ಒಟ್ಟು 6145 ಕಡೆಗಳಲ್ಲಿ , 127 ದಾಸರು , 3945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಗವನ್ನಾಮವನಾಡು ಅಡಿಗಡಿ| ಗಾಡು ಅಡಿಗಡಿಗಾಡು ಅಡಿಗಡಿ ಪ ಭಗವನ್ನಾಮದ ಸುಧೆಯನು ಸೇವಿಸಿ | ಸೊಗದಿಂ ನಲಿನಲಿದಾಡು ಅಡಿಗಡಿ ಅ.ಪ ಪಾಪವ ನೀಗಿ ಪಾವನನಾಗಿ| ಶ್ರೀಪತಿಯನು ಕೂಡ್ಯಾಡು ಅಡಿಗಡಿ 1 ಪಾಮರಗೋಲಿದಾ ರಾಮನ ನಾಮವ | ಪ್ರೇಮದಿ ಮನದೊಳಗಾಡು ಅಡಿಗಡಿ 2 ತರುಣಿಯ ಸೀರೆಗೆ ಅಕ್ಷಯವಿತ್ತ | ಕೃಷ್ಣನ ನಾಮವನಾಡು ಅಡಿಗಡಿ3 ದಾಸಜನರ ಮನದಾಸೆಯ ಸಲಿಸುವ | ವಾಸುದೇವನ ಕೂಡ್ಯಾಡು ಅಡಿಗಡಿ 4 ಇಂಗಿತವೀಯುವ ಮಂಗಳಮಹಿಮ | ರಂಗನ ನಾಮವ ನಾಡು ಅಡಿಗಡಿ 5 ಮರಣಕಾಲದೊಳಜಾಮಿಳಗೊಲಿದಾ | ನಾರಾಯಣ ನೊಡನಾಡು ಅಡಿಗಡಿ 6 ವೆಂಕಟರಮಣನ ಸಂಕಟಹರಣನ | ಕಿಂಕರನಾಗಿ ನೀನಾಡು ಅಡಿಗಡಿ 7
--------------
ವೆಂಕಟ್‍ರಾವ್
ಭಜನೆ ಶ್ರೀ ರಾಮ ಭಜನೆ ಆಮ್ನಾಯ ವಿಸ್ತರ | ಭೂಮಾ ಗುಣಾರ್ಣವಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಪ ಶ್ರೀಶನೇ ವಿಭುದೇಶನೇ ||ಅಸುರಿ ವೃಷಹರ | ಶೇಷಾದ್ರಿ ಮಂದಿರಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಅ.ಪ. ಪೃಥ್ವಿಧರಾಧರ | ಸತ್ಯ ಮನೋಹರಭಕ್ತಾರ್ತಿ ಪರಿಹರ | ರಾಮ್ ರಾಮ್ ರಾಮ್‍ನಿತ್ಯನೇ ನಿರ್ಲಿಪ್ತನೇ ||ಶಕ್ತ್ಯಾದಿ ರೂಪಧರ | ಆಪ್ತರೊಳಗೆ ವರಭೃತ್ಯರ್ಗ ಭೀಷ್ವದ | ರಾಮ್ ರಾಮ್ ರಾಮ್ 1 ದಾನವ ಧ್ವಂಸನೆ | ಆನಂದ ಪೂರ್ಣನೆಆನಂದ ಮುನಿನುತ | ರಾಮ್ ರಾಮ್ ರಾಮ್‍ಶ್ರೀ ನಿಧೇ ಕರುಣಾಂಬುಧೇ ||ಮಾನುನಿ ವರದನೆ | ಮೌನಿಯ ಕಾಯ್ದನೆಜ್ಞಾನ ಸುಗಮ್ಯನೆ | ರಾಮ್ ರಾಮ್ ರಾಮ್ 2 ಈಶಾಹಿ ವಂದ್ಯನೆ | ವಾಸಿಷ್ಠ ಕೃಷ್ಣನೆವಸುದೇವ ತನಯನೆ | ರಾಮ್ ರಾಮ್ ರಾಮ್‍ಈಶನೇ ವರದೇಶನೇ ||ದಶಾಸ್ಯ ಕುಲವನ | ಕೃಶಾನು ಎನಿಪನೆದಾಶರಥಿüಯೆ ಪಾಹಿ | ರಾಮ್ ರಾಮ್ ರಾಮ್ 3 ಕಾಯ ಸೂರ್ಯ ವೀರ್ಯದಾತಪ್ರೇರ್ಯ ಪ್ರೇರಕ ಪಾಹಿ | ರಾಮ್ ರಾಮ್ ರಾಮ್ 4 ನೀರದ ನಿಭಕಾಯ | ವಾರಿಜಾಕ್ಷಿಗೆ ಪ್ರಿಯನಾರಿ ಚೋರಾರಿಯೆ | ರಾಮ್ ರಾಮ್ ರಾಮ್‍ಧೀರನೆ ಗಂಭೀರನೇ ||ಮೂರು ಲೋಕಗಳಲ್ಲಿ | ಆರುಂಟು ನಿನ್ನ ಸರಿಕಾರುಣ್ಯ ಮೂರುತಿ | ರಾಮ್ ರಾಮ್ ರಾಮ್5 ಪತಿ | ನಂಬೀದ ಭಕ್ತರಬೆಂಬಿಡದಲೆ ಕಾವ | ರಾಮ್ ರಾಮ್ ರಾಮ್ 6 ಜಗ ಪ್ರಾಣನೊಳಗೆ ಇದ್ದು | ಜಗವನ್ನು ಸೃಜಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್‍ಪ್ರಾಣನೇ ಜಗತ್ತ್ರಾಣನೇ ||ಅಗಜೆ ಪತಿಯೊಳಿದ್ದು | ಜಗವೆಲ್ಲ ಲಯಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್ 7 ಪ್ರಾಣನೀತಾನುಜ | ಪ್ರಾಣದಾತೃ ಹರಿಪ್ರಾಣಂಗೆ ಪ್ರಾಣನೆ | ರಾಮ್ ರಾಮ್ ರಾಮ್‍ಪ್ರಾಣನಾ ಆಲಿಗಂನಾ ||ನೀನಾಗಿ ಮಾಡಿ ಅವಗೆ | ಸಾಷ್ರ್ಣಿ ಮುಕ್ತಿಯನಿತ್ತೆಕಾಣೆ ಕಾರುಣ್ಯ ಕೆಣೆ | ರಾಮ್ ರಾಮ್ ರಾಮ್ 8 ಅಂಜನಿ ಸುತನಾಗಿ | ಕಂಜಸಖನಿಗ್ಹಾರ್ದಸಂಜೀವ ಧರ ಧರ | ರಾಮ್ ರಾಮ್ ರಾಮ್‍ದೈತ್ಯನಾ ಪ್ರಭಂಜನಾ ||ಸಂಜೆಯ ಚರರನು | ಭಂಜಿಸಿ ಅರ್ಪಿಸಿದಸಂಜೀವರಾಯ ಪಿತ | ರಾಮ್ ರಾಮ್ ರಾಮ್ 9 ಪತಿ | ಪದ್ಮಾಸನನ ಪಿತಪದ್ಮನಾಭನೆ ಪಾಹಿ | ರಾಮ್ ರಾಮ್ ರಾಮ್‍ರುದ್ಧನೇ ಅನಿರುದ್ಧನೇ ||ಮುದ್ದಿನ ಮೊಗದವ | ಗೆದ್ದು ಕುಜನ ತತಿಸದ್ಮದೊಳಗೆ ತೋರೊ | ರಾಮ್ ರಾಮ್ ರಾಮ್ 9 ಇಂದಿರೆ ರಮಣನೆ | ಚಂದಿರ ವದನನೆಮಂದರೋದ್ಧಾರಿಯೆ | ರಾಮ್ ರಾಮ್ ರಾಮ್‍ಸುಂದರಾ ಬಹು ಸುಂದರಾ ||ಕಂದರ್ಪ ಕೋಟಿ ಬಹು | ಸುಂದರ ಗುರು ಗೋ-ವಿಂದ ವಿಠಲ ಪಾಹಿ | ರಾಮ್ ರಾಮ್ ರಾಮ್10
--------------
ಗುರುಗೋವಿಂದವಿಠಲರು
ಭಜನೆ ಭಾಗ್ಯ ಒಂದೇ ಸಾಲದೇ | ಹರೀ ಪ. ಭಜಕರಾದವರಿಗೆ ಹಗಲು ಇರುಳು ಮಾಳ್ಪಾ ಭಜನೆ ಭಾಗ್ಯ ಒಂದೇ ಸಾಲದೆ ಅ.ಪ. ಭಕ್ತರೆಲ್ಲರು ಕೂಡೀ ಮುಕ್ತಿಗೊಡೆಯನ ಪಾಡಿ ಭಕ್ತಿ ಭಾಗ್ಯವ ಬೇಡಿ ನೃತ್ಯವ ಗೈಯುವಾ 1 ತಾಳ ತಂಬೂರಿ ಗೆಜ್ಜೆ ಮೇಳನದಿಂದಲೀ ತೋಳುಗಳೆತ್ತಿ ಪಾಡೀ ವೇಳೆಯ ಕಳೆವಂಥಾ 2 ಹಿಂದೆ ಮುಂದಾಡುವ ನಿಂದಕರಾ ನುಡಿ ಒಂದು ತಾರದೆ ಮನಕಾನಂದವ ಬೀರುವಾ 3 ಕಟ್ಟಳೆ ಮೀರದೆ ಬಿಟ್ಟು ಬಿಡದೆ ನಿತ್ಯ ನಿಷ್ಠೆಯಿಂದಲಿ ಗುರು ಕೊಟ್ಟ ಅಜ್ಞೆ ಎಂಬಾ 4 ಮೂರ್ತಿ ನಿಂತು ಒಳಗೆ ಹೊರಗೆ ಸಂತಸಪಡಿಸೆ ಏಕಾಂತ ಭಕ್ತರು ಮಾಳ್ಪ 5 ಸಾಸಿರ ಸತ್ಕರ್ಮ ಮೀಸಲು ಫಲಗಳೂ ಶ್ರೀಶನ ಧ್ಯಾನಕೆ ತ್ರಾಸಿಗೇರದೆಂಬ 6 ಪದ್ಧತಿಯಂತೆ ತಂದೆ ಮುದ್ದುಮೋಹನ್ನ ಗುರು ಪದ್ಮ ಪಾದಕೆ ಸೇರಿ ಪೊದ್ದಿದ ದಾಸ್ಯದ 7 ತ್ರಿಗುಣದ ಕಲ್ಮಶ ವಗೆದು ದೂರಕೆ ಮನ ಮಿಗಿಲಾಗಿ ಹರಿಪದ ತಗಲಿಕೊಂಬುವುದಕ್ಕೆ 8 ನರ್ತಗೈಯ್ಯುತ ಸುತ್ತಿ ಪ್ರದಕ್ಷಿಣೆ ಎತ್ತಿ ಸ್ವರವ ಹರಿ ಮೂರ್ತಿಯ ಪಾಡುವಾ 9 ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನನು ಇಟ್ಟು ಹೃತ್ಕಮಲದಿ ಮುಟ್ಟುವೋ ಹರಿ ಪುರ 10
--------------
ಅಂಬಾಬಾಯಿ
ಭಜನೆಯ ಪದ ಭಕ್ತ ವತ್ಸಲ ಸ್ವಾಮಿ ಭಯನಿವಾರಣ ದೇವ ಭರದಿಂದ ಬಂದುದ್ಯಾಕೆ ಪೇಳಯ್ಯಾ ಪ ಭಾರ ಹೊತ್ತು ಬಂದೆಯಾ ಕೋರೆದಾಡಿಗಳಿಂದ ಧಾರೂಣಿ ಎತ್ತೀ ತಂದು ಭಾರ ವಾಯಿತೆಂದು ಬಂದೆಯಾ 1 ಬಾಲಕಾನಾ ನುಡಿಯ ಕೇಳಿ | ಬೇಗದಿಂದಾ ಬಂದೆಯಾ ದುರುಳನ್ನ ಕೊಂದು ಕರುಳ ಮಾಲೆಯಧರಿಸಿ ನೀ ತರಳಗಭಯವಿತ್ತು ಬಂದೆಯಾ2 ಬಲಿಯ ದಾನಾಬೇಡಿ ನೀನು ಕೊಡಲಿ ಪಿಡಿದೂ ನಿಂತೆಯಾ ಮಡದಿಯಾ ಕದ್ದವನ ಬಿಡದೆ ಬೆನ್ನಟ್ಟಿಕೊಂಡು ಸಡಗರದಲಿ ನೀ ಬಂದೆಯಾ 3 ಮಧರೇಲಿ ಹುಟ್ಟಿ ಮಲ್ಲಾರ ಮಡುಹೀ ಮಾವ ಕಂಸನ ಕೊಂದು ಬಂದೆಯಾ ಆನಂದಿಂದಿಲ್ಲಿ ಬಂದೆಯಾ 4 ವಸನಾ ವಿಲ್ಲದೆ ನೀನು ಪಶುವನ್ನೇರಿಕೊಂಡು ವಸುಧೆಯ ಒಳಗೆಲ್ಲಾ ತಿರುಗೀದೆಯಾ ನೀ ಬಂದೆಯಾ5 ಕರಿಯಾ ಮೊರೆಕೇಳಿ ನೀ ತ್ವರಿತಾದಿಂದಾ ಬಂದೆಯಾ ಮ ಕರಿವರದನೆಂದೆನಿಸಿಕೊಂಡೆಯಾ 6 ಕಷ್ಟ ಪಡುವಾ ಜನರ ಕಂಡು ಕಡುದಯದಿಂ ಬಂದಿಯಾ ಪಕ್ಷಿವಾಹನನೇ | ಲಕ್ಷಮಿರಮಣನೆ | ಕಟಾಕ್ಷವನೇ ಬೀರುವಿಯಾ 7 ಹತ್ತವತಾರವ ಎತ್ತಿ ಬೇಸತ್ತು ನೀ ಮತ್ತೆ ನೀನಿಲ್ಲ ಬಂದಿಹೆಯಾ ಬರುವರು ಕಂಡೆಯಾ 8 ಲಕ್ಷ್ಮಿ ಇಲ್ಲದೆ ನಾನಿರೆನೆನುತಲಿ ವೈಕುಂಠ ಬಿಟ್ಟು ಬಂದೆಯಾ ಭಕ್ತಾರ ಸಲಹಲು ಬಂದಿಹೆಯಾ 9 ಹುಡುಕೀಕೊಂಡಿಲ್ಲೇ ಬಂದಿಹೆಯಾ 10 ಪಾಪನಾಶಿನಿ ಸ್ನಾನ ಮಾಡೋರು | ನಿನ್ನ ಧ್ಯಾನ ಬೇಡೋರು ಮನದಿಕ್ಷ್ಟಾರ್ಥಗಳ ಸಲಿಸಲು | ಆತೂರದಿಂದಲಿ ಬಂದೆಯಾ 11 ರೀತಿಗಳಿಂದ ಸೇವಿಸುವರು ನಿನ್ನ ಕೆರಂಡಾಡುವರು 12 ಬಳಿ ಬಂದಿಹರು ಬೇಡುತಾ ನಿಂದಿಹರೂ13 ಪಡುತಲಿ ಬಂದಿಹರು ಸಂತಯಿಸಬೇಕೆನುತ ಬಂದಿಹೆಯಾ14 ಬಳಿ ಬಂದಿಹರೂ ಬೀಸಾಡಲೂ ಬಂದಿರುವಿಯಾ 15 ಬಂದಿಹರೂ ನಿನಗೊಂದಿಸುವರೂ 16 ಹೆಜ್ಜೆಗೆ ನಿನ್ನ ವಂದಿಸುತಲೀ ಬಾಷ್ಟಗಳ ಸುರಿಸುವರೂ 17 ನಲಿಯುವರೂ ಕುಣಿ ದಾಡುವರೂ 18 ದೋಬಿಕೊಳ್ಳುತ ನೀ ನಿಂತಿರುವೇ ಯಲ್ಲಾನುಕಸಕೊಂಡು ಕಳುಹುವಿಯೇ 19 ತೀರೀತೆಂದು ತಿಳಿಯುತಲೀ ಧನ್ಯರಾದೇವೆನುತ ತೆರಳುತಿಹರೂ 20 ಮೇಲಾದ ಭಕ್ಷಗಳ ಬಡಿಸುವೋರು
--------------
ರಾಧಾಬಾಯಿ
ಭಜನೆಯೊಂದೇ ಸಾಲದೇ ರಂಗಯ್ಯನ ಭಜನೆಯೊಂದೇ ಸಾಲದೇ ಪ ಅನುದಿನ ಸ್ಮರಿಸಲು ಭಜಕರ ದುರಿತವ ತರಿಯುವ ಪರಿಯ ಅ.ಪ. ಹಿಂದೆ ನೋಡಜಮಿಳ ತರಳ ಪ್ರಲ್ಹಾದರ ಚಂದದಿ ಮೆರೆದ ಗೋಪಾಲ ಬಾಲಕರ ವೃಂದಾವನದೊಳಿದ್ದ ಗೋಪಸೇವಕರ 1 ಕೋಮಲೆ ದ್ರೌಪದಿ ಸಭೆಯೊಳು ಸ್ಮರಿಸಲು ಭಾಮೆಗಕ್ಷಯವಿತ್ತ ಕ್ರೂರ ರಕ್ಷಕನ ಪ್ರೇಮದಿ ಅಹÀಲ್ಯೇ ಶಿಲೆಯೊಳು ಭಜಿಸಲು ಸ್ವಾಮಿ ತಾನೊಲಿದು ಮುಕ್ತಿಯ ಕೊಟ್ಟ ಹರಿಯ 2 ದಶರಥನಲಿ ಬಂದು ದಶಕಂಠನನು ಕೊಂದು ವಸುಮತಿಯನು ಪೊರೆದ ಶ್ರೀ ಹರಿಯ ಪಶÀುಪತಿ ಸಖನಾದ ಪನ್ನಗಶಯನನಅಸುರರ ತರಿದ ಶ್ರೀ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ಭಜರೇ ಧೀಮಂತಂ ಮಾನಸ ಪ ಭಜ ಹನುಮಂತಂ ನಿರುಪಮ ಶಾಂತಂ ಮ ಹಿಜಾನಾಯಕ ಸೇವಾಸಕ್ತಂ ಅ.ಪ ಪವನ ಕುಮಾರಂ ವಾನರವೀರಂ ತವ ಭಯಂಕರಂ ಅಕ್ಷ ಸಂಹಾರಂ ರಾವಣಗರ್ವವಿಭಂಜನ ಶೂರ ಅ ಭವ ಸಹೋದರ ಪ್ರಾಣ ದಾತಾರಂ 1 ಸಕಲ ಮಂತ್ರ ತಂತ್ರಾಗಮ ನಿಪುಣಂ ಸಕಲ ಕಲಾ ಸದ್ಗುಣ ಗಣ ಪೂರ್ಣಂ ರಾಮಾಯಣ ಮಹಾಮಾಲಾಭರಣಂ ಶ್ರೀ ಮರಕತಮಕುಟ ವಿರಾಜಿತಕರಂ 2 ಪಾಪವಿದೂರಂ ವಜ್ರಶರೀರಂ ಸೀತಾ ಮಾನಸಾನಂದ ಸಮೀರಂ ತಾರಕ ಮಂತ್ರೋಪಾಸನ ಚತುರಂ ಮಾಂಗಿರಿರಂಗ ಸೇವಾಪರಮಮರಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಜರೇ ಶ್ರೀರಾಮಂ ಮಾನಸ ಪ ನಿರ್ಜಿತಕಾಮಂ ನಯನಾಭಿರಾಮಂ ಅ.ಪ ನಿರುಪಮ ಶಾಂತಂ ಮಹಿಜಾಕಾಂತಂ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಜರೇ ಹನುಮಂತಂ | ಮಾನಸಭಜರೇ ಹನುಮಂತಂ ಪ ಕೋಮಲ ಕಾಯಂ ನಾಮ ಸುದೇವಂ |ಭಜ ಸಖಸಿಂಹಂ ಭೂಸುರ ಶ್ರೇಷ್ಠಂ1 ಮೂರ್ಖ ನಿಶಾಚರ ವನ ಸಂಹಾರಂ |ಸೀತಾ ದುಃಖ ವಿನಾಶಕಾರಂ 2 ಪರಮಾನಂದ ಗುಣೋದಯ ಚರಿತಂಕರುಣಾರಸ ಸಂಪೂರ್ಣ ಸುಭರಿತಂ3 ರಣರಂಗ ಧೀರಂ ಗುಣಗಂಭೀರಂದಾನವ ದೈತ್ಯಾರಣ್ಯ ಕುಠಾರಂ 4 ಗುರು ಚೆನ್ನಕೇಶವ ಕದಳೀ ರಂಗಂಸ್ಥಿರ ಸದ್ಭಕ್ತಂ ಮುಖ್ಯಪ್ರಾಣಂ 5
--------------
ಕನಕದಾಸ
ಭಜಿಸಿ ಬದುಕಿರೋ _ ಭರದಿ ಸುಜನ ರೆನಿಸಿರೋ ಪ ಸುಜನ ರಾಜ ರಾಘವೇಂದ್ರರಾ ಅ.ಪ ಸುಜನ ಮಲಿನ ಕಳಿಯಲು ಒಲಿದು ಭವಿಯೊಳು _ ಬಂದ ಅಲವ ಮಹಿಮರ 1 ವೇಧ ದೂತರ _ ಪ್ರಹ್ಲಾದರೆಂಬರ ಸಾಧು ಸೇವ್ಯರ _ ದುರ್ಬೋಧೆ ಕಳಿವರ 2 ನಾರಸಿಂಹನ ಕರುಣ ಸೂರೆ ಪಡದಿಹ ಭಾರಿ ಭಕ್ತರ ದೇವರ್ಷಿ ಛಾತ್ರರ 3 ವ್ಯಾಸರಾಯರ _ ಶ್ರೀನಿವಾಸ ಯಜಕರ ಶೇಷದೇವರ ಆವೇಶ ಯುಕ್ತರ 4 ರಾಜ ಗುರುಗಳು ಕವಿರಾಜ ಮಾನ್ಯರು ನೈಜ ತೇಜರು ನಿವ್ರ್ಯಾಜ ಪ್ರೇಮರು 5 ಹರಿಯ ತರಿಸಿದಾ ಮುರಹರನ ಕುಣಿಸಿ ದಾ ಮುರವ ಹರಿಸಿದಾ ಧೊರೆಗೆ ಹರುಷ ಸುರಿಸಿದಾ 6 ಮಾನವಂತರಾ ಬಹುಜ್ಞಾನವಂತರಾ ದಾನ ಶೀಲರಾ ಅನುಮಾನ ರಹಿತರ 7 ಭ್ರಾಂತಿ ವಾದವ ವಿಶ್ರಾಂತಿ ಗೊಳಿಸಿದ ಶಾಂತಿ ಸಾಗರ ವೇದಾಂತ ಭಾಸ್ಕರ 8 ಶ್ರೀ ಸುಧೀಂದ್ರರ ವಿಶ್ವಾಸ ಪುತ್ರರ ದೋಷದೂರರ _ ಗುರು ದೋಷ ಕಳಿವರ 9 ಮಂತ್ರ ಸಿದ್ಧರು ಬಹು ಗ್ರಂಥ ಕರ್ತರು ತಂತ್ರ ಮಲ್ಲರು ಹರಿ ಮಂತ್ರಿ ಸಚಿವರು 10 ಭವ ರೋಗ ವೈದ್ಯರ ರಾಗ ರಹಿತರ ವೈರಾಗ್ಯ ಭಾಗ್ಯರ 11 ವಾದಿ ಭೀಕರ ಶ್ರೀವಿಜೀಂದ್ರ ಪೌತ್ರರ ನಿತ್ಯ ಮಿಂದು ಮೀಯ್ವರ 12 ತರ್ಕದಿಂದಲು ಹರಿಯು ಶಕ್ತಿಯಿಂದಲು ಯುಕ್ತಿಯಿಂದಲು ಒಲಿಯ ಭಕ್ತಿ ಇಲ್ಲದೆ 13 ಶ್ರೀಶ ದಾಸರ ಪದ ಪಾಂಶು ಧರಿಸದೆ ದೇಶ ತಿರುಗಲು ಬರಿಘಾಸಿ ಸಿದ್ಧವು 14 ಭಕ್ತರೊಲಿಯದೆ ನಿಜ ಭಕ್ತಿ ಸಿಕ್ಕದು ಪಕ್ವವಾಗದೆ ಭಕ್ತಿ ದಕ್ಕ ಶ್ರೀ ಹರಿ 15 ಇವರ ಮಂತ್ರವ ಭಕ್ತ ಜವದಿ ಜಪಿಸಲು ಅವಗೆ ಕರಗತ ಸಿದ್ಧ ಭವದಿ ವಾಂಛಿತ 16 ಶ್ರೀನಿವಾಸನ ಭಕ್ತ ಶ್ರೇಣಿ ಸೇರುವ 17 ಅಲ್ಪ ಸೇವೆಯೆ ಮೇರು ಕಲ್ಪ ವಾಹುದೊ ಕಾಕು ಸ್ವಲ್ಪ ತಟ್ಟದೊ 18 ನಿಖಿಳ ಯಾತ್ರೆಯಾ ಫಲ ಭಕ್ತ ಪಡೆಯುವ ಸಂದೇಹ ಸಲ್ಲದೊ 19 ಪುತ್ರ ನೀಡುವ ಸಂಪತ್ತು ದೊರಕಿಪ ವೃತ್ತಿ ಕಲ್ಪಿಪ ಆಪತ್ತು ಕಳಿಯುವ 20 ರಾಮ ನರಹರಿ ಕೃಷ್ಣ ಬಾದರಾಯಣ ದಿವಿಜ ಸ್ತೋಮ ವೆಲ್ಲವು 21 ಸೇರಿ ಇವರಿಗೆ ಕೀರ್ತಿ ಸೂರೆ ಕೊಡುತಿರೆ ಪಾರವಿಲ್ಲವು ಸತ್ಯ ಮಹಿಮೆ ಗೆಂಬುವೆ 22 ಕರ್ಣ ವಿದಿತರು ವಿಘ್ನ ಕಳಿವರು ಶ್ರೀ ಸತ್ಯ ಸಂಧರು 23 ಗುರುವು ಒಲಿದರೆ ತಾ ಹರಿಯು ಒಲಿಯುವ ಗುರುವು ಮುನಿದರೆ ಯಾರು ಪೊರೆವರಿಲ್ಲವೊ 24 ಶುದ್ಧ ಭಕ್ತಿಲಿ ಈ ಪದವ ಪಠಿಸಲು ಸಿಧ್ಧಿ ಸತ್ಯವು ಸರ್ವತ್ರ ವಿಜಯವು25 ಸಾರಿ ಸಾರುವೆ ಕೇಳಿ ಕ್ರೂರ ಕಲಿಯಲಿ ದೂರ ಸಾಧನೆ ಇವರ ಸೇರ ದಿರ್ಪಗೆ26 ಜಿಷ್ಣು ಸೂತ ಶ್ರೀ ಕೃಷ್ಣ ವಿಠಲನ ಶ್ರೇಷ್ಟ ಭಕ್ತರ ಶ್ರೀ ರಾಘವೇಂದ್ರರ27
--------------
ಕೃಷ್ಣವಿಠಲದಾಸರು
ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭಜಿಸಿದ್ಯಾ ಈ ಭಾಗ್ಯನಿಧಿಯಾ ನೋಡು ಸುಜನರ ಹೃದಯ ಪಂ ರಜತಮೋ ದೂರನ್ನ ಪ ಮನ ಸೋಲಿಸುವ ಲಲಾಟ ಫಣಿ ನಮ್ಮನು ನೋಡುವ ವಾರೆ ನೋಟಾ ಹಾಹಾ ಮಕರ ಕುಂಡಲ ಕರ್ಣ ಕದಪು ಆವಿನ ಸೋಲಿಸೆ ನಿತ್ಯಾ 1 ಭೃಂಗ ಕುಂತಳ ಕೇಶಾ ಪುಬ್ಬು ಅಂಗಜ ಚಾಪಾ ವಿಲಾಸ ಉ ತ್ತುಂಗ ಚಂಪಕ ಕೋಶಾ ನಾಸಾರಸಾ ರಂಗುದುಟಿಯ ಮಂದಹಾಸಾ ಹಾಹಾ ತಿಂಗಳ ಎಳೆ ಬೆಳ ದಿಂಗಳಾ ಮೀರೆ ಭೂ ಮಂಗಳಾಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳ ವೀಳ್ಯೆ ಕರ್ಪುರಾ ವಿಟ್ಟಾ ಜಲಧಿ ಗಂಭೀರಾ ದಂತ ಪರಿಪಙË್ತ ಸಮ ವಿಸ್ತಾರ ಹಾಹಾ ಮಿರುಗುವಾನಂತ ಚಂ ಚರಿಸುವ ಚತುರನ್ನ 3 ಪನ್ನೇರು ಸಂಪಿಗೆ ಪೊಂಗೇ ಜಾಜಿ ಇರುವಂತಿಗೆ | ಹಾಹಾ | ಮಕರಂದಾ ಮಾರಂದೋದಕ ಸುರಿಯಲಿಂದು4 ನಿಡಿದೋಳು ಕಕುಭುಜಾ ಕೊರಳಾ ಸ್ಕಂಧಾ ಮಣಿ ಹರಳಾ | ಹಾಹಾ| ಒಡನೆ ತಾಯಿತ ಕೀರ್ತಿ ವಡಿವೇಲಿ ಮೆರೆವನ್ನ 5 ಸುರವಿ ಮಯೂಖಾ ಮೇಲು ಧರಿಸಿದ ಚಕ್ರಾದಿ ಶಂಖಾ | ಹಾಹಾ | ಕೌಸ್ತುಭ ಮಣಿ ಸಿರಿವತ್ಸ ವನಮಾಲಾ ಉರವೈಜಯಂತಿ ಮಂದಾರ ಹೀರ ಹಾರನ್ನ6 ಮುತ್ತು ವೈಢೂರ್ಯ ಪ್ರವಳಾ ಪಚ್ಚ್ಚೆ ಕೆತ್ತಿದ ಪದಕ ನ್ಯಾವಳಾ ಸ್ತುತಿಪ ಜನಕೆ ಜೀವಾಳಾ | ಹಾಹಾ | ಪ್ರತ್ಯೇಕವಾಗಿ ತೂಗುತಿಹ ಸರಗಳು ತತ್ತುಲಸಿಧಾಮ ಚಿತ್ರವಾಗಿರೆ ಬಲು 7 ನಖ ಚಂದನಾ ಅಗರಾ ಪಚ್ಚೆ ಘನ ಪರಿಮಳ ಗಂಧ ಸಾರಾ | ಹಾಹಾ | ತನುವಿಗೆ ತನುವು ಲೇಪನವಾದಾ ಸೊಗಸು ವಾ ಸನೆ ಸುತ್ತ ಘಮಘಮ ತನರು ಹಾವಳಿ ತಿಳಿ 8 ತ್ರಿವಳಿ ಉಪಗೂಢ ಜಠರಾ ಅಖಿಳಾವನಿ ಧರಿಸಿದ ಧೀರಾ ನಾಭಿ ಕುಸುಮ ಮೃಗ ದೇವ ಉಡಿ ಉಡದಾರಾ | ಹಾಹಾ | ಭವಕಿಂಕಿಣಿ ತಳಲಾವಿ ವಸನ ಬಿರು ತೊಡರು ದೈತ್ಯಾವಳಿ ಹರನನ್ನಾ 9 ಊರು ಜಾನು ಜಂಘೆ ಗುಲ್ಫಾ ವಿಚಾರಿಸೆ ಕ್ರಮಾತು ಅಲ್ಪಾ ತನ್ನ ಸಂಕಲ್ಪಾ | ಹಾಹಾ| ವಾರಣಾ ಕರದಂತೆ ಹಾರೈಸುಯಿಂತು ನೂ ಚಾರು ಚರಣ ಪೆಂಡೆ10 ನಖ ವಜ್ರಾಂಕುಶ ಚಕ್ರ ಸುಧಿಯಾ ಸುರಿವ ಪೀಠ ಸರಸಾ | ಹಾಹಾ | ತ್ರಿದಶನಾಯಕ ಶಿವ ವಿಧಿಗಳ ಮುಕುಟ ಪಾದದಲಿ ಸಮ್ಮರ್ದವಾದುದು ನೋಡಿ ತರುವಾಯಾ 11 ದಹಿಸುವ ಪಾದಾ ಕಾಮ ಕಾನನ ದಹಿಸುವ ಪಾದಾ | ಹಾಹಾ | ಅನಂತ ದಿನಕ್ಕೊಮ್ಮೆ ನೀನೇ ಗತಿಯೆಂದಾ ಮಾನವಗೆ ಬಂದು ಕಾಣಿಸಿಕೊಂಬನ್ನ12 ಅಪದಕ್ಷ ಸಾರಾಧ್ಯಕ್ಷ ಸರ್ವವ್ಯಾಪಕ ಕರುಣಿಕಟಾಕ್ಷ ಜಾಗ್ರತ್ ಸ್ವಪ್ನದಲ್ಲಿ ಪ್ರಾಜ್ಞಾದಕ್ಷ ನಿಜ ಆಪನ್ನರಿಗೆ ದಾವಾ ವೃಕ್ಷ | ಹಾಹಾ | ರೂಪ ರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ರತುನ ಮೌಳಿಪರಿಯಂತರಾ13 ಸಂಪಾದಿಸು ಜ್ಞಾನಾ ಭಕ್ತಿ ಕೊಂಡಾಡು ಮುನ್ನಿನಾ | ಹಾಹಾ | ಬಂಧನ ಹರಿಸಿ ಆನಂದವ ಕೊಡುವ ಮು ಕುಂದ ಅನಿಮಿತ್ತ ಬಂಧು ವೆಂಕಟನ್ನ 14 ನಿತ್ಯ ಭಜಿಸುವ ಜನರಿಗೆ ಶೀಲಾ ಪುಣ್ಯ ನಿಜರೊಳಗಿಡುವ ಈ ಕೂಲಾ | ಹಾಹಾ | ವ್ರಜದಲಿ ಪುಟ್ಟಿದಾ ಸುಜನಾಂಬುಧಿ ಸೋಮ ವಿಜಯವಿಠ್ಠಲರೇಯಾ ಗಜರಾಜವರದನ್ನಾ 15
--------------
ವಿಜಯದಾಸ
ಭಜಿಸಿರೊ ಭವಭಂಜನ ಹರಿಯಾ ರಜತ ಪೀಠ ಪುರದಿ ರಾಜಿಪ ದೊರೆಯಾ ಪ. ಮುಷ್ಟಿ ಪೃಥುಕವನ್ನು ಕೊಟ್ಟ ಕುಚೇಲಗೆ ಶ್ರೇಷ್ಠ ಭಾಗ್ಯವನಿತ್ತ ಸಿರಿವರನಾ ಅಷ್ಟಮಠೀಯರು ಮುಟ್ಟಿ ಪೂಜಿಸುವಂಥ ವಿಠಲನಿಂದ ಸರ್ವಾಭೀಷ್ಟವ ಪಡೆಯಿರಿ 1 ಯುಕ್ತಿಯನರಿಯದ ಭಕ್ತರಿಗಿಹಪರ ಭುಕ್ತಿ ಮುಕ್ತಿದನೆಂಬ ಬಹು ಬಿರುದಾ ವ್ಯಕ್ತ ಮಾಡುತ ಕಡು ರಿಕ್ತಜನರ ರಕ್ಷಾ ಸಕ್ತನಾಗಿಹ ಭೈಷ್ಮೀನಕ್ತ ಮಾನಸನನ್ನು 2 ನಿತ್ಯ ಮಧ್ವ ಸರಸಿಯೊಳಗೆ ಮಿಂದು ಉರಗ ಗಿರೀಶ ಸತ್ಯ ವರನ ಮೂರ್ತಿಯ ಕಂಡು ಸುರವರ ಪ್ರಾರ್ಥನೆಯ ವರ ಪ್ರಸಾದವನುಂಡು 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಜಿಸಿರೋ ಮನದಣಿಯ ಸುಜನಾಬ್ಜ ದಿನಮಣಿಯ ಭುಜಗಾರಿಗಮನ ತಿಂಥಿಣಿಯ ಸತ್ಕಣಿಯ ಪ ರಜನೀಕರ ಗುಣಶ್ರೇಣಿ ಅಜಭವ ಸುರಾಗ್ರಣಿಯ ತ್ರಿಜಗಮೋಹನ ಮಣಿಯ ಸೊಬಗಿನ ಕಣಿಯ ಅ.ಪ ಪೊಳೆವ ಮಕುಟದ ಫಣಿಯ ತಿಲಕದಲಿ ರಂಜಿಸುವ ಪ್ರಣವ ಗೋಚರ ಸುಧಾಮಯದ ಕದಪಿನಲಿ ತೊಳಪ ಕುಂಡಲದ ನಾಸಿಕದ ಮೂಗುತಿಯೆಸೆಯೆ ಸುಲಿಪಲ್ಲ ನಗೆಮೊಗದ ಸುಲಭಸೌಂದರÀನ 1 ಪದಕ ಮಣಿಮಯ ಮೌಕ್ತಿಕದ ಹಾರ ತ್ರಿಸರ ಕಂ ಧರ ವೈಜಯಂತಿಯೊಲವಿನ ಬಾವುಲಿ ಮುದದ ಕಂಕಣ ಕರದ ಮುದ್ರೆಯೆಸೆವಾ ಬೆರಳ ಕಂಬು ಮದನಶರಧನು 2 ತರಣಿ ಶತಕೋಟಿ ಕಿರಣತತಿ ಕುಮುದ ವರ್ಣದ ತನುರುಚಿಯಾ ಹರಸುರೇಶ್ವರ ವಿರಿಂಚ್ಯಾದಿ ವಂದಿತಚರಣ ಸರಸಿರುಹ ವರದೇವಪುರದ ಸಿರಿವರನ 3
--------------
ಕವಿ ಲಕ್ಷ್ಮೀಶ
ಭಜಿಸು ಮನವೆ ಭಜಿಸು ಮನವೆ ಅಜ ಸುರ ಮುನಿ ವಂದಿತ ಪಾದ ಪೂಜಿಸು ನಿಜಸ್ವರೂಪ ನಿತ್ಯ ಸುಜನ ಮನೋಹರನ 1 ಪರಮಪುರುಷ ಪರಂಜ್ಯೋತಿ ಪಾರಾವಾರ ಹರಿಗೋಪಾಲ ಕರುಣಾಕೃಪಾಲ ಮೂರುತಿ ಸ್ವಾಮಿ ಸಿರಿಲೋಲನ 2 ಅತೀತ ಗುಣಾನಂತಮಹಿಮ ಪತಿತಪಾವನ ಪೂರ್ಣ ಸತತ ಸದೋದಿತ ಪಾದ ಅತಿಶಯಾನಂದನ3 ಅವ್ಯಕ್ತ ಅವಿನಾಶ ಸು ದಿವ್ಯ ಸುಪವಿತ್ರದಾಗರ ಘವಘವಿಸುವ ದಿವ್ಯ ತೇಜ ರವಿಕೋಟಿ ಕಿರಣನ 4 ಅನಾಥಬಂಧು ಅನುದಿನ ಅಣುರೇಣು ತೃಣಪೂರ್ಣ ಪ್ರಾಣದೊಡೊಯ ಮಹಿಪತಿ ದೀನದಯಾಳುನಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಜಿಸೋ ಬೇಗ ಹರಿಯ ಅಜಭವಾಶ್ರಿತ ನಿಜ ದೊರೆಯ ಪ ಕಾಮಕ್ರೋಧವ ಬಿಟ್ಟು ಮನಸಿನೊಳಗೆ ರಾಮ ಮೂರುತಿಯಿಟ್ಟು ಪ್ರೇಮ ತಿಳಿದಷ್ಟು ಆದಷ್ಟು ಕಾಮಿತಾರ್ಥವ ಕೊಟ್ಟು ಹೇಮಗರ್ಭಭವ ಸೋಮ ಸೂರ್ಯರಿಗೆಲ್ಲ 1 ನಿಯಮನ ಮಾಡುವ ಮಹಾ ದೈವವ ಬಿಟ್ಟು ಇರಸಲ್ಲ ಜಗದೊಳಜಾಮಿಳ ಬಲ್ಲ ನಂಬಿ ಕೆಟ್ಟವರಿಲ್ಲ ಧ್ರುವಬಲ ಇಂಬುಗೊಂಡರಲ್ಲ ತುಂಬಿದ ಸಭೆಯೊಳಾಂಬುಜಾಕ್ಷಿ ಅಂಬರ ದೃಷ್ಟಿ ಸುರಿಸಿದ2 ಒಂದೇ ಮನದಿ ಭಜಿಸೆ ಭವವೆಂಬೋ ಬಂಧನವ ಬಿಡಿಸುವ ಮುಂದೆ ಮುಕ್ತಿಯ ಹರಿಸಿ ಕೊಡುವನು ಚಂದದಿ ಅನುಕರಿಸಿ ಬಂಧ ಮೋಕ್ಷಪ್ರದ ಮಾನಿಧಿವಿಠಲನ ಇಂದಿಗೂ ಮುಂದಿಗೂ ಬಿಡದೆ ನೀನೆಂದೆಂದಿಗೂ 3
--------------
ಮಹಾನಿಥಿವಿಠಲ