ಒಟ್ಟು 3495 ಕಡೆಗಳಲ್ಲಿ , 122 ದಾಸರು , 2470 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೂರ್ಯ | ತತ್ವವಾದಿ ವದನ ಕುಮುದ ಚಂದ್ರಾ ಪ ಧೃತ - ಬಾದರಾಯಣ ವೇದ ಸೂತ್ರವ | ಮೋದದಲಿ ಪ್ರಕಾಶ ಗೊಳಿಸುತಸಾಧುಜನ ಸಂತೋಷ ಕಾರಣ | ಸಾಧು ಟೀಕಾಚಾರ್ಯ ನಮಿಸುವೆ ಅ.ಪ. ವಾಸರ ತಾನು ನೀರಡಿಸೀ ||ಆಶುಗತಿ ಅಶ್ವವನು ಏರಿರ | ಲಾಸರಿತು ಕಾಗಿನಿಯ ಜಲವನು ಲೇಸು ಪಶುವಂದದಲಿ ಕುಡಿದು ಪಿ | ಪಾಸೆ ಕಳೆದ ಸುಯೋಧ ಕಾಯೋ 1 ಈಕ್ಷಿಸುತೀ ಚರ್ಯದವನಾ | ಮುನಿ | ಅಕ್ಷೋಭ್ಯ ತೀರ್ಥ ಶ್ರೀಚರಣಾಪಕ್ಷಿವಾಹನನಾ ತೈಜಸನಾ | ಮಾತ | ಲಕ್ಷಿಸಿ ತಾನೋರ್ವ ಶಿಷ್ಯನಾತಕ್ಷಣದಿ ಕಳಿಸ್ಯವನನಲ್ಲಿಗೆ | ಪ್ರೇಕ್ಷಿಸಲು ಬರ ಬಂದು ಇಲ್ಲಿಗೆದೀಕ್ಷೆಯನು ಕೈಕೊಂಡು ದಶಮತಿ | ಪಕ್ಷ ಸಾಧಿಸಿ ಗತಿಯ ತೋರ್ದರೆ 2 ಸಾರಥಿ ಕೃಷ್ಣನೊಲಿಸೀ | ಜಯ | ತೀರ್ಥ ಕಾಗಿನಿ ತಟದಿ ನೆಲಿಸೀ|ಕಾರ್ತ ಸ್ವರವದು ಲೋಷ್ಠಸಮವೆನು | ತಾರ್ತ ಸಜ್ಜನ ಕ್ವೊರೆದು ಪ್ರೀತಿಲಿಮೂರ್ತಿ ಗುರುಗೋವಿಂದ ವಿಠಲನ | ವಾರ್ತೆ ಸಚ್ಛರಿತೆ ಯನು ಪೇಳಿದ 3
--------------
ಗುರುಗೋವಿಂದವಿಠಲರು
ಸೂರ್ಯ ಪುತ್ರೀ |ತ್ರಿವಿಧ ತಾಪಂಗಳನು ಕಳೆವ ಶುಭಗಾತ್ರೀ ಪ ಕಾಳಕೂಟವ ಮೆದ್ದು ದೇವತತಿ ಸಲಹಿದಗುಕಾಲಾಖ್ಯ ಗರುಡಂಗು ಕಾಳ ಉರಗನಿಗೂ |ನೀಲಾಖ್ಯೆಯಂದದಲಿ ಪಂಚಗುಣದಿಂ ನ್ಯೂನಕಾಳಿಂದಿ ದೇವಿಯರಿಗಾ ನಮಿಪೆ ಸತತ 1 ಸಂಚಿತ ಸುಪಾಪಕ್ಕೆ ಅನುತಾಪವೆಂಬುವುದುಚಿಂತಿಸುವ ತತ್ವಗಳ ನಿರ್ಣಯಾದಿಗಳ |ಇಂತಪ್ಪ ಸತ್ಕರ್ಮ ಸಂತರಿಂ ತಿಳಿಸುತ್ತಚಿಂತಿಪುದೆ ಸತ್ತಪವು ಚಿತ್ತ ನಿಗ್ರಹವೆಂಬ 2 ಮೂರ್ತಿ ಕಾಣದಿಹ ಕಂಗಳಿನ್ನೇಕೇ 3 ಹರಿ ಕಥೆಯ ಕೇಳದವ ಬಧಿರನೇಸರಿ ಅವನುಹರಿಯೆ ನಿರ್ಮಾಲ್ಯ ಮೂಸದಿಂದ್ರಿಯ ವ್ಯರ್ಥ|ಹರಿಯ ನೈವೇದ್ಯಗಳ ರುಚಿಸದಿಹ ನಾಲಗೆಯುಹರಿಯಂಗ ಸ್ಪರ್ಶಿಸದ ಇಂದ್ರಿಯವು ವ್ಯರ್ಥ 4 ಮೂರ್ತಿ ಧ್ಯಾನಿಸದ ಮನಿಸಿನಿಂದ್ರಿಯ ವ್ಯರ್ಥಇನಿತು ದಶ ಕರಣಗಳ ವ್ಯಾಪಾರವಾ |ಗುಣಿಸಿ ತಪವೆಂದೆನುತ ಹರಿಯರ್ಪಣೆಂಬುವುದೆಘನ ತಪವು ಎಂದೆನುತ ಚಿಂತಿಪ ಸುಗಾತ್ರೀ 5 ಕಮಲ ದರ್ಶನವು ಎನಗೆಂದುಪರಿ ಪರಿಯ ಚಿಂತಿಸುತ ಚರಿಸಿ ಸತ್ತಪವಾ |ಹರಿಯ ದರ್ಶನ ಪಡೆದು ಹರಿಯನುಗ್ರಹದಿಂದಹರಿ ಮಡದಿ ನೀನಾಗಿ ಹರಿಗೆ ಪ್ರಿಯಳಾದೇ 6 ನಿತ್ಯ ಭಿನ್ನವಿಪೇ 7
--------------
ಗುರುಗೋವಿಂದವಿಠಲರು
ಸೂರ್ಯ ಮಂಡಲ ಮಧ್ಯವರ್ತಿ | ಕಾರ್ಯ- ಕಾರಣ ಪ್ರಕೃತಿಗಳಿಗೆ ಚಕ್ರವರ್ತಿ-ವಿಜ್ಞಾನ ಸ್ಫೂರ್ತಿ-ವಿರಾಟಮೂರ್ತಿ ಪ ಪಾದ ತುರ್ಯನಾಮಕ ಲೋಕ- ಮರ್ಯಾದಾ ಸ್ಥಾಪಕ ಮಾದೇವಿರಮಣ-ಶತಕೋಟಿ ಕಿರಣ-ತೋರೋ ತವ ಚರಣ 1 ಅಮಿತ ನಿರಕ್ಷರ ಕುಕ್ಷಿಗಳ್ ನಿತ್ಯ ಮಾಡುವ ತ- ಪ್ಪಕ್ಷಮಿಸಬೇಕಪ್ಪ-ನಾವು ನಿನಗೆ ಕಪ್ಪ 2 ಕಮಲ ಸಂಭವ ಹೃದ್ಯ ನ್ಯಾಯಧರ್ಮಯುಕ್ತ ನಿಗಮಾಂತವೇದ್ಯ ಚೋದ್ಯ 3 ಹಾರ ಕಿರೀಟ ಕೇಯೂರ ಮಕರಕುಂಡಲ ಧಾರಿ ಸ್ವರ್ಣಮಯಾಂಗ ಧೃತ ಶಂಖ ಚಕ್ರ-ಶಿಕ್ಷಿತ ಶುಕ್ರ-ಪರಿಹರಿಸು ವಕ್ರ4 ವೃಷ್ಟಿಯ ಕೊಟ್ಟು ಸಂತುಷ್ಟಿ ಪೊಂದಿಸು ಜಗ ಜಟ್ಟಿ ಶ್ರೀ ಗುರುರಾಮವಿಠ್ಠಲ ಸ್ವಾಮಿ ಶಿಷ್ಟ ಜನಪ್ರೇಮಿ-ಸರ್ವಾಂತರ್ಯಾಮಿ5
--------------
ಗುರುರಾಮವಿಠಲ
ಸೃಷ್ಟಿಗೀಶ ನಿನಗಿಷ್ಟು ದಯಬಾರದ್ಯಕೊ ಎಷ್ಟು ಬೇಡಲು ಎನ್ನ ಮೊರೆ ಕೇಳದಿರುವಿ ಪ ಕರಿರಾಜನ ಪೊರೆದೆಲೋ ನರಗೆ ಸಾರಥಿಯಾದಿ ತರುಣಿಯನುದ್ಧರಿಸಿ ಪರಿಶುದ್ಧಗೈದಿ ಪರಮಕುರುಣಿಯು ನೀನು ದುರಿತಕಾರ್ಯದಿಂ ನಾನು ನರಕಿಯಾಗ್ವುದನರಿತು ಅರಿಯದಂತಿರುವಿ 1 ಖುಲ್ಲದಾನವರೊದೆದು ಎಲ್ಲ ದೇವತೇರಿಗೆ ನೀ ನುಲ್ಲಾಸವನು ಕೊಟ್ಟು ಪುಲ್ಲನಾಭ ಹರಿಯೆ ಕ್ಷುಲ್ಲಕರ ಸಂಗದಿಂ ನಾ ಸಲ್ಲದಂತಾಗುವೆ ಕ ಣ್ಣಲ್ಲಿ ಕಂಡು ನೀ ಕಂಡಿಲ್ಲದಂತಿರುವಿ 2 ಮುನಿಶಾಪದಿಂ ನೃಪನ ಕನಿಕರದಿ ಕಾಯ್ದಿ ನಿಂ ತನುದಿನದಿ ಬಾಗಿಲವ ಘನವಾಗಿ ಕಾಯ್ದಿ ಶುನಕನಂದದಿ ನಾನು ದಿನದಿನಕೆ ಮತ್ತಿಷ್ಟು ಘನಪಾಪಿಯಾಗ್ವುದನು ಮನಕೆ ತರದಿರುವಿ 3 ವನವಾಸಗೈದಯ್ಯಾ ವಾನರನ ಸಲಹಿದಿ ದನುಜನನು ಸಂಹರಿಸಿ ದನುಜನನುಜಂಗೆ ಮಾಣದ ಪಟ್ಟವನು ಮೆಚ್ಚಿ ನೀ ಕೊಟ್ಟೆಯ್ಯಾ ಎನಗ್ಯಾಕೀದುರ್ಬವಣೆ ದೂರಮಾಡದಿರುವಿ 4 ಇನಿತೆಲ್ಲ ಯೋಚಿಸಲು ಘನ ಕುರಣಾನಿಧಿ ನೀನು ನಿನಗವರೆ ದಾಸರೆ ನಾನಲ್ಲವೇನು ಮನಸಿಜಪಿತ ನಿನ್ನ ವನರುಹಂಘ್ರಿಯ ನಂಬಿ ಮಣಿದು ಬೇಡುವೆ ಕಾಯೊ ತಂದೆ ಶ್ರೀರಾಮ 5
--------------
ರಾಮದಾಸರು
ಸೃಷ್ಟಿಗೊಡೆಯನಿಗೆ ಜಯ ಮಂಗಳಂ ಕಾಲುಂ- ಶುಭ ಮಂಗಳಂ ಶುಭ ಕ- ಮಲಾಲಯ ರಮಣನಿಗೆ ಜಯ ಮಂಗಳಂ ಬಾಲಕ ರೂಪದಿಂದಾಲದೆಲೆಯ ಮೇಲೆ ಲೀಲೆ ತೋರುವ ಗೋಪಾಲನಿಗೆ 1 ನೀಲಳಕಗಳ ಸಿರಿಮುಡಿಗಟ್ಟಿ ಮ- ರಾಳ ಸಿಂಘಗಳಿಂದದಲಂಕರಿಸಿ ಕಾಲದಿಂದಿಗೆ ಗೆಜ್ಜೆ ಘಲ ಘಲಿಸುತ ತನ್ನ ಕಾಲಕರದೊಳೆತ್ತಿ ಕುಣಿಸುವಗೆ2 ವಾರಿಜ ಭವಪಿತ ಮಾರಕೋಟಿ ಶೃಂ- ಗಾರ ಮೂರುತಿ ಮುಖವಾರಿಜವ ತೋರುವ ಸುಧಾರಸ ವಾರುಧಿ ಗೋಪಕು- ಮಾರ ಶೇಷಾಚಲಧಾರನಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸೃಷ್ಟಿಯೊಳಗೆಲ್ಲ ದುಷ್ಟರ ಪ್ರಭೆಯಾಗಿ ನಿಷ್ಠರುದೋರದಂತಾದರು ಮಾ ಧ್ರುವ ಭ್ರಷ್ಟರು ಬೂಟಿಕಿ ಶಿಷ್ಠರೆ ಕೈಕೊಂಡು ನಿಷ್ಠರಿಗಾಟ್ಲಿ ತಂದರು ಮಾ ತುಟ್ಟಿಲೆ ಮಿಸುಕದೆ ಗುಟ್ಟಿಲಿದ್ದವರ ಬಟ್ಟೆಗ್ಯಳದಿನ್ನು ತಾಹರು ಮಾ ಹೊಟ್ಟೆಯೊಳು ಹೊಕ್ಕು ಕಟ್ಟಲೆ ಕುಳಿತಿನ್ನು ನೆಟ್ಟ ನೇರಿಷ್ಟ ನೇಮಿಸುರು ಮಾ ಇಟ್ಟ ತೊಟ್ಟವರನು ಕೆಟ್ಟದೃಷ್ಟಿಲೆ ನೋಡಿ ದಿಟ್ಟತನದಿ ಪ್ರಾಣಕೊಂಬರು ಮಾ 1 ಕೊಟ್ಟು ಹಣಹೊನ್ನು ಇಟ್ಟದ್ದು ಬೇಡಲು ಕುಟ್ಟಿ ಅವನಬಾಯಿ ಹಾರರು ಮಾ ತುಟ್ಟಿಲೆ ವಂದಾಡಿ ಹೊಟ್ಟಲೆ ವಂದಿಟ್ಟು ನೆಟ್ಟನೆ ಘಾಸಿಮಾಡರು ಮಾ ಗಂಟುಳ್ಳವರ ಕಂಡು ಕಟ್ಟಿದಂಡಗಳನ್ನು ನಷ್ಟತನದಿ ಹೊಟ್ಟೆ ಹೊರುವರು ಮಾ ಬಟ್ಟಿಲೆ ತೋರಲು ಬಿಟ್ಟಿಯ ಹಿಡಿದಿನ್ನು ಹೆಟ್ಟಿ ಅವನ ಮುಂದೆ ನಡೆಸುರು ಮಾ 2 ಶುದ್ದಿಯು ಇಲ್ಲದೆ ರಾಜ್ಯಾಧಿಪತಿಗಳು ಇದ್ದು ಇಲ್ಲದಂತಾದರು ಮಾ ಮಂದಮತಿಗಳು ಅಂದಣವೇರಿನ್ನು ಬುದ್ಧಿವಂತರೀಗ್ಹೀನತಂದರು ಮಾ ಮುದ್ರಾಧಾರಿಗಳೆಲ್ಲ ಕ್ಷುದ್ರದೃಷ್ಟಿಯು ಮಾಡಿ ಕ್ಷುದ್ರತನದಿ ಕೆಡುತಿಹರು ಮಾ ಸಿದ್ಧಸಾಧಕರೆಲ್ಲ ಗುದ್ದನೇ ಹೊಕ್ಕರು ಇದ್ದರೆ ಬುದ್ಧಿಹೀನರು ಮಾ 3 ಉಳಿಯಮುಟ್ಟಿದ ದೈವ ಉಳಿಯದೇ ಹೋದವು ಉಳಿಗಾಲ ವಿಲ್ಲದಂತಾಯಿತು ಮಾ ತಿಳಿವಳಿಕುಳ್ಳವರೆಲ್ಲ ತಲೆಮುಸಕ್ಹಾಕಿನ್ನು ಕಳ್ಳರೆ ಸಾಜರು ಆದರು ಮಾ ಒಳ್ಳೆಯವರ ನುಡಿ ಎಳ್ಳಷ್ಟು ಮಾಡುತ ಸುಳ್ಳರು ನಿಜನುಡಿವೆಂಬುರು ಮಾ ಉಳ್ಳವರು ಖಳಬುದ್ಧಿ ಕೈಕೊಂಡು ಇಳೆಯೊಳು ಧರ್ಮವ ಜರೆದರು ಮಾ 4 ಸಾಧುಸಜ್ಜನರೆಲ್ಲ ಭೇದವ ಅಡಗಿಸಿ ಮೇಧಿನಿಯಲು ಗುಪ್ತರಾದರು ಮಾ ಇದ್ದರ ಘನಸುಖ ಸಿದ್ಧರ ನೆರೆಯಲಿ ಬುದ್ಧಿಹೀನರು ತಾವು ಅರಿಯರು ಮಾ ಸದ್ಗುರು ಕೃಪೆಯಿಂದ ಸದ್ಬ್ರಹ್ಮದ ನೆಲೆಯ ಸತ್ ಶಿಷ್ಯಮಹಿಪತಿ ತಿಳಿದನು ಮಾ ಎಂದಿಗೆ ಬೇಡಿನ್ನು ದುರ್ಜನರ ಸಂಗವು ತ್ರಾಹಿ ತ್ರಾಹಿ ತ್ರಾಹಿ ಎಂದನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೇರಿ ಸುಖಿಸುತಿರು ಮನುಜಾ ಗುರು ಶುಭ ಚರಣ ಸರೋಜ ಪ ಉದಧಿ ದಾಂಟಿ ಧಾರುಣಿಜಳಿಗೆ ಮುದ್ರಿಕೆಯಿತ್ತು ಜವದಿ ಶ್ರೀ ರಘುವರಗೆ ವಿನಯದಿ ಕ್ಷೇಮ ವಾರುತಿಯನು ಪೇಳಿದವನಂಘ್ರಿ ಮುದದಿ 1 ಇಂದು ಕುಲದಿ ಪಾಂಡು ನೃಪನ ಪುತ್ರ ನೆಂದು ಕರಿಸಿ ದುಷ್ಟ ಕೌರವಾಂತಕನ ನಂದ ನಂದನನೊಲಿಸಿದನ ದೃಪದ ನಂದಿನಿಯಳಿಗೆ ಪುಷ್ಪವ ತಂದಿತ್ತವನ 2 ಮಧ್ಯಗೇಹ ನೆಂಬೊದ್ವಿಜನ ಗೃಹದಿ ಮಧ್ವಾಭಿದಾನದಿ ಜನಿಸಿ ಮಾಯ್ಗಳನ ಗೆದ್ದು ಸಚ್ಛಾಸ್ತ್ರ ರಚಿಸಿದನ ಸುಪ್ರ ಸಿದ್ಧ ಸಿದ್ಧ ಕಾರ್ಪರ ನರಹರಿಗತಿ ಪ್ರಿಯನ 3
--------------
ಕಾರ್ಪರ ನರಹರಿದಾಸರು
ಸೇರಿದೆನು ಸೇರಿದೆನು ಜಗದೀಶನನರಕಜನ್ಮದ ಭಯವು ಎನಗೆ ಇನಿತಿಲ್ಲ ಪ ಮೂರ್ತಿ ಗಾತ್ರ ಕೃಷ್ಣನ ಮುಂದೆ1 ಹಸ್ತಗಳು ಮಂಟಪಶುದ್ಧಿಯನು ಮಾಡುತಿವೆಮಸ್ತಕವು ಹರಿಚರಣಕೆರಗುತಿದೆಕೋವಿಸ್ತಾರವಾದ ಪ್ರದಕ್ಷಿಣೆಯ ಮಾಡುತಿದೆಕಸ್ತೂರಿತಿಲಕವನು ಮೂಗು ಆಘ್ರಾಣಿಸುತಿದೆ 2 ಹರಿನಾಮಸ್ಮರಣೆಯನು ನುಡಿಯುತಿದೆ ಎನ್ನ ಜಿಹ್ವೆಹರಿಭಕುತಿ ಸುಧೆಯ ಪಾನಗಳಿಂದಲಿಹರಿಪ್ರೀತಿಯಾಗಿದೆ ನೋಡಿದರೆನ್ನ ದೇಹಸಿರಿಕೃಷ್ಣರಾಯನ್ನ ಮನಮಂದಿರದಿ ಕಂಡೆ 3
--------------
ವ್ಯಾಸರಾಯರು
ಸೇವೇ ಶ್ರೀರಮಣಂ ಸದಾ ಸೇವಕಾರ್ತಿಹರಣಂ ಪ ಪಾವನ ವಾಘ್ರಾಚಲವಿಹರಣಂ ಅ.ಪ ಪುಂಡರೀಕಾಯತ ನೇತ್ರಂ ಮಂಡಿತ ಖಗಪತಿಪತ್ರಂ ಖಂಡಪರಶುಕೃತಸನ್ನುತಿಪಾತ್ರಂ ಚಂಡಕಿರಣಶತಸನ್ನಿಭಗಾತ್ರಂ7 1 ಕುಲಿಶಧರಾತ್ಮಜ ಮಿತ್ರಂ ಸುಲಲಿತ ಕರಧೃತ ಗೋತ್ರಂ ಕಲಿತರಥಾಂಗಧರಾಸಿತನುತ್ರಂ ಕಲಿಮಲಖಂಡನ ನಿಜಚಾರಿತ್ರಂ2 ಭಾವಿತಜನ ಮಂದಾರಂ ಭಾವಜಜನಕಮುದಾರಂ ಸೇವಕರಕ್ಷಣ ಧೃತಶರೀರಂ ದೇವಸಮೂಹಾಕಲಿತ ವಿಹಾರಂ3 ಶಂಕರಹೃದಯಧ್ಯೇಯಂ ಕಿಂಕರಜನ ಸಮುದಾಯಂ ನಿಜನಾಮಧೇಯ 4 ಪರಮಪುರುಷಮನವಂದ್ಯಂ ಸರಸಗುಣಾಕರಮಾದ್ಯಂ ವರದವಿಠಲಮಖಿಲಾಗಮಬೋಧ್ಯಂ 5
--------------
ವೆಂಕಟವರದಾರ್ಯರು
ಸೋದಾಪುರದಲ್ಲಿ ವಾಸಿಪ ಯತಿವರನ್ಯಾರೇ ಪೇಳಮ್ಮಯ್ಯಾ ಪ ಹರಸುರಪತಿ ಸ್ಮರವರನುತ ನಮ ಸಮೀರ ಸದ್ವಾದಿರಾಜಕಾಣಮಾ ಅ.ಪ. ವಿನುತ ಬೋಧ ಮುನೀಶ್ವರ ಮತಾಂಭೋನಿಧಿಚಂದ್ರ ಕಾಣಮ್ಮ 1 ಸತ್ವಾದಿತ್ರಯ ಗುಣಜ ಕರ್ಮರಹಿತರಾರೆ ಪೇಳಮ್ಮಯ್ಯಾ ಶುದ್ಧ ಸತಿಸ್ವರೂಪದಿಂದ್ರಮಿಸುವರಾರೆ ಪೇಳಮ್ಮಯ್ಯಸಾರ ಶಾಸ್ತ್ರ ಶೃತಿಸಾರವಿನುತ ಖಳಾರಿಯೆಂದೆನಿಸುವರಾರೆ ಪೇಳಮ್ಮಯ್ಯಾರಾಶಿ ಪೂರ್ಣ ಸಪ್ತನಾಮಹರ ನೇತ್ರ ದ್ವಯಾಂಶ ಸಹಿತರೇ ಪೇಳಮ್ಮಯ್ಯಾ 2 ಪಂಚಭೇದ ಶೂನ್ಯ ಪರ ವಂಚಕರಿಗೆಯಂದೆನಿಸುವರಾರೇ ಪೇಳಮ್ಮಯ್ಯ ಪಂಚ ಪಂಚ ತತ್ವ ಪಂಚರೂಪ ತಂದೆವರದಗೋಪಾಲವಿಠಲನಪೂಜಿಪರೇ 3
--------------
ತಂದೆವರದಗೋಪಾಲವಿಠಲರು
ಸೋಹಮೆಂದು ಸುಖಿಸು ವಿಗತ ಮೋಹದಿಂದ ಸಂತತಂದೇಹ ದೇಹದೊಳಗೆ ತೋರ್ಪನೀ ಹಿತಾತ್ಮನೀತ ಪರಮ ಪಘನದ ರತುನಮಂಟಪವನು ಶುನಕವೇರಿ ತನ್ನ ನೆಳಲಕನಲಿ ನೋಡಿ ಗಳಹಿ ತಾನಿದೆಂಬುದರಿಯದೆಮನದೊಳನ್ನವೆಂದು ಭ್ರಮಿಸಿ ಮತ್ತೆ ಕಡಿಯಲದರೊಳೊಡದು*ನೆನೆವ ತನ್ನ ರಕುತವನ್ನು ಸವಿವ ರೀತಿಯಲಿವಿನುತ ಜೀವ ತನ್ನ ಛಾಯೆಯನು ಸಮಸ್ತರೊಳಗೆ ನೋಡಿನೆನೆದಿದನ್ಯವೆನುತ ಭ್ರಾಂತನಾಗಿ ಮಾಯೆುಂದನುಭವಿಸುವೆನಿದನಿದೊಲ್ಲೆನೆನುತ ಭೇದ ಬುದ್ಧಿುಂದಮನುಮಥಾಗ್ನಿುಂದ ಬೆಂದು ಮನದಲಿದ್ದ ಕಾರಣಂ 1ನರರು ಗಜವ ಪಿಡಿಯೆ ಕಪ್ಪ ಕೊರವುತದರ ನಡುವೆ ತಿಟ್ಟನಿರಿಸಿ ಕಣ್ಣಿಯಲ್ಲಿ ಕಟ್ಟಿಯದರ ಸುತ್ತಲೂನೆರಹಿ ಕಾಷ್ಠ ಮೃತ್ತುಗಳನು ನಿಜದಪ್ಪಿರಮಾಡೆ ಭ್ರಮಿಸಿಕರಿಣಿಗಾಗಿ ಬಂದು ಗಜವು ಮರೆದು ಬಿದ್ದ ರೀತಿುಂದುರೆ ವಿರಿಂಚಿ ಕೂಪ ಸಾಮ್ಯವಾದ ನರಶರೀರಮಂಮರೆಸಲದರ ಮೇಲೆ ಚರ್ಮವೆನಿಪ ಮಾಯೆುಂದ ನರರುಮರೆತು ತಾವಿದೆನ್ನುತದರಲಿದ್ದ ಕಾರಣಂ 2ಮರೆದು ತನ್ನ ತಾಣವನ್ನು ಮೆರೆದುಲಂಘಿಸುತಲಿ ಭೇಕವಿರಲು ಹೊಂಚಿ ಪಿಡಿದು ಪಾವು ಪಿರಿದು ದೇಹಮಂನೆರೆದು ನುಂಗಲಾರದಿರುತಲಿರಲು ಭೇಕ ತನ್ನ ಹಸಿವಿಗಿರದೆ ಬಾಯ ತೆಗೆದು ನೊಣನನರಸಿ ಪಿಡಿವ ರೀತಿುಂನರರು ತಮ್ಮ ಕಾಲಸರ್ಪ ಉರುಬಲದನು ಮರೆತು ಭೋಗಪರತೆುಂದ ಕಾಮರೋಷ ವಿರಸರಾಗುತಿರಲು ನೀನರಿದನಿತ್ಯವೆಲ್ಲವೆಂದು ಮೆರೆದು ಗೋಪಾಲಾರ್ಯ ಪದವನೆರೆದು* ಭಕತಿುಂದ ನೋಡಿ ಪಾಡಿ ಹರುಷದಿಂದ ನೀ 3
--------------
ಗೋಪಾಲಾರ್ಯರು
ಸ್ಥಿರವೆಂದು ನಂಬಿ ಕೆಡಬೇಡ ಮನುಜಾ ಧರಣಿ [ಬಾಳು] ಕರುಣೆಯಿಹುದು ಮಾ[ಂಗಿರೀಶನ] [ನಂಬಿದರೆ] ಪ ಕ್ಷೀರಾಬ್ಧಿಗೈದು ಮುದದಿ ಪೊರೆವನು ಸ್ತನ್ಯದಿಂ ಹೀರಿ ತೇಲುತ ಬೆಳೆದು ತೋರಮುತ್ತುಗಳಾ ಹಾರ ಪದಕಗಳಿಂದ ಚಾರುಭೂಷಣದಿಂದ ಮಾರಸುಂದರನೆನಿಪ | ಮೂರು ದಿನದ ಬಾಲ 1 ಬಾಲತನ ಪೋಗಲು ಮೇಲೆ ಯೌವನವೊದಗಿ ಬಾಲೆಯೋರ್ವಳಕರವ ಘಳಿಲದೊಳು ಹಿಡಿದು ಮೇಲಾದ ಸೌಭಾಗ್ಯವಲ್ಪಕಾಲವಿರುವಾಗ ಕಾಲದೂತರು ಪಿಡಿಯಲೊಡನೆ ಬ[ರುವ]ವರಿಲ್ಲ 2 ಉಕ್ಕುವ ಯೌವನದ ಸೊಕ್ಕಿಲ್ಲ ಮರುದಿನ ಉಕ್ಕುಕ್ಕಿ ಬಸವಳಿದು ಶಕ್ತಿಗುಂದಿ ಸುಕ್ಕು ಸುಕ್ಕಿನ ದೇಹ[ಭಾ]ವವಿಲ್ಲದ ಬಾಳ ಭಕ್ತಿಗೆ ಮನಮರೆಯೆ ಭಕ್ತಗತಿಯದರಿಂದ 3 ಧನವ ದಾಯಾದಿಗಳು ಮನವ ಕಾಮಾದಿಗಳು ಸನುಮತ ಜ್ಞಾನವನ್ನು ದುರಿತಕಾರ್ಯ ತನುಜ ತನುಜೆಯರೆಲ್ಲರವರವರ ಸೌಖ್ಯವನು ಸನಿಹದಿಂ ಸೂರೆಗೈವರಿನ್ನೇತರಾಸೆ 4 ಕುಂಟು ಜೀವವಿರುವನಕ ನೆಂಟರಿಷ್ಟರು ಹಣವ ಗಂಟನುಂಗಲು ಬರುತಲೆಂಟೆಂಟುದಿನವಿಹರು ಗಂಟು ತೀರಿದ ಬಳಿಕ ಪಾಪಪುಣ್ಯಗಳ ಹೊರತು [ಏ ನುಂಟು ಈಭವದ ನಂಟಿನಲಿ ಯದರಿಂದ 5 ಜೀವ ತಾ ಜನಿಪಂದು ರವೆಯಷ್ಟು ತರಲಿಲ್ಲ ಅವನಿಯಾ ಬಿಡುವಂದು ಜವೆಯಷ್ಟ ಹೊರಲಿಲ್ಲ ಭಾವಶುದ್ಧಿ ಬೇಕನಿಶ ಮಾವಿನಾಕೆರೆರಂಗನ ಸೇವಿಸಿದೊಡಾ ರಂಗ ಭವವೆಲ್ಲ ಕಳೆವಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ನಾನಾ ಮಾಡೈಯ ಸರ್ವಾಧಾರಾ ಪ ಜಾನಕೀವಲ್ಲಭ ನೀನೆ ನಿರ್ಮಲ ಮೂರ್ತಿಅ.ಪ ಸ್ಮರಿಸಿದ ಮಾತ್ರದಿ ಪರಿಶುದ್ಧ ಮಾಳ್ಪೆನೆಂ ದುರುತರ ಶೃತಿಗಳು ಪೊಗಳುತಿಹವು ನಿನ್ನ 1 ಕ್ಷೀರದದಾಜ್ಯ ಮಧುಶರ್ಕರ ಫಲಗಳಿಂ ನಾರಿಕೇಳೋದಕದಿಂದ ಪಂಚಾಮೃತ 2 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಕಾವೇರಿ ಜಲಗಳಿಂ3 ಪುನಗು ಕೇಸರಿ ಕರ್ಪೂರ ಕಸ್ತೂರಿ ಪರಮದ್ರವ್ಯವು ನವರತ್ನ ಮುತ್ತುಗಳಿಂದ 4 ಭಾಗವತಪ್ರಿಯ ಗುರುರಾಮವಿಠಲನೆ 5
--------------
ಗುರುರಾಮವಿಠಲ
ಸ್ಮರಣೆ ಮಾತ್ರದಿ ಸ್ವತಂತ್ರ ದೊರಕುವುದು ಜಗದೊಳಗೆ ಶ್ರೀಹರಿ ಸ್ಮರಣೆ ಪ ಸ್ಮರಣೆ ಮಾತ್ರ ಸ್ವತಂತ್ರವೆಂದರೆ ಪರಮ ಭಗವದ್ಗೀತೆ ಅಪ್ಪಣೆ ಕರುಣಾಸಾಗರ ದಧಿಯಚೋರನೂ ಶರಣುಪಾರ್ಥಗೆ ಅರುಹು ಮಾಡಿಹ 1 ಸುಲಭದಿಂದಲಿ ಶ್ರವಣಮನನಾಗೀ ಜಗದೊಳಗೆ ನಿನಗೆ ಫಲಿತವಾಗೊ ನಿಧಿ ಧ್ಯಾನಾಗೀ ಕೊಲುಮೆತಿತ್ತಿಯನೂದಲಾಗುವ ಫಲವು ಕಂಡು ಕಾಣದಿರುವೆಯೊ ಕಲೆಯ ತೊಟ್ಟನು ನೀ ಗಲಾ ಪರಸುಳುಹಿನೊಳಗೆ ಹೊಕ್ಕಿ ಮಾಡೊ 2 ಬೆಂಗಳೂರಿಗೆ ಪೋಗಿ ನಿಂದಲ್ಲಿ ವೋ ಮಾಯಜೀವಾ ಮಂಗಳಾಂಗ ಶುಭಾಂಗಣದಲ್ಲಿ ತಂಗಿ ತಾನೆ ನಿಮಿಷ ನಿಮಿಷಕೆ ಸಂಗಮೇಶ್ವರನಾಗಿ ನಿಜದಾ ಬಂಗೆಲೆಯೊಳಗಿರುವ ತುಲಶೀರಾಮತಾ ನಿಜಲೀಗನೇಳಿದ 3
--------------
ಚನ್ನಪಟ್ಟಣದ ಅಹೋಬಲದಾಸರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ