ಒಟ್ಟು 1244 ಕಡೆಗಳಲ್ಲಿ , 86 ದಾಸರು , 932 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳು ಶ್ರೀನಿವಾಸ ಕಷ್ಟವ ತಾಳಲಾರೆ ಶ್ರೀಶ ಕಂಜಜೇಶ ಪ. ಮಾತ ಕೇಳದಿರುವ ಮನ ಬಹು ಕಾತರಗೊಂಡಿರುವ ರೀತಿಯಿಂದ ಬಹು ಸೋತೆನು ಷಡ್ರಿಪು ಜಾತ ಬಂಧಿಸಿರುವ 1 ಕಟ್ಟಿ ಸಹಿಸಲಾರೆ ಮೊದಲ ವಿಠಲ ನೀ ಕೈಬಿಟ್ಟರೆ ಮಾಜದು ಅಟ್ಟಹಾಸ ತೋರೆ 2 ಉದಯ ಮೊದಲುಗೊಂಡು ನಾನಾ ವಿಧದಲಿ ಭ್ರಮೆಗೊಂಡು ಸದಯ ನಿನ್ನ ಪಾದಾಬ್ಜ ನೆನೆಯದೆ ಚದುರೆಯ ಮನಗೊಂಡು 3 ನಿತ್ಯ ಕರ್ಮವೆಲ್ಲ ಕಂಬಳಿ ಬುತ್ತಿಯಾಯಿತಲ್ಲ ಕತ್ತರಿಸಿ ಬ್ರಹ್ಮೆತ್ತಿಯನ್ನು ಪುರು- ಸಿರಿನಲ್ಲ 4 ತಲ್ಲಣಗೊಳಿಸುವುದು ತುದಿಮೋದ- ಲಿಲ್ಲದೆ ದಣಿಸುವುದು ನಿಲ್ಲೆ ನಡೆಯ ಮಲಗೆಲ್ಯು ಬಿಡದು ದೂ- ರೆಲ್ಲು ಪೇಳಗೊಡದು 5 ಮೆಲ್ಲ ಮೆಲ್ಲನೆದ್ದು ನೀ ಮನ ದಲ್ಲಿ ಸೇರುತ್ತಿದ್ದು ನಿಲ್ಲಲು ತೀರಿತಲ್ಲದೆ ಲೋಕ ದೊಳಿಲ್ಲ ಬೇರೆ ಮದ್ದು 6 ನಿತ್ಯ ನಿನ್ನ ಮುಂದೆ ಸೇವಾ ವೃತ್ತಿ ಮಾಳ್ಪದೊಂದೆ ಎತ್ತಾರಕವೆಂದಾಶ್ರಯಿಸದೆ ಮೇ- ಲೊತ್ತಿ ಬೇಗ ತಂದೆ 7 ಭೃತ್ಯರ ಬಿಡನೆಂದು ಶ್ರುತಿ ಶಿರ ವೃತ್ತಿ ವಚನವೆಂದು ಸತ್ಯವೆಂದು ನಂಬಿದ ನೀನರಿಯೆಯ ಔತ್ತರೆಯ ಬಂಧು 8 ವಿಜಯಸೂತನಿಂದ ಪಾದವ ಭಜಿಸಿದ ಮ್ಯಾಲೆನ್ನ ನಿಜ ಜನದೊಳು ಸೇರಿಸುವುದು ಚಿತ ಸಾಮಜ ವರದನೆ ಮುನ್ನ 9 ಭವ ಪರಿಪಾಲ ಪಾಲಿಸು ವ್ರಜ ಯುವತಿ ಲೋಲಾ ಪಾದ ಪಂ- ಕಜ ಕೊಡು ಗೋಪಾಲ 10
--------------
ತುಪಾಕಿ ವೆಂಕಟರಮಣಾಚಾರ್ಯ
ಕೇಳೆ ಯಶೋದೆ ನಿನ್ನ ಮಗನ ಲೂಟಿಯಪ ತಾಳಲಾರೆವೆ ನಾವು ತರಳನ ದುಡುಕುಪೇಳಬಾರದೆ ಗೋಪಾಲಕೃಷ್ಣಗೆ ಬುದ್ಧಿಅಮ್ಮಾ-ಇದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕುಪಾಲು ಮೊಸರು ಬೆಣ್ಣೆಗಳ ಮೆದ್ದುಕೋಲಲಿ ನೀರ ಕೊಡಗಳೊಡೆದನೀಲವರ್ಣದ ದಿಟ್ಟ ನಿತ್ಯವೀ ಹೋರಾಟಬಾಲೆಯರಲ್ಲಿ ನೋಟ ಬಹಳ ಬಗೆಯಲ್ಲಿತಿಳಿದೆವೆಂದರೆ ಮೇಲೆ ಎಂಜಲುಗುಳಿ ಪೋದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನೊಳು ಜಲಕ್ರೀಡೆಯನಾಡಲುಚಿತ್ತಚೋರ ನಮ್ಮ ಸೀರೆಗಳೆಲ್ಲವಹೊತ್ತು ಕೊಂಡು ಮರವನೇರಿದಬತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಯುಕ್ತಿ ಬಹುಬಲ್ಲ ಹತ್ತಿಲಿ ಬಂದು ಕರವೆತ್ತಿ ಮುಗಿದರೆ ವಸ್ತ್ರ ಕೊಡುವೆನೆಂದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 2 ಸದ್ದು ಮಾಡದೆ ಸರಿ ಹೊತ್ತಿಲಿನಿದ್ದೆಗಣ್ಣಿಲಿ ನಾನಿರಲುಮುದ್ದು ಕೃಷ್ಣ ನಮ್ಮ ಮನೆಯವರಂತೆಮುದದಿಂದಲೆನ್ನನು ತಾ ಕೂಡಿದಎದ್ದು ನೋಡುವೆನಲ್ಲ ಆಹ ಏನೆಂಬುವರೆಲ್ಲಬುದ್ಧಿ ಮೋಸ ಬಂತಲ್ಲ ಪೊದ್ದಿ ಸಲ್ಲಿಸಿದೆಬುದ್ಧಿವಂತನೆಂದರೆ ಪರಿಹಾಸ್ಯ ಮಾಡಿ ನಗುವಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 3
--------------
ವ್ಯಾಸರಾಯರು
ಕೈಮುಗಿದು ಕೇಳಿಕೊಂಬೆ ಕರುಣಾಸಾಗರ ಶ್ರೀಕರ ಪ ಶ್ರೀಮನೋಹರ ಭಾವಿಸುತ್ತ ಭಕ್ತಿಯೀವುದೈ ಶುಭಕರ ಅ.ಪ ಕಣ್ಣ ತುಂಬ ನೋಡುವೆ ಚನ್ನ ಪಾದಯುಗಳ ನೀನಿಡುನಾ ನನ್ನಿಯಿಂ ನಮಿಪೆ ನಾರಾಯಣ 1 ಎನ್ನೊಳೆರಡು ಮಾತನಾಡು ಮೃದುನುಡಿ ಕೇಳುವೆ ಸಂ ಪನ್ನ ಕೃಪಾದೃಷ್ಟಿಯ ನೀಡು ಧನ್ಯನಾಗುವೆ ದೀನಬಂಧು2 ಬಾಲಗೋಪಾಲ ಲೀಲೆ ತೋರೋ ನಲಿಯುವೆ ಶ್ರೀಲೋಲ ಮುದ್ದಾಡುವೆ ಮುದ್ದು ಕೃಷ್ಣ3 ಎನ್ನ ಬಿನ್ನಪವ ಕೇಳು ಜನ್ಮ ಸಾರ್ಥಕವ ಮಾಡು ಇನ್ನು ಸಾವಕಾಶವೇಕೊ ಜಾಜೀಕೇಶವ ಸುವೈಭವ 4
--------------
ಶಾಮಶರ್ಮರು
ಕೈಲಾಸದ ಹುಲಿಯೇ ಕಲಿಕಲುಶವ ಕಳೆಯೊಕಾಳಿಯಾಗಿಳಿಯೇ ಪ ಕಾಲಕಾಲಕೆ ನಿನ್ನ ಕಾಲಿಗೆರಗುವೆ ಕರುಣಾಲಯತೋರೋ ಕರುಣಾಳುಗಳರಸನೆ ಅ.ಪ. ತುಳಸಿಗೆ ಕಳಸೀದರೆನ್ನ ತುಳಸಿಯ ತಾರದೆ ನಾ ಹೊಲಸಿನೊಳಳುತಿರೆ ಘಳಿಗೆಯಾ ತಾಳದೆ ಘಳಿಸಿದೆ ತುಳಸಿಯಾ ಕಳಸವ ಕಳ್ಳ ನಾ ಗೆಳೆಯನೆ ಕಳವಳಿಗಳು ಕಳುಹಿಸಿ ಕಾಳ್ವಗೈಸುವ ಕಾಳಿರಮಣ ನಿನ್ನ ಧೂಳಿ ಧರಿಸುವಂತೆ ಖೂಳನಾ ಮಾಡದೆ 1 ಚಲುವ ಚನ್ನಿಗ ನೀನಹುದೋ ಚಂಚಲ ನಯನಾ ಕರುಣಾ ಚಲ ನೀನಹುದೊ ಚಾಲೂವರಿಯಲು ಎನಗೆ ಕಾಲವು ತಿಳಿಯದು ಶೂಲಿ ಚಂಚಲ ಎನ್ನ ಸಂಚಿತಗಾಮಿ ವಂಚಿಸದೆ ಕಾಯ್ವುದೊ ಇದೇ ಕೊಡುವುದೋಕಂಬು ಕಂಧರಮಣಿ ಹಂಚುವುಗಾಣದೆ ಚಂಚಲೂ ನಯನದಿ ಸುರವಂಚಕನಾಗಿ ಪ್ರಪಂಚದಿ ಶರಪಂಚನ ಚಿಂತಿಸಿಸಂತೆಯಾನರುಹಿದ 2 ಅಕಳಂಕ ಮಹಿಮನೆ ದೋಷದೂರ ನೀ ಗುಣವಂತನೇ ಸಹಸ ಬಲವಂತನೆ ಕಾಂತಿಯ ತಂದನೆ ಕಾಂತಿಯುಳ್ಳ ಕಂತಿಯು ಧರಿಸಿದ ದಿಗಂತ ನಿಷ್ಕಿಂಜನರ ಕಾಂತನೆ ಭುಜಬಲ ಮಹಬಲವಂತನೆ ಕುರುಕಂತನೆ ಅಂತು ಇಂತು ತಂತು ಬಿಡದೆ ನಿಜ ಕುಂತಿಯ ಮಗನನ ಕಂತೆಯುಪೂಜಿಪ ಮಂತ್ರಿಯೆನಿಸಿ ಸುಖತಂತ್ರ ಪಠಿಸಿ ಶೃತಿಪಂಶವಿಂಶತಿ ದ್ವಿಪಿಂಚಕಲ್ಪವ ಮಿಂಚಿನಂದದಿ ತಪವಗೈದು ಪಂಚಪದವಿಯ ಪೊ0ದುಕೊಂಡು ಪಂಚ ಬಾಣನ ಪಿತನು ಯನಿಸಿದ ಮಾಂಗಲ್ಯ ಲಕುಮಿಯ ರಮಣ ಯೆನ ತಂದೆವರದಗೋಪಾಲವಿಠ್ಠಲನ ಆತಂಕವಿಲ್ಲದೇ ಚಿಂತಿಸುವ ನಾರಾಯಣಾಚಾರ್ಯನೇ3
--------------
ತಂದೆವರದಗೋಪಾಲವಿಠಲರು
ಕೊಟ್ಟ ಭಾಗ್ಯವೆ ಸಾಕೋ ಶ್ರೀ ಪ ಕೃಷ್ಣನ ದಯಬೇಕೋ ದೇವ ಅ.ಪ ಸಾಸಿರ ಬಂದರೆ ಶಾಂತಿಯೆಂದರಿತೆನೊ ಸಾಸಿರ ಬಂದಿತು ಶಾಂತಿ ಕಾಣಲಿಲ್ಲ ಸಾಸಿರ ಸಾಸಿರವೇಸು ಬಂದವೋ ಕ್ಲೇಶವು ಏರಿತು ಮೋಸಹೋದೆನೊ 1 ಗಾಳಿಯ ಗುದ್ದಿ ಕೈ ಕೀಲು ಮರಿಯಿತೊ ಕೇಳುವುದಿಲ್ಲವೊ ನಾಳಿನ ಕೂಳನು ಕಾಲಕಾಲಕೆ ಹುಲಿ ಹಾಲನು ತರುತಿಹ ಬಾಲಗೋಪಾಲನ ಕೇಳಿ ಮೋಸಹೋದೆ 2 ಬೇಡವೆನ್ನುವರಿಗೆ ನೀಡುವ ದೊರೆ ನೀ ರೂಢಿಯ ಬಲ್ಲೆನೋ ಕಾಡುವುದಿಲ್ಲವೊ ನೀಡಿದ ಭಾಗ್ಯವು ಕೇಡುತರದೆ ಕಾ ಪಾಡಬೇಕೆಲೊ ಪ್ರೌಢÀ ಪ್ರಸನ್ನನೆ 3
--------------
ವಿದ್ಯಾಪ್ರಸನ್ನತೀರ್ಥರು
ಕೊಡುವನು ಸಂಪದವ ಸುಙÁ್ಞನವ ಕೊಡುವ ಪ ಬಹುಜರನು ವಲಿಸಿ ಪಿತೃಭ್ರಾತಾಚಾರ್ಯನು ತಾನೆಂದೆನಿಸಿ ಕವಿವರ ನೆಂದೆನಿಸಿ ಬಹುವಿಧದಲಿ ತಾನು ಅತಿಹಿತದಲಿ ಗೈಯಲು ಸುಸ್ತವವನು ವರ್ಣಿಸೆ ಮಹಿಮೆಯನು1 ಸ್ಮರಿಸುವ ಭಕ್ತರ ಪೊರೆವಕರಣಿತಾನು ಸ್ವೀಕರಿಸಿದನದನು ಹರಿಸಾಕ್ಷಾನನವೆನಿಪಸುವಾಕ್ಯವನು ಸಂಪಾದಿತ ತಾನು ಹರಿವಿಶ್ವಸುನಾಮದಿ ಭೂತಳದಲ್ಲಿ ಉದಿಸಿದ ಮುದದಲ್ಲಿ ಪರಿಚಾರ ಕಾಮದಿ ಕರಸ್ನೇಹದಲಿ ಜನಿಸಿದ ಪೂರ್ವದಲಿ 2 ಸಿರಿಗೋಪಾಲಾಖ್ಯರು ಸುಙÁ್ಞನವನು ಕರುಣಿಸೆ ಮರ್ಮವನು ಸರಸದಿ ಗ್ರಂಥದವರ ಸುಹಸ್ಯವನು ಸಂಗ್ರಹಿಸಿದ ತಾನು ಸಿರಿರಘುವರ ಕರುಣದಿ ಧರೆಯೊಳು ಮೆರೆವುಲ್ಲರುವಿಗಿಲ್ಲರುವ ಗುರುವಿನ ಮಹಿಮೆಯನು3
--------------
ವರದೇಶವಿಠಲ
ಕೊಳಲಕೃಷ್ಣ ಬಂದು ನಿಲ್ಲೊ ಹೃದಯ ಕಮಲದಿ ನಳಿನನಾಭ ನಿನ್ನ ದಿವ್ಯ ಚಲುವ ರೂಪದಿ ಪ. ಶಿರದಿ ಮಕುಟ ಫಣೆಯ ತಿಲುಕ ಒಲಿವ ಮುಂಗುರುಳು ನಾಸಿಕ ಗಲ್ಲ ಹೊಳೆಯುತ 1 ಕರ್ಣದಲಿ ಕುಂಡಲಗಳು ಸ್ವರ್ಣ ಕಂಠವು ನಿನ್ನ ದಂತ ಹೊಳೆಯುತಿರಲು ಚನ್ನ ಶ್ರೀಹರಿಯೆ 2 ಅಧರ ಉರದಿ ಲಕ್ಷಿಯು ನಳಿತೋಳಿನಲಿ ಶಂಖ ಚಕ್ರ ವೇಣು ಪಿಡಿದಿಹ 3 ಕಮಲ ಮಾಲೆ ಮೇಲೆ ತುಳಸಿಯು ಮಾರಜನಕ ಹೊಳೆವೊ ಜರಿಯ ಪೀತ ವಸನವು 4 ರಕ್ತವರ್ಣ ವಸನ ಉಟ್ಟು ಕಟ್ಟಿ ಕಿರುಗೆಜ್ಜೆ ಮುಕ್ತರೊಡೆಯ ಮುಕ್ತಿಕೊಡುವ ಪಾದಕಮಲವು 5 ಕ್ಲೇಶ ಕಳೆಯುತ ದಾಸ ಜನರ ಕಾಯ್ವ ಕೃಷ್ಣ ಘಾಸಿಗೊಳಿಸದೆ 6 ಗುರುಗಳಲ್ಲಿ ನಿಂತು ಎನ್ನ ಹರುಷಪಡಿಸೊ ನೀ ಪರಮಪುರುಷ ನರಹರಿಯೆ ದುರಿತದೂರನೆ 7 ನೀರೊಳಾಡಿ ಭಾರಪೊತ್ತು ಕೋರೆ ತೋರಿದೆ ಘೋರರೂಪಿ ಬ್ರಹ್ಮಚಾರಿ ಕ್ಷತ್ರಿಯಾರಿ ನೀ 8 ಶ್ರೀ ಹರಿ ರಾಮ ಕೃಷ್ಣ ಬೌದ್ಧ ಕಲ್ಕಿಯೆ ಗೋಪಾಲಕೃಷ್ಣವಿಠ್ಠಲ ರೂಪ ತೋರೊ ನೀ 9
--------------
ಅಂಬಾಬಾಯಿ
ಕೊಳಲನೂದುವ ನಮ್ಮ ಚಲುವ ಕೃಷ್ಣಯ್ಯ ನಳಿನಾಕ್ಷಿಯರ ಮಧ್ಯೆ ಪೊಳೆವ ರಂಗಯ್ಯ ಪ. ಕರದ್ವಯದಲಿ ಶಂಖ ಚಕ್ರಪಿಡಿದಿಹ ಕಿರುನಗೆ ನಗುತ ಸುಲಿಪಲ್ಲಿನ ಚಲುವ ಸ್ವರಗಳ ಪಿಡಿಯುತ ವೇಣು ನುಡಿಸುವ ಸರಸಿಜನಾಭ ಹೃನ್ಮಂದಿರದಿ ಮೆರೆವ 1 ಜಗವ ಮೋಹಿಸುವಂಥ ನಗೆಯ ಮೊಗ ಚೆಲುವ ಹೆಗಲು ಎಡದಲ್ಲಿ ಗಲ್ಲ ತಗುಲಿಸಿ ಇರುವ ಸತಿ ಹೆಗಲಲಿ ಇಡುವ ನಗಧರ ನರ್ತನವಾಡಿ ಮುದವೀವ 2 ಕಾಲಕಡಗ ಗೆಜ್ಜೆ ಪಾಡಗರುಳಿಯು ಮೇಲೆ ಪೀತಾಂಬರ ಜರಿಯ ವೈಭವವು ಸಾಲ ಮುತ್ತಿನಹಾರ ಪದಕದ್ವಜ್ರಗಳು ಓಲಾಡುವ ನೀಲಾಂಬರ ಹೊದ್ದಿಹ ಒಲಪು 3 ಕಂಠ ಕೌಸ್ತುಭಮಣಿ ಅಧರದ ಕೆಂಪು ಕರ್ಣ ಕದಪು ಕನ್ನಡಿಯು ಬಂಟರಾದವರನ್ನು ಪೊರೆಯುವ ದೃಷ್ಟಿ ವೈ - ನಾಸಿಕ ಫಣೆಯ ತಿಲುಕವು 4 ಶ್ರೀಪತಿ ಮುಂಗುರುಳು ಶಿರದಲ್ಲಿ ಮಕುಟ ಪಾಪವ ದಹಿಸುವ ಪಾವನ ವೇಣು ಆಪಾದ ಮೌಳಿಯ ರೂಪದ ಚಲುವ ಗೋಪಾಲಕೃಷ್ಣವಿಠ್ಠಲ ಎನ್ನ ಕಾವ 5
--------------
ಅಂಬಾಬಾಯಿ
ಕೊಳಲನೂದೋ ಇನ್ನೊಮ್ಮೆ ರಂಗಯ್ಯಾ ಕೊಳಲನೂದೋ ಇನ್ನೊಮ್ಮೆ ಕೃಷ್ಣಯ್ಯಾ ಪ ಕೊಳಲನೂದೋ ದ್ವಾರಕಾ ಪುರನಿಲಯಾ ಅ.ಪ. ಎಡಹೆಗಲಲ್ಲೆಡಗಲ್ಲಂವ ನೀಡೀ ಕುಡಿ ಹುಬ್ಬುಗಳಲ್ಲಾಡಿಸುತ್ತ 1 ಮೃದುತರ ತುದಿ ಬೆರಳಿಂದೊತ್ತುತ ಮಧುರಾಧರದಲ್ಲಿಟ್ಟು ರಂಗಯ್ಯ2 ನಾದ ಮೂರುತಿ ಗೋಪೀಜನಲೋಲಾಶ್ರೀದವಿಠಲ ಗೋಪಾಲಬಾಲ3
--------------
ಶ್ರೀದವಿಠಲರು
ಕೊಳಲೂದೋ ರಂಗಯ್ಯ ರಂಗ ನೀ ಕೊಳಲೂದೋ ಕೃಷ್ಣಯ್ಯ ಪ ಕೊಳಲೂದೋ ಗೋವಳರೊಡಗೂಡಿ ಚೆಲುವ ಶ್ರೀ ವೇಣುಗೋಪಾಲ ಕೃಷ್ಣ ನೀ 1 ಕಡಲೊಳಗಿದ್ದು ಬಂದ್ಹಡಗದಿಂದಲಿ ಕಡಗೋಲ ಪಿಡಿದ ಉಡುಪಿಯ ಕೃಷ್ಣ ನೀ 2 ಎಂಟು ಮಂದ್ಯತಿವರ್ಯರು ನಿನ್ನ ಸೇವೆಗೆ ಬಂಟರಾಗಿಹರ್ವೈಕುಂಠಪತಿ ಕೃಷ್ಣ ನೀ 3 ನಿಜಭಕ್ತರು ಕೈಬೀಸಿ ಕರೆಯಲು ರಜತಪೀಠದ ಪುರವಾಸ ಕೃಷ್ಣ ನೀ 4 ಸತ್ಯವಾದ ಜ್ಞಾನ ಪೂರ್ಣಾನಂದ- ತೀರ್ಥರ ಕರವಶವಾದ ಕೃಷ್ಣ ನೀ 5 ಅಂದಿಗೆ ಕಿರುಗೆಜ್ಜೆ ಘಲ್ಲು ಘಲ್ಲೆನುತ ಕಾ- ಳಿಂಗನ್ನ್ಹೆಡೆಯಲಿ ಕುಣಿದಾಡೊ ಕೃಷ್ಣ ನೀ 6 ದಾಸರ ಮನದಭಿಲಾಷೆ ಪೊರೈಸಿ ಭೀ- ಮೇಶಕೃಷ್ಣನೆ ದಯ ಮಾಡೊ ರಂಗ ನೀ 7
--------------
ಹರಪನಹಳ್ಳಿಭೀಮವ್ವ
ಕೋಮಲೆ ರಮಾದೇವಿಯನ್ನ ನೋಡಬನ್ನಿರೆಕಮಲಾರಿ ಸಹೋದರಿಯನೀಗ ಬೇಡಬನ್ನಿರೆ ಪ. ಇಂದುನಿಭದ ಸುಂದರಿಯರು ಬಂದು ನೋಡಿರೆ ಈಕುಂದರದನೆ ಮಂದರೋದ್ಧರನರ್ಧಾಂಗಿಯೆ1 ಭಕ್ತಿಯಿಂದ ಭಜಿಪರಿಗೆ ಮುಕ್ತಿಕೊಡುವಳೆಶಕ್ತಿಯುಕ್ತಿಗಳನೆ ಕೊಟ್ಟು ಅರ್ತಿಮಾಳ್ಪಳೆ 2 ದಾಸಿಯಾದರೆ ಶ್ರೀಶನರಾಣಿ ಪೋಷಿಸುವಳೆಗೋಪಾಲವಿಠಲ ಘಾಸಿಮಾಡದೆ ಪೋಷಿಸೆನುವಳೆ 3
--------------
ಗೋಪಾಲದಾಸರು
ಕೋಲ ಕೋಲೆನ್ನ ಕೋಲ ಕೃಷ್ಣ ನೀಮದನಗೋಪಾಲನಾಗಿಮೆರೆದಿಯಲೊ ಕೃಷ್ಣ ಪ. ಅಂಬರ ತಕ್ಕ ಸುರುಳಿಯ ಮುಂಡಾಸಮುರಿಗಿಯವಂಕಿ ನಡುವಿಟ್ಟುಮುರಿಗಿಯವಂಕಿ ನಡುವಿಟ್ಟು ರುಕ್ಮಿಣಿಯವರಪುತ್ರ ಪ್ರದ್ಯುಮ್ನಗೆ ಉಡುಗೊರೆ1 ಮುತ್ತಿನಾಭರಣ ಹೆಚ್ಚಿನ್ಹೆಚ್ಚಿನ ಜವಳಿಮತ್ತೆ ಕೃಷ್ಣಯ್ಯನ ಸಭೆಯೊಳು ಮತ್ತೆ ಕೃಷ್ಣಯ್ಯನ ಸಭೆಯೊಳು ಇಟ್ಟೆವಪಾರ್ಥನು ಕೊಟ್ಟ ಉಡುಗೊರೆ 2 ಬೆಳಕಿನಂತೊಪ್ಪುವ ಥಳಥಳಿಸುವ ಜವಳಿ ನಳಿನಾಕ್ಷಿಯರು ಕುಳಿತ ಸಭೆಯಾಳು ನಳಿನಾಕ್ಷಿಯರು ಕುಳಿತ ಸಭೆಯಾಳಗೆ ಇಟ್ಟೆವಕುಳಿತ ಜನಕೆಲ್ಲ ಉಡುಗೊರೆ 3 ಅಂದವಾದ ಬಲು ಚಂದ ಚಂದದ ಜವಳಿ ತಂದೆ ಕೃಷ್ಣಯ್ಯನ ಸಭೆಯೊಳು ತಂದೆ ಕೃಷ್ಣಯ್ಯನ ಸಭೆಯೊಳಗೆ ಇಟ್ಟೆವಬಂದ ಜನಕೆಲ್ಲ ಉಡುಗೊರೆ 4 ಸಾಸಿವೆ ಬಣ್ಣದ ಸೀರೆ ಕುಸುಬೆ ಬಣ್ಣದ ಕುಪ್ಪುಸ ಲೇಸಾದ ಅಡಿಕೆ ನಡುವಿಟ್ಟುಲೇಸಾದ ಅಡಿಕೆ ನಡುವಿಟ್ಟು ರುಕ್ಮಿಣಿಯದಾಸಿಯರಿಗೆಲ್ಲ ಉಡುಗೊರೆ 5 ಹತ್ತೆಂಟು ಸಾವಿರ ಸುತ್ತುವ ಮುಂಡಾಸ ಮತ್ತ ಬೆಟ್ಟಡಕಿ ನಡುವಿಟ್ಟುಮತ್ತ ಬೆಟ್ಟಡಕಿ ನಡುವಿಟ್ಟು ರಂಗಯ್ಯನ ಭೃತ್ಯರಿಗೆಲ್ಲ ಉಡುಗೊರೆ6 ಸುಳಿಬಳ್ಳಿಯಂತೊಪ್ಪುವ ಬಿಳಿ ಚೀಟಿನ ಜೂಲು ಎಳೆ ಮಾವುಗಳ ನಡುವಿಟ್ಟುಎಳೆ ಮಾವುಗಳ ನಡುವಿಟ್ಟು ರಂಗಯ್ಯನ ಗಿಳಿಗಳಿಗೆಲ್ಲ ಉಡುಗೊರೆ 7 ಅಕ್ಕರದಿಂದ ಹೊಸ ಚಿಕ್ಕ ಚೀಟಿನ ಜೂಲುತಕ್ಕ ಕುಲಾಯಿ ಮುರುವಿಟ್ಟುತಕ್ಕ ಕುಲಾಯಿ ಮುರುವಿಟ್ಟು ರುಕ್ಮಿಣಿಯ ಬೆಕ್ಕಿಗೆ ಕೊಟ್ಟ ಉಡುಗೊರೆ 8 ಅಷ್ಟೂರಿಗೆ ಉಡುಗೊರೆ ತಕ್ಕಷ್ಟು ಕೊಟ್ಟೆವಕೃಷ್ಣಯ್ಯನ ಮನಕೆ ಬರಲಿಲ್ಲಕೃಷ್ಣಯ್ಯನ ಮನಕೆ ಬರಲಿಲ್ಲ ಕುಬ್ಚಿಎಂಬೊ ಸೊಟ್ಟ ಸ್ತ್ರೀಯಳ ಕರೆಸಿಲ್ಲ9 ಎಲ್ಲರಿಗುಡಗೊರೆ ಬಲ್ಲಷ್ಟು ಕೊಟ್ಟೆವಚಲುವನ ಮನಕೆ ಬರಲಿಲ್ಲಚಲುವನ ಮನಕೆ ಬರಲಿಲ್ಲ ಗೋಕುಲದಗೊಲ್ಲ ನಾರಿಯರ ಕರೆಸಿಲ್ಲ10 ತರಹ ತರಹದ ಜವಳಿ ದುಂಡು ಮುತ್ತಿನ ಪದಕಪೆಂಡಿ ಸರಗಳ ನಡುವಿಟ್ಟುಪೆಂಡಿ ಸರಗಳ ನಡುವಿಟ್ಟು ರಾಮೇಶನಿನ್ನ ಪಂಡಿತರಿಗೆಲ್ಲ ಉಡುಗೊರೆ 11
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲ ಕೃಷ್ಣಯ್ಯನ ನೆನೆದೇವ ಕೋಲ ಪ. ಶಿರವ ದೂಗಿದನೆ ಬ್ರಹ್ಮ ದೂಗಿದನೆಮಂದಗಮನೆಯರ ಭಾಗ್ಯ ಚಂದ್ರ ಸೂರ್ಯರಿಗಿಲ್ಲಇಂದ್ರಗೆ ಇಲ್ಲವೆಂದು 1 ಲೋಕನಾಯಕಗೆ ಏಕಾರತಿಯನೆತ್ತಿ ಗೋಕುಲಾಧೀಶ ಸಲುಹೆಂದುಗೋಕುಲಾಧೀಶ ಸಲುಹೆಂದು ಕೈಮುಗಿದುಏಕೋಭಾವದಲಿ ಕೆಲದೆಯರು2 ಭೂಮಂಡಲಪತಿ ಮುಂದೆ ಮಂಡಲ ಮಾಡಿಅನ್ನಭಾಂಡವ ತಂದು ಇಟ್ಟಾರುಅನ್ನಭಾಂಡವ ತಂದಿಟ್ಟು ಕೈಮುಗಿದಾರುಪುಂಡರಿಕಾಕ್ಷ ಕೈಕೊಳ್ಳೊ 3 ತುಪ್ಪ ಸಕ್ಕರಿಯಲಿ ಪಕ್ವಾದ ಭಕ್ಷ್ಯಮಿತ್ರೆಯರು ತಂದು ಇಡುವೋರುಮಿತ್ರೆಯರು ತಂದಿಟ್ಟು ಕೈಮುಗಿದಾರುಭಕ್ತವತ್ಸಲನೆ ಕೈಕೊಳ್ಳೊ4 ಯಾಲಕ್ಕಿ ಕಸಕಸಿ ಮೇಲಾದ ಪಾಯಸ ಬಾಲೆಯರು ತಂದು ಇಡುವೋರುಬಾಲೆಯರು ತಂದಿಟ್ಟು ಕೈಮುಗಿದಿಹರುಬಾಲಗೋಪಾಲ ಕೈಕೊಳ್ಳೊ5 ಕರ ಮುಗಿದಿಹರುಸುಲಭ ಮೂರುತಿಯೆ ಕೈಕೊಳ್ಳೊ6 ಭೇರಿ ಮೊದಲಾದ ಭೋರೆಂಬೊ ತುತ್ತೊರಿವಾರುಜ ಗಂಟೆ ಮೊದಲಾಗಿವಾರುಜ ಗಂಟೆ ಮೊದಲಾಗಿ ರಂಗನಸಾರುತಲಿವೆ ಸಭೆಯೊಳು 7 ಪಟ್ಟಿದರಸಿಯರು ಇಟ್ಟ ಪದಾರ್ಥವದೃಷ್ಟಿಲಿನೋಡಿ ಸುಖಿಸುತದೃಷ್ಟಿಲಿನೋಡಿ ಸುಖಿಸುತ ಅವರಿಗೆಕೊಟ್ಟಾನು ಬ್ಯಾಗ ಕೈವಲ್ಯ8 ನಿತ್ಯ ಪ್ರಕಾಶಗೆ ಮುತ್ತಿನಾರುತಿಯಸತ್ಯಭಾಮೆಯರು ಮೊದಲಾಗಿಸತ್ಯಭಾಮೆಯರು ಮೊದಲಾಗಿ ಬೆಳಗಿದರುಮತ್ತ ರಾಮೇಶ ಸಲುಹೆಂದು9
--------------
ಗಲಗಲಿಅವ್ವನವರು
ಕೋಲ ಕೋಲೆನ್ನಿ ಮುತ್ತಿನ ಕೋಲ ಕೋಲೆನ್ನಿಗೋಪಾಲರಾಯನ ನೋಡುವ ಬಾಲೆಯರೆÉ ಬನ್ನಿ ಪ. ದಿಕ್ಕು ತುಂಬಿತು ಈ ದಿಕ್ಕು ತುಂಬಿತುಲೆಕ್ಕವಿಲ್ಲದ ಜನರು ರುಕ್ಮಿಣಿಯ ಮುಯ್ಯಕ್ಕೆ1 ಕಾಶ ತುಂಬಿತು ಎಲ್ಲ ಕೋಶ ತುಂಬಿತು ಆಶೆ ಬಡುತಲೆ ಜನರು ಸೋಸಿನ ಮುಯ್ಯಕ್ಕೆ 2 ಹಾದಿ ತುಂಬಿತು ಎಲ್ಲ ಬೀದಿ ತುಂಬಿತು ಆದರದಿಂದಲೆ ಜನರುಮೋದದಿ ಮುಯ್ಯಕ್ಕೆ 3 ಅಂಬರ ತುಂಬಿತುಸಂಭ್ರಮದಿಂದಲೆ ಜನರು ರಂಭೆಯರ ಮುಯ್ಯಕ್ಕೆ 4 ಪಟ್ಟಣ ತುಂಬಿತು ಒಂದಿಷ್ಟು ಬಿಡದಲೆ ಕೃಷ್ಣ ರಾಮೇಶನ ಜನರು ಶ್ರೇಷ್ಠದ ಮುಯ್ಯಕ್ಕೆ 5
--------------
ಗಲಗಲಿಅವ್ವನವರು
ಕೋಲೆಂದು ಪಾಡಿರೆ ಕೋಮಲೆಯರೆಲ್ಲಾ ಅಮ್ಮಯ್ಯ ಗೋಪಾಲ ಕೃಷ್ಣಯ್ಯಗ ಶರಣಿಂದು ಕೋಲ ಪ. ಮುದ್ದು ಸುಭದ್ರ ನೀನು ಗೆದ್ದುಬರುತಿಯೆಂದುಎದ್ದ ಬೃಹಸ್ಪತಿಯು ತವಕದಿ ಕೋಲಎದ್ದ ಬೃಹಸ್ಪತಿಯು ತವಕದಿ ಅರ್ಜುನ ಸಿದ್ಧ ಮಾಡೆಂದ ರಥಗಳ ಕೋಲ 1 ಕೇಳಿರಿ ನಿಮಗೆಲ್ಲ ಭಾಳ ಬಲವದೆಕಾಳಿ ಮೊದಲಾದ ಕೆಲದೆಯರುಕಾಳಿ ಮೊದಲಾದ ಕೆಲದೆಯರು ಹರುಷದಿ ಹೇಳಿ ಬೃಹಸ್ಪತಿಯು ನುಡಿದಾನು ಕೋಲ2 ಪಾಂಡವರೆಲ್ಲರು ಉಂಡು ವೀಳ್ಯವನ್ಹಾಕಿಪುಂಡರಿಕಾಕ್ಷನ ಅರಮನೆಗೆ ಕೋಲಪುಂಡರಿಕಾಕ್ಷನ ಅರಮನೆಗೆ ಐವರುತಂಡ ತಂಡದಲೆ ನಡೆದಾರು ಕೋಲ3 ದ್ರೌಪದಿ ಸುಭದ್ರಾ ಇಬ್ಬರು ಒಂದಾಗಿಅಗಣಿತ ಒನಿತೆಯರು ಕೋಲಅಗಣಿತ ಒನಿತೆಯರು ಕೂಡಿಕೊಂಡು ತಾವುಪ್ರೇಮದಿಂದಲಿ ಬರುತಾರೆ ಕೋಲ 4 ಅರಿಷಿಣ ಕುಂಕುಮ ಗಂಧಬೆರೆಸಿ ಪರಿಮಳದಿಂದಸರಸಾದ ಸುರಭಿ ಕುಸುಮವ ಕೋಲಸರಸಾದ ಸುರಭಿ ಕುಸುಮರಾಮೇಶನ ಅರಸಿಯರಿಗೆ ಒಯ್ವೋ ಉಪಚಾರ ಕೋಲ 5
--------------
ಗಲಗಲಿಅವ್ವನವರು