ಒಟ್ಟು 2704 ಕಡೆಗಳಲ್ಲಿ , 115 ದಾಸರು , 2166 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೋಭನವೆಹರಿಶೋಭನವೆಪ.ಶೋಭನವೆನ್ನಿರಿ ಶುಭಕರದಿಂದಲಿಶೋಭನ ಶ್ರೀಲೋಲಗೋಪಾಲನೆನ್ನಿರೆಅಪಪಾಲುಗಡಲು ಮನೆಯಾಗಿರಲುಆಲದೆಲೆಯ ಮೇಲೆ ಮಲಗುವರೆ ||ಮೂಲೋಕವೇ ನಿನ್ನುದರದೊಳಿರಲುಬಾಲಕನಾಗಿ ಎತ್ತಿಸಿಕೊಂಬುವರೆ 1ಸಿರಿ ನಿನ್ನ ಕೈವಶವಾಗಿರಲುತಿರುಮಲ ಮಲೆಯನು ಸೇರುವರೆ ||ಸರಸಿಜಭವ -ಭವ ನಿನ್ನ ಪೂಜಿಸಲುನರನ ಬಂಡಿಯ ಬೋವನೆನಿಸುವರೆ 2ಕಮ್ಮಗೋಲನ ಪಿತನಾಗಿರಲುಗಮ್ಮನೆ ಕುಬುಜೆಗೆ ಸೋಲುವರೆ ||ಬ್ರಹ್ಮ ಪರಬ್ರಹ್ಮ ಚರಣಕೆ ಶರಣು
--------------
ಪುರಂದರದಾಸರು
ಶ್ರವಣ ಶ್ರವಣಗಳೆನ್ನಿರಿ ಸರ್ವಕಾಲದಿ ನೀವುಶ್ರವಣವಾಗುವತನಕ ಶಿವನು ನೀವಾಗಲೆಂತೋಪಗುರುಮೂರ್ತಿಯನು ಕಂಡು ಗುಣವಿಭಾಗಿಸಿದಂತನರಪಶುವು ಕ್ರಿಮಿಕೀಟ ಸರ್ವಗಳಲಿಗುರುವು ಪರಿಪೂರ್ಣ ಗುಣಿಸಲಿಂತಾದನೆಂದುಹಿರಿದು ಸಮನಿಸಿ ನೋಡಿ ನಿಶ್ಚೈಸಿದರೆ ಸಾಲದೆ1ಜಾಗೃತದಿ ಸ್ವಪ್ನದಲಿ ಸುಷುಪ್ತಕಾಲದಿ ಕಂಡವರ್ಗವೆಲ್ಲವ ಗುರುವೆ ಎಂದು ತಿಳಿದುಭರ್ಗಪೂರಿತನೆಂದು ಭೇದವಿಡದೇ ಮನದಿ ಸ-ಮಗ್ರ ಸಂತೋಷನಾಗಿರುತಿರಲದೆ ಸಾಲದೆ2ಕ್ರೂರ ಸಂಕಟ ಕಷ್ಟ ನಷ್ಟ ದುಃಖದಲಿಆರು ಹೊದ್ದಿಹರೆಂದು ಇದನು ತಿಳಿದುಧೀರ ಚಿದಾನಂದಗುರುದಿವ್ಯ ಮೂರುತಿ ತಾನು-ದಾರನಾತನ ಚರಣವನು ನೆನೆಯೆ ಸಾಲದೆ3
--------------
ಚಿದಾನಂದ ಅವಧೂತರು
ಶ್ರೀ ಕರಾರ್ಚಿತ ಜಗದೇಕಕಾರಣ ಶ್ರೀಕರಾದೇವಾ ಪಸಾಕುವನಿಗೆ ನಾನ್ಯಾಕೆ ಬಾರೆನೊ ಮನಕೆ ಅ.ಪವಸತಿಸ್ಥಳವಿಲ್ಲಾವಸುಧೆತಿರುಗುವೆನಲ್ಲಾವಸುಧೆಭಾರಾದೆನಲ್ಲಾ ಸ್ವಾಮಿವ್ಯಸನ ಬಡುತಿಹ ದ್ವಿಪದ ಪಶುವಿನ ನೋಡಿ ನಿನಗೆ 1ಜನನಿಜನಕ ತನಯಾ ವನುತೆ ಈ ದೇಹಾಮನಕೆ ಬಾರೆನೊಅವರಅನುಕೂಲವಾಗದಲೆವನದಲ್ಲಿ ಸಂಚಾರ ಇನುತೆ ಮಾಳ್ಪನ ನೋಡಿ 2ವರಣಿಸಾಲೇನಿನ್ನು ಸುಪರಣವಹÀನಭವಕರಣರಹಿತಶಾಯಿ ಕರಣ ವೈರಿಯಮಿತ್ರಕರುಣಿಸ್ಯನ್ನನು ಎಂದು ಶರಣು ಪೊಕ್ಕದು ನೋಡೀ 3ನರರ ಸೇವೆಯ ಮಾಡಿ ನರರಗುಣಕೊಂಡಾಡಿನರರ ಮಾತನೆಕೇಳಿನರರಗಾಥವಕೇಳಿಹರಿನಿನ್ನ ಚರಣಾಶ್ರಯಸಿದವನಾ ನೋಡೀ4ವಾತದೇವನತಾತಸೀತಾನಾಥನೆ ನಿನ್ನತಾತಕೇಳೀಗೆನ್ನ ಮಾತು ಮನಸಿಗೆ ತಂದುದಾತನೀನೆಂದು ನಾ ಆತುರದಿ ಬೇಡಿದೆನೊನೀತ ಗುರುಜಗನ್ನಾಥವಿಠಲ ನಿನಗೆ 5
--------------
ಗುರುಜಗನ್ನಾಥದಾಸರು
ಶ್ರೀ ಜಗನ್ನಾಥದಾಸರ ಕೀರ್ತನೆ139ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರು ಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಮೂಲಗುರುಅಗುರು ಶ್ರೀ ಹಂಸನಾಮಕ ಶ್ರೀಶಸಲಿಲಜಾಸನಸನಕದೂರ್ವಾಸಾದಿಗಳಪೀಳಿಗೆಯಲಿ ಬಂದ ಮರುದಂಶ ಮಧ್ವನಕಾಲಿಗೆ ಎರಗಿ ಶರಣಾದೆ ನಾ ಸತತ 1ಮಧ್ವಕರಕಂಜಭವಕಂಜನಾಭನೃಹರಿಮಾಧವಅಕ್ಷೋಭ್ಯ ಜಯತೀರ್ಥರಿಗೆ ನಮಿಪೆವಿದ್ಯಾಧಿರಾಜರಿಗೆ ರಾಜೇಂದ್ರತೀರ್ಥರಿಗೆಜಯಧ್ವಜರಿಗೆ ಮನೋ ಪುರುಷೋತ್ತಮರ್ಗೆ 2ಪುರುಷೋತ್ತಮ ಕುವರ ಬ್ರಹ್ಮಣ್ಯ ತೀರ್ಥರಿಗೆಸರಸೀರುಹನಾಭತೀರ್ಥಜರು ಲಕ್ಷ್ಮೀ -ಧರರ ಪರಂಪರೆ ಜಾತ ಸ್ವರ್ಣ ವರ್ಣರಕರಸರೋಜಭವಶ್ರೀ ಪಾದರಾಜರಿಗೆ ಶರಣು3ಸುಪುಣ್ಯ ಲಕ್ಷ್ಮೀ ನಾರಾಯಣ ತೀರ್ಥರಿಗೆಶ್ರೀಪಾದ ರಾಜತ್ವ ಯೋಗ್ಯತಾಲಿಂಗಶ್ರೀ ಭೂ ಸಮೇತ ಶ್ರೀ ರಂಗವಿಠ್ಠಲ ತಾನೆಈ ಪುಣ್ಯ ಶ್ಲೋಕರಲಿ ಬಂದು ನಿಂತಿಹನು 4ದಿನತೇಜಃ ಪುಂಜ ಬ್ರಹ್ಮಣ್ಯ ತೀರ್ಥರವನಜಕರಜರು ವ್ಯಾಸರಾಜಸ್ವಾಮಿಗಳುಘನಮಹಾ ಹರಿಭಕ್ತ ವಾದಿಗಳ ಸಿಂಹರುಆ ನಮಿಪೆ ಈ ಹರಿದಾಸಯತಿಗಳಿಗೆ 5ಪೂರ್ಣ ಪ್ರಜ್ಞಾನಂದ ತೀರ್ಥ ಮಧ್ವಾಚಾರ್ಯಕ್ಷೋಣಿಯ ಸಜ್ಜನರ ಉದ್ಧಾರಕಾಗಿಘನಮೂಲ ಗ್ರಂಥಗಳ ಸಹ ಪ್ರಾಕೃತದಲ್ಲೂಅನಘಲಕ್ಷ್ಮೀಶನ ಸ್ತೋತ್ರ ರಚಿಸಿಹರು6ಪೂರ್ಣಪ್ರಜÕರ ಜ್ಞಾನ ವಂಶಸ್ಥಯತಿಗಳುಕನ್ನಡದಿ ನುಡಿದಿರುವ ಕೀರ್ತನೆ ಪದ್ಯಗಳುಘನತರವು ಆ ರೀತಿಆದ್ಯಹರಿದಾಸರುಗಳುಕನ್ನಡದಿ ನುಡಿದಿಹರುಹರಿಪ್ರೀತಿಗಾಗಿ7ಸರ್ವದಾ ಶರಣಾದೆ ಎನ್ನ ಕಾಯುವ ತಂದೆದೇವ ಋಷಿ ನಾರದಪುರಂದರದಾಸರಲಿಶ್ರೀ ವ್ಯಾಸರಾಜರಲಿ ಉಪದೇಶ ಕೊಂಡಿಹರುನಿರ್ವಾಜ್ಯ ಭಕ್ತಿಮಾನ್ ಕಾರುಣ್ಯಶರಧಿ8ವಿಷ್ಣು ಸರ್ವೋತ್ತಮ ತದಂತರ ರಮಾದೇವಿವನು ರುಹಾಸನ ವಾಣಿ ತದಧೌ ಎಂದುತಾನೆ ನೇರಲ್ಲರಿತು ಲೋಕಕ್ಕೆ ಪೇಳಿದಘನದಯಾನಿಧಿ ಭೃಗುವೇ ವಿಜಯದಾಸಾರ್ಯ9ವಿಜಯದಾಸಾರ್ಯರರಾಜೀವಪದಯುಗಕೆನಿಜ ಭಕ್ತಿ ಪೂರ್ವಕ ಶರಣಾದೆ ಸತತವಿಜಯರಾಯರಗುರುಪುರಂದರದಾಸಾರ್ಯರುವಿಜಯರಾಯರ ಶಿಷ್ಯ ಗೋಪಾಲದಾಸರು 10ಪರಮಭಾಗವತರುಹರಿಭಕ್ತಾಗ್ರಣಿ ಕರುಣಿಹರಿಶಿರಿ ಒಲಿದಿಹ ದಾಸಮಹಂತವರವಾಯು ಗೋಪಾಲದಾಸರೊಳು ಸರ್ವದಾಸುಪ್ರಚುರನಾಗಿಹನು ಶರಣು ಗುರುವರ್ಯ 11ಕ್ಷಿಪ್ರಪ್ರಸಾದರು ವ್ಯಾಪ್ತೋಪಾಸಕರುಶ್ರೀಪತಿ ವೆಂಕಟ ಕೃಷ್ಣನಲಿರತರುಆಪತ್ತುಗಳ ಕಳೆದು ಕಾಮಿತಾರ್ಥಗಳೀವಕೃಪಾಳು ಇವರಲ್ಲಿ ನಾ ಶರಣು ಶರಣಾದೆ 12ಈ ನಮ್ಮ ಗುರುಗಳು ಗೋಪಾಲದಾಸಾರ್ಯರಲಿಘನವಿದ್ವಾಂಸರು ಬ್ಯಾಗವಟ್ಟ ಮನೆಯವರುಶ್ರೀನಿವಾಸಾಚಾರ್ಯ ಶರಣಾಗಿ ಜಗತ್ತಲ್ಲಿಜಗನ್ನಾಥ ದಾಸರು ಎಂದು ಜ್ವಲಿಸಿಹರು 13ಬ್ಯಾಗವಟ್ಟಿ ಗ್ರಾಮ ಮಾನವಿ ಎಂಬುವನಗರದ ಸಮೀಪವು ನವಾಬನಾಡಳಿತಆಗ್ರಾಮ ಶಾನಭೋಗ ನರಸಿಂಹಾಚಾರ್ಯರುಭಾಗವತಧರ್ಮವ ಆಚರಿಸುವವರು14ಹಣದಿಂದ ಶ್ರೀಮಂತರೋ ಬಡವರೋ ಹೇಗೋಗುಣದಿಂದ ಇವರು ಶ್ರೀಮಂತರು ಖರೆಯುಜ್ಞಾನಿವರ್ಯರು ಇವರು ಸುರವೃಂದದವರುಮನುಜ ಲೋಕದಿ ಜನ್ಮ ಹರಿಯ ನಿಯಮನದಿ 15ಜ್ಞಾನ ಭಕ್ತಿ ವೈರಾಗ್ಯ ಸಂಪನ್ನರುಶಾನುಭೋಗಿ ಉದ್ಯೋಗವ ತ್ಯಜಿಸಿಜ್ಞಾನಿತಿಮ್ಮಣ್ಣದಾಸಾರ್ಯರಲಿ ಉಪದೇಶಅನುಗ್ರಹನಾಮಾಂಕಿತ ಹೊಂದಿದರು ಮುದದಿ 16ನರಸಿಂಹಾಚಾರ್ಯ ಲಕ್ಷ್ಮಕ್ಕ ದಂಪತಿಯಪುತ್ರರತ್ನನು ಬುದ್ಧಿರ್ಮಾ ಶ್ರೀನಿವಾಸಸೂರಿವರವರದೇಂದ್ರ ತೀರ್ಥರ ಮುಖದಿಂದಪರಾಪರ ವಿದ್ಯೆಯ ಕಲಿತನು ತೀವ್ರ 17ವರದೆಂದ್ರರಲಿ ಓದಿ ದೊಡ್ಡ ಪಂಡಿತನಾಗಿನರಸಿಂಹದಾಸರು ತಂದೆ ದಿನ ಚರಿಪಹರಿದಾಸ ಪದ್ಧತಿ ಕೀರ್ತನಾರಾಧನಹರುಷದಲಿ ನೋಡಿ ಮುದಪುಳಕ ನಾಗುವನು 18ಗೃಹಸ್ಥ ಆಶ್ರಮ ಧರ್ಮ ಚೆನ್ನಾಗಿ ಆಚರಿಸುತ್ತಅಹರಹ ಸಚ್ಛಾಸ್ತ್ರ ಪಾಠ ಪೇಳುತ್ತಬಹುಕೀರ್ತಿ ಶ್ರೀನಿವಾಸಾಚಾರ್ಯರು ಹೊಂದಿಮಹಿಯಲ್ಲಿ ಪ್ರಖ್ಯಾತರಾಗಿ ಜ್ವಲಿಸಿಹರು 19ವಾರಿಜಾಸನ ಪಿತನು ಪೂರ್ಣಪ್ರಜÕರ ಹೃಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 20- ಪ್ರಥಮೋಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ನರಸಿಂಹ ಸ್ತೋತ್ರ11ವಂದಿಸು ನರಹರಿಯ ಮನವೆ ವಂದಿಸು ನರಹರಿಯವಂದ್ಯವಂದ್ಯನು ಬಹು ಸುಂದರ ಸುಖಮಯಇಂದಿರರಸ ಅರವಿಂದ ಸುನಾಭನ ವಂದಿಸು ನರಹರಿಯ ಪಸಿಂಧುಸಂಚರ ಬಹು ಸುಂದರ ಗಿರಿಧರತಂದನು ವಸುಧೆಯ ಕಂದನ ಕಾಯ್ದ ಪುರಂದರವರದ ಮುನೀಂದ್ರ ಕುಮಾರ ಕಪೀಂದ್ರಗÉ ಒಲಿದಮರೇಂದ್ರಗೆ ಬೋಧಿಸಿನಿಂದ ದಿಗಂಬರಕುಂಭಿಣಿಸುರನುತಮಂದರಗಿರಿ ಎತ್ತಿ ಸಿಂಧುವಿಂದಲಿ ಬಂದುಅಂಧ ಮೂಢರ ತನ್ನ ಅಂದ ಮೋಹದಿಕಟ್ಟಿದಾನ್ತ ಸುರರಿಗೆಲ್ಲ ಚಂದ ಸುಧೆಯನಿತ್ತಇಂದಿರಾಕಾಂತನನಂತ ಸುಗುಣಗಳಚಿಂತಿಸಿ ಯೋಗ್ಯದಿ ಕಂದದ ಪ್ರೇಮದಿವಂದಿಸು ನರಹರಿಯ 1ವೇದಾಂತರ್ಗತಬಾದರಾಯಣಹರಿಪಾದಾರಾಧಕಮೋದಸುತೀರ್ಥರಪಾದಾವಲಂಬಕ ಸಾಧು ಸುಮೇಧರಹೃದಯಾಕಾಶದಿ ಪದುಮದ ಮೂಲದಿಸದಮಲಾತ್ಮನಾದಿತ್ಯನುಪೋಲುವಿಧವಿಧಭಾಸದಿ ಪದೆ ಪದೆ ನೋಡುತವಿಧಿಯ ತಾತನ ಬಹುಮೋದಸುಗುಣಗಳಮುದದಲಿ ಚಿಂತಿಪಕೋವಿದಹಿರಿಯರಪಾದಸುಪಾಂಶುವ ನಿಯಮದಿ ಪೊಂದಿ ನೀಪದುಮೇಶನ ನಿನ್ನ ಹೃದಯದಿ ಚಿಂತಿಸಿವಂದಿಸು ನರಹರಿಯ 3ನಿಜಸುಖಮಾರ್ಗದಿ ಭಜಕ ಬಾಲಕ ಪೋಗೆಅರ್ಜಿತ ದ್ವೇಷದಿ ಮೂರ್ಜಗ ಶತ್ರುಗಜಾದಿಗಳಿಂ ಹೆಜ್ಜೆಜ್ಜೆಗೆ ಬಾಧಿಸೆಧೂರ್ಜಟಸೇವ್ಯ ಜನಾರ್ಧನ ನರಹರಿಗರ್ಜಿಪ ವದನನು ಸಜ್ಜನಪಾಲಕಅಜಸುರರೆಲ್ಲರು ತೇಜೋಮಯ ಅತಿಜ್ವಲಿಸುವ ನಖದಿಂ ದುರ್ಜನ ರಾಜನಜೋಜ್ಜೆಯ ಛೇದಿಸಿ ಭಜಕಗೆ ವರವಿತ್ತುಸೃಜ್ಯಾಸೃಜ್ಯರ ಪ್ರಾಜÕನ ಮರೆಯದೆವಂದಿಸು ನರಹರಿಯ 3ಸೃಷ್ಟ್ಯಾಧೀಶನದೃಷ್ಟನಾಗಿರುತಿಹಸೃಷ್ಟಾಸೃಷ್ಟ ಪ್ರವಿಷ್ಟಾಸೃಷ್ಟನುಶಿಷ್ಟರ ಇಷ್ಟ ಸುದೃಷ್ಟಿಯ ಬೀರುತಶಿಷ್ಟರ ಬಹು ವಿಧ ಕಷ್ಟಗಳಳಿದುಅಭೀಷ್ಟಗಳೀವನು ದುಷ್ಟರ ಶಿಕ್ಷಿಪಭ್ರಷ್ಟಜನರಿಗಿವ ಸ್ಪಷ್ಟನಾಗುವನಲ್ಲಶ್ರೇಷ್ಠೋತ್ತಮಪರಮೇಷ್ಠಿಜನಕನಿವಕಾಷ್ಟಾಗ್ನಿಯವೊಲ್ ಅದೃಷ್ಟಾದೃಷ್ಟನುದುಷ್ಟದೂರ ವಾಸಿಷ್ಠ ಶ್ರೀ ಕೃಷ್ಣನುತಿಷ್ಟನು ನಿನ್ನೊಳುತ್ಕøಷ್ಟನೆಂದರಿತುವಂದಿಸು ನರಹರಿಯ 4ಸರಿಪರರಿಲ್ಲದ ಸಿರಿಯರಸನಚಾರುಚರಣಾರಾಧನ ಪರಸುಖವೀವುದುಸಿರಿದೊರೆ ಸುಹೃದನು ಸಿರಿಸಹ ಮೆರೆಯುತಅರಿತ ಸುಜನರನು ಪೊರೆವನು ದಯದಿಮೊರೆಯನು ಲಾಲಿಸಿ ಪೊರೆದನು ಗರ್ಭವಮರೆತು ನಾರಾ ಎಂದ ನರಸುರಗೊಲಿದನುಪೊರೆದನು ದಯದಿ ನರಾಧಮ ಎನ್ನನುಕರಿವರ ದ್ರೌಪದಿವರದ ವಿಖ್ಯಾತನುಸರಸಿಜಭವತಾತ ಪ್ರಸನ್ನ ಶ್ರೀನಿವಾಸಪೊರೆವನು ನೆನೆವರ ಸಿರಿಭೂದೊರೆಯೆಂದುವಂದಿಸು ನರಹರಿಯ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ರಘೂತ್ತಮ ತೀರ್ಥರ ಚರಿತ್ರೆ122ಶ್ರೀ ರಘೂತ್ತಮರಂಘ್ರಿ ರಾಜೀವಯುಗ್ಮದಲಿಶಿರಬಾಗಿ ಶರಣಾದೆ ಧನ್ಯನಾದೆಶ್ರೀರಾಮಚಂದ್ರನ ಪೂರ್ಣಾನುಗ್ರಹ ಪೂರ್ಣಪಾತ್ರರು ಎಮ್ಮ ಪಾಲಿಸುವ ಕರುಣಾಳು ಪಶ್ರೀ ಹಂಸ ಲಕ್ಷ್ಮೀಶ ಪರಮಾತ್ಮ ಸರ್ವೇಶಬ್ರಹ್ಮ ಸನಕಾದಿಗಳ ಗುರುಪರಂಪರೆಯಬ್ರಹ್ಮಪದ ಐದುವ ಶ್ರೀ ಆನಂದತೀರ್ಥರನೀರ್ರುಹ ಚರಣಂಗಳಲ್ಲಿ ಶರಣಾದೆ 1ಪಂಕೇರುಹನಾಭ ನರಹರಿಮಾಧವಅಕ್ಷೋಭ್ಯ ಜಯತೀರ್ಥ ವಿದ್ಯಾಧಿರಾಜವಾಗ್ವಜ್ರ ರಾಜೇಂದ್ರ ಕವಿವರ ಕವೀಂದ್ರವಾಗೀಶಶ್ರೀ ರಾಮಚಂದ್ರರಿಗೆ ಶರಣು2ಶ್ರೀ ರಾಮಚಂದ್ರರ ಕರಜರು ಈರ್ವರಿಗೂಎರಡನೇಯವರು ವಿದ್ಯಾನಿಧಿಯಹಸ್ತಅರವಿಂದೋತ್ಪನ್ನ ರಘುನಾಥರಿಗೆ ನಮೋ ಎಂಬೆಸೂರಿವರ ರಘುವರ್ಯರಲ್ಲಿ ಶರಣಾದೆ 3ರಘುವರ್ಯ ಗುರುರಾಜ ಕರಕಮಲ ಸಂಜಾತರಘೂತ್ತಮ ತೀರ್ಥರ ಚರಣಕಾನಮಿಪೆಅಗಣಿತಗುಣಾಂಬುಧಿ ಅಘದೂರ ರಘುಪತಿಯಹೃದ್ಗುಹಾ ಒಳಹೊರಗೆ ಕಾಂಬುವಧೀರ 4ರಾಮಚಂದ್ರಾಚಾರ್ಯ ನಾಮ ಬಾಲಕನುಬ್ರಹ್ಮಚಾರಿಯು ಧೃಢÀವ್ರತನು ಹರಿಭಕ್ತಸುಮನೋಹರಮೂರ್ತೇ ಗುಣಗುಣಾಲಂಕೃತನುಈ ಮಹಾವೇದಾಂತ ಪೀಠಕ್ಕೆ ಅರ್ಹ 5ತಮ್ಮ ಮಠ ಶಿಷ್ಯರಲು ಮಾಧ್ವ ಸಜ್ಜನರಲ್ಲೂಸುಮಹಾಪಂಡಿತರು ಇರುತಿದ್ದರೂನುಈ ಮಹಾ ಪುರುಷ ಬಾಲನೇ ತಕ್ಕವನೆಂದುನೇಮಿಸಿದರು ಪೀಠಕ್ಕೆ ರಘುವರ್ಯ ಗುರುವು 6ರಘೂತ್ತಮತೀರ್ಥ ನಾಮದಿ ತುರೀಯಾಶ್ರಮರಘುವರ್ಯರೀ ರಾಮಚಂದ್ರಗೆ ಇತ್ತುರಾಘವನ ಪೂಜಾದಿ ಸಂಸ್ಥಾನ ಅಧಿಕಾರನಿಗಮಾಂತ ಗುರುಗಳು ನಿಯಮನ ಮಾಡಿದರು 8ವೇದವೇದಾಂತ ಸಚ್ಛಾಸ್ತ್ರ ಪಂಡಿತನುವಿದ್ಯಾರ್ಥಿ ಬಹುಮಂದಿಗೆ ಪಾಠ ಪೇಳುವವಿದ್ವಾಂಸ ಓರ್ವನ್ನ ರಘುವರ್ಯ ತೀರ್ಥರುವಿದ್ಯೆಕಲಿಸಲು ಏರ್ಪಾಡು ಮಾಡಿದರು9ಶೇಷಪ್ಪನಾಯಕರ ಮಕ್ಕಳು ಈರ್ವರಲಿಜ್ಯೇಷ್ಠ ಪುತ್ರನು ವಿದ್ವಾಂಸರಲಿ ಪ್ರಮುಖಶಿಷ್ಯರೂ ಬಹು ಜನರು ಈತನಿಗೆ ಉಂಟುಭೂಷಣವೆಂದೆನಿಸಿದನು ಮಾಧ್ವ ಸಮೂಹಕ್ಕೆ 10ಸಾವಿರದ ನಾನ್ನೂರು ಎಪ್ಪತ್ತ ಒಂಭತ್ತುಸಂವತ್ಸರದಲಿ ಶಾಲಿವಾಹನದಿದಿವಸ ತದಿಗೆ ಕೃಷ್ಣ ಜ್ಯೇಷ್ಠ ಪಿಂಗಳದಿಶ್ರೀವರನಪುರಕೆ ತೆರಳಿದರು ರಘುವರ್ಯರು 11ದಯಾಳು ರಘುವರ್ಯರು ಸಮಾಧಿಸ್ಥರಾಗಲುಬಾಲ್ಯಾವಸ್ಥೆಯಲಿ ಇದ್ದ ರಘೂತ್ತಮರುವಿದ್ಯಾವ್ಯಾಸಂಗಗುರುನಿಯಮನದಂತೇಯೆಗೈಯಲಿ ಪೋದರು ಆ ವಿದ್ವಾಂಸನಲ್ಲಿ 12ಮಣೂರು ಎಂದ್ಹೆಸರುಉಳ್ಳಆ ಊರಲ್ಲಿಘನವಿದ್ವನ್ಮಣಿಯಲ್ಲಿ ಕಲಿಯುವಾಗಧನವಂತ ಊರುನಾಯಕರಘೂತ್ತಮರಲ್ಲಿಬಿನ್ನೈಸಿದ ಭೋಜನಕೆ ಬರಬೇಕೆಂದು 13ಸ್ವಾಮಿಗಳಿಗೆ ಪಾಠ ಹೇಳುವ ವಿಪ್ರನೂಆ ಮನೆಯಲಿ ಊಟಕ್ಕೆ ಬಂದಿದ್ದನೇಮ ಆಹ್ನೀಕ ಮುಗಿಸಿ ಬರಲಿಕ್ಕೇತಾಮಸವು ಆಯಿತು ವಿಲಂಬವು ಸ್ವಲ್ಪ 14ಸ್ವಾಮಿಗಳ ಬಾಲ್ಯತ್ವ ವಿದ್ಯಾರ್ಥಿತ್ವವುಆ ಮನೆಯಲಿ ಗೃಹಸ್ಥನನ್ನೂ ವಿಪ್ರನನ್ನೂ ಮೋಹಿಸಿತುತಮ್ಮ ಯೋಗ್ಯತೆ ಸ್ಥಾನ ಮರೆತು ಗರ್ವದಿವಿಪ್ರಸ್ವಾಮಿಗಳ ಲೆಕ್ಕಿಸದೆ ಕುಳಿತನು ಭೋಜನಕೆ 15ಅಂದು ರಾತ್ರಿಸ್ವಪ್ನದಲಿ ರಘುವರ್ಯ ಗುರುಗಳುಬಂದು ಪೇಳಿದರ್ತಮ್ಮ ಪ್ರೇಮಿಶಿಷ್ಯರಿಗೆಇಂದಿನಾರಭ್ಯ ಪಾಠವ ನಿಲಿಸು ವಿಪ್ರನಲಿಕುಂದುಇಲ್ಲದೆ ಹೇಳುವೆ ನೀನೇವೆ16ಈ ರೀತಿ ಸ್ವಪ್ನವು ಆಗೇ ರಘೂತ್ತಮರುವಿಪ್ರನಲಿ ಪಾಠಕ್ಕೆ ಪೋಗುವುದು ತೊರೆದುಆ ಪಂಡಿತವರ್ಯರಿಗಿಂತ ಉತ್ತಮ ರೀತಿತಾಪೇಳಿದರು ಪಾಠ ಮಠದಿ ಶಿಷ್ಯರಿಗೆ 17ಗುರುಗಳಲಿಹರಿಇಷ್ಟ ಗುರುದ್ವಾರ ಒಲಿವನುಗುರುಅನುಗ್ರಹ ಇದ್ದರೇಹರಿಅನುಗ್ರಹಗುರುಪ್ರಸಾದವ ಪಡೆದ ಶ್ರೀ ರಘೂತ್ತಮರಿಗೆಶಾಸ್ತ್ರ ಜ್ಞಾನವು ಪ್ರಜ್ವಲಿಸಿತು ಪೂರ್ಣದಲಿ 18ಜಾತಾಪರೋಕ್ಷಿಗಳು ದೇವತಾಂಶರಿಗೇವೆಜ್ಞಾತವಾಗುವ ಪದ ವಾಕ್ಯದ ತಾತ್ಪರ್ಯಈ ದೇವತಾಂಶ ಶ್ರೀ ರಘೂತ್ತಮ ಗುರುವರರುಸಂದೇಹವಿಲ್ಲದೆ ತಿಳಿದು ಬೋಧಿಸಿದರು 19ತನ್ನಲ್ಲಿ ವ್ಯಾಸಂಗ ಪೂರೈಸದ ಬಾಲಏನು ಪಾಠವ ಹೇಳೇ ಶಕ್ತನೆಂದರಿಯೆಕಾಣದೆ ಮರೆಯಾಗಿ ನಿಂತು ಆವಿಪ್ರಶ್ರವಣ ಮಾಡಿದ ಗುರುಗಳು ಬೋಧಿಸುವುದು 20ಸಂದಿಗ್ಧÀ್ದವಾಗಿ ತನಗಿದ್ದ ವಿಷಯಗಳನ್ನೂಅದ್ಭ್ಬುತ ರೀತಿಯಲಿ ಅನಾಯಾಸವಾಗಿಅತಿವಿಶದದಿ ರಘೂತ್ತಮರು ಪೇಳಲುಕೇಳಿಬಂದು ಮುಂದೆ ನಿಂತು ನಮಿಸಿದನುವಿಪ್ರ21ತಾನು ಮಾಡಿದ ಉದಾಸೀನ ಅಪರಾಧಗಳಘನದಯದಿ ಕ್ಷಮಿಸಬೇಕೆಂದು ಬೇಡುತ್ತತನು ದಂಡವತ್ ಭುವಿಯಲಿ ಬಿದ್ದು ನಮಿಸಿದನುದೀನದಯಾಳುಗುರುಅಭಯನೀಡಿದರು22ದಿಗ್ವಿಜಯ ಮಾಡುತ್ತ ಅಲ್ಲಲ್ಲಿ ದುರ್ಮತದುರ್ವಾದಿಗಳನ್ನು ಖಂಡಿಸಿ ಸಿದ್ಧಾಂತತತ್ವಬೋಧಿಸಿ ಜಗತ್ ಪ್ರಖ್ಯಾತರಾದರುಶಾಶ್ವತ ನಿಜಸುಖ ಮಾರ್ಗದರ್ಶಕರು 23ರಘುವರ್ಯ ಗುರುಗಳು ನೇರಲ್ಲು ಸ್ವಪ್ನದಲುರಘೂತ್ತಸಮರಿಗೆ ಪೇಳಿದ ಪ್ರಕಾರದಿಗ್ವಿಜಯ ಸಮಯದಿ ಸಂಸ್ಥಾನಕ್ಕೆ ಭೂಷಣಬಗೆಬಗೆ ವಸ್ತು ಪರಿವಾರ ಸೇರಿಸಿದರು 24ವೇದಾಂತ ಸಾಮ್ರಾಜ್ಯ ರಾಜಗುರುರಾಜರುಹಸ್ತಿಘೋಟಕ ಕೊಂಬು ವಾದ್ಯಮೇಳಗಳುಸುತ್ತಲೂ ವಿದ್ವಜ್ಜನ ವೇದಘೋಷದ ಮಧ್ಯಮುತ್ತು ಪಲ್ಲಕ್ಕಿಯೊಳು ಕುಳಿತರು ದೇವರ ಸಹ 25ಪೋದ ಕಡೆಗಳಲಿ ದಿಗ್ವಿಜಯ ರಾಮಾರ್ಚನೆವಿದ್ವಜ್ಜನ ಸಭೆ ವಾಕ್ಯಾರ್ಥ ಪಾಠಸಿದ್ಧಾಂತ ಸ್ಥಾಪನೆ ದುರ್ಮತ ನಿರಾಸವುಸಾಧು ಸಜ್ಜನರ ಉದ್ಧಾರ ಪ್ರತಿದಿನವು 26ಬಾದರಾಯಣನಿರ್ಣೀತ ರೀತಿಯಲಿಮಧ್ವರಾಯರು ಬರೆದ ಗ್ರಂಥಗಳಿಗೆಅದ್ಬುತ ಟೀಕೆ ಜಯತೀರ್ಥರು ಮಾಡಿಹರುಸದ್ಭಾವ ಬೋಧವು ರಘೂತ್ತಮರ ರಚನೆ 27ಟೀಕಾ ಭಾವಬೋಧರು ಎಂದು ಪ್ರಖ್ಯಾತರಘೂತ್ತಮರ ಎಲ್ಲೆಲ್ಲೂ ವಿದ್ವಜ್ಜನರುನಗರಪಟ್ಟಣ ಗ್ರಾಮ ನಾಯಕರು ಪ್ರಮುಖರುಸ್ವಾಗತ ಅರ್ಪಿಸಿ ಪೂಜಿಸಿದರು ಮುದದಿ 28ಪುಟ್ಟಿದಾರಭ್ಯಹರಿಪಾದಕಮಲದಿ ಮನಇಟ್ಟು ರಘುವರ್ಯರು ಕೊಟ್ಟ ಸಂಸ್ಥಾನಪಟ್ಟ ಆಳಿ ಸರ್ವೋತ್ತಮನನ್ನ ಸೇವಿಸಿಶ್ರೇಷ್ಠತಮ ಸುಖಪ್ರದಮಾರ್ಗತೋರಿಹರು29ಹದಿನೈದು ನೂರು ಹದಿನೇಳು ಶಕ ಮನ್ಮಥಶುದ್ಧ ಏಕಾದಶಿ ಪೌಷ್ಯದಲಿ ಹರಿಯಪಾದಸೇರಿದರು ಸಂಸ್ಥಾನ ಆಡಳಿತವೇದವ್ಯಾಸ ತೀರ್ಥರು ಮಾಡಲಿಕೆ ಬಿಟ್ಟು 30ಮತ್ತೊಂದು ಅಂಶದಲಿ ವೃಂದಾವನದೊಳುಹತ್ತಾವತಾರಹರಿದ್ಯಾನಪರರಿಹರುಭಕ್ತರು ಅಲ್ಲಲ್ಲಿ ಅರ್ಚಿಸಿ ಸೇವಿಸುವಮೃತ್ತಿಕೆಯಲ್ಲು ಸಹ ಇದ್ದು ಪಾಲಿಪರು 31ವೃಂದಾವನ ತಿರುಕೋಯಿಲೂರ್ ಮಣಂಪೂಂಡಿಎಂದು ಕರೆಯಲ್ಪಡುವ ಗ್ರಾಮದಲಿ ಇಹುದುಇಂದುಶೇಖರ ಚಾಪದಿಂದ ಉದಿಸಿದ ಪುಣ್ಯನದಿಯು ಹರಿಯುತ್ತೆ ಮಜ್ಜನವು ಅಘಹರವು 32ಮಂದಜಾಸನಮೊದಲಾದ ಸುರವೃಂದವಂದಿತ ರಮಾಪತಿಯು ರಘೂತ್ತಮಾಂತಸ್ಥವೃಂದಾವನದಿಗುರುಹರಿಭಕ್ತಿ ಪೂರ್ವಕದಿಬಂದು ಸೇವಿಪರಿಗೆ ವಾಂಛಿತÀಗಳೀವ 33ಗಾಳಿ ಬಿಸಿಲು ಮಳೆ ಮಂಜುಗಳ ಲೆಕ್ಕಿಸದೆಮಾಲೋಲನ ಧ್ಯಾನಿಸುತ ವೃಂದಾವನದೊಳುಕುಳಿತಿಹರುಪರಮಕಾರುಣಿಕಈ ಗುರುಗಳುಪಾಲಿಸುತಿಹರು ಎಮ್ಮಅನುಗಾಲದಯದಿ34ವೃಂದಾವನ ದರ್ಶನ ತೀರ್ಥ ನಮಸ್ಕಾರಪ್ರದಕ್ಷಿಣೆ ಅರ್ಚನೆ ಹಸ್ತೋದಕವಂದನೆ ಸೇವಾದಿಗಳ ಮಾಳ್ಪ ಸಜ್ಜನರಕುಂದುಕೊರತೆಗಳಳಿವ ಇಷ್ಟಾರ್ಥ ಪ್ರದರು35ಪಿಲ್ಲಿ ಶೂನ್ಯಾದಿ ವಾಮಾಚಾರ ಪೀಡೆಗಳುಗಾಳಿದುಷ್ಟಗ್ರಹ ಪೈಶಾಚಾದಿಗಳುಕಳವಳಿಕೆ ಬುದ್ದಿಭ್ರಮೆ ವ್ಯಾಧಿದಾರಿದ್ರ್ಯಾದಿಎಲ್ಲ ದೋಷಗಳನ್ನ ಪರಿಹರಿಸುವರು 36ಸವೈರಾಗ್ಯ ಜ್ಞಾನವ ಭಕುತಿ ಅಪರೋಕ್ಷವಸೇವಿಪ ಯೋಗ್ಯರಿಗೆ ಒದಗಿಸಿ ಉದ್ಧರಿಸಿಸರ್ವವಿಧದಲು ಭಾಗ್ಯ ಆಯುಷ್ಯ ಆರೋಗ್ಯಈವರು ಭಕ್ತಯಲಿ ಸ್ಮರಿಸಿ ವಂದಿಪರ್ಗೆ 37ಉತ್ತಮ ತರಗತಿ ದೇವತಾಂಶರು ಇವರುಮಧ್ವಮತದುಗಾಬ್ಧಿ ಪೂರ್ಣಚಂದ್ರಹತ್ತು ತಿಂಗಳು ಹೊತ್ತು ಹೆತ್ತ ಉತ್ತಮ ಸಾಧ್ವಿಮಾತೆಯ ಭಾಗ್ಯ ಏನೆಂಬೆ ಇಂಥವರ 38ಸೂರಿಸುರವರ ಶ್ರೀ ರಘೂತ್ತಮರ ಚರಣದಲಿಶರಣಾದೆ ಎನ್ನಯ ಎನ್ನಸೇರಿದವರಪರಿಪರಿ ಪೀಡೆಗಳ ಪಾಪಗಳ ಅಳಿದುಕಾರುಣ್ಯ ಔದರ್ಯದಿ ಪಾಲಿಸುವರು 39ಸರಿದ್ವರ ಪಿನಾಕಿನಿಯಲಿ ಕೇಶವ ಜಗವಈರಡಿಯಲಿ ಅಳೆವ ತ್ರಿವಿಕ್ರಮನು ಶಿರಿಯುಇರುತಿಹರು ಹನುಮ ಶಿವಸ್ಕಂಧ ತೀರಗಳಲಿಶರಣೆಂಬೆ ಇವರೆಲ್ಲರ್ಗು ಶ್ರೀ ರಘೂತ್ತಮರಿಗೂ 40ಕಮಲಭವಪಿತ `ಶ್ರೀ ಪ್ರಸನ್ನ ಶ್ರೀನಿವಾಸ 'ಕಮಲಾಯುತವಿಶ್ವರೂಪತ್ರಿವಿಕ್ರಮಗೂಭೀಮ ಶಿವಸ್ಕಂಧರಿಗು ಪ್ರಿಯತಮ ರಘೂತ್ತಮರಈ ಮಂಗಳ ಚರಿತ ಶ್ರೀ ಕೃಷ್ಣಾರ್ಪಿತವು 41 ಪ|| ಇತಿ ಶ್ರೀ ರಘೂತ್ತಮ ತೀರ್ಥ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಬ್ರಹ್ಮಣ್ಯ ತೀರ್ಥ ಗುರುಗಳ ಸ್ತೋತ್ರ102ವರಗುರುವರ್ಯ ಶ್ರೀ ಬ್ರಹ್ಮಣ್ಯತೀರ್ಥರ |ಚರಣಕಮಲಕೆ ನಾಅನುದಿನನಮಿಪೆಪಪರಿಪರಿ ದುರಿತವ ತ್ವರಿತದಿ ತರಿದು ಶ್ರೀ |ಹರಿಮಧ್ವ ಚರಣಂಗಳಲಿ ಭಕ್ತಿ ಕೊಡುವಂತೆ ಅ ಪವರಮಧ್ವಮುನಿ ಹೃಸ್ಥ ನರಹರಿ ಶ್ರೀಕೃಷ್ಣ |ಕರಗಳ ಕಟಿಯಲಿಟ್ಟಿರುವ ವಿಠಲರಾಯ ||ವರವೇದವ್ಯಾಸ ವರಾಹನರ್ಚಕರಾದ |ವರಪುರುಷೋತ್ತಮ ಮುನಿಕರ ಕಮಲಜ1ವಿಪ್ರವೃದ್ಧರಿಗೆ ಇವರು ದಯವನ್ನು ಬೀರಿ |ಪುತ್ರ ಭಾಗ್ಯವನಿತ್ತು ಆ ವ್ಯಾಸ ಮುನಿಯನು ||ಸುಪ್ರಖ್ಯಾತರ ಮಾಡಿದಂಥ ಪ್ರಸಿದ್ಧರೀ - |ಸುಪ್ರಬುದ್ಧರ ಮಹಿಮೆಯು ಜ್ವಲಿಪುದು ಎಲ್ಲೂ 2ಪರಮದಯದಿ ಎನ್ನ ಕಷ್ಟದುರಿತ ಕೀಳ್ತು |ಪರಮಸದ್ಗುರುವರ್ಯರೆ ಪೊರೆಯಿರಿ ಎನ್ನ ||ಸರಸಿಜೋದ್ಭವತಾತ' ಪ್ರಸನ್ನ ಶ್ರೀನಿವಾಸ &ಡಿsquo;ವರಕಾಂತಿಯಿಂ ಪ್ರಜ್ವಲಿಸುತಿಹ ನಿಮ್ಮೊಳು3 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಭಾರತೀದೇವಿ72ಭಾರತಿತವ ಚರಣಾಂಬುರುಹವ ನಂಬಿದೆಪೊರೆಎನ್ನಪಹರಿಸಿರಿ ಪ್ರಿಯತರ ಮರುತನ ನಿಜಪತಿಹರ ಶಕ್ರಾದಿಗಳಿಂದಾರಾಧಿತೆ ಅಪಉದಿತ ಭಾಸ್ಕರನ ಪೋಲ್ವ ದ್ಯುತಿಯಿಂದಜ್ವಲಿಸುವೆ ಶುಭಕಾಯೆಹೃದಯಾಂತರ್ಬಹಿ ಶ್ರೀಶನ ಕಾಂಬುವಜ್ಞಾನ ಭಕುತಿಯೀಯೆ ತಾಯೆ 1ಬಲ ಕರದಲಿ ಜ್ಞಾನ ಊಧ್ರ್ವದಿಅಭಯಮುದ್ರೆಯು ಶುಭದಒಲಿವ ಸುವರಮುದ್ರೆ ಪುಸ್ತಕವಾಮದಿ ವಿದ್ಯಾಪ್ರದೆ ಸುಖದೆ 2ಶತಸುಖಪಿತ ಪ್ರಸನ್ನ ಶ್ರೀನಿವಾಸನು ಸುಖಮಯನುಸತತ ಎನಗೆ ಒಲಿವಂತೆ ನೀದಯಮಾಡೆ ಮಾತೆಭಾರತಿಶರಣು3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಭಾವಿಸಮೀರವಾದಿರಾಜ ಗುರುಗಳ ಸ್ತೋತ್ರ109ವಾದಿರಾಜ ಗುರುರಾಜರ ಚರಣಕೆರಗಿರೋಸಂದೇಹಇಲ್ಲದೇ ಇವರ ಭಜಿಸಿ ಬದುಕಿರೋಪಗೌರಿಗದ್ದೆ ಕ್ಷೇತ್ರದಲ್ಲಿ ರಾಮಾಚಾರ್ಯ ಸರಸ್ವತೀ |ವಿಪ್ರಶ್ರೇಷ್ಠರ ನಿಮಿತ್ತೀಕರಿಸಿ ಇಳೆಯಲಿ ತೋರಿಹರು 1ಯೋಗೀವಾಗೀಶತೀರ್ಥರಕರ ಕಮಲಜಾತ ||ಗಾಗಿ ವಾದಿರಾಜ ತೀರ್ಥರಾದ ವಾದಿಗಜಸಿಂಹ 2ವೀರಭದ್ರೋಪಬಲಿ ನಾರಾಯಣ ಭೂತರಾಜ |ಪರಿಪರಿವಿಧದಿ ಇವರಿಗೆ ಸೇವೆ ಮಾಡುವರು3ವಾದಿರಾಜರ ಭಕ್ತರ ಸರ್ವ ಬಾಧೆಗಳ ಪರಿಹರಿಸೆ |ಒದಗುವರು ಭಾವಿರುದ್ರರು ಭೂತರಾಜರು 4ಯುಕ್ತಿ ಮಲ್ಲಿಕಾದಿ ದಿವ್ಯ ಶ್ರುತಿಸ್ಮøತಿ ಯುಕ್ತಯುತ |ಗ್ರಂಥಗಳ ಕುಮತ ಭಂಜಕ ಜ್ಞಾನ ಪುಂಜವು 5ತ್ರಿವೃನ್ನಾಮ ತ್ರಿವಿಕ್ರಮನ ಸೋದೆಯಲ್ಲಿ ನಿಲ್ಲಿರಿಸಿದ |ಭಾವಿ ಸಮೀರರ ನೇಮಿಸಿ ಕ್ಷೇಮಾಕಾಂಕ್ಷಿಗಳು 6ಧವಳಗಂಗೆಯಲಿ ವೇದವ್ಯಾಸನ ಮುಂದೆಪವಿತ್ರ ವೃಂದಾವನದಿ ಇಹರ ನೋಡಿ ಧನ್ಯರು ನಮಸ್ಕರಿಸುತ 7
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಯದುವರಕುಲ ತೋಯದಿ ಹಿಮಕರಾಶ್ರಿತ ಜನಮಂದಾರಗಂಗೋದ್ಭವಬಲಿವ್ಯಾಸ ಪರಾಶರ ಪುಂಗವನುತಚರಣಭೂಸುರ ಪತ್ನಿ ವಿಭೂಷಣಧರ ಕಂಸಾಸುರಮುರಮಥನಶರಣಾಗತ ಪೋಷಣ ಮೃದು ಭಾಷಣ ಶಕಟಾಸುರಹರಣ
--------------
ಗೋಪಾಲದಾಸರು
ಶ್ರೀ ರಮಾಧವಾ ನಮಿಸುವೆ ದೇವಾ ಪವಾರಿಜೋದ್ಭವನುತಸಾರಸಗುಣಯುತಸಾರಿ ನುತಿಪೆ ದಯದೋರಿ ಸಲಹು ಹರೀಅ.ಪತೋರುವಾ ಸುಂದರ ಶಾಂತಾಕಾರವಾ ಸ್ಥೂಲಸೂಕ್ಷ್ಮ ಶರೀರವಾ ತಪಯೋಗಿ ಹೃದಯಸುಮಾ ಸಾರವಾ ನೀ ಮೆರೆವಾ ಸಾರಸಾಂಘ್ರಿಯುಗವಾಶಂಕವಾ ಉದಿದತಿ ಭಕ್ತಕಳಂಕವಾ ಮುರಿದತಿದುರುಳರ ಬಿಂಕವಾ ಭಕ್ತಜನರ ಸದೃಶಾಂಕವಾಸೇರುವಾ ಪಂಕಜಾಸನ ಪಿತನೇ ಪಾಲಿಸು ಶಂಕರಗತಿಹಿತನೇ ಭವಭಯ ಬಿಂಕವ ಬಿಡಿಸೈ ಪಂಕಜ-ಕರಯುತ ವೆಂಕಟೇಶ ಸರ್ವಾಂಕಿತ ರೂಪನೆ2ಸುಂದರಾ ವನಮಾಲ ಶೋಭಾ ಕಂದರಾಮುಖಪದ್ಮಾಕಾರ ಚಂದಿರಾ ಸದ್ಧರ್ಮಶಾಸ್ತ್ರಸ್ಮøತಿಮಂದಿರಾ ವೇದೋದ್ಧಾರಾ ಚಂದ್ರಸೂರ್ಯನಯನಾ ಕರುಣಾನಂದ ವಿಮಲಚರಣಾಮುನಿಜನವೃಂದ ವಂದ್ಯ ಚರಣಾರವಿಂದವನುಬಂದು ತೋರಿಸಿ ಗೋವಿಂದದಾಸನಪೊರೆ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಶ್ರೀ ರಾಘವೇಂದ್ರರಾಯ- ಎನ್ನ-ಭವxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಭಾರನಿನ್ನದೊ ಜೀಯ್ಯಾದೂರನೋಡದಲೀಗ ಕೈಯಾ - ಪಿಡಿದು ನೀಸಾರೆಗರಿಯೋ ಸೂರಿಧ್ಯೇಯಾ 1ನಿನ್ಹೊರತು ಗತಿಯಾರೊ ಎನಗೆ - ಈಗಬಿನ್ನಪವ ಮಾಳ್ಪೆ ನಾ ನಿನಗೆ - ಭವದಿಬನ್ನಬಡುವವನ ನೋಡಿ ಹೀಗೆ 2ಈಸುವತ್ಸರವ್ಯರ್ಥ ಕಳದೆ- ನಾನಿನ್ನಈಶ ನೀನೆಂಬುದನು ಮರೆದೆ - ಬಹುಕ್ಲೇಶಬಟ್ಟೀಪರಿಯಲುಳದೆ 3ಸರಸ ವಿಙ್ಞÕನಭಕುತಿನೇಮಾ - ನೀನಿತ್ತುಪೊರೆಯೊ ನೀ ಭಕ್ತವತ್ಸಲ 4ಎನು ಕರುಣಾನಿಧಿಯೊ ನೀನು - ಜಗದೊಳಗೆಸಾನುರಾಗದಿ ಭಜಿಪೆ ನಾನು - ತವಚರಣಧ್ಯಾನ ಪಾಲಿಪದೀಗ ನೀನು 5ಕೃಷಿಯಾದಿ ಸತಿ-ಸುತರ ಪ್ರೇಮಿ - ಎನಿಸಿತೃಷೆಯಗೊಂಡೆನೊ ಅಂತರಯಾಮಿ 6ನರರ ಯಾಚನೆ ಮಾಡಸಲ್ಲ - ದೇಶವನುಪರಿಪರಿಯ ಭವಣೆ ಸುಳ್ಳಾಗದಲ್ಲ- ಸರ್ವಙÕಸರ್ವ ನೀ ತಿಳಿದಿರುವಿಯಲ್ಲ 7ನೀಚಜನ ಮನೆ ಮನೆಗೆ ಪೋಗಿ - ನಾನುಯಾಚಿಸಿದೆ ನಾಚಿಕೆಯನೀಗಿಯೋಚನಿಲ್ಲದೆ ನಾನು ಕೂಗಿ - ಈಗ!ನೀಚನಾದೆನೊ ಕಾಯೋ ಪರಮಯೋಗಿ 8ಶೇಷಾದ್ರಿನಿಲಯ ವಾಸ - ಪದದೂತವಾಸವಾಗೆಲೊ ಮನದಿ ತೋಷ - ಪೊರೈಸೊದಾಸಜನಪ್ರಿಯ ಯೋಗೀಶಾ 9ದುಷ್ಟ ಜನ ತತಿಯ ಸಂಗ - ಬಿಡಿಸಿಇಷ್ಟು ಪಾಲಿಸ್ಯನ್ನಂತರಂಗ - ದೊಳಗೆತುಷ್ಟನಾಗಿರು ನೀನೆಕರುಣಾಪಾಂಗ10ಪೋತನಾ ನಿನಗಲ್ಲೆ ಜೀಯಾ- ಎನಗೆತಾತನೀನೆಂಬೊ ಮಾತು ಖರಿಯನ್ನಾಥ ವಿಠಲಗೆ ನೀನೆ ಪ್ರಿಯ 11
--------------
ಗುರುಜಗನ್ನಾಥದಾಸರು
ಶ್ರೀ ವಿಜಯೀಂದ್ರ ತೀರ್ಥರ ಚರಿತೆ110ಪ್ರಥಮ ಕೀರ್ತನೆವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿ ಯಿಂ ಶರಣಾದೆ ಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಹಂಸ ಲಕ್ಷೀಮಶ ನಾಭಿಭವ ಸನಕಾದಿಮಹಂತರ ಸೂರಿಗಳಗುರುಪರಂಪರೆಯಮಹಾ ಪುರುಷೋತ್ತ ಮದಾಸ ಶ್ರೀಮಧ್ವವನದೃಹ ಪಾದಗಳಲ್ಲಿ ನಾ ಶರಾಣು ಶರಣಾದೆ 1ಅರವಿಂದನಾಭ ನರಹರಿ ಮಾಧವತೀರ್ಥಸೂರಿಕುಲ ತಿಲಕ ಅಕ್ಷೋಭ್ಯ ಜಯತೀರ್ಥಪರವಿದ್ಯಾಕುಶಲ ಶ್ರೀ ವಿದ್ಯಾದಿರಾಜರಜಯೀಂದ್ರರ ಚರಣಂಗಳಲಿ ನಾ ಶರಣು 2ಕೋವಿದಶಿರೋಮಣಿ ಕವೀಂದ್ರ ವಾಗೀಶರುಭಾವುಕಾಗ್ರಣಿ ರಾಮಚಂದ್ರ ವಿಭುದೇಂದ್ರದೇವ ಹರಿಪ್ರಿಯ ಜಿತಾಮಿತ್ರ ಯತಿವರರು ರಘುನಂದನದೇವಿ ತುಳಸೀಪತಿಯ ಒಲಿಸಿಕೊಂಡ ಸುರೀಂದ್ರರು 3ಈ ಸರ್ವ ಗುರುಗಳಚರಣಕಮಲಗಳಲ್ಲಿನಾ ಸರ್ವದಾ ಶರಣು ಶರಣೆಂಬೆ ಮುದದಿವ್ಯಾಸಮುನಿ ಪ್ರಿಯಮಿತ್ರ ಶ್ರೀಸುರೇಂದ್ರರಕರಸರಸಿಜದಿಜಾತ ವಿಜಯೀಂದ್ರರಲಿ ಶರಣು ನಾ 4ವಿದ್ಯಾಧಿರಾಜ ಸುತ ರಾಜೀಂದ್ರತೀರ್ಥರಪದ್ಮ ಕರದುದಯ ಜಯಧ್ವಜರಹಸ್ತವೃತತಿಜೋತ್ಪನ್ನ ಪುರುಷೋತ್ತಮ ಮಹಾಮಹಿಮಯತಿಕುವರ ಸೂರಿವತ ಬ್ರಹ್ಮಣ್ಯತೀರ್ಥ 5ಬ್ರಹ್ಮಣ್ಯತೀರ್ಥಾಖ್ಯ ಖಗಕರದಿ ಅರಳಿತುಮಹಿಯಲಿ ಪ್ರಖ್ಯಾತ ವ್ಯಾಸಮುನಿಅಬ್ಜಬಹುಮಂದಿ ಈ ಸುಮನ ಪರಿಮಾಳಾಕರ್ಷಿತರುಬ್ರಹ್ಮವಿದ್ಯಾ ಮಕರಂದದಿ ಮೋದಿಸಿದರು 6ಪೂರ್ವಜನ್ಮದಿ ನಾರದರಿಂದ ಉಪದಿಷ್ಟವ್ಯಾಸರಾಜರು ಶ್ರೀಪಾದರಾಜರಲಿಸರ್ವವಿದ್ಯಾ ಕಲಿತು ವಾದಿಗಜಹರಿ ಆಗಿತತ್ವ ಬೋಧಿಸಿ ಸಜ್ಜನರ ಕಾಯ್ದಿಹರು 7ಋಜುಮಾರ್ಗದಲಿ ಇರುವ ಯತಿವಟು ಗೃಹಸ್ಥರುನಿಜಭಕ್ತಿ ಶ್ರದ್ಧೆಯಿಂದಲಿ ಶ್ರೀವ್ಯಾಸ-ರಾಜರಲಿ ವಿದ್ಯಾಭ್ಯಾಸ ಮಾಡಲು ಆಗಪ್ರಜಾಪೇಕ್ಷೆ ಭಿನೈಸಿದ ವಿಪ್ರಶಿಷ್ಯ 8ಆವಿಪ್ರೋತ್ತಮನಿಗೆ ಪ್ರಜಾ ಅನುಗ್ರಹ ಮಾಡಿಪ್ರವರ ಪುತ್ರನ ತಮ್ಮ ಮಠಕ್ಕೆ ಕೊಡಬೇಕುಅವರಜರು ಸಂತತಿ ಅಭಿವೃದ್ಧಿಗೆ ಇರಲುಈ ವಿಧದಿ ಹೇಳಿದರು ಶ್ರೀ ವ್ಯಾಸಮುನಿಯು 9ಕೊಟ್ಟವರ ತಪ್ಪದೇ ವಿಪ್ರಪತ್ನಿಗೆ ಶಿಶುಹುಟ್ಟುವ ಸಮಯದಲಿ ಗುರುಗಳು ಕೌಶೇಯತಟ್ಟೆಯ ಕಳುಹಿಸಿ ಭೂಸ್ಪರ್ಶ ಇಲ್ಲದÀಲೇಹುಟ್ಟಿದ ಮಗುವನ್ನು ಹಿಡಿಯ ಹೇಳಿದÀರು 10ಶ್ರೀಮಠಕ್ಕೆ ವಿಪ್ರನು ಆ ಬಾಲಕನನ್ನುನೇಮಿಸಿದ ರೀತಿಯಲಿ ಒಪ್ಪಿಸಿ ಅಲ್ಲಿರುಕ್ಮಿಣಿನಾಥ ವಿಠಲನ ಪೆಸರಿಂದವಿಮಲವಟು ವಿದ್ಯಾರ್ಥಿ ಸನ್ಯಾಸಿ ಆದ 11ವಿಟ್ಠಲಾಚಾರ್ಯನು ಶ್ರೀ ವ್ಯಾಸರಾಜರಲಿಶಿಷ್ಠವಿಲ್ಲದೇ ಅಷ್ಟು ಶಾಸ್ತ್ರ ಕಲಿತು ಚತುಃಷಷ್ಟಿ ವಿದ್ಯಾದಲ್ಲಿ ಸಹನಿಪುಣನಾಗಿಅಷ್ಟ ದಿಕ್ಕುಗಳಲ್ಲಿ ಪ್ರಖ್ಯಾತನಾದ 12ಇದರಲ್ಲೇನು ಆಶ್ಚರ್ಯ ಇಲ್ಲ ಸ್ವಾಭಾವಿಕವುದೇವತೆಗಳು ಧರಣಿಯಲ್ಲಿ ಜನಿಸಿದರೂಶಕ್ಯಾತ್ಮನ ಸರ್ವ ಅಣಿಮಾದಿ ಐಶ್ವರ್ಯಇದ್ದು ಸುವ್ಯಕ್ತ ವಾಗುವವು ಗುರುಕೃಪದಿ 13ಈ ವಿಠಲನೇವೇ ವಿಜಯೀಂದ್ರ ನಾಮದಲಿಭುವಿಯಲ್ಲಿ ಬೆಳಗಿದನು ಸುರರಲ್ಲಿ ಶ್ರೇಷ್ಠದೇವತಾ ಕಕ್ಷದವರಾದ ಶ್ರೀವ್ಯಾಸಮುನಿಪ್ರವರ ಸುರಗಣ ವಾದಿರಾಜರ ಸಮೇತ 14ಸರಸಿಜಾಸನಪಿತ &ಟಜquo; ¥ಸÀನ್ನ ಶ್ರೀ ನಿವಾಸನು&ಡಿಜquo;ಬರೆಸಿದ ಶ್ರೀಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ15 ಪ-ಇತಿ ಪ್ರಥಮ ಕೀರ್ತನೆ ಸಂಪೂರ್ಣಂ-ದಿತೀಯ ಕೀರ್ತನೆವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂದ ಶರಣಾದೆಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಶ್ರೀಮನೋಹರ ರಂಗನಾಥನ ಸೇವಿಸಲುಶ್ರೀಮಠ ಜರುಗಿತು ರಂಗ ಕ್ಷೇತ್ರಕ್ಕೆಸೋಮಪುಷ್ಕರಿಣಿಯಲಿ ಕಾವೇರಿ ಮಧ್ಯದಲಿಕಾಮಿತಪ್ರದ ಶ್ರೀಶರಂಗ ಇರುತಿಹನು 1ಕಾವೇರಿ ತೀರದಲ್ಲಿ ಶ್ರೀತುಳಸಿವನ ಬೆಳಸೆಆವನಸಮೀಪದಲಿ ವ್ಯಾಸಮುನಿ ಮಠವುದುರ್ವಾದ ಖಂಡನ ಸಿದ್ಧ್ದಾಂತ ಸ್ಥಾಪನದೇವತಾರ್ಚನೆ ಹರಿಕೀರ್ತನೆ ವೈಭವವು 2ಒಂದು ದಿನ ಶ್ರೀ ವ್ಯಾಸರಾಯರು ನೋಡಿದರುತಂದು ಪೂಜೆಗೆ ಇಟ್ಟ ತುಳಸೀದಳಗಳುಇಂದಿರಾಪತಿಗರ್ಪಿತವಾದ ನಿರ್ಮಾಲ್ಯಎಂದು ತಿಳಕೊಂಡರು ವಿಚಾರ ಮಾಡಿದರು 3ತಿಳಿಯ ಬಂತು ಅಂದು ಪ್ರಾತಃಕಾಲದಲಿತುಳಸೀಗೆ ಬಂದುರು ಸುರೇಂದ್ರ ಮಠದವರುತುಳಸಿ ಕೊಡುವುದಿಲ್ಲ ಎನೆ ಪೋದರು ಆ ಬಾಹ್ಮಣರುಪೇಳಿದರುಗುರುಸುರೇಂದ್ರರಿಗೆವೃತ್ತಾಂತ4ಭಾವುಕ ಶಿರೋಮಣಿವಿಜ್ಞಾನಸೂರಿಗಳುತಾವು ಕುಳಿತಲ್ಲೇ ಸುರೇಂದ್ರ ಸ್ವಾಮಿಗಳುಭವಜನಯ್ಯನಿಗೆವನತುಳಸಿ ಪೂರಾವುಭಾವಶುದ್ಧದಿ ಅರ್ಪಿಸಲು ಹರಿಕೊಂಡ 5ಶ್ರೀ ಸುರೇಂದ್ರರ ಈ ಮಹಿಮೆಯ ಶ್ಲಾಘಿಸಿಬೇಗವ್ಯಾಸರಾಯರು ತಾವೇವೆ ಪೋಗಿಕುಶಲ ಸಂಭಾಷಿಸಿ ತಮ್ಮ ಮಠಕ್ಕೆ ಬಂದುಶ್ರೀಶಾರ್ಚನೆ ಚರಿಸಲು ಆಹ್ವಾನ ಮಾಡಿದರು 6ಸೂರಿವರ ರಾಜೇಂದ್ರ ರವೀಂದ್ರರುಎರಡು ಈ ಗುರುಗಳಿಂದಲಿ ಬಂದ ಮಠಗಳುಎರಡು ಸ್ವಾಮಿಗಳು ಶ್ರೀವ್ಯಾಸ ಸುರೇಂದ್ರರಹರಿಪೂಜೆ ವೈಭವವು ವರ್ಣಿಸಲು ಅಶಕ್ಯ 7ಥಳಥಳಿಪ ಬ್ರಹ್ಮವರ್ಚಸ್ಸು ಮುಖಕಾಂತಿಯುಎಲ್ಲ ಶಾಸ್ತ್ರಜ್ಞಾನ ಪ್ರವಚನ ಪಟುತ್ವಶೀಲತ್ವ ಸೌಲಭ್ಯ ಬಾಲ್ಯ ಚಟುವಟಿಕೆಯುಸೆಳೆದವು ಸುರೇಂದ್ರರ ವಿಠಲನ ಬಳಿಗೆ 8ರಮೆಯರಸನ ಪೂಜೆತತ್ವಬೋಧÀವು ಮಾಳ್ಪತಮ್ಮ ಸಂಸ್ಥಾನದ ಉನ್ನತ ಸ್ಥಾನಕ್ಕೆತಮ್ಮ ನಂತರ ವಿಜಯೀಂದ್ರರೇ ಸರಿ ಎಂದುನೇಮಿಸಿದರು ಮನದಿ ಸುರೇಂದ್ರ ಗುರುವು 9ಅಪರೋಕ್ಷದಲು ಈವಿಠಲನ ಯೋಗ್ಯತೆಆ ಪುಣ್ಯ ಶ್ಲೋಕರು ಅರಿತು ತಾವುಅಪೇಕ್ಷಿಸುವಂತ ವಸ್ತು ಬÉೀಕೆಂದರುಶ್ರೀಪನ ಇಚ್ಫೆಯನರಿತು ವ್ಯಾಸರಾಯರಲ್ಲಿ 10ಕೇಳುವ ವಸ್ತು ಬಿಟ್ಟು ಬೇರೆ ಏನೂ ಕೊಡುವೆಕೇಳÉಲಾರೆನು ಬೇರೆ ಕೊಳ್ಳೆನು ಬೇರೆಇಲ್ಲ ವೆಂದರೆ ಊಟ ಮಾಡಿಕೊಡುತ್ತÉೀನೆ ಈಲೀಲಾ ವಿನೋದ ಮಾತುಗಳು ಕ್ರೀಡಾರ್ಥ 11ವಿಮಲ ವಿರಜಾ ಸಮ ಕಾವೇರಿ ಮಧ್ಯದಲಿರಮಾಯುಕ್ ರಂಗನಾಥನು ಹನುಮಸೇವ್ಯರಾಮ ಪೂಜಿಸಿದಂಥ ರಾಮನು ಪಟ್ಟಾಭಿರಾಮ ಶ್ರೀ ಗೋಪಾಲಕೃಷ್ಣನ ಮುಂದೆ 12ಶ್ರೀಶನ ಈ ಬಹುರೂಪ ಸನ್ನಿಧಿಯಲ್ಲಿಭೂಸುರ ವಿದ್ವಾಂಸರ ಸಭೆ ಮಧ್ಯದಲಿವ್ಯಾಸಮುನಿದತ್ತ ವಿಠಲನ ಸುರೇಂದ್ರರುಸುಸ್ವಾಗತದಿಂದ ಸ್ವೀಕಾರ ಮಾಡಿದರು 13ವಿಜಯೀಂದ್ರ ತೀರ್ಥ ಶುಭತಮ ನಾಮವಿತ್ತರುವಿಜಯಶೀಲರಾಗಿ ವಿಜಯೀಂದ್ರರುನಿಜತತ್ವ ಸಿದ್ಧಾಂತ ಸ್ಥಾಪಿಸಿ ದುರ್ಮತದುರ್ಜನ ದುರ್ವಾದ ಚೂರ್ಣ ಮಾಡಿದರು 14ಬ್ರಹ್ಮ ದಶರಥ ರಾಮಚಂದ್ರನು ಅರ್ಚಿಸಿದಭೂಮಾದಿ ಗುಣಗಣಾರ್ಣವ ದಯಾನಿಧಿಯುಕಮಲೆ ಸೀತಾಸೇವ್ಯ ಮೂಲರಾಮನ್ನಸಮ್ಮುದದಿ ಶ್ರೀವಿಜಯೀಂದ್ರರು ಪೂಜಿಸಿದರು 15ಸರಸಿಜಾಸನಪಿತ &ಟಜquo; ಪ್ರಸÀನ್ನ ಶ್ರೀನಿವಾಸ&ಡಿಜquo; ನುಬರೆಸಿದ ಶ್ರೀಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ16-ಇತಿದ್ವಿತೀಯಕೀರ್ತನೆ ಸಂಪೂರ್ಣಂ-ವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂಶರಣಾದೆ ಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಧರೆಯೊಳುತ್ತಮ ಕುಂಭಕೋಣಾಖ್ಯ ನಗರದಿಹರಿದ್ವೇಷಿಯ ಗೆದ್ದು ಅವನ ಮಠ ತೋಟಸ್ಪರ್ಧೆ ಫಣವಾದ್ದವ ತಮ್ಮಲ್ಲಿ ಸೇರಿಸಿಕೊಂಡಧೀರ ವಿಜಯೀಂದ್ರರ ಚರಣಕಾನಮಿಪೆ 1ಸಾರಂಗಹಸ್ತವರಾಹಚಕ್ರಪಾಣಿ ರಾಮಮಂಗಳಾಂಬಿಕೆಯುತ ಕುಂಭೇಶ್ವರತುಂಗಮಹಿಮಳು ಕಾವೇರಿ ಸುಧಾಸರಸ್ಸುಈ ಕುಂಭಕೋಣದ ಮಹಿಮೆ ಏನೆಂಬೆ 2ಸಂಕ್ರಂದಸ್ಮರಮೊದಲಾದ ಜಗತ್ತಿಗೆ ಗುರುವಾದಮಂಗಳಾಂಬಿಕೆ ಕುಂಭೇಶ್ವರರ ನೃಹರಿ ಸಾನಿಧ್ಯರಭಂಗವಿಲ್ಲದೆ ಪ್ರತಿದಿನ ಸೇವಿಸುವರುಸುರೇಂದ್ರಮಠ ಗುರುವು ವಿಜಯೀಂದ್ರರು 3ಭಸ್ಮಧರನು ಸರ್ವೊತ್ತ ಮನೆಂದು ವ್ಯರ್ಥದಿದುಸ್ತರ್ಕ ಮಾಡಿದ ಜಗನ್ಮಿಥ್ಯಾವಾದಿಅಪ್ಪಯ್ಯನ ಮತವ ತೃಣದಂತೆ ಮಾಡಿದತತ್ವವಾದ ಅಸಿಯಿಂದ ವಿಜಯೀಂದ್ರ ಜಯಶೀಲ 4ಸ್ವಪಕ್ಷ ಪರಪಕ್ಷ ಸರ್ವವಿದ್ವಾಂಸರುಈ ಪುಣ್ಯಶ್ಲೋಕರ ಮಹಿಮೆ ಕೊಂಡಾಡಿತಪ್ಪದೇ ಆಗಾಗ ಬಂದು ಮರ್ಯಾದೆಅರ್ಪಿಸಿ ಪೋಗುವರು ಕೃತಕೃತ್ಯಮನದಿ 5ಬಾದರಾಯಣಿ ಮಾಧ್ವ ಗ್ರಂಥಗಳನುಸರಿಸಿವೇದ ವಿರುದ್ಧ ಮತ ಖಂಡನ ಗ್ರಂಥಗಳುಚತುರೋತ್ತರ ಶತಮೇಲ್ ತತ್ವ ಬೋಧಕವಾದಗ್ರಂಥಗಳ ರಚಿಸಿದರು ಉತ್ತಮ ರೀತಿಯಲಿ 6ಅಂಬುಶಾಯಿ ಸರ್ವ ಮುಕ್ತಾಮುಕ್ತ ಆಶ್ರಯನುಅಂಭ್ರಣೀಪತಿ ಶ್ರೀಮನ್ನಾರಾಯಣಗಂಭೀರ ಶಬ್ದಾರ್ಥ ನಿರ್ವಚನ ಮಾಡಿಹರುಅಂಬುಜನಾಭ ಒಲಿವ ಪಠಿಸಿದರೆ 7ಮಧ್ವಮತ ಪರಿಮಳ ಸುಗಂಧ ಭುವಿಯಲಿ ಹರಡೇಸುಧಾದಿ ಉದ್ಗ್ರಂಥ ಪ್ರವಚನದಿ ಪಟುವುಸುಧೀಂದ್ರ ಯತಿವರಗೆ ಸಂಸ್ಥಾನ ಕೊಟ್ಟರುಮಧ್ವಮತೋದ್ಧಾರ ವಿಜಯೀಂದ್ರ ಗುರುರಾಟ್ 8ಸದ್ಭಕ್ತಿಯಿಂಶುಚಿ ಅಧಿಕಾರಿ ಇವರ ನರಸಿಂಹಾಷ್ಟಕವಪಠಿಸೆ ಭೂತ ಪ್ರೇತ ಪಿಶಾಚಾದಿಗಳ ಉಚ್ಫಾಟನವುಚೋರ ವ್ಯಾಧಿ ಮಹಜ್ವರ ಭಯಾದಿ ಕಷ್ಟಗಳು ನಿವಾರಣಸಂಧ್ಯಾಕಾಲ ಪಠನದಿ ಸದ್ಭಕ್ತಿಗೆ ಒಲಿದು ಕಾಯ್ವ ಶ್ರೀ ನರಸಿಂಹ 9ಐವತ್ತು ಮೇಲೈದು ವರ್ಷ ಸಂಸ್ಥಾನದಿನಿರ್ವಿಘ್ನ ಪೂಜಾ ಶಿಷ್ಯೋ¥ದೇಶದೇವ ಲಕ್ಷೀಶಗೆ ತಮ್ಮ ಸೇವೆ ಸಮರ್ಪಣೆ ಮಾಡಿಪವಿತ್ರತಮ ಸುಸಮಾಧಿಯನ್ನು ಹೊಂದಿದರು 10ಶಾಲಿವಾಹನಶಕ ಹದಿನೈದು ನೂರು ಹದಿನಾಲ್ಕನೇ ವರ್ಷ ಜೇಷ್ಠಬಹುಳಶೀಲತಮ ಭವದಿತ್ರಯೋದಶಿ ದಿನದಿಮಾಲೋಲ ನಾರಾಯಣಪುರಯೈದಿದರು 11ಮತ್ತೊಂದು ಅಂಶದಲಿ ಕುಳಿತು ವೃಂದಾವನದಿಉತ್ತಮ ಶ್ಲೋಕ ನಾರಾಂiÀiಣನ ಧ್ಯಾನಿಸಿಒಲಿದು ಸೇವಿಸುವರಿಗೆ ಸÀತತ ಔದಾರ್ಯದಲ್ಲಿಇತ್ತು ವರಗಳ ಸದಾ ಸಂರಕ್ಷಿಸುತಿಹರು 12ಮೂಲರಾಮನ ವಿಮಲ ಭಾವದಲಿ ಅರ್ಚಿಸಿಕುಳಿತು ವೃಂದಾವನದಿ ಧ್ಯಾನಿಸುವ ಇವರುಮೂಲ ವೃಂದಾವನ ಮಾತ್ರದಿ ಅಲ್ಲದೇಅಲ್ಲಲ್ಲಿ ಇವರು ಮೃತಿಕೆಯಲ್ಲಿಯೂ ಇಹರು 13ವಿಜಯೀಂದ್ರರಾಯರ ವೃಂದಾವನದಲಿವಿಜಯಸಖ ಸರ್ವ ಜಗಜ್ಜನ್ಮಾದಿಕರ್ತಅಜಭವಾದಿಗಳಿಂದಸೇವ್ಯಶ್ರೀನರಹರಿ ಇಹನುವಿಜಯೀಂದ್ರಗುರುಅಂತರ್ಯಾಮಿವಾಂಛಿತಪ್ರದನು14ಶ್ರೀಶನ ಸಾನಿಧ್ಯ ಪೂರ್ಣ ಇರುವುದರಿಂದಶ್ರೀಶನೊಲಿಮೆ ಪೂರ್ಣಪಾತ್ರ ಇವರಲ್ಲಿಶ್ರೀ ಸುಧೀಂದ್ರಾದಿಗಳು ದೇವವೃಂದದ ಜನರುಭೂಸುರರು ಪ್ರತಿದಿನ ಬಂದು ವಂದಿಪರು 15ವೃಂದಾವನ ದರ್ಶನ ಸೇವೆ ಪಾದೋದಕಕುಂದುಕೊರತೆ ಇರುವ ಧಾರ್ಮಿಕ ಇಷ್ಟದವುಎಂದಿಗೂ ಎನ್ನ ಕುಂದುಗಳ ಎಣಿಸದೆಬಂದು ಪ್ರತಿಕ್ಷಣ ಕಾಯುತಿಹರು ಶರಣು ಶರಣಾದೆ 16ವಿ ಎಂದರೆ ವಿಠಲ ಜ್ಞಾನಮುದವೀವಜ ಎಂದರೆ ಜಯವು ಪುಟ್ಟು ಸಾವಿಲ್ಲಯೀ ಎಂದರೆ ಜ್ಞಾನಕರ್ಮ ಪೂಜಾಫಲವುಇಂದ್ರ ಎಂದರೆ ಐಶ್ಚರ್ಯ ಸುಖವೀವ 17ಸಿಂಧೂರವರದ ಶ್ರೀಕರ ಪುರುಷೋತ್ತಮಬಿಂದುಮಾಧವ ಶ್ರೀಧರ ರಾಮಚಂದ್ರಸೈಂಧವಾಸ್ಯನು ಅಚ್ಯುತಾನಂತ ಗೋವಿಂದಎಂದಿಗೂ ಎಮ್ಮನು ಕಾಯ್ವ ಗುರುಚರಿತೆ ಪಠಿಸೆ 18ಅಂಬರೀಷ ರಕ್ಷಕನು ಅಜಾಮಿಳ ವರದನುಕಂಬದಲಿ ತೋರಿ ಪ್ರಹ್ಲಾದನ್ನ ಕಾಯ್ವವನುಈ ವೃಂದಾವನ ಗುರುಚರಿತೆ ಪಠಿಸುವರಿಗೆಸೌಭಾಗ್ಯವೀವನು ಸುಧಾಮಗೊಲಿದವನು 19ನಾರಾಯಣವಾಸುದೇವ ಸಂಕರುಷಣಪ್ರದ್ಯುಮ್ನ ಅನಿರುದ್ಧ ಲಕ್ಷ್ಮೀ ಸಮೇತವರವಾಯು ಭಾರತೀ ಸುರವೃಂದ ಸಹಿತಇರುತಿಹ ವಿಜಯೀಂದ್ರರಲಿ ಅಭಯವರದ 20ಸೌಂದರ್ಯಸಾರ ಜಗದೇಕವಂದ್ಯನು ಭೈಷ್ಮೀಸತ್ಯಾಸಮೇತವರಅಭಯದ ಅಜಿತಇಂದಿರಾಪತಿ ಕೃಷ್ಣಗರ್ಪಿತ ಈ ಗುರುಚರಿತೆಸುದರ್ಶನ ಕಂಬುಧರ ಅಖಿಲಪ್ರದ ಹರಿಗೆ 21ಸರಸಿಜಾಸನಪಿತ &ಟಜquo; ಪ್ರಸನ್ನ ಶ್ರೀ ನಿವಾಸ &ಡಿಜquo; ನುಬರೆಸಿದ ಶ್ರೀ ಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಷ್ಣು ತೀರ್ಥವಿಜಯ130ಪ್ರಥಮ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ, ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪನಿರ್ದೋಷಗುಣಪೂರ್ಣಶ್ರೀ ರಮಣ ಹಂಸನಿಗೆವಿಧಿಸನಕ ಮೊದಲಾದ ಗುರುಪರಂಪರೆಗೆ,ಯತಿವರ್ಯ ಅಚ್ಚುತ ಪ್ರೇಕ್ಷರಿಗೆ ಆನಂದತೀರ್ಥರ ಪದಾಂಬುಜಗಳಿಗೆ ಆನಮಿಪೆ 1ಪಂಕೇರುಹನಾಭ ನರಹರಿಮಾಧವಅಕ್ಷೋಭ್ಯ ಜಯತೀರ್ಥ ವಿದ್ಯಾಧಿರಾಜವಾಗ್ವಜ್ರ ರಾಜೇಂದ್ರ ಕವಿವರ ಕವೀಂದ್ರವಾಗೀಶರಿಗೆ ನಮೋ ರಾಮಚಂದ್ರರಿಗೆ 2ಶ್ರೀರಾಮ ಪ್ರಿಯ ರಾಮಚಂದ್ರರ ಕರಜರುಸೂರಿಗಳುವಿಭುದೇಂದ್ರ ವಿದ್ಯಾನಿಧಿಗೆಎರಗಿ ವಿದ್ಯಾನಿಧಿಯ ಸುತ ರಘುನಾಥರಿಗುಕರುಣಾಳು ರಘುವರ್ಯರಿಗು ಆನಮಿಪೆ 3ವೇದಾಂತಕೋವಿದರಘೂತ್ತಮ ತೀರ್ಥರಿಗೆವೇದವ್ಯಾಸಾಭಿದ ಯತಿಗಳಿಗೆ ನಮಿಪೆವೇದವ್ಯಾಸ ತೀರ್ಥರ ಕರಕಮಲ ಸಂಜಾತವಿದ್ಯಾಧೀಶರ ಚರಣಕಾ ನಮಿಪೆ 4ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯ -ನಾಥ ಸತ್ಯಾಭಿನವ ಸತ್ಯಪೂರ್ಣರಿಗೆಸತ್ಯವಿಜಯ ಸತ್ಯಪ್ರಿಯ ಸತ್ಯಬೋಧರಿಗೆಸತ್ಯಸಂಧ ಈ ಸರ್ವ ಗುರುಗಳಿಗೆ ನಮಿಪೆ 5ಸತ್ಯವರ ತೀರ್ಥರ ಚರಣಕಾ ನಮಿಸುವೆಸತ್ಯವರ ಕರಕಂಜ ಸಂಜಾತರಾದಸತ್ಯರಮಣ ಪ್ರಿಯ ಶ್ರೀ ವಿಷ್ಣುತೀರ್ಥರವೃತತಿಜಾಂಘ್ರಿಗಳಲ್ಲಿ ಶರಣಾದೆ ಸತತ 6ಶ್ರೀ ತ್ರಿವಿಕ್ರಮಪಾದಅಬ್ಜಜಾಸರಿತವಶಿರದ ಮೇಲ್ ಧರಿಸಿದ ಗಿರಿಜೇಶನಂತೆಹರಿಭಕ್ತಾಗ್ರಣಿ ವೈರಾಗ್ಯ ನಿಧಿಯು ಈಸೂರಿಕುಲತಿಲಕ ಶ್ರೀ ವಿಷ್ಣು ತೀರ್ಥಾರ್ಯ7ಸವಣೂರು ಪ್ರಾಂತದ ಸಿದ್ಧಾಪುರದವರುಮಾಧ್ವದಂಪತಿ ಭಾಗೀರಥಿ ಬಾಳಾಚಾರ್ಯಸೇವಿಸಿದರು ಟೀಕಾಚಾರ್ಯರ ಭಕ್ತಿಯಿಂದೇವಸ್ವಭಾವ ಮಗ ಪುಟ್ಟಬೇಕೆಂದು 8ರಾಘವಾನಂದ ಮುನಿ ಅಕ್ಷೋಭ್ಯ ತೀರ್ಥರಾ -ನುಗ್ರಹ ಸದಾಪೂರ್ಣ ಜಯತೀರ್ಥ ಮುನಿಯುಬಾಗಿ ಬೇಡಿದ ಈ ಸಾಧುದಂಪತಿಗೊಲಿದುಯುಕ್ತ ಕಾಲದಿ ದೊರೆಯಿತು ಪುತ್ರ ಭಾಗ್ಯ 9ಸ್ಪಟಿಕನಿಭ ಅಕಳಂಕ ಕಾಂತಿಯುಕ್ ಮಗನಿಗೆಇಟ್ಟು ಜಯತೀರ್ಥನಾಮವ ಮುಂಜಿ ಮಾಡಿಪಾಠ ಓದುವುದಕ್ಕೆ ಐಜಿ ಆಚಾರ್ಯರಲಿವಟುವ ಕಳುಹಿಸಿದರು ಕೃತಕೃತ್ಯ ತಂದೆ 10ಜಯತೀರ್ಥರನುಗ್ರಹದಿ ಜಯತೀರ್ಥ ವಟುವುವಿದ್ಯಾಭ್ಯಾಸ ಐಜಿ ಆರ್ಯರಲ್ಲಿಗೈಯುವಾಗ ಇತರ ವಿದ್ಯಾರ್ಥಿಗಳಿಗಧಿಕದಿವ್ಯ ಪ್ರತಿಭಾವನ್ನ ತೋರಿಸುತ್ತಿದ್ದ 11ಶ್ರೀದ ಒಲಿದಿಹ ಇವನ ಯೋಗ್ಯತೆ ದೊಡ್ಡದು,ವೈದಿಕ ಸುಪೂರ್ಣ ಬೋಧರ ಶಾಸ್ತ್ರವೆಲ್ಲ,ಓದಿ ಶ್ರೀ ಐಜಿ ವೇಂಕಟರಾಮಾರ್ಯರಲ್ಲಿಉತ್ತಮ ಜ್ಞಾನಿಯು ಆದ ಜಯತೀರ್ಥ 12ಸುರವೃಂದದಲಿ ದೊಡ್ಡ ಸ್ಥಾನದವ ಇವನೆಂದುಹರಿಯೇ ಈ ಜಯತೀರ್ಥನಲಿ ತೋರಿಹನುಗುರುಐಜಿಯರ ಸುತನ ಅಪಮೃತ್ಯು ತರಿದಿಹನುಭಾರಿತರ ಆಶ್ಚರ್ಯ ಇನ್ನೂ ತೋರಿಹನು 13ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ಮಹಾಭಕ್ತ ಶ್ರೀ ವಿಷ್ಣು ತೀರ್ಥಾಯಶರಣು 14 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವೆಂಕಟೇಶ ಭುವನೇಶ್ವರೇಶಪಾಹಿವೇದವೇದ್ಯ ಕರುಣಾಢ್ಯ ಗತಮೌಢ್ಯ ಪ.ಸರ್ವಚೇತನ ಜಡನಿಚಯಪೂರ್ಣ ಹೇ ಸುಪೂರ್ಣಶರ್ವೇಶ ವಿಧಿವಿನುತ ವಿಮಲಚರಣಉರ್ವಿಭಾರಕಹರಣ ಶರಣಾನ್ವಯೋದ್ಧರಣನಿರ್ವಾಣಪದಪ್ರದ ನಿತ್ಯಾಂತ:ಕರಣಾನಿರ್ವಚನೀಯಾತಿಶಯಾನಾಥನಾಥ ಸುಗೀತಸರ್ವಾಮರಾರ್ಥಿಸುದಾತತಾತಸರ್ವಜÕ ವಾರಣೇಂದ್ರಭರಣ ಹಿತಕರಣ ದಾಶಾರ್ಹ ಹಿತಕರಣಸಂಸ್ಕøತಿವಾರ್ಧಿಕರಣ1ಆತ್ಮಾಂತರಾತ್ಮ ಪರಮಾತ್ಮ ಜ್ಞಾನಾತ್ಮ ಪುರುಷೋತ್ಮಾನ್ನಮಯ ಪ್ರಾಣಮಯ ಮನೋಮಯಾಧ್ಯಾತ್ಮಪ್ರಿಯ ಮಾಪ್ರಿಯ ವಿಬುಧಜನಸ್ವಪ್ರಿಯಆತ್ಮವೈಭವಪ್ರಿಯ ಭಕ್ತಪ್ರಿಯಆತ್ಮೀಯ ವೀರ್ಯ ಔದಾರ್ಯೋದ್ಧøತಟಂಕಆತ್ಮ ಅನಂತನಿಕುರುಂಬಬಿಂಬಆತ್ಮ ನಿವೇದನ ಬಲೀಂದ್ರನುತಉಪೇಂದ್ರ ನಿತ್ಯಾತ್ಮ ಗುಣವೃಂದ ದಯಾಸಾಂದ್ರ ವಿಭೋ ಸಿಂಧೋ 2ಸೃಷ್ಟಿ ಸ್ಥಿತಿ ಲಯ ನಿಯಮ ಜ್ಞಾನಾಜ್ಞಾನ ಬಂಧ ಮೋಕ್ಷಾದ್ಯಷ್ಟ ಕಾರಣ ಸದಾಸಾಧುಪಕ್ಷದುಷ್ಟಹರ ದುರಿತತಮೋಭಾನುಬುಧಸುರಧೇನುವಿಷ್ಣು ಜನರಕ್ಷ ಸದ್ದೀಕ್ಷ ದಕ್ಷಶಿಷ್ಟಮೂಲ ಪ್ರಕೃತಿ ತುಷ್ಟಿದ ಜಡ ಪ್ರಕೃತಿಪುಷ್ಟಿಕರ ಸುಲಲಿತ ಶ್ರೀವತ್ಸಪಕ್ಷಸ್ಪಷ್ಟಲೀಲಾದಿ ನಾರಾಯಣ ನಿರಾಮಯವೃಷ್ಣೀಶಸಾಷ್ಟ ಸಾಪರಾಗತಿ3ಬುದ್ಧೀಂದ್ರಿಯ ಪ್ರಾಣವರ್ಧಕ ಕೃತೀಶ ಅನಿರುದ್ಧ ಪಾಲನಪರ ಪ್ರದ್ಯುಮ್ನ ವಿಭೋರುದ್ರ ನಿಯಂತಾರ ಹಂತಾರ ಸಂಕರ್ಷಣಾದ್ಯವಾಸುದೇವಸನ್ಮೋಕ್ಷಪ್ರದಸದ್ಧಾಮತ್ರಯಗ ಶ್ರೀಪದ್ಮನಾಭಾಚ್ಯುತ ಮುಕ್ತಿದಾತಗಾತ್ರಅತ್ಯದ್ಭುತಾರ್ಥಶುದ್ಧಕರ ನಾಮಾಪ್ತ ಕಾಮಾಪ್ರಮೇಯ ಸಮೃದ್ಧ ಸುಖಗಾತ್ರಾಬ್ಜನೇತ್ರಮಿತ್ರ4ಸತ್ಯವ್ರತ ಪಾಲಾಬ್ಧಿ ಕೀಲನಸೃಕ್ಕೋಲಖಳದೈತ್ಯಜಸುಶೀಲಪ್ರಿಯವಟುನೃಪಕುಲಹರ್ತ ದ್ವಿಜಕರ್ತ ದಶವಕ್ತ್ರ್ತಮಾರಕ ನಮಿತಪಾರ್ಥಪದ ಶುದ್ಧೋದನ ಚಿತ್ತಹರಣಮತ್ತಕಲಿಹರ ಧರ್ಮಸ್ಥಾಪಕಪರಾತ್ಪರಸತ್ಯಸಂಕಲ್ಪಪ್ರಸನ್ನವೆಂಕಟಪರ5
--------------
ಪ್ರಸನ್ನವೆಂಕಟದಾಸರು