ಒಟ್ಟು 3136 ಕಡೆಗಳಲ್ಲಿ , 126 ದಾಸರು , 2157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನಮ್ಮ ಮನಿಲಿ ಬ್ರಹ್ಮಾನಂದ ಬಂದು ಭಾವ ಪೂರಿಸಿದ ಮುಕುಂದ ಧ್ರುವ ಎನ್ನಮನಕೆ ಮಾಡಿದ ಮನೋಹರ ಚೆನ್ನಾಗೊಲಿದು ದೋರಿದ ಸಹಕಾರ ಮನ್ನಿಸೆನಗೆ ಬೀರಿದ ನಿಜಸಾರ ಇನ್ನೊಬ್ಬರಿಗ್ಹೇಳುದಲ್ಲೀ ವಿಚಾರ 1 ದಯದಿಂದ ಪಿಡಿದು ಎನ್ನ ಕೈಯ ಶ್ರೇಯ ಸುಖ ನೀಡಿದ ಪ್ರಾಣಪ್ರಿಯ ತ್ರಯ ಗುಣಾತೀತದ ಸುಖಾಶ್ರಯ ತ್ರೈಲೋಕದೊಳೆನಗೆ ವಿಜಯ 2 ಕಣ್ಣು ಪಾರಣಗೈಸಿದೆನ್ನ ನೋಡಿ ಎನ್ನೊಳನುಭವಾಮೃತಸಾರ ನೀಡಿ ಚಿಣ್ಣಮಹಿಪತಿ ಕೈವಶಗೂಡಿ ಧನ್ಯಧನ್ಯಗೈಸಿದ ದಯಮಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮ ಮನಿಲ್ಯಾನಂದೋಬ್ರಹ್ಮಾ ತಂದೆ ಸದ್ಗುರು ದಯ ಏನೆಂದ್ಹೇಳಲಿ ಸಂಭ್ರಮ ಧ್ರುವ ಹರುಷ ತುಂಬೇದ ಬಹಳ ತೆರವಿಲ್ಲೆಳ್ಳಷ್ಟು ಸ್ಥಳ ಸಿರಿಯನಾಳ್ವ ದಯಾಳ ಹರಿ ಬಂದಾನೆ ಕೃಪಾಳ 1 ಸೂಸುತಲಿ ಸಂತೋಷ ಪಸರಿಸ್ಯದ ಉಲ್ಹಾಸ ಭಾಸುತಾನೆ ಸರ್ವೇಶ ಭಾಸ್ಕರ ಕೋಟಿ ಪ್ರಕಾಶ 2 ಪ್ರಾಣಕಾಗೇದ ಪ್ರಸ್ತ ಮನಕಾಗೇದ ತಾಂ ಸ್ವಸ್ತ ಸಅನುಭವದ ಸುವಸ್ತ ಖೂನಾಗಿ ಬಂದು ಸಾಭ್ಯಸ್ತ 3 ಹೇಳಲಿಕ್ಕಳವಲ್ಲ ಹೊಳವ ಸುಖದ ಸೊಲ್ಲ ತಿಳಿದ ಮಹಿಮೆ ಬಲ್ಲ ಸುಳವು ಸೂಕ್ಷ್ಮವೆಲ್ಲ 4 ಕರ್ತುತಾಂ ದಯಮಾಡಿ ಅರ್ತು ಬಂದೊಡಮೂಡಿಆರ್ಥಿಯಿಂದೆವೆ ನೋಡಿ ಬೆರ್ತು ಮಹಿಪತಿಕೂಡಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಬಲು ಸೂಕ್ಷ್ಮ ಸದ್ಗತಿ ಸುಖಸಾಧನ ಧ್ರುವ ಬಯಲಿಗೆ ನಿರ್ಬಯಲಾಗೇದ ಗುಹ್ಯಗೂಢಕೆ ಮೀರ್ಯದ ಸೋಹ್ಯಸೊನ್ನಿದತ್ತಲದೆ ಕೈಯೊಳು ಸಿಲುಕದ 1 ಧ್ಯಾನಮೋನಕ ದೂರ ಏನೆಂದ್ಹೇಳಲಿ ವಿಚಾರ ಅನಂತಗುಣ ಅಪಾರ ‌ಘನ ಪರಾತ್ಪರ 2 ಕಣ್ಣಿನೊಳದೆ ಖೂನ ಧನ್ಯಗೈಸುವ ನಿಧಾನ ಚಿಣ್ಣ ಮಹಿಪತಿಗೆ ಪ್ರಾಣ ಆನಂದ ಘನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಶ್ರೀ ಗುರುಪಾದಪದ್ಮ ನೋಡುವ ಎಂದೆಂದು ಬಿಡದೆ ಭಾವಭಕ್ತಿ ಮಾಡುವ ಧ್ರುವ ಮನವೆಂಬ ಮನಮಂಟಪವನಾಡುವ ನೆನವು ನವರತ್ನದ ಸಿಂಹಾಸನಿಡುವ ಙÁ್ಞನಧ್ಯಾನದಡಬಲದಿ ಪಿಡಿವ ಅನುವಾಗಿ ಅನಿಮಿಷದಲಿ ನೋಡುವ 1 ತನುವೆಂಬ ತಾರತಮ್ಯಭಾವ ಮಾಡುವ ಅನುಭದಿಂದನುಪಮನ ನೋಡುವ ಆನಂದವೆಂಬ ಅಭಿಷೇಕವ ಮಾಡುವ ಮನೋ ಅಭೀಷ್ಟೆಯ ಸುವಸ್ತ್ರನೀಡುವ 2 ಬುದ್ಧಿ ಭಾವನೆಯ ಗಂಧಾಕ್ಷತಿಡುವ ಶುದ್ಧ ಸುವಾಸನೆ ಪರಿಮಳ ಮಾಡುವ ಶಬ್ದ ಸುವಾಕ್ಯವೇ ಪುಷ್ಪವ ನೀಡುವ ಸಿದ್ಧಾಂತವೆಂಬುದೇ ಸುಸೇವೆ ಮಾಡುವ 3 ಪ್ರಾಣ ಪಂಚವೇ ಪಾದಪೂಜೆಯ ಮಾಡುವ ಪುಣ್ಯಪೂರ್ವಾರ್ಜಿತ ಫಲಗಳಿಡುವ ಅನೇಕವಾದ ಪರಿಪೂಜೆ ಮಾಡುವ ಧನ್ಯ ಧನ್ಯವಾಗುವ ಮುಕ್ತಿಬೇಡುವ 4 ನಿರ್ವಿಕಲ್ಪ ನಿಜಮೂರುತಿ ನೋಡುವ ಪೂರ್ವಕರ್ಮವೆಂಬ ಧೂಪಾರ್ತಿ ಮಾಡುವ ಅರುವೆಂಬ ದೀಪದಿ ಏಕಾರ್ತಿ ಮಾಡುವ ಸರ್ವಕಾಲದಲಿ ಸಂತೋಷಬಡುವ 5 ಜೀವ ಭಾವನೆಂಬ ನೈವೇದ್ಯವಿಡುವ ವಿವೇಕುದಕ ಸಮರ್ಪಣೆ ಮಾಡುವ ತ್ರಿವಿಧಗುಣವೆಂಬ ತಾಂಬೋಲನಿಡುವ ಅವಾವಪರಿಯು ಪ್ರಾರ್ಥನೆ ಮಾಡುವ 6 ಪಂಚತತ್ವದ ಪಂಚಾರತಿ ಮಾಡುವ ಚಂಚಲವಿಲ್ಲದೆ ಚಿದ್ಛನ ನೋಡುವ ಪಂಚಭೂತವೆಂಬಾರತಿ ಮಾಡುವ ಸಂಚಿತಕ್ರಿಯ ಮಂತ್ರಪುಷ್ಪನೀಡುವ 7 ದಿವ್ಯ ಯೋಗ ಭೋಗ ಚೌರ ಢಾಳಿಸುವ ಅವಲೋಕನೆಯ ಬೀಸಣಿಕೆ ಬೀಸುವ ಪಾದ ನಮಿಸುವ ಭವಬಂಧನದ ಮೂಲ ಛೆÉೀದಿಸುವ 8 ನಮ್ರತವೆಂಬ ಸಮಸ್ಕಾರ ಮಾಡುವ ಸಂಭ್ರಮದಿಂದ ಸ್ವಸ್ವರೂಪ ನೋಡುವ ಪ್ರೇಮಪ್ರೀತೆಂಬ ಪ್ರದಕ್ಷಿಣಿ ಮಾಡುವ ಜನ್ಮ ಮರಣದ ಹಾದಿಯು ಬಿಡುವ 9 ನಿರ್ಗುಣದಿಂದ ಸ್ವರೂಪ ನೋಡುವ ನಿಗಮಗೋಚರನೆಂದು ಸ್ತುತಿ ಪಾಡುವ ಅಗಣಿತಗುಣ ಸುಕೀರ್ತಿ ಸೂರ್ಯಾಡುವ ಜಗದೊಳಾನಂದದಿಂದ ನಲಿದಾಡುವ 10 ಅನಾಹತವೆಂಬ ಧ್ವನಿವಾದ್ಯ ಮಾಡುವ ಅನಂದೋ ಬ್ರಹ್ಮದೊಳು ಮುಳಗ್ಯಾಡುವ ಭಾನುಕೋಟಿತೇಜ ಪ್ರಕಾಶ ನೋಡುವ ದೀನಮಹಿಪತಿ ಸ್ವಾಮ್ಯೆಂದು ಕೊಂಡಾಡುವ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸಲಹಿದೇ ಇಂದು ಸಲಹಿದೇ ಆರ್ತರ ಬಂಧು ಸಿಂಧು ಪ ಅಂದು ಪ್ರಲ್ಹಾದ ನೆಂಬುಧಿಯೊಳಗ ಬಂದು ಉಳುಹಿದ ತರದಿಂದಲೆನಗೆ 1 ಹಿಂದ ಪ್ರಳಯ ಜಲದಿ ಸತ್ಯ ವ್ರತನಾ ಪರಿ ಸಿರಿರಮಣಾ2 ಕುದಿ ವೆಣ್ಣೆ ಗೊಪ್ಪರಿಗೆಯೋಳಿಹ ಸುಧನ್ವನಾ ಪ್ರಾಣನುಳಹಿದ ಪರಿಯಾ3 ತಂದೆ ಮಹಿಪತಿ ಪ್ರಭು ದತ್ತಾತ್ರೆಯಾ ಬಂದದುರಿತದಿ ಬಿಡಿಸುತ ಕಾವಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಇಂದು ಸುದಿವಸ ನೋಡಿ ಕಂಡೆವು ಕಣ್ಣಾರೆ ಚಂದವಾಗಿ ಗುರು ಪೂರ್ಣಮಾಡಿದ ಮನೋಹರ ಧ್ರುವ ಕೇಳದಾ ಕೇಳಿದೆವು ಫೇಳಿಸುವದೆನ್ನೊಳಗೆ ಹೇಳೇನೆಂದರೆ ಬಾರದು ಸುಳವು ಇನ್ನೊಬ್ಬರಿಗೆ ತಾಳಮೃದಂಗ ಭೇರಿ ಭೋರಿಡುತ ಒಳ ಹೊರಗೆ ತಿಳಿದೇನಂದರದೇ ನೋಡಿ ಉಲುವು ತಾ ತನ್ನೊಳಗೆ 1 ಕಾಣದ ಕಂಡೆವು ಖೂನ ತಾ ಕಣ್ಣಿನ ಕೊನೆಯೊಳಗೆ ಪ್ರಾಣ ಪಾವನ್ನವಾಯಿತು ಪುಣ್ಯ ಪ್ರಭೆಯೊಳಗೆ ಭಾನುಕೋಟಿತೇಜ ಧನ್ಯಗೈಸಿದ ಎನಗೆ ಸ್ವಾನುಭವದ ಸುಖ ಎದುರಿಟ್ಟಿತು ಜಗದೊಳಗೆ 2 ನುಡಿಯು ಕೇಳಿದಂಥ ನುಡಿಗೇಳಿದೆವಿಂದು ಕಡಿಗಾಯಿತು ನೋಡಿ ಹುಟ್ಟಿಬಾಯ ಜನ್ಮಸಂದು ವಿಡಿದು ಗುರುಪಾದ ಜನ್ಮಸಾರ್ಥಕಾಯಿತಿಂದು ಪಡೆದ ಮಹಿಪತಿ ನಿಜಾನಂದ ವಸ್ತುವಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಹೊಳೆವುತದೆ ಸುಚಿನ್ಹಬೋಧ ತಂದಿ ಕಂಡೆವೇನೊ ಸದ್ಗುರು ಶ್ರೀಪಾದ ಧ್ರುವ ಪ್ರಾಣದೊಡಿಯ ಬಾವ್ಹಾಂಗನೇನೊ ಪೂರ್ಣಕ್ಷಣಕೊಮ್ಮಾಗುತದೆ ಸುಶಕುನ ಕಣ್ಹುಬ್ಬಾರುತದೆ ಬಲದೆನ್ನ ಚೆನ್ನಾಗ್ಯಾಗಮ್ಮ ತಾನೇನೊ ಸುಪ್ರಸನ್ನ 1 ತೋಳಭುಜಹಾರುತದೆ ಬಲುಬಹಳ ವ್ಯಾಳ್ಯಕೊದಗಿಬಂದೆನೇನೊ ದಯಾಳ ಸುಳವುದೋರುತದೆ ನಿಶ್ಚಳ ಸುಳಿದೊಮ್ಮೆ ಬಂದನೇನೊ ಕೃಪಾಳ 2 ಬುದ್ಧಿ ಮನಸಿಗಾಗುತದೆ ವಿಕಾಸ ಸಿದ್ಧಿಸೋರುವ್ಹಾಗಾದೆ ಪ್ರಕಾಶ ಸದ್ಯ ಹೃದಯವಾಗುತದೆ ಉಲ್ಹಾಸ ಸಾಧ್ಯವಾಗುವ್ಹಾಂಗ್ಹಾನೇನೊ ತಾ ಸರ್ವೇಶ 3 ಪ್ರೇಮ ಉಕ್ಕಿಬರುದೆನ್ನೊಳಗೆ ಸ್ವಾಮಿದರುಷಣಾದೀತೇನೊ ತಾ ಈಗ ರೋಮರೋಮವು ಬಿಡದೆ ಎನಗೆ ಬ್ರಹ್ಮಾನಂದ ಭಾಸುತದೇನೊ ಬ್ಯಾಗ 4 ಖೂನದೋರಿಬರುತದೆನಗೊಂದು ಭಾನುಕೋಟಿ ತೇಜ ತಾ ಬಾವ್ಹಾಂಗಿಂದು ದೀನ ಮಹಿಪತಿಗುರು ಕೃಪಾಸಿಂಧುಮನೋಹರ ಮಾಡುವ್ಹಾಂಗ್ಹಾನೆ ಬಂದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದುಸನ್ನಿಭವದನೆ ಕುಂದಕುಟ್ಮಲರದನೆ ಸಿಂಧೂರಸಮಗಮನೆ ಚತುರವಚನೆ ಸಿಟ್ಟೇಕೆ ಪೇಳೆ ತರುಣಿ ದಿಟ್ಟಿಸೆನ್ನನು ರಮಣಿ ದಿಟ್ಟೆ ನೀನೆಲೆ ರಾಣಿ ಕೃಷ್ಣವೇಣಿ ಕಾವಗೀಯದೆಯೆನ್ನ ಭಾವೆಪಾಲಿಸು ಮುನ್ನ ಭುವಿಜಾತೆ ಮತಿವಂತೆ, ಪ್ರಾಣಕಾಂತೆ ಚಪಲೆನೀನಹುದಲ್ಲೆ ಕೃಪಣೆಯೆಂಬುದ ಬಲ್ಲೆ ವಿಪರೀತಂಮೆಲುನಲ್ಲೆ ಸೊಲ್ಲಿಸಿಲ್ಲೆ ಕ್ಷೀರಸಾಗರತನಯೆ ಸದಯೆ ಜಾಯೆ ಸಾರೆ ವೀಳ್ಯವನು ಕೈಗೊಂಡು ನೀನು ಬೀರು ಸಂತಸವನ್ನು ಬೇಡುತಿಹೆನು ನೀರೆ ಶೇಷಾದ್ರೀಶನಿವನೆತಾನು
--------------
ನಂಜನಗೂಡು ತಿರುಮಲಾಂಬಾ
ಇದೇ ಇದೇ ಘನಸುಖಾ ಸಾಧಿಸಿ ಗುರುಮುಖಾ ಧ್ರುವ ಅಂಜದಾಲಿಸಿ ಕೇಳಿ ಪ್ರಾಂಜಳಾಗ್ಯದೆ ಝಂ ಝಂ ಝಂ ಝಂ ಝಂ ಝಂ ಝೆಂಕರಿಸುತಲ್ಯದೆ 1 ಒಂದೊಂದು ಪರಿಲ್ಯಾನಂದವುದೋರುತಲ್ಯದೆ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂಮಿಡುಗುತದೆ 2 ಮನೋಹರಾಗುವ ಅನುಭವದೋರುತದೆ ದೀನ ಮಹಿಪತಿಗೆ ಪಾವನಗೈಸುತದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಇದೇ ಬ್ರಹ್ಮಮಯ ಸದಮಲಾನಂದೋದಯ ಸಾಧುಜನ ಹೃದಯ ಸದ್ಗುರು ದಯ ನಿಶ್ಚಯ ಧ್ರುವ ಸಾರಿಚಲ್ಲೆದ ಪೂರ್ಣ ಹರಿಯ ಸುಖ ನಿಧಾನ ಸುರಮುನಿಗಳ ಪ್ರಾಣ ಶರಣಜನರಾಭರಣ 1 ಬಣ್ಣಬಣ್ಣಭಾಸುವ ಪುಣ್ಯಶ್ಲೋಕರಾಜೀವ ಸಣ್ಣ ದೊಡ್ಡದಲ್ಲೀವ್ಹ ಕಣ್ಣಿಗೆ ಕಾಣಿಸುವ 2 ಗುಹ್ಯಕೆ ಗುಹ್ಯವಾದ ಮಹಾಮಹಿಮೆಯ ಬೋಧ ಮಹಿಪತಿ ಸದ್ಗೈಸಿದ ಮಹಾಗುರು ಸುಪ್ರಸಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನಮ್ಮ ವೃತ್ತಿ ಸದ್ಗುರುಭಾವಭಕ್ತಿ ಧ್ರುವ ಇದೇ ನಮ್ಮ ಮನೆಯ ಸದ್ಗುರು ಸ್ಮರಣಿಯ ಇದೇ ನಮ್ಮ ವರ್ತನೆಯು ಸದ್ಗುರು ಪ್ರಾರ್ಥನೆಯು 1 ಇದೇ ನಮ್ಮ ಗ್ರಾಮ ಸದ್ಗುರು ದಿವ್ಯನಾಮ ಇದೇ ನಮ್ಮ ಸ್ತೋಮ ಸದ್ಗುರು ಆತ್ಮಾರಾಮ 2 ಇದೇ ನಮ್ಮ ಭೂಮಿ ಸದ್ಗುರು ಘನಸ್ವಾಮಿ ಇದೇ ನಮ್ಮ ಸೀಮಿ ಸದ್ಗುರು ಅಂತರ್ಯಾಮಿ 3 ಇದೇ ನಮ್ಮ ದೇಶ ಸದ್ಗರು ಉಪದೇಶ ಇದೇ ನಮ್ಮಭ್ಯಾಸ ಸದ್ಗುರು ಜಗದೀಶ 4 ಇದೇ ನಮ್ಮ ವಾಸ ಸದ್ಗುರು ಸಮರಸ ಗ್ರಾಸ ಸದ್ಗುರು ಪ್ರೇಮರಸ 5 ಇದೇ ನಮ್ಮ ವ್ಯವಸನ ಸದ್ಗುರು ನಿಜಧ್ಯಾಸ ಇದೇ ನಮ್ಮ ಆಶೆ ಸದ್ಗುರು ಸುಪ್ರಕಾಶ6 ಇದೇ ನಮ್ಮಾಶ್ರಮ ಸದ್ಗುರು ನಿಜದ್ಯಾಸ ಇದೇ ನಮ್ಮುದ್ದಿಮೆ ಸದ್ಗುರು ಸಮಾಗಮ 7 ಇದೇ ನಮ್ಮ ಭಾಗ್ಯ ಸದ್ಗತಿ ಸುವೈರಾಗ್ಯ ಇದೇ ನಮ್ಮ ಶ್ರಾಧ್ಯ ಸದ್ಗುರು ಪಾದಯೋಗ್ಯ 8 ಇದೇ ನಮ್ಮ ಕುಲವು ಸದ್ಗುರು ದಯದೊಲವು ಇದೇ ನಮ್ಮ ಬಲವು ಸದ್ಗುರು ದಯಜಲವು 9 ಇದೇ ನಮ್ಮಾಭರಣ ಸದ್ಗುರು ದಯ ಕರುಣ ಇದೇ ದ್ರವ್ಯ ಧನ ಸದ್ಗತಿ ಸಾಧನ 10 ಕಾಯ ಸದ್ಗುರುವಿನುಪಾಯ ಇದೇ ನಮ್ಮ ಮಾಯ ಸದ್ಗುರುವಿನ ಅಭಯ 11 ಇದೇ ನಮ್ಮ ಪ್ರಾಣ ಸದ್ಗುರು ಚರಣ ಇದೇ ನಮ್ಮ ತ್ರಾಣ ಸದ್ಗುರು ದರುಶನ 12 ಇದೇ ನಮ್ಮ ಜೀವ ಸದ್ಗುರು ವಾಸುದೇವ ಇದೇ ನಮ್ಮ ದೇವ ಸದ್ಗುರು ಅತ್ಮಲೀವ್ಹ 13 ಇದೇ ನಮ್ಮ ನಾಮ ಸದ್ಗುರು ಸದೋತ್ತಮ ಇದೇ ನಮ್ಮ ನೇಮ ಸದ್ಗುರು ಸರ್ವೋತ್ತಮ 14 ಇದೇ ನಮ್ಮ ಕ್ಷೇತ್ರ ಸದ್ಗುರು ಬಾಹ್ಯಂತ್ರ ಗಾತ್ರ ಸದ್ಗುರು ಘನಸೂತ್ರ 15 ಇದೇ ನಮ್ಮ ತೀರ್ಥ ಸದ್ಗುರು ಸಹಿತಾರ್ಥ ಇದೇ ನಮ್ಮ ಸ್ವಾರ್ಥ ಸದ್ಗುರು ಪರಮಾರ್ಥ 16 ಇದೇ ನಮ್ಮ ಮತ ಸದ್ಗುರು ಸುಸನ್ಮತ ಪಥ ಸದ್ಗುರುಮಾರ್ಗ ದ್ವೈತ 17 ಇದೇ ನಮ್ಮ ವೇದ ಸದ್ಗುರು ಶ್ರೀಪಾದ ಇದೇ ನಮ್ಮ ಸ್ವಾದ ಸದ್ಗುರು ನಿಜಬೋಧ 18 ಇದೇ ನಮ್ಮ ಗೋತ್ರ ಸದ್ಗುರು ಸರ್ವಾಂತ್ರ ಸೂತ್ರ ಸದ್ಗುರು ಚರಿತ್ರ 19 ಇದೇ ಸದ್ಯ ಸ್ನಾನ ಸದ್ಗುರು ಕೃಪೆ ಙÁ್ಞನ ಇದೇ ಧ್ಯಾನ ಮೌನ ಸದ್ಗುರು ನಿಜಖೂನ 20 ಇದೇ ಜಪತಪ ಸದ್ಗುರು ಸ್ವಸ್ವಸೂಪ ಇದೇ ವೃತ್ತುದ್ಯೋಪ ಸದ್ಗುರು ಸುಸಾಕ್ಷೇಪ 21 ಇದೇ ನಿಮ್ಮ ನಿಷ್ಠಿ ಸದ್ಗುರು ಕೃಪಾದೃಷ್ಟಿ ಇದೇ ನಮ್ಮಾಭೀಷ್ಠಿ ಸದ್ಗುರು ದಯಾದೃಷ್ಟಿ 22 ಇದೇ ಪೂಜ್ಯಧ್ಯಕ ಸದ್ಗುರು ಪ್ರತ್ಯಕ್ಷ ಇದೇವೆ ಸಂರಕ್ಷ ಸದ್ಗುರು ಕಟಾಕ್ಷ 23 ಇದೇ ನಮ್ಮ ಊಟ ಸದ್ಗುರು ದಯನೋಟ ಇದೇ ನಮ್ಮ ಆಟ ಸದ್ಗುರು ಪಾದಕೂಟ 24 ಮಾತೃಪಿತೃ ನಮ್ಮ ಸದ್ಗುರು ಪರಬ್ರಹ್ಮ ಭ್ರಾತೃಭಗಿನೀ ನಮ್ಮ ಸದ್ಗುರು ಪಾದಪದ್ಮ 25 ಇದೇ ಬಂಧು ಬಳಗ ಸದ್ಗುರುವೆ ಎನ್ನೊಳಗೆ ಇದೇ ಸರ್ವಯೋಗ ಬ್ರಹ್ಮಾನಂದ ಭೋಗ26 ಇದೇ ಸರ್ವಸೌಖ್ಯ ಮಹಿಪತಿ ಗುರುವಾಕ್ಯ ಇದೇ ನಿಜ ಮುಖ್ಯ ಸದ್ಗತಿಗಿದೆ ಐಕ್ಯ 27
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನಮ್ಮ ಶ್ರೀ ಹರಿ ಕೀರ್ತನಿ ಸಾಧು ಸಜ್ಜನರ ಮೃತಸಂಜೀವನಿ ಸದ್ಗೈಸುವ ದಿವ್ಯ ಸುಸಾಧನಿ ಸದ್ಗುರು ಸುಮೂರ್ತಿ ಪ್ರಾರ್ಥನಿ ಧ್ರುವ ಶಮದಮವೆಂಬೆರಡು ತಾಳಗೂಡಿ ಪ್ರೇಮ ಭಾವನೆ ಧ್ರುಪÀದಿಗಳ ಮಾಡಿ ಸಮರಸವೆ ಮೃದಂಗವಿದು ನೋಡಿ ಸಮದೃಷ್ಟಿಲಿವೆ ನಾಮ ಕೊಂಡಾಡಿ 1 ಸಾವಧಾನವೆಂಬ ನಿರೋಪಣಿ ನಿವಾಂತ ಕೇಳು ವಿಚಾರಣಿ ಈ ವಾಕ್ಯಬಲ್ಲ ಲಕ್ಷಕೊಬ್ಬ ಙÁ್ಞನಿ ಭಾವ ಬಲ್ಲುದೆ ಮುಖ್ಯ ಸಾಧನಿ 2 ಮನಸ್ವಸ್ತ ಮಾಡಿ ನೀವಿನ್ನು ಕೇಳಿ ಅನುಮಾನ ಬಿಟ್ಟಿ ಇಕ್ಕಿ ಚಪ್ಪಾಳಿ ಗನಗುರು ಪಾದದಲ್ಯೊಮ್ಮೆ ಹೊರಳಿ ಹಣಿಗ್ಹಚ್ಚಿಕೊಂಬಾ ಗುರುಪಾದಧೂಳಿ 3 ಚಿತ್ತ ಚಂಚಲಾಗ ಬಾರದು ನೋಡಿ ವಸ್ತು ಬಾಹುದು ಬ್ಯಾಗೆ ಕೈಗೂಡಿ ಮಿಥ್ಯಾ ಪ್ರಪಂಚ ಈಡ್ಯಾಡಿ ನಿತ್ಯ ನಿರ್ಗುಣಾನಂದ ಸ್ತುತಿಪಾಡಿ 4 ಪುಣ್ಯಕೀರ್ತನೆ ಕೇಳಿ ಸಂಭ್ರಮ ಧನ್ಯ ಧನ್ಯ ಕೇಳಿದವರ ಜನ್ಮ ಕಣ್ಣಾರೆ ಕಾಂಬುವ ನಿಜವರ್ಮ ಚಿಣ್ಣ ಮಹಿಪತಿಗಾನಂದೋ ಬ್ರಹ್ಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಪುರುಷಾರ್ಥ ಮನಜ ಪರಮಾತ್ಮ ಪಡೆವುದಿದು ವೇದಾರ್ಥ ಇದನ್ನು ಬಿಸುಟಿನ್ನು ಬಾಳುವೆ ಬದುಕನ್ನು ಮಾಡುವುದಿದುದೇ ವ್ಯರ್ಥ S ದೇಹವಿರುವಾಗಲೇ ಪೂರ್ಣಪದನಾ ದೊರಕಿಪನೆ ಜಾಣ ಮೋಹಮಾಯಾವಿಕಾರವ ದಾಂಟಿ ಪೋಗುವನೆ ಜಾಣ ಸಾಹಸದಿ ಈ ಸಾವನು ನೀಗೀ ಮೋದಿಸುವ ಜಾಣ ಉಳಿದ ನರ ಕೋಣ ಅವನಿಯುಳು ಪ್ರಾಣ ತಳೆದಿರುವುದೇ ವ್ಯರ್ಥ ತನ್ನ ಒಳಗಿರ್ವ ಸಂಪೂರ್ಣ ಸುಖತಾ ಅರಿಯುವನೆ ಜಾಣ ಭಿನ್ನವಾಗಿರ್ಧ ತೋರಿಕೆ ಇದನಾ ಭಾದಿಸುವ ಜಾಣ ಮುನ್ನ ಸುಖದುಃಖಗಳನ್ನು ನೀಗಿ ನಿಲ್ಲುವನೆ ಜಾಣ ಇವನೇ ಗುರುನಾಥಾ ಶಂಕರ ಭಗವಂತಾಪೇಳಿದ ನುಡಿ ವೇದಾರ್ಥ
--------------
ಶಂಕರಭಟ್ಟ ಅಗ್ನಿಹೋತ್ರಿ