ಒಟ್ಟು 19041 ಕಡೆಗಳಲ್ಲಿ , 136 ದಾಸರು , 7982 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿನರಿಯದೆ ಮರುಳಲೋಕ ಒಂದೊಂದು ಪರಿ ಗುರುಮಾಡಿಕೊಂಡುದರ ಹೊರವುತಿದೆ ಧರೆಯೊಳು ಬರಿದೆ ಭ್ರಮೆಗೊಂಡಿಹ್ಯದು ಪರಗತಿಯ ಜರೆದು ಶ್ರೀ ಗುರುಪಾದವನ್ನರಿಯದೆ 1 ಸತ್ವಧಾತುದ ನೆಲೆಯು ತತ್ವ ಮೋಹಲಾದನು ಮತ್ತೈದು ಮುದ್ರೆಗಳ ವ್ಯಾಪಿಸಿಹ ಪ್ರಾಣವನು ಮುದ್ರಿಸಿದಾತ ಪರಮಗುರುವು 2 ಸತ್ವ ರಜ ತಮವು ಮೊದಲಾದ ಗು- ಣತ್ವಗಳು ಪಂಚಭೂತಾತ್ಮದ ವಸ್ತಿ ವಿವರಣಗಳು ವಿಸ್ತಾರಗತಿಗಳನು ವಿಸ್ತರಿಸಿ ತೋರಿಸಿದಾತ ಸಾಕ್ಷಾತ ಗುರುವು 3 ಸ್ವಪ್ನ ಸುಷುಪ್ತಿ ಜಾಗ್ರತಿ ತ್ರಯವಸ್ಥಿತಿಗಳು ಪ್ರಾಣಪ್ರಣಮ್ಯ ಪ್ರವೃತ್ತಿ ನಿವೃತ್ತಿಗಳು ಶಕ್ತಿ ಉನ್ಮನಿಯ ಉದ್ಬವ ಗತಿಯು ತೋರಿಸಿದಾತ ಸಾಕ್ಷಾತ ಗುರುವು 4 ಹತ್ತು ಮತ್ತೆರಡು ಧ್ವನಿ ವತ್ತಿಗ್ಹೇಳೆನಿಸುವದ ರತ್ನ ಮೂರರ ಪ್ರಭೆಯ ದಾಟಿ ಸಂಜೀವನಿಯ ಸತ್ರಾವಿ ಜೀವನ ಕಳಾ ಮೃತವದೋರಿಸಿದಾತ ಸಾಕ್ಷಾತ ಗುರುವು 5 ಒತ್ತಿ ಆಧಾರ ಬಲದೆತ್ತಿ ಕುಂಡಲಣಿಯ ಕೆತ್ತಿ ಸರ್ಪೆತ್ತಿ ಮುಖ ಮಾಡಿ ಊಧ್ರ್ವ ಗತಿಯು ಮತ್ತೆ ಷಡಚಕ್ರಗಳ ಗತಿಗಳನು ದೋರಿದಾತ ಸಾಕ್ಷಾತ ಗುರುವು6 ಪತಿತ ಮಹಿಪತಿಯ ಪಾವನ್ನಗೈಸುತ್ತಮದಿ ಉತ್ಪತ್ತಿ ಸ್ಥಿತಿ ಲಯವು ತಾರಿಸಿ ಸ- ದ್ಗತಿಯು ನಿತ್ತಿಹ್ಯಾನಂದ ಘನ ಸತ್ಯ ಸದ್ಗುರು ಮೂರ್ತಿ ಸಾಕ್ಷಾತ ಪರಮಗುರುವು | 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುವಿನಾ ಬಲಗೊಂಬೆ | ಪರಗತಿ ಪಡಕೊಂಬೆ | ಸಿರಿಯಾ | ಧರಿಯಾ | ಧೊರಿಯಾ | ಚರಿಯಾ | ಸಾರಿ ಬೀರಿ ತಾರಿಸುವ ಪಾರಾವಾರ ಮಹಿಮನಾ ಪ ಶುಭ ಚರಣಕೆರಗಿ | ಕೆಡ ಗುಣಗಳ ನೀಗಿ | ಇಡುವಾ | ತುಡುವಾ | ಮುಡುವಾ | ಕುಡುವಾ | ನುಡಿ ನುಡಿಗಳಲ್ಲಿ ಬಿಡದೇ ಅಡಿಗಡಿಗೆ ನೆನೆವುತಾ 1 ಹರಿಯಲ್ಲರೊಳಗಿರಿಸೀ | ಹಮ್ಮಮತೆಯನೆ ಬಿಡಿಸಿ | ದೋರಿ ದೋರಿ ಅರಿವೈರಿ ಬೇರೆ ತೋರಿಸಿದನಾ 2 ಮೂರ್ತಿ | ಆರವಾ | ಮುರವಾ | ಘನದಿರುವ್ಹಾ ಪರವಲಿಟ್ಟನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವು ಬಂದ ನಮ್ಮ ಸಿರಿಯು ಬಂದಹರಿ ಹರ ಬ್ರಹ್ಮರ ದೊರೆರಾಯ ಬಂದ ಪ ಸರ್ವರೂಪಕ ಬಂದಸರ್ವಾಂತರ್ಯಾಮಿ ಬಂದಸರ್ವ ಚೇತನ ಬಂದಸರ್ವಸಾಕ್ಷಿ ಬಂದ 1 ಶರಧಿ ಬಂದಸುಖರೂಪ ಬಂದ 2 ಅಂತರಾತ್ಮಕ ಬಂದಅವ್ಯಕ್ತಾಚಲ ಬಂದಚಿಂತಾಮಣಿಯೆ ಬಂದಚಿದಾನಂದ ಬಂದ 3
--------------
ಚಿದಾನಂದ ಅವಧೂತರು
ಗುರುವೆ ನಮ್ಮ ತಾಯಿ ತಂದೆ | ಗುರುವೆ ನಮ್ಮ ಬಂಧುಬಳಗಗುರುವೆ ನಮ್ಮ ಸರ್ವಸ್ವವು ಗತಿಗೋತ್ರರಯ್ಯಾ ಪ ತಂದೆ ತಾಯಿ ಮಗುವಿಗಾಗಿ | ನೊಂದಿ ಬಳಲಿ ಸಾಕುವಂತೆಎಂದೆಂದು ಅವರೆ ನಮ್ಮ ಸದುಪದೇಶದೀ |ಬಂಧನಕ್ಕೊಳಗಾಗದಂತೆ | ಮಂದರೋದ್ಧರನ ನಾಮಅಂದದಿಂದ ಬೋಧಿಸುತ್ತ | ಉದ್ಧರಿಸುವರಯ್ಯಾ 1 ಮುದ್ದು ಮೋಹನದಾಸರಿಂದ | ಬದ್ಧಶಿಷ್ಯರೆನಿಸಿಕೊಂಡುಶುದ್ಧರು ಅವಧೂತರು | ಹರಿಯನ್ನೆ ಕಂಡೂ |ಗೆದ್ದು ತಾವು ಬಂಧದಿಂದ | ಉದ್ಧರಿಸಲನ್ಯರನುಸಿದ್ಧರಾಗಿ ಕರಿಗಿರೀಲಿ | ದಾಸಕೂಟ ನೆರೆಸೀದ 2 ಸನ್ನುತ ಪರ | ವಸ್ತುವೆಂದು ಬೋಧಿಸಿದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗುರುವೆ ನಿನ್ನಯ ದಾಸನಾದೆ ಎನ್ನಕರುಣದಿ ಪೊರೆವೊಡೆ ನಾನೇ ನೀನಾದೆ ಪ ನಿರ್ಮಳ ಕಾವಿಯನುಟ್ಟು ಭೇದಮರ್ಮವೆನಿಪ ರುದ್ರಾಕ್ಷಿಯ ತೊಟ್ಟುಧರ್ಮ ಕುಂಡಲವೆಂಬೊದಿಟ್ಟು ಹರಕರ್ಮ ಭಸ್ಮವ ಸ್ಥಾನ ಸ್ಥಾನಕೆ ಇಟ್ಟು 1 ಸ್ವಸ್ಥ ಸುಸ್ಥಳದಲ್ಲಿ ಕುಳಿತು ಗುರುವಿಸ್ತರಿಸಿದ ಗೋಪ್ಯವ ಮಾಡ ಕಲಿತುನಾಸ್ತಿ ಎಂಬುದ ನಾ ಮರೆತು ಪರವಸ್ತುನೀ ನಿಜವೆ ಎಂಬುದ ನಾನರಿತು 2 ತಾನೆಂದು ಚಿಂತಿಸಲ್ಯಾಕೆ ಚಿ-ದಾನಂದ ಗುರುವೆ ಎದುರಲಿರಲಿಕೆಧ್ಯಾನ ಮೌನಗಳವು ಯಾಕೆ ನಾನುನೀನೆ ಎಂಬುದ ಮನಗಂಡಿರಲೇಕೆ 3
--------------
ಚಿದಾನಂದ ಅವಧೂತರು
ಗುರುವೆ ನಿಮ್ಮನು ನಾ ಮೊರೆಹೊಕ್ಕೆನಲ್ಲದೆ ಅರಿಯೆ ಅನ್ಯರನಿನ್ನು ಪೊರೆಯಿರೀಗ ಪ. ಸಿರಿಯರಸನ ತೋರಿ ಗುರುವೆ ಕರುಣಿಸಿರಿ ತರತಮ್ಯ ತಿಳಿಸುತ ಹರಿಸಿರಿ ಭವದುಃಖಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಹಿಂದು ಮುಂದರಿಯದೆ ಕುಂದಿದೆನು ಬಂದು ಕರುಣದಿ ಆನಂದವ ನೀಡುತ ನಂದಕಂದನ ಲೀಲೆಯಿಂದ ರಕ್ಷಿಸಿದಿರಿ1 ಮುಸುಕಿದ ಅಜ್ಞಾನ ಹಸನಾಗಿ ತೊಲಗಿಸಿ ಕುಶಲದ ಮತಿಯಿತ್ತು ಪಾಲಿಸುತ ಬಿಸಜಾಕ್ಷನು ದಯ ಎಸೆವ ಕರುಣದಿಯಿತ್ತು ಘಸಣೆಗೊಳಿಸದಲೆ ವಸುಮತಿಯೊಳು ಪೊರೆವ 2 ಕಷ್ಟವಪಡಲಾರೆ ಸೃಷ್ಟಿಯೊಳಗಿನ್ನು ತಟ್ಟದೆ ಎನ್ನ ಮೊರೆ ಮನಸಿಗೀಗ ಕೊಟ್ಟು ಅಭಯವನು ಘಟ್ಯಾಗಿ ಪೊರೆಯಿರಿ ಕೆಟ್ಟ ಕಲ್ಮಷ ಕಳೆದು ಸೃಷ್ಟಿಗೊಡೆಯನ ತೋರಿ 3 ತಲ್ಲಣಿಸುತಿಹೆ ಕ್ಷುಲ್ಲ ದೇಹದಿ ಬಂದು ಒಲ್ಲೆನು ಈ ದುಃಖಭವ ಎಲ್ಲ ಮನಸು ನಿಮ್ಮ ಪಾದದಲಿರುವುದು ತಲ್ಲಣಗೊಳಿಸದೆ ಪೊರೆಯಿರಿ ಗುರುದೇವ 4 ತಂದೆ ಮುದ್ದುಮೋಹನವಿಠ್ಠಲನೆಂಬೊ ಇಂದಿರೇಶನ ಅಂಕಿತದಿ ಮೆರೆವೊ ಸುಂದರ ಗೋಪಾಲಕೃಷ್ಣವಿಠ್ಠಲನ ಎಂದೆಂದಿಗೂ ಮನಮಂದಿರದಲಿ ಕಾಂಬ 5
--------------
ಅಂಬಾಬಾಯಿ
ಗುರುವೆ ನಿಮ್ಮಯ ಕರುಣ ವೃಕ್ಷ ನೆಳಲೊಹೊರತಾದ ಕಾರಣದಿ ಹೀನನಾದೆ ಪ ಉದ್ಧವ ಖ್ಯಾತಿ ದ್ರೋಣನು ಕಲಿಯುಗದಿ ನಾನಾ ||ಭೌತಿಕಗಳ ಧರಿಸಿ ಪ್ರಾರ್ಥಿಸಿದ ಸಜ್ಜನರಆರ್ತಗಳ ಪರಿಹರಿಸಿ ಸರ್ವಾರ್ಥಗರೆವ1 ಶರಧಿ ಮುಣುಗಿದ ಮಹಾಪರಮ ಕರುಣಾನಿಧಿಯ ದೇವಮಣಿಯೆ2 ನಿರ್ಜನರು 3 ಆವಾವ ಕಾಲದಲಿ ನಿನ್ನ ದಯದಿಂದಲ್ಲಿದೇವಾರ್ತಿಗಳನೈದು (ದಿ) ಸೌಖ್ಯಬಡುವೆ ||ಕಾವ ಕರುಣೆಯೆ ಎನ್ನ ಅವಗುಣಗಳೆಣಿಸದಲೆಸಾವಧಾನದಲೆನ್ನ ಸಲಹಬೇಕು4 ಬಾಲಕನ ಅಪರಾಧ ಅನಂತವಿರಲಿನ್ನುಪಾಲಿಸಬೇಕಯ್ಯ ನೈಜಗುರುವೆ ||ಪಾಲಸಾಗರಶಾಯಿ ಗುರು ವಿಜಯ ವಿಠ್ಠಲರೇಯಕಾಲಕಾಲಕೆ ಅಗಲದಂತೆ ವರವೀಯೋ 5
--------------
ಗುರುವಿಜಯವಿಠ್ಠಲರು
ಗುರುವೆ ಪರಬ್ರಹ್ಮ ವಾಸುದೇವಾರ್ಯಗುರುವೆ ಪರಬ್ರಹ್ಮ ಪಅರಿವು ಮರವೆಗಳ ಪರಿಯ ನಿರೂಪಿಸಿಅರಿ'ನ ಘನವಾಹ ತೆರಗೈದು ಪಾಲಿಪ ಅ.ಪಸುಖಬುದ್ಧಿುಂಪಾಪಾಸಕ್ತ ಮಾನಸರನುಯುಕುತಿುಂದಲಿ ಹರಿಭಕುತಿಗಳವಡಿಪ 1ಭಾಗವತಾರ್ಥದಿ ರಾಗವ ಪುಟ್ಟಿಸಿಹಾಗೆ ಗೀತಾಮೃತ ಸಾಗರದೆಡೆಗೊಯ್ವ 2ನಾನಾಮತಗಳೊಳು ಮಾನಿಸಹೊಗದಂತೆಶ್ರೀನಿವಾಸನ ಪಾದಧ್ಯಾನವ ಬಲಿಸುವ 3ಕಾಮಾದಿ ಕಲುತ ತಾಮಸ ಜನರನುಪ್ರೇಮದಿಂದಲಿ ಸಪ್ತ ಭೂ'ುಕೆಗೇರಿಪ 4ಒಂದೊಂದರೊಳು ಮತಿನಿಂದು ತಿಳಿದೊಳಿಸೆಂದು ನಡೆದೂ ಪೂರ್ಣಾನಂದರಹುದಮಾಳ್ಪ 5ಹೊರಗೊಳಗುಗಾಣದೆ ಬರಿಯರಿವಳಮಲಪರಮನೆ ನಾನೆಂಬ ಪರಿಗೈದು ಪೊರೆವ 6ಕರುಣದಿಂ ಚಿಕನಾಗಪುರದಿ ಭಜಕರಿಗೆಕರದು ಜ್ಞಾನಾಮೃತವೆರೆವ ವಾಸುದೇವಾರ್ಯ 7
--------------
ವೆಂಕಟದಾಸರು
ಗುರುವೆ ಸಂಸಾರವಿದು ಸ್ಥಿರವೇ ಬರಿದೆ ನಾ ಮೆರೆವೆ ಧರವೇ ವಿಷಯಂಗಳಲಿ ವಿಶ್ವಾಸಾ ವಿರಕ್ತಿಗೆ ಮೋಸಾ ಎಲ್ಲ ಉಪಾಧಿಯೊಳು ಸುಖವಿಲ್ಲ ಅನುಭವಿ ತಾಂ ಬಲ್ಲ ಈ ನುಡಿ ಪುಸಿಯಲ್ಲ ಗುರುವೆ ಆಗ ಈಗೆಂಬ ಶರೀರದ ಭೋಗ ತೀರಿಸಿಕೊಂಡು ಹೋಗಬೇಕೆಂಬ ಚಿಂತೆ ಎನಗೆ ಮುಕ್ತಿಯಮನೆಗೆ ಗುರುವೆ 1 ಆಶಾಪಾಶದಲಿ ಶರೀರದ ಘಾಸಿಯಾಗದಂತೆ ಪ್ರ ನಿನ್ನಂತೆ ಮಾಡೊ ಗುರುವೆ 2 ಹಣವೆ ಮುಂದಿಲ್ಲ ಕೊಟ್ಟ ಋಣವೇ ತೀರಿಸಲಿಕ್ಕೆ ನಾ ಬೆಳಗೆ ಗುರುವೆ 3 ನಿನಗೆ ಎಣೆಯಾದ ವಸ್ತÀು ಎನಗೆ ಸಿಕ್ಕುವುದುಂಟೇ ಬಾರಯ್ಯ ಬಲು ಕೃಪೆಯಿಂದ ಗುರು ವಿಮಲಾನಂದಾ ಗುರುವೆ 4
--------------
ಭಟಕಳ ಅಪ್ಪಯ್ಯ
ಗುರುವೆನ್ನ ತಾಯಿ ಸದ್ಗುರುವೆನ್ನ ತಂದೆ ಗುರುಕೃಪೆ ಪಡೆದು ನಾ ಹೆಸರಿಗೆ ಬಂದೆ ಪ ಗುರುವೆನ್ನ ಪ್ರಾಣಲಿಂಗಾ ಗುರುವೆನ್ನ ಇಷ್ಟಲಿಂಗಾ ಗುರುಪ್ರಕಾಶವು ಬೆಳಗುತಿರೆ ಸರ್ವಾಂಗಾ ಗುರುಸ್ಮರಣೆ ಸುಖರಂಗಾ ಗುರುಕರುಣಾ ಕೃಪಾಂಗಾ ಗುರುವಿಂದಧಿಕ ಕಾಣೆ ಶಿವನಾಣೆ ಗುರುವೆನ್ನ 1 ಗುರುವೆ ಈ ಪೃಥವಿಯು ಗುರುವೆ ಆಕಾಶವು ಗುರುವೆ ಸ್ಥಾವರ ಜಂಗಮವೆಲ್ಲವು ಗುರುರೂಪವೆಂದು ಶ್ರೀ ಗುರು ಕರುಣದಂದರಿತು ಗುರು ಸರ್ವರಿಗೆ ಸರಿಯಲ್ಲಾ ಶಿವಬಲ್ಲ 2 ಗುರುವೆ ದೇವಾಂಗಾ ಶ್ರೀ ಗುರುವೆ ಬಸವಲಿಂಗಾ ಗುರು ಬ್ರಹ್ಮವಿಷ್ಣುರುದ್ರ ಸ್ವರೂಪ ಗುರು ಧರಣಿಪಾಲಾ ಗುರು ವಿಮಲಾನಂದ ಲೋಲಾ ಗುರು ಸಿದ್ಧೇಶ್ವರಸ್ವಾಮಿ ಭಕ್ತ ಪ್ರೇಮಿ 3
--------------
ಭಟಕಳ ಅಪ್ಪಯ್ಯ
ಗುರುವೇ ನಿತ್ಯನು ಗುರುವೇ ನಿತ್ಯನುಗುರುವೇ ನಿತ್ಯನು ಸತ್ಯ ಪ ಬೋಧ ಬೋಧ 1 ಬುದ್ಧಿ ಬುದ್ಧಿ ತಾನ್ಯಾತರ ಬುದ್ಧಿಯುಬುದ್ಧಿಯು ನಿಶ್ಚಯ ಬುದ್ಧಿಸಿದ್ಧಿ ಸಿದ್ಧಿ ತಾನ್ಯಾತರ ಸಿದ್ಧಿಯುಸಿದ್ಧಿಯು ಜ್ಞಾನದ ಸಿದ್ಧಿ 2 ಶಾಂತ ಶಾಂತ ತಾನ್ಯಾತರಶಾಂತವು ಎಲ್ಲಕೆ ನಿಂತುದೆ ಶಾಂತಭ್ರಾಂತುಭ್ರಾಂತು ತಾನ್ಯಾತರಭ್ರಾಂತದು ಗುರುವಿನಲ್ಲಿದ್ದುದೆ ಭ್ರಾಂತು3 ಧ್ಯಾನ ಧ್ಯಾನ ತಾನ್ಯಾತರ ಧ್ಯಾನವುಧ್ಯಾನವು ತನ್ನದೆ ಧ್ಯಾನಮೌನ ಮೌನ ಅದು ಯಾತರ ಮೌನವುಮೌನವು ತುರ್ಯದೆ ಮೌನ 4 ಭಕ್ತಿ ಭಕ್ತಿ ತಾನ್ಯಾತರ ಭಕ್ತಿಯುಮುಕ್ತಿಯು ನಿಜವಹ ಭಕ್ತಿಮುಕ್ತಿ ಮುಕ್ತಿ ತಾನ್ಯಾತರ ಮುಕ್ತಿಯುಮುಕ್ತಿ ಚಿದಾನಂದ ಮುಕ್ತಿ5
--------------
ಚಿದಾನಂದ ಅವಧೂತರು
ಗುರುವೇ ಸುರತರುವೇ ಹರಿಭಕ್ತಾಗ್ರೇಸರ ವಿಜಯರಾಯ ಪ ಪುರಂದರದಾಸರ ಕರುಣಕೆ ಪಾತ್ರನೆ ಮರುತ ಮತಾಬ್ಧಿಗೆ ಚಂದ್ರ ವಿಜಯರಾಯ ಅ.ಪ ವಿಷ್ಣು ಬ್ರಹ್ಮ ಶಿವರನುಪರೀಕ್ಷಿಸುತು ತ್ಕøಷ್ಟ ಹರಿಯೆನುತ ಶಿಷ್ಟರಿಗರುಹಿದ 1 ಜನುಮ ಜನುಮದಿಂದನುಸರಿಸುತಿಹ ಘನದುರಿತವ ದರುಶನ ಮಾತ್ರ ಕಳೆವ2 ಗುರುರಾಮ ವಿಠಲನ ಚರಣವ ತೋರಿಸು 3
--------------
ಗುರುರಾಮವಿಠಲ
ಗುರುಸತ್ಯವರರೆಂಬ ಕಲ್ಪಭೂಜಾ ಧರೆಯೊಳಗೆಮ್ಮನುದ್ಧರಿಸ ಬಂತಿದಕೊ ಪ ಶ್ರೀಮಧ್ವಮತವೆಂಬೋ ಭೂಮಿಯೊಳಗುದ್ಭವಿಸಿ ರಾಮ ವೇದವಾಸ್ಯರಂಘ್ರಿ ಯುಗಳ ವ್ಯೋಮ ಮಂಡಲವನಾಶ್ರಯಿಸಿ ಸತ್ಕೀರ್ತಿನಿ ಸ್ಸೀಮ ಶಾಖೋಪಶಾಖೆಗಳಿಂದ ಶೋಭಿಸುತ 1 ಭವವೆಂಬ ಭಾಸ್ಕರತಪದಿಂದ ಬೆಂದು ಬಂ ದವರ ಮಂದಸ್ಮಿತ ನೆಳಲಿಂದಲೀ ಪ್ರವಣರಂತಃಸ್ತಾಪ ಕಳೆದು ನಿತ್ಯದಲಿ ಸ ತ್ಕವಿ ದ್ವಿಜಾಳಿಗಲಿಗಾಶ್ರಿತರಾಗಿ ಮೆರೆವ 2 ಕರ್ಮ ಜ್ಞಾನ ಮಾರ್ಗಸ್ಥ ಜನರಿಗಾಗಿ ಲ್ಲಿಹವು ಫಲ ಪುಷ್ಪ ಐಹಿಕಾಮುಷ್ಮಿಕಾ ಭುಜಗ ಹೃ ದ್ಗುಹದೊಳಿಪ್ಪದು ಮಾಯಿಮೂಷಕಗಳೋಡಿಸುತ 3
--------------
ಜಗನ್ನಾಥದಾಸರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಸೇವೆ ನಿರತರಿಗೆ ನಮೋ ನಮೋ ಪ ಅರಿವು ನಿಲ್ಲಿಸಿ ಪರಸಾಧನದಿರುತಿಹ್ಯ ಪರಮಪಾವನರಿಗೆ ನಮೋ ನಮೋ ಅ.ಪ ತಾಪಸಾರ್ಯರಿಗೆ ನಮೋ ನಮೋ ಮಹ ಪಾಪ ದೂರರಿಗೆ ನಮೋ ನಮೋ ಕೋಪಲೋಪರಿಗೆ ನಮೋ ನಮೋ ಇಹ ವ್ಯಾಪಾರರಿತವರಿಗೆ ನಮೋ ನಮೋ ತಾಪತ್ರಯವ ನೀಗಿ ಶ್ರೀಪತಿ ಚರಣವ ಗೌಪ್ಯದಿ ನೆನೆವರ್ಗೆ ನಮೋ ನಮೋ 1 ವೇದ ಸಂಪನ್ನರಿಗೆ ನಮೋ ನಮೋ ಭವ ಬಾಧೆ ಗೆಲಿದವರಿಗೆ ನಮೋ ನಮೋ ಸಾಧನ ಚತುಷ್ಟರಿಗೆ ನಮೋ ನಮೋ ಮಹ ಸಾಧುಸಂತರಿಗೆ ನಮೋ ನಮೋ ವಾದಿ ಮೂರ್ಖರೊಳು ವಾದಿಸದಂಥ ಸು ಬೋಧ ಗುರುವರಗೆ ನಮೋ ನಮೋ 2 ಭಾಗವತರಿಗೆ ನಮೋ ನಮೋ ಇಹ ಭೋಗನಿರಾಸ್ಯರಿಗೆ ನಮೋ ನಮೋ ಯೋಗಸಾಧಕರಿಗೆ ನಮೋ ನಮೋ ಮಹ ಯೋಗಿ ಮಹಾತ್ಮರಿಗೆ ನಮೋ ನಮೋ ಆಗಯೀಗೆನ್ನದೆ ಸಾಗರನಿಲಯನನ್ನ ಬಾಗಿಭಜಿಪರಿಗೆ ನಮೋ ನಮೋ 3 ಭಕ್ತಜನರಿಗೆ ನಮೋ ನಮೋ ವಿ ರಕ್ತ ಪುರುಷರಿಗೆ ನಮೋ ನಮೋ ಸತ್ಯಶೀಲರಿಗೆ ನಮೋ ನಮೋ ತಮ್ಮ ಗುರ್ತು ಅರ್ತವರಿಗೆ ನಮೋ ನಮೋ ಭಕ್ತಿಯುಕ್ತಿ ವಹಿಸೆತ್ತಗಲದಂಥ ಚಿತ್ತಶುದ್ಧರಿಗೆ ನಮೋ ನಮೋ 4 ನಿತ್ಯ ನಿರ್ಮಲರಿಗೆ ನಮೋ ನಮೋ ಭವ ಮರ್ತ ನಿರ್ತರಿಗೆ ನಮೋ ನಮೋ ತ ತ್ವರ್ಥಿಕರಿಗೆ ನಮೋ ನಮೋ ಮಹ ಮುಕ್ತಿ ಸಾಧ್ಯರಿಗೆ ನಮೋ ನಮೋ ಮೃತ್ಯುವ ಗೆಲಿದು ಕರ್ತ ಶ್ರೀರಾಮನ ಅರ್ತವರಿಗೆ ಬಹು ನಮೋ ನಮೋ 5
--------------
ರಾಮದಾಸರು