ಒಟ್ಟು 14553 ಕಡೆಗಳಲ್ಲಿ , 132 ದಾಸರು , 6967 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಯಮಾಡಿ ನಡೆಸೆ ಶಾರದೆ ದಯಮಾಡಿ ನಡೆಸೆ ಪ. ಹೃಯಾಂಗಣದಿ ಸದನವ ಮಾಡುತ ವಿಧವಿಧ ನವರಸದುದಯದ ತನಕ 1 ಭೃಂಗಕುಂತಳೆ ಕೃಪಾಪಾಂಗೆ ಬ್ರಹ್ಮಾಣಿ ಕು- ರಂಗನಯನೆ ಶ್ರೀರಂಗಭಕ್ತಳೆ 2 ಭೂರಿ ಶಾಸ್ತ್ರವಿಚಾರವ ಪಾಲಿಸೆ ಧೀರ ಲಕ್ಷ್ಮೀನಾರಾಯಣನ ಸೊಸೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ದಯಮಾಡಿ ಬಾರೆನ್ನ ಗುರುವೇ ಮಂತ್ರಾಲಯ ಪ್ರಭುವೇ ಪ ಧರೆಯೊಳು ಸುಜನರಾ ಪೊರೆಯಲೋಸುಗ ನೀನು ವರ ಮಂತ್ರಾಲಯದೊಳು ಬಂದು ನಿಂದಿಹೆ ಗುರುವೇ 1 ಬಹು ವಿಧದಲಿ ನಿನ್ನ ಮಹಿಮೆಗಳ ಕೇಳೀ ದೇಶ ದೇಶದಿ ಜನರು ಬಂದು ಕಾದಿಹರೋ2 ಕರೆದಾರೆ ಬರುವಂಥ ಕರುಣಸಾಗರ ನೀನು ಪರಿ ಪರಿಸ್ತುತಿಸುವೆ ಕಾರುಣ್ಯ ಮೂರ್ತಿಯೆ 3 ಬೇಡಿದಳಾ ವರಗಳ ಕೊಡುವ ನೀನೆನುತಲಿ ಧೃಡ ಭಕುತಿಯೊಳು ನಿನ್ನಡಿಗಳ ಸೇವಿ ಸುವರೋ 4 ಹಗಲು ಇರುಳು ನಿನ್ನ ಬಿಡದೆ ಸ್ತುತಿಸುವಂತೆ ಮತಿಯ ಪಾಲಿಪುದು - ಶ್ರೀ ಗುರುರಾಘವೇಂದ್ರಾ 5
--------------
ರಾಧಾಬಾಯಿ
ದಯಮಾಡಿ ಸಲಹಯ್ಯ ಭಯನಿವಾರಣನೆಹಯವದನ ನಿನ್ನ ಚರಣ ನಂಬಿದೆನೊ ಜೀಯ ಪ. ಕ್ಷಣ ಕ್ಷಣಕೆ ನಾ ಮಾಡಿದಂಥ ಪಾಪಂಗÀಳನುಎಣಿಸಲಳವಲ್ಲ ಅಷ್ಟಿಷ್ಟುಯೆಂದುಫಣಿಶಾಯಿ ನೀನೆನ್ನ ಅವಗುಣಗಳೆಣಿಸದೆನೆನಹಿನಾತುರ ಕೊಟ್ಟು ದಾಸನೆಂದೆನಿಸಯ್ಯ 1 ಕಂಡ ಕಂಡ ಕಡೆಗೆ ಪೋಪ ಚಂಚಲ ಮನವುಪಿಂಡ ತಿಂಬಲ್ಲಿ ಬಹು ನಿಷ್ಠ ತಾನುಭಂಡಾಟದವನೆಂದು ಬಯಲಿಗೆ ತಾರಣಕೊಂಡಾಡುವಂತೆ ಭಕುತಿಯ ಕೊಟ್ಟು ಸಲಹಯ್ಯ 2 ಜಾತಿಧರ್ಮವ ಬಿಟ್ಟು ಅಜಾಮಿಳನು ಇರುತಿರಲು ಪ್ರೀತಿಯಿಂದಲಿ ಮುಕುತಿ ಕೊಡಲಿಲ್ಲವೆಖ್ಯಾತಿಯನು ಕೇಳಿ ನಾ ಮೊರೆಹೊಕ್ಕೆ ಸಲಹಯ್ಯವಾತಜನ ಪರಿಪಾಲ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ದಯಮಾಡು ದಯಮಾಡು ಶಾರದಾಂಬೇ ನಯ ನೀತಿ ಕಲೆ ಭಾಗ್ಯ ಘನ ಕುಟುಂಬೇ ಪ ಜಯ ವಿಜಯ ಯಶಭೋಗ ಶ್ರೀಕರಾಂಬೇ ಭಯ ಭೀತಿ ಪರಿಹಾರೆ ವರಕದಂಬೆ ಅ.ಪ ಫಣಿ ಕಲ್ಯಾಣಿ ಸರಸಗುಣಿ ಗೀರ್ವಾಣಿ ವೀಣಾಪಾಣಿ 1 ಸಾರತರ ಶುಕವಾಣಿ ನೀರೇಜ ಮೃದುಪಾಣಿ ಭೂರಿದಯೆ ಸುಶ್ರೋಣಿ ದೇವಿ ಶುಭವಾಣಿ 2 ಸಕಲ ಲೋಕಖ್ಯಾತೆ ಸಕಲ ಜಗಸನ್ನುತೇ ಸಕಲ ಜಗವಂದಿತೇ ಸಕಲ ಶುಭಗೀತೇ ಸಕಲ ವೈಭವದಾತೇ ಸಕಲ ಸದ್ಗುಣ ಲಸಿತೇ ಸಕಲ ಸನ್ನುತೇ ಮಾಂಗಿರೀಶ ವಿನುತೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಯಮಾಡು ಬಡವಗೆ ಮಹರಾಯ ದಯಾಕರ ವಿಜಯವಿಠಲರಾಯ ಪ ದೃಢದಿಂದಲಿ ನಂಬಿ ಬೇಡುವೆನು ಕೊಡುಗಡ ನಿನ್ನಡಿಭಕ್ತಿಯನು ಕಡುಪೀಡಿಪ ಈ ಜಡಬಡತನದಿಂ ಕಡೆಹಾಯ್ಸೆನ್ನನು ಕಡುದಯದಿಂ ಪೊರೆ 1 ಸೆರೆಗೊಡ್ಡಿ ಬೇಡುವೆ ಮಾಧವ ಕರುಣದಿ ಕರುಣಿಸು ವರವ ಪರಿಭವ ದು:ಖವ ಪರಿಹರಿಸಿ ನಿಮ್ಮ ಸ್ಮರಣೆಯೊಳಿರಿಸೆನ್ನ 2 ಸತ್ಯಭಾಮೆರಮಾಕಾಂತನೆ ಭಕ್ತರ ಕಕ್ಕುಲಾತಿದೇವನೆ ನಿತ್ಯನಿರಂಜನ ಮುಕ್ತಿದಾಯಕ ಉತ್ತಮಮತಿಕೊಡು ನಿತ್ಯಾತ್ಮ ಶ್ರೀರಾಮ 3
--------------
ರಾಮದಾಸರು
ದಯಮಾಡೆನಗೇ ಕೃಷ್ಣದಯ ತೋರನಗೇ ರಂಗ ದಯ ಮಾಡೆನಗೆ ಶ್ರೀ ಚನ್ನಕೇಶವನೇ ಪ ಧರಣಿ ಪಾಲಕನಂತೆ ಮೃತವ ನಾನರಿಯೆನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಕರಿರಾಜನಂತೆ ನಾ ಮರೆಹೊಕ್ಕಲರಿಯೆನು ತರಳ ಧೃವನಂತೆ ತಪ ಮಾಡಲರಿಯೇ 1 ಪರೀಕ್ಷಿತನಂತೆ ಶ್ರವಣವ ಮಾಡಲರಿಯೆನು ವರಶುಕರಂತೆ ಕೀರ್ತನೆ ಮಾಡಲರಿಯೇ ತರಳ ಪ್ರಲ್ಹಾದನಂದದಿ ಸ್ಮರಿಸಲರಿಯೆನು ಚರಣವ ರಮೆಯಂತೆ ನಾ ಭಜಿಸಲರಿಯೇ 2 ಹರಿಯನ ಕ್ರೂರನಂತೇ ನಮಿಸಲರಿಯೆನು ಹರಿಯ ಪೃಥುವಿನಂತೆ ಪೂಜಿಸಲರಿಯೇ ಮರುತಜನಂತೆ ನಾ ದಾಸ್ಯತ್ವವರಿಯನು ನರನಂತೆ ಮಿತ್ರತ್ವ ಪಡೆಯಲಿಕ್ಕರಿಯೇ 3 ಆತ್ಮವ ಬಲಿಯಂತೆ ಅರ್ಪಿಸಲರಿಯೆನು ನಿತ್ಯವು ನರಕದಿ ಮುಳುಗಿ ನಾನಿರುವೇ ಮತ್ಸ್ಯಾದಿ ದಶರೂಪವೆತ್ತಿದ ರಂಗನೆ ಬೃತ್ಯರ ಸಲಹಯ್ಯ ಸ್ವಾಮಿ ದೂರ್ವೇಶಾ 4
--------------
ಕರ್ಕಿ ಕೇಶವದಾಸ
ದಯಮಾಡೈ ಶ್ರೀ ಹರಿಯನಗಿಂದು ದಯಮಾಡೈ ಶ್ರೀಹರಿಯನಗಿಂದು ಪ ನಿಗಮಾಗಮ ಪೌರಾಣದ ಕತೆಯಾ ಬಗೆಯಲಿಯದ ಪಾಮರ ಪಾಥರಿಗೆ 1 ವಿಷಯಾ ಸಕ್ತಿಲಿ ನೆನೆಯದೆ ಹಿತವಾ ಪರಿ ದಿನಗಳಿದೀಗ 2 ಗುರುಮಹಿಪತಿ ಪ್ರಭು ಬಂದೆನು ಶರಣಾ ಬಿರುದವು ದೀನರ ಹೊರೆವುದು ನಿನಗೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಯಮಾಡೊ ದಯಮಾಡೋಪಯಸಾಗರದೊಡೆಯನೆ ಶ್ರೀಕೃಷ್ಣಾ ಪ ಬನ್ನಬಿಡಿಸುವರ್ಭಕನ ದುರಿತವಘನ್ನ ಮಹಿಮ ನೀಜವದಿಂ ತರದು 1 ನೀ ಪೊರಿಯದೆ ಜರಿದರೆ ಕಾಯ್ವರನಾ |ಈ ಪೊಡವಿಯೊಳೆಲ್ಲೆಲಿ ಕಾಣೇ 2 ಶೇಷಗಿರಿ ನಿಲಯ ಬಿನ್ನಪ ಲಾಲಿಸೋ |ಶ್ರೀಶ ಪ್ರಾಣೇಶ ವಿಠಲ ದಯಾಳೋ 3
--------------
ಶ್ರೀಶಪ್ರಾಣೇಶವಿಠಲರು
ದಯಮಾಡೊ ರಂಗ ದಯ ಮಾಡೊಕೈವಲ್ಯಪತಿ ನಮಗೆ ಕರುಣೆ ಮಾಡೊ ಕೃಷ್ಣ ಪ. ಕುಂತಿ ದೇವಿಯರು ತಂದ ಅನಂತ ಪದಾರ್ಥವ ಶಾಂತ ಮೂರುತಿಯೆ ಕೈಕೊಳ್ಳೊ ಕೃಷ್ಣಶಾಂತ ಮೂರುತಿಯೆ ಕೈಕೊಳ್ಳೊ ಎನುತಲಿ ಕಾಂತೆ ಸುಭದ್ರಾ ನುಡಿದಳು1 ಶ್ರೀದೇವಿಯರಸನ ಪಾದವ ತೊಳೆದರು ಕ್ಯಾದಿಗೆ ಗಂಧ ತುಳಸಿಕ್ಯಾದಿಗೆ ಗಂಧ ತುಳಸಿ ಅಕ್ಷತೆಯಿಂದ ವೇದಗೋಚರನ ಉಪಚರಿಸಿ 2 ಕರವ ಜೋಡಿಸುತ ಐವರು3
--------------
ಗಲಗಲಿಅವ್ವನವರು
ದಯಮಾಡೋ ರಂಗ ಹೇ ಕೃಪಾಂಗ ಪ ದಯಮಾಡಿ ನೀಯೆನ್ನ ಭಯವ ಪರಿಹರಿಸು ಚಿ- ನ್ಮಯ ಮೂರುತಿ ಸುಖಮಯ ಮಂದರಧರ ಅ.ಪ. ಪತಿತ ಪಾವನ ನೀನು ಪತಿತಾಗ್ರೇಸರ ನಾನು ಜತನದಿ ಭಕುತಿಯ ಪಥವ ತೋರಿ ನೀನು 1 ಮುಕ್ತಿ ಫಲಪ್ರದ ಶಕ್ತಿಯು ನಿನ್ನ ವ್ಯತಿರಿಕ್ತವಲ್ಲವೆಂದು ಭಕ್ತಿಯುವರವಳು...[?] 2 ಕಾಮಧೇನು ನೀನು ಕಾಮನಯ್ಯನು ನೀನು ಕಾಮಿತಫಲದಾತ ಮಾಮನೋಹಕ ತ್ರಾತ 3 ಸೃಷ್ಟಿಪಾಲಕ ನಿನ್ನ ಯಷ್ಟೆಂತವರ್ಣಿಪೆ ಅಷ್ಟು ಕರ್ತೃತ್ವಕ್ಕೆ ಶಿಷ್ಟಮೂರುತಿ ನೀನೆ 4 ಭಾರಿಭಾರಿಗೆ ನಿನ್ನ ಆರಾಧಿಸುವರ ಚಾರುಚರಣವನು ತೋರೊ ಮಾರಜನಕ 5 ಸಕಲಕ್ಕು ನೀ ಮುಖ್ಯ ಶಕಟಭಂಜನ ಕೇಳು ಪ್ರಕಟನಾಗಿಯೆನಗೆ ಶಕ್ತಿಯ ನೀಡೋ6 ಭೂವಲಯದೊಳು ನಾ ಆವಲ್ಯಪೋಗಲು ಕಾವಲು ನೀನೇ ಶ್ರೀವತ್ಸಾಂಕಿತನೇ 7
--------------
ಸಿರಿವತ್ಸಾಂಕಿತರು
ದಯವ ತೋರೆ ತುಳಸಿ ಹರುಷವೆರಸಿ ಪರಾಂಬರಿಸಿ ಹರಿಯ ಸ್ಮರಿಸಿ ಪ. ಭವ ದಯಾವೆರೆದು ಪ್ರೇಮಗರೆದು ತಾಯೆ ನೀ 1 ಮಲ್ಲೆ ಮಲ್ಲಿಗೆ ಜಾಜಿ ಮರುಗ ಸೇವಂತಿಕೆ ಎಲ್ಲ ಪೂಜೆ ಮಾಡೆ ಸಲ್ಲಲಿತದಲಿ ನೀನಿಲ್ಲದ ಪೂಜೆಯ ವಲ್ಲನು ಶ್ರೀ ಹರಿಯು ಎಲ್ಲರಿಗಧಿಕಳೆಂದು ಪೂಜೆಗೊಂಡು ದಯಾಸಿಂಧು ತಾಯೆ ನೀ 2 ಶ್ರೀ ಶ್ರೀನಿವಾಸನೊಳು ವಾಸಿಪೆ ಸರ್ವದಾ ಪೋಷಿಪೆ ಭಕ್ತರನು ವಾಸುದೇವನ ತೋರಿ ಪೋಷಿಸೆ ಬಾರಮ್ಮ ವಾಸವಾಗಲು ಮನೆಗೆ ಸೂಸಿ ಭಕುತಿಯಿಂದ ಪೂಜಿಪೆ ನಿಮ್ಮ ಚರಣವಮ್ಮಾ ತಾಯೆ ನೀ 3
--------------
ಸರಸ್ವತಿ ಬಾಯಿ
ದಯವದೋರೋ ದೇವ ಭಕುತ ಭಯನಿವಾರ ಅಭವ ಪ ದಯವದೋರೋ ನಿನ್ನ ಪಾವನಪಾದ ಸು ಸೇವಕ ಜನಮಹಜೀವ ಜಾನಕೀಧವ ಅ.ಪ ಪಾಪಗೆಲಿಯ ಬಂದೆ ಸಂಸಾರ ಕೂಪದೊಳಗೆ ನಿಂದೆ ಕೋಪಜ್ವಾಲದಿ ಬೆಂದೆ ವಿಷಯ ತಾಪತ್ರಯದಿನೊಂದೆ ಆ ಪರಲೋಕದ ವ್ಯಾಪಾರ ಮರೆದಿಹ್ಯ ದ್ವ್ಯಾಪಕನಾಗಿ ಬಲುತಾಪಬಡುವೆ ತಂದೆ 1 ಅಂಗಮೋಹವ ಬಿಡಿಸೋ ನಿನ್ನವರ ಸಂಗವ ಕರುಣಿಸೊ ಭಂಗವ ಪರಹರಿಸೊ ಜಗದವ ರ್ಹಂಗಹನು ತಪ್ಪಿಸೊ ಮಂಗಳಾತ್ಮ ನಿನ್ನ ಮಂಗಳಾಮೂರ್ತಿ ಎನ್ನ ಕಂಗಳೋಳ್ನಿಲ್ಲಿಸಿ ಹಿಂಗದಾನಂದ ನೀಡು 2 ದೋಷದಾರಿದ್ರ್ಯ ಹರಿಸೊ ಮನದ ಅಶಾಪಾಶ ಬಿಡಿಸೊ ಹೇಸಿಪ್ರಪಂಚ ಗೆಲಿಸೊ ಸುಜನರಾ ವಾಸ ತೀವ್ರ ಪಾಲಿಸೊ ದೋಷನಾಶ ಜಗದೀಶ ಶ್ರೀರಾಮ ನಿನ್ನ ದಾಸಾನುದಾಸೆನಿಸಿ ಪೋಷಿಸು ಸತತ 3
--------------
ರಾಮದಾಸರು
ದಯವಾಗು ದೀನ ಬಂಧು ನಿಜ ಭಕ್ತ ಭಯ ಹರ ಸ್ಮಯ ಮುಖೇಂದು ಸಿಂಧು ನಿನ್ನಡಿಯ ಬಯಸುವೆನು ಭಕ್ತನೆಂದು ಪ. ಶ್ರೀ ಭೂಮಿಯರಸ ನೀನು ದಯವಾಗೆ ಭಾಗವತರುದಯವಹುದು ಯೋಗ ಭೋಗಗಳೆಂಬುದು ಮಿತಿರಹಿತ- ವಾಗಿ ತಾನೇರಿ ಬಹುದು 1 ತಾಪಾಗ್ನಿ ಶಮನಕಾರಿಯೆ ನಿ:ಶೇಷ ಭೂಪಾಲ ಮೌಳಿಸಿರಿಯೆ ಶ್ರೀಪತಿಯೆ ನಿನ್ನ ಮರೆಯೆ ಎನ್ನಲ್ಲಿ ಕೋಪಿಸದೆ ಸಲಹು ದೊರೆಯೆ 2 ಪೂರ್ವ ಗಿರಿನಾಥ ನಿನ್ನ ಸಂಸ್ಮರಣೆ ಸರ್ವ ದುರಿತೌಘವನ್ನ ಪರ್ವತ ಶೃಂಗವನ್ನು ನಿಶಿತ ಶತ- ಪರ್ವದೊಲ್ ತರಿವರನ್ನ 3
--------------
ತುಪಾಕಿ ವೆಂಕಟರಮಣಾಚಾರ್ಯ
ದಯವಾಗೋ ದಯವಾಗೋ ಪ ಹಯಮುಖ ಭಯಕೃದ್ಭಯನಾಶನ ಹರಿ ಅ ದ್ರೌಪದಿ ಮೊರೆ ಕೇಳ್ಯಾಪದ್ಬಾಂಧವ ನೀ ಪೊರೆದಯ್ ರಮಾಪತಿ ನಿರುತ 1 ಖರಮುರ ನರಕಾದ್ಯರ ಸಂಹರಿಸಿದೆ ಪರಮ ಪುರುಷ ಸಂಹರಭವಹರನೆ 2 ಶತ್ರುತಾಪಕ ಜಗತ್ರಯ ವ್ಯಾಪ್ತ ಪ ವಿತ್ರ ಪಾಣಿ ಸರ್ವತ್ರದಿ ಎಮಗೆ 3 ಎಷ್ಟೆಂದುಸುರಲಿ ದುಷ್ಟಜನರು ಬಲು ಕಷ್ಟ ಬಡಿಪ ಬಗೆ ಜಿಷ್ಣು ಸಾರಥಿಯೆ 4 ಗೋಭೂಸುರರಿಗೆ ಭೂಭುಜರ ಭಯ ಪ ರಾಭವಗೈಪುದು ಶ್ರೀ ಭೂರಮಣನೆ 5 ಅಪ್ರಮೇಯ ನೀ ಕ್ಷಿಪ್ರದಿ ಒಲಿದು ಜ ಯಪ್ರದನಾಗು ಸುಪ್ರಹ್ಲಾದವರದನೆ 6 ಯಾತಕೆ ಎಮ್ಮನು ಭೀತಿಗೊಳಿಪೆ ಪುರು ಹೂತವಿನುತ ಜನಗನ್ನಾಥವಿಠ್ಠಲಾ 7
--------------
ಜಗನ್ನಾಥದಾಸರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು