ಒಟ್ಟು 483 ಕಡೆಗಳಲ್ಲಿ , 77 ದಾಸರು , 433 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಲಗೆ ಪಟ್ಟಗಟ್ಟಿಸು ಪರಿವಾರವ ಬಾಳಿಸು ಮುನ್ನಿನಂದದಲಿ ಸುತನ ಮುಂದಿಟ್ಟು 151 ಇಕ್ಷ್ವಾಕುಕುಲತಿಲಕನೆ ನಿನ್ನ ರಾಜ್ಯವ ಒಪ್ಪಿಸಿಕೊಳಲೆನಗಳವೆ ಪುತ್ರಗೆ ಪಟ್ಟವ ಕಟ್ಟುವುದೇನು ಕಾರಣ ವಿಸ್ತಾರವಾಗಿ ಹೇಳೆಂದ 152 ಕೇಳಿದೆ ಕರ್ಣದಿ ಹೀನದ ವಾಕ್ಯವ ಜಾರತ್ವ ಬಂದಿತಾತ್ಮಜೆಗೆ ಮಾಡುವೆನು 153 ಅಮರಲೋಕಕ್ಕೆ ವಶವಹರು ಭಾಧೆಗೆ ಗುರಿಯಾಗಿ 154 ವ್ಯರ್ಥವಾಯಿತು ಎನ್ನ ಬದುಕು ಮಾಡಿಕೊಂಬೆನೆಂದ 155 ಕಥೆಯ ಕೇಳರಿಯಾ ಕುಂದನೊದ್ದವರಾರು ಜಗದಿ 156 ಮೀರಿದರಾರೊ ಕಲ್ಪನೆಯ 157 ಸರ್ವಾಂಗದಿಂದ ಸುಂದರಿಯು ಸತಿ ಲಾಂಛನೆಯ ತಾಳಿದನು 158 ಸೆರೆತಂದ ತಾರಾದೇವಿಯನು ಪಾಡೇನು ಭೂಪಾಲ 159 ಕುಮಾರತಿಯ ಮಂದಿರಕೆ ಅರುಹಿದರಾರು ನಿನ್ನೊಡನೆ 160 ನಿಲ್ಲಿಸಿದ ಪ್ರಧಾನಿ ನಡೆತಂದ ಸೆಜ್ಜೆವಾಹರಿಗೆ 161 ಮಲಿನವನುಟ್ಟ ಮಾನಿನಿಯ ಸೆಳೆವಿಡಿದೆತ್ತಿದ ರಾಯ 162 ಮಾಜುವದೇಕೆ ಎನ್ನೊಡನೆ ಬ್ರಾಹ್ಮರು ಮೆಚ್ಚುವಂತೆ 163 ಸುರರೊ ನರರೊ ಕಿನ್ನರರೊ ಗಿರಿಜೇಶನಾಣೆ ಹೇಳೆಂದ 164 ವಿಶ್ವಲೋಚನನಂಘ್ರಿಯಾಣೆ 165 ಸರಿಯ ನಾರಿಯರು ಉರಿವ ಪಾವಕನ 166 ಬ್ರಾಹ್ಮರಿಗ್ಯೊಗ್ಯವಹುದೆ ಬರುವುದು ನಿಮ್ಮ ಕುಲಕೆ 167 ಪಾತಕಿಯೆಂದು ತಿಳಿದು ಬರುವುದೆ ಉಚಿತವು 168 ಮುನಿದು ಅರಣ್ಯಕ್ಹೋಗುವರೆ ವರಿಸು ನಿನಗೆ ಉತ್ತುಮವುಳ್ಳ ಪುರಷಗೆ ಧಾರೆಯನೆರೆವೆನು 169 ಪಾತಕ ಬರಿದೆ ನಿಂದ್ಯವನು (ಅ) ಬಂದೊದಗಿದ ಮೇಲೆ 170 ತೂಪಿರಿದು ಮಂತರಿಸಿ ಘೋರ ಕಾನನಕೆ 171 ಗುರಿಮಾಡಿ ನಾರಿ ಕಂಬನಿದುಂಬಿದಳು 172 ವಶವಲ್ಲದಂಥ ಮೂಗುತಿಯ ಬಿಸುಸುಯ್ವದೇತಕೆ ತಾಯೆ 173 ಕುಮಾರಿಯ ಮೇಲೆ ಸ್ನೇಹದಲಿ ವಿಧಿಯೆಂದ್ಹೊರಳಿದಳು 174 ಅಳುವುದೇತಕೆ ತಾಯೆ ನೀನು ಕಲ್ಮಾಡು ನಿನ್ನ ದೇಹವನು 175 ಹೇಳಿದನೇಕಾಂತದಲಿ ಉದಯಕೆ ಬನ್ನಿರೆಂದ 176 ಕರೆಸಿದನಾಗ ಕಿಂಕರರ ಪ್ರಧಾನಿಯು ತರಿಸಿದನೊಜ್ರದಂದಣವ ಬನ್ನಿರಿ ಶೀಘ್ರದಿಂದ 177 ಮಾಡಿರಿಮನಕೆ ಬಂದುದನು ನಾನಿಡುವೆ ರಾಯನ ಮುಂದೆ 178 ಮೇಲೆ ಪನ್ನಂಗ ಕವಿದವು ಶೀಘ್ರದಿ ಪೊತ್ತು ನಡೆದರು 179 ಬಸವಳಿದಳು ಶ್ರೀ ಹರಿಯ ಸ್ತುತಿಸುತಿರ್ದಳೆ ತನ್ನ ಮನದಿ 180 ಕಾಲನ ವಶಕೆÉ ಒಪ್ಪಿಸದೆ ಪಾದಾರವಿಂದೊಳಿರಿಸು 181 ಭಾರವನ್ಹೊತ್ತು ಬಳಲಿ ಬಾಯಾರುತ್ತ ಏರುತ್ತ ಘಟ್ಟ ಬೆಟ್ಟಗಳ ಬಾಲೆಯ ತಂದಿಳುಹಿದರು 182 ಬಾ ಬಳಲಿದೆಯೆನುತ ರಂಭೆಯನುಪಚರಿಸಿದರು 183 ತೊಪ್ಪಲ ಮೇಲ್ಹರಹಿದರು ಕತ್ತಿಗೆ ಮಯ್ಯನಿಕ್ಕಿದಳು 184 ಕಂಬುಚಕ್ರಧಾರಿ ವೈಕುಂಠವಾಸಗೆ ವಂದಿಸಿದಳು ತನ್ನ ಮನದಿ ಸ್ತುತಿಯ ಮಾಡಿದಳು 185 ಅರಣ್ಯದಲ್ಲಿ ತನ್ನ ನೆನೆವ ಕುಮಾರಿಗೆ ಕಾರುಣ್ಯದಿಂದೊದಗಿದನು ನಿದ್ರೆ ಕವಿದವು 186 ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಭಕ್ತರಿಗೊಜ್ರಪಂಜರನೆ ದೂತರ ಮನವ 187 ಯೋಚಿಸಿ ತಮ್ಮ ಮನದಿ ಪಾತಕ ಎತ್ತಿದಾಯುಧವನಿಳುಹಿದರು 188 ಒಬ್ಬರೊಬ್ಬರು ಮಾತನಾಡಿ ಉರ್ವೀಶಗೊಯ್ದು ಒಪ್ಪಿಸುವ 189 ವಾರಿಜಗಂಧಿಯ ಬಿಟ್ಟು ರಾಯಗೆ ಗುರುತ ತೋರಿದರು 190 ತಪ್ಪದೆ ರಾಯನೋಲಗಕೆ ಚಿತ್ತೈಸು ಜೀಯವಧಾನ 191 ತಂದೆವು ಮುದ್ರೆಯುಂಗುರವ ಮನದಲಿ ಮರುಗಿದನು 192 ಅಂಜೂರ ಕೊಯ್ದು ಕೊಟ್ಟಂತೆ ಬೆಂದೊಡಲನೆಂತು ಪೊರೆಯಲಿ 193 ಕೆಂಡದೊಳಾಜ್ಯ ಬಿದ್ದಂತೆ ಬೆಂದರು ಶೋಕಾಗ್ನಿಯಿಂದ 194 ಮೇಲೆ ಸ್ನೇಹದಲಿ ತಲೆಯೆತ್ತಿದವಬ್ಜ ಬಂಧುಗಳು 195 ಹಸಿದ ಹೆಬ್ಬುಲಿಗೆ 196 ಬೆದರುವಳು ವ್ಯಾಘ್ರದಟ್ಟುಳಿಗೆ ಮರಳಿ ಧೈರ್ಯವನೆ ಮಾಡುವಳು 197 ಮಾಯಪಾಶಕೆ ಗುರಿಮಾಡಿ ಮುಕ್ತಿ ಸಾಧನವು 198
--------------
ಹೆಳವನಕಟ್ಟೆ ಗಿರಿಯಮ್ಮ
ಬಾಲನೇನೆ ನಿನ್ನ ಮಗನು ಗೋ- ಪಾಲಕೃಷ್ಣನು ಪ. ಬಾಲನೇನೆ ನಿನ್ನಮಗನು ಬಾಲಕಿಯರಾಲಯ ಪೊಕ್ಕು ಶೀಲಗೆಡಿಸಿ ಸಾಲದೆ ಗೋ- ಕುಲವನು ಸೂರೆಮಾಡಿದ ಅ.ಪ. ಕಾಲು ಇಲ್ಲದೆ ನಡೆವನೀತ ಮೇಲುಗಿರಿಯ ಬೆನ್ನಲಾಂತ ಮೂಲಬೇರ ಮೆಲ್ಲುವಾತ ಜ್ವಾಲರೂಪಿ ಸ್ಥೂಲಕಾಯ ಬಾಲನಾಗಿ ಭೂಮಿಬೇಡಿದ ಹಾಲು ಕುಡಿಸಿದ ತಾಯ ಎರವು ಮಾಡಿದ ವಲ್ಕಲವನುಟ್ಟು ಅಡವಿ ಆಲಯವ ತಿರುಗಿದ ಶ್ರೀರಾಮಚಂದ್ರ ವೇಲಾಪುರದ ಸೋರುಮುಡಿಯ ಬಾಲೆಯನು ಸೋಲಿಸಿ ಕಾಲದಲ್ಲಿ ಕಲ್ಕ್ಯನಾದ 1 ಮಡುವಿನಲ್ಲಿ ಅಡಗಿಯಿರುವ ಪೊಡವಿ ದೊಡ್ಡನೆತ್ತಿ ಪೊರೆವ ಅಡವಿಯಲ್ಲಿ ಆಡುತಿರುವ ಕಡುಕ್ರೂರ ಹಿಡಿದ ಹಟವ ಹುಡುಗನಾಗಿ ಪೊಡವಿ ಬೇಡಿದ ಕೊಡಲಿ ಪಿಡಿದು ಕಡಿದು ಕ್ಷತ್ರಿಯರ ಕುಲವ ತರಿದನೆ ರಾವಣಾದಿ ಪಡೆಯನೆಲ್ಲ ಸಂಹರಿಸಿದ ಶ್ರೀರಾಮಚಂದ್ರ ತುಡುಗು ಮಾಡಿ ಗಡಿಗೆ ಪಾಲ ಕುಡಿದು ಕಡಹದಲ್ಲಿ ಅಡಗಿ ಬಿಡದೆ ತ್ರಿಪುರವ್ರತಕೆಡಿಸಿ ಪಿಡಿದು ತೇಜಿಯ ನಡೆಸುತಿಹನು 2 ನೀರಪೊಕ್ಕು ವೇದತಂದು ಭಾರಪೊತ್ತು ಬೆನ್ನಲಿಟ್ಟು ಕೋರೆಹಲ್ಲು ತೋರುವ ಕ್ರೂರವದನ ಅಪಾರ ಮಹಿಮ ಪಾದ ಭೂಮಿ ಬೇಡಿದ ವಿಪ್ರರ ಕರೆಸಿ ಧಾರುಣಿಯನೆ ದಾನ ಮಾಡಿದ ಪರ್ವತಗಳ ತರಿಸಿ ಶರಧಿಯನ್ನು ಸೇತುಕಟ್ಟಿದನೆ ಶ್ರೀರಾಮಚಂದ್ರ ಜಾರ ಚೋರ ಮಾರನಯ್ಯ ನಾರೇರಪ್ಪಿ ಮರುಳುಮಾಡಿ ವಾರಿಜಾಕ್ಷ ಹಯವದನ ಏರಿ ಕುದುರೆ ವೈಹಾಳಿಮಾಡಿದ 3
--------------
ವಾದಿರಾಜ
ಬಾಳೊ ಸುಖದಿ ಬಾಲನೆ ವರಗುಣ ಶೀಲನೆ ಪ ಬಾಳೊ ಸುಖದಿ ಬಹುಕಾಲಶ್ರೀವೇಣು ಗೋ- ಪಾಲನ ದಯದಿ ಸುಶೀಲ ಸತಿಯಳ ಕೂಡಿ 1 ಪಾದ ತೋಯಜ ಸ್ಮರಿಸುತ ಕಾಯದಾರೋಗ್ಯದೀರ್ಘಾಯುತ್ವವ ಪಡೆದು 2 ಕೃದ್ಧನಾಗದೆ ಜ್ಞಾನ ವೃದ್ಧರಸೇವಿಸಿ ಮಧ್ವಮತದ ತತ್ವ ಶ್ರದ್ಧದಿ ಕೇಳುತ 3 ತಂದೆ ತಾಯಿಗಳಲ್ಲಿ ಇಂದಿರೆರಮಣನೆ ನಿಂದು ಪಾಲಿಪನೆಂದು ವಂದನೆ ಪಾಡುತ 4 ಭಕ್ತಿಯಿಂದತಿಥಿಗಳ ನಿತ್ಯದಿ ಸೇವಿಸುತ ಪುತ್ರ ಪೌತ್ರಾದಿ ಸಂಪತ್ತಿಯ ಪಡೆದು 5 ಭೂಸುರರೊಡಗೂಡಿ ತೋಷದಿಕೃತ ಹರಿ ವಾಸರ ವೃತ ಫಲ ಶ್ರೀಶನಿಗರ್ಪಿಸುತ 6 ಧಾರುಣಿಯೊಳು ಕೃಷ್ಣಾತೀರ ಕಾರ್ಪರನಿಲಯ ನಾರಸಿಂಹನ ಪದ ವಾರಿಜ ಸೇವಿಸುತ 7
--------------
ಕಾರ್ಪರ ನರಹರಿದಾಸರು
ಬಿಡದಿರು ಕೈಯ್ಯ ರಂಗ ಒಡೆಯ ಶ್ರೀ ನರಸಿಂಗ ಬಡವನ ಮೇಲಪಾಂಗವಿಡುರಮಾಲಿಂಗಿತಾಂಗ ಪ. ನುಡಿವ ಮಾತುಗಳ ನಿನ್ನಡಿಗಳ ಸ್ತವವೆಂದು ಒಡಂಬಡೊ ನಿಜ ದಾಸ ಭಿಡೆಯ ಮೀರದ ದೇವ 1 ವಾರಿಜನಾಭ ನಿನ್ನ ಪ್ರೇರಣೆಯಿಂದ ಸರ್ವ ಧಾರುಣಿವರರ ದಯಾರಸ ದೊರೆವುದು 2 ಅಂಬುಜಾಲಧರಬಿಂಬಫಲಾಮೃತ ಚುಂಬನಲೋಲ ನೀ ಬೆಂಬಲಾಗಿರು3 ಹರಿ ನಿನ್ನ ಕೃಪಾರಸವಿರಲು ಚತುರ್ವಿಧ ಪುರುಷಾರ್ಥವೆಲ್ಲ ಸೇರಿ ಬರುವದೆಂದರಿದೆನು 4 ದುರಿತರಾಶಿಗಳನ್ನು ತರಿವರೆ ಶಕ್ತನಾದಪರಮಪಾವನ ಶೇಷಗಿರಿವರನೆಂದೆಂದಿಗು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬೆಳಕಾ ತೋರಿಸೊ ಯೋಗಿಂದ್ರರ ಜನಕಾ |ಮಂತ್ರಾಲಯ ಪುರ ಪಾಲಕ ಪ ಫಾಲನಯನ ಪ್ರಿಯ | ಪಾಲಾಬ್ಭಿ ಶಾಯಿಯಶೀಲ ಮೂರುತಿ ತೋರೊ | ಮೇಲು ಕರುಣದಿ ಅ.ಪ. ಪತಿ ಭ್ರಾತೃ | ಪೇರ್ಮೆಯಿಂದಲಿ ನಿನ್ನನಿರ್ಮಮತಗೆ ಮೆಚ್ಚಿ | ಪರ್ಮನ ಮಾಡಿದ 1 ಕ್ಷಿತಿ ದೇಶವು 2 ಸಿರಿಗುರು ಗೋವಿಂದ ವಿಠ್ಠಲನಾ | ಭವ್ಯ ಸುಚರಣಾಸರಸಿಜ ಹೃದ್ವಾರಿಜದಲಿ ಪವನಾ | ನಲಿ ಸ್ಥಿತನಾಗಿಹನಾ |ತೋರಿ ಪೊರೆಯೊ | ಕರುಣಾಕರ ಗುರು ಸಾರಿ ಭಜಿಪೆ ತವ | ಚರಣಾಂಬುರುಹವ 3
--------------
ಗುರುಗೋವಿಂದವಿಠಲರು
ಭಕ್ತವತ್ಸಲ ಭವಭಯ ಹರನೆ ಭಕ್ತಿ ಮುಕ್ತಿದ ಪರಿಪಾಲಿಸು ಧೀರನೆ ಪ. ಪ್ರತಿದಿನ ಉದಯಾರಂಭಿಸಿ ನಾ ಮಾಡುವ ಪಾಪ ತತಿಗಳನೆಲ್ಲವ ಭಸಿತಗೈಸಿ ಪತಿತಪಾವನ ಪರಮಾತ್ಮನ ರೂಪ ಶ್ರೀ- ಪಾದ ಸಂಸ್ಮøತಿಯಿತ್ತು ಕರುಣಿಸು 1 ವರದೇಶ ನಿನ್ನಯ ಚರಣಾರವಿಂದವ ಶರಣೆಂದು ನಂಬಿದ ನರರಿಗಿನ್ನು ಪುರುಷಾರ್ಥಗಳ ಸೇರಿ ಬರುವರಾಶ್ಚರಿಯವೆ ಕರಿರಾಜಗೊಲಿದ ಶ್ರೀಕರಮೂರ್ತಿ ದಯವಾಗು 2 ಘೋರ ಸಂಸೃತಿ ಪಾರಾವಾರ ದಾಟಿಸಲು ಬೇರಾರಿಲ್ಲ ನಿಜ ದಾಸೋದ್ಧಾರ ಹರೆ ವಾರಿಜಾಂಬಕ ವೆಂಕಟಾಚಲನಾಯಕ ಗಾರುಮಾಡದೆ ಬೇಗ ಬಾರೋ ಹೃತ್ಕಮಲದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಜನೆ ಶ್ರೀ ರಾಮ ಭಜನೆ ಆಮ್ನಾಯ ವಿಸ್ತರ | ಭೂಮಾ ಗುಣಾರ್ಣವಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಪ ಶ್ರೀಶನೇ ವಿಭುದೇಶನೇ ||ಅಸುರಿ ವೃಷಹರ | ಶೇಷಾದ್ರಿ ಮಂದಿರಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಅ.ಪ. ಪೃಥ್ವಿಧರಾಧರ | ಸತ್ಯ ಮನೋಹರಭಕ್ತಾರ್ತಿ ಪರಿಹರ | ರಾಮ್ ರಾಮ್ ರಾಮ್‍ನಿತ್ಯನೇ ನಿರ್ಲಿಪ್ತನೇ ||ಶಕ್ತ್ಯಾದಿ ರೂಪಧರ | ಆಪ್ತರೊಳಗೆ ವರಭೃತ್ಯರ್ಗ ಭೀಷ್ವದ | ರಾಮ್ ರಾಮ್ ರಾಮ್ 1 ದಾನವ ಧ್ವಂಸನೆ | ಆನಂದ ಪೂರ್ಣನೆಆನಂದ ಮುನಿನುತ | ರಾಮ್ ರಾಮ್ ರಾಮ್‍ಶ್ರೀ ನಿಧೇ ಕರುಣಾಂಬುಧೇ ||ಮಾನುನಿ ವರದನೆ | ಮೌನಿಯ ಕಾಯ್ದನೆಜ್ಞಾನ ಸುಗಮ್ಯನೆ | ರಾಮ್ ರಾಮ್ ರಾಮ್ 2 ಈಶಾಹಿ ವಂದ್ಯನೆ | ವಾಸಿಷ್ಠ ಕೃಷ್ಣನೆವಸುದೇವ ತನಯನೆ | ರಾಮ್ ರಾಮ್ ರಾಮ್‍ಈಶನೇ ವರದೇಶನೇ ||ದಶಾಸ್ಯ ಕುಲವನ | ಕೃಶಾನು ಎನಿಪನೆದಾಶರಥಿüಯೆ ಪಾಹಿ | ರಾಮ್ ರಾಮ್ ರಾಮ್ 3 ಕಾಯ ಸೂರ್ಯ ವೀರ್ಯದಾತಪ್ರೇರ್ಯ ಪ್ರೇರಕ ಪಾಹಿ | ರಾಮ್ ರಾಮ್ ರಾಮ್ 4 ನೀರದ ನಿಭಕಾಯ | ವಾರಿಜಾಕ್ಷಿಗೆ ಪ್ರಿಯನಾರಿ ಚೋರಾರಿಯೆ | ರಾಮ್ ರಾಮ್ ರಾಮ್‍ಧೀರನೆ ಗಂಭೀರನೇ ||ಮೂರು ಲೋಕಗಳಲ್ಲಿ | ಆರುಂಟು ನಿನ್ನ ಸರಿಕಾರುಣ್ಯ ಮೂರುತಿ | ರಾಮ್ ರಾಮ್ ರಾಮ್5 ಪತಿ | ನಂಬೀದ ಭಕ್ತರಬೆಂಬಿಡದಲೆ ಕಾವ | ರಾಮ್ ರಾಮ್ ರಾಮ್ 6 ಜಗ ಪ್ರಾಣನೊಳಗೆ ಇದ್ದು | ಜಗವನ್ನು ಸೃಜಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್‍ಪ್ರಾಣನೇ ಜಗತ್ತ್ರಾಣನೇ ||ಅಗಜೆ ಪತಿಯೊಳಿದ್ದು | ಜಗವೆಲ್ಲ ಲಯಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್ 7 ಪ್ರಾಣನೀತಾನುಜ | ಪ್ರಾಣದಾತೃ ಹರಿಪ್ರಾಣಂಗೆ ಪ್ರಾಣನೆ | ರಾಮ್ ರಾಮ್ ರಾಮ್‍ಪ್ರಾಣನಾ ಆಲಿಗಂನಾ ||ನೀನಾಗಿ ಮಾಡಿ ಅವಗೆ | ಸಾಷ್ರ್ಣಿ ಮುಕ್ತಿಯನಿತ್ತೆಕಾಣೆ ಕಾರುಣ್ಯ ಕೆಣೆ | ರಾಮ್ ರಾಮ್ ರಾಮ್ 8 ಅಂಜನಿ ಸುತನಾಗಿ | ಕಂಜಸಖನಿಗ್ಹಾರ್ದಸಂಜೀವ ಧರ ಧರ | ರಾಮ್ ರಾಮ್ ರಾಮ್‍ದೈತ್ಯನಾ ಪ್ರಭಂಜನಾ ||ಸಂಜೆಯ ಚರರನು | ಭಂಜಿಸಿ ಅರ್ಪಿಸಿದಸಂಜೀವರಾಯ ಪಿತ | ರಾಮ್ ರಾಮ್ ರಾಮ್ 9 ಪತಿ | ಪದ್ಮಾಸನನ ಪಿತಪದ್ಮನಾಭನೆ ಪಾಹಿ | ರಾಮ್ ರಾಮ್ ರಾಮ್‍ರುದ್ಧನೇ ಅನಿರುದ್ಧನೇ ||ಮುದ್ದಿನ ಮೊಗದವ | ಗೆದ್ದು ಕುಜನ ತತಿಸದ್ಮದೊಳಗೆ ತೋರೊ | ರಾಮ್ ರಾಮ್ ರಾಮ್ 9 ಇಂದಿರೆ ರಮಣನೆ | ಚಂದಿರ ವದನನೆಮಂದರೋದ್ಧಾರಿಯೆ | ರಾಮ್ ರಾಮ್ ರಾಮ್‍ಸುಂದರಾ ಬಹು ಸುಂದರಾ ||ಕಂದರ್ಪ ಕೋಟಿ ಬಹು | ಸುಂದರ ಗುರು ಗೋ-ವಿಂದ ವಿಠಲ ಪಾಹಿ | ರಾಮ್ ರಾಮ್ ರಾಮ್10
--------------
ಗುರುಗೋವಿಂದವಿಠಲರು
ಭವ ಹರಣ ನತ ಶರಣ ಪ ಲೀಲಾ ವಿನೋದದಲಿ ಮೂಜಗವ ಸೃಜಿಸಿ ಪಾಲಿಸುವೆ ನಿನ್ನ ವ್ಯಾಪಾರವನುಸರಿಸಿ ಕಾಲಕಾಲಾರ್ಚಿತನೆ ಕಲುಷಹರನೆಂದು ನೀಲಾಹಿವೇಣಿಯರು ನಿನ್ನ ತೂಗುವರು 1 ಶೇಷ ಪರಿಯಂಕದಲಿ ಶ್ರೀ ಸಮೇತದಲಿ ತೋಷದಿಂ ಪವಡಿಸುವೆ ಪ್ರಳಯ ವಾರಿಯಲಿ ಭಾಷಾಪತಿಯ ಪಡದೆ ನಾಭಿ ಕಮಲದಲಿ ಪೋಷಿಸುವೆ ಜೀವರನು ಸರ್ವಕಾಲದಲಿ 2 ಶ್ರೀರಾಮ ಮಾಧವಾಶ್ರಿತಜನೋದ್ಧಾರಾ ನಾರಾಯಣಾಚ್ಚುತಾನಂತಾವತಾರ ವಾರಿಜಾಯತ ನೇತ್ರ ಗುರುರಾಮವಿಠಲಾ 3
--------------
ಗುರುರಾಮವಿಠಲ
ಭಾರ ನಿನ್ನದೋ ಮಾರಜನಕ ಭಾರ ನಿನ್ನದೊ ಪ ಭಾರ ನಿನ್ನದಯ್ಯ ಸರ್ವ ಸಾರತರದಿ ಕಾಯುವಂಥ ಪಾರಮಹಿಮ ನಿನ್ನ ಚರಣ ವಾರಿಜವೇ ಗತಿ ಎನಗೆ 1 ನಿನ್ನ ಧ್ಯಾನವೆ ಪರುವಕಾಲ ನಿನ್ನ ನಾಮವೆ ಸೌಖ್ಯ ಸಕಲ ನಿನ್ನ ಕೀರ್ತನೆನಗೆ ಸುಫಲ ಪನ್ನಂಗಶಯನ ವೇಣುಗೋಪಾಲ 2 ಕರಿ ಸಂಕಟ ವನ್ನು ನಿರುತ ಗೆಲಿದನಕಟ ನಿನ್ನ ಭಜಿಸಿ ವಿಭೀಷಣ ಪಟ್ಟ ವನ್ನು ಸ್ಥಿರಪಡೆದ ದಿಟ 3 ಜಯ ನಿನ್ನ ಧ್ಯಾನವೆಂದೆ ಜಯ ನಿನ್ನ ಚರಣವೆಂದೆ ಜಯ ನಿಖಿಲ ನಿನ್ನದೆಂದೆ ದಯಪಾಲಿಸು ಶ್ರೀರಾಮ ತಂದೆ 4
--------------
ರಾಮದಾಸರು
ಭಾರತಿದೇವಿ ಭರತನ ರಾಣಿ ಭಾರವು ನಿನ್ನದು ತಾಯೆ ಧಾರುಣಿಯೊಳು ನಿನ್ನಾ ಕೀರುತಿ ಕೇಳಿ ಸಾರಿದೆ ನಿನ್ನನು ಸಾರಭಕುತಿಯನಿತ್ತು ಪಾರುಗಾಣಿಸು ವೈ ಕಾರಿಕಸುರಕರವಾರಿಜ ಪೂಜಿತ ಚಾರುಚರಣಯುಗ ತೋರಿಸಿ ಎನ ಮನೋ- ನೀರಜದಲಿ ನಿಂದು ಮಾರಮಣನ ಪಾದ ಸೇರಿಪ ಭಕ್ತಿಯ ದಾರಿಯನಿತ್ತು ಭವ ದÀೂರನ ಮಾಡೆಂದು ಸಾರಿದೆ ಸಾರಿದೆ ಮಾರಜನಕ ಗುರು ಜಗನ್ನಾಥವಿಠಲನ ತೋರಿಸು ತೋರಿಸು ದೂರಮಾಡದಲೆ
--------------
ಗುರುಜಗನ್ನಾಥದಾಸರು
ಭಾರತೀ ದೇವಿ ಜಗದುದರನ ಸೊಸೆಯೆ ಶ್ರೀ ವಾಯು ಸತಿಯೆ ಜಗದುದರನ ಸೊಸೆಯೆ ಪ. ಸುಗುಣಿ ನಿನ್ನ ನಾ ಬಗೆ ಬಗೆ ವರ್ಣಿಸೆ ಜಗದೊಳು ಖ್ಯಾತೆಯೆ ನಗಧರ ಪ್ರೀತೆಯೆ ಅ.ಪ. ಸಾರಿ ಬಂದೆ ನಿನ್ನ ನಾರಿಮಣಿಯಳೆ ಭೂರಿ ಕರುಣದಿ ನೀ ಸತಿ ಪದಕೆ ಪತಿ ಸಹ ಭಾರತಿ ನಿನ್ನಯ ವಾರಿಜಪದವನು ಸೇರಿ ಸುಖಿಸುವಂಥ ದಯ ತೋರೆ ನೀ 1 ದಾರಿ ತೋರಿ ನೀ ಪಾರುಗಾಣಿಸೆ ತಾರತಮ್ಯದಿ ವಾರಿಜಾಂಬಕಿಯೆ ಆರು ಅರಿಯದ ಹರಿಯ ಮಹಿಮೆಯ ಸಾರತತ್ವ ನೀ ಪತಿಯಿಂದರಿತಿಹೆ ಬಾರದು ಅಜ್ಞತೆ ನಿನಗೆ ಪ್ರಳಯದಿ ನಾರಿ ರನ್ನೆ ಸರ್ವ ಬುದ್ಯಭಿಮಾನಿಯೆ 2 ಹಾರಪದಕವು ದೋರೆ ಕಂಕಣ ನಾರಿ ನಿನ್ನನು ಯಾರು ವರ್ಣಿಪರೆ ನಾರಿ ನಿನ್ನ ಪತಿದ್ವಾರದಿ ಎನ್ನ ಶ- ರೀರದಿ ಸರ್ವನಿಯಾಮಕರೊಡನೆ ತೋರೆ ಗೋಪಾಲಕೃಷ್ಣವಿಠ್ಠಲನ ನೀರಜನಾಭನ ಶ್ರೀ ರಮೇಶನ 3
--------------
ಅಂಬಾಬಾಯಿ
ಭಾರತೀ ನೀ ಪರಿಪಾಲಿಸೇ ಪ ನಾರಿ ಶಿರೋಮಣಿ | ನಿರುತ ನಿನ್ನಯ ಪದವಾರಿಜ ಭಕುತಿಯ | ಗಾರು ಮಾಡದೆ ಕೊಡು ಅ.ಪ. ಉರು ವಿಕ್ರಮನಲಿ | ವರ ಭಕ್ತ್ಯುದಯಕೆಪರಮ ಕಾರಣಳೆಂ | ದರಿತು ನಿನ್ನ ಪದ |ಸರಸಿಜ ಭಜಿಸುವೆ | ಪರಮ ಕೃಪಾಕರೆತ್ವರ ಹರಿ ಭಕುತಿಯ | ಪಾರಿಪಾಲಿಪುದು 1 ವಿಪರೀತದ ಮತಿ | ಅಪಹರಿಸುತ ಬಲುಕೃಪೆಗೈದೆನ್ನಲಿ | ಅಪ ವರ್ಗದ ಹರಿವಿಪಗಮನನ ಸ | ದ್ದಪರೋಕ್ಷವ ಕೊಡುವಿಪ ಅಹಿಪತಿ ನುತೆ | ಅಪ್ರತಿ ಮಾತೆಯೆ 2 ಭೂವಲಯದಿ ನಿನಗಾವರಿಲ್ಲ ಸಮನೀ ವೊಲಿಯದಲಿ | ನಿನ್ನಾವರ ಕಾಣೆನುಮಾ ವಿನೋದಿ ಗುರು | ಗೋವಿಂದ ವಿಠಲನಪಾವನ ಪದವನು | ತೀವರ ತೋರಿಸು 3
--------------
ಗುರುಗೋವಿಂದವಿಠಲರು
ಭಾರತೀದೇವಿ ಭಾರತಾದೇವಿಯರ ಪಾದ ಚಾರು ಚರಣಕೆರಗುವೆ ಪ ವಾರಿಜಾಕ್ಷಿ ನಿನ್ನ ಮಹಿಮೆ ಬಾರಿ ಬಾರಿ ಪೊಗಳುವೆ ಅ.ಪ ಸುಂದರಾಂಗಿ ಶುಭಕರಾಂಗಿ ಬಂದು ಎನ್ನ ಪಾಲಿಸು ಇಂದಿರೇಶನನ್ನು ಸದಾ ಆ- ನಂದದಿಂದ ಭಜಿಸಲು 1 ಬಾರಿ ಬಾರಿ ನಿನ್ನ ಸ್ತುತಿಪೆ ಮಾರುತನರ್ಧಾಂಗಿಯೆ ಸಾರಿ ಸಾರಿ ಶ್ರೀರಮಣನ ಸಾರ ಕೃಪೆಯ ಕರುಣಿಸು2 ಕರುಣಿಸಮ್ಮ ನಿನ್ನ ಪತಿಯ ಸ್ಮರಣೆ ನಿರುತ ಮರೆಯದೆ ಕರುಣಾಕರನೆ ಕಮಲನಾಭ ವಿಠಲನಂಘ್ರಿ ಧ್ಯಾನವೀಯೆ 3
--------------
ನಿಡಗುರುಕಿ ಜೀವೂಬಾಯಿ
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ