ಒಟ್ಟು 4842 ಕಡೆಗಳಲ್ಲಿ , 131 ದಾಸರು , 3185 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿರಹ ನಿಲ್ಲದು ಕಾಣೊ ನಿನ್ನ ಕೂಡದೆ | ಗುರುತ ಮಾಡಿದ ಸೊಗಸು ಮರಿಯದೊ ಗೋಪಾಲ ಪ ಕಣ್ಣುನೋಟ ತಿರುಹಿ ನೀ ಕೈಯ ಮುದರಿ ವರಹ | ಹೊನ್ನು ಕಂಭದಲಿ ನಿಂದು ತೋರಿ | ಭ್ರಮಿಸಿ ಕುನ್ನಿಗೆ ಕಣಿಯನಿಕ್ಕಿ ಹೊಡೆಯೊನಾಗಿ | ಹೆಣ್ಣು ಭಾವನ ಕರೆದು ಸೂಚನೆ ಮಾಡಿದನು 1 ಪುಟ್ಟ ಹೆಜ್ಜೆಲೆ ಸಾಗಿ ಮುದ್ದು ಕೊಡಲು ಬಯಸಿ | ದೃಷ್ಟಿಯಿಂದ ನೋಡಲು ಭ್ರಾಂತಳಾಗಿ | ಅಟ್ಟ ಅಡಿವೆಯೊಳು ನಡಿವೆ ನಾ ಪೋಗಲು | ದುಷ್ಟ ನಾದಿನಿ ಕಂಡು ಮಾವಗೆ ಪೇಳಿದಳು 2 ಇಂದಿರೇಶ ತಾನಾಗಿ ಎದೆ ಮುಟ್ಟಿ ನಿನಗೆ | ಇಂದಿನ ದಿವಸ ನಾ ಭ್ರಮಿಸಿದ್ದು | ಒಂದೊಂದು ಬಗೆ ನೆನಿಸಿ ಕಲೆಕಲೆಗಳು ಕೆರಿದ್ಯಾಸೆ | ಮುಂದೆಗಾಣದೆ ನಡಿಯೆ ಗಂಡಾ ತಲೆದೂಗಿದನು3 ಬೀದಿಯೊಳಗೆ ನೀನು ಕುದರಿಯ ಕುಣಿಸುತ ಹಾದು ಪೋಗಲು ನಮ್ಮ ಮನಿಯ ಮುಂದೆ | ಪಾದಕ್ಕೆ ಕಪ್ಪನೆ ಇಟ್ಟು ತೊಟ್ಟ ಕುಪ್ಪಸ ಬಿಚ್ಚೆ | ಮದನ ನೋಡಿ ಮನೆಯಲ್ಲರಿಗೆ ಬೀರಿದನು4 ಪರಮಪುರುಷ ನೀನೆ ನಿನ್ನಂಗ ಸಂಗಕ್ಕೆ | ಸರಿಗಾಣೆ ಸ್ಮರಿಸೆ ಮನಸು ನಿಲ್ಲದೊ | ಸುರತ ಕೇಳಿಯ ಜಾಣ ವಿಜಯವಿಠ್ಠಲ ಎನ್ನ | ಕರೆದು ಮಸಕು ತೆಗೆದು ತರ್ಕೈಸೊ ಚನ್ನಿಗಾ 5
--------------
ವಿಜಯದಾಸ
ವಿವೇಕದಿಂದಾ ಮತಿಯುಕ್ತನಾಗಿ ಕುವಿದ್ಯದಾದಾ ಗುಣವೆಲ್ಲ ನೀಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದದಾಮೋದರ ಮಾಧವೇತಿ 1 ತ್ರಿವಿಧ ತಾಪದೊಳು ಮಗ್ನನಾಗಿ ನೀವ್ಯರ್ಥದಿನಗಳಿಯದೆ ಹೋಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 2 ಈ ವಿಷಯದಾಸುಖ ನಿತ್ಯವಲ್ಲಾ ನೀವಾತು ಕೇಳಿಗುರುವೀನ ಸೊಲ್ಲಾ ಭಾವಾರ್ಥದಿಂದ ಸ್ಮರಿಸೂದು ನೀತಿ ಗೋವಿಂದ ದಾಮೋದರ ಮಾಧವೇತಿ 3 ಆವದು ತನ್ನ ಹಿತವನು ನೋಡಿ ಸಾವಧನಾಗೀ ಶ್ರವಣ ಮಾಡಿ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 4 ಅವಾವ ಯೋನಿಯಲಿ ಬಂದಹಿಂದಾ ಅವದುಗತಿಯಂದು ನೋಡಿವಂದಾ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 5 ತಾವಂದೇ ಆಶ್ರೈಸದೆ ಕಾಮಧೇನು ಸಾವಿರ ಸಾಧನಕ ಬೀಳುದೇನು ಬಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 6 ಜೀವಾತ್ಮರಾಗಿ ಸಚ ರಾಚ ರಾವ ಬಾವರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೊದರ ಮಾಧವೇತಿ 7 ಗೋವಿಂದ ಅಷ್ಟಕವ ದಾವಪ್ರಾಣೀ ಸೇವಿಸುವನು ಕಾವನು ಚಕ್ರಪ್ರಾಣೀ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಶೇಷ ಎಂಥ ರಾಸಿಯೊ ಶ್ರೀಕಾಂತನ ಮುಖಸೂನು ನಿಂತು ಏರುವೋ ರಾಶಿನ್ಯಾವುದೊ ಇದನೆಲ್ಲರು ಪೇಳಿರಿ 1 ರಂಗ ಮೂರುತಿ ಸುತನ್ವೊೈರಿ ಏರಿಪೋ ಹೆಸ- ರೆಂದುಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 2 ಹರಿಸುತನಟ್ಟುಳಿಯಿಂದ ಪುಟ್ಟುವುದೇನು ಪರಮ ಗುಪ್ತದ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 3 ಇರುಳು ಹಗಲು ಮೈಯ್ಯ ತೊಳೆಯುತ ಮಣ್ಣಿನ ಲ್ಲೊ ್ಹರಳುತಿಪ್ಪುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 4 ಒದ್ದು ಮಾತಂಗನ ಗದ್ರಿಸ್ತಮುರಿದ ಪ್ರ- ಸಿದ್ಧನೆನಿಪ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 5 ಜೋಡು ವಂಶುದ್ಧಾರ ಮಾಡುವುದೀ ರತ್ನೆಂ- ದಾಡಿಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 6 ಜಗದೊಳಗೆಲ್ಲ ಭಾರಕರ್ತನಾಗಿ ಏರಿಸಿಳುಹೋ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 7 ಅಂಧಕಾರದಲಿದ್ದು ಬಂದ ಜನರ ಮುಟ್ಟಿ ದುಂದೆಬ್ಬಿಸುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 8 ದೊರೆಸುತ ತಾ ಬಂದು ಸರುವ ಜನರ ಮುಂದೆ ಮುರಿದುಬಿಷ್ಠುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 9 ಭರದಿ ಬಂದು ಕಾಲಕೆದರುತ ತನ್ನ ್ಹಲ್ಲು ಮುರಿಸಿಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 10 ರುಂಡ ಮಾಲೆಗಳೆಲ್ಲ ಗುಂಡಿನಂಥ ದೇಹ- ಕ್ಕ್ಹೊಂದೇರಿಳಿವೊ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 11 ಹತ್ತರೊಳಗೆ ಒಂಬತ್ತು ಬಿಟ್ಟ ಹೆಸ ರಿಟ್ಟುಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 12 ಯೋಚನೆ ಮಾಡಿ ಆಲೋಚಿಸಿ ನೋಡರನೇಕ ಮೂಢಜ್ಞಾನಿಗೆ ತಿಳಿವೊದೆ ಇದನೆಲ್ಲರು ಪೇಳಿರಿ 13 ಈಸು ರಾಶಿಗಳು ಭೀಮೇಶಕೃಷ್ಣನ ದಯ- ದೀಕ್ಷಣದಲ್ಲೆ ತಿಳಿದು ಪೇಳಿ ಇದನೆಲ್ಲರು ಪೇಳಿರಿ 14
--------------
ಹರಪನಹಳ್ಳಿಭೀಮವ್ವ
ವಿಶೇಷ ಸಂದರ್ಭದ ಹಾಡುಗಳು 250 * ಅಡಗಿದೇತಕೊ ರಜತ ಕವಚದೊಳಗೆ ಅಡಿ ಭಕ್ತರಾಡುವೋ ಬಿಡಿ ನುಡಿಗೆ ಪ. ಗೇಣು ಪ್ರಮಾಣದಾ ಪ್ರಾಣರಾಯನೆ ಛಿದ್ರ ಕಾಣುತಿರೆ ಶಿಲೆರೂಪದಲ್ಲಿ ನಲಿದು ಆನಂದದಿಂ ನುಡಿದ ಆನತರ ವಚನಕ್ಕೆ ನೀ ನಾಚಿ ಜಗಕಿನ್ನು ಕಾಣಬಾರದು ಎಂದು 1 ದುರುಳ ಸೀತೆಯ ಕದ್ದು ತೆರಳುತಿರೆ ನಿಮ್ಮ ಕಂ ಡರವಿಂದನಯನೆ ಆಭರಣ ಕಟ್ಟೊಗೆಯೇ ಸಿರಿಚರಣ ಸ್ಪರ್ಶವೆನಗಿರಲೆಂದು ಪೈಜಣವ ಮುರಿಸಿ ಕವಚವ ಮಾಡಿ ಮೆರೆವ ವೈಖರಿಯೇ 2 ರಜತಗಿರಿ ವಾಸ ರಣದಲ್ಲಿ ಬ್ರಹ್ಮಾಸ್ತ್ರವನು ಭುಜಬಲದಿ ಬಿಡಲು ಲೆಕ್ಕಿಸದೆ ಮೂದಲಿಸೀ ನಿಜವಾಸ ಸ್ಥಳವಿಲ್ಲದಲೆಯಲೆಂದೆನ್ನುತಲಿ ರಜತಗಿರಿ ಕವಚ ಮಾಡಿರುವ ವೈಭವವೋ 3 ಕುನ್ನಿ ಮತಗಳ ಮುರಿದು ಘನ್ನ ಶಾಸ್ತ್ರವನೊರೆದು ಚನ್ನಕೃಷ್ಣನ ರಜತ ಪೀಠದಲಿ ನಿಲಿಸೀ ಎನ್ನೊಡೆಯನಾಸನವು ಎನಗೆ ಭೂಷಣವೆಂದು ಚನ್ನಾಗಿ ಮೈಗೆ ಸುತ್ತಿರುವ ವಿಸ್ಮøತಿಯೋ 4 ನಿನ್ನಲ್ಲಿ ವಡಕಿರಲು ಪೂಜಿಸುವ ಜ್ಞಾನಿಗಳಿ ಗಿನ್ನೊಂದು ನುಡಿ ಅಜ್ಞರಿಂ ಬೇಡವೆಂದೂ ಚನ್ನಾಗಿ ಹಿಂದೆ ಮುಂದೆಡಬಲದಿ ಮೇಲ್ ಕೆಳಗೆ ಇನ್ನು ತೋರದ ತೆರದಿ ಮರೆಮಾಡಿಕೊಂಡೂ5 ವಡೆಯ ಈರೇಳು ಲೋಕದಿ ವ್ಯಾಪ್ತನಾಗಿ ನೀ ನುಡಿದು ಶ್ರೀಮಂತ್ರ ಜೀವರ ಕಾಯೊ ಎನಲೂ ವಡೆಯಗುತ್ತರ ಪೇಳಲಾರದಲೆ ಬ್ಯಾಸತ್ತು ಪರಿ ಏನೋ 6 ಕಂಡವರು ಬಿಡುವರೇ ಆಡದಲೆ ನಿನ ಚರಿತೆ ಚಂಡ ವಿಕ್ರಮನಹುದೊ ಮುನಿಯದಲೆ ಸಲಹೋ ಕರ ಪೂಜ್ಯ 7
--------------
ಅಂಬಾಬಾಯಿ
ವಿಶ್ವ ಕಾಯೋ ಎನ್ನ ಪ ಪರಮಾತ್ಮ ನೀ ದೂರ ಮಾಡಿದರೆ ಗತಿಯೇನು ಅ.ಪ ನಿನ್ನ ಲೋಕಕೆ ಎನ್ನ ವೈದಾಗ ಕರುಣಾತ್ಮ ನಿನ್ನ ಕ್ರಿಯ ಗುಣ ರೂಪ ತೋರಿ ಎನಗೆ ನಿನ್ನ ಪರಿವಾರ ಜನರಲ್ಲಿ ಸೇರಿಸಿ ಪರಮ ಧನ್ಯನಾ ಮಾಡಯ್ಯ ಮದ್ಬಿಂಬ ಮಾರಮಣ 1 ಸ್ಮøತಿ ಜ್ಞಾನ ಮನ ಬುದ್ಧಿ ಮಾತ್ರ ಭೂತವು ಕರಣ ಧಾತು ಸಪ್ತಕ ಪಂಚ ಕೋಶಗಳಲಿ ಸತಿ ಸಹಿತ ಪ್ರಥಮಾಂಗನಲಿ ಕುಳಿತು ನೀ ಸತತ ಪ್ರತಿ ತತ್ವ ವ್ಯಾಪಿಸಿ ಜೀವಕರ್ಮವ ಮಾಳ್ಪೆ 2 ಚತುರ ದಶಲೋಕದಲಿ ಪ್ರತಿದೇಹರಥ ನಿನಗೆ ಕೃತಿರಮಣ ಸರ್ವತ್ರ ನಿನ್ನ ಲೀ¯ ಸತಿ ರಮಣ ಸುರರೆಲ್ಲ ಗತನಿದ್ರರಾಗಿನ್ನು ನೋಳ್ಪರೈ ಮಹಚಿತ್ರ 3 ಕಂಡ ಕಡೆಯಲಿ ಪೂಜೆ ಭಂಡಾರ ತುಂಬಿಹುದು ವಿಧಿ ಸುರರು ಸರ್ವತ್ರ ನಿನ್ನ ಕಂಡು ಪೂಜಿಪರಯ್ಯಾ ಪೂರ್ಣ ವಿಭವಗಳಿಂದ ಮಂಡÉ ಬಾಗಿದೆ ಭಕ್ತ ತಂಡದಲಿ ಇಡು ಎನ್ನ 4 ಪೂಜ್ಯ ಪೂಜಕನಾಗಿ ಪರಿಪೂರ್ಣ ವೈಭವದಿ ಪೂಜಿಸುವೆ ನಿನ್ನ ನೀ ಸರ್ವಕಾಲ ಭೋಜ್ಯ ಭೋಕ್ತøನಾಗಿ ಆನಂದ ಸಿರಿಗೀವೆ ಅಜರುದ್ರ ಸುರಗಣಕೆ ಉಣಿಸಿ 5 ಹದಿನೆಂಟು ನರಮುಖವು ಮಧ್ಯ ಗಜಮುಖ ದೇವ ಪದವೆರೆಡು ಭುಜ ನಾಲ್ಕು ಪದುಮೆ ರಮಣ ಉದಯಾರ್ಕ ಕಿರೀಟ ಕುಂಡಲಭೂಷ ಗದೆ ಪದುಮ ಆರೆ ಶಂಖ ಮಣಿಯುಕ್ತ ಮಾಲಧರ 6 ಮೂರ್ತಿ ಜಯೇಶವಿಠಲ ವಿಶ್ವನಾಮಕ ವಿಶ್ವವ್ಯಾಪ್ತಗುಪ್ತ ಉಚ್ಛ್ವಾಸ ಬಿಡುತಿಹೆನೊ ಉಡುಗಿ ಸಕಲ ಶಕ್ತಿ ಉತ್ಸಾಹ ನೀಡಯ್ಯ ಸ್ವಾಂತರದಿ ಕಲೆತೆನ್ನ 7
--------------
ಜಯೇಶವಿಠಲ
ವಿಶ್ವ 50 ವಿಶ್ವ ರಮೇಶ | ಪಾಲಿಸೆನ್ನನು ದಕ್ಷಿಣಾಕ್ಷಿನಿವಾಸ | ರೂಪಾಂತರದಿ ನೀ | ವಾಮನಯನದಿ ಕಾಶ | ಶರಣು ಶರಣು | ಸರ್ವೇಶ | ಜಾಗೃತ ಕಾಲದಿ ಸರ್ವ ವ್ಯಾಪಾರಗಳ ಮಾಡಿಸುವಂಥ ಸೌಭಾಗ್ಯ ದಾತನೇ ಪ ಯಾಜ್ಯ ಸ್ವರೂಪದಿಂದ ನೀ ಯರ್ಜು ನಾಮ | ಉತ್ಥಾಪಕೊತ್ತ ನಾಮ ಸರ್ವಪಾಪೋಜ್ಜಿತ ಉನ್ನಾಮನೇ ದೀಪ್ತ ಇಂಧನ ವಾಮ ಮಂಗಳ | ಸರ್ವ ವೇದಗಳಿಂದ ಸರ್ವದಾ ವಾಣಿ ಪ್ರಾಣ ಸಂಸ್ತುತ್ಯ ಶ್ರೀಶನೇ ದಿವ್ಯದೃಷ್ಟಿ ಗೋಚರ ವಿರಾಜನೇ ಶ್ರೀ ರಮಾ ಸಮೇತನಾಗಿಹ ಅಮೃತ ಜಯ ಜಯ 1 ಭಯ ವಿವರ್ಜಿತ ಅಭಯ | ಗುಣಪೂರ್ಣ ಬ್ರಹ್ಮ ಪುರುಷ ಸರ್ವ ಉದಕಾದ್ಯ ಅಖಿಳವಸ್ತು ಅಸಂಗವಾಗಿವೆ ಎನ್ನ ಕಂಣ್ಗಳು | ಸರ್ವದಾ ಸೌಂದರ್ಯ ರೂಪ ಶ್ರೀವಾಮನನೆ ಎನ್ನ ಎಡದ ಕಣ್ಣಲಿ ಸರ್ವ ನಿಜ ಸದ್ಭÀ್ಭಕ್ತಭಾಮನ ದಕ್ಷಿಣಾಕ್ಷಿಗತ ನಿಯಾಮಕ | 2 ವಿಶ್ವ ಶರಣು ಶುಭಾಂಗ | ಎರಡು ಪಾದವು ನಾಲ್ಕು ಹಸ್ತವು ಏಕ | ಕುಂಡಾದಂಡ ಹೀಗೆ ಜ್ಞಾನ ಸುಖ ಸಪ್ತಾಂಗ ಪಾಹಿಮಾಂ ಮಂಗಳಾಂಗ ಹತ್ತು ಮೇಲೊಂಬತ್ತು ಮುಖಗಳು ಮಧ್ಯ ಗಜಮುಖ ಮಂಗಳಪ್ರದ | ಮೋದಮಯ ನರಮುಖ ಒಂಬತ್ತು ಬಲದ ಪಾಶ್ರ್ವದಿ ಹಾಗೂ ಎಡದಿ | ವಿಶ್ವ ಚಕ್ಷುಸ | ಪದ್ಮಜನ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ವಿಶ್ವನೇ ಶರಣು ಸಂತತ | 3
--------------
ಪ್ರಸನ್ನ ಶ್ರೀನಿವಾಸದಾಸರು
ವಿಶ್ವಪತಿ ಇಂದುಶೇಖರ ಸುರಮಸ್ತಕಮಣಿ ಮನ್ಮಥರಿಪುವೆ ವಿಸ್ತರಿಪೆನು ನಿಮ್ಮ ಮಹಿಮೆಯ ಜಗದೊಳು ಸ್ವಸ್ಥವಾಗಿ ಪ. ಎಲ್ಲಿ ನೋಡಲು ಲಿಂಗಮಯವು ಅಲ್ಲಿಗಲ್ಲಿಗೆ ತೀರ್ಥಯಾತ್ರೆಯು ಸೊಲ್ಲು ಸೊಲ್ಲಿಗೆ ಹರಮಹಾದೇವಂತೆಲ್ಲರು ಸ್ತುತಿಸುವರು ಬಲ್ಲವರು ಇದು ಭಾವಿಸಿ ಕಾಶಿಗಿಂತ ಮಹಿಮೆ ವೆಗ್ಗಳವಹುದೆನುತ ಸುಲಕ್ಷಣೆ ಶಿವಗಾತ್ರೆ ಶಿವನವಲ್ಲಭೆ ತ್ರಾಸಿನಲಿ ತೂಗುವಳು 1 ನಾಟಕದಿ ನಾನಾಜನ್ಮದಿ ಬಂದು ದಾಟದಂತರವನಳಿದನು ಚಂದ್ರ ಕೋಟಿತೀರ್ಥದಿ ಮಿಂದು ಮೈಯ ಕೋಟಲೆ ಸಂಸಾರಗಳೆಲ್ಲ ದಾಟಿದೆನು ಇನ್ನು ಜನನಮರಣಗಳೆಂಬೋಪಾಯಗಳಿಲ್ಲವು 2 ಕೂಪಾರದಲಿ ಬಂದು ಸೂಸುವ ತೆರೆಗಳು ಅಭ್ರದಿಂದಲಿ ಅಪ್ಪಳಿಸಲು ಉನ್ನತ ಭ್ರಮೆಗೊಂಡಿದ್ದ ಕರ್ಮದ ಬಲಿಗಳು ಮಿಗಿಲಾದವು ಉರ್ವಿಯೊಳಗುಳ್ಳ ಸಕಲನದಿಗಳನು ಗರ್ಭದಲಿ ಇಂಬಿಟ್ಟು ಮೆರೆದಂತಿಹ ಸರ್ಬಗೂಡಿಸುವ ಸಿಂಧುರಾಜನಲಿ ಮಿಂದು ನಿರ್ಭಯಳಾದೆನು 3 ಬಲಿದ ದನುಜನ ಭಾವಕ್ಕೆ ಮೆಚ್ಚಿ ಒಲಿದಷ್ಟವರವಿತ್ತ ಸಿಲುಕಲು ಸುಲಭನೆಂದು ಹೇರಂಬನೊಳಿತ್ತು ನೆಲೆಗೊಳಿಸಿ ಎಳೆದರೆ ಎಳೆಯಲೊಲ್ಲದೆ ಛಲವಿಡಿದ ಲಂಕಾಧಿಪತಿಯ ಅಹಂಕಾರ ವಳಿದು ಇಂದ್ರಾದಿಗಳಿಗೆ ವರವಿತ್ತ ಮಹಾಬಲಲಿಂಗನ ಕಂಡೆ 4 ಅನ್ನದಾ ಶತಶೃಂಗ ಪರ್ವತ ಪಶ್ಚಿಮದಿಂದ ಪಾತಾಳಗಂಗೆ ಸಹಿತಲಿ ಪ್ರ- ಸನ್ನನಾಗಿ ನಿಂದ ಚೆನ್ನ ಹೆಳವನಕಟ್ಟೆರಂಗನ ಪ್ರಿಯ ಪನ್ನಂಗಧರ ಪರಮಪವಿತ್ರ ಗೋಕರ್ಣೇಶನ ಕಂಡೆ ಪಾ- ವನವಾಯಿತು ಎಲ್ಲಾ ಕುಲಕೋಟಿಯು 5
--------------
ಹೆಳವನಕಟ್ಟೆ ಗಿರಿಯಮ್ಮ
ವಿಷಯ ಸುಖ ಇನ್ನೂ ವಿಷವಾಗಲಿಲ್ಲ | ನಿರ್ವಿಷಯಬೋಧಾನಂದ ದೊರೆಯಲೇ ಇಲ್ಲ ಪ ತನುವ ಧರಿಸಿ ಬಂದು ತನುವ ಕಳೆಯಲಿಲ್ಲ | ಮನದಿ ವಿಚಾರಿಸಿ ಮನವಳಿಯಲೇ ಇಲ್ಲ | ನೆನಹು ನೆಲೆಗೊಂಡು ನಿಜಕೆ ನಿಲ್ಲಲಿಲ್ಲ | ಚಿನುಮಯಾತ್ಮಕನಾಗಿ ಚರಿಸಲೇ ಇಲ್ಲ1 ಪರ ವಸ್ತುವು ಗೋಚರಿಸಲೇ ಇಲ್ಲ 2 ಮಾಯಾ ಬಲಿ ಹಬ್ಬಿತಲ್ಲ 3
--------------
ಭಾವತರಕರು
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ವೀಣೆ ಧರಿಸಿದ ಕಾರಣೇನೊ ಹನುಮಾ ಜಾಣತನವಿದು ಏನು ಪೇಳೊ ಬಲಭೀಮ ಪ. ತ್ರೇತೆಯಲಿ ಶ್ರೀ ರಾಮದಾಸತ್ವ ಚರಿಸಿದುದು ಖ್ಯಾತಿ ಬರಲಿಲ್ಲೆಂದು ಮನದಿ ತಿಳಿದೂ ಪ್ರೀತಿಯಿಂದಲಿ ಕೃಷ್ಣನಂಘ್ರಿ ಗುಪ್ತದಿ ಭಜಿಸಿ ನೀ ತಪೋನಿಧಿ ಎನಿಸಿ ಮುನಿಯಾದ ಮಹಿಮಾ 1 ಮೂರು ಅವತಾರದಲಿ ತೋರದಂತ್ಹರಿ ದಾಸ್ಯ ಆರಾಧಿಸುತ ಮೀಸಲಾಗಿ ಚಲಿಸೇ ಧೀರಭಕ್ತರು ಬಯಲಿಗೆಳೆದು ಖ್ಯಾತಿಯ ಪಡೆಯೆ ತೋರದಂತಾಗೆ ಬೇಗನೆ ದಾಸ್ಯ ವಹಿಸೀ 2 ದಾಸರನುಭವಿಪ ಆನಂದ ನೋಡುತ ಭಾರ ತೀಶ ನೀ ಮೊದಲು ದಾಸನು ಎನಿಸಲು ವಾಸುಕೀಶಯನ ಗೋಪಾಲಕೃಷ್ಣವಿಠ್ಠಲಗೆ ದಾಸನಾಗುತ ವೀಣೆ ಪುಸ್ತಕವ ಪಿಡಿದಿಯಾ 3
--------------
ಅಂಬಾಬಾಯಿ
ವೀರಮಂಡಿ ಹೂಡಿರುವುದು | ಕಾರಣೇನು ವೀರ ಹನುಮ ಪೇಳು ನೀನಿದ ಪ. ರಾಮ ಹೆಗಲ ಏರಲೆನ್ನುತಾ | ಕುಳಿತಿಯೇನೊ ನೇಮದಿಂದ ದಾಸನಾಗುತ ಕಾಮಿನಿಯ ಚೋರನನ್ನು ಧೂಮಕೆಡಹಲೆಂದು ರಾಮ ಆ ಮಹಾರಣರಂಗದಲ್ಲಿ ಸ್ವಾಮಿಗೆ ಜಯವಿತ್ತು ಮೆರೆದೆ 1 ದ್ರೌಪದಿಯ ಮುಡಿಯನೆಳೆದನ | ಎದೆಯ ಮೇಲೆ ಕೋಪದಿಂದ ಕುಳಿತು ಕರುಳಿನ ಪಾಪಿ ಉರವ ಬಗೆದು ಘೋರ ರೂಪ ತೋರಿ ಶತ್ರುಗಳಿಗೆ ಶ್ರೀಪತಿಗೆ ಅರ್ಪಿಸಿದ್ದು ಈ ಪರಿಯೆ ಪೇಳು ಹನುಮ 2 ಅಭಯಹಸ್ತ ತೋರುತಿರುವುದು | ಭಕ್ತರಿಗೆ ಉಭಯ ತತ್ವಜ್ಞಾನ ಕೊಡುವುದು ಇಭವರದ ಗೋಪಾಲ ಕೃ- ಷ್ಣವಿಠಲನಂಘ್ರಿ ಕಮಲ ದೃಢದ ಬುದ್ಧಿ ಕೊಡುವ ತೆರವೊ 3
--------------
ಅಂಬಾಬಾಯಿ
ವೃಂದಾವನದಿ ನಿಂದಿಹನ್ಯಾರೆ ಗೋವಿಂದನಲ್ಲದೆ ಚಂದಿರವದನೆ ನೋಡುವ ಬಾರೆ ಪ. ಕೋಟಿಸೂರ್ಯ ಪ್ರಕಾಶ ಕಿರೀಟದ ಬೆಳಕಿದು ಹಾಟಕಾಂಬರಧರನ ನೋಟದಿ ಸುಖಿಸೆ ಕೋಟಲೆ ಸಂಸಾರ ದಾಟಿ ಪೋಗಿ ಕೃಷ್ಣ ನಾಟ ನೋಡಿ ಮನ ಕವಾಟವ ಬಿಚ್ಚೆ ಪೂರ್ಣ ನೋಟದಿ ನೋಡುವ 1 ರಂಗನಾ ಕೊಳಲ ಬೆಳದಿಂಗಳ ಸೊಗವಿಲೆ ಮ್ಮಂಗವ ಅಂಗಜನೈಯ್ಯಗೀಯುತೆ ಕಂಗಳಿಗ್ಹಬ್ಬವೆ ರಂಗನ ನೋಡುತೆ ಗಂಗಾಜನಕನ ವಲಿಸಲು ನಮಗೆ ಹಿಂಗದ ಮುಕುತಿಯ ರಂಗಗೊಡುವ ಬಾರೆ 2 ಜಯ ಜಗದೀಶನ ಜಯ ರಮಕಾಂತನ ಜಯ ಕರ್ಮನೀಯನ ಜಯ ಶ್ರೀ ಶ್ರೀನಿವಾಸನ ಜಯ ಯದು ತಿಲಕನ ಜಯ ಕೂಡಾಡುವ ಜಯಪ್ರದನಾಗುತೆ ಜಗದಿ ಪೊರೆವ ಬಾರೆ 3
--------------
ಸರಸ್ವತಿ ಬಾಯಿ
ವೃಂದಾವನೀ ದೇವಿ ವಂದಿಸುವೆ ಶ್ರೀ ತುಳಸಿ ವಂದಾರು ಜನತತಿಗೆ ಮಂದಾರಳೆನಿಸಿರುವಿ ಸಂದೇಹವಿಲ್ಲವಿದಕೆ 1 ಅಂದು ಧನ್ವಂತರಿಯು ತಂದಿರುವ ಪೀಯೂಷ ದಿಂದ ಪೂರಿತ ಕಲಶದಿ ಇಂದಿರಾಪತಿಯ ಆನಂದ ಬಾಷ್ಪೋದಕದ ಬಿಂದು ಬೀಳಲು ಜನಿಸಿದಿ2 ಶ್ರೀ ತುಳಸಿ ನಿನ್ನನು ನಿಕೇತನದಿ ಪೂಜಿಪರ ಪಾತಕವ ಪರಿಹರಿಸುವಿ ಶ್ರೀ ತರುಣಿಪತಿಗೆ ಬಲುಪ್ರೀತಿ ವಿಷಯಳೆನಿನ್ನ ನಾ ಸ್ತುತಿಸಲೆಂತು ಜನನಿ 3 ಸರ್ವ ತೀರ್ಥಗಳೆಲ್ಲ ತರುಮೂಲದಲ್ಲಿಹವು ಸರ್ವ ವಿಬುಧರು ಮಧ್ಯದಿ ಸರ್ವ ವೇದಗಳೆಲ್ಲ ತರುಅಗ್ರಭಾಗದಲಿ ಇರುತಿಹರು ಬಿಡದೆ ನಿರುತ 4 ತುಳಸಿ ನಿಮ್ಮಯ ಲಕ್ಷದಳಗಳಿಂದಲಿ ಲಕ್ಷ್ಮಿನಿಲಯನಂಘ್ರಿಗಳರ್ಚಿಸಿ ಕಲುಷ ವರ್ಜಿತನಾಗಿ ಬಲುಬೇಗ ಶ್ರೀಹರಿಯ ಒಲುಮೆ ಪಡೆವನು ಜಗದೊಳು 5 ತುಳಸಿ ದೇವಿಯೆ ನಿನಗೆ ಜಲವೆರೆದು ಕುಂಕುಮದ ತಿಲಕವಿಡುತಲಿ ನಿತ್ಯದಿ ಲಲನೆಯರು ಪೂಜಿಸಲು ಒಲಿದಿತ್ತು ಸೌಭಾಗ್ಯ ಸಲಹುವಿಯೆ ಕರುಣದಿಂದ 6 ಮಾಧವ ಪ್ರಿಯ ತುಳಸಿ ಸಾದರದಿ ನಿನ್ನೊಳಗೆ ಶ್ರೀದೇವಿ ನಿಂದಿರುವಳು ಮೋದಮುನಿ ಶಾಸ್ತ್ರವನು ಬೋಧಿಸುವ ಬುಧಜನರ ಪಾದಸೇವೆಯ ಕರುಣಿಸು 7 ಮಿತ್ರನುದಯದಲೆದ್ದು ಚಿತ್ತನಿರ್ಮಲರಾಗಿ ಭಕ್ತಿಯಲಿ ಶ್ರೀ ತುಳಸಿಯ ಮೃತ್ತಿಕೆಯ ಧರಿಸಿದ ಮಹಾತ್ಮರನು ಕಂಡು ಯಮ ಭೃತ್ಯರಂಜುವರು ಭಯದಿ 8 ಇಂತು ಶ್ರೀತುಳಸಿ ಸೀಮಂತಿನಿಯ ಸ್ತೋತ್ರವ ನಿ- ರಂತರದಿ ಪಠಿಸುವವರ ಚಿಂತಿತ ಪ್ರದನಾಗಿ ನಿಂತು ಕಾರ್ಪರದಿ ಸಿರಿ ಕಾಂತ ನರಹರಿ ಪೊರೆವನು 9
--------------
ಕಾರ್ಪರ ನರಹರಿದಾಸರು
ವೃಷಭಾರೂಡಗೆ ರವಿಶಶಿ ನಯನಗೆ ವೃಷಭಪಾವನತ್ರಿಯಂಬಕಗೆ || ವೃಷಭಸ್ವರೂಪದಿ ಮೆರೆವ ಆಕಾರದೇವಗೆ | ವೃಷಭ ಕನ್ನಿಕೆಯರಾರುತಿ ಎತ್ತಿರೆ ವೃಷಭಾಶಿವಗೆ ಸಂಗಮಗ ಜಗದೀಶ ಮಹೇಶ-ಗಾರುತಿಯನೆತ್ತಿರೆ ವೃಷಭ ಶಿವಗೆ ಸಂಗಮಗೆ 1 ಭಾನು ಕೋಟಿ ದಿವ್ಯ ತೇಜ ಪ್ರಕಾಶಗೆ ಆನಂದಮಯಗೆ ಚಿನ್ಮಯಗೆ | ಮಾನಸದಿಂದಲಿಮೆರೆವೆನ್ನ ದೇವಗೆ ಮಾನ ಕನ್ನಿಕೆಯರಾರುತಿ ಎತ್ತಿರೆ |ವೃಷಭ ಶಿವಗೆ ಸಂಗಮಗೆ 2 ಭಾಗೀರಥಿ ಪ್ರಿಯಗೆ ಭಾಲನೇತ್ರಗೆ ಶ್ರೀ ಗೌರಿಯ ಮನೋಹರಗೆ | ನಾಗಭೂಷಣನಾರಾಯಣ ಪ್ರಿಯಗೆ ನಾಗ ಕನ್ನಿಕೆಯರಾರುತಿ ಎತ್ತಿರೆ 3 ದೇವರ ದೇವಗೆ ದೇವ ಜಗದೀಶಗೆ | ದೇವಸನ್ಮೋಹನಸ್ವಾಮಿಗೆ | ದೇವ ಸಿಂಧಾಪುರದ ಶ್ರೀ ವಿಶ್ವನಾಥಗೆದೇವ ಕನ್ನಿಕೆಯರಾರುತಿ ಎತ್ತಿರೆ 4
--------------
ಭೀಮಾಶಂಕರ
ವೆಂಕಟ ಕೃಷ್ಣವಿಠಲ | ಲೆಂಕನನ ಸಲಹೋ ಪ ಪಂಕಜೋದ್ಭವ ಪಿತನೆ | ವೆಂಕಟೇಶಾ ಅ.ಪ. ಅಬುಜ ಜಾಂಡೋದರನೆ | ಶಬರಿ ಎಂಜಲನುಂಡೆಕುಬುಜೆಗಂಧಕೆ ಒಲಿದು | ಸದ್ಗತಿಯನಿತ್ತೆಇಭವರದ ನೀನಾದೆ | ಕುಲಶೀಲನೆಣಿಸದಲೆವಿಭುವೆ ಈ ಭಕುತಂಗೆ | ವೈಭವವ ತೋರೋ 1 ಮಧ್ವಮತ ತತ್ವದಲಿ | ಶುದ್ಧ ಭಕುತಿಯ ತೋರ್ಪಶ್ರದ್ಧಾಳು ಎನಿಸಿಹನು | ಬುದ್ಧಿ ಪೂರ್ವಾಸಿದ್ಧಾಂತ ತಾತ್ಪರ್ಯ | ಬುದ್ಧಿಗೆಟಕೂವಂತೆಉದ್ಧರಿಸ ಬೇಕಿವನ | ಅಬ್ದಿಜೆಯ ರಮಣ 2 ನೀಚೋಚ್ಚ ತರತಮದ | ಸ್ವಚ್ಛ ಜ್ಞಾನವ ನೀಯೊಮತ್ಸ್ಯಕಚ್ಛಪರೂಪಿ | ಸಚ್ಚಿದಾನಂದಾನಿಚ್ಚ ನಾಮಸ್ಮರಣೆ | ಸ್ವಚ್ಛ ಪೇರ್ಮೆಲಿ ಗೈವಉತ್ಸಾಹ ಇವಗಿತ್ತು | ಉದ್ಧರಿಸೊ ಹರಿಯೇ 3 ವ್ಯಾಜ ಕರುಣೀ4 ಪಾಕ್ಕು ಕರ್ಮವ ಕಳೆದು | ಲೋಕದಲಿ ಸತ್ಕೀರ್ತಿಬೇಕಾದ ವರಗಳನೆ | ತೋಕನಿಗೆ ಈಯೋನಾಗನದಿ ಪಿತ ಗುರೂ | ಗೋವಿಂದ ವಿಠ್ಠಲನೆವಾಕು ಮನ್ನಿಸಿ ಕಾಯೋ | ಶ್ರೀ ಕರಾರ್ಜಿತನೇ 5
--------------
ಗುರುಗೋವಿಂದವಿಠಲರು