ಒಟ್ಟು 14277 ಕಡೆಗಳಲ್ಲಿ , 133 ದಾಸರು , 6728 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾನಿಗಳೊಳು ಪ್ರತಿಗಾಣೆನೊ ನಿನಗೆಸ ನ್ಮೌವಿ ಶ್ರೀ ಸುಶೀಲೇಂದ್ರ | ನೀನೇವೆ ಗತಿ ಎಂದ ದೀನರ ಮನೋಭೀಷ್ಟ ಸಾನುರಾಗದಿ ಕೊಡುವಿ | ಕೈಪಿಡಿಯುವಿ ಪ ಶ್ರೀಸುವೃತೀಂದ್ರ ಸುಯಮೀಂದ್ರಗಳಿಂದಲಿ ಸ | ನ್ಯಾಸತ್ವ ಸ್ವೀಕರಿಸಿ ಪತಿ ಮೂಲ | ದಾಶರಥಿಯ ಪಾದ ಲೇಸಾಗಿ ಒಲಿಸಿದೆ ನೀ | ಸುಜ್ಞಾನಿ 1 ಕರಿವರದನ ಪೂರ್ವ ಕರುಣ ಪಡೆದು ದಿವಾ ಕರನಂತೆ ರಾಜಿಸುತ | ಗುರುರಾಘವೇಣದ್ರಾಖ್ಯ | ಸುರಧೇನುವಿಗೆ ಪುಟ್ಟ ಕರುವೆನಿಸುತ ಮೆರದಿ ಭೂವಲಯದಿ 2 ಮೋದತೀರ್ಥಾಗಮ ಸಾಧು ಸಜ್ಜನರಿಂದ ಶೋಧಿಸಿ ಬಹುವಿಧಧಿ ಪಂಚಭೇದ | ಶಿಷ್ಯರಿಗೆಲ್ಲ ಬೋಧಿಸುತಲಿ ಪೊರೆದಿ ದಯಾಂಬುಧಿ 3 ಸಿಂಧುತೀರದಿ ನೆಲಸಿ ಮಂದ ಜನರಿಗೆ | ಕ ರ್ಮಂದಿ ಪವರಗಳನು | ನೀಡುವಿ ನೀನು 4 ಶ್ರೀ ಶಾಮಸುಂದರ ವಿಠಲ ವಾಸಿಸುವ | ಕಾ ಪ್ಯಾಸನ ವರಕ್ಷೇತ್ರದಿ | ದೇಶ ದೇಶದಿ ಬಂದ | ಭೂಸುರರಿಗೆ ಧನ ರಾಶಿ ಸೂರೆ ಮಾಡಿದಿ | ಸನ್ಮೋಹದದಿ 5
--------------
ಶಾಮಸುಂದರ ವಿಠಲ
ದಾಮ ಶೋಭಿತ ವಿಠಲ | ಸಾಮ ಸನ್ನುತನೇ ಪ ಪ್ರೇಮದಿಂದಿವಳ ಮನ | ಕಾಮ ಪೊರೈಸೋ ಅ.ಪ. ಯೇಸೊ ಜನ್ಮದ ಪುಣ್ಯ | ರಾಶಿ ಫಲ ಒದಗುತಲಿದಾಸತ್ವ ದೀಕ್ಷೆಯನು | ಆಶಿಸುತ್ತಿಹಳೋ |ದಾಸವರ್ಯರು ವಿಜಯ | ದಾಸರುತ್ಸವದಿ ಸಂ-ತೋಷದಲಿ ಬಿನ್ನಹವ | ಲೇಸು ಗೈದಿಹಳೋ 1 ಸಾರ ಚಾರು ಮೂರುತಿಯೇ 2 ಆನಂದ ಮುನಿ ಮತದಿ | ಸ್ವಾನುಭವ ದೀಕೆಯನುಜ್ಞಾನ ಭಕ್ತ್ಯಾದಿ ಸಂ | ಧಾನ ತಿಳಿಸುತಲೀ |ಮಾನನಿಧಿ ಕೈ ಪಿಡಿದು | ದೀನಳನು ಪೊರೆಯೆಂದುಪ್ರಾಣ ಪ್ರಾಣನೆ ಬೇಡ್ವೆ | ದೀನ ವತ್ಸಲನೇ 3 ಸಾಧನದಿ ಸತ್ವತೆಯ | ಹಾದಿಯಲ್ಲಿಹಳೀಕೆಸಾಧುಗಳ ಕಂಡು ಹೃದ | ಯಾದ್ರ್ರ ಭಾವದಲೀ |ಮೋದ ಬಡಿಸುತ ಸೇವೆ | ಶ್ರೀಧರನಿಗರ್ಪಿಪಳುಹೇ ದಯಾಂಬುಧೆ ಸಲಹೊ | ಸಾಧು ಜನ ವಂದ್ಯಾ 4 ಸರ್ವಕಾಲವು ದೇಶ | ಸರ್ವಗುಣದ್ರವ್ಯದಲಿದುರ್ವಿಭಾವ್ಯನ ವ್ಯಾಪ್ತಿ | ಸ್ಛುರಣೆಯನು ಕೊಡುತಾ |ಸರ್ವಾಂತರಾತ್ಮಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಹೃದಯ | ಗಹ್ವರದಿ ತೋರೋ 5
--------------
ಗುರುಗೋವಿಂದವಿಠಲರು
ದಾರ ಕಂದನಮ್ಮ ಕೇರಿಗೆ ಬಂದು ಗಾರುಮಾಡುವ ನೋಡಲಾರೆ ಗೋಪ್ಯಮ್ಮ ಈರೇಳು ಲೋಕದೊಡೆಯನೊ ದಾರಮ್ಮ ಪ ಪಿಡಿದಿದ್ದ ಕೊಳಲೂದುವ ಬಾಯಲಿ ಬೆಣ್ಣೆ ಕಡಗೋಲ ಪಿಡಿದಿದ್ದ ಬೆಡಗು ನೋಡಮ್ಮ ಬಿಡಿಮುತ್ತಿನ ಉಡಿದಾರವು ಉಡಿಗಂಟೆ ಮುಡಿದ ಮಲ್ಲಿಗೆ ಕುಸುಮಗಳು ನೋಡಮ್ಮ ಕುಡಿಹುಬ್ಬು ಕಡೆಗಣ್ಣನೋಟದ ಚೆಲುವ ತಾ ಹುಡುಗರಂತಾಡುವ ತುಡುಗ ತಾನಮ್ಮ 1 ಕಮಲ ನಕ್ಷತ್ರದ ಪತಿಯಂತೆ ಇಪ್ಪೊ ವಜ್ರದ ಪದಕಗಳ ನೋಡಮ್ಮ ಅರ್ಕನಂತಿರಲತಿ ಕೋಮಲಪಾದಕೆ ಶುಕ್ಲಗೆ ಮಿಗಿಲಾದ ಗುರು ಕೇಳಮ್ಮ ಕತ್ತಲೊಳಗೆ ಕಳ್ಳತನದಿಂದೋಡಾಡುತ ಕಟ್ಟಿದ ಪಂಜಿನಂತ್ಹೊಳೆವೊ ಕೇಳಮ್ಮ 2 ಕಟ್ಟಿದ ನೆಲವಿನೊಳ್ ಮಕ್ಕಳ ಮಲಗಿಸಿ ಎಷ್ಟು ಘಾತಕÀ ತಾ ಕೈಬಿಟ್ಟ ನೋಡಮ್ಮ ತೊಟ್ಟಿಲೊಳಗೆ ಕೆನೆಮೊಸರಿನ ಚಟ್ಟಿಗೆ ಇಟ್ಟು ತೂಗುತ ಮೆಲ್ಲುವನು ಕೇಳಮ್ಮ ಕಟ್ಟಿದ್ದಾಕಳ ಕಣ್ಣಿ ಬಿಚ್ಚಿ ಮೊಲೆಗೆ ಬಾಯ್ಹಚ್ಚಿ ಕ್ಷೀರವ ಸುರಿದುಂಬುವನಮ್ಮ 3 ತೋಳ ಬಾಪುರಿ ವಂಕಿ ತೋಡ್ಯ ಬಿಂದಲಿ ಚಕ್ರ- ಪಾಣಿಯಲ್ಲೊ ್ಹಳೆವೊ ಮುದ್ರಿಕೆಯ ನೋಡಮ್ಮ ಆಣಿ ಮುತ್ತಿನ ಸರ ಅರಳೆಲೆ ಪದಕವು ಕಾಲ ಕಿಂಕಿಣಿ ನಾದಗಳ ಕೇಳಮ್ಮ ತೋರ ಮುತ್ತುಗಳೋಣಿಯಲುದುರುತ ಒ- ಯ್ಯಾರದೊಲಪಿನ ಚೆದುರ್ಯಾರು ಪೇಳಮ್ಮ4 ಮನ್ಮಥನಿಗೆ ಮಿಗಿಲಾದ ಸ್ವರೂಪಲಾವಣ್ಯನೆ ನೀಲದ ವರ್ಣ ಕೇಳಮ್ಮ ಹುಣ್ಣಿಮೆ ಚಂದ್ರಮನ್ನ ಸೋಲಿಸೋಮುಖ ಇನ್ನು ಇವನÀ ಸೌಂದರ್ಯ ನೋಡಮ್ಮ ಹೆಣ್ಣು ಮಕ್ಕಳ ಸೆರಗನ್ನು ಕೈಯ್ಯಲಿ ಸುತ್ತಿ ಬೆನ್ನು ಬೆನ್ಹತ್ತಿ ತಾ ತಿರುಗುವನಮ್ಮ 5 ಚೀನಿ ಅಂಗಿಯ ಮ್ಯಾಲೆ ಚಿತ್ರದ ನಡುಕಟ್ಟಿ ಜಾರ ಜರದ ಛಾದರವ ನೋಡಮ್ಮ ಸೋಗೆ ನವಿಲು ಗಿಳಿ ಕೋಗಿಲೆ ಸ್ವರದಂತೆ ವೇಣು ಕೊಳಲ ಗಾಯನವ ಕೇಳಮ್ಮ ಮೇಘಮಂಡಲ ತಲೆತಾಕುವ ಹರಿಯದೆ ತಾ ಜಿಗಿದಾಡೋನಂಗಳದಿ ಕೇಳಮ್ಮ 6 ಎಷ್ಟು ಹೇಳಿದರೀ ಮಾತು ಮನಕೆ ನಿಜ ಹುಟ್ಟವಲ್ಲದೇನೀಗ ಬಾರೆ ಗೋಪಮ್ಮ ಬಿಟ್ಟು ಕೆಲಸ ಭೀಮೇಶಕೃಷ್ಣಗೆ ಬುದ್ಧಿ ಎಷ್ಟು ಹೇಳುವಿ ಮುಂದ್ಹೇಳಲೇಕಮ್ಮ ಸಿಟ್ಟು ಮಾಡುವರೇನೆ ಸಿರಿಪತಿ ಆಟ ನಿನ್ನ ದೃಷ್ಟಿಂದ ನೋಡೆ ನಿಜಹುಟ್ಟುವುದಮ್ಮ7
--------------
ಹರಪನಹಳ್ಳಿಭೀಮವ್ವ
ದಾರಿಗಾಣದಯ್ಯ ಕಣ್ಣಿಗೆ ದಾರಿ ತೋರಿಸಯ್ಯಾ ಪ ಪಾರುಗಾಣದ ಸಂಸಾರ ವಾರಿಧಿಯಲಿ ಪಾರುಗಾಣಿಸಯ್ಯ ಮಾರನ ಪಿತನೇ ಅ.ಪ ಯಾರಿಗೆ ಮೊರೆಯಿಡಲಾರು ಕೈಹಿಡಿವರು ಧಾರಿಣಿಯೆ ಅಂಧಕಾರವಯ್ಯ ಸಾರಸನಾಭ ನೀ ಕಾರುಣ್ಯಾಮೃತ ಬೀರದಿದ್ದರೆ ಎನ್ನ ಗತಿಏನೋ ರಂಗ1 ಸತಿಸುತರೆನಗತಿ ಹಿತರೆಂದೆನ್ನುತೆ ಸತತ ನಂಬಿ ಸತ್ಪಥವನು ಮರೆತಂತೆ ಪತಿತನಾದೆನಗೆ ನೀ ಗತಿದೋರದಿದ್ದರೆ ಪತಿತನಾಗಿರುವುದೇ ಗತಿಯೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾರಿಯ ವಿಡಿರಣ್ಣ | ಸ್ವಹಿತದ ದಾರಿಯ ಹಿಡಿರಣ್ಣಾ ಪ ದಾರಿಯ ವಿಡಿನಿಜ ಸಾರಿಹ ಶೃತಿಗಳ | ಚಾರು ಭಕುತಿಯಾ ಅ.ಪ ಬಲ್ಲವರಿಗೆ ಬೆಸಗೊಳ್ಳುತ ಮನಸಿನ | ಖುಳ್ಳತನದ ಗುಣವೆಲ್ಲವು ಹೋಗಿ | ಬಲ್ಲವರನು ಕಂಡು ಮೆಲ್ಲಡಿಗಳ ವಿಡಿ | ದುಳ್ಳ ಸಿದ್ಧಾಂತದ ಸೊಲ್ಲವ ಕೇಳಿ | ಉಲ್ಹಾಸದಿಂದಲಿ ಮೆಲ್ಲನ ಭ್ಯಾಸವ | ಮೆಲ್ಲನೆ ಮಾಡುತ ಸುಲ್ಲಭ ತೆರದಾ 1 ಕಂಡ ಪಥಕ ಹರಿದಂಡಲೆಯದೆನೆರೆ | ತಂಡಿಸುತಿಹ ಪಾಷಾಂಡ ಹೋಗಿ | ಚಂಡ ಸುಜ್ಞಾನದ ಲುಂಡನು ಭವದೃಢ | ಗಂಡು ಸದ್ಭೋಧದಿ ಪಂಡಿತನಾಗಿ | ಹಿಂಡ ಭಾಗವತರ ಮಂಡಲದೊಳು ಕೂಡಿ | ಪುಂಡರೀಕಾಕ್ಷನ ಕೊಂಡಾಡುತ ನಿಜ 2 ಹಿಂದಿನ ಸುಕೃತಗಳಿಂದ ನೃದೇಹದಿ | ಬಂದೆನು ನಾನಿನ್ನು ಮುಂದಣ ಗತಿಯಾ | ಹೊಂದುವೆ ನಾವದುಯಂದು ವಿಚಾರವಾ | ತಂದು ಸದ್ಭಾವಲಿಂದೇ ನಿಷ್ಠೆಯಲಿ ತಂದೆ ಮಹಿಪತಿ ಪ್ರಭುಪದ ಭವ ಬಂಧನ ಹರಿವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾವನಿಹನೈಯ್ಯಾ ಕೃಷ್ಣಾ ಎನ್ನ ಕಾವವನು ನೀನಲ್ಲದೆ ಪ ನಾರಿ ದ್ರೌಪದಿ ನೆನೆಯಲು ಸಭೆಯಲ್ಲಿ ಶೀರಿ ದಾನವ ಮಾಡಿದೀ ಕೃಷ್ಣಾ ಘೋರ ದೂರ್ವಾಸ ಮುನಿಯು ನಡುವಿರುಳೆ ಹಾರೈಸಿ ಬರೆಯನ್ನವಾ ದೇವಾ ನಾರಿ ದ್ರೌಪದಿಯ ಮೊರೆಯ ದೊರೆಯು ಆಲಿಸೇ ಆ ರಾತ್ರಿ ಕಾಯ್ದ್ಯೋಬಲೆಯಾ 1 ಪರಿವಾರದಿಂದ ಕೂಡಿ ಕರಿರಾಜನಂಗ ನಾಟಕಂದೈದಲು ಭರದಿನೆಗಳಿಯು ಪಿಡಿಯಲು ಕಾಲನು ಇರದೆ ನಿನ್ನನು ಸ್ಮರಿಸಲು ದೇವಾ ಗರುಡವಾಹನನಾಗಿ ನೀನೈತಂದು ಕರುಣಿಸಿದ್ಯೋ ಕೊನೆಯ ಗತಿಯ 2 ದುರುಳ ಹಿರಣ್ಯಕನ ಶೀಳಿ ನರಹರಿಯೆ ತರಳ ಪ್ರಲ್ಹಾದನ ಪೊರೆದ್ಯೋ ದೇವಾ ಮರೆಯದಜಮಿಳ ನೆನೆಯಲು ಕೇಳ್ದು ನೀ ಪರಿಹರಿಸಿದೆ ಯಮಬಾಧೆಯ ದೇವಾ ನರಸಿಂಹವಿಠಲ ಸ್ವಾಮಿ ಧ್ರುವನನ್ನು ಪೊರೆದಂತೆ ರಕ್ಷಿಸೆನ್ನಾ 3
--------------
ನರಸಿಂಹವಿಠಲರು
ದಾವನು ಗುರುಸಹವಾಸಿ ಅವನಿದ್ದದ್ದೇ ಸ್ಥಳ ಕಾಶಿ ಧ್ರುವ ಕೂಡಿದವರ ತ್ರಿತಾಪಭಂಗಾ ರೂಢಿಗೆ ಮೆರೆವಳು ಙÁ್ಞನಗಂಗಾ ಮೂಡಿಹ ಆತ್ಮಜ್ಯೋತಿ ಲಿಂಗಾ ಕಂಡಿಹ ಗುಣರಾಸೀ 1 ವಿವರಿಸಿ ತಾರಕಮಂತ್ರದ ನೆಲಿಯಾ ಕಿವಿಯೊಳು ಹೇಳಲು ಗುರುರಾಯಾ ಭವ ಭಯಾ ಸ್ವಾನಂದವ ಬೆರೆಸೀ2 ಜನದಲಿ ನಾನಾ ಸಾಧನ ಜರಿದು ಮನದಲಿ ಒಂದೇ ನಿಷ್ಠಿಯ ಹಿಡಿದು ಅನುಮಾನದ ಸಿದ್ಧಾಂತಗಳದು ಸದ್ಭಾವನೆ ಒಲಿಸೀ 3 ಪ್ರೇಮಿಯ ನಿಜಸುಖ ಪ್ರೇಮಿಕ ಬಲ್ಲಾ ಈ ಮನುಜರಿಗಿದು ಭೇದಿಸುದಲ್ಲಾ ಶ್ರೀ ಮಹಿಪತಿ ಬೋಧಿಸಿದನು ಸೊಲ್ಲಾಪೂರಿಸಿ ಮನದಾಸಿ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾವನು ನಿತ್ಯನಿರಂಜನ ಜನ್ಮನು | ದೇವಕಿ ಗರ್ಭದಿ ಮೂಡೀ | ಅವನ ಮನಿ ಪಾಲ್ಗಡಲು ಯಶೋದೆಯ ಮೊಲೆವಾಲಿಗೆ ಬಾಯಿದೆರೆಯುವವ ನೋಡಿ | ಕೇವಲ ಜ್ಞಾನಮಯನು ಸಕಲೇಂದ್ರಿಯ ಖೂನಿಸಿ ತೋರುವ ಸನ್ನೆಯ ಮಾಡೀ | ಶ್ರೀ ವತ್ಸಾಂಕನು ಗುರುಮಹಿಪತಿ ಪ್ರಭು ಬಾಲಕನಾಗ್ಯಾಡುವ ನಲಿದಾಡೀ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾವಲ್ಲಿ ಕೂತಿದ್ದೀಯೊ ರೋಗಿಷ್ಠ ಕಾಯ ಎನ್ನನು ಕಾಯ್ಕೊಂಡು ಪ ಜೀವಕಂಟಕನಾಗಿ ಹೇಯದಿಂದೊಡಗೂಡಿ ಆವಕಾಲದಿ ರೋಗದ್ಹೊರಳುತ ಎಲೆ ಖೋಡಿ ಅ.ಪ ಏನು ಕರ್ಮವ ಮಾಡಿದ್ದೋ ಪಾಪಾತ್ಮ ನೀ ಹೀನಸ್ಥಿತಿಯ ಪೊಂದಿದಿ ನಾನಾವಿಧದಿ ಮಹಬೇನೆಯಿಂ ನರಳುತ ನೀನೆನ್ನ ಜತೆಗೂಡಿ ಬನ್ನಬಡಿಸುವಿ ಪಾಪಿ1 ಹೊಲಸಿನ ದ್ವಾರದಿಂದ ಇಹ್ಯಕೆ ಬಂದಿ ಮಲಮೂತ್ರ ತುಂಬಿಕೊಂಡು ತೊಳೆಯದಿರಲು ನಿಮಿಷ ಹೊಲಸಿಕ್ಕಿನಾರುವಿ ತಿಳಿದುನೋಡಲು ನಿನ್ನ ಸಲಿಗೆಯಿಂ ನಾ ಕೆಡುವೆ 2 ಎನ್ನ ಜೊತೆಯ ಪೊಂದಿರ್ದ ಕಾರಣದಿಂ ನಾ ನಿನ್ನ ಕ್ಷೇಮವ ಬಯಸುವೆ ಎನ್ನಯ್ಯ ಶ್ರೀರಾಮನುನ್ನತಡಿಗಳ ನಂಬಿ ಸನ್ನುತಿಯಿಂ ಕ್ಷಮೆಬೇಡಿ ಧನ್ಯನಾಗೆಲೋದೇಹ್ಯ3
--------------
ರಾಮದಾಸರು
ದಾಸಕೂಟ ವರ್ಣನೆ ಸಾಟಿಯುಂಟೆ ಶ್ರೀನಿವಾಸನ ದಾಸಕೂಟದ ಮ್ಯಾಳಕೆ ಬೂಟಕದ ಮಾತಲ್ಲ ಕೇಳಿರಿ ಭಜನೆ ಮಾಡುತ ತಾಳಕೆ ಪ. ವಾಸುದೇವನ ವರ್ಣಿಸಲು ಕಮಲಾಸನಾದಿ ಸುರೇಂದ್ರರು ದಾಸಜನರ ಸಮೂಹದೊಳಗಾವಾಸವಾಡುತ ನಲಿವರು ಸೂಸುತಿಹ ಗಂಗಾದಿನದಿಗಳು ಬ್ಯಾಸರದೆ ಬಂದಿರುವವು ಕೇಶವನ ಕೊಂಡಾಟ ಧರೆಯೊಳು ಮೀಸಲಳಿಯದೆ ಮಧುರವು 1 ಬಾರಿಸುತ ತಂಬೂರಿ ತಾಳವ ನಾರದರ ಸಂಸ್ಮರಿಸುತ ಭೂರಿ ಕಿಂಕಿಣಿ ಮದ್ದಳೆಯ ಶೃಂಗಾರ ರಸವನು ಸುರಿಸುತಾ ವಾರಿಜಾಕ್ಷನ ಪರಮಮಂಗಳ ಮೂರುತಿಯ ಮುಂದಿರಿಸುತ ಮಾರುತನ ಮತವರಿತು ಬಹುಗಂಭೀರ ಸ್ವರದಿಂದರುಹುತಾ 2 ಹಿಂದೆ ಗಳಿಸಿದ ಹಲವು ದುರಿತವು ಕುಂದುವುದು ನಿಮಿಷಾರ್ಧದಿ ಅಂದಿನಂದಿನ ದೋಷದುಷ್ಕøತವೊಂದು ನಿಲ್ಲದು ಕಡೆಯಲಿ ಇಂದಿರಾಧವ ಶೇಷ ಭೂಧರ ಮಂದಿರನು ಮಹ ಹರುಷದಿ ಮುಂದೆ ನಲಿವುತ ಮನಕೆ ಪೂರ್ಣಾನಂದವೀವನು ನಗುತಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ದಾಸಗುರೂ | ದಾಸಗುರೂ | ವಾಸವ ನಾಮಕ ಪ ಭೂಸುರರಿಗೆ ಧನರಾಶಿ ಸಮರ್ಪಿಸಿ ವ್ಯಾಸರಾಯರುಪದೇಶಗೊಂಡ ಹರಿ ಅ.ಪ ಜಲಜಭವನ ಪಿತನಾಜ್ಞೆಯಲಿ ಕಲಯುಗದಲಿ ಜನ್ಮ ತಾಳುತಲಿ ಅಲವ ಬೋಧಾಮೃತ ನೆಲೆಯನು ಸುಲಭದಿ ತಿಳಿಗನ್ನಡದಲ್ಲಿ ತಿಳಿಸಿ ಸಲುಹಿದ 1 ಪವನದೇವನ ಒಲಿಸುತಲಿ | ಮಾ ಧವನ ಸ್ತುತಿಸಿ ಸಲೆ ಕುಣಿಯುತಲಿ ಕವನದಿ ಭಕುತಿಯ ನವವಿಧ ಮಾರ್ಗವ ಅವನಿಗೆ ಬೀರಿದ ದಿವಜ ಮೌನಿವರ 2 ಕಾಮಿತ ಫಲಗಳ ಗರಿಯುತಲಿ ಬಲು ಪಾಮರ ಜನರನು ಸಲಹುತಲಿ ಶ್ರೀಮನೋವಲ್ಲಭ ಶಾಮುಂದರ ನಾಮಾಮೃತವನು ಪ್ರೇಮದಿಂದುಣಿದ 3
--------------
ಶಾಮಸುಂದರ ವಿಠಲ
ದಾಸಗೆ ಭಯವೆಲ್ಲಿ ದಾಸಗೆ ಭಯವೆಲ್ಲಿ ಪ ದಾಸನಾಗದವಗೆ ಭಯವೆಂದಿಗು ತಪ್ಪದು ದಾಸನಾಗಿಹಗೆ ಭಯವೆಂದಿಗು ಬಾರದು 1 ತರಳ ಪ್ರಹ್ಲಾದಗೆ ಭಯವೆಂದಿಗು ಸೋಂಕಲಿಲ್ಲ ತರಳನ ಪಿತಗೆ ಭಯವೆಂದಿಗು ತಪ್ಪಲಿಲ್ಲ 2 ಲಂಕೆಯೊಳಿದ್ದರೂ ದಶಕಂಠನಿಗತಿ ಭಯ ಲಂಕೆಯ ಬಿಟ್ಟ ವಿಭೀಷಣನಿಗಭಯ 3 ಹರನ ಪೀಡಿಸಿದಾ ಭಸ್ಮಾಸುರಗೆ ಭಯ ಹರಿಯ ಸ್ತುತಿಸಿದ ಮಹಾದೇವನಿಗಭಯ 4 ರಾಜೇಶ ಹಯಮುಖನೊಲಿದವನಿಗಭಯ 5
--------------
ವಿಶ್ವೇಂದ್ರತೀರ್ಥ
ದಾಸನಾಗಬೇಕು ಶ್ರೀಕಾಂತನ ದಾಸನಾಗಬೇಕು ಪ ವಾಸುಕಿ ಶಯನನ ಸಾಸಿರ ನಾಮದಿ ಮೆರೆವ ಕೇಶವನ ಅ.ಪ. ಶಂಖ ಚಕ್ರಗಳನ್ನು ಕರದೊಳು ಧರಿಸಿದ ಪಂಕಜ ರಮಣ ಶ್ರೀ ಗೋವಿಂದನ ಪಂಕಜ ಲೋಚನ ಪರಮ ಪಾವನನ ಪಂಕಜೋದ್ಭವ ಪಿತನಾದ ಶ್ರೀಧರನ 1 ನವನೀತ ಚೋರನ ವಸುದೇವ ತನಯನ ಭವರೋಗ ವೈದ್ಯನ ಶರಣ ರಕ್ಷಕನ ಪವನಜನೊಡೆಯನ ಜಾನ್ಹಕಿ ಪ್ರಿಯನ 2 ದನುಜರ ತರಿಯುವ ಪ್ರಣವ ಸ್ವರೂಪನ ಅನುದಿನ ಭಕ್ತರ ಪೊರೆವ ಮಾಧವನ ಚಿನುಮಯ ರೂಪನ ಕನಕ ಸೇವಿತನ ಸನಕಾದಿ ವಂದಿತ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ದಾಸನಾಗಬೇಕು ಸದಾಶಿವನ ದಾಸನಾಗಬೇಕು ಪ ದಾಸನಾಗಬೇಕು ಕ್ಲೇಶಪಂಚಕವಳಿದು |ಆಸೆಯಲ್ಲಿ ಮನ ಸೂಸದೆ ಸರ್ವದಾ ಅ ಮನದ ಕಲ್ಮಷ ಕಳೆದು - ಮಹಾದೇ-ವನ ಮಹಿಮೆಯ ತಿಳಿದುಇನಿತು ಈ ಜಗವೆಲ್ಲ ಈಶ್ವರಮಯವೆಂದುಘನವಾದ ಮೋಹದ ಗಡಿಯನು ದಾಟುತ 1 ತನುವು ಅಸ್ಥಿರವೆನುತ - ತಿಳಿದು ಶಂಕರನ ಹೃದಯವ ಕಾಣುತಘನವಾದ ಇಂದ್ರಜಾಲವ ಮಾಯೆಯೆನುತಬಿನುಗು ಸಂಸಾರದ ಮಮತೆಯ ಬಿಡುತ 2 ಆರು ಚಕ್ರದಿ ಮೆರೆವ - ಅಖಂಡನಮೂರು ಗುಣವ ತಿಳಿದುಆರು ಮೂರು ಹದಿನಾರು ತತ್ತ್ವವ ಮೀರಿತೋರುವ ಕಾಗಿನೆಲೆಯಾದಿಕೇಶವನಡಿ 3
--------------
ಕನಕದಾಸ
ದಾಸನಾಗೋ ಭವಪಾಶನೀಗೋ - ವಿಶೇಷನಾಗೋ ಪ ಏಸೊ ಕಾಯಂಗಳ ಕಳೆದು ಎಂಬತ್ತ್ನಾಲ್ಕು ಲಕ್ಷ ಜೀವರಾಶಿಯನ್ನು ದಾಟಿ ಬಂದೆ ಈ ಶರೀರ ತಾನಲ್ಲ ತನ್ನದಲ್ಲಆಶೆಯು ತರವಲ್ಲ ಸ್ಥಿರವಲ್ಲ ಮುಂದೆ ಬಾಹೋದಲ್ಲಆಶಾಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಯಮನಪಾಶಕ್ಕೊಳಗಾಗದೆ ನಿರ್ದೋಷಿಯಾಗೊ - ಸಂತೋಷಿಯಾಗೊಅ ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರಏಸು ದೇಶ ತಿರುಗಿದರೆ ಬಾಹೋದೇನೊ - ಅಲ್ಲಿ ಆಹೋದೇನೊದೋಷನಾಶೆ ಕೃಷ್ಣವೇಣಿ ಗಂಗೆ ಗೋದಾವರಿ ಭವನಾಶಿ ತುಂಗಭದ್ರೆ ಯಮುನೆ ವಾಸದಲ್ಲಿ - ಉಪವಾಸದಲ್ಲಿಮೀಸಲಾಗಿ ಮಿಂದು ಜಪತಪ ಹೋಮನೇಮಗಳಏಸು ಬಾರಿ ಮಾಡಿದರೂ ಫಲವೇನೊ - ಇದು ಚೆಲುವೇನೊವಾಸುದೇವನೆಂಬ ಒಳಗಿಹ ಹಂಸನ ಸೇರಿಲೇಸನುಂಡು ಮೋಸಗೊಳದೆ ಮುಕ್ತನಾಗೊ - ನೀ ಶಕ್ತನಾಗೊ1 ಅತ್ತಲೋ ಇತ್ತಲೋ - ಎತ್ತಲೋ ಈ ಸಂಸಾರಬತ್ತಲೆಗೆ ಬತ್ತಲೆ ನಿತ್ಯವಲ್ಲ - ಪರಿಮಿತಿ ಇಲ್ಲಕತ್ತಲೆ ಕಾವಳದೊಳು ಕಾಣಲಾರದೆ ನೀನುಸತ್ಯವೆಂಬ ದಾರಿಯನು ಸೇರಲಿಲ್ಲ - ಲೇಸು ತೋರಲಿಲ್ಲಉತ್ತಮ ಅ ಉ ಮ ಎಂಬ ಓಂಕಾರ ಬೀಜಾಕ್ಷರಚಿತ್ತದಲಿ ಗ್ರಹಿಸು ನೀ ಬಿಡಬೇಡ - ಬಿಟ್ಟು ಕೆಡಬೇಡಹೊತ್ತಾರೆಯಲೊ ಬೈಗಿನಲೊ ಆಗಲೊ ಈಗಲೊ ಕಾಯನಿತ್ಯವೆಂದು ಸ್ಥಿರವೆಂದು ನಂಬಬೇಡ - ನಿನಗೆ ಡಂಬ ಬೇಡ 2 ಆಯಿತೊ ಹೋಯಿತೊ ಏನಾಯಿತೊ ಈ ದೇಹಕ್ಕೆತಾಯಿ ಯಾರೊ ತಂದೆ ಯಾರೊ ಮಡದಿ ಯಾರೊ ಮಕ್ಕಳ್ಯಾರೊಮಾಯದೊಳು ಸಿಲುಕಿ ಬಲು ಕಾಲದಿಂದ ಶ್ರೀರಘುರಾಯನೆಂಬ ವಸ್ತುವಿನ ಸ್ಮರಣೆ ಬಿಟ್ಟು - ಭವದಿ ಮಮತೆ ಇಟ್ಟುನಾಯ ಬಾಯ ಅರಿವೆಯಂತೆ ನಾನಾ ಕೋಟಲೆಯಲಿ ಬಿದ್ದುಬಾಯಿ ಬಾಯಿ ಬಿಡುತಲಿ ಸಾವುದೇನೊ - ನೀ ನೋವುದೇನೊತ್ರಾಯಿ ತ್ರಾಯಿ ತ್ರಾಯಿಯೆಂದು ತ್ರೈಲೋಕ್ಯದೊಡೆಯ ಪುಣ್ಯದಾಯಕನ ಹೊಂದಿ ನೀ ಧನ್ಯನಾಗೊ - ಮುಕ್ತ ಮಾನ್ಯನಾಗೊ 3 ಸಿರಿ ಕಮಲೇಶನನ್ನುಒಂದು ಬಾರಿ ಅರುಹಿಂದ ನೆನೆಯಲಿಲ್ಲ - ಮನ ತಣಿಯಲಿಲ್ಲಬಂದು ಬಂದು ಭ್ರಮೆಗೊಂಡು ಮಾಯಾಮೋಹಕೆ ಸಿಕ್ಕಿನೊಂದು ಬೆಂದು ಒಂದರಿಂದ ಉಳಿಯಲಿಲ್ಲ - ಬಂಧ ಕಳೆಯಲಿಲ್ಲಸಂದೇಹವ ಮಾಡದಿರು ಅರಿವು ಎಂಬ ದೀಪ ಹಿಡಿದುಇಂದು ಕಾಣು ದೇಹದಲಿ ಪಿಂಡಾಂಡ - ಹಾಗೆ ಬ್ರಹ್ಮಾಂಡಇಂದಿರಾ ರಮಣನ ಧ್ಯಾನವನ್ನು ಮಾಡಿ ವಿವೇಕದಿ ಮುಕುಂದನಿಂದ ಮುಕುತಿಯ ಬೇಡು ಕಂಡ್ಯ - ನೀ ನೋಡು ಕಂಡ್ಯ 4 ತುಂಬಿ ಲಂಡ
--------------
ಕನಕದಾಸ