ಒಟ್ಟು 3196 ಕಡೆಗಳಲ್ಲಿ , 112 ದಾಸರು , 2367 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನಮ್ಮ ಸಲಹಯ್ಯಾ ಸಿರಿರಮಣಾ| ದುರಿತ ನಿವಾರಿಸು ಪೂರ್ಣ| ಮಂದಮತಿಗಳಾ ನೋಡದೆವೆ ನ್ಯೂನಾ| ಛಂದದಿಂದ ಕೊಡು ನಿನ್ನ ಚರಣ ಧ್ಯಾನಾ ಪ ಹಿಂದ ವ್ಯಾಧನೊಬ್ಬ ಹರಿಣಿ ಹಿಡಿಯಲಿ| ನಿಂತು ಚತುರ್ವಿಧ ಬಲಿಯಾನೊಡ್ಡಿರಲಿ| ಮೃಗ ಮೊರೆಯಿಡಲಿ| ಬಂದು ಕರುಣಿಸಿ ರಕ್ಷಿಸಿದ ಪರಿಲಿ 1 ಬಸಿರೊಳಗಿದ್ದ ಪರೀಕ್ಷಿತಗೆಂದು| ಎಸೆಯಲು ಬಾಣಗಳ ದ್ರೋಣಿ ಮುಳಿದು| ಬಿಸಜಾಕ್ಷ ನಿನ್ನ ಚಕ್ರ ಮರೆವಿಡಿದು| ಪರಿ ಬಂದು 2 ದಿನ ವತ್ಸಲ ದಯಾನಿಧಿ ಎನುವಾ| ಖೂನದೋರಿಸಯ್ಯಾ ಬಿರುದಿನ ಅನುವಾ| ನಿನೇ ತಾಯಿ ತಂದೆ ಬಂಧು ಸಖದೈವ| ಘನಗುರು ಮಹಿಪತಿ ಸುಖ ಜೀವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಭಕ್ತರು ಬಂದರೆಂದು ಗೋವಿಂದ ತಾ ನಲೆದಾಡಿದ ಗೋಪಾಲ ತಾ ನಲೆದಾಡಿದ ಪ. ಹರಿಯು ಆಡಿದ ಮಾತು ದೊರೆ ಧರ್ಮನು ಕೇಳಿಕರುಣಾಳು ನಿಮ್ಮ ಕೃಪೆಯಿಂದ ಕರುಣಾಳು ನಿಮ್ಮ ಕೃಪೆಯಿಂದಪರಮ ಆಶೀರ್ವಾದ ಇರಲುಂಟು1 ಮುತ್ತಿನ ಮಂಚದ ಹತ್ತಿಲೆ ಸಾಲಾಗಿಮತ್ತ ಪಾಂಡವರು ಕುಳಿತರುಮತ್ತ ಪಾಂಡವರು ಕುಳಿತರು ಹರುಷದಿಭಕ್ತವತ್ಸಲನ ಮುಖನೋಡಿ 2 ಹಸಿರು ಪಚ್ಚವ ಬಿಗಿದ ಕುಸುರು ಸಿಂಹಾಸನದೇಶಕೆಲ್ಲ ಬೆಳಕು ಎಸೆಯುತದೇಶಕೆಲ್ಲ ಬೆಳಕು ಎಸೆವೊ ಸಿಂಹಾಸನದಿವಸುಧಿಪಾಲಕರು ಕುಳಿತರು 3 ಇಂದ್ರಾದಿಗಳು ಮುನಿವೃಂದ ಸಹಿತಾಗಿ ಬಂದು ಒಂದೆ ಮನದಲೆ ಕುಳಿತರು ಒಂದೆ ಮನದಲೆ ಕುಳಿತರು ದೇವಕಿನಂದನ ನೋಡಿ ಹರುಷಾಗಿ 4 ರನ್ನ ಮಾಣಿಕ ಬಿಗಿದ ಹೊನ್ನಮಂಚಕೆಹೊಂದಿ ಕನಿ ಸುಭದ್ರೆ ದ್ರೌಪದಿಕನಿ ಸುಭದ್ರೆ ದ್ರೌಪದಿ ಕುಳಿತರುಚನ್ನ ಕೃಷ್ಣಯ್ಯನ ಮುಖನೋಡಿ5 ಚಿತ್ರ ವಿಚಿತ್ರದ ರತ್ನಗಂಬಳಿ ಮ್ಯಾಲೆಪುತ್ರರ ಸಹಿತ ಹರುಷದಿಪುತ್ರರ ಸಹಿತ ಹರುಷದಿ ಕುಳಿತರು ಭಕ್ತವತ್ಸಲನ ಮುಖ ನೋಡಿ 6 ಸಾಲು ದೀವಿಗೆಯಂತೆ ಬಾಲೆಯರುಕುಳಿತಾರೆ ಬಾಲರ ಸಹಿತ ಹರುಷದಿಬಾಲರ ಸಹಿತ ಹರುಷದಿ ರುಕ್ಮಿಣಿ ನಿಂತಿಹಳು ಲೋಲ ರಾಮೇಶನ ಮುಖನೋಡಿ7
--------------
ಗಲಗಲಿಅವ್ವನವರು
ಇಂದು ಭಾಗ ಹರಿ ವಿಠಲ | ಪೊರೆಯ ಬೇಕಿವಳಾ ಪ ನೊಂದಿಹಳೊ ಬಹುವಾಗಿ | ಹೇಸಿ ಸಂಸ್ಕøತಿಲೀ ಅ.ಪ. ವಿನುತ | ಪರಿಪರಿಯ ಶಾಸ್ತ್ರಗಳುವರಲುತಿದೆ ಶ್ರೀಹರಿಯೆ | ಮೊರೆ ಕೇಳದೇನೋತರುಣಿ ದ್ರೌಪದಿವರದ | ಕರಿವರದ ನೀನೆಂದುಮರಳಿಮಹಪಾಪಿ ಆ | ಅಜಾಮಿಳವರದಾ 1 ಉಸಿರಿದ್ದು ಭಾರವನು | ಹೊರುಎಂದು ಪೇಳ್ಬಹುದುಉಸಿರಳಿವ ಪರಿಮಾಡೆ | ಮೊರೆ ಆವನಿಡುವಾಬಸಿರಿನಿಂ ಬಂದಂಥ | ಶಿಶುಗಳೆಲ್ಲವೂ ಪೋಗಿಯಶವ ವರ ಮೆರೆಸಲ್ಕೆ | ಹಸುಮಗನಸಲಹೋ 2 ಸಂಸಾರ ಕ್ಲೇಶಗಳ | ಶಿಂಸಿಸಲು ಅಳಿವಲ್ಲಕಂಸಾರಿ ನಾವಾಗಿ | ಪೊರೆಯ ಬೇಕಿವಳಾವಂಶ ಉದ್ದರಿಸೆ ಪದ | ಪಾಂಸು ಬೇಡ್ವಳೊ ನಿನ್ನಸಂಶಯವು ಯಾಕಿನ್ನು | ಕರುಣಿಸೋ ಹರಿಯೆ 3 ಸುಜನ | ತಂದೆ ಕೈಪಿಡಿಯೋ 4 ಜ್ಞಾನ ಸದ್ಭಕುತಿ ವೈ | ರಾಗ್ಯ ಕೊಟ್ಟವಳೀಗೆಕಾಣಿಸೋ ಸದ್ಗತಿಯ | ಕಾರುಣ್ಯ ಮೂರ್ತೇಏನೊಂದು ಅನ್ಯವನು | ನಾನು ಬೇಡುವುದಿಲ್ಲಜಾಣಗುರು ಗೋವಿಂದ | ವಿಠಲಾ ಪೊರೆ ಇವಳಾ 5
--------------
ಗುರುಗೋವಿಂದವಿಠಲರು
ಇಂದು ವನಜದಳಾಂಬಕ ದೊರೆಯ ಪ. ಕನಸಿನಲೆ ಕಂಡೆನು ಮನಸಿಜನಯ್ಯನ ದನುಜಸಂಕುಲವನೆಲ್ಲವ ಕ್ಷಣದಿಸವರಿದ ಕಡುಗಲಿರಾಮನ ಅ.ಪ. ವರ ರನ್ನಹಾರ ಕಿರೀಟ ಕೋಟಿತರಣಿಸನ್ನಿಭಸಂಕಾಶ ಕೌಸ್ತುಭ ಶ್ರೀವತ್ಸ ಲಾಂಚಿತವಕ್ಷ | ಕೊರಳೊಳು ಧರಿಸಿರ್ಪ ವರರತ್ನ ಹಾರಂಗಳ್ | ತರುಣಿ ಶ್ರೀ ತುಳಸೀ ವನಮಾಲೆಯಿಂದೊಲಿಯಲ್ | ಪರಮ ಮಂಗಳಮೂರ್ತಿವರದ ಹಸ್ತವನೆತ್ತಿ | ಶರಣಜನ ಮೋಹಿಪ ದುರುಳ ರಕ್ಕಸರ ಬೇರಸವರಿದ ಪಾರಕೀರ್ತಿ | ಅರಿತೆನಾ ತರಳ ಪ್ರಹ್ಲಾದನಂ ಪೊರೆದ ಕರುಣಾಮೂರ್ತಿ 1 ವೇದಪಾರಾಯಣಗೈವ ವರದ್ವಾದಶನಾಮದಿ ಮೆರೆವ ಕೀರ್ತನದಿಂ ಮೈಮರೆವ | ಸಾಧುಸಜ್ಜನವೃಂದ ಭಕ್ತಿಭಾವದಿ ಕೈಕಟ್ಟಿ | ಶ್ರೀಧರಾಚ್ಯುತ ಪಾದ ಸಮ್ಮುಖದಿ ನಿಂದು ಭಜಿಪರ ಪರಮಾದರದೆನೋಡಿ | ಶ್ರೀದೇವಿ ಕೆಲದೋಳ್ ನೆಲಸಿರಲ್ ಮನದಿ ಸಂತಸವು ಮೂಡಿ | ಸಾದರದಿ ಕರೆದಾದರಿಸಿ ಕಾಂಕ್ಷಿತಾರ್ಥವನೀಡಿ | ಮೋದಗೊಳ್ಳುತಿಹ ಶ್ರೀಧರನ ಕಂಡು ಮೈಮರೆದೆನೇನಿವನ ನೋಡಿ 2 ಕನಕಖಚಿತ ರತ್ನಮಂಟಪದ ಮಧ್ಯೆ | ಮಿನುಗುವ ಮಣಿಪೀಠದಿ ವೈದೇಹಿ | ವನಜಾಕ್ಷಿ ಕುಳಿತಿರಲು ಕೆಲದೊಳ್ ಮರುತಾತ್ಮಜ | [ನುನಮಿಸ] (ರ)ಲು ಪರಮಸಂಭ್ರಮದಿ ಸೋದರರು ಸಂಸೇವಿಸೆ | [ವÀನ] ತರಣಿಸುತ ಸಪರಿವಾರ ಸಂಭ್ರಮಿಸೆ, ಶರಣ ವಿಭೀಷ | ಣನು ಜಯಘೋಷವೆಬ್ಬಿಸೆ ವರವಸಿಷ್ಟಾದೈಖಿಲ | ಮುನಿವರ ರಾಶೀರ್ವಚಿಸೆ ಸರಸವಚನವೆರಸಿ ರಘುವರ ವರನೆ ತಾನೆಂದು ತೋರೆ 3
--------------
ನಂಜನಗೂಡು ತಿರುಮಲಾಂಬಾ
ಇಂದು ಸಲಹಿದೇ ಇಂದು ಸಲಹಿದೇ ಆರ್ತರ ಬಂಧು ಸಿಂಧು ಪ ಅಂದು ಪ್ರಲ್ಹಾದ ನೆಂಬುಧಿಯೊಳಗ ಬಂದು ಉಳುಹಿದ ತರದಿಂದಲೆನಗೆ 1 ಹಿಂದ ಪ್ರಳಯ ಜಲದಿ ಸತ್ಯ ವ್ರತನಾ ಪರಿ ಸಿರಿರಮಣಾ2 ಕುದಿ ವೆಣ್ಣೆ ಗೊಪ್ಪರಿಗೆಯೋಳಿಹ ಸುಧನ್ವನಾ ಪ್ರಾಣನುಳಹಿದ ಪರಿಯಾ3 ತಂದೆ ಮಹಿಪತಿ ಪ್ರಭು ದತ್ತಾತ್ರೆಯಾ ಬಂದದುರಿತದಿ ಬಿಡಿಸುತ ಕಾವಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ ಪ ಮುಂದಕೆ ನಿಮ್ಮ ಮನೆಗೆ ಬಾರನಮ್ಮಅ ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆಬಿಗಿಯ ಬಹುದೇ ಶ್ರೀ ಚರಣವನುಅಗಣಿತ ಮಹಿಮನ ಅಂಜಿಸಲೇಕಮ್ಮಬಗೆಯ ಬಾರದೆ ನಿಮ್ಮ ಮಕ್ಕಳಂತೆ 1 ಹಸುಮಗುವನು ಕಂಡು ಮುದ್ದಿಸಲೊಲ್ಲದೆಹುಸಿಗ ಕಳ್ಳನೆಂದು ಕಟ್ಟುವಿರಿವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ ನಿಮ್ಮಹಸು ಮಗುವಿನಂತೆ ಭಾವಿಸಬಾರದೆ 2 ಎಷ್ಟು ಸಾರಿಯು ನಾ ಬೇಡವೆಂದರೆ ಕೇಳದುಷ್ಟ ಮಕ್ಕಳ ಕೂಡೆ ಒಡನಾಟವಕಟ್ಟಿದ ನೆಲುವಿನ ಬೆಣ್ಣೆಯನೀವೆನುಬಿಟ್ಟು ಕಳುಹಿರಮ್ಮ ಆದಿಕೇಶವನ 3
--------------
ಕನಕದಾಸ
ಇದು ಹೊನ್ನು ಹೂವುಗಳ ತಾರತಮ್ಯ ಪ ಇದು ಬಾಹ್ಯ ಅದು ಅಂತರಂಗಿಗೆ ರಮ್ಯ ಅ.ಪ ಹೊನ್ನಿನಿಂದಾಗುವುದು ಹೂವಿನಿಂದಾಗುವುದು ಹೊನ್ನು ಹೂವೆರಡಯ್ಯ ಬಣ್ಣ ಒಂದೇ ಹೊನ್ನು ಹೂವೆರಡಕ್ಕು ಬಣ್ಣ ಒಂದಾಗವೋ ನಿನ್ನ ಕೃಪೆಯೆಂಬ ರೇಕುಗಳಾಗಬೇಕೋ 1 ಹೊನ್ನು ಭೂಲೋಕಕ್ಕೆ ಹೂವು ಪರಲೋಕಕ್ಕೆ ಹೊನ್ನಿನಾ ಹೂವುಗಳು ಇಹಪರಕೆ ದಾನ ಹೊನ್ನುಳ್ಳವರಿಗೆಲ್ಲ ಹೂ ಹೊನ್ನುವಿಲ್ಲ ತಾನಿಲ್ಲ ಹೊನ್ನ ಹೊರುವುದಸಾಧ್ಯ 2 ಹೊನ್ನ ಕಾವುದಸಾಧ್ಯ | ಹೊನ್ನುಳ್ಳ ನರರಿಗೆ [ಮ] ಗಳಿಲ್ಲ ಹೊನ್ನುಳ್ಳ ಮನುಜ ಪಾತಕಗಳನು ಕಲಿಯುವ ಹೊನ್ನಿಲ್ಲದಾತರಿಗೆ ಹೂವೊಂದು ದೊರಕಿದೊಡೆ ಅನ್ನ ನಿದ್ರಾ ಪಾನ ಸೌಖ್ಯಂಗಳುಂಟಯ್ಯ 3 [ಹೊನ್ನುಳ್ಳವಸದಾ ಹೊನ್ನಿ ನೊಡನೆಕಲ್ಳ್ವೆ] ಹೊನ್ನಿಲ್ಲದಾತ ಶ್ರೀರಾಮಕೃಷ್ಣರ ಕಲೆವ ಹೊನ್ನಿಂದ ಬೆಣ್ಣೆತಾಂ ಸುಣ್ಣವೆನಿಪುದು ಜಗದಿ ಹೊನ್ನಿಲ್ಲದಾತಂಗೆ ಸುಣ್ಣವೇ ಬೆಣ್ಣೆ 4 ಹೊನ್ನಕೇಳನು ನಮ್ಮ ಮಾಂಗಿರಿಪುರವಾಸ ಹೊನ್ನಿಂಗೆ ಬದಲು ಭಕ್ತಿಯಹೂವ ಕೇಳ್ವುದು ಹೊನ್ನ ದಾನವಮಾಡಿ ಹೂವ ಹರಿಗರ್ಪಿಸಿರಿ ಇನ್ನಾವ ವರಗಳನ್ನು ಬೇಡ ಬೇಡಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇದೇ ಹೌದು ಭವತರಿಯುವ ಶಸ್ತ್ರ ಪದೇ ಪದೇ ಸಿರಿವರನ ಸ್ತೋತ್ರ ಪ ಅಧಮಮತಿಯ ಬಿಟ್ಟು ಸದಮಲ ಮನದಿಂ ವಿಧವಿಧ ಹರಿಯೆಂದೊದುರುತ ಕಾಣುವುದೆ ಅ.ಪ ದಾನಧರ್ಮಯಜ್ಞ ಇವು ಯಾಕೊ ಸ್ನಾನ ಮೌನ ಜಪ ಮತ್ತ್ಯಾಕೊ ನಾನಾ ಮಂತ್ರ ತಂತ್ರ ಗೋಜ್ಯಾಕೆಬೇಕೊ ಕ್ಷೋಣಿ ತಿರುಗಿ ಬಹು ದಣಿಲ್ಯಾಕೊ ನಾನಾಪರಿಯಲಿಂದ ದೀನದಯಾಪರ ಗಾನಲೋಲನ ಭಜನಾನಂದ ಪಡೆವುದೆ1 ವೇದಪುರಾಣ ಪುಣ್ಯ ಶಾಸ್ತ್ರಗಳ್ಯಾತಕೊ ಸಾಧನಸಿದ್ಧಿಗಳ ಬಲವ್ಯಾಕೋ ಭೇಧಯೋಗದ ಬಹು ಬೋಧಗಳ್ಯಾತಕೊ ಓದಿಓದಿ ದಿನಗಳಿಲ್ಯಾಕೊ ವೇದಗಮ್ಯದಾದಿ ಮೂರುತಿ ಶ್ರೀ ಪಾದವರಿತು ಆರಾಧಿಸುತಿರುವುದೆ 2 ಕಾಶಿ ಕಂಚಿ ಕಾಳಹಸ್ತಿ ತಿರುಗಲ್ಯಾಕೊ ಸಾಸಿರದೈವಕೆ ಬಾಗುವುದ್ಯಾಕೊ ಮಾಸಪಕ್ಷ ವ್ರತ ನೇಮಗಳ್ಯಾತಕೊ ಘಾಸಿಯಾಗಿ ದೇಹ ದಂಡಿಸಲ್ಯಾಕೊ ಶೇಷಶಯನ ನಮ್ಮ ಶ್ರೀಶ ಶ್ರೀರಾಮನ ಲೇಸಾದ ನಾಮವೊಂದೆ ಧ್ಯಾಸದಿಟ್ಟು ನುಡಿ 3
--------------
ರಾಮದಾಸರು
ಇದೇವೆ ನರ ಪಶು ಕಾಣಿರ್ಯೋ | ಇದೇ ಮನದ ಸ್ಥಿತಿ ನೋಡಿರ್ಯೋ ಪ ಉದಯದಲೇಳುತ ಉದರದಿ ಧಾವತಿ | ಉದರ ತುಂಬಲು ನಿದ್ರಿಯ ಭರವು | ಮದದಲಿ ಭಯ ಕೊಟ್ಟಿಗೆಯಲಿ ಮಾಯದ | ಸದಮಲ ಪಾರದ ಬಂಧನವು 1 ಸಂಚಿತ ನೊಗ ಹೆಗಲಲಿ ಪೊತ್ತು | ಘನ್ನದುರಿತ ಘಸಣೆಯ ತಳೆದು | ತನ್ನ ಹಿತಾ ಹಿತ ಲೇಶವ ನರಿಯದೆ | ಕಣ್ಣೆವೆಯಿಕ್ಕದೆ ಡೋಕುವನು 2 ಗುರುವರ ಮಹಿಪತಿ ನಂದನ ಸ್ವಾಮಿಯು | ಹೊರೆವ ವಡಿಯನೆಂಬ ಗುರುತರಿದೇ | ಅನುದಿನ ಕಾವವ | ಸಿರಿಯ ಮದಾಂಧನ ನಂಬಿಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೋ ಬಂದಾನೇಳೇ ಭಾವೇ ನಿನ್ನರಸಾ| ಮುದದಿ ಪ್ರಾರ್ಥನೆಯ ಮಾಡಿ ಕರೆತಂದೆನೀಗ ಪ ನೊಸಲಲಿ ಇಟ್ಟ ಕಸ್ತೂರಿ ರತ್ನಮಯದಿಂದ| ಪೊಸಪರಿಯ ಕಿರೀಟವಧರಿಸಿ| ಎಸೆವ ಕುಂಡಲದಿಂದ ಪೊಳೆವಾಕದಪುಗಳು| ಬಿಸಿರು ಹದಳ ನೇತ್ರಲೊಪ್ಪುತ ನಮ್ಮ 1 ತುಂಬಿಯಂತೆ ವಳೆಕಾವಳಿ ಶೋಬಿ| ತುಂಬಜ ಮುಖ ಅತಿ ಸುಂದರ ರೂಪಾ| ಕಂಬುಕಂದರದಲಿ ಹಾರದಾ ಕೌಸ್ತಭ ಮಾಲೆ| ಅಂಬುಜಧರ ನೋಡು ಅರನಗೆ ನಗುತ್ತಾ 2 ಗರುಡನ ಮ್ಯಾಲೇರಿ ಕೊಂಡುತಾಹರುಷದಿ| ಪರಮ ಪಾವನೆ ಕೇಳು ಸದ್ಭಕುತಿಂದ| ಧರೆಯೊಳಾರಾರು ಕರೆದರೆ ಬಷ್ಟುವೆನೆಂಬ| ತೆರ ತೋರಿಸಲು ಮಹಿಪತಿ ನಂದ ನೊಡೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದ್ರಲೋಕವ ಪೋಲ್ವ ದ್ವಾರಕೆಯಿಂದ ನಮ್ಮನು ಸಲಹಲೋಸುಗಸಿಂಧುವಿನ ಮಾರ್ಗದಲಿ ತೌಳವ ಜನರ ದೇಶಕ್ಕೆಬಂದು ಮಧ್ವಾಚಾರ್ಯರ ಕೈ-ಯಿಂದ ಪೂಜೆಯಗೊಂಬ ಕೃಷ್ಣನಮಂದಹಾಸದ ಮುದ್ದುಮೊಗ ಸೇವಿಪಗೆ ಸಂಪದವು1 ಪಾದ ಮನೋಹರೋರುದ್ವಂದ್ವ ಶ್ರೀಕೃಷ್ಣನ ಮೂರ್ತಿಯ ನೋಳ್ಪರ ನಯನ ಸುಕೃತಫಲ2 ನಿತ್ಯದಲಿ ಗೋಘೃತದ ಮಜ್ಜನಮತ್ತೆ ಸೂಕ್ತ ಸ್ನಾನ ತದನು ಪ-ವಿತ್ರ ಮಂತ್ರ ವಿಚಿತ್ರ ತರವಹ ಕಲಶದಭಿಷೇಕವಸ್ತ್ರಗಂಧ ವಿಭೂಷಣಂಗಳವಿಸ್ತರಿಪ ಶ್ರೀತುಲಸಿ ಪುಷ್ಪದಿಭಕ್ತಿಭರಿತರು ಮಾಡುವಾರಾಧನೆಯನೇನೆಂಬೆ 3 ಸುತ್ತ ಸುಪ್ತಾವರಣದರ್ಚನೆವಿಸ್ತರಿಪ ಸ್ತೋತ್ರಗಳ ಗಾನ ವಿ-ಚಿತ್ರರ ನೈವೇದ್ಯವು ಸುವೀಳೆಯ ಧೂಪ ದೀಪಗಳುರತ್ನದಾರ್ತಿಗಳ ಸಂಭ್ರಮಛತ್ರ ಚಾಮರ ನೃತ್ಯಗೀತಾ-ದ್ಯುತ್ಸವಗಳೊಪ್ಪಿಹವು ದೇವನ ಮುಂದೆ ದಿನದಿನದಿ 4 ಅಪ್ಪಮೊದಲಾದಮಲ ಭಕ್ಷ್ಯವತುಪ್ಪ ಬೆರೆಸಿದ ಪಾಯಸವ ಸವಿ-ದೊಳ್ಪ ಶಾಕಗುಡಂಗಳನು ಕಂದರ್ಪನಪ್ಪನಿಗೆಅರ್ಪಿಸುವರನುದಿನದಿ ರಸ ಕೂ-ಡಿಪ್ಪ ಪಕ್ವಫಲಾದಿಗಳು ರಮೆಯಪ್ಪಿಕೊಂಡಿಪ್ರ್ಪಚ್ಯುತಗೆ ಪೂಜಿಸುವ ಯೋಗಿಗಳು 5 ಸಿರಿ ನೆಲಸಿಹುದು ಶ್ರೀಕೃಷ್ಣನ ಮನೆ ಶೃಂಗಾರ 6 ಶುಭ ವಾಕ್ಯಗಳ ನಮಗೆನಿಷ್ಠಸುಜನರು ತಟ್ಟನೆ ಮನ-ಮುಟ್ಟಿ ನೆನೆವರಿಗಿಷ್ಟ ಅಖಿಳವಕೊಟ್ಟು ಸಲಹದೆ ಸೃಷ್ಟಿಯೊಳು ನೀಗಿಪ್ಪೊ ಗುಣಪುಷ್ಪ 7 ಏನನೆಂಬೆನು ಕೃಷ್ಣ ದೀನರ ದೊರೆಯು ನೀನೆಂದಾದ ಕಾರಣಮಾನವರ ಸುರಧೆÉೀನುತನ ನಿನಗಿಂದು ಸೇರಿತಲಹೀನತೆಯ ಪರಿಹರಿಸಿ ಭಾಗ್ಯಾಂಭೋನಿಧಿಯೆ ನಿಜರ್ಗೀವ ನಿನ್ನ ಮ-ಹಾನುಭಾವದ ಬಲುಮೆಗೆಣೆಗಾಣೆನು ಮಹಾಪ್ರಭುವೆ 8 ಭಾಪು ದಿವಿಜರ ದೇವರಾಯನೆಭಾಪು ಭಜಕರಅಭೀಷ್ಟವೀವನೆಭಾಪು ಹರಿನೀಲೋತ್ಪಲನೆ ಶ್ಯಾಮಲನೆ ಕೋಮಲನೆಭಾಪು ಹಯವದನಾಖಿಲೇಶನೆಭಾಪು ಸುಜನರ ಪಾಪ ನಾಶನೆಭಾಪು ಕೃಷ್ಣಾಲಸತ್ರೈಪಾಲಕನೆ ಬಾಲಕನೆ 9
--------------
ವಾದಿರಾಜ
ಇನ್ನಾರ ಭಜಿಸಲೈಯ್ಯಾ|ಯನ್ನ ಗತಿ ಮುಕುತಿದಾಯಕ ರಂಗ ನೀನಿರಲು ಪ ಸ್ನಾನಪಾನಕಬಪ್ಪ ಸುರನದಿಯನೇ ತ್ಯಜಿಸಿ ಹೀನ ಸರಿತೆಗಳಲ್ಲಿ ಮುಣುಗುವರೇ ಏನ ಬೇಡಿದ ನೀವ ಸುರ ಭೂಜ ಇದಿರಿಡಲು ಕಾನನದ ಶಾಲ್ಮಲಿಯ ಫಲವ ನರಸುವಂತೆ 1 ಕಾಮಧೇನು ಮನಿಗೆ ಬರಲು ಕರೆ ಕೊಳ್ಳದೇ ಆ ಮೊಲದ ಹಾಲವನು ಬಯಸುವಂತೆ ಕಾಮಿತಾರ್ಥವ ನೀವ ಚಿಂತಾ ಮಣಿಯಿರಲು ಪ್ರೇಮದಿಂದಲಿ ಕಾಜು ಮಣಿಯ ನರಸುವಂತೆ2 ತಾಯ ಮಾರಿಯ ತೋತ್ತು ಕೊಂಬಂತೆ ಸಿರಿಯಸುಖ ದಾಯಕ ನಿನ್ನ ಮರದನ್ಯಕೆರಗೀ ಹೇಯ ವೃತ್ತಿಗೆ ಬೆರೆವದುಂಟೇ ನಿನ್ನವನೆನಿಸಿಕಾಯೋ ಭಕುತಿಯ ನಿತ್ತು ಗುರು ಮಹಿಪತಿ ಸ್ವಾಮಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಇನ್ನೇನು ಬಲ್ಲವನು ನಾನಲ್ಲ ಹರಿಯೆ ನಿನ್ನ ಧ್ಯಾನಧಿಕೆಂಬುದೊಂದೆ ನಾ ಬಲ್ಲೆ ಪ ನಿನ್ನ ಧ್ಯಾನವೆ ಮರೆವ ತರಿದ್ಹಾಕುವುದೆಂಬೆ ನಿನ್ನ ಧ್ಯಾನವೆ ಅರಿವ ಸ್ಥಿರ ಮಾಳ್ಪುದೆಂಬೆ ಶರಧಿ ಹೀರುವುದೆಂಬೆ ಸಿರಿ ನೀಡ್ವುದೆಂಬೆ 1 ನಿನ್ನ ಧ್ಯಾನವೆ ದು:ಖದೂರ ಮಾಡುವುದೆಂಬೆ ನಿನ್ನ ಧ್ಯಾನವೆ ಸುಖದ ವಾರಿಧಿಯೆಂಬೆ ನಿನ್ನ ಧ್ಯಾನವೆ ಮುಖ್ಯ ಚಾರುವೇದಗಳೆಂಬೆ ನಿನ್ನ ಧ್ಯಾನವೆ ಜ್ಞಾನಮೂಲಸಾರೆಂಬೆ 2 ನಿನ್ನ ಧ್ಯಾನವೆ ತತ್ವರೂಪವಾಗಿಹ್ಯದೆಂಬೆ ನಿನ್ನ ಧ್ಯಾನವೆ ಮುಕ್ತಿಮೂಲಾಧಾರೆಂಬೆ ನಿನ್ನ ಧ್ಯಾನವೆ ಭಕ್ತ ಜನಪ್ರಾಣಪದಕೆಂಬೆ ಎನ್ನಯ್ಯ ಶ್ರೀರಾಮ ನಿನ್ನಿಂದೆ ನಾನೆಂಬೆ 3
--------------
ರಾಮದಾಸರು