ಒಟ್ಟು 472 ಕಡೆಗಳಲ್ಲಿ , 66 ದಾಸರು , 418 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿರ್ಮಲ ಹೃದಯ ಮಂಟಪದೊಳಗೆ ನಿಶ್ಚಲ ಮಣಿಯಿಟ್ಟುಧರ್ಮ ಪಟ್ಟಾವಳಿಯ ಹಸೆ ಹಾಸಿಧರ್ಮ ಪಟ್ಟಾವಳಿಯ ಹಸೆ ಹಾಸಿ ಮುಕ್ತಿಯನುಕರ್ಮ ಹರೆಯರು ಕರೆದರು 1 ಪರಮ ಪುರುಷ ಬಂದು ಪರಿಣಾಮದಿ ಕುಳಿತು ಇಹನುಪರಮ ಪಾವನೆ ಹಸೆಗೇಳುಪರಮ ಪಾವನೆ ಹಸೆಗೆ ಏಳೆಂದು ಮುಕ್ತಿಯನುಪರಮ ಶಾಂತಿಯರು ಕರೆದರು 2 ನಿತ್ಯತೃಪ್ತನು ಬಂದು ನಿಜದಲ್ಲಿ ಕುಳಿತಿಹನುನಿತ್ಯ ಆನಂದೆ ಹಸೆಗೆ ಏಳುನಿತ್ಯ ಆನಂದೆ ಹಸೆಗೆ ಏಳೆಂದು ಮುಕ್ತಿಯನುನಿತ್ಯ ಸತ್ಯೆಯರು ಕರೆದರು 3 ಮಂಗಳ ಮೂರುತಿ ಬಂದು ಮಂಗಳವಾಗಿ ಕುಳಿತಿಹನುಮಂಗಳ ಮುಖಿಯೇ ಹಸೆಗೇಳುಮಂಗಳ ಮುಖಿಯೇ ಹಸೆಗೇಳು ಎಂದು ಮುಕ್ತಿಯನುಮಂಗಳ ಮುಖಿಯರು ಕರೆದರು 4 ರೂಪ ರಹಿತನು ಬಂದು ರೂಪವಾಗಿ ಕುಳಿತಹನುರೂಪ ಮಹಾ ರೂಪೇ ಹಸೆಗೇಳುರೂಪ ಮಹಾ ರೂಪೇ ಹಸೆಗೇಳು ಎಂದು ಮುಕ್ತಿಯನುರೂಪವತಿಯರು ಕರೆದರು 5 ಅಚ್ಯುತನೆ ತಾ ಬಂದು ಅಚ್ಚಾರಿಯಲಿ ಕುಳಿತಿಹನುಅಚ್ಯುತ ರೂಪಳೆ ಹಸೆಗೇಳುಅಚ್ಯುತ ರೂಪಳೆ ಹಸೆಗೇಳೆಂದು ಮುಕ್ತಿಯನುನಿಶ್ಚಿತ ಮತಿಯರು ಕರೆದರು 6 ಸಾಕ್ಷಿರೂಪನೆ ಬಂದು ಸಾಕ್ಷಾತ್ತು ಕುಳಿತಿಹನುಸಾಕ್ಷಿಭೂತಳೆ ನೀನು ಹಸೆಗೇಳು ಸಾಕ್ಷಿಭೂತಳೆ ನೀನು ಹಸೆಗೇಳೆಂದು ಮುಕ್ತಿಯನುಸೂಕ್ಷ್ಮಮತಿಯರು ಕರೆದರು7 ವೇದಾತೀತನೆ ವೇದ್ಯವಾಗಿ ಕುಳಿತಿಹನುವೇದಮಾತೆಯೆ ನೀನು ಹಸೆಗೇಳುವೇದಮಾತೆಯೆ ನೀನು ಹಸೆಗೆ ಏಳೆಂದು ಮುಕ್ತಿಯನುವೇದಸ್ಮøತಿಯರು ಕರೆದರು8 ಜ್ಯೋತಿ ಚಿದಾನಂದನೆ ಬಂದು ಜೋಕೆಯಲಿ ಕುಳಿತಿಹನುಜ್ಯೋತಿ ಪ್ರದೀಪೆಯೇ ಹಸೆಗೇಳುಜ್ಯೋತಿ ಪ್ರದೀಪೆಯೇ ಹಸೆಗೇಳು ಏಳೆಂದು ಮುಕ್ತಿಯನುಜ್ಯೋತಿರ್ಮತಿಯರು ಕರೆದರು 9
--------------
ಚಿದಾನಂದ ಅವಧೂತರು
ನೀನಹುದೊ ಎನ್ನ ಸ್ವಾಮಿ ಧ್ರುವ ಅನಾಥ ಬಂದು ನೀ ಙÁ್ಞನ ಶಿಖಾಮಣಿ ಧ್ಯಾನಕ ಸಾಧನಿ ನೀನೆ ಎನ್ನ ಗುರುಮುನಿ 1 ಜೀವಕ ಜೀವ ನೀ ಭಾವಕ ಭಾವ ನೀ ದೇವಾಧಿದೇವ ನೀ ಕಾವ ನೀನೆ ಕರುಣಿ ನೀ 2 ಬಾಹ್ಯಾಂತ್ರ ಪೂರ್ಣ ನೀ ಇಹಪರದಾತ ನೀ ಮಹಿಗೆ ಮಹೀಪತಿ ನೀ ಸಾಹ್ಯಮಾಡೊ ಸಗುಣಿ ನೀ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನು ಸರ್ವಜ್ಞನಾಗಿರಲು ನಿನ್ನಲಿ ಜನರು ಜಾಣತನ ತೋರಲಾಗುವುದೆ ಪವಮಾನ ಪ ಪ್ರಾಣಪತೇ ನಿನ್ನೊಲುಮೆ ಪಡೆದು ಸುಜನರು ದಿವ್ಯ ಸ್ಥಾನಗಳ ಪೊಂದಿ ಇಹಪರದಿ ಸುಖಿಸುವರು ಅ.ಪ ಧರ್ಮಯೋನಿಯ ಶಾಸನಗಳ ಸಂರಕ್ಷಣೆಯ ಕರ್ಮ ನಿನಗಲ್ಲದನ್ಯರಿಗೆ ತರವೆ ಕಿಮ್ಮೀರ ಕೀಚಕ ಜರಾಸಂಧ ಮೊದಲಾದ ಧರ್ಮಘಾತಕರ ಸದೆ ಬಡಿದ ಬಲಭೀಮ 1 ಜ್ಯೇóಷ್ಠನೆಂಬುವ ಮಮತೆ ತೊರೆದು ಧೈರ್ಯದಲಿ ಧೃತ ರಾಷ್ಟ್ರನಿಗೆ ಕಿಲುಬು ಕಾಸನು ಕೊಡದೆಲೆ ಭಾಗವತ ಧರ್ಮಗಳ ಹಂಚುವ ಹರಿಗೆ ಪ್ರೇಷ್ಟತಮ ನೀನಲ್ಲದನ್ಯರಾರಿಹರೊ 2 ನಿನ್ನ ಮತವೇ ಸಿರಿಯರಮಣನಿಗೆ ಸಮ್ಮತವು ನಿನ್ನ ದಯವೇ ಸಾಧು ಜನಕೆ ಅಭಯ ನಿನ್ನ ಮಾರ್ಗವ ನಂಬಿ ಧನ್ಯರಾಗುವರಲಿ ಪ್ರ ಸನ್ನನಾಗುವ ಹನುಮ ಭೀಮ ಮಧ್ವೇಶ 3
--------------
ವಿದ್ಯಾಪ್ರಸನ್ನತೀರ್ಥರು
ನೀನೆ ಗುರುವಾಗೆನಗೆ ಕೋನೇರಿವಾಸ ಙÁ್ಞನವಿಲ್ಲದ ಮನುಜ ತಾನಿದ್ದು ಫಲವೇನು ಪ ನಾಳವಿಲ್ಲದ ಘಂಟೆ ಭಾರವಾಗಿದ್ದರೇನು ತೋಳ ಬಲಹಿಲ್ಲದವ ದೊರೆಯಾದರೇನು ಹಾಳು ಭೂಮಿಯು ತನ್ನ ಮೂಲವಾದರೆಯೇನು ಬಾಳಲೀಸದ ಮನೆಯ ಬಲವಂತವೇನು 1 ತಿದ್ದಬಾರದ ತೇಜಿ ಉದ್ದವಾಗಿದ್ದರೇನು ಮೂರ್ತಿ ಮುದ್ದಾದರೇನು ಕದ್ದ ಕಳ್ಳನ ಮಾತು ಬದ್ಧವಾದರೆಯೇನು ಮದ್ದನರಿಯದೆ ಧಾತು ತಿಳಿದಿದ್ದರೇನು 2 ಗೊಡ್ಡು ದನವಿನ ಕ್ರಯವು ಅಡ್ಡವಾದರೆಯೇನು ಬಡ್ಡು ಅರಸಿನ ಬಂಟನೊಡ್ಡೊಕ್ಕರೇನು ಹೆಡ್ಡನಾದವ ಬಹಳ ಗಡ್ಡವಿರಿಸಿದರೇನು ಕಡ್ಡಾಯದಂಗಡಿಯಲಿದ್ದು ಫಲವೇನು3 ಒಕ್ಕಲಿಲ್ಲದ ಊರು ಮಕ್ಕಳಿಲ್ಲದ ಮನೆಯು ಅಕ್ಕರಿಲ್ಲದ ತವರು ಇದ್ದು ಫಲವೇನು ಚೊಕ್ಕ ಹೆಂಡತಿಯವಳ್ಗೆ ತಕ್ಕ ವರನಿಲ್ಲದಿರೆ ಕುಕ್ಕೆ ತುಂಬಿದ ರೊಕ್ಕವಿದ್ದು ಫಲವೇನು 4 ಬಡಿಗೆಯಿಲ್ಲದೆ ಚಿನ್ನ ಕಡಗವಾಗುವುದೇನೊ ಪೊಡವಿ ಕಡಿಯದೆ ಬೆಳೆಯ ನೆಡುವುದೇನೊ ಕಡಗೋಲು ಹೊರತಾಗಿ ಬೆಣ್ಣೆ ತೋರುವುದೇನೊ ತುಡುಬು ಬಡಿಯದೆ ಧ್ವನಿಯ ಕೊಡುವುದೇನೊ 5 ಅಡವಿಯೊಳಗಿಹ ವೇಣು ತಿದ್ದಿದರೆ ಮೈಗೊಟ್ಟು ಕಡುಹುಳ್ಳ ದೊರೆಗಳನು ಹೊರವುತಿಹುದು ಶುಕ ಪಕ್ಷಿಯನು ಅಡಗಿಸಿಯೆ ಹಾಲೆರೆದು ಒಡನೆ ಹೇಳಿದ ನುಡಿಯ ತಾ ನುಡಿವುದು 6 ಬಂಟ ಬಿಡದೆ ಸೇವೆಯ ಮಾಳ್ಪ ಮಡದಿ ತಾ ಚೆಲುವಾಗಿ ಅಡಿಗೆ ಮಾಡುವಳು ಕಡೆಯ ಕಾಲಕೆ ತನ್ನ ದೃಢ ಬುದ್ಧಿ ಹಿಂಗುವುದು ಒಡೆಯನನು ಭಜಿಸಲಿಕೆ ಮನವಿಲ್ಲವು 7 ಗುರುವಾಗು ಇಹಪರಕೆ ಸ್ಥಿರವಾದ ಸೌಖ್ಯವನು ಒರೆದು ಮಾರ್ಗವ ತೋರು ಉರಗಗಿರಿವಾಸ ಗುರುವೆಂದು ಭಾವಿಸಿಯೆ ಕರಮುಗಿದು ಶಿರಬಾಗಿ ಸರಸಿಜಾಂಘ್ರಿಯ ನೆನೆವೆ ವರಾಹತಿಮ್ಮಪ್ಪ 8
--------------
ವರಹತಿಮ್ಮಪ್ಪ
ನೀನೋಲಿದುದ್ದಕ್ಕೀ ಇಹ ಸೌಖ್ಯವೇಯಿನ್ನು ನಾನೊಲ್ಲೆ ನಾನೊಲ್ಲೆ ಸರ್ವೇಶಾ ಪ ನಿನ್ನನುರಾಗದಿ ಗತಿಯೆಂದು ನಂಬಿದ ಮಾನವನೊಡನೆ ನೀನಾಡುವದೆಲ್ಲಾ ಅ.ಪ ಷಡುರಸ ನಾನಾ ಸುಭೋಜನವ ಬಿಡಿಸಯ್ಯ ದಾನವ ಭಂಜನ ಒಡಲಿಗೋಸುಗ ನಿನ್ನನು ಸೇವಿಸುವೆ ತೋರಿಸದಿರೆ | ದಿವ್ಯಾಂಬರಗಳ ಉಡಿಸಿ ಸ್ವರ್ಣಾಭರಣಗಳ ತೊಡಿಸಿ | ಬರಿ ಮಾತಿನಲಿ ಮೊರೆ ಯಿಡುವೆನೊ ವಾಕ್ಕಾಯದಿಂದಲೀ 1 ಜನರು ಜನಪರಿಂದ ಮನ್ನಣೆ ಸ್ವಲ್ಪ | ಎನಗೆ ಹತ್ತದು ಕಾಣೊ ನಿನ್ನಾಣೆ || ಮನುಜನ ಸೈಸಿದವನ ಬಾಯೆನೆ ಬರೆವಾ | ವಿಭವ ದೊರೆಯದೆ | ಜನುಮದಲಿ ಬಂದದಕೆ ಮಹಾ ಸಾಧನವಿಧಾರಿ ತೋರಿಸಿ | ನಿನ್ನ ದಾಸನೆನಿಸದೆ | ನಿಸ್ಸಾರವೆಣಿಸಿ ತೋರ್ಪ ದೇವ ಸೈಸೈ 2 ಥಂಡ ಥsÀಂಡದಲೆನ್ನ ಮರುಗಿಸಿ | ಮಂಡಲದೊಳು ಪ್ರಚಂಡನೆನಿಸದಿರು | ಉಂಡ ಪರಾನ್ನಕೆ ದಂಡನೆ ಬಹಳಲ್ಲಿ | ತೊಂಡ ನಾನಯ್ಯ ಕರುಣಸಾಗರ | ಖಂಡ ಮತಿಯನು ಕೊಡದೆ ಮುಕ್ತರ | ಅಂಡ ಜಾಂಸಗ ವಿಜಯವಿಠ್ಠಲಾ 3
--------------
ವಿಜಯದಾಸ
ನೀನ್ಯಾಕೊ ನಿನ್ನ ಗೊಡಿವ್ಯಾಕೊ ಹನುಮೇಶ ಪ ಅನ್ಯಮತಿ ಪೊಂದಿ ಮಿಥ್ಯಾಜ್ಞಾನಿಯಾಗದೆ ಪಾದ ಪೊಂದಿದ್ದರೆ ಸಾಕೊ ಅ.ಪ ಜೀವೋತ್ತಮರ ಭಾವವನನುಸರಿಸಿ ನೋವಾಗುವ ಮಾರ್ಗವ ಜರಿದು ಭಾವಜನಯ್ಯ ನಿನ್ನ ಭಾವವ ಕಂಡು ಆವಾಗಲು ಸುಖಿಪರ ಗೃಹ ಕಾವನಾದರೆ ಸಾಕು 1 ದೇಹಸ್ಥಿರವಲ್ಲ ದಹನಶೀಲಭವ ಇಹಸುಖ ಹೇಯವೆಂದು ಮೋಹಪಾಶಕೆ ಸಿಗಿಸದೆ ನಿನ್ನನುಪಮ ಮಹಿಮೆಗಳ ಕೇಳುತ ಆನಂದವಾದರೆ ಸಾಕು 2 ಮೋದತೀರ್ಥರೆ ಸದ್ಗುರು ಭೇದ ಜ್ಞಾನವೆ ಗತಿಪ್ರದ ವೇದ ಸಚ್ಛಾಸ್ತ್ರಂಗಳೆ ಸತ್ಯ ತಿಳಿದು ಆದಿ ವಿಜಯ ರಾಮಚಂದ್ರವಿಠಲನೆ ಅಗಾಧಮಹಿಮ ಮಮ ಪ್ರೀಯನೆಂಬ ಭಕ್ತಿ ಇತ್ತರೆ ಸಾಕೊ3
--------------
ವಿಜಯ ರಾಮಚಂದ್ರವಿಠಲ
ನೆಲೆಯು ನೋಡಿ ಧ್ರುವ ಕರ್ಮಕ ಮಂದದಿ ಸಿಲುಕಲಿ ಬ್ಯಾಡಿ ವರ್ಮನರುವ್ಹ ಗುರುಯೋಗ ಧರ್ಮವ ಮಾಡಿ ನಿರ್ಮನದಲಿ ನಿಜಘನ ಬೆರೆದಾಡಿ ನಿರ್ಮಳ ನಿಶ್ಚಳ ನಿರ್ಗುಣ ಆತ್ಮನ ಕೂಡಿ 1 ಅನುದಿನ ಅನುಭವಾಮೃತವನು ಸೂರ್ಯಾಡಿ ತನುಮನಧನ ಶ್ರೀಗುರುವಿನರ್ಪಣೆ ಮಾಡಿ ಅನುಭವದಲಿ ಆತ್ಮದ ನೆಲೆನಿಭ ನೋಡಿ ಘನಬ್ರಹ್ಮಾನಂದದ ಸುಖದಲಿ ಲೋಲ್ಯಾಡಿ2 ಮಹಾಮಹಿಮನ ಸುಸೇವೆಯ ಮಾಡಿ ಮಹಿಪತಿ ಒಡಿಯನ ಶ್ರೀಪಾದವ ನೋಡಿ ಇಹಪರ ಸಾಯೋಜ್ಯ ಸದ್ಗತಿ ಮುಕ್ತಿಯ ಕೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡು ಮನವೆ ನಿನ್ನೊಳಾತ್ಮನ ನೋಡು ಮನವೆ ಧ್ರುವ ಸಾಧುಸಂಗವ ನೀ ಮಾಡಿ ಭೇದ ಬುದ್ಧಿಯ ಹೋಗಾಡಿ ಆದಿತತ್ವವ ನೀ ನೋಡಿ ಸದಮಲಾನಂದ ಕೂಡಿ1 ಕಾಮಕ್ರೋಧವ ಕಳೆದು ಮಮತಾ ಮಾಯವನಳಿದು ತಾಪ ತೊಳೆದು ಶಮದಮಾದಿ ತಿಳಿದು 2 ನಾನು ನೀನೆಂಬುದು ನೀಗಿ ಜ್ಞಾನದಿಂದ ಗುಪ್ತನಾಗಿ ಭಾನುಕೋಟಿತೇಜನಂಘ್ರಿ ಬೆರೆದು ನಿಶ್ಚಿಂತನಾಗಿ 3 ಅವಿದ್ಯುಪಾಧಿಯ ಜರಿದು ಮೂವಿಧ ಮದ ಮುರಿದು ಪವಿತ್ರ ಪ್ರಣವರಿದು ಸುವಿದ್ಯ ಸುಖಬೆರೆದು 4 ಬಾಹ್ಯಾಂತ್ರದೊಳಿಹ ಪೂರ್ಣ ಮಹಾಗುರುನಿರಂಜನ ಇಹ ಪರತ್ರ ಸಾಧನ ಮಹಿಪತಿ ಅಂತರಾತ್ಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡೆಲೆ ಸುಮತಿ ಪೆಣ್ಮಣಿಗೊಲಿದ ಗಾಡಿಗಾರ ಚೋರ ರೂಢಿಗೆ ರಂಗ ಪ. ಈಡುಂಟೇ ಶತ ಜೋಡಿಶೆ ಶಿಶುಗಳ ಬೇಡ ಪಂಥ ನಿನ್ನ ಬೇಡಿಕೊಂಬೆನೆ ಕುಮತಿಅ.ಪ. ಅಪ್ರಾಮೇಯನ ಗುಡಿಯೊಳಗಿದನೆ ಸುಪ್ರಕಾಶ ಎನ್ನಪ್ಪಾ ಮುಂಗುರುಳುಗಳೊ ಳೊಪ್ಪುತಲಿಹನೆ ಬೆಡಗಿಂದೊಡನೆ ಅಪ್ಪನ ಬ್ರಹ್ಮಗಂಟುಡಿದಾರ ಉಡುಗೆಜ್ಜೆ ಬೊಮ್ಮ ನಪ್ಪ ಅಂಬೆಗಾಲಿಕ್ಕಿ ನೆಲಸಿಹನೆ ಕಂ ದರ್ಪ ಕೋಟಿ ತೇಜದಿ ಮೆರೆವನ 1 ಅರವಿಂದದಳ ವೆಂಕಟನಿರುವಲ್ಲೆ ತಿರುಮಲ ನಾರಾಯಣ ಚರಿತಾಪ್ರಮೇಯ ಚೆÉನ್ನಪಟ್ಟಣ ತೀರ ಮುಳೂರಲ್ಲೆ ಸರಸ ಸಂಚರಿಸುವ ವರ ಚೈತ್ರದ ರಥ ಅರಿವಿಲ್ಲವೆ ಕಣ್ತೆರೆದು ನೋಳ್ಪರಿಗೆ ದುರಿತ ದೂರ ಕಣಿ ವರಪ್ರದ ದೇವ ಅರಿದವರಿಗೆ ಕಣ್ ತೆರೆವನು ದೇವ ನೋಡೆ 2 ಅಪ್ಪ ಕೃಷ್ಣಗೆ ಬೆಣ್ಣೆ ಹಣ್ಣನುಗೊಡಲು ಇಪ್ಪನೆ ತನಯರನು ಸುತ್ತೇಳು ಲೋಕದಿ ನೋಡಲು ಇಲ್ಲೆಲ್ಲೆಲ್ಲೂ ಶಿಶು ಇಹನಲ್ಲೇ ಅಪ್ಪ ಶ್ರೀ ಶ್ರೀನಿವಾಸ ಒಪ್ಪನೋ ತಪ್ಪನೆಲ್ಲವಪ್ಪಿಪ್ಪನೊ ಕರುಣವ ಸರ್ಪಶಯನ ತಿಮ್ಮಪ್ಪನ ಕರುಣ ಒಪ್ಪ ತೆರದಿ ಸ್ತುತಿ ಮಾಡುವ ಬಾರೆ 3
--------------
ಸರಸ್ವತಿ ಬಾಯಿ
ಪಂಚರೂಪಾತ್ಮಕ ನೀನೇ ಈ ಪಾಂಚಭೌತಿಕ ದೇಹದಿ ಸಂಚರಿಸೂವೆ ಪ ಸ್ಥೂಲರಸವನು ಇತ್ತು ಸಲಹೂವೆ ಅ.ಪ ರಸಪಾಯುಆಪಜಿಹೆÀ್ವನಾಸಿಕ ಗಂಧ ಪೃಥುವಿ ಉಪಸ್ಥಯುಕ್ತ ಕೋಶವಹುದಯ್ಯ ಆ ಶನೈಶ್ವರ ವರುಣ ಭೂದೇವಿಯಿಂದಲಿ ಸೇವಿಪ ಸತತ ಲೇಶವಾದರು ಬಿಡದೆ ತಾ ಖಂಡಾಖಂಡ ರೂಪದಿ ದೇಶ ಕಾಲಗಳಲ್ಲಿ ನೆಲೆಸಿ ಕೋಶಕಾರ್ಯವ ಗೈವೆ ಪ್ರಾಣನಿಂ ಉಭಯಪಕ್ಷಗಳು ಧೇನಿಸುತಿಹರು ಭುಜದ್ವಯ ಶ್ರೀಶ ನಿನ್ನಯ ಮಧ್ಯದೇಶವೆ ಈ ಶರೀರದÀ ಮಧ್ಯಭಾಗವು ಪ್ರಸಿದ್ಧ ಪುರುಷನೆ ನಿನ್ನಿಂದೋಷಧಿಗಳು ಓಷಧಿಗಳಿಂದನ್ನವೆಲ್ಲವು ಪೋಷಣೆ ಎಲ್ಲ ಅನ್ನದಿಂದಲೆ ದೋಷದೂರ ನೀನನ್ನದನ್ನದಾ1 ಪಾಣಿತ್ವಗ್ವಾಯು ಸ್ಪರ್ಶ ನೇತ್ರ ತೇಜ ಪಾದರೂಪಗಳಿಂದಲಿ ಕಾಣಿಸಿಕೊಳ್ಳುವುದು ಪ್ರಾಣಮಯದ ಕೋಶವು ತಾನಲ್ಲಿಹ ಪ್ರದ್ಯುಮ್ನ ಮೂರುತಿ ಸತತ-ಗಣಪತಿ ಅಗ್ನಿ ವಾಯು ಮರೀಚಿಗಳೆಲ್ಲರೂ ಸನ್ನುತಿಪರೋ ಪ್ರಾಣಾಧಾರನಾಗಿಹೆ ತ್ರಾಣ ನಿನ್ನಿಂದ ಸ್ಥೂಲದೇಹಕೆ ಅ- ಪಾನ ನಿಂದೊಡಗೂಡಿ ನೆಲೆಸಿಹೆ ಪ್ರಾಣಪತಿ ಪ್ರದ್ಯುಮ್ನ ನಿನ್ನಯ ಶಿರದ ಸ್ಥಾನವು ಪ್ರಾಣನಲ್ಲಿಹುದೋ ದಕ್ಷಿಣೋತ್ತರಪಕ್ಷವಿರುತಿಹುದೋ ಕಾಣಿಪುದು ಮಧ್ಯದೇಶವು ಆಗಸದೊಳು ಉ- ದಾನ ವಾಯುವಿನಲ್ಲಿ ಇರುತಿಹುದೋ ಧೇನಿಪೋರು ಪೃಥುವಿಯು ಪಾದವೆಂಬುದು ಸ- ಮಾನ ವಾಯುವಿನಲಿ ಇರುತಿಹುದು ಜ್ಞಾನ ರೂಪದಿ ಈ ಪರಿಯಲಿ ರೂಪವಿರುತಿಹುದು ಪ್ರಾಣಿಗಳಿಗಾಯುಷ್ಯವಿತ್ತು ಪ್ರಾಣಪ್ರೇರಕನಾಗಿ ಪೊರೆಯುವೆ ಪ್ರಾಣಧಾರಣೆ ನಿನ್ನದಯ್ಯಾ ಪ್ರಾಣನುತ ಪ್ರದ್ಯುಮ್ನಮೂರುತೆ2 ತತ್ವಯುತವಾಕ್ಯೋಕ್ತಾಗಸ ಶಬ್ದ ಈತೆರ ಯುಕ್ತವಾದೀ ಕೋಶವು ಇದಕೆ ಖ್ಯಾತವಾದ ಮನೋಮಯ ಕೋಶದೊಳು ಸತತ ರುದ್ರೇಂದ್ರಾದಿ ಸುರರೆಲ್ಲರು ವಂದಿಸುತಿಹರು ಖ್ಯಾತ ಸಂಕÀರುಷಣನೆ ಖಂಡಾಖಂಡರೂಪದಿ ನೆಲೆಸಿ ಕೋಶದಿ ಪ್ರೀತಿಯಿಂದಲಿ ವ್ಯಾನನೊಡಗೂಡಿ ನೀನೆ ಯಜ್ಞಭುಕುವು ಯಜುರ್ವೇದವೆ ನಿನ್ನ ಶಿರವಹುದು ಶ್ರುತಿಗಳೊಳು ಭುಜದ್ವಯಂಗಳಾಗಿಹುದು ನುತಿಪ ಪಾಂಚರಾತ್ರಾಗಮ ವೆಂಬುದೆ ನಾಮಕಂಗಳೆನಿಪುದೆ ನಿನ್ನ ಪಾದದ್ವಯಂಗಳು ಖ್ಯಾತ ನಿನ್ನಯ ರೂಪ ಮಹಿಮೆಯ ತಿಳಿಯಲಸದಳವೋ ಜಾತರಹಿತ ನಿನ್ನ ವರ್ಣಿಸೆ ಮಾತು ಮನಸಿಗೆ ನಿಲುಕದಂತಿಹೆ ಖ್ಯಾತ ನೀನಹುದೊ ಮನೋಮಯ ಪ್ರೀತಿಯಿಂದಲಿ ಸಲಹೋ ಎನ್ನನು 3 ಮಹತ್ತತ್ವ ಪ್ರಾಚುರ್ಯದಿಂದಿಹ ಈ ವಿಜ್ಞಾನಮಯಕೋಶದಿ ಶ್ರೀಹರಿ ವಾಸುದೇವಾ ನೀನೆ ನೆಲೆಸಿಹೆ ಅಹರಹ ಬ್ರಹ್ಮ ವಾಯುಗಳಿಂದಲಿ ಮಹಾಪೂಜೆ ವಂದನೆಗೊಳುತಿಹೆ- ಖಂಡಾಖಂಡದಿ ತುಂಬಿಹೆ ದೇಹದೊಳು ಉದಾನನಿಂದೊಡಗೂಡಿ ಸಹಾಯನಾಗಿಹೆ ಜೀವಿಗಳಿಗೆ ಬಾಹ ದುರಿತದಿಂ ಪಾರುಗಾಣಿಸೋ ದೇಹ ದೇಹಿಯ ರೂಪ ನೀ ಸ್ವಗತಭೇದವಿವರ್ಜಿತನೆ ಶಿರವೆ ನಿನ್ನಯ ಶ್ರದ್ಧವೆಂಬೊರು ಮಹಾ ಭುಜಂಗಳೆ ಋತುಸತ್ ಎಂದೆನಿಸಿಕೊಳುತಿಹುದು ಇಹುದು ಮಧ್ಯದೇಶವೆ ಜಗಕೆ ಆಶ್ರಯವೆನಿಪ ಯೋಗಾವು ಮಹವೆಂಬುದೆ ಪಾದವೆನಿಸಿತು ಸೂರ್ಯತೇಜದೊಳು ಮಹಾ ಪ್ರಳಯದಿ ಉದರದೊಳಿಟ್ಟು ಇಹಪರದಿ ರಕ್ಷಿಸುವೆ ದೇವ4 ನಂದಮಯ ಕೋಶವು ತನ್ಮಯ ಅವ್ಯಕ್ತತತ್ವದಿಂದಲಿ ನನ್ನೀಯಿಂದ ಆನಂದಮಯ ಮೂರುತಿ ನಾರಾಯಣನೀ ಕೋಶಾಂತರ್ಗತನು ನೀನೆ ಸಮಾನನೊಡಗೂಡಿಹೆ ಅನಾದಿಲಿಂಗವ ಭಂಗಗೈಸುವಳೋ ಘನಮಹಿಮ ನಿನ್ನ ಅನುಸರಿಸಿ ತಾನಿಪ್ಪಳೋ ಛಿನ್ನ ಭಕ್ತರಿಗೊಲಿಯಳೋ ಅವಿ ಚ್ಛಿನ್ನ ಭಕ್ತರ ಜನನಿ ಎನಿಪಳೋ ಪ್ರಾಪ್ಯನು ಎಂದು ಪ್ರಿಯವೆಂದು ಘನ ದಕ್ಷಿಣೋತ್ತರ ಪಕ್ಷವೆನಿಪೋವು ತನ್ನ ಮಧ್ಯದ ಪ್ರದೇಶವೆಂಬೋದು ಜ್ಞಾನ ಸುಖ ಆನಂದ ಪಾದಗಳು ಬ್ರಹ್ಮನಾಮಕ ವಾಯುವೆಂಬುವರೋ ಆನಂದಮೂರುತಿ ಮಹಿಮೆ ಎಂತಿಹುದೋ ಭಿನ್ನನಾಮದಿ ಕರೆಸುತಲಿ ತಾ ಅ ಭಿನ್ನನಾಗಿ ಚರಿಸಿ ಕೋಶದಿ ಘನಕಾರ್ಯವ ನಡೆಸುತಿರ್ಪೆ ಪನ್ನಗಾದ್ರಿ ಶ್ರೀ ವೇಂಕಟೇಶನೆ 5
--------------
ಉರಗಾದ್ರಿವಾಸವಿಠಲದಾಸರು
ಪಡಕೋ ನೀನ್ಹಿಡಕೋ ರಂಗ ಶಾಯಿನಾಮವ ಕಡಕೋ ನೀ ದುಡಕೋ ನಿಖಿಲೇಶನ ಪ್ರೇಮ ಪ ಜನಮೆಚ್ಚಿ ವಂದಿಸಲು ನಿನಗೆ ಬಂದದ್ದೇನೋ ಜನದೂಷಿಸಳಿದರೆ ನಿನಗೆ ಕುಂದೇನೋ ಮನಮೆಚ್ಚಿ ನಡೆದು ಬಿಡದನುದಿನದಿ ಗಳಿಸುವಿ ನೀ ಚಿನುಮಯ ಮನುಮುನಿವಿನಮಿತರ ಧ್ಯಾನ 1 ಅಹುದೆಂದು ಇಹ್ಯದವರು ಭವಬಂಧ ತೊಲಗಿಪರೆ ಸಹಿಸದೆ ಅಲ್ಲೆಂದು ಭವಕೆ ನೂಕುವರೆ ಕುಹುಕಿಗಳ ಎದೆಮೆಟ್ಟೆ ಸಹಿಸಿಬಂದ ನಿಂದೆಗಳ ಪಡಿ ದೃಢದಿ ಅಹಿಶಾಯೆ ಅಡಿಭಕ್ತಿ 2 ದೂಷಣ ಭೂಷಣನುಮೇಷ ಸಮಭಾವಿಸಿ ನಾಶನೆನಿಸುವ ಜಗದ ವಾಸನೆಯ ಕಡಿದು ದಾಸಜನರೊಡೆಯ ಮಮಶ್ರೀಶ ಶ್ರೀರಾಮನಡಿ ಧ್ಯಾಸದೊಳಗಿಟ್ಟುಪಡಿ ಲೇಸೆನಿಪ ಮುಕ್ತಿ 3
--------------
ರಾಮದಾಸರು
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪತಿ ಎನಿಸಿ | ವೀಣೆಯನು ಪಿಡಿಯುತ್ತಲೀ ||ಕ್ಷೋಣಿ ಬೆಳಗಾವಿ ಬ್ರಾಹ್ಮಣ | ಶ್ರೇಣಿಯಲಿ ನೀ ನಿಂತೆಯೋ ||ಕಾಣೆನೊ ನಿನಗೆಣೆಯ | ಕಾಣೆ ಕರುಣಿಗಳರಸ ಜ್ಞಾನಿ ಜನ ಮನೊವಾಂಛಿತಾ |ಮಾಣದಲೆ ನೀ ನೀವೆ | ಪ್ರಾಣ ಪದಕನೆ ಹನುಮಜ್ಞಾನ ಭಕುತಿಯ ಬೇಡುವೇ 1 ವಾತ ವ್ರಾತ ಕಿನ್ನಣೆಯುಂಟೆಮಾತುಳಾರಿಯ ದೂತ ಜಯೆ ಜಾತಾ ||ಸೋತು ಬಲು ಭವದೊಳಗೆ | ಆರ್ತನಾಗುತ ನಿನ್ನ ಕಾತುರೆತಲಿಂ ಪ್ರಾರ್ಥಿಪೇ 2 ವೃಂದಾವನಾರ್ಯರಿಂದ್ವಂದಿತವು ಎಂದೆನಿಪ ವೃಂದಾವನಿಲ್ಲಿ ಇಹುದೂ |ವೃಂದಾರ ಕೇಂದ್ರ ಜನ | ಬಂದಿಲ್ಲಿ ರಾಜರ |ವೃಂದಾವನರ್ಚಿಸುವರೋ |ನಂದನನು ದಶರಥಗೆ | ನಂದನನು ದೇವಕಿಗೆ | ನಂದನನು ಸತ್ಯವತಿಗೇ |ಒಂದೊಂದು ಹಯಶೀರ್ಷ | ಅಂದರೂಪಗಳಿಂದ ನಂದನನು ಭಕ್ತ ಜನಕೇ 3 ಜೀವಾಂತರಂಗದಲಿ | ಜೀವಾಂತರಾತ್ಮನನ ದ್ವೈವಿಧ್ಯ ರೂಪ ಸೇವಾ |ತಾವಕದಿ ನೀ ಮಾತರಿಶ್ವಾಖ್ಯನೆಂದೆನಿಸಿ ಸೇವಿಸುವೆ ಘರ್ಮೋಕ್ತದಿ ||ಜೀವ ಸಕಲೋತ್ತಮನೆ | ದಾವ ಶಿಖಿ ಭವವನಕೆದೇವ ಬಲಿಭುಜ ಮಾರುತೀ |ದೇವಾದಿ ವಂದ್ಯ ಗುರು | ಗೋವಿಂದ ವಿಠ್ಠಲನಭಾವದಲಿ ತೋರಿ ಪೊರೆಯೊ 4
--------------
ಗುರುಗೋವಿಂದವಿಠಲರು
ಪತ್ರ ಜಲದಂತೆ ಇಹ ಮಹಾತ್ಮರು ಬುದ್ಧಿ ಶಿಷ್ಯಂಗೆ ಹೇಳ್ವುದು ಹ್ಯಾಗೆಪತ್ರ ಜಲದಂತೆ ಇರುವವರ ವಿವರವ ಕಂಡದ್ದಪೇಳುವೆ ತಿಳಿದ್ಹಾಗೆ ಪ ಪರಮ ಶಿಷ್ಯರಿಗೆ ತತ್ವದ ಬೋಧೆ ಬೋಧಿಸಿಪರವಾಗಿಹರದು ಹ್ಯಾಗೆಹುರಿದ ಚಣಕ ತಿನಲಿಕೆ ಬಹುದಲ್ಲದೆ ಹುಟ್ಟುವಣಿಲ್ಲದ ಹಾಗೆ 1 ವೆಗ್ಗಳವಾಗಿಹ ತತ್ವಗ್ರಂಥವ ಹೇಳಿ ವಸ್ತುವಾಗಿರದು ಹ್ಯಾಗೆಬೊಗ್ಗೂವಡೆದ ಮಾಡಬಾಹಣವಲ್ಲದೆಬೊಗ್ಗೂ ಕಟ್ಟಿಗೆಯಾದ್ಹಾಗೆ 2 ಶಬ್ದಡಗಿದ ಚಿದಾನಂದ ಮಹಾತ್ಮರುಶಬ್ದವಾಡುವರದು ಹ್ಯಾಗೆಶಬ್ದವು ಗವಿಯಲ್ಲಿ ಮಾಡಲು ಮಾಡುವುದುಶಬ್ದವೀ ಗವಿಗಿಲ್ಲದ ಹಾಗೆ3
--------------
ಚಿದಾನಂದ ಅವಧೂತರು
ಪಂಥ ಬೇಡವೊ ಲಕ್ಷ್ಮಿಕಾಂತ ಎನ್ನಯ ಮನದ ಚಿಂತಿತಾರ್ಥವನೀಯೊ ಸಂತತಂ ಕಾಯೊ ಪ ಚರಣ ಕಮಲವ ಕಂಡು ಶರಣು ಹೊಕ್ಕೆನು ನಾನು ಕರುಣದಿಂದನುದಿನವು ಕಾಯಬೇಕೆನುತ ಸ್ಮರಣೆಪೂರ್ವಕವಾಗಿ ಹರಣವನೆ ಹರಸಿಹೆನು ಹರಿಣನೊಳು ಬಿಲುಗಾರ ಕರುಣ ಬಿಟ್ಟಂತೆ 1 ನರಜನ್ಮವೆಂಬುದಿದು ಕರಕಷ್ಟವಾಗಿರುವ ಉರಿಯ ಮನೆಯನು ಹೊಗುವ ತೆರನಲ್ಲವೆ ಪರಿಪರಿಯ ದುಃಖಗಳು ಬರುವ ಸಮಯಾಂತರದಿ ಮರೆಯಾಗದಿರು ಎನ್ನಸ್ಥಿರದಿ ಮೈದೋರು 2 ತಪ್ಪುಗಳು ಹೊರತಾಗಿ ಅಪ್ಪ ಸೇರುವುದುಂಟೆ ಒಪ್ಪುಗೊಂಬವರಾರು ಸರ್ಪಶಯನ ಬೊಪ್ಪ ಬಹ ದುರಿತಗಳ ತಪ್ಪಿಸಿಯೆ ಕಳೆದೆನ್ನ ಮುಪ್ಪುಗಳ ಪರಿಹರಿಸೊ ಅಪ್ಪಗಿರಿವಾಸ 3 ಉರಗ ಗಿರಿವಾಸ ನಿನ್ಸೆರಗವಿಡಿವೆನು ನಾನು ಕರಗಿ ಹೋಯಿತು ಇರವು ಕಾವರಿಲ್ಲ ಮರುಗಿದರೆ ಧೈರ್ಯವನು ತಿರುಗಿ ಹೇಳುವರಿಲ್ಲ ಕುರಿ(ಗಾ)ಯ್ವ ತೆರನಂತೆ ಕೈಗೆ ಸಿಲುಕಿದೆನು 4 ಇಹಪರದ ಸೌಖ್ಯಗಳ ಕರೆದಿತ್ತು ಕರವಿಡಿದು ಸಹವಾಸವಾಗಿರ್ದು ಸಲಹಿಕೊಂಡು ವಹಿಲದಲಿ ವರವೀವ ವರಾಹತಿಮ್ಮಪ್ಪ ಬಹುಭಾರವನು ತಾಳ್ದು ಸಲಹೆನಿಸೊ ನೀನು 5
--------------
ವರಹತಿಮ್ಮಪ್ಪ