆಲ್ಲ ಬಿಟ್ಟು ಸನ್ಮಾರ್ಗದಿ ಪಸಂಚೀತ ಪ್ರಾರಬ್ಧ ಕರ್ಮಂಗಳನೆಲ್ಲಕಿಂಚಿತು ಮಾಡಿ ಸಂಕೋಲೆಯ ಹಾಕಿ ||ಮಿಂಚುವ ಧನ - ಪುತ್ರ ದಾರೇಷಣಂಗಳವಂಚಿಸಿ ಕವಲು ದಾರಿಯ ಬಿಟ್ಟು ಮಾರ್ಗದಿ 1ಕಾಮವ ಖಂಡಿಸಿ ದ್ರೋಹವ ದಂಡಿಸಿನಾಮರೂಪ ಕರ್ಮಂಗಳ ನಿಂದಿಸಿ ||ತಾಮಸಕರ್ಮನಡತೆಯ ತಗ್ಗಿಸಿ ನಿರ್ನಾಮ ಮಾಡಿ ಮದ-ಮತ್ಸರಂಗಳನೀಗಿ2ಅಷ್ಟಭೋಗಂಗಳ ನಷ್ಟಂಗಳ ಮಾಡಿಅಷ್ಟೈಶ್ಚರ್ಯವ ಮಟ್ಟು ಮಾಡಿ ||ಅಷ್ಟ ಪ್ರಕೃತಿಗಳ ಕುಟ್ಟಿ ಕೆಡಕಿ ಬಹಳನಷ್ಟತುಷ್ಟಿಗಳಲ್ಲಿ ದೃಷ್ಟಿಯೇನಿಲ್ಲದೆ 3ಸ್ಥೂಲ ಸೂಕ್ಷ್ಮ ಕಾರಣ ದೇಹಂಗಳನೆಲ್ಲಬೀಳುಗೆಡಹಿ ಪಂಚಭೂತಂಗಳ ||ಪಾಳು ಮಾಡಿ ಪಂಚ ಪಂಚ ಇಂದ್ರಿಯಗಳಕೋಳಕೆ ತಗುಲಿಸಿ ಕೊನಬುಗಾರನಾಗಿ 4ಹೊಳೆವ ಪ್ರಪಂಚದ ಬಲೆಯ ಬೀಸಿ ಸಂಗ-ಡಲೆ ಸಾಗಿ ಬರುತಿಹ ದಾರಿಯೊಳು ||ಒಲಿದು ಮುಕ್ತಿಯನೀವ ಪುರಂದರವಿಠಲನುಬಲವನಿತ್ತುದರಿಂದೆ ನಾನು ನೀನೆನ್ನದೆ 5
--------------
ಪುರಂದರದಾಸರು
ಬನ್ನಿಗಡ ಸುಜನರೆಲ್ಲ ಪಾವನಕಾಯ ಸುಜನಪ್ರಿಯಪುಣ್ಯ ಸತ್ಯನಾಥಯತಿರನ್ನನ ಪಟ್ಟಣಕಿಂದು ಪ.ಪರಬೊಮ್ಮನೆಂಬುವ ಮನೆದೈವನಾಗಿಹಪರಸುಖವನೀವ ಮರುತದೇವನೆಂಬಾತಪರಮಪದದ ಗುರುವು ಯುಕ್ತಿಯಿಂದ ಕಾಪುರುಷರಗಲಿಸುವಂತೆ ಸತ್ಯನಾಥಪುರಪತಿಗೆ ಬೋಧಿಸುವ ಪರಮವಾರ್ತೆಯ ಕೇಳ 1ನವಭಕುತಿರತುನದಿಂದ ನಿರ್ಮಿತ ಪ್ರಾಕಾರಕೆನವದ್ವೇಷಿಗಳು ದಾಳಿಯಿತ್ತು ಅಂಡಲೆಯಲು ದಾನವಾರಿಯ ನಾಮಾಯುಧವ ಸತ್ಯಾಭಿನವÀÀ ತೀರ್ಥರೆಂಬೊ ಪುತ್ರಗೆ ನೀಡುತಮಾನವ ಹರಿಯೆಂಬಸುರರ ಮಡುಹಿಸುವುದು ನೋಡ 2ಕಾಯಜಚೋರನೆಂಬವ ತಾ ಕಳ್ಳ ಹನ್ನೊಂದರ ಕೂಡಿಕಾಯವೆಂಬ ರಾಜಗೃಹಕೆ ಕನ್ನವಿಕ್ಕುವುದ ಕಂಡುಕಾಯುವ ಜ್ಞಾನೆಂಬ ಭಟನು ಅಟ್ಟಲವನಕೈದು ಚಾಪವ ಸೆಳೆದು ಮಿಕ್ಕು ಚೋರನೀಕಾಯಕಟ್ಟಿಸುವಂಥ ಕರುಣಿಗೆ ನಮಿಸುವ3ಹರಿದಾಸರೆನಿಸುವ ಹಲವು ದೊರೆಗಳುಂಟುಹರದಾರಿಕ್ಕೆಲದಿ ಪಣ್ಯವ ಮಾಡಿ ಸುಧೆüವೀರಿಹರಿತತ್ವ ನಾಣ್ಯದೊಳು ರಾಮನಾಮದಹಿರಿದುಮುದ್ರೆಯನೊರೆದು ಪರಂಪರಹರುಷ ವ್ಯವಸಾಯವುಂಟು ಹಿರಿಯಾಮೃತವುಣ್ಣ 4ಅಭಿನವ ಚಂದ್ರಿಕೆದೋರಿ ಅಭಿಜ್ಞಾನತೆ ಮೆರೆದಅಭೀತ ಮಂಗಳಗಾತ್ರ ಅಮಿತ ಬುಧರಮಿತ್ರಅಭಿಜÕಗುರು ಸತ್ಯನಿಧಿಯ ಸುತ ಸತ್ಯನಾಥಅಭು ಪ್ರಸನ್ವೆಂಕಟೇಶನ ಭಜಕನ ಕವಿತಅಬುಜ ಪರಿಮಳಮಂದಾನಿಲವಿಡಿವಳಿಯಂತೆ 5
--------------
ಪ್ರಸನ್ನವೆಂಕಟದಾಸರು
ಬರಬೇಕೋ ರಂಗಯ್ಯ ನೀ - ಬರಬೇಕೊ ಪಬರಬೇಕೊ ಬಂದು ಒದಗಬೇಕೊ ಮಮಗುರು |ನರಹರಿ ನಾರಾಯಣ ನೀನಾ ಸಮಯಕೆ ಅ.ಪಕಂಠಕೆ ಪ್ರಾಣ ಬಂದಾಗ - ಎನ್ನ |ನಂಟರಿಷ್ಟರು ಬಂದಳುವಾಗ ||ಗಂಟು ಹುಟ್ಟಿನ ಕಾಲಬಂಟರು ಕವಿದೆನ್ನ |ಗಂಟಲೌಕುವಾಗ ವೈಕುಂಠನಾರಾಯಣ 1ನಾರಿಯು ಪುತ್ರ ಮಿತ್ರರು -ಬಂಧುಗಳು |ಆರೆನ್ನ ಸಂಗಡ ಬಾರರು ||ಆರಿಗಾರಿಲ್ಲ ಯಮನಾರುಭಟಕೆ ಅಸು-|ರಾರಿ ಮೈಮರೆದಾಗ ನೀರೇರುಹನಾಭ 2ಕರಿಪ್ರಹಲ್ಲಾದಾದಿ ಭಕ್ತರ -ಪತಿ|ಕರಿಸಲು ಒದಗಿದೆ ಶ್ರೀಧರ ||ನೆರೆಹೀನನೆನ್ನ ಉದ್ಧರಿಸಿಅಚ್ಯುತನಿನ್ನ |ಚರಣದೊಳಿಂಬಿಡೊ ಪುರಂದರವಿಠಲ 3
--------------
ಪುರಂದರದಾಸರು
ಬಲ್ಲವರಿಗರಿದಲ್ಲ ಪ್ರಮೇಯವಲ್ಲಬೆಳ್ಳಿ-ಭಂಗಾರಲ್ಲ ಮೆಲುವದಲ್ಲ ಪಕಣ್ಣೆವೆಯನಿಕ್ಕದು ಮತ್ಸ್ಯಾವತಾರನಲ್ಲ |ಘನ್ನ ಕಠಿಣವುಕೂರ್ಮರೂಪಿಯಲ್ಲ ||ಮಣ್ಣು ತಿಂಬುವದು ಇಟ್ಟಲ್ಲೆ ವರಹನೂ ಅಲ್ಲ |ಇನ್ನು ಬಾಯ್ದೆರೆದಿಹುದು ನರಸಿಂಹನಲ್ಲ 1ಮದುವೆಯಾಗಿಲ್ಲವು ವಾಮನಾವತಾರಲ್ಲ |ವದಗಿ ಛೇದಿಸುವದು ಭಾರ್ಗವಲ್ಲ ||ಮುದದಿಂದ ಅನ್ನವುಣ್ಣದು ದಾಶರಥಿಯಲ್ಲ |ತುದಿ ಮೊದಲು ಕಪ್ಪು ಶ್ರೀ ಕೃಷ್ಣನಲ್ಲ 2ಬತ್ತಲೆ ಇರುವದು ಬುದ್ಧಾವತಾರಲ್ಲ |ಕತ್ತರಿಸುವುದು ಬಿಡದೆ ಕಲ್ಕಿಯಲ್ಲ ||ಸತ್ಯಸಂಕಲ್ಪಶ್ರೀ ಪ್ರಾಣೇಶ ವಿಠಲನ |ಭೃತ್ಯರೇ ಬಲ್ಲರೀ ಗೋಪ್ಯ ಸೊಲ್ಲ 3
--------------
ಪ್ರಾಣೇಶದಾಸರು
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶಮಾಧವಮಧುರಿಪು ಮಾನುಷವೇಷ ಶರಣಾಗತಪೋಷಪ.ವೇದಾಗಮ್ಯ ದಯೋದಧಿ ಗೈದಪ-ರಾಧ ಕ್ಷಮಿಸಿ ಸುಗುಣೋದಯನಾಗುತ ಅ.ಪ.ಅನಾಥ ಜನರ ಕಾಮಧೇನು ಕಾಯೊ ಎಮ್ಮನುದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನುಆನತಜನ ಸುತ್ರಾಣಿಸುವಂತೆ ಪ್ರ-ದಾನಿಯಂತೆ ಶತಭಾನು ಪ್ರಕಾಶದಿ 1ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮಕಾಟಕ ಮನಸಿನ ಮಾಟವ ನಿಲ್ಲಿಸಿಘೋಟಕಾಸ್ಯ ನರನಾಟಕಧಾರಿ 2ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆಕಾಣಿಸದೆಮ್ಮಲಿ ಮೌನವ ಮಾಳ್ಪರೆದೀನಜನರ ದುಮ್ಮಾನಗೊಳಿಸುವರೆ 3ಹಿಂದೆಮ್ಮ ಕಾಯ್ದವ ನೀನೆಹರಿಸುರನರ ಕೈವಾರಿಮಂದಜ್ಞಾನಿಗಳ ತಪ್ಪನುಮಾರಿಮೂರ್ಲೋಕೋದ್ಧಾರಿಹೊಂದಿದವರಿಗೆಂದೆಂದಿಗು ಬಿಡನೆಂ-ಬಂದವ ತೋರಿ ಆನಂದವ ಬೀರುತ 4ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದಒಪ್ಪಿಸಿದೆಮ್ಮಭಿಪ್ರಾಯವ ತಿ-ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಾ ಬಾರೋ ಬಾರೋ ಬೇಗ ಬಾರೊ ಮುರವೈರಿ |ಬಾರೋ ಮುರವೈರಿ |ಬಾರೋ ಮುರವೈರಿ ತೋರೋ ದಯವ ಶೌರೀ ಪನೀನಲ್ಲದಲ್ಲದೆಮ್ಮ ಇನ್ಯಾರು ಇನ್ನು ಪೊರೆವರು |ಯಾರು ಇನ್ನು ಪೊರೆವರೂ | ಯಾರು ನª À ್ಮು ಕರೆವರೂ 1ಕಾಯದೊಳು ಮಾಯತುಂಬಿ| ಪ್ರಾಯ ಮದಗರ್ವದೀ |ಪ್ರಾಯಮದಗರ್ವದೀ | ಹೇಯವಾದೆ ಸರ್ವದೀ 2ಬಂಧುಗಳು ಬಾಂಧವರೆಂದೆಂದು | ಮನ ಬಂದದಿ |ಎಂದು ಮನ ಬಂದದೀ| £Éೂಂದೆನು ಗೋವಿಂದನೇ 3
--------------
ಗೋವಿಂದದಾಸ
ಬಾಣವದನ ಸಲಹೋ - ನಾ ನಮಿಸುವೆ |ಬಾಣವರದ ನಿನಗೆ | ಹರ ಹರ ಪಕುಧ್ರೇಡ್ಜ ಮುಖ ಕಂದ-ರವಿಅಘ|ಅದ್ರಿಸಮೂಹ ಋಷಿಜಾ | ಹರಹರ ||ನಿದ್ರರಹಿತ ವಿಧಿಜಾ ಸತತ ಅ- |ಭದ್ರ ಭಕ್ತರಿಗೆ ಕುಜ 1ಗಜಋಷಿ ಅಂಬಕನೆಪಶುಪತಿ|ತ್ರಿಜಗದಿ ಪೂಜಿತನೆ | ಹರಹರ ||ಅಜಿನಾಂಬರ ಧರನೇ ಕರುಣಿಸೊ |ವಿಜಯೇಕ್ಷಣ ಶಿವನೆ | ಹರಹರ 2ಕಾಮಾದಿ ಮುಖ ಜನಕ ಧೂರ್ಜಟ |ಭೂಮಿಜವೈರಿಸಖಾ | ಹರಹರ ||ಸಾಮಜರಿಪುಧನಿಕ ಮಿತ್ರನೆ |ಕಾಮಿತ ಫಲದಾಯಕ | ಹರಹರ 3ಧರಣಿಜೆ ರಮಣ ನಾಮಾ ಸರ್ವದಾ |ಸ್ಮರಿಸುವೆನತಪ್ರೇಮಾ || ಹರಹರ ||ಗರಳನಾಶನ ಭೀಮವಿಕ್ರಮ|ಸರೋಜ ಧ್ವಜ ವಿರಾಮ | ಹರಹರ 4ಘನನಿಭ ಪ್ರಾಣೇಶ ವಿಠ್ಠಲ |ನನುಗನೆನಿಪುದನಿಶ | ಹರಹರ ||ಘನಮಹಿಮನೆ ಈಶಕುಧರ| ಸ-ದನನಾಕಜಪೋಷ | ಹರಹರ 5
--------------
ಪ್ರಾಣೇಶದಾಸರು
ಬಾಯ್ಬಡಿಕರಿಂದ ನಾನು ಬದುಕಿದೆನು - ಅವರು -|ಮಾಡಿದುಪಕಾರವ ಮರೆಯೆ ಶ್ರೀ ಹರಿಯೆ ಪಹಂಗಿಸಿ ಹಂಗಿಸಿ ಮನವ ಹರಿಯಲಿ ನಿಲಿಸಿದರು |ಭಂಗಿಸಿ ಭಂಗಿಸಿ ಬಯಲಾಸೆ ಕೆಡೆಸಿದರು ||ಕಂಗೆಡಿಸಿ ಕಂಗೆಡಿಸಿ ಕಾಮ ಕ್ರೋಧ ಬಿಡಿಸಿದರು |ಹಂಗಿಸಿದವರೆನ್ನಪರಮಬಂಧುಗಳು1ಜಾಡಿಸಿ ಜಾಡಿಸಿ ಎನ್ನ ಜನ್ಮಗಳ ಕಳೆದರು |ಹೂಡಿಸಿ ಹೂಡಿಸಿ ಹುಟ್ಟು ಹೊಂದುಗೊಳಿಸಿದರು ||ಪೀಡಿಸಿ ಪೀಡಿಸಿ ಎನ್ನ ಪ್ರಯತ್ನವ ಕಳೆದರು |ಕಾಡಿ ಕಾಡಿಕೈವಲ್ಯಪದವಿತೋರಿದರು2ಕಾಸು ಮುಟ್ಟಿದಾಗಕಾಯಪ್ರಾಯಶ್ಚಿತ್ತಕಿಕ್ಕಿದರು |ದೂಷಿಸಿ ದೂಷಿಸಿನಿರ್ದೋಷಮಾಡಿದರು ||ಲೇಸನು ಕೊಡು ನಮ್ಮಪುರಂದರವಿಠಲನೆ ||ದಾಸನೆಂದೆನಿಸುವರನುದಿನದಲಿ ಎನ್ನ 3
--------------
ಪುರಂದರದಾಸರು
ಬಾರಮ್ಮ ಸರಸ್ವತಿ ಬಾ ದ್ರುಹಿಣಯುವತಿಬಾ ನಿರ್ಮಲಮತಿ ತೋರಿಭಾರತಿಪ.ಅಜನ ಪಟ್ಟದ ರಾಣಿಭುಜಗಸದೃಶವೇಣಿಭಜಕರ ಚಿಂತಾಮಣಿ ಕೀರವಾಣಿ 1ವೇದಾಂತರಂಗಿಣಿ ನಾದಸ್ವರೂಪಿಣಿಪ್ರಾದುರ್ಭವಳಾಗು ಸಾಧ್ವೀಕಲ್ಯಾಣಿ 2ಅಕ್ಷಯಸುಖಭಾಷೆ ಆಶ್ರಿತಕಜನಪೋಷೆಲಕ್ಷ್ಮೀನಾರಾಯಣನ ಸೊಸೆ ಸುವಿಲಾಸೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಾರೆ ಶ್ರೀ ಮಹಾಲಕ್ಷ್ಮಿದೇವಿಯೆ ಬೇಡುತಿರ್ಪೆವು ಪಸಾರಸಾಕ್ಷಿಯೆ ಸರ್ಪವೇಣಿಯೆನಾರಿಯೆ ವೈಯ್ಯಾರಿಯೆ ಶ್ರೀಹರಿ ಸಹಿತದಿ ಅ.ಪಯಜÕನಾಮಕ ಹರಿಯ ರಾಣಿಯಜÕ ಇಂದಿರಾಹಿರಣ್ಯಹರಿಣಿಸುಜÕರಾದ ಜನರ ಪೊರೆವೆಸತ್ಯಾಶ್ರಿ ನಿತ್ಯಾಶ್ರೀ ಸುಗಂಧಿ ಸುಂದರಿ 1ಪ್ರಾಜÕಸುಖಾ ಸುಗಂಧಿ ಸುಂದರಿವಿದ್ಯಾ ಶ್ರೀ ಸುಶೀಲದೇವಿಸುಜÕರಾದ ಜನರೊಳಿರಿಸುತಕ್ಷಣ ಈಕ್ಷಿಸು ಸುಲಕ್ಷಣ ದೇವಿಯೆ 2ಶಾಂತಿಮಾಯೆಕೃತಿಯೆಇಂದಿರೆಶಾಂತಚಿತ್ತದಿ ಧ್ಯಾನಿಸುವರಾ ನಿ-ರಂತರದಿ ಪೊರೆವೆ ಜಯಮಂಗಳೆ ಉತ್ತುಂಗಳೆ ಶೃಂಗಾರ ರೂಪಳೆ 3ನಗುತ ನಗುತ ಬಾರೆ ಬೇಗನಗಧರನ ಸನ್ನಿಧಿಗೆ ಈಗಖಗವಾಹನನ ಮಡದಿ ನಿನ್ನಅಡಿಗಳ ಪೂಜಿಪೆ ಸಡಗರದಿಂದಲಿ 4ಪರಿಮಳೋದಕದಿಂದ ನಿನ್ನಚರಣಗಳನು ತೊಳೆದು ದಿವ್ಯವರಮಣಿಯ ಪೀಠದಲಿ ಕೂಡಿಸಿಪರಿಪರಿ ಪುಷ್ಪದಿ ಪೂಜಿಸಿ ನಲಿಯುವೆ 5ಹರಿಯರಾಣಿ ನಿನಗೆ ದಿವ್ಯಹರಿದ್ರಾಕುಂಕುಮಾಕ್ಷತೆಗಳಿಂದವರಕಲ್ಹಾರಪೂವ್ಗಳಿಂದಲಿಸುರಗಿ ಶಾವಂತಿಗಿ ತುರುಬಿಗೆ ಮುಡಿಸುವೆ 6ಎಣ್ಣೂರಿಗೆ ಹೋಳಿಗೆಯು ಕಡಬುಸಣ್ಣನಕ್ಕಿ ಶಾಲ್ಯನ್ನಗಳುಇನ್ನು ಬಗೆ ಬಗೆಯ ಭಕ್ಷಂಗಳನೂಸ್ವರ್ಣ ಪಾತ್ರೆಗಳಲ್ಲಿ ಇರಿಸುತ ನಲಿವರು 7ಕ್ಷೀರಘೃತದಧ್ಯಾನ್ನ ಮಂಡಿಗೆಶಾವಿಗೆ ಪರಮಾನ್ನಗಳನುಶ್ರೀರಮೇಶನಿಗರ್ಪಿಸೆನುತಬೇಡುವೆ ಪಾಡುವೆ ಕೊಂಡಾಡುತ ನಲಿಯುವೆ 8ಮುದ್ದು ಮಹಾಲಕ್ಷ್ಮಿ ನಿನಗೆಇಡಲಿ ದೋಸೆಗಳ ಸಹಿತಪದ್ಮನಾಭನಿಗರ್ಪಿಸೆನುತಶ್ರದ್ಧೆಯಿಂ ನಮಿಸುತ್ತಾ ಬೇಡುತಲಿರುವರು 9ಗಂಗಾಜನಕನರಸಿ ನಿನಗೆಮಂಗಳಾರುತಿಗಳ ಮಾಡಿಹಿಂಗಿಸುವೆ ಪಾಪಗಳೆನುತಾವಂದಿಸಿ ಸಾಷ್ಟಾಂಗದಿಂ ಚಂದದಿ ಪ್ರಾರ್ಥಿಪೆ 10ಕರ್ಪೂರದ ಅಡಿಕೆ ವೀಳ್ಯಅರ್ಪಿಸುತಲಿ ನಿನ್ನ ಪೂಜಿಸಿಮುಪ್ಪುರಾಂತಕ ಕಮಲನಾಭವಿಠ್ಠಲ ವಿಠ್ಠಲ ವಿಠ್ಠಲನರಸಿಯೆ 11
--------------
ನಿಡಗುರುಕಿ ಜೀವೂಬಾಯಿ
ಬಾರೋ ಗೋಪಾಲ ಬಾಲ ಸುಶೀಲದೇವಕಿ ಬಾಲಕಂಸಾರಿಶ್ರೀಲೋಲಪಗುರುಳು ಕೂದಲು ಹೊಸ ಅರಳೆಲೆಹೊಳಪುಕೊರಳ ಕೌಸ್ತುಭಹಾರ ಸರಗಳ ಝಳಪು 1ಮುದ್ದು ಬಾಲನೆ ಹೊಸ ಬೆಣ್ಣೆಮುದ್ದೆಯ ನೀವೆಸದ್ದು ಮಾಡದೆ ಬಾರೊ ಉದ್ಧವÀಸಖನೆ 2ಕಂಠದೊಳಸಲಿ ವೈಕುಂಠ ಶ್ರೀಪತಿಗೆಸೊಂಟಗೆಜ್ಜೆಯು ಕಿರುಗಂಟಿಗಳೊಲಿಯೆ 3ಭಕ್ತಿಯಿಂದಲಿ ಕರವೆತ್ತಿ ಪ್ರಾರ್ಥಿಸುವೆನುಅಪ್ರಮೇಯನೆ ಪುರುಷೋತ್ತಮ ನಮಿಪೆ 4ಕರುಣದಿಂದಲಿ ಬಾರೊಕಮಲಸಂಭವನಯ್ಯಕಮಲನಾಭ ವಿಠ್ಠಲ ನಮಿಸುವೆ ಸತತ 5
--------------
ನಿಡಗುರುಕಿ ಜೀವೂಬಾಯಿ
ಬಿದಿಗೆಯ ದಿವಸ(ಹನುಮಂತನನ್ನು ಕುರಿತು)ಸಮನಸನಾಗಿ ತೋರುವನಲ್ಲೆ ನೀರೆ ಪ.ಧನ್ಯನಾಗಿರುವ ದೊರೆಯ ಧರಿಸುತ್ತಚೆನ್ನಿಗನಾಗಿ ತೋರುವನಲ್ಲೆ ಈತ 1ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2ಸೋಮಾರ್ಕಶಿಖಿಯಂತಿರುವುದು ತ್ರಿನಾಮರಾಮಣೀಯಕ ಮನೋಹರ ಪೂರ್ಣಕಾಮ 3ವೀರವೈಷ್ಣವ ಮುದ್ದು ಮೋಹನಕಾಯಭೂರಿಭೂಷಣಭುಜಬಲ ಹರಿಪ್ರಿಯ 4ರೂಪನೋಡಲು ಕಾಮರೂಪನಂತಿರುವಚಾಪಲ ಪ್ರೌಢ ಚಿದ್ರೂಪನಂತಿರುವ 5ಬಾಲವ ನೆಗಹಿ ಕಾಲೂರಿ ಶೋಭಿಸುವನೀಲದುಂಗುರದ ಹಸ್ತವ ನೀಡಿ ಮೆರೆವ 6ಗೆಜ್ಜೆ ಕಾಲುಂಗರ ಪದಕಕಟ್ಟಾಣಿಸಜ್ಜನನಾಗಿ ತೋರುವನು ನಿಧಾನಿ 7ಊರ್ವಶಿ :ತರುಣಿ ಕೇಳೀತನೆ ದೊರೆಮುಖ್ಯಪ್ರಾಣವರನಿಗಮಾಗಮ ಶಾಸ್ತ್ರಪ್ರವೀಣ1ಮಾಯವಾದಿಗಳ ಮಾರ್ಗವ ಖಂಡಿಸಿದವಾಯುಕುಮಾರ ವಂದಿತ ಜನವರದರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆಚಟುಳ ಹನುಮನ ಉತ್ಕಟರೂಪ ಕಾಣೆ 1ವಾಮನನಾದ ಕಾರಣವೇನೆ ಪೇಳೆನಾ ಮನಸೋತೆ ಎಂತುಂಟೊ ಹರಿಲೀಲೆ 2ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳುಸಾಗಿತು ಸೇವೆಯೆಂಬುದು ಮನಸಿನೊಳು 1ವಾದವ ಮಾಡಿ ವಿನೋದದಿ ಹರಿಯಪಾದಸೇವೆಗೆ ಮನನಾದ ಕೇಳಿದೆಯೊ 2ವೀರ ವೇಷವನಿದ ಕಂಡು ಶ್ರೀಹರಿಯದೂರವಾದನೋ ಎಂದು ಮನದೊಳು ನಿಜವು 3ತೋರಲು ಬೇಗದಿ ದೊರೆ ಹನುಮಂತಭೂರಿಭೂಷಣ ಸುಂದರ ರೂಪವಾಂತ 4ಇಂದಿನ ಸೇವೆಯೆನ್ನಿಂದತಿ ದಯದಿಮಂದರಧರಿಸಿಕೊಳ್ವುದು ಎಂದು ಭರದಿ 5ಒಯ್ಯನೆ ಪೇಳುತ್ತ ವಯ್ಯಾರದಿಂದಕೈಯನು ನೀಡಿ ಸಾನಂದದಿ ಬಂದ 6ಕಂತುಪಿತನು ಹನುಮಂತ ಮಾನಸಕೆಸಂತಸ ತಾಳಿ ಆನಂತನು ದಿಟಕೆ 7ಏರುತ ಹನುಮನಭೂರಿವೈಭವದಿಸ್ವಾರಿಯು ಪೊರಟ ಸಾಕಾರವ ಮುದದಿ 8ತೋರಿಸಿ ಭಕ್ತರಘೋರದುರಿತವಸೂರೆಗೊಳ್ಳುವನು ವಿಚಾರಿಸಿ ನಿಜವ 9ಹದನವಿದೀಗೆಲೆ ಬಿದಿಗೆಯ ದಿನದಿಮದನಜನಕನು ಮೈದೋರುವ ಮುದದಿ 10ಪ್ರತಿದಿನದಂತೆ ಶ್ರೀಪತಿ ದಯದಿಂದಅತಿಶಯ ಮಂಟಪದೊಳು ನಲವಿಂದ 11ಎಂತು ನಾ ವರ್ಣಿಪೆ ಕಂತುಜನಕನಅಂತ್ಯರಹಿತ ಗುಣಾನಂಮಹಿಮನ 12ಏಕಾಂತದಿ ಲೋಕೈಕನಾಯಕನುಶ್ರೀಕರವಾಗಿ ನಿಂದನು ನಿತ್ಯಸುಖನು 13* * *ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾ ಪ.ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆತವಕದಿ ಬರುವತ್ತಿತ್ತವರನ್ನು ನೋಡದೆ 1ಅಂದಣವೇರಿ ಮತ್ತೊಂದ ತಾ ನೋಡದೆಒಂದೇ ಮನದಿ ಬೇಗ ಮುಂದೆ ಬರುವನಮ್ಮಾ 2ಬಾಲಬ್ರಹ್ಮಚಾರಿ ಶಿಲೆಯಂತಿರುವನುಅಲೋಚಿಸಲಿವ ಮೂಲಪುರುಷನಮ್ಮಾ 3ಪುಟ್ಟನಾದರು ಜಗಜಟ್ಟಿಯಂತಿರುವನುದಿಟ್ಟನಿವನವನ ಮುಟ್ಟಿ ನೋಡಮ್ಮ 4ಊರ್ವಶಿ :ನಾರೀ ಇವನೀಗಹೊಂತಕಾರಿಲೋಕಕ್ಕಾಧಾರಿಪ.ಕೊಬ್ಬಿದ ದೈತ್ಯರಿಗೀತನೆಕಾಲಹಬ್ಬುವದಾತ್ಮಕ್ಕೀತನೆ ಮೂಲಉಬ್ಬುವ ಹರಿಯೆಂದರೆ ಮೈಯೆಲ್ಲಒಬ್ಬನಿಗಾದರೂ ಬಗ್ಗುವನಲ್ಲ 1ಎಲ್ಲಿರುವನುಹರಿಅಲ್ಲಿಹನೀತಬಲ್ಲಿದನಾರಾಯಣಗಿವ ದೂತಖುಲ್ಲರ ಮನಕತಿ ಝಲ್ಲೆನುವಾತಸುಲ್ಲಭನೆಯಿವ ಮುಂದಿನ ಧಾತ 2ಭೇದವಿಲ್ಲೆಂಬುದವರಿಗೆಯಿವ ತುಂಟಮೇದಿನಿಬಾಧಕರಿಗೆ ಯಿವ ಕಂಟಆದಿ ಮೂರುತಿ ಕೇಶವನಿಗೆಬಂಟಮಾಧವಭಕ್ತರಿಗೀತನೆ ನೆಂಟ 3ದುರಿತಾರಣ್ಯದಹನ ನಿರ್ಲೇಪವರವೆಂಕಟಪತಿಯಿದಿರೊಳಗಿಪ್ಪಪರಮಾತ್ಮನ ಪರತತ್ತ್ವ ಸ್ವರೂಪಮರೆಮಾತೇನಿವ ದೊರೆ ಹನುಮಪ್ಪ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಿನ್ನಪಲಾಲಿಸಯ್ಯ ಭಕ್ತಪರಾಧ-ವನ್ನು ಕ್ಷಮಿಸಬೇಕಯ್ಯ ಪ.ಅನ್ಯಾಯ ಕಲಿಕಾಲಕ್ಕಿನ್ನೇನುಗತಿಸುಪ್ರ-ಸನ್ನ ನೀನಾಗು ಸುಬ್ರಹ್ಮಣ್ಯ ಪಾವನಚರಿತ ಅ.ಪ.ಮಕ್ಕಳ ಮಾತೆಯಂದದಿ ಕಾಯುವ ಮಹ-ದಕ್ಕರದಿಂದ ಮುದದಿಸೊಕ್ಕಿನಿಂ ನಡೆವರ್ಗೆ ತಕ್ಕ ಶಿಕ್ಷೆಯನಿತ್ತುರಕ್ಕಸಾರಿಯೆ ಹಿಂದಿಕ್ಕಬ್ಯಾಡೆಮ್ಮನುದಿಕ್ಕಿಲ್ಲದವರ ಧಿಕ್ಕಾರ ಗೈದರೆಮಿಕ್ಕವರೆಮ್ಮನು ಲೆಕ್ಕಿಪರಿಲ್ಲ ದೇ-ವರ್ಕಳಮಣಿ ನಿನಗಕ್ಕಜವಲ್ಲವುಕುಕ್ಕುಟಧರವರ ಮುಕ್ಕಣ್ಣತನಯ 1ಜಾತಿ ನೀತಿಯನು ಬಿಟ್ಟು ಡಾಂಭಿಕತನದರೀತಿಗೆ ಪ್ರೀತಿಪಟ್ಟುಸೋತು ಹಣವ ಕೊಟ್ಟು ಖ್ಯಾತರೆಂಬುವಗುಟ್ಟುಮಾತು ಮಾತಿಗೆ ತೋರಿ ಘಾತವ ಗೈವರ್ಮೀರಿಯಾತುಧಾನರಗುಣಯಾತಕ್ಕರಿಯದುಭೂತೇಶ್ವರಸಂಜಾತ ಸುರನರ-ವ್ರಾತಾರ್ಚಿತ ಪುರಹೂತಸಹಾಯಕನೂತನಸಗುಣವರೂಥಪುನೀತ2ಯಾವ ಕರ್ಮದ ಫಲವೋ ಇದಕಿ-ನ್ಯಾವ ಪ್ರಾಯಶ್ಚಿತ್ತವೋಯಾವ ವಿಧವೊ ಎಂಬ ಭಾವವರಿತ ಪುರುಷಈ ವಸುಧೆಯೊಳಿಲ್ಲ ಶ್ರೀವಾಸುದೇವ ಬಲ್ಲದೇವ ಲಕ್ಷ್ಮೀನಾರಾಯಣನಪಾದಸೇವಕನೀ ಮಹಾದೇವನ ಸುತ ಕರು-ಣಾವಲಂಬಿಗಳಕಾವನಮ್ಮಯ ಕುಲ-ದೇವ ವಲ್ಲೀಪತಿ ಪಾವಂಜಾಧಿಪ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ