ಒಟ್ಟು 1347 ಕಡೆಗಳಲ್ಲಿ , 97 ದಾಸರು , 1063 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕರುಣಿಸಿಯಭಯವನು ಕೊಟ್ಟು ಕಾಯುವೆನಿರತಂ ಕರಕಮಲವದಯಮಾಡೈ ಅರಿಸಿನ ಹಚ್ಚುವೆನು ಮುದದಿ ಅರಸ ನಿನಗೆ ನಾಂ 1 ಪಂಕಜರಿಪು ನಿಭವಕ್ತ್ರನೆ ಪಂಕಜ ಸೂರ್ಯನೆ ಕುಂಕುಮ ಹಚ್ಚುವೆ ನಿನಗೆ ಕೊಡು ನಡು ಪಣೆಯಂ 2 ಭವ ತ್ಕಂಧರವ ನೀಡು ಪರಿಮಳ ಗಂಧವ ಹಚ್ಚುವೆನು ನಾನು ಕಮಲದಳಾಕ್ಷ 3 ನಿರತವು ಮನ್ಮಾನಸ ಪಂ ಕರುಹದಿ ಸೇವಿಸುವೆ ನಿನ್ನ ಕರುಣಾನಿಧಿಯೆ ಸರವನು ಕಂಧರದಿ ಧರಿಸುವೆ ಜಗನ್ನಾಥಾ 4 ನಾಮಾಡಿದ ತಪ್ಪುಗಳಂ ನೀ ಮನದಲಿ ತರದೆ ಕ್ಷಮಿಸುವದು ಪ್ರಾಣೇಶಾ ಪ್ರೇಮದಿ ವೀಳ್ಯವ ಶ್ರೀಗುರು ರಾಮವಿಠಲ ಕೊಡುವೆ ನಿನಗೆ ರಮ್ಯಚರಿತ್ರ 5
--------------
ಗುರುರಾಮವಿಠಲ
ಕರುಣಿಸು ಜಯೇಶವಿಠಲ ವರ ಅಂಕಿತವಿದನು ಇತ್ತೆ ಪ ತರಳ ನಿನ್ನವನೆಂದು ಗುರುವಾತ ಸ್ಥಿತನಾಗಿ ಭರದಿ ಪಾಲಿಸಿದೆ ಇವನ ಹರಿ ನೀನಿದ್ದೆಡೆಗೆ ಕರೆಸಿ ಅ.ಪ ಇರಿಸು ವರ್ಣಾಶ್ರಮ ವರಧರ್ಮ ಕರ್ಮಗಳಲಿ ಮರೆಸಿ ಕಾಮ್ಯಕರ್ಮಗಳೆಲ್ಲವನು ಸ್ಮರಿಸದಂತೆ ಮಾಡು ಪರಸತಿಯರೊಲುಮೆ ಮರೆಯದಂತಿರಲಿ ಪರತತ್ವವನು 1 ಸತಿ ಸುತ ಪರಿವಾರದಿ ಕೃತಕೃತ್ಯನಾಗಿ ಮಾಡಿಸಿ ಪತಿತರ ಸಹವಾಸ ಹಿತವೆಂದರುಪದೆ ಸ- ದ್ಗತಿಯೀವ ಮಾರ್ಗ ತಿಳಿಸಿ 2 ನಿರುತ ತತ್ವ ನಿಶ್ಚಯದಲ್ಲಿ ಜ್ಞಾನ ಗುರುಹಿರಿಯರಲ್ಲಿ ಭಕ್ತಿ ದುರ್ವಿಷಯದಲಿ ವಿರಕ್ತಿನಿತ್ತು ವರ ವಿಜಯ ರಾಮಚಂದ್ರವಿಠಲ ಸುರರೊಡೆಯ ಬರೆದು ನಾಮಾಮೃತವ ನುಡಿಸಿ 3 (ಜಯೇಶವಿಠಲರಿಗೆ ಅಂಕಿತ ನೀಡಿದ ಸಂದರ್ಭ) ದುರಿತ ವಿ ದೂರ ಕರುಣಾಕರ ಸುಂದರ ಗಂಭೀರ 1 ದೀನೋದ್ಧಾರ ವಿರ್ಪಿವಿಹಾರ ದಾನವಹರ ಸುರಕಾವ್ಯ ವಿಚಾರ 2 ಸೀತಾನಾಥ ವಾನರಯೂಥ ವಾರಾತ್ಮಜ ನುತ ಶ್ರೀ ಲಕ್ಷ್ಮೀಕಾಂತ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸೋ ಗುರು ಮಾರುತಿ ಶ್ರೀಧರ ಪರನೆಂದು ಬೋಧಿಸುತಲಿ ಪರ ವಾದಿಯ ಜಯಸಿದ ಮೋದತೀರ್ಥಮುನಿ 1 ಅಬಲೆಯ ಪ್ರಾರ್ಥನೆ ಲಾಲಿಸಿ ನಿಶೆಯೊಳು ಖೂಳನುದರವನ್ನು ಸೀಳಿ ಮೆರೆದ ಘನ 2 ಸ್ಮರಿಸುವ ಜನರ ಕೋರಿಕೆ ನೀಡಲು ಕೊರವಿ ಪುರದೊಳು ನೆಲೆ ನಿಂತ ಧೀರ 3 ಸೋಮಧರಾರ್ಚಿತ ಶಾಮಸುಂದರನ ನಾಮಾಮೃತವನು ಪ್ರೇಮದಿಂದ ಕೊಡು 4
--------------
ಶಾಮಸುಂದರ ವಿಠಲ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರುಣೆ ಬಾರದೇಕೊ ಕಂಜಜನಯ್ಯಾ ಪ ಶರಣು ಮಾಡುವೆ ತರುಣೀವರದನೇ ಅ.ಪ ಕರವನೆ ನೀಡೆಲೊ ರಂಗಾ ನಿನಗಿದು ತರವೆ ನೋಡೆಲೊ 1 ದಾಸವಾರ್ಚಿತಾ ಮಮದೇಶ್ವಿಕ್ಕ ತುಲಶೀರಾಮಾ ದಾಸನಾದೆನೊ ಪೋಷಿಸೊ ಪರದೇವಾ ದಾಸನಾದೆನೊ 2
--------------
ಚನ್ನಪಟ್ಟಣದ ಅಹೋಬಲದಾಸರು
ಕಷ್ಟಗಳ ಪರಿಹರಿಸೊ ಶ್ರೇಷ್ಠ ಮಾರುತಿಯೇ ಭ್ರಷ್ಟನಾದೆನು ಭಂಡ ಸಂಸಾರದಲ್ಲೀ ಪ ಸ್ವಾರ್ಥವೆನ್ನುವ ದುಃಖ ಸಾಗರದಿ ಮುಳುಗಿದ್ದು ಸ್ವಾರ್ಥಕೋಸುಗ ಹೀನ ಕೃತ್ಯಗಳ ಗÉೈದೂ ಅರ್ಥವನು ಗಳಿಸುತ್ತ ತುಂಬಿದೆನು ಈ ವಡಲ ವ್ಯರ್ಥವಾಯಿತು ಜನ್ಮ ಸಾರ್ಥವನು ಮಾಡೋ1 ನಿರುತದೀ ಧರ್ಮ ಕರ್ಮಗಳ ತೊಲಗಿದೆನು ಭವದಿ ಸುಖವೆಲ್ಲವೂ ಮಾಯವಾಯಿತು ದೇವಾ ಶರಣರಿಗೆ ತಂದೆ ನೀನೆಂದು ಮೊರೆಹೊಕ್ಕೇ 2 ಪರಹಿತವ ಬಯಸದಲೆ ಕೇಡು ಬಗೆದೆನು ನಿತ್ಯ ಪರಸತಿಯಪೇಕ್ಷಿಯಲಿ ನಿರುತನಾಗಿದ್ದೇ ಅರಿತೆನೀಗಲೆ ನಾನು ಸರ್ವ ನಶ್ವರವೆಂದು ನರಹರಿಯ ನೀರೆರೆಯೊ ಈ ಬಾಡು ಶಶಿಗೇ 3 ಭಕ್ತವತ್ಸಲನೆಂಬ ಬಿರುದ ಪೊತ್ತಿಹೆ ನೀನು ಭಕ್ತಿಯಲಿ ನಾ ನಿಂನ ಸೇವೆ ಮಾಡುವೆನು ಭಕ್ತದಾಯಕಯಂನ ಹಸಿವೆ ತೃಷೆಗಳ ನೀಗಿ ಮುಕ್ತಿಯನು ನೀಡೆನಗೆ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ಕಾಕು ನೀಮೀನ ಮೇಷಂಗಳನೆಣಿಸದೆ ನೂಕು 1ಸಾಕು ಮಂದನಾಗಬೇಡ ನಿನಗೆಬೇಕಾದ ಸುಖವಿದೆ ನಿನ್ನೊಳು ನೋಡಶೋಕ ಮೋಹಗಳನೀಡಾಡ ನಿನ್ನನೀ ಕಂಡು ನಿಜ ಸುಧೆಯೊಳಗೋಲಾಡ2ನಿನ್ನೊಳು ನಿಜ ಸುಖವುಂಟು ನೀನನ್ಯವನಳಿದು ನೋಡಲು ಕೈಗಂಟು ಭಿನ್ನ ಬುದ್ಧಿಯನೆಲ್ಲದಾಂಟುಸನ್ನುತಾನಂದಾಮೃತವನೊಲಿದೀಂಟು 3ಗುರುವಿನ ಕೃಪೆುಲ್ಲದಿಲ್ಲಾ ಮುಕ್ತಿಕರೆದರೆ ಬರುವರೆ ಕಾಮಿನಿಯಲ್ಲಪರಮ ಧೈರ್ಯವ ಮಾಡುವನಲ್ಲ ನಿನ್ನಮರೆಯದೆ ನೋಡು ನಾನೆಂದಿದನೆಲ್ಲಾ 4ಈ ಪಾಳು ಕರ್ಮದಲೇನು ಈಗನಾ ಪೇಳಿದೆ ಕಂಡುದ ಮಾಡು ಮಾಣುಕೋಪವ ಬಿಡು ಸುಖಿ ನೀನು ಸದ್ಯಗೋಪಾಲಾರ್ಯರ ಕಂಡೆ ಇನ್ನೇನೂ 5
--------------
ಗೋಪಾಲಾರ್ಯರು
ಕಾಡದೆ ಬೇಡದೆ ಕಂಗೆಡದೆ ಕೋ ಮನವೆ ನಿಜ ಸುಭಿಕ್ಷ ಗುರು ಸಂರಕ್ಷ ಧ್ರುವ ಅಳುಕದೆ ಬಳುಕದೆ ತುಳುಕದೆ ನಿಂದು ತಿಳಕೊ ನಿಜಸುಭಿಕ್ಷೆ ಕೊಳಕ ಹುಳಕ ಮೊಳಕನೆಂದು ಮಾಡದಿರುಪೇಕ್ಷ ನಾಳೆ ನಾಡದಿಂದ್ಯಾಗೆಂದು ಕಲ್ಪಿಸಿಕೊಬ್ಯಾಡಪೇಕ್ಷ 1 ಲಜ್ಜೆ ಅಳಿದು ಗುರು ಶರಣವ ಹೊಕ್ಕು ಸರಕ್ಕನೆ ಕೋ ಸುಭಿಕ್ಷೆ ಹೆಜ್ಜೆಜ್ಜಿಗೆ ಸುರಿಮಳೆಗರೆವುತಲದೆ ಗುರುಕರುಣದಕಟಾಕ್ಷ ಫಜ್ಜಿಗೆ ಬಂದುವರಿತ ಮ್ಯಾಲೆ ಕಂಜನಾಭನೆ ಸುಪಕ್ಷ 2 ಬೇಡಿಸಿಕೊಳ್ಳದೆ ನೀಡುತಲಾನೆ ಭಾಸ್ಕರ ಗುರು ಸಮರ್ಥ ನೀಡಿ ನಿಜನಿಧಾನವ ಕೊಟ್ಟು ಮಾಡುತಲಾನೆ ಹಿತಾರ್ಥ ಬಡವರಾಧಾರೆನ್ನೊಡೆಯನೆ ಜಗತ್ರಯಕ್ಕೊಬ್ಬನೆ ಕರ್ತ ಮೂಢ ಮಹಿಪತಿಗನುದಿನ ಬಿಡದೆ ನೀಡುತಾನೆ ಸಕಲಾರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣಲಿಲ್ಲವೆಂದೆನಬೇಡಿ ಪ ಜಾಣನವನು ನಿಮ್ಮ ಕೋಣೆಯೊಳಗಿರುವಾ ಗು ಡಾಣವ ತುಡುಕುವ ನೆರೆನೋಡಿ ಅ.ಪ ಸುಲಭನು ನಿಮಗವನೊಲಿವನು ನಿಮ್ಮೆಡೆ ನಿಲುವನು ನಲಿವನು ಕೈನೀಡೀ ಸಲಿಸಿರಿ ಬೆಣ್ಣೆಯ ಮೆಲುವನು ಕಿಲಕಿಲ ನುಲಿವನು ಚಲಿಸಲು ಬಿಡಬೇಡಿ 1 ಅಳುಕುತ ಬಳುಕತ ಬಳಲುತ ಸುಳಿಯುತೆ ಘಳಿಲನೆ ಪೋಪನೆಚ್ಚರವಿರಲಿ ಎಳನಗೆಯಿಂದ ಪಾಲೆರೆಯಿರಿ ಮನ ದೊಳಚ್ಚಳಿಯದ ಮೋದವು ನೆಲೆಸಿರಲಿ 2 ಮನವೆಂಬುವುದೇ ವನರುಹವಮ್ಮಾ ಕನಸುನೆನಸಿನೊಳಾ ವನಜವನರ್ಪಿಸೆ ನೀನೆಂಬುದನೇ ಮರೆಯುವಿರಮ್ಮಾ [ತನುಮನ ಅವನಡಿ ಸೇರುವುದಮ್ಮಾ] 3 ಪಡಸಾಲೆಯೊಳಿವ ನಿಲ್ಲುವನಲ್ಲಾ ಅಡಿಗೆಯ ಕೋಣೆಯ ಬಿಡುವನಲ್ಲ ಒಡೆಯ ಶ್ರೀಮಾಂಗಿರಿಪತಿಯನು ನೋಡದ ಮಡದಿಯಿಲ್ಲವೆಂಬುದು ಸಟೆಯಲ್ಲ 4 ನೀವಿರುವಾಯೆಡೆ ಪಾಲ್ಗಡಲಮ್ಮಾ ನೀವಡಿಯಿಡುವುದೇ ಕಡೆಗೋಲಮ್ಮಾ ದಧಿ ನವನೀತವು ನೀವಿರೆ ಮಾಂಗಿರಿರಂಗನುಂಟಮ್ಮಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಪಾಡಬೇಕು ಮಹಾಲಿಂಗ ಸುರೋತ್ತುಂಗ ಶ್ರೀಪತಿಚರಣಾರವಿಂದಸದ್ಭಂಗ ಪ. ತಾಪತ್ರಯಾಗ್ನಿಯೊಳ್ಬೆಂದೆ ಬಲು ನೊಂದೆ ಆಪತ್ತುಗಳ ಪರಿಹರಿಸೆನ್ನ ತಂದೆ 1 ಅಜ್ಞಾನವನು ದೂರಮಾಡು ದಯದಿ ನೋಡು ಸುಜ್ಞಾನ ಹರಿಭಕ್ತಿ ಶ್ರದ್ಧೆಯ ನೀಡು 2 ಪಾವಂಜೆ ಕ್ಷೇತ್ರಾಭರಣ ದೀನೋದ್ಧರಣ ದೇವ ಲಕ್ಷ್ಮೀನಾರಾಯಣಪದಶರಣ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾಪಾಡಬೇಕು ಮಹಾಲಿಂಗ ಸುರೋತ್ತುಂಗ ಶ್ರೀಪತಿಚರಣಾರವಿಂದಸದ್ಭಂಗ ಪ. ತಾಪತ್ರಯಾಗ್ನಿಯೊಳ್ಬೆಂದೆ ಬಲು ನೊಂದೆ ಆಪತ್ತುಗಳ ಪರಿಹರಿಸೆನ್ನ ತಂದೆ 1 ಅಜ್ಞಾನವನು ದೂರಮಾಡು ದಯದಿ ನೋಡು ಸುಜ್ಞಾನ ಹರಿಭಕ್ತಿ ಶ್ರದ್ಧೆಯ ನೀಡು 2 ಪಾವಂಜೆ ಕ್ಷೇತ್ರಾಭರಣ ದೀನೋದ್ಧರಣ ದೇವ ಲಕ್ಷ್ಮೀನಾರಾಯಣಪದಶರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಮದೇವ ನೀನೆಂದು ನಂಬಿದೆ ಆವಾವುದೆನಗಾಗಬೇಕೊ ಕಾಣೆ ಪ ಈವುದೆಲ್ಲವಿತ್ತು ಪದವಿ ಪಾಲಿಸಯ್ಯ ಅ.ಪ ಶರಣೆನ್ನುವರ ದುರಿತಹರನೆ ಹರಿಯೆ ಹಸ್ತ ನೀಡಿ ಕಾಪಾಡುವೈ ಪರಮ ಕೃಪಾಳುವು ನೀನಲ್ಲವೆ ನರರ ಜಾಜಿಪಟ್ಟಣವಾಸ ಶ್ರೀನಿವಾಸ 1
--------------
ಶಾಮಶರ್ಮರು
ಕಾಮಧೇನುಗರವುತಲ್ಯದೆ ನಮ್ಮ ಮನಿಯಲಿ ನೋಡಿ ಬ್ರಹ್ಮಾನಂದದೋರುತದೆ ಪರಮಾಮೃತ ಸೂರ್ಯಾಡಿಧ್ರುವ ಭೋರ್ಗರೆವುತಲ್ಯದೆ ಇರುಳ ಹಗಲಿ ತಾ ಕರಕೊಳ್ಳಲಿ ವಶವಲ್ಲ ಅಮೃತ ದುರುಳರಿಗಿದು ಅರಿಕಿಲ್ಲ ಸುರಿ ಸುರಿದು ಸಾರಾಯ ಚಪ್ಪರಿದನುಭವ ನಿಜಸುಖ ತಾ ಬಲ್ಲ ಸುರಮುನಿಜನರಾನಂದದಿ ಸೇವಿಸಿ ಅರಹುತರಾದರು ಎಲ್ಲ 1 ಕಾಸಿ ಕಡಿಯದೇ ಭಾಸುತಲ್ಯದೆ ಲೇಸಾಗಿ ನವನೀತ ಮೋಸಹೋಗದನುಸರಿಸಿಕೊಂಬುದು ವಸುಧಿಯೊಳಗೆ ತ್ವರಿತ ಋಷಿಮುನಿಗಳು ಸ್ವಹಿತ ತುಸುಕೊರತಿಲ್ಲದೆ ಪಸರಿಸಿ ತುಂಬೆದ ವಿಶ್ವದೊಳಗೆ ಸನ್ಮತ2 ಅನುದಿನ ಮಹಿಪತಿಗಿದು ನಿಜ ನೋಡಿ ಮಹಾಮಹಿಮೆಯ ಸವಿಗೂಡಿ ಶಿರದಲಭಯವ ನೀಡಿ ಇಹಪರದೊಳು ಗುರುನಾಮವೆ ಕಾಮಧೇನುವಿದೆ ಕೊಂಡಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು