ಒಟ್ಟು 1115 ಕಡೆಗಳಲ್ಲಿ , 91 ದಾಸರು , 958 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯಯ್ಯ ಕಂಜಲೋಚನ ದಯಲೆನ್ನ ಕರುಣಾ ದಯಲೆನ್ನ ಧ್ರುವ ಅಕ್ಷಯಾನಂದ ನೀ ಪೂರ್ಣ ಲಕ್ಷುಮೀ ರಮಣ ಸಗುಣಾ ಲಕ್ಷ್ಮೀರಮಣ ಪಕ್ಷಪಾಂಡವರ ಪ್ರಾಣ ರಕ್ಷಿಸೊ ನಾರಾಯಣ 1 ಅಣುರೇಣು ವೊಳನುಕೂಲ ಮುನಿಜನಪಾಲ ಲೋಲಾ ಘನಸುಖದ ಕಲ್ಲೋಳ ನೀನೆ ದೀನದಯಾಳಾ 2 ಕರುಣಾಸಾಗರ ಪೂರ್ಣ ಹೊರಿಯೊ ಮಹಿಪತಿಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾರಣಾತ್ಮಕ ಭಕ್ತವತ್ಸಲ | ಪೊರೆವುದೆನ್ನನು || ಕರುಣಾರ್ಣವನೆ ಪ ಭವ | ಕಷ್ಟ ಕಳೆದು ಸಂ | ತುಷ್ಟಿ ಗೈಸೆನ್ನ 1 ಪಕ್ಷಿವಾಹನ | ಅಕ್ಷರೇಡ್ಯ ಸು | ಪಕ್ಷಪಾತಿಯ | ಲಕ್ಷ್ಮೀವಕ್ಷನೆ ||ಇಕ್ಷುಶರ ಪಿತ | ಲಕ್ಷಣಾಗ್ರಜ | ರಾಕ್ಷಸರ ಬಹು ಶಿಕ್ಷಕ | ಜಗ ರಕ್ಷಕ 2 ಭವ | ನೋವ ಕಳೆವುದು | ಶ್ರೀ ವರನೆ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾರುಣ್ಯಸಾಗರನೇ ನಾ ಸೇರುವೆ ಮಾರನ ಪಡೆದವನೇ ಪ ಭಾವಾತೀತನೆ ಯೆನ್ನ ಅವಗುಣವೆನಿಸದೆ ಸೇವಕನಿಗೆ ನಿನ್ನ ಭಕ್ತಿಯ ನೀಡೋ 1 ದೇವಕಿ ಕಂದನೇ ಸನಕವಂದಿತನೇ ಸೇವೆಯ ಮಾಡುವೆ ಚರಣವ ನೀಡೋ 2 ಅಜನಿಗೆ ಪಿತನಾಗಿ ದ್ವಿಜರಿಗೊಡೆಯನಾಗಿ ಗಜನನ್ನು ಪೊರೆದ ಶ್ರೀ ಲಕ್ಷ್ಮೀ ಸೇವಿತನೇ 3 ಪಾದ ಯುಗ್ಮಗಳನ್ನು ಭಜಕನ ಸಲಹಯ್ಯ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾರ್ತಿಕೇಯ ಮಹಾಸೇನ ನಿಜ ಭೃತ್ಯರೊಳಾಗು ಪ್ರಸನ್ನ ಪ. ಚಿತ್ತಸಾಕ್ಷಿ ಹರಿಭಕ್ತಿಜ್ಞಾನಮ- ನಿತ್ತು ಕಾಯೊ ಷಡ್ವದನ ಅ.ಪ. ತಂದೆ ತಾಯಿ ಕುಲಸ್ವಾಮಿ ಹರಿ- ಯೆಂದು ಭಜಿಸುವೆನು ಪ್ರೇಮಿ ಸ್ಕಂದನಾಮಕ ನೀನಂತರ್ಯಾಮಿ ಸುಂದರ ಮಯೂರಗಾಮಿ 1 ಪಾರ್ವತಿ ಶಿವಸಂಜಾತ ಪರಿ- ಪಾಲಿತ ಸುಜನವ್ರಾತ ಸರ್ವಗೀರ್ವಾಣ ಸೇನಾಧ್ಯಕ್ಷ ಸರ್ವೋತ್ತಮ ಹರಿಪಕ್ಷ2 ತಾರಕದ್ಯೆತ್ಯಸಂಹಾರ ಸುವಿ- ಚಾರೈಕಪರಾಧಾರ ಪ್ರಾರಂಭಗೈದ ಕಾರ್ಯ ಸಫಲಿಪುದು ಭಾರ ನಿನ್ನದು ರಣಧೀರ 3 ಪಾವಂಜಪುರನಿವಾಸ ನಃ ಪಾತು ಶಿವಗಣಾಧೀಶ ದೇವ ಲಕ್ಷ್ಮೀನಾರಾಯಣದಾಸ ಪಾವನಚರಿತ ವಿಲಾಸ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ತಿಕೇಯ ಮಹಾಸೇನ ನಿಜ ಭೃತ್ಯರೊಳಾಗು ಪ್ರಸನ್ನಪ. ಚಿತ್ತಸಾಕ್ಷಿ ಹರಿಭಕ್ತಿಜ್ಞಾನಮ- ನಿತ್ತು ಕಾಯೊ ಷಡ್ವದನಅ.ಪ. ತಂದೆ ತಾಯಿ ಕುಲಸ್ವಾಮಿ ಹರಿ- ಯೆಂದು ಭಜಿಸುವೆನು ಪ್ರೇಮಿ ಸ್ಕಂದನಾಮಕ ನೀನಂತರ್ಯಾಮಿ ಸುಂದರ ಮಯೂರಗಾಮಿ 1 ಪಾರ್ವತಿ ಶಿವಸಂಜಾತ ಪರಿ- ಪಾಲಿತ ಸುಜನವ್ರಾತ ಸರ್ವಗೀರ್ವಾಣ ಸೇನಾಧ್ಯಕ್ಷ ಸರ್ವೋತ್ತಮ ಹರಿಪಕ್ಷ 2 ತಾರಕದ್ಯೆತ್ಯಸಂಹಾರ ಸುವಿ- ಚಾರೈಕಪರಾಧಾರ ಪ್ರಾರಂಭಗೈದ ಕಾರ್ಯ ಸಫಲಿಪುದು ಭಾರ ನಿನ್ನದು ರಣಧೀರ 3 ಪಾವಂಜಪುರನಿವಾಸ ನಃ ಪಾತು ಶಿವಗಣಾಧೀಶ ದೇವ ಲಕ್ಷ್ಮೀನಾರಾಯಣದಾಸ ಪಾವನಚರಿತ ವಿಲಾಸ 4
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲ ತಪ್ಪಿದರು ಸಾವಕಾಲ ತಪ್ಪದೋ ಯಾವ ಜೀವ ಜಂತುಗಳಿಗೂ ಕಾಯವಿಡಿದು ಬಂದ ಬಳಿಕ ಪ ಜನಿಸಿ ತಂದೆತಾಯ ಕರ ದೊಳಿರಲಿ ಸ್ತನವನುಂಡು ಭರದಿನಿದ್ರೆ ಗೈಯುರ್ತಿಲಿ ನೆರೆದಬಾಲರೊಡನೆ ಆಡಿ ಚರಿಸುತಿರಲಿ ಬಾಲಕತ್ವ ತೆರಳಿ ಜವ್ವನವು ಬಂದು ರಮಣಿಯನ್ನೆ ವರಿಸಿ ಇರಲಿ 1 ಕರಿ ಹತ್ತಿ ಮೆರೆಯುತಿರಲಿ ದೊರೆಗಳೊಡನೆ ಚರಿಸುತಿರಲಿ ಮೇರು ಗಿರಿಯ ಶಿರದೊಳಿರಲಿ ಶರಧಿ ಮಧ್ಯ ಪುರದೊಳಂಲರಣ್ಯದೊಳಗೆ ತಿರುಗುತಿರಲಿ ಅತಳ ಸುತಳ ವಿತಳವನ್ನೆ ಪೊಕ್ಕುಇರಲಿ 2 ಕಾಯವಿದುವೆ ತನ್ನ ಪೆತ್ತ ತಾಯಿತಂದೆಗಳಿಗೋ ಜಾಯೆ ಸುತರ ಗೃಧ್ರ ಭಲ್ಲುಕಾದಿಗಳಿಗೋ ಪುಲಿಗೋ ವಾಯಸಾದಿ ಕ್ರಿಮಿಗೋ ಕೀಟಕಾದಿಗಳಿಗೋ ಲಕ್ಷ್ಮೀರಮಣನೊಬ್ಬ ಬಲ್ಲನಿದನು 3
--------------
ಕವಿ ಪರಮದೇವದಾಸರು
ಕಾಲ ಬಂದಿತೋ ಬಂದ ಭವದೊಳು ಚಿಂತೆಯೊಳಗೆ ದಿನ ಸಂದಿತು ಪ ತುಪ್ಪ ಪಣಕೆ ಸೇರು ಉಪ್ಪೆಂಟು ಸಿದ್ದೆಯು ಮುಪ್ಪಾಗ ಕೊಂದೆ ಕೊಳಗಬತ್ತ ಸೊಪ್ಪ ಪಣಕೆ ಮಾರುವುದು ಅಚ್ಚೇರು 1 ವ್ಯಾಪಾರ ಸಾಪಾರ ತುಟ್ಟಿಸಿದರು ಕೊಳ್ಳ ಲಾಪರೆ ಫಣವೊಂದೆ ಕಟ್ಟಿಲ್ಲ ರೂಪಾಯಿ ಕೊಡೆ ಪುಲಿಚರಮ ಪಾಪವು ಸುಲತಾಗಿ ಪಣವ ಕೊಡೆಂಬರು 2 ದುಡ್ಡು ಕೊಡಲು ಬೇಡ ಬೈಯುತ ಆನೆ ಗೂಡಿನ (ಆನೆಗೊಂದಿ) ದುಡ್ಡತಾರೆಂಬರು ದೊಡ್ಡ ಮೊಳೆ ಪಣವಿದು ಸಣ್ಣ ಮೊಳೆಯಿಂಗಿ ? ಹೆಡ್ಡ ಹೋಗೆಂದದ್ದ ಬಿಸುಟರು ಫಣವ 3 ತಪ್ಪಿ ಹೇಳುವೆನೆ ನಮ್ಮಪ್ಪ ದುರ್ಭಿಕ್ಷವು ಎಪ್ಪತ್ತು ವರುಷ ಕೊದಗಿ ಬಂತು ಇಪ್ಪತ್ತು ವರುಷಕೀಕಾಲ ಬಂದಿದ್ದರೆ ಕನಿಷ್ಟಕ್ಕೆ ಗಣಿಸಿ ಸುಕ್ಷಾಮವ ಮರೆವೆನು 4 ಧಾರಣೆ ಪಾರಣೆ ಶಿವರಾತ್ರಿ ಹರಿದಿನ ಓರಂತೆ ಬಡವಗೆ ನೆಲೆಯಾಯಿತು ಕ್ಷೀರಾಬ್ದಿ ಶಯನ ಲಕ್ಷ್ಮೀನಾರಾಯಣನು ತನ್ನ ಸೇರಿದ ಜನರ ಕಣ್ಣಲಿ ನೋಡುತೊಲಿದ 5
--------------
ಕವಿ ಪರಮದೇವದಾಸರು
ಕಾಲ ವ್ಯರ್ಥ ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ- ಗತಿಲೇ ಬಾಹರು ಇದನು ತಿಳಿಯೋ ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1 ಇಂದೆ ಇದ್ದವ ನಾಳೆಗಿಲ್ಲಾ ಅದ ರಿಂದ ಜಗದೀಶನನು ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು ಮುಂದೆ ನರಜನ್ಮ ಬರುವುದು ಭರವಸಲ್ಲಾ 2 ಸತ್ತ ನಂತರ ಬಳಗ ನಿನ್ನ ತೀವ್ರ ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ ಮಿಥ್ಯ ಸುಖಕೊಳಗಾಗದಿನ್ನಾ ಏಕ ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3
--------------
ಹನುಮೇಶವಿಠಲ
ಕಾಲ ಸಜ್ಜನರಿಗನ್ನಕಿಲ್ಲದ ಸಾವಕಾಲ ಪ ಅರಮನೆಯ ಬಾಗಿಲನು ಕಾದು ಕೊಂಡಿರ್ದು ನೃಪ ವರನೊಡನೆ ಮಾತುಕಥೆಗಳ ನಡೆಸುತ ವರಮಂತ್ರಿಯಾಗಿ ರಾಜಾಧಿ ಕಾರಂಗಳನು ಕಾಲ 1 ಅಡಗಡಿಗೆ ಮಂತ್ರಿಗಳನಾಶ್ರಯಿಸಿ ಕೋವಿದರು ಗಡಿಗಳನು ಕೊಡಿಸೆನಗೆ ತನಗೆನ್ನುತ ಕಾಲ 2 ಮತ್ತಿವರನಾಶ್ರಯಿಸಿ ಕೆಲರು ಮಣಿಹಂಗಳನು ಪೊತ್ತು ಸೀಮೆಯ ಗ್ರಾಮಗಳ ನೋಡುತ ಇತ್ತ ಕುಳ ಸ್ಥಳ ವಂಚನೆಗಳೆಂದು ಬಂದ ಕಾ ಕಾಲ 3 ಬುಡಗಳನ್ನು ಗೈದೆ ಹಾಳ್ಮಾಡಿ ಕೊಂಡಿರ್ದರಿಗೆ ಕಡ ಮೊದಲುಗಳ ಕೊಟ್ಟು ಪೋಗೆಂಬರು ಅಡೆಯಂಚು ಮೂಲೆಗೆಳಗೈದು ಕುಳದೆರಿಗೆಯನು ಕಾಲ ಕಾಲ 4 ಚಾಡಿ ಕೋರರು ಹೆಚ್ಚಿ ಕೆಡಿಸಿವರ ರಾಜ್ಯವನ್ನು ರೂಢಿ ಪತಿಗಳಿಗೆಲ್ಲ ಕಿವಿಯೇ ಕಣ್ಣು ನೋಡಿದರೆ ಮರುತ ಸುತ ಕೋಣೆ ಲಕ್ಷ್ಮೀರಮಣ ನಾಡಿಸಿದ ವೋಲು ಜಗವಾಡುತಿಹುದು 5
--------------
ಕವಿ ಪರಮದೇವದಾಸರು
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯ ಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು-ಣೇಕ್ಷಣದಲಿ ನಿರೀಕ್ಷಿಸೆಮ್ಮನು3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು- ಣೇಕ್ಷಣದಲಿ ನಿರೀಕ್ಷಿಸೆಮ್ಮನು 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೀರ್ತನೆಗಳು ಅಪರಾಧಿ ನಾನಲ್ಲ ಅಪವಾದಯನಗಿಲ್ಲಾ ಪ. ಕಪಟನಾಟಕ ಕೃಷ್ಣ ಯನಗೆ ನೀನಪರಾಧಿ ಅ.ಪ. ನೀನು ಆಡಿಸಲು ಜೀವಗಳನುದಿನದ ಬೊಂಬೆ ಆನೆ ಬಲ್ಲೆನೆ ಬ್ಯಾರೆ ಪಥವನೊಂದಾ ನೀನಿಟ್ಟ ಸೂತ್ರದಂತಿರಲು ಕೈಕಾಲುಗಳು ನೀನು ಮುಗ್ಗಿಸಲು ಮುಗ್ಗುವ ಜೀವ ನಾನಾದೆ 1 ಒಂಬತ್ತು ಬಾಗಿಲುವುಳ್ಳ ಪಟ್ಟಣದೊಳಗೆ ತುಂಬಿದಿಪ್ಪತ್ನಾಲ್ಕು ಮೊನೆಯಾಳ್ಗಳ ನಂಬಿಸಿ ಕಾವಲು ನೀನು ಎನ್ನೊಳಗಿದ್ದು ಕಂಬುದಾ (?) ಯೇರಿ ಕೊಲಿಸುವುದು ನಿನಗನ್ಯಾಯ 2 ಅಂತರಾತ್ಮಕ ನೀನು ಒಳಗಿದ್ದಾ ಬರಿ ತಂತ್ರಿಯೆಂದೆನ್ನ ಕೊಲ್ಲಿಸುವರೇನೊ ಹೇಳೋ ಕಂತುವಿನ ಜನಕ ಲಕ್ಷ್ಮೀರಮಣ ಕಾಯಬೇ- ಕೆಂತೆಂದೆನ್ನ ಅಚಲಾನಂದವಿಠಲ ಪುರಂದರ ವಿಠಲ ಅಂಕಿತದಲ್ಲೂ ಇದೆ.
--------------
ಅಚಲಾನಂದದಾಸ
ಕುಟ್ಟಿ ಕೊಳ್ಳೊ ಮಾಣಿ ನಿನ್ನ ಹುಟ್ಟಿಸಿರುವ ದೈವಕೆ ಹೊಟ್ಟೆ ತುಂಬ ಬಾಯಿಗಾನು ಬಿಟ್ಟೆನೆಂದ್ರೆ ಕ್ಷೀರವಿಲ್ಲ ಪ ಕೊಟ್ಟು ಪಡೆಯಲಿಲ್ಲ ಮುನ್ನಹುಟ್ಟಿ ಪಡೆಯಲಿಲ್ಲ ಮುಂದೆ ಹಟ್ಟಿಯೊಳಗಣಾಕಳೆಲ್ಲ ನಷ್ಟವಾಯ್ತು ರೋಗದಿಂದ 1 ಅತ್ತು ಸಾಯ ಬೇಡ ನೀನು ಎತ್ತಿ ಕೊಂಬರೊಬ್ಬರಿಲ್ಲ ಭತ್ತವನ್ನು ಕುಟ್ಟಿ ನಾನು ತುತ್ತಮಾಡಿ ತಿನ್ನಿಸುವೆನು 2 ನೀರು ಕಾದು ಬಂತು ಬಿಸಿಯ ನೀರ ನೆರೆವೆನೀಗ ನಿನಗೆ ಸಾರಿ ಮೊಲೆಯ ನೂಡಿ ನನ್ನ ಸೀರೆ ಸೆರಗಹಾಸಿ ಕೊಡುವೆ 3 ದೊಡ್ಡ ಕೂಸ ಕಾಣೆಯವಳು ಗುಡ್ಡೆ ಬಸವಿಯಾದಳೀಗ ಚಡ್ಡೆಯಲ್ಲದೆ ಹೋಗುತಿಹಳು ಸಡ್ಡೆ ಮಾಡಳೆನ್ನಮಾತ 4 ಇಂತೆನುತ್ತ ಬಾಲಕನ್ನ ಸಂತವಿಟ್ಟು ನಾರಿ ಲಕ್ಷ್ಮೀ ಕಾಂತ ಮಾಡ್ದ ಲೀಲೆಗಳನು ನಿಂತು ಪಾಡಿಪೋದಳಾಕೆ 5
--------------
ಕವಿ ಪರಮದೇವದಾಸರು