ಒಟ್ಟು 4285 ಕಡೆಗಳಲ್ಲಿ , 121 ದಾಸರು , 3030 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಶ್ರೀನಿವಾಸ ಕಲ್ಯಾಣ ಲಾವಣಿ ಮಾಧವ ಪ ಮುದಮೋದ ಘನ ಸುಖ ಭಕ್ತರಿಗೀಯಲು ಅ.ಪ. ದೇವ ದೇವೇಶನು ಯಾರೆಂತೆಂದು ಕೋವಿದ ಭೃಗುಮುನಿ ಹುಡುಕುತ ಬಂದು ಪಾರ್ವತಿ ಪತಿಹರ ವಿಧಿಗಳ ಜರಿದು ಧಾವಿಸಿ ಹರಿಯೆಡೆ ಬರ್ಪುದ ಕಂಡು ಭಾವಜ ಪಿತರತಿ ಸೋಗನು ಹಾಕೆ ದೇವನ ಮಾಯೆಯು ಮುಸುಕಲು ಮುನಿಗೆ ಈ ವಿಧ ಸಲ್ಲದು ಹರಿಗೆಂತೆಂದು ಪಾವನ ನೆದೆಯನು ವದ್ದನು ದುಡುಕಿ1 ಮಾಧವ ಚರಣವ ತೊಳೆದು ಹರಿಸುತ ದುಗುಡವ ಭಕ್ತನಿಗಂದು ಕರದಿಂ ದೊತ್ತುತ ಚರಣದ ಕಣ್ಣು ತರಿಯಲು ಹೆಚ್ಚಿನ ಸಾಧನೆ ಮುನಿಗೆ ಹರುಷದಿ ತೆರಳಿದ ಋಷಿವರ ತಾನು ಅರಿಯುತ ಕಾಂತನ ಮನವಂ ಸಿರಿಯು ಸರಸರ ಕೋಪವ ನಟಿಸುತ ತಾನು ಬಿರುಸಿನ ನುಡಿಗಳ ಆಡಿದಳಂದು 2 ಏನಿದು ಮುನಿ ವಿಪರೀತವು ಥರವೆ ನಾನಿಹ ಸ್ಥಳವನು ವದೆಯುವದೆಂದು ಮಾನಿನಿ ಗೌರವ ಕಾಯದೆ ಕ್ಷಮಿಸಿಹೆ ನಾನಿಹೆ ಬರಿಸತಿ ಭಕ್ತರೆ ಹೆಚ್ಚು ಕಾನನ ಸೇರುವೆ ನನಗೇಕೀ ಮನೆ ಮಾನವು ಹೊಯಿತು ಯನ್ನಲು ಸತಿಯು ಮೌನವ ಧರಿಸಲು ಗಂಡನು ನಗುತ ದೀನರ ಪೊರೆಯಲು ಬಂದಳು ಭುವಿಗೆ 3 ಗಂಡನ ಬಿಡುವಳೆ ಲಕ್ಷ್ಮೀದೇವಿ ಪುಂಡರ ಮಾತಿದು ನಂಬಿಲುಬೇಡಿ ಗಂಡನ ಮನತೆರ ನಟಿಸಿದಳಷ್ಟೆ ಗಂಡನು ಹಾಗೆಯೆ ತೊರೆಯುತ ಧಾಮ ಕುಂಡಿಲಿ ಗಿಳಿಯುತ ಅಲೆಯುತ ಹೊರಟ ಕಂಡಲ ಗಿರಿಯೆಡೆ ನಡೆತಾತಂದ ಕಂಡನು ಹುತ್ತವ ಒಂದೆಡೆ ತಾನು ಕುಂಡಲಿಗೊಡೆಯನು ನೆಲಸಿದನಲ್ಲಿ 4 ಪಾವನ ಗಿರಿಯದು ಕೇಳಿರಿ ಎಲ್ಲ ದೇವನ ಖಗಮೃಗ ಬಳ್ಳಿಗಳಾಗಿ ದೇವ ಸಮೂಹವು ಸೇವಿಪರಲ್ಲಿ ಕೋವಿದ ಋಷಿಗಳು ಧ್ಯಾನಿಪರೈಯ ಭಾವಸು ಭಕ್ತಿಲಿ ನೋಡಲು ಗಿರಿಯ ಜೀವರ ಪಾಪಗಲೆಲ್ಲಾ ನಾಶ ನೋವನು ಕಾಣರು ಹರಿಕೃಪೆ ಮುಂದೆ ದೇವನು ಇರೆ ಇದೆ ಭೂವೈಕುಂಠ 5 ಕೃತಯುಗದಲ್ಲಿದು ವೃಷಭಾಚಲವು ಗತಿಸಿದ ರಕ್ಕಸ ಹರಿಯಿಂತೆಂದು ಸುತನಂ ಪಡೆಯಲು ಅಂಜಿಲಿದೇವಿ ಅತಿ ತಪಗೈದಳು ತ್ರೇತೆಯಲೆಂದು ಉತ್ತಮ ನೆಂಬುವ ಗರ್ವವ ನೀಗಿ ಸ್ತುತಿಸಿದ ಶ್ವಾಸನ ಶೇಷನು ಎಂದು ಇತ್ತರು ಮೂರಲಿ ಶೇಷನ ನಾಮ 6 ವೆಂಕಟ ಗಿರಿಯಿದು ಕಲಿಯುಗದಲ್ಲಿ ಸಂಕಟ ನೀಗಿದ ಮಾಧವನಿಲ್ಲಿ ಸಂಕಟ ನೀಡುವ ಪಾಪಗಳನ್ನು ಶಂಕರ ಹರಿತಾ ಕಡಿಯುವನೆಂದು ವೆಂಕಟ ನೆನಿಸುತ ಮೆರೆಯುವ ನಿಲ್ಲಿ ಶಂಕೆಯ ಮಾಡದೆ ಶರಣೆಂದಲ್ಲಿ ಪಂಕಜ ನೇತ್ರನು ಪೊರೆಯುವನಿಲ್ಲಿ ಮಂಕುಗಳಾಗದೆ ಭಜಿಸಿರಿ ಬೇಗ 7 ಇಂದಿರೆ ಕೆರಳೆ ತಂದೆಯು ತೊರೆದನೆ ನಿಜ ವೈಕುಂಠ ಪೊಂದಿಹ ಹುತ್ತವ ಏನಿದು ಛಂದ ಕಂದನು ನಾನಿಹೆಎನ್ನುತ ಬೊಮ್ಮ ತಂದೆಗೆ ಕ್ಷೀರವ ಕರೆಯಲುನಿತ್ಯ ಛಂದದ ಗೋತನು ಧರಿಸುತ ಶಿವನ ಕಂದನ ಗೈಯುತ ಮಾತೆಯ ಸಹಿತ ಬಂದನು ಚೋಳನ ಅರಮನೆಯೆಡೆಗೆ 8 ಕೊಳ್ಳಲು ರಾಣಿಯು ಸೇರುತ ಗೋಷ್ಠಿ ನಲ್ಲಗೆ ಪ್ರತಿದಿನ ಕ್ಷೀರವ ಸುರಿಸೆ ಇಲ್ಲವೆ ಆಗಲು ರಾಣಿಗೆ ಹಾಲು ಗೊಲ್ಲನ ಶಿಕ್ಷಿಸಿ ಬೈಯಲು ಬಹಳ ಗೊಲ್ಲನು ಪತ್ತೆಯ ಹಚ್ಚುತ ಚರ್ಯೆ ಕೊಲ್ಲಲು ಗೋವನು ಕೊಡಲಿಯನೆತ್ತೆ ಬಲ್ಲಿದ ತಡೆಯಲು ಶಿರವನು ಒಡ್ಡೆ ನಿಲ್ಲದೆ ಗಗನದಿ ಚಿಮ್ಮಿತು ರಕ್ತ 9 ನೋಡುತ ಮಡಿಯಲು ಗೊಲ್ಲನು ಅಲ್ಲೆ ಓಡುತ ಗೋಗಣ ಹಟ್ಟಿಯ ಸೇರೆ ಜಾಡನು ಪಿಡಿಯುತ ಚೋಳನು ಬರಲು ಕೇಡಿಗ ನೃಪನೆ ಪಿಚಾಚಿಯು ಆಗೆನೆ ಬೇಡಲು ಕ್ಷಮೆಯನು ಬಹುಪರಿಹರಿಯ ನೀಡಿವಿಶಾಪವ ವೆಂಕಟ ಕರುಣಿ ಆಡಲು ತೊಡಗಿದ ಈ ವಿಧ ಮುಂದೆ 10 ಆದುದು ಆಯಿತು ಚೋಳನೆ ಕೇಳು ಭುಂಜಿಸು ಕರ್ಮ ಪದ್ಮಾವತಿ ಯೆಂಬಾಕೆಯ ಮುಂದೆ ಮೋದದಿ ಮುದುವೆಯ ನಾಗುವೆ ಆಗ ಭೂಧವ ಮಾವನು ನೀಡುತ ಮಕುಟ ಕವಿ ವಾರ ನಾಧರಿಸುವಾಗಿಲ್ಲದೆ ಬಾಧೆ ಪೊಂದುವಿ ಕಲಿಕೊನೆ ಪೂರ್ವಾವಸ್ಥೆ 11 ಪೇಳತ ಲೀಪರಿ ಚೋಳಗೆ ದೇವ ಲೀಲೆಯ ತೊರಲು ಘಾಯವ ಪಿಡಿದು ಕೇಳಲು ಔಷಧ ಗುರುವನು ಸ್ಮರಿಸಿ ಆಲಸ್ಯಗೈಯದೆ ಬಂದವ ನುಡಿಯೆ ಮೂಲಿಕೆ ಹುಡುಕುತ ಗಿರಿಯಲಿ ಅಲೆಯೆ ಶೈಲದ ಸ್ವಾಮಿ ವರಾಹನು ಸಿಗುತ ಕೇಳಲು ವೆಂಕಟ ಕಥೆ ವಿಸ್ತಾರ ಪೇಳಲು ತಬ್ಬಿದ ಕ್ರೋಡನ ಚತುರ 12 ಏನಿದು ಬಹು ವಿಪರೀತವು ಪೇಳಿ ಸತಿ ಬಿಟ್ಟಲೆಯುವುದೆಂತು ಪೂರ್ಣಾನಂದಗೆ ಗೊಲ್ಲನ ಪೆಟ್ಟೆ ಚಿನ್ಮಯ ನೆತ್ತರು ಚಿಮ್ಮುವದುಂಟೆ ಕ್ಷುಧೆ ತೃಷೆ ದೂರಗೆ ಹಾಲು ಅನ್ಯರು ವೈದ್ಯರೆ ಧನ್ವಂತ್ರೀಗೆ ಕಾಣನೆ ಔಷಧಿ ಪೂರ್ಣಪ್ರಜ್ಞ ತಾನಿರೆ ವೆಂಕಟ ತಿಳಿಯನೆ ಕ್ರೋಡ 13 ಲೀಲೆ ಇದೆಲ್ಲವು ಕೊಡುವದವಗೆ ಬೀಳಿಸಿ ಮೋಹದಿ ಕುಜನರ ತರಿವ ಪಾಲಿಪ ಸುಜನರ ಬೀರುತ ಜ್ಞಾನ ಲೀಲಾಮಯನವ ಸರಿಯೆಂತೆನ್ನಿ ಕೇಳಲು ಕ್ರೋಡನ ವಾಸಿಸೆ ಜಾಗ ಕೇಳುವರಾರೈ ನೀನಿರೆ ಯನ್ನ ಬೀಳುವರೆಲ್ಲರು ನಿನ್ನಡಿಭರದಿ ಧಾಳಿಯೆ ನನ್ನಯ ಪ್ರಭುತನವೆಂದ 14 ಮುಂದೆಯೆ ನೀನಿರು ನಾಹಿಂದಿರುವೆ ಬಂದವರೆಲ್ಲರು ನಿನಗೊಂದಿಸುತ ವಂದಿಸಲೆನ್ನದು ವಲಿಯುವೆನಾಗ ಮುಂದಿಹ ನಿನಗೇ ಮೊದಲಲಿ ಪೂಜೆ ಛಂದದಿ ಶಾಸನ ಹೀಗೇ ಬರದು ಮಂದಿರ ಕೆಡೆ ಕೊಡು ಎನ್ನಲು ನಗುತ ನಂದದಿ ನೀಡುತ ಹಾಗೆಯೆ ಎಲ್ಲ ಕಂದನ ಸೇವಿಸೆ ಬಕುಳೆಯ ಕೊಟ್ಟ 15 ತಗ್ಗಿರೆ ಸಾಧನ ವೆಗ್ಗಳಗೈವ ವೆಗ್ಗಳ ಸಾಧನೆ ತಗ್ಗಿಪ ದೈವ ಹಗ್ಗವು ಸರಿಇವ ನಿಚ್ಚೆಯು ಕೇಳಿ ಅಗ್ಗದ ಪ್ರಭುವರ ಇವತಾನಲ್ಲ ತಗ್ಗಿಸಿ ವಿಷಯ ಬಗ್ಗಿಸಿ ಮನವನು ಹಿಗ್ಗುತ ಭಜಿಸಲು ಚರಣ ಸರೋಜವ ತಗ್ಗದ ಸೌಖ್ಯವ ನೀಡುತ ಕಾವ ಮುಗ್ಗದೆ ಭವದಲಿ ಭಜಿಸಿರಿ ಬೇಗ 16 ಬಕುಳೆ ಯಶೋದೆಯು ಪೂರ್ವದಿ ಕೇಳಿ ರುಕ್ಮಿಣಿ ಮುದುವೆಯ ನೋಡದಲಾಕೆ ಉಕ್ಕಿದ ಮೋಹದಿ ಬಯಸಲು ನೋಡೆ ಭಕ್ತಳ ಬಯಕೆಯ ಸಿದ್ಧಿಸೆ ದೇವ ಬಕುಳೆಯ ಜನ್ಮದಿ ನಿಂದಿಹಳೆಂದು ಅಕ್ಕರೆಯಿಂದಲಿ ತಾ ಕರತಂದು ಚೊಕ್ಕಸುಕಂದನ ತೆರದಲಿ ನಿಂದ ಭಕ್ತಿಲಿ ಸೇವೆಯ ಗೈದಳು ಬಕುಳೆ 17 ನಾರಾಯಣ ಪುರ ನಾಮದ ನಗರಕೆ ದೊರೆಯೆನಿಸಿದ್ದನು ಆಕಾಶರಾಯ ಕೊರಗುತ ಬಹುದಿನ ಸುತರಿಲ್ಲೆಂದು ಧರಣಿಯ ಶೋಧಿಸೆ ಯಾಗಕ್ಕೆಂದು ದೊರಕಲು ಕಮಲವು ದೊಡ್ಡದು ಒಂದು ತೆರೆಯುತ ನೋಡಲು ಶಿಶು ತಾನೊಂದು ಬೀರುತ ಕಾಂತಿಯ ಕಾಣಿಸಲಂದು ದೊರಕಿತು ಕನ್ಯಾಮಣಿಯೆಂತೆಂದು 18 ಅರಮನೆ ಗಾ ಶಿಶು ಹರುಷದಿ ತಂದು ಸರಸಿಜಮುಖಿ ಪದ್ಮಾವತಿಯೆಂದು ಕರೆಯುತ ರಾಣಿಯು ಸಾಕುತ ಬಂದು ವರುಷಗಳುರುಳಲು ಕಾಲದಿ ಕನ್ಯೆ ಸಿರಿತೆರ ಲಕ್ಷಣ ಗಣದಿಂ ಬೆಳೆಯೆ ವರಿಸಲು ಈಕೆಯ ನರರಿಂದಾಗದು ಹರಿಯೇ ಸರಿವರವೆನ್ನುತ ಮನದಿ ಅರಸುತ ವರನಂ ಬಳಲಿದ ಧೊರೆಯು 19 ವೇದವತೀ ಈಕೆಯು ತ್ರೇತೆಯಲೆನ್ನಿ ಮಾಧವ ಮನತೆರ ತೆರಳುವ ಸೀತೆ ಮೋದದಿ ಸೇರಲ್ ಗಿರಿ ಕೈಲಾಸ ಖÉೀದಗಳುಣ್ಣುತ ಲಂಕೆಯಲಿದ್ದು ಸಾಧಿಸಿ ಖಳರವಿನಾಶವನಲ್ಲಿ ಮೇದಿನಿ ಸುತೆಯಳ ಸೇವಿಸಿ ಬಹಳ ಮೋದದಲಾಗಲಿಯಂದಳು ಸೀತೆ 20 ಶಕ್ರನು ಶಿಖಿಸಹ ಇದ್ದಹಾಗೆ ಲೋಕಕೆ ತೋರಲು ಸೀತೆಯ ರಾಮ ಚೊಕ್ಕ ಪರೀಕ್ಷೆಯ ನಡಿಸಲು ಶಿಖಿಯಲಿ ತಕ್ಕಣ ಬಂದರು ಸೀತೆಯರಿಬ್ಬರು ಅಕ್ಕರೆಯಿಂದಲಿ ನುಡಿಯುತ ಕಥೆಯು ಸಕ್ಕದಿ ನಿಂತಿಹ ಈಕೆಯ ನೀನು ಈಕ್ಷಿಸಿ ಪಿಡಿಕೈಯೆನ್ನಲು ಸೀತೆ ರಕ್ಕಸ ವೈರಿಯು ಮಡದಿಗೆ ನುಡಿದ 21 ಒಂದೇ ಬಾಣವು ಒಂದೇ ವಚನವು ಒಂದೇ ನಡತೆಯು ಒಬ್ಬಳುಮಡದಿ ಇಂದೆನಗೆಂಬುದು ತಿಳಿಯದೆ ನಿನಗೆ ಛಂದದಿ ಕಲಿಯಲಿ ನಡಿಸುವೆ ಬಯಕೆ ಇಂದ್ರನು ಅಗ್ನಿಯ ಪುಟ್ಟಲಿ ವಡಲಲಿ ಇಂದಿನ ಯುಗದಲಿಯನ್ನಲು ರಾಮ ವಂದಿಸಿ ನಡೆದರು ಎಲ್ಲರು ಆಗ ಹಿಂದಿನ ವರತೆರ ಬಂದಿಹಳೀಗ 22 ಭೂಸುರ ಪೊಟ್ಟಿಲಿ ಪುಟ್ಟುತ ಹಿಂದೆ ಶ್ರೀಶನ ಮಡದಿಯ ತಪದಿಂ ಮೆಚ್ಚಿಸಿ ಭಾಷೆಯ ಪಡದಿರೆ ಸವತಿಯ ಪಟ್ಟಕೆ ಘಾಸಿಯ ನೀಡುತ ರಾವಣ ಬಂದು ಆಶಿಸಿ ಸಂಗವ ದುಡುಕುತ ನುಡಿಯೆ ರೋಷದಿ ಶಾಪವ ನೀಡಿದಳೀಕೆ ನಾಶಕೆ ಕಾರಣಳಾಗುವೆ ನಾನೆ ಭ್ರಷ್ಟನೆಯೆನ್ನುತ ಶಿಖಿ ಸೇರಿದಳು 23 ಲಕ್ಷ್ಮೀ ವಿಭೂತಿಯೆ ಇವಳೆಂತೆನ್ನಿ ಲಕ್ಷಣ ನಿಭಿಡಿತಳಾಗಿಹ ಕನ್ಯೆ ಕುಕ್ಷಿಯು ತೆಳ್ಳಗೆ ಸಿಂಹಸುಮಧ್ಯಮೆ ಪಂಕಜ ನೇತ್ರೆಯು ಪಂಕಜವದನೆಯು ಪಂಕಜ ಗಂಧಿ ಭುಜಂಗ ಸುವೇಣಿ ಶಂಕರ ನಗೆನುಡಿ ಗುರುಲಾವಣ್ಯ ಶಂಖ ಸುಪದ್ಮಾರೇಖೆಗಳಿಂದ ಲಂಕೃತ ಅಂಗೈ ಪಾದಗಳ್ಹಾಗೆ 24 ಕಾಮನ ಬಿಲ್ಲನು ಹಳಿಯುವ ಹುಬ್ಬು ಸೋಮನ ಮೀರಿಪ ಯುಗಯುಗ ಕಾಂತಿ ಸಾಮಜಗಮನೆ ರಂಭೋರುಗಳು ಕೋಮಲ ಚಂಪಕ ನಾಶಿಕ ತುಟಿಗಳು ಕಾಮದ ಪೀವರ ಕುಚಯುಗಹಾಗೆ ಸು ನೇಮದಿ ಬೆಳದಿಹ ಪಲ್ಗಳ ರಾಜಿ ವಾಮನಿತಂಬಜಘನದ್ವಯವ ಭಾಮೆ ಸಫಾಲದಿ ಮೆರೆದಳು ತಾನು 25 ಈಕೆಯು ಕಮಲೆಯ ತೆರೆದಿಂ ಬೆಳೆದು ಸಾಕಲು ಕರೆದಳು ಕನಕಸುವೃಷ್ಟಿ ಕಾಕನು ಕಾಣದೆ ರಾಜನು ಮೆರೆದ ನಾಕವೆ ಎನಿಸಿತು ರಾಜನಮನೆಯು ಜೋಕೆಯಲೊಂದಿನ ಸಖಿಯರ ಕೂಡಿ ಈಕ್ಷಿಸೆ ಪುರವುದ್ಯಾನವ ಕುವರಿ ಸೌಖ್ಯದಿ ತೆರಳುತೆಯಿರುತಿರುವಲ್ಲಿ ನಾಕದ ನಾರದ ವದಗಿದನಲ್ಲಿ 26 ಹರಿಕಾರ್ಯಾಂಗನು ಬಂದನು ಎನ್ನುತ ಗುರು ಸತ್ಕಾರಂಗಳಗೈದು-ಆ ತುರ ತೋರಲು ತಿಳಿಯೆ ಭವಿಷ್ಯ ಕರಗಳ ನೋಡುತ ತೂಗುತ ತಲೆಯು ಸಿರಿತೆರ ಲಕ್ಷಣ ಕಾಣುವೆನಮ್ಮ ಹರಿಯೇ ಸರಿ ವರಿಸಲ್ ನಿನ್ನ ಅರಸುತ ಬರುವನು ತಾನೆ ನಿನ್ನ ಬರಿ ಮಾತಲ್ಲವು ನೋಡೆಂತೆಂದ 27 ಪರಿ ಹೊರಡಲ್ ಮುನಿಯು ಲಾಲಿಸಿ ª
--------------
ಕೃಷ್ಣವಿಠಲದಾಸರು
ಶ್ರೀ ಸತ್ಯ ಬೋಧರು ನಿಂದಿಸೋರಿಗೆ ನಿಂದೆಯನು ಕೊಡುವಾ ಕೊನೆಕಾಮರಿಗೆ [?] ಕೊನೆಯನು ಕೊಡುವಾ ಘನ ಮಹಿಮಾ ನಮ್ಮ ಸತ್ಯಬೋಧಗುರು ಅನುದಿನ ನೆನೆಯಲಭೀಷ್ಟವ ಕೊಡುವಾ ಪ ರಾಮದೇವಾರ್ಚನೆ ನೇಮದಿಂದಲಿ ಗೈದು ಕಾಮಿತ ಫಲಪ್ರದ ಬಲವೈಯ್ದಿದಾ ಶೀಮಿಶೀಮಿಯೊಳು ಕಾಮನೈಯ್ಯನ ಜನ ಕಾಮಪ್ರದಾನೆಂಬುದೆ ಸಾರಿದಾ ಧೀಮಾನ್ ಶ್ರೀಮಾನ್ ಕಾಮಿತೇಷ್ಟದಾ ಕಾಮನೆಂದು ತಾ ಪೊಗಳಿಸಿದಾ ವಾಮದೆ ವಗುರು ರಾಮಭಕುತನೆಂದು ಭೂಮಿಯೊಳ್ಡಂಗುರ ಹೊಡಿಸಿದಾ 1 ತತ್ವ ತಿಳಿದು ನೋಡಿ ಸತ್ಯ ಸತ್ಯ ಹರಿ ಮತ್ತುವನಿಗೆ ಭೃತ್ಯವಾದ ಸೂನು ಉತ್ತಮರೆಲ್ಲರು ಸತ್ಸಮಯವಂತೆ ಸತ್ಯ ಪ್ರಮಾಣವ ಪೇಳಿದನು ¸ತ್ಯಬೋಧ ರವಿ ಮಿಥ್ಯಾಗತ್ತಲೆಗೆ ತಾ ಕತ್ತರಿಯೆಂದರುಹಿದನು ¸ತ್ಯ ಬೋಧನೆಯನು ಸತ್ವರಿಂಗೆ ಮಾಡಿ ಮತ್ತವರುದ್ಧಾರ ಮಾಡಿದನು 2 ವರಸದ್ಗುಣಗಣ ನಿಲಯನೆನಿಸಿ ತಾ ವರ ಶಿಷ್ಟಾನ್ವಿತ ಮೇಣ್ ವಂದ್ಯನಾದ ಶಿರಿವರ ಪಾದಾನುಗ್ರಹ ಪಡೆದು ತಾ ಹರಿಜನಾರ್ತಿತಯ ಛೇದಿಸಿದಾ ದುರಿತ ತಮರಾಶಿಗಗ್ನಿಯೆನಿಸಿದಾ ಶರಣರ ಸಂಘ ಬೂದಿಗೈದಾ ನರಸಿಂಹವಿಠಲನ ಕರಣವ ಪಡೆದು ತಾ ಗುರುವರ ವರಪ್ರದನೆನಿಸಿದಾ 3
--------------
ನರಸಿಂಹವಿಠಲರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಧೀರರು ಚಾರು ಚರಣಗಳಿಗೆರಗುವೆನು ಪ ವರಮತಿಗುಣಗನ ಮಣಿಯೆ ಅ.ಪ. ಯತಿ ಆಶ್ರಮದಿ ಸೀತಾ ಪತಿಯ ಪೂಜಿಸುತಿರೆ ಮತಿಹೀನರಪಹಾಸ್ಯ ಮಾಡಿದರೆ ಪರಿಯಂತ ಹರಿಸೇವೆಯಾ ಅತಿ ಭಕುತಿಯಿಂದಲಿ ಮಾಡಿದ್ಯೋ ಜೀಯಾ ಹಿತದಿಂದ ಕೈಗೊಂಡ ದಶರಥನಂದ ರಘುರಾಯ ಯತಿವರನೆ ನಿನ್ನಯ ಕ್ಷಿತಿಯೊಳಗೆ ಹರಿ ಪ್ರತಿ ದಿಗಂತ ಪರಿಹರಿಸಿದ ವರಕೀರ್ತಿ ಆಶ್ರಯದಿಂದ ಬಂದೆ 1 ವರಮಧ್ವಮತಾಭಿಮಾನಿಯೆ ನಿನ್ನಯ ದರುಶನದಿಂದ ಪಾವನನಾದೆನೋ ದೊರಕಾದೊ ಯಂದಿಗೆಲ್ಲರಿಗೆ ಈ ಗುರುಗಳ ವರಸೇವಾ ಸರ್ವಜ್ಞ ಪೀಠಕೆ ಸರಸ ಶೋಭಿಸುವಾ ಹರಿವಾಯುಗಳಲಿ ನಿಶ್ಚಯದ ಭಕುತಿಯನು ಪಾಲಿಸುವಾ ನಿರುತದಲಿ ಕಾವಾ ಪರಮಭಕ್ತರ ಭಾಗ್ಯನಿಧಿಯಂದರಿದು ಹಂಬಲಿಸುತಲಿ ನಿನ್ನಯ ಚರಣಕೆರಗಿದೆ ತ್ವರದಿ ಕರುಣಿಸಿ ಪೊರೆಯೊ ಶರಣರ ಸಂಜೀವಾ 2 ಆನಂದಜ್ಞಾನದಾಯಕನಾಜ್ಞೆಯಿಂ ಸತ್ಯಜ್ಞಾನಾ- ನಂದಗಿತ್ತಿ ಉತ್ತಮಪದವಾ ಗಾನಲೋಲನ ಜಗತ್ಪಾಲನ ಪ್ರಿಯನೇ ತವ ಸೇವಾ ತನುವನೊಪ್ಪಿಸಿ ಇಡುವೆ ನಿನ್ನಡಿಗಳ ಮೇಲೆ ಶಿರವಾ ಸೇವಕನೋ ಅನುಚಿತೋಚಿತಕರ್ಮ ಕೃಷ್ಣಾರ್ಪಣವೆನುವ ಸುಮನವ ಕೊಡು ನೀ 3
--------------
ಹನುಮೇಶವಿಠಲ
ಶ್ರೀ ಸಾಯಿ ಸ್ತುತಿಗಳು ಪಾತಕ ಪರಿಹರ ನಿತ್ಯನಿರ್ಮಲ ನಾಮ ಭಾವುಕಪ್ರೇಮ ಪ ನುತ್ಯು ದಯಾಕರ ಶಂಕರ ಸುಖಂಕರ ಭೃತ್ಯ ಮನೋರಮ ನಿರ್ಜಿತಕಾಮ ಅ.ಪ ಶಾಂತಸ್ವಭಾವ ಪರಮಪ್ರಭಾವ ದಾಂತ ಕೃಪಾಕರ ಭವಪರಿಹಾರ ಮಂತ್ರಸುಧಾರ್ಣವ ಶೀತಳಭಾವ ಭ್ರಾಂತಿವಿದೂರ ಪುಣ್ಯಶರೀರ 1 ಅಗಣಿತ ಗುಣಗಣ ಸತ್ವ ನಿರೂಪಣ ಜಗದಾನಂದದಾ ವೂದಿ ಪ್ರಸಾದ ನಿಗಮಾಗಮಗಣ ವಿನಮಿತ ಚರಣ ನಗಜಾನಂದದ ಮಾಂಗಿರಿವರದ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಸುಮಧ್ವ ವಿಜಯಸ್ಥ ಅಷ್ಟೋತ್ತರ ಶತನಾಮಾವಳಿ ನಮಿಸುವೆ ಜಗದ್ಗುರುಗಳೇ ಪ ಅಮಿತ ಮಹಿಮನ ವಿಮಲ ಪದಪದ್ಮ ತೋರ್ವುದೆಮಗೇ ಅ.ಪ. ಭೂರಿ ವಿಶ್ವ ಭೂಷಣರೇ ಪಾಹಿಮಾಂ ಪಾಹಿ 1 ಪರಿಪೂರ್ಣ ಪ್ರಮತಿಯೇ | ಪುರುಸಂಖ್ಯ ಪೂರ್ಣೇಕ್ಷ ಅರವಿಂದ ಲೋಚನರೆ | ಗುರುಮತ್ಯಮಿತ ಬುದ್ಧಿ ಮರುದಂಶ ಪ್ರಚುರಧೀ | ಪುರು ಕರುಣ ಆಂಬುಧಿಯ ಮೇರೆಯನು ಮೀರಿದವರೆ || ಸರುವಿತ್ ಪೂರ್ಣದೃಕ್ | ಉರುಮತಿಯೆ ಸಕಲಜ್ಞ ಸರುಧೀ ಪೃಥು ಹೃದಾ | ಪುರುಧೀ ಪ್ರಭೂತಧೀಃ ಪರಮ ಆನಂದ ಸತ್ತೀರ್ಥ ಸೂರಿರಾಜಾಧಿ ರಾಜರೆ ಪಾಹಿ ಪಾಹಿ 2 ಫುಲ್ಲ ಬೋಧ ಬಹುಲ ಪ್ರಬೋಧರೇ | ಮಹೀಷ್ಟ ಸುಹೃದಯರೇ ಬಹುಲ ಬೋಧಾಖ್ಯರೇ | ಮಹಾ ಪುರುಷೋತ್ತಮನ ದಾಸರೊಳಧಿಕನೆ ಪಾಹಿ 3 ನಮೊ ನಮೋ ಧೀರಮತಿ | ನಮೊ ಪೃಥೂ ದರ್ಶನರೆನಮೊ ನಮೋ ಸುಖ ತೀರ್ಥ | ನಮೊ ಪೃಥುಲ ಚೇತಾತ್ಮನಮೊ ನಮೋ ಪೃಥುಮತಿಯೆ | ನಮೊ ನಮೊ ಸಮಗ್ರ ಧೀರ್ಸುಸ್ಮಿತೇಂದುಗಳೆ ಪಾಹಿ || ನಮೊ ವಿಪುಲ ಹೃದಯರೇ | ಅಮಂದಧಿಯೆ ಶುದ್ಧಧೀಃ ನಮೊ ನಮೋ ಸುವಿಚಾರ | ನಮೊ ದಾನವರ್ಭೀಮ ನಮೊ ಪುಷ್ಟ ಬುದ್ಧಿಯೇ | ನಮೊ ಪೃಥುಲ ಹರಿ ನಿಗೂಢ ಮೂರ್ತಿಯೆ ಪಾಹಿ ಪಾಹಿ4 ಆನಂತ ಬೋಧಾಖ್ಯ | ಅನೂನ ಬೋಧರು ಎನಿಪಆನಂದ ತೀರ್ಥಾಖ್ಯ | ಅನುಮಾನ ತೀರ್ಥರೇಸ್ವರ್ಣವರ್ಣಾಭಿಧರೆ | ಧನ್ಯ ಪ್ರವರರು ಎನಿಪ ಆದೀನ ಸತುವಾಭಿಧರೆ ||ಅನಂತಧಿಯ ಮಧ್ವ ಸು | ಪೂರ್ಣ ಸಂಖ್ಯ ಧೀರದಿಹನುಮಂತ ಕೃಷ್ಣೇಷ್ಟ | ಪ್ರಾಣೇತ ಪ್ರಾಜ್ಯೇಕ್ಷಆನಮಿಸಿ ಬೇಡ್ವೆ ಸಂ | ಪೂರ್ಣ ಪ್ರಮತಿಯೆ ತವ ಚರಣ ತೋರಿಸಿ ಸಲಹುವುದೂ 5 ಪಾಹ್ಯದ ಭ್ರಮನೀಷ | ಪಾಹಿ ಪ್ರಚುರ ಪ್ರಜ್ಞಪಾಹಿ ವಿಪುಲ ಪ್ರಮತಿ | ಪಾಹಿ ಆಯುತ ಚೇತಪಾಹಿ ಪೃಥು ಪ್ರಬೋಧಾ | ಪಾಹಿ ಪ್ರಬರ್ಹ ಬೋಧಾಖ್ಯರೇ ಪಾಹಿ ಪಾಹಿ ||ಪಾಹ್ಯ ಮಂದಮನೀಷ | ಪಾಹ್ಯದ ಭ್ರಸುಸಂಖ್ಯಪಾಹಿ ಬೃಹತು ಪ್ರಬೋಧ | ಪಾಹ್ಯತಿ ಭದ್ರ ಭಾಷಣಪಾಹ್ಯ ಪೂರ್ವ ಪುರುಷ | ಪಾಹಿ ದಶಧಿಷಣಾರ್ಯಾ ವರ್ಯ ಚರ್ಯರೇ ಪಾಹಿ 6 ಸಿರಿ ಮಾಧವನ | ಗುಣ ಸಾಧಕಾಗ್ರಣಿಯೆ ಪಾಹಿಮಾಂ ಪಾಹಿ ಪಾಹಿ 7 ವಾಸುದೇವ ಪರಿ | ಶಿಕ್ಷಣದಿ ದಕ್ಷನೆನಿಸುವನಿಗೇ ಜಯವಾಗಲಿ ||ಜಯ ಹರಿಗಧಿಷ್ಠಾನ | ಜಯ ಮುಖ್ಯ ಪ್ರತಿ ಬಿಂಬಜಯ ಜಯತುದಾರಮತಿ | ಜಯ ಹರಿದಯಿತ ವರನೆಜಯ ಶ್ರೀ ಮದಾನಂದ | ತೀರ್ಥಾರ್ಯವರ್ಯ ಜಯ ಜಯತು ನಿಮ್ಮ ಪದಗಳಿಗೇ 8 ಮಧ್ವಾಖ್ಯ ಶೃತಿಪ್ರತೀ | ಪಾದ್ಯರೆಂದೆನಿಸುತಲಿಮಧ್ವ ವಿಜಯಾಖ್ಯ ಪ್ರ | ಸಿದ್ಧ ಗ್ರಂಥದಿ ಪೊಳೆವಮಧ್ವಗುರು ತವನಾಮ | ಶಬ್ದಾಖ್ಯ ಮಣಿಗಳಷ್ಟೋತ್ತರದ ಮಾಲೆಯನ್ನೂ ||ಮುದ್ದು ಮೋಹಜ ತಂದೆ | ಮುದ್ದು ಮೋಹರಲಿರುವಮಧ್ವಗುರುವೇ ನಿಮ್ಮ | ಹೃದ್ಗುಹದಲಿರುವಂಥಮುದ್ದು ಗುರುಗೋವಿಂದ | ವಿಠ್ಠಲನಿಗರ್ಪಿಸುವೆ ಉದ್ಧರಿಪುದೆಮ್ಮ ಸತತ 9
--------------
ಗುರುಗೋವಿಂದವಿಠಲರು
ಶ್ರೀ ಹನುಮ ಮಾಂ ಪಾಹಿ ಪವನ ಜ ಖಗ ವಾಹನನ ದಾಸ ನೇಹದಲಿ ಬಿಂಬರೂಪ ತೋರೆನಗೆ ಪ ಭಾನುಸುತ ಪವಮಾನ ನಂದನ ನೀನೆ ಸಲಹಿದೆ ಮಾನನಿಧಿ ರಾಮಬಾಣದಲಿ ಇಂದ್ರ ಸೂನುವಿನ ಪ್ರಾಣ ಹಾನಿಯ ಗೈಸಿ ಮೇಣ್ ಆ ಕಿಷ್ಕಿಂಧ ನಗರದಲ್ಲಿ ವಾನರೇಂದ್ರಗೆ ನಾನಾ ಪರಿಯಲ್ಲಿ ಆನಂದವಿತ್ತ ಜ್ಞಾನಿ ನಿನ್ನ ಅಧೀನದವನೆಂದೆಂದು 1 ಸುರೇಶನಂದನ ಮಾರುತನೆ ನಿನ್ನ ಕರುಣವು ಎನ್ನೊ ಳಿರದ ಕಾರಣ ಹರಿ ಮುನಿದನೆಂದು ಅರಿದು ಮನದಿ ದ್ವಾ ಪರದಲ್ಯವ ತರಿಸಿ ಗುರುವರ್ಯ ನಿಮ್ಮ ಚರಣ ಸೇವಿಸೆ ಪೊರೆದೆ ಅಂದು ಸಮರದಿ ಕೃಷ್ಣನ ಪರಮಕೃಪೆ ಪಡೆದವರಿಗೆ ನಿನ್ನಯ ಕರುಣ ಕಾರಣವೊ 2 ಮೂರನೆಯ ಅವತಾರದಿಂದಲಿ ಧಾರುಣಿಯೊಳು .......... ಬೀರಿದ್ದ ಶಾಸ್ತ್ರವ ಬೇರೊರಿಸಿ ಕೀಳ್ದು ತೋರಿಸಿದಿ ಹರಿಯ ಆರು ನಿನ್ನನು ಆರಾಧಿಪರೊ ಆ ಧೀರರಿಗೆ ದೋಷ ಸೇರಲಮ್ಮವು ಮಾರಪಿತ ಜಗನ್ನಾಥ ವಿಠಲನ ಕರುಣ ವಾಹುದೊ 3
--------------
ಜಗನ್ನಾಥದಾಸರು
ಶ್ರೀ ಹಯಗ್ರೀವ ವಿಠಲ | ಮೋಹ ಕಳೆದಿವನಾ ಪ ಸಾಹಸಿಗಗಾಭೀಷ್ಟ | ದೋಹನನು ಆಗೋ ಅ.ಪ. ಮಾಣವಕ ಭಕ್ತಿಯಲಿ | ಮಾನ್ಯರನು ಸೇವಿಸುವಜ್ಞಾನವಂತನ ಮಾಡಿ | ಪ್ರಾಜ್ಞನೆಂದೆನಿಸೋ ಜ್ಞಾನ ನಿಧಿ ನಿನ್ನೊಲಿಮೆ | ಕಾಣದಲೆ ಪರಿತಪಿಸಿಜ್ಞಾನದಂಕುರಕಾಗಿ | ಬಿನೈಸುತಿಹೆನೋ 1 ಸುಜನ ಸಂಗದಿ ಹರಿಯ | ಭಜನೆಯೊದಗಲಿ ಇವಗೆಋಜು ವಾದಿರಾಜರಲಿ | ನಿಜ ಭಕ್ತಿ ಬರಲೀಗಜ ವರದನಂಘ್ರಿಗಳ | ನಿಜ ಮನದಿ ಕಾಂಬಂಥಯಜನ ಭಜನೆಗಳೊದಗಿ | ಪ್ರಜೆಗಳಲಿ ಮೆರೆಸೋ 2 ಭೃತ್ಯ ವತ್ಸಲನೇ 3 ನಾನು ನನ್ನದು ಎಂಬ | ಹೀನ ಭಾವವ ಕಳೆದುಏನೇನು ತಾ ಮಾಳ್ಪ | ಮಾನಸಾದಿಗಳಾಪ್ರಾಣಾಂತರಾತ್ಮಕಗೆ | ದಾನ ಮಾಳ್ಪಂತೆಸಗಿಜ್ಞಾನಾಯು ರೂಪಕನ | ಮಾನ್ಯಮತ ತಿಳಿಸೋ 4 ಕೈವಲ್ಯ ಪ್ರದನೇತಾವಕನ ಸಲಹೆಂಬ | ಆವ ಭಿನ್ನಪ ಸಲಿಸೆಓವಿ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀ ಹರಿ ಅಕ್ಕೋರಂಗ ನೋಡೆ ಇಕ್ಕೋ ಕೃಷ್ಣನೋಡೆ ತಕ್ಕಥೈ ಎಂದೀಗೆ ಸಿಕ್ಕಿದ ನಮ್ಮ ಕೈಗೆ ಪ. ಕುರುಳು ಕುಂತಳದಿಂದ ಕಸ್ತುರಿ ತಿಲುಕ ಚಂದ ನೀಲ ವರ್ಣ ನಂದ 1 ಮುಗುಳು ನಗೆಯ ಕಾಂತಿ ಚಂದ್ರನುದಯ ಭ್ರಾಂತಿ ಸೊಗಸು ನೋಡಲೆ ಕಾಂತೆ ಸೆಳೆವ ಮನವ ಶಾಂತೆ 2 ಬಾರೋ ಬಾ ಗೋಪಾಲಕೃಷ್ಣವಿಠ್ಠಲ ಜಾಲ ತೋರುವ ನೋಡೆ ಬಾಲೆ ಸೇರೋಣ ಬಾ ಸುಶೀಲೆ 3
--------------
ಅಂಬಾಬಾಯಿ
ಶ್ರೀಕರ ಅಷ್ಟಾಕ್ಷರ ಮಂತ್ರ ಗುಣವಾರಿನಿಧಿ ಅನಘ ಉತ್ತಮಮಹಾ ಪ್ರಭುವೆ ನಿನಗೆ ನಮೋ ಶ್ರೀಕರ ನಾರಾಯಣನೆ ಶರಣು ಪ ಉತ್ತಮೋತ್ತಮಗುತ್ತ ಮೋತ್ತ ಮೋದೀತ ಚೇತನಾಚೇತನರಿಗುತ್ತಮಾಶ್ರಯನು ಉತ್ತಮ ಉಮೇಶಾದಿ ಭಾರತಿಗುತ್ತಮ ವಾಯು ಆತಗುತ್ತಮೆ ಸಿರಿಗೆ ಉತ್ತಮೋತ್ತಿಷ್ಠ 1 ಶ್ರೀ ಎಂದರೆ ಜ್ಞಾನಸುಖಪೂರ್ಣೆ ಲಕ್ಷ್ಮಿಸ್ಥ ಕ ಎಂದರಾನಂದಶತ ಸುಖಾಂತಸ್ಥ ರ ಎಂದರೆ ಸ್ವರತ ಸುಖಪ್ರದ ಸುಖಾಶ್ರಯನು ಇಂದಿರೇಶನೆ ಎನಗೆ ಸೌಭಾಗ್ಯವೀಯೊ 2 ಸ್ವಾಹಾ ಆತ್ಮನು ಸ್ವವಶ ಸರ್ವವಶಿ ಶ್ರೀಪನು ಹರಿ ಹಂಸ ನಿರ್ದೋಷ ಬ್ರಹ್ಮ ನಾರಾಯಣ ಅಹರ್ನಿಶಿ ಈ ರೀತಿ ನಿನ್ನ ಸ್ಮರಿಸುವ ಜನಕೆ ನಿಖಿಳ ಐಶ್ವರ್ಯವೀವೆ 3 ಕಂಬು ಅರಿ ಶಂಖನಿಧಿ ಪದ್ಮನಿಧಿ ದಿವ್ಯ ಹಸ್ತಗಳಲಿ ಶೋಭಿತವಾಗುಂಟು ದ್ರವ್ಯ ಹಾಟಕ ರತ್ನ ಧನ ಕೊಡುವ ಕರಗಳು ದೇವಿ ಶ್ರೀ ಹ್ರೀ ಸಹ ಗರುಡಾಂಶಸಂಸ್ಥ 4 ಮೀನಾದಿರೂಪ ತ್ವದ್ ಮಸ್ತಕಾದ್ಯಂಗದಿ ಇನಗಮಿತದೀಪ್ತ ಆಭರಣ ಜ್ವಲಿಸುತಿವೆ ಶ್ರೀನಿವಾಸನೆ ಸ್ವರ್ಣವರ್ಣ ನಮೋ ಶರಣು 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಕರಾರ್ಚಿತ ರಂಗನಾಥ ಜಗದೇಕನಾಥ ಪ. ಪಾಕಶಾಸನವಂದ್ಯ ಪರಮ ಕಾರುಣ್ಯನಿಧಿ ಜೋಕೆಯಿಂ ಭಕ್ತರನು ರಕ್ಷಿಸಲು ಬಂದೆಯೊ ಅ.ಪ. ಸಿರಿ ಆಲದೆಲೆಯ ಮೇ- ಲೊಂದು ಬೆರಳನೆ ಚೀಪುತ ಮುಂದೆ ಶೇಷಶಯನನಾಗಿ ಬ್ರಹ್ಮನ ಪಡೆದು ಮಂದಹಾಸದಿ ನಲಿಯುತ ಇಂದಿರೆ ಸಹಿತಲಿರೆ ಭಕ್ತರೆಲ್ಲರು ಆಗ ನೋಡಲಿಲ್ಲೆಂದೆನುತ ಇಂದು ಈ ನಾಗರಾಜನ ಮಂಚವನೆ ಏರಿ ಸಿಂಧುಶಯನನೆ ಮಲಗಿದ್ಯಾ ಸ್ವಾಮಿ 1 ಅಜಗೆ ವೇದವನಿತ್ತು ಅಸುರನ್ನ ಕೊಂದು ನೀ ಭುಜಗಶಯನನೆ ಮಲಗಿದ್ಯಾ ಋಜುಗಣವಂದಿತನೆ ಬೆನ್ನಲಿ ಗಿರಿಪೊತ್ತ ಆಯಾಸದಿಂ ಮಲಗಿದ್ಯಾ ದ್ವಿಜಧ್ವಜನೆ ಭೂಮಿಯನು ಮೇಲೆತ್ತಿ ತಂದು ಸಾಕಾಗಿಲ್ಲಿ ಶಯನಿಸಿದೆಯಾ ಭಜಿಸಿದ ಬಾಲಕನ ಪಿತನೊಡನೆ ಕಾದಾಡಿ ಬಳಲಿ ನೀ ಪವಡಿಸಿದೆಯಾ ಸ್ವಾಮಿ 2 ಇಂದ್ರ ಪದವಿಗೆ ಬಂದ ಬಲೀಂದ್ರನ ನೆಲಕೊತ್ತಿ ಬಂದಿಲ್ಲಿ ಮಲಗಿಪ್ಪೆಯಾ ಕೊಂದು ಜನನಿಯ ಚಿಂತೆಯಿಂದ ಮನದಿನೊಂದು ಬಂದಿಲ್ಲಿ ಮಲಗಿಪ್ಪೆಯಾ ತಂದೆ ತಾಯಿ ಆಜ್ಞೆಯಿಂದ ಅಡವಿಯ ಅಲೆದು ಬಂದಿಲ್ಲಿ ಮಲಗಿಪ್ಪೆಯಾ ಮಂದರೋದ್ಧರ ಶ್ರೀಶ ಮಾವನ್ನ ಕೊಂದು ನೀ ಬಂದಿಲ್ಲಿ ಪವಡಿಸಿದೆಯಾ ಸ್ವಾಮಿ 3 ನಾರಿಯರ ವ್ರತ ಕೆಡಿಸಿ ನಾಚಿಕೆಯಿಂ ಬಂದು ಏರಿ ಮಂಚವÀ ಮಲಗಿದ್ಯಾ ಏರಿ ಕುದುರೆಯನು ದುಷ್ಟರ ಶಿರವ ತರಿಯುತ್ತ ಸೇರಿ ಶೇಷನ ಮಲಗಿದ್ಯಾ ಬಾರಿ ಬಾರಿಗೆ ಇಂಥ ಕಾರ್ಯಗಳ ಮಾಡಿಸಿ ಬಳಲಿಲ್ಲಿ ಮಲಗಿಪ್ಪೆಯಾ ನಾರದಾದ್ಯರ ಗಾನ ಕೇಳುತಾನಂದದಿಂ ನಿದ್ರೆಗೈಯುತ ಮಲಗಿದ್ಯಾ ಸ್ವಾಮಿ 4 ಭಕ್ತ್ರರಾಡುವ ಸಲಿಗೆ ಬಿನ್ನಪಕೆ ಬ್ಯಾಸತ್ತು ಯುಕ್ತಿಯಿಂ ಪವಡಿಸಿದೆಯಾ ಮುಕ್ತರ ಸ್ತುತಿಗೆ ನಿದ್ರೆಯು ಬಾರದೆಂತೆಂದು ಮುಕ್ತೇಶ ಇಲ್ಲಿ ಮಲಗಿದೆಯಾ ಎತ್ತ ನೋಡಲು ಮಾರ್ಗಬಿಡಳು ಕಾವೇರಿ ಎಂದು ಸೋತಿಲ್ಲಿ ಮಲಗಿಪ್ಪೆಯಾ ಚಿತ್ತಜಾಪಿತ ಸ್ವಾಮಿ ಭಕ್ತರೆಬ್ಬಿಸಲೆಂದು ಚಿತ್ತದಲಿ ಇಪ್ಪದೇನೋ ದೇವ 5 ಅಸುರರ ಕಾಟ ವೆಗ್ಗಳವಾಗೆ ಬಂದಿಲ್ಲಿ ಅಡಗಿ ನೀ ಮಲಗಿಪ್ಪೆಯಾ ಬಿಸಜನಾಭನೆ ನಿನ್ನ ಬಗೆಯರಿತು ಎಬ್ಬಿಸುವ ಬಲವಂತರನ್ಯಾರೆಲೊ ಶಶಿವದನ ಭಕ್ತರನುದ್ಧರಿಸಲೋಸುಗದಿ ಬಂದಿಲ್ಲಿ ಮಲಗಿಪ್ಪೆಯಾ ಭವ ಬಂಧನವ ಪರಿಹರಿಸಿ ಘಸನಗೊಳಿಸದಲೆ ಕಾಯೊ ಜೀಯ 6 ಏಳು ಫಣೆಯ ಸರ್ಪನ ಮೇಲೆ ಮಲಗಿ ಏಳು ಕಣ್ದೆರದು ನೋಡೋ ತಾಳಲಾರೆನೊ ನಿನ್ನ ಸೇವೆಯಗಲಿದ ದುಃಖ ಏಳು ಮನ್ನಿಸಿ ಪಾಲಿಸೊ ವ್ಯಾಳಶಯನನೆ ನಿನ್ನ ಸೇವೆಯನು ಎನ್ನಿಂದ ಲೀಲೆಯಿಂ ಸ್ವೀಕರಿಸೆಲೊ ಭಾಳ ಬೇಡುವದೇನೊ ಗೋಪಾಲಕೃಷ್ಣವಿಠ್ಠಲ ಈ ವ್ಯಾಳೆ ಎನ್ನ ಸಲಹೊ ಸ್ವಾಮಿ 7
--------------
ಅಂಬಾಬಾಯಿ
ಶ್ರೀಕೃಷ್ಣಪರಬ್ರಹ್ಮ ನಮೊ ಶೇಷತಲ್ಪಶಯಶೌರಿ ನಮೊಪ್ರಾಕೃತರ'ತಾನಂತ ನಮೊ ಪರಮಪುರುಷ ಭವದೂರ ನಮೊ 1ಮದನಾರ್ವಧುಸುರಸ್ತೌತ್ಯ ನಮೊ ಮಧುಕೈಟಭದೈತ್ಯಾರಿ ನಮೊಯದುಕುಲಾಂಬುಧಿಸುಧಾಂಶ ನಮೊ ವಾಸುದೇವ ಪರಮಾತ್ಮ ನಮೊ 2ದೇವಕಿದೇ'ಕಿಶೋರ ನಮೊ ದ್ವಿಜಸುತಪ್ರಾಣಸುರಕ್ಷ ನಮೊಭಾವಜಪಿತ ಜಗನ್ನಾಥ ನಮೊ ಭಕ್ತಪ್ರಿಯಗೋಂ'ದ ನಮೊ 3ಅಷ್ಟಮಗರ್ಭಸಂಜಾತ ನಮೊ ಅ'ುತಧೈರ್ಯಗಾಂಭೀರ್ಯ ನಮೊದುಷ್ಟಪೂತನಧ್ವಂಸ ನಮೊ ಧೇನುಕಶಕಟ'ದೂರ ನಮೊ 4ಗೋವರ್ಧನಗಿರಿಧಾರಿ ನಮೊ ಗೋಪಗೋಪಿಕಾಲೋಲ ನಮೊಶ್ರೀವಸುದೇವಾನಂದ ನಮೊ ಸಾಂದೀಪಪ್ರಿಯಬೋಧ ನಮೊ 5ಯಶೋದನಂದೋತ್ಸಾಹ ನಮೊ ವೇಣುಗಾನ'ನೋದ ನಮೊಶಿಶುಪಾಲಶಿರಚ್ಛೇದ ನಮೊ ಶಂಖಚಕ್ರಕರಧಾರಿ ನಮೊ 6ಕೌರವಗರ್ವ'ದಾರಿ ನಮೊ ಕುಬ್ಜಪಾಲಕಮಲಾಕ್ಷ ನಮೊಪಾರಿಜಾತಮಪಹಾರಿ ನಮೊ ಪಾವನತೀರ್ಥಪದಾಯ ನಮೊ 7ತೃಣಾವರ್ತನಾಶಾಯ ನಮೊ ದ್ವಾರಕಾಪುರ'ಹಾರಿ ನಮೊಮೌನಿಮಾನಸೊಲ್ಲಾಸ ನಮೊ ಮಧುರಾಪುರಿನಾಥಾಯ ನಮೊ 8'ದುರ ಅಕ್ರೂರಸ್ತೌತ್ಯ ನಮೊ ವೃಷಭ ಮ್ಟುಕ ಮುರಾರಿ ನಮೊ (?) 9ಶ್ರೀರುಕ್ಮಣಿಹೃದಯೇಶ ನಮೊ ಸಿಂಧುಶಯನ ಕಂಸಾರಿ ನವನೀತ ನಮೊ ಜಂಭಭೇದಿಸುತಪ್ರೇಮ ನಮೊ 10ವೈಜಯಂತಿವನಮಾಲ ನಮೊ ವನದಶ್ಯಾಮಲವರ್ಣ ನಮೊವಜ್ರಸ್ಥಗಿತಕಿರೀಟ ನಮೊ ವರಮಣಿಕುಂಡಲಧರಣ ನಮೊ 11ಭುಜಕಿರೀಟಶುಭಗಾತ್ರ ನಮೊ ಭುವನಮೋಹನಾಕಾರ ನಮೊಅಜಪಿತಕನಕಸುಚೇಲ ನಮೊ ಆರ್ತಶರಣ್ಯೋದ್ಧಾರ ನಮೊ 12ಕಾಲಯವನಮದಖಂಡ ನಮೊ ಕೋಟಿರ'ಪ್ರಭಾಭಾಸ ನಮೊಮಾಲಾಕಾರುಪಕಾರ ನಮೊ ಲೀಲಾಮಾನುಷವೇಷ ನಮೊ 13ದ್ರೌಪತಿಕಭಯೋದ್ಧಾರ ನಮೊ ಧನಂಜಯಾದಿಸುಪಕ್ಷ ನಮೊಶ್ರೀಪತಿಸಕಲಾಧಾರ ನಮೊ ಸರ್ವಭೂತಹೃದಯಾತ್ಮ ನಮೊ 14ನಿಖಿಲಚರಾಚರದೂಪ ನಮೊ ನಾಮರೂಪಕ್ರಿಯರ'ತ ನಮೊಅಖಂಡಮಚಲಾಕಾರ ನಮೊ ಅದ್ಭುತಮ'ಮಾಪಾರ ನಮೊ 15ಸಗುಣನಿರ್ಗುಣಾತೀತ ನಮೊ ಸತ್ಯಾಸತ್ಯಸುಬೋಧ ನಮೊನಿಗಮಾಗನಶೃತಿಸಾರ ನಮೊ ನಿರ್ವಿಷಯಾಭವಪ್ರಣವ ನಮೊ 16ಅಜಪಸೂತ್ರಸಂಕೇತ ನಮೊ ಹಂಸತತ್ವಸುಪ್ರಕಾಶ ನಮೊತ್ರಿಜಗಾಂತರ್ಬ'ವ್ಯಾಪ್ತ ನಮೊ ತ್ರಿಗುಣಾಪ್ರತಿಭಾಗಮ್ಯ ನಮೊ 17ತುಳಸಿರಾಮ ಗುರುಸ್ತೌತ್ಯ ನಮೋ ತಾಕ್ಷ್ರ್ಯಾಚಲವರವಾಸ ನಮೊಮುಳಬಾಗಿಲಪುರಿಪಾಲ ನಮೋ ಮಹಾನುಮಪ್ರಿಯ ವಂದ್ಯ ನಮೋ 18ಮಂಗಳಮಘಚಯಭಂಗ ನಮೋ ಮಂಗಳಂ ಪಾ' ಪಾ' ನಮೋರಂಗಸ್ವಾ'ುದಾಸ ಪೋಷ ನಮೋ ಮಂಗಳಾಂಗ ಶ್ರೀಕೃಷ್ಣ ನಮೋ 19
--------------
ಮಳಿಗೆ ರಂಗಸ್ವಾಮಿದಾಸರು
ಶ್ರೀಕೃಷ್ಣಸಂಕೀರ್ತನೆ ಅಕ್ಕ ನಂದಗೋಪನ ಅರಮನೆಯೊಳಗೊಬ್ಬಅಕ್ರೂರ ಬಂದನಂತೆಹೊಕ್ಕು ಬಳಸಲಿಲ್ಲ ಹುಸಿಯನಾಡುವಳಲ್ಲಇಕ್ಕೋ ಬಾಗಿಲಮುಂದೆ ಈಗ ರಥವ ಕಂಡೆಪ. ಮಧುರಾಪಟ್ಟಣವಂತೆ ಮಾವನ ಮನೆಯಂತೆನದಿಯ ದಾಟಲಿಬೇಕಂತೆಎದುರು ದಾರಿಲ್ಲವಂತೆ ಏನೆಂಬೆ ಏಣಾಕ್ಷಿಉದಯದಲ್ಲಿ ಪಯಣವಂತೆ ಒಳ್ಳೆಯ ವೇಳೆಯಂತೆ1 ಮಲ್ಲರ ಕೂಟವಂತೆ ಮತ್ತೆ ಕಾಳಗವಂತೆಬಲ್ಲಿದ ಗಜಗಳಂತೆಬಿಲ್ಲಹಬ್ಬವಂತೆ ಬೀದಿ ಶೃಂಗಾರವಂತೆಅಲ್ಲಿ ತಾಯಿ[ತಂದೆಯರ]ಕಾಲಿಗೆ ನಿಗಡವಂತೆ 2 ಅಲ್ಲಿ ಹುಟ್ಟಿದನಂತೆ ಅರಸಿನ ಮಗನಂತೆಇಲ್ಲಿಗೆ ಬಂದನಂತೆಎಲ್ಲ ಕಪಟವಂತೆ ಎಂದೂ ಹೀಗಿಲ್ಲವಂತೆನಿಲ್ಲದೆ ಯಶೋದೆಯ ಕಣ್ಣಲುದಕವಂತೆ3 ಮತ್ತೆ ಪಾಂಡವರಂತೆ ಮೋಹದ ಸೋದರರಂತೆಅತ್ತೆಯ ಮಕ್ಕಳಂತೆಸುತ್ತ ಶತ್ರುಗಳಂತೆ ಸಕಲ ಕಾರ್ಯಗಳಂತೆಚಿತ್ತಜನಯ್ಯನ ಚಿತ್ತವೆರಡಾದುವಂತೆ4 ತಾಳಲಾರೆವು ನಾವು ತಾಟಂಕ ಹಯವದನಬಾಲಕನಗಲಿದನೆನೀಲವೇಣಿಯರೆಲ್ಲ ನಾಳೆ ಉದಯದಲ್ಲಿಆಲೋಚನೆ ಮಾಡದೆ ಆಣೆಯಿಕ್ಕಿ ತಡೆವ 5 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ಇದೆ.
--------------
ವಾದಿರಾಜ
ಶ್ರೀಗಣಪತಿಗೆರಗಿ ಶಾರದೆಯನುರಾಗದಿಂದಲಿ ಸ್ಮರಿಸಿ ಶ್ರೀಗಿರಿಜಾತೆಯಲೋಕೈಕ ಮಾತೆಯ ಬೇಗದಿ ಹಸೆಗೆ ಕರೆದ ಸುಪದಂಗಳಾ ರಾಗದಿ ಪಾಡಿ ಪೊಗಳುವೆ 1 ಮಿಸುನಿಯ ಮಂಟಪದಿ ರಾರಾಜಿಪಪೊಸಪಸೆವಣೆಯನಿಟ್ಟು ಪೊಸದೇವಾಂಗವ ಮೇಲೆಪಸರಿಸಿ ಹಾಕುತ ಶಶಿಮುಖಿಯರು ನೆರೆದೊಂದಾಗಿ ಪಾಡುತ ಕುಶಲದಿ ಹಸೆಗೆ ಕರೆದರು 2 ಕಡೆಯಾಣಿಯ ಚಿನ್ನದ ಜಗಜ್ಯೋತಿಯಎಡಬಲದೊಳಗಿಟ್ಟು ಉಡುರಾಜಮುಖಿಯರುಮೃಗರಾಜಕಟಿಯರು ಕಡುಬೆಡಗಿಂದಪಾಡುತ ನಲಿದಾಡುತ ಮೃಡನರಸಿಯ ಹಸೆಗೆ ಕರೆದರು 3 ಚಿನ್ನದಪಿಲ್ಲಿಮಿಂಚು ಉಂಗುರಗಳುರನ್ನದಲ್ಲಣಿವೆಟ್ಟು ಉನ್ನತವಾದ ಕಾಲ್ಗಡಗಸರ್ಪಣಿಗೆಜ್ಜೆಯನ್ನು ತಳೆದ ಪಾದಪದುಮದಿಂದೊಮೈವ ಪೂರ್ಣೇಂದು ಮುಖಿಯರು || ಹ 4 ವರರತ್ನಖಚಿತವಾದ ಗೆಜ್ಜೆಮೊಗ್ಗೆಯಸರವೊಡ್ಯಾಣವು ಡಾಬು ಮಿರುಪಮಂಡೆಳೆಯುಡುದಾರ ಕಿಂಕಿಣಿಗಳ ಸರಫಲಿರೆನೆ ಚೆಂಗಾವಿಸೀರೆಯನುಟ್ಟು ಗಿರಿರಾಜತನುಜೆ || ಹ 5 ಚಳಿಕೆ ಹಿಂಬಳೆದೊರೆಯ ಚೂಡಾಕಟ್ಟುಬಳೆಕಂಕಣ ಕಡಗ ಪೊಳೆವ ಮುಂಗೈಯಮುರಾರಿ ಮುತ್ತಿನದಂಡೆ ಥಳಥಳಿಸುವಬೆರಳುಂಗುರಗಳನಿಟ್ಟು ಲಲಿತಾಂಗಿ ಬೇಗ | ಹಸೆಗೇಳು 6 ವರನಕ್ಷತ್ರದ ಸರವು ಏಕಾವಳಿ ಸರಗುಂಡಿನಸರವು ಮಿರುಪಬಿಲ್ಸರ ಚಳ್ಯಸರ ಚಕ್ರಸರಗೋಧಿಸರ ಮೋಹನಮುತ್ತಿನ ಸರಗಳನಿಟ್ಟವರಕಂಬುಕಂಠಿ ಬೇಗ | ಹಸೆಗೇಳು 7 ಅಣಿ ಮುತ್ತಿನ ಮೂಗುತಿ ಐದೆಳೆಯ ಕ-ಟ್ಟಾಣಿ ಕಾಶಿಯ ತಾಳಿ ಮಾಣಿಕಮಯಬತಿಮಲಕು ಅಡ್ಡಿಕೆ ಮಲಕಾಣಿ ಮುತ್ತಿನಬಟ್ಟುಮಲಕು ಸರಿಗೆಯಿಟ್ಟ ಏಣಾಕ್ಷಿ ಬೇಗ | ಹ 8 ತೊಳಪ ಮುತ್ತಿನಮಾಲೆ ಸರ್ಪಣಿಯಂಥಳಥಳಿಪ ವಜ್ರದವಾಲೆ ಚಳತುಂಬು ಮೀನ ಬಾ-ವಲಿ ಹಂಸೆಗಿಳಿಯ ಬಾವಲಿಯು ಹೊನ್ನೂಲುಕುಪ್ಪಿನವೆಂಟ್ಟೆಯವಿಟ್ಟ ಕಲಹಂಸಗಮನೆ | ಹ9
--------------
ಕೆಳದಿ ವೆಂಕಣ್ಣ ಕವಿ
ಶ್ರೀಗುರು ಜಯೇಶವಿಠಲನೆ ಪಾಲಿಸಯ್ಯ ಈ ಸತಿಯ ಕರಪಿಡಿದು ಪ ಮೂರ್ತಿ ಸರ್ವೇಶ ಶರ್ವಸಖ ಸರ್ವತ್ರ ಒಡನಿದ್ದು ಸಲಹು ಸತತ ಉರ್ವಿಯಲಿ ಸತ್ಕೀರ್ತಿ ಸಂಪದದಿ ನಿಲಿಸಿವಳ ನಿತ್ಯ ತೃಪ್ತ 1 ಗುಣವಂತಳನು ಮಾಡು ಗುಣ ಗಣಾಂಬುಧಿ ದೇವ ಘನವೆನಿಸು ಈ ಸತಿಯ ಸಂಸಾರವೆಲ್ಲ ಅನಿಲ ಜನರಲಿ ನಿಲಿಸು ಅನುಕೂಲ ನೀನಾಗಿ ದನುಜಾರಿ ಸಂಪದವ ಹರುಷದಲಿ ಬೆಳೆಸುವುದು 2 ಶೀಲ ಭಕ್ತಿ ಜ್ಞಾನ ಸತತ ಸಜ್ಜನ ಸಂಘ ಮೇಲಾಗಿ ನೀಡುವುದು ಮೈದುನನ ಸೂತ ಪಾಲುಸಾಗರದೊಡೆಯ ಜಯೇಶವಿಠಲನೆ ಕೊರತೆ ಇಲ್ಲದೆ ನೀಡು ಕಲ್ಯಾಣ ಈ ಸತಿಗೆ 3
--------------
ಜಯೇಶವಿಠಲ