ಒಟ್ಟು 4153 ಕಡೆಗಳಲ್ಲಿ , 122 ದಾಸರು , 2491 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ಹದಿನಾಲ್ಕು ಲೋಕದ ದೊರೆಯೆ ಪ ಕಮಲ ಷಟ್ ಚರಣನೆನಿಸಿ ಎನ್ನ ಪೊರೆವುದು ಸಂತತ ಅ.ಪ ವೀರಭಕ್ತ ಪ್ರಹ್ಲಾದ ವರದ ಕರುಣಾರಸ ಪರಿಪೂರ್ಣ ಭವ ಸನ್ನುತ ಚಾರ ಚರಣನಳಿನ ಸಾರಿದ ಪ್ರಣತ ಜನಾರ್ತಿನಿವಾರಣ ಘೋರದುರಿತ ಮದಗಜ ಪಂಚಾನನ ನಾರದ ಮುನಿವರ ಸೇವಿತ ಚರಣ ಸಾರಸಾಕ್ಷಿ ಶ್ರೀ ಕರಿಗಿರಿ ನಿಕೇತನ 1
--------------
ವರಾವಾಣಿರಾಮರಾಯದಾಸರು
ಹರಿಯೇ ಎನ್ನ | ಮರೆತಿರುವರೆ ಇದು ಸರಿಯೇ ಪಾಲಿಸು ನೀ ದೊರೆಯೇ | ತರಳತನದಿ ನಾ ಮರೆತೆನೆಂದು ನೀ ಜರೆದು ಬಿಟ್ಟರೆ ಮುಂದೆ ಪೊರೆವರಾರೈ ಶ್ರೀ ಪ ಒಡೆಯ ನೀನಾಗಿ ಸಲಹುವುದೀಗ ನಿನ್ನಯ ಪದ ಜಡಜಕೆರಗುವೆ ನಾ ಬೇಗ ಕಡು ದಾರಿದ್ರ್ಯದ ಕಡಲೊಳು ಮುಳುಗಿದೆ ತಡಿಯ ಕಾಣಿಸೋ ಜಗದೊಡೆಯ ದಯದಿ ಶ್ರೀ 1 ದುರುಳ ಬಾಧಿಸುತಿರೆ ಭರದೊಳಕ್ಷಯವಿತ್ತುದ್ಧರಿಸಲಿಲ್ಲವೆ ಶ್ರೀ 2 ಪರಮೇಷ್ಠಿ ಜನಕ ಶ್ರೀ 3 ತಂದೆ ನೀನಲ್ಲವೆ ಜಗದೀಶ ಪಾಲಿಸು ನಿನ್ನ ಕಂದನಲ್ಲವೆ ಸರ್ವೇಶ ಹಿಂದ ಮುಂದನಾನೊಂದನರಿಯೆ ದಯ ದಿಂದ ಕಾಯೋ ಮುಚುಕುಂದವರದ ಶ್ರೀ 4 ಮಂಗಲ ಪುರವಾಸ ಶ್ರೀ ವೆಂಕಟೇಶ | ಅಂಗಜ ಜನಕ ರಮೇಶ | ಮಂಗಲಾಂಗ ನಿನ್ನಂಘ್ರಿ ಸೇವಕರ ಸು-ಸಂಗವ ಪಾಲಿಸು ಗಂಗಾಜನಕ ಶ್ರೀ 5
--------------
ಅನ್ಯದಾಸರು
ಹರಿಯೇ ಎನ್ನ ಪ್ರಾಣಧೊರಿಯೆ ಹರಿಯೆ ಧ್ರುವ ಕರುಣಾನಂದ ಪೂರ್ಣ ವರಮುನಿಗಳ ಪ್ರಾಣ ಶರಣಜನರಾಭರಣ ಹರಿ ನಿಮ್ಮ ಚರಣ 1 ಭಂಜನ ದುರಿತ ವಿಧ್ವಂಸನ ಪರಮಸು ಸಾಧನ ಹರಿ ನಿಮ್ಮ ಕರುಣ 2 ಶಿರದಲಿಟ್ಟು ಆಭಯ ಹೊರಿಯೊ ಮಹಿಪತಿಯ ಕರುಣಿಸಿ ನಿಮ್ಮದಯ ಹರಿಯೊ ಭವಭಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯೇ ಪೊರೆಯದಿಹುದು ಸರಿಯೆ | ಎನ್ನ ಮರೆತೆ ಯಾತಕೊ ನಾನರಿಯೆ ಪ ಸೂಕರ ಯೋನಿಯಲಿ ಬಂದು | ನಾನು ಮನುಜನಾಗಿ ನಿಂದಿಹೆನಿಂದು ನಿನ ಬೇಡಿಕೊಂಬೆ ದಯಸಿಂಧು | ಎನ್ನ ಪುನಹ ಪುಟ್ಟಿಸಬೇಡವೆಂದು 1 ಮನಸು ವಚನ ಕಾಯಗಳಿಂದ | ನಿನ್ನ ಅನುಚರನಾಗಿಹೆ ಮುದದಿಂದ ದನುಜಾರಿ ಬಿಡಿಸೆನ್ನ ಬಂಧ | ಭವ- ಜನಿತವಾಗಿಹ ಜಾಲದಿಂದ 2 ಹಲವು ಮಾತೇಕೊ ಮಾಲೋಲ | ಮೌನಿ ಅಲವ ಬೋಧಾರ್ಚಿತ ಗೋಪಾಲ ಕಲುಷ ರಾಸಿಗಳನೆಲ್ಲ ಕಳೆದು ಸಲಹೈಯ್ಯಾ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಹರಿಸ್ಮರಣೆ ಪೂರಣ ಕರತನ್ನಿ ಧ್ರುವ ಕರತನ್ನಿರೊ ವರಗುರು ಕೃಪೆಯಿಂದ ಗುರುವರ ಮೂರುತಿ ಕರುಣಾನಂದ 1 ಕರುಣಿಸಿ ನೋಡಲು ಬಾಹುದು ಪುಣ್ಯ ಶರಣ ಜನರಿಗಿದು ತಾರ್ಕಣ್ಯ 2 ತಾರ್ಕಣ್ಯಂಬುದು ತರ್ಕರಹಿತ ಸರ್ಕನೆ ತಿಳಿವದು ತನ್ನೊಳು ಗುರುತ 3 ಗುರ್ತವಾಗಲು ನಿಜ ಹಿತಾರ್ಥ ಅರ್ತವಗಿದು ಸ್ವಸುಖ ಪರಮಾರ್ಥ 4 ಪರಮಾರ್ಥವು ಪರಗತಿ ಸಾಧನ ಪರಲೋಕಕೆ ಐದುವ ಸೊಪಾನ 5 ಸೋಪಾನವೆ ಸುಲ್ಲಭ ಸುಪಥ ಉಪಾಯದಲಿ ತಿಳಿಯಲು ಸ್ವಹಿತ 6 ಸ್ವಹಿತ ಮಾರಿಕೊಂಬುದೇ ಸುಖ ಸಾಹ್ಯ ಮಾಡುವ ಶ್ರೀ ಗುರುಕುಲತಿಲಕಾ 7 ಶ್ರೀಗುರು ಸೇವೆಯ ಮಾಡಿರೊ ಬ್ಯಾಗ ಜಗದೊಳಗಿದು ಮಹಾ ಪುಣ್ಯದ ಯೋಗ 8 ಯೋಗವೆ ಮಹಾ ನಿಜ ಭಕ್ತರ ಪ್ರಾಣ ಸುಗಮ ಸುಪಥ ಸದ್ಗತಿ ಸಾಧನ 9 ಸಾಧನ ಪಡೆವದು ಗುರುದಯ ಕರುಣ ಸದಮಲ ಸುಖ ಸುಜ್ಞಾನದ ಸ್ಪುರಣ10 ಸ್ಪುರಣ ಸುಫಲಿತ ಸುಜನರ ಹೃದಯ ಸುರ ಮುನಿ ಜನರಾನಂದದ ಉದಯ 11 ಉದಯವಾಯಿತು ಮಹಿಪತಿ ಮನದೊಳಗೆ ಸದೋದಿತವಾಯಿತು ಗುರುಕೃಪೆಲೆನಗೆ 12 ಎನ್ನೊಳು ದೋರಿತಾನಂದದಲಹರಿ ತನ್ನಿಂದಲಿ ತಾನೊಲಿದ ಶ್ರೀ ಹರಿ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹರಿಹರಾ | ಪಾಲಿಸೊ ಎನ್ನ | ಭವಹರಾ ಪ ಸುರರು ಭೂಸುರರೆಲ್ಲಕರವ ಮುಗಿದು ನಿನ್ನ ವರಗಳ ಬೇಡೋರು ಅ.ಪ. ಸಿರಿ | ಪತಿಯು ಮತ್ತೆ ಪಶುಪತಿಯಿಂದಲೂ ತಾನೂ | ಹತನಾಗದವನಂತೆ 1 ಪರ | ಮೇಷ್ಠಿ ಪಿತನೆ ನಮ್ಮಕಷ್ಟವ ಕಳೆದು ಸಂ | ತುಷ್ಟಿಯ ಪಡಿಸಯ್ಯ 2 ಸುರರ ಭೂಸುರರ ಜಂಗಳಿಯ | ನೋಡಿಪೊರೆವೆನೆಂದವರಿಗೆ ಅಭಯ | ವಿತ್ತುಹರಿಯು ತಾನೇ ರೂಪದ್ವಯ | ದಿಂದಹರಿಹರಾಭಿಧತಾನೆ ಖರೆಯ | ಆಹಸುರರು ರೂಪವ ನೋಡಿ | ಉರುತರದಾಶ್ಚರ್ಯಭರವಾ ಮೈಮರೆಯುತ | ಕರವನೆ ಮುಗಿದರು 3 ಕಾಲ ನಿರೀಕ್ಷಿಸುತ್ತಿದ್ದು | ಬಲ್ಕರಾಳ ರೂಪನ ತಾನು ಗೆದ್ದು | ತಲೆಕಾಲಿನೊಳಗೆ ಮೆಟ್ಟುತಿದ್ದೂ | ಪಾ-ತಾಳಕ್ಕವನ ತಾನು ಒದ್ದು | ಆಹಕಾಲಮೀರುವ ಮುನ್ನ | ಕೇಳಲೊ ವರವನ್ನೆಫಾಲಾಕ್ಷ ಹರಿಯನ್ನು | ಕೇಳಿದನೀಪರಿ 4 ಮಲ್ಲಮರ್ದನ ಗುರು | ಗೋವಿಂದ ವಿಠಲನು ಸಲ್ಲೀಸೂವ ಭಕ್ತ | ರೆಲ್ಲರಭೀಷ್ಟವ 5
--------------
ಗುರುಗೋವಿಂದವಿಠಲರು
ಹರಿಹರಿ ಎನ್ನಿ ಹರಿವದು ಪಾಪ ಧರೆಯೊಳು ಧರೆಯೊಳು ಕರಮುಗಿದು ಗುರುವಿಗೆ ಕೇಳುವುದು ಬಲುಮೇಲು ಧ್ರುವ ಮೂಢಗೆ ಉಪಾಯ ಹೇಳಿದರೆ ತಿಳುವದೆ ತಿಳುವದೆ ಖೋಡಿಗೆ ಸುಲಕ್ಷಣದ ಮಾತು ಹೊಳೆವದೆ 1 ಬಿಸಲು ಬೀಳುದೆ ಬೀಳುದೆ ಗೂಢ ಗುರುವಿನ ಮಾತಿದು ನಾಡಿಗೆ ತಿಳುವದೆ 2 ವಿಷ ಕಚ್ಚಿದ ಮನಕೆ ಸುಘನ ಭಾಸುದೆ ಭಾಸುದೆ ತುಸು ಝರಿ ಇಲ್ಲದೆ ಬಾವಿಲಿ ನೀರು ಸೂಸುದೆ ಸೂಸುದೆ 3 ಹಸಗೆಟ್ಟಹ್ಯ ಕುಕ್ಕಡಿನೂಲ್ಹಾಸಿಗೆ ಬಾಹುದೆ ಬಾಹುದೆ ಕಸಕಡ್ಡಿಲ್ಲದ ಮುಗಿಲೆಂದಿಗೆ ತಾ ಮಾಸುದೆ 4 ಮೀಸಲ ಮನ ಒಂದಾದರೆ ಸಾಕು ತಿಳಿಕೊಳ್ಳಿ ತಿಳಿಕೊಳ್ಳಿ ಭಾಸ್ಕರ ಗುರುರಾಯನ ಶ್ರೀಪಾದಕೆ ಬಲಗೊಳ್ಳಿ ಬಲಗೊಳ್ಳಿ 5 ಲೇಸಿನ ನಿಜಸುಖ ನೆರೆಗೊಳ್ಳು ಮಹಿಪತಿ ನಿನ್ನಲ್ಲಿ ನಿನ್ನಲ್ಲಿ ಹೇಸಿ ಮುಖದೋರದೆ ಹೋಗುವುದು ಭವದ ತಳ್ಳಿ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರೀ ಎನ್ನ ದೋಷವಳಿಯೊ ಪ ಕರಿವರದ ಕೃಪೆಮಾಡು ನಿತ್ಯಮಿತ್ರನೆ ಕೃಷ್ಣ ಅ.ಪ. ಬೇಲಿ ಎದ್ದು ಹೊಲವ ಮೆದ್ದರೆ ಬ್ಯಾರಿನ್ನು ಪಾಲಿಪರು ಯಾರೆಯ್ಯ ಶೀಲರೊಡೆಯ ಫಾಲಾಕ್ಷಸಖ ನಿನ್ನ ಅಚುಂಬಿತ ಕಾರುಣ್ಯ ಶ್ರೀಲಕ್ಷ್ಮೀ ಶ್ರುತಿ ರಾಸಿ ವರ್ಣಿಪರೊ ಗುಣನಿಧಿಯೆ 1 ಯಾತನೆಲ್ಹಣ್ಣಾದೆ ಪೂತನಿಯ ಅಸುಹರನೆ ಪಾತಕಕೆ ಕೊನೆಗಾಣೆ ಪಾರ್ಥಸೂತ ಆತ್ಮಬಂಧುವೆ ಇನ್ನು ತಡಮಾಡೆ ತಡಿಲಾರೆ ಪೂತನ ಮಾಡೆನ್ನ ಪ್ರಾಣೇಶ ಪ್ರಿಯಬಂಧು 2 ದೋಷಪುಂಜನು ನಾನು ಶೇಷಶಯನನೆ ಬಲ್ಲ ಪೋಷಕನು ನೀನೆಂದು ವೇದರಾಸಿ ಘೋಷಿಪವು ಅನವರತ ಕಾಪಾಡು ಶ್ರುತಿವಾಕು ದೋಷಕರ ಜಯೇಶವಿಠಲನೆ ಮೈದೋರು 3
--------------
ಜಯೇಶವಿಠಲ
ಹರುಷವಾಯಿತು ಮನಕೆ ಪ. ನಿರುತದಿ ಎನ್ನಯ ಹೃದಯದಲ್ಲೇ ನಿಂದು ಶ್ರೀ ಅನುದಿನ ಅ.ಪ. ತ್ರೇತ್ರಾಯುಗದಲಿ ಜನಿಸಿ ರಘುಪತಿಯ ದಾಸನೆಂದೆನಿಸೆ ಸೀತೆಗೆ ಉಂಗುರವಿತ್ತು ಶರಧಿಯ ಲಂಘಿಸಿ ಮಾತೆಯ ರತ್ನ ರಘುನಾಥ ಗೊಪ್ಪಿಸಿದೆಯೋ 1 ದ್ವಾಪರ ಯಗದಲಿ ಕುಂತಿಯ ಕುಮಾರನೆಂದೆನಿಸಿ ಪಾಪಿ ರಕ್ಕಸರನು ಸಂಹಾರ ಮಾಡಿ ಪ್ರಖ್ಯಾತಿಯ ಪಡೆದು ಭೀಮನೆಂದೆನಿಸಿ 2 ಮೂರನೆ ಅವತಾರದಿ ಮುನಿ ಮಧ್ವರೆಂದೆನಿಸಿ ಮಾರಮಣನ ಗುಣಗಳ ಪೊಗಳುತಲಿ ಮೂರುತಿ ರುಕ್ಮೀಣೀಶ ವಿಠಲನ ಕರುಣದಿ 3
--------------
ಗುಂಡಮ್ಮ
ಹರೇ ಶಂಕರ ಪಾರ್ವತೀವರ ಪಾಲಿಸು ನೀ ಎನ್ನ ಪ. ದುರಿತರಾಶಿಗಳ ದೂರಮಾಡು ಗಿರಿ- ವರ ಮಹಾನುಭಾವ ಶಿವಶಿವ ಅ.ಪ. ತ್ರಿಗುಣಾತ್ಮಕ ತ್ರಿದಶಾಲಯ ಪೂಜಿತ ನಿಗಮಾಗಮವಿನುತ ಅಗಜಾಲಿಂಗಿತ ಆಶೀವಿಷಧರ ಮೃಗಧರಾಂಕ ಚೂಡ ಹೃದ್ಗೂಢ 1 ಸರ್ವೋತ್ತಮ ಹರಿಯಹುದೆಂಬ ಜ್ಞಾನವ ಸರ್ವಕಾಲಕ್ಕೀಯೊ ದುರ್ಮತಗಳನೆಲ್ಲ ದೂರ ಮಾಡೊ ಕರಿ- ಚರ್ಮಾಂಬರಧರ ಪ್ರವೀರ 2 ಸಂಜೀವನ ಲಕ್ಷ್ಮೀನಾರಾಯಣ ಮಣಿ- ರಂಜಿತ ನಿರ್ಲೇಪ ಮಂಜುಳಕದಿರೆಯ ಮಂಜುನಾಥ ಭವ- ಭಂಜನ ಹರಿಪ್ರಿಯ ಜಯ ಜಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹಂಸವಾಹನಪಿತನೆ _ ಹಂಸಾ ಢಿಭಿಕವೈರಿ ಶೌರಿ _ ಬಾ ಬಾ ಬಾ ಪ ಸಾಸಿರನಾಮದೊಡೆಯ ವಾಸವವಿನುತನೆ ಲೇಸಾಗಿಸ್ತುತಿಸುವೆ _ಬಾ ಬಾ ಬಾ ಅ ವೇದಾವಕದ್ದಂಥ ಉದ್ದಂಡ ದೈತ್ಯನ ಮರ್ಧಿಸಿ ವೇದವ ತಂದು ವೇಧನ ಸಲಹಿದ ಮತ್ಸ್ಯ ಬಾ ಬಾ ಬಾ 1 ಸಿಂಧು ವಿನೊಳಗಿದ್ದ ಮಂದರಗಿರಿಯನ್ನು ಬಂದು ಬೆನ್ನಿಲಿಪೊತ್ತು ತಂದು ಪೀಯೂಷವ ಚಂದದಿ ಸಲಹಿದ ಕೂರ್ಮಸ್ವರೂಪನೆ _ ಬಾ ಬಾ ಬಾ 2 ಕನಕನೇತ್ರನ ಕೊಂದು ಕಾಂತೆಯಹಿಡಿದೆತ್ತಿ ಕನಕಗರ್ಭನಿಗೊಲಿದ ಕಾರುಣ್ಯನಿಧಿಚಂದ್ರ ಕ್ರೋಢ ಯಜ್ಞ ಸ್ವರೂಪನೆ _ ಬಾ ಬಾ ಬಾ 3 ತರುಳನಮೊರೆಕೇಳಿ ದುರುಳನ ಕರುಳನೆ ಬಗೆದು ಕೊರಳೊಳು ಕರುಳ ಧರಿಸಿ ಸುರರನ್ನು ಪೊರೆದಂಥ ಸರ್ವವ್ಯಾಪಿ ಕರುಣಿಯೆ ಮೂರ್ತಿ _ ಬಾ ಬಾ ಬಾ 4 ಅನುಜನ ಪೊರೆಯಲು ತನುವನು ಮರೆಸಿಕೊಂಡು ದಾನವನು ಬೇಡುತ ಬಲಿ ಯನು ತುಳಿದು ಪೊರೆದ ಘನ್ನ ಮಹಿಮ ವಟು ವಾ ಮನ ರೂಪಿಯೆ _ ಬಾ ಬಾ ಬಾ 5 ಕೊಡಲಿಯ ಪಿಡಿಯುತ ಒಡೆಯರ ತರಿದು ಕಡಿದು ಮಾತೆಯ ಪಿತ ನುಡಿಯನು ಸಲಿಸಿದ ಚಂಡವಿಕ್ರಮ ಮಹಿಮ ಭಾರ್ಗವ ಮೂರುತಿ _ ಬಾ ಬಾ ಬಾ 6 ಕಾಂತೆಯನೆಪದಿಂದ ಕದನವ ಹೂಡಿಕೊಂಡು ಅಂತಕಸದನಕೆ ಅರಿಗಳ ತಳ್ಳುತ ಶಾಂತತೆ ಬೀರಿಪೊರೆದ ದಶರಥ ರಾಮನೆ _ ಬಾ ಬಾ ಬಾ 7 ಚೋರತನದಿ ಬಲು ಬೆಣ್ಣೆಯ ಮೆಲ್ಲುತ ಜಾರತನದಿ ಋಷಿ ಸ್ತ್ರೀಯರಿಗೊಲಿದಂಥ ಮಾರಜನಕ ಶ್ರೀ ರುಕ್ಮಿಣಿ ಕೃಷ್ಣ _ ಬಾ ಬಾ ಬಾ 8 ವೇದಗೋಚರ ವಿಶ್ವ ವೇದ ಬಾಹ್ಯರಿಗೆಲ್ಲ ವೇದ ವಿರುದ್ಧವಾದ ವಾದಗಳ ತೋರಿ ನಿಂದು ಬೆತ್ತಲೆ ಮೆರದ ಬೌದ್ಧ ಸ್ವರೂಪನೆ _ ಬಾ ಬಾ ಬಾ 9 ಕಲಿಬಾಧೆ ಹೆಚ್ಚಾಗೆ ಕಲಿಯುಗ ಕೊನೆಯಲ್ಲಿ ಮಲಿನಾರ ಮರ್ಧಿಸಿ ಉಳಿಸಲು ಧರ್ಮವ ಚಲುವ ರಾಹುತನಾದ ಕಲ್ಕಿ ಸ್ವರೂಪನೆ _ ಬಾ ಬಾ ಬಾ 10 ಸತ್ಯಸಂಕಲ್ಪನೆ ನಿತ್ಯಸ್ವರೂಪನೆ ಉತ್ತಮನೀನೆಂದು ಒತ್ತೊತ್ತಿ ಪೊಗಳುವೆ ಭೃತ್ಯನು ನಿನ್ನವನು ಕಣ್ಣೆತ್ತಿ ನೋಡುತ _ ಬಾ ಬಾ ಬಾ11 ಏಕರೂಪನೆ ನಿನ್ನನೇಕ ರೂಪಂಗಳ ಸಾಕಲ್ಯದಿಂದಲಿ ಶ್ರೀಕಾಂತೆ ಅರಿಯಳು ಕಾಕುಮತಿಯು ನಾನು ಎಂತು ವರ್ಣಿಸಲಯ್ಯ _ ಬಾ ಬಾ ಬಾ12 ಪೂರ್ಣಸ್ವರೂಪನೆ _ ಪೂರ್ಣ ಗುಣಾಬ್ಧಿಯೆ ಪೂರ್ಣನಂದಾನೆ ಪೂರ್ಣ ಸ್ವತಂತ್ರನೆ ಪೂರ್ಣಬೋಧರ ಪೂರ್ಣ ಕರುಣಾವ ಬೀರಿಸು _ ಬಾ ಬಾ ಬಾ 13 ಮಾತುಮಾತಿಗೆ ನಿನ್ನ ನಾಮದಸ್ಮರಣೆಯ ನಿತ್ತು ಪಾಲಿಸು ಎನ್ನ ಮೃತ್ಯೋಪಮೃತ್ಯುವೆ ದೇವ ಭಕ್ತಿಭಾಗ್ಯವನಿತ್ತು ಮನ್ನಿಸಿ ಸಲಹುತ _ ಬಾ ಬಾ ಬಾ 14 ದೋಷದೂರನೆ ನಿನ್ನ ದಾಸನುನಾನಯ್ಯ ವಾಸವ ಜಯಮುನಿ ವಾತನೊಳ್ವಾಸಿಪ ಈಶ ಸಿರಿಕೃಷ್ಣ ವಿಠಲರಾಯನೆ ಬೇಗ ಬಾ ಬಾ ಬಾ 15
--------------
ಕೃಷ್ಣವಿಠಲದಾಸರು
ಹಸ್ತವ ಕರುಣಿಸು ವಿಸ್ತಾರ ಮಹಿಮದ ಪ ಹಸ್ತವ ಕರುಣಿಸೋ ರಂಗಯ್ಯ ಹಸ್ತ ಕರುಣಿಸೆನ್ನ ಮಸ್ತಕದ ಮೇಲೆ ಹಸ್ತವ ಕರುಣಿಸೊ ಅ.ಪ ಸೋಮಕಾಸುರನ ವಧಿಸಿ ವೇದತಂದ ಹಸ್ತವ ಕರುಣಿಸೋ ರಂಗಯ್ಯ ತಾಮಸ ದೈತ್ಯನ ಉದರವ ಬಗಿದ ಹಸ್ತವ ಕರುಣಿಸೊ ರಂಗಯ್ಯ ಭೂಮಿಭಾರ ಶಿವಧನುವನು ಮುರಿದ ಹಸ್ತವ ಕರುಣಿಸೊ 1 ಎಸೆದು ಬಾಣ ವಾಲಿಗಭಯ ಪಾಲಿಸಿದ ಹಸ್ತವ ಕರುಣಿಸೋ ರಂಗಯ್ಯ ಅಸಮಮೂರುತಿಗೆ ಒಸೆದು ಉಂಗುರವಿತ್ತ ಹಸ್ತವ ಕರುಣಿಸೊ ಅಸುರನಿಗೊಲಿದು ಸ್ಥಿರ ಮುಕುಟವನಿಟ್ಟ ಹಸ್ತವ ಕರುಣಿಸೋ ರಂಗಯ್ಯ ವಸುಧೆ ಭಾರಿಳುಹಲು ನಿರುತದಿಂದೆತ್ತಿದ ಹಸ್ತವ ಕರುಣಿಸೊ 2 ಸುರಗಣಕಮೃತ ಹರುಷದಿ ನೀಡಿದ ಹಸ್ತವ ಕರುಣಿಸೋ ರಂಗಯ್ಯ ಪರಮಗೋವರ್ಧನ ಗಿರಿಯೆನೆತ್ತಿದ ಹಸ್ತವ ಕರುಣಿಸೊ ಸಾರಸ ಗಂಧಿಯರುಟ್ಟಿರ್ದ ಸೀರೆಯ ಕದ್ದ ಹಸ್ತವ ಕರುಣಿಸೋ ರಂಗಯ್ಯ ಮೆರೆವ ರುಗ್ಮನ ಮಹಗರುವವ ಮುರಿದ ಹಸ್ತವ ಕರುಣಿಸೊ 3 ಜನನಿ ಜನಕರ ಸೆರೆಯನು ಬಿಡಿಸಿದ ಹಸ್ತವ ಕರುಣಿಸೋ ರಂಗಯ್ಯ ಜನನಿಮುಂದಾಡುತ ಕಡಗೋಲು ಪಿಡಿದ ಹಸ್ತವ ಕರುಣಿಸೊ ವರರುಗ್ಮಿಣಿಕೈಯ ಸರಸದಿ ಪಿಡಿದ ಹಸ್ತವ ಕರುಣಿಸೋ ರಂಗಯ್ಯ ನರಗೆ ಸಾರಥಿಯಾಗಿ ಕುದುರೆ ತಿರುವಿದ ಹಸ್ತವ ಕರುಣಿಸೊ 4 ವಿದುರನ ಮನೆಯಲಿ ಹಾಲೆತ್ತಿ ಕುಡಿದ ಹಸ್ತವ ಕರುಣಿಸೋ ರಂಗಯ್ಯ ಸುದತಿಗೆ ಮೆಚ್ಚಿ ಅಕ್ಷಯಾಂಬರವಿತ್ತ ಹಸ್ತವ ಕರುಣಿಸೊ ಮುದದಿ ಧ್ರುವಗೆ ಮೆಚ್ಚಿ ಸದಮಲ ಪದವಿತ್ತ ಹಸ್ತವ ಕರುಣಿಸೋ ರಂಗಯ್ಯ ಸುದಯದಿಂದ ಅಂಬರೀಷನುದ್ಧರಿಸಿದ ಹಸ್ತವ ಕರುಣಿಸೊ 5 ದಿನವಿರೆ ದಿನಮಣಿಯನು ಮಾಯಮಾಡಿದ ಹಸ್ತವ ಕರುಣಿಸೋ ರಂಗಯ್ಯ ರಣದಿ ಭಕ್ತರ ಶಿರ ಕನಿಕರದೆತ್ತಿದ ಹಸ್ತವ ಕರುಣಿಸೊ ಸೆಣದಾಡಿ ಭಕ್ತನಿಂ ದಣಿದು ಕಟ್ಟಿಸಿಕೊಂಡ ಹಸ್ತವ ಕರುಣಿಸೋ ರಂಗಯ್ಯ ಸನಕಾದಿಗಳು ಘನ ಅನಂದದ್ಹೊಗಳಿಸುವ ಹಸ್ತವ ಕರುಣಿಸೊ 6 ಫಡ ಫಡ ಎನ್ನುತ ತೊಡೆಯ ಚಪ್ಪರಿಸಿದ ಹಸ್ತವ ಕರುಣಿಸೋ ರಂಗಯ್ಯ ಬಿಡದೆ ಸೋಳಸಹಸ್ರ ಮಡದಿಯರ್ಹಿಡಿದ ಹಸ್ತವ ಕರುಣಿಸೊ ಅಡಿಯ ದಾಸರ ಪಿಡಿದಪ್ಪಿ ರಕ್ಷಿಸುವ ಹಸ್ತವ ಕರುಣಿಸೋ ರಂಗಯ್ಯ ಒಡೆಯ ಶ್ರೀರಾಮ ನಿನ್ನಡಿ ನಂಬಿ ಬೇಡುವೆ ಹಸ್ತವ ಕರುಣಿಸೊ 7
--------------
ರಾಮದಾಸರು
ಹಾಸ್ಯದ ಮಾತಿದು ಮಾನವಗೆ ವಿಷಯೇಚ್ಛೆಯ ಜೀವನವೆಂಬುದು ಶಾಶ್ವತ ಶಾಂತಿಯ ನೀಡುವ ನಿನ್ನಯ ಪದವನೆ ಮೆರೆತಿಹದು ಗುರುವೇ ಈಶ್ವರನೀತನೆಂದು ಸಾರಿತು ಶೃತಿ ಇದ ಕೇಳುತ ನಾ ಕರುಣಾ ನಿಧಿಯೇ ನಿನ್ನ ಹೊರತಿ ನ್ನನ್ಯರು ಗತಿಯಿಲ್ಲೆನ್ನುತ ನಾ ಚರಣಕಮಲಕೆ ಮೊರೆಹೊಕ್ಕೆ ಪರಮಾನಂದಾತ್ಮ ಸ್ವರೂಪದಾ ಅರಿವನು ನೀಡಿ ಪೊರೆವುದು ಎನ್ನಶಂಕರ ಗುರುದೇವಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು