ಒಟ್ಟು 527 ಕಡೆಗಳಲ್ಲಿ , 72 ದಾಸರು , 428 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾರ್ವತಿ ದೇವಿ ಉಮಾ - ನಿನಗೆ ಸರಿಯಾರೇಕಮ್ಮಗೋಲ್ವೈರಿಯ ಪ್ರೇಮ ಪಾತ್ರಳಾದ ಪ ಆಡೂವ ನುಡಿಗಳ - ಜೋಡಿಸಿ ಹರಿಯಲಿಮಾಡೀಸು ಸತ್ಸಾಧನಾ ||ಬೇಡಿಕೊಂಬೆನು ದೇವಿ - ರೂಢಿಗೊಡೆಯನ ತಡಮಾಡದೆ ತುತಿಪಂಥ - ಜೋಡಿಸು ಮನಾ 1 ಸುರಪಾದಿ ದೇವತೆ ಕರಗಳ ಜೋಡಿಸಿಶರಣೆಂದು ಪೇಳುವರೇ ||ಹರ್ಯಕ್ಷ ಯಕ್ಷನ ಈಕ್ಷಿಸಿ ಬರುತಿರೆಹರಿ ಪೇಳೆ ಸುರಪಗೆ ಬೋಧಿಸಿದೆ 2 ಸತಿ - ವ್ಯತ್ಯಸ್ತ ಮನವನುಸತ್ಯಾತ್ಮನಲಿ ನಿಲಿಸೇ ||ಅರ್ಥೀಲಿ ಹರಿಯ - ಅತ್ಯರ್ಥ ಪ್ರಸಾದಕ್ಕೆಪಾತ್ರನೆಂದೆನಿಸಿ - ಪಾಲಿಸೇ 3 ಪ್ರಾಣಂಗೆ ಪ್ರಾಣನ - ಗಾನ ಮಾಡಲು ಗುಣಶ್ರೇಣಿಗಳ ಜೋಡಿಸೇ ||ಗಾನ ವಿನೋದಿ - ಪ್ರ - ದಾನ ಪುರೂಷನಮಾಣದೆನಗೆ ತೋರಿಸೇ 4 ಹಿಮಗಿರಿಸುತೆತವ - ವಿಮಲಪದಾಬ್ಜಕೆನಮಿಸುವೆ ನೀ ಪಾಲಿಸೇ ||ಅಮಿತಾರ್ಕ ನಿಭ ಗುರು ಗೋವಿಂದ ವಿಠಲನಕಮನೀಯ ಪದ ಕಾಣಿಸೇ 5
--------------
ಗುರುಗೋವಿಂದವಿಠಲರು
ಪಾಲಿಸೆನ್ನ ಪಾರ್ವತೀಶ ಫಾಲಲೋಚನ ಲಾಲಿಸೆನ್ನ ನುತಿಯ ದೇವ ಕಾಲಕಂಧರ ಪ ಪುಲ್ಲನಯನ ಚಲ್ವವದನ ಮಲ್ಲಿಕಾರ್ಚಿತ ಬಿಲ್ವ ಪಲ್ಲವಾದಿಪ್ರಿಯನೆ ಶೈಲಜಾಪತೆ 1 ವಿನುತ ಪಂಕಜಪ್ರಿಯ ಸಂಕಟಾದ್ರಿ ದೇವರಾಜ ಲೋಕಪಾಲಕ 2 ಪಾಹಿ ಪಾಹಿ ಕಾಲಕಾಲ ಮೋಹನಾಶಕ ಸ್ನೇಹದಿಂದಲೆನ್ನ ಬಿಡದೆ ವಾಮದೇವನೆ 3 ಧಾನವಾಂತಕಾದಿ ಹೃದಯ ಜೀವ ರೂಪನೆ ಕಮಲ ಭಾನುರೂಪನೆ 4
--------------
ಬೇಟೆರಾಯ ದೀಕ್ಷಿತರು
ಪುಟ್ಟಿದನು ಜಗದೀಶ | ಜಗಭಾರ ನೀಗಲುವೃಷ್ಣಿಕುಲದಲಿ ಈಶ | ದೇವಕಿಯ ಜಠರದಿಕೊಟ್ಟು ಅವಳಿಗೆ ಹರ್ಷ | ಕರುಣಾಬ್ದಿ ಭೇಶ ಪ ಅಟ್ಟಹಾಸದಿ ದೇವದುಂದುಭಿ | ಶ್ರೇಷ್ಠವಾದ್ಯಗಳೆಲ್ಲ ಮೊಳಗಲುಅಷ್ಟಮಿಯ ದಿನದಲ್ಲಿ ಬಲು ಉ | ತ್ಕøಷ್ಟದಲ್ಲಿರೆ ಗ್ರಹಗಳೆಲ್ಲವು ಅ.ಪ. ಪರಿ ದೇ-ವಕ್ಕಿಯಲಿ ಉದ್ಭವಿಸೀ | ಸಜ್ಜನರ ಹರ್ಷೀಸಿ ||ವಕ್ರಮನದವನಾದ ಕಂಸನು | ಕಕ್ಕಸವ ಬಡಿಸುವನು ಎನುತಲಿನಕ್ರಹರ ಪ್ರಾರ್ಥಿತನು ದೇ | ವಕ್ಕಿ ವಸುದೇವರಿಂದಲಿ 1 ದೇವ ಶಿಶುತನ ತಾಳೀ | ನಗುಮೊಗವ ತೋರಲುದೇವ ವಾಣಿಯ ಕೇಳೀ | ಅನುಸರಿಸಿ ಆದ ವಸುದೇವ ತನಯನ ಕೈಲೀ | ಕೊಂಡಾಗ ಬಂಧನಭಾವ ಕಳಚಿತು ಕೇಳೀ | ಶ್ರೀ ಹರಿಯ ಲೀಲೇ ||ಪ್ರಾವಹಿದ ಸರಿದ್ಯಮುನೆ ವೇಗದಿ | ಭಾವ ತಿಳಿಯುತ ಮಾರ್ಗವೀಯಲುಧೀವರನು ದಾಟುತಲಿ ಶಿಶು ಭಾವದವನನ ಗೋಪಿಗಿತ್ತನು 2 ವಿಭವ ||ತಂದು ಶಿಶು ಸ್ತ್ರೀಯಾಗಿ ಮಲಗಿರೆ | ಬಂದು ಕಂಸನು ಕೈಲಿ ಕೊಳ್ಳುತಕಂದನಸು ಹರಣಕ್ಕೆ ಯತ್ನಿಸೆ | ಬಾಂದಳಕ್ಕದು ಹಾರಿ ಪೇಳಿತು 3 ದುರುಳ ಭಯವನೆ ಪೊಂದಿ ತೆರಳುತತರಳರಸುಗಳ ನೀಗ ತನ್ನಯ | ಪರಿಜನಕೆ ಅಜ್ಞಾಪಿಸಿದ ಕಂಸ 4 ಆರೊಂದನೆಯ ದಿನದಿ | ಗೋಕುಲಕೆ ಬಂದಳುಕ್ರೂರಿ ಪೂಥಣಿ ವಿಷದಿ | ಪೂರಿತದ ಸ್ತನ ಕೊಡೆಹೀರಿ ಅವಳಸು ಭರದಿ | ಮೂರೊಂದು ಮಾಸಕೆಭಾರಿ ಶಕಟನ ಮುದದಿ | ಒದೆದಳಿದೆ ನಿಜಪದದಿ ||ಮಾರಿ ಪೂಥಣಿ ತನುವನಾಶ್ರಿತ | ಊರ್ವಶಿಯ ಶಾಪವನೆ ಕಳೆಯುತಪೋರ ಆಕಳಿಸುತ್ತ ಮಾತೆಗೆ | ತೋರಿದನು ತವ ವಿಶ್ವರೂಪ 5 ಭಂಜನ ||ಪಾನಗೈಯ್ಯುತ ದಾನ ವನ್ಹಿಯೆ | ಹನನ ವಿಷತರುರೂಪಿ ದೈತ್ಯನ ಧೇನುಕಾಸುರ ಮಥನ ಅಂತೆಯೆ | ಹನನ ಬಲದಿಂದಾ ಪ್ರಲಂಬನು6 ಪರಿ ಗೋವರ್ಧನ | ಶಂಖ ಚೂಡನ ಶಿರಮಣಿಯು ಬಲು ಅಪಹರಣ | ಅರಿಷ್ಟಾಸುರ ಹನನ ||ಹನನಗೈಯ್ಯಲು ಕೇಶಿ ಅಸುರನ | ಘನಸುವ್ಯೋಮಾಸುರನ ಅಂತೆಯೆ ಮನದಿ ಯೋಚಿಸಿ ಕಂಸ ಕಳುಹಿದ | ದಾನ ಪತಿಯನು ಹರಿಯ ಬಳಿಗೆ 7 ಬಲ್ಲ ಮಹಿಮೆಯ ಹರಿಯ | ಅಕ್ರೂರ ವಂದಿಸಿಬಿಲ್ಲಹಬ್ಬಕೆ ಕರೆಯ | ತಾನೀಯೆ ಕೃಷ್ಣನುಎಲ್ಲ ತಿಳಿಯುತ ನೆಲೆಯ | ಪರಿವಾರ ಸಹಿತದಿಚೆಲ್ವ ರಥದಲಿ ಗೆಳೆಯ | ಅಕ್ರೂರ ಬಳಿಯ ||ಕುಳ್ಳಿರುತ ಶಿರಿ ಕೃಷ್ಣ ತೆರಳುತ | ಅಲ್ಲಿ ಯಮುನೆಲಿ ಸ್ನಾನ ವ್ಯಾಜದಿ ಚೆಲ್ವತನ ರೂಪಗಳ ತೋರುತ | ಹಲ್ಲೆಗೈದನು ಗೆಳೆಯ ಮನವನು 8 ಬವರ | ಗೈವುದಕೆ ಬರ ಹರಿಹಲ್ಲು ಮುರಿಯುತ ಅದರ | ಸಂಹರಿಸಿ ಬಿಸುಡಲುಮಲ್ಲ ಬರೆ ಚಾಣೂರ | ಹೂಡಿದನು ಸಂಗರ ||ಚೆಲ್ವ ಕೃಷ್ಣನು ತೋರಿ ವಿಧ್ಯೆಯ | ಮಲ್ಲನನು ಸಂಹರಿಸುತಿರಲು ಬಲ್ಲಿದನು ಬಲರಾಮ ಮುಷ್ಟಿಕ | ಮಲ್ಲನನು ಹುಡಿಗೈದು ಬಿಸುಟನು 9 ಜಲಧಿ | ಆವರಿಸಿ ಬರುತಿರೆಹರಿಯ ಬಲ ಸಹ ಭರದಿ | ಸಂಹರಿಸಿ ಅವರನುಕರಿಯ ವೈರಿಯ ತೆರದಿ | ಹಾರುತಲಿ ಮಂಚಿಕೆಲಿರುವ ಕಂಸನ ಶಿರದಿ | ಪದಮೆಟ್ಟಿ ಶಿಖೆ ಪಿಡದಿ ||ಗರುಡನುರಗನ ಪಿಡಿದು ಕೊಲ್ಲುವ | ತೆರದಿ ಕೃಷ್ಣನು ಪಿಡಿದ ಕಂಸನ ಕರದಿ ಖಡ್ಗದಿ ಶಿರವ ನಿಳುಹಲು | ನೆರೆದ ಸುಜನರು ಮೋದಪಟ್ಟರು 10 ಮಂದ ಮೋದ ಪಡಿಸುವ 11
--------------
ಗುರುಗೋವಿಂದವಿಠಲರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣ ನರಹರಿವಿಠಲ | ಪಾಲಿಸೋ ಇವನಾ ಪ ಕಾಣೆನೋ ನಿನ್ಹೊರತು | ಅನ್ಯರನು ಹರಿಯೇ ಅ.ಪ. ಮಧ್ವಮತದೀಕ್ಷೆಯಲಿ | ಶ್ರದ್ಧೆಯುಳ್ಳವನಿವನುಬುದ್ಧಿ ಪೂರ್ವಕ ಶಾಸ್ತ್ರ | ದಧ್ಯಯನದಾಶೇ |ವೃದ್ಧಿಗೈಸುತ ಅದಕೆ | ಅದ್ವಾನ ವೆಸಗುತಲಿಹದ್ದುವಹ ಪೊರೆ ಇವನ | ಮಧ್ವಾಂತರಾತ್ಮ 1 ವೇದಾಂತ ವೇದ್ಯಹರಿ | ಪಾದಭಜನೆಯ ನಿತ್ತುಮೋದಮುನಿ ಸನ್ಮತವ | ಭೋದ ಚಾತುರ್ಯಆದರಿಸಿ ಇವಗಿತ್ತು | ಸಾಧನವಗೈಸೊ ಹರಿಬಾದರಾಯಣ ದೇವ | ಪ್ರಾರ್ಥಿಸುವೆ ನಿನ್ನಾ 2 ಸರ್ವಜ್ಞ ಸರ್ವೇಶ | ಸ್ವಾತಂತ್ರ ಪುರುಷನೆಸರ್ವಾಂತರಾತ್ಮಕನೆ | ನಿರ್ವಿಕಾರಾಖ್ಯಾಅದ್ವೆತತ್ರಯದಲ್ಲಿ | ಸರ್ವ ಸಾದನವಿರುವಸದ್ವಾರ್ತೆ ತಿಳಿಸಿವಗೆ | ಶರ್ವ ಸುರವಂದ್ಯಾ 3 ಧ್ಯಾನೊ ಪಾಸನೆ ತಿಳಿಸಿ | ಮೌನಿಗಳ ಸನ್ಮಾರ್ಗಜ್ಞಾನಿಯೆಂದೆನಿಸಿವನ | ಹೇ ನಾರಸಿಂಹ |ಮಾನಾಭಿ ಮಾನಗಳ | ನಾನಾಸುದ್ವಂದ್ವಗಳಶ್ರೀನಿವಾಸನೆ ತಾಳ್ವ | ಮನಧೈರ್ಯವೀಯೋ 4 ಗುರ್ವಂತರಾತ್ಮಗುರು | ಗೋವಿಂದ ವಿಠಲನೆದರ್ವಿಜೀವಿಯ ಹೃದಯ | ಗಹ್ವರದಿ ನಿನ್ನಾ |ಚೆಲ್ವರೂಪವ ಕಂಡು | ಭವವನುತ್ತರಿಪಂಥಹವಣೆ ಒದಗಿಸೊ ಎಂದು | ಪ್ರಾರ್ಥಿಸುವೆ ದೇವಾ 5
--------------
ಗುರುಗೋವಿಂದವಿಠಲರು
ಬಂದನಮ್ಮಾ ಬಂದನಮ್ಮಾ ನಮ್ಮ ರಂಗನು| ಇಂದು ನಮ್ಮ ಪೂರ್ವಾರ್ಜಿತಫಲ ವದಗಿ ಬಂದಿತೆಂದು ಪ ಬಿಸಜಾಸಖ ಶತಕೋಟಕಿ ಸಮತೇಜ ದೊಪ್ಪತಿಹನಖವು| ಅಂದುಗೆ ಗೆಜ್ಜೆಯಿಂದ ಘಲುಘಲುಕೆನುತಾ 1 ಉಟ್ಟ ಪೀತಾಂಬರದ ಮ್ಯಾಲ ವಡ್ಯಾಣವನಿಟ್ಟುಕೊಂಡು| ಕಟ್ಟಿದ ಸು ಕಿಂಕಿಣಿಗಳಿಂದ ಝಣ ಝಣ ಕೆನುತಾ2 ಕರ ಕಡಿಗ ವಂಕಿ ತೋಳ ತಾಯಿತ ಕೇಯೂರವನು| ಕೌಸ್ತುಭ ವನಮಾಲೆಯಿಂದ ಪೊಳವುತಾ 3 ಕುಂಡಲ ಕದಪು ಚಲ್ವಿನಿಂದಾ| ದಾಳಿಂಬ ದಶನಾ ಸುನಶಿಕದೆಸಳು ಕಣ್ಣಿಂದಾ 4 ಸ್ಮರನಾಥನು ಸೋಲಿಪ ಭ್ರೂಲತೆಯು ಫಣಿಯಲ್ಲಿಕ| ಸ್ತೂರಿಯನಿಟ್ಟು ಹರಿಮಯ ಕಿರೀಟಕಾವಳಿಮ್ಯಾಲಿರಿಸಿಕೊಂಡು5 ಪಿಡಿದು ಬಿಂಬಾಧರಕತಂದು| ಪರಿ ಪರಿಯಲೂದುತಾ ಮಹಿಪತಿ ನಂದನ್ನ ಪ್ರೀಯನಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದಳು ನೋಡೆ ಇಂದಿರ ದೇವಿ ಪ. ಬಂದಳು ನೋಡೆ ಗೋವಿಂದನ ಸತಿಯು ಸುಂದರ ಪಾದದಿಂದ ಒಂದೊಂದು ಹೆಜ್ಜೆಯನಿಡುತಾ ಅ.ಪ. ಉಲ್ಲಾಸದಿಂದಲೀ ಚೆಲ್ವೆ ಬಂದಳೀಗ 1 ವಜ್ರದಂತೆ ಕಾಂತಿ ಪ್ರಜ್ವಲಿಸುತ್ತಲೀ ಗೆಜ್ಜೆಪಾದದಿಂದ್ಹೆಜ್ಜೆಯನಿಡುತಲೀಗ2 ಮಾರನಮಾತೆಯು ಮುಂಗುರುಳನೇ ತಿದ್ದಿ ಮುಡಿಯ ಮೇಲಿನ ಮಲ್ಲಿಗೆ ಉದುರುತ್ತ 3 ಕಡಗ ಕಂಕಣವು ಬೆಡಗಿನಿಂದಾಲಿಟ್ಟು ನಡಮುಡಿಮೇಲೆ ಅಡಿಯನಿಡುತಲೀಗ 4 ಕುಕ್ಷಿಯೊಳೀರೇಳು ಜಗವಪೊತ್ತುವನಾ ವಕ್ಷಸ್ಥಳದ ಲಕ್ಷ್ಮಿ ಬಂದಾಳೀಗ 5 ಹರಿಯ ಮಂದಿರಕ್ಕೆ ಸರಸದಿಂದಲೀಗ ಓರೆನೋಟದಿಂದ ಮುಗುಳು ನಗೆಯ ನಗುತ 6 ಚಂದದಿಂದಲೀಗ ಬಂದು ಕುಳಿತುಕೊಂಡು ಮಂದ ಭಾಗ್ಯಳಿಗಾನಂದವ ಕೊಡುವಳು 7 ಇಂದಿರೆ ದೇವನ್ನ ಬಂಧನವಾ ಬಿಡಿಸಿ ತಂದೆಗೋವಿಂದನ್ನ ಕಂಡು ತೋರೆ ತಾಯಿ 8 ರಮಾವಲ್ಲಭವಿಠಲನ ಸ್ಮರಣೆಯು ನಿರುತ ಮಾಡುವಂಥ ವರವ ಕೊಡು ತಾಯೆ 9
--------------
ಸರಸಾಬಾಯಿ
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬರಿದು ಬಂದಿಹೆನೀಗ ಹಿರಿಮೆಯನು ಕಂಡರಿತು ಹರಸು ಸಂಗವ ಕೊಟ್ಟು ದಡಹಾಯ್ದು ಬಂದಿಹೆನು ಪ ಹುಟ್ಟು ಸಾವಿನ ಗಂಟು ಕಡುಪಾಪಿಯಾಗಿಸಿದೆ ಮುಟ್ಟಿ ನಿನ್ನನು ನಾನು ಎಂತು ಕಾಣುವೆನಯ್ಯ ಅ.ಪ ದಣಿದು ಬಂದಿಹೆ ದೇವ ಗತಿಯ ಕಾಣದೆ ಮುಂದೆ ತಣಿದಬಾಳಿನ ನನ್ನ ಜೀವವ ಚಂದವಾಗಿಸು ರಂಗ ಕುಣಿದು ಬರುವನು ನೀನು ಸರಿದುಹೋಗುವೆ ನಾನು ಮಣಿಸಿ ಬಂಧವ ಬಂದು ತಡೆದು ಕಾಪಿಡೊ ರಂಗ 1 ಕಣ್ಣು ಹೋಗಿಸು ನಿನ್ನಲಿ ಮಣ್ಣು ಬಯಕೆಯ ತಪ್ಪಿಸು ಕಾ - ಮನ್ನ ಸೇರಿಸು ನಿನ್ನಲಿ ನಲಿದು ಹಾಡಿಸು ನನ್ನನು ಕಾ - ರುಣ್ಯ ತೋರೈ ನನ್ನಲಿ ಮನವು ನನ್ನದು ಆಗಲಿ ಅಣ್ಣ ಶೆಲ್ವದೇವ ನೀ ನನಗಾಗಿ ತೋರಿಸಿಕೋ 2
--------------
ಸಂಪತ್ತಯ್ಯಂಗಾರ್
ಬಲು ರಮ್ಯವಾಗಿದೆ ಹರಿಯ ಮಂಚ ಪ ಎಲರುಣಿಕುಲ ರಾಜ ರಾಜೇಶ್ವರನ ಮಂಚಅ.ಪ. ಪವನತನಯನ ಮಂಚ ಪಾವನತರ ಮಂಚ ಭುವನತ್ರಯನ ಪೊತ್ತ ಭಾರಿಮಂಚ ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ 1 ನೀಲಾಂಬರವನುಟ್ಟು ನಳನಳಿಸುವ ಮಂಚ ನಾಲಗೆ ಎರಡುಳ್ಳ ನೈಜಮಂಚ ನಾಲ್ವತ್ತು ಕಲ್ಪದಿ ತಪವ ಮಡಿದ ಮಂಚ ತಾಲ ಮುಸಲ ಹಲವ ಪಿಡಿದಿರುವ ಮಂಚ 2 ರಾಮನನುಜನಾಗಿ ರಣವ ಜಯಿಸಿದ ಮಂಚ ತಾಮಸ ರುದ್ರನನು ಪಡೆದ ಮಂಚ ಭಿಮಾವರಜನೊಳು ಆವೇಶಿಸಿದ ಮಂಚ ಜೀಮೂತ ಮಂಡಲವ ತಡೆಗಟ್ಟಿದ ಮಂಚ 3 ಜೀವನಾಮಕನೆನಿಸಿ ವ್ಯಾಪ್ತನಾದ ಹರಿಯ ಸೇವಿಸಿ ಸುಖಿಸುವ ದಿವ್ಯ ಮಂಚ ಸಾವಿರ ಮುಖದಿಂದ ತುತ್ತಿಸಿ ಹಿಗ್ಗುವ ಮಂಚ ದೇವಕೀಜಠರದಿ ಜನಿಸಿದ ಮಂಚ4 ವಾರುಣೀ ದೇವಿ ವರನೆನಿಸಿದ ಮಂಚ ಸಾರುವ ಭಕುತರ ಸಲಹೊ ಮಂಚ ಕಾರುಣ್ಯನಿಧಿ ಜಗನ್ನಾಥ ವಿಠಲನ ವಿ ಹಾರಕ್ಕೆ ಯೋಗ್ಯವಾದ ವಿಮಲ ಶೇಷ ಮಂಚ5
--------------
ಜಗನ್ನಾಥದಾಸರು
ಬಾಯಿ ನಾರಿದ ಮೇಲೆ ಏಕಾಂತವೆತಾಯಿ ತೀರಿದ ಮೇಲೆ ತೌರಾಸೆಯೆ ಪ ಕಣ್ಣು ಕೆಟ್ಟ ಮೇಲೆ ಕಡುರೂಪು ಚೆಲ್ವಿಕೆಯೆಬಣ್ಣಗುಂದಿದ ಮೇಲೆ ಬಹುಮಾನವೆಪುಣ್ಯ ತೀರಿದ ಮೇಲೆ ಪರಲೋಕ ಸಾಧನವೆಸುಣ್ಣವಿಲ್ಲದ ವೀಳ್ಯವದು ಸ್ವಾದುಮಯವೆ 1 ಕಿಲುಬಿನಾ ಬಟ್ಟಲೊಳು ಹುಳಿ ಕಲಸಿ ಉಣಬಹುದೆಚಳಿಜ್ವರಕೆ ಚಂದನದ ಲೇಪ ಹಿತವೆಮೊಲೆಬಿದ್ದ ಹೆಣ್ಣಿನೊಳು ಮೋಹಕ್ಕೆ ಸೊಗಸಹುದೆಬೆಲೆಬಿದ್ದ ಸರಕಿನೊಳು ಲಾಭ ಉಂಟೆ 2 ನಿತ್ಯ ಸುಖವೆನಬಹುದೆಸತ್ತ್ವ ತಗ್ಗಿದ ಮೇಲೆ ಸಾಮಥ್ರ್ಯವೆಪೃಥ್ವಿಯೊಳು ಕಾಗಿನೆಲೆಯಾದಿಕೇಶವ ನಿನ್ನಸತ್ಯವಾದ ಭಕ್ತಿ ಇರದವಗೆ ಮುಕ್ತಿಯುಂಟೆ 3
--------------
ಕನಕದಾಸ
ಬಾರಕ್ಕಾ ನಾವಿಬ್ಬರಾಡುವಾ ಯೋಗ ಸಾಧನವೆಂಬುದು ಮಾಡುವಾ ತಾಮಸ ತನುಗುಣಗಳ ಬಿಟ್ಟು ಸುಜ್ಞಾನ ಕ್ಷೀರ ಸಾಗರದೊಲಗಾಡುವಾ ಪ ಕಳೆಗೂಡಿ ಒಳನೋಟ ನೋಡುವಾ ಅಲ್ಲಿ ಒಳಸಭೆ ಪ್ರಭೆಯೊಳಗಾಡುವಾ ಥಳಥಳಿಸುವ ಮೆರೆವ ಚಿದಾತ್ಮನ ಬೆಳಕಿನೊಳ್ ಬೆಳಕಾಗಿ ಪರವಶವಾಗುವಾ 1 ಅಂಬಾ ಚಂದನ ಗಂಧಿಯೇ ಶಾರ ದಾಂಬಾ ಸುಪ್ರದವೇಣಿಯೇ ಶಂಭು ಸದ್ಗುರು ಎನ್ನೊಳು ಕಡೆನೋಡೆ ಕಂಬುಕಂಠಿನಿ ಚಲ್ವ ಕಮಲದಳಾಕ್ಷಿ 2 ಎಂಟೆರಡು ಕದಗಳ ಕಟ್ಟುವಾ ಅಲ್ಲಿ ಬಂಟರ ತಡೆಗಳ ಅಟ್ಟುವಾ ಮಂಟಪವೆಂಬುದು ಮಹಾಲಿಂಗನದೆಡೆ ಅಂತರಂಗದ ಕಾಂತೆಗಾಡುವಾ 3 ಮಂದರ ಗಿರಿಯಂತೆ ಅಲ್ಲಿ ಭೋರೈಸುವ ಘಂಟಾ ಧ್ವನಿಯಂತೆ ಸಾರ ಅಮೃತವುಂಡು ಕ್ಷೀರಸಾಗರಮಿಂದು ತೋರುವ ಗುರು ವಿಮಲಾನಂದಾ 4
--------------
ಭಟಕಳ ಅಪ್ಪಯ್ಯ