ಒಟ್ಟು 8519 ಕಡೆಗಳಲ್ಲಿ , 133 ದಾಸರು , 4842 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿರೆ ಅಡ್ಡ ಬಂದ ಗ್ರಹಚಾರಮಾಡೆ ಪಾಪವ ಮನ ಆತ್ಮಂಗೆಂಬುದು ಪ ಕಳ್ಳ ಕನ್ನದಿ ಸಾಯೆ ಡೊಳ್ಳುಕೋಮಟಿಗನತಳ್ಳಿ ಶೂಲಕೆ ಏರಿಸು ಎಂಬ ಗಾದೆಜಳ್ಳು ಮನವಿದು ನಿಲದೆ ಪಾಪವನು ಮಾಡಿದರೆಆ ಪಾಪ ಆತ್ಮಗೆ ಎಂದು ಊಹಿಸುವರು 1 ಕೋಳ ಹಾಕೆಂಬ ಗಾದೆಮೂಢ ಮನವಿದು ತಾನು ಪಾಪವನು ಮಾಡಿದರೆಆಡಲೇನದ ಆತ್ಮಗೆಂದು ಊಹಿಸುವರು 2 ಮನವು ಎಂಬುದು ಆತ್ಮನಿಂದ ಸಂಚರಿಪುದುಮನವು ಆತ್ಮನೊಳು ಲಯವು ಅಹುದುಮನವು ಮೊದಲಿಗೆ ಸುಳ್ಳು ಪಾಪಗಳಿಹವೆಲ್ಲಿಮನಕುಗೋಚರ ಚಿದಾನಂದ ಶುದ್ಧಾತ್ಮನು3
--------------
ಚಿದಾನಂದ ಅವಧೂತರು
ನೋಡಿರೇ ನಂದ ಕಂದನಾ ನೋಡಲು ಕಣ್ಣಿನ ಪಾರಣಿ ಮಾಡುವಾ ಪ ಸೂರಿಯಾ ನಿಳಿಯಲು ಅಪರದ ಜಾವಕ ಸಾರಿಸಿ ಗೋಧನ ತಿರುಗಿಸುತಾ ವಾರಿಗ ರೆಲ್ಲರು ವಂದಾಗಿ ಹರುಷದಿ ಧೀರನು ದಾರನು ಆಡೂತ ಬರುವಾ 1 ಚಂಡು ಬಗರಿ ಚಿಣಿ ಕೋಲು ಚಪ್ಪಳಿಕೈಯ್ಯಾ ಹಿಂಡ ನೆರೆದು ಹಂಬಲಿ ಹಾಕುತಾ ಮಂಡಳದೊಳಗುಳ್ಳ ಆಟವ ನಾಡುತ ಪಂಡರಿ ಕಾಕ್ಷನು ಲೀಲೆಯ ನಲುವಾ 2 ಗೋಧೂಳಿ ತುಂಬಿದ ಗುಂಗುರ ಗೂದಲು ಉದಿಸಿದ ಹಣೆಯಲಿ ಕಿರಿ ಬೆವರು ಬೆರಿಸಿ ಪರಿಪರಿ ಸ್ವರದಲ್ಲಿ ಕೊಳಲವ ನೂದುತ ಕುಣಿಯುತ ನಗೆವುತ ಬರುವಾ3 ಕುಂಡಲ ಹೊಳೆಯುತ ಕಣ್ಣಿನ ಚಲುವಿನ ಕಸ್ತೂರಿ ರೇಖೆಯಲಿ ನೌಲಗರಿಯ ವಾರಿ ದುರುಬವ ಕಟ್ಟಿಸಿ ಪುತ್ಥಳಿ ಬರುವಾ4 ಪೇಂದ್ಯ ಉದ್ದದ ಬಲರಾಯ ಸುಧಾಮರ ವೃಂದದಿ ಮಹಿಪತಿ ಸುತ ಪ್ರೀಯನು ಇಂದು ವದನೆಯರು ಆರುತಿ ಕೊಳುತಲಿ ವಂದದಿ ಮಧ್ಯ ನಾಯಕನಾಗಿ ಬರುವಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೇ ನೋಡಿರಮ್ಮಾ ಚೆಲುವನಾ ನೋಡಿರೇ || ಇವ|| ರೂಢಿಗೆ ಆವನಿಜೆಯಾ ತಕ್ಕುವರನೇ ಮುದ್ದುಸ್ಮರನೇ ಪ ಪಾದ ಜಂಘಯಿಂದ ಜಾನೂರುಮಾರಾ ತ್ರಿವಳವೇ| ಹಾರ ದಿಯ ಕರ ಸರಳವೇ 1 ಮಂಡಿತದ ಕುಂಡಲವಾ| ಮೃಗಮದ ಕಿರೀಟ 2 ಆವರಾಯನಮಗನೋತಾನರಿಯೇ|ಭೂಸು| ರಾವಳಿಯೊಳಿಂದ್ಧಾರೇನು |ಅಂಗ| ದಾವ ತೇಜಮುಸುಕಿತು ಧರಿಯೇ|ತ್ರ್ಯೆಭುವನವರಕ್ಷಿಸ ಬಂದಾಹರಿಯೇ | ಮುಜ್ಜಿಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಆಡಿಯಿಟ್ಟುನಲಿದು ಬರುವ ರಾಮೊ ಘಮ್ಮನೇ ಪರಬೊಮ್ಮನೆ 4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೋ ನಿಜ ನೋಡಿರೋ ನೋಡಲು ಗುರುಸೇವೆ ಮಾಡಿರೋ ಧ್ರುವ ನೋಡದರೊಳಗೊಂದಡಗ್ಯಾದೆ ಅಡಗಿದಕೊಂದು ಮನೆ ಮಾಡ್ಯಾದೆ ಮಾಡಿದರೊಳಗೊಂದು ಮೂಡ್ಯಾದೆ ಮೂಡಿದಕೊಂದು ಗೂಢವಾಗ್ಯಾದೆ 1 ಆಡುವೆರಡು ಮಧ್ಯಾನಾಡ್ಯಾದೆ ನಾಡಿ ಮಧ್ಯೊಂದು ಕೂಡಿಹದ್ಯಾದೆ ಕೂಡಿದ ಹಾದಿಗೊಂದು ಮಾಡ್ಯಾದೆ ಮಾಡಿದಕೊಂದು ಕೈ ಗೂಡ್ಯಾದೆ 2 ಮುಂದ ನೋಡಲು ಹಿಂದವಾಗ್ಯಾದೆ ಹಿಂದನೋಡಲು ಮಂದವಾಗ್ಯಾದೆ ಹಿಂದ ಮುಂದ ತಾನೆ ತುಂಬ್ಯಾದೆ ಕಂದ ಮಹಿಪತಿಗಾನಂದಾಗ್ಯಾದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡು ಎನ್ನೊಳು ಮಾಡು ದಯವನು ಬೇಡಿಕೊಂಬುವೆ ಮುರಹರ ಪ ರೂಢಿಯೊಳು ಎನ್ನ ಖೋಡಿಮಾಡದೆ ಕಾ ಪಾಡು ಬೇಗ ಭಕ್ತಹಿತಕರ ಅ.ಪ ಪಂಕಜಾಕ್ಷನೆ ಕಿಂಕರನ ಈ ಮಂಕುಗುಣಗಳ ಬಿಡಿಸಯ್ಯ ಶಂಖಸುರಹರ ಶಂಕೆಯಾತಕೆ ಕಿಂಕರನು ನಾಂ ಪಿಡಿ ಕೈಯ 1 ಹಿಂದು ಇಲ್ಲೆನ್ನ ಮುಂದು ಇಲ್ಲಯ್ಯ ತಂದೆ ನಿನ್ಹೊರತ್ಯಾರ್ಯಾರು ಮಂದಮತಿಯನು ಛಿಂದಿಸಿ ಬೇಗ ಕಂದನನು ಪೊರೆ ದಯಾಕರ 2 ತಂದೆ ನೀನೆ ತಾಯಿ ನೀನೆ ಬಂಧು ನೀನೆ ಶ್ರೀಕರ ಬಂದ ದುರಿತದಿಂದ ಕಾಯೊ ಸಿಂಧು ನೀನೆ ದೇವರೊ 3 ಉರಗನ ಬಾಯಲಿರುವ ಮಂಡೂಕ ಸ್ಮರಿಸಿ ನೋಣಕ್ಹವಣಿಸುವ ತೆರದಿ ಶರಧಿಸಂಸಾರ ಸ್ಥಿರವೆಂದರಿಯದೆ ಮರವಿನಿಂ ಬಿದ್ದೆ ದುರಿತದಿ 4 ಕಾಯಜೆಂಬುವ ಮಾಯಕೋರನು ಪಾಯಕೆ ಒಳಪಟ್ಟೆನು ತೋಯಜಾಕ್ಷೇರ ಮಾಯಮೋಹದಿ ಕಾಯದಂದಿಸಿ ಕೆಟ್ಟೆನು 5 ಕುಂಭಿನಿಯೊಳೆನಗಿಂಬುಗೊಟ್ಟು ಬಲು ನಂಬಿದವರಾಸ್ತ್ಯಳಿದೆನೊ ಜಂಬಬಡಿಯುತ ಶುಂಭಗುಣಗಳಿ ಗಿಂಬುಗೊಟ್ಟು ದಿನಗಳೆದೆನೊ 6 ಪ್ರಾಣತಗ್ಗಿಸಿ ದೀನತನದಲಿ ದೈನ್ಯಬಡುವರಿಗ್ಹಾನಿಮಾಡಿದೆ ದಾನಕೊಡುವರ ದಾನಕಡ್ಡಾಗಿ ನಾನಾ ದುರ್ಬೋಧವುಸುರಿದೆ 7 ಜಾನಕೀಶನ ಧ್ಯಾನಯುತರಿಗೆ ಹೀನ ಹಾಸ್ಯವ ಗೈದೆನೊ ಏನು ತಿಳಿಯದೆ ಗಾಣಕೆ ಬಿದ್ದ ಮೀನಿನಂತೆ ನಾನಾದೆನೊ 8 ಶ್ವಾನನಂದದಿ ಖೂನವಿಲ್ಲದೆ ನಾನಾಪಾಪವ ಗೈದೆನೊ ಮಾನವಜನುಮೇನು ಶ್ರೇಷ್ಠಿದ ಜ್ಞಾನದೋಳ್ಹೊತ್ತುಗಳೆದೆನೊ9 ಮಂಗನಂದದಿ ಹಂಗದೊರೆದು ಅಂಗಲಾಚಿ ಪರರನ್ನು ಬೇಡಿದೆ ಅಂಗಜಪಿತ ಮಂಗಳಾಂಗ ಶ್ರೀ ರಂಗ ನಿಮ್ಮ ಮಹಿಮ್ಯರಿಯದೆ 10 ದಾಸ ಮಾಡಿದ ದೋಷ ಮನ್ನಿಸಿ ಪೋಷಿಸು ಶ್ರೀರಾಮನೆ ಶ್ರೀಶ ಶ್ರೀನಿವಾಸ ಎನ್ನಂತ ರಾಸೆ ಪೂರೈಸು ಬೇಗನೆ 11
--------------
ರಾಮದಾಸರು
ನೋಡು ಗರ್ವ ಹಿಡಿಯ ಬ್ಯಾಡಾ ಪ ಜಗದೊಳಗ ಹಿತ ಮಾಡಿಕೊ | ಸಂತರೊಳು ಕೂಡಿ ನೀ ಪ್ರಾಣಿ ಅ.ಪ ಸುರಪದ ಮದ-ಗಜವೇರಿ ಸುರಸೈನ್ಯದಿಂಬರಲು | ಕರುಣದಿಂ ದೂರ್ವಾಸ ಸರ್ವ ಕುಡಲು | ಕೊರಳಿಗಿಕ್ಕದೆ ಬಿಡಲು ಧರೆಗೆರಗುವದ ಕಂಡು | ಮೊರೆದು ಕೋಪಿಸಲು ಸಿರಿಹರದ್ಹೋಯಿತು ಪ್ರಾಣಿ 1 ನೃಪತಿ ನಹುಷನನು ಯಜ್ಞ ಅಪರಿಮಿತ ಮಾಡಿ ನಿಜ | ಉಪಬೋಗಿಸದೆ ತಾ ಸುರಪ ಪದವಿಯಾ | ವಿಪುಲ ಋಷಿಯರ ಕೂಡ ಅಪಹಾಸ ಮಾಡಲಿಕೆ | ಶಪಿಸಲಾಕ್ಷಣ ಉರಗಾಧಿಪನಾದ ಪ್ರಾಣಿ 2 ವೈರಿ ಗರ್ವ ವಿದ್ಯಕ ಹಾನಿ | ಗರ್ವದಿಂ ಕೆಡಬಹುದುರ್ವಿಯೊಳಗ | ಸರ್ವಥಾ ಬ್ಯಾಡೆಂದು ಹೊರೆಯೊ ಗುರು ಮಹಿಪತಿ | ಅರ್ವವನು ಕೊಟ್ಟೆನಗ ಸರ್ವರೊಳು ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡು ನೋಡು ಜೀವನೆ ನೀ ನಿನ್ನಯ ನಿಜರೂಪವಾ ತಿಳಿದು ನಲಿದು ಜ್ಞಾನಪಥದಿ ಆನಂದವ ಹೊಂದು ನೀ ಪ ಅಮರನಾದ ಆತ್ಮ ನೀನು ಆನಂದದ ನಿಧಿಯೇ ನೀ ಅರಿತು ಇದನು ನಿನ್ನ ಮನದಿ ಶಾಂತರೂಪನಾಗು ನೀ 1 ನಾನೆನ್ನುವ ಅನಿಸಿಕೆಯದು ಅಡಗಲು ತಾನುಳಿಯುವಾ ತೋರಿಕೆಯನು ಮೀರಿದಾ ನಿರ್ವಿಕಲ್ಪ ನೋಡು ನೀ ಶ್ರವಣ ಮನನ ನಿದಿಧ್ಯಾಸ ಸಾಧನೆಗಳ ಮಾಡುತಾ ತಿಳಿವುದಾತ್ಮರೂಪ ನಾನೆ ಎಂದು ನಿನ್ನ ಮನದಲಿ 2 ಮನದೊಳಗೀಪರಿಯಾ ದೃಢತರದಲಿ ನಿಶ್ಚಿತಮಾಡೀ ದೇಹ ಮನಸು ಬುದ್ಧಿಗಳಿವು ನಾನಲ್ಲೆಂದರಿಯುತ ತೋರಿ ಅಡಗುತಿರುವ ಜಗವು ಕನಸೇ ಎಂದರಿತು ನೀ ಪರಮಸತ್ಯ ಆತ್ಮರೂಪ ನಾನಿಹೆನೆಂದರಿತುಕೋ 3 ಪ್ರೇಮರೂಪ ನೀನೆ ಎಂದು ಸಾರಿ ಪೇಳ್ದ ಜ್ಞಾನವ ಆ ಮಹಾತ್ಮಶಂಕರಗುರುರಾಜನ ನುಡಿ ತಿಳಿಯೋ ನೀ 4
--------------
ಶಂಕರಭಟ್ಟ ಅಗ್ನಿಹೋತ್ರಿ
ನೋಡು ನೋಡು ನಾರೀಮಣಿಯೆ ಪ ನೋಡು ನೋಡು ನಿನ್ನಾ ಕಣ್ಮನ ದಣಿಯಾ ಅ.ಪ. ಮುದ್ದು ಸೂಸುವ ಸಲೆ ಮುಗುಳ್ನಗೆ ಮೊಗವಾ ತಿದ್ದಿದ ಕಸ್ತೂರಿ ತಿಲಕದ ಫಣಿಯಾ 1 ಸಾರ ಗಂಭೀರ ಶೃಂಗಾರ ವಿಹಾರಾ ಚಾರು ಸೌಂದರ್ಯವೈಯ್ಯಾರ ಸುಗುಣಿಯಾ 2 ಶ್ರೀದವಿಠ್ಠಲ ಸಾಕ್ಷಾತ್ತ್ರಿಜಗನ್ಮಯಾ ಇಂದ್ರಶರಾ ಜಗನ್ಮೋಹನ ಖಣಿಯಾ 3
--------------
ಶ್ರೀದವಿಠಲರು
ನೋಡು ನೋಡು ನೋಡಯ್ಯ ರಂಗ ಮಾಡು ದಯ ಕರುಣಾಂತರಂಗ ಪ ಖೋಡಿಸಂಸಾರದ ಪೀಡೆಯ ಕಡೆಹಾ ಕರ ಭವಭಂಗ ಅ.ಪ ಮಡದಿಮಕ್ಕಳುಯೆಂಬ ಕಡುತೊಡರಿನ ಬಳ್ಳಿ ತೊಡರಿಕೊಂಡೆನ್ನನು ಕಡುವಿಧ ನೋಯಿಸುವುದೊಡೆಯನೆ ಕಡಿ ಗಡ1 ಸಜ್ಜಾಗಿಲ್ಲೊಲ್ಲೆ ನಾನು ಪ್ರಪಂಚವಿದು ಹೆಜ್ಜೆ ಹೆಜ್ಜೆಗೆ ಕಷ್ಟ ಗರ್ಜಲ್ಲೊರ್ಜಿಸು ಸುಜನರಜ್ಜನೆ 2 ಪ್ರೇಮದಿಂ ಕಂದನ ಪಾಮರಮನಸಿನ ಕಾಮಿತವಳುಕಿಸಿ ಕ್ಷೇಮವ ಪಾಲಿಸು ಸ್ವಾಮಿ ಶ್ರೀ ರಾಮನೆ 3
--------------
ರಾಮದಾಸರು
ನೋಡು ನೋಡು ಬ್ರಹ್ಮವ ಮುಕ್ತನೆನೋಡು ನೋಡು ಬ್ರಹ್ಮವನೋಡು ನೋಡು ಬ್ರಹ್ಮವನ್ನುಗೂಢವಲ್ಲ ಎದುರಿಲ್ಲದೆಆಡಲಿಕ್ಕೆ ನಾಲಗಿಲ್ಲ ಸರ್ವರೂಪದಲ್ಲಿದೆ ಪ ಸ್ತ್ರೀಯ ರೂಪಾಗಿದೆ ಪುರುಷ ರೂಪಾಗಿ ಇದೆಸ್ತ್ರೀಯು ಅಲ್ಲ ಪುರುಷನಲ್ಲ ಅಹುದು ಅಹುದು ಅಹುದು ಅಲ್ಲ 1 ಸತಿಯು ಪತಿಯು ಆಗಿ ಇದೆಸುತರು ಸೊಸೆಯು ಆಗಿ ಇದೆಅತಿ ಬಳಗವಾಗಿ ಇದೆ ಎಲ್ಲ ವೇಷ ಹಾಕಿ ಇದೆ2 ಎಲ್ಲವಾಗಿ ಆಡುತಿದೆಎಲ್ಲವಾಗಿ ಪಾಡುತಿದೆಎಲ್ಲವಾಗಿ ಚಿದಾನಂದ ಬ್ರಹ್ಮವೀ ಪರಿಯಲಿದೆ 3
--------------
ಚಿದಾನಂದ ಅವಧೂತರು
ನೋಡು ಮನವೆ ನಿನ್ನೊಳಾಡುವ ಹಂಸ ಇಡಾಪಿಂಗಳ ಮಧ್ಯನಾಡಿವಿಡಿದು ಧ್ರುವ ಆಧಾರವಂ ಬಲಿದು ಸ್ವಾಧಿಷ್ಠಾನವ ದಾಟಿ ಹಾದಿವಿಡಿದು ನೋಡು ಮಣಿಪುರದ ಒದಗಿ ಕುಡುವ ಅನಾಹತ ಹೃದಯಸ್ಥಾನವ ಸಾಧಿಸಿ ನೋಡುವದು ವಿಶುದ್ಧವ 1 ಭೇದಿಸಿ ನೋಡುವದಾಜ್ಞಾಚಕ್ರ ದ್ವಿದಳ ಸಾಧಿಸುವದು ಸುಖ ಸಾಧುಜನ ಅಧರದಲಿಹ್ಯ ತಾ ಆಧಿಷ್ಠಾನವ ನೋಡು ಆಧಿಪತಿ ಆಗಿಹಾಧೀನ ದೈವವ 2 ಮ್ಯಾಲಿಹ್ಯ ಬ್ರಹ್ಮಾಂಡ ಸಹಸ್ರದಳ ಕಮಲ ಹೊಳೆಯುತಿಹ ಭಾಸ್ಕರ ಪ್ರಭೆಯ ಕೂಡಿ ಮೂಲಸ್ಥಾನದ ನಿಜ ನೆಲೆ ನಿಭವ ನೋಡುವ ಬಾಲಕನೊಡೆಯ ಮಹಿಪತಿ ಸ್ವಾಮಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡು ಮನವೆ ನಿನ್ನೊಳಾತ್ಮನ ನೋಡು ಮನವೆ ಧ್ರುವ ಸಾಧುಸಂಗವ ನೀ ಮಾಡಿ ಭೇದ ಬುದ್ಧಿಯ ಹೋಗಾಡಿ ಆದಿತತ್ವವ ನೀ ನೋಡಿ ಸದಮಲಾನಂದ ಕೂಡಿ1 ಕಾಮಕ್ರೋಧವ ಕಳೆದು ಮಮತಾ ಮಾಯವನಳಿದು ತಾಪ ತೊಳೆದು ಶಮದಮಾದಿ ತಿಳಿದು 2 ನಾನು ನೀನೆಂಬುದು ನೀಗಿ ಜ್ಞಾನದಿಂದ ಗುಪ್ತನಾಗಿ ಭಾನುಕೋಟಿತೇಜನಂಘ್ರಿ ಬೆರೆದು ನಿಶ್ಚಿಂತನಾಗಿ 3 ಅವಿದ್ಯುಪಾಧಿಯ ಜರಿದು ಮೂವಿಧ ಮದ ಮುರಿದು ಪವಿತ್ರ ಪ್ರಣವರಿದು ಸುವಿದ್ಯ ಸುಖಬೆರೆದು 4 ಬಾಹ್ಯಾಂತ್ರದೊಳಿಹ ಪೂರ್ಣ ಮಹಾಗುರುನಿರಂಜನ ಇಹ ಪರತ್ರ ಸಾಧನ ಮಹಿಪತಿ ಅಂತರಾತ್ಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡು ಮನವೆ ವರಯತಿಯಾ | ನಡೆ | ನೋಡು ಸದ್ಭಾವದಿಂದಲಿ ಮಹಿಪತಿಯಾ ಪ ದುರುಳ ದುರ್ಜನರನು ಶಿಕ್ಷಿಸಲಾಗಿ | ಭೋಗಿ 1 ಕೆಲವು ದುಷ್ಕರ್ಮ ಮಾಡಿದಾ ಫಲದಿ | ದೊಲವಿಲಿ ತಾರಿಸುತಿಹನು ಭರದಿ 2 ಹರುಷದಿ ಲೋಲ್ಯಾಡುತಿಹಾನಂದದೊಳು | ಕೃಷ್ಣನ ಜೀವ ಜೀವಾಳು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡುವ ಬನ್ನಿ ಸ್ವಾಮಿಯ ಅಂತರ್ಯಾಮಿಯ ಭಕ್ತಿಯ ದೃಢಯುಕ್ತಿಯ 1 ದೇವದೇವನ ಪೂರ್ಣ ನೋಡುವ ಸೇವೆಮಾಡುವ ಸರ್ವದಾ ಕೊಂಡಾಡುವ ನವವಿಧ ಭಕ್ತಿಯ ಮಾಡುವ ಭಾವವಿಡುವ 2 ತನು ಮನಧನ ಅರ್ಪಿಸಿ ಬಿಡುವ ಮನಗೂಡುವ ಪ್ರಾಣಾಯಾಮ ಮಾಡುವ ಅನುದಿನ ಸಾಧಿಸಿ ನೋಡುವ ಘನಗೂಡುವ 3 ಇಡಾಪಿಂಗಳ ಮಧ್ಯ ನೋಡುವ ನಡೆವಿಡುವ ನಡುಹಾದಿಗೂಡುವ ಒಡನೆ ಸ್ವಸುಖ ಪಡೆವ ಗೂಢ ನೋಡುವ 4 ಸವಿಸುಖಸಾರ ಸುರುತದೆ ದ್ರವಿಸುತದೆ ಠವಠವಿಸುತದೆ ರವಿಕೋಟಿಪ್ರಭೆ ಭಾಸುತದೆ ಆವಾಗಲ್ಯದೆ 5 ಏನೆಂದನಬೇಕನುಭವ ಖೂನದೋರುವ ಘನ ಮಳೆಗರೆವ ಸ್ವಾನುಭವದಲಿ ಸೇವಿಸುವ ಅನುಸರಿಸುವ 6 ಜಾಗಿಸುತ್ತದೆ ವಸ್ತುಮಯ ಬಗೆಬಗೆಯ ಯೋಗ ಇದೆ ನಿಶ್ಚಯ ಸುಗಮಸಾಧನ ಮಹಿಪತಿಯ ಸುಜ್ಞಾನೋದಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡುವರೇ ಅಂತವಾ|ನೋಡುವರೇ| ಮೂಢ ಪಾಮರನೆಂದುದ್ದರಿಸದೇ ಸುಮ್ಮನೇ ತಾಕೂಡುವುದೇ ಪ ಜ್ಞಾನ ಧ್ಯಾನ ಮೌನವರಿಯೆ|ಪೂಜೆಯ ನಾ ಮಾಡುವರೇ| ಗಾನ ಮಾನ ಏನೂ ಅರಿಯೆ|ಸ್ತುತಿ ಸ್ತವನ ಪಾಡುವರೇ?1 ಚತುರ ಉತ್ತರ ಮಾತುಗಳರಿಯೆ|ಸತ್ಸಂಗದಿ ಕೂಡುವರೇ| ಇತರ ಯಾತರ ಆತುರನರಿಯೆ|ವರಗಳನಾ ಬೇಡುವರೇ 2 ಹಾವ ಭಾವ ಭಕ್ತಿಗಳರಿಯೇ|ಛಲ ಬಿಂಕವ ಹಿಡಿವರೇ| ದೇವಕಾವುದು ಮಹಿಪತಿ ಸುತ ಪ್ರಭುತವ ದಾಸನ ಮಾಡುವರೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು