ಒಟ್ಟು 5788 ಕಡೆಗಳಲ್ಲಿ , 92 ದಾಸರು , 4690 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನಂತಪದ್ಮನಾಭ | ವಿಠ್ಠಲನೆ ನೀನಿವನಅನಂತ ಜನ್ಮದ ಪಾಪ | ಕಳೆದು ಸಲಹೋ ಪ ಗುಣಗಣಾರ್ಣವ ಸ್ವಾಮಿ | ಪೂರ್ಣಕರುಣೆಯೆಂದುನಿನಗೆ ನಾ ಬಿನ್ನೈಪೆ | ಸತತ ಹರಿಯೇ ಅ.ಪ. ಹಂಚಿ ದೈತ್ಯರಿಗೇ |ಸಂಚಿತಾಗಮ ಕಳೆವ | ಸಂಚುಗಳ ನೀ ತೋರಿವಾಂಛಿತಪ್ರದನಾಗೊ | ಅಂಚೆವಹ ಪಿತನೇ 1 ಭವ ತಾರಕವು | ನಾಮಸ್ಮøತಿಯೆಂಬಮೃತಯಾಮಯಾಮಕೆ ಉಣಿಸಿ | ರಾಮನೇ ಸಲಹೋ 2 ಮೂರೆರಡು ಭೇದಗಳು ತಾರತಮ್ಯ ವನರುಹಿಸಾರತಮ ನೀನೆಂಬ | ಸುಜ್ಞಾನವೀಯೋ |ಕಾರಣಿಕ ಶ್ರೀಹರಿಯೆ | ವೈರಾಗ್ಯ ಧನದಿ ಸಂಸಾರ ನಿಸ್ಸಾರೆಂಬ | ಸನ್ಮತಿಯ ನೀಯೋ 3 ದಾಸನಿವನೆಂದೆನುತ | ನೀ ಸಲಹ ಬೇಕಿವನಈಶಾದಿ ದಿವಿಜೇಡ್ಯ | ಶೇಷಶಾಯೀಕ್ಲೇಶ ಆನಂದಗಳು | ಶ್ರೀಶ ನಿನ್ನಿಂದೆಂಬಈಸು ಸನ್ಮತಿ ಕೊಟ್ಟು | ನೀ ಸಲಹಬೇಕೊ4 ಸರ್ವವ್ಯಾಪ್ತ ಸ್ವಾಮಿ | ನಿರ್ವಿಕಾರನೆ ದೇವಸರ್ವಜ್ಞ ನೀನಿರಲು | ನಾ ಪೇಳ್ವುದೇನೋದರ್ವಿ ಜೀವನ ಕಾವ | ಸರ್ವಭಾರವು ನಿಂದುಸರ್ವ ಸುಂದರ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅನಂತಶಯನ ವಿಠಲಾ | ಕಾಪಾಡೊ ಇವಳಾ ಪ ಸಾರ ಅ.ಪ. ತಾಪತ್ರಯಗಳು ಎಂಬ | ಕೂಪಾರದಲಿ ಬಿದ್ದು ಶಾಪಕೊಳಗಾಗಿ ಹಳ ಕಾಪಾಡಬೇಕೊದ್ರೌಪದಿಯವರದ ಕರು | ಣಾಪಯೋನಿಧಿಹರೆಯೆನೀ ಪೊರೆಯದಿರಲನ್ಯ | ಕಾಪಾಡ್ವರ್ಯಾರೊ 1 ತೈಜಸನೆ ನೀನಾಗಿ | ಸೂಚಿಸಿಹ ಅಂಕಿತವಯೋಜಿಸಿಹೆ ಇವಳೀಗೆ | ಅವ್ಯಾಜ ಕರುಣೀಪ್ರಾಜ್ಯ ಎನ ಸಂಸಾರ | ಗೌಜು ಕಳೆಯಲ್‍ವೆನ್‍ತ್ರ್ಯಜಗದ್ವಾಪನೆ | ವಾಜಿವದನಾಖ್ಯ 2 ಕರ್ಮಾಕರ್ಮಗಳ | ಮರ್ಮಗಳ ತಿಳಿಸುತ್ತಪೇರ್ಮೆಯಲಿ ಪತಿಸೇವೆ | ಕರ್ಮಪ್ರಾಧಾನ್ಯಧರ್ಮವನೆ ತಿಳಿಸುತ್ತ | ಭರ್ಮಗರ್ಭನ ಪಿತನೆಕರ್ಮಬೀಜವ ಕಳೆಯೊ | ಬ್ರಹ್ಮಣ್ಯದೇವಾ3 ಮರುತಾಂತರಾತ್ಮನೆ | ಮೂರೆರಡು ಭೇದಗಳತರತಮಂಗಳನರುಹಿ | ಪೊರೆಯೊ ಇವಳಾಅರುಹುವೆನೊ ಸರ್ವಜ್ಞ | ತರುಳೆಬಹುಭಕ್ತಿಯಂತೆಕರುಣಿಸೆಲೊ ಕೃಪಾಸಾಂದ್ರ | ಕಂಜಜಾನಯ್ಯ 4 ಗಾವಲ್ಗಣೀ ವರದ | ಭಾವದಲಿ ಮೈದೋರಿನೀ ವೊಲಿಯೆ ಬಿನ್ನಪದೆ | ಗೈಯೆ ಶ್ರೀಹರಿಯೆಕೋವಿದೊತ್ತಂಸ ಗುರು | ಗೋವಿಂದ ವಿಠಲನೆಕಾವ ಕರುಣಿ ಎಂದು | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ಅನರತ ಜಿವ್ಹದಿ ಆದಿನಾರಾಯಣನಾ ಕೃಷ್ಣಾ ಎನಬಾರದೆ ಮಹಿಮನಾದ ಕರುಣಾಸಾಗರ ಹರಿಯ ಕೃಷ್ಣಾ ಎನಬಾರದೆ ಪ ಗೋಕುಲವಾಸ ಗೋಪಿಯಕಂದನ ಕೃಷ್ಣಾ ಎನಬಾರದೆ ಕಾಕುಸ್ಥ ತಿಲಕನ ಕನಕಾಂಬರಧರನ ಕೃಷ್ಣಾ ಎನಬಾರದೆ ಶ್ರೀಕರ ಭಕ್ತರ ಪೊರೆವನ ಕೃಷ್ಣಾ ಎನಬಾರದೆ ಕೃಷ್ಣಾ ಎನಬಾರದೆ 1 ನವನೀತ ಚೋರನ ಕೃಷ್ಣಾ ಎನಬಾರದೆ ಸಿಂಧುಶಯನ ಗುಣಸಿಂಧು ಗಂಭೀರನ ಕೃಷ್ಣಾ ಎನಬಾರದೆ ಕೃಷ್ಣಾ ಎನಬಾರದೆ 2 ಕೃಷ್ಣಾ ಎನಬಾರದೆ ಮಾರಜನಕ ಕೋಟಿ ಮನ್ಮಥ ರೂಪನ ಕೃಷ್ಣಾ ಎನಬಾರದೆ ಧೀರ 'ಹೆನ್ನೆವಿಠ್ಠಲ’ ದಿವ್ಯ ಬಿಲವಾಸನ ಕೃಷ್ಣಾ ಎನಬಾರದೆ ದುರಿತ ಕೃಷ್ಣಾ ಎನಬಾರದೆ 3
--------------
ಹೆನ್ನೆರಂಗದಾಸರು
ಅನಾಥ ನನ್ನಿಂದ ಆಗುವುದು ಏನು ನೀನೆ ದಯಾಮಾಡಿ ಎನ್ನ ನೋಡಿದರೆ ಸರಿಯಲ್ಲದೆ ಪ ಸ್ನಾನ ಸಂಧ್ಯಾವನ ವೆಂಬ ಸತ್ಕರ್ಮ ವಿಧಿಹೋಗೆ ಧ್ಯಾನಮೌನ ಜಪತಪ ನಿಧಾನ ಹೋಗೆ ಕಾನನದೊಳಗಿನ ಕೊಂಡೆತ್ತಿ ನಂದದಿ ಏನು ಅರಿಯದ ವ್ಯರ್ಥ ಹೀನನಾಗಿರುವಂಥ 1 ಮಾಧವಾ ನಿಮ್ಮ ಸ್ಮರಣೆ ಮಹಾಮಹಿಮ ಸೇವೆ ಹೋಗೆ ವೇದ ಶಾಸ್ತ್ರಗಳಲ್ಲಿ ಇರುವ ಮರ್ಮ ಹೋಗೆ ಭೋಧ ಗುರುಕರ್ಣ ಪೂರ್ಣವು ಎಂಬದದು ಹೋಗೆ ----------- ಂದರಿಯದೆ ಹೆಡ್ಡನಾದಂಥಾ 2 ಹರಿ ನಿಮ್ಮ ಭಕ್ತರ ಅನುಗ್ರಹಕ್ಕೆ ಪಾತ್ರಹೆಂಗೊ ಹರಿ ನಿನ್ನ ಚರಿತಗಳು ಅರುವದ್ಹೇಗೊ ಕರುಣಿಸು ಕೈ ಹಿಡಿದು ಕಾಯ್ದರೆ ಸರಿ ಅಲ್ಲದೆ ವರ 'ಹೊನ್ನ ವಿಠ್ಠಲ’ ನೀನೆಂದು ನಾನರಿಯದಾ 3
--------------
ಹೆನ್ನೆರಂಗದಾಸರು
ಅನಾಥ ರಕ್ಷಕ ಆಪದ್ಬಾಂಧವ ಶ್ರೀಪತಿ ಕೇಶವ ಮಾಧವನೆ ಪ ಮದನ ಗೋಪಾಲನೆ ಮಾತರಿಶ್ವಪ್ರಿಯ ಹರಿ ಶ್ರೀಶ ಅ.ಪ ಬಿಟ್ಟ ಕಂಗಳ ಮುಚ್ಚದೆ ತಿರುಗುವ ಬೆಟ್ಟವ ಬೆನ್ನಿನೊಳಾಂತಿರುವ ಗಟ್ಟಿನೆಲವ ಕೆದರುತ ಬೇರರಸುವ ಹೊಟ್ಟೆಯ ಕರುಳನೆ ಬಗೆದಿರುವ1 ಪೊಡವಿಯ ಬೇಡುತ ಕೊಡಲಿಯ ಪಿಡಿಯುತ ಪೊಡವಿಪರೆಲ್ಲರ ಗೆಲಿದವನೆ ಮಡದಿಯನರಸುತ ಕಡಲನು ಕಟ್ಟುತ ಕಡಹಲ್ದ ಮರನೇರ್ದ ಮೃಡಸಖನೆ2 ಬುದ್ಧನಾಗಿ ತ್ರಿಪುರರ ಗೆಲಿದವನೆ ಶುದ್ಧ ಹಯವನೇರಿ ಮೆರೆದವನೆ ಹದ್ದುವಾಹನವೇರುತ ನಲಿದಾಡುವ ಪದ್ಮನಾಭ ಪುರುಷೋತ್ತಮನೆ3 ಅಗಣಿತ ಮಹಿಮನೆ ಖಗವರವಾಹನ ನಿಗಮವೇದ್ಯ ನಿರ್ಮಲಚರಿತ ಬಗೆಬಗೆಯಿಂದಲಿ ಭಜಿಸುವ ಭಕುತರ ಅಘನಾಶನ ಸುಜನರ ಪ್ರಿಯ 4 ಸೌಮ್ಯ ವತ್ಸರದಿ ಸುಂದರಶ್ಯಾಮನ ಸಾಮಗಾನಲೋಲನ ಭಜಿಸಿ ಕಾಮ್ಯಕರ್ಮಗಳ ತ್ಯಜಿಸಲು ಹರುಷದಿ ಕಮಲನಾಭ ವಿಠ್ಠಲ ಒಲಿವ 5
--------------
ನಿಡಗುರುಕಿ ಜೀವೂಬಾಯಿ
ಅನಾದ್ಯನಂತ ಕಾಲದಲಿ ನೀ ನಿರ್ದೋಷಅನಾಥ ಬಂಧುವೆ ಆಪ್ತ ಕಾಮಅನವರತ ನಿನ್ನಾಧೀನದವನಯ್ಯಕಾಣೆ ನಿನ್ನಗಲಿಪ್ಪ ಕಾಲವನ್ನುಜ್ಞಾನೇಚ್ಛ ಪ್ರಯತ್ನ ಚೇತನ ನಿಷ್ಠವೊ ||ತಾನಾದರಾಗಲಿ ತನ್ನಿಯಾಮಕ ನೀನುಈ ನೀತಿ ಸಿದ್ಧವಾಗಿದೆ ಹಾನಿ ವೃದ್ಧಿಗೆನಾನೆ ಕಾರಣನಲ್ಲಾನಂದ ಮೂರ್ತಿಪ್ರಾಣಾಂತರ್ಯಾಮಿ ಶ್ರೀ ವ್ಯಾಸವಿಠ್ಠಲರೇಯನೀನಿಟ್ಟ ಪರಿಯಲ್ಲಿ ನಿಜವಾಗಿ ಇರುತಿಪ್ಪೆ ||1
--------------
ವ್ಯಾಸವಿಠ್ಠಲರು
ಅನಿಲ ಹೃತ್ಕಮಲಸ್ಥ | ಮುನಿ ವೇದವ್ಯಾಸಎನಗಿನ್ನು ತವಧ್ಯಾನ | ಸುಖವೀಯೊ ಶ್ರೀಶಾ ಪ ಚಿದಚಿದ್ವ ಲಕ್ಷಣನೆ | ಚಿತ್ರ ಚಾರಿತ್ರನೇಚತುರಾಸ್ಯ ಪಿತ ನೀನು | ಸುರ ಚಕ್ರವರ್ತೀ |ಚತುರ ರೂಪವ ಧರಿಸಿ | ಚತುರ ವ್ಯೂಹವ ರಚಿಸಿಚತುರ ವಿಧ ಸೃಷ್ಟಿಯನು | ಚತುರ ವಿರಚಿಸಿದೇ1 ಮುನಿ ಪರಾಶರ ತನುಜ | ಶ್ರೀನಿಕೇತನ ಹರಿಯೆಎನಗರುಹು ವೇದಾರ್ಥ | ವೇದವೇದ್ಯಾ |ಘನ ಮಹಿಮ ಕೋಟಿ | ನಿಖಿಲಾಂಡ ನಾಯಕನೆಅನಘ ನೀ ಸಲಹಯ್ಯ | ಕಪಿಲ ರೂಪಾತ್ಮ 2 ಸಚ್ಛಾಸ್ತ್ರ ಕರ್ತೃ ಸತ್ | ಸೂತ್ರಗಳ ನಿರ್ಮಾತೃಸಚ್ಛಾಸ್ತ್ರ ಭಾವಗಳ | ಅರುಹೆ ವಿಬುಧರಿಗೇ |ಮತ್ಸ್ಯಾದಿ ರೂಪನಿ | ನ್ನಿಚ್ಛೆಯಿಂದಲಿ ಪೊಂದಿವತ್ಸರ್ಗೆ ಭೋದಿಸಿದೆ | ಸಚ್ಚಿದಾನಂದಾ 3 ಮೂಲ ಪ್ರಕೃತಿಯ ಮಾನಿ | ಮಹಾಲಕ್ಷ್ಮಿ ನಿನ್ನಯಶೀಲಗಳನನುಸರಿಸಿ | ಸೇವಿಸುವಳೂ |ಪ್ರಲಯ ಕಾಲದಿ ನಿನ್ನ | ಒಲುಮೆಗೋಸುಗ ವಟದಎಲೆಯ ರೂಪದಿ | ಮಲಗಲನು ವಾದಳಯ್ಯ 4 ಮೂರ್ತಿ | ಬದರಿ ಕ್ಷೇತ್ರದಿ ಪೂರ್ಣಭೋದರ ಸುಸೇವೆಯನೆ | ಸತತ ಕೊಳುತಾ |ಮೋದ ಗುಣ ಪೂರ್ಣ ಗುರು | ಗೋವಿಂದ ವಿಠ್ಠಲನೆಹೇ ದಯಾಂಬುಧೆ ನಿನ್ನ | ಪಾದಾಬ್ಜ ತೋರೋ 5
--------------
ಗುರುಗೋವಿಂದವಿಠಲರು
ಅನಿಲ ಹೃತ್ಕುಮುದೇಂದು | ವೇದ ವ್ಯಾಸಾಎನಗಿನ್ನು ತವ ಧ್ಯಾನ | ಸುಖವೀಯೊ ಶ್ರೀಶಾ ಪ ಚಿದ ಚಿದ್ವಿಲಕ್ಷಣನೆ | ಚಿತ್ರ ಚಾರಿತ್ರನೇಚತುರಾಸ್ಯ ಪಿತ ನೀನು | ಸುರ ಚಕ್ರವರ್ತೀ | ಚತುರ ರೂಪವ ಧರಿಸಿ | ಚತುರ ವ್ಯೂಹವ ರಚಿಸಿಚತುರ ವಿಧ ಸೃಷ್ಟಿಯನು | ಚತುರ ವಿರಚಿಸಿದೇ 1 ಮುನಿ ಪರಾಶರ ತನುಜ | ಶ್ರೀನಿಕೇತನ ಹರಿಯಎನಗರುಹು ವೇದಾರ್ಥ | ವೇದ ವೇದ್ಯಾ |ಘನ ಮಹಿಮಕೋಟಿ | ನಿಖಿಲಾಂಡ ನಾಯಕನೆಅನಘ ನೀ ಸಲಹಯ್ಯ | ಕಪಿಲ ರೂಪಾತ್ಮಾ 2 ಸಚ್ಛಾಸ್ತ್ರ ಕರ್ತೃಸತ್ | ಸೂತ್ರಗಳ ನಿರ್ಮಾತೃಸಚ್ಛಾಸ್ತ್ರ ಭಾವವರುಹೆ | ಬುಧ ಜನರಿಗೇ |ಮತ್ಸ್ಯಾದಿ ರೂಪ ನಿ | ನ್ನಿಚ್ಛೆಯಿಂದಲಿ ಪೊಂದಿವತ್ಸರ್ಗೆ ಬೋಧಿಸಿದೆ | ಸಚ್ಚಿದಾನಂದಾ 3 ಮೂಲ ಪ್ರಕೃತಿಯ ಮಾನಿ | ಮಹಲಕ್ಷ್ಮೀ ನಿನ್ನಯಶೀಲಗಳನನುಸರಿಸಿ | ಸೇವಿಸುವಳೂ |ಪ್ರಳಯ ಕಾಲದಿ ನಿನ್ನ | ಒಲುಮೆಗೋಸುಗ ವಟದಎಲೆಯ ರೂಪದಿ ಮಲ | ಗಲನುವಾದಳಯ್ಯ 4 ಮೂರ್ತಿ | ಬದರಿ ಕ್ಷೇತ್ರದಿ ಪೂರ್ಣಬೋಧರ ಸುಸೇವೆಯನು | ಸ್ವೀಕರಿಸುವೇ |ಮೋದಗುಣ ಪೂರ್ಣ ಗುರು | ಗೋವಿಂದ ವಿಠಲನೇಹೇ ದಯಾಂಬುಧೇ ನಿನ್ನ | ಪಾದಾಬ್ಜ ತೋರೋ 5
--------------
ಗುರುಗೋವಿಂದವಿಠಲರು
ಅನುಜ ಭಾವಿ ಮುಖ್ಯಪ್ರಾಣನೆ ಪ ಚರಣಭಕ್ತರಲ್ಲಿ ಮುನ್ನ ಇರಿಸಿ ಸಲಹೊ ಕರುಣಶರಧಿಯೆ ಅ.ಪ. ಹರಿಯಮುಂದೆ ನಿಂದು ಸೇರಿ ಸ್ತುತಿಸೆ ದಿವಿಜವೃಂದ ಧೀರ ಲಾತವ್ಯ ಬಂದೆ ಹಾ ಚಾರು ಯುಕ್ತಿಮಲ್ಲಿಕಾದಿ ಸಾರಗ್ರಂಥರಾಶಿ ಇತ್ತು ಈರಮತವ ಮೆರೆಸಿ ಮೆರೆದ ಶೂರ ನಿನ್ನ ಪೊಗಳಬಲ್ಲೆವೆ 1 ಎರಡು ಹತ್ತು ಮೇಲೆ ನೂರುವರುಷ ಪೊರೆದು ಶಿಷ್ಯಸಂಘ ಕಾಯ ಕುಳಿತೆ ಭರದಿ ವೃಂದಾವನದಲೀ ತೊರೆಯಲಾಗದೇನೆ ನಿನ್ನ ತುರಗವದನ ರಾಮಕೃಷ್ಣ ಅರವಿದೂರ ವೇದವ್ಯಾಸ ಪೊರೆವರೆಲ್ಲ ಸೇವೆಕೊಳ್ಳುತಾ 2 ಸುರರು ಎಲ್ಲ ಮಣಿದು ಕುಣಿದು ನಿನ್ನ ಸಹಿತ ಮಣಿದು ಹರಿಯ ಭಜಿಸುತಿಹರು ತನುವ ಕೆಡಹಿ ರಾಗದಿಂದ ನೆನೆದು ನಿನ್ನ ನೋಡೆಸದನ ಜನುಮ ಜನುಮ ದೋಷ ಕಳೆವ ಘನ ಮಹಾತ್ಮೇಗೀಡುಕಾಣೆ 3 ಎರಡು ಕಮ್ಮಿ ಎರಡುನೂರು ವರವಿರಂಚಿ ಕಲ್ಪಗಳಲಿ ನಿಮ್ಮ ಮಹಿಮೆಗೇನೆಂಬೆ ಸುರರು ವಿವಿಧ ಬಲಿಗಳಿತ್ತು ಚರಣ ಪಿಡಿದು ನಡೆವರೆನಲು ನರನು ಪೊಗಳಬಲ್ಲನೇನು ಹರನಗುರುವೆ ಶಿರವ ಬಾಗುವೆ 4 ವರವಿಮಾನದಲ್ಲಿ ಕುಳಿತು ಚರಿಸುತಿರಲು ಒಮ್ಮೆಯೇನೆ ಸುರರು ಎಲ್ಲ ಕರೆಯೆನಿನ್ನ ಧರಿಸಿ ರೂಪ ನಿಚಯ ನಡೆದೆಯಾ ವರವಿಶೇಷಪೂಜೆಕೊಂಡು ಸ್ಥಿರವಗೈದು ಪದವಿಗಳನು ಕರೆದು ಹರುಷ ದಿವಿಜಗಣಕೆ ಪೊರೆದ ನಿನಗೆ ತುಲ್ಯ ಕಾಣೆವೈ5 ಸಿರಿಯಪತ್ರ ಹರಿಗೆ ಇತ್ತು ಮರುತನಂತೆ ಪಡೆದು ವರವ ಕೊಂಡು ಭುವಿಯಲಿ ಧರಿಸಿನಿಂದು ದಂಡ ಕಾಷ್ಠ ದುರುಳವಾದಿಗಜಗಳಳಿದು ಚರಿಸಿ ದೇಶವೆಲ್ಲ ಕೊನೆಗೆ ಕುರುಹು ತೋರಿನಿಂತ ಸ್ವಾದಿಲಿ6 ಏನು ನಿಮ್ಮ ಮಹಿಮೆ ಗುರುವೆ ತಾನೆ ಬಂದು ವಾಜಿವದನ ಸಾನುರಾಗದಿಂದ ಕೊಂಬ ಹೂರ್ಣಭಕ್ಷ್ಯವೆಲ್ಲ ಪೂರ್ಣ ಪೂರ್ಣನೀನು ಜೀವಗಣದಿ ಪೂರ್ಣತನ್ನ ಕಂದನೆಂದು ದಾನಗೈದ ನಿನ್ನ ಸತಿಗೆ ಜ್ಞಾನಪೂರ್ಣಬಲನು ನೀನ ಹೋ 7 ಚಾರು ಭ್ರಾತೃನಿನ್ನ ಬದಿಲಿ ಮೀರಿ ಇಹುದು ಯಾವುದಿಲ್ಲ ಮೂರುಜಗದಿ ಸತ್ಯಸತ್ಯವೋ ಮೂರುಕಣ್ಣಿನಾತ ಮುಂದೆ ಭಾರಿಭೂತರಾಜ ನಿಮ್ಮ ಸಾರ ಚರಣ ಪಿಡಿದು ಭಜಿಪ ಯಾರು ಸಾಟಿ ಇಲ್ಲ ಸಾರುವೆ8 ಗಂಗೆಮೊದಲು ಎಲ್ಲ ತೀರ್ಥ ತಂಗಿ ಧವಳಗಂಗೆಯಲ್ಲಿ ತುಂಗ ಮಹಿಮ ನಿನ್ನ ಯಜಿಸಿ ಹಿಂಗಿಸುವರು ತಮ್ಮ ಶಮಲ ಭಂಗ ಸತ್ಯಸರ್ವಪಾಪ ಸುರರು ಕೈವಶ 9 ನಿನ್ನ ನಿಲಯ ಸುತ್ತ ನೃತ್ಯ ವನ್ನು ಗೈದು ಭಜಿಸೆ ಹರಿಯ ಘನ್ನ ಜ್ಞಾನ ಚೆನ್ನ ಪಡೆದು ಸನ್ನು ತಾಂಗ ನೆಡೆಯಕಾಣುವ ಅನ್ನಸತ್ರ ನಿನ್ನ ಕ್ಷೇತ್ರ ಅನ್ನಪತಿಯ ತೋರ್ಪನಿನಗೆ ಇನ್ನು ಸರಿಯೆ ಕಾಮಧೇನು ಚಿಣ್ಣನೆಂದು ಪಿಡಿಯೊ ಶರಣನ 10 ಹತ್ತು ಐದು ನಾಲ್ಕು ಆರು ಹತ್ತು ಐದು ಸಹಿತ ಒಂದು ಹತ್ತು ಹತ್ತು ಮತ್ತೆ ಒಂದು ಹತ್ತುನೂರು ಹಾಗನಂತ ನಿತ್ಯ ನಿತ್ಯನುತಿಪೆ ಬೃಹತಿಯಿಂದ ಸತ್ಯಪದವಿಸಿದ್ಧ ನಿನಗೆಲೈ 11 ಗಿರಿಗಳರಸು ಮಗಳ ಸಹಿತ ಕರೆದು ನಿಮ್ಮ ರತ್ನರಾಶಿ ಸುರಿದು ಶಿರದಿ ಪೂಜೆಗೈದು ಪರಮ ಧನ್ಯನಾದ ತಾನಹೋ ತರಣಿ ಜನರು ಮಾರ್ಜನಾದಿ ಪರವಿಶೇಷ ಸೇವೆಗೈದು ಕೊಡುವೆ ಕಾಮಿತಾರ್ಥವ 12 ದೀಪಸಾಲು ಹಚ್ಚಿ ಭಜಿಸೆ ಪೋಪುದೈಯ್ಯ ಭವದ ತಾಪ ಆ ಪರೇಶ ಒಲಿದು ಜ್ಞಾನ ದೀಪ ವಿಡುವ ಹೃದಯಕಮಲದಿ ತಾಪ ದೂರನಾಗಿ ಶ್ರೀಪತಿಯ ದಾಸನಾಗಿ ಕೂಪ ದಾಟ ಪೋಪ ಬೇಗಹೋ13 ಯಮನ ಪುರವ ಸಾರಿ ನೀನು ವಿಮಲರೂಪ ತೋರಿ ಹಾಗೆ ಅಮರ ಜ್ಞಾನ ಬೋಧೆಯಿತ್ತು ಯಮನ ರಾಜ್ಯ ಬರಿದುಗೈದೆಹೊ ಕಮಲೆಕಂದ ಕಾಮಕೊರಗಿ ನಮಿಪ ನಿನ್ನ ರೂಪ ನೋಡಿ ಶ್ರಮವು ಆಯ್ತುಕಾಮನಿಂದ ಅಮರಸ್ತ್ರೀವೃಂದಕ್ಕೆಲ್ಲ ವೈ14 ದುಃಖಕೊಡದ ನಿನ್ನ ಅಸ್ಥಿ ಶಂಖಚಕ್ರ ಮಯವು ಹೌದು ಪಂಕಜಾಕ್ಷ ಅಂಗದಲ್ಲೆ ಅಂಕೆರಹಿತ ಸುಖವು ನುಂಬೆಹೊ ಸೂತ್ರ ತಾನು ಕಿಂಕಿಣೀ ಸುರಾವದಿಂದ ಶಂಕೆ ಕೊಡದೆ ಸಾರುತಿಹನು ಬಿಂಕವಾಗಿ ಪದವಿಬರ್ಪುದ15 ಮೇರುಗಿರಿಯ ಶಿಖರದಲ್ಲಿ ಕ್ರೂರಮದನ ತಾಪದಿಂದ ಚಾರುಕನ್ಯೆಯೊಬ್ಬಳಿನ್ನು ತೋರೆ ಸ್ವಾಂಗ ನಿನ್ನ ಬಯಸುತ ಧೀರನೀನು ಕದಲದಿರಲು ಕ್ರೂರ ತಪದಿ ಹರಿಯ ಒಲಿಸಿ ನೀರೆ ಪಡೆದ ಲೈಯ ನಿನ್ನ ಸೇರಿ ಸುಖಿಪ ಭಾಗ್ಯಮುಂದಕೆ 16 ಗರುಡನೇರಿ ನಿನ್ನ ಸಹಿತ ಹರಿಯು ತೋರಿಸಕಲಲೋಕ ಅಮೃತ ಕರದಿ ಕುಡಿಸಿ ಅರವಿ ದೂರ ನಿನ್ನ ತಬ್ಬಿದ ಮರುತನಂತೆ ವ್ಯಾಜರಹಿತ ಚರಣಭಜರ ನಿನಗೆ ತಾನೆ ಕರೆದು ಕೊಟ್ಟ ವಾಯುಪದವಿ ತುರಗವದನ ಪ್ರಥಮ ಭಕ್ತಹೋ17 ಗೆದ್ದು ವೀರಶೈವಗುರುವ ಗದ್ದುಗೆಯನು ಏರಿ ಮೆರೆದೆ ಮೆದ್ದು ಗರವ ಸುಖದಿ ನಿಂದೆ ತಿದ್ದಪಾಟು ತೋರ್ದೆ ಉಡುಪಿಲಿ ಬದ್ಧನಾದ ವಿಠಲ ನಿನಗೆ ಬಿದ್ದ ನೃಪನ ಗೇಸಿ ಕಾಯ್ದೆ ಶುದ್ಧ ವಿಷ್ಣುಭಕಿÀ್ತ ತೋರಿ ಮಧ್ವಸುತರ ಪೊರೆದ ದಾನಿಹೋ 18 ನೂರುನೂರು ಆನೆಮೀರಿ ಭಾರಿಬಲದ ಮೆರೆವ ಶಕ್ತ ನೇರನಿಲಿಸಿ ಧ್ವಜದಸ್ತಂಭ ದೂರಗೈದೆ ಶಿಷ್ಯಕಳವಳ ಭಾರ ಹೌರ ಸ್ಥೂಲಸೂಕ್ಷ್ಮ ತೋರಬಲ್ಲೆ ಇಚ್ಛೆಯಂತೆ ಮೇರೆ ಇರದ ಮಹಿಮನೆಂದು ಸಾರಿಸಾರಿ ನುತಿಪೆ ಜೀಯನೆ 19 ಗಂಗೆಪಡೆದ ರಂಗನನ್ನು ಅಂಗನಿಂದ ತರಿಸಿ ನೆಟ್ಟು ತುಂಗವಿಭವದಿಂದ ಯಜಿಸಿ ಕಂಗಳಿಂದ ನೋಡಿ ಉತ್ಸವ ಅಂಗಮರೆತು ನಂದ ಕುಡಿದೆ ಸಂಗದಿಂದ ಕಂಡ ಜನಕೆ ಭಂಗವಾಯ್ತು ಸಕಲ ಬಂಧ ಕೊಂಗಿ ಖಳರ ಬಿಟ್ಟು ಸತ್ಯವೈ 20 ಬರಿಯ ಕವನವಲ್ಲ ಕೇಳಿ, ಗುರುವೆ ದ್ವಿಜನ ಸ್ವಪ್ನದಲ್ಲಿ ಅರುಹಿ ತನ್ನ ಚರಿತೆಯನ್ನು ಬರೆಸಿ ಇಹನು ಪೊರೆಯೆ ಶಿಷ್ಯರ ಅರಸಿ ನೋಡಿ ಧನ್ಯರಾಗಿ ಒರೆಸಿ ಕಾಮಕ್ರೋಧವೆಲ್ಲ ಚರಣಪಿಡಿಯೆ ಭಕ್ತಿಯಿಂದ ಗುರುವು ಬಿಡನು ನಿಮ್ಮನೆಂದಿಗು 21 ಸುಧೆಯ ಕರ್ತ ಜಯಮುನೀಂದ್ರ ಹೃದಯವಾಸಿ ವಾಯುವಂದ್ಯ ಪದುಮೆ ರಮಣ ಕೃಷ್ಣವಿಠಲ ಸದರದಿಂದ ಮುಕ್ತಿ ನೀಡುವ ಸದನ ವಾಜಿವಕ್ತ್ರಗೆರಗಿ ಬದರಿನಿಲಯ ನನ್ನ ನೆನೆದು ಪದವನಿದನು ಪಠಿಪ ಭಕ್ತಗೆ22
--------------
ಕೃಷ್ಣವಿಠಲದಾಸರು
ಅನುದಿನ ಚರಣಕಮಲವ ತೋರಮ್ಮ ನಮ್ಮಮ್ಮಾ ಪ. ಮನೋಭಿಮಾನಿಯೇ ಎನ್ನವಗುಣಗಳೆಣಿಸದೆ ತ್ವರಿತದಿ ಬಂದು ಮುತ್ತಿನ ಗದ್ದಿಗೆಯನೇರಮ್ಮ ನಮ್ಮಮ್ಮಾ ಅ.ಪ. ದಕ್ಷಕುವರಿ ದಾಕ್ಷಾಯಿಣಿ ಗೌರಿ ಪಕ್ಷಿವಾಹನನ ಸೋದರಿ ಈಕ್ಷಿಸುತಿರುವೆನು ಉಪೇಕ್ಷಿಸದೆ ಎನ್ನ ರಕ್ಷಿಸಿ ಕಾಯೆ ಪಾರ್ವತಿ ತಾಯೆ 1 ಶಂಭುದೇವನ ರಾಣಿ ಹೃದಯಾಂಬರದೊಳು ನಿಂದು ಅಂಬರ ಪೂಜಿತೆ ನಂಬಿದ ಭಕ್ತರ ಪೊರೆವ ಸದ್ಗುಣ ಚರಿತೆ 2 ಗೆಜ್ಜೆ ಪಾದಗಳಿಂದ ಘಲ್ ಘಲ್ ಎನುತ ಬಾರಮ್ಮ ಹೆಜ್ಜೆಯನಿಡುತ ಮುಗುಳ್ನಗೆ ನಗುತ ಬಾರಮ್ಮ ಸುಜ್ಞಾನ ಮತಿಯಿತ್ತು ಕಾಯುವ ತಾಯಿ ಬಾರಮ್ಮ 3 ಕಂಚುಕ ಪಟ್ಟೆಯ ಪದಕ ಕಟ್ಟಿದ ಕಠಾಣೆ ಮುತ್ತಿನಮೂಗುತಿ ಪಚ್ಚೆಯ ಓಲೆ ಇಟ್ಟ ಕಸ್ತೂರಿತಿಲಕ ಕೆತ್ತಿದ ಕಿರೀಟ ಹೊಳೆಯುತ 4 ಬೇಡಿಕೊಂಬೆವೆ ತಾಯೆ ನೀ ಎನ್ನ ಆಪತ್ತು ಪರಿಹರಿಸಿ ಪಾಡಿ ಪೊಗಳಿ ಕೊಂಡಾಡುವೆ ಕಾಯೆ ತಾಯೆ ಬೇಡಿದ ವರಗಳ ರುಕ್ಮಿಣೀಶವಿಠಲನ ಕರುಣದೆ ನೀಡೆ ತಾಯೆ 5
--------------
ಗುಂಡಮ್ಮ
ಅನುದಿನ ಮನದಲಿ -----ದೆ ಪ ಮನಶುದ್ಧಿಯ ಮಾಡುವನು---------- 1 ಜಗತ್ರಯ ನಾರಾಯಣನ 2 ಇಂದಿರೆಯರಸನ ಇಷ್ಟರ ಬೆರೆದು 3 ನೀರಜ ನಯನನಾ 4 `ಹೆನ್ನೆವಿಠ್ಠಲ ದೇವರ ಇನ್ನುಸದಾ 5
--------------
ಹೆನ್ನೆರಂಗದಾಸರು
ಅನುದಿನ ವಿಷಯ ಸುಖವು ಎಂದು ಕನಸಿಲಾದರು ಸ್ಮರಿಸಲಾಗದು ಮನವೆ ಪ ಘನ ಸಂತೋಷವಿಲ್ಲವಿದು ನಿತ್ಯಾನಿತ್ಯ ಸುಖ ಬಯಸಿ ಮನದಲ್ಲಿ ನೀ ಸ್ಮರಿಸೆ ಹರಿಯೆ | ತೊರೆಯ ಅ.ಪ ಅಶನ ವಸನ ಪಶುವ್ರಾತ ವಶವಿರುವಾಭರಣ ಹಸನಾದ ರಥ ಪದಾತಿಗಳು ಸ್ವಸ್ವರೂಪವಲ್ಲ ಭಿನ್ನ ತಿಳಿಯೊ | ಮಮತೆ ಅಳಿಯೊ 1 ಬುದ್ಧಿ ವಿದ್ಯಾಕುಶಲ ಗತಿ ಅಧ್ವರ್ಯ ಪ್ರಭು ಮನ್ನಣೆ ಶುದ್ಧ ರೂಪ ಲಾವಣ್ಯ ಯೌವನ ಸಿರಿ ಶೌರ್ಯ ಪರಾಕ್ರಮ ವದ್ಯವಾಗಿ ಪೋಪುದು ಸ್ಥಿರವಲ್ಲ | ಸುಳ್ಳಲ್ಲ 2 ಇಚ್ಛೆಯಿಲ್ಲದೆ ನೀನು ಜನರ ಮೆಚ್ಚಿಗಾಗಿ ಮಾಡಿದ ದಾನ ವೆಚ್ಚವಾಗಿ ಪೋಪವೊ ಧನವಲ್ಲದೆ ನಿಚ್ಚಳ ಪುಣ್ಯಬಾರದು ಮನವೆ ಹೆಚ್ಚಿನ ಸ್ತೋತ್ರಕೆ ಮರುಳಾಗಿ ನೆಚ್ಚದಿರು ವಿಹಿತೋಕ್ತಿಯ | ಬಿಡದಿರು ಸನ್ಮತಿಯ 3 ಆರ್ತನಾಗದಲೆ ನೀನು ಕೀರ್ತಿಗೋಸುಗ ಕಥಾಶ್ರವಣ ಕರ್ತಭಾವದಿ ಸತತ ಮಾಡೆ ವರ್ತಿಸುವ ಪುಣ್ಯಪ್ರಾಪ್ತಿ ವೈಷಿಕ ಸುಖವಲ್ಲದೆ ಶಾಸ್ತ್ರಮರ್ಮ ತಿಳಿಯದೊ | ಅಹಂ ಮಮವಳಿಯದೊ 4 ಮಾನಿತನು ನಾನೆಂದು ನಾನಾ ಮತವಾಶ್ರಯಿಸಿ ಜ್ಞಾನಿಗಳಿಗೆ ಶಿರಬಾಗಲೊಲ್ಲಿ ಏನು ಇದರಿಂದೆಂಬ ತ್ರಿಕರಣ ಶುದ್ಧಿಕಾರಣ ದ್ಯುನದಿ ಸ್ನಾನವಾಹವಲ್ಲಾ | ಇದು ಬಿಡಸಲ್ಲಾ 5 ಕೈಗೊಳುವುದೇ ಮಾನ ಅನ್ಯಾಧೀನವೆನ್ನದೆಂಬುದೇ ಲಜ್ಜಾ ಅನುಭವ ಜ್ಞಾನಿಗಳ ಸಹವಾಸ ಸ್ನಾನ ಸಚ್ಛಾಸ್ತ್ರಾಲಾಪ ನಾನು ನನ್ನದು ಬಿಡುವುದೇ ತ್ಯಾಗ | ಇದೇ ಯೋಗ 6 ಕರಣ ವಿಷಯಗಳಲ್ಲಿ ಹರಿಯ ಚಿಂತಿಸುತ ನಿತ್ಯ ವರ ಯೋಗ ಭೋಗದಲ್ಲಿ ವರ ರಾಮಚಂದ್ರವಿಠಲರಾಯನು ನಿನ್ನ ದುರಿತ ಕಳೆದು ಪಾಲಿಸುವ7
--------------
ವಿಜಯ ರಾಮಚಂದ್ರವಿಠಲ
ಅನ್ಯ ದೇವರ ನಾನರಿಯೆ ಸಿರಿಹರಿಯೆ ಪ ಎನ್ನ ಬಿನ್ನಪ ಕೇಳಯ್ಯ ದೊರೆಯೆ ಅ.ಪ ಹರಬೊಮ್ಮಾದಿಗಳಿಂದ ವರಪಡೆದ ರಾವಣ ಸರುವ ಲೋಕಂಗಳನೆಲ್ಲ ಗೆಲಿದು ಬಂದು ಸಿರಿರಮಣನೆ ನಿನ್ನೊಳು ದ್ವೇಷವನೆ ಮಾಡಿ ತರು ಮೃಗಗಳಿಂದಪರಾಜಿತನಾದನಯ್ಯಾ 1 ದೃಷ್ಟಾಂತಗಳನ್ನೆಷ್ಟು ತೋರಲಿ ನಾನು ದುಷ್ಟ ಜನರೆಲ್ಲ ಪಟ್ಟ ಬವಣೆಗಳಿಗೆ ಶ್ರಿಷ್ಟಿಗೊಡೆಯನೆ ನಾ ಮನಮುಟ್ಟಿ ನುತಿಸುವೆ ಶಿಷ್ಟ ಜನರ ಸಂಗದೊಳಿಟ್ಟೆನ್ನ ಸಲಹಯ್ಯಾ 2 ಮೂರು ಕರಣಗಳಿಂದ ನಾ ನಿನ್ನ ನಂಬಿಹೆನು ಮಾರುತೀಶನೆ ನಿನ್ನ ಚರಣವ ತೋರಿ ಗಾರು ಮಾಡದೆ ನೀ ಸಲಹಬೇಕೆಂಬೆನು ಕಾರುಣ್ಯದಿಂದಲಿ ಶ್ರೀ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಅಪರಾಧ ಎನ್ನದಯ್ಯ ಅಪರಿಮಿತವೆ ಸರಿ ಪ ಕೃಪಣ ವತ್ಸಲ ಕೃಷ್ಣ ಕೃಪೆಯ ಮಾಡುವದಿಲ್ಲವೆ ಅ.ಪ ಹುಡುಗರು ಮಾಡುವ ತಪ್ಪಿಗೆ ಜನನಿ ತಾ ಬಿಡುವಳೇ ಅದರಿಂದ ದಯವ ಮಾಡದಲೆ ನಡೆವ ಕುದರಿ ತಾನು ಮಲಗಿದಡೆ ಇನ್ನು ಕಡೆಗೆ ಕಟ್ಟುವರೇನೊ ತಿರಗಿ ನೋಡದಲೆ 1 ಮಾಡುಯೆಂದದರನು ಬಿಟ್ಟರೆ ಅಪರಾಧ ಬ್ಯಾಡವೆಂದರಾನು ಮಾಡುವುದಪರಾಧ ಈಡಿಲ್ಲ ನಿನ್ನ ದಯೆಯೆತೆಂದು ನಾ ನಿಂದು ಮಾಡುವೆ ಬಿನ್ನಪ ನಾಚಿಕಿಲ್ಲದೆಲೆ 2 ಬೇಡಿಕೊಂಬೆನೊ ವಾಸುದೇವವಿಠಲ ನೀನು ನೋಡದಿದ್ದರೆ ಭಕ್ತ ಜನರು ತಮ್ಮಾ ಬೀಡು ಸೇರಲೀಸರೊ ಕೇಡೇನೊ ಇದಕಿಂತ ಕೃಪಣ ವತ್ಸಲ ಕೃಷ್ಣ 3
--------------
ವ್ಯಾಸತತ್ವಜ್ಞದಾಸರು
ಅಪರಾಧ ಎನ್ನದಯ್ಯ ಹೇ ಗುರುವರ್ಯ ಪ ಅಪರಾಧ ಎನ್ನದಯ್ಯ ಅಪರಿಮಿತವು ಸರಿ ಕೃಪೆಯು ಮಾಡಲಿ ಬೇಕು ಕೃಪಣವತ್ಸಲ ಗುರುವೆ ಅ.ಪ. ಹಡೆದ ತಾಯಿ ಶಿಶುವ ಬಡಿದು ಕೊಂದರೆ ತೃಣವು ಬಿಡಿಸಿಕೊಳ್ಳಲು ಬಲ್ಲುದೆ ಜಡಕೆ ಸಮವಾದದ್ದು ಒಡೆಯ ನೀ ಎನ್ನಯ ಅಸ್ವಾತಂತ್ರ ಎಣಿಸದೆ ಬಿಡುವೆನೆಂದರೆ ನಿನಗೆ ತಡೆಯ ಬರುವರು ಯಾರೈ 1 ದೀನವತ್ಸಲ ಕೇಳು ಅನೇಕ ಜನ್ಮದೊಳು ನಾನಾ ಪರಿಯೊಳು ನೊಂದು ಸೇರಿದೆ ನಿನಗೆ ಬಂಧು ಏನು ಪೇಳದೆ ಎನ್ನ ಕಾನನದಲಿ ಬಿಟ್ಟು ಶ್ರೀನಾಥನ ಸೇರಿದಿ ಅನಾಥನ ಮಾಡಿದಿ ಎನ್ನ 2 ಬ್ಯಾರೆ ಉಪಾಯವಿಲ್ಲ ಸಾರಿದೆ ನಿನಗಯ್ಯ ಕಾರುಣ್ಯ ನಿಧಿಯೆ ಅಪಾರ ಕರುಣಮಾಡಿ ಮಾರಪಿತನಾದ ಜಯೇಶವಿಠಲನ್ನ ಆರಾಧನೆಯಲಿ ಸತತ ಧಾರಾಳ ಮತಿನೀಡೋ 3
--------------
ಜಯೇಶವಿಠಲ