ಒಟ್ಟು 4163 ಕಡೆಗಳಲ್ಲಿ , 122 ದಾಸರು , 2494 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಿ ಕೇಳು ಕಂದನ ಮಾತನುಗರುಡವಾಹನಗಂಗಾಜನಕಶ್ರೀಹರಿಯೇಪಇತ್ತ ಬಾ ಎಂಬರಿಲ್ಲ ಇರವ ಕೇಳುವರಿಲ್ಲಹತ್ತಿರ ಕುಳ್ಳಿರಿಸಿ ಆದರಿಪರಿಲ್ಲ ||ತತ್ತರ ಪಡುತಿಹೆ ತಾವರೆಲೆಯ ನೀರಂತೆಹತ್ತು ನೂರು ನಾಮವ ಪೊತ್ತ ಶ್ರೀ ಹರಿಯೇ 1ಇಂದಿಗಶನವಿಲ್ಲ ನಿಂದಿರೆ ನೆರಳಿಲ್ಲಒಂದೆ ಸುತ್ತಿಗೆ ತುಂಡು ಅರಿವೆಯಿಲ್ಲ ||ಬೆಂದೊಡಲಿಗೆ ಒಬ್ಬರಯ್ಯೋ ಎಂಬುವರಿಲ್ಲಬಿಂದು ಮಾತ್ರದ ಸುಖಕಾಣಿನಾ ಹರಿಯೇ2ಎಲ್ಲಿದ್ದರೆನಗೊಂದು ನೆಲೆಯಿಲ್ಲ ಶ್ರೀಹರಿಅಲ್ಲ ತಿಂದಿಲಿಯಂತೆ ಬಳಲುವೆನೊ ||ಘುಲ್ಲಲೋಚನ ಪೂರ್ಣ ದಯದಿ ಸಲಹೊ ಎನ್ನಸಲ್ಲದ ನಾಣ್ಯವ ಮಾಡುವರೆ ಹರಿಯೇ 3ನಖಶಿಖ ಪರ್ಯಂತ ನಾನಾ ಹಿಂಸೆಯ ಪಟ್ಟೆಸುಖವೆಂಬುದನು ಕಾಣೆ ಸ್ವಪ್ನದಲುಮುಖವರಿಯದ ರಾಜ್ಯಕ್ಕೆನ್ನನು ಎಳತಂದುಕಕಮಕ ಮಾಡುವುದುಚಿತವೆ ಹರಿಯೇ 4ಇಷ್ಟುದಿವಸ ನಿನ್ನನೆನೆಯದ ಕಾರಣಕಷ್ಟ ಪಟ್ಟೆನು ಸ್ವಾಮಿ ಕಾಯೊ ಎನ್ನ ||ಮುಟ್ಟಿ ಭಜಿಸಲಿಲ್ಲ ಮುರವೈರಿ ನೀ ದಯವಿಟ್ಟು ಸಲಹೊ ಶ್ರೀಪುರಂದರವಿಠಲ5
--------------
ಪುರಂದರದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು
ಕರ್ತಕೃಷ್ಣಯ್ಯ ನೀ ಬಾರಯ್ಯ ಎನ್ನಾರ್ತ ಧ್ವನಿಗೊಲಿದು ಬಾರಯ್ಯ ಪ.ಸುಗುಣದ ಖಣಿಯೆ ನೀ ಬಾರಯ್ಯ ನಮ್ಮಘವನೋಡಿಸಲು ನೀ ಬಾರಯ್ಯಧಗೆಯೇರಿಸಿತುತಾಪಸುಧಾಮುಗುಳ್ನಗೆ ಮಳೆಗರೆಯೆ ಬಾರಯ್ಯ 1ವೈರವರ್ಗದಿ ನೊಂದೆ ಬಾರಯ್ಯ ಮತ್ತಾರು ಗೆಣೆಯರಿಲ್ಲ ಬಾರಯ್ಯಸೇರಿದೆ ನಾ ಶರಣ್ಯ ಬಾರಯ್ಯ ಒಳ್ಳೆದಾರಿಯ ತೋರಲು ನೀ ಬಾರಯ್ಯ 2ವೈರಾಗ್ಯ ಭಾಗ್ಯ ಕೊಡು ಬಾರಯ್ಯ ಜ್ಞಾನಾರೋಗ್ಯದಭೇಷಜಬಾರಯ್ಯಜಾರುತದಾಯು ಬೇಗ ಬಾರಯ್ಯ ಉದಾರಿ ಪ್ರಸನ್ವೆಂಕಟಪ ಬಾರಯ್ಯ 3
--------------
ಪ್ರಸನ್ನವೆಂಕಟದಾಸರು
ಕಲಮದಾನಿ ನಾರಾಯಣರಾವ328ಎಂದಿಗೆ ಕಾಂಬೆನೊಮುರಹರಮಂದರೋದ್ಧರಅಂದುಇಂದುಎನದೇ ಮನ್ಮನಮಂದಿರದೊಳಿಂದಿರಾವರ ಪಭೋಗಿಶಯ್ಯದಿ ಯೋಗ ನಿದ್ರೆಯಲಿಜಾಗರಾದೆನೋಹರಿಜಾಗುಮಾಡದೆ ಹೃದಯ ಪದ್ಮದಿಭಾಗವತರ ಭಾಗ್ಯದ ದೇವ 1ಸಿರಿಯ ಸುರುಚಿರ ಊರುಗಳ ಮೇಲೆಚರಣಯುಗ್ಮವನಿರಿಸಿಪರಮಸುಖಕೆ ಮರಳುಗೊಂಡೆನ್ನಮರತೆಯಾದರೆಸ್ವರಮಣನಿನ್ನ 2ಸುರರುಋಷಿ ಪಿತೃ ಧರಣೀಶ ಗಂಧರುವನರರ ವರದ ಭಕ್ತಿಲಿಕರೆಪ ಸೇವೆಗೆ ಮೆಚ್ಚಿ ಎನ್ನನುತೊರೆದು ಬಿಡಲು ಸಿರಿವಿಠಲ ನಿನ್ನಎಂದಿಗೆ ಕಾಂಬೆನೊಮುರಹರ3
--------------
ಸಿರಿವಿಠಲರು
ಕಲ್ಲು ಬೀಳಲಿ ಮೇಲ್ಮುಗಿಲ್ಲು ಬೀಳಲಿಫುಲ್ಲನಾಭನಿನ್ನ ಪಾದಪಲ್ಲವ ಛಾಯೆಯ ಬಿಡೆಪ.ಶೂಲಕೋಟಿಗಂಜೆಕರವಾಳಘಾತಿಗಂಜೆವಿಶ್ವಪಾಲಕ ನಿನ್ನ ದಿವ್ಯನಾಮಮಾಲಿಕೆ ವಜ್ರಾಯುಧುಂಟು 1ಪೋಕಜನಕಂಜೆ ದುರಿತಾನೀಕ ಬರಲಂಜೆ ಜಗದೇಕ ನಿನ್ನ ಶ್ರೀಪದಾರಾಧಕರ ಬಲ ಉಂಟೆನಗೆ 2ಅಂದು ಅಪಮೃತ್ಯು ಬಂದೆನ್ನಂದಗೆಡಿಸಲು ಎನ್ನತಂದೆ ಪ್ರಸನ್ವೆಂಕಟೇಶ ಬಂದು ಕಾಯಿದ ಹವಣು ಬಲ್ಲೆ 3
--------------
ಪ್ರಸನ್ನವೆಂಕಟದಾಸರು
ಕಾಂತೆ ಸೈರಿಸಲಾರೆ ಕಂಜಾಕ್ಷನಗಲೀರೆಕಂತುಶರದ ಬಲ ಕಡುವೇಗವಾಯಿತಲೆಕಾಂತ ಮೂರುತಿಯ ಕರೆತಾರೆ ತಾಯೆ ಪ.ಸೀತಕರನ ಪ್ರಭೆಯು ಶುಕದುಂಬಿಗಳ ರವವುಸೋತಬಾಲೆಯ ಮುಂದೆ ಸರಸವೆ ಸೊಗಸೋದೆನೀತವೇನೆಲೆ ತಂಗಿ ನೀರಜನಾಭಗೆ 1ನೀರೊಳು ಕರೆದೆನ್ನನೀಲಜೀಮೂತವರ್ಣನೀರಜದ್ವಕ್ತ್ತ್ರವ ನಖದಿಘಾಸಿಮಾಡುವನಾರಾಯಣನೆನ್ನ ಸುಳಿದರಿನ್ನೇನೆ 2ಅಧರದೊಳಿಟ್ಟುಕೊಳಲು ಅತಿಮೋಹಿಸುವ ನಲ್ಲಯದುಕುಲದರಸ ಮೆಚ್ಚೆ ಎನ್ನೊಳು ಘನ್ನಮಧುಪಕುಂತಳ್ಯಾವಳೊ ಮನೆಗೊಯ್ದಳೊ 3ಆವಗವನಕೇಳಿಆಡುವವನ ಸಾಲಿದಾವಸುಕೃತದಿಂದ ದೊರೆತನೊ ಶ್ರೀಮುಕುಂದಆವ ದುಷ್ಕøತ ಬಂದು ಅಗಲಿಸಿತಿಂದು 4ಚಂಪಕದಲರ್ಮಾಲೆ ಚಂದನದ ಲೇಪ ಒಲ್ಲೆಕಂಪಿನೊಳಗೆನಿಂದುತಕ್ರ್ಕೈಸುವಾನಂದಸಂಪನ್ನ ತಾ ಬಂದು ಸಲಹುವನೆಂದೆ 5ಪರಿಯಂಕದಲಿ ಕುಳಿತು ಪರಿಪರಿಯ ಸುಖವಿತ್ತುಕರದಿ ಕಂಕಣವಿಟ್ಟು ಕಡÉಯ ಪೆಂಡ್ಯಾ ಕೊಟ್ಟುಕರುಣಿಜರಿದುತರವೆ ತನಗಿದು6ಇಂದಿರೆರಮಣ ಎನ್ನ ಇಚÉ್ಭಯಸುರಧೇನುಸುಂದರ ರನ್ನ ಪ್ರಸನ್ನ ವೆಂಕಟೇಶನಸಂದೇಹವಿಲ್ಲದೆ ಶರಣು ಹೊಂದಿದೆನೊ 7
--------------
ಪ್ರಸನ್ನವೆಂಕಟದಾಸರು
ಕಾಯೊ ಗೋವಿಂದ ಕಾಯೊ ಮುಕುಂದಮಾಯದ ತಡಿಯ ತಪ್ಪಿಸೊ ನಿತ್ಯಾನಂದ ಪ.ನಾನಾ ಯೋನಿಯ ಸುತ್ತಿ ನೆಲೆಗಾಣದಂತಾದೆನೀನೊಲಿದಿಂದೀ ಜನ್ಮವ ಪಡೆದೆಜ್ಞಾನ ಹೊಂದಲಿಲ್ಲ ಧರ್ಮದಾಚರಣಿಲ್ಲಏನು ಗತಿಯೊ ಎನಗೆ ಮುಂದೆಸಿರಿನಲ್ಲ1ಮರ್ಕಟಗೆ ಹೊನ್ನಕೊಡ ದೊರೆತಂತಾಯಿತುಮೂರ್ಖವೃತ್ತಿಯಲಿ ಆಯುಷ್ಯ ಹೋಯಿತುನರ್ಕಸಾಧನ ಘನವಾಗಿದೆ ಪುಣ್ಯ ಸಂಪರ್ಕವ ಕಾಣೆನೈ ಕರುಣಿಗಳರಸ 2ಎನ್ನ ತಪ್ಪಿನ ಹೊಳೆ ಒಳಗೊಂಬುದು ಒಂದೆನಿನ್ನ ದಯದ ಶರಧಿಯಲ್ಲದೆಇನ್ನೇನು ಮಾರ್ಗವು ಸಿಲುಕದು ತಂದೆ ಪ್ರಸನ್ನವೆಂಕಟಪತಿಹರಿದೀನಬಂಧು3
--------------
ಪ್ರಸನ್ನವೆಂಕಟದಾಸರು
ಕಾಳಿಯಮರ್ದನ ರಂಗಗೆ- ಹೇಳೆ ಗೋಪಮ್ಮ ಬುದ್ಧಿ |ಕೇಳಲೊಲ್ಲನು ಎನ್ನ ಮಾತನು ಪದಿಟ್ಟ ನೀರೊಳು ಕಣ್ಣ ಮುಚ್ಚನೆ-ಹೋಗಿ |ಬೆಟ್ಟಕೆ ಬೆನ್ನಾತು ನಿಂತನೆ ||ಸಿಟ್ಟಿಲಿ ಕೋರೆದಾಡೆ ತಿಂದನೆ-ಅಹ |ಗಟ್ಟಿ ಉಕ್ಕಿನ ಕಂಬ ಒಡೆದು ಬಂದನೆ 1ಮೂರಡಿ ಭೂಮಿಯ ಬೇಡಿದನೆ-ನೃಪರ |ಬೇರನಳಿಯೆ ಕೊಡಲಿ ಪಿಡಿದನೆ ||ನಾರಮಡಿಯನುಟ್ಟು ಬಂದನೆ-ಅಹ |ಚೋರತನದಿ ಪಾಲ್ಬೆಣ್ಣೆಯ ತಿಂದನೆ 2ಬತ್ತಲೆ ನಾರಿಯರನಪ್ಪಿದ-ಹೋಗಿ ||ಉತ್ತಮಾಶ್ವವನು ಹತ್ತಿದ ||ಹತ್ತವತಾರವ ತಾಳಿದ-ನಮ್ಮ |ಭಕ್ತವತ್ಸಲ ಸ್ವಾಮಿ ಪುರಂದರವಿಠಲನು 3
--------------
ಪುರಂದರದಾಸರು
ಕುಳಿತೆಯ ಕೃಷ್ಣ ಕುಳ್ಳಿರ ಕಲಿತೆಯ |ಕುಳಿತೆಯ ಎನ್ನೊಡೆಯ ಪಇಳೆಯೊಳು ಭಕುತರ ಹೃದಯ ಕಮಲದೊಳು |ಕುಳಿತೆಯ ಎನ್ನೊಡೆಯ ಅ.ಪಜಲಚರರೂಪದಿ ನಿಗಮಗಳೆಣಿಸುತ ಕುಳಿತೆಯ ಎನ್ನೊಡೆಯ |ಕುಲಗಿರಿಗಳನೆಲ್ಲ ನೆಗಹಿಕೂರ್ಮನಾಗಿ ಕುಳಿತೆಯ ಎನ್ನೊಡೆಯ ||ಛಲದಿ ವರಾಹನಾಗಿ ಭೂಮಿದೇವಿಯ ತಂದುಕುಳಿತೆಯ ಎನ್ನೊಡೆಯಖಳಹಿರಣ್ಯಾಖ್ಯನ ಕರುಳಬಗಿವೆನೆಂದುಕುಳಿತೆಯ ಎನ್ನೊಡೆಯ 1ತೊಡೆ ವಟುವೇಷವ ಸುರರ ರಕ್ಷಿಪೆನೆಂದು ಕುಳಿತೆಯ ಎನ್ನೊಡೆಯ |ಪೊಡವಿಯ ಕ್ಷತ್ರಿಯ ವಂಶ ಸವರುವೆನೆಂದು ಕುಳಿತೆಯ ಎನ್ನೊಡೆಯ ||ಮಡದಿಯ ಒಯ್ದನ ಕೆಡಹಿ ಲಂಕೆಯಲಿಕುಳಿತೆಯ ಎನ್ನೊಡೆಯ |ಕಡುಮೂರ್ಖ ಕೌರವನನ್ನು ಕೊಲುವೆನೆಂದು ಕುಳಿತೆಯ ಎನ್ನೊಡೆಯ 2ತ್ರಿಪುರರ ಸತಿಯರ ವ್ರತವ ಕೆಡಿಪೆನೆಂದು ಕುಳಿತೆಯ ಎನ್ನೊಡೆಯ |ಉಪಸನಿಷದ್ವಾಹನ ತೇಜಿಯ ಬೆನ್ನಲಿ ಕುಳಿತೆಯ ಎನ್ನೊಡೆಯ |ಕೃಪೆಯಿಂದಲಿ ಮನದೊಳು ನೆನೆವವರಲಿಕುಳಿತೆಯ ಎನ್ನೊಡೆಯ |ಕಪಟನಾಟಕಸಿರಿ ಪುರಂದರವಿಠಲ ಕುಳಿತೆಯ ಎನ್ನೊಡೆಯ3
--------------
ಪುರಂದರದಾಸರು
ಕೂಡಲ ಮಾಣಿಕ್ಯ ಕ್ಷೇತ್ರಸ್ಥ ಭರತ ಪ್ರದ್ಯುಮ್ನ60ಶ್ರೀ ರಾಮಚಂದ್ರಾನುಜ ಭರತರಾಜಶರಣಾದೆ ತವಚರಣಯುಗಳ ತೋಯಜಕೆ ಪಉರು ಪರಾಕ್ರಮಿ ದುರ್ಗೆರಮಣ ಹರಿಚಕ್ರದಲಿಇರುವೆ ನೀ ತದ್ರೂಪದಲಿ ಸೇವಿಸುತಲಿಮಾರಶ್ರೀ ಕೃಷ್ಣಸುತ ಸ್ಕಂಧಾದಿರೂಪಿ ನೀಧೀರ ನಿನ್ನಲಿ ಕೃತೀಪತಿಯು ಪ್ರಜ್ವಲಿಪ 1ಉಡುಪಶೇಖರ ಕೊಟ್ಟ ವರಬಲದಿ ಪೌಲಸ್ತ್ಯಕಡು ಕಷ್ಟ ಕೊಡಲಾಗಸುರರುಮೊರೆಯಿಡಲುಕಡಲಶಯನನು ರಾಮ ಪ್ರಾದುರ್ಭವಿಸಲು ನೀನುಹೆಡೆರಾಜ ಅನಿರುದ್ಧಸಹ ಬಂದೆ ಬುವಿಯೊಳ್ 2ಕೇಕಯಕೆ ನೀ ಪೋಗೆ ಕೈಕೇಯಿ ವರದಿಂದರಾಕೇಂದುನಿಭಮುಖನು ನಿಷ್ಕಳ ಶ್ರೀರಾಮನನೂಕಲು ವನಕೆ ನೀ ಬಂದರಿತು ಧಿಕ್ಕರಿಸಿಏಕಾತ್ಮ ರಾಮನಲಿ ಪೋಗಿ ಬೇಡಿದೆಯೊ 3ಸ್ವೀಕರಿಸಿ ರಾಜ್ಯವಾಳೆಂದು ನೀ ಬೇಡಲುಅಖಿಲಾಂಡಕೋಟಿ ಬ್ರಹ್ಮಾಂಡಪತಿ ರಾಮನಾಕಿ ಭೂಸುರರೊಡೆಯ ಹದಿನಾಲ್ಕು ವರ್ಷಗಳುಆಗೆ ತಾ ಬರುವೆನು ಎಂದು ಪೇಳಿದನು 4ದೇವ ಶ್ರೀ ರಾಮನ ಸುಖಜ್ಞಾನಮಯಪಾದಸೇವಿಸಿ ಪ್ರೇಮಪ್ರವಾಹದಲಿ ನೀನುಬುವಿಯನು ಪವಿತ್ರ ಮಾಡುವ ಪಾದಪೀಠವನುನವವಿಧ ಭಕ್ತಿಯಲಿ ತಂದು ಪೂಜಿಸಿದೆ 5ನಂದಿಗ್ರಾಮದಲಿ ನೀ ತಪಶ್ಚರ್ಯದಲಿ ಇದ್ದುಬಂದಿಲ್ಲ ರಾಮನೆಂದಗ್ನಿ ಮುಖದಲಿ ನಿಲ್ಲೆಬಂದ ಇಕ್ಕೋ ಸ್ವಾಮಿ ರಾಮಚಂದ್ರನು ಎಂದಇಂದಿರೇಶನ ಪ್ರಥಮ ದೂತ ಶ್ರೀ ಹನುಮ 6ಅಖಿಲೇಶ ಸುಖಮಯನು ಶ್ರೀ ರಾಮಚಂದ್ರನುಸುಖ ಪೂರ್ಣ ಸೀತಾಸಮೇತ ಬರುವುದನುನೀಕೇಳಿಮುದದಲಿ1 ಮಾತೇರು ಶತ್ರುಘ್ನಭಕುತ ಪುರಜನ ಕೂಡ ಪೋದೆ ಕರೆತರಲು 7ಕಮಲೆ ಜಾನಕಿಪತಿಯ ಮೇಲೆ ಪೂಮಳೆ ಕರೆದುನಮಿಸೆ ನೀ ಭಕ್ತಿಯಲಿ ಕೃತಕೃತ್ಯ ಮನದಿಸ್ವಾಮಿ ರಾಮನು ನಿನ್ನಅಚಲಭಕ್ತಿಯ ಮೆಚ್ಚಿಪ್ರೇಮದಿಂದಲಿ ನಿನಗಾಲಿಂಗನವನಿತ್ತ 8ಸುರರ ನಗರೋಪಮವು ಸರೆಯೂ ತಟಿನಿಯಲ್ಲಿಇರುವುದು ಅಯೋಧ್ಯಾ ಆ ಪುರಿಜನರು ಎಲ್ಲಾಶ್ರೀರಾಮ ಸೀತಾಸಮೇತ ಪರಿವಾರ ಸಹಪುರಿಯೊಳು ಬರಲು ಆನಂದ ಹೊಂದಿದರು 9ಅಘದೂರ ಪೂರ್ಣಕಾಮನ ಮಂದಹಾಸವನುನರಜನರು ನೋಡಿ ಹಿಗ್ಗಿ ಘೋಷಿಸಲುಜಗಜ್ಜನ್ಮ ಸ್ಥಿತ್ಯಾದಿಕರ್ತ ಭೂಕಾಂತ ಶ್ರೀರಾಘವಗೆ ಮಾಡಿಸಿದೆ ರಾಜ್ಯಾಭಿಷೇಕ 10ಶ್ರೀ ರಾಮಭದ್ರನಿಗೆ ಯುವರಾಜನಾಗಿದ್ದುಭರತರಾಯನೆ ನೀನು ಸೇವೆ ಅರ್ಪಿಸಿದೆಸರಸಿಜೋದ್ಭವ ಲೋಕದಂತಾಯಿತೀ ಲೋಕವರವಿಷ್ಣು ಭಕ್ತಿಯು ಸೌಖ್ಯ ಎಲ್ಲೆಲ್ಲೂ11ಶರದಿಂದ ನೀನು ಗಂಧರ್ವರೂಪದಲಿದ್ದಮೂರು ಕೋಟಿ ಕ್ರೂರ ಅಸುರರನು ಕೊಂದೆಕರುಣಿಸಿ ನೀ ಎನ್ನ ಕಷ್ಟಗಳ ಪರಿಹರಿಸೊಶ್ರೀ ರಾಮಪ್ರಿಯ ಭರತ ಎನ್ನ ಗುರುಗಳ ರಾಜ 12ಶ್ರೀ ರಾಮ ಅವತಾರ ಕಾರ್ಯ ತಾ ಪೂರೈಸಿಸುರರುಮುನಿಗಣ ಮುಕ್ತಿಯೋಗ್ಯರ ಸಮೇತತೆರಳೆ ಸ್ವಧಾಮಕ್ಕೆ ಚಕ್ರ ನೀ ಚಕ್ರವನುಶ್ರೀರಾಮನಿಗೆ ದಕ್ಷಪಾಶ್ರ್ವದಲಿ ಪಿಡಿದೆ 13ಗರುಡಮೃಡಶೇಷಸ್ಥ ಭಾರತೀಪತಿ ಹೃಸ್ಥಪರಮಪೂರುಷ ಕೃತೀಪತಿಯು ಪ್ರದ್ಯುಮ್ನಹರಿರಾಮನಲಿ ಸದಾ ಭಕ್ತಿಭರಿತನೆ ಭರತವರನೀನು ಅಹಂಕಾರಿಕ ಪ್ರಾಣಾದ್ಯರಿಗೆ14ಸರಸಿಜಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸನವರಭಕ್ತ ವೃಂದ ಶಿರಮಾಣಿಕ್ಯ ಭರತಧರೆಯೊಳುತ್ತಮ ಕೂಡಲ್ ಮಾಣಿಕ್ಕವೆಂಬುವಕ್ಷೇತ್ರದಲಿ ನಿಂತು ಹರಿಭಕ್ತರನು ಪೊರೆವೆ 15
--------------
ಪ್ರಸನ್ನ ಶ್ರೀನಿವಾಸದಾಸರು
ಕೃಷ್ಣವೇಣಿ164ನಮೋ ನಮೋ ಕೃಷ್ಣವೇಣಿನಮೋ ನಮೋ ಕೃಷ್ಣವೇಣಿ ಕಲ್ಯಾಣಿ ಪ.ಈ ಜನ್ಮದಘವು ನಾನಾ ಜನ್ಮಕೃತದೋಷಆರ್ಜಿತವಾದ ಪಂಚ ಮಹಾಪಾಪವುತ್ರಿಜಗತ್ಪಾವನಿಯೆ ನಿನ್ನ ಕಂಡು ನಾ ಕಳೆದೆರಾಜಿಸುವ ದಿವ್ಯಗತಿಯೀಯೆ ಎನ್ನತಾಯೆ 1ವಿಪ್ರಮುನಿ ಸುರನರರು ಕನ್ಯಕ್ಕೆಗುರುಬರಲುಕ್ಷಿಪ್ರನೆರೆದರು ಉಭಯತೀರವಿಡಿದುಸುಪ್ರಾರ್ಥನೆಯ ಮಾಡಿ ಆನಂದದಿ ಹರಿಯನೆ ಪ್ರಸನ್ನೀಕರಿಸಿಕೊಳ್ಳುವರಮ್ಮ 2ನಿರ್ಮಳಾತ್ಮಕÉ ಗಂಗೆ ಸಂಗೆ ಗುಣೋತ್ತುಂಗೆಹಿಂಗಿಸು ಭವವ ಪಾವನತರಂಗೆಜಂಗಮ ಜಡಾತ್ಮರನುದ್ಧರಿಸುತಿಹೆ ಸದಾಮಂಗಳ ಶ್ರೀಪ್ರಸನ್ವೆಂಕಟನೊಲುಮೆಯಲ್ಲಿ 3
--------------
ಪ್ರಸನ್ನವೆಂಕಟದಾಸರು
ಕೆಟ್ಟೆನಲ್ಲೊ ಹರಿಯೆ |ಸಿಟ್ಟು ಮಾಡಿ ಎನ್ನ ಬಿಟ್ಟು ಕಳೆಯ ಬೇಡ ಪಬಂದೆನು ನಾ-ತಂದೆ-ತಾಯಿಗಳುದರದಿ |ಒಂದನೂ ಅರಿಯದೆ ಬಾಲಕತನದೊಳು ||ಮುಂದುವರಿದ ಯೌವನದೊಳು ಸತಿ-ಸುತ-|ರಂದವ ನೋಡುತ ನಿನ್ನ ನಾ ಮರೆತೆನೊ 1ಸ್ನಾನ-ಸಂಧ್ಯಾನವು ಹೀನವಾಯಿತು ಬಹು-|ಮಾನವಿಲ್ಲದೆ ಕುಲಹೀನರಾಶ್ರಯದಿಂದ ||ಙ್ಞÕನಿಗಳೊಡನಾಟವಿಲ್ಲದೆ ಮನದೊಳು |ದಾನ-ಧರ್ಮದ ಬಟ್ಟೆಯಂತೆಂದು ಮರೆತನು 2ಮೊದಲೆ ಬುದ್ದಿಯು ಹೀನ ಅದರೊಳು ವೃದ್ಧಾಪ್ಯ |ಕದನವು ದಶದಿಕ್ಕಿನುದಯದ ರಾಯರ ||ಎದೆನೀರು ಬತ್ತಿತು ಅದರಿಂದ ನಿನ್ನಯ |ಪದಪದ್ಮಯುಗಳದ ತುದಿಯ ನಾ ಮರೆತೆನು 3ಮೂಢನಾದೆನು ನಿನ್ನ ಬೇಡಿಕೊಳ್ಳದೆ ನಾನು |ಕಾಡೊಳಗಾಡುವ ಮೃಗದಂತೆ ಜೀವಿಸಿ ||ಗೂಡೊಳಗಿರುತಿಹ ಗೂಬೆಯ ತೆರನಂತೆ |ಮಾಡದೆ ನಿನ್ನಯ ಸ್ಮರಣೆಯ ಮರೆತೆನು 4ಬುದ್ದಿಹೀನನು ನಾನು ಉದ್ದರಿಸೆಲೊ ದೇವಮುದ್ದು ಶ್ರೀಪುರಂದರವಿಠಲನೆನ್ನ ||ಬುದ್ದಿಯೊಳಡಗಿಯೆ ತಿದ್ದಿಟ್ಟು ನಡೆಸಯ್ಯ |ಪೊದ್ದುವೆ ನಿನ್ನಯ ಚರಣಾರವಿಂದವ 5
--------------
ಪುರಂದರದಾಸರು
ಕೆಡಗೊಡದಿರು ಎನ್ನ ಚಿತ್ತಗತಿಯ ಸುರರೊಡೆಯ ತವಾಂಘ್ರಿ ಹೊಂದಿದ ಮತಿಯ ಪ.ಒಂದು ಗುರಿಗಿಟ್ಟರೆ ತಪ್ಪುತಿದೆ ಮತ್ತೊಂದಕಿಡದೆ ತಾ ತಗಲುತಿದೆಹೊಂದಲೊಲ್ಲದು ತ್ವನಿಷ್ಠೆಯನು ಒಣದಂದುಗಗೊಳುತಿದೆಹರಿನೀನು1ಮುಂದಿಟ್ಟ ಷಡ್ರಸಾನ್ನವನುಣ್ಣದು ದೂರಿಂದ ನಿಸ್ಸಾರಕ್ಹೆಣಗುವುದುನಂದಿಸಲೊಲ್ಲದು ನೆಳಲ್ವಿಡಿದು ಕಿಚ್ಚೆಂದಂಜದೋಡಿ ಧುಮುಕುತದಿದು 2ಪ್ರದೇಶ ಅಂಗುಟ ಮಾತ್ರವ ಕಾಣದೆ ತಾಭೂದಿವಿ ಪಾತಾಳಕೈದುತಿದೆಮಾಧವಪ್ರಸನ್ನವೆಂಕಟ ದಯಾಳು ನಿನ್ನಪಾದದಲ್ಲಿಡು ಇದರುಲುಹು ಬಲು 3
--------------
ಪ್ರಸನ್ನವೆಂಕಟದಾಸರು
ಕೆಡಿಸುವನಲ್ಲೊ ನೀ ಬಲು ಕರುಣಿ ನನ್ನಕಿಡಿಗೇಡಿತನ ಉಣಿಸಿತು ಭವಣಿ ಪ.ಹುಸಿಯ ನುಡಿದು ದೆಸೆಗೆಟ್ಟವ ನಾ ನನ್ನಕುಶಲ ಕಲ್ಯಾಣದೊಳಿಟ್ಟ ಕರುಣಿ ನೀಅಸಮ ಚಂಚಲ ಚಿತ್ತವುಳ್ಳವ ನಾ ದುವ್ರ್ಯಸನವಿದಾರಿ ಉದಾರಿಯು ನೀ 1ಹಗಲರಿತ ಕುಳಿಯೊಳ್ಬಿದ್ದವ ನಾ ಎನ್ನನೆಗಹಿ ನೆಗಹಿ ನೆಲೆಗೊಟ್ಟವ ನೀಬಗೆ ಬಗೆ ದೋಷಾಚರಣ್ಯೆವ ನಾ ಮತ್ತಘ ಸಂಚಿತವನೋಡಿಸುವೆ ನೀ 2ವಿಷಯದ ಬಯಕೆಲಿ ನವೆದವ ನಾ ಶುದ್ಧಭೇಷಜನಾಗಿಹೆ ಭವರೋಗಕೆ ನೀವಿಷವನುಂಡು ಕಳೆಗೆಡುವವ ನಾ ಪೀಯೂಷವನೆರೆವ ದಯಾವಾರಿಧಿ ನೀ 3ಅಹಂಕಾರದಲಿ ಬೆರೆತಿದ್ದವ ನಾಶುಭವಹ ನಾಮವನಿತ್ತು ತಿದ್ದುವೆ ನೀಮಹಿಯೊಳಗಮಿತಘ ಸಾಧಕ ನಾ ಎನ್ನಬಹುಕಲುಷವನ ದಾಹಕ ನೀ 4ಕೆಡಿಸಬೇಕಾದರೆ ತಿರ್ಯಗ್ಯೋನಿಯ ನೀಬಿಡಿಸಿ ವೈಷ್ಣವ ಜನ್ಮಕೆ ತಹೆಯಾಒಡೆಯ ಪ್ರಸನ್ವೆಂಕಟ ದಯಾಳು ನಿನ್ನಒಡಲ ಹೊಕ್ಕವನೆಂದು ನಂಬಿನೆಚ್ಚಲು 5
--------------
ಪ್ರಸನ್ನವೆಂಕಟದಾಸರು
ಕೇಳಲೊಲ್ಲನೆ ಎನ್ನ ಮಾತನು-ರಂಗ -|ಕಾಳಿಮರ್ದನನಿಗೆ ಪೇಳೇ ಗೋಪಮ್ಮ ಬುದ್ಧಿ ಪಬಿಟ್ಟ ಕಂಗಳ ಮುಚ್ಚಲೊಲ್ಲನೆ-ಬೇಗ- |ಬೆಟ್ಟಕೆ ಬೆನ್ನೊಡ್ಡಿ ನಿಂತನೆ ||ಸಿಟ್ಟಿಂದೆ ಕೋರೆಯ ತೋರ್ಪನೆ-ಬೇಗ-|ಗಟ್ಟಿ ಉಕ್ಕಿನ ಕಂಬ ಒಡೆದು ಬಂದನೆ ರಂಗ 1ಮೂರಡಿ ಭೂಮಿಯ ಬೇಡಿದನೆ-ನೃಪರ-|ಬೇರ ಕಡಿಯಲು ಕೊಡಲಿ ತಂದನೆ |ನಾರಸೀರೆಯನುಟ್ಟುಕೊಂಡನೆ-ಬೇಗ-|ಚೋರತನದಿ ಹರವಿ ಹಾಲ ಕುಡಿದನಮ್ಮ 2ಬತ್ತಲೆ ನಾರಿಯರನಪ್ಪಿದ-ಬೇಗ-|ಉತ್ತಮ ಅಶ್ವವ ಹತ್ತಿದ ||ಹತ್ತವತಾರವನೆತ್ತಿದ-ನಮ್ಮ-|ಸತ್ಯಮೂರುತಿ ಪುರಂದರವಿಠಲರಾಯನು 3
--------------
ಪುರಂದರದಾಸರು