ಒಟ್ಟು 486 ಕಡೆಗಳಲ್ಲಿ , 72 ದಾಸರು , 390 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭಜಿಸಿದ್ಯಾ ಈ ಭಾಗ್ಯನಿಧಿಯಾ ನೋಡು ಸುಜನರ ಹೃದಯ ಪಂ ರಜತಮೋ ದೂರನ್ನ ಪ ಮನ ಸೋಲಿಸುವ ಲಲಾಟ ಫಣಿ ನಮ್ಮನು ನೋಡುವ ವಾರೆ ನೋಟಾ ಹಾಹಾ ಮಕರ ಕುಂಡಲ ಕರ್ಣ ಕದಪು ಆವಿನ ಸೋಲಿಸೆ ನಿತ್ಯಾ 1 ಭೃಂಗ ಕುಂತಳ ಕೇಶಾ ಪುಬ್ಬು ಅಂಗಜ ಚಾಪಾ ವಿಲಾಸ ಉ ತ್ತುಂಗ ಚಂಪಕ ಕೋಶಾ ನಾಸಾರಸಾ ರಂಗುದುಟಿಯ ಮಂದಹಾಸಾ ಹಾಹಾ ತಿಂಗಳ ಎಳೆ ಬೆಳ ದಿಂಗಳಾ ಮೀರೆ ಭೂ ಮಂಗಳಾಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳ ವೀಳ್ಯೆ ಕರ್ಪುರಾ ವಿಟ್ಟಾ ಜಲಧಿ ಗಂಭೀರಾ ದಂತ ಪರಿಪಙË್ತ ಸಮ ವಿಸ್ತಾರ ಹಾಹಾ ಮಿರುಗುವಾನಂತ ಚಂ ಚರಿಸುವ ಚತುರನ್ನ 3 ಪನ್ನೇರು ಸಂಪಿಗೆ ಪೊಂಗೇ ಜಾಜಿ ಇರುವಂತಿಗೆ | ಹಾಹಾ | ಮಕರಂದಾ ಮಾರಂದೋದಕ ಸುರಿಯಲಿಂದು4 ನಿಡಿದೋಳು ಕಕುಭುಜಾ ಕೊರಳಾ ಸ್ಕಂಧಾ ಮಣಿ ಹರಳಾ | ಹಾಹಾ| ಒಡನೆ ತಾಯಿತ ಕೀರ್ತಿ ವಡಿವೇಲಿ ಮೆರೆವನ್ನ 5 ಸುರವಿ ಮಯೂಖಾ ಮೇಲು ಧರಿಸಿದ ಚಕ್ರಾದಿ ಶಂಖಾ | ಹಾಹಾ | ಕೌಸ್ತುಭ ಮಣಿ ಸಿರಿವತ್ಸ ವನಮಾಲಾ ಉರವೈಜಯಂತಿ ಮಂದಾರ ಹೀರ ಹಾರನ್ನ6 ಮುತ್ತು ವೈಢೂರ್ಯ ಪ್ರವಳಾ ಪಚ್ಚ್ಚೆ ಕೆತ್ತಿದ ಪದಕ ನ್ಯಾವಳಾ ಸ್ತುತಿಪ ಜನಕೆ ಜೀವಾಳಾ | ಹಾಹಾ | ಪ್ರತ್ಯೇಕವಾಗಿ ತೂಗುತಿಹ ಸರಗಳು ತತ್ತುಲಸಿಧಾಮ ಚಿತ್ರವಾಗಿರೆ ಬಲು 7 ನಖ ಚಂದನಾ ಅಗರಾ ಪಚ್ಚೆ ಘನ ಪರಿಮಳ ಗಂಧ ಸಾರಾ | ಹಾಹಾ | ತನುವಿಗೆ ತನುವು ಲೇಪನವಾದಾ ಸೊಗಸು ವಾ ಸನೆ ಸುತ್ತ ಘಮಘಮ ತನರು ಹಾವಳಿ ತಿಳಿ 8 ತ್ರಿವಳಿ ಉಪಗೂಢ ಜಠರಾ ಅಖಿಳಾವನಿ ಧರಿಸಿದ ಧೀರಾ ನಾಭಿ ಕುಸುಮ ಮೃಗ ದೇವ ಉಡಿ ಉಡದಾರಾ | ಹಾಹಾ | ಭವಕಿಂಕಿಣಿ ತಳಲಾವಿ ವಸನ ಬಿರು ತೊಡರು ದೈತ್ಯಾವಳಿ ಹರನನ್ನಾ 9 ಊರು ಜಾನು ಜಂಘೆ ಗುಲ್ಫಾ ವಿಚಾರಿಸೆ ಕ್ರಮಾತು ಅಲ್ಪಾ ತನ್ನ ಸಂಕಲ್ಪಾ | ಹಾಹಾ| ವಾರಣಾ ಕರದಂತೆ ಹಾರೈಸುಯಿಂತು ನೂ ಚಾರು ಚರಣ ಪೆಂಡೆ10 ನಖ ವಜ್ರಾಂಕುಶ ಚಕ್ರ ಸುಧಿಯಾ ಸುರಿವ ಪೀಠ ಸರಸಾ | ಹಾಹಾ | ತ್ರಿದಶನಾಯಕ ಶಿವ ವಿಧಿಗಳ ಮುಕುಟ ಪಾದದಲಿ ಸಮ್ಮರ್ದವಾದುದು ನೋಡಿ ತರುವಾಯಾ 11 ದಹಿಸುವ ಪಾದಾ ಕಾಮ ಕಾನನ ದಹಿಸುವ ಪಾದಾ | ಹಾಹಾ | ಅನಂತ ದಿನಕ್ಕೊಮ್ಮೆ ನೀನೇ ಗತಿಯೆಂದಾ ಮಾನವಗೆ ಬಂದು ಕಾಣಿಸಿಕೊಂಬನ್ನ12 ಅಪದಕ್ಷ ಸಾರಾಧ್ಯಕ್ಷ ಸರ್ವವ್ಯಾಪಕ ಕರುಣಿಕಟಾಕ್ಷ ಜಾಗ್ರತ್ ಸ್ವಪ್ನದಲ್ಲಿ ಪ್ರಾಜ್ಞಾದಕ್ಷ ನಿಜ ಆಪನ್ನರಿಗೆ ದಾವಾ ವೃಕ್ಷ | ಹಾಹಾ | ರೂಪ ರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ರತುನ ಮೌಳಿಪರಿಯಂತರಾ13 ಸಂಪಾದಿಸು ಜ್ಞಾನಾ ಭಕ್ತಿ ಕೊಂಡಾಡು ಮುನ್ನಿನಾ | ಹಾಹಾ | ಬಂಧನ ಹರಿಸಿ ಆನಂದವ ಕೊಡುವ ಮು ಕುಂದ ಅನಿಮಿತ್ತ ಬಂಧು ವೆಂಕಟನ್ನ 14 ನಿತ್ಯ ಭಜಿಸುವ ಜನರಿಗೆ ಶೀಲಾ ಪುಣ್ಯ ನಿಜರೊಳಗಿಡುವ ಈ ಕೂಲಾ | ಹಾಹಾ | ವ್ರಜದಲಿ ಪುಟ್ಟಿದಾ ಸುಜನಾಂಬುಧಿ ಸೋಮ ವಿಜಯವಿಠ್ಠಲರೇಯಾ ಗಜರಾಜವರದನ್ನಾ 15
--------------
ವಿಜಯದಾಸ
ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ ಕುಜನರೊಳಾಡದಲೆ ನಿಜ ಭಕುತಿಯಿಂದ ಭುಜಬಲವುಳ್ಳ ಪರಜರಟ್ಟುವ ದಿ ಗ್ವಿಜಯ ಸತ್ಯಪೂರ್ಣರ ಸುಜನರೊಂದಾಗಿಪ ಭರದಿಂದ ಬಂದು ನಿಂದು ನಿರೀಕ್ಷಿಸಿ ನಿರ್ಮಳ ಕರಯುಗಳ ಮುಗಿದು ಶಿರವಾನಿಲ್ಲದೆ ಧರಣಿಯಾ ಮ್ಯಾಲೊಂದು ತೀವರ ಸಾಷ್ಟಾಂಗ ನಮ ಸ್ಕರಿಸಿ ಕೊಂಡಾಡಿ ನಿಂದಿರಲಾನರರಿಗೆಲ್ಲ ಪರಿಹರವೊ ಬಂದರಘಳಿಗೆಯಲಿ ದುರುಳರಿಗಾಯ್ತು ಮರಿಯದೆ ಚೆನ್ನಾಗಿ1 ನೆರೆನಂಬಿ ನಿಮ್ಮಯ ಗೋತುರ ಸಹಿತಕ್ಕೆ ಜ್ಞಾನಾಂ ಕುರವಾಗುವುದು ಇದು ಉರುಕಾಲ ಸಿದ್ಧವೆನ್ನಿ ತರತಮ್ಯ ತತ್ವ ತಾತ್ಪರಿಯ ವಿಧ ತಿಳಿದು ಸುರರು ಮೆಚ್ಚುತಲಿರೆ ಮುರರಿಪು ಚತುರ್ದಶ ಧರಣಿಗೆ ಪರನೆಂದು ಬಿರಿದನು ಎತ್ತಿ ಡಂಗುರವ ಹೊಯಿಸಿ ಡಿಂಗರರಿಗೆ ಸಚ್ಛಾಸ್ತ್ರ ಕೊಡುವ ಯತಿಶಿರೋಮಣಿ ಕರ್ನಾ 2 ಪಾದಾಂಬುಜಾತ ಕೃಷ್ಣಾ ತನು ಭವಸರಿತ ನಿವಾಸಾ ದಿವಿಜೇಶನಾಯುಧ ಕವಚದಿಂದಲಿ ತನ್ನವರನ ಪೊರೆದೆತ್ತಿ ನವವಿಧ ಬಗೆ ತೋರಿ ತವಕದಿ ಕೋಲುಪುರ ಪವಿತುರ ಸ್ಥಳದಲ್ಲಿ ರವಿಯಂತೆ ಪೊಳವರು ಭವದೋಷ ಕಳೆವುತಾ ಕವಿಗಳ ಮನೋಹರ ವಿಜಯವಿಠ್ಠಲನ ಶ್ರವಣ ಮನನ ಧ್ಯಾನವನು ಬಲ್ಲವರಾ3
--------------
ವಿಜಯದಾಸ
ಭವರೋಗ ಹರವಾದೊಂದೌಷಧಿತ್ರೈಭುವನ ವಿಖ್ಯಾತವಾಗಿದೆ ಬುದ್ಧಿವಂತರಿಗೆ ಪ ಚತುರ ವೇದಶಾಸ್ತ್ರ ಮೇಣಷ್ಟಾದಶವಾದಸ್ಮøತಿತರ್ಕ ಪೌರಾಣದಡವಿಯಲ್ಲಿಮತಿವಂತ ಮುನಿಗಳಾರಿಸಿ ತಂದು ತಾವುಪ್ರತಿಗಂಡು ಲೋಕಕ್ಕೆ ಹಿತವಾಗಿ ತೋರುವ 1 ಅಡವಿಯೊಳರಸಿ ಅಗಿಯಲಿಲ್ಲ ತಂದುಇಡಿದು ಚೂರ್ಣವಮಾಡಿ ಒಣಗಿಸಲಿಲ್ಲಕುಡಿದು ಕಹಿಖಾರವೆಂದೆನಲಿಲ್ಲ ನೋಡೆಬಡವ ಬಲ್ಲಿದರೆಲ್ಲರಿಗೆ ಸಾಧ್ಯವಾಗಿಪ್ಪ 2 ಪಥ್ಯಪಾನದ ನೇಮಗಳಿಲ್ಲ ಹೋಗಿಸ್ತೋತ್ರ ಮಾಡಿ ವೈದ್ಯನ ಬೇಡಲಿಲ್ಲನಿತ್ಯಸೇವಿಸೆ ಆಲಸ್ಯಗಳಿಲ್ಲ ನೋಡೆಮತ್ಯಾರ ಮಾತ ನಡೆಸುವ ಬಗೆಯಿಲ್ಲ3 ರಸಪಾಷಾಣಾದಿ ಮೂಲಿಕೆಯನು ತಂದುಕುಶಲದಿ ಶೋಧಿಪ ಕೋಟಲೆಯಿಲ್ಲಮಿಸುಣಿ ವರ್ಣದ ಭಸ್ಮ ತೈಲಗಳೆಂತೆಂಬಫಸಣೆಯಿಲ್ಲದೆ ಗಾಂಧರ್ವರು ಸೇವಿಪ 4 ಒಮ್ಮೆ ಸೇವಿಸೆ ಜನ್ಮ ಜನ್ಮಂಗಳ ದು-ಷ್ಕರ್ಮ ಸವೆದು ಸಕಲಾನಂದವೀವಘಮ್ಮನೆ ಕೃಷ್ಣರಾಯನ ಪುರದಲಿ ಬಿಡದÉಮ್ಮ ರಕ್ಷಿಪ ಮುದ್ದುಕೃಷ್ಣ ಕೃಷ್ಣಯೆಂಬ 5
--------------
ವ್ಯಾಸರಾಯರು
ಭಳಿರೆ ಭಳಿರೆ ನರಸಿಂಹ ಮಹಾಸಿಂಹ | ವೈರಿ ಉರಿಮಾರಿ ಪ ನಗನಗಾ ನಗನಗಗಳಲ್ಲಾಡೆ ಚತುರ್ದಶ | ಜಗಜಗ ಜಗವೆಲ್ಲ ಕಂಪಿಸಿ ಕಂಬನಾಗೆ || ಹಗೆ ಹಗೆ ಬಲವ ದೆಶೆಗೆಡಿಸಿ ರೋಷಗಿಡಿ | ಉಗು ಉಗು ಉಗುಳುತ್ತ ಬಂದ ನರಸಿಂಹ 1 ಬಿಗಿ ಬಿಗಿ ಬಿಗಿದು ಹುಬ್ಬುಗಂಟನೆ ಹಾಕಿ | ಹೊಗೆ ಹೊಗೆ ಹೊಗೆ ಸುತ್ತಿ ಸರ್ವರಂಜೆ || ನೆಗ ನೆಗ ನೆಗ ನೆಗದು ಕುಪ್ಪಳಿಸಿ ಅಸುರನ್ನ | ಮಗು ಮಗು ಮಗು ಮಗು ಬೇಡಿಕೊಂಡ ನರಸಿಂಹಾ 2 ಉಗು ಉಗು ಉಗು ಉಗರಿಂದ ಕ್ರೂರನ್ನ ಹೇರೊಡಲ | ಬಗ ಬಗ ಬಗ ಬಗದು ರಕುತವನ್ನು | ಉಗಿ ಉಗೀ ಉಗೀ ಉಗಿದು ಚಲ್ಲಿ ಕೊರಳಿಗೆ ಕರುಳ | ತೆಗೆ ತೆಗೆ ತೆಗೆ ತೆಗೆದು ಇಟ್ಟ ನರಸಿಂಹಾ 3 ಯುಗ ಯುಗ ಯುಗ ಯುಗದೊಳಗೆ ಪ್ರಣತಾರ್ತಿ ಹರನೆಂದು | ಝಗ ಝಗಾ ಝಗಝಗಿಪ ಮಕುಟ ತೂಗೆ | ಸುರರು ಗಗನದಿ ನೆರೆದು | ಮಿಗಿ ಮಿಗಿ ಮಿಗಿ ಮಿಗಿಲೆನೆ ನರಸಿಂಹಾ 4 ಒಂದೊಂದೊಂದೊಂದು ಮುನಿಗಳಿಗೊಲಿದು | ಅಂದಂದಂದಂದದೀಗಾಯತ ವೊಲಿದು | ಅಂದಂದಂದವ ಕಾವ ಚೊಳಂಗಿರಿ | ಮಂದಿರನೆ ವಿಜಯವಿಠ್ಠಲ ನರಸಿಂಹಾ 5
--------------
ವಿಜಯದಾಸ
ಭಾಗವತ ಮಹಿಮೆ ಬಣ್ಣಿಸಲಳವೇ ಪ ಈ ಭವಶರಧಿಗೆ ಸುನಾವೆಯಂತಿಹುದಯ್ಯಅ.ಪ ಸೂನು ಶ್ರೀ ಮನ್ನಾರಾಯಣ ಆಪದ್ಬಾಂಧವನಲ್ಲದಿನ್ನಿಲ್ಲವೆಂಬುವಾ1 ಮತ್ತೆ ಶಾಪದಲಿ ನಾರದನ ವಿಷಯವ ಪೇಳ್ವ 2 ಪರೀಕ್ಷಿತ ಶುಕ ಶ್ರೀಹರಿಯ ಅವತಾರಗಳ ವರ್ಣನೆಗಳು ಮತ್ತೆ ಮಹದಾದಿ ತತ್ವ ಸೃಷ್ಟಿಕ್ರಮ ಇತ್ಯಾದಿ ಪುಣ್ಯಚರಿತಗಳನು ಪೇಳ್ವ 3 ಆ ಬೊಮ್ಮಂಡದಿಂದೆ ಚತುರ್ಮುಖನ ಸೃಷ್ಟಿಯು ವಿಭಾಗವ ಪೇಳ್ವ ಸೂಕ್ಷ್ಮ ಪರಮಾಣು ಅಬ್ದಾದಿ ಕಾಲಗಳು ವ್ಯಷ್ಟಿ ಭೂತೋತ್ಪತ್ತಿ ಶ್ರೀ ವರಹ ರೂಪದಿ ತೋರಿದ ಮಹಿಮೆಯಾ 4 ವರಹಾವತಾರದೀ ಧರಣೀಯ ತಂದಂಥ ಶ್ರೀ ಕಪಿಲ ದೇವಹೂತಿಯ ಸಂವಾದವ ಪೇಳ್ವ 5 ಚತುರ ಸ್ಕಂದದಿ ನವಬ್ರಹ್ಮರ ಉತ್ಪತ್ತಿ ಪ್ರಾಚೀನ ಬರ್ಹಿಷರ ವೃತ್ತಾಂತವನು ಪೇಳ್ವ 6 ನೃಪರ ಋಷಭ ಚರಿತೆಗಳು ಪುತ್ರ ಭರತನ ಕಥೆಯು ನದ ನದಿಗಳ ಸೃಷ್ಟಿ ಜ್ಯೋತಿಶ್ಚಕ್ರ ನರಕ ಪಾತಾಳಗಳ ಪೇಳ್ವ 7 ಮಾನವ ವೃತ್ರನ ಜನನ ಮರಣಗಳೆಲ್ಲ ಪೇಳ್ವ 8 ಹಿರಣ್ಯಕಶಿಪುವಿನ ದುರುಳತನವು ಮತ್ತೆ ಧೀವರನಾದ ಪ್ರಹ್ಲಾದರಾಯನಿಂ ವ- ರ್ಣಿತಮಾದ ಶ್ರೀಹರಿಯ ಮಹಿಮೆಯ ಪೇಳ್ವ 9 ಅಷ್ಟಮ ಸ್ಕಂದದಿ ಮನ್ವಂತರ ವಿವರವು ಕಮಠ ಹಯವದನನವತಾರ ಸುಧೆಯಿತ್ತ ಮಹಿಮೆಯ10 ಇಳೋಪಾಖ್ಯಾನವ ತಾರೋಪಾಖ್ಯಾನವ ಪೇಳ್ವ 11 ಶರ್ಯಾತಿ ಕಾಕುಸ್ಥ ಖಟ್ವಾಂಗ ಧೀರ ಮಾಂ- ಧಾತೃ ಸೌಭರಿ ಸಗರರ ಚರಿತೆ ಪರಮಾತ್ಮ ರಘುರಾಮನ ಚರಿತೆಗಳನು ಪೇಳ್ವ12 ಮತ್ತೆ ನಿಮಿಯ ದೇಹತ್ಯಾಗದ ವಿಷಯವು ಉತ್ತಮ ಚಂದ್ರವಂಶದ ನಹುಷಾಸುತ ಯ- ಯಾತಿ ಶಂತನುಯದು ಚರಿತೆಗಳುಳ್ಳ 13 ದಶಮ ಸ್ಕಂದದಿ ಹರಿ ಯದುವಂಶದಿ ಜನಿಸಿ ಶಿಶುಲೀಲೆಗಳ ತೋರಿ ಅಸುರಿ ಪೂತನಿ ಕೊಂದು ಅಸುರಭಂಜಕ ಹರಿಯು ಮೆರೆದ ಮಹಿಮೆಯ ಪೇಳ್ವ 14 ಮಾಯಾ ಮಹಿಮಧೇನು ಪ್ರಲಂಬಕರಾ ಕೊಂದು ಕಾಡುಕಿಚ್ಚಿನಿಂದ ಗೋಪಾಲರ ಕಾಯ್ದ ನೋಯಿಸಿ ಕಾಳಿಯ ಬಾಯ ಬಿಡಿಸಿ ಕಾಳಿಮರ್ದನ ಕೃಷ್ಣ ನಾಡಿದ15 ಗೋಪಸ್ತ್ರೀಯರ ಚರಿತ ಗೋವರ್ಧನೋದ್ಧಾರಣ ಕಂಸವಧೆಯ ಮಾಡಿ ಗುರುಸುತನನು ತೋರ್ದ 16 ಜರೆಯ ಸೇನೆಯ ಜಯಿಸಿ ಕಾಲಯವನರ ಕೊಂದು ಸಿರಿ ರುಕ್ಮಿಣಿಯ ಪಡೆದು ಸೆರೆಯ ಬಿಡಿಸಿ ರಾಜಕನ್ಯೆಯರನು ಕಾಯ್ದ 17 ದ್ವಿವಿಧ ಮುರಾಸುರರೆಲ್ಲರ ನಾಶಪಡಿಸಿ ಕಾಶೀಪುರವ ದಹನ ಮಾಡಿ ಪಾಂಡವರನ್ನು ಕಾಯ್ದ ಪರಮ ಮಹಿಮೆಯ ಪೇಳ್ವ 18 ಭೂಭಾರನಿಳುಹಲು ಕುರು ಪಾಂಡವರೊಳು ಸದ್ಧವರ್i ಸ್ಥಾಪಿಸಿದ ಶ್ರೀಕೃಷ್ಣಚರಿತೆಯ ಪೇಳ್ವ 19 ಭೂಸುರ ಶಾಪದಿ ಯುದ್ಧವನೆ ಮಾಡಿ ಏಕನಾಗಿದ್ದ ಉದ್ಧವನಿಗೆ ಬೋಧಿಸಿ ಲೋಕಾವನೈದು ನಿಜಧಾಮಕ್ಕೆ ತೆರಳಿದ 20 ನಿತ್ಯನೈಮಿತ್ತಿಕ ಪ್ರಾಕೃತಗಳ ಸೃಷ್ಟಿ ವೇದ ವಿಭಾಗವು ಹರಿರಾತನ ಅಂತ್ಯ ಮಾರ್ಕಂಡೇಯ ಚರಿತ ಸೂರ್ಯಗಣಗಳ ಪೇಳ್ವ 21 ಮರೆ ವೆಯಿಂದಾಗಲಿ ರುಜೆಯಿಂದಾಗಲಿ ಹರಿಯೇನಮಃ ಎಂದುಚ್ಚರಿಸಿದ ಮಾತ್ರದಿ ದುರಿತಪಾಪವು ನಾಶವಾಗಿ ಪೋಗುವುದಯ್ಯ 22 ದುರಿತವ್ಯಾಧಿಗಳು ತ್ವರಿತದಿ ಓಡುವುವು ಹರಿಸಂಬಂಧವಲ್ಲದ ಮಾತೆಲ್ಲವೂ ವ್ಯರ್ಥವೋ 23 ಭಾಗವತದ ಸಪ್ತಾಹದ ಪುಣ್ಯಫಲವು ಪಾವನವಾದ ಶ್ರೀಪಾದವ ಸೇರುವ24
--------------
ಉರಗಾದ್ರಿವಾಸವಿಠಲದಾಸರು
ಭಾಗವತ 342 ಆಗಮದಸಾರ ಶಾಸ್ತ್ರವಿಚಾರ ಪೌರಾಣ ಯೋಗತತ್ವಗಳ ಶೃಂಗಾರವೆನಿಸುತಿಹ ಶ್ರೀ ಭಾಗವತಮಂ ಪೇಳ್ವೆಸಂಕ್ಷೇಪದಿಂದ ಹನ್ನೆರಡು ಪದ್ಯಂಗಳಾಗಿ ಗುರುಸುತನ ಬಾಣದುಪಹತಿಗೆ ಮೊರೆಯಿಡುವಉ ತ್ತರೆಯ ಗರ್ಭವ ಶೌರಿರಕ್ಷಿಸಲ್ ಬಳಿಕಧರೆ ರಾಜ್ಯವಾಳುತಿರೆವಿಷ್ಣುರಾತಂ ವರಶಮೀಕಾತ್ಮಜನ ಶಾಪಬರೆತಾಕೇಳಿ ಪರಮವೈರಾಗ್ಯದಿ ಕುಶಾಸ್ತರಣದೊಳಿರಲ್ ಪ್ರಥಮಸ್ಕಂಧದೋಳ್ ತಿಳಿವುದು 1 ಸಾರವಾಗಿಹ ಭಕ್ತಿಯೋಗಮಂ ಪೂರ್ವದೋಳ್ ನಾರದಗೆ ವಿಧಿವೇಳ್ದ ಸೃಷ್ಟಿಯಕ್ರಮಂ ಪ್ರಳಯ ತನ್ನಪುರಮಂ ತೋರಿಸಿ ಚಾರುಭಾಗವತ ತತ್ವೋಪದೇಶದಿ ಸೃಷ್ಟಿ ಗಾರಂಭ ಮಾಡಿಸಿದನೆಂದು ಶುಕಮುನಿವರಂ ತಿಳಿವುದು 2 ವಿದುರ ಮೈತ್ರೇಯ ಸಂವಾದಮಂ ಸೃಷ್ಟಿಯ ಭ್ಯುದಯವಂ ಸ್ವಾಯಂಭುವಿನಜ ನನವಹರೂ ಪದ ಹರಿಯಚರಿತ ಸನಕಾದಿಗಳ್ ಜಯವಿಜಯರಿಗೆ ಕೊಟ್ಟ ಶಾಪತೆರನು ಉದಿಸಿದಂಹರಿಕರ್ದಮಂಗೆ ಕಪಿಲಾಖ್ಯದಿಂ ವಿದಿತವಾಗಲ್ ತಾಯಿಗರುಹಿದಂಸಾಖ್ಯಯೋ ತೃತೀಯಸ್ಕಂಧದೋಳ್ ತಿಳಿವದು 3 ಶಿವನ ವೈರದಿನಕ್ಷಯಾಗವಂ ಮಾಳ್ಪುದಂ ತವಕದಿಂ ಕೆಡಿಸಿ ಶಂಕರನು ಕರುಣಿಸುವದಂ ಧೃವಚರಿತಮಂಗವೇನರಚರಿತ್ರೆಗಳ್ ಪೃಥುಚಕ್ರವರ್ತಿ ಜನನ ಅವನಿಗೋರೂಪಿಯಾಗುತ ಸಕಲವಸ್ತುಸಾ ರವಕೊಡುವದುಂ ಪ್ರಚÉೀತಸರುಪಾಖ್ಯಾನಮಂ ತವೆಪುರಂಜನನುಪಾಖ್ಯಾನಮಂ ಯಿದುಚತುರ್ಥ ಸ್ಕಂಧದೋಳ್ ತಿಳಿವದು 4 ವರಪ್ರಿಯ ವ್ರತಚರಿತೆಯಾಗ್ನೀಧ್ರಚರಿತೆಯುಂ ಹರಿಯ ಋಷಭಾವತಾರದ ಮಹಾಮಹಿಮೆಯಂ ಭೂಗೋಳವಿಸ್ತಾರವು ಎರಡನೆ ಖಗೋಳದೋಳ್ ವಾಯ್ವಾದಿಮಂಡಲವಿ ವರಗಳುಂ ನರಕಾದಿ ವರ್ಣನೆಯ ಸಂಖ್ಯೆಯುಂ ಯಿದುಪಂಚಮಸ್ಕಂಧದೋಳ್ ತಿಳಿವದು 5 ಯರ ಜನನಮಂ ವಿಶ್ವರೂಪಾಖ್ಯಭೂಸುರಂ ವೃತ್ರಾಸುರನ ಕೊಲ್ವುದುಂ ಭರದಿ ಬೆನ್ಹತ್ತಿಬಹ ಬ್ರಹ್ಮಹತ್ಯವ ಸುರಪ ಧರಣಿಜಲ ವೃಕ್ಷಸ್ತ್ರೀಯರಿಗೆ ಭಾಗಿಸಿದುದಂ ತಿಳಿವದೂ 6 ವಿಧಿಯವರದಿ ಹಿರಣ್ಯಕಶ್ಯಪನು ಗರ್ವದಿವಿ ಬುಧರಂ ಜಯಿಸುವದುಂ ತರಳ ಪ್ರಹ್ಲಾದನ ನರಸಿಂಹನಾಗಿ ಹರಿಯು ಮದಮುಖನ ಸೀಳ್ವುದಂಪ್ರಹ್ಲಾದನೃಪನಜಗ ರದಮುಖದಿ ವರ್ಣಾಶ್ರಮದ ಧರ್ಮಕೇಳ್ವುದಂ ತಿಳಿವದು 7 ಮನುಗಳ ಚರಿತ್ರೆಗಳ್ ಗಜರಾಜ ಮೋಕ್ಷವಂ ದನುಜ ದಿವಿಜರು ಶರಧಿಯಂಮಥಿಸೆವಿಷವರು ಹರಿಸುರರಿಗೀಯ್ಯೆ ಅನಿಮಿಷರ ಗೆದ್ದು ಬಲಿ ಶತಕ್ರತುವಮಾಳ್ಪುದಂ ವನಜಾಕ್ಷ ವಟುವೇಷದಿಂ ದವಗೆಲ್ವುದಂ ತಿಳಿವದು 8 ಇನವಂಶ ರಾಜರಚರಿತ್ರೆಯೋಳಂಬರೀ ಷನ ಮಹಿಮೆ ಯಿಕ್ಷಾ ್ವಕುರಾಜನಚರಿತ್ರ ರಾ ಚಂದ್ರವಂಶಾನುಚರಿತಂ ವನಿತೆಯುಂ ಪುರುಷನಾಗಿದ್ದಿಳನ ಚರಿತಶು ಕ್ರನ ಮಗಳ ಶರ್ಮಿಷ್ಠೆಯರಚರಿತೆಯದುವೂರು ನವಮಸ್ಕಂಧದೋಳ್ ತಿಳಿವದು 9 ಹರಿ ದೇವಕೀ ಪುತ್ರನಾಗಿ ಗೋಕುಲದಿ ಪರಿ ಪರಿಲೀಲೆಗಳತೋರಿ ದುಷ್ಟರಂಸದೆದುತಾಂ ಪಿತೃಮಾತೃಗಳಸೆರೆಯಬಿಡಿಸಿ ವರವುಗ್ರಸೇನಂಗೆ ಪಟ್ಟಮಂಗಟ್ಟಿಸಾ ಗರದಿ ಪುರವಂರಚಿಸಿ ಬಲುತರುಣಿಯರ ಕೂಡಿ ತಿಳಿವದು 10 ನೆಸಗಿದಂ ಯದುಕುಲಕೆ ಹರಿಯಸಂಕಲ್ಪದಿಂ ಪರಮಾತ್ಮತತ್ವಬೋಧೆಯನರುಪಿದಂ ಮುಸಲದಿಂ ಯಾದವರಕ್ಷಯವೈದಲನ್ನೆಗಂ ಬಿಸಜನಾಭಂ ರಾಮನೊಡನೆ ತಾತೆರಳಿದಂ ಕರೆದೊಯಿದನೇಕಾದಶಸ್ಕಂಧದೊಳ್ 11 ಪರೀಕ್ಷಿತ ಮಹಿಪಾಲತಾಂ ಕೇಳಿದಂ ಶುಕನಿಂದಸಕಲಮುಂ ಕಲಿಕಾಲ ಸೂತಶೌನಕಾದಿಗಳಿಗಿದನು ಪೇಳಿದಂ ಬಾದರಾಯಣನ ಕೃಪೆಯಿಂದಲಿದ್ವಿ ಜಾಳಿ ಹರುಷದ ಕಡಲೊಳೀಜಾಡಿದುದುರಮಾ ಲೋಲನ ಮಹಾಲೀಲೆಯವತಾರಮದ್ಭುತಂ- -ದ್ವಾದಶಸ್ಕಂಧವಿದುವೆ 12 ಇಂತೀ ಪರಿಭಾಗವತ ಶಾಸ್ತ್ರಮಂ ಸಂತರಡಿಗಳಿಗೆರಗಿ ಪೇಳ್ದೆ ಸಂಕ್ಷೇಪದಿಂ ಕಂತುಪಿತಗÀುರುರಾಮವಿಠಲತಾಂಹೃದಯದೋಳ್- -ನಿಂತುನುಡಿಸಿದತರದೊಳು ಸ್ವಾಂತನಿರ್ಮಲರಾಗಿ ಪಠಿಸುವರಿಗನುದಿನಂ ಚಿಂತಿತಾರ್ಥಂಗಳಿಹಪರಸೌಖ್ಯವಿತ್ತುಶ್ರೀ ಕಾಂತ ಗುರುರಾಮವಿಠಲ ಪೊರೆವಜಯ- -ಜಯಮನಂತಮಹಿಮಂಗೆನಿರತಂ 13
--------------
ಗುರುರಾಮವಿಠಲ
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭಾಗ್ಯವಂತನು ಇನ್ನು ಯಾರಯ್ಯ ಪ. ಯೋಗ್ಯ ವೈಷ್ಣವಕುಲದ ಭಾಗವತನಲ್ಲದೆ ಅ.ಪ. ಚತುರನೆನಿಸಿ ಲಕ್ಷ ಮನೆಮನೆ ತಿರುಗಿದೆಚತುರಾನನನಾ ಮಾತು ಅನುಸರಿಸಿದೆಸತು ಚಿತು ಆನಂದ ಆತ್ಮ ಹರಿಸ-ರ್ವೋತ್ತಮನ ದಾಸರದಾಸ ಎಂಬುವನಲ್ಲದೆ 1 ತಾರÀತಮ್ಯ ಪಂಚಭೇದವನೆ ತಿಳಿದು ಶ್ರೀಮಾರುತನ ಮತಗಳೇ ಹಾರೈಸುತಕರ್ಮ ವಂಚನೆಯಿಲ್ಲದನುದಿನದಿ ಮಾಡುತಚರಿಸುತ ಸಂಚಿತಾಗಾಮಿ ಕಳೆವವನಲ್ಲದೆÉ2 ಪತಿತಪಾವನ ಶ್ರೀಹರಿಗುರುಗಳನು ಮೋದದಿಕ್ಷಿತಿಯೊಳಗೆ ಭಜನೆಯೆ ಧನವೆನ್ನುತಅತಿಶಯದಿ ಶೇಷಾದ್ರಿ ಹಯವದನನ್ನ ನೆನೆನೆನೆದುಪ್ರೀತಿಯಿಂದಲಿ ಭಜಿಸುವವನಲ್ಲದೆ 3
--------------
ವಾದಿರಾಜ
ಭಾರತೀರಮಣಾ ಮನ್ಮನದಲಿ ತೋರು ತವ ಚರಣಾ ಪ ಮೂರೇಳು ಸಾವಿರದಾರುನೂರು ಜಪ ಓರಂತೆ ಜಪಿಸಿ ಉದ್ಧಾರ ಮಾಡುವಿ ಎಮ್ಮ ಅ.ಪ. ಮೂರುವಿಧ ಜೀವರೋಳು ಹೊರ ನೀ ಪ್ರೇರಕನೋ ದೇವ ನಾರಾಯಣನ ನಿಜಾರಾಧಕರೊಳು ಆರು ನಿನಗೆ ಸರಿ ಮೂರವತಾರನೆ 1 ಚತುರವಿಂಶಶಿ ತತ್ವೇಶರಾಪತಿಯ ನಿನ್ನ ತುತಿಪ ಉಪೇಂದ್ರ ಸುಯತಿಕರ ಪೂಜಿತ ನತಿಸುವೆ ಎಮಗೆ ಸನ್ನತಿ ಕೊಡು ಸರ್ವದಾ 2 ಪ್ರಾಣಪಂಚಕ ರೂಪನೆ ಖಳ ಶ್ರೇಣೀವಂಚಕ ಕ್ಷೋಣಿಯೊಳಗೆ ಕೃಷ್ಣ ವೇಣೀತರಂಗಿಣಿ ತ್ರಾಣಗೈದ ನಿರ್ವಾಣ ಪ್ರದಾಯಕ 3 ಲೋಕರೂಪನೆ ಜಗದೊಳನೇಕ ಚರಿತನೆ ಪಿನಾಕಿ ಸುರೇಂದ್ರ ದಿ ವೌಕಸರೆಮ್ಮನು ಸಾಕುವರನುದಿನ4 ಮಾತರಿಶ್ವನು ಜಾತಹನುಮ ಜಗನ್ನಾಥವಿಠಲನ ಪ್ರೀತಿಯಿಂದಲಿ ತೋರೋ 5
--------------
ಜಗನ್ನಾಥದಾಸರು
ಭಾಸಿಸುತಿಹ | ದಾಸರ ನೋಡಿ || ವ್ಯಾಸ ತೀರ್ಥರ ದಾಸರು ಪ ಪುರಂದರ ಕರ್ಮಜರ ಗುರು ಅ.ಪ. ಚಾರು ಚರಣ |ಧೃತ :ನೀರಜ ಹೃತ್ಸರೋರುಹದೊಳಾರಾಧಿಸ್ಯಪಾರಸುಖದಿ ಸಮೀರ ಮತ ಪ್ರಸಾರವ ಪಡಿಸೀ 1 ದಾಸಕೂಟ ಸನ್ಮೌಳಿಮಣಿ ವಿದಿತ ಜ್ಞಾನೀನ್ಯಾಸ ಕೋವಿದ ವ್ಯಾಸತೀರ್ಥ | ದಾಸ ಸುರಪ ದಾಸನೆನಿಸಿ ||ಧೃತ :ದಾಸಪಂಥ ಪೋಷಿಸೀದ ದಾಸವರ್ಯಆ ಸಮೀರ ಶಾಸಿತ ಗೌರೀಶನ ಬಳಿವಾಸಿಸಿ 2 ನಾಕಪತಿಯ ನಾಮದಾಸ | ಶತ ಚತುರ ವರ್ಷಲೋಕ ಲೋಕ ಪ್ರಕಾಶಿಸಿ | ಆಕೆವಾಳರ ವಾಕಿನಲ್ಲಿ |ಧೃತ :ಸಾಕು ಸಾಕನೆ ಪ್ರಾಕೃತ ಗೀತೆಯ ಝೇಂಕರಿಸಿದಶುಕ ಪಿತ ಗುರುಗೋವಿಂದ ವಿಠಲ ಸ್ವೀಕೃತ ಭಕುತ 3
--------------
ಗುರುಗೋವಿಂದವಿಠಲರು
ಭೂಮಿಜೆಯು ಸೀತೆಯು ಜನನಿ ಗರ್ಭವ ವಡೆದು ಬಂದಳು ದನುಜ ವಧಕೆಂದೇ ಪ ದುರುಳ ದನುಜರು ಪೆಸರು ರಾವಣ ಕುಂಭಕರ್ಣರು ಋಷಿ ಜನಂಗಳ ಮುಖವ ಕೆಡಿಸುತ ಮೆರೆಯುತಿರೆ ಕೇಳ್ದು 1 ಭವದ ಭಟ ಶ್ರೀರಾಮಚಂದ್ರನು ಮೂವರನು ಜರ ಕೂಡಿ ಜನಿಸಿದಾ ಭುವನ ಭಾರವ ಪರಿಹರಿಪೆನೆಂದಭಯ ತೋರುತಲೀ 2 ಸಿರಿಲಕುಮಿ ನಿಜವರನು ಜನಿಸಿದ- ನರಿತು ¥ರಮಾನಂದದಲಿ ತಾ ಭರದಿ ಮೈದೋರಿದಳು ಹರಿಗೆ ತಾನರಸಿ ಎನಿಸಿದಳು 3 ವಾನರರ ಸೇನಾಧಿಪನು ಪವ- ಸೂನು ಶ್ರೀ ಹನುಮನೆಂಬುವನು ದಾನವಾರಿ ಶ್ರೀ ರಾಮಚಂದ್ರಗೆ ಭೃತ್ಯನೆನಿಸಿದನು 4 ವಿಪಿನ ಚರವ್ಯಾಜದಲಿ ರಕ್ಕಸ- ರಪರಿಮಿತ ಕೆಡಹಿದನು ಧರಣಿಗೆ ವಿಪರೀತ ಬತ್ತದ ಶರಧಿಯನು ಹನುಮಂತನ್ಹಾರಿದನು 5 ಪ್ರತಿಭಟಿಸಿ ಶ್ರೀ ರಾಮಚಂದ್ರನು ಅತಿಮೆರೆವ ರಾವಣನ ಮಡುಹಿದಾ ಮತಿವಂತ ಹನುಮನಿಗೆ ಇತ್ತಾ ಚತುರವದನ ಪದಾ 6 ಧರಣಿ ಮಗಳಿಂಗೂಡಿ ರಾಮನು ಧರೆಯನೆಲ್ಲವನಾಳಿ ನ್ಯಾಯದಿ ಸ್ವರಗವಾಸಕೆ ತೆರಳಿದನು ನರಸಿಂಹವಿಠಲನು 7
--------------
ನರಸಿಂಹವಿಠಲರು
ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1 ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ ಕಡಿದು ನಿ ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ ಹುಯಿಸಿ ಕಾವನೈಯನ ಕುಣಿಸಿದ 2 ಸಿರಿ ವಿಠ್ಠಲನ್ನ ಮೃದು ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ ಬುದ್ಧಿ ಪೂರ್ವಕದಿಂದಲಿ ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3 ವರದಪ್ಪನೇ ಸೋಮ ಗುರುರಾಯ ದಿನಕರನು ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ ಕರಣ ಚರಿತೆಯಲಿ ನಲಿದಾಡಿದ 4 ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ ಹಿತನಾಗಿ ದೃಢನೋಡಿದ ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ ಸುತನಾಗಿ ನೀರು ನಿಶಿತದಲಿ ತಂದ ಅ ಪ್ರತಿ ದೈವತಾ ಕಿಂಕರ 5 ವಜ್ರ ಪ್ರಹರವಿದು ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು ಹೆಚ್ಚು ಲಜ್ಜೆಯನು ತೊರೆದು ನಿತ್ಯ ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ ಅಬ್ಜಭವನೊಡನೆ ಗತಿಗೆ 6 ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ ದಾಸರನ ಸಂತರಿಸಿ ಧರೆಗೆ ತೋರಿ ಸಿರಿ ವಿಠಲನ ಸ್ಮರಿಸುತ ಸು ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು ಚಿಂತೆಯೊಳಗಿಟ್ಟ ಗುರುವೆ 7
--------------
ವಿಜಯದಾಸ
ಮಂಗಳಾರತಿಯ ಪಾಡಿರೆ ಮಾನಿನಿಯರು ಪ ಅಂಧಕನನುಜನ ಕಂದನ ತಂದೆಯಕೊಂದನ ಶಿರದಲಿ ನಿಂದವನಚಂದದಿ ಪಡೆದವನ ನಂದನೆಯಳ ನಲವಿಂದ ಧರಿಸಿದ ಮುಕುಂದನಿಗೆ 1 ರಥವನಡರಿ ಸುರ ಪಥದಲಿ ತಿರುಗುವನಸುತನಿಗೆ ಶಾಪವನಿತ್ತವನಖತಿಯನು ತಡೆದನ ಸತಿಯ ಜನನಿ ಸುತನಸತಿಯರನಾಳಿದ ಚತುರನಿಗೆ 2 ಹರಿಯ ಮಗನ ಶಿರ ತರಿದನ ತಂದೆಯಹಿರಿಯ ಮಗನ ತಂದೆಯ ಪಿತನಭರದಿ ಭುಜಿಸಿದವನ ಶಿರದಲಿ ನಟಿಸಿದವರ ಕಾಗಿನೆಲೆಯಾದಿಕೇಶವಗೆ 3
--------------
ಕನಕದಾಸ
ಮಗುವು ಕಾಣಯ್ಯ ಮಾಯದ ಮಗುವು ಕಾಣಯ್ಯ ಸುಗುಣಾ ವಾದಿರಾಜರೆ ಮೂಜಗವಾನುದರದೊಳಿಟ್ಟ ಪ ಏಕಾರ್ಣವಾಗಿ ಸಕಲ ಲೋಕವಾಕಾರವಳಿಯಲೂ ಏಕಮೇವಾದ್ವಿತೀಯವೆಂಬಾಗಮಕೆ ಸಮವಾಗೀ ಶ್ರೀಕರಾಂಬುಜದಿಂ ಪಾದಾಂಗುಲಿಯ ಪಿಡಿದು ಬಾಯೊಳಿಟ್ಟು ಶ್ರೀಕಾಂತ ವಟದೆಲೆಯ ಮೇಲ್ಮಲಗಿ ಬ್ರಹ್ಮನ ಪಡೆದಾ 1 ಮಾಯಾಪೂತನೀಯ ಕೊಂದು ಕಾಯವ ಕೆಡಹಿ ಶಕಟನನು ಸಾಯಬಡಿದು ವತ್ಸನ ಧೇನುಕನ ವೃಷಭನ ನೊಯ್ಯನೊದ್ದು ಯಮಳಾರ್ಜುನರಿಗೆ ಸಾಯುಜ್ಯವನಿತ್ತು ತನ್ನ ತಾಯಿಗೆ ತಾ ಮಣ್ಣುಮೆದ್ದು ಬಾಯಿ ಬಿಚ್ಚಿ ತೋರಿಸಿದಾ 2 ಕಡಹದಾ ಮರವನೇರಿ ಸಂಗಡಿಗರೊಂದಿಗೆ ಕಾಳಂದಿಯ ಮಡುವಲಿ ಧುಮುಕಿ ಕಲಕಿ ಜಲವಾ ಆ ಕಾಳಿಂಗನಾ ಪೆಡೆಯ ತುಳಿದು ಜಡಿಯಲವನಾ ಮಡದಿಯರು ಬೇಡಿಕೊಳ್ಳೆ ಕಡಲಿಗಟ್ಟಿ ಬಂದು ಎನ್ನ ತೊಡೆಯ ಮೇಲೆ ಮಂಡಿಸಿದ 3 ಬಳ್ಳಿಗಟ್ಟದುಡಿಯಲ್ಲಿ ಗುಲ್ಲಿಯ ಚೀಲಾವ ಸಿಕ್ಕಿಸಿ ಕಲ್ಲಿಗಟ್ಟ್ಯೊಗರ ಕಂಬಳಿಯ ಕೋಲು ತುದಿಯೊಳು ನಿಲ್ಲಿಸಿ ಹೆಗಲೊಳು ಕೊಂಬು ಕೊಳಲನು ಪಿಡಿದೂದುತ್ತ ಗೊಲ್ಲರೊಡಗೂಡಿ ಆಡುತೆಲ್ಲ ಗೋವುಗಳ ಕಾಯ್ದಾ 4 ಶ್ರುತಿತತಿಗಗೋಚರನು ಚುತಿದೂರನಾದಿಮೂರ್ತಿ ಚತುರ್ಮುಖಾದಿಶೇಷ ದೇವಾರಾಧ್ಯ ದೇವನು ಪತಿ ವೈಕುಂಠಕೇಶವನು ಯತಿಯೆ ನೀ ನೋಡಲು ಶರಣಾಗತನ ತೊಡೆಯೊಳು 5
--------------
ಬೇಲೂರು ವೈಕುಂಠದಾಸರು