ಒಟ್ಟು 8803 ಕಡೆಗಳಲ್ಲಿ , 129 ದಾಸರು , 4024 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಲಗೋಪಾಲನ ತೋರೆಲೆ ಲಲನೆ ಲೀಲೆಗಳಲ್ಲಿ ಮುದದಿಂದ ಪ ಕಾಲ ಕಳೆಯುತಿರೆ ಬಾಲೆಯರು ಕೇಳೆ ಪೇಳದೆ ಅಗಲಿದನೆಮ್ಮ ಬಲು ಲೋಲನಾಗಿಹನಿವನಮ್ಮ ಎಮ್ಮ ಮೇಲೆ ಅತಿ ಕಠಿಣನಮ್ಮ ಮೋರೆ ಕೀಳು ಮಾಡುವನಿವನಮ್ಮ ಕೋಪ ಜ್ವಾಲೆಯಿಂದುರಿಯುವನಮ್ಮ ಬಲು ಬಾಲನಾಗಿಹನಿವನಮ್ಮ ಗುಣ ಶಾಲಿ ಮಾತೆಯ ಕೊಂದನಮ್ಮ ಕಪಿ ಜಾಲದೊಳತಿ ಪ್ರಿಯನಮ್ಮ ಪರ ಬಾಲೆಯೊಳತಿ ಮೋಹವಮ್ಮ ಮಾಯಾ ಜಾಲವ ಬೀಸುವನಮ್ಮ ಬಲು ಕೀಳನು ಮೇಲು ಮಾಡುವನು ಇಂಥಾ 1 ಸಾರಸಾಕ್ಷನ ವಿರಹವನು ಸೈರಿಸಲಾರೆವೆ ಕರುಣದಲಿ ತೋರೆ ಕೋರುವೆವು ವಿನಯದಲಿ ಅವ ನೀರೊಳಗಡಗಿದನೇನೆ ದೊಡ್ಡ ಮೇರು ಬುಡದಲಿಹನೇನೆ ಅವ ಚಾರು ಸೂಕರನಾಗಿಹನೇನೆ ಅವ ಬಾರಿ ಕಂಭದಲಿಹನೇನೆ ವೇಷ ಧಾರಿ ಬ್ರಹ್ಮಚಾರಿಯೇನೆ ಕ್ಷಿತಿ ಪಾರಿಯೆನಿಸಿ ತಿರುಗುವನೆ ಅವ ಸೇರಿಹನೆ ಹನುಮನನು ಅಯ್ಯೋ ಜಾರ ಚೋರನಿವನಮ್ಮ ಮಾನ ಮೀರಿ ಬತ್ತಲೆ ನಿಂತಿಹನೇ ವಾಜಿ ಏರುತ ಓಡುತಲಿಹನೇ ಇಂಥಾ 2 ವೇಣು ವಿನೋದದಿ ಕುಣಿಯುತಲಿ ಕಾಣುವುದೆಂತು ಪ್ರಸನ್ನ ಮಾಧವನ ಮೀನ ರೂಪವ ತಾಳಿದನ ಬಲು ಪೀನ ಶರೀರ ಕಂಠನ ಧರೆ ಯಾನನದಲ್ಲಿ ಪೊತ್ತಿಹನ ದುಷ್ಟ ದಾನವನನು ಸೀಳಿದವನ ಭೂಮಿ ದಾನವ ಯಾಚಿಸಿದವನ ಭೃಗು ಮುನಿಯೊಳವತರಿಸಿದನ ಕಡು ಕಾನನದೊಳು ತಿರುಗಿದನ ಸವಿ ವೇಣು ಗಾನವ ಮಾಡಿದನ ಬಹು ಮಾನಿನಿ ವ್ರತಗಳನಳಿದವನ ಪ್ರಸ ನ್ನಾನನ ತುರಗವಾಹನನ 3
--------------
ವಿದ್ಯಾಪ್ರಸನ್ನತೀರ್ಥರು
ಬಾಲಚಂದ್ರನ ರೂಪಾ ಭಯನಿವಾರಣ ನೋಡೋ ಬಾಲೆಯರೆಲ್ಲರು ಬಂದು ಕಾದಿರುವಾ ಲೊಲಾನವನ್ನು ಕಂಡು ಹೇಳಲು ನಾ ಬಂದೆ ಆಲಯಕ್ಕೆ ನೀ ಬಾ ಹಸೆಗೇಳೋ ಸೋಬಾನೆ 1 ಪನ್ನಂಗಶಯನ ಬಾರೊ ಚನ್ನಕೇಶವನಲ್ಲ ದಿನ್ನು ಬೇಕಾದ ಹೆಸರನ್ನು ಪಡೆದಿರುವೆ ಕನ್ನೆ ಸೀತೆಗೆ ಕೊಟ್ಟ ಹೊನ್ನವುಂಗರ ಕೊಡುವೆ ಬಿನ್ನಾಣದಿಂದ ಹಸೆಗೇಳೋ ಸೋಬಾನೆ 2 ಸುದತಿಯರೈವರು ಕದಳಿಹುವ್ವಿನ ಪೀಠ ಹದಮಾಡಿ ಕುಂತಿರುವರದೆ ಹೇಳಬಂದೆ ಮದನ ಜನಕ ಹಸೆಗೊದಗಿ ಅಲ್ಲಿನ ದಿವ್ಯ ಚದುರತನವನೋಡೊ ಹಸೆಗೇಳೋ ಸೋಬಾನೆ 3 ಋಷಿಗಳೆಲ್ಲರು ಜ್ಞಾನದೋಯ ಹಾಸನದೊಳೂ ಬಿಸಜಾಕ್ಷಿವರದನೆ ಗುರುವು ತುಲಸಿರಾಮಾ ಪಶುಪತಿಯಾದೆಯಾ ಹಸೆಗೇಳೋ ಸೋಬಾನೆ 4
--------------
ಚನ್ನಪಟ್ಟಣದ ಅಹೋಬಲದಾಸರು
ಬಾಲನಾಗಿ ಬಂದ ಶ್ರೀಹರಿಲೀಲೆಯಿಂದ ತೋರಲೀಪರಿಮೂಲ ಕೊಲೆಗಳಿಲ್ಲದಾತಗೋಲವ್ಯಾಪಿ ನಿರಾಕಾರಿ ಪ ಪಾದ ನೆಲವಬಿಕ್ಕೆಬೇಡಿಯವನು ಹತ್ತಿಕ್ಕಿ ತಳಕೆ ತುಳಿಯಲೆಂದು 1 ಇಡಿಯ ಜಗವ ತನ್ನೊಡಲಿನಲ್ಲಿಹಿಡಿಯ ಪರಿಯ ಬಾಯ ತೆರೆದು ಜಡೆದು ತೋರಿ ಯಶೋದೆಯತೊಡೆಯ ಮೇಲೆ ಆಡಲೆಂದು 2 ಹಾಳುಮಾಡಿ ಹೂಡಿದಾಟಕಾಲ ಬೆರಳು ಬಾಯೊಳಿಟ್ಟುಆಲದೆಲೆಯ ಮೇಲೆಮಲಗೆ ಗದುಗು ವೀರನಾರಾಯಣ 3
--------------
ವೀರನಾರಾಯಣ
ಬಾಲನೇನೆ ನಿನ್ನ ಮಗನು ಗೋ- ಪಾಲಕೃಷ್ಣನು ಪ. ಬಾಲನೇನೆ ನಿನ್ನಮಗನು ಬಾಲಕಿಯರಾಲಯ ಪೊಕ್ಕು ಶೀಲಗೆಡಿಸಿ ಸಾಲದೆ ಗೋ- ಕುಲವನು ಸೂರೆಮಾಡಿದ ಅ.ಪ. ಕಾಲು ಇಲ್ಲದೆ ನಡೆವನೀತ ಮೇಲುಗಿರಿಯ ಬೆನ್ನಲಾಂತ ಮೂಲಬೇರ ಮೆಲ್ಲುವಾತ ಜ್ವಾಲರೂಪಿ ಸ್ಥೂಲಕಾಯ ಬಾಲನಾಗಿ ಭೂಮಿಬೇಡಿದ ಹಾಲು ಕುಡಿಸಿದ ತಾಯ ಎರವು ಮಾಡಿದ ವಲ್ಕಲವನುಟ್ಟು ಅಡವಿ ಆಲಯವ ತಿರುಗಿದ ಶ್ರೀರಾಮಚಂದ್ರ ವೇಲಾಪುರದ ಸೋರುಮುಡಿಯ ಬಾಲೆಯನು ಸೋಲಿಸಿ ಕಾಲದಲ್ಲಿ ಕಲ್ಕ್ಯನಾದ 1 ಮಡುವಿನಲ್ಲಿ ಅಡಗಿಯಿರುವ ಪೊಡವಿ ದೊಡ್ಡನೆತ್ತಿ ಪೊರೆವ ಅಡವಿಯಲ್ಲಿ ಆಡುತಿರುವ ಕಡುಕ್ರೂರ ಹಿಡಿದ ಹಟವ ಹುಡುಗನಾಗಿ ಪೊಡವಿ ಬೇಡಿದ ಕೊಡಲಿ ಪಿಡಿದು ಕಡಿದು ಕ್ಷತ್ರಿಯರ ಕುಲವ ತರಿದನೆ ರಾವಣಾದಿ ಪಡೆಯನೆಲ್ಲ ಸಂಹರಿಸಿದ ಶ್ರೀರಾಮಚಂದ್ರ ತುಡುಗು ಮಾಡಿ ಗಡಿಗೆ ಪಾಲ ಕುಡಿದು ಕಡಹದಲ್ಲಿ ಅಡಗಿ ಬಿಡದೆ ತ್ರಿಪುರವ್ರತಕೆಡಿಸಿ ಪಿಡಿದು ತೇಜಿಯ ನಡೆಸುತಿಹನು 2 ನೀರಪೊಕ್ಕು ವೇದತಂದು ಭಾರಪೊತ್ತು ಬೆನ್ನಲಿಟ್ಟು ಕೋರೆಹಲ್ಲು ತೋರುವ ಕ್ರೂರವದನ ಅಪಾರ ಮಹಿಮ ಪಾದ ಭೂಮಿ ಬೇಡಿದ ವಿಪ್ರರ ಕರೆಸಿ ಧಾರುಣಿಯನೆ ದಾನ ಮಾಡಿದ ಪರ್ವತಗಳ ತರಿಸಿ ಶರಧಿಯನ್ನು ಸೇತುಕಟ್ಟಿದನೆ ಶ್ರೀರಾಮಚಂದ್ರ ಜಾರ ಚೋರ ಮಾರನಯ್ಯ ನಾರೇರಪ್ಪಿ ಮರುಳುಮಾಡಿ ವಾರಿಜಾಕ್ಷ ಹಯವದನ ಏರಿ ಕುದುರೆ ವೈಹಾಳಿಮಾಡಿದ 3
--------------
ವಾದಿರಾಜ
ಬಾಲೆಯರೆಲ್ಲರು ಬನ್ನಿರೆ ರನ್ನದ ಕೋಲ್ಗಳನೀವ್ ಪಿಡಿದು ಪ. ಮೇಲಹ ಪದಮಂ ಪಾಡುವ ಕೋಲಾಹಲ ಸಮಯವಿದು ಅ.ಪ. ಶರಧಿತನೂಭವೆ ನೀ ಬಾ ಬಾ ನೆರೆಮೆರೆವೀ ಶರದುತ್ಸಹಮಂ ಅರಿಪುತು ಜಗಕಿಂದು 1 ನಿಗ್ರಹಕಾರ್ಯದಿಂದುಗ್ರನಾಗಿಹ ಭರ್ಗನಕೆಲಕೈತಂದು ವ್ಯಗ್ರತೆಯಿಳಿಸಿ ಪೊರೆ ಶೀಘ್ರದಿ ಗಿರಿಸುತೆ ಸಮಗ್ರ ಭಾರತಮಿಂದು2 ಸರಸ್ವತಿ ಬಾ ನಿನ್ನರಸನ ಕೆಲಸಾರ್ ಧರೆಯೊಳ್ ಸುಪ್ರಜರಂ ನೆರೆ ಸೃಜಿಸುವ ವೋಲ್ ಅರುಹು ವಿಚಕ್ಷಣೆ ಅಸುರರ ಪಡೆಯದಿರೆನ್ನು3 ಶರದಿತನೂಭವೆ ಅರಸಗೆ ನೀನೊರೆ ಪರಿಪರಿ ವಿಧದಿಂದಂ ಕೊರತೆಯದಿಲ್ಲದೆ ಪೊರೆ ಜಗಮೆನ್ನುತ ಪೊರೆವೆವು ಛಲದಿಂದಂ4 ಭಾರತ ಜನನಿಯ ಭಾಗ್ಯೋದಯಮಂ ತೋರಿರೆ ಶಕ್ತಿತ್ರಯರೆ ಭಾರತವೀರರಿಗಾರೋಗ್ಯೈ ಶ್ವರ್ಯಂಗಳ ಕರುಣಿಸಿರೇ 5 ರಾಷ್ಟ್ರಪ್ರಮುಖರ ಕಷ್ಟಂಗಳ ನಾ ವೆಷ್ಟೆಂದೊರೆದಪೆವೇ ಸೃಷ್ಟಿ ಸ್ಥಿತಿ ಲಯಕರ್ತರು ನೀವಿರೆ ದೃಷ್ಟಿಸಿರೀಗೆನ್ನುವೆವೆ 6 ಕನ್ನಡತಾಯಿಯ ಕನ್ನೆಯರಾವು ಉನ್ನತಿಯನ್ನೆಳಸುವೆವು ಮನ್ನೆಯರ್ ನೀವೆಮ್ಮೋಳಿನ್ನಾವೇಶಿಸೆ ಧನ್ಯರು ಮಾನ್ಯರು ನಾವಹೆವು7 ಆರ್ಯಮಹಿಳೆಯರೆನೆ ವೀರಮಾತೆಯರೆನೆ ಧಾರುಣಿಯೊಳಗೆಮ್ಮಂ ಧೈರ್ಯಸ್ಥೈರ್ಯೌದಾರ್ಯ ಗುಣಂಗಳ ಪೂರಿತರಪ್ಪಂತೊಸೆವುದೆಮಗಿನ್ನು 8 ಒಲಿದೆಮ್ಮನು ನೀವ್ ನೆಲೆಸಿರೆ ನಲವಿಂ ಬಲಗೊಳ್ಳುತ್ತಾನವರತಂ ಕಲಿಯುಗಮಲ್ಲಿದು ಕೃತಯುಗಮೆನುವೋಲ್ ಬೆಳಗುವೆವೆಲ್ಲೆಡೆಯೋಳ್9 ಪರಿ ಭಾವಿಸಿ ಮನ್ನಿಸಿರೆ ಶ್ರೀವರ ಶ್ರೀಶೇಷಗಿರೀವರ ನಾವಗ ಮೋವುಗೆ ಕರುಣಿಸಿರೆ 10
--------------
ನಂಜನಗೂಡು ತಿರುಮಲಾಂಬಾ
ಬಾಲೆಯಾದಾನು ಬಲಭೀಮ ಪ ಬಾಲೇಂದು ಮುಖ ಸೋಲಿಪ ವದನದಿಂದೊಪ್ಪುತಅ.ಪ. ಸೊಲ್ಲು ಸೊಲ್ಲಿಗೆ ಬಲು ಕಳವಳಿಸುವನಾ ತರುಣಿ ದ್ರೌಪದಿ ತಾ ತಾಳದೆ ತನ್ನೊಳು ತಿಳುಪಿದಳು ಪತಿಯೊಡನೆಕೇಳಿದ ಮಾತ್ರದಿ ಸೀಳುವೆನೆನುತಲಿ ಕೋಪದಿಂದೊಮ್ಮೆಗೆ 1 ಸನ್ನುತ ಶಶಿಮುಖಯೆಂಬೋದು ಸರಿಯಾ-ಶ್ವಾಸನ ಸತಿಯಳ ಸರಸಾಟ ಸಹಿಸದೆ ಮೀಸೆಯ ತಿರುವುತ ಸಾರಿ ಸರಿ ಯಾರೆನ್ನುತ ಸತಿಯಾಗಿರು ಸುಖಸತಿಯಳ ಮಾಡಿ ನಿನ್ನಾಳುವೆನೆಂಬೋದು ಕೇಳಿ ಭರದಿ 2 ಸುಮಶರ ಶೋಷಕೆ ಹಿಮಕರ ವ್ಯಾಪಿಸಿ ಹರುಷವಗೊಳುತಾ ಸರಸಿಜಮುಖಿಯೆಂದು ಸರಸರ ಸಾಗಲು ಶಿರದೊಳು ಚರಣವ ಸೇರಿಸಿದಾ ಶಾಮರೂಪ ತಂದೆವರದಗೋಪಾಲವಿಠ್ಠಲನ ಸ್ಮರಿಸುತ 3
--------------
ತಂದೆವರದಗೋಪಾಲವಿಠಲರು
ಬಾಳು ಬಾಳು ಹರಿ ಪೂಜಾಲೋಲುಪÁಳೊ ಬಾಳೊ ಮುನಿವಾದಿರಾಜಬಾಳೆಂದಕ್ಷತಿನಿಟ್ಟು ದೇವಕ್ಕಳೆಲ್ಲಬಲು ಕೃಪೆಯಲಿ ಹರಸಿದರೊಪ. ಮಕ್ಕಳ ಮ್ಯಾಲೆಂದೆಂದು ಬಲುಅಕ್ಕರುಳ್ಳ ತಾಯಿ ಬಳಗಅಕ್ಷತಿನಿಕ್ಕಿ ಹರಸುವಂದದಿ ದೇ-ವಕ್ಕಳೆನ್ನ ಹರಸಿದರೊ 1 ಸಾಲಿಗ್ರಾಮ ತೀರ್ಥವನು ಮ್ಯಾಲೆಫಲವೀವ ಕ್ಷೇತ್ರವನುಕಾಲಕಾಲದಿ ಹರಿಸ್ಮರಣೆಯ ಬಿಡದಿರುಕೀಳು ಭವವೆಂಬ ಶತ್ರುವನು 2 ತುಲಸಿ ಪದ್ಮಾಕ್ಷಿಯ ಸರವ ನಿನ್ನಕೊರಳ ರವದಲ್ಲಿ ಮೆರೆವಅಲಸದೆ ಹರಿವಾಸರವನೆ ಬಿಡದಿರುಸುಲಭದಿ ಹರಿ ನಿನ್ನ ಪೊರೆವ 3 ಭ್ರಾಮಕರೊಡನಾಡದಿರು ಕಂಡಕಾಮಿನಿಯರ ಕೂಡದಿರುನೇಮನಿಷ್ಠೆಗಳನ್ನು ಬಿಡದಿರು ಎಂದೆಂದುತಾಮಸನಾಗಿ ಕೆಡದಿರು 4 ಹಯವದನಗೆ ನಮಿಸುತಿರು ನಿ-ರ್ಣಯದ ಶ್ರುತಿಯಸೇವಿಸುತಿರುಪ್ರಿಯ ಪುರಾಣಗಳ ಕೇಳುತಿರು ನಿ-ರ್ಭಯದಿಂದವನ ಪೊಗಳುತಿರು 5 ಹರಿಭಕುತರೊಳೆಂದೆಂದಾಡಿರೊ ನರ-ಹರಿಯ ನಾಮಗಳನು ಪಾಡಿರೊ ಹರಿ ಅರ್ಚನೆಯನು ಮಾಡಿರೊ ಶ್ರೀಹರಿಯ ಮೂರುತಿಯನು ನೋಡಿರೊ 6 ದೂರಕ್ಕೆ ದೂರನು ದಾವನ ಹ-ತ್ತಿರ ಬಂದ ಭಕುತರ ಕಾವನಆರಾಧಿಸಲು ಫಲವೀವನ ಹ-ತ್ತಿರ ಸೇರುವ ಭಾವ ದಾವನ 7 ಕಾಮದೇವನ ಪೆತ್ತ ಕರುಣಿಯ ಸುತ್ತಸೇವಿಪರಘತಮ ತರಣಿಯ- - - - - - - - - - -- - - - - - - - - - -8 ಜಯಿಸಿ ಕಂಸನೆಂಬ ಮಾವನ ಆಶಯವಿತ್ತು ಭಕುತ ಸಂಜೀವನಹಯವದನನಾಗಿ ಪಾವನ ಶ್ರು-ತಿಯ ತಂದ ದೇವರದೇವನ9
--------------
ವಾದಿರಾಜ
ಬಾಳೊ ಸುಖದಿ ಬಾಲನೆ ವರಗುಣ ಶೀಲನೆ ಪ ಬಾಳೊ ಸುಖದಿ ಬಹುಕಾಲಶ್ರೀವೇಣು ಗೋ- ಪಾಲನ ದಯದಿ ಸುಶೀಲ ಸತಿಯಳ ಕೂಡಿ 1 ಪಾದ ತೋಯಜ ಸ್ಮರಿಸುತ ಕಾಯದಾರೋಗ್ಯದೀರ್ಘಾಯುತ್ವವ ಪಡೆದು 2 ಕೃದ್ಧನಾಗದೆ ಜ್ಞಾನ ವೃದ್ಧರಸೇವಿಸಿ ಮಧ್ವಮತದ ತತ್ವ ಶ್ರದ್ಧದಿ ಕೇಳುತ 3 ತಂದೆ ತಾಯಿಗಳಲ್ಲಿ ಇಂದಿರೆರಮಣನೆ ನಿಂದು ಪಾಲಿಪನೆಂದು ವಂದನೆ ಪಾಡುತ 4 ಭಕ್ತಿಯಿಂದತಿಥಿಗಳ ನಿತ್ಯದಿ ಸೇವಿಸುತ ಪುತ್ರ ಪೌತ್ರಾದಿ ಸಂಪತ್ತಿಯ ಪಡೆದು 5 ಭೂಸುರರೊಡಗೂಡಿ ತೋಷದಿಕೃತ ಹರಿ ವಾಸರ ವೃತ ಫಲ ಶ್ರೀಶನಿಗರ್ಪಿಸುತ 6 ಧಾರುಣಿಯೊಳು ಕೃಷ್ಣಾತೀರ ಕಾರ್ಪರನಿಲಯ ನಾರಸಿಂಹನ ಪದ ವಾರಿಜ ಸೇವಿಸುತ 7
--------------
ಕಾರ್ಪರ ನರಹರಿದಾಸರು
ಬಿಗಿಯದಿರು ಬಿಗಿಯದಿರು ಎಲೆ ಮಾನವಾಧಿಗಿ ಧಿಗಿ ಧಿಗಿಯೆನುತ ನಿನಗೇಕೆ ಗರ್ವ ಅ ವಿರಕ್ತಿಯಲಿ ಹನುಮನೆ ವಿವೇಕದಲಿ ವಸಿಷ್ಠನೆಶೂರತನದಲಿ ಶಂತನುತನಯನೇನೊಸ್ವರದಲಿ ತುಂಬುರನೆ ಗೀತದಲಿ ನಾರದನೆಪರಾಶರ ಮುನಿಯೆ ವ್ರತತಿ ಪಟ್ಟದಲ್ಲಿ 1 ಚೆಲುವಿನಲಿ ರಾಮನೆ ಸತ್ಯದಿ ಹರಿಶ್ಚÀ್ಚಂದ್ರನೆಛÀಲದಲ್ಲಿ ಋಷಿ ವಿಶ್ವಾಮಿತ್ರನೇನೋಬಲದಲ್ಲಿ ವಾಲಿಯೇ ಹಲಧರನೆ ಹಿರಣ್ಯಕನೆಬಿಲು ವಿದ್ಯದಲಿ ಪರಶುರಾಮನೇ ನೀನು 2 ತ್ಯಾಗದಲಿ ಕರ್ಣನೇ ಭೋಗದಲಿ ಶತಮಖನೆಯೋಗದಲಿ ಶುಕಸನಕ ಜನಕನೇನೋಭಾಗ್ಯದಲಿ ಬಲಿಚಕ್ರವರ್ತಿಯೋ ದಶಶಿರನೊದೀರ್ಘದಲಿ ಮೇರುವೇ ಮಂದರವೆ ನೀನು 3 ಶಕ್ತಿಯಲಿ ಕಾಲನೆ ಭುಕ್ತಿಯಲಗಸ್ತ್ಯನೆಮುಕ್ತಿ ಪಡೆವಲ್ಲಿ ಖಟ್ಟಾಂಗರಾಯನೇನೊ 4 ಶಾಪದಲಿ ಬ್ರಹ್ಮನೆ ತಾಪದಲಿ ಸೂರ್ಯನೆಕೋಪದಲಿ ಮಹೇಶನೇನೋ ನೀನುತಪದಲ್ಲಿ ಹನುಮನೆ ವ್ರತದಿ ರುಕ್ಮಾಂಗದನೆಕೃಪೆಯಲ್ಲಿ ಶ್ರೀ ಕೃಷ್ಣದೇವನೆ ನೀನು 5
--------------
ವ್ಯಾಸರಾಯರು
ಬಿಚ್ಚದಿರು.ಬಿಚ್ಚದಿರು ಮುಚ್ಚು ಈ ಬಾಯಿ ಬಿಚ್ಚಿದ ಬಳಿಕದಕೆ ಎಚ್ಚರವೆ ಇಲ್ಲ ಪ ಅಲ್ಲ ಅಹುದೆಂಬುವುದು ಎಳ್ಳಷ್ಟು ಇದಕಿಲ್ಲ ಸುಳ್ಳುಹೇಳುವುದೆಲೊ ಅಳತೆಯೆ ಇಲ್ಲ ಜೊಳ್ಳು ಮಾತುಗಳ್ಹೇಳಿ ಮಳ್ಳು ಮಾಡಿ ಜನರಲ್ಲಿ ಬಲ್ಲವೆನಿಸಿಕೊಂಬ ಸೊಲ್ಲೆ ಹುಡುಕುವುದು 1 ಸಲ್ಲದೀ ಆತ್ಮದ ಇಲ್ಲದ ಸುದ್ದಿಯನು ಎಲ್ಲಿತನಕಲು ಬೇಸರಿಲ್ಲದ್ಹೇಳುವುದು ಅಲ್ಲ ಅಹುದೆಂಬುದನು ಎಲ್ಲಬಲ್ಲಂಥ ಸಿರಿ ನಲ್ಲನ ಪಾದಕ್ಕೆ ಅಲ್ಲೆನಿಸುತಿಹ್ಯದು 2 ಮುಚ್ಚುಮರೆಯಿದಕಿಲ್ಲ ಎಚ್ಚರಮೊದಲಿಲ್ಲ ಕಿಚ್ಚಿನೋಳ್ಬಿದ್ಹೋಗ್ವ ನೆಚ್ಚಿಕಿಲ್ಲ ಕಾಯ ಅಚ್ಯುತ ಶ್ರೀರಾಮನಂ ಮುಚ್ಚಿಭಜಿಸಿ ಭವದುರುಲು ಬಿಚ್ಚಿಸಿಕೊಳ್ಳೊ 3
--------------
ರಾಮದಾಸರು
ಬಿಟ್ಟನೋ ಆತಂಕಗಳನು ನಾ ಕೃಷ್ಣ ನಿನ್ನ ಕರುಣಾ ನಂಬಿ ಪ ಸೃಷ್ಟಿ ಸ್ಥಿತಿ ಲಯಾದಿ ಕರ್ತ ಅಷ್ಟವಿಭವಪೂರ್ಣ ನಿನ್ನ ಇಷ್ಟದಂತೆ ನಡೆಯುವುದೇ ಶ್ರೇಷ್ಠವೆಂಬೊ ಬುದ್ಧಿ ಬಂದು 1 ಬೆಟ್ಟದಂತೆ ಇದ್ದುದಲ್ಲಿ ಘಟ್ಟಿಮಂಜಿನಂತೆ ಕರಗಿ ಕಷ್ಟರಾಶಿಯೆಲ್ಲಾ ಸ್ವಪ್ನ ದೃಷ್ಟದಂತೆ ಆದಮೇಲೆ 2 ತಲೆಯಮೇಲೆ ಕೈಯ್ಯನಿಟ್ಟು ಇಳೆಯ ಮೋರೆ ಮಾಡಿ ನೊಂದು ನೆಲವ ಕಚ್ಚಿ ಬಿದ್ದರೇನು ಫಲವೊ ಧೀರಜನ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಬಿಟ್ಟನ್ಯಭಜನೆಯ ಕಂಡು ಪ ಹೊಚ್ಚಿ ಸುಳಿದಟ್ಟಿ ಸುಡುವ ಅಡವಿಗಿಚ್ಚಿನ ಭಯಕೆ ಬೆಚ್ಚಿ ಅರಗಿನ ಮನೆಯ ಹೊಗುವವನಂತೆ ಅಚ್ಚರಿಯೆನಿಸೆ ದಹಿಪ ತಾಪತ್ರಯಕ್ಕಳುಕಿ ತುಚ್ಛ ದೈವಗಳ ಮರೆಯೊಗುವ ಮನುಜರಕಂಡು 1 ಉರಿಯ ಮಳೆಗರೆಯುತಿರೆ ತೃಣಗೇಹವನು ಹೊಕ್ಕು ಹರಣವನುಳುಹಿಕೊಂಬೆನೆಂಬಂತೇ ಉರುಬೆ ನಾನಾ ರೋಗಗಳುಳುಹಲು ಹಲವು ದೈವಗಳಿ ಗೆರಗಿ ಜೀವನಕೆ ಕಳಕಳಿಪ ಮನುಜರ ಕಂಡೂ 2 ಮುಗಿಲಗಲ ಧರೆ ಜರಿಯುತಿರೆ ಹುಲ್ಲಿನಣಬೆಯೊಡ್ಡಿ ಮಿಗೆ ಬಾಳ್ವೆನೆಂಬ ಮರುಳನಂದದೀ ಉಗಿದಸಿಯ ಮೃತ್ಯುವಿನ ಭಯಕೆ ನಾನಾದೇವ ತೆಗಳಮರೆಯೊಗುವ ಮನುಜರ ಕಂಡು 3 ಘುಡು ಘುಡಿಸಿ ಸಿಡಿಲೆರಗುತಿರೆ ತನ್ನ ಕೈ ವಿಡಿದ ಕೊಡೆಯ ಮರೆಗೊಂಡುಳಿವೆನೆಂಬಂತೇ ಮುಡಿವಿಡಿದೆಳೆವ ಕಾಲನ ಭಯಕೆ ನಾನಾದೈವ ದಡಿವಿಡಿದೆರಗಿ ಹಲು ಬಿಡುವ ಮನುಜರ ಕಂಡು 4 ಯಾತಮುಳಿದರೆ ಜಗದಲುಳಿದವರಾರು ಮ ತ್ತೀತನುಳುಹಿದನನು ಕೊಂದವನಾವ ಇ ದೇತಕರಿಯರೋ ನರರು ಅಕಟಕಟ ವೈಕುಂಠ ನಾಥ ಪರಿಪೂತನ ಪದಕಮಲವ ಭಜಿಸರೆಂದು 5 ನೀರಡಿಸಿ ಜಾಹ್ನವಿಯ ತೀರದಲಿ ಭಾವಿಯಾ ನೀರ ಕುಡಿವ ಮಾನವನ ತೆರದೀ ಹರಿಯ ಚರಣವಿರಲು ಭೂರಿದೈವಂಗಳಿನ್ನೇಕೆ ಭಜಿಸುವೆ ಮನುಜ ಹರಿ ಕಾರುಣ್ಯನಿಧಿ ವೈಕುಂಠವಲ್ಲಭ ಬೇಲೂರ ಚೆನ್ನಿಗರಾಯ ಕೃಪಾನಿಧಿಯಿರಲು 6
--------------
ಬೇಲೂರು ವೈಕುಂಠದಾಸರು
ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ ಪ ಬಿಟ್ಟಿರಲಾರೆ ಮನಮುಟ್ಟಿ ಭಜಿಪೆನಯ್ಯ ಅಷ್ಟಮಹಿಷೇರ ಸಹಿತ ನಾಟ್ಯವಾಡುತ ಬೇಗ ಬಾ ಅ.ಪ ಗೊಲ್ಲರ ಮನೆ ಪೊಕ್ಕು ಪಾಲ್ಬೆಣ್ಣೆಗಳ ಮೆದ್ದು ಚೆಲ್ವ ಲಲನೇರ ಗಲ್ಲ ಮುದ್ದಾಡುತ ಬೇಗ 1 ಮಂದಗಮನೆಯರ ಮಂದಹಾಸದಿ ಅಪ್ಪಿ ದ್ವಂದ್ವ ಕುಚದಲ್ಲಿಟ್ಟ ನಂದಜ ಕರಗಳಿಂದ 2 ಮಿರಿಮಿರಿ ಮಿಂಚುವ ಕಿರೀಟ ಕುಂಡಲ ಧರಿಸಿ ವಾರೆ ನೋಟದಿ ನಾರೇರ ಮನ ಸೆಳೆವ 3 ಸುಮನಸರೊಂದಿತ ಯಮುನಾ ಪುಳಿನದಿ ವಿಮಲ ವೇಣುಸ್ವರದಿ ಕಮಲಾಕ್ಷಿಯರೊಲಿಸಿದ 4 ಶ್ರೀವತ್ಸ ಕೌತ್ಸುಭ ಪವಳ ಮುತ್ತಿನಹಾರ ನ್ಯಾವಳ ಸರಿಗಿಟ್ಟು ಗೋವಳರೊಡಗೂಡಿ 5 ತುತ್ತೂರಿ ಝಾಂಗಟೆ ಒತ್ತಿ ಪಿಡಿದಿಹ ಕಹಳೆ ಬತ್ತೀಸ ರಾಗದಿ ತತ್ಥೈವಾದ್ಯದೀ 6 ಎತ್ತಿ ಪಿಡಿದಿಹ ಛತ್ರಿ ಸುತ್ತು ಮಾಗಧ ಮಂದಿ ಸ್ತೋತ್ರವ ಮಾಡೆ ನೇತ್ರೋತ್ಸವ ತೋರುತ 7 ದಿವಪನ ಸೋಲಿಪ ನವ ಪೀತಾಂಬರ ಧರಿಸಿ ಭುವನವ ಮೋಹಿಪ ನವ ಸುವಿಶೇಷನೆ 8 ವಿಜಯ ರಾಮಚಂದ್ರವಿಠಲರಾಯನೆ ನಿಜ ಪರಿವಾರದಿಂ ಭಜಕರ ಪಾಲಿಪ 9
--------------
ವಿಜಯ ರಾಮಚಂದ್ರವಿಠಲ
ಬಿಟ್ಟು ಬರಲಾರಳಮ್ಮಯ್ಯಪಟ್ಟಮಂಚವ ಭಾವೆಬಿಟ್ಟರೆ ರುಕ್ಮಿಣಿ ಕೃಷ್ಣನ ಬೆರೆದಾಳೆಂಬೊ ಅಂಜಿಕೆಯಿಂದ ಪ. ಪಾದ ಸಿಕ್ಕಿತೋ ಸಿಗದೆಂದುಚಿಕ್ಕ ಚನ್ನಿಗಳ ಕೈವಶಚಿಕ್ಕ ಚನ್ನಿಗಳ ಕೈವಶವಾಗದಂತೆಜಪ್ಪಿಸಿಕೊಂಡು ವಟವಾದಳೆ 1 ಶಂಬರಾರಿ ಪಿತನ ತಂಬುಲಸಿಗದೆಂದು ಚುಂಬನದ ಸಮಯ ಚಿಗಿಳೀತುಚುಂಬನದ ಸಮಯ ಚಿಗಿಳೀತು ಎಂತೆಂಬೊಹಂಬಲದಿ ಒಳಗೆ ಕುಳಿತಳೆ2 ನಲ್ಲೆ ರಂಗಯ್ಯನ ಎಲ್ಲೆಲ್ಲಿ ಬಿಡಲೊಲ್ಲೆಎಲ್ಲ ನಾರಿಯರ ನೆರವಿಕೊಂಡುಎಲ್ಲ ನಾರಿಯರ ನೆರವಿಕೊಂಡು ಮನೆಯೊಳುನಿಲ್ಲಗೊಡರೆಂಬೊ ಭಯದಿಂದ3 ಒಗೆತನ ನಗೆಗೀಡಾಯಿತು ನೋಡೆ ಈ ಬಗೆ ಎಲ್ಲೆ ಕಾಣೆ ಜಗದೊಳು ಈ ಬಗೆ ಎಲ್ಲೆ ಕಾಣೆ ಜಗದೊಳು ರುಕ್ಮಿಣಿ ತಗಿ ನಿನ್ನನಡತೆ ತರವಲ್ಲ4 ಅನಂತ ಮಹಿಮಗೆ ಇನ್ನೆಂಥ ಕಾವಲತನ್ನ ನಿಜರೂಪ ಅವರಲ್ಲಿತನ್ನ ನಿಜರೂಪ ಅವರಲ್ಲಿ ರಮಿಸೋದುತನ್ನ ಮನದಲ್ಲಿ ನಿಜ ಮಾಡಿ5 ಸಾಗರಶಾಯಿ ಮನಕೆ ಹ್ಯಾಂಗೆ ಬಂದೀತುಎಂದು ಹೀಗೆ ಕೈ ಮುಗಿದು ತಲೆಬಾಗಿಹೀಗೆ ಕೈ ಮುಗಿದು ತಲೆಬಾಗಿ ರುಕ್ಮಿಣಿಆಗೊಂದು ಮನದ ಬಯಕೆಲ್ಲ6 ಎಷ್ಟು ಜಪಿಸಿ ನೀನು ಠಕ್ಕಿಸಿ ಕೃಷ್ಣನ ಇಟ್ಟಾನೆ ರಮಿಯ ಎದಿಮ್ಯಾಲೆ ಇಟ್ಟಾನೆ ರಮಿಯ ಎದಿಮ್ಯಾಲೆ ರುಕ್ಮಿಣಿ ಇಷ್ಟರ ಮ್ಯಾಲೆ ತಿಳಕೊಳ್ಳ7
--------------
ಗಲಗಲಿಅವ್ವನವರು
ಬಿಟ್ಹ್ಯಾಗೆ ಇರಲಿನ್ನೀ ಚರಣ | ರಂಗ ಪ. ವಿಠ್ಠಲನಾ ಪುಟ್ಟ ಚರಣ ಬಿಟ್ಟು ಗೋಕುಲ ಪುಂಡಲೀಕನಿಗೊಲಿಯುತ ಇಟ್ಟಿಗೆ ಮೇಲ್ಹೊಂದಿ ನಿಂತಂಥ ಚರಣ ಅ.ಪ. ಭಕ್ತರಿಗೊಲಿಯುವ ಚರಣಾ | ವೇದ ಉಕ್ತಿಗೆ ನಿಲುಕದ ಚರಣಾ ಹತ್ತಿ ಪಾರ್ಥನ ರಥ ಮತ್ತೆ ಭೀಷ್ಮನಿಗೊಲಿದು ಹಸ್ತದಿ ಚಕ್ರವ ಪಿಡಿದು ಬಂದಾ ಚರಣ 1 ಬಲಿಯನ್ನು ತುಳಿದಂಥ ಚರಣಾ | ಮೂರು ಇಳೆಯನಳೆದ ಪುಟ್ಟ ಚರಣ ಕುಲಕೋಟಿ ಉದ್ಧಾರಗೈವಂಥ ಗಂಗೆಯ ಚಲುವ ಉಂಗುಟದಲ್ಲಿ ಪಡೆದ ಕೋಮಲ ಚರಣ 2 ಹಸ್ತಿ ಕರೆಯೆ ಬಂದ ಚರಣಾ | ಲಕ್ಷ್ಮಿ ವತ್ತುವೋ ಮೃದುತಳ ಚರಣಾ ಚಿತ್ತದೆ ಚಿಂತಿಪ ಭಕ್ತರ ಮನದೈವ ತೆತ್ತಿಗನಾಗಿ ಐವರ ಪೊರೆದಾ ಚರಣ3 ಭೀಮ ತೀರಾ ವಾಸ ಚರಣಾ | ಭಕ್ತ ರಾಮಯ ಹರಿಸುವ ಚರಣಾ ಕಾಮಜನಕ ಪಾಂಡುರಂಗವಿಠ್ಠಲನೆಂದು ಪ್ರೇಮದಿಂ ಭಜನೆಗೊಂಬುವ ಸ್ವಾಮಿ ಚರಣಾ 4 ಬಿಟ್ಟಿರಲಾರೆ ನೀ ಚರಣ | ಮನದಿ ಕಟ್ಟಿ ಹಾಕೂವೆ ನಾ ನೀ ಚರಣ ದಿಟ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಚರಣ ಇಟ್ಟು ಹೃತ್ಕಮಲದಿ ಪೂಜಿಪೆ ನೀ ಚರಣ 5
--------------
ಅಂಬಾಬಾಯಿ