ಒಟ್ಟು 1359 ಕಡೆಗಳಲ್ಲಿ , 106 ದಾಸರು , 1047 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಣದೆ ನಿಲ್ಲಲಾರೆ, ಕಮನೀಯ ಮೂರುತಿಯಪ್ರಾಣೇಶನ ತೋರೆ ಗಿಣಿಯೆ ಪ ಮಾಣಿಕ್ಯ ಪದಕವ ಮನ್ನಿಸಿ ನಿನಗೀವೆಜಾಣೆ ಕೃಷ್ಣನ ತೋರೆ ಗಿಣಿಯೆ ಅ.ಪ. ಮಕರಕುಂಡಲಧರನ ಮಕರಧ್ವಜನ ಪಿತನಮಕುಟ ಭೂಷಣನ ತೋರೆ ಗಿಣಿಯೆಮಕರಾಕ್ಷ ಸಂಹರನ ಮಕರಾರಿ ರಕ್ಷಕನಮಕರ ಶಿಕ್ಷಕನ ತೋರೆ ಗಿಣಿಯೆ 1 ಇಂದು ರವಿಲೋಚನನಇಂದು ನೀ ಕರೆತಾರೆ ಗಿಣಿಯೆಇಂದುಶೇಖರನುತನ ಇಂದಿರೆಯರಸನತಂದು ತೋರೆ ಮುದ್ದುಗಿಣಿಯೆ2 ಒಂದು ನಿಮಿಷವೊಂದು ಯುಗವಾಗಿ ತೋರಿತೆಸೌಂದರ್ಯನ ತೋರೆ ಗಿಣಿಯೆಮಂದಮಾರುತ ಸೋಕೆ ಮರುಳುಗೊಂಡೆನೆ ಎನ್ನಮಂದಿರಕೆ ಕರೆತಾರೆ ಗಿಣಿಯೆ 3 ಕಾಯಜನ ಬಾಣದಲಿ ಕಾಯವೆಲ್ಲವು ಬಹಳಘಾಯವಾಯಿತು ನೋಡೆ ಗಿಣಿಯೆಮಾಯೆಗಳ ಮಾಡದೆ ಮಮತೆಯಿಂದಲಿ ಎನ್ನನಾಯಕನ ಕರೆತಾರೆ ಗಿಣಿಯೆ 4 ಪಂಕಜೋದ್ಭವ ಪಿತನ ಪಂಕಜನಯನನಪಂಕಜನಾಭನ ತೋರೆ ಗಿಣಿಯೆಪಂಕಜಾಕ್ಷ ಸಿರಿಕೃಷ್ಣನ ಪದಪದ್ಮಶಂಕೆಯಿಲ್ಲದೆ ತೋರೆ ಗಿಣಿಯೆ 5
--------------
ವ್ಯಾಸರಾಯರು
ಕಾಣೆವಾವಿದನು ಕಾಣೆವಾವಿದನಾವ ಶಾಸ್ತ್ರದಲಿ ವಿದುಗಳ ಪ್ರಮಾಣ ವಚನದಲಿ ಮೂರನೆಯ ಪಥದಾಪಜಾಣಿಲಾತ್ಮನ ಸಮಾಧಿಯಲನುಭವಿಸಿ ಸುಖವಕಾಣದೆ ಬರಿದೆ ಮುಕುತರಾವೆಂಬ ಪರಿಯಾ ಅ.ಪತಾನೆ ಚೇತನವಂತೆ ತನಗೆ ಕರ್ಮಗಳಂತೆತಾನೆ ಸುಖಮಯನಂತೆ ತಾಪವನಂತೆತಾನೆ ಬೋಮವದಂತೆ ಹಾನಿವೃದ್ಧಿಗಳಂತೆತಾನೆ ನಿರ್ಲೇಪಸ್ತುತಿನಿಂದೆ ತನಗಂತೊ 1ಬೋಧೆಯು ತಾನಂತೆ ಸಾಧನವು ಬೇಕಂತೆಭೇದವಿಲ್ಲವದಂತೆ ಭೀತಿ ತನಗಂತೆನಾದ ಬಿಂದುಗಳನರಿದಿಪ್ಪಗತಿಯಂತೆಪಾದಾಭಿಮಾನ ಚಿಂತೆಯು ಪೋಗದಂತೆ 2ಕಾಯ ಕರುಣಾಭಿಮಾನಗಳಿಲ್ಲ ತನಗಂತೆಮಾಯೆ ಬಾಧಿಪುದಂತೆ ಮನಸಿನೊಳಗೆಈಯಹಂಕಾರವಿಲ್ಲದ ಬೊಮ್ಮಪದವಂತೆಹೇಯವಿದುಪಾದೇಯವೆನಿಪ ಭ್ರಮೆಯಂತೆ 3ಈಶ ತಾನಂತೆ ತನ್ನಾಶೆಗಳು ಬಿಡವಂತೆಕೋಶ ಸಾಕ್ಷಿಕನಂತೆ ಕೋಪ ತನಗಂತೆಪಾಶವಿಲ್ಲವದಂತೆ ಪಾಡುಪಂಥಗಳಂತೆಈ ಸಕಲ ತಾನಂತೆ ಇನ್ನು ವಿಧಿಯಂತೆ 4ಚೇತನವೆ ತಾನಂತೆ ಚಿತ್ತನಿಲ್ಲದುದಂತೆಪಾತಕಗಳಿಲ್ಲವಂತೆ ಪರಪೀಡೆಯಂತೆಜಾತಿಸೂತಕವೆಂಬ ಜಂಜಡಗಳಿಲ್ಲವಂತೆಮಾತಿನ ರಿಪು ಮತ್ಸರಗಳು ಬಿಡವಂತೆ 5ವಿಶ್ವಾತ್ಮತಾನೆಂಬ ವಿಶ್ವಾಸವುಂಟಂತೆವಿಶ್ವತ್ರೈಜಸರ ನಿಜವರಿಯನಂತೆನಶ್ವರದ ಭೋಗಂಗಳೆಂಬ ನಂಬಿಗೆಯಂತೆವಿಶ್ವಾದಿಗಳ ರೀತಿಯಲ್ಲಿ ಪಗೆಯಂತೆ 6ಅಂಡಪಿಂಡಗಳೈಕ್ಯವೆಂಬ ಬುದ್ಧಿಗಳಂತೆಚಂಡಾಲನಿವನೀತ ಮೇಲೆಂಬುದಂತೆಪಂಡಿತನು ಪ್ರವುಢ ತಾನೆಂಬ ಭಾಷೆಗಳಂತೆಕುಂಡಲಿಯ ಹೆಳವ ಕೇಳ್ದಡೆ ಕುದಿವನಂತೆ7ಚಿನ್ಮಯಾತ್ಮಕನು ತಾನೆಂಬ ಚಿಂತೆಗಳಂತೆತನ್ನವರು ತಾನೆಂಬ ಭ್ರಮೆಪೊಗದಂತೆಸನ್ಮುದ್ರೆಯಂತೆ ಸತ್ಯಾಸತ್ಯವೆರಡಂತೆತನ್ಮಯತೆಯಂತೆ ಲಕ್ಷಣೆಯರಿಯನಂತೆ 8ಗುರುಭಕುತಿಯಂತೆ ವರಕರುಣವಿಲ್ಲವದಂತೆಗುರುಶರಣನಂತವರನುಗೇಳನಂತೆಪರಮಪದ ತಾನಂತೆ ಪಿರಿದು ಸಂಶಯವಂತೆವರ ಮುಕ್ತಿಯಂತೆ ವಾಸನೆಯು ಬಿಡದಂತೆ 9ಈ ಪರಿಯ ಸಂಭಾವನೆಗಳ ಪರಿಹರಿಸಿ ಶ್ರೀಗೋಪಾಲಾರ್ಯ ಜನರಿಗೆ ದಯದಲಿತಾಪಂಗಳನು ಸವರಿ ದಾಟಿಸಯ್ಯಾ ಚಿತ್ಪ್ರತಾಪದಿಂ ನಿಜಪಾದ ಬೋಧೆಯನು ಕೊಟ್ಟು10
--------------
ಗೋಪಾಲಾರ್ಯರು
ಕಾಮನ ಪಿತ ಕೃಷ್ಣ ಕಾಮಿನಿಯಾದನು ಕಾಮನ ಪಿತ ಕೃಷ್ಣ ಕಾಮಿನಿ ಆಗುವೊ ಕಾರಣ ಕೇಳಿರಿ ಕಾಮಿಸಿ ಶ್ರೀಹರಿ ಆ ಮಹಾಸುರರಿಗೆ ಸುಧೆಯನ್ಹಂಚುಣಿಸಲು ಶ್ರೀ ಮಾಯಾಪತಿಯು ತಾ ಸ್ತ್ರೀಯಾದ ಚೆಲುವಿಕೆ ಪ ರುಳಿ ಲುಲ್ಲು ಗೆಜ್ಜೆ ಪೈಜಣ ಪಾಗಡವನಿಟ್ಟು ಚರಣದಿ ಕಾಲುಂಗರ ಪಿಲ್ಯ ಮೆಂಟಿಕೆ ಝಣ ಝಣ ನಾದ ಕಾಳಿಯ ಫಣ ತುಳಿದಂಥ ಖಳರ ಮರ್ದನ ದಿವ್ಯ ತರುಣಿ ತಾನಾದನು 1 ಸೆರಗು ನಿರಿಯು ಜರತಾರಿ ಪೀತಾಂಬರ ಬಿಡಿ ಮುತ್ತಿನುಡಿಗಂಟೆ ನಡುವಿನ್ವೊಡ್ಯಾಣ ಸಡಗರದಿಂದ್ವೊಪ್ಪೊ ತಾಳಿ ಪದಕವಿಟ್ಟು ಮೃಡನ ಪ್ರಿಯನು ಮುದ್ದು ಮಡದಿ ತಾನಾದನು 2 ಕಂಚುಕ ತೋಳಿನಲ್ವಂಕಿ ಬÁಜುಬಂದು ಮಿಂಚಿನಂದದಿ ನಲಿದಾಡುತ ಗೊಂಡ್ಯವು ಕಂಕಣ ತೋಡ್ಯ ವಜ್ರದ್ವಾರ್ಯ ಹರಡಿಯು ಪಂಚ ಬೆರಳಿನಲ್ಲುಂಗುರವನಿಟ್ಟು ಸೊಬಗಲಿ 3 ಚಿಂತಾಕು ಸರಿಗೆ ಚಿನ್ನದ ಗುಂಡು ಹವಳವು ಕೆಂಪು ಏಕಾವಳಿ ಮಲಕು ತಾಯಿತ ಮುತ್ತು ಮಿಂಚುವೋ ಪದಕ ಮುತ್ತಿನ ಕಟ್ಟಾಣಿಯು ಪಂಚರತ್ನದ ಹಾರ ಪರಮಾತ್ಮಗಲೆಯುತ4 ಉಂಗುರ ಕೂದಲು ಶೃಂಗಾರ ಕ್ಯಾದಿಗೆ ಚಂದ್ರ ಚೌರಿ ಜಡೆಬಂಗಾರ ರಾಗಟೆ ಮುಂದೆ ಮುತ್ತಿನದಂಡೆ ಮುಡಿಯಲ್ಲೆ ಒಪ್ಪಿದ ದುಂಡು ಮಲ್ಲಿಗೆ ದÉೂೀಷದೂರನಿಗಲೆವುತ 5 ವಾಲೆ ಬುಗುಡಿ ಬಾಳ್ಯ ಚಳತುಂಬು ಚಂದ್ರ ಮುರುವು ಚಿನ್ನದ ಕಡ್ಡಿ ಕಿವಿಯಲ್ಲಿ ಕುಂದಣ ಕುಸುರು ವಜ್ರಗಳು ಕೆಂಪ್ಹೊಳೆವಂಥ ದುಂಡು ಮುತ್ತಿನ ಮುಕುರ್ಯವ ಮೂಗಿನಲ್ಲಿಟ್ಟು 6 ಅಚ್ಚ ಮುತ್ತಿನ ದಂಡೆ ಕುಚ್ಚು ತೊಂಡಿಲುಗಳು ಹಚ್ಚೆಯ ಬೊಟ್ಟು ಕಸ್ತೂರಿ ಕುಂಕುಮನಿಟ್ಟು ಪಚ್ಚೆ ಮಾಣಿಕ್ಯದರಳೆಲೆ ಚಂದ್ರ ಸೂರ್ಯರು ನಿತ್ಯ ತೃಪ್ತನು ನೀಲವರ್ಣದಂತ್ಹೊಳೆಯುತ 7 ಆ ಮಹಾವೈಕುಂಠಪುರದರಸಾದ ಈ ಮಹಾ ರಜತ- ಪೀಠ ಪುರದಲಿ ಬಂದು ಪ್ರೇಮದಿ ನಿಂತು ನೋಡುತ ಬಂದ ಜನರಿಗೆ ಕಾಮಿತ ಫÀಲ ಮುಕ್ತಿ ಕೊಡುವ ಕಮಲಾಪತಿ 8 ಅಷ್ಟಯತಿಗಳಿಂದಲಿ ಪೂಜೆಯಗೊಂಬೊ ಲಕ್ಷ್ಮಿಯ ಪತಿಯು ಸ್ತ್ರೀರೂಪವ ಧರಿಸಿರೆ ದೃಷ್ಟಿಂದೆ ನೋಡದಿನ್ನಿರುವೋರೆ ಭೀಮೇಶ- ಕೃಷ್ಣ ನಿನ್ನ ಮನದಲ್ಲಿಟ್ಟು ಸ್ತುತಿಸುವೆನು 9
--------------
ಹರಪನಹಳ್ಳಿಭೀಮವ್ವ
ಕಾಯ ನೆಚ್ಚಿ ಮಾಯಾ- ಡಂಬರಕೊಳಗಾಗಿ------ದುರ್ಜನರು ಪ ಎಂಬತ್ತು ನಾಲ್ಕು ಲಕ್ಷ ಜೀವರಾಶಿಗಳ ಇಂಬಿನಲ್ಲಿ ಹುಟ್ಟಿ ವ್ಯಥೆಯ ಬಿಟ್ಟು ಸಂಭ್ರಮದಿ ಸುಖದು:ಖ ಸಂಸಾರದೊಳು ಬಿದ್ದು ಕುಂಭಿಣೀ ದೇಹಮರೆತು ಕಡೆಗೆ ಹೋಗ್ವದು ತಿಳಿದು 1 ಈ ಶರೀರದ ಭೋಗ ಎನಗೆ ಶಾಶ್ವತವೆಂದು ಏಸೊ ಪರಿಯಿಂದ ಹಾರೈಸಿ ಇನ್ನೂ ಆಸೆಯಿಂದ ನೀ ಬಹಳ ಕಾಲ ಮೃತರಾಗುವದು ತಿಳಿದು 2 ನಿಶ್ಚಯವಿಲ್ಲದ ದೇಹಗಳು ನಿಜವೆಂದು ಮಂದನಾಗಿ ಅಚ್ಯುತ 'ಹೆನ್ನೆವಿಠ್ಠಲ’ನ ಅರಿಯದಿನ್ನು ಎಚ್ಚರಿಕೆಯನು ತಪ್ಪಿ ಇಹಲೋಕವನು ತ್ಯಜಿಸಿ
--------------
ಹೆನ್ನೆರಂಗದಾಸರು
ಕಾಯ ಬಲು ಹೇಯವೊ | ಸಾಕು ಸಾಕು ಸಂಸಾರ ನೆಚ್ಚದಿರು ಎಚ್ಚರಿಕೆ ಪ ಊಧ್ರ್ವಾಧೋ ಭಾಗದಿಂದ ಕೂಡಿದಾ ರಕ್ತಶುಕ್ಲ | ಅರ್ಧರ್ಧ ಪ್ರವೇಸಿಯಾಗಿ | ವರ್ಧನಾಗಿ ಮಾಂಸ ಪಿಂಡಿಕೆಯಲಿ ಬೆಳೆದು | ಅರ್ಧವದೊಳಗೆ ಬಳುಲುವುದೇನೊ ಮಹಾ ಕಠೀಣಾ 1 ಸನ್ನಿರೋಧವಾದ ಪ್ರಾದೇಶದಲಿ ನೀನು | ಬನ್ನ ಬಡುವದು ಜನಕೆ ಅರಿಯನಲ್ಲಾ | ಮುನ್ನೆ ಇಂದ್ರನಿಗಾಗಿ ವರವಿತ್ತ ಸಂಪತ್ತು | ಇನ್ನು ನಿನ್ನ ಸುತ್ತ ಬಂದದೆ ತಿಳಿದುಕೋ 2 ವಾತ ಶೈತ್ಯಜ್ವರ ಕೆಮ್ಮು | ಸಪುತ ಧಾತುಗಳಿಂದ ಬರುವ ರೋಗ | ಕ್ಲೇಶ ಮೋಹಗಳೊಡನೆ | ಮಾಯಾ 3 ಕಾಮ ಮದ ಗರ್ವದಲಿ ಪುಂಜನಾಗಿ ದುರಳ ನಿ | ಜ ಮಗಳ ಕೂಡ ಬೆರದಾಡಿ ಬೆರೆದು | ರೋಮರೋಮ ವಿಷಯ ಪೂರ್ತಿಯಾಗಿ ಚರಿಸಿ | ಪಾಮರನಾಗಿ ಬಳಲದಿರು ಬಹು ಜೋಕೆ 4 ಸತಿ ಸುತರು ಮಿಕ್ಕಾದ ಬಂಧುಗಳು ನೆರೆನೆರೆದು | ಪ್ರತಿದಿವಸದಲಿ ಅಟ್ಟುವುದು ನೋಡು| ಮತಿ ಚಂಚಲವಾಗಿ ಸತ್ಕರ್ಮ ವೃತ್ತಿಗೆ | ಪ್ರತಿಕೂಲವಾಗುವದು ಪ್ರೀತಿಯಾಗದು ಮುಂದೆ 5 ಎಂತು ನೋಡಲು ವಿಷಯ ಅನುಭವಿಸಿದರು ಅದರ | ಅಂತು ಕಂಡವರಾರು ವಲ್ಲೆನೆಂದು | ಭ್ರಾಂತಿಯಿಂದಲಿ ತಿರುಗಿ ಬಯಲಾಗೋದಲ್ಲದೆ | ಚಿಂತೆ ಇಷ್ಟಷ್ಟು ಏನೆಂದು ಪೇಳಲಿ 6 ಯಲೋ ಮನವೆ ಸಾರಿ ಪೇಳಿದೆನು ಚನ್ನಾಗಿ ನೀ | ನೆಲೆ ಮಾಡಿಕೋ ಜ್ಞಾನ ಭಕುತಿ ವಿತ್ತಾ | ಸುಲಭ ದೇವರ ದೇವ ವಿಜಯವಿಠ್ಠಲರೇಯ | ಕೆಲಕಾಲ ನೆನೆದು ಸುಖಿಯಾಗು ಸುಜನರಾ ಕೇಳು 7
--------------
ವಿಜಯದಾಸ
ಕಾಯ ಸುತ್ತಿ ಬಾಯ ಹೊಯ್ವುದು ಆಯ ತಪ್ಪಿ ಆಯ ಕೆಟ್ಟ ನ್ಯಾಯಬಪ್ಪುದು ಪ ಹೆತ್ತ ತಾಯಿ ತಂದೆಯನ್ನು ಒತ್ತಿ ಬಯ್ವುದು ಅತ್ತೆಯನ್ನು ಕಂಡು ಹರುಷವಿತ್ತು ನಗುವುದು ಮೃತ್ಯುವನ್ನು ತಂದು ತನ್ನ ಹತ್ತಿರಿಡುವುದು ಒತ್ತಿನವನ ಹೊರಗೆ ಸಾರೆನುತ್ತ ನುಡಿವುದು 1 ಗುರುಗಳನ್ನು ಜರೆದು ಕರೆಕರೆಯ ತಪ್ಪುದು ಕೊರಳು ಕೊಯ್ಕರನ್ನು ತಾನು ಸೆರಗ ಪಿಡಿವುದು ಮರವೆ ತೋರ್ಪುದು ಗರುವತನದಿ ಪರರ ಒಡವೆ ಇರುಳು ಸುಲಿವುದು 2 ದಾನದತ್ತವಾದುದನ್ನು ತಾನು ಸೆಳೆಯುವುದು ಮಾನವನ್ನು ಹಿಡಿದು ಮೇಲೆ ಮಾನಯಿಡುವುದು ಜ್ಞಾನಿಯನ್ನು ಕಂಡು ಮನದಿ ಬೇನೆ ತೋರ್ಪುದು ಅನಾಥರನ್ನು ಕಂಡು ಬಹು ಹೀನ ನುಡಿವುದು 3 ಅನ್ನವನ್ನು ಇತ್ತವರ ಮುನ್ನ ಬೈಯ್ವುದು ಭಿನ್ನ ಭೇದ ತೋರಿ ಮನವ ಕನ್ನ ಕೊರೆವುದು ತನ್ನವರ ಮರೆತು ಪರರ ಕನ್ಯೆಗಳುವುದು ಹೊನ್ನ ಬೊಂಬೆಯಂತೆ ಮಾಯೆ ಬೆನ್ನ ಸುಳಿವುದು 4 ತಪ್ಪಿ ನಡೆಯೆ ಈ ಪರಿಯೊಳಿಪ್ಪೆಯೆಂಬುದು ಅಪ್ಪ ವರಾಹತಿಮ್ಮಪ್ಪನ ಸೇರಿಕೊಂಬುದು ಒಪ್ಪಿ ತೋರ್ಪ ಮಾಯೆಯೆಲ್ಲ ತಪ್ಪಿ ಪೋಪುದು ಉಪ್ಪರದ ದಾಸ ಪೇಳ್ದ ಒಪ್ಪಿಕೊಂಬುದು 5
--------------
ವರಹತಿಮ್ಮಪ್ಪ
ಕಾಯ ಇಂದಿರೆ ರಮಣ ಆಗಲೂ ನೀ ಕಾಯಬೇಕೋ ಅರವಿಂದ ನಯನ ಪ. ಈಗ ಈ ಜನ್ಮದಲ್ಲಿ ಭವ ದಾಟುವಲ್ಲಿ ಅ.ಪ. ಮಾನವ ನಾನಾಗಿ ಪುಟ್ಟಿ ಕಾಲ ಕಳೆದು ದೀನನಾಗೀಗ ಇನ್ನು ನೀನೆ ಗತಿಯೋ ಎನಲು ಶ್ರೀನಾಥ ನಿನ್ನ ನಾಮ ಎನ್ನ ನಾಲಗೆಯಲಿ ನುಡಿಸಿ 1 ಮಾಯಾಪತಿಯೆ ಕೇಳೋ ಆ ಯಮಭಟರು ಎಳೆದು ನೋಯಿಸುತ್ತಿರಲು ಎನ್ನ ಬಾಯಬಿಡುತಲಿ ತೋಯಜಾಂಬಕನೆ ಎನ್ನ ಕಾಯೋ ಎಂದೆನುತ ಒದರೆ ಆ ಯಮಬಾಧೆ ಬಿಡಿಸಿ ಸಾಯದಾ ಸೌಖ್ಯವನಿತ್ತು 2 ವೈಷ್ಣವ ಜನ್ಮವ ನೀನು ಇತ್ತುದು ಪಿರಿಯದಲ್ಲೊ ವೈಷ್ಣವ ಜ್ಞಾನವ ನೀಡೊ ಸುಭಕ್ತಿ ಸಹಿತ ಕೃಷ್ಣಮೂರುತಿಯೆ ನೀನು ಅಷ್ಟದಳÀ ಪದ್ಮದಲಿ ನಿಂತು ಉಷ್ಣ ಶೀತ ದ್ವಂದ್ವ ಸಹಿಷ್ಣುತೆ ವಿರಕ್ತಿಯೊಡನೆ 3 ತ್ರಿಗುಣದಿಂದ ಬದ್ಧವಾದ ವಿಗಡದೇಹ ತೊಲಗುವಂತೆ ಬಗೆಬಗೆಯ ನಿನ್ನ ಲೀಲೆ ಅಂತರದಿ ತಿಳಿಸಿ ಜಗದಾವರಣ ತೊಲಗುವಾಗ ಬಗೆಬಗೆಯ ಲಯದ ಚಿಂತೆ ತಗಲಿ ಮನಕೆ ನಿನ್ನ ಮಹಿಮೆ ಆನಂದವಾಗುವಂತೆ 4 ಗೋಪಾಲಕೃಷ್ಣವಿಠಲ ನೀ ಪರದೈವನೆನಿಸಿ ಆಪಾದಮೌಳಿ ನಿನ್ನ ರೂಪವ ತೋರಿ ಅಪವರ್ಗದಲಿ ಎನಗೆ ಶ್ರೀಪಾದಾಸ್ಥಾನವಿತ್ತು ಈ ಪರಿಯಿಂದ ಉಭಯ ವ್ಯಾಪಾರದಲ್ಲಿ ಹರಿಯೆ 5
--------------
ಅಂಬಾಬಾಯಿ
ಕಾಯಬೇಕೋ ಶಂಕರೇಶ್ವರ ನೀನೆನ್ನನೂ ದೇವಾ ಪ ಮಾಯಧಾರಿಪ್ರೀಯನಹುದೋ ಕಾಯಜಾಂತಕನೇ ಆಯತಾರ್ಥವನ್ನು ತೋರೋ ಪಾರ್ವತೀಶನೆ ದೇವನೆ 1 ಇಂತುದಿನವು ಗಳಿಸಿಯಿರುವ ಅಂತು ದು:ಖಕ್ಕೆ ಪಂತವ್ಯಾಕೊ ಪಾಲಿಸೆನ್ನೊಳಂತರಂಗಮಂ ಶಂಭೂ 2 ದಾಸ ತುಲಸಿರಾಮ ನಿನ್ನ ದಾಸನಾದೆನೂ ದೋಷ ರಹಿತನ ಮಾಡೆನ್ನ ಮೋಸಹೋದೆನೂ-ಗುರುವೇ 3
--------------
ಚನ್ನಪಟ್ಟಣದ ಅಹೋಬಲದಾಸರು
ಕಾಯವ ನೆರೆನಂಬಿ ಕೆಡದಿರು ಮಾಯೆಯ ತಿಳಿದೇಳು ಪ. ನ್ಯಾಯವನರಿಯದೆ ನೀ ಮಾಯಾಮೋಹವೆ ಹೇಯಕಾರ್ಯರಿದೊಳಪಾಯದಿ ನರಳುವ ಅ.ಪ. ತನುಮನಕನಕವಿದು ನಿತ್ಯದಿ ತನದಾಗಿಹುದೆಂದು ಹೊನ್ನು ಮಣ್ಣು ಹೆಣ್ಣೆಂಬೀ ಮೂರರ ಬಣ್ಣದೆ ಬಗೆಗೆಟ್ಟು ಕಣ್ಣು ಕಾಣದೆ ಮುಂಬರುತಿಹ ಭಿನ್ನವನೆಣಿಸದೆಯೆ ಸಣ್ಣತನದಿ ಜೀವನ ವ್ಯರ್ಥವೆನಿಸುವ 1 ಸುಜನರ ಸಂಗತಿ ತ್ಯಜಿಸಿ ಮದದಲಿ ಕುಜನರ ಕೂಟವ ಬಯಸಿ ಋಜುಮಾರ್ಗವ ತೊರೆದು ಕಾಲವ ಅಜಗರನಂದದಿ ಕಳೆದು ಗಜಪತಿ ವರದನ ಪದಪಂಕಜ ಮಹಿಮೆಯ ನಿಜವರಿಯದೆ ದುರ್ಜೀವನವೆನಿಸುವ 2 ನೀರಗುಳ್ಳೆಯ ತೆರದಿ ಕರಗುವ ಸಾರವಿಲ್ಲದ ಭವದಿ ಮೂರುದಿನದ ಬಾಳೆಂದು ನೆನೆಯದೆ ಹಾರಾಡುವರೇ ನಿಂದು ಮಾರಪಿತನ ಪದಸಾರಸವನು ನೆನೆ [ನೆನೆದು] ನೀರ ಶೇಷಗಿರಿವರನೆÀ ಗತಿಯೆನೆ 3
--------------
ನಂಜನಗೂಡು ತಿರುಮಲಾಂಬಾ
ಕಾಯವಿದು ನಿತ್ಯವೆಂದು ನೆಚ್ಚಬೇಡ ಮಾಯಾಕಾರ್ಯನಾಗಿ ಮೆರೆವುದಿದು ತಿಳಿದುನೋಡಾಕಾಯವಳಿವ ಮುನ್ನ ಹರಿಯ ಕೃಪೆಯ ಜೋಡ ತೋಡುನಾಯಬಾಯತುತ್ತ ನಂಬಿ ಬೆರೆಯ ಬೇಡ ಪಮಾತಾಪಿತೃರೇತಸ್ಸಿಂದ ಪತನವಾಗಿ ಪಂಚಭೂತಕಾರ್ಯದಿಂದ ಸ್ಥೂಲಾಕಾರವಾಗಿರೇತಸ್ಸು ರಕ್ತಗಳಾರು ಕೋಶವಾಗಿ ಕರ್ಮಜಾತಕಾಯ ಹೀಗೆ ತೋರುತಿಪ್ಪುದಾಗಿ 1ಹುಟ್ಟಿ ಬೆಳೆದು ನಲಿದು ಮುಪ್ಪಿನಿಂದ ಕ್ಷೈಸಿ ಕಡೆಗೆನಷ್ಡವಾಗಿ ಹೋಗಿ ಮಣ್ಣಿನೊಳಗೆ ಬೆರಸಿಇಷ್ಟೂ ಪರಿಯೊಳಾರು ವಿಕಾರವ ತೋರಿಸಿ ವಂದಿಷ್ಟೂ ಫಲವಿಲ್ಲದಂತೆ ುದಕೆ ಭ್ರಮಿಸಿ 2ಕಾಲಕರ್ಮ ಪಂಚಭೂತ ಮಿಳಿತವಾಗಿ ಇದಕೆಮೂಲವಾದ ಕರ್ಮವೆ ಪ್ರಧಾನವಾಗಿಢಾಳಿಸುವಾತ್ಮನ ತೇಜಾಧಾರವಾಗಿ ಕರ್ಮತೇಲಲಾಗಿ ದೀಪದಂತೆ ಪೋಪುದಾಗಿ 3ಬತ್ತಿಯನ್ನು ಎಣ್ಣೆಮುಗಿವ ಸಮಯಕಾಗಿ ಎಣ್ಣೆಯೂಮತ್ತೆ ತಂದು ತುಂಬೆ ದೀಪ ಪೋಗದಾಗಿಇತ್ತೆರದ ಕರ್ಮದಿಂದ ಚಕ್ರವಾಗಿ ಜನ್ಮಮೃತ್ಯುಗಳೀ ದೇಹಕ್ಕವಧಿುಲ್ಲವಾಗಿ 4ತೈಲಮಿಶ್ರವರ್ತಿಯಗ್ನಿ ಸಮ್ಮೇಳದಿಂದಾ ದೀಪಬಾಳಿಬೆಳಗುವುದು ತೈಲದಾಧಾರದಿಂದಾತೈಲಮುಗಿಯೆ ದೀಪ ಕೆಟ್ಟು ಹೋಹ ಛಂದದಂತೆಕೇಳು ದೇಹವೀಪರಿಯೊಳಿಹುದರಿಂದಾ 5ಹುಟ್ಟಿದಲ್ಲಿ ಸೂತಕವು ಹೊಂದಿದಲ್ಲಿ ಸೂತಕವುಮುಟ್ಟಿವಸ್ತುಗಳುಚ್ಚಿಷ್ಟಂಗಳಹವೂನಟ್ಟನಡುವೆ ಬಂದದೆಂದು ಶಿಷ್ಟರಿದ ಮನ್ನಿಸರುನಷ್ಟವಾಗಿ ಕಡೆಗೆ ತಾನು ಹೋಹ ದೇಹವೂ 6ತಾನು ಬಂದ ಬಗೆಯು ತನಗೆ ತಿಳಿಯದಿದ್ದರೂ ನಿನ್ನಸೂನು ಬಂದ ಬಗೆಯ ನೋಡಿ ತಿಳಿದುಕೊಂಡಾರುಹೀನನಾದ ಕಾಯವಭಿಮಾನಿಸದಿರು ಮುಂದೆಶ್ರೀನಾಥನ ಪದವ ಭಜಿಸಿ ಸುಖದಿಂದಿರುತಿರು 7ಮನವೆ ಮಿಥ್ಯದೇಹದಭಿಮಾನವೇತಕೆ ಬಹುಜನುಮ ಜನುಮದಲ್ಲಿ ದುಃಖದಗೆ ನೂಕೆಕೊನೆಗೂ ಹೀಗೆ ಬಂಧವನ್ನು ಕೊಡುವದಕ್ಕೆ ಮಚ್ಚಿಜಿನುಗುವಿರಿಕೆಯೇನು ಇನ್ನೂ ಬಿಡದೆ ಬಯಕೆ 8ಘೋರರೂಪಾಪಾರಸಂಸಾರಾಂಬುಧಿಯನ್ನೂಮೀರಲೇರು ವೆಂಕಟೇಶನಾಮನಾವೆಯನ್ನುಧೀರಗುರು ವಾಸುದೇವರಂಘ್ರಿಯನ್ನು ಬೇಗಸಾರುವ ವಿವೇಕತನವಂದು ಚೆನ್ನೂ 9ಕಂ|| ಜೀವನು ವಿರತಿಯ ಸಾಧಿಪಭಾವಧಿ ಮನದೊಡನೆ ಕಾಯವ ನೆಚ್ಚದಿರೆನ್ನುತಕೈವಲ್ಯದ ಪಥವ ಪೇಳಲುಜೀವನೊಳಾಡಿದುದು ಕಾಯವಚ್ಚರಿಯೆನ್ನಲೂ
--------------
ತಿಮ್ಮಪ್ಪದಾಸರು
ಕಾಯೇ - ಕಮಲಾಲಯೆ ಶ್ರೀ ಲಕುಮೀ | ಭಕುತ ಸುಪ್ರೇಮಿ ಪ ಕಾಯಜ ಜನನಿಯೆ | ಮಾಯ ಭವದೊಳೆನ್ನಕಾಯ ಮುಳಗದೂ | ಪಾಯವ ಕಲ್ಪಿಸಿ ಅ.ಪ. ಸತಿ ಸತ್ಯ ರುಕ್ಮಿಣಿ ಯನ್ನನು | ಶಿಷ್ಟ ಜನರೊಳಿಟ್ಟು ಶ್ರೇೀಷ್ಠ ಸಾಧನವೀಯೆ 1 ಯಾತ್ರೆ ತೀರ್ಥಂಗಳ ಮಾಡರಿಯೇ | ಕೈ ಮುಗಿವೆನು ಸಿರಿಯೇಪಾತ್ರಾ ಪಾತ್ರಂಗಳ ನಾನರಿಯೇ | ದಾನೆಂಬುದನರಿಯೇಮಾತ್ರಾ ಸ್ಪರ್ಶಂಗಳ ಗೆಲಲರಿಯೇ | ಮನನಿಲ್ಲದು ಸರಿಯೇ |ಗಾತ್ರಗಳಿಸಿತಿದು ವಿಧಾತೃಜನನಿಯೇ | ಸೂತ್ರಗತನ ಈ | ಗಾತ್ರದಿ ತೋರಿಸಿ 2 ಇಂದಿರೆ ಗುರು ಗೋವಿಂದ ವಿಠಲನರಸಿ 3
--------------
ಗುರುಗೋವಿಂದವಿಠಲರು
ಕಾಯೊ ಕರುಣದಿಂದೆನ್ನನು ತೋಯಜಾಕ್ಷನೆ ನೀನು ಪ ಕಾಯೊ ಕರುಣದಿ ತೋಯಜಾಕ್ಷನೆ ನೀನು ಹೇಯ ಜನಮವೆತ್ತಿ ಮಾಯಕೆ ಸಿಲುಕಿದೆ ಅ.ಪ. ಹಿಂದೆ ತಪ್ಪಿದೆನ್ಯಯ್ಯ ಮುಂದೆ ಬುದ್ಧಿಯು ಬಂತು ಸಿಂಧುಶಯನ ನೀನು ಬಂದು ಮೈದೋರಿ 1 ಸತಿಸುತರೆನಗೆ ಅತಿ ಹಿತರೆಂತೆಂದು ಮತಿಭ್ರಾಂತನಾಗಿದ್ದೆ ಪತಿತ ಪಾವನನೆ 2 ಕೊಟ್ಟು ಆದರಿಸಲು ಇಷ್ಟ ಮಿತ್ರರು ಇದ್ದು ಕೆಟ್ಟುಪೋದಮೇಲೆ ಕೈಬಿಟ್ಟರು ನೀ ಬಿಡಬೇಡ 3 ತಂದೆತಾಯಿಯು ನೀನೆ ಬಂಧು ಬಳಗವು ನೀನೆ ಇಂದಿರೆರಮಣನೆ ಬಂಧವ ಬಿಡಿಸೀಗ 4 ಕರುಣಾಸಾಗರ ನಿನ್ನ ಮರೆಹೊಕ್ಕೆ ನಾನೀಗ ಶರಣರ ಪೊರೆಯುವ ರಂಗೇಶವಿಠಲನೆ 5
--------------
ರಂಗೇಶವಿಠಲದಾಸರು
ಕಾಯೊ ಕಾಯೊ ಕಾಯೊ ಕಾಯೊ ಕೃಪಾನಿಧಿ ಕಾಯೊ ಕೃಪಾಳು ಸದ್ಗುರು ದಯ ನೀ ಪಾಲಿಸಿ ಸೋಹ್ಯಸೊನ್ನೆ ಸೂತ್ರಗುಹ್ಯ ಗೂಢದೋರಿ ಸಾಹ್ಯಮಾಡೊ ಸ್ವಾಮಿ ಸಾಕ್ಷಾತ್ಕಾರ ನೀ ದೋರಿಸಿ ನ್ಯಾಯದಲಿ ಮಿಥ್ಯಾಮಾಯ ಮೊನೆಮುರಿಸಿ ತೋಯಜಾಕ್ಷ ನಿಮ್ಮ ಶ್ರಯ ಸುಖ ಬೀರಿ ಭವ ಭಯ ಹರಿಸೊ ಗುರು ಕರುಣಿಸೊ 1 ನಾನಾರು ಎಂದು ಸಾಖೂನ ತಿಳಿಯದೆ ನಾನಾ ಯೋನಿಮುಖ ಜನಿಸಿ ಬಂದೆÀನಯ್ಯ ಜನುಮ ಜ್ಞಾನಗಮ್ಯವಾದ ಸ್ಥಾನದೋರಿ ನಿಜ ಧ್ಯಾನ ಮೌನದನುಭವ ಸುಖ ನೀಡೊ ನಿಮ್ಮ ನ್ಯೂನ ಪೂರ್ಣ ಎನ್ನ ನೀ ನೋಡದೆ ಸ್ವಾಮಿ ಸ್ವಾÀನುಭವದ ಸುಜ್ಞಾನ ದೀಪಲಿಡೊ ನಮ್ಮ ಮನೋನ್ಮನವಾಗಿ ಘನ ಕೈಗೂಡುವಾ ಸನ್ಮತ ನೋಡಿ ಸುವರ್ಮ 2 ನೋಡದೆ ಗುಣದೋಷ ಮಾಡಿ ಉಪದೇಶ ದೃಢಭಾವದ ಸುಪಥ ಒಡನೆ ಗೂಡಿಸೊ ನೋಡಿ ದೃಷ್ಟಿಲೆನ್ನ ಒಡೆಯ ಸದ್ಗುರು ಪೂರ್ಣ ಓಡಿಹೋಗುವಂತೆ ಭಕ್ತಿ ಜ್ಞಾನ ವೈರಾಗ್ಯವಿಡಿಸೊ ನೀಡಿ ಅಭಯಕರುಣಕವಚವ ತೊಡಿಸೊ ಪಿಡಿದು ಎನ್ನ ಕೈಯಾ ಮೂಢ ಮಹಿಪತಿಯ ಬಿಡದೆ ಕಡೆಗಾಣಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಸುಖಸಾರ ಮಾಯಾವಿದೂರ ಭಾವಜನಯ್ಯ ಭಕುತರ ಪ್ರಿಯಕರ ಪ ಕಾಯಕಾಂತಾರದೊಳು ನೋಯುತ ವಿಧ ವಿಧ ಬಾಯ ಬಿಡುವೆನಯ್ಯ ತೋಯಜಾಕ್ಷನೆ ನೋಡೊ 1 ಸಂಸಾರತೆರೆಯೊಳು ಹಿಂಸೆ ಪಡುತ ಮತಿ ಕಂಸಾರಿ ಕರುಣಿಸೊ 2 ಜಡಭವತೊಡರನು ಕಡೆಹಾಯ್ಸಿ ಕೊಡುಮುಕ್ತಿ ಕಡುದಯಾನಿಧೆ ಎನ್ನೊಡೆಯ ಶ್ರೀರಾಮನೆ 3
--------------
ರಾಮದಾಸರು
ಕಾರು ಯಾರಮನೆಗುಂಟು ಖೋಡಿ ಚೋರತ್ವದಪಹಾರ ಮಾಡಿ ತಿಂದದ್ದೆಲ್ಲ ಪ ಕಾಯಜನಯ್ಯನ ದಿವ್ಯ ಚರಿತಗಳನ್ನು ಬಾಯಿಂದ ಪೊಗಳುತ ಕೈಯಿಂದ ಬರೆದು ಮಾಯಾಮೋಹವ ಬಿಡದೆ ನ್ಯಾಯಮಾರ್ಗವತಪ್ಪ ನ್ಯಾಯದಿಂ ಪರರೊಡವೆ ಬಾಯ್ಬಡಿದು ತಿಂದದ್ದು 1 ನಳಿನನಾಭನ ವಿಮಲ ಸುಲಲಿತ ಮಹಿಮೆಗಳ ತಿಳಿದು ಆನಂದದಿಂ ನಲಿನಲಿದು ಹಿಗ್ಗದೆ ಇಳೆಯ ವಾಸನೆಯಿಂದ ಅಳಿವ ಸುಖದಾಸೆಗೆ ಇಳೆಜನರ ಗಳಿಕೆಯನು ಕಳವಿನಿಂ ತಿಂದದ್ದು 2 ಭೂಮಿಯೊಳಧಿಕ ಶ್ರೀರಾಮನ ದಾತೃತ್ವ ಹೇ ಮನವೆ ನೀ ತಿಳಿದು ಪಾಮರತ್ವ ಬಿಡದೆ ಕಾಮಿತದೊಳು ಬಿದ್ದು ಭೂಮಿ ಜನರೆದುರಿಗೆ ಸ್ವಾಮಿಭಕ್ತಿಯ ತೋರಿ ಕಾಮಿಸಿ ತಿಂದದ್ದು 3
--------------
ರಾಮದಾಸರು