ಒಟ್ಟು 30086 ಕಡೆಗಳಲ್ಲಿ , 138 ದಾಸರು , 9126 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೂಡಿ ಬನ್ನಿರಯ್ಯ ನೀವು ಬಂದು ನೋಡಿರಯ್ಯ ಓಡಿ ಬಂದು ಹಿಂದೆ ಮುಖಕೆ ಮಸಿಯ ಬಳಿದನಯ್ಯಾ ಪ ಆಟವಾಯಿತವಗೆ ನೋಡಿ ಪಾಪವಾಯಿತೆನಗೆ ಇಲ್ಲಿ ಬಿಟ್ಟರೆಮಗೆ ನೀವು ಸಾಕ್ಷಿ ಪೇಳ್ವರಾರು ಹೇಳಿರಯ್ಯ ಅ.ಪ ಇದ್ದುದನ್ನು ಹೇಳಿ ನೀವು ಮರೆಯಬೇಡಿರಯ್ಯ ಪೇಳ್ದೆನಯ್ಯ ತಪ್ಪು ನಾನು ಕೆನ್ನೆ ಬಡಿಯಿರಯ್ಯ 1 ಮಸಿಯ ಕೊಟ್ಟು ಮುಂದೆ ಅವನು ಮುಗುಳಿನಕ್ಕಿ ಹೋದ ಹುಸಿಯಲಾರದೆನ್ನ ಮುಖಕೆ ಹಚ್ಚಿಕೊಂಡೆನಯ್ಯ 2 ಅಣ್ಣನ ಬೈಯ್ಯಬೇಡಿರಯ್ಯ ತಪ್ಪು ನನ್ನದಯ್ಯ ಕಣ್ಣು ಕಪ್ಪು ಹಚ್ಚಿ ತನ್ನ ನೋಡು ಎಂದ ಅವನು 3 ಮುಚ್ಚಿ ಕೊಟ್ಟನಯ್ಯ ಕಣ್ಣು ಬಿಚ್ಚಿ ಕೊಳ್ಳಲಿಲ್ಲ ನಾನು ಪೆಚ್ಚು ಹೋದೆ ಶೆಲ್ವ ಶರಣು ತಿಳಿಸಿ ಸಲಹಿರಯ್ಯ ನೀವು 4
--------------
ಸಂಪತ್ತಯ್ಯಂಗಾರ್
ಕೃತ ಕೃತ್ಯನಾದೆನಿಂದಿನ ದಿನದೊಳು ಕ್ಷಿತಿಸುತ ವೆಂಕಟರಾಮಾರ್ಯರನ ಕಂಡು ಪ ಭೂಮಂಡಲದೊಳುಳ್ಳ ಸಕಲ ತೀರ್ಥಸ್ನಾನ ಹೇಮಾದ್ರಿ ಮೊದಲಾದ ಕ್ಷೇತ್ರ ಯಾತ್ರೆ ನೇಮ ಜಪತಪ ವ್ರತಾದಿಗಳ ಮಾಡಿದ ಪುಣ್ಯ ಈ ಮಹಾತ್ಮರ ಕಂಡ ಮಾತ್ರ ಸಮನಿಸಿತು 1 ಪರಿಯಂತ ಹರಿಮಹಿಮೆಗಳ ಸನ್ನುತಿಯಲೀ ಶ್ರುತಿಸ್ಮøತಿಗಳಿಂದ ಧನ್ಯರೆಂದೆನಿಸಿ ಮಹಿಯೊಳಗೆ ಪೂರಿತರಾದ ಪುಣ್ಯಚರಿತರ ದಿವ್ಯ ಪಾದವನೆ ನಾ ಕಂಡು 2 ಹೀನ ಜನರೇ ಬಹಳ ಕ್ಷೋಣಿಯ ಮೇಲೆ ಸು ಜ್ಞಾನಿಗಳು ದುರ್ಲಭರು ಕಲಿಯುಗದಲಿ ಆನತೇಷ್ಟಪ್ರದ ಜಗನ್ನಾಥ ವಿಠಲ ತಾನೆ ಕರೆತಂದು ತೋರಿ ಪುನೀತನ ಮಾಡ್ದ 3
--------------
ಜಗನ್ನಾಥದಾಸರು
ಕೃತಕೃತ್ಯನಾದೆನಿಂದಿನ ದಿನದಲಿ ವ್ರತಿ ಕುಲೋತ್ತಂಸ ಭುವನೇಂದ್ರರಾಯರ ಕಂಡು ಪ ಗಂಗಾ ಪ್ರಯಾಗ ಗಯಾ ನೈಮಿಷಾರಣ್ಯ ಕುರು ಜಾಂಗಳಾದ್ಯಖಿಳ ಸುಕ್ಷೇತ್ರಗಳಲಿ ಸಾಂಗ ಕರ್ಮಗಳ ಹರಿಗರ್ಪಿಸಿದ ಫಲವು ಮುನಿ ಪುಂಗವರ ಕಂಡ ಮಾತ್ರದಿ ಸಮನಿಸಿತೆನಗೆ 1 ಹಿಂದೆ ಬಹು ಜನ್ಮದಿ ಮಾಡಿದ ಸುಕೃತಕೆ ಕ ಪಾದ ಕಮಲ ಸಂದರ್ಶನವೆ ಮಹತ್ಪಲವಾಯಿತೆನಗೆ ಗೋ ವಿಂದನ ಪ್ರತಿಬಿಂಬರಾದ ಕಾರಣದಿಂದ 2 ಅನ್ಯಸಾಧನೆಗಳಿನ್ನಾಚರಿಸಲ್ಯಾಕೆ ಮ ತ್ತನ್ಯರಾರಾಧನೆಯ ಮಾಡಲ್ಯಾಕೆ ಸನ್ನುತ ಮಹಿಮ ಜಗನ್ನಾಥ ವಿಠಲನ ಕಾ ರುಣ್ಯ ಪಾತ್ರರಾ ಕರುಣವಾಯಿತೆನ್ನೊಳಿಂದು 3
--------------
ಜಗನ್ನಾಥದಾಸರು
ಕೃತಿ 5 ಇಂದು ಎನಗೆ ಗೋವಿಂದ ನಿನ್ನ ಪಾದಾರ ವಿಂದವ ತೋರೊ ಮುಕುಂದ ಪ ಸುಂದರ ವದನನೆ ನಂದಗೋಪನ ಕಂದ ಮಂದರೋದ್ಧರ ಆನಂದ ಇಂದಿರಾ ರಮಣ ಅ.ಪ ನೊಂದೆನಯ್ಯ ಭವಬಂಧನದೊಳು ಸಿಲುಕಿ ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು ಕಂದನು ಎಂದೆನ್ನ ಕುಂದುಗಳೆಣಿಸದೆ ಕಂದರ್ಪ ಜನಕನೆ 1 ಮೂಢತನದಿ ಬಹು ಹೇಡಿ ಜೀವ ನಾನಾಗಿ ದೃಢಭಕುತಿಯನು ಮಾಡಲಿಲ್ಲವೊ ಹರಿಯೆ ನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆ ಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ 2 ಧಾರುಣಿಯೊಳು ಭೂಭಾರ ಜೀವ ನಾನಾಗಿ ದಾರಿತಪ್ಪಿ ನಡೆದೆ ಸೇರಿದೆ ಕುಜನರ ಆರೂ ಕಾಯುವರಿಲ್ಲ ಸೇರಿದೆ ನಿನಗಯ್ಯ ಧೀರ ವೇಣುಗೋಪಾಲ ಪಾರಗಾಣಿಸೊ ಹರಿಯೆ 3
--------------
ವಿಜಯೀಂದ್ರತೀರ್ಥರು
ಕೃತ್ತಿವಾಸ ಪೂಜ್ಯ ಚರಣೇ | ಮಹತತ್ವಮಾನಿ ಸತಿಯೆ ಸುಗುಣೆ ||ಅ|| ನಿತ್ಯ ನೀಡೆ ಹರಿಯ ಸ್ಮರಣೆ ಅ.ಪ. ವಿಧ್ಯುದ್ವಾಕ್ ದಿಙËಮಾನಿಯೆ | ಹೇದ್ಯುಪೃಥಿವಿ ಭಾರತೀಯೇಪ್ರದ್ಯುಮ್ನ ಕೃತಿಗೆ ಕುಮಾರಿಯೆ | ಬುಧ್ಯಾಭಿಮಾನಿಯೇ ಕಾಯೆವಿದ್ಯುತಿಸ್ಥಿತಿ | ಬುಧ್ಯಾಬ್ದಿಯೆ | ವಿಧ್ಯೇತರ | ಅವಿಧ್ಯೆಯ ಕಳೆಸದ್ಯೋಜನ | ಶ್ರದ್ದಾಂಬಾ | ಮದ್ದೇಹದಿ | ಸಿದ್ಧಿಸು ಹರಿ 1 ಮಂದ ಪತಿ | ಸುಂದರ ಪದ | ಸಂಧಿಸು ಮನ | ಮಂದಿರದಲಿ 2 ಭಿಕ್ಷೆ ನೀಡೆ ತಾಯೇ | ಯುಕುತಿ ಶಾಸ್ತ್ರ ಒಂದನರಿಯೇಸೌಖ್ಯ ತೀರ್ಥ ಮತವನ್ವೊರೆಯೇ ಮುಕುತಿ ಮಾರ್ಗ ತೋರಿ ಪೊರೆಯೇ ||ತೋಕನು ಎನೆ | ಸ್ವೀಕರಿಸುತ | ಲೋಕರುಗಳ | ವಾಕನು ದೂ-ರೀಕರಿಸು ಪ | ರಾಕೆನ್ನುವೆ | ಭೀಕರಭವ | ನೀ ಕರಗಿಸು 3 ಕಡಗ ಕಂಕಣ ದ್ವಾರ ಧಾರೆ | ಜಡಿತ ದುಂಗುರ ದೋಷ ದೂರೆಮುಡಿದ ಮಲ್ಲಿಗೆ ಕುಂಚುಕಧಾರೆ | ಉಡುಗೆ ಬಿಳುಪಿನಂಬರೆ ನೀರೇ || ಒಡ ನಡುವು | ನಿಡಿತೋಳೂ | ತೊಡೆಕದಳೀ | ಬಡುವು ಪರೀ |ಅಡಿಗೆರಗುವೆ | ಪೊಡ ವೀಶನ | ಧೃಡ ಭಕುತಿ | ತಡೆಯದೆ ಕೊಡು4 ಶರಣು ಮುಂದಣ ವಾಣಿ ಕರುಣ | ಗುರು ಗೋವಿಂದ ವಿಠಲ ಚರಣಾ |ಭರಣವೆನಿಪ ಸುಗುಣ ಗಣಾ | ಒರೆದು ಕಳೆಯೆ ಭವದ ಬಂಧನ |ಮಾರಯ್ಯನ | ಆರಾಧನೆ | ಚಾರೀಸದೆ | ಧಾರಾಣಿಗೆಭಾರಾದೆನು | ಕಾರುಣ್ಯವ | ತೋರೂವುದು ಭಾರತಿಯೇ 5
--------------
ಗುರುಗೋವಿಂದವಿಠಲರು
ಕೃತ್ತಿವಾಸನ ಪ್ರಿಯ ಪುತ್ರನೆ ಗುಹ ಸ- ರ್ವೋತ್ತಮ ಚಿದ್ರೂಪ ಪ ಚಿತ್ತಜ ಪ್ರತಿರೂಪಾ ಪ್ರತಾಪಾಅ.ಪ ದೀನತನದಿ ಕಡುಬೇನೆಯ ಪಡುತಲಿಹೀನಮನುಜನೆನ್ನಾ | ದಾನಿಯಾಗಿಹ ಕರುಣಾನಿಧಿ ಕೈಪಿಡಿ ಧ್ಯಾನಿಪೆ ನಾ ನಿನ್ನ ಪ್ರಸನ್ನ 1 ಸುತ್ತಮುತ್ತಿರುವ ವಿಪತ್ತುಗಳಾ ಭಯ ಮೆತ್ತಿಕೊಂಡಿದೆ ತಾನೇ ಸತ್ವಶಾಲಿಯೇ ನೀ ಕಿತ್ತೊಗೆಯದಿರೆ ಅ- ನ್ಯತ್ರ ಗತಿಯ ಕಾಣೆ ನಿನ್ನಾಣೆ 2 ಪಾಶ ಅಂಕುಶಧರ | ನಾ ಸಹೋದರ ಪಾವಂ- ಜೇಶ ಮಹಾನುಭಾವ | ದಾಸರಿಗೊದಗುವ ತ್ರಾಸವ ಕಳೆ ಸ- ರ್ವೇಶನೆ ಮಹದೇವಾ | ದೇವರ ದೇವಾ 3
--------------
ಬೆಳ್ಳೆ ದಾಸಪ್ಪಯ್ಯ
ಕೃತ್ಯವನು ತಿಳಿಸಯ್ಯ ಕೃತ್ತಿವಾಸನ ಪ್ರೀಯಾ ಪ ಭೃತ್ಯವತ್ಸಲ ಭಾಗ್ಯ ಸಂಪನ್ನ ಮೋಹನ್ನಾ ಅ.ಪ ಹಾಸರಲಿ ನಿಂತು ಕ್ಲೇಶಪಡಿಸುವ ವಾಕ್ಯ ಅಕ್ಲೇಶಪಡಿಸುವಾ 1 ಭಾವದಿಂದೊಮ್ಮೆ ಭಯನಿತ್ತಭಯ ಪಾಲಿಪ ಭಕ್ತ ಬಂಧೊ 2 ಕಾಲಕಾಲಕೆ ಕಾಲೋಚಿತದ ಮರ್ಮ ಸೂಚಿಸೆನಗೆ 3 ವಚನ ಸತ್ಯವ ಮಾಡು ವಾಚನಸ್ವತಿಯ ಸಖಚಾಚುವ್ಯನೋಕರ 4 ವಾಚಾಮಗೋಚರ ತಂದೆವರದಗೋಪಾಲವಿಠಲನ ಚರಣ ಭಜಕ ಸುಖೇಚರೇಂದ್ರಾಧಿಪ 5
--------------
ತಂದೆವರದಗೋಪಾಲವಿಠಲರು
ಕೃಪಣ ಶ್ರೀಪಾದಾರ್ಚನೆಯನಿತ್ತು ಪ ಅಪಾರ ಜನುಮದ ಪಾಪೌಘ ಬೆನ್ನಟ್ಟಿ ತಾಪಗೊಳಿಸುತ್ತಿದೆ ಈ ಪರಿಭವದೊಳು ಅ.ಪ. ಪತಿತ ನಾನಾದರೂ ಪತಿತ ಪಾವನ ನೀನು ಪಶುಪತಿ ಪಾಪಹರ ಗತಿಹೀನರಿಗೆ ನೀನೆ ಗತಿದರ್ಶಕನೆಂದು ತುತಿಸುತ್ತಿಹುದು ವೇದತತಿ ಸಮ್ಮತವಾಗಿ 1 ಭವಭವದಲಿ ಬಂದು ಬವಣೆಗಳಲಿ ಬೆಂದು ಬಳಲಿದೆ ಭಕ್ತ ಬಂಧು ಭವಹರ ನೀನೆಂಬುದನು ಭವಿಗಳಿಂ ನಿತ್ಯ ಶ್ರವಣದಿ ಕೇಳಿ ನಿನ್ನವರವನೆನಿಸಿದೆ 2 ಗೌರಿ ಮನೋಹರ ಗೌರಾಂಗ ಭಕ್ತರು ದ್ಧಾರಿಯೆ ಶೂಲಧರ ಸಾರಿದೆ ನಿನ್ನಂಘ್ರಿವಾರಿಜಯುಗಳವ ಕಾರುಣ್ಯದಲಿ ನೋಡು ಅಭಯವ ನೀಡು 3 ಮುಪ್ಪುರಹರ ಮುಕ್ಕಣ್ಣ ಗಂಗಾಧರ ಮೃತ್ಯು ಮೃತ್ಯುವೆ ಶಂಕರಾ ಸರ್ಪಭೂಷಣ ಅಪಮೃತ್ಯು ನಿವಾರಣ ಕಪ್ಪುಗೊರಳ ಕೃತ್ತಿವಾಸ ಸುರೇಶ 4 ಅಜ ಸಂತನಧ್ವರ ಭಜನೆಯ ಕೆಡಿಸಿದ ವಿಜಯ ವಿಗ್ರಹ ಶರೀರ ಸುಜನರ ಹೃದಯಾಂಬುಜದಲ್ಲಿ ಮಿನುಗುವ ರಜದೂರ ಶ್ರೀಕಾಂತ ನಿಜಭಕ್ತ ಗುರುವರ 5
--------------
ಲಕ್ಷ್ಮೀನಾರಯಣರಾಯರು
ಕೃಪೆ ನಿಮ್ಮದಾಗಬೇಕು ಸ್ವಾಮಿ ನಿಮ್ಮರಿಯಲಿಕ್ಕೆ ಅಪಾರ ಮಹಿಮೆ ನಿಮ್ಮ ಸುಂಪಾದ ತಿಳಿಯಲಿಕ್ಕೆ ಧ್ರುವ ಭ್ರಾಂತಗೆಲ್ಲಿಹುದಯ್ಯ ಪೂರ್ಣನಿಂತ ನಿಲಕಡೆಙÁ್ಞನ | ಎಂತುಹೇಳಿದರ ಖೂನ ಶಾಂತಹೊಂದದಯ್ಯಮನ | ಪಂಥ ಪರಮ ಗುಹ್ಯಸ್ಥಾನ ತಂತುವಿಡಿಯಲು ನಿರ್ಗುಣ | ಅಂತು ಇಂತು ಎಂಬುಂದೆ ನಾನಂತ ಗುನ ನಿಧಾನ 1 ಖೂನ ತಿಳಿಯಲಿಕ್ಯಗಾಧಗುರು ನಿಮ್ಮಶ್ರೀಪಾದ | ಬೋಧ ನೀಡಬೇಕು ಸುಪ್ರಸಾದ | ನೀನೆವೆ ನಿತ್ಯವಾದ ವಸ್ತು ಪರಿಪೂರ್ಣ ಸದಾ | ದೀನ ಬಂಧು ದಯದಿಂದ ಖೂನದೋರೊ ಆಶ್ರಯದ 2 ಮಂದ ಮತಿ ನಾನು ಭಕ್ತಿ ಮಾಡಲರಿಯೆನು ಒಡಿಯನಹುದಯ್ಯ ನೀನುಮಹಿಪತಿಯ ಕಾಮಧೇನು ಕೊಡಲಿಕ್ಕೆ ಪೂರ್ಣ ನೀನು ಸ್ವಾಮಿ ಕಾವ ಕರುಣನು ಪಿಡಿದಿಹ್ಯ ನಿಮ್ಮ ನಾನು ದಿವ್ಯ ಪಾದಪದ್ಮವನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಪೆ ಮಾಡೋ ಕೃಷ್ಣ ಕೃಪೆಮಾಡೋ ತಪ್ಪದೆ ಪ್ರಾತಃ ಸಂಜೆ ನಿನ್ನ ಸ್ತುತಿ ಮಾಡುವಂತೆ ಪ ಚಂದ್ರಹಾಸನಂತೆ ವ್ರತ ಮಾಡಲರಿಯೆ ಅಂದಿನ ಧ್ರುವನಂತೆ ತಪಗೈಯಲಾರೆ ಕಂದ ಪ್ರಹ್ಲಾದನಂತೆ ಬಿಡದೆ ನುತಿಸಲಾರೆ ಸಂದ ನಚಿಕೇತನಂತೆ ಮೃತ್ಯುಗೆಲ್ಲಲರಿಯೆ 1 ಕರಿರಾಜನಂತೆ ಕೂಗಲರಿಯೆನೋ ಗರುಡನಂತೆ ಸದಾ ಹೊತ್ತು ತಿರುಗಲಾರೆ ಮರುತಜನಂತೆ ಭಂಟನಾಗಲರಿಯೆ ಉರಗರಾಜನಂತೆ ಶಯನಕಾಗಲಾರೆ 2 ದ್ರೌಪದಿಯಂತೆ ಅತ್ತು ಮೊರೆಯಿಡಲಾರೆ ರೂಪೆ ಭಾಮೆಯಂತೆ ಬಲು ಮೋಹಿಸಲಾರೆ ಆಪಾಟಿ ಸಖನಾಗರಿಯೆನು ಮಕರಂದನೊಲು ವಿಪ್ರನಾರಾಯಣನಂತೆ ಭಕ್ತಿಯರಿಯೆನೊ ಹರಿಯೆ 3 ಜಾಜಿಪುರೀಶ ನಿನ್ನ ಚರಣ ಸೇವೆಯ ಕೊಡೊ ಸಾಜದಿ ಮಾಡುವೆ ತಿಳಿದಂತೆ ಪಾಮರನು 4
--------------
ನಾರಾಯಣಶರ್ಮರು
ಕೃಪೆಯ ತೋರಬಾರದೇನೋ | ಗೋಪಾಲರಾಯ ಪ ತಾಪತ್ರಯ ಬಲು ದೀಪನವಾಗಿದೆನೀ ಪರಿಹರಿಸದೆ ಮತ್ತೋರ್ವರನರಿಯೆ ಅ.ಪ. ಸೂನು ಶ್ರೀನಿವಾಸಾ |ಸಾರುತ ತವಪದ ಸೇವಿಸಿ ಭಕುತಿಲಿ |ದೂರೋಡಿಸಿದನು ಜವನವರಾ 1 ಗಿರಿಜಾತೆಯ ಪ್ರಿಯ ಕುವರಾ | ನೃಪವರದಶರಥ ಸುತ ಭರತಗೆ ಅವರಾ |ಮಾರುತಿ ಮತವನು ಅರುಹುತ ನೀ ಸಂಸಾರಕೆ | ತಾರಕ ನೆನಿಸಿದ ಧೀರಾ 2 ಭೋಗಿ ಶೀಲಾ | ನೀನಘದೂರ ಕಳೆಯೊ ಮೋಹಜಾಲಾ |ಭೋಗಿಶಯನ ಗುರು ಗೋವಿಂದ ವಿಠಲನಬಾಗಿ ಭಜಿಸುವಂಥ ಭಾಗ್ಯವ ನೀಯೋ 3
--------------
ಗುರುಗೋವಿಂದವಿಠಲರು
ಕೃಪೆಯಿಟ್ಟು ಸಲಹೆನ್ನ ಹರಿಯೆ ನರಹರಿಯೆ ದ್ವಿಪÀವರವರದನೇ ಬಾರಯ್ಯ ದೊರೆಯೆ ಪ ದುರಿತಹರÀ ವರ ಚರಣಕಮಲನೆ ಧರಣಿಧರವನು ಕರಸರೋಜದಿ ಧರಿಸಿ ಸುಜನರ ಪೊರೆದ ಮುರಳೀ- ಧರನೇ ಮೋದವಪಡಿಸಿದಂತೆ ಅ.ಪ ನಂದನಂದನ ನಿನ್ನ ಚರಣ ಒಂದೇ ಶರಣ ಎನಗೆಂದು ನಂಬಿರುವುದೇ ಒಳ್ಳೇ ಆಭರಣ ಇಂದಿರೇಶನೆ ಮಾಡೋ ಕರುಣ ಸಿಂಧುಶಯನ ಸುಂದರೀಮಣಿ ಸಹಿತದಲಿ ನೀ ಬಂದು ಎನ್ನಯ ಮಂದಿರದಲಿ ನಿಂದು ಎನ್ನವನೆಂದು ಭಾವಿಸಿ ನಂದಪಡಿಸೈ ನಂದಬಾಲನೆ 1 ದೀನಪಾಲನೆ ಭೂಮಿಭಾರ ಹಾನಿಕಾರ ಪಂಚ ಸೂನಶರನಪಿತ ವಿಗತವಿಕಾರ ಶ್ರೀನಾಥ ಸುಜನಮಂದಾರ ಮೀನಾಕಾರ ನಾನು ನಿನ್ನವನಯ್ಯ ಎನ್ನಯ ಮಾನ ಮತ್ತಪಮಾನ ನಿನ್ನದು ಹೀನಮತಿ ಇವನೆಂದು ತಿಳಿದುದಾ- ಸೀನಮಾಡದೆ ಸಾನುರಾಗದಿ 2 ಸೋಮ ಕುಲಾಂಬುಧಿಸೋಮರಾರಾಮ ಬಲರಾಮ ಸಹಜನೇ ಸುರರಿಪು ಭೀಮ ವಾಮಲೋಚನೇರಿಗೆ ಕಾಮ ಪ್ರೇಮಧಾಮ ಕಾಮಜನಕನೆ ಸಾಮಗಪ್ರಿಯ ನಾಮಗಿರಿ ಶ್ರೀ ರಾಮ ನರಹರೆ ಕಾಮಿತಾರ್ಥವನೀವ ಸುರತರುಕಾಮಧೇನು ಚಿಂತಾಮಣಿಯೆ ನೀ 3
--------------
ವಿದ್ಯಾರತ್ನಾಕರತೀರ್ಥರು
ಕೃಪೆಯಿರಲಿ ಸ್ವಾಮಿ ಕೃಪೆಯಿರಲಿ ಅಪರಿಗಣ್ಯ ಸುಗುಣಾಂಬುಧಿ ಹರಿ ನಿನ್ನ ಪ. ಬೇರಿಗೆ ದಿವ್ಯ ಕಾವೇರಿ ನದಿಯ ಜಲ ಧಾರೆಯಿರಲು ಕೊಂಬೆಗಳುಬ್ಬಿ ಸಾರಭರಿತ ಫಲದೋರುವ ತರುವಂತೆ ಧಾರುಣಿಪರು ಕೈ ಸೇರುವರು 1 ಶತ್ರುಗಳಂಜಿ ಬಗ್ಗುವರು ಕಾಳ ಕೂಟ ಪಥ್ಯವಾಗುವುದು ನಿನ್ನಣುಗರಿಗೆ ನಿತ್ಯ ಮಾಡುವಾ ದುಷ್ಕøತವೆಲ್ಲವು ಪರ- ಮೋತ್ತಮ ಧರ್ಮಕರ್ಮಗಳಾಹಲೂ 2 ಕನಸು ಮನಸಿನಲ್ಲಿ ನೆನೆಸುವ ಕಾರ್ಯಗ- ಳನುಕೂಲವಾಗುವದನುದಿನವು ಮನಸಿಜನಯ್ಯ ನೀನನುವಾಗಿರೆ ಸರ್ವ ಜನರೆಲ್ಲರು ಬಹು ಮನ್ನಿಸುವರು 3 ಋಗ್ಯಜುಸ್ಸಾಮಾಥರ್ವಣಗಳೆಂಬ ವೇದ ಸ- ಮಗ್ರ ನೀ ಕರುಣಿಸಿ ಒಲಿದಿರಲು ಸುಜ್ಞಾನ ಭಕ್ತಿ ವೈರಾಗ್ಯ ಸಹಿತವಾಗಿ ಭಾಗ್ಯದೇವತೆ ಕೈ ಸೇರುವಳು 4 ಈ ಕಾರಣದಿಂದನೇಕರ ಬಯಸದೆ ಶ್ರೀಕರ ನೀ ಕರುಣಿಸಿದರಿಂದು ಸಾಕೆಂದೊದರುವೆನೇಕಮನದಲಿ ದ- ಯಾಕರ ವೆಂಕಟರಮಣನಿಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೃಪೆಯಿಲ್ಲ ವ್ಯಾಕೊ ಎನ್ನ ಮ್ಯಾಲೆ ಕೃಷ್ಣಮೂರುತೀ ಅಪರಾಧವೆಲ್ಲ ಕ್ಷಮಿಸಿ ಸಲಹೊ ಪಾರ್ಥಸಾರಥಿ ಪ ನೀನಲ್ಲದನ್ಯರಿಲ್ಲವೆಂದು ನಿಖಿಲ ನಿಗಮವು ನಾನಾ ಪರಿಯಲಿ ಸಾರುವದು ಸಕಲಶಾಸ್ತ್ರವು 1 ಮನಾದಿಗಳಿಗಗೋಚರನೆಂದೆಲ್ಲ ಪೇಳ್ವರು 2 ಅನಾಥ ರಕ್ಷಕಾಪ್ರಮೇಯ ಆದಿಪುರುಷನೇ ಸನಂದನಾದಿ ಸಕಲಯೋಗಿ ವಂದ್ಯ ಚರಣನೇ 3 ನಿರಪರಾಧಿಗಳನು ಪೊರೆಯಲೇಕೆ ಸಂಶಯ ಸುರೇಶರುದ್ರ ಬ್ರಹ್ಮಜನಕ ನೀನೆ ನಿಶ್ಚಯ 4 ಕರುಣದಿ ನೀನೆ ಕಾಯಬೇಕು ಮರೆಯದೆನ್ನನು ಗುರುರಾಮ ವಿಠಲ ಬಿಡದಿರುಕೈದಾಸದಾಸನು 5
--------------
ಗುರುರಾಮವಿಠಲ
ಕೃಪೆಯಿಲ್ಲವೇನೊ ನಿನಗೆನ್ನ ಮ್ಯಾಲೇ ಪ ಭಾರ ಇನ್ಯಾರಿಗಿಹುದಯ್ಯ | ಮನ್ನಿಸೆಲೊ ದೇವಾ ಅ.ಪ ಭವ ಕೊಂಡು ಹುಟ್ಟಿಸುವ ಭ್ರಮೆಯಿಂದೆರಿ ನಿವಾರಿಸದೆ 1 ಆಧಾರವಾಗದೆ ನಿರಾಧಾರನಾಗುವರೆ 2 ಪರ ಬಿಟ್ಟು ಮೈ ದೋರೊ ದಯವಿಟ್ಟು ಸದಾನಂದ 3
--------------
ಸದಾನಂದರು