ಒಟ್ಟು 7419 ಕಡೆಗಳಲ್ಲಿ , 132 ದಾಸರು , 3991 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಟೆಯ ನಾಡಿದನೇ | ಶ್ರೀ ಗುರು | ಬೇಟೆಯ ನಾಡಿದನೇ | ಭವದ ಮ | ಮಹಾಟವಿಯೊಳಗಿದ್ದ ಮನವೆಂಬ ಮೃಗದಾ ಪ ಬೋಧ ಕೊಳಲವ | ಸ್ವಾನಂದದಲಿ ಸುಸ್ವರದಲಿ | ತಾನೂದಿ ನಾದವ ಕಿವಿಯೊಳೂಡಿಸಿ ಸು | ಮ್ಮಾನದೀ ನಿಲುವಂತೆ ಮರುಳು ಮಾಡಿದ ಗುರು 1 ಪರಿ ಸಾಧನದಿಂದಲಿ ನವವಿಧ | ಪರಿಯಾದ ಭಕ್ತಿಯ ಪಾಶವನು | ಕೊರಳಿಗೆ ಸಂದಿಸಿ ದೃಢದಿಂದ ಪುನರಪಿ | ಹರಿದಾಡದಂದದಿ ನೆಲೆಗೊಳಿಸಿ ಗುರು 2 ಭಯದಿಂದ ಬೆದರಿ ಭಜ್ಜರಿಕೆಯ ಹಿಡಿದಿರೆ | ಶ್ರಯ ಸುಖದಾಯಕ ನಿಜ ಕರದೀ | ದಯದಿಂದ ಅಭಯವನಿತ್ತು ಬೋಳೈಸಿ ನಿ| ರ್ಭಯ ಮಾಡಿ ಭ್ರಾಂತಿಯ ಚಿಂತಿ ಹರಿಸಿ ಗುರು3 ಸವಿ ಸವಿ ನಾಮಾಮೃತ ಆಹಾರವನಿಕ್ಕಿ | ಜವದಿಂದ ಹೃದಯ ಭೂ ವನದೊಳಗೆ | ತವಕದಿ ವಿಶ್ರಾಂತಿ ಸ್ಥಳದಲಿ ನಿಲ್ಲಿಸಿ | ಅವನಿಲಿ ಸತ್ವ ಚರನ ಬಳಿಯಲ್ಲಿಟ್ಟು ಗುರು4 ಜನವನ ವಿಜನದೊಳಗ ತಾನೇ ತಾನಾಗಿ | ಅನುಮಾನ ಕಳೆಸಿದಾ ಅಂಜುವನಾ | ಅನುದಿನ ಸುಖದೊಳಿಪ್ಪಂತೆ ಮಾಡಿ | ದನು ನಂದನ ನಿಜ ಸಹಕಾರಿ ಮಹಿಪತಿ ಘನಗುರು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೇಡ ಬಂದೆನೊ ನಾನು | ನಿನ್ನಯ ಕರುಣಕೀಡು ಇಲ್ಲವೊ ಇನ್ನೂ | ಪ ಪರಿ ಭವ ಕಳೆ ಶ್ರೀ ಹರೇ ಅ.ಪ. ರುದ್ರಾದಿಸುರ ಸೇವಿತ | ಪಾದಾಬ್ಜಗಳಕದ್ರುಜ ಶಿರ ಘಟ್ಟಿತಭದ್ರ ಮೂರುತಿ ಸ | ಮುದ್ರಜೆ ರಮಣನೆಅದ್ರಿಯುದ್ದರ | ಮುಗ್ಧರಾರ್ತಿಹಕ್ಷುದ್ರ ಸುರಪನ | ವ ಭದ್ರ ಗರ್ವಹರಶುದ್ಧ ನಿಜಾನಂದ ಪೂರ್ಣ | ಶ್ರದ್ಧೆ - ಜನರ ಘ ಚೂರ್ಣನಿರ್ದಯ ನೀನಲ್ಲಘನ | ಸುಪ್ರಬುದ್ಧ ಗುಣಪೂರ್ಣ ||ವೃದ್ದ್ಯಾದಿಗಳೊರ್ಜನೆ ಎನ್ | ಹೃದ್ಗುಹದಲಿ ನಿಂದುದ್ಧರಿಸೊ ದೇವಾ 1 ಕನಕಾಕ್ಷಹನ ಹಯಮುಖ | ಕಪಿಲಕೋಲಾನಕ ದುಂದುಭಿ ಬಾಲಕ ||ಮನುಸು ತೆಗೆ ತತ್ವ | ಖಣಿಬೋಧಕಪಿಲಾತ್ಮಘನಸು ಕಂಬದಿ ಖಣಿಲು ಖಣಿಲೆಗೆಅನಘ ನರಹರಿ | ತನುಭವಾಕ್ಷಣಕನಕ ಕಶಿಪುವಿನ್ಹನನ | ವನಜಾಸನನ ವಚನಭೃತ್ಯ ನುಡಿದುದನ | ಸತ್ಯವ ಗೈದಾಕ್ಷಣಅಣುಗನು ಹರಿ ಅಂಕದಿ ಕುಳ್ಳಿರೆ | ಋಣ ನಿಧಿ ಆದೆಯೊ ಶಾಂತ 2 ಮೂರ್ತಿ ಪರಿ | ಪೂರ್ಣ ಮೋಕ್ಷದನಿರವದ್ಯ ಹರಿ ಅರಿಧರ | ದುರಿತೌಘಗಳ ಪರಿಹರಸಿರಿಭೂಮಿ ಲಕುಮಿಧರ | ವರವೀವ ಶ್ರೀಧರಕರಿವರ ವರದ ಪರೋಕ್ಷವ | ಕರುಣಿಸು ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಬೇಡ ಬೇಡ ಹೋಗೆಂದು ಕಾಡದಿರು ಕೃಪೆಯೊಂದ ಬೇಡದಿರಲಾರೆ ಮಾಂಗಿರಿಯರಂಗ ಪ ಬೇಡುವನ ಕೈ ಕೀಳು ನೀಡುವನ ಕೈ ಮೇಲು ಬೇಡಿದಲ್ಲದೆ ಕೃಪೆಯ ಮಾಡನೈರಂಗಾ ಅ.ಪ ಗಾನಕೆ ನಲಿಯುವೆಯೋ ಧ್ಯಾನಕೆ ಒಲಿಯುವೆಯೋ ಜ್ಞಾನಕೆ ಸಿಗುವೆಯೋ ನಾನರಿಯೆನು ಗಾನದರಿವೆನಗಿಲ್ಲ ಧ್ಯಾನಮಾಡುವನಲ್ಲ ಜ್ಞಾನಾನುಭವವಿಲ್ಲ ಆಧಾರವಿಲ್ಲ 1 ನೀನೆನ್ನ ಕಡೆಗಣಿಸಿ ಹೀನ ಹೋಗೆಂದೆನಲು ನಾನಳುವೆನನವರತ ಶ್ವಾನದಂತೆ ಸೂನು ಬಾ ಬಾರೆಂದು ಸಾನುರಾಗದಿ ರಮಾದೇವಿ ಸಂತೈಪಳು 2 ಎನ್ನಮ್ಮ ಕೃಪೆಯಿಂದ ನಿನ್ನ ಕಾಲ್ವಿಡಿಯೆಂದು ಎನ್ನ ಕಳುಹುತ ನಿನಗೆ ಎನ್ನ ತೋರ್ದು ಎನ್ನನತಿಕೃಪೆಯಿಂದ ಮನ್ನಿಸೆನ್ನುವಳಾಗ ನಿನ್ನ ಕೃಪೆ ಯೆನಗುಂಟು ಮಾಂಗಿರೀಶಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡಧ್ಯಾನಿಸಿ ನೋಡು ಪ ಭವ ಮುಳುಗಿ ನೀನಾರು ಅಲ್ಲಿ ತಂದೆ ತಾಯಿಗಳು ಮತ್ತವರಾರು ಅಂದಿನವನಿತೆಯಾಗಿಗಳಾರು ನಿನ್ನ ನಂದನರೆನಿಸಿ ಬಂದವ ರಾರೋ 1 ಮುನ್ನ ಮಾಡಿದ ಹೊಲಮನೆಯೆಲ್ಲ ನಿನ್ನ ಬೆನ್ನು ಬಂದಗ್ರಜಾನುಜರೆಲ್ಲ ಚೊಕ್ಕ ಚಿನ್ನ ಚಿಗುರು ಬೆಳ್ಳಿ ನಗವೆಲ್ಲಿ ಪಶು ಹೊನ್ನು ಕನಕ ಮಿತ್ರ ಜನರೆಲ್ಲ 2 ಇಂದಿನ ಭವದೊಳು ನಿನಗೆಲ್ಲಿ ಈಗ ಬಂದು ಕೊಡಿದ ಸಂಸಾರವೆಲ್ಲಿ ಮುಂದೆ ಹೊಂದಿ ಹುಟ್ಟುವ ಠಾವುಗಳೆಲ್ಲ ಅಲ್ಲಿ ಬಂಧು ಬಳಗ ನೆರೆದಿಹುದೆಲ್ಲ 3 ಹಲಬರ ನೆರವಿಯ ದೇಹವಿದು ಹೊಳೆ ಚಳಿಕ ತನ್ನಯ ಈ ಋಣ ತೀರುವುದು ಎಲ್ಲ ಬಯಲಿಗೆ ಬಯಲಾಗಿ ಹೋಗುವುದು 4 ಸಾರವಿಲ್ಲದ ಸಂಸಾರವಿದು ನಿ ಪರ ಕೆಡುತಿಹುದು ಈ ಘೋರವನುಳಿದು ನಿರ್ಮಲನಹುದು ಲಕ್ಷ್ಮೀ ಪಾದ ಕೊಡುವುದು5
--------------
ಕವಿ ಪರಮದೇವದಾಸರು
ಬೇಡವೋರಂಗ ಹೆಂಗಳ ತಳ್ಳಿ ಹೋಗ ಬೇಡವೋನಾ ಬೇಡಿ ಕೊಂಬೆನುದಮ್ಯಯ್ಯ ಪ ಊರೊಳಗೆಲ್ಲ ನಿನ್ನಯ ದೂರೇ ರಂಗ ಬಾರೋ ನಿನ್ನನು ಕಾಣದಿರಲಾರೆ ಯಾರಿಗೆಂಬೆನು ಗೋಕುಲದೊಳಗಿರ್ದ ನಾರಿಯರೆಲ್ಲರು ಕಿವಿಗೆಡಸಿದರೆನ್ನ 1 ಚಿಕ್ಕವನಾಗಿ ನೀನಿರುತಿರೆ ಹೆಣ್ಣು ಮಕ್ಕಳ ಮೇಲÉ ಕಣ್ಣಿಡುವರೆ ಪೊಕ್ಕು ಪಾಲ್‍ಬೆಣ್ಣೆಯ ಕದ್ದರೆ ಗೋಪರ ಮಕ್ಕಳು ಕಂಡರೆ ಪ್ರಾಣವ ತೆಗೆವರು 2 ಎಲ್ಲ ಜೀವರಿಗೂ ನೀಹಿತನಾಗಿ ಪ್ರೀತಿಯಲ್ಲಿರು ಭಾರಿ ಪುರುಷನಾಗಿ ಹಲ್ಲ ಕಡಿದಿಹರಂತೆ ಗೋಪರು ಮಾನಕೊಳ್ಳಲು ಯತ್ನವ ಮಾಡಿ ಕೊಂಡಿಹರಂತೆ 3 ಕಂಡರೆ ಹಿಡಿದು ಕಟ್ಟುವರಾಗಿ ಪುಂಡ ನಿಲ್ಲಿಸ ಬೇಕೆನುತ್ತೆಲ್ಲಿ ಗೋಪರು ಕಂಡಿ ಕಣೆವೆ ಕಟ್ಟಿಕೊಂಡು ಸಾಧಿಪರಂತೆ 4 ಪಾಲು ಬೆಣ್ಣೆಯ ಕದ್ದು ಮೆಲುವರೆ ಕೃಷ್ಣ ಬಾಲೆಯರನು ಗೋಳು ಹೊಯ್ವರೆ ನಿ ನ್ನಾಲಯದೊಳಗೇನು ಕಡಿಮೆಯಾಗಿದೆ ಲಕ್ಷ್ಮೀಲೋಲನ ದಯದಿಂದ ಸಕಲ ಸಂಪತ್ತಿದೆ 5
--------------
ಕವಿ ಪರಮದೇವದಾಸರು
ಬೇಡಿ ಕಡದೀತು ಎನ್ನ ಬೇಡಿ ಕಡದೀತು ಪ ಮೂಢ ಜನರ ಸಂಗ ತ್ಯಜಿಸಿ ಗೂಢವಾದ ಸಾಧುವೆನಿಸಿ ಅ.ಪ. ಘೋರ ಸಂಸಾರ ಬೇಡಿ ಆರು ಅಹಿತರೆನ್ನ ಕಾಡಿ ಗಾರು ಮಾಡಿ ಜಡಿಯ ಕೂಡಿ ಪಾರ ಮಾಡಿದೆನ್ನ ನೋಡಿ1 ಮೋಹಪಾಶದೊಂದು ಕಟ್ಟು ದೇಹವೆಲ್ಲ ತೊಡರಿ ಬಿಟ್ಟು ಗೇಹ ತೊಲಗದಂದ ಬಿಟ್ಟ ನೇಹ ತವಿಸೆ ಕರುಣವಿಟ್ಟು 2 ಭವ ಮೋಹ ಸುಡಲಿ ಉರಿವ ಕ್ಲೇಶಗಳು ಸಿಡೀಲಿ ಕೊರೆವ ಸಂಸ್ಕøತಿ ಜಾಲಕ ತೇಲಿ ನರಸಿಂಹವಿಠಲಾ ಕೊಡಲಿ 3
--------------
ನರಸಿಂಹವಿಠಲರು
ಬೇಡಿಕೆಗೆ ಮಿತಿಯಿಲ್ಲ ಬೇಡಿಕೆಗೆ ಕೊನೆಯಿಲ್ಲ ಬೇಡಿ ಬದುಕುವುದೊಂದು ರೋಗವಯ್ಯ ಪ ರೂಢಿಗೊಡೆಯನ ದಿವ್ಯನಾಮಗಳ ಕೊಂಡಾಡಿ ಹಾಡುವವಗೆ ರೋಗಭಯವಿಲ್ಲವಯ್ಯಾ ಅ.ಪ ಬೇಡುವವ ಮನೆಮನೆಗೆ ಓಡೋಡಿ ನಿಲಬೇಕು ನಾಡಿಗರ ನೋಡಿ ಕೈ ನೀಡಬೇಕು ನೋಡಿದರೆ ಕಟ್ಟಾಳು ಬೇಡುವೆ ಹೋಗತ್ತ ದುಡಿ ಗೇಡಿ ಎಂದಾಗ ಗೋಳಾಡಲೇಕಯ್ಯ 1 ಕಂಡ ಕಂಡವರಿಗೆಲ್ಲ ಕೈಮುಗಿದು ಮಂಡೆಯ ಬಾಗಿ ಭಂಡನೆಂದೆನಿಸುವುದು ಮಾನಭಂಗ ಪುಂಡರೀಕಾಕ್ಷ ಗೋವಿಂದ ನಾಮವ ಹಾಡಿ ಕೊಂಡಾಡಲೊದಗುವನು ಮಾಂಗಿರಿಯರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡಿಕೊಂಬುವೆನಯ್ಯ ಬೇಗ ಬಾರಯ್ಯ ಮಾಡು ಎನ್ನೊಳೂ ದಯ ಪಂಢರಿರಾಯ ಪ ನಾಶನ ಜಗದೊಳಗೆ ಭಾಷಗಡಕನು ಆಗಿ ಸಾಸಿರೊರುಷಿರ್ದೇನು ಹೇ ಈ ಜನುಮ ಶೇಷನಯನನೆ ನಿನ್ನ ದಾಸನ ಅತಿಶಯ ದೋಷವನು ಗಣಿಸದೆ ಪೋಷಿಸೈ ಈಶ 1 ಅರಿದರಿದು ಪತಂಗ ಉರಿಯೊಳಗೆ ಬೀಳ್ವಂತೆ ಖರೆಯ ಈ ಸಂಸಾರ ಸ್ಥಿರವೆಂದು ನಂಬಿ ಪರಿಪರಿಯ ಪಾಪಂಗಳಿರಯದೆ ಮಾಡಿ ನಾ ನರಕಕ್ಕೆ ಗುರಿಯಾದೆ ಪೊರೆಯೊ ಶ್ರೀ ಹರಿಯೆ 2 ಸಿಂಧುಶಯನನೆ ಎನ್ನ ಮಂದಮತಿಯತನದ ಲಿಂದ ಮಾಡಿದ ಪಾಪ ಚಿಂದಿಸೈ ಬೇಗ ಹಿಂದಕಾದದ್ದಾಯ್ತು ಮುಂದೆ ಎನ್ನಯ ಬವಣಿ ಚಂದಾಗಿ ತಿದ್ದಯ್ಯ ತಂದೆ ಶ್ರೀರಾಮ 3
--------------
ರಾಮದಾಸರು
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬೇಡಿಕೊಂಬೆನೊ ಶ್ರೀಹರಿಯೆ ನಿಮ್ಮ ಅಡಿಯ ಮರೆಯೆನೊ ಪ ಬೇಡಿಕೊಂಬೆನಯ್ಯ ನಿಮ್ಮ ಅಡಿಯಪಿಡಿದು ಬಿಡದೆ ನಾನು ಗಡನೆ ಎನ್ನ ಕಡುದಾರಿದ್ರ್ಯ ಕಡಿದು ಬಯಲು ಮಾಡಿ ಹರಿಯೇ ಅ.ಪ ದೈತ್ಯಶಿಕ್ಷಕ ಚಿತ್ತಜತಾತ ಭಕ್ತರಕ್ಷಕ ಅ ನಾಥ ಪ್ರೀತ ಮುಕ್ತಿದಾಯಕ ಸತ್ಯಸಂಧನನ್ನು ಮಾಡಿ ಮತ್ರ್ಯಭೋಗದಾಸೆಬಿಡಿಸಿ ನಿತ್ಯನಿರ್ಮಲಾತ್ಮ ನಿಮ್ಮ ಭಕ್ತಿಯಿತ್ತು ಸಲಹೊ ಹರಿಯೆ 1 ಶ್ಯಾಮಸುಂದರ ಸ್ವಾಮಿ ಭಕ್ತಪ್ರೇಮ ಮಂದಿರ ರಮಾ ಸತ್ಯಭಾಮಾ ಮನೋಹರ ಪಾಮರತ್ವ ತಾಮಸ ದುಷ್ಕಾಮಿತಂಗಳ್ಹರಿಸಿ ನಿಮ್ಮ ನಾಮಜಪವು ತಪದೊಳಿರಿಸಿ ಪ್ರೇಮದಿಂದ ಸಲಹೊ ಹರಿಯೆ2 ಪದುಮನಾಭನೆ ಸದಮಲಾಂಗ ಒದಗುಬೇಗನೆ ಈ ವಿಧದಿ ಬೇಡ್ವೆ ಸುದಯವಂತನೆ ಸುದತಿ ಮಾಡಿದಂಥ ಪದದ ಕೃಪೆಯನಿತ್ತು ಎನ್ನ ಮುದದಿ ಸಲಹು ಸಿರಿಯರಾಮ 3
--------------
ರಾಮದಾಸರು
ಬೇಡಿದರೆ ನೀಡುವುದೇನು ಹಿರಿದೆ ಗೋವಿಂದ ಬೇಡದೆ ನೀಡೆ ನಿನ್ನಂತಸ್ತಿಗತಿಚೆಂದ ಪ ನೀಡುವನು ನೀನಿರಲು ಬೇಡಿಕೆಗೆ ಕೊನೆಯುಂಟೆ ಬೇಡಿ ಬೇಸತ್ತರೂ ಆಸೆಯಿಂಗುವುದುಂಟೆ ಬೇಡಿದಮಣಿ ನೂರುಜನುಮ ಸಾಕಹುದುಂಟೆ ಬೇಡದೇ ಭಜಿಪವಗೆ ಹುಟ್ಟು ಸಾವುಗಳುಂಟೆ 1 ಹಿಂದೆ ನೀನಿತ್ತುದನು ಇಂದುಣುತಲಿಹೆವಯ್ಯ ಮುಂದೆ ನಾನುಣಲೇನು ಬೇಡವಯ್ಯ ಸಂದಿರ್ಪುವೈ ಸಾಲಸೋಲಂಗಳೇನಯ್ಯ ಮುಂದೇನು ಬೇಡ ಮಾಂಗಿರಿವಾಸ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡಿದವರಿಗೆ ದೊರೆವುದೇನೆಲೊ ಸಜ್ಜನರ ಸಂಗ ಬೇಡಿದವರಿಗೆ ದೊರೆವುದೇನೆಲೊ ಪ ಬೇಡಿದವರಿಗೆ ದೊರೆವುದೇನೆಲೊ ಗಾಢಮಹಿಮನ ಭಕ್ತರಾವಾಸ ಸುಕೃತ ಫಲವು ಕೂಡಿಬಂದ ಕೋವಿದರಿಗಲ್ಲದೆ ಅ.ಪ ದೃಢಕರಡಿಯಿಟ್ಟ ಭುವನವೆ ಕ್ಷೇತ್ರ ದೃಢಕ ಜನರಡಿಯೇ ಸುಯಾತ್ರಾ ಸಿದ್ಧ್ದಾಂತ ಮಾತಿದು ದೃಢಕರಾಡಿದ ಮಾತೆ ನಿಜಮಂತ್ರ ಇದೆ ಮೂಲಶಾಸ್ತ್ರ ದೃಢಕರು ನಿಂತ ಸ್ಥಳವೆ ಬದರಿ ದೃಢಕರು ಕೂತಸ್ಥಾನ ಮಧುರೆ ದೃಢಕರೊಟನಾಟ ಲಭ್ಯವೆಂದರೆ ಪಡೆದ ಪುಣ್ಯ ಮಹಭಾಗ್ಯಗಲ್ಲದೆ 1 ಭಕ್ತ ಜನಮಿಂದದೆ ತೀರ್ಥವು ನಿಖಿಲರರಿವುದೆ ಭಕ್ತ ಜನರುಂಡಸ್ಥಳ ಸಿರಿಯಾವಾಸವು ದೊರೆಯದಾರಿಗೆ ಭಕ್ತ ದರ್ಶನ ಪರಮ ಮಂಗಲವೋ ಶುಭಕೆ ಶುಭಕರವು ಭಕ್ತಜನರಿಹ್ಯ ಸಭೆಯೆ ಹರಿಸಭೆ ಭಕ್ತರೊಪ್ಪಿಗೆ ಹರಿಯ ಒಪ್ಪಿಗೆ ಮೃತ್ಯುದೂರ ಮಾಳ್ಪ ಸರ್ವೋತ್ತಮನ ಭಕ್ತರ ಪ್ರೇಮದೊಲುಮೆ 2 ದಾಸರ್ವಾಸವೆ ಕಾಶಿಕೇಂದ್ರವು ಸತ್ಯ ಸತ್ಯವಿದು ದಾಸರಿರುವುದೆ ಪರಮ ವೈಕುಂಠವು ಮತ್ರ್ಯರರಿವುದೆ ದಾಸಗಿತ್ತದ್ದು ಹರಿಗೆ ಅರ್ಪಣವು ಪರಮ ಸುಖಕರವು ದಾಸರೊರ್ಣವು ತೀರದಾರಿಗೆ ಶ್ರೀಶ ಶ್ರೀರಾಮನಡಿಯಕಮಲ ದಾಸರಿಜನರಡಿ ಪಿಡಿದು ಸುಸಹ ವಾಸದಿರುವುದೆ ಮುಕ್ತಿಸಂಪದ3
--------------
ರಾಮದಾಸರು
ಬೇಡಿದೆನು ಕೊಡುಕಂಡ್ಯ ಬೇಡಿದೆನು ಕೊಡುಕಂಡ್ಯಬೇಡಿದೆನು ನೀ ನೀಡು ಕಂಡ್ಯಾ ಪ ನಿನ್ನ ಹಾಡನು ಹಾಡಿ ನಿನ್ನ ನಿಜದೊಳಗಾಡಿನಿನ್ನನೇ ಕಾಡಿ ನಿನ್ನನೇ ಬೇಡಿನಿನ್ನ ಓಲಗವ ಮಾಡಿ ನಿನ್ನ ನಿಟ್ಟಿಸಿ ನೋಡಿನಿನ್ನ ಲೀಲೆಯೊಳು ನಾನಿರುತಿಹುದದನಾ 1 ನೋಟದೊಳಗಿನ ನೋಟ ಕೂಟದೊಳಗಿನ ಕೂಟಆಟದೊಳಗಿನ ಆಟ ಇಂಥ ಆಟನೀಟದೊಳಗಿನ ನೀಟ ನಿನ್ನಲ್ಲಿ ಬೆರೆದಾಟಪಾಟ ಮಾಡಿಯೆ ಎನಗೆ ಪಾಲಿಸುವುದನ2 ಶರೀರದಿಚ್ಚೆಯನುಳಿದು ಶರೀರ ವಾಸನೆ ಕಳೆದುಶರೀರ ವಿಷಯದ ಹೊಲಬೆಲ್ಲ ಬಳಿದುಶರೀರದ ನೆಲೆಯು ತಿಳಿದು ಶರೀರದೊಳೊಬ್ಬನನುಳಿದುಶರೀರದ ಸಂಗ ದೊರಕದಿಹದದನಾ 3 ನಾದಲಕ್ಷಿಸಿ ಹಿಡಿದು ನಾದ ಸಂಗವ ಪಡೆದುನಾದಾಮೃತವ ಕಿವಿತುಂಬ ಕುಡಿದುನಾದ ದಾರಿಯ ನಡೆದು ನಾದ ದೊಳ್ವೆಳ ಗೊಡದುನಾದವನೆ ಮರೆತು ಸುಖಿಸುತಿಹದದನ 4 ನಿನ್ನ ನೀನುಳಿದಿಲ್ಲ ನೀ ದೈವ ಜಗಕೆಲ್ಲನಿನ್ನಂತೆ ಆಪ್ತರಿಲ್ಲ ನಿನ್ನ ನಂಬಿದೆನಲ್ಲನೀ ಕಾಯಬೇಕಲ್ಲ ಚೆನ್ನ ಚಿದಾನಂದನೆನೆಹಂಬತಾತ್ವಿಕ ಹಿನ್ನೆಲೆಯ ಕೀರ್ತನೆಗಳುದದನಾ 5
--------------
ಚಿದಾನಂದ ಅವಧೂತರು
ಬೇಡಿದ್ದು ಕೊಡಬಾರದೇನೊ ಬ್ಯಾಡಾದದ್ದು ಕೊಟ್ಟರೆ ಮಾಡಬೇಕೇನೊ ಪ ಯೆನಗದು ಬೇಕಾಗಿಲ್ಲ ಹಂಸರೂಪವ ಕಾಣಲಿಲ್ಲ 1 ಶ್ರಮ ಪಡಲಾರೆನಿನ್ನು ಅಡಿಗಳಿಗೆರಗುವೆ ಕೊಡು ಮತಿಯನ್ನು2 ಮಾಡಿಕೊಂಡು ಮೆರೆವೆನೆಂಬುವರೊ ನಿನ್ನ ಮುಖವನ್ನು ತೋರೊ 3 ಚಾರು ತೋರದಿರುವರೆ ಮುಕುಂದ ಮುರಾರೆ 4 ಅನುಭವಿಸಿದ್ದು ಸಾಕಿನ್ನು ವಿಠಲನೆ ಕೊಡು ಮುಕ್ತಿಯನ್ನು5
--------------
ಹನುಮೇಶವಿಠಲ
ಬೇಡುವುದಿಲ್ಲನ್ಯ ನಾನೇನು ನಿನ್ನ ನೋಡಿ ಕರುಣದಿ ಬಾರೋ ಭಜಕನ ತ್ರಾಣ ಪ ಬೇಡುತಕ್ಕುದನೆ ನಾ ಬೇಡುವೆನೆಲೆ ಸ್ವಾಮಿ ನೀಡುತಕ್ಕುದನೆ ನೀ ನೀಡಿ ಕಾಪಾಡಯ್ಯ ಮೃಡಮಿತ್ರ ಜಡಜಾಕ್ಷ ಒಡೆಯ ವೈಕುಂಠ ಅ.ಪ ಎನ್ನಮನೆ ಬಾಗಿಲವ ಕಾಯೆನ್ನದಿಲ್ಲ ಎನ್ನುಳಿಸು ತಂದೆಯನು ತರಿದೆನ್ನದಿಲ್ಲ ಅಣ್ಣನ್ನ ಕೊಲ್ಲಿರಾಜ್ಯಕೊಡು ಎನ್ನದಿಲ್ಲ ಎನ್ನ ಮನೆಯಾಳಾಗಿ ದುಡಿಯೆನ್ನದಿಲ್ಲ ನಿನ್ನ ದಾಸರ ಸಂಗವನ್ನು ಕರುಣಿಸಿ ಎನ್ನನನ್ಯರಿಗೆ ಬಾಗಿಸೆ ಮನ್ನಿಸಿ ಸಲಹೆಂಬೆ ಭಿನ್ನವೇನಿದರೊಳು ಉನ್ನತಮಹಿಮ 1 ಲಲನೆಯಳ ಕೊಡಿಸಣ್ಣನ್ಹೊಡಿದೆನ್ನದಿಲ್ಲ ಬಲವಾಗೆನ್ನಯ್ಯ ಬಂಧುಗಳ ನಾಶಕೆನ್ನೊದಿಲ್ಲ ಬಲಿದೆನ್ನಿಂ ತವ ಭಕ್ತ ನೋಡಿಸೆನ್ನದಿಲ್ಲ ಸುಲಭದೆನ್ನಿಂದ್ಹೆಡಮುರಿ ಕಟ್ಟಿಸಿಕ್ಕೆನ್ನದಿಲ್ಲ ಎಲೆದೇವ ತವಪಾದನಳಿನ ನಿರ್ಮಲಧ್ಯಾನ ನಿಲಿಸು ಸ್ಥಿರವಾಗೆನ್ನ ನಾಲಗೆಯೊಳನುದಿನ ಇಳೆಭೋಗದಳಸದೆ ಸಲೆ ಸುಖದಿ ಸಲಹೆಂಬೆ 2 ಭಿನ್ನವಿಲ್ಲದೆ ಬಾ ನೀ ಕರೆದಲ್ಲಿಗೆನೆನು ಎನ್ನ ಹೊಡೆತದ ಪೆಟ್ಟು ಸೈರಿಸೆಂದೆನೆನು ಉನ್ನತ ಕುಲಗೆಡು ಎನ್ನೊಳುಂಡೆನೆನು ಅನ್ಯಮಾತೊಂದು ನಿನ್ನ ಬಯಸಿ ಬೇಡೆನು ನಾನು ಅನ್ಯರನು ಬೇಡದಂತುನ್ನತ ಪದ ನೀಡಿ ನಿನ್ನ ಮೂರುತಿಯೆನ್ನ ಕಣ್ಣೊಳು ನಿಲ್ಲಿಸಿ ಬನ್ನಬಡಿಸದೆ ಕಾಯೊ ಎನ್ನಯ ಶ್ರೀರಾಮ 3
--------------
ರಾಮದಾಸರು