ಒಟ್ಟು 6266 ಕಡೆಗಳಲ್ಲಿ , 125 ದಾಸರು , 3382 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾತೆಂದೆನಬ್ಯಾಡಿ ಧ್ರುವ ಎಲ್ಲಿ ನೋಡಿದರೆ ತಾ ಅಲ್ಲಿಗಲ್ಲಿಗಿಹ್ಯ ಎಲ್ಲ ಕಡೆಯಲ್ಲೇಕೋಮಯವೊ ಸುಲ್ಲಭವಾಗಿಹ್ಯಬಲ್ಲ ಜ್ಞಾನಿಗೆ ಭಾಸುತಿಹ್ಯ ಫುಲ್ಲಲೋಚನ ಪ್ರಾಣದೊಲ್ಲಭನು 1 ಎತ್ತ ನೋಡಿದರತ್ತ ಸುತ್ತಸುತ್ತಲಿಹ್ಯ ನಿತ್ಯವಾಗಿಹ್ಯ ಹೃತ್ಕಮಲದಲಿ ತುತ್ತಾಯಿತ ತಾ ಮಾಡಿ ನಿತ್ಯಸಲಹುವ ಹತ್ತಿಲೆ ಹೊಳೆಯುತ ಚಿತ್ತದಲಿ 2 ಹಿಂದೆನೋಡಿದಿರಿಹ ಮುಂದೇನೋಡಿದಿರಿಹ್ಯ ಸಂಧಿಸಿಹನು ಅಂತರಾತ್ಮದಲಿ ತಂದೆ ತಾಯಿಯು ಬಳಗಾಗಿಹ್ಯ ತಾನೆ ಎಂದಿಗೆ ಅಗಲದೆ ಅನುದಿನದಲಿ 3 ಜನವನದೊಳಗಿಹ್ಯ ಜನಾರ್ಧನ ತಾನು ತನುಮನದೊಳು ಥಳಥಳಸುತಲಿ ಅನುಮಾನವಿಲ್ಲದೆ ಅನಿಮಿಷದಲಿ ನೋಡಿ ಆಣುರೇಣುದಲಿ ಪರಿಪೂರ್ಣನು 4 ಸಾರಿಚಲ್ಲೆದ ಪರಬ್ರಹ್ಮಸ್ವರೂಪವಿದು ಸೂರ್ಯಾಡಬಹುದು ಸುಜ್ಞಾನಿಗಳು ತೋರದು ಎಂದಿಗೆ ಗುರುಕೃಪೆಯಿಲ್ಲದೆ ತರಳಮಹಿಪತಿ ವಸ್ತುಮಯವಿದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಧವ ಬೇಡಿಕೊಂಬೆ ಪ ನೋಡಿ ನೀ ದಯಮಾಡಿ ಎನ್ನಯ ಪೀಡೆ ದೂರಮಾಡು ಬೇಗದಿಅ.ಪ ಅದ್ರಿಧರನೆ ಪರಮದಯಾಸ ಮುದ್ರ ಎನ್ನನು ಕೊಲ್ಲುವ ಕಡುದಾ ರಿದ್ರ್ಯಕಳೆದು ಬಯಲುಮಾಡಿ ಭದ್ರವಾಗಿ ಕಾಯೊ ಹರಿಯೆ 1 ಕ್ಷುದ್ರದನುಜರ ಸದೆದು ಭರದಿ ಅದ್ರಿಯೆತ್ತಿ ಭಕ್ತಜನರ ಸುಖ ಸ ಮುದ್ರದಿರಿಸಿ ಪೊರೆದೆಯೊ ಭುಜ ಗಾದ್ರಿಶಾಯಿ ಸುದೃಷ್ಟಿಲೆನ್ನ 2 ಎನ್ನ ಮನಸಿನ ಡೊಂಕ ತಿದ್ದಿ ನಿನ್ನ ಚರಣದಾಸನೆನಿಸಿ ಬನ್ನಬಡಿಸದೆ ಇನ್ನು ಜಗದಿ ಮನ್ನಿಸಿ ಪೊರೆ ವರದ ಶ್ರೀರಾಮ3
--------------
ರಾಮದಾಸರು
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಮಾಧವ ರಕ್ಷಿಸು ಮಧುಸೂದನ ವೃಥಾ ಕ್ರೋಧವ್ಯಾಕೊ ಸುರ ಸೌಖ್ಯ ಸಾಧನ ಪ. ದೇಹದಲ್ಲಿ ಬಲ ಕುಂದುತಲಳುವೆ ಮುಂದ- ಕ್ಕಾಹ ರೀತಿ ತಿಳಿಯದೆ ಬಳಲುವೆ ಮೋಹ ಪಾಶದಲಿ ಸಿಕ್ಕಿ ನರಳುವೆ ಚಿತ್ಸಂ- ದೋಹ ಎಂದು ತವಪಾದ ನೆಳಲೀವೆ 1 ಯಾತಕಿಂತು ಸಾವಕಾಶ ಮಾಡುವಿ ದೀನ ನಾಥ ಬಹು ಪರಿಕಿಸಿ ನೋಡುವಿ ಪಾತಕಾಂಶವಿರಲು ನೀಡಾಡುವಿ ಎನ್ನ ಮಾತನ್ಯಾಕೆ ಮರೆತು ಮುಂದೋಡುವಿ 2 ನಿತ್ಯವಾದ ನಿನ್ನ ಸೇವೆ ನಡೆಸಲು ತಕ್ಕ ಶಕ್ತಿಯಿಲ್ಲ ಸ್ವರವನ್ನೆತ್ತರಿಸಲು ಒತ್ತಿ ಬಹ ವಿಧ ವಿಧ ಕೊರೆತವು ಗಂಡ ಕ್ಲೇಶ ಭರಿತವು 3 ಸಿರಿನಲ್ಲ ಹೀಗೆ ಭೃತ್ಯನನ್ನು ಬಿಡುವುದು ಥರವಲ್ಲ ದತ್ತ ಸ್ವಾತಂತ್ರ್ಯವರಿಯದ ಕ್ರಮವೆಲ್ಲ ತೀರಿ ಕತ್ತಲೆ ಮುಸುಕಿದಂತಿರುವುದಲ್ಲ 4 ಮಾಯಕ ಮೋಹದಿ ಸಿಕ್ಕಿ ನೊಂದೆನು ತಿಮ್ಮ ರಾಯ ಶೇಷ ಗಿರೀಶ ಕೇಳ್ಮುಂದೇನು ಬಾಯ ಬಿಟ್ಟು ಬಿರಿನುಡಿಯಂದೆನು ಲಕ್ಷ್ಮೀ ಪ್ರೀಯನೆಣಿಸದಿರದ ನೊಂದೆನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಧವ ಸಾಧುಜನ ಕಾದಿರುವರೊ ಪ ಆದರದಿಂದ ನಿನ್ನ ನೋಡುವುದಕೆ ಅ.ಪ ಶಾಸ್ತ್ರಗಳಿಂದಲು ಅರಿಯದ ನಿನ್ನ ಪ ವಿತ್ರ ರೂಪವನು ನೋಡಲೋಸುಗ 1 ಘೋರತಪಗಳಿಂದ ಸೇರದೆÀ ನಿನ್ನನು ಚಾರಿಯೊಳ್ ಪೊಂದಲು ಕೋರುತಿಹರೊ 2 ದಾನ ಧರ್ಮಗಳಿಗೂ ಸುಲಭದಿ ದೊರೆಯದ ನೀನೆ ಬಂದಿರಲು ವಿನೋದಿಸುವರೊ 3 ತೀರ್ಥಯಾತ್ರೆಯು ಮನ ಮಾತ್ರ ಶೋಧಿಪುದೆಂದು ಮೂರ್ತಿ ನೋಡಲು ನಿನ್ನ ಪ್ರಾರ್ಥಿಸುವರೊ4 ಅನ್ನದಾನವ ಮಾಡೆ ಹೊನ್ನು ಇವರಿಗಿಲ್ಲ ಮನ್ನಣೆ ಮಾಡಿ ಪ್ರಸನ್ನನಾಗೆಲೊ 5
--------------
ವಿದ್ಯಾಪ್ರಸನ್ನತೀರ್ಥರು
ಮಾಧವನ ಚರಣಾರವಿಂದೆ ಪಾದೆ ಪ ಎದ್ದೋಡಿ ತಿರುಗಿ ನೋಡದೆ ಹೋಹವು ಸದ್ಬಕ್ತಿಯಿಂದ ನಿನ್ನನು ನೋಡಬೇಕೆನುತ ಉದ್ಯುಕ್ತವಾಗೆ ಬ್ರಹ್ಮಹತ್ಯ ಪರಿಹಾರವೊ 1 ಬಂದು ಹರುಷದಲಿ ಕಣ್ಣಲಿ ಕಂಡು ಶಿರವಾಗಿ ವಂದನೆಯ ಮಾಡಿ ಸಾಷ್ಟಾಂಗೆರಗಲೂ ದುರಿತ ರಾಸಿಗಳೆಲ್ಲ ಒಂದು ಉಳಿಯದಂತೆ ಬೆಂದು ಹೋಹವು 2 ಅತಿವೇಗದಿಂದ ಬಂದು ಸ್ನಾನವನು ಮಾಡಲು ಮತಿವಂತರನ ಮಾಡಿ ದುರ್ಮಾರ್ಗ ಬಿಡಿಸಿ ಸಿರಿ ವಿಜಯವಿಠ್ಠಲನ್ನ ಸ್ತುತಿಸಿ ಗತಿ ಪಡೆವಂತೆ ಧನ್ಯರನು ಮಾಡುವ ತಾಯಿ3
--------------
ವಿಜಯದಾಸ
ಮಾಧವನ ನೋಡಿ ಸಂಪಾದಿಸಿದೆ ಭಕುತಿಯನು | ಆದರಪೂರ್ವಕದಿಂದಲಿ ಮಾಧುರ್ಯವಾದ ಮನ | ಮತವಿಡಿದು ಪ ಕರಿ ಮೊರೆ ಇಡಲು ಕೇಳುತ ನಕ್ರನ | ಕಡಿದು ಕರುಣದಿಂದಲಿ ತಡಿಯದಲೆ ಜಡುಮತಿಯ | ಕಡು ಮೆಚ್ಚಿ ಬಂದವನ 1 ಮರಣಕಾಲದಿ ಭಯಂಕರವಾದ ಯಮನ ದೂ | ತರನ ನೋಡಿ ಕರಿಯಲು | ಶರಧಿ ಮಧ್ಯದಲ್ಲಿ | ಮೆರೆವ ಮಧುಸೂದನನ 2 ಜ್ಞಾನ ಪಾಪಿಯ ಸ್ನಾನ ಆನಂದದಲಿ ಮಾಡಿ | ಹೀನ ದೋಷಗಳ ಕಳೆದು | ಜ್ಞಾನವಧಿಕವಾದ ಗುರುಗಳ ಕೃಪೆಯಿಂದ | ಶ್ರೀ ವಿಜಯವಿಠ್ಠಲ ಸೇತುವಾಸನಾ 3
--------------
ವಿಜಯದಾಸ
ಮಾಧವಾ ರಕ್ಷಿಸೆನ್ನಾ ಮೋಹನಾ|ನಿನ್ನಾ| ನಂದನಂದನಾ ಪ ತನ್ನ ತಾನುದ್ಧರಿಸಿ ಕೊಳ್ಳಲರಿಯದೆ | ಸಲೆ | ಮುನ್ನಿನಾ ದುರ್ಗುಣವನು ಜರಿಯದೆ ರಂಗಾ | ನಿನ್ನ ನಿಜ ಭಕ್ತಿಯೊಳು ಬೆರಿಯದೇ ವ್ಯರ್ಥ | ಮಾನ್ನ ನಾದೆನು ನಾಮಾಮೃತವ ಸುರಿಯದೇ | ಭವ ತೊರಿಯದೇ 1 ಮಾಯಾ ಮೋಹ ಪಾಶಕ ಅನುಗೊಡುತಾ | ವಿ | ಷಯ ದಾಶೆಗೆ ಬಿದ್ದು ಬಾಯಿ ಬಿಡುತಾ | ಎನ್ನ | ಕಾಯದ ಸುಖಸಾಧನ ನೋಡು | ವ್ಯರ್ಥ | ದು:ಖ ಪಡುತಾ 2 ಸುಖವಾದರೆ ಮನದೊಳುಬ್ಬುಗೊಂಬೆನಾ | ಬಲು | ದು:ಖವಾದರೆ ಹರಿ ಮಾಡಿದ ಎಂಬೆನಾ | ನೆರೆ | ಇಂದು | ಬಲಗೊಂಬೆನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾನನಿಧಿ ಶ್ರೀಕೃಷ್ಣ ಮಧುರೆಗೈದುವನಂತೆಏನು ಪಥವಮ್ಮ ನಮಗೆ ಪ ಮಾನವೇನಿನ್ನಿದಕೆ ಮಾನಿನಿಯರೆಲ್ಲರುಆಣೆಯನು ಕಟ್ಟಿವನಿಗಡ್ಡ ನಿಲ್ಲುವ ಬನ್ನಿ ಅ.ಪ. ಕಳ್ಳತನವೇ ನಮ್ಮ ವಲ್ಲಭರು ಈ ಸುಳುವುಎಲ್ಲವನು ಬಲ್ಲರಮ್ಮಒಲ್ಲದಲೆ ನಮ್ಮ ಬಿಟ್ಟರೆ ಒಳಿತು ವನಜಾಕ್ಷಎಲ್ಲಿಗೈದಿದರೆ ನಾವಲ್ಲಿಗೈದುವ ಬನ್ನಿ1 ಇಂದುದಯದಿ ಮೊದಲು ಇಂದೀವರಾಕ್ಷಿಯರುಗೋವಿಂದನ ಬಳಿಗೈದುವಒಂದು ಕಡೆಯಲಿ ಕುಳಿತು [ವನಜಾಕ್ಷಿಯೋರ್ವ ಕೈಯಂದಲಲ್ಲಿಗೆ ಕಳುಹಿ] ಕೇಳ್ವೆವೇನು ಪೇಳುವನೋ 2 ಹರಿಣಾಂಕವದನೆಯರು ನೆರೆದು ಬರುತಿರೆ ಕಂಡುಪರಮ ಹರುಷದಲಿ ಬಂದುಸರಿ ರಾತ್ರಿಯೊಳು ಹೀಗೆ ಬರುವುದೇನೆಂದೆನಲುಎರಗಿ ಬಿನ್ನೈಸಿದರು ಅಂಬುಜದಳಾಕ್ಷನಿಗೆ3 ಶ್ಲೋಕ ಹಲವು ಕಾಲವು ನಿನ್ನ ಸ್ನೇಹ ಸುಖವ ಹಾರೈಸಿಕೊಂಡಿರುತಿಹಲಲನಾವ್ಯೂಹವ ಬಿಟ್ಟು ಅಕ್ರೂರನೊಡನೆ ನೀ ಮಧುರೆಗೆ ಪೋದರೆಕಳೆಯಲಾಪವೇ ಕಾಂತ ಕೇಳು ದಿನವ ಈ ಕಂತುವಿನ ಬಾಧೆಗೆಘಳಿಗೊಂದು ಯುಗವಾಗಿ ತೋರುತಿÀಹುದೋ ಜಲಜಾಕ್ಷ ನೀನಿಲ್ಲದೆ ಪದ ಮಾಧವ ಕೃಪಾಕರನೆ4 ಶ್ಲೋಕ ಬಾಲಭಾವದಲಿಂದಲಂಗಸುಖವ ಬಹುಬಗೆಯಲಿಂದುಳುಹಿದೆಲೋಲಲೋಚನೆ ನಿಮ್ಮ ಬಿಟ್ಟು ಪುರದ ನಾರೇರಿಗಾನೊಲಿದರೆನೀಲಕಂಠನು ಮೆಚ್ಚ ನೋಡು ನಿಜವ ನಿಮಗ್ಯಾತಕೀ ಸಂಶಯಕಾಲಕ್ಷೇಪವನಲ್ಲಿ ಮಾಡೆ ಕಿಂಚಿತ್ಕಾಲದೊಳಾನೈದುವೆ ಪದ ಪಾಲಿಸಿರೆನಗಪ್ಪಣೆಯ ಪಾಟಲ ಸುಗಂಧಿಯರೆಕಾಲಹರಣವ ಮಾಡದೆನಾಳೆ ಉದಯಕೆ ಪೋಗಿ ನಾಲ್ಕೆಂಟು ದಿನದೊಳುವ್ಯಾಳೆಗಿಲ್ಲಿಗೆ ಬರುವೆ ಕಾಳಾಹಿವೇಣಿಯರೆ 5 ಶ್ಲೋಕ ಮಾರನಯ್ಯನೆ ಕೇಳು ಅಲ್ಲಿರುತಿಹ ನಾರೇರು ಬಲು ನಿಪುಣರೋನೀರಜಾಂಬಕ ನೋಡು ನಿನ್ನ ಮನವ ನಿಮಿಷಾರ್ಧದೊಳುಸೆಳೆವರೋಮಾರಕೇಳಿಯ ಶಾಸ್ತ್ರಮರ್ಮವರಿದ ಆ ನಾರೇರು ನೆರೆಯಲುಗಾರು ಪಳ್ಳಿಯಲಿಪ್ಪ ಗೋಪಿಯರ ವಿಚಾರಂಗಳ ಸ್ಮರಿಪೆಯಾ ಪದ ಬಿಲ್ಲ ಹಬ್ಬವೆ ಸುಳ್ಳು ಬಿಸುರುಹಾಕ್ಷಿಯರಿಕ್ಷುಬಿಲ್ಲಿನುತ್ಸವಕೆ ನಿನ್ನಖುಲ್ಲ ಅಕ್ರೂರನನು ಕಳುಹಿ ಕರೆಸಿದರಲ್ಲಿವಲ್ಲಭೆಯರನ್ನು ನೆರೆವೆ ನಮ್ಮೆಲ್ಲರನು ಮರೆವೆ 6 ಶ್ಲೋಕ ನಾರೀಹಾರ ಕಿರೀಟ ಕುಂಡಲಯುಗ ಕೇಯೂರವಲಯಾದಿಗಳುಚಾರು ವಸ್ತ್ರ ಸುಗಂಧ ಪುಷ್ಪನಿಚಯ ಹಾರಂಗಳಂ ಧರಿಸದೆಮಾರ ಕೇಳಿಯ ಮಾತಿಲಿಂದಲವರ ಮನಸೆಮ್ಮೊಳೊಂದಾಗದೆನಾರೇರೊಲುಮೆಯುಂಟೆ ಲೋಕದೊಳಗೆ ನನ್ನ್ಯಾತಕೆ ದೂರ್ವಿರೇ ಪದ ಮಲ್ಲಯುದ್ಧವ ನೋಡಬೇಕೆನುತ ನಮ್ಮಾವಅಲ್ಲಿಗೆ ಕರೆಸಲದಕೆಇಲ್ಲದಪವಾದ ಈ ಸುಳ್ಳು ಸುದ್ದಿಗಳ ನೀ -ವೆಲ್ಲ ಸೃಜಿಸಿದಿರಿ ಸರಿಯಲ್ಲ ನಿಮಗಿಳೆಯೊಳಗೆ 7 ಶ್ಲೋಕ ವಾರಿಜಾಂಬಕ ವಾರಿಜಾರಿವದನ ವಾರಾಶಿಜಾವಲ್ಲಭವಾರಿವಾಹನಿಭಾಂಗ ವಾಸವನುತ ವಾಕೆಮ್ಮದೊಂದಾಲಿಸೋವಾರಿಜೋದ್ಭವನಯ್ಯ ನಿನ್ನ ವಿರಹ ವಾರಾಶಿಯೊಳು ಮುಳುಗಿಹನಾರೀನಿಚಯವ ಪಾರುಗಾಣಿಸು ಕೃಪಾನಾವೆಯಲಿಂದೆಮ್ಮನು ಪದ ಮಾರನೆಂಬುವನು ಬಲು ಕ್ರೂರ ನಮ್ಮಗಲಿ ನೀ ಊರಿಗ್ಹೋದುದನು ಕೇಳಿವಾರಿಜಾಸ್ತ್ರವನು ಎದೆಗೇರಿಸೆಮ್ಮನು ಬಿಡದೆಹೋರುವನು ಅಹÉೂೀ ರಾತ್ರಿಯಲಿ ತಪಿಸುತ 8 ಶ್ಲೋಕ ನೀಲಕುಂತಳೆ ಕೇಳು ನಿಮ್ಮ ಮನೆಯೊಳಾ ನೆಲುವಿನ ಮ್ಯಾಲಿನಪಾಲು ಬೆಣ್ಣೆಯ ಕದ್ದು ಮೆದ್ದು ಬಹಳ ಕಾಲಂಗಳಂ ಕಳೆದೆನೆಬಾಲೆ ಮನ್ಮಥಬಾಣದೆಚ್ಚು ತಪಿಸೆ ಬಹು ಬಗೆಯಲಿಂದುಳುಹಿದಲೋಲಲೋಚನೆ ನಿಮ್ಮೊಳಾನು ಬಹಳ ಜಾರತ್ವಮಂ ಮಾಳ್ಪೆನೇ ಪದ ಬಟ್ಟಗಂಗಳೆ ನಿಮ್ಮ ಬಿಟ್ಟು ಘಳಿಗಿರಲಾರೆದುಷ್ಟ ಕಂಸನು ಕರೆಸಲುಅಟ್ಟಿದರೆ ಪೋಗದಿರೆ ಸಿಟ್ಟಿನಿಂದಲಿ ವ್ರಜಕೆಅಟ್ಟುಳಿಯ ಮಾಡುವನು ಅಂಬುಜಸುಗಂಧಿಯರೆ 9 ಶ್ಲೋಕ ಪತಿ ಸುತ ಪಿತೃ ಮುಖ್ಯ ಭ್ರಾತೃ ಬಾಂಧವರು ಎಂಬಅತಿಶಯ ನಮಗಿಲ್ಲ ಆಲಿಸೋ ಮಾತನೆಲ್ಲರತಿಪತಿಪಿತ ನೀನೇ ರಾತ್ರಿಯೊಳು ಕೊಳಲನೂದೆಕ್ಷಿತಿಪತಿ ನಿನ್ನೆಡೆಗೆ ಕ್ಷಿಪ್ರದಿಂ ಬಂದೆವಲ್ಲೊ ಪದ ಬಾಲತನದಲಿ ಯಮುನಾ ತೀರದಲಿ ನೀ ವತ್ಸ-ಪಾಲನೆಯ ಮಾಡುತಿರಲು ಆಕಾಲ ಮೊದಲಾಗಿ ಈ ವ್ಯಾಳೆ ಪರಿಯಂತರವುಕಾಲುಘಳಿಗಗಲದಿಹ ಕಾಂತೆಯರ ತ್ಯಜಿಸುವರೆ10 ಶ್ಲೋಕ ಪರಿಪರಿಯಲಿ ನಿಮ್ಮ ಪಾಲಿಸಿ ನೋಡೆ ಮುನ್ನಕರುಣಕೆ ಕೊರತಿಲ್ಲ ಕಾಂತೆ ಕೇಳೆನ್ನ ಸೊಲ್ಲತ್ವರಿತದಿ ಬಾರದಲೆ ತಡೆದು ನಾ ನಿಂತರಲ್ಲೆಸರಸಿಜಭವ ಮಾರರಾಣೆ ಕಾಣೆ ಪ್ರವೀಣೆ ಪದ ಕ್ಲುಪ್ತ ಕಾಲಕೆ ಬಂದುನೆರೆಯದಿದ್ದರೆ ನಾನು ಪರಮ ಪುರುಷೋತ್ತಮನೆ11 ಶ್ಲೋಕ ಮಾರನೆಂಬುವನಂದೆ ಮಡಿದನು ಶಿವನ ಮೂರನೆ ಕಣ್ಣಿಲಿನಾರೇರಿಲ್ಲದೆ ನಾಭಿಯಿಂದ ಪಡೆದ ಆ ಬ್ರಹ್ಮನೆಂಬಾತನ ನಾರಿ ಈರ್ವ ಕುಮಾರರಾಣೆ ಹರಿಯು ತಾನಿಟ್ಟನೇನೆಂಬೆವೆಮಾರಿ ಹೊರಗಿನ ಹೊರಗೆ ಹೊಯಿತೆಂಬೊ ತೀರಾಯಿತೆ ಭಾವುಕಿ ಪದ ಹಲವು ಮಾತುಗಳ್ಯಾಕೆ ಜಲಜಾಕ್ಷ ನಿನ್ನ ಪದನಳಿನಗಳ ನೆರೆ ನಂಬಿಹಒಲುಮೆಯಲ್ಲಿರುತಿಪ್ಪ ಲಲನೆಯರನೆಲ್ಲರನುಸಲಹೊ ಸಲಹದೆ ಮಾಣು ರಂಗವಿಠಲರೇಯ12
--------------
ಶ್ರೀಪಾದರಾಜರು
ಮಾನವ ಅಜಹರವಿನುತ ನಿಜಪಾದ ಅನುದಿನವು ಭಜಸಿಬದುಕೆಲೊ ಪ ತ್ಯಜಿಸಿ ಅವಗುಣ ಸುಜನರೊಡಗೂಡಿ ನಿಜಾನಂದದಿ ಸುಜನ ಭಜಗಶಯನನ ಅ.ಪ ಹಲವು ಭ್ರಾಂತಿಗಳ್ಯಾಕೆಲೊ ಸುಳ್ಳೆ ಸುಳ್ಳೆ ಸಂಸಾರ ಕೊಳಪಟ್ಟು ಕೆಡದಿರೆಲೊ ಮಲಿನಮನಸಿನ ಸರ್ವ ಹೊಲೆಯ ಯೋಚನೆ ಬಿಟ್ಟು ತಿಳಕೊಂಡು ನಿಜಸುಖ ಪದವಿಗೆ ನದರಿಟ್ಟು ಉಳಕೋ ಸಿಕ್ಕ್ಹೊತ್ತುಗಳೆಯದಲೆ ಶುನಕೆಲುವು ಕಡಿದಂತೆ ಅಳಿವ ಸುಖದಾಸೆಗೆಳಸಿ ಕೆಡಬೇಡ ಜಲಜನಾಭನ ಒಲಿಸಿ ನಲಿಯೊ 1 ಬರುವಾಗ್ಗೆ ಬೆನ್ನಿನ್ಹಿಂದೆ ಹೆಡತಲೆ ಮೃತ್ಯುವಿನ ಕರಕೊಂಡು ಧರೆಗೆ ಬಂದಿ ಅರಲವದ ಸುಖಕಾಗಿ ಮರೆದು ಎಲ್ಲವ ನೀನು ಮರುಳನಾದದ್ದು ಕಂಡು ನಗುತಿಪ್ಪ ಮೃತ್ಯವ ಹೊರಳಿನೋಡದೆ ದುರುಳತನದ ಸ್ಥಿರದ ಪ್ರಪಂಚ ಖರೆಯೆಂದೆನ್ವುದು ಸರಿಯಲ್ಲೆಲೊ ಇದು ನಿರುತದ್ಹರಿಪಾದ ಸ್ಮರಣಾನಂದದಿ ಮರೆಯೊ ಬಿಡದೆ 2 ಫಣೆಯ ಬಾಯೊಳಗಿರುವಂಥ ಕಪ್ಪೆಯು ಮುಂದಾಡ್ವ ನೊಣಕ್ಹವಣಿಸುತಿರುವಂತೆ ಒಣಭ್ರಾಂತಿ ಪಡದಿರು ಮನಸಿಗೆ ಬಂದಂತೆ ಕ್ಷಣತೋರಿ ಅಡಗುವ ಕನಸು ಜಗಸುಖ ಜನನ ಮ ರಣೆಂಬ ದಣಿವು ಕಳೆವಂಥ ಜನಕಜಾತೆಯ ಧಣಿಯ ಶ್ರೀರಾಮನೊನರುಹಂಘ್ರಿಯ ಘನವ ಪೊಗಳುತ ಕುಣಿ ಕುಣಿದು ಧನ್ಯವಾಗೆಲೊ 3
--------------
ರಾಮದಾಸರು
ಮಾನವ ಗುರುವಿಷ್ಣು ತೀರ್ಥರ ಪ ಕರುಣದಿ ಜನಿಸಿ ತರಿದ ಭೀಷ್ಠೆಯ ಗರಿವರಂಘ್ರಿಯ ಅ.ಪ ತರುಣಿ ಗರ್ಭದಿ ಜನಿಸಿ ವಟು ವ್ರತವ ಧರಿಸಿ ವೇದವೇದಾಂತ ಶಾಸ್ತ್ರವ ಹರಣ ಮಂತ್ರವ ಜಪಿಸಿದವರನು 1 ಗುರುತುರಗವನುಸರಿಸಿ ಬರುತಿರಲು ಬಿಸಿಲೊಳು ಗುರುಪ್ರೀತಿಯನು ಬಯಸಿ ಗುರುವಿತ್ತ ಪಾದುಕವೆರಡು ಶಿರದಲಿ ಧರಿಸಿ ಮಹಿಮೆಯನು ತಿಳಿಸಿ ಧರಿಸಿ ದ್ವಿತಿಯಾ ಶ್ರಮದಿ ನೋಡಲು ಪರಮ ಸತ್ಕುಲ ಜಾದಿ ಗುಣಯುತ ತನದೋಳ್ಮೆರೆವರಂಘ್ರಿಯ2 ತಿರೆ ಮೃಗಲಾಂಚನ ಮುಖಸಹಿತದಿ ಹರಿದಾಸ ಪಾಡಿದ ಮಾಡಿರಿ ಧರ್ಮವೆಂಬುವ ಸುಖವನು ತ್ಯಜಿಸಿಪೊರಟರ 3 ಚರಿಸುತ ಗಮನ ಸ್ವಪ್ನದಿ ಸೂಚಿತ ಪ್ರವಚನ ವಿಜಯ ಮುನಿ ಮುನಿಯವಲ್ಲಿ ಯೊಳಿರುವ ಗುರುಗಳ 4 ಕುಮಾರಕರೆಂದೆನಿಸಿ ಸುಕ್ಷೇತ್ರ ಧ್ಯಾನಿಸಿ ಸೇರಿದವರ ಘ ಚಾರು 'ಕಾರ್ಪರ ನಾರಶಿಂಹ' ವಲಿಮೆ ಪಡೆದ ಚಾರು ಚರಣವ5
--------------
ಕಾರ್ಪರ ನರಹರಿದಾಸರು
ಮಾನವ ನಿನ್ನಾ | ಪಡೆದು ಕೊ ಸದ್ಗತಿಯನು ಪ ತಡಿಯದೇ ಸದ್ಗುರು ಅಡಿಗಳ ಪೂಜಿಸಿ | ಒಡನೆ ಭವಾಂಭವಾಂಬುಧಿ ಥಡಿಯವ ಸಾರೆಲೋ ಅ.ಪ ಪತ್ರೇಂದ್ರವಾಹನನು | ಮಣಿಗಣ ಸೂತ್ರದಂದದಿ ಜೀವನು | ಚಿತ್ರ ವಿಚಿತ್ರದಲಿ ಅಡಿಸುವ | ಗು | ಣತ್ರಯ ವಾದಲಿ | ಕಳತ್ರ ಸುಮಿತ್ರ ಸಮಂಧ | ಧತ್ರಿಲಿ ಮಾಯ ಚರಿತ್ರವಿದೆಂದು 1 ತಾನಾರು ತನುವಾರದು ತನುವಿನ | ತಾನೀ ಸಂಮಂಧವಾರದು | ಜ್ಞಾನಿಗಳನು ಮತದಿ ತಿಳಿದು ನೋಡು | ಸ್ವಾನುಭವದ ಬೋಧದೀ | ಹಾನಿ ಯಶ _ ಸುಖ ಮಾನಾಪಮಾನವು | ಮಾನವರಿಗೆ ಪ್ರಾಚೀನ ಫಲೆಂದು 2 ಹಿಂದಾದ ನೆನಹಿಸದೇ ವಾಸನೆಗಳ | ಮುಂದೇನು ಕಾಮಿಸದೇ | ಕ | ನಸಿನಾನಂದ ವಿದೆಂದು ಭಾವಿಸೀ | ತಂದೆ ಮಹಿಪತಿ ಕಂದಗ ಸಾರಿದ | ದ್ವಂದ್ವಗೆಲಿದು ಗೋವಿಂದ ನೆನೆಯುತ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾನವ ಪ ಕುಸುಮ ಮಾಲೆಯಿತ್ತು ಪುರದೊಳು 1 ಬಿಡಲದಾರ ಕೊರಳಿನಲ್ಲಿತೊಡರಿಸಲ್ಕೆ ಅವರ ಪಟ್ಟದೊಡೆಯರನ್ನು ಮಾಳ್ಪೆವೆಂದು ಬಿಟ್ಟರಲ್ಲಿಯೆಒಡನೆ ತನ್ನ ಕೊರಳಿನಲ್ಲಿತೊಡರಿಸುವುದ ಕಂಡು ತಿರುಕಪೊಡವಿಯಾಣ್ಮನಾದೆನೆಂದು ಹಿಗ್ಗುತಿದ್ದನು 2 ಪಟ್ಟಗಟ್ಟಲಾಗ ನೃಪರುಕೊಟ್ಟರವಗೆ ಕಪ್ಪಗಳನುನೆಟ್ಟನವನು ರಾಜ್ಯವಾಳ್ದ ಕನಸಿನಲ್ಲಿಯೆಪಟ್ಟದರಸಿಯೊಳಗೆ ಸುಖವಪಟ್ಟು ಮನದಿ ಹರುಷಗೊಳಲುಪುಟ್ಟಿದವು ಹೆಣ್ಣು ಗಂಡು ಮಕ್ಕಳಾಗಲೆ 3 ಓಲಗದೊಳಗಿರುತ ತೊಡೆಯಮೇಲೆ ಮಕ್ಕಳಾಡುತಿರಲುಲೀಲೆಯಿಂದ ಚಾತುರಂಗ ಬಲವ ನೋಡುತಲೋಲನಾಗಿ ನೆನೆದು ಮನದಿಪೇಳೆ ಮಂತ್ರಿಗಳಿಗೆ ಆಗಬಾಲೆಯರನು ನೋಡಿ ಮದುವೆ ಮಾಳ್ಪೆನೆಂದನು 4 ನೋಡಿ ವರಗಳೆನುತ ಕಳುಹೆನೋಡಿ ಬಂದೆವೆನಲು ಜೀಯಮಾಡೆ ಮದುವೆ ಮಂಟಪವನು ರಚಿಸಿರೆಂದನುಗಾಢ ಸಂಭ್ರಮದೊಳು ಕೂಡಿಮಾಡಿದನವ ಮದುವೆಗಳನುರೂಢಿ ಪಾಲರೆಲ್ಲ ಕೇಳಿ ಮೆಚ್ಚುವಂದದಿ 5 ನೃಪರ ದಂಡುಮನೆಯ ಮುತ್ತಿದಂತೆ ಕಂಡುಕನಸಿನಲ್ಲೆ ದಿಗಿಲುಗೊಂಡು ಕಣ್ಣು ತೆರೆದನು 6 ನಿತ್ಯ ಸುಖವನೀವನು 7 * ಈ ಕೀರ್ತನೆ ಮುಪ್ಪಿನ ಷಡಕ್ಷರಿಯದೆಂದೂ ಪ್ರತೀತಿಯಿದೆ.
--------------
ಕನಕದಾಸ
ಮಾನವ ಪ ಜ್ಞಾನದಿಂದ ನಿನ್ನ ನೀನೆ ತಿಳಿದು ನೋಡೆಲೊ ಅ ಹೆಣ್ಣು ಹೊನ್ನು ಮಣ್ಣು ಮೂರು ನಿನ್ನದೇನೆಲೊಅನ್ನದಿಂದ ಬಂದ ಕಾಮ ನಿನ್ನದೇನೆಲೊಕರ್ಣದಿಂದ ಬರುವ ಘೋಷ ನಿನ್ನದೇನೆಲೊನಿನ್ನ ಬಿಟ್ಟು ಹೋಹ ದೇಹ ನಿನ್ನದೇನೆಲೊ1 ಹಲವು ಜನ್ಮದಿಂದ ಬಂದಿರುವನು ನೀನೆಲೊಮಲದ ಗರ್ಭದಲಿ ನಿಂದಿರುವನು ನೀನೆಲೊಜಲದ ದಾರಿಯಲಿ ಬಂದಿರುವನು ನೀನೆಲೊಕುಲವು ಜಾತಿ ಗೋತ್ರವುಳ್ಳವನು ನೀನೆಲೊ 2 ಕಾಲಕರ್ಮ ಶೀಲ ನೇಮ ನಿನ್ನದೇನೆಲೊಬಾಲವಿದ್ಯೆ ಬಯಲ ಮಾಯೆ ನಿನ್ನದೇನೆಲೊಕೀಲು ಜಡಿದ ತೊಗಲಗೊಂಬೆ ನಿನ್ನದೇನೆಲೊಲೋಲ ಆದಿಕೇಶವನ ಭಕ್ತನಾಗೆಲೊ 3
--------------
ಕನಕದಾಸ
ಮಾನವ ಮೂಢಾ | ಕೇಳದೆ ನೀ ಕೆಡಬ್ಯಾಡಾ | ಶೀಲವರಿತುಕೋ ದೃಢಾ | ಹೇಳುವೆ ನಿಜ ಹಿತ ನೋಡಾ ಪ ಹಾದ್ಯರಿಯದೆ ಪ್ರಚಂಡಾ ಓದಿಕೆ ಯಾಕ ಉದಂಡಾ | ಸಾಧಿಸೋ ಸಾಧನ ಕಾಂಡದ ಬೋಧಿಪ ಮಾರ್ತಾಂಡ | ವಾದ ವಿತ್ತಂಡ ಬಿಡು ಪಾಷಂಡಾ 1 ಹರಿಗುಣ ಕೊಂಡಾಡು ನೀ ಅಖಂಡಾ ಕೇಳು ಕೇಳು ಪ್ರಾಣಿ | ಕರಣ ತ್ರಯಂಗಳ ಬೆರಿಸಿ ಮೊರೆಹೋಗಾಭಾವನೆ ಬಲಿಸಿ | ಗುರುವಿಗೆ ಭಾರೊಪ್ಪಿಸಿ ಇರು ಸಂಶಯವಾ ತ್ಯಜಿಸಿ | ನೆರೆ ಜೌಭಾಗಿಸಿ ತನ ಬಿಡು ಹೇಸಿ ಕುಜನ ದುರಾಶೀ ನದಿಯೊಳು ಸೋಸಿ 2 ಗರುವ ಮುರಿದು ನಿದ್ರ್ವಂದಾ ಚರಿಸಿ ಹಿರಿಯರ ವೃಂದಾ | ಪರಿಯಲಿ ನಡಿನೀ ನೆಂದಾ ಗುರುವರ ಮಹಿಪತಿ ಕಂದಾ | ಪಡದರ ಬಂದಾ | ಜನ್ಮಕ ಛಂದಾ ನೋಡಿದರಿಂದಾ ಕೇಳು ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು