ಒಟ್ಟು 309 ಕಡೆಗಳಲ್ಲಿ , 70 ದಾಸರು , 290 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟೇಶ ಕಲ್ಯಾಣ ಶ್ರೀವೆಂಕಟ ದೊರೆಯೆ ಪ ವಿಶ್ವಸೃಷ್ಟಿಯಗೈದಂಥ ತಾನಿನ್ನು ಅರಿಯೆನು ಎಂತೆನಲು ಅ.ಪ ಸುರವರ ನಾರೆಂದು ಅರಿಯೆಭೃಗುವು ತಾನು ಪತಿ ಹರ ವಿಧಿಗಳೆನೆಲ್ಲ ಬರುವ ಬಗೆಯ ಕಂಡು ಸುರತ ಕೇಳಿಯಸೋಗು ಧರಿಸಿ ಮಲಗಿರಲಂದು ಜರಿದುವದಿಯಲು ವಕ್ಷ ಹರಿಸಿ ದುಗುಡವ ಮುನಿಗೆ ವರಸಿ ಚರಣದ ಕಣ್ಣು ತರಿದು ಸಾಧನೆ ಅಧಿಕ ಸಿರಿಗೆ ಪ್ರೇರಿಸಿ ಕೋಪ ತೊರೆದು ಧಾಮವ ಬೇಗ ಧರೆಗೆ ಇಳಿಯುತ ಬಂದು ಗಿರಿಯ ಹುತ್ತವ ಸೇರಿ ಸುರಿಸೆ ವಿಧಿಯು ಪಾಲು ಕರುಣದಿಂದಲಿ ಕೊಂಡು ದೊರೆಯ ಸೇವಕ ಗೋವ ಹರಿಸೆ ಕೊಡಲಿಯ ನೆತ್ತೆ ಶಿರವನೊಡ್ಡುತ ರಕ್ತ ಧಾರೆ ಚಿಮ್ಮಿಸಿನಭದಿ ಬರಲು ಚೋಳನು ದೊರೆಗೆ ಕ್ರೂರ ಶಾಪವನಿತ್ತು ಕರೆಸಿಗುರುಗಳಮದ್ದು ತರಲು ಹೊರಟದೇವ ನಿರುತ ಚಿನ್ಮಯಗಾತ್ರ ಉರು ವೈದ್ಯ ಧನ್ವಂತ್ರಿ ನಿರುಪಮ ನಾಟಕದೆ 1 ಸಾಮ ವಿಶ್ವದ ಸಾರ್ವಬೌಮ ಬೇಡಿದೆ ರಚಿಸೆ ಧಾಮ ಕ್ರೋಢನ ಕಂಡು ಪ್ರೇಮದಿಂದಲಿ ಬಕುಳೆ ವಾಮ ಕಂದನು ಆಗಿ ಭಾಮೆ ಪಾಕವನುಂಡು ಕಾಮ ವರ್ಜಿತ ಪೂರ್ಣ ಕಾಮ ಕುದುರೆಯನೇರಿ ಕಾಮ ಬೇಟೆಯೋಳ್ ನಿಜ ಕಾಮಿನಿಯನು ಕಂಡು ದ್ಧಾಮ ಮೋಹವ ತೋರಿ ಭೂಮಿಜಾತೆಯ ಘಟಿಸೆ ಭಾಮೆ ಬಕುಳೆಯ ಕಳಿಸಿ ಧರ್ಮದೇವತೆಯೆನಿಸಿ ಜಾಮಾತ ಸನ್ನಾಹ ಜಾಣ್ಮಿಯಿಂದಲಿನಡೆಸಿ ಕಾಮಿತಾರ್ಥವ ಕೊಂಡು ಧಾಮ ಸೇರಲು ಬಕುಳೆ ಹೇಮಮಯ ದಾರಿದ್ರ ನೇಮದಾಟವ ತೋರಿ ಹೇಮಗರ್ಭನ ಕರಿಸೆ ಸೋಮಶೇಖರ ಕೊಡಿಸೆ ಹೇಮರಾಶಿಯ ತಂದು ಭೀಮರುಜೆಗಳ ನಟಿಸೆ ಸೋಮಸೋದರಿಕರಿಸಿ ಮಾಮನೋಹರಗೈದ ಸೀಮೆಇಲ್ಲದಂಥ 2 ಮದುವೆ ಹಬ್ಬಿಸಿ ಭಕ್ತ ಹೃದಯ ತುಂಬುವ ನಂದ ಮುದದಿ ಬೆಳೆಸೆ ಪಯಣ ವದಗೆ ಶುಕರಾತಿಥ್ಯ ಸದಯಗೊಳ್ಳುತ ತೃಪ್ತಿ ಬದಿಗರೆಲ್ಲರಿಗಿತ್ತು ಮದನಮೋಹನ ತೇಜ ಮದುವೆ ಊರನು ಸೇರಿ ಕುದಿವ ಕುತೂಹಲದಿ ಅದ್ಭುತ ಸ್ವಾಗತವ ಪದುಮಾವತಿಯ ತಂದೆ ಹೃದಯ ಪೂರ್ವಕ ನೀಡೆ ಆದರದಿ ಸ್ವೀಕರಿಸಿ ಪಾದದ್ವಂಧ್ವವ ನೀಡಿ ವೇಧಾದಿ ನಿಜವೃಂದ ಮೇದಿನೀ ಸುರವೃಂದ ಮೋದ ಮೆಲ್ಲಲು ಕೂಡಿ ವೇದ ಘೋಷವುಗೈಯೆ ವಾದ್ಯದುಂದುಭಿ ಮೊಳಗೆ ವೇದವೇದ್ಯನು ಮದುವೆ ವೇದಿಕೆಯನು ಏರಿ ಕಾದುಕೊಂಡಿಹ ಜನಕೆ ಸಾಧಿಸುತಲಭೀಷ್ಠ ಕರ ಸಾದರ ಪಿಡಿದಂಥ ಖೇದ ತರಿಯುತ ನಿಜ ಮೋದದಾನವ ಗೈವ 3 ತಿರುಪತಿ ತಿಮ್ಮಪ್ಪ ಸುರಗಣ ಜಗದಪ್ಪ ವರಸಮರಿಲ್ಲಪ್ಪ ಭರದಿ ಕಸಿವಕಪ್ಪ ಅರಿತವರಿಲ್ಲಪ್ಪ ಧರಿಸಿಹ ಸಿರಿಯಪ್ಪ ಕರುಣ ಸುರಿಸುವನಪ್ಪ ಉರುಗಗಿರಿಯಲ್ಲಿಪ್ಪ ಸುರತರು ಇವನಪ್ಪ ಗಿರಿಸಪ್ತ ದೊರೆಯಪ್ಪ ಹರಿಕೆ ಕೊಳ್ಳುವನಪ್ಪ ಅರಿಮಾರಿ ಸರಿಯಪ್ಪ ಶರಣರ ಪೊರೆಯಪ್ಪ ಕರೆಕರೆ ಬೇಡಪ್ಪ ಸ್ವರತ ಸುಖಮಯನಪ್ಪ ಅರವಿದೂರನಪ್ಪ ಮರೆವ ಶರಣರ ತಪ್ಪ ಸರ್ವಹೃದಯಗನಪ್ಪ ಪರಿಪೂರ್ಣಗುಣನಪ್ಪ ಅರಿಶಂಖುಧರನಪ್ಪ ಉರಿವ ರವಿಯಲ್ಲಿಪ್ಪ ಸರ್ವಮುಕ್ತರಿಗಪ್ಪ ಬಿರಿವ ಖಳರೆದೆಯಪ್ಪ ಮರುತ ಮಂದಿರನಪ್ಪ ಪರಿಮರ ಹೌದಪ್ಪ ಪೊರೆದೆ ಮಾಧವನಪ್ಪ ವರಲೀಲಾ ಮಯನಪ್ಪ ಪರಮ ಅದ್ಭುತನಪ್ಪ ಪರಮಾತ್ಮಹೌದಪ್ಪ ಕರಣ ಚೋದಿಪನಪ್ಪ ಕರಣಕ್ಕೆಸಿಗನಪ್ಪ ದುರಿತ ಪಾವಕನಪ್ಪ ಪರಮ ಪಾವನನಪ್ಪ ಹರನ ಅಪ್ಪನಿಗಪ್ಪ ಪರಮೋಚ್ಚಹೌದಪ್ಪ 4 ಬಾದರಾಯಣ ಪೂರ್ಣ ಭೋಧ ತೀರ್ಥರ ದೈವ ಮೋದ ಚಿನ್ಮಯಗಾತ್ರ ವೇದ ವಿಭಜಿಸಿ ನಿಂದ ಖೇದವಿದ್ಯೆಯ ಕೊಂದ ವಾದಿವಾರಿಣಿ ಸಿಂಹ ವಾದಿರಾಜರ ಹೃದಯ ಮೋದ ಹಯಮುಖ ಶುದ್ಧ ವೇದರಾಶಿಯತಂದ ವೇಧಗರುಹಿದ ಕರುಣಿ ಖೇದ ನೀಡುತಲಿದ್ದ ಆದಿದೈತ್ಯರ ಕೊಂದು ಮೇದಿನಿಯನು ಎಯ್ದೆ ಶ್ರೀಧರ ನರಸಿಂಹ ಗೋಧರಮಹಿದಾಸ ಕಾದುಕೊ ಶ್ರೀ ವಿಷ್ಣು ಭೇದ ವಿದ್ಯೆಯಮನಕೆ ಭೋಧಿಸು ವರ ಕಪಿಲ ಸಾಧು ಋಷಭದತ್ತ ಯಾದವ ಕುಲರನ್ನ ಕಾಯ್ದೆ ಗೋಪಿಯ ರನ್ನ ಸೀಳ್ದೆ ಕೌರವರನ್ನ ಪೇಳ್ದೆ ಪಾರ್ಥಗೆ ಗೀತೆ ಶುದ್ಧ ಜಯಮುನಿಹೃಸ್ಥ ಮಧ್ವ ಇಂದಿರೆನಾಥ ಮುದ್ದು ಕೃಷ್ಣವಿಠಲ ಬಿದ್ದೆ ಪಾದದಿ ಶರಣು 5
--------------
ಕೃಷ್ಣವಿಠಲದಾಸರು
ವೆಂಕಟೇಶಾಯ ನಮೊ ವಿಜಯವಿಠ್ಠಲನೆ ನಮೊ | ಪಶುಪತಿ ಗುರು ನಮಿತ ಪಾದಾ | ಪಂಕಜವ ಪೊಗುಳವೆನು ಪರಿಪಾಲಿಸೆನ್ನ | ಕಿಂಕರನ ಕಿಂಕರರಿಗೆ ಕಿಂಕರನೆಂದೆನಿಸೊ ಪ ಕಾರ್ಯವಾಕಾರ್ಯವನು ತಿಳಿಯಲೊಲ್ಲದ ಕಾಮಾ | ತೂರ್ಯದಲಿ ಪಾಪಗಳೆ ರಚಿಸಿ | ಬೆಂಬಿಡದದೆ ಬಲು | ಧೈರ್ಯವಂತನು ನೀನಾಗಿ | ಧೈರ್ಯವಾಗಿದ್ದಾಗ ಜಡಜೀವ ಜಂತುಗಳು | ವೀರ್ಯದಲಿ ಪೊಕ್ಕು ದುಃಖಾತಿಶಯದಲಿ | ದುರ್ಯೋನಿ ಮುಖದಿಂದ ಜನನ ಜನಿತನಾದೆ | ಮರ್ಯಾದೆಗಳು ಇಲ್ಲದೆ ಹರಿಯೇ 1 ಕ್ಷಿತಿಯೊಳಗೆ ಬಂದು ಕಾಮ ಕ್ರೋಧ ಸಂಮೋಹ ಶ್ರುತಿ ವಿಭ್ರಮ ಬುಧ್ಧಿನಾಶ ರಾಗದ್ವೇಷ | ಪಥದಲಿ ವಿಷಯೇಂದ್ರಿಗಳು ಆತ್ಮವಶವಾಗಿ ಹಿತದ ಪ್ರಸಾದದಿಂದ | ಗತಿ ಅದರಿಂದ ಈ ಸಂಖ್ಯೆಯಿಂದಲಿ | ಹತವಾಗಿ ಪೋಗಿ ಮರಳೆ ದೇಹವನು | ತೆತ್ತು ಗತಿ ಪುಣ್ಯವಂತನೈದೆ 2 ಇಂದಿಗಾ ಇವನ ಮನೆ ತಂದೆ ತಾಯಿಯ ದಿವಸ | ಇಂದಿಗಾ ಇವನ ಮನೆ ಹತ್ತ ಹತ್ತನೆ ದಿವಸ | ಹವ್ಯ ಕವ್ಯ ಜಾವಳ | ಇಂದಿಗಾ ಮದುವೆ ಮುಂಜಿ | ಇಂದು ನಿಮ್ಮನೆ ಪ್ರಸ್ತವೆಂದು ಕೇಳುತಾ ಪೋಗಿ | ಬಂದವರನನ್ನುಸರಿಸೆ ಬಾಗಿಲಾ ಮುಂದೆ ಕುಳಿತು | ನೊಂದೆ | ಬಂದೆನೊ ಕೊನೆಯಲಿ 3 ಆರಾದರೂ ಬಂದು ಕಾಸು ಕೊಡದಿದ್ದರೆ | ದೂರುವೆನೊ ನೂರಾರು ಕೇರಿ ಕೇರಿಯ ತಿರಗಿ | ಸಾರೆ ಅವರಲ್ಲಿದ್ದ ಅವಗುಣಂಗಳ ಎತ್ತೆ | ಬೀರುವೆನು ಬೀದಿಯೊಳಗೆ | ವಾರಣದಿಂದಲಿ ಕರೆದು ಆವನಾದರು ಬಂದು | ಶಾರೆ ಭತ್ತವ ಕೊಡಲು ಕೊಂಡಾಡುವೆ ಕುಲ ಉ | ಪೋರ ಬುದ್ಧಿಗಳ ಬಿಡದೆ4 ಪರವಣಿ ಪುಣ್ಯಕಾಲಾ ದಿವಸ ಬಂದರೆ ತಿಳಿದು | ಪರಮಾರ್ಥವೆಂದರಿದು ಉತ್ತಮರ ಬಾ ಎಂದು | ಕರೆದು ತುತ್ತನ್ನ ಮೇಲೊಂದು ದಕ್ಷಿಣೆ ಕಾಸು | ಹರುಷದಿಂದಲಿ ಕೊಡದಲೆ ಪರರ ಹಳಿಯುತ್ತ ಏನೇನು | ಇಟ್ಟುಕೊಂಡು ಮನಿಗೆ ಬಂದು | ಪರರರಿಯದಂತೆ ಮಂಚದ ಕೆಳಗೆ ಹೂಳಿ ಈ | ಪರಿಯಿಂದ ದಿನ ಹಾಕಿದೆ5 ತೊತ್ತು ಓರ್ವೆಯಲ್ಲಿ ಈ ಹೊತ್ತು ಪೋಗಾಡಿಸಿದೆ | ಉತ್ತಮರ ಬಳಿಯಲಿ ಕುಳಿತು ಸತ್ಕಥೆಗೆ ಕಿವಿ ಇತ್ತು ಕೇಳದಲೆ ಕೆಲಸಾರೆ ಬೇಸರಿಕೆಯಲಿ | ಅತ್ತಲಿತ್ತಲು ವ್ಯರ್ಥ ಸುತ್ತಿ ಸುಮ್ಮನೆ ಸುದ್ದಿ ಬರಿಗಂಟುಸಟೆ | ಮಾತು ಎತ್ತುವನೊ ಅನ್ನಿಗರನ ನ | ಎಣಿಕೆ ಮಾಡದಲೆ | ಉನ್ಮತ್ತದಲಿ ಕೆಟ್ಟೆನಯ್ಯಾ6 ಪರಿಯಂತ | ವೇದೆನೆ ಬಟ್ಟೆನೊ ದುಷ್ಟ ಹಾದಿಯಲಿ ಸಿಗಬಿದ್ದು | ಈ ದುರಾಚಾರಗಳ ಗಣನೆ ಮಾಡದೆ ಇನ್ನು | ಕಾದುಕೊ ಕಮಲನಾಭಾ | ಹೋದಪರಾಧಗಳ ನೋಡದಲೆ ದಯದಿಂದ | ಆದರಿಸಿ ನಿನ್ನ ದಾಸರ ಸಂಗತಿಯನಿತ್ತು | ಪಾದವನು ಕಾಣಿಸಯ್ಯಾ7
--------------
ವಿಜಯದಾಸ
ಶರಣಾಗತ ರಕ್ಷಿಸಿ ಸ್ವಾಮಿ ಪೊರೆವುದು ಎನ್ನನು ಹರಿಯೇ ಶರಣಾಗತನೊಳು ನಿರ್ದಯ ಸರಿಯೇ ಕರುಣಾಕರ ಗುಣನಿಧಿಯೇ ಪ ಅಪರಾಧಗಳನು ಕ್ಷಮಿಸಿ ಸ್ವಾಮಿ ಕಾಪಾಡೋ ಮಾಧವನೇ ಅಪಾರಪರ ಮಹಿಮನೇ ಪುರಾಣ ಪುರುಷೋತ್ತಮನೇ 1 ಸಂಕಟಪರಿಹಾರಕನೇ ನಮ್ಮ ವೆಂಕಟ ವಿಠಲನೆ 2 ಸೃಷ್ಟಿಕರ್ತನು ನೀನೆ ಸ್ವಾಮಿ ಅಷ್ಟೈಶ್ವರ್ಯವೂ ನೀನೆ ಶಿಷ್ಟರ ಪಾಲಿಪ ನೀನೆ ದುಷ್ಟರ ಸಂಹಾರಕನೇ 3 ವೇದ ಪುರಾಣವು ನೀನೆ ಮೇಧಿನಿಗಧಿಪತಿ ನೀನೆ ಮಾಧವ ಮಧುಸೂದನನೇ ಆದಿ ಮೂರುತಿ ನೀನೆ 4 ಹನುಮೇಶ ವಿಠಲನೇ ಸ್ವಾಮಿ ಜನನಿ ಜನಕನು ನೀನೆ ಜ್ಞಾನ ಪ್ರದಾಯಕ ನೀನೆ ಘನ ಮುಕ್ತಿಗೊಡೆಯನು ನೀನೆ 5
--------------
ಹನುಮೇಶವಿಠಲ
ಶಾಂತಿಯೆಂಬುದು ಸಕಲ ಸದ್ಗುಣಂಗಳ ಮುಕುಟ ಶಾಂತಿಯೊಂದಿರಲು ಕೃತಾಂತನಂಜಿಕೆಯಿಲ್ಲ ಪ ಶಾಂತಿಯೆ ಪ್ರದ್ವೇಷ ಕಾಂತಾರ ಪಾವಕವು | ಶಾಂತಿ ಕಾಂತಿಯು ದುರಿತಧ್ವಾಂತ ಓಡಿಸುವದು ಚಾಪ | ಮೊದಲಾದ ದು | ರಂತ ಶಸ್ತ್ರಾಯುಧಗಳು ಶಾಂತಿ ಖಡ್ಗಕೆ ಶರಣು ಹೊಡೆಯುತಿಹವು 1 ಶಾಂತಿಗೊಪ್ಪದ ಕುರುಪ ಭ್ರಾಂತಿಯಲಿ ತನ್ನ ಸಂತತ ಸಹಿತವಾಗಿ ಸಂಗರದಿ ಹತನಾದ ಶಾಂತಿಯಿಂದಲಿ ಧರ್ಮ ಚಿಂತೆಯನು ನೀಗಿದನು ಶಾಂತಿಯಿಂದಲಿ ಸತ್ಯ ಹರಿಶ್ಚಂದ್ರಗಾಧಿಪ ಜನ ಪೌರುಷÀವೆಲ್ಲ ನಿಸ್ತೇಜಗೊಳಿಸಿದನು 2 ಶಾಂತಿಯಲಿ ಭಕ್ತಿ ಮುಕ್ತಿ ಇಂತೆಂದು ವೇದಗಳು ಅಂತ್ಯದಲಿ ತ್ರೈವಾರ ಘೋಷಿಸುತಲಿಹವು ಶಾಂತಮೂರುತಿಯಾದ ಶ್ರೀ ಶಾಮಸುಂದರನು ಶಾಂತಿಗೆ ಮೆಚ್ಚಿ ಅಚ್ಯುತಪದವೀವಾ 3
--------------
ಶಾಮಸುಂದರ ವಿಠಲ
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶಿವರಗಳೆ ಉದಯದಲೆದ್ದು ಸದಾಶಿವ ಎನ್ನಿ |ಅದರಿಂದಲಿ ಸದ್ಗತಿಗಿರುವದು ಒಂದೇ ಹಾದಿ |ನಾನಾ ಗ್ರಂಥಗಳ್ಯಾತಕ ಓದೀ |ಓದಿದರೋದಲಿ ಬೇಕಧ್ಯಾತ್ಮಾ ||ಸಾಧಿಸಿ ಬರುವನು ಶಿವ ಸರ್ವೋತ್ತಮಾಸರ್ವೋತ್ತಮ ತಿಳಿದರೆ ಸಾಕು |ಅನೇಕ ಶಾಸ್ತ್ರಗಳೇತಕೆ ಬೇಕು |ಬೇಕೆಂಬೋದೇ ಬಿಡುವದೆ ಪರಮಾರ್ಥಲೋಕದ ಪರಿಯಲ್ಲಿರುವದೆ ಸ್ವಾರ್ಥ |ಸ್ವಾರ್ಥಕೆ ಪರಮಾರ್ಥಕೆ ಬಹು ದೂರಾ |ಎರಡೂ ಸಮನಿಸಿದವನೇ ಧೀರಾ ||ಧೀರ ಉದಾರಗೆ ಆರ ಹಂಗಿಲ್ಲಾ |ಸೂರೆಗೊಂಡನು ಮೂಜಗವೆಲ್ಲಾ |ಎಲ್ಲರಿಗೆ ತಾ ಬಲು ಕಿರಿದಾಗಿ |ಬಲ್ಲತನದ ಬಡಿವಾರವ3ೀಗಿನೀಗಿ ನಿಶ್ಚಿಂತ್ಯಾದರ ತ್ಯಾಗಿ ||ತ್ಯಾಗವು ಬಲಿತರೆ ಅವನೇ ಯೋಗಿಯೋಗಿಗೆ ಮೂಲಾ ಐಕ್ಯದ ಮಾಟಾ |ಬೇಗನೆ ತಿಳಿಯದು ಜೀವ ಶಿವ ಕೂಟಾ |ಕೂಟವ ತಿಳಿಯದೆ ಯಾತರ ಜ್ಞಾನಿ |ಚಾಟಕನಾದರೆ ಜ್ಞಾನಕೆ ಹಾನಿಹಾನಿಗೆ ಹಾನಿ ತಂದವ ಜಾಣಾಸ್ವಾನುಭವದಲಿದ್ದವ ಪ್ರತಿಗಾಣಾ |ಪ್ರತಿಗಾಣನು ಶಿವರತಿಯುಳ್ಳವನು |ಗತಿ ಬಯಸುವನು ಗುರು ಚರಣವನು |ಚರಣಗಳಲ್ಲಿ ವರಗಳು ಉಂಟು |ಗುರುಹಿರಿಯರಿಗೆ ಶರಣು ಹೋಗಿರಿ |ಪರಿಣಾಮದ ಘೋರಿಗೆ ಪರಿಪರಿ ಸ್ತುತಿಗಳು |ಪರಿ ಪರಿಸ್ತುತಿಗೆ ಪರಿಪರಿ ಪೂಜೀ |ಪರಿಪರಿ ಪೂಜಿಗೆ ಪರಿಪರಿ ವಾಜೀ ||ವಾಜಿ ಒಂದಾದರೆ ಸಹಜವೆ ತಾನು |ಮೂಜಗದೊಳಗಿದು ಸೋಜಿಗವೇನು |ಸೋಜಿಗವೆಂಬದು ಶ್ರಮದಲಿ ಮಾಯಾ ಕಂಟಕ ಕಾಕು ಭಂಗ ಬ್ರಹ್ಮಜ್ಞಾನ ಯೋಗಿ ಬ್ರಹ್ಮಜ್ಞಾನ ಬ್ರಹ್ಮಜ್ಞಾನ |ಸಿದ್ಧಗುರು ತ್ರಿಪುರಾಂತಕ ಧ್ಯಾನ |ಪ್ರಕಾಶ ಮುಖದಲಿ ಹೇಳಿದ ರಗಳಿ |ಶಿವ ಸಾಯೋಜ್ಯವೆ ಬೈಲನೆ ಹೊಗಳಿ ||
--------------
ನರಸಿಂಹ
ಶೌರಿ ಅಡಿಗಳನು ಧ್ಯಾನಿಸುವ ಮತಿ ಕೋರಿ ಪ ಮೃಡ ಪುರಂದರರೊಡೆಯ ಶ್ರೀಹರಿ ಕಡಲಶಯನನ ಬಿಡದೆ ಭಜಿಪರ ಸಡಗರದಿ ಸನ್ಮಾರ್ಗ ತೋರುವ ಬಡವರ ಆಧಾರಿ ನರಹರಿ ಅ.ಪ ನಿನ್ನ ದಾಸರ ಸಂಗದೊಳಿರಿಸೆನ್ನ ಬೇಡುವೆನು ನಿನ್ನ ನಿನ್ನ ನಾಮಸ್ಮರಣೆ ಅನುದಿನ ನಿನ್ನ ಚರಣವ ಭಜಿಪ ಭಕ್ತರನು ಕೊಂಡಾಡುವಂಥ ಅ- ಚ್ಛಿನ್ನ ಭಕ್ತರ ಕೂಟದಲಿರಿಸೆನ್ನ ಸನ್ನುತಾಂಗನೆ ಸರ್ವವ್ಯಾಪಕ ನಿನ್ನ ಮೊರೆ ಹೊಕ್ಕಿರುವೆ ಪಾಲಿಸು ಪನ್ನಗಾದ್ರಿವಾಸ ವೆಂಕಟ ಆ- ಪನ್ನ ಜನರನು ಪೊರೆವ ಕರುಣಿಯೆ 1 ಗಜ ನೀ ಕೇಳಿ ತ್ವರದೊಳು ಬಿಡದೆ ರಕ್ಷಿಸಿ ಪೊರೆದ ಕರುಣಾಳು ಬಡವ ವಿಪ್ರಗೆ ಒಲಿದೆ ಕ್ಷಿಪ್ರದೊಳು ಸೌಭಾಗ್ಯವಿತ್ತೆ ಹುಡುಗ ತಪವಿರೆ ಅಂದು ಅಡವಿಯೊಳು ತಡೆಯದಲೆ ನೀನೊಲಿದೆ ಭಕುತಿಗೆ ಒಡೆಯರೈವರ ಮಡದಿ ಮೊರೆ ಕೇಳಿ ಬಿಡದೆ ಅಕ್ಷಯವೆಂದು ಸಲಹಿದೆ ದೃಢ ಭಕುತರನು ಬಿಡದೆ ಪೊರೆಯುವೆ 2 ರಂಗನಾಥ ನಿನ್ನಂಘ್ರಿ ಕಮಲಗಳ ಭಜಿಸುವವರ ಭವ ಹಿಂಗಿಸುತ ಪೊರೆದಂಥ ಚರಿತೆಗಳ ಸಂಗರಹಿತನೆ ಬಿಡಿಸು ಬಂಧಗಳ ಸಲಹೆಂದು ಪ್ರಾರ್ಥಿಪೆ ಅಂಗಜನಪಿತ ತರಿದೆನ್ನಪರಾಧ ಮಂಗಳಾಂಗ ಪ್ಲವಂಗ ವತ್ಸರ ಗಂಗಾಜನಕ ನಿನ್ನಂಘ್ರಿ ಭಜಕರ ಹಿಂಗದಲೆ ಪಾಲಿಸುತ ಪೊರೆ ಕೃಪಾ-ಪಾಂಗ ಕಮಲನಾಭ ವಿಠ್ಠಲನೆ 3
--------------
ನಿಡಗುರುಕಿ ಜೀವೂಬಾಯಿ
ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಪ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ | 1 ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ ನಾಗನ ಗೆದ್ದು ಅರಗಿನ ಅರ್ಮನೆಯ ದಾಟಿ ವನದೊಳಗೆ ಹಿಡಂಬನ ಶಾ ರಿರ್ಮುರಿದು ಸೀಳಿ ಬಿಸಟು ಕಿರ್ಮೀರ ದನುಜರ ಸದೆದು ಪೂತಂದು ಸು- ಶರ್ಮಕನ ಬಿಗಿದು ಕಣದೊಳಗೆ ದುಶ್ಯಾಸನನ ನಿರ್ಮಳಾತ್ಮಕನ ಭಜಿಸಿರಯ್ಯಾ | ಅಯ್ಯಾಯ್ಯಾ 2 ಹರಿಯೆ ಪರನೆಂದು ಬೊಬ್ಬಿಕ್ಕಿ ವಾದಿಗಳೆದೆ ಬಿರಿಯೆ ದು:ಶಾಸ್ತ್ರಜ ಜರಿಯೆ ದುರ್ಮತಗಳು ಪರಿಯ ಬಿಡದು ಠಕ್ಕೆ ಮೆರೆಯೆ ಧರೆಯೊಳಗೆ ಈ ಪರಿಯೆ ಮುನಿಗಾರು ಸರಿಯೆ ಪೊರೆಯ ಭಕ್ತರಿಗೆ ಸುಧೆ ಗರಿಯೆ ಜ್ಞಾನ ಮಾರ್ಗಾಂಕುರಿಯೆ ವೇದದ ಸಾರ ನೆರಿಯೆ ರಿಪುಕಾಲ ಮದಕರಿಗೆ ಕೇಸರಿಯೆ ಒಪ್ಪುವ ಭಜಿಸಿರಯ್ಯಾ | ಅಯ್ಯಯ್ಯಾ 3 ಅಜನಾಗಿ ಮುಂದೆ ಪಸರಿಸಿ ಬೆಳೆದು ಹರುಷದಲಿ ತ್ರಿಜಗವನು ನಿರ್ಮಾಣವನು ಮಾಡಿ ಒಂದೊಂದು ಸೃಜಿಸುವನು ಚಿತ್ರವಿಚಿತ್ರ ಗುಣಗಣವುಳ್ಳ ಇವನೆಂದು ವೇದಗಳು ಸಾರುತಿವೆ ಕುಜನಮತವನೆ ಪಿಡಿದು ಪುಸಿಯಿದು ಎಂದೆನ್ನದೆ ಭಜಿಸಿ ಗುರುಪಥವಿಡಿದು ಸಂದೇಹವನೆ ತೊರೆದು ಸುಜನರ ಶಿರೋಮಣಿಯಯ್ಯ | ಅಯ್ಯಾಯ್ಯಾ4 ಜಾತಿ ಸಂಕರವಾಗಿ ಜಾತಿ ಧರ್ಮವ ತೊರೆದು ಜಾತವೇದ ಸಯಜ್ಞ ಇಲ್ಲದಿದರೆ ವನಜ ಸಂ ಮೌಕ್ತಿದಮಣಿ ನುಡಿದ ಕರುಣದಲಿ ದ್ವಿ ಜಾತರನ ಉದ್ಧರಿಸ ಪೋಗೆನಲು ಜಯ ತನೋ ಜಾತ ಪುಟ್ಟಿದನು ಇಳಿಯೊಳಗೆ ಮಧ್ಯಗೇಹರ ಜಾತನಂ ಭಜಿಸಿರಯ್ಯ | ಅಯ್ಯಯ್ಯಾ | 5 ಇಳಿಯೊಳಗೆ ಬಲವಂತನಾದ ಮತ ಮಧ್ವಮತ ಸುಲಭವಾಗಿಹುದು ಸುಲಭರಿಗೆ ಕಮಲಕೇತಪನ ಹೊಳಪು ಹೊಳೆದಂತೆ ವಿಕಸಿತಾ ಮಾಡಿ ಸುಜ್ಞಾನ ಜಲಧಿಯೊಳಗಾಡಿಸುವುದು ಮಲತು ನಿಂತಿರ್ದ ಹರಿನಾಮ ದಂಡವಾ ಗುರುಕುಲತಿಲಕನಂ ಭಜಿಸಿರಯ್ಯಾ | ಅಯ್ಯಯ್ಯಾ |6 ದುರವಾದಿಗಳ ಗಂಡ ಗಜದಭೇರುಂಡ ಸಂ ಕರಣ ಪ್ರಾಣವನರದು ದುರ್ಮಾಯಿ ಮಿಥ್ಯದ ಕುಹಕ ಮುರಿದು ಉರಹಿ ಅರಿಗಳಂಗದ ಚರ್ಮ ಸುಲಿದು ಭೇರಿಗೆ ಹಾಕಿ ಹರಿಸೆ ಓಂಕಾರ ಮಣಿಯಂ ಭಜಿಸಿಯ್ಯಾ | ಅಯ್ಯಯ್ಯಾ 7 ಗುರುಕರುಣ ಪಡೆದ ಮಾನವನೆ ಸರ್ವಕೃತಾರ್ಥ ಗುರುಕರುಣ ಪಡೆಯದಿದ್ದವನ ಜನ್ಮವೇ ವ್ಯರ್ಥ ಉರಗ ಉಪವಾಸ ತಂತ್ರ ಕರಿ ಕರುಣತಿಪ್ಪುವದು ಗುರು ದಯಾಕರನಾಗೆ ಹರಿವೊಲಿದು ಸಲಹುವನು ಪಾದವ ನಂಬಿರೈಯ್ಯ | ಅಯ್ಯಯ್ಯಾ 8 ಪದ್ಧತಿಯ ಕೇಳಿ ಶುದ್ಧಾತ್ಮರಿದು ವರಗುರು ಮಧ್ವ ದುಗ್ಧಾಬ್ಧಿಯನು ಕಟಿದ ನವ ನವನೀತ ಮುದ್ದೆಯನು ತೆಗೆದು ನವವಿಧ ಭಕುತಿರಸದಿಂದ ಮೆದ್ದು ಸದ್ಭಾವದಲಿ ಸದ್ವೇಷ್ಣವರಾಗಿ ಮೃತ್ಯುವಿನ ಗೋನಾಳಿ ಒದ್ದು ಕಾಲನ ಮೀರಿ ವೈಕುಂಠಪುರ ಸಾರಿ ಸಿರಿ ಪಾದದ್ವಯವ ಭಜಿಸಿರಯ್ಯಾ ಅಯ್ಯಯ್ಯ 9
--------------
ವಿಜಯದಾಸ
ಶ್ರೀ ರಮಣ ಸರ್ವೇಶ ತ್ವಚ್ಚರ- ಣಾರವಿಂದವ ನಂಬಿರುವನಲಿ ಘೋರ ಭಾವವ ತಾಳ್ದ ಹೂಣನ ದೂರ ಓಡಿಸುವ ಭಾರ ನಿನ್ನದು ಪರಮ ಕರುಣಾ ವಾರುಧಿಯೆ ನೀನಲ್ಲದೆನಗೆ- ಸಾರಥಿ 1 ಸುಗುಣ ಸಜ್ಜನ ಶಿರೋಮಣಿ ಮಗುವು ಪ್ರಹ್ಲಾದನ ಪದಾಂಬುಜ ಯುಗವ ನೆನೆವುದನರಿತು ತತ್ಪಿತನೆಂದು ರೋಷದಲಿ ನೆಗೆದು ಬಂಡೆಯ ಝಳಪಿಸುತ ಬರೆ ಧಗಧಗಿಸಿ ಕಂಬದಲಿ ತೋರುತ ಬಗೆದಿ ದೈತ್ಯನ ಕರುಳ ಜಯ ಜಯ ವಿಜಯಸಾರಥಿ 2 ದೋಷಿ ದೈತ್ಯಾವೇಷದಿಂದಲಿ ವಾಸವಾದಿ ಸಮಸ್ತ ದಿವಿಜರ ಘಾಸಿಗೊಳಿಸಿದ ದಶಶಿರನ ತದ್ವಂಶಜರ ಸಹಿತ ನಾಶಗೈದು ನಿರಾಪರಾಧಿ ವಿ- ಭೀಷಣಗೆ ಸಾಮ್ರಾಜ್ಯವಿತ್ತ ಪ- ರೇಶ ಸೀತಾಕಾಂತ ಜಯ ಜಯ ವಿಜಯಸಾರಥಿ 3 ಪೂತನಾ ಬಕ ಶಕಟ ಧೇನುಕ ಪಾತಕಿ ಶಾರಿಷ್ಠ ಕೇಶಿಕಿ- ರಾತ ಕಂಸಾಂಬಷ್ಟ ಮುಷ್ಟಿಕ ಮಲ್ಲ ಚಾಣೂರ ಕಾತರದ ಶಿಶುಪಾಲ ಮುಖ್ಯರ ಘಾತಿಸಿದ ಗರುಡಧ್ವಜನೆ ಪುರು- ಹೂತ ಸುತನನು ಕಾಯ್ದೆ ಜಯ ಜಯ ವಿಜಯಸಾರಥಿ 4 ಅತ್ಯಧಿಕ ಕೋಪದಲಿ ಪ್ರಜ್ವಲಿ ಕಮಲ ಜೌಸ್ತ್ರವ ನುತ್ತರೆಯ ಗರ್ಭದಲಿ ಬಿಡದೆ ಸುತ್ತಿಕೊಂಡಿರಲು ಸತ್ಯಭಾಮಾಕಾಂತ ಕರುಣದಿ ತೆತ್ತಿಯನು ಕಾಪಾಡಿದಖಿಳೋ- ತ್ಪತ್ತಿರಕ್ಷಣಕಾರಿ ಜಯ ಜಯ ವಿಜಯಸಾರಥಿ 5 ಇರುವೆ ಮೊದಲು ಬ್ರಹ್ಮಾಂತರಾಗಿಹ ಸುರನರಾಸುರ ಮುಖ ಪ್ರಪಂಚ ದೊ- ಳಿರುವೆ ಸರ್ವೇಂದ್ರ್ರಿಯ ನಿಯಾಮಕ ಸರಿವ ಕೃತ್ಯವನು ಅರಿತು ಮಾಡಿಸಿ ನೋಡಿ ನಗುತಿಹ ಪರಮ ಮಂಗಳ ಚರಿತ ನೀ ಯನ- ಗಿರಲು ಭಯವ್ಯಾಕಿನ್ನು ಜಯ ಜಯ ವಿಜಯಸಾರಥಿ 6 ಆದರೀ ತೆರದಿಂದ ನಿನ್ನಯ ಪಾದ ಪಂಕಜಗಳನು ಪೊಗಳಿದ- ರಾದುದೊಂದಾಶ್ಚರ್ಯ ನೋಡಲಿ ಸುಜನರಾದವರು ಮೋದ ಭೋದಿ ದಯಾಬ್ಧಿ ವೆಂಕಟ ಭೂಧರೇಶನೆ ಸತತ ನಮ್ಮನು ಕಾದಿರುವೆ ಕಮಲೇಶ ಜಯ ಜಯ ವಿಜಯಸಾರಥಿ7
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಲಕ್ಷ್ಮೀದೇವಿಯ ಸ್ತೋತ್ರ ಭಾಗ್ಯವೆ ಪಾಲಿಸೆನ್ನಗೆ ಭಾರ್ಗವಿ ಜನನಿ ಪ ಭಾಗ್ಯವೆ ಪಾಲಿಸು ಭಾರ್ಗವಿ, ಕಮಲಜ ಭಾರ್ಗಾದ್ಯನಿಮಿಷ ವರ್ಗಸೇವಿತೆ ಅ.ಪ ಹರಿಸರ್ವೋತ್ತಮ ಗುರುಸುಖತೀರ್ಥರು ಹರಫಣಿ ವಿಪಶಕ್ರಾದಿಗಳು ತರತಮ ಭೇದ ಮೂರೆರಡು ಸತ್ಯ ವೆಂ - ದರಿತು ಮನದಿ ಬಲು ಹರುಷ ಬಡುತಲಿಹ 1 ಕಾಮಕ್ರೋಧಗಳ ಗೆಲಿದು ಸತತನಿ - ಷ್ಕಾಮ ಭಕ್ತಿಯಲಿ ಮನವುಬ್ಬಿ ರಾಮ ರಾಮ ಎಂದ್ ಪ್ರೇಮದಿ ಪಾಡುತ ರೋಮಾಂಚಿತ ತನುವಿಲಿನರ್ತಿಪ ಸೌ 2 ದುರ್ಜನ ಸಂಗ ವಿವರ್ಜಿಸಿ ನಿರುತದಿ ಸಜ್ಜನಸಂಗಸುಖವ ಬಯಸಿ ಅರ್ಜುನಸಖನ ಪದಾಬ್ಜಧ್ಯಾನ ದೊಳು ಗರ್ಜಿಸುತಲಿ ನಿರ್ಲಜ್ಜನೆನಿಪ ಸೌ 3 ನಾನುನನ್ನದೆಂಬೊಹೀನ ಮತಿಯ ಕಳೆ - ದೆನು ಮಾಡುತಿಹಕರ್ಮಗಳ ಶ್ರೀನಿವಾಸನ ಪ್ರೇರಣೆ ಎಂದು ಸ - ದಾನುರಾಗದಲಿ ಅರ್ಪಿಸುತಿಹ ಸೌ 4 ಸೂಸುವ ಭಕ್ತಿ ವಿರಕ್ತಿ ಙÁ್ಞನಧನ ರಾಶಿಯ ಕೋಟ್ಟೀಭವಸುಖದ ಆಶೆಬಿಡಿಸಿ ವರದೇಶ ವಿಠಲನ ದಾಸರ ದಾಸರ ದಾಸ ನೆನಿಪ ಸೌ 5
--------------
ವರದೇಶವಿಠಲ
ಶ್ರೀ ಲಕ್ಷ್ಮೀನೃಸಿಂಹ ಪ್ರಾದುರ್ಭಾವ ದಂಡಕ ಶ್ರೀರಮಾ ಮಾನಿನೀ ಮಾನಸೇಂದೀವರೋತ್ಫುಲ್ಲ ಸಂಫುಲ್ಲ ಚಂದ್ರಾ ಚಿದಾನಂದ ಸಾಂದ್ರಾ ಸದಾ ಸನ್ನುತೇಂದ್ರಾ ನಮೋಪೇಂದ್ರ ನಿಸ್ತಂದ್ರ ನೀ ಕೇಳು, ಆ ರೀತಿ ಪ್ರಹ್ಲಾದನಲ್‍ಸಜ್ಜನಾಹ್ಲಾದನಲ್ ದೈತ್ಯ ಸತ್ಪುತ್ರರಾವೇಳೆ ಶ್ರೀಕಾಂತನ ಜ್ಞಾನ ಭಕ್ತಿ ಕ್ರಿಯಾಗಾಧೆಗಳ್ ಬೋಧೆಗಳ್ ಕೇಳಿ ತಾವೆಲ್ಲರಾಮಾರ್ಗದಲ್ಲೇ ಸುನಿರ್ದಿಷ್ಟ ಸನ್ಮಾರ್ಗದಲ್ಲೇ ಪರಾಭೂತ ಷಡ್ವರ್ಗದಲ್ಲೇ ಮನಸ್ಸಿತ್ತು ಧರ್ಮಾರ್ಥ ಕಾಮಸ್ಪøಹ ಗ್ರಂಥಗಳ್ 10 ಸಿದ್ಧ ಸಂಸಾರ ಸಂಬಂಧಗಳ ಹತ್ತುವೂದಾಗದೇ ದಾನವಾಚಾರ್ಯರಾಶ್ಚರ್ಯದಿಂದಾಗ ತಾವೇಸುರೀತಿಂದಲಾಯಾಸುರೀವಿದ್ಯೆಗಳ ಗದ್ಯಗಳ್ ಪದ್ಯಗಳ್ ಪಾಠ ಪೇಳ್ತಿದ್ದರಾ ಪಾಠಗಳ್ ಒಪ್ಪದೇ ತಪ್ಪದೇನಿಂತು ಮಾರಾಟಗಳ್ ಮಾಡುತಾ ವಿಷ್ಣುಭಕ್ತಿ ಕ್ರಿಯಾಪಾಠಗಳ್ ಪಾಡುತಾ ಎಲ್ಲರೊಂದಾಗೆ ತಾವ್‍ನೋಡಿ ಅಂಜ್ಯಾಡಿ ಇನ್ನೇನು ಈಸೂನುಗಳ ದೈತ್ಯರಾಟ್ ಸೂನನಲ್ ಬುದ್ಧಿ ಭೇದೈಸಿ ದುರ್ಬೋಧಗಳ್ ಕೇಳಿ ದುಸ್ಸಾಧ್ಯರಂ 20 ಕರ್ಣ ಕಾಠೋರ್ಯ ಬಾಣಾಳಿಗಳ್ ರೀತಿ ಅಪ್ರೀತಿಯಾಸೂತಿ ದುರ್ನೀತಿ ತಾ ಸೈಸದೇ ಕೋಪಸಂದೀಪನಾವೇಶದಿಂದಲ್ ಚಲದ್ಗಾತ್ರನಾಗೆದ್ದು ಪ್ರೋದ್ಯದ್ದಯಾಪಾತ್ರನಂತಿಪ್ಪ ತತ್ಪುತ್ರ ಸಂಹಾರದಲ್ ಚಿತ್ತವಂ ಪೆತ್ತವಂ ಪಾಪÀಸಂವೃತ್ತನೇತ್ರ ಪ್ರಮಾಕ್ಷೇಕ್ಷನಾಗಲ್ ಸಮ 30 ಕ್ಷೈಸಿ ದುಷ್ಟೋಕ್ತಿಗಳ್ ಬಾಗುತಾ ಕೂಗುತಾಸಾಧು ಸಧ್ಭಕ್ತಿಯಿಂದಲ್ ಮಹದ್ಭಕ್ತಿಯಿಂದಲ್ಲಿ ತನ್ನಲ್ಲಿ ಚೆನ್ನಲ್ಲಿ ಬದ್ಧಾಂಜಲಿಯಾಗಿ ಸಿದ್ಧಾಂತ ಸದ್ಭಕ್ತಿಯಿಂದಲ್ಲಿ ನಿಂದಿದ್ದ ಪ್ರಹ್ಲಾದ ಧೀಮಂತಗೇ ನಿರ್ಮಲಸ್ವಾಂತಗಾವೇಳೆ ಪಾದಾಹತವ್ಯಾಳಿಯಂತೇ ಭುಜಶ್ವಾಸಗಳ್ ಬೇಸಿಗಳ್ ಬೀಸುತಾಕಂದಗಾ ತಂದೆ ಸುಭಾಷಿಪಂ. ಹೋಯೆಲೋ ದುರ್ವಿನೀತಾಯೆಲೋ ಮಂದಬುದ್ಧೇಯೆಲೋಇಂತು ನೀ ಸ್ತಬ್ಧನಾದೇತಕೋ ವಂಶಘಾ40 ತೀಯೆಲೋ ಪಾಪಜಾತೀಯೆ ನೀ ಹೀಗೆ ಮಚ್ಛಾಸನಾತೀನಾಗಪ್ಪೊಡೇ ನಿನ್ನ ನಿನ್ನಾ ಯಮದ್ವಾರಕೇ ಕಳುಹುವೆಂ ನೋಡೆಲಾನಾನು ಕೋಪಿಷ್ಠನಾಗಿಪ್ಪೊಡೇ ಅಂಜಿ ಮೂರ್ಲೋಕಗಳ್ ಲೋಕಪಾನೀಕಗಳ್ ಕಂಪ ಕಾಣುತ್ತವಿಂಥಾ ಬಲಿಷ್ಠನ್ನ ನೀನೆನ್ನ ಸಂಪದ್ಬಲ ಶ್ರೀಯನಾಶ್ರೈಸದೇ ಬಿಟ್ಟರಿನ್ನಾವನಲ್ ನೀಂ ಬಲಶ್ರೀಯನಾಶ್ರೈಸುವೇಯೋ ಎಲಾ ಏಕೆ ಮಚ್ಛಾಸನಾತೀತನಾಗೂವಿಯೋ ಕಂದ ಪೇಳೆಂದರೇ, ತಂದೆಗಾ 50 ತಂದೆ ಕೇಳಯ್ಯ ಬ್ರಹ್ಮಾದಿ ಆಸ್ತಂಭಪರ್ಯಂತವುಂ ಜಂಗಮಸ್ಥಾವರಾತ್ಮ ಪ್ರಪಂಚೋಚ್ಚ ನೀಚ ಪ್ರಜಾನೀಕ ಯಾವತ್ತದಾವಾತನಾಧೀನದಲ್ಲಿಪ್ಪುದೋ ಆತನೇ ಎನ್ನಗೇ ನಿನ್ನಗೇಇನ್ನು ಮಿಕ್ಕಾದ ಚೈತನ್ಯಕೆಲ್ಲಾ ಬಲಶ್ರೀಯು ತಾನಾದನೇ ಕಾದನೇ ಕಾಲರೂಪೀಶ್ವರೋರುಕ್ರಮಾಕಾರನೆಂಬಾತನೇಆತನೇ ಆತನೇ ತೇಜ ಓಜಸ್ಸಹಾಸತ್ವ ಸಂಪದ್ಬಲ ಶ್ರೀಂದ್ರಿಯಾತ್ಮನ್ ಸ್ವಯಂ60 ಸ್ವಾಂತ ನೀನಿತ್ತು ಸರ್ವತ್ರ ಸಮಚಿತ್ತನಾಗಯ್ಯ ಎನ್ನಯ್ಯನೇ ನಿನ್ನಗಾಮೇಲೆ ವಿದ್ವೇಷ ಮಾಡೂವರಾರಿಲ್ಲವಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗವೆಂಬಾ ಮಹಾವೈರಿಗಳ್ ಕಳ್ಳರಂತೆಲ್ಲರುಂ 70 ದೇಹವೆಂಬೋ ಮಹಾರಾಜಧಾನೀ ವೃಥಾಹಾನಿ ಮಾಡೂವರಂಥಾವರಂ ಗೆಲ್ಲದೇಕೆಲ್ವರೀ ದಿಕ್ಕುಗಳ್ ಸರ್ವವಂ ಗೆದ್ದವೆಂತೆಂದು ಹಿಗ್ಗೂವರಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗ ಗೆದ್ದಾತಗೇ ಜ್ಞಾನಸಂಪೂತಗೇ ಸಾಧು ಸಂಭೂತ ಸರ್ವಂಸಮಂಚೇತಗಾಮೇಲೆ ತನ್ಮೋಹ ಸಂಜಾತವೆಂತಪ್ಪುದೋ ಶಾತ್ರವವ್ರಾತವೆಲ್ಲಿಪ್ಪುದಯ್ಯಾ ಸದಯ್ಯಾತ್ಮನೇ ತಿಳಿದು ನೋಡೆಂದು ತಾನಿಂದು ಮಾತಾಡಲು, ಶತ್ರುವಂತಿಪ್ಪ ಪು 80 ಇಂದು ನಾವೊಂದು ಪೇಳುತ್ತಿರುತ್ತಿದ್ದರೊಂದಕ್ಕೆ ಹತ್ತಾಗಿ ನೀನೇವನೋ ವಿಷ್ಣುವೆಂಬಾತ ಬೇರೊಬ್ಬ ತಾನಿಪ್ಪನೆಂದೂಹಿಸೂವೇಯ ಹೋ ಹೋಯೆಲಾಸಾವಿಗೀ ಬುದ್ಧಿ ನೀ ಸಿದ್ಧ ಮಾಡೀದಿ ಎಂಬೋದಿದಂ ವ್ಯಕ್ತವಂತೆಲ್ಲ ನಾಂ ಬಲ್ಲೆ ಇಂ 90 ತಲ್ಲದೇ ನಿನ್ನಗೀರೀತಿ ದುರ್ಬುದ್ಧಿ ಪುಟ್ಟೂವುದೇ ಮೃತ್ಯುಸಿದ್ಧರ್ಗೆ ವಿಷ್ಣುತ್ವ ಸಂಭಾಷೆಯಲ್ಲಿಚ್ಛೆ ಬೇಕಾಗಿ ಹೋದಲ್ಲದೇಬಲ್ಲೆನೆಲ್ಲಾ ಎಲೋ ಮಂದನೇ ಮಂದಭಾಗ್ಯೋಕ್ತಿಗಳ್ ಏಕೆ ನೀನಾಡುವೇ ಅಕ್ಕಟಾಎನ್ನಗಿನ್ನಾ ಜಗನ್ನಾಥನಿನ್ನಾವನೋಆತನೆಲ್ಲಿಪ್ಪ, ಸರ್ವತ್ರದಲ್ಲಿಪ್ಪ ನೀನೆಂದಡೇ ಡಿಂಭಕಾಡಂಭಕಾಡೋಣಗಳ್‍ಸಾಕು ಮಾಡಿನ್ನು ಮೇಲೀ ಸಭಾಸ್ತಂಭದಲ್‍ಶೀಘ್ರ ಸಂರಂಭದಲ್ ತೋರು ನೀ ತೋರದೇ 100 ಪೋದೆಯಾ ಇನ್ನು ನೀ ಮಾರುಮಾತಾಡದ್ಹಾಗೇ ಶಿರಚ್ಛೇದ ಮಾಡೂವೆನೋ ನಿನ್ನಗೀವೇಳೆಯಲ್ ವಿಷ್ಣುವೆಂತೆಂದದಾವಾತ ತಾನಡ್ಡ ಬಂದಾನೋ ನಾ ನೋಡುವೆಂ ವಿಷ್ಣುವೇಬೇಡಬೇಕಾದ ದಿಕ್ಕಾಗಿ ನಿನಗಿಪ್ಪಡೇಬೇಡಿಕೋ ಮೂರ್ಖನೇ ಎಂದು ಕ್ರೋಧಾಗ್ನಿಯಿಂದುರ್ಪಿ ದುರ್ಭಾಷೆಯಲ್ ತನ್ನ ಪುತ್ರನ್ನ ತಾದೂರುತಾ ಹಾರುತಾ ಕೈಲಿ ಖಟ್ ಪೆಟ್ಕವಂಖಡ್ಗವಂ ಕೊಂಡು ದುಷ್ಟಂ ಮಹಾದೋರ್ಬಲಿಷ್ಠಂ ಸ್ವಯಂ ಮುಷ್ಟಿಯಿಂದಲ್ಲಿ ಪೆಟ್ಟಿತ್ತನು. 110 ಆ ಭೀಕರಧ್ವಾನ ಸಂಭಿನ್ನ ದುಷ್ಟಾಸುರೀಗರ್ಭಸಂರಂಭವುಂ ಶುಂಭದಂಭೋದ ವೀಥೀ ಸಮಾರಂಭಿತೋ ಜೃಂಭವುಂ ವೈಷ್ಣವೋತ್ಕøಷ್ಟ ವಿಶ್ರಂಭವುಂ ಶಾತಕುಂಭೊಲ್ಲಸದ್ರತ್ನಚಿತ್ರಪ್ರಭಾಗುಂಭವುಂ ತತ್ಸಭಾಸ್ತಂಭವಂ ಆಗಲೇ ಬೇಗಲೇ ಘಳಾಘಳಾರಾವ ಉದ್ಭೂತವಾಗೆದ್ದು ಬ್ರಹ್ಮಾಂಡವೆಲ್ಲಾ ಪರಿಸ್ಫೋಟವಂ ಮಾಡುವಂತೊಪ್ಪೆ ಬ್ರಹ್ಮಾದಿಗಳ್ ತಮ್ಮ ಧಾಮಕ್ಕೆ ವ್ಯಾಘಾತವೇನಾದರುಂ ಬಾಹೋದೇನೋ ಇದೇನೆಂದು ವಿ 120 ಭ್ರಾಂತ ಚೇತಸ್ಕರಾಗಿಪ್ಪರಂತೇ ದುರಂತೇಕ್ಷಣಂಗಳ ಕುವರಾಗ್ರನಲ್ ತುಂಬುತಾಕತ್ತಿ ಕೈಹತ್ತಿ ಪುತ್ರನ್ನ ತಾ ಚಿತ್ರಹಿಂಸಿತ್ತು ಕೊಲ್ಲೂವೆನೆಂದಾಗ್ರಹೋಗ್ರ ಗ್ರಹಗ್ರಸ್ತನಾಗೇನು ಮೈತಿಳಿಯದೇ ಕೂಡಿಓಡ್ಯಾಡಿ ಬಾಹೋ ಹಿರಣ್ಯಾಖ್ಯಗಾ ವೇಳೆ ಕಾಲಾಡದದ್ಹಾಗೇ ಸಭಾಸ್ತಂಭದಲ್ ತನ್ಮಹಾರಾವ ತಾನಡ್ಡಕಟ್ಟಿಪ್ಪದಂತಾ ಮಹಾಧ್ವಾನ ಕೇಳುತ್ತಲೇ ನಿಂತನಾ ಹೇತುವಂ ಕಾಣದೇ ಆಗ ಆಯಾಸುರೀ ಹಿಂಡುಗಳ್ 130 ತುಂಬಿ ಕಾಳ್ಗಿಚ್ಚುಗಳ್ ಚೆಂದದಿಂಜಂತು ಸಂಘಕ್ಕೆ ಸಂತಾಪಗೈಸೇ ಛಿಟಾಛಿಟ್ ಛಿಟಾಂಗಾರಗಳ್ ಬೀಸೆ ಇದೇವುದೋಭೂತ ಉದ್ಭೂತವಾಗೊಪ್ಪಿತೆಂದಾಗ ಮೂರ್ಲೋಕವೆಲ್ಲಾ ಸಮುಲ್ಲೋಕವಾಗಿಪ್ಪುದಾವೇಳೆ ತದ್ಭøತ್ಯವಾಕ್ ಸತ್ಯವಂ ಮಾಡಬೇ 140 ಕಾಗಿ ಸರ್ವತ್ರ ತಾನ್ ತನ್ನ ವ್ಯಾಪ್ತತ್ವವಂಪಥ್ಯವಾಗಿಪ್ಪವೋಲ್ ಅದ್ಭುತಾಕಾರ ಪೊತ್ತಂ ಜಗದ್ಭರ್ತ ತಾನೊಂದೆ ಸಿಂಹಾಕೃತೀಯಾಗದೇ ಮತ್ರ್ಯಮೂತ್ರ್ಯಲ್ಲದೇ ತತ್ಸಭಾಸ್ತಂಭದಲ್ ಡಿಂಬ ಸಂಭಾವನಕ್ಕಾಗಿ ಸಂಭೂತನಾದಂ.ದಿತೀಪುತ್ರನಾ ರೂಪವಂಕಂಡಿದೇನೋ ಮಹಾ ಚಿತ್ರವಾಗಿಪ್ಪುದೇಸಿಂಹದಂತಲ್ಲದೇ ಮತ್ರ್ಯನಂತಲ್ಲದೇಯಾವುದೀ ಭೂತವೆಂತೆಂದು ಮೀಮಾಂಸಮಾನಾತ್ಮನಾದಂ.ಜಗತ್ಸ್ಯಾಮಿ ತಾನಾಗಲೇ 150 ತಪ್ತಭಾಂಗಾರ ಶೃಂಗಾರವಲ್ಯಂತೆ ಕಂಗಳ್ ಸಮುದ್ಯತ್ಸಟಾ ಕೇಸರಂಗಳ್‍ವಿಜೃಂಭತ್ಕರಾಳಾಸ್ಪದಂ ಉಗ್ರನಾಸಾಸಮುಚ್ಚಾಸ್ವ ನಿಶ್ವಾಸಗಳ್ ಸಂಚಲದ್ವಸ್ತವ್ಯಾಳ ಕ್ಷುರಾಂತೋಗ್ರ ಜಿಹ್ವಾಗ್ರ ಲೇಲೀಹನಂಗಳ್ ಭ್ರಮದ್ಭ್ರೂಲ್ಪಲಂಗಳ್ ಹನೊರೋಷಭೀಷ್ಣಂಗಳುಂ ಊಧ್ರ್ವಕರ್ಣಂಗಳುಂ ಭೂಮಿ ಭೃ ತ್ಕಂದರಾಶ್ಚರ್ಯವವ್ಯಾತ ಘೋರಾಸ್ಯನಾಸಾಪುಟಂಗಳ್ ಅದೀರ್ಘೊನ್ನತಗ್ರೀವವುಂದೀರ್ಘದಂತೊಪ್ಪುವೋ ದೇಹವಂ ವಿಸ್ತøತೋ160 ಶುಂಡಾಲ ಶುಂಡಪ್ರಕಾಂ170 ಡ ಪ್ರಚಂಡೋಲ್ಲಸದ್ದೋಹ ಸಾಹಸ್ರ ದೀಪ್ತಾಯುಧಾಭೋ ನಖಾನೀಕವುಂ ಚಕ್ರ ಶಂಖಾದಿ ನಾನಾಯುಧ ಶ್ರೇಷ್ಠ ವಿದ್ರಾವಿತಾsಭದ್ರ ರಕ್ಷಃ ಪಿಶಾಚಾಸುರೋದ್ರೇಕವುಂಪ್ರೋನ್ನಿತಂಬೋರು ಸತ್ಸಾನು ಜಂಘಪ್ರದೇಶಾವೃತ ಪ್ರೋಲ್ಲಸತ್ಪೀತ ಕೌಶೇಯವುಂಬದ್ಧಕಾಂಚೀಕಟಿಸ್ಥಾನವುಂ ಮಂಜುಮಂಜೀರ ಸಂಚಿನ್ನನಾದಾಂಘ್ರಿಕಂಜಾತ ವಿನ್ಯಾಸವುಂ ಕೋಟಿ ಮಾರ್ತಾಂಡ ಸಂಕಾಶವುಂಪೋಲ್ವುದಂಥಾ ದುರಾಲೋಕವಂತಿಪ್ಪ ಜ್ವಾ180 ಲಾ ನೃಸಿಂಹಾಕೃತಿ ಸ್ವಾಮಿನಂ ನೋಡುತಾದೃಷ್ಟಿಗಳ್ ಬಾಗೆ ತಾ ನಿಂತು ನನ್ನ ವರಜಾರಾತಿಯಾದ ಸ್ವಯಂ ಜ್ಯೋತಿ ಈ ರೀತಿ ತಾನಿಂದಿಗೇ ನಾರಸಿಂಹಾಕೃತೀಯಾಗಿ ನಾಂಪುತ್ರಂ ಸಂಹಾರಕುದ್ಯುಕ್ತನಾಗಿಪ್ಪೊಡೇಎನ್ನ ಸಂಹಾರಕಾಗಿಲ್ಲಿಗೇ ಬಂದನೋಇನ್ನು ಮೇಲೀತನಿಂದೆನ್ನಗೇ ಮೃತ್ಯು ತಾಸಿದ್ಧವಾಂತಿಪ್ಪುದೇನೋ ಪುರಾಣ ಪ್ರಸಿದ್ಧೋಕ್ತ್ಯಭಿವ್ಯಕ್ತಿಗೈತೇನಹೋ ಎಂದು ಮಾತಾಡುತಾ ನಿಂತು ಉದ್ಯದ್ಗದಾಧಾರಿ ತ 190 ಪೂರ್ವದಲ್‍ಅಸ್ಯತೇಜೋಂಶದಿಂದಲ್ ಜಗಧ್ವಾಂತ ಯಾವತ್ತುಮಿಂ ತಾ ಸ್ವಯಂ ಪಾನಮಾಡಿಪ್ಪ ಸತ್ಯಾತ್ಮಗೀ ನಾರಸಿಂಹಾತ್ಮಗೇ ಈ ಹಿರಣ್ಯಾಸುರ ಶ್ರೇಷ್ಠ ಸಂಹಾರ ಹೆಚ್ಚಲ್ಲವಂತಾದರುಂ ಲೋಕದೃಷ್ಟ್ಯಾನುಸಾರ ಕ್ರಿಯಾಕಾರಿಯಾಗಿಪ್ಪ ನೃಸಿಂಹನುದ್ಯದ್ಗದಾಧಾರಿ ತಾನಾಗಿ ಸದ್ವಿದ್ಯುದಾಭ್ಯೋದ್ಯದು 200 ದ್ವೇಗವೇಗೋರು ಸಂಪದ್ಗದಾ ದಂಡವಂಕೊಂಡು ಯುದ್ಧಕ್ಕೆ ಬಾಹೋ ಮಹಾದೈತ್ಯವರ್ಯನ್ನ ತಾ ನೋಡಿ ರೋಷೋಜ್ವಲ ಜ್ವಾಲೆಗಳ್‍ಲೇಲಿಹಾನೋಲ್ಲ್ಲಸಜ್ಜಿಹ್ವೆಯಿಂದಲ್ ಪ್ರಕಾಶೈಸುತಾ ಚೀರುತಾಗಾಟ್ಟಹಾಸಕ್ರಮನ್ಯಾಸದಿ ಹಾರುತಾ ಕೋಟಿ ಸೂರ್ಯಪ್ರಭಾಬೀರುತಾ ಆ ಗರುತ್ಮಂತ ಕಾಳಾಹಿಂಪಿಡಿವನಂತೊಪ್ಪಿ ತಾನಾ ದಿತೀಪುತ್ರನಲ್‍ನೂಕಿದಂ ಶೀಘ್ರದಲ್ ಪಿಡಿದನಾ ದೈತ್ಯರಾಜೇಂದ್ರನಾವೇಳೆ ತದ್ಧಸ್ತದೋಳ್ ಸಿಕ್ಕದೇ 210 ಸುಕ್ಕದೇ ಘಕ್ಕನೇ ಬಿಡಿಸಿಕೊಂಡಾ ಗದಾದಂಡವಂ ಕೊಂಡು ಸನ್ನದ್ಧ ಸದ್ಯುದ್ಧವಂಮಾಡುವೋನಂತೆ ಯಾವಾಗ ನೃಸಿಂಹನಲ್‍ಸಿಕ್ಕಿ ಮತ್ತೇಬಿಡೂವಾದನಾ ವೇಳೆಯಲ್‍ಶರ್ವ ಶಕ್ರಾದಿ ದಿಕ್ಪಾಲಕಾನೀಕವುಂಸೂರ್ಯಚಂದ್ರಾದಿ ಸರ್ವಗ್ರಹಕ್ರ್ಷಾವಳೀಲೋಕವುಂ ಮೇಘಸಂತಾನದೋಳ್ ಲೀನವಾಗಿದ್ದು ಇನ್ನೇನು ಈ ದೇವತಾರಾತಿ ಈನಾರಸಿಂಹಾತ್ಮನಲ್ ಸಿಕ್ಕದೇ ದಕ್ಕದಂತಿಪ್ಪನೇ ಈತನೀ ದುಷ್ಟ ದೈತ್ಯನ್ನ ಗೆ 220 ಲ್ಲಾರನೋ ಗೆಲ್ವನೋ ಎಂದು ತದ್ವೀರ್ಯವಂತಿಳಿಯದೇ ಭ್ರಾಂತಚಿಂತಾಂತರಂಗೋದ್ಯದುದ್ವೇಗದಿಂ ಕಾಂಬಂತಿಪ್ಪುದು.ಆಮೇಲೆ ಢಾಲ್ ಕತ್ತಿ ಕೈಗೊಂಡು ಆಯಾಸದಿಂದಲ್ಲಿ ಆ ದೈತ್ಯನಾನಾರಸಿಂಹಾತ್ಮನಲ್ ಸಂಗರ ಶ್ರಾಂತಿ ಮತ್ತೇನು ತಾ ಕಾಣದೇ ದೂಕಿದಂ ತಾಕಿದಂಸೋಕಿದಂ ಅಂಘ್ರಿವಿನ್ಯಾಸಗಳ್ ಕೂಡಿ ತಾಮೇಲೆಯುಂ ಕೆಳಗೆಯುಂ ಶ್ಯೇನಪಕ್ಷಂತೆ ಸುತ್ತಾಡುತಾ ಛಿದ್ರವಂ ಕಾಣದೇ ತನ್ನನೇಪಿಡಿವುದಕ್ಕಾತನಂತೋಡುತಾ ಬಾಹೊ ಬ 230 ಲ್ಲಿಷ್ಠನಾ ಅಟ್ಟಹಾಸೈಸಿಯುಕ್ಕೇಸರಂಗಳ್ ಪ್ರಸಾದೈಸಿ ಕ್ರೂರಾಹಿತಾನಂದಘಗ್ರಾಹಿಯಂತೇ ಸ್ವಭಾ ಸಾಸಿರಂ ಸೂಸಿ ಜಂಘಾಲ ಲೀಲಾ ಸಮುಲ್ಲಂಘನಾ ಗೋಪದಿಂಹಾರಿಯಾ ನಾರಹರ್ಯಕ್ಷನಾ ದೈತ್ಯದಕ್ಷನ್ಪಿಡಿರ್ದಂ ಫಟಾಫಟ್ ತಲಾಘಾತವಂಗೈಲ್ಬಡಿರ್ದಂ ಥಟಾಥಟ್ ಪದಾಘಾತದಿಂ ದಲ್ ಹೊಡೆರ್ದಂ ಗದಾಘಾತದಿಂದಲ್ ಮಹೋರಸ್ಕಿಡಿರ್ದಂ ಸಭಾದ್ವಾರದಲ್ ಹಾಕಿ ಭಾಸ್ವನ್ನಖ ಶ್ರೇಣಿಯಿಂದಲ್ ಫಟಾಫಟ್ ಗುರು240 ತ್ಮಂತಕಾಲಾಹಿನಂ ಸೀಳುವೋ ರೀತಿ ಜಂಭಾರಿದಂಭೋಳಿಯಂತಾಗಲುಂ ಸೀಳುತಿರ್ದಾಮಹಾದೇವನ್ನಾ ಹಗಲ್ ರಾತ್ರಿಯೊಂದಲ್ಲದ್ಹಾಗೇ ದಿವಾಸಂಧಿಯಲ್ ಸೀಳಿದಂ.ಘೋರ ಸಂರಂಭ ದಂಷ್ಟ್ರೇಕ್ಷವ್ಯಾವೃತ್ಕರಾಳಾಕ್ಷನಾಗಿ ಸ್ವಜಿಹ್ಪಾಗ್ರದಿಂದಲ್ ಲಸದ್ವ್ಯಾತ್ತ ವಕ್ತ್ರಾಂತ ಶೋಣಿಯ ಮಾನಾಧರಾದ್ಯಂತವಂ ಲೇಲಿಹಾನೋಗ್ರವಂ ತೋರುತಾರಾಕ್ಷಸ ಶ್ರೇಷ್ಠನಂ ಪಿಡಿದು ವಕ್ಷೋನ್ನತಸ್ಥಾನವಂ ತೋಡಿ ಕಾಸಾರವಂ ಮಾಡುತಾ 250 ತುಂಬಿ ಶುಂಡಾಲ ಸಂಹಾರದಲ್ ಮುಂಚುವೋ ಘೋರ ಪಂಚಾನನೋದಾರ ಲೀಲೆಂಗಳಂ ಬೀರುತಾ ರಾಕ್ಷಸಾಧ್ಯಕ್ಷ ವಕ್ಷಸ್ಸಿನೋಳ್ ಕಿತ್ತುತಾ ಹಾರಗಳ್‍ಮಾಡಿಕೊಂಡೊಪ್ಪಿ ತದ್ರಕ್ತ ಸಿಕ್ತಾನನೋದ್ಯಚ್ಛಟಾ ಕೇಸರಂಗಳ್ ಪ್ರಕಾಶೈಸುತಾ 260 ದೈತ್ಯರಾಜೇಂದ್ರನಾ ಪ್ರಾಣಗಳ್‍ಗೊಂಡನಾಮೇಲೆ ಸುತ್ತಿದ್ದ ತದ್ಭಂಧು ಸಂದೋಹದಲ್ಲಿದ್ದನೇಕಾಸುರೀನೀಕವಂ ಸಾಯುಧೋದ್ರೇಕವಂ ಅಲ್ಲಕಲ್ಲೋಲವಂ ಮಾಡಿ ಚಂಚನ್ನಖಶ್ರೇಣಿಯಿಂ ಸಂಹರಂ ಮಾಡಿದಂ.ಆಗ ತದ್ಭೀಕರಾಕಾರವಂ ಕಾಂಬ ಶಕ್ತ್ಯಾವುದಂ ಕಾಣದೇ ತತ್ಸಟಾ ಕೇಸರೋದ್ಭೂತ ಸಂಘಾತಗಳ್ ಘೋರ ಜೀಮೂತಗಳ್‍ಸರ್ವವಂ ನೋಡುತಾ ಮತ್ರ್ಯಸಿಂಹೋಗ್ರದೃಷ್ಟಿಜ್ವಲಜ್ವಾಲೆಗಳ್ ಸೈಸದೇ ಸೂರ್ಯಚಂ270 ಪಾದ ಸಂಘಟ್ಟದಿಂದಲ್ ಧರಾಚಕ್ರವಲ್ಲಾಡಿತಾಘೋರ ತೇಜಸ್ಸಿಗವಕಾಶಂಗಳಾಕಾಶವೂಬಾಡಿತಾ ಶಾಕಿನೀ ಡಾಕಿನೀ ಮುಖ್ಯ ದು 280 ಷ್ಟಗ್ರಹಾನೀಕವುಂ ಭೀತಿಗೊಂಡೋಡಿತಾಮೇಲೆ ಉದ್ಯತ್ಸಭಾ ಮಧ್ಯೆ ದೈತ್ಯೇಂದ್ರ ಸಿಂಹಾಸನಸ್ಥಾನದಲ್ ನಾರಸಿಂಹಂ ಸಮಾಸೀನನಾಗಿಪ್ಪನಾ ತೇಜ ಓಜ ಪ್ರಭಾಪುಂಜರಂಜನ್ನ ಭಾಸ್ವತ್ಕರಾಳೋಗ್ರ ಜಿಹ್ವ ಸ್ಫುರದ್ದಂಷ್ಟ್ರ ವಕ್ತ್ರನ್ನ ಬಿಭ್ರಲ್ಲಸದ್ಭ್ರೂತನಂ ಆ ಮಹಾಕೋಪ ಸಂರಂಭ ಗಂಭೀರ ನೇತ್ರನ್ನ ಕಣ್ಣೆತ್ತಿ ಕಾಂಬೋದರಲ್‍ಬ್ರಹ್ಮ ರುದ್ರಾದಿಗಳ ಶಕ್ತಿಯುಂ ಸಾಲದೇದೂರದಲ್ ಪಾಶ್ರ್ವ ಭಾಗಸ್ಥರಾಗಿಪ್ಪರಂತೇ.290 ಆಗ ಮೂರ್ಲೋಕ ಸಂತಾಪಿಯಾಗಿಪ್ಪ ದೈತ್ಯನ್ನ ನಾರಾಯಣಂ ನಾರಸಿಂಹಾಕೃತೀಯಾಗಿ ಸಂಹಾರವಂ ಮಾಡಿದಂ ಎಂಬುದಾವಾರ್ತೆ ಕೇಳುತ್ತಲೇ ದೇವನಾರೀಜನಂಗಳ್ ಪ್ರಹರ್ಷಾನನೋತ್ಪುಲ್ಲರುಲ್ಲಾಸದಿಂವಾಸಿತಾಮೋದ ಮಂದಾರ ಕುಂದಾರವಿಂದಾದಿ ಸತ್ಪುಷ್ಟ ಸಂತಾನ ವರ್ಷÀಂಗಳಂವರ್ಷಿಸುತ್ತಿಪ್ಪರಾಕಾಲಾವಾಕಾಶದಲ್‍ನಿಂತು ಕಾಣೂವರಾ ದೇವದೇವೀ ಸಮೂಹಂಗಳಾಯಾವಿಮಾನಂಗಳೆಲ್ಲಾ ಮಹಾ 300 ಸಂಕುಲೀ ಭೂತವಾಗಿಪ್ಪವಾ ದೇವತಾದುಂದುಭಿಧ್ವಾನ ಇಂಬಾಗಿ ತಾ ದೇವಗಂಧರ್ವ ಸಂಗೀತ ನಾಟ್ಯಂಗಳಿಂದಪ್ಸರಾಕಾಮಿನೀ ತಾನ ಗಾನಂಗಳಿಂದಾಗ ಆಕಾಶವುಂ ತುಂಬಿತಾ ಬ್ರಹ್ಮರುದ್ರೇಂದ್ರ ಮುಖ್ಯಾಮರ ಶ್ರೇಣೀಗಳ್ ಪಿತೃಗಳ ಮನ್ವುಗಳ್‍ಸಿದ್ಧ ವಿದ್ಯಾಧರಾನೀಕಗಳ್À ಅಪ್ಸರಾ ಕಾಮಿನೇರಾ ಪ್ರಜಾಪಾಲ ಗಂಧರ್ವರಾಯಕ್ಷ ಕಿಂಪುರುಷರಾ ಚಾರಣಾನೀಕವಾಕಿನ್ನರಸ್ತೋಮ ನಂದಾ ಸುನಂದಾದಿ ತ 310 ತ್ಪಾರ್ಷದಾನೀಕವೆಲ್ಲಾ ಶಿರೋಭಾಗದಲ್‍ಪಾಣಿಗಳ್ ಜೋಡಿಸೀತೆಲ್ಲ ಮುನ್ನಾತಿ ದೂರಸ್ಥರಾಗಿದ್ದು ನಿಂತಾಮೃಗೇಂದ್ರಾಸನಾಸೀನನಾಗಿಪ್ಪ ಅತ್ಯುಗ್ರ ತೇಜಸ್ವಿನಂಮೆಲ್ಲನೇ ಬೇರೆ ಬೇರಾಗಿ ಕೊಂಡಾಡುತಾನಿಂತರಾವೇಳೆಯಲ್ ಬ್ರಹ್ಮ ತಾ ಭಾಷಿಪಂನಿನಗೆ ವಂದೀಸುವೆಂ ತಂದೆ ನೀನೆ ಅನಂತಂ ದುರಂತ್ಯೋರು ಶಕ್ತ್ಯುಳ್ಳವಂ ಲೋಕಪಾವಿತ್ರ್ಯ ಕಮ್ರ್ಯಂ ಮಹಾಶ್ಚರ್ಯ ವೀರ್ಯ ಜಗತ್ಸøಷ್ಟಿ ಸಂರಕ್ಷ ಸಂಹಾರಗಳ್ ಲೀಲೆಯಿಂ320 ದಲ್ ಸದಾ ಮಾಳ್ಪೆಯೋ ಅವ್ಯಯಾತ್ಮನ್ನೆ ನೀ ನೆಂದನು.ಈಶ ತಾ ಬಂದೆಲೋ ತಾತನೇನಿನ್ನಗೀ ಕೋಪ ಬಾಹೋದಕಿಂದಾ ಯುಗಾಂತಾಖ್ಯ ವೇಳ್ಯಲ್ಲವೋ ಕ್ಷುಲ್ಲನೀ ದೈತ್ಯನೀವೇಳೆ ನಿನ್ನಿಂದ ತಾನ್ ಮೃತ್ಯುಪಾಲಾದನಂತಿನ್ನುಮೇಲ್ ಕೋಪ ಸಂಕ್ಷೇಪ ಮಾಡಯ್ಯ ಈದೈತ್ಯ ಪುತ್ರನ್ನ ಪ್ರಹ್ಲಾದನಂ ಸರ್ವದಾನಿನ್ನ ಭಕ್ತನ್ನ ಸಂರಕ್ಷಿಸೋ ಭಕ್ತವಾತ್ಸಲ್ಯದಿಂದೆಂದನು.ಇಂದ್ರ ತಾ ನಿಂತೆಲೋ ಸ್ವಾಮಿಯೇ ಅಣ್ಣತಮ್ಮಂದ್ರ ದೀಟಾಗಿ ನೀನೇ ಸದಾ ನಮ್ಮ ಸಂ330 ರಕ್ಷಿಸೂವೇಯೊ ನಿನ್ನಿಂದಲಾ ಯಜ್ಞ ಭಾಗಂಗಳುಂ ನಮ್ಮಗೇ ಮತ್ತೆ ಉಂಟಾದವಯ್ಯಾ ಹಿರಣ್ಯಾಸುರಂಗಾದುದೀಗೆಮ್ಮ ಸುಸ್ವಾಂತಗಳ್ ನಿನ್ನಗಾವಾಸಯೋಗ್ಯತ್ವ ಪೊಂದಿಪ್ಪುವಂತೆ ವಿಕಾಸ್ಯೆಸಿತೋ ನಿನ್ನ ಶುಶ್ರೂಷೆ ಬೇಕೆಂಬ ಲೋಕಾಳಿಗೇ ಕಾಲಸಂಗ್ರಸ್ತವಂತಿಪ್ಪ ಲೋಕಾಳಿಯಲ್ ಯಾವದೂಲಕ್ಷ್ಯವಿಲ್ಲಂತೆ ಮುಕ್ತ್ಯಾದರುಂ ಹೆಚ್ಚು ನಿಶ್ಬೈಸುವಂತೇ ನೃಹರ್ಯಾತ್ಮನೇ ಮಿಕ್ಕ ಸಂಭೂತಿಯಿಂದಾಗಬೇಕಾದುದೇ ನಿಪ್ಪುದೆಂದಂ.340 ಬೊಮ್ಮ ನೀನೆಮ್ಮ ಶ್ರೇಯಸ್ಸಿಗೆ ಮುನ್ನ ನಿನ್ನ ಸ್ವತೇಜಾಂಶವನ್ನೇ ತಪೋಯೋಗವಂ ನಮ್ಮಗೇಕೊಟ್ಟೆಯೊ ಆ ತಪಸ್ಸಿಂದ ನಿನ್ನಲ್ಲಿಹೋವಿಶ್ವವೆಲ್ಲಾ ಬಹೀರಂಗ ಮಾಡೀದೆಯೋನಮ್ಮದಂಥಾ ತಪಸ್ಸಂ ಹಿರಣ್ಯಾಸುರಶ್ರೇಷ್ಠತಾ ಕದ್ದನಂತಿದ್ದನೇ ಈಗ ನೀನೀ ಜಗದ್ರಕ್ಷಣಕ್ಕಾಗಿಯೇ ಭಕ್ತ ಸಂರಕ್ಷನೇ ನಾರಹರ್ಯಕ್ಷನಾಗಿನ್ನು ರಕ್ಷೋಗಣಾಧ್ಯಕ್ಷ ವಕ್ಷಸ್ಕವಂ ಸೀಳಿ ನೀ 350 ನಮ್ಮಗೆಲ್ಲಾ ತಪೋಯೋಗವಂ ಮತ್ತೆ ತಂದಿತ್ತೆಯಂತೆಂದರು.ಪಿತೃಗಳ್ ನಿಂತೆಲೋಧರ್ಮರೂಪೀಯೆ ಇಂಥಾ ಕ್ರಿಯಾಲಾಪಗಳ್‍ಪುತ್ರರಿಂದಲ್ ತಿಲೋದಂಗಳಿಂದಲ್ ಮಹಾಪುಣ್ಯ ತೀರ್ಥಂಗಳಲ್ ಕ್ಷೇತ್ರ ಪಾತ್ರಂಗಳಲ್‍ನಮ್ಮ ನಮ್ಮಲ್ಲಿ ಇಂತಿತ್ತ ಶ್ರಾದ್ಧಂಗಳಂತನ್ನ ಪ್ರೀತ್ಯರ್ಥವೆಂತಿರ್ದನೈ ನಾಥ ಸಂಪೂರ್ಣ ಸೌಭಾಗ್ಯ ಸಂಸ್ಥಾನಿಯೋ ನೀನು ಭಾಸ್ವನ್ನಖ ಶ್ರೇಣಿಯಿಂದಲ್ ಮಹಾ ದೈತ್ಯವಕ್ಷಸ್ಕವಂ ಸೀಳಿ ಇತ್ತಾವ ಪಾಂತ್ರಾತ್ಮಿಕಾ 360 ಶ್ರಾದ್ಧ ನಮ್ಮಲ್ಲಿ ತಾ ಸೇರಿತೈ ನಾರಹರ್ಯಾತ್ಮನೇ ನಿನ್ನಗೇ ನಾವು ಸಾಷ್ಟಾಂಗ ಪ್ರಣಾಮಗಳ ಮಾಡುವೇವೆಂದರು.ಸಿದ್ದರೆಲ್ಲಾಂಜಲೀಬದ್ಧರಾಗೆದ್ದೆಲೋಅಷ್ಟಸಿದ್ಧಾತ್ಮನೇ ನಮ್ಮಲಿದ್ದಾ ಮಹಾಯೋಗ ಸಿದ್ಧಿಂಗಳೆಲ್ಲಾ ತಪೋಯೋಗಸಾಮರ್ಥ್ಯದಿಂ ಕದ್ದನೇ ಗೆದ್ದೆನೆಂತಿದ್ದ ದೈತ್ಯ ಪ್ರಬುದ್ಧನ್ನ ವಕ್ಷಸ್ಕ ಸಂಭಿನ್ನವಂಮಾಡಿಯಾ ನಮ್ಮಗಾಧಾರವಾಗಿದ್ದ ಸದ್ಯೋಗ ಸಿದ್ಧಿಂಗಳಂ ಮತ್ತೆ ನೀನಿತ್ತೆಯೋ 370 ನಾರಸಿಂಹಾತ್ಮ ನಾವೆಲ್ಲರುಂ ನಿನ್ನಗೇವಂದನಂಗಳ್À ಸಮರ್ಪೀಂಸುವೇವೆಂದರು.ಆಮೇಲೆ ವಿದ್ಯಾಧರಾನೀಕಗಳ್ ನಿಂತೆಲೋಸರ್ವ ವಿದ್ಯಾತ್ಮನೇ ನಮ್ಮಲಿದ್ದಾ ಪೃಥಕ್‍ಧಾರಣಾಯೋಗ ಸಂಪಾದ್ಯಗಳ್ ವಿದ್ಯೆಗಳ್‍ನಷ್ಟಗೈಸಿದ್ದನತ್ಯಂತ ದರ್ಪಿಷ್ಠನೀಅಜ್ಞ ದೈತ್ಯೇಂದ್ರನಾ ಯಜ್ಞದೋಳ್‍ಬದ್ಧ ಪಶ್ವಂತೆ ತಾನಿಂದು ನಿನ್ನಿಂದಲಾ ಮೃತ್ಯುಪಾಲಾದನೇ ನಮ್ಮ ಸದ್ವಿದ್ಯೆಗಳ ಮತ್ತೆ ನಮ್ಮಲ್ಲೆ ಬಂದಿಪ್ಪುದಯ್ಯಾ ನೃಹರ್ಯಾತ್ಮ ತು 380 ನಾಗರಾವೇಳೆಲೋsನಂತನೇ ನಮ್ಮಲಿದ್ದಾ ಮಹಾರತ್ನಗಳ್‍ಮಾನಿನೀ ರತ್ನಗಳ್ ತಾ ಬಲಾತ್ಕಾರದಿಂಗೊಂಡನೀ ಪಾಪಿ ದೈತ್ಯನ್ನ ವಕ್ಷಸ್ಕವಂಸೇದಿ ಈ ರತ್ನಗಳ್ ಮತ್ತೆ ನೀ ನಮ್ಮಗೇಸೇರುವಂತೇ ದಯಾಮಾಡಿದೀಯೈ ನಮಸ್ತೇ ನಮೋ ಎಂದರು.ಮನ್ವುಗಳ್‍ನಿಂತೆಲೋಧರ್ಮ ಸಂರಕ್ಷನೇ ನಾವು ನಿನ್ನಾಜ್ಞೆಯಿಂದೀ ಪ್ರಜಾನೀಕಕೇರ್ಪಾಟು ಮಾಡಿದ್ದ ಮರ್ಯಾದೆಗಳ್ ಸರ್ವವೀ ದೈತ್ಯ ತಾ ಕೆಡಿಸಿ ಕ390 ಲ್ಲೋಲವಂ ಮಾಡಿ ನಿನ್ನಿಂದಲೀ ಈಗ ಸಂಹಾರಿಸಲ್ಪಟ್ಟನೇ ಇನ್ನು ಮೇಲ್ ನಾವು ನಿಮ್ಮುಟ್ಟಕ್ತಿಗಳ್ ನಡೆಸುವೇವೆಮ್ಮಗಾಜ್ಞಾಪಿಸೋನಾವು ತ್ವದ್ದಾಸ್ಯವಂ ಬಯಸಿದೇವೆಂದರು.ಆ ಪ್ರಜೇಶ್ಯಾಳಿಗಳ್À ನಿಂತು ಕೇಳೋ ``ಪ್ರಜೇಶಾ ವಯಂ ತೇ ಪರೇಶಾಭಿಸೃಷ್ಟಾ ನ ಯೇನ ಪ್ರಜಾ ವೈ ಸೃಜಾಮೋ ನಿಷಿದ್ಧಾಃ ಸ ಯೇಷ ತ್ವಯಾ ಭಿನ್ನವÀಕ್ಷಾನು ಶೇತೇ ಜಗನ್ಮಂಗಲಂ ಸತ್ವಮೂರ್ತೇವತಾರಃ’’ ಪ್ರಭೋಎಂದರು. ಆಗ ಗಂಧರ್ವರೆಲ್ಲಾ ಎಲೋ 400 ಸ್ವಾಮಿಯೇ ನಾವು ನಿಮ್ಮ ಪ್ರಸನ್ನಾವತಾರೈಕ ಲೀಲಾ ಕಥಾಸೂಕ್ತಿಗಳ್ ನಾಟ್ಯ ಶೃಂಗಾರ ಚೇಷ್ಟಾ ಕಳಾದರ್ಶನಾದ್ಯಭಿನಯಾವ್ಯಕ್ತಿಗಳ್ ತಾನ ಗಾನಾನುಸಂಧಾನ ಸಮ್ಮೋಹಿನೀ ಶಕ್ತಿಗಳ್ ಕೂಡಿ ಆಶ್ರಾಂತವುಂನಿನ್ನ ಕೊಂಡಾಡುತಾ ಗಾಯಕಶ್ರೇಷ್ಠರಂತಿಪ್ಪೆವೇ ತನ್ನ ಸದ್ವೀರ್ಯ ತೇಜೋಬಲೋಜಸ್ಕದಿಂದಲ್ ಪ್ರಭೋ ನಮ್ಮ ಸಾಮಥ್ರ್ಯಗಳ್‍ತನ್ನಗಾಧೀನ ಮಾಡಿಟ್ಟುಕೊಂಡಿದ್ದನೀದೈತ್ಯನೀ ವೇಳೆ ನಿನ್ನಿಂದ ಪಂಚತ್ವವಂ 410 ಆ ಯಕ್ಷರೆಲ್ಲಾ ಎಲೋ- 420 ಧ್ಯಕ್ಷನೇ ತ್ವನ್ಮನೋಭಿಜ್ಞ ಕರ್ಮಂಗಳಿಂದಲ್ ಸದಾ ನಿನ್ನಗೇ ಭೃತ್ಯರಾಗಿಪ್ಪ ನಾವೆಲ್ಲರುಂ ದೈತ್ಯಗೇ ಪಾಲಕೀ ಹೊರ್ವರಂತಾದೆವೇ ನಮ್ಮ ಸಂತಾಪಗಳ್ ಬಲ್ಲ ನಿನ್ನಿಂದಲೀ ದೈತ್ಯನೀ ವೇಳೆ ಪಂಚತ್ವವಂಹೊಂದಿದಂ ನಾವು ಸಂತೋಷವಂ ಕಂಡೆವಯ್ಯಾ ನೃಪಂಚಾಸ್ಯನೇ ಪಂಚವಿಂಶಾಖ್ಯ ನೀ ನೆಂದರು. ಆಮೇಲೆ ಕಿಂಪೂರುಷಾನೀಕವುಂಬಂದೆಲೋ ಪುರುಷನೇ ನಾವು ಕಿಂಪೂರುಷರ್‍ನೀಂ ಮಹಾಪೂರುಷಂ ಈಶ್ವರಂ ನಿನ್ನ ಕೈ 430 ನಿತ್ಯ ಕೊಂಡಾಡುತಾಭೂರಿಯೂಟಂಗಳಂ ಉಣ್ಣುತಾಲಿದ್ದೆವೇತಾನಿವೆಲ್ಲಾ ಪರಿಗ್ರಾಹಿಸೀ ದೈತ್ಯ ನಿನ್ನಿಂದ ಪೆಟ್ಟಾಂತು ತಾ ಪೋದನೇ ದೈವದಿಂ440 ಕಿನ್ನರ ಪ್ರಾಣಿಗಳ್‍ಪೂರ್ವದಲ್ ನಿನ್ನ ದಾಸಾನುದಾಸರ್ಗಳಾಗಿಪ್ಪೆವೀ ದೈತ್ಯ ನಮ್ಮಿಂದ ತಾ ಬಿಟ್ಟಿಕಾರ್ಯಂಗಳೆಲ್ಲಾ ಸದಾ ಮಾಡಿಸೂವಂ ವiಹಾದು:ಖಗೋಣಿಸುವಂ ಇಂಥ ಪಾಪಿಷ್ಠ ದೈತ್ಯನ್ನ ಸಂಹಾರ ವಂ ಮಾಡಿದೀ ಇನ್ನು ನೀನಮ್ಮಗೆಲ್ಲಾ ಸಮುಲ್ಲಾಸಗಳ ಶ್ರೇಯಗಳಕೊಟ್ಟು ಸಂರಕ್ಷಿಸೋ ನಾರಹರ್ಯಕ್ಷನೇ ಎಂದರು. 450 ಅಚ್ಯುತದ್ವಾರಪಾಲಾಳುಗಳ್‍ನಿಂತೆಲೋ ಭೂಮನೇ ಕಂಡೆವೋ ಇಂದಿಗೇನಾರಹರ್ಯದ್ಭುತಾಕಾರವಂ ಲೋಕಕೆಲ್ಲಾ ಸುಖಾನಂದವಂ ನಮ್ಮಗಾಧಾರ ನೀನಲ್ಲದಿನ್ನಿಲ್ಲವೋ ಈಗ ವೈಕುಂಠದಲ್‍ನಿನ್ನ ದ್ವಾರಸ್ಥನಾಗಿಪ್ಪನಾ ವಿಪ್ರರಿಂದಲ್ ಮಹಾದೈತ್ಯಜನ್ಮಕ್ಕೆ ತಾ ಬಂದನೇ ಬಂದನಂತಿಂದಿಗೇ ವೈರಮಾರ್ಗಕ್ಕೆ ನೀನಿಂದು ಗೈದಂಥ ಈ ದೈತ್ಯಸಂಹಾರ ವ್ಯಾಪಾರವೆಮ್ಮಲ್ ಮಹಾನುಗ್ರಹಕ್ಕಾಗಿ ನೀ ಬಂದೆ ನಾವ್ 460 ಸ್ವಾಂತ ಸಂತೋಷ ಮಾಡೆಂದು ಬಿನ್ನಾಹಗಳ ಮಾಳ್ಪರು.ಆಮೇಲೆ ಆ ಬಾಲೆ ಸಾಕ್ಷಾಜ್ಜಗನ್ಮೋಹಿನೀ ಲೀಲೆಗಳ್ ಮಿಂಚುತಾ 470 ಪೂಂಚುತಾ ಬಂದು ಸಿಂಹಾಸನಸ್ಥಾನದಲ್‍ಉಗ್ರನಂತಿಪ್ಪನೃಸಿಂಹ ಮೂತ್ರ್ಯುಗ್ರವಂಕಂಡತಿವ್ಯಗ್ರಳಂತಾಗಿ ಆ ತಾಯಿ ಹಿಂದಕ್ಕೆ ತಾ ಬಂದಳಮ್ಮಮ್ಮ ಏಂ ಗುಮ್ಮನಂತಪ್ಪÀನೇ ಸ್ವಾಮಿ ಮುನ್ನಿಂತು ಆಶ್ಚರ್ಯವಂಈಸು ವಿಕ್ರಮ್ಯವಂ ಎಂದಿಗಾನೆಲ್ಲಿ ಕಂಡಿಲ್ಲವಲ್ಲಾ ಕಿವಿಲ್ಯಾದರುಂ ಕೇಳಲೇ ಇಲ್ಲವಲ್ಲಾ ಇದೇನೋ ವಿಚಿತ್ರಾಕÀೃತೀಯಂತೆ ತೋರೂವನೆಂದಂಜಿಕೇಗೊಂಡ ರೀತಿಂದ ತಾ ಹೆಜ್ಜೆ ಕಾಲ್ಗೆಜ್ಜೆಗಳ್ ಸಪ್ಪುಳಂ480 ಮಾಡದೇ ಮೆಲ್ಲನೇ ಪಾಶ್ರ್ವದಲ್ ನಿಂತಳುಆಮೇಲೆ ಪ್ರಹ್ಲಾದನಂ ಕಂಡು ಸಂಭಾಷಿಪಂಬ್ರಹ್ಮ ಬಾರೈ ಎಲೋ ವತ್ಸ ನೀನೀ ನೃಸಿಂಹಾತ್ಮನಲ್ ಮೆಲ್ಲನೇ ಸೇರಿ ನಿಮ್ಮಪ್ಪಗಾ ಗಿಂದು ನಮ್ಮಪ್ಪನಲ್ಲಿಪ್ಪ ತತ್ಕೋಪ ಸಂಕ್ಷೇಪ ಗೈಸೆನ್ನೆ ತದ್ವಾಣಿಗಳ ಕೇಳುತಾಮೆಲ್ಲನೇ ಪಿಲ್ಲೆ ಪ್ರಹ್ಲಾದನಾಹ್ಲಾದದಲ್‍ವೈಷ್ಣವಶ್ರೇಷ್ಠ ತಾನಾಗ ಬಂದಂ ಮಹಾಭಕ್ತಿಯಿಂದಲ್ ಮಹೀಮಂಡಲೀ ಮೇಲೆ ಸಾಷ್ಟಾಂಗ ಬಿದ್ದಂ ನಮೋ ಎಂದು ದಂಡಪ್ರಣಾ 490 ಮಂಗಳಂ ಮಾಡುವೋ ವೇಳೆ ತನ್ನಂಘ್ರಿಕಂಜಾತದಲ್ ಬಿದ್ದ ಬಾಲನ್ನ ಬಾಳಾ ಸುಶೀಲನ್ನ ಕಂದನ್ನ ದೃಷ್ಟಿಂದ ತಾ ಕಾಣುತಾಚಕ್ರ ಶಂಖಾಂಕಿತಾ ಶ್ರೀಲಸದ್ಬಾಹುಗಳ್‍ಚಾಚಿ ಭಕ್ತನ್ನ ತಾನೆತ್ತಿ ತನ್ಮಸ್ತಕಸ್ಥಾನದಲ್ ಪೋಕಲಾಗಿನ್ನು ಸಂಸ್ರಸ್ತ ಚೇತೋಭಯಧ್ವಸ್ಥವಂ ಸ್ವಸ್ತಿದಾನ ಕ್ರಿಯಾಭ್ಯಸ್ತವಂ ಶ್ರೀ ಸತೀ ಸ್ತಂಬಕವಿನ್ಯಸ್ತವಂಹಸ್ತವನ್ನಿತ್ತನವ್ಯಾಹತ ಸ್ಪರ್ಶದಿಂದಲ್ ವಿಧೂತಾ ಶುಭವ್ರಾತನಾಗೀಯಭಿ 500 ವ್ಯಕ್ತ ಲಕ್ಷ್ಮೀವಿಲಾಸಾತ್ಮ ಸಂದರ್ಶನೈಶ್ವರ್ಯವಂ ಕೂಡಿ ತತ್ಪಾದ ಪದ್ಮಂಗಳಂಚಿತ್ತದಿಂದಿತ್ತನಾನಂದದಿಂದಲ್ ಪ್ರಹೃಷ್ಯತ್ತನು ಕ್ಲಿನ್ನ ಚಿತ್ತಾಶ್ರುನೇತ್ರಾಬ್ಜನಾಗಿದ್ದು ಪ್ರಹ್ಲಾದನುಂ ನಾರಸಿಂಹಾತ್ಮನಲ್‍ನಿಂತು ಸಂಸ್ತೋತ್ರಗಾರಂಭಿಪಂ. ಶ್ರೀರಮಾದೇವಿ ತಾನಾಗ ಸಮ್ಮೋಹಿನೀ ಸಂಪುಗಳ್‍ಕೂಡಿ ಬಂದಾ ನೃಸಿಂಹಾಂಕದಲ್ ನಿಂತಳಾಬ್ರಹ್ಮನಾವೇಳೆಯಲ್ ನಾರಸಿಂಹಾತ್ಮನಲ್‍ಸೇರಿ ಸುಕ್ಷೀರ ನೀರಾಭಿಷೇಕಂಗಳಂ 510 ಚೀನಿ ಚೀನಾಂಬರಂಗಳ್ ಮಹಾನಘ್ರ್ಯ ರತ್ನಾವಳೀ ಭೂಷಣಂಗಳ್ ಲಸನ್ಮೌಕ್ತಿಕಾಹೀರ ಹಾರಂಗಳಂ ಗಂಧ ಕಸ್ತೂರಿಕಾಲೇಪಗಳ್ ಶ್ರೀ ತುಳಸ್ಯಾಪ್ತ ಶಾಮಂತಿಕಾ
--------------
ಶ್ರೀಪಾದರಾಜರು
ಶ್ರೀ ವರನೆ ಪರತರನೆ ಪ ಪಾವನಕರ ಕರುಣಾರಸ ಭರಿತನೆ ಅ.ಪ. ಅಘ ಪರಿಹಾರಕ ಹರಿಯೆ ಬಗೆ ಬಗೆ ಅಪರಾಧಗಳನು ಕ್ಷಮಿಸಿದೆ 1 ಸಕಲ ನಿಯಾಮಕ ವಿಭುವೆ ಭಕುತಪರಾಧ ಸಹಿಷ್ಣುವೆ ಪ್ರಭುವೆ 2 ಮೊರೆಯನು ಕೇಳೆಲೊ ದೊರೆಯೆ ಗರುವ ಕೊಡದೆ ಪೊರೆ ಕರಿಗಿರಿ ನಿಲಯನೆ 3
--------------
ವರಾವಾಣಿರಾಮರಾಯದಾಸರು
ಶ್ರೀ ವೆಂಕಟಾಚಲಪತಿ ನಿನ್ನ ಪಾದವೆ ಎನಗೆ ಗತಿ ಪ. ಧರ್ಮ ತತ್ವವನರಿಯೆ ಬಹು ದುಷ್ಕರ್ಮವ ನಾ ತೊರೆಯೆ ಭರ್ಮದಾಸೆ ಮರೆಯೆ ಆ ದೇವ ಶರ್ಮವ ನಿಜ ದೊರೆಯೆ 1 ಅಮಿತ ಪಾಪಿ ನಾನು ಸಂಸೃತಿ ದುರಿತ ನೀನು ನಮಿಪೆ ನಿನ್ನಡಿಗಳನು ಕಮಲಾ- ರ್ಕ ಮಿತ್ರನೆ ಸಲಹೆನ್ನು 2 ಸುತರ ಕುಚರಿತಗಳ ಮಾತಾ ಪಿತರುಗಳೆಣಿಸುವರೆ ಯೋನ: ಪಿತರು ಎಂಬ ಸಂಶ್ರುತಿ ಗೀತಾರ್ಥವ ವಿತತವ ಮಾಡುವರೆ 3 ಎನ್ನಪರಾಧಗಳನೆಣಿಸಲು ಷಣ್ಮುಖಗಳ ವಡದು ಬಿನ್ನಹ ಮಾಡುವೆ ನಿನ್ನ ದಾಸನೆಂ- ದೆನ್ನ ಪೊರೆಯೊ ದೊರೆಯೆ 4 ಪನ್ನಗಾಚಲವಾಸ ಬಹು ಕಾ- ರುಣ್ಯ ಸಾಗರೇಶ ಇನ್ನುಪೇಕ್ಷಿಸದೆ ಎನ್ನ ಪಾಲಿಸು ಪ್ರ- ಸನ್ನ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಸತ್ಯ ಬೋಧರು ನಿಂದಿಸೋರಿಗೆ ನಿಂದೆಯನು ಕೊಡುವಾ ಕೊನೆಕಾಮರಿಗೆ [?] ಕೊನೆಯನು ಕೊಡುವಾ ಘನ ಮಹಿಮಾ ನಮ್ಮ ಸತ್ಯಬೋಧಗುರು ಅನುದಿನ ನೆನೆಯಲಭೀಷ್ಟವ ಕೊಡುವಾ ಪ ರಾಮದೇವಾರ್ಚನೆ ನೇಮದಿಂದಲಿ ಗೈದು ಕಾಮಿತ ಫಲಪ್ರದ ಬಲವೈಯ್ದಿದಾ ಶೀಮಿಶೀಮಿಯೊಳು ಕಾಮನೈಯ್ಯನ ಜನ ಕಾಮಪ್ರದಾನೆಂಬುದೆ ಸಾರಿದಾ ಧೀಮಾನ್ ಶ್ರೀಮಾನ್ ಕಾಮಿತೇಷ್ಟದಾ ಕಾಮನೆಂದು ತಾ ಪೊಗಳಿಸಿದಾ ವಾಮದೆ ವಗುರು ರಾಮಭಕುತನೆಂದು ಭೂಮಿಯೊಳ್ಡಂಗುರ ಹೊಡಿಸಿದಾ 1 ತತ್ವ ತಿಳಿದು ನೋಡಿ ಸತ್ಯ ಸತ್ಯ ಹರಿ ಮತ್ತುವನಿಗೆ ಭೃತ್ಯವಾದ ಸೂನು ಉತ್ತಮರೆಲ್ಲರು ಸತ್ಸಮಯವಂತೆ ಸತ್ಯ ಪ್ರಮಾಣವ ಪೇಳಿದನು ¸ತ್ಯಬೋಧ ರವಿ ಮಿಥ್ಯಾಗತ್ತಲೆಗೆ ತಾ ಕತ್ತರಿಯೆಂದರುಹಿದನು ¸ತ್ಯ ಬೋಧನೆಯನು ಸತ್ವರಿಂಗೆ ಮಾಡಿ ಮತ್ತವರುದ್ಧಾರ ಮಾಡಿದನು 2 ವರಸದ್ಗುಣಗಣ ನಿಲಯನೆನಿಸಿ ತಾ ವರ ಶಿಷ್ಟಾನ್ವಿತ ಮೇಣ್ ವಂದ್ಯನಾದ ಶಿರಿವರ ಪಾದಾನುಗ್ರಹ ಪಡೆದು ತಾ ಹರಿಜನಾರ್ತಿತಯ ಛೇದಿಸಿದಾ ದುರಿತ ತಮರಾಶಿಗಗ್ನಿಯೆನಿಸಿದಾ ಶರಣರ ಸಂಘ ಬೂದಿಗೈದಾ ನರಸಿಂಹವಿಠಲನ ಕರಣವ ಪಡೆದು ತಾ ಗುರುವರ ವರಪ್ರದನೆನಿಸಿದಾ 3
--------------
ನರಸಿಂಹವಿಠಲರು
ಶ್ರೀ ಸತ್ಯಬೋಧರು ನಂಬಿದೆ ನಿನ್ನ ಶ್ರೀ ಗುರುಪೂರ್ಣ ಬೆಂಬಿಡದಲೆ ನೀ ಕಾಯಬೇಕೆನ್ನ ಪ ಸತ್ಯಪ್ರಿಯರತಿ ಪ್ರೀತಕುಮಾರ ಸತ್ಯಸನಾತನಿ ಸತ್ಯಬೋಧಗುರು 1 ಭೃತ್ಯ ಮನೋರಥ ಅತ್ಯಂತ್ಹರುಷದಿ ಇತ್ತ ಸನ್ಮತ ಯತಿ 2 ಪಾದ ಮಧುಪ ನಿತ್ಯ ಸಾಧುವರ್ಯ ಕೃಪಾ ಸಾಗರ ಸತತ 3
--------------
ಶ್ರೀದವಿಠಲರು