ಒಟ್ಟು 7419 ಕಡೆಗಳಲ್ಲಿ , 132 ದಾಸರು , 3991 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಗವನ್ನಾಮ ಅಂಬುಜ ಮುಖಿಯರು ಕಂಬುಕಂಠೆಯರು ಅಂಬರದಲಿ ನಾಟ್ಯವಾಡಿದರು ಪ ಪತಿ ಶ್ರೀ ಕೃಷ್ಣನರಥ ಬರೆ ಸಂಭ್ರಮದಿಂದಲಿ ಪಾಡಿದರು ಅ.ಪ. ಬಾಜ ಬಜಂತ್ರಿಯ ವಾದ್ಯರಭಸದೊಳು ಮೋಜಿನಿಂದಲಿ ಹರಿ ಬರುತಿರಲು ಸೋಜಿಗ ಪಡುತಲಿ ರಾಜ ವದನೆಯರು ಜಾಜಿಮಲ್ಲಿಗೆ ಹೂವ ಬೀರಿದರು 1 ವೇದ ಘೋಷಗಳಿಂದ ಮೋದಪಡುತ ಹರಿ ಸಾಧುಜನರ ಕೂಡಿ ಸರಸದಲಿ ಬೀದಿಯೊಳ್ ಬರುತಿರೆ ಮಾಧವರಾಯಗೆ ಸೂಜಿಮಲ್ಲಿಗೆ ಹೂವ ಬೀರಿದರು 2 ಕನ್ನಡಿ ಮಂಟಪ ಮಧ್ಯದೊಳಗೆ ಹರಿ ರನ್ನೆಯರೊಡಗೊಡಿ ಬರುತಿರಲು ಸನ್ನುತಾಂಗ ಶಿರಿ ಪ್ರಾಣನಾಥ ವಿಠಲನ ಸಂಭ್ರಮದಿಂದಲಿ ಸಾರಿದರು 3
--------------
ಬಾಗೇಪಲ್ಲಿ ಶೇಷದಾಸರು
ಭಜನೆಯ ಪದ ಭಕ್ತ ವತ್ಸಲ ಸ್ವಾಮಿ ಭಯನಿವಾರಣ ದೇವ ಭರದಿಂದ ಬಂದುದ್ಯಾಕೆ ಪೇಳಯ್ಯಾ ಪ ಭಾರ ಹೊತ್ತು ಬಂದೆಯಾ ಕೋರೆದಾಡಿಗಳಿಂದ ಧಾರೂಣಿ ಎತ್ತೀ ತಂದು ಭಾರ ವಾಯಿತೆಂದು ಬಂದೆಯಾ 1 ಬಾಲಕಾನಾ ನುಡಿಯ ಕೇಳಿ | ಬೇಗದಿಂದಾ ಬಂದೆಯಾ ದುರುಳನ್ನ ಕೊಂದು ಕರುಳ ಮಾಲೆಯಧರಿಸಿ ನೀ ತರಳಗಭಯವಿತ್ತು ಬಂದೆಯಾ2 ಬಲಿಯ ದಾನಾಬೇಡಿ ನೀನು ಕೊಡಲಿ ಪಿಡಿದೂ ನಿಂತೆಯಾ ಮಡದಿಯಾ ಕದ್ದವನ ಬಿಡದೆ ಬೆನ್ನಟ್ಟಿಕೊಂಡು ಸಡಗರದಲಿ ನೀ ಬಂದೆಯಾ 3 ಮಧರೇಲಿ ಹುಟ್ಟಿ ಮಲ್ಲಾರ ಮಡುಹೀ ಮಾವ ಕಂಸನ ಕೊಂದು ಬಂದೆಯಾ ಆನಂದಿಂದಿಲ್ಲಿ ಬಂದೆಯಾ 4 ವಸನಾ ವಿಲ್ಲದೆ ನೀನು ಪಶುವನ್ನೇರಿಕೊಂಡು ವಸುಧೆಯ ಒಳಗೆಲ್ಲಾ ತಿರುಗೀದೆಯಾ ನೀ ಬಂದೆಯಾ5 ಕರಿಯಾ ಮೊರೆಕೇಳಿ ನೀ ತ್ವರಿತಾದಿಂದಾ ಬಂದೆಯಾ ಮ ಕರಿವರದನೆಂದೆನಿಸಿಕೊಂಡೆಯಾ 6 ಕಷ್ಟ ಪಡುವಾ ಜನರ ಕಂಡು ಕಡುದಯದಿಂ ಬಂದಿಯಾ ಪಕ್ಷಿವಾಹನನೇ | ಲಕ್ಷಮಿರಮಣನೆ | ಕಟಾಕ್ಷವನೇ ಬೀರುವಿಯಾ 7 ಹತ್ತವತಾರವ ಎತ್ತಿ ಬೇಸತ್ತು ನೀ ಮತ್ತೆ ನೀನಿಲ್ಲ ಬಂದಿಹೆಯಾ ಬರುವರು ಕಂಡೆಯಾ 8 ಲಕ್ಷ್ಮಿ ಇಲ್ಲದೆ ನಾನಿರೆನೆನುತಲಿ ವೈಕುಂಠ ಬಿಟ್ಟು ಬಂದೆಯಾ ಭಕ್ತಾರ ಸಲಹಲು ಬಂದಿಹೆಯಾ 9 ಹುಡುಕೀಕೊಂಡಿಲ್ಲೇ ಬಂದಿಹೆಯಾ 10 ಪಾಪನಾಶಿನಿ ಸ್ನಾನ ಮಾಡೋರು | ನಿನ್ನ ಧ್ಯಾನ ಬೇಡೋರು ಮನದಿಕ್ಷ್ಟಾರ್ಥಗಳ ಸಲಿಸಲು | ಆತೂರದಿಂದಲಿ ಬಂದೆಯಾ 11 ರೀತಿಗಳಿಂದ ಸೇವಿಸುವರು ನಿನ್ನ ಕೆರಂಡಾಡುವರು 12 ಬಳಿ ಬಂದಿಹರು ಬೇಡುತಾ ನಿಂದಿಹರೂ13 ಪಡುತಲಿ ಬಂದಿಹರು ಸಂತಯಿಸಬೇಕೆನುತ ಬಂದಿಹೆಯಾ14 ಬಳಿ ಬಂದಿಹರೂ ಬೀಸಾಡಲೂ ಬಂದಿರುವಿಯಾ 15 ಬಂದಿಹರೂ ನಿನಗೊಂದಿಸುವರೂ 16 ಹೆಜ್ಜೆಗೆ ನಿನ್ನ ವಂದಿಸುತಲೀ ಬಾಷ್ಟಗಳ ಸುರಿಸುವರೂ 17 ನಲಿಯುವರೂ ಕುಣಿ ದಾಡುವರೂ 18 ದೋಬಿಕೊಳ್ಳುತ ನೀ ನಿಂತಿರುವೇ ಯಲ್ಲಾನುಕಸಕೊಂಡು ಕಳುಹುವಿಯೇ 19 ತೀರೀತೆಂದು ತಿಳಿಯುತಲೀ ಧನ್ಯರಾದೇವೆನುತ ತೆರಳುತಿಹರೂ 20 ಮೇಲಾದ ಭಕ್ಷಗಳ ಬಡಿಸುವೋರು
--------------
ರಾಧಾಬಾಯಿ
ಭಜಿಪೇನೆ ನಿನ್ನ ಭಕುತಿಯಿತ್ತು ಪೊರೆ ಎಮ್ಮಾ ಪ ಭಾರ ನಿನ್ನದು ಭರತರಾಯನ ಪ್ರೀತಿ ವಿಷಯಳೆ ಅ.ಪ. ಬಂದ ಕಾರ್ಯವಾಗುವಂತೆ ಮಾಡೆನಿನ್ನ ದ್ವಂದ್ವಕೆ ನಮಿಪೆ ಅನ್ಯರ ಬೇಡೇಬನ್ನ ಬಡುತಿಹ ಧಮ್ಮ ಭಕುತನ ನೋಡೆ ಸುಜ್ಞಾನವಿತ್ತು ಕರಪಿಡಿದು ಕಾಪಾಡೆ 1 ತರಳನ ಮತಿಯನ್ನು ಸರಳಮಾಡಿ ಉರುಳಿಸು ಸುಧೆಯಾಂಬುಧಿಯೊಳಗೆನ್ನ ಗರಳವಾಗಿದೆ ಮನವೆಲ್ಲಾ...ಪಾಶಾದಿ ಸುತ್ತಿ ಇನ್ನು ಅರಳಿಸಿದೆ ಮೋಹಸತಿಯೊಡನೆ ಪಾದಾ 2 ದಾಸಾನಿಗೆ ನಿನ್ನ ದಾಸನಾಗುವದೆಂಬೊ ಆಶಾಪುಟ್ಟಿದ್ದಕ್ಕೆ ದಾಸನ ಮಾಡಿಕೊ ಉದಾಶಿಸದೆ ಏಸು ಮಾತುಗಳಾಡಿದರೂ ಕಾಸು ಬಾಳದು ಸಾಸಿರ ಮಾತಿಗೆ ಒಂದೇ ತಂದೆವರದಗೋಪಾಲವಿಠ್ಠಲನತೋರೆ 3
--------------
ತಂದೆವರದಗೋಪಾಲವಿಠಲರು
ಭಜಿಸಿ ಧನ್ಯನಾದೆ ನಾನು ಭುಜಗಶಯನನಂಘ್ರಿಯನ್ನು ಪ ಕುಸುಮ ತರಲು ಸರಸಿಧುಮುಕಿ ಮೊಸಳೆಬಾಯಿಗೆ ಸಿಲುಕಿ ಕರಿಯು ಕಂಟಕ ಗೆಲಿದು ಅಸಮಸೌಖ್ಯ ಪೊಂದಿದ್ದು ಕೇಳಿ 1 ಪಾಪಿ ಕುರುಪನೋಲಗದಲ್ಲಿ ದ್ರೌಪದಿಗೊದಗಿಬರಲು ಭಂಗ ಆಪತ್ತು ಗೆಲಿದಳೆಂಬುದ ಕೇಳಿ 2 ಇಳೆಯೊಳ್ಪತಿಯ ಶಾಪದಿಂದ ಶಿಲೆಯ ರೂಪದಿ ಬಿದ್ದ ಯುವತಿ ಗೊಲಿದು ಪಾವನಾಂಗಿಯೆನಿಸಿ ಕುಲಕೆ ತಂದ ಸುದ್ದಿ ಕೇಳಿ 3 ತ್ಯಜಿಸಿ ತನ್ನ ಬ್ರಹ್ಮಕುಲವ ಕುಜಕುಲದ ನಾರಿಗೆ ಕೆಟ್ಟ ಅಜಮಿಳನ ಅಂತ್ಯಕ್ಕೆ ಒದಗಿ ನಿಜಪದವಿ ನೀಡಿದ್ದು ಕೇಳಿ 4 ಅಂಬುಧಿನಿಲಯ ಅಸಮ ಮಹಿಮ ಕಂಬುಕಂಧರಮಿತ್ರ ಭಕುತ ಬೆಂಬಲ ಶ್ರೀರಾಮ ಪ್ರಭುವೆ ನಿನ್ನ ನಂಬಿದವರ ಸಂಭ್ರಮ ಕೇಳಿ 5
--------------
ರಾಮದಾಸರು
ಭಜಿಸಿದ್ಯಾ ಈ ಭಾಗ್ಯನಿಧಿಯಾ ನೋಡು ಸುಜನರ ಹೃದಯ ಪಂ ರಜತಮೋ ದೂರನ್ನ ಪ ಮನ ಸೋಲಿಸುವ ಲಲಾಟ ಫಣಿ ನಮ್ಮನು ನೋಡುವ ವಾರೆ ನೋಟಾ ಹಾಹಾ ಮಕರ ಕುಂಡಲ ಕರ್ಣ ಕದಪು ಆವಿನ ಸೋಲಿಸೆ ನಿತ್ಯಾ 1 ಭೃಂಗ ಕುಂತಳ ಕೇಶಾ ಪುಬ್ಬು ಅಂಗಜ ಚಾಪಾ ವಿಲಾಸ ಉ ತ್ತುಂಗ ಚಂಪಕ ಕೋಶಾ ನಾಸಾರಸಾ ರಂಗುದುಟಿಯ ಮಂದಹಾಸಾ ಹಾಹಾ ತಿಂಗಳ ಎಳೆ ಬೆಳ ದಿಂಗಳಾ ಮೀರೆ ಭೂ ಮಂಗಳಾಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳ ವೀಳ್ಯೆ ಕರ್ಪುರಾ ವಿಟ್ಟಾ ಜಲಧಿ ಗಂಭೀರಾ ದಂತ ಪರಿಪಙË್ತ ಸಮ ವಿಸ್ತಾರ ಹಾಹಾ ಮಿರುಗುವಾನಂತ ಚಂ ಚರಿಸುವ ಚತುರನ್ನ 3 ಪನ್ನೇರು ಸಂಪಿಗೆ ಪೊಂಗೇ ಜಾಜಿ ಇರುವಂತಿಗೆ | ಹಾಹಾ | ಮಕರಂದಾ ಮಾರಂದೋದಕ ಸುರಿಯಲಿಂದು4 ನಿಡಿದೋಳು ಕಕುಭುಜಾ ಕೊರಳಾ ಸ್ಕಂಧಾ ಮಣಿ ಹರಳಾ | ಹಾಹಾ| ಒಡನೆ ತಾಯಿತ ಕೀರ್ತಿ ವಡಿವೇಲಿ ಮೆರೆವನ್ನ 5 ಸುರವಿ ಮಯೂಖಾ ಮೇಲು ಧರಿಸಿದ ಚಕ್ರಾದಿ ಶಂಖಾ | ಹಾಹಾ | ಕೌಸ್ತುಭ ಮಣಿ ಸಿರಿವತ್ಸ ವನಮಾಲಾ ಉರವೈಜಯಂತಿ ಮಂದಾರ ಹೀರ ಹಾರನ್ನ6 ಮುತ್ತು ವೈಢೂರ್ಯ ಪ್ರವಳಾ ಪಚ್ಚ್ಚೆ ಕೆತ್ತಿದ ಪದಕ ನ್ಯಾವಳಾ ಸ್ತುತಿಪ ಜನಕೆ ಜೀವಾಳಾ | ಹಾಹಾ | ಪ್ರತ್ಯೇಕವಾಗಿ ತೂಗುತಿಹ ಸರಗಳು ತತ್ತುಲಸಿಧಾಮ ಚಿತ್ರವಾಗಿರೆ ಬಲು 7 ನಖ ಚಂದನಾ ಅಗರಾ ಪಚ್ಚೆ ಘನ ಪರಿಮಳ ಗಂಧ ಸಾರಾ | ಹಾಹಾ | ತನುವಿಗೆ ತನುವು ಲೇಪನವಾದಾ ಸೊಗಸು ವಾ ಸನೆ ಸುತ್ತ ಘಮಘಮ ತನರು ಹಾವಳಿ ತಿಳಿ 8 ತ್ರಿವಳಿ ಉಪಗೂಢ ಜಠರಾ ಅಖಿಳಾವನಿ ಧರಿಸಿದ ಧೀರಾ ನಾಭಿ ಕುಸುಮ ಮೃಗ ದೇವ ಉಡಿ ಉಡದಾರಾ | ಹಾಹಾ | ಭವಕಿಂಕಿಣಿ ತಳಲಾವಿ ವಸನ ಬಿರು ತೊಡರು ದೈತ್ಯಾವಳಿ ಹರನನ್ನಾ 9 ಊರು ಜಾನು ಜಂಘೆ ಗುಲ್ಫಾ ವಿಚಾರಿಸೆ ಕ್ರಮಾತು ಅಲ್ಪಾ ತನ್ನ ಸಂಕಲ್ಪಾ | ಹಾಹಾ| ವಾರಣಾ ಕರದಂತೆ ಹಾರೈಸುಯಿಂತು ನೂ ಚಾರು ಚರಣ ಪೆಂಡೆ10 ನಖ ವಜ್ರಾಂಕುಶ ಚಕ್ರ ಸುಧಿಯಾ ಸುರಿವ ಪೀಠ ಸರಸಾ | ಹಾಹಾ | ತ್ರಿದಶನಾಯಕ ಶಿವ ವಿಧಿಗಳ ಮುಕುಟ ಪಾದದಲಿ ಸಮ್ಮರ್ದವಾದುದು ನೋಡಿ ತರುವಾಯಾ 11 ದಹಿಸುವ ಪಾದಾ ಕಾಮ ಕಾನನ ದಹಿಸುವ ಪಾದಾ | ಹಾಹಾ | ಅನಂತ ದಿನಕ್ಕೊಮ್ಮೆ ನೀನೇ ಗತಿಯೆಂದಾ ಮಾನವಗೆ ಬಂದು ಕಾಣಿಸಿಕೊಂಬನ್ನ12 ಅಪದಕ್ಷ ಸಾರಾಧ್ಯಕ್ಷ ಸರ್ವವ್ಯಾಪಕ ಕರುಣಿಕಟಾಕ್ಷ ಜಾಗ್ರತ್ ಸ್ವಪ್ನದಲ್ಲಿ ಪ್ರಾಜ್ಞಾದಕ್ಷ ನಿಜ ಆಪನ್ನರಿಗೆ ದಾವಾ ವೃಕ್ಷ | ಹಾಹಾ | ರೂಪ ರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ರತುನ ಮೌಳಿಪರಿಯಂತರಾ13 ಸಂಪಾದಿಸು ಜ್ಞಾನಾ ಭಕ್ತಿ ಕೊಂಡಾಡು ಮುನ್ನಿನಾ | ಹಾಹಾ | ಬಂಧನ ಹರಿಸಿ ಆನಂದವ ಕೊಡುವ ಮು ಕುಂದ ಅನಿಮಿತ್ತ ಬಂಧು ವೆಂಕಟನ್ನ 14 ನಿತ್ಯ ಭಜಿಸುವ ಜನರಿಗೆ ಶೀಲಾ ಪುಣ್ಯ ನಿಜರೊಳಗಿಡುವ ಈ ಕೂಲಾ | ಹಾಹಾ | ವ್ರಜದಲಿ ಪುಟ್ಟಿದಾ ಸುಜನಾಂಬುಧಿ ಸೋಮ ವಿಜಯವಿಠ್ಠಲರೇಯಾ ಗಜರಾಜವರದನ್ನಾ 15
--------------
ವಿಜಯದಾಸ
ಭಂಡನಾದೆ ಸಂಸಾರಕೊಂಡದೊಳಗೆ ಬಿದ್ದು ಕಂಡುಕಾಣದಂತಿರುವರೇ ಪುಂಡರೀಕನಯನ ಪ ಅಶÀನ ವಸನಕ್ಕಾಗಿ ದೆಸೆಗೆಟ್ಟು ಬಾಯ್ಬಿಡುತ ಅಸುವ ಕರದೊಳ್ಪಿಡಿದು ವಸುಧೆಯ ಜನರ ಬಸವಳಿದು ಬೇಡಲು ಕಣ್ಣೆಸಿದು ಬೈಯಲು ತಲೆಬಾ ಗಿಸಿಕೊಂಡು ನಿಂದೆ ಹರಿ ಉಸುರಲಳವಲ್ಲ 1 ರೊಕ್ಕದ ಆಸೆಗಾಗಿಕ್ಕೆಲದ ಜನರನ್ನು ತರ್ಕಿಸದೆ ದೈನ್ಯದಿಂ ಚಿಕ್ಕಮಗ ನಾ ಎನುತ ಫಕ್ಕನೆ ಕೈತಾಳನಿಕ್ಕುವರು ನಗಲು ಮಹ ದು:ಖದಿಂ ತಿರುಗಿದೆನು ಬಿಕ್ಕಿಬಿಕ್ಕಳುತ 2 ಯರ ಮೋಹಿಸಿ ದಂಡಿಸಿದೆ ಮನೆಸತಿಯ ಕಂಡವರು ತಿದ್ದಿದರು ಚಂಡಿತನವಿಡದೆ ಕಂಡವರ ಅರ್ಥವನು ಮನೆಸೇರಿಸಿ ಬಂಡೆದ್ದು ಜನರೊಳಗೆ ಮಂಡೆಯೆತ್ತದೆಹೋದೆ 3 ತಪದಿಂದ ಹರಿಪಾದ ಜಪಿಸುವುದ ಮರೆದು ನಾ ಕೃಪಣತ್ವಜನಸೇವೆ ಅಪರೂಪಗೈದೆ ಚಪಲತ್ವತನದಿಂದ ಅಪಹರಿಸಿ ಪರರರ್ಥ ಸುಪಥಕ್ಕೆ ದೂರಾಗಿ ಅಪರಾಧಿಯಾದೆ4 ಕದ್ದು ತಿಂದೆ ನೆರಹೊರೆಯ ಬಿದ್ದೆ ದುರ್ಬವಣೆಯೊಳು ಬದ್ಧನಾಗಿ ಧರೆಮೇಲೆ ಹದ್ದಿನಂತೆ ಬಾಳ್ದೆ ತಿದ್ದಿ ನೀ ಎನ್ನ ತಪ್ಪುಬುದ್ಧಿಯನು ಕಲಿಸೆನ್ನೊ ಳಿದ್ದು ಪೊರೆ ದಯದಿಂದ ಮುದ್ದು ಶ್ರೀರಾಮ 5
--------------
ರಾಮದಾಸರು
ಭಂಡನೆಂದು ಎನ್ನ ನೀ ತಿಳಿಯೋ ಅಖಿಲಾಂಡನಾಯಕ ಪ ತಂಡ ತಂಡದಿ ಒದಗಿ ಬರುತಿಹ ಗಂಡ ಸಂತತಿ ನಾ ಕಂಡು ಬೆದರುವ ಷಂಡನಲ್ಲವೊ ಪುಂಡರೀಕ ಲೋಚನನೇ ದೊಡ್ಡ 1 ಮಂದ ಮಾನವರಿಂದ ನುಡಿಸುವ ನಿಂದೆ ವಚನಗಳಿಂದ ಮನ ನೊಂದರೂ ಗೋವಿಂದ ನಿನ್ನನು ಬಂಧುವೆಂದು ನಂದದಿ ಪೊಗಳುವ 2 ದ್ವೇಷಿ ಜನಗಳೂ ರೋಷದಿಂದಲಿ ಶೋಷಿಸಿದರೂ ನೀ ಕಮ ಲೇಶ ಎನ್ನನು ಪೋಷಿಸುವನೆಂದು ಘೋಷಿಸುವೆನೋ ಶೇಷಶಯನನೇ 3 ಹೀನ ಮಾನವರಿಂದ ನೀ ಅವಮಾನ ನೀಡಿದರೂ ವರ ಜಾನಕೀಶನೆ ನೀನು ಎನ್ನಯ ಮಾನರಕ್ಷಕನೆಂದು ಅರಿಯುವ 4 ಸಣ್ಣ ಮಾನವರಿಂದ ಎನ್ನಯ ಸಕಲ ವೈಭವವು ದೊಡ್ಡ ಸೊನ್ನೆಯಾದರು ನಿನ್ನ ಪಾದಗ ಳನ್ನು ಬಿಡೆನೊ ಪ್ರಸನ್ನ ಮೂರುತಿ 5
--------------
ವಿದ್ಯಾಪ್ರಸನ್ನತೀರ್ಥರು
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭಯ ನಿವಾರಣವು ಶ್ರೀಗುರು ದಿವ್ಯನಾಮ ನಿಮ್ಮ ನಾಮ ಧ್ರುವ ಕ್ಲೇಶಪಾಶವು ಕತ್ತರಿಸಿ ದೋಷನಾಶವನು ಗೈಸಿ ಪೋಷಿಸುವ ಕೇಶವ ನಿಮ್ಮ ನಾಮ 1 ನರಕ ಘೋರದ ಘಟವೆಂಬ ನರಜನ್ಮದುರ್ಘಟ ತಾರಿಸುವ ನಾರಾಯಣ ನಿಮ್ಮ ನಾಮ 2 ಮದಮತ್ಸರವ ಜರಿಸಿ ಭೇದಾಭೇದವು ಹರಿಸಿ ಮಾಧವ ನಿಮ್ಮ ನಾಮ 3 ಭವ ಹಿಂಗಿಸುವ ಗೋವಿಂದ ನಿಮ್ಮ ನಾಮ 4 ಇಷ್ಟಾರ್ಥಗಳ ಕೊಟ್ಟು ಕಷ್ಟಾರ್ಥ ಪರಿಹರಿಸಿ ದೃಷ್ಟಾಂತದಲಿ ಹೊರೆವ ವಿಷ್ಣು ನಿಮ್ಮ ನಾಮ 5 ಮೊದಲು ಮೂವಿಧಿಯಗಳು ಜರಿಸಿ ಸದಮಲ ಪುಣ್ಯ ಪದವೀವ ಮಧುಸೂದನ ನಿಮ್ಮ ನಾಮ 6 ತ್ರಿವಿಧಾಧ್ಯಾತ್ಮ ಸ್ಥಿತಿಗತಿಯ ಈವ ಶಾಸ್ತ್ರಗಳನರಿಸಿ ಭಾವಭಕ್ತೀವ ತ್ರಿವಿಕ್ರಮ ನಿಮ್ಮ ನಾಮ 7 ವರ್ಮಧರ್ಮವನರಿಸಿ ಕರ್ಮಪಾಶವ ಹರಿಸಿ ಜನ್ಮ ತಾರಿಸುವ ವಾಮನ ನಿಮ್ಮ ನಾಮ 8 ಶ್ರೀಕರವನಿತ್ತು ಸಿರಿಸಕಲ ಸೌಭಾಗ್ಯದಲಿ ಸೃಷ್ಟಿಯೊಳು ಹೊರೆವ ಶ್ರೀಧರ ನಿಮ್ಮ ನಾಮ 9 ಹರಿಸಿ ಸಂದೇಹ ಸಂಕಲ್ಪ ಬಾಧೆಯಗಳು ಹರುಷ ಗತಿನೀವ ಹೃಷೀಕೇಶ ನಿಮ್ಮ ನಾಮ 10 ಪಾತಕ ಹರಿಸಿ ಪದ್ಮನಾಭ ನಿಮ್ಮ ನಾಮ 11 ದುರಿತ ವಿಧ್ವಂಸನಿಯ ಮಾಡಿ ಧರೆಯೊಳು ದ್ಧರಿಸುವ ದಾಮೋದರ ನಿಮ್ಮ ನಾಮ 12 ಸಕಲ ಪದವಿತ್ತ ಸುಖಸಾಧನವ ತೋರುತಿಹ್ಯ ಅಖಿಳದೊಳು ಸಂಕುರುಷಣ ನಿಮ್ಮ ನಾಮ 13 ವಾಸನೆಯು ಪೂರಿಸುತ ಭಾಷೆ ಪಾಲಿಸುತಿಹ ಲೇಸಾಗಿ ಶ್ರೀವಾಸುದೇವ ನಿಮ್ಮ ನಾಮ 14 ಪ್ರಾಣಪ್ರಿಯವಾಗಿ ಪ್ರಸನ್ನವಾಗುವ ಪೂರ್ಣ ಪ್ರತ್ಯಕ್ಷವಿದು ಪ್ರದ್ಯುಮ್ನ ನಿಮ್ಮ ನಾಮ 15 ಅನುಮಾನ ಪರಿಹರಿಸಿ ಅನುಭವಾಮೃತ ಸುರಿಸಿ ಅನಿರುದ್ಧ ನಿಮ್ಮ ನಾಮ 16 ಪೂರ್ವಕರ್ಮವ ಹರಿಸಿ ಪೂರ್ಣಕಳೆಯೊಳು ಬೆರೆಸಿ ಪುಣ್ಯಪದವೀವ ಪುರುಷೋತ್ತಮ ನಿಮ್ಮ ನಾಮ 17 ಅಧ್ಯಾತ್ಮ ಸುಖವರಿಸಿ ಸಿದ್ಧಾಂತವನು ತೋರಿ ಅಧ್ಯಕ್ಷವಾಗುವಾಧೋಕ್ಷಜ ನಿಮ್ಮ ನಾಮ 18 ನರಜನ್ಮವನು ಹರಿಸಿ ಹರಿಭಕ್ತಿಯೊಳು ಬೆರೆಸಿ ಅರುವು ಕುರ್ಹುವ್ಹಿಡಿದ ನರಸಿಂಹ ನಿಮ್ಮ ನಾಮ 19 ಅರ್ಚನೆಯು ಪ್ರಾರ್ಥನೆಯು ಪರಮಪೂಜೆಯನರಿಸಿ ಅಚ್ಯುತ ನಿಮ್ಮ ನಾಮ 20 ಜನನ ಮರಣವನಳಿಸಿ ತನುಮದೊಳು ಬೆರಿಸಿ ಜನುಮ ಹರಿಸುವ ಜನಾರ್ದನ ನಿಮ್ಮ ನಾಮ21 ಉಪಮೆಯ ರಹಿತ ವಸ್ತುವುಪಾಯದಲಿ ತೋರಿ ಕೃಪೆಯಿಂದ ಹೊರೆವ ಉಪೇಂದ್ರ ನಿಮ್ಮ ನಾಮ22 ಹರಿಸಿ ಅಹಂಭಾವ ಅರಿಸಿ ಅನುಭವ ಪೂರ್ಣ ಸುರಿಸುವ ಸುಖ ಶ್ರೀಹರಿ ನಿಮ್ಮ ನಾಮ 23 ಕರಕಮಲವಿಟ್ಟು ಶಿರದಲಿ ಸದ್ಗೈಸುತಿಹ ಕರುಣಾಳು ಮೂರುತಿ ಶ್ರೀಕೃಷ್ಣ ನಿಮ್ಮ ನಾಮ 24 ಸಾರ ಸಂಧ್ಯಾಯನದಿ ಮಹಿಪತಿಯ ಹೊರೆವ ಶ್ರೀಗುರು ನಿಮ್ಮ ನಾಮ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಯ ಹಾರಿಣೇ ದಯಾ ಕರುಣೀ ಪ ಜಯಲಕ್ಷ್ಮಿ ನಿನ್ನ ಪದದಿ ಜಯವು ಕೋರಲು ನಿ ರ್ದಯವೇನೆ ಜನನಿ ಅ.ಪ ಏನು ನೀಡಿದಿ ತಾಯಿ ಧ್ಯಾನಿಸಿ ಬೇಡುವಗೆ ಹೀನ ಅಪಜಯವಿದೇನು ಕಾರಣವು 1 ಪರಮಪರತರ ಕಲ್ಪತರುವಿನೊಳ್ಸುಖ ಬಯಸೆ ಪರಮ ಪರಿತಾಪವು ಬರುವುದೇನಮ್ಮ 2 ಸಿರಿಯರಾಮನ ಪ್ರಿಯೆ ಪರಮಮಂಗಳೆ ನಿನ್ನ ಪರಿ ಭಂಗ ಕಳೆಯೆ 3
--------------
ರಾಮದಾಸರು
ಭಯವಿಲ್ಲೋ ಭಯವಿಲ್ಲೋ ಭಯಹರ ನರಸಿಂಗನಡಿಯ ದಾಸರಿಗೆ ಪ ವೃಶ್ಚಿಕ ಮುಟ್ಟಲು ಬಾಧೆಯೆ ಇಲ್ಲ ತಕ್ಷ ಕಚ್ಚಲು ವಿಷವಂಟೋಣಿಲ್ಲ ಅಚ್ಯುತಾನಂತನ ಹೆಚ್ಚಿನಡಿದಾವರೆ ಮುಚ್ಚಿಭಜಿಪ ಮಹ ನಿಶ್ಚಲಚಿತ್ತರಿಗೆ 1 ಕಳ್ಳರು ಮುತ್ತಲು ಸುಲಕೊಂಬೋಣಿಲ್ಲ ದಳ್ಳುರಿ ಹತ್ತಲು ಸುಡುವ ಶಕ್ತಿಲ್ಲ ಪಾದ ಉಲ್ಲಾಸ ಮನದಿಂದ ನಿಲ್ಲದೆ ಭಜಿಪರ್ಗೆ ಎಳ್ಳಷ್ಟಾದರು 2 ಹುಲಿ ಕರಡಿ ಬದು ನುಂಗುವ ತ್ರಾಣಿಲ್ಲ ಬಲು ಭೂತ ಬೇತಾಳ ಎದುರೆ ಇಲ್ಲ ಮಲಿನಹರಣ ಕೃಪಾನಿಲಯ ಭಕ್ತಜನ ಸುಲಭನೆಂದೊದರುತ ನಲಿವ ನಿರ್ಮಲರಿಗೆ 3 ಭೂಪತಿಗಳ ಭಯ ರೋಮಕೆ ಇಲ್ಲ ಪಾಪತಾಪಗಳ ಲೇಪವೆ ಇಲ್ಲ ಆ ಪರಬ್ರಹ್ಮ ಜಗದ್ವ್ಯಾಪಕನನುದಿನ ಗೌಪ್ಯದಾರಾಧಿಸುವ ಪಾಪಲೋಪರಿಗೆ 4 ಏಸು ಕಷ್ಟಬಂದರಾಯಾಸವಿಲ್ಲ ನಾಶ ಮೃತ್ಯು ಗಾಳಿಸೊಂಕೋಣಿಲ್ಲ ಹೇಸಿ ದುರ್ಭವದ ವಾಸನಳಿದ ಮಹ ಶ್ರೀಶ ಶ್ರೀರಾಮನ ದಾಸದಾಸರಿಗೆ 5
--------------
ರಾಮದಾಸರು
ಭರಬರನೆ ಬಾಜಾರಕೆ ನಾ ಬಂದೆನಯ್ಯ ಚಿದಾನಂದನ ಮರೆಯಲಿಕೆ ಪ ಐವರು ಗೌಡರು ಕಟ್ಟಿದ ಪೇಟೆ ಆ ಪೇಟೆಗೆಐದು ನಾಲ್ಕು ಬಾಗಿಲುಗಳುಐದು ಮಂದಿ ಸೆಟ್ಟರು ಸೇರಿಹರು ಆವರಲ್ಲಿಯೆಐದು ಮಂದಿ ಚಲವಾದಿಗಳು1 ಭಾರ ನೇಮಲ್ಲಿದೆ 2 ತಡುಗರೆಂಬವಾಲೆ ಶೆಟ್ಟಿಗಳೆ ಅಲ್ಲಿಗಲ್ಲಿಗೆಪಡುವಲ ಕೋರಿ ಶೆಟ್ಟಿಗಳೇಕಡುಕರ್ಮಿ ಕೋಮಟಿ ಶೆಟ್ಟಿಗಳೇ ಬಾಯಿ ಘನವಾಗೆಬಡಬಡಿಪ ಪಟ್ಟಣ ಶೆಟ್ಟಿ 3 ಪಾಪವೆಂಬ ವಸ್ತ್ರದಂಗಡಿಯೇ ನಾ ನೋಡಲಾಗಿತಾಪವೆಂಬ ಜವಳಿ ಅಂಗಡಿಯೆಕೋಪವೆಂಬ ಕುಪ್ಪಸ ದಂಗಡಿಯೇಒಪ್ಪುತಲಿರೆ ಕಾಪಥವೆಂಬ ಸಕಲಾತ್ಮಂಗಡಿಯೇ 4 ಚಿ, ಛೀ ಎಂಬ ಚಿಕ್ಕ ತಕ್ಕಡ ಗಂಡಿಯೆ ನಾ ಬರುತಿರೆನಾಚಿಕೆಯಿಲ್ಲದ ಕಂಚಿನಂಗಡಿಯೇಚು ಛೂ ಎಂಬ ಚೀನಿಯಂಗಡಿಯೇ ಯಡಬಲದಲ್ಲಿಕೋಚು ಮಾಡೋ ಉದ್ದಿನಂಗಡಿಯೇ 5 ತನು ವ್ಯಸನವೆಂಬ ತಾಡಪತ್ರಿ ತೋರಲಾಗಿಮನವ್ಯಸನವೆಂಬ ಕಿಂಕಾಪುಧನವ್ಯಸನವೆಂಬೋ ಮಖಮಲ್ಲು ನಾ ಬೆರಗಾಗೆಜನ ವ್ಯಸನವೆಂಬೋ ಜರತಾರಿಯೇ6 ನಾನಾ ವಿಷಯ ವೆಂಬೋ ಉತ್ತತ್ತಿ ಅಲ್ಲಿದ್ದಾವೆಜ್ಞಾನಶೂನ್ಯ ಜಾಜಿಕಾಯಿಮಾನ ಹಾನಿಯೆಂಬೋ ಜಾಪತ್ರಿನಾನು ನನ್ನದು ಎಂಬ ಭಂಗಿ ಸೊಪ್ಪು7 ಜೀವನೆಂಬ ಹೊಗೆಯ ತೊಪ್ಪಲೇ ಹಿರಿಯವಾದನೋವು ಕಷ್ಟಗಳೆಂಬ ಗಾಂಜಿಯೇಸಾವು ಬದುಕು ಎಂದೆಂಬ ಮಾಲೆಗಳೇ ಮಾರುತಲಿತ್ತೋನಾನು ನೀನು ಎಂಬ ಚಿಲುಮೆಗಳೋ 8 ಭೇದವೆಂಬ ನಿಲುವುಗನ್ನಡಿಯೆ ಒಳಗಿದ್ದಾವೆ ವಾದವೆಂಬವಜ್ರದಹರಳೇ ಹಾದಿ ಕಾಣೆನೆಂಬ ಹವಳದ ರಾಶಿಯೇ ಹರಡಿದ್ದಾವೆಗಾದೆ ಎಂಬ ಸೂಜಿದಬ್ಬಣವೇ 9 ಪ್ರಾರಬ್ಧವೆಂಬೋ ಉಂಬತಳಿಗೆಯೇ ಪಸರಿಸುತಿರುವಘೋರ ತಾಪತ್ರಯದ ತಟ್ಟೆಯೇನಾರಿ ನೋಟೆಂಬ ಕಠಾರಿಯೇ ನಿಲಿಸಿದ್ದಾವೆಸೂರಿಯ ಸುಕೃತವೆಂಬೋ ತುಬಾಕಿಯೇ10 ಪರಿಣಾಮಿಲ್ಲದ ಪಡವಲಕಾಯಿ ದಾರಿಯಲಿದಾರಿಯಿಲ್ಲದ ದೊಡ್ಡಿಲಕಾಯಿಅರಿವಿಲ್ಲದ ಕುಂಬಳಕಾಯಿ ಹಾಗಿದ್ದಾವೆಮರುಳು ಎಂಬ ಮಾವಿನಕಾಯಿ11 ಮಂಠ ಎಂಬೋ ಮೆಂತ್ಯ ಪಲ್ಲಯೇ ಮಾಸಲವಿತ್ತೆಕಂಟಕ ಎಂಬೋ ಹರಿವೆ ಪಲ್ಲೆಯೇಕೊಂಟೆಯೆಂಬೊ ಬಸಲೆ ಪಲ್ಲೆಯೇ ತೀವ್ರದಲಿತ್ತೆಶುಂಠವೆಂಬೋ ಬೆರಕೆ ಪಲ್ಲೆಯೇ 12 ಬಂಗಾರವೆಂಬೋ ಬಿಳಿಯ ಜೋಳವೇ ಬೆಡಗಿಲಿರೇರಂಗು ಎಂಬೋ ರಾಗಿ ರಾಶಿಯೇಸಂಗವೆಂಬೋ ಸಣ್ಣಕ್ಕಿಯೇ ಸಾರಿದ್ದಾವೆಹಿಂಗದೀಪರಿ ದಿವಾರಾತ್ರಿಯೇ 13 ಸಂಕಲ್ಪೆಂಬೋ ಧಾರಣೆ ಹಚ್ಚಿರೋ ಸಂಗಾತಲೆವಿಕಲ್ಪೆಂಬೋ ಧಾರಣೆಯಿಳಿವುದೇಸುಖದುಃಖವೆಂಬೋ ಮಾರಾಟವೇ ಸಾಗಿರಲಾಗಿಕಾಕಧಾವಂತರ ಸಂಧಾನವೇ 14 ಕಾಮಕ್ರೋಧಗಳೆಂಬ ಕಳ್ಳರೇ ಕಾವಲಿರ್ದುರಾಮನೆಂಬ ಸ್ಮರಣೆ ಕದ್ದಿಹರೋಕಾಮುಕರೆ ತಿರುಗಾಡುವರೆಲ್ಲ ಕಾಣದ ಹಾಗೆಆ ಮಹಾಜ್ಞಾನವ ಸುಲಿದಿಹರೋ15 ಬರಬಾರದ ನಾನು ಬಂದೆನೇ ಬಾಜಾರ ಬಿಟ್ಟುಹೊರಡುವ ತೆರನ ಕಾಣೆನೇಕರುಣಿಯಾಗಿ ಕೈ ವಿಡಿವರಾರೋಕರುಣಾಕರ ಹರ ವಿಶ್ವೇಶನೇ ಬಲ್ಲ 16 ಚಿಂತೆ ನಾನು ಮಾಡುತಿರಲಾಗಿ ಚಿದಾನಂದಚಿಂತೆ ಬೇಡೆಂದು ಮುಂದೆ ನಿಂದಿಹನುಚಿಂತೆ ಬಿಡು ಕಾವಲಿಹೆನೆಂದು ಚಿದ್ರೂಪ ತೋರಿಎಂತು ಪೇಳಲಿ ಎನ್ನೆದುರು ನಿಂದಿಹನೆ17
--------------
ಚಿದಾನಂದ ಅವಧೂತರು
ಭವ - ಸಂಕಟ ಕಳೆ - ವೆಂಕಟೇಶ ||ಅ|| ಪಂಕ ಸಿರಿ ವೆಂಕಟೇಶ ಅ.ಪ. ಮಹ ವೇದಗಳನು ಕದ್ದ ದೈತ್ಯನ ಕೊಂದೆ ವೆಂಕಟೇಶಮಹ ಮೀನನಾಗಿ ನೀ ಸತ್ಯವ್ರತಗೆ ಒಲಿದೆ ವೆಂಕಟೇಶ 1 ಕೂರ್ಮ ನೀನಾಗುತ - ವೆಂಕಟೇಶಮಂದರಗಿರಿ ಪೊತ್ತು ಭಕ್ತರ ಸಲಹಿದೆ ವೆಂಕಟೇಶ 2 ಮತ್ತರಾದ ಮಧುಕೈಟಭರ - ಕೊಂದೆ ವೆಂಕಟೇಶಮತ್ತೆ ಭೂ ಚಾಪೆಯ ಮಾಡಿದವನ ಕೊಂದೆ ವೆಂಕಟೇಶ 3 ಕಶಿಪು ಬಾಧೆ ಕಳೆಯಲು - ತರಳಗೆ ವೆಂಕಟೇಶಕ್ಷಣದಿ ಕಂಭದಿ ಬಂದು ದುರುಳನ ಸವರಿದೆ ವೆಂಕಟೇಶ 4 ಮೂರು ಪಾದವ ಬೇಡಿ - ಬಲಿಯ ಭಂಜಿಸಿದೆ ವೆಂಕಟೇಶಪಾರಗಾಣದ ಮಹಿಮೆ ಬಾಗಿಲ ಕಾಯ್ದೆ ವೆಂಕಟೇಶ 5 ಹಂಚಿ ಮೆರೆದೆ ವೆಂಕಟೇಶ 6 ಮಡದಿಯ ಕದ್ದೊಯ್ದ ದೈತ್ಯನನ್ನಳಿದೆ ವೆಂಕಟೇಶಧೃಢ ಭಕುತಗೆ ಲಂಕೆಯ ಪಟ್ಟಣವಿತ್ತೆ ವೆಂಕಟೇಶ 7 ಗೋಪಿ ಜನರ ಪ್ರಿಯ | ಸುಪರ್ಣವರವಾಹ ವೆಂಕಟೇಶಪಾಪಿ ಕೌರವ ಕುಲಹರ ಧರ್ಮ ಸ್ಥಾಪಿ ವೆಂಕಟೇಶ 8 ಬೆತ್ತಲೆ ನೀ ನಿಂತು ಕುತ್ಸಿತ ಅಸುರರಸದೆದ್ಯೋ ವೆಂಕಟೇಶಕುತ್ಸಿತ ಅಸುರರ ಮೋಹಿಸುತಳಿದೆಯೊ ವೆಂಕಟೇಶ 9 ತುರಗನೇರಿ ಕಲ್ಕಿ ಎನಿಸಿಕೊಂಡೆಯೊ ವೆಂಕಟೇಶಉರಗಾದ್ರಿ ವಾಸ ಗುರು ಗೋವಿಂದ ವಿಠಲ ವೆಂಕಟೇಶ 10
--------------
ಗುರುಗೋವಿಂದವಿಠಲರು
ಭವ ಎನಗೆ ಹರಿುತುಸದಯ ಗೋಪಾಲಾರ್ಯನ ಪದ ಕರುಣವಾಯ್ತೆನಗೆ ಪಮೊದಲು ಬಹು ಜನ್ಮಂಗಳಲ್ಲಿ ಮಾಡಿದ ಪುಣ್ಯಒದಗಿತೀ ಸಮಯದಲಿ ಧನ್ಯನಾದೆಸದಸದ್ವಿವೇಕ ಸಂಪತ್ತಿ ಮುಂತಾದ ಸತ್ವದ ಸಾಧನಂಗಳೊದಗಿದವೀಗಲೆನಗೆ 1ದೇವ ಋ ಪಿತೃ ಋಣಂಗಳು ತಿದ್ದಿದವು ಶುದ್ಧಭಾವನಾದೆನು ಕುಲ ಪವಿತ್ರವಾುತೆನ್ನಾಪಾವನತೆಯಾಗಿ ಜನನೀ ಜನಕರಿಗೆ ದೇವದೇವ ಪದವಾುತು ಕೃತಕತ್ಯ ನಾನಾದೆ 2ಸಕಲ ಸಂದೇಹಗಳಳಿದು ದೇಹಾತ್ಮ ಮತಿವಿಕಲವಾದುದು ನಿತ್ಯ ತೃಪ್ತಿಯಾುತುಪ್ರಕಟ ಗೋಪಾಲಾರ್ಯ ಪದವ ಸಾಕ್ಷಾತ್ಕರಿಸಿಸುಕರ ಸತ್ಯಾನಂದ ರೂಪ ನಾನಾದೆ 3
--------------
ಗೋಪಾಲಾರ್ಯರು
ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ