ಒಟ್ಟು 930 ಕಡೆಗಳಲ್ಲಿ , 79 ದಾಸರು , 614 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋ ಜೋ ಜೋ ಜೋ ಎನ್ನಿ ನಿರ್ವಿಕಾರಗೆಜೋ ಎಂದು ತೂಗಿರಿ ಚಿದಾನಂದ ದೊರೆಗೆ ಪ ಚಿದ್ಬಯಲಿನೊಳು ಹೃದಯ ತೊಟ್ಟಿಲ ಮಾಡಿಬದ್ಧ ವೇದಾಂತದ ನೇಣ ಬಿಗಿದುಸದ್ಭಾವವೆಂಬ ಹಾಸಿಗೆಯ ಹಾಸಿಶುದ್ಧಾತ್ಮನನು ಭಾವದಿ ತಂದು ನೀಡಿ 1 ಅದ್ವೈತವೆಂಬ ಆಭರಣ ತೊಡಿಸಿಸಿದ್ಧ ಭೂಮಿಕೆ ಎಂಬ ಅಡವನಿಡಿಸಿಬುದ್ಧಿ ನಿರ್ಮಳವಾದ ತಲೆದಿಂಬನಿಡಿಸಿನಿದ್ದೆ ಮಾಡೋ ಬ್ರಹ್ಮಾನಂದ ಬೋಧದಲಿ 2 ಚಿತ್ಪ್ರಭೆಯ ದೀಪವನು ಎಡಬಲದಿ ಹಚ್ಚಿಮೊತ್ತವಹ ದಶನಾದ ಭೇರಿಯರವ ಹಚ್ಚಿಮತ್ತೆ ಓಂಕಾರ ಮಂತ್ರ ಘೋಷದಿ ಮುಚ್ಚಿನಿತ್ಯಾತ್ಮನನು ನೋಡಿ ಹರುಷ ತುಂಬುತಲಿ 3 ವಸ್ತು ಸಾಕ್ಷಾತ್ತೆಂಬ ಮುತ್ತೈದೆಯರೆಲ್ಲಸ್ವಸ್ಥ ಚಿತ್ತೆಂಬುದನೆ ಸಿಂಗರಿಸಿಕೊಂಡುನಿಸ್ಸಂಗನಹ ಆತ್ಮ ಶಿಶುವನೊಡತಂದುಸುಸ್ವರದ ನಾದದಲಿ ಜೋಗುಳವ ಪಾಡುತಲಿ 4 ಜೋ ಜೋ ಕಾಮಸ್ತಂಭವ ಎನ್ನಿ ನರರೆಲ್ಲಜೋ ಜೋ ಕ್ರೋಧ ಸ್ತಂಭನ ಎನ್ನಿ ನರರೆಲ್ಲಜೋ ಜೋ ಮೋಹ ಸ್ತಂಭನ ಎನ್ನಿ ನರರೆಲ್ಲಜೋ ಜೋ ವಿಷಯ ಸ್ತಂಭನ ಎನ್ನಿ ನರರೆಲ್ಲ5 ಜೋ ಜೋ ಯಮನಿಯಮಾಸನ ಅರುಹಿದವನೆಜೋ ಜೋ ಜೋ ಜೋ ಖೇಚರ ಮುದ್ರೆ ನಿಲಿಸಿದವನೆಜೋ ಜೋ ಜೋ ಜೋ ಅವಿದ್ಯೆ ಖಂಡಿಸಿದವನೆಜೋ ಜೋ ಜೋ ಜೋ ಜೀವನ್ಮುಕ್ತಿದಾತನೆ 6 ಜೋ ಜೋ ಪರಮಾರೂಢನೆ ಪರಮೇಶಜೋ ಜೋ ಪರಮ ಪರೇಶನೆ ಪಂಡಿತಜೋ ಜೋ ನಿರುತ ವಸ್ತು ವ್ಯಕ್ತ ಅವ್ಯಕ್ತಜೋ ಜೋ ಶರಣ ರಕ್ಷಕ ರಾಜ ಯೋಗೀಂದ್ರ ಜೋ ಜೋ 7 ಸತ್ಯ ಸನಾಥ ವಿಶ್ವೋತ್ಪತ್ತಿ ಜೋ ಜೋಪ್ರತ್ಯಗಾತುಮ ಪರಬ್ರಹ್ಮನೆ ಜೋ ಜೋನಿತ್ಯ ಸಹಜಾನಂದ ಚಿನ್ಮಾತೃ ಜೋ ಜೋಭಕ್ತರ ಭಂಡಾರಿ ಭಾಗ್ಯನೆ ಜೋ ಜೋ 8 ಮಿಹಿರ ಶತಕಳೆಯೆಂಬ ಮಂತ್ರಪುಷ್ಪವ ಚೆಲ್ಲಿಮಹಾ ಬೆಳಕಿನ ಮಂಗಳಾರತಿಯ ಬೆಳಗುತಲ್ಲಿಅಚಲ ಸಮಾಧಿಯೆ ಆದ ಯೋಗನಿದ್ರೆಯಲಿಮಹಾ ಚಿದಾನಂದಾವಧೂತ ಮಲಗಿರು ಸುಖದಲ್ಲಿ 9
--------------
ಚಿದಾನಂದ ಅವಧೂತರು
ಜೋ ಜೋ ರಂಗಯ್ಯ ಜೋ ಜೋ ಕೃಷ್ಣಯ್ಯ ಮಲಗಯ್ಯ ಜೋ ಜೋ ಪ ಕಣ್ಣೇಕೆ ನೀನು ಮುಚ್ಚಲೊಲ್ಲೆಯೊ ರಂಗ ಬೆನ್ನು ಭಾರವಾಗಿರುವುದೇನೋ ದೇವ ಮಣ್ಣಿನೊಳು ನೀನಾಡಿ ಮೈ ನೋಯುವುದೇನೊ ಹೊನ್ನು ಕಶಿಪುವಿನ ಕರುಳ ಕಂಡಂಜಿದೆಯೇನೊ 1 ಚಿಣ್ಣ ನೀ ಧರೆಯನಳೆಯಲೇತಕೆ ಪೋದೆ ಗಣ್ಡುಗೊಡಲಿ ಪಿಡಿದು ಕೈಯಿ ಉಳುಕಿಹುದೇನೊ ಅನ್ನವ ಬಿಟ್ಟು ನೀ ಪರ್ನವೇತಕೆ ತಿಂದೆ ಬೆಣ್ಣೆಯ ಮೆದ್ದು ನಿನ ಹೊಟ್ಟೆ ನೊಯ್ಯುವದೇನೊ 2 ಬತ್ತಲೆ ತಿರುಗಿ ಮೈ ಬಿಸಿಯಾಗಿರುವದೇನೊ ಕತ್ತಿಯ ಪಿಡಿದು ತೇಜಿಯ ಹತ್ತಬೇಕೇನೊ ಹೊತ್ತಾಯ್ತು ಕಂದಯ್ಯ ಮಲಗೆಂದು ಯಶೋದೆ ಮುತ್ತಿಟ್ಟು ತೂಗಿದಳು ರಂಗೇಶವಿಠಲನ 3
--------------
ರಂಗೇಶವಿಠಲದಾಸರು
ಜೋಜೋ ಜೋಜೋ ಲಾಲಿ ಗೋವಿಂದ ಜೋಜೋ ಜೋಜೋ ಲಾಲಿ ಮುಕುಂದ ಜೋಜೋ ಜೋಜೋ ಲಾಲಿ ಆನಂದ ಜೋಜೋ ಜೋಜೋ ಲಾಲಿ ಗೋಪಿಯ ಕಂದ ಪ ಚಿನ್ನದ ತೊಟ್ಳಿಗೆ ರನ್ನದ ಮಲುಕು ಕನ್ನಡಿ ಹೊಳೆವೊ ಮೇಲ್ಕಟ್ಟಿನ ಬೆಳಕು ಸ್ವರ್ಣ ಮಂಟಪದಿ ರಾಜಿಪದಿವ್ಯ ಹೊಳಪು ಕರ್ನೇರಲಂಕರಿಸಿ ನಲಿಯುವ ಕುಲುಕು ಜೋ ಜೋ1 ಅರಿಶಿನ ಕುಂಕುಮ ಗಂಧ ಪುಷ್ಪಗಳು ಸರಸೀಜಾಕ್ಷಗೆ ಮುತ್ತಿನ್ಹಾರ ಪದಕಗಳು ಸುರರೊಡೆಯಗೆ ಪಟ್ಟೆ ಪೀತಾಂಬರಗಳು ಹರುಷದಿಂದಿರಿಸಿ ನಲಿವ ಸ್ತ್ರೀಯರುಗಳು ಜೋ ಜೋ2 ಮುತ್ತೈದೆಯರೆಲ್ಲ ಬಂದು ನೆರೆದರು ಉತ್ತಮ ಸ್ವರ್ಗ ಕಲಶವ ಪೂಜಿಸುವರು ಚಿತ್ತಜನಯ್ಯನ ಎತ್ತಿಕೊಂಡಿಹರು ಜೋ ಜೋ3 ಕೇಶವನನ್ನು ತನ್ನಿ ನಾರಾಯಣನ್ನ ಮಾಧವ ಗೋವಿಂದನನ್ನ ಸಾಸಿರ ನಾಮದ ವಿಷ್ಣು ಮಧುಸೂದನನ್ನ ಸೋಸಿಲಿ ತ್ರಿವಿಕ್ರಮ ವಾಮನನ್ನ ಜೋ ಜೋ 4 ಶ್ರದ್ಧೆಯಲಿ ಶ್ರೀಧರ ಹೃಷಿಕೇಶನನ್ನ ಪದ್ಮನಾಭನ ಕೊಳ್ಳಿ ದಾಮೋದರನ್ನ ಶುದ್ಧ ಮನದಿ ಸಂಕರ್ಷಣ ವಾಸುದೇವನನ್ನ ಪ್ರದ್ಯುಮ್ನನನು ತನ್ನಿ ಅನಿರುದ್ಧನನ್ನ ಜೋ ಜೋ5 ಪುರುಷೋತ್ತಮನ ಕೊಳ್ಳಿ ಅದೋಕ್ಷಜನನ್ನ ನಾರಸಿಂಹನ ತನ್ನಿ ಅಚ್ಚುತನನ್ನ ಸರಸದಿ ಜನಾರ್ದನ ಉಪೇಂದ್ರನನ್ನ ಹರುಷದಿಂದಲಿ ಕೊಳ್ಳಿ ಹರಿ ಶ್ರೀಕೃಷ್ಣನನ್ನ ಜೋ ಜೋ 6 ಹೀಗೆಂದು ತೂಗುತ ಜೋಗುಳ ಹಾಡಿ ನಾಗವೇಣಿಯರು ಸಂಭ್ರಮದಿಂದ ಕೂಡಿ ಆಗ ಕಮಲನಾಭ ವಿಠ್ಠಲನ್ನ ನೋಡೀ ಬೇಗ ರಕ್ಷೆಗಳನಿತ್ತರು ತ್ವರೆ ಮಾಡಿ ಜೋ ಜೋ 7
--------------
ನಿಡಗುರುಕಿ ಜೀವೂಬಾಯಿ
ತÉೂೀರೆ ಬೇಗನೆ ತೋಯಜನಯನೆಮದವಾರಣ ಗಮನೆ ಪ ಮಾರನ ತಾಪವ ಸೈರಿಸಲಾರೆನೆನೀರೆ ನಿನಗೆ ಮುತ್ತಿನ್ಹಾರವ ಕೊಡುವೆನೆ ಅ.ಪ ನೀರೊಳು ಮುಳು ಮುಳುಗಾಡುತ ಬಂದುಮಥಿಸಿದ ಪಯ ಸಿಂಧುಧಾರುಣಿ ಚಿಮ್ಮುತ ಮೇಲಕೆ ತಂದುದನುಜನ್ನ ಕೊಂದುಮೂರುಪಾದವ ಬೇಡುತ ನಿಂದುಮುನಿಕುಲದಲಿ ಬಂದುನಾರಿಬಿಟ್ಟು ಪರನಾರಿಯರಾಳಿದತೋರೆರಮಣಿ ಹಯವೇರಿ ಮೆರೆದನ 1 ಕತ್ತಲೆ(ತಾಮಸ ದೈತ್ಯ)ನೊಡನೆ ಕಾದಿದನು ಧೀರಕಡೆದನು ಕೂಪಾರಕುತ್ತಿ ಮಣ್ಣಗಿದು ಮೆದ್ದನು ಬೇರದಾನವ ಸಂಹಾರ ಒತ್ತಿ ಬಲಿಯನು ಕಾಯ್ದನು ಶೂರಕುಜನ ಕುಠಾರ ಹತ್ತು ಶಿರನ ಕತ್ತರಿಸಿ ಗೋಕುಲದೊಳುಬತ್ತಲೆ ರಾಹುತನಾಗಿ ಮೆರೆದನ 2 ನಿಗಮ ಕದ್ದವನ ನೀಗಿದ ಧಿಟ್ಟನೆಗಹಿದ ಬೆಟ್ಟಅಗಿದು ಮಣ್ಣನೆ ಜಠರದಲ್ಲಿಟ್ಟಘುಡಿ ಘುಡಿಸುವಸಿಟ್ಟಜಗಕೆಲ್ಲ ನೋಡೆ ಎರಡಡಿಯಿಟ್ಟಕೊಡಲಿಯ ಪೆಟ್ಟಮೃಗವ ಕೆಡಹಿ ಕುಂತಿಮಗಗೆ ಸಾರಥಿಯಾಗಿಜಗವ ಮೋಹಿಸಿ ಹಯವೇರ್ದ ಶ್ರೀಕೃಷ್ಣನ 3
--------------
ವ್ಯಾಸರಾಯರು
ತಡವ ಮಾಡಲಿ ಬೇಡ ಹಡೆದವ್ವ ಎ ನ್ನೊಡೆಯನನು ಹುಡುಕಿ ತಾರೆ ಪಿಡಿವೆ ಪಾದವ ಪ ತಡವ ಮಾಡದೆ ಪೊಡವಿಯೊಳು ಕಡು ಸಡಗರಾರ್ಯನ ಹುಡುಕಿ ತಂದರೆ ಹಡೆದು ನಿನ್ನ್ಹೆಸರಿಸಿವುವೆನೆನ್ನವ್ವ ಸರಿಮಾಡ್ವೆನವ್ವ ಅ.ಪ ಜೀವದರಸನ ಹಂಬಲೆನಗವ್ವ ಅತ್ಯಧಿಕವಾಗಿ ಕಾಯಸೊರಗಿ ಕ್ಷೀಣವಾಯ್ತೆವ್ವ ಪ್ರಾಯಬಂದರೆ ಸುಮ್ಮನೆ ಹೋಗುತಾದವ್ವ ಪ್ರಾಯಕ್ಕೆ ತಕ್ಕ ಚಾಯಗಾರ ಕಂಡೇನ್ಹೇಗವ್ವ ಕಾಯರಹಿತ ಕಾರುಣ್ಯನಿಧಿ ಮಾಯತಿಳಿಯುವರಿಲ್ಲ ಆತನ ದಿವ್ಯಚರಿತ ನೆನೆದು ನೆನೆದು ಬಾಯ ಬಿಡುವೆನೆ ಆಯತಾಂಬಕಿ 1 ವಸ್ತೊಡೆವೈಷ್ಟಿರಲು ಏನವ್ವ ಅತಿಶೋಭೆಯೆನಿಪ ಮುತ್ತುಯಿಲ್ಲದ ಮೋರೆಯಾಕವ್ವ ಹತ್ತಿರಕೆ ಬರಗೊಡರವ್ವಾ ಮುತ್ತೈದೆರೆಲ್ಲರು ಅತ್ತ ಇತ್ತೆಂದೆಳೆಯುತಿಹ್ಯರವ್ವ ಮತ್ತೆ ಬೇಡಲು ದೊರೆಯದಂಥ ಹೊತ್ತು ಸುಮ್ಮನೆ ಹೋಗುತಿದೆ ಕರ್ತ ತುರ್ತು ದೊರೆಯದನಕ ಚಿತ್ತ ಸ್ವಸ್ಥವಾಗದವ್ವ 2 ಭೂಮಿತ್ರಯದೊಳಧಿಕ ಕೇಳವ್ವ ಆತನಹೆಸರು ಕಾಮಿತವನೀಗರಿತುಕೊಂಡೆನವ್ವ ನೇಮದಿಂದ ಭಜಿಸುತಿಹೆನವ್ವ ಎನ್ನಕಡೆಗಾತ ಪ್ರೇಮದಿಂದ ಸುಳಿಯದಿಹ್ಯನವ್ವ ಭಾಮೆಬಾರೆಂದು ಬದಿಲಿಕರೆದು ಪ್ರೇಮದಿಂದ ಅಪ್ಪಿ ನಿನ್ನಯ ಸ್ವಾಮಿ ಶ್ರೀ ರಾಮ ನಾನೆಂದ್ಹೇಳಲು ಕ್ಷೇಮ ಪಡೆದು ಬಾಳ್ವೆನವ್ವ 3
--------------
ರಾಮದಾಸರು
ತಂದುಕೊಟ್ಟಳು ವೀಳ್ಯ ಮಂದಗಮನೆ ಗೋಪಿನಂದನವನ ನಿಧಿ ಆನಂದನ ಕರದಿ ಪ ಮುತ್ತು ಬಿಗಿದ ನವರತ್ನದ ತಬಕದಿಕೆತ್ತಿದ ಕಂಕಣ ಶೋಭಿತ ಉತ್ತಮ ಕರದಿ 1 ನಾಗವಲ್ಲಿಯ ದಳಾ ಪುನುಗು ಪತ್ತರಿಜಾಜಿ ಭಾಗ ಕಾದಿರೆ ನಾನಾ ಭೋಗ ದ್ರವ್ಯಗಳುಳ್ಳ 2 ಭೂಷಿತಾಂಗಿಯು ಮಂದಹಾಸಾ ಮಾಡುತ ಇಂದಿ-ರೇಶನೆದುರಲಿ ಇಭರಾಶಿ ಸುಂದರಿಯು 3
--------------
ಇಂದಿರೇಶರು
ತನು ಸಹ ಕಾಂಬುದೆ ಬ್ರಹ್ಮಸತ್ಯವು ಸತ್ಯವ ಕೇಳೆಲೋ ತಮ್ಮತನು ಸಹ ಕಾಂಬುದೆ ಬ್ರಹ್ಮತನುವನು ಬಿಟ್ಟು ಬೇರೇನೂ ತೋರದುನಿನಗೆ ಅರಿದು ನಿಮ್ಮಪ್ಪಗೆ ಅರಿದು ಪ ಹೂವನೆ ಮುಂದೆ ಮುಂದಿಟ್ಟುಕೊಂಡುಸರ ಕಟ್ಟಬಹುದು ದೊಡ್ಡ ಚೆಂಡುಹೂವನೆ ಮುಂದಿಟ್ಟಿಕೊಂಡುಹೂವನೆ ಬಿಟ್ಟು ಪರಿಮಳ ಕಟ್ಟೆನೆಅವ್ವಗೆ ಅರಿದು ಅವ್ವನವ್ವಗೆ ಅರಿದು1 ಮುತ್ತದು ಕೇವಲ ಜ್ಯೋತಿ ಕಿವಿಗೆಮುತ್ತಿಡುವರಿಗದು ನೀತಿಮುತ್ತದು ಕೇವಲ ಜ್ಯೋತಿಮುತ್ತದು ಬಿಟ್ಟು ಜ್ಯೋತಿಯ ಬಿಡು ಎನೆಮುತ್ತದು ಅಜಗೆ ಅರಿದು ಮಹೇಶ್ವರಗರಿದು2 ಬೆಲ್ಲದ ಮುದ್ದೆಯ ನೋಡುಹಲ್ಲಿನಿಂದಲೇ ತಿನಬೇಕು ಕಡಿದುಬೆಲ್ಲದ ಮುದ್ದೆಯ ನೋಡುಬೆಲ್ಲವನು ಬಿಟ್ಟು ಸಿಹಿಯನು ತಿನ್ನೆನೆಬಲ್ಲ ಚಿದಾನಂದ ಸದ್ಗುರುಗರುದು 3
--------------
ಚಿದಾನಂದ ಅವಧೂತರು
ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ
ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ ಋಷಿಯ ಸಂತತಿಯು ಧ್ರುವ ಆನಿ ಮೊದಲಿರುವೆ ಕಡೆ ಅಣುಮಾತ್ರಾಕಾರವನು ಮುನ್ನ ಬರೆದಂತೆ ತಾನಡೆಯುತಿಹಂದು ಇನ್ನು ಮುತ್ತನ್ಯ ದೈವಕ ಬಯಸಿ ಬೇಡಿದರೆ ಮುನ್ನಿಗೆ ಕೊಡಬಲ್ಲವೆ ಬಿನಗುದೈವವು 1 ಭಿನ್ನವಿಲ್ಲದೆ ತನುವಿನೊಳು ಆನಂದ ಘನ ಉನ್ನತ ಮಹಿಮ ಪರಿಪೂರ್ಣವಿರಲು ಮೂರ್ತಿ ಶ್ರೀಪಾದವನು ಅನುದಿನ ಭಜಿಸಿ ಘನ ಸುಖವ ಪಡಿಯೊ ಮನವೆ 2 ಕಕ್ಕುಲಾತಿಯ ಬಟ್ಟು ಕಂಡವರ ಕಾಲ್ಗೆರಗಿ ಫಕ್ಕಸಾರಿಯ ಧರ್ಮ ಜರಿಯ ಬ್ಯಾಡ ಸಕಲ ಸಹಕಾರ ಮಹಿಪತಿಸ್ವಾಮಿ ನಿನಗಿರಲು ಭಕುತಿ ಮುಕುತಿಯ ಉಂಟು ಮೂಢ ಜನವೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾಮರಸ ನೆರೆನಂಬಿದೆ ಪೊರೆಯೆನ್ನನು ಪ ಜನನ ಮರಣವಿದೂರ ನೀನಾಜನಪತಿಯ ತನುಜಾತನೆ ಅನಿಮಿಷೇಶರಿಗೊಡೆಯನೆನಿಸಿದೆ 1 ಶ್ರೀರಮಣಿಯನಾದಿಕಾಲದಿ ನಾರಿಯನಿಪಳು ನಿನ್ನಗೆ ಮಾರಹರಶರಮುರಿದು ಹರುಷದಿ ವಾರಿಜಾಕ್ಷೆಯ ವರಿಸಿದೆ 2 ಮೂಜಗತ್ಪತಿಯಂದಿಗೆಂದಿಗು ರಾಜ್ಯತೊಲಗಿದನೆನಿಸಿದೆ ಈ ಜಗದೊಳಿಹ ಅಜ್ಞ್ಞಜನರಿಗೆ ಸೋಜಿಗವ ನೀತೋರಿದೆ 3 ಶ್ರೀಲಕುಮಿ ಪತೆ ನಿನ್ನ ಮಹಿಮಾ ಜಾಲದಿವಿಜರು ತಿಳಿಯರು ನೀಲಮೇಘಶ್ಯಾಮ ಶಿಲೆಬಾಲೆ ಮಾಡಿದು ಚೋದ್ಯವೆ 4 ಮುತ್ತುರತ್ನ ಕಿರೀಟ ಶಿರದಲಿ ಇತ್ತಿಹ್ಯರ್ಕಶತÀಪ್ರಭಾ ನೆತ್ತಿಯಲಿ ಜಡೆಧರಿಸಿ ವಲ್ಕಲ ಪೊತ್ತು ತಿರುಗುವುದುಚಿತವೇ 5 ಕುಜಭವ ಭವರರ್ಪಿಸಿದ ಎಡೆ ಭುಂಜಿಪುದು ನೀವಿರÀಲವೋ ಅಂಜಿಕಿಲ್ಲದೆ ಭಿಲ್ಲಹೆಂಗಳೆಯಂಜಲವ ನೀ ಮೆದ್ದಿಯಾ 6 ಮಂಗಳಾಂಘ್ರಿಯ ಭಜಿಪಯೋಗಿ ಜನಂಗಳಿಗೆ ನೀನಿಲುಕದೆ ಮಂಗಗಳಿಗೆ ನೀನೊಲಿದಿಯಾ 7 ಹಾಟಕಾಂಬರ ತಾಟಕಾರಿ ವಿರಾಟ ಮೂರುತಿ ಎನ್ನಯ ಕೋಟಲೆಯ ಕಡುತಾಪದಿಂಕಡೆದಾಟಿಸೆನ್ನನು ಜವದಲಿ 8 ಭಾರವಿಲ್ಲದೆ ಅಖಿಲಜಗಸಂಹಾರ ಮಾಡುವಿಯನುದಿನ ಕ್ರೂರರಾವಣ ಮುಖ್ಯದನುಜರಹೀರಿ ಬಿಸುಟಿದು ಜೋದ್ಯವೆ 9 ಶಾಂತಿಯ ಪೆÇಂದಿದ ಹರನ ಪೂಜಿಯಗೈದಿಯಾ 10 ವಾರಿಜಾಭವ ಮುಖ್ಯದಿವಿಜರು ಪಾರುಗಾಣದೆ ಮಹಿಮನೆ ಸಾರಿ ಭಜಿಸುವ ಭಕ್ತರಿಗೆ ಕೈವಾರಿಯಂದದಿ ತೋರುವಿ 11 ತಾಮಸರ ಸಂಗದಲಿ ನೊಂದೆನು ಕಾಮಕ್ರೋಧದಿ ಬೆಂದೆನು ಈ ಮಹಿಗೆ ನಾಭಾರವಾದೆನು ಪ್ರೇಮದಿಂದಲಿ ಪಾಲಿಸು 12 ನಿನ್ನಧ್ಯಾನವ ತೊರೆದು ನಾಬಲು ಅನ್ಯವಿಷಯದಿ ರಮಿಸಿದೆ ಎನ್ನ ದೋಷಗಳೆಣಿಸದಲೆ ಕಾರುಣ್ಯಸಾಗರ ಕರುಣಿಸು 13 ಹೀನ ವಿಷಯಾಪೇಕ್ಷೆ ಬಿಡಿಸಜ್ಞಾನತಿಮಿರವ ನೋಡಿಸು ಮೌನಿ ಮಧ್ವಾರ್ಯರ ಮತದ ವಿಜ್ಞಾನ ತತ್ವವ ಬೋಧಿಸು 14 ಸಾಮಗಾನವಿಲೋಲ ರಘುಜನೆ ನೇಮದಿಂದಲಿನೀಯನ್ನ ನಾಮವನೆ ಪಾಲಿಪುದು ಸಚಿದ್ಧಾಮ ವರದೇಶ ವಿಠಲನೆ15
--------------
ವರದೇಶವಿಠಲ
ತಾರೆನ್ನ ಹುಂಡಿ ರಂಗ ತಾರೆನ್ನ ಹುಂಡಿ ಪ ಅತ್ತರೇನು ಕಂಗಳಿಂದ ಮುತ್ತುದುರುವುದಿಲ್ಲ ಮತ್ತೆ ನಮ್ಮ ಮೇಲೆ ಹುಂಡಿ ಹೊತ್ತರೆ ನೀ ಬಿಟ್ಟೆಯೇನೊ 1 ವಾರಿಜಾಕ್ಷ ನಿನ್ನ ಬಿಡು - ವರೆಯೇನೋ ಬೆನ್ನ ಮೇಲೆ ಹಾರಿ ಹೊತ್ತು ಕೊಂಡು ಭಾರ ಹೇರದೆ ನೀ ಬಿಟ್ಟೆಯೇನೊ 2 ತೊಟ್ಟಿಲ ಹೋಗೆಂದರೆ ಸಿಟ್ಟು ಮಾಡುವಿಯೋ ಶ್ರೀದ- ವಿಠಲನ್ನ ಕೂಡಾಡದೆ ನೀ ಬಿಟ್ಟರೆ ನಾವು ಬಿಡುವರಲ್ಲ 3
--------------
ಶ್ರೀದವಿಠಲರು
ತಿರುಮಲೇಶನೆ ನಿನ್ನ ಚರಣ ಪಂಕಜಯುಗಲ ನೆರೆನಂಬಿದವ ಧನ್ಯನೋ ಪ ಗುರು ಮೂಲ ಪುರುಷ ನಾರಪ್ಪಯ್ಯ ಮುನಿಗೊಲಿದು ಕುರಿಕಿಹಳ್ಳಿಯಲಿ ಬಂದಾ ನಿಂದಾ ಅ.ಪ ವರಋಷಿಯ ಪೂರ್ವದಲಿ ತಿರುಪತಿಯ ಮುಟ್ಟಿ ಮಲ- ಗಿರಲು ಸ್ವಪ್ನವ ಕಾಣುತ ತುರುರೂಪದಲಿ ನಾನೆ ಬರುವೆ ಕಾ- ರ್ಪರ ವನಕೆ ದರುಶನವÀÀ ಕೊಡುವೆ ನಿರುತ ಬರುತ ಬರುತಲಿ ವಿಪ್ರ ತಿರುಗಿ ನೋಡಲು ಪದದಿ ಕಿರುಗಜ್ಜೆಗಳ ನುಡಿಸುತಾ ಕುರಿಕಿ ಹಳ್ಳಿಯ ಸುಮಂದಿರನೆನಿಸಿ ಸಿರಿಸಹಿತ ವರಶಿಲೆಯ ಮೇಲೆ ಪಾ ಲ್ಗರಿದು ನೆಲೆಸಿರುವಂಥ 1 ತೋಂಡಮಾನಕ್ಷಿತಿಪ ಪುಂಡಲೀಕಾದಿ ಬಹು ತೋಂಡರಿಗೆ ಒಲಿದು ದೇವಾ ಕುಂಡಲಿ ಪರ್ವತದಿ ತಂಡತಂಡದಿ ಭಕುತ ಮಂಡಲಿಗೆ ಫಲವ ಕೊಡುವ ದುಂಡುಮುತ್ತಿನಹಾರ ಮುಕುಟ ರತ್ನಾಭರಣ ಮಂಡಿತನಾಗಿ ಮೆರೆವ ಕಂಡೆನಾನಿಮ್ಮ ಪದ ಪುಂಡಲೀಕವನು ಈ ಗುಂಡಿನಾ ತಿಮ್ಮಯ್ಯನೆಂದು ಕರೆಸಿಕೊಳುವಿ 2 ಕರಮುಗಿವೆ ಮನ್ಮನದಿ ಕರುಣದಲಿ ತೋರೋತವ ಪರಮ ಸುಂದರ ಚರಣವ ನಿರುತ ಸ್ಮರಿಸುವ ಜನರ ದುರಿತ ತಿಮಿರಕೆ ದಿವಾ ಕರನೆನಿಸಿ ಸುಖವಗರಿವಾ ಸೇವ್ಯ ಕಾರ್ಪರನಿಲಯನೆನಿಸೆ ಬಹು ಶರಣು ಜನರನು ಪೊರಿಯುವಾ ವರಕೃಷ್ಣ ಗರ್ಭದಲಿ ಒಪ್ಪುವ ಪಿಪ್ಪಲಸ್ಥಶ್ರೀ ನರಹರಿಯ ಬಳಿಯಲಿರುವಾಮೆರೆವಾ 3
--------------
ಕಾರ್ಪರ ನರಹರಿದಾಸರು
ತಿಳಿಯ ಬರದೆಲೆ ಮನವೆ, ತೀರ್ಥ ಯಾತ್ರೆಯ ಫಲವು ಪ ಸುಲಭದಲಿ ಸದ್ಗತಿಯ ಸೂರೆಗೊಂಬುವರಿಗಲ್ಲದೆ ಅ ನೂರೆಂಟು ತಿರುಪತಿಯ ಯಾತ್ರೆಯನು ನಾನೊಲ್ಲೆವಾರದೊಂದ್ಹೊತ್ತು ಉಪವಾಸವನು ನಾನೊಲ್ಲೆಸಾರ ರೇಣುವೆಯುಂಡು ಕಡೆಯ ಬಾಗಿಲ ಕಾಯ್ವನೀರ ಗೌಡಿಯ ಮಗನ ಮಗನ ಮಗನೆನಿಸೆನ್ನ1 ಪಂಚಾನ್ನ ಪರಮಾನ್ನವಾವುದನು ನಾನೊಲ್ಲೆಚಂಚಲಗೊಳಿಸುವ ಭೋಗ ಭಾಗ್ಯವ ನಾನೊಲ್ಲೆಹಿಂಚದೆ ದಾಸೋಹ ಮಾಳ್ಪವರ ಮನೆಯ ಕಾಯ್ವಉಂಚ ಗೌಡಿಯ ಮಗನ ಮಗನ ಮಗನೆನಿಸೆನ್ನ2 ಪಟ್ಟಾವಳಿ ದುಕೂಲವನು ನಾನೊಲ್ಲೆಪಟ್ಟೆ ನಾಮದ ಬರಿಯ ಪ್ರದರ್ಶನ ನಾನೊಲ್ಲೆಸೃಷ್ಟಿಯೊಳು ನಿನ್ನ ಭಜಿಪ ಭಕ್ತರ ಮನೆ ಕಾಯ್ವಮುಟ್ಟುಗೌಡಿಯ ಮಗನ ಮಗನ ಮಗನೆನಿಸೆನ್ನ 3 ಮುತ್ತಿನಾಭರಣ ತಾಳಿ ಪದಕವ ನಾನೊಲ್ಲೆಸತ್ತಿಗೆಯ ನೆರಳಿನಲಿ ಸಾಗುವುದ ನಾನೊಲ್ಲೆನಿತ್ಯ ನಿನ್ನ ನೆನೆವರ ಮನೆಯ ಬಾಗಿಲ ಕಾಯ್ವತೊತ್ತುಗೌಡಿಯ ಮಗನ ಮಗನ ಮಗನೆನಿಸೆನ್ನ 4 ಆಶೆ ಪಾಶಗಳೆಂಬ ಜಂಜಾಟ ನಾನೊಲ್ಲೆದೇಶಾನುದೇಶಗಳ ತಿರುಗಾಟ ನಾನೊಲ್ಲೆಶ್ರೀಶಾದಿಕೇಶವನ ಭಜಿಪರ ಮನೆಯ ಕಾಯ್ವಕಸಗೌಡಿಯ ಮಗನ ಮಗನ ಮಗನೆನಿಸೆನ್ನ 5
--------------
ಕನಕದಾಸ
ತುಂಗೆ ಬಂದಳು ದೇವೋತ್ತುಂಗ ವರಹನಾ ಮುಂಗೋರಿಯಲ್ಲಿ ಪುಟ್ಟಿ ಭಕ್ತ ನಿಕರನಾ ಹಿಂಗದೆ ಪೊರೆದು ಸುಖಂಗಳನೀವು ತಾ ಮಂಗಳಾಂಗೆ ಮಾತಂಗೆ ಸುಗಮನೆ ಪ ಕಾಳ ಪನ್ನಗವೇಣಿ ಕೋಕಿಲವಾಣಿ ಫಾಲ ಕಸ್ತುರಿ ಜಾಣೆ ಪಲ್ಲವಪಾಣಿ ವಾಲೆ ಮೂಗುತಿ ಅಣಿ ಮುತ್ತು ಕಠಾಣಿ ತೋಳು ಮಂದಾರಮಣಿ ಅರಿಗುಣಶ್ರೇಣಿ ಮೌಳಿಯಾ ಮೇಲಿನ ಜಾಳಿಗೆ ಸೂಸುಕಾ ವಾಲಲು ಕದಿಪಿನ ನೀಲಗೂದಲು ಭ್ರಮ ರಾಳಿಗಳಂತಿರೆ ಬಾಲ ಸುಧಾಕರ ಪೋಲುವ ವದನೇ1 ಕುಡುತೆಗಂಗಳ ನೀರೆ ಕಂಬುಕಂಧರೆ ಕಡಗ ಕಂಕಣದ್ವಾರೆ ಕೈಯ ಶೃಂಗಾರೇ ಜಡಿವ ಪದಕಹಾರೆ ಕಂಚಕಸೀರೆ ಮುಡಿದ ಪುಷ್ಪಂಗಳು ಮರೆ ಕುಚಗಳು ಅದರೆ ಬಡನಡುವಿನ ಕಡು ಉಡುವಿನ ಕಿಂಕಣಿ ಒಡನುಡಿಸುವ ಗೆಜ್ಜೆ ಕಾಲಂದಿಗೆ ಪೆಂಡೇ ಅ ಡಿಗಡಿಗೊಪ್ಪಲು ಕಡಲನ ಮಡದಿ 2 ತೀಡಿದ ಪರಿಮಳ ಗಂಧದ ಭೋಗಿ ಕೂಡಲಿಪುರದಲಿ ಭದ್ರಿವಂದಾಗಿ ಕೂಡಿ ಸೂಸಿದಳಂದು ಮುಂದಕ್ಕೆ ಸಾಗಿ ಆಡುತ ಪಾಡುತ ಬಲು ಲೇಸಾಗಿ ಬೇಡಿದ ಜನರಿಗೆ ಈಡಿಲ್ಲದ ವರವ ನೀಡುತ ನಿರುತರ ಮಾಡುತ ದಯವನು ನೋಡುತ ತಡವಿಲ್ಲದಲೆ 3 ಶೃಂಗಾರ ಮಾರ್ತಾಂಡೆ ಹರಿಹರ ಮಾತಾ ಅಂಗಾಧಿ ಪರ್ವತ ಪಂಚ ಪ್ರಖ್ಯಾತ ಹಿಂಗದೆ ಬಲಗೊಂಡು ಕೊಡ್ಲೀಗೆ ಬರುತ ಸಂಗೀತ ಗಾಯನದಿಂದ ವಾಲಗಗೊಳುತ ಸಂಗಮೆಯಾಗಿ ತಂಗಿಯ ಬೆರತೀಗ ಮಂಗಳ ಕ್ರೀಡೆಯಲ್ಲಿ ಪ್ರವೇಶಿಸಿ ಗಂಗೆ ಎನಿಸಿಳ್ಯಮನನಾದೇಳಗೆ 4 ಲೋಕದೊಳಗೆ ಪ್ರತಿರಹಿತ ಪೆಸರಾದ ಚೀಕನ ಬರವಿಯ ಅಶ್ವಥಮರದ ನೃಕಂಠೀರವನ ಪಾದದಿ ವ್ಯಾಧಿಷ್ಟರಾದ ಸೋಕಿ ಮೈಮರೆದಂಥ ನಮಿತರು ಕರದಾ ಪಾಕ ಪದಾರ್ಥಕೆ ಒಲಿದೊಲಿದಾಡುತ ಶ್ರೀಕರ ವಿಜಯವಿಠ್ಠಲಗೆರಗುತ ನಾಕಕನ್ನಿಕೆಯಂತೆ ಹೊಳೆದಳುಯಿಂದು5
--------------
ವಿಜಯದಾಸ
ತುರುಗಾಯ ಬಂದ ಗೋಪಿಯ ಕಂದಆನಂದದಿಂದ ಪ ಮೃಗ ಜಲಚರ ಮೋಹಿಸೆತರಳೇರ ಮನ ಸೂರೆಯಾಗೆ ಕೊಳಲಿನಿಂದ ಅ.ಪ. ತಂದೆಯ ಕಂದನೆಂದು ಕೊಂಕುಳೊಳಿಟ್ಟುಕಂದನ ಕೆಳಗಿಟ್ಟುಅಂದಿಗೆ ಗೆಜ್ಜೆ ಕಿವಿಗಳಿಗಿಟ್ಟುಮುತ್ತಿನ ಬಟ್ಟುಹೊಂದಿಸಿ ಗಲ್ಲದಲ್ಲಿ ತಾನಿಟ್ಟುಕಸ್ತೂರಿಯ ಬಟ್ಟುಮುಂದಾಗಿ ಮೂಗಿನ ಮೇಲಳವಟ್ಟುಮನೆಬಾಗಿಲ ಬಿಟ್ಟುಕಂದರ್ಪನ ಶರದಿಂದ ನೊಂದು ಬಹುಕಂದಿ ಕುಂದುತಲಿಂದುವದನೆಯರುಇಂದಿರೇಶನಾನಂದದ ಗಾನಕೆಚಂದ್ರಮುಖಿಯರೊಂದಾಗುತ ಬರುತಿರೆ 1 ಮುರಳಿಯ ಸ್ವರಕೆ ಮೋಹಿತರಾಗೆಕರುಗಳನು ತಂದುಕರದಿಂದಲೆತ್ತಿ ತೊಟ್ಟಿಲೊಳಗೆಇರಿಸುತ್ತ ಹಾಲಬೆರಸುತ್ತ ಮಜ್ಜಿಗೆ ಮೊಸರಿನೊಳಗೆಪರಮಾತ್ಮನ ನೆನೆದುಹೊರಟರು ಬಿಸಿಲು ಚಳಿ ಮಳೆಯೊಳಗೆಮನೆಮನೆಯೊಳಗೆತರಳರ ಬೆದರಿಸಿ ಮಾರ್ಜಾಲಕೆ ಮೊಲೆತ್ವರಿತದಿ ಉಣಿಸುತ ಸರಿಸರಿಯೆನುತಲಿಪರಿಪರಿ ಭ್ರಾಂತರಾಗಿ ನೋಡುತಪುರಮಾರ್ಗಕೆ ಬರುವರು ನಿರುಕಿಸುತ 2 ಮದನ ಶತಕೋಟಿ ತೇಜನು ಬಂದಸ್ತ್ರೀರೆದುರಲಿ ನಿಂದಅಧರಾಮೃತ ಪಾನವ ಮಾಡಿರೆಂದಬಾಯಾರಿದಿರೆಂದಬದಿಯಲ್ಲಿ ಬಂದು ಕುಳ್ಳಿರಿಯೆಂದಅವರಿರವನೆ ನೋಡ್ದಚದುರೇರ ಮೋಹಕನೆ ನಾನೆಂದವಾದ್ಯದ ರವದಿಂದಸದಯನೆದುರ ರಂಭೆ ಊರ್ವಶಿ ಮೇನಕೆಒದಗಿ ನಾಟ್ಯಗಳ ಚದುರತನದಲಾಡೆಮಧುಸೂದನ ಭಕ್ತರ ಕಾಯ್ವುದಕೀವಿಧದೊಳಗಾಡಿದ ರಂಗವಿಠಲ ತಾ 3
--------------
ಶ್ರೀಪಾದರಾಜರು