ಒಟ್ಟು 319 ಕಡೆಗಳಲ್ಲಿ , 69 ದಾಸರು , 298 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟರಮಣ ಶ್ರೀ ವೆಂಕಟರಮಣ ಶ್ರೀವೆಂಕಟರಮಣನೇ ||ಅ|| ಪಂಕಜೋದ್ಭವ ಪಿತ ಪಿಳ್ಳಂಕೇರಿಯ ವಾಸವೆಂಕಟರಮಣನೇ ಅ.ಪ. ಭದ್ರ ಮೂರುತಿ ಸಣ್ಣ | ಆದ್ರಿಯಾಶ್ರಯಿಸಿ ನಿಂತಿದ್ದಿ ಕಾರಣವೇನೋ |ಶುದ್ಧ ಜನರು ಮಾಳ್ಪ | ಶುದ್ಧ ಸೇವೆಯ ಗೊಂಡುದ್ಧರಿಸಲು ಯೋನೋ 1 ನೀರೊಳು ಮುಳು ಮುಳಿಗಿ | ಭಾರಿ ಗಿರಿಯ ಪೊತ್ತುಕೋರೆಹಲ್ಲನು ತೋರೇನೋ |ಧೀರ ಕಂದನ ಕಾಯ್ದ | ನಾರಸಿಂಹನೆ ಬಲಿಯದ್ವಾರ ಕಾಯ್ದಿಹದೇನೋ 2 ನೃಪರ ಸವರಿ | ನಾರಿ ಚೋರನ ಕೊಂದುಚಾರ ಗೋಪೆರ ಕೂಡೇನೊ |ಸಾರಿ ತ್ರಿಪ್ಪುರವನ | ನಾರೇರ ವ್ರತ ಕೆಡಿಸಿವೀರ ರಾವುತನಾದದ್ದೇನೋ 3 ಪಂಚ ರೂಪದಿ ಪ್ರ | ಪಂಚವ ವ್ಯಾಪಿಸಿಪಂಚಾತ್ಮಕ ನಾದದ್ದೇನೋ |ಅಂಚೆ ಗಮನನಾದಿ | ಪಂಚ ಪಂಚರಲ್ಲಿಸಂಚು ಗೊಳಿಪುದೇನೋ | 4 ಇಂದ್ರಾ ವರಜ ದೇ | ವೇಂದ್ರ ಗಭೀಷ್ಟದಬಂದಲ್ಲಿ ನಿಂದಿರ್ಪುದೇನೋಇಂದು ಕುಲಜ ರಾ | ಜೇಂದ್ರ ಜನಮೇಜಯಗಂದು ಒಲಿದು ನಿಂತಿಲ್ಲೇನೋ 5 ತೊಂಡ ಮಾನಾನಂದಅಂಡಜವಾಹ ವಿಖ್ಯಾತಾ6 ಭಾವ ಶುದ್ಧೀಲಿ ಸ್ತವನ | ದೇವ ಶರ್ಮನು ಮಾಡೆಭಾವಕ್ಕೊಲಿದು ಮೋಕ್ಷವಿತ್ಯೋ |ಗೋವ ಕಾವ ಗುರು | ಗೋವಿಂದ ವಿಠಲ ಭಕ್ತಿಭಾವ ನಿನ್ನಯ ಪದದಲ್ಲಿಯೋ7
--------------
ಗುರುಗೋವಿಂದವಿಠಲರು
ವೇಣು ಗೋಪಾಲನು ಬರುವನಂತೆ ಪ ಜಾಣೆ ನಮ್ಮನೆಯಲಿ ಇರುವನಂತೆ ಅ.ಪ ಪರಮ ಸುಂದರ ನವತರುಣನಿವ ಸಖಿ ಅರಿತು ಭಜಿಪರಿಗೆ ಕರುಣಿ ಇವ ಸಖಿ ತೊರೆಯಬೇಕಭಿಮಾನ ಕ್ಷಣದಲಿ ಮರೆಯಬೇಕಿಹಲೋಕ ಬಂಧನ1 ಹೃದಯವ ಕದಿಯುವ ಚೋರನಿವ ಸಖಿ ಮದನನ ಜಗಕಿತ್ತ ಜಾರನಿವ ಸಖೀ ಕದನದಲಿ ಕಂಠೀರವನು ಶುಭ ವದನೆಯರ ಶೃಂಗಾರ ಜಲನಿಧಿ 2 ಘನತೆಯು ರುಚಿಸದು ಹುಡುಗನಿವ ಧನವನು ಬಯಸನು ಸಿರಿರಮಣ ತನುಮನಗಳರ್ಪಿಸಲು ಹರುಷದಿ ಕುಣಿಯುವನು ಕುಣಿಸುವ ಪ್ರಸನ್ನನು 3
--------------
ವಿದ್ಯಾಪ್ರಸನ್ನತೀರ್ಥರು
ವೇಣುನಾದ ಪ್ರಿಯ ಗೋಪಾಲಕೃಷ್ಣ ಪ. ವೇಣುನಾದ ವಿನೋದ ಮುಕುಂದಗಾನವಿನೋದ ಶೃಂಗಾರ ಗೋಪಾಲ ಅ.ಪ. ವಂದಿತಚರಣ ವಸುಧೆಯಾಭರಣಇಂದಿರಾರಮಣ ಇನಕೋಟಿತೇಜಮಂದರಧರ ಗೋವಿಂದ ಮುಕುಂದಸಿಂಧುಶಯನ ಹರಿ ಕಂದರ್ಪಜನಕ 1 ನವನೀತಚೋರ ನಂದಕುಮಾರಭುವನೈಕವೀರ ಬುದ್ಧಿವಿಸ್ತಾರರವಿಕೋಟಿತೇಜ ರಘುವಂಶರಾಜದಿವಿಜವಂದಿತ ದನುಜಾರಿ ಗೋಪಾಲ2 ಪರಮದಯಾಳು ಪಾವನಮೂರ್ತಿವರ ಕೀರ್ತಿಹಾರ ಶೃಂಗಾರಲೋಲಉರಗೇಂದ್ರಶಯನ ವರ ಹಯವದನಶರಣರಕ್ಷಕ ಪಾಹಿ ಕೋದಂಡರಾಮ 3
--------------
ವಾದಿರಾಜ
ಶಂಭೋ ಚಂದ್ರಶೇಖರ ಪ ವಂದಿಪೆ ನಿನ್ನಂಘ್ರಿಯುಗಳವ ಅ.ಪ ಭಜಿಸುವೆ ನಾನ ನಿನ್ನ ಶಂಕರ ಶಂಭೊ 1 ಶೈಲಸುತಾ ಚಿತ್ತಚೋರನೆ ಶೂಲಧರಾಘ ವಿದೂರನೆ 2 ಕರುಣಿಸೆನ್ನ ಸುಚರಿತ್ರನೆ ಶಂಭೊ 3
--------------
ಗುರುರಾಮವಿಠಲ
ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಶರಣು ಶೇಷಾಚಲ ನಿವಾಸಗೆ | ಶರಣು ವರಹ ತಿಮ್ಮಪ್ಪಗೆ | ಶರಣು ತಿರುವೆಂಗಳೇಶಗೆ ಪ ಮಾಧವ | ನರಹರಿ ಮಧುಸೂದನಾ | ಅಚ್ಯುತ | ಗಿರಿಜನುತ ನಾರಾಯಣಾ 1 ಕ್ಷೀರ ವಾರಿಧಿಶಯನ ವಾಮನ | ಗೋಪಿ ಜನ | ನವನೀತ | ಚೋರ ರಿಪು ಸಂಹಾರ ಹರಿ ದಾಮೋದರ 2 ಗರಳ ತಲ್ಪನೆ | ಕರುಣಾಳುಗಳ ಒಡೆಯನೆ | ಸಿರಿ ವಿಜಯವಿಠ್ಠಲನ | ಚರಣ ಕಮಲಕೆ ನಮೋ ನಮೋ 3
--------------
ವಿಜಯದಾಸ
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶುಭ ಮಂಜುಳಗಾತ್ರ್ರೆಕುಂಜರದಂತೆ ಗಮನೆ ರಂಜಿತಾಂಗಿ ನಿರಂಜನಾಂಗಿ ಪ ಧರೆಯ ಮ್ಯಾಲೆ ಹಿರಿಯಳು ನಾ-ನಿರಲು ಲಜ್ಜೆ ತೊರೆದು ನೀನುಸರಸವಾಡೋದೆ ಮುರಹರನಕರೆದು ಭಾಮಿನಿ ಸುಗುಣೆ ಕಾಮಿನಿ 1 ಪತಿಯ ಪ್ರೀತಿ ಎನ್ನ ಮ್ಯಾಲೆಅತಿಶಯದಿ ಇರಲು ಜ್ಯೇಷ್ಠಸತಿಯಳೇನೇ ನೀನು ನೋಡುಮತಿಯ ರುಕ್ಮಿಣಿ ಸುಪದ್ಮಗಂಧಿನಿ2 ಒಂದು ಕಾಲದಲ್ಲಿ ದಾಸಿ-ಯಿಂದ ಪತಿಯು ಸರಸವಾಡಲುಬಂದಳೇನೇ ಅರಸಿ ಸಮ-ಳೆಂದು ಭಾಮಿನಿ ಸುಗುಣೆ ಕಾಮಿನಿ 3 ದಾಸಿ ಸಮಳು ನಾನು ಅಲ್ಲ ದೋಷ ಮಾತನಾಡಬೇಡಶ್ರೀಶನ ದಯರಾಶಿ ಇರಲುದಾಸಿಯೆ ರುಗ್ಮಿಣಿ ಸುಪದ್ಮಗಂಧಿನಿ 4 ಸಾರೆ ಕೃತ್ಯವಾರೆ ಹೂಡಿದ್ವಾರಾವತಿಯಿಂದ ಎನ್ನಸಾರೆ ಬಂದ ಪ್ರೀತಿಯು ಅ-ಪಾರೆ ಭಾಮಿನಿ ಸುಗುಣೆ ಕಾಮಿನಿ5 ಕಡಲಶಾಯಿ ತಡೆದರಿನ್ನುದಿಡುಗು ದೇಹ ಬಿಡುವೆನೆಂಬೊನುಡಿಯ ಕೇಳಿ ಪಿಡಿದನೆಬಿಡದೆ ರುಗ್ಮಿಣಿ ಸುಪದ್ಮಗಂಧಿನಿ 6 ಮಂದರಧರನು ಪ್ರೀತಿ-ಯಿಂದ ನಿನ್ನ ಪಡೆದನೇನೆಒಂದು ಮಣಿಯ ಕಾರಣದಿಬಂದೆ ಭಾಮಿನಿ ಸುಗುಣೆ ಕಾಮಿನಿ7 ಸುಮ್ಮನೆ ಬಂದವಳಿಗೆಬ್ರಹ್ಮ-ಲಗ್ನದಿ ಬಂದೆನಗೆಸಾಮ್ಯವೇನೆ ಯಾಕೆ ನಿನಗೆಹೆಮ್ಮೆ ರುಗ್ಮಿಣಿ ಸುಪದ್ಮಗಂಧಿನಿ. 8 ಮಾನಾದಿ ಭಕ್ತಿಯು ಕನ್ಯಾ-ದಾನವು ಲೋಕದೊಳಗುಂಟುಏನು ನಿನ್ನ ತಾತ ಕೊಟ್ಟದೀನ ಭಾಮಿನಿ ಸುಗುಣೆ ಕಾಮಿನಿ 9 ಎನ್ನ ಹಂಗದೆಂದುಪ್ರಸನ್ನ ಕೇಳಿ ಶತಧನ್ವನಬೆನ್ನಟ್ಟಿ ಕೊಂದನೇ ನೀ-ಚೆನ್ನ ರುಗ್ಮಿಣಿ ಸುಪದ್ಮ ಗಂಧಿನಿ 10 ವೀರ ಅರಸರ ಸ್ವಭಾವಚೋರರ ಕೊಲ್ಲಬೇಕೆಂಬೋಸಾರ ಪ್ರೀತಿಯದರಿಂದತೋರಿ ಭಾಮಿನಿ ಸುಗುಣೆ ಕಾಮಿನಿ11 ಇಂದ್ರಾದಿ ದೇವತೆಗಳೊಳುಸಾಂದ್ರಯುದ್ಧವನ್ನೆ ಮಾಡಿವೀಂದ್ರ ಎನಗೆ ಪಾರಿಜಾತತಂದ ರುಗ್ಮಿಣಿ ಸುಪದ್ಮಗಂಧಿನಿ12 ಕ್ಲೇಶ ನೋಡಿ ತಂದತರುವ ಭಾಮಿನಿ ಸುಗುಣೆ ಕಾಮಿನಿ13 ನಿಜಳೆಂದು ರಂಗನು ಎನ್ನವಿಜಯಯಾತ್ರೆಯಲ್ಲಿ ತನ್ನಭುಜಗಳಿಂದಾಲಂಗಿಸಿದಸುಜನೆ ರುಗ್ಮಿಣಿ ಸುಪದ್ಮಗಂಧಿನಿ 14 ಅರಸರ ಸ್ವಭಾವ ತಮ್ಮಅರಸೇರ ಮನೆಯೊಳಗಿಟ್ಟುಸರಸ ದಾಸೇರಿಂದ್ಹೋಗೋದುಸ್ಮರಿಸೆ ಭಾಮಿನಿ ಸುಗುಣೆ ಕಾಮಿನಿ 15 ಸಾರವಚನ ಕೇಳಿ ಭಾಮೆಮೋರೆ ಕೆಳಗೆ ಮಾಡುತಿರಲುನಾರಿ ರುಕ್ಮಿಣಿ ಭಾಮೆಯರನ್ನುವೀರ ಕರೆದನು ತಾ ಸೇರಿ ಮೆರೆದನು16 ಮಂಗಳಾಂಗ ಮಹಿಮ ಕೇಶವಾ-ಲಿಂಗಿಸಿದ ಭೈಷ್ಮಿಯನ್ನುತುಂಗಗುಣ ಗೋಪೀರಮಣರಂಗವಿಠಲನು ಅನಂಗಜನಕನು 17
--------------
ಶ್ರೀಪಾದರಾಜರು
ಶ್ರೀ ಗುರುಮಹಾರಾಯಾ ದಮ್ಮಯ್ಯ ನಿನ್ನ ಪಾದಕೆ ಬಿದ್ದೆನು ತೋರಿಸೋ ಶ್ರೀ ಗುರುನಾಥಾ ಪ ತೋರುವ ತೋರಿಕೆಗಳೆಲ್ಲವ ಹಿಂಗಿಸೋ ಷಡ್ವೈರಿಗಳಾಗಿಹ ಚೋರರ ಬಾಧೆಯ ಬಲವನು ಭಂಗಿಸೋ ತತ್ವಾಮೃತ ಸಾರ ನಿತ್ಯಸುಖದೊಳನ್ನ ನಿಲ್ಲಿಸೋ 1 ಅಮೃತಾನ್ನವ ಮುಂದಿಡೋ ಜೋಡಾಗದ ಊಟವನ್ನುಣ್ಣಿಸೋ ನವನೂತನವಾಗಿಹ ಆಡದಿರುವ ಆಟವಾಡಿಸೋ ನಿನ್ನರ್ಚನೆ ಪೂಜೆಯ ಮಾಡುವಾನಂದವುದಯ ಮಾಡಿಸೋ 2 ಚರಣತೀರ್ಥ ಪ್ರಸಾದವನು ಕೃಪೆಮಾಡೋ ಸಜ್ಜನರಾ ಸ್ಮರಣೆಯ ಕರ್ಣಾಭರಣವ ನೀಡೋ ನಾನಾಮೃತದ ಚರಣ ರಜಪ್ರಕಾಶದೊಳಿಡೋ ವಿಮಲಾನಂದ ವಿಧಿ ನೋಡೋ 3
--------------
ಭಟಕಳ ಅಪ್ಪಯ್ಯ
ಶ್ರೀ ಧೀರೇಂದ್ರರು ಚಾರು ನಿಮ್ಮಯ ಚರಣತೋರಿಸುದ್ಧರಿಸಬೇಕೊ ಪ. ಆರು ಇವನೆಂದು ನೀವ್ ಗಾರುಮಾಡದಲೆನ್ನ ಸಾನುರಾಗದಿ ಪೊರೆಯಬೇಕೊ ಸ್ವಾಮಿ ಅ.ಪ. ವರದಾ ತೀರದಿ ನಿಂದು ವರ ಕೊಡಿವೀಯೆಂದು ಘನಗರ್ವ ನಿನಗ್ಯಾತಕೊಸುರಪತಿಯ ಬಲದಲ್ಲಿ ಇಹೆನೆಂದು ನೀ ಬಲು ಜರಿದು ನೋಡಲಿ ಬ್ಯಾಡವೊಆರುಗತಿಯಿಲ್ಲವೆಂದೀರ ನಿನ್ನೆಡೆ ಬರಲು ಏರಿ ಕೂಡ್ರುವುದುಚಿತವೇಸಾರಿ ಹೇಳುವೆ ನಿನಗೆ ಚೋರದಾಸನು ನಾನು ಘೋರರೂಪದಿ ಬಂದು ತೋರೋ ಸ್ವಾಮಿ 1 ರಘುಕುಲತಿಲಕನ ಭಕ್ತಿಪಾಶದಿ ಕಟ್ಟಿಚಕ್ರವರ್ತಿಯೆನಿಸಿ ಗೋಕುಲದ ಗೊಲ್ಲನ ಯುಕುತಿಯಲಿ ನೀನೊಲಿಸಿದ್ಯೊಶಕ್ತಿಯಿಂ ಕಲಿಯುಗದಿ ಧೀರೇಂದ್ರ ಪೆಸರಿನಿಂ ದುರಿತಗಳ ಕಳೆಯುವಿಯೊಧಿಃಕರಿಸಿ ವಾದಿಗಳ ದೇಶದೊಳ್ ಚರಿಸಿದ ವಸುಧೀಂದ್ರ ಸಂಜಾತ ಪೊರೆಯೆ ಸ್ವಾಮೀ 2 ಹೆಣ್ಣಿನಾಶೆಗೆ ಬಿದ್ದು ಹೊನ್ನು ಸ್ಥಿರವೆಂದು ನಾ ಮಣ್ಣುಪಾಲಾದೆನೊತನುವು ತನ್ನದು ಎಂಬ ಭಿನ್ನ ಜ್ಞಾನವನೇ ಹೊಡೆದೋಡಿಸೆಮಾನ್ಯವಂತರ ಸಂಗ ಇನ್ನು ಮೇಲಾದರೂ ದಯಪಾಲಿಸೊಘನ್ನ ಮಹಿಮಾ ತಂದೆವರದವಿಠಲನಲ್ಲಿ ಜ್ಞಾನದಿಂ ಭಕ್ತಿ ವ್ಯೆರಾಗ್ಯವನೆ ಈಯೋಸ್ವಾಮಿ 3
--------------
ಸಿರಿಗುರುತಂದೆವರದವಿಠಲರು
ಶ್ರೀ ರಮೇಶನೆ | ಶ್ರೀ ನಾರಸಿಂಹ ಶ್ರೀ ರಮೇಶನೆ ಪ. ಶ್ರೀ ರಮೇಶ ಸುರ ಸಾರ್ವಭೌಮ ಭವ ತಾರಕಗೊಳಿಸುವ ಕಾರಣಪುರುಷ ಅ.ಪ. ಆದಿಮೂಲನೆ | ಅಪಾರ ಮಹಿಮ ಖೇದದೂರನೆ ವಾದಿಪ ಪಿತನೊಳು ಸಾಧಿಪೆ ನಿನ ಮತ ಮೋದಗೊಳಿಸಿ ಪ್ರಹ್ಲಾದನ ಪೊರೆದೆ 1 ಶೌರಿ ಭೂಧರಾ ದೊರೆ ಕಾದಿದ ದುಷ್ಟ ದೈತ್ಯಾದಿಗಳ ಕೊಂಡು ಮೋದವಿತ್ತೆ ಭೂದೇವಿಗೆದೆ ಶ್ರೀಶಾ 2 ಭೂಪರೈವರು | ಎದುರಲ್ಲಿ ಇರಲು ಪಾಪಿ ಖೂಳರು ದ್ರೌಪದಿ ವಸನವ ಕೈಪಿಡಿದೆಳೆಯಲು ಪತಿ ಸಲಹೆನೆ ತಾಪವ ಬಿಡಿಸದೆ 3 ನೀರೊಳಾಡಿದೆ | ನೀ ಕಲ್ಲು ಪೊತ್ತು ನಾರಿಯ ತಂದೆ ನಾರಸಿಂಹ ವಟು ವೀರರಾಮಚಂದ್ರ ಜಾರಚೋರ ವಸ್ತ್ರದೂರನೆ ಕಲ್ಕಿ 4 ಗೋಪಾಲಕೃಷ್ಣ | ವಿಠ್ಠಲದೇವ ಕಾಪಾಡೊ ಕೃಷ್ಣ ರೂಪ ರೂಪಾಂತರ ವ್ಯಾಪಿಸಿ ಜಗದೊಳು ಶ್ರೀಪತಿ ಹೃದಯದಿ ರೂಪವ ತೋರೊ 5
--------------
ಅಂಬಾಬಾಯಿ
ಶ್ರೀ ರುಧಿರೋದ್ಗಾರಿ ಸಂವತ್ಸರ ಸ್ವಾಮಿ ಧನ್ವಂತರಿ ಸ್ತೋತ್ರ 155 ಆನಂದ ಚಿನ್ಮಾತ್ರ ವಪುಷ ಸರ್ವಾಧಾರ ಅನಘ ಕೂರ್ಮಹÀಯ ಶೀಷ್ರ್ಯ ಸ್ತ್ರೀರೂಪ ಅಜಿತ ಆನಮೋ ರುಧಿರೋದ್ಗ್ಗ್ಗಾರಿ ಸಂವತ್ಸರ ಸ್ವಾಮಿ ಅನುತ್ತಮ ಸರ್ವೋತ್ತಮ ಧನ್ವಂತರಿ ರಮೇಶ ಪ ರಾಜಗುರು ಮಂತ್ರಿಗುರು ಸÉೀನಾಧಿಪತಿ ಬುಧನು ರಾಜಿಸುವರು ಸೂರ್ಯೇಂದು ಕವಿ ಭೂಮ ರವಿಜ ಪ್ರಜ್ವಲಿಸಿ ನೀ ಇವರೊಳ್ ಕೃತಿಯ ನಡೆಸಿ ಲೋಕ ಪ್ರಜೆಗಳಿಗೆ ಮಳೆ ಬೆಳೆ ಸೌಖ್ಯವಿತ್ತು ಪÉೂೀಷಿಸುವಿ 1 ದೇಶದೇಶ ರಾಜ್ಯಾಧಿಪರ್ಗಳ ಪರಸ್ಪರ ಸಂಶಯ ದುರ್ಮನವ ಆಗಾಗ ಶಾಂತ ಮಾಡುವುದು ಮೋಸಗಾರ ಕುಜನರು ಚೋರ ಕ್ರೂರರು ಮಾಳ್ಪ ಹೊಸ ಹೊಸ ಚಟುವಟಿಕೆ ಪರಿಹರಿಸಿ ಕಾಯೋ ಲೋಕವನು 2 ವೇದವ್ಯಾಸವಿರಚಿತ ಸಾತ್ವಿಕ ಪುರಾಣಗಳ ಯಥಾರ್ಥ ಪೇಳಿದೆ ದುಷ್ಟಾರ್ಥ ಪೇಳಿ ಜನರ ಮೋಹಿಸಿ ಸಾಧು ಸ್ತ್ರೀಪುರುಷರ ಪ್ರೌಢಕನ್ಯೆ ಬಾಲರ ವಂಚಿಪ ಧೂರ್ತರನು ಅಡಗಿಸಿ ಸತ್ಯಧರ್ಮ ಸಂತಾನ ಬೆಳೆಸೋ 3 ರಾಜ ಸಚಿವನು ಬೃಹಸ್ಪತಿಯಂತರ್ಗತನಾದ ರಾಜರಾಜೇಶ್ವರನೆ ನೀ ಅಂದು ಮಾನವಿಗೆ ಮದುವೆ ಉಜ್ವಲ ತಪಸ್ವಿಗೆ ಪುತ್ರರ ಒದಗಿಸಿದಿ ಇಂದು ನಿಜ ಭಕ್ತಸುತ ಕಾಮ ಪರಕಾಮ ಜನರಿಗೆ ಒಲಿಯೋ 4 ಹಿಂದಿನ ಇಂದಿನ ಸ್ವಕರ್ಮ ಪರಕರ್ಮ ಲಬ್ಧ ಮಾಂದ್ಯ ನರತ್ವಕೆ ಚರ್ಮ ಸೂತಕ ಗರ್ಭಿ ವ್ಯಾಧಿಪೀಡಿತ ಸಜ್ಜನರಿಗೆ ಸುಖವೀಯೋ ವೇಧಪ ಪ್ರಸನ್ನ ಶ್ರೀನಿವಾಸ ರುಧಿರೋಧ್ಗಾರಿ ಸ್ವಾಮಿ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವೆಂಕಟೇಶ ಪಾಹಿ-ತಾವಕ ಭಕ್ತಿಂದೇಹಿ ಪ ವಾರಿಜನೇತ್ರಾ-ವಾರಿದಗಾತ್ರಾ ನಾರದಸನ್ನುತ ಪಾತ್ರ ನರಮಿತ್ರ ಸುಚರಿತ್ರ 1 ಅಂಡಜಯಾನ-ಕುಂಡಲಿ ಶಯನ | ಖಂಡಪರಶು ಪರಿಪಾಲನ ಮುನಿಲಾಲನ ಸುರಖೇಲನ 2 ವೆಂಕಟರಮಣ ಪಂಕಜಚರಣ ಸಂಕಟಮೊಚನಕಾರಣ ಭವತಾರಣ ಗುಣಪೂರಣ 3 ದಶರಥ ಬಾಲಾ ದಶಮುಖ ಕಾಲ ದಶಶತ ಲೋಚನ ಪಾಲಾ-ಭೂಪಾಲಾ-ಸುರಮುನಿಲೋಲ4 ನಂದ ಕುಮಾರ-ನವನೀತ ಚೋರ ಬೃಂದಾವನ ವಿಹಾರ-ಬಹುದಾರಾ-ಧುರಧೀರ5 ಅಜನುತ ಪಾದ-ಅಪಹೃತ ಖೇದ ಸುಜನಕಲುಷ ನಿರ್ಭೇದ ನುತದೇವ ಸುರಮೋದ 6 ವರವ್ಯಾಘ್ರಾಚಲವಿಹರಣ ಶೀಲ ವರದ ವಿಠಲ ಗೋಪಾಲ-ಶ್ರೀ ಲೋಲ-ಬಹು ಲೀಲಾ 7
--------------
ಸರಗೂರು ವೆಂಕಟವರದಾರ್ಯರು
ಶ್ರೀ ವ್ಯಾಸರಾಯರು ಚಂದ್ರಾ ಧರೆಯೊಳು ಮೂಡಿದಾ ಪ್ರಹ್ಲಾದನೆಂಬ ಚಂದ್ರಾ ಪ ಹೊಂದಿದವರ ಹೃದಯಾಂಧಕಾರನೀಗುವ ಗುಣ- ಸಾಂದ್ರ ವ್ಯಾಸರಾಜೇಂದ್ರನೆಂಬುವ ಅ.ಪ. ವಿಕಸಿತಸತ್ಕುಮುದಕೆ ಬಂಧೂ ಖಳ ಮುಖಾರವಿಂದವಳಿದು ಕೊಂದೂ ಸುಖದಿ ಕುಳಿವ ಬುಧಚಕೋರ ತತ್ವ ಪ್ರಕಾಶಕರ ಚಂದ್ರಿಕಾಪೂರ್ಣನೆಂಬ 1 ಹೇಯಮತಗಳೆಲ್ಲವ ಮುರಿದೂ ಬಲು ಬಾಯಿಬಾರದೆ ನಿಲ್ಲಲು ಜರಿದೂ ಮಾಯಿಚೋರರು ಪಲಾಯನಗೈಯಲು ವೃಷ್ಟಿ ಕರೆಸಿದಾ 2 ಕಂಡೂ ಗೋಪಾಲಕೃಷ್ಣನ ಪದವ ಕದ- ರುಂಡಲಿಗೀಶ ಭಕ್ತನಾಮೋದವ ಕೊಂಡು ಭೂಮಂಡಲವ ಪಂಡಿತ ಜನಮನ ತಾಂಡವವಾಡಿದ ತರ್ಕತಾಂಡವ ಮಾಡಿದ 3
--------------
ಕದರುಂಡಲಗೀಶರು
ಶ್ರೀದೇವಿಯಂ ಭಕ್ತರೊಡನೆ ಶುಭಕಾಯವೊಲಿದು ಆಡಿದನುಯ್ಯಾಲ ಪ ನೀಲಿಮಾಣಿಕದ ಮಂಟಪವ ಕಟ್ಟಿ ಮುತ್ತಿನ ಸರಪಣಿಗಳನೆ ಬಿಗಿಸಿ ಮೇಲುಕಟ್ಟುಗಳ ಹಾಸಿ ಮಲ್ಲಿಗೆಮಾಲೆಗಳ ಶೃಂಗರಿಸಿ 1 ಪಟಹ ನಿಸ್ಸಾಳ ಭೇರಿ ಕೊಳಲು ತಮಟವಾದ್ಯ ಮೊಳಗುತಿರಲು ಕುಟಿಲಕುಂತಲೆಯರೊಡನೆ ಆದಿಪತಿ ವಿಠಲನಾಡಿದ 2 ಚಂದ್ರಮನ ಪೋಲ್ವ ಮುಖದಿ ಫಣಿಯೊಳು ಶೌನಕಾದಿಗಳು ಸೇರಿ [ಅಂದದಿ] ಸ್ತುತಿಸೆ ಕ್ಷೀರಾಬ್ಧಿಶಯನನಾಡಿದ3 ಭೇರಿ ಶಂಖಗಳ ದ್ವನಿಯ ದುಂದುಭಿಯ ಭೋರಿಡುವ ಜಯರವಗಳ ನಾರಿಯರು ಶೋಭನಗಳ ಪಾಡುತ್ತಿರೆ ಧೀರನಾಡಿದ 4 ವೇದಚೋರನ ತರಿದು ಆದಿಮೂರುತಿ ವರದನ ವಿ- ನೋದದಿ ತೂಗಿದರು ರವಿಸೌಂದರಿಯನಾಡಿದ 5 ನೀಲವೇಣಿಯರು ಪಾಡುತ ತೂಗಿದರು ಗೋಪಾಲನಾಡಿದ 6 ಪರಶುಧರನೆನಿಸಿ ಹರನ ಶ್ರೀರಾಮಚಂದ್ರ ಕರುಣಾ ವಾರಿಧಿ ಕೃಷ್ಣನ ತೂಗಿದರು ವರಸತಿಯರು 7 ಚೋಜಿಗದಮತ್ಪುರದಸತಿಯರನುವೋಜಿಗಲಿಸಿದಭೌದ್ಧನಾ ತೇಜಿವಾಹನಕಲ್ಕ್ಯನಾ ತೂಗಿದರು ರಾಜೀವನೇತ್ರೆಯರು ಪಾಡುತ 8 ಚಿತ್ತಜೌಘ ಮನಮನದ ಚದುರೆಯರು ಮುತ್ತು ಸರಗಳನೆ ಧರಿಸಿ ದತ್ಯಂತ ಮೋಹದಿಂದ ತೂಗಿದರು ಹಸ್ತಿನೀಕಾಮಿನಿಯರು9 ಮತ್ತೆಸಾರಂಗವೆನಲುನಡೆಯುತಲಿವಿಸ್ತರಿಸಿಕುಚಯುಗಳದಿ ಕಸ್ತೂರಿಯ ಗಂಧವೆಸೆಯೆ ತೂಗಿದರು ಚಿತ್ತಿನೀಜಾತದವರು 10 ಕುಂಕುಮಾಂಕಿತ ಚದುರೆಯರಲಂಕರಿಸಿ ಭೂಷಣಗಳ ಶಂಕರನಸಖನ ಪಾಡಿ ತೂಗಿದರು ಶಂಖಿನೀಕಾಮಿನಿಯರು 11 ಕದಪುಗಳ ಕಾಂತಿಹೊಳೆಯೆ ಮೊಗಸಿರಿಯಪದುಮವನು ಪೋಲ್ವಂದ ಯದುವೀರನನು ಪಾಡುತತೂಗಿದರು ಕುಮುದಿನೀಕಾಮಿನಿಯರು 12 ಅಂಗನಮಣಿ ಪಾರ್ವತಿ ಸರಸ್ವತಿಯರು ರಂಗುಮಾಣಿಕರತ್ನದ ಮಂಗಳಾರತಿಯನೆತ್ತಿ ತೂಗಿದರು ಗಂಗೆಯನು ಪಡೆದಯ್ಯನ 13 ಚಿಂತಿತಾರ್ಥವ ಸಲಿಸುವ ಮುದ್ದುವೆಂಕಟೇಶನು ತಾನೆನಿಸುವ ಪಿತ ದೇವಪುರದ ಶ್ರೀಲಕ್ಷ್ಮೀಕಾಂತನಾಡಿದನುಯ್ಯಾಲಾ 14
--------------
ಕವಿ ಲಕ್ಷ್ಮೀಶ