ಒಟ್ಟು 3655 ಕಡೆಗಳಲ್ಲಿ , 119 ದಾಸರು , 2543 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಣದೆ ಇರಲಾರೆ ದೇವ ಮುಖ್ಯಪ್ರಾಣ ಮನೋಹರ ದೇವ ನಿನ್ನವಾಣಿಯಲಮೃತವನೂಡೊ ಕಡೆಗಾಣಿಸಿ ಪದದೆಡೆಯಲ್ಲಿಡೊ ಪ.ಹಿಡಿಯಲು ಮರದಾಸೆಯಿಲ್ಲ ಕುಳಿತಡೆ ಪೊಡವಿಲಿ ದೃಢವಿಲ್ಲ ನಿನ್ನೊಡಲೊಳಗಿಡಬಹುದೆನ್ನ ನನ್ನೊಡೆಯ ಕರುಣಾರಸಪೂರ್ಣ 1ನಿಲಗುಡವರಿಯಾರು ವರ್ಗ ಬಲುಬಳಲಿಪ ಮೂರುಪಸರ್ಗ ಇದರೊಳಗೆ ನಿನ್ನಯ ಶುಭನಾಮ ಒಂದೆಬಲಿಕ್ಯಾಗಿರಲಿ ಪೂರ್ಣಕಾಮ 2ಚಿನ್ಮಯ ಸುಗುಣದ ಖಣಿಯೆ ಸಲಹೆನ್ನನಿರ್ಜರಚಿಂತಾಮಣಿಯೆ ಬಿಡದೆನ್ನ ಮನದೊಳಗೆ ಬೆರೆಯೊ ಪ್ರಸನ್ವೆಂಕಟ ಗಿರಿದೊರೆಯೆ 3
--------------
ಪ್ರಸನ್ನವೆಂಕಟದಾಸರು
ಕಾಂತೆ ಸೈರಿಸಲಾರೆ ಕಂಜಾಕ್ಷನಗಲೀರೆಕಂತುಶರದ ಬಲ ಕಡುವೇಗವಾಯಿತಲೆಕಾಂತ ಮೂರುತಿಯ ಕರೆತಾರೆ ತಾಯೆ ಪ.ಸೀತಕರನ ಪ್ರಭೆಯು ಶುಕದುಂಬಿಗಳ ರವವುಸೋತಬಾಲೆಯ ಮುಂದೆ ಸರಸವೆ ಸೊಗಸೋದೆನೀತವೇನೆಲೆ ತಂಗಿ ನೀರಜನಾಭಗೆ 1ನೀರೊಳು ಕರೆದೆನ್ನನೀಲಜೀಮೂತವರ್ಣನೀರಜದ್ವಕ್ತ್ತ್ರವ ನಖದಿಘಾಸಿಮಾಡುವನಾರಾಯಣನೆನ್ನ ಸುಳಿದರಿನ್ನೇನೆ 2ಅಧರದೊಳಿಟ್ಟುಕೊಳಲು ಅತಿಮೋಹಿಸುವ ನಲ್ಲಯದುಕುಲದರಸ ಮೆಚ್ಚೆ ಎನ್ನೊಳು ಘನ್ನಮಧುಪಕುಂತಳ್ಯಾವಳೊ ಮನೆಗೊಯ್ದಳೊ 3ಆವಗವನಕೇಳಿಆಡುವವನ ಸಾಲಿದಾವಸುಕೃತದಿಂದ ದೊರೆತನೊ ಶ್ರೀಮುಕುಂದಆವ ದುಷ್ಕøತ ಬಂದು ಅಗಲಿಸಿತಿಂದು 4ಚಂಪಕದಲರ್ಮಾಲೆ ಚಂದನದ ಲೇಪ ಒಲ್ಲೆಕಂಪಿನೊಳಗೆನಿಂದುತಕ್ರ್ಕೈಸುವಾನಂದಸಂಪನ್ನ ತಾ ಬಂದು ಸಲಹುವನೆಂದೆ 5ಪರಿಯಂಕದಲಿ ಕುಳಿತು ಪರಿಪರಿಯ ಸುಖವಿತ್ತುಕರದಿ ಕಂಕಣವಿಟ್ಟು ಕಡÉಯ ಪೆಂಡ್ಯಾ ಕೊಟ್ಟುಕರುಣಿಜರಿದುತರವೆ ತನಗಿದು6ಇಂದಿರೆರಮಣ ಎನ್ನ ಇಚÉ್ಭಯಸುರಧೇನುಸುಂದರ ರನ್ನ ಪ್ರಸನ್ನ ವೆಂಕಟೇಶನಸಂದೇಹವಿಲ್ಲದೆ ಶರಣು ಹೊಂದಿದೆನೊ 7
--------------
ಪ್ರಸನ್ನವೆಂಕಟದಾಸರು
ಕಾಯೊ ಗೋವಿಂದ ಕಾಯೊ ಮುಕುಂದಮಾಯದ ತಡಿಯ ತಪ್ಪಿಸೊ ನಿತ್ಯಾನಂದ ಪ.ನಾನಾ ಯೋನಿಯ ಸುತ್ತಿ ನೆಲೆಗಾಣದಂತಾದೆನೀನೊಲಿದಿಂದೀ ಜನ್ಮವ ಪಡೆದೆಜ್ಞಾನ ಹೊಂದಲಿಲ್ಲ ಧರ್ಮದಾಚರಣಿಲ್ಲಏನು ಗತಿಯೊ ಎನಗೆ ಮುಂದೆಸಿರಿನಲ್ಲ1ಮರ್ಕಟಗೆ ಹೊನ್ನಕೊಡ ದೊರೆತಂತಾಯಿತುಮೂರ್ಖವೃತ್ತಿಯಲಿ ಆಯುಷ್ಯ ಹೋಯಿತುನರ್ಕಸಾಧನ ಘನವಾಗಿದೆ ಪುಣ್ಯ ಸಂಪರ್ಕವ ಕಾಣೆನೈ ಕರುಣಿಗಳರಸ 2ಎನ್ನ ತಪ್ಪಿನ ಹೊಳೆ ಒಳಗೊಂಬುದು ಒಂದೆನಿನ್ನ ದಯದ ಶರಧಿಯಲ್ಲದೆಇನ್ನೇನು ಮಾರ್ಗವು ಸಿಲುಕದು ತಂದೆ ಪ್ರಸನ್ನವೆಂಕಟಪತಿಹರಿದೀನಬಂಧು3
--------------
ಪ್ರಸನ್ನವೆಂಕಟದಾಸರು
ಕಾಸು ಕನಕದಾಸೆಯಾದುದೇ | ಹರಿಗೆ |ದಾಸ ಜನರನೆಲ್ಲ ಮರೆತನೇ ಕಡೆಗೆಪವಾಸುದೇವನು ಶ್ರೀನಿವಾಸನೆನಿಸಿಕೊಂಡು |ಶೇಷಗಿರಿಯ ಮೇಲೆ ವಾಸವಾಗಿರುವವಗೆಅ.ಪಛಪ್ಪನ್ನದೇಶದ ಕಪ್ಪವ ತರಿಸುವ | ಒಪ್ಪಿ ಜನರಸರ್ವ ತಪ್ಪಪಾಲಿಸುವ |ಸರ್ಪಶಯನ ನಮ್ಮ ತಾಪತ್ರೆ ಘನವೆನಲು |ಅರ್ಪಿತವಹುದೇತಿಮ್ಮಪ್ಪ| ವೆಂಕಟ ಪತಿಗೆ ||ಕಾಸು||1ಶನಿವಾರ ಶನಿವಾರ ಮನೆ ಮನೆ ಭಿಕ್ಷೆಗೈದು |ಮಿನುಗುವ ಡಬ್ಬಿಯೊಳಿಟ್ಟು ಜನರು ಪೂಜಿಸೆ ನಲಿದು |ವನಜಾಕ್ಷ ನಿನಗೆಂದು ಕಣಜಕ್ಕೆ ಸುರಿಯೆ ತಂದು |ಮನುಮಥ ಪಿತಗೆ ನಮ್ಮ ನೆನಪು ಎಂತಹುದೋ ||ಕಾಸು||2ಗಂಧಚಂದನನಾಮತೀರ್ಥ ಪ್ರಸಾದ |ಸುಂದರವಾಹನಹರಕೆ ವಿನೋದ |ಚಂದದಿ ನೋಡಲ್ ಹರಿಯ ಧನವಿಲ್ಲದಾಗದ |ಸುಂದರಾಮೂರ್ತಿಗೋವಿಂದಗೆ ಸಾರ್ವದಾ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಕಾಳಿಯಮರ್ದನ ರಂಗಗೆ- ಹೇಳೆ ಗೋಪಮ್ಮ ಬುದ್ಧಿ |ಕೇಳಲೊಲ್ಲನು ಎನ್ನ ಮಾತನು ಪದಿಟ್ಟ ನೀರೊಳು ಕಣ್ಣ ಮುಚ್ಚನೆ-ಹೋಗಿ |ಬೆಟ್ಟಕೆ ಬೆನ್ನಾತು ನಿಂತನೆ ||ಸಿಟ್ಟಿಲಿ ಕೋರೆದಾಡೆ ತಿಂದನೆ-ಅಹ |ಗಟ್ಟಿ ಉಕ್ಕಿನ ಕಂಬ ಒಡೆದು ಬಂದನೆ 1ಮೂರಡಿ ಭೂಮಿಯ ಬೇಡಿದನೆ-ನೃಪರ |ಬೇರನಳಿಯೆ ಕೊಡಲಿ ಪಿಡಿದನೆ ||ನಾರಮಡಿಯನುಟ್ಟು ಬಂದನೆ-ಅಹ |ಚೋರತನದಿ ಪಾಲ್ಬೆಣ್ಣೆಯ ತಿಂದನೆ 2ಬತ್ತಲೆ ನಾರಿಯರನಪ್ಪಿದ-ಹೋಗಿ ||ಉತ್ತಮಾಶ್ವವನು ಹತ್ತಿದ ||ಹತ್ತವತಾರವ ತಾಳಿದ-ನಮ್ಮ |ಭಕ್ತವತ್ಸಲ ಸ್ವಾಮಿ ಪುರಂದರವಿಠಲನು 3
--------------
ಪುರಂದರದಾಸರು
ಕುಣಿದ ಕಾಳಿಯ ಶಿರದಿ ನಂದನಂದನು ಪ.ಕಿರುಗೆಜ್ಜೆ ಕಾಲಂದಿಗೆ ಕಟಿಯವರದಾಮದ ಪೊಂಗಂಟೆರವದಕರಕಂಕಣಮುದ್ರಿಕೆಹಾರಪದಕಾಭರಣಝಣ ಝಣ ಝಣ ಝಣ ಝಣ ಝಣಝಣ ಝಣಕೆನ್ನಲು 1ವಿಗಡಾಹಿ ಫಣದಲ್ಲಿನಿಂದುಕರಗಳೊಲವಿಲಿ ಅಭಿನವ ತೋರುತಲಿನಗೆಮೊಗದಮೃತ ರುಚಿಗಳ ಬೀರಿ ತೋಧಿಗಿ ಧಿಗಿ ಧಿಗಿ ಧಿಗಿ ಧಿಗಿ ಧಿಗಿ ಧಿಗಿ ಧಿಗಿ ಥೈ ಥೈಯೆಂದು 2ಪದುಮಜಭವರು ಹನುಮ ಮೂರು ಜತ್ತಾಳ್ಮುದದಿಂ ದಂಡಿಗೆ ತಾಳ್ಗತಿ ನುಡಿಸೆಪದುಮನಾಭ ಪ್ರಸನ್ನವೆಂಕಟ ಕೃಷ್ಣ ತಕುಂದಕುಂತ ಗಡ ವಗಧಾಂ ಕಿಡಿ ಕಿಡಿಧಾಯೆಂದು3
--------------
ಪ್ರಸನ್ನವೆಂಕಟದಾಸರು
ಕುಳಿತೆಯ ಕೃಷ್ಣ ಕುಳ್ಳಿರ ಕಲಿತೆಯ |ಕುಳಿತೆಯ ಎನ್ನೊಡೆಯ ಪಇಳೆಯೊಳು ಭಕುತರ ಹೃದಯ ಕಮಲದೊಳು |ಕುಳಿತೆಯ ಎನ್ನೊಡೆಯ ಅ.ಪಜಲಚರರೂಪದಿ ನಿಗಮಗಳೆಣಿಸುತ ಕುಳಿತೆಯ ಎನ್ನೊಡೆಯ |ಕುಲಗಿರಿಗಳನೆಲ್ಲ ನೆಗಹಿಕೂರ್ಮನಾಗಿ ಕುಳಿತೆಯ ಎನ್ನೊಡೆಯ ||ಛಲದಿ ವರಾಹನಾಗಿ ಭೂಮಿದೇವಿಯ ತಂದುಕುಳಿತೆಯ ಎನ್ನೊಡೆಯಖಳಹಿರಣ್ಯಾಖ್ಯನ ಕರುಳಬಗಿವೆನೆಂದುಕುಳಿತೆಯ ಎನ್ನೊಡೆಯ 1ತೊಡೆ ವಟುವೇಷವ ಸುರರ ರಕ್ಷಿಪೆನೆಂದು ಕುಳಿತೆಯ ಎನ್ನೊಡೆಯ |ಪೊಡವಿಯ ಕ್ಷತ್ರಿಯ ವಂಶ ಸವರುವೆನೆಂದು ಕುಳಿತೆಯ ಎನ್ನೊಡೆಯ ||ಮಡದಿಯ ಒಯ್ದನ ಕೆಡಹಿ ಲಂಕೆಯಲಿಕುಳಿತೆಯ ಎನ್ನೊಡೆಯ |ಕಡುಮೂರ್ಖ ಕೌರವನನ್ನು ಕೊಲುವೆನೆಂದು ಕುಳಿತೆಯ ಎನ್ನೊಡೆಯ 2ತ್ರಿಪುರರ ಸತಿಯರ ವ್ರತವ ಕೆಡಿಪೆನೆಂದು ಕುಳಿತೆಯ ಎನ್ನೊಡೆಯ |ಉಪಸನಿಷದ್ವಾಹನ ತೇಜಿಯ ಬೆನ್ನಲಿ ಕುಳಿತೆಯ ಎನ್ನೊಡೆಯ |ಕೃಪೆಯಿಂದಲಿ ಮನದೊಳು ನೆನೆವವರಲಿಕುಳಿತೆಯ ಎನ್ನೊಡೆಯ |ಕಪಟನಾಟಕಸಿರಿ ಪುರಂದರವಿಠಲ ಕುಳಿತೆಯ ಎನ್ನೊಡೆಯ3
--------------
ಪುರಂದರದಾಸರು
ಕೂಡಲ ಮಾಣಿಕ್ಯ ಕ್ಷೇತ್ರಸ್ಥ ಭರತ ಪ್ರದ್ಯುಮ್ನ60ಶ್ರೀ ರಾಮಚಂದ್ರಾನುಜ ಭರತರಾಜಶರಣಾದೆ ತವಚರಣಯುಗಳ ತೋಯಜಕೆ ಪಉರು ಪರಾಕ್ರಮಿ ದುರ್ಗೆರಮಣ ಹರಿಚಕ್ರದಲಿಇರುವೆ ನೀ ತದ್ರೂಪದಲಿ ಸೇವಿಸುತಲಿಮಾರಶ್ರೀ ಕೃಷ್ಣಸುತ ಸ್ಕಂಧಾದಿರೂಪಿ ನೀಧೀರ ನಿನ್ನಲಿ ಕೃತೀಪತಿಯು ಪ್ರಜ್ವಲಿಪ 1ಉಡುಪಶೇಖರ ಕೊಟ್ಟ ವರಬಲದಿ ಪೌಲಸ್ತ್ಯಕಡು ಕಷ್ಟ ಕೊಡಲಾಗಸುರರುಮೊರೆಯಿಡಲುಕಡಲಶಯನನು ರಾಮ ಪ್ರಾದುರ್ಭವಿಸಲು ನೀನುಹೆಡೆರಾಜ ಅನಿರುದ್ಧಸಹ ಬಂದೆ ಬುವಿಯೊಳ್ 2ಕೇಕಯಕೆ ನೀ ಪೋಗೆ ಕೈಕೇಯಿ ವರದಿಂದರಾಕೇಂದುನಿಭಮುಖನು ನಿಷ್ಕಳ ಶ್ರೀರಾಮನನೂಕಲು ವನಕೆ ನೀ ಬಂದರಿತು ಧಿಕ್ಕರಿಸಿಏಕಾತ್ಮ ರಾಮನಲಿ ಪೋಗಿ ಬೇಡಿದೆಯೊ 3ಸ್ವೀಕರಿಸಿ ರಾಜ್ಯವಾಳೆಂದು ನೀ ಬೇಡಲುಅಖಿಲಾಂಡಕೋಟಿ ಬ್ರಹ್ಮಾಂಡಪತಿ ರಾಮನಾಕಿ ಭೂಸುರರೊಡೆಯ ಹದಿನಾಲ್ಕು ವರ್ಷಗಳುಆಗೆ ತಾ ಬರುವೆನು ಎಂದು ಪೇಳಿದನು 4ದೇವ ಶ್ರೀ ರಾಮನ ಸುಖಜ್ಞಾನಮಯಪಾದಸೇವಿಸಿ ಪ್ರೇಮಪ್ರವಾಹದಲಿ ನೀನುಬುವಿಯನು ಪವಿತ್ರ ಮಾಡುವ ಪಾದಪೀಠವನುನವವಿಧ ಭಕ್ತಿಯಲಿ ತಂದು ಪೂಜಿಸಿದೆ 5ನಂದಿಗ್ರಾಮದಲಿ ನೀ ತಪಶ್ಚರ್ಯದಲಿ ಇದ್ದುಬಂದಿಲ್ಲ ರಾಮನೆಂದಗ್ನಿ ಮುಖದಲಿ ನಿಲ್ಲೆಬಂದ ಇಕ್ಕೋ ಸ್ವಾಮಿ ರಾಮಚಂದ್ರನು ಎಂದಇಂದಿರೇಶನ ಪ್ರಥಮ ದೂತ ಶ್ರೀ ಹನುಮ 6ಅಖಿಲೇಶ ಸುಖಮಯನು ಶ್ರೀ ರಾಮಚಂದ್ರನುಸುಖ ಪೂರ್ಣ ಸೀತಾಸಮೇತ ಬರುವುದನುನೀಕೇಳಿಮುದದಲಿ1 ಮಾತೇರು ಶತ್ರುಘ್ನಭಕುತ ಪುರಜನ ಕೂಡ ಪೋದೆ ಕರೆತರಲು 7ಕಮಲೆ ಜಾನಕಿಪತಿಯ ಮೇಲೆ ಪೂಮಳೆ ಕರೆದುನಮಿಸೆ ನೀ ಭಕ್ತಿಯಲಿ ಕೃತಕೃತ್ಯ ಮನದಿಸ್ವಾಮಿ ರಾಮನು ನಿನ್ನಅಚಲಭಕ್ತಿಯ ಮೆಚ್ಚಿಪ್ರೇಮದಿಂದಲಿ ನಿನಗಾಲಿಂಗನವನಿತ್ತ 8ಸುರರ ನಗರೋಪಮವು ಸರೆಯೂ ತಟಿನಿಯಲ್ಲಿಇರುವುದು ಅಯೋಧ್ಯಾ ಆ ಪುರಿಜನರು ಎಲ್ಲಾಶ್ರೀರಾಮ ಸೀತಾಸಮೇತ ಪರಿವಾರ ಸಹಪುರಿಯೊಳು ಬರಲು ಆನಂದ ಹೊಂದಿದರು 9ಅಘದೂರ ಪೂರ್ಣಕಾಮನ ಮಂದಹಾಸವನುನರಜನರು ನೋಡಿ ಹಿಗ್ಗಿ ಘೋಷಿಸಲುಜಗಜ್ಜನ್ಮ ಸ್ಥಿತ್ಯಾದಿಕರ್ತ ಭೂಕಾಂತ ಶ್ರೀರಾಘವಗೆ ಮಾಡಿಸಿದೆ ರಾಜ್ಯಾಭಿಷೇಕ 10ಶ್ರೀ ರಾಮಭದ್ರನಿಗೆ ಯುವರಾಜನಾಗಿದ್ದುಭರತರಾಯನೆ ನೀನು ಸೇವೆ ಅರ್ಪಿಸಿದೆಸರಸಿಜೋದ್ಭವ ಲೋಕದಂತಾಯಿತೀ ಲೋಕವರವಿಷ್ಣು ಭಕ್ತಿಯು ಸೌಖ್ಯ ಎಲ್ಲೆಲ್ಲೂ11ಶರದಿಂದ ನೀನು ಗಂಧರ್ವರೂಪದಲಿದ್ದಮೂರು ಕೋಟಿ ಕ್ರೂರ ಅಸುರರನು ಕೊಂದೆಕರುಣಿಸಿ ನೀ ಎನ್ನ ಕಷ್ಟಗಳ ಪರಿಹರಿಸೊಶ್ರೀ ರಾಮಪ್ರಿಯ ಭರತ ಎನ್ನ ಗುರುಗಳ ರಾಜ 12ಶ್ರೀ ರಾಮ ಅವತಾರ ಕಾರ್ಯ ತಾ ಪೂರೈಸಿಸುರರುಮುನಿಗಣ ಮುಕ್ತಿಯೋಗ್ಯರ ಸಮೇತತೆರಳೆ ಸ್ವಧಾಮಕ್ಕೆ ಚಕ್ರ ನೀ ಚಕ್ರವನುಶ್ರೀರಾಮನಿಗೆ ದಕ್ಷಪಾಶ್ರ್ವದಲಿ ಪಿಡಿದೆ 13ಗರುಡಮೃಡಶೇಷಸ್ಥ ಭಾರತೀಪತಿ ಹೃಸ್ಥಪರಮಪೂರುಷ ಕೃತೀಪತಿಯು ಪ್ರದ್ಯುಮ್ನಹರಿರಾಮನಲಿ ಸದಾ ಭಕ್ತಿಭರಿತನೆ ಭರತವರನೀನು ಅಹಂಕಾರಿಕ ಪ್ರಾಣಾದ್ಯರಿಗೆ14ಸರಸಿಜಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸನವರಭಕ್ತ ವೃಂದ ಶಿರಮಾಣಿಕ್ಯ ಭರತಧರೆಯೊಳುತ್ತಮ ಕೂಡಲ್ ಮಾಣಿಕ್ಕವೆಂಬುವಕ್ಷೇತ್ರದಲಿ ನಿಂತು ಹರಿಭಕ್ತರನು ಪೊರೆವೆ 15
--------------
ಪ್ರಸನ್ನ ಶ್ರೀನಿವಾಸದಾಸರು
ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿರೆ ಪಮಸ್ತಕದಲಿ ಮಾಣಿಕದ ಕಿರೀಟಕಸ್ತುರಿ ತಿಲಕವು ಹೊಳೆವಲಲಾಟ||ಹಸ್ತದಿ ಕೊಳಲನೂದುವ ನರೆ ನೋಟಕೌಸ್ತುಭದೆಡ ಬಲದೊಳು ಲೋಲಾಟ 1ಮಘಮಘಿಸುವ ಸೊಬಗಿನ ಸುಳಿಗುರುಳುಚಿಗುರು ತುಳಸಿವನ ಮಾಲೆಯಿಟ್ಟ ಕೊರಳುಉಗುರಿಗೆ ಹೊನ್ನ ಮುದ್ರಿಕೆಯಿಟ್ಟ ಬೆರಳುಸೊಗಸಿನ ನಾಭಿಯು ತಾವರೆಅರಳು2ಉಡುದಾರಒಡ್ಯಾಣಸಕಲಾಭರಣಬೆಡಗಿನ ಪೀತಾಂಬರ ರವಿಕಿರಣ ||ಕಡಗಗಗ್ಗರಗೆಜ್ಜೆ ಇಕ್ಕಿದಚರಣಒಡೆಯಪುರಂದರವಿಠಲನ ಕರುಣ3
--------------
ಪುರಂದರದಾಸರು
ಕೆಡಗೊಡದಿರು ದೇಶಿಗ ನಾ ರಂಗಕೆಡಗೊಡದಿರು ದೇಶಿಗ ನಾ ಪ.ನುಡಿ ನುಡಿದು ಮುಪ್ಪಾದೆ ನನ್ನಯನಡೆ ನೋಡಲು ಹುರುಳಿಲ್ಲಹುಡಿ ಹುಡಿಯಾದೆನೊ ವಿಷಯದ ಬಯಕೆಲಿಅಡಿಗಡಿಗೊದಗಿತು ಪಾಪವು ರಂಗ 1ಜಪತಪವ್ರತಗಳ ನೇಮವನರಿಯೆನಿಪುಣ ಪೂಜಾವಿಧಿಯರಿಯೆಅಪರಿಮಿತಶುಭಕ್ರಿಯದೊಳು ಕಾಮನಚಪಲತೆ ಭ್ರಮೆಗೊಳಿಸುತಿದೆ ರಂಗ 2ಹಿಡಿ ಹಿಡಿ ಮುಳುಗುವೆ ಯಾರಿಲ್ಲವೊ ಪಾಲ್ಗಡಲೊಡೆಯ ಭವಾಬ್ಧಿಯಲಿಚಡಪಡಿಸುವೆ ಮೂರುರಿಯಲಿಹರಿನಿನ್ನಡಿಯೆಡೆಲಿಡು ಪ್ರಸನ್ವೆಂಕಟ ರಂಗ 3
--------------
ಪ್ರಸನ್ನವೆಂಕಟದಾಸರು
ಕೇಳಲೊಲ್ಲನೆ ಎನ್ನ ಮಾತನು-ರಂಗ -|ಕಾಳಿಮರ್ದನನಿಗೆ ಪೇಳೇ ಗೋಪಮ್ಮ ಬುದ್ಧಿ ಪಬಿಟ್ಟ ಕಂಗಳ ಮುಚ್ಚಲೊಲ್ಲನೆ-ಬೇಗ- |ಬೆಟ್ಟಕೆ ಬೆನ್ನೊಡ್ಡಿ ನಿಂತನೆ ||ಸಿಟ್ಟಿಂದೆ ಕೋರೆಯ ತೋರ್ಪನೆ-ಬೇಗ-|ಗಟ್ಟಿ ಉಕ್ಕಿನ ಕಂಬ ಒಡೆದು ಬಂದನೆ ರಂಗ 1ಮೂರಡಿ ಭೂಮಿಯ ಬೇಡಿದನೆ-ನೃಪರ-|ಬೇರ ಕಡಿಯಲು ಕೊಡಲಿ ತಂದನೆ |ನಾರಸೀರೆಯನುಟ್ಟುಕೊಂಡನೆ-ಬೇಗ-|ಚೋರತನದಿ ಹರವಿ ಹಾಲ ಕುಡಿದನಮ್ಮ 2ಬತ್ತಲೆ ನಾರಿಯರನಪ್ಪಿದ-ಬೇಗ-|ಉತ್ತಮ ಅಶ್ವವ ಹತ್ತಿದ ||ಹತ್ತವತಾರವನೆತ್ತಿದ-ನಮ್ಮ-|ಸತ್ಯಮೂರುತಿ ಪುರಂದರವಿಠಲರಾಯನು 3
--------------
ಪುರಂದರದಾಸರು
ಕೇಳೆ ಯಶೋದೆ ನಿನ್ನ ಬಾಲಕನಾಟಗಳೂ |ಹೇಳಿಕೊಂಡರೆ ಸುಳ್ಳೇ ಕಾಣಿಸಿತಮ್ಮ ಪನೀರೊಳಾಡುವನಲ್ಲೆ, ಪೋರರ ಕೂಡಿಕೊಂಡು |ಮಾರಿಯೆಂಬೊದೇನು ಸಾರಿ ಬಾಹೊದೆ 1ಎಲ್ಲರಂತುಂಡು ಮನೆಯಲ್ಲಾಡಬಾರದೆ |ಕಲ್ಲೆತ್ತುವನೆ ಯಂಥ ಬಲ್ಲಿದನಂತೆ 2ನಿಮ್ಮ ಹಿತಾರ್ಥನಾಗಿ ಸಮ್ಮೀಸಿ ಪೇಳಿದರೆ |ಬೊಮ್ಮನ ಮಗನಂತೆ ನಮ್ಮನ್ನೇ ಬೈವ 3ಮೂರು ಕಣ್ಣವಪರನಾರೇರ ಮುಟ್ಟಲಾರ |ಊರೊಳಗಿವ ಬಲು ಮೀರಿದನಮ್ಮ 4ಸಣ್ಣವನೆನಬೇಡ ನಿನ್ನ ಮಗನಗೋಪಿ|ಅನ್ನಿಥವಾಡೆವೆಮ್ಮ ಚಿನ್ನಗಳಾಣೆ 5ಬೆಂಕಿಗಂಜದೆ ನಿರಾತಂಕದರೊಳಗಿಹ |ಮಂಕುತನವ ನೋಡೆ ಪಂಕಜನೇತ್ರೆ6ಇನ್ನೊಂದು ಮಾತು ಕೇಳೆ ಮೊನ್ನೆ ಮೊನ್ನೆ ಒಬ್ಬ |ಹೆಣ್ಣಿನ ಕೊಂದನಲ್ಲೆ ಅನ್ಯಾಯ ನೋಡೆ 7ಕಿತ್ತಿದನೊಂದು ಮರ ಮತ್ತೆರಡು ಮೂರೀದ |ಮತ್ತಗಜವ ಕೊಂದುನ್ಮತ್ತನ ನೋಡೆ 8ಸದ್ಯ ಹೋಗಲೀನಿತು ಇದ್ದೊಬ್ಬವನು | ಅಪ್ರ-ಬುದ್ಧನಾಗಬಾರದು ಬುದ್ಧಿಯ ಹೇಳೇ 9ಅಧಮರೊಡನೆನಿತ್ಯಕದನಮಾಡುವದೇಕೆ |ಮಧುಸೂದನನ್ನು ಒಳ್ಳೆ ಹದನದಲ್ಲೀಡೆ 10ಕಾಣ ಬಂದದ್ದಾಡಲು ಪ್ರಾಣೇಶ ವಿಠಲಗೆ |ಹೀನ ತೋರುವದಮ್ಮಾ ಏನನ್ನಬೇಕೆ 11
--------------
ಪ್ರಾಣೇಶದಾಸರು
ಕೈ ಮುಗಿದು ಬೇಡುವೆನು ಕೈಲಾಸವಾಸಾ ||ವಹಿಲದಲಿ ಸಲಹೆನ್ನ ಈಶ ಗಿರಿಜೇಶಾ ಪಅಷ್ಟ ಭಾಗ್ಯವು ನೀನೆ | ಇಷ್ಟಮಿತ್ರನು ನೀನೆ |ಹುಟ್ಟಿಸಿದ ತಾಯ್ತಂದೆ |ವಿದ್ಯೆಗುರುನೀನೆ |ಸೃಷ್ಟಿ ಮೂರಕೆ ನೀನೆ ಅಧ್ಯಕ್ಷನೆನಿಸಿರುವೆ |ರಕ್ಷಿಸೆನ್ನನು ಜಟಾಜೂಟ ನಿಟಿಲಾಕ್ಷ 1ಮಾಯಾಪಾಶದಿ ಸಿಕ್ಕಿ |ಕಾಯಸುಖವನು ಬಯಸಿ |ಆಯತಪ್ಪಿದೆ ಮುಂದುಪಾಯವೇನಿದಕೆ |ಜೀಯನೀನೆಂದೆಂಬ | ನ್ಯಾಯವರಿಯದೆ ಕೆಟ್ಟೆ |ಕಾಯೊ ದಯದಲಿ ಮೃತ್ಯು | ಬಾಯಿಗೊಪ್ಪಿಸದೆ 2ಘೋರತರ ಸಂಸಾರ ಸಾಗರದಿ ಮುಳುಮುಳುಗಿ |ಕ್ರೂರ ನಕ್ರನ ಬಾಯಿಗಾಹಾರವಾದೆ |ದಾರಿಕಾಣದೆ ಬಳಲಿ ಮಾರಹರ ನಿನ್ನಂಘ್ರಿ |ಸೇರಿದೆನು ಗೋವಿಂದದಾಸನನು ಸಲಹೋ 3
--------------
ಗೋವಿಂದದಾಸ
ಕೈಗೂಡಿಸು ಬಯಕೆ ರಂಗಾಕೈಗೂಡಿಸು ಬಯಕೆ ಪ.ಸಂತೆಯ ಬಳಗದ ಸಂಗತಿನೀಗಿಸಂತರ ಪದಪಲ್ಲವ ನೆಳಲಾಗಿಚಿಂತನೆ ಮೂರುತಿ ಚಿಂತನೆಗೊದಗಿಪ್ರಾಂತದ ಪಯಣ ಮನೋರಮವಾಗಿ 1ಚೆನ್ನಿಗ ಮೈಸುಟ್ಟರಿವ್ಯೆಂತಾಗಿಛಿನ್ನಾಗುವ ಮೈಯಂಜಿಕೆನೀಗಿನನ್ನ ರೂಹು ನನಗಿದ್ದಂತಾಗಿಚಿನ್ಮಯ ಬಿಂಬದ ಒಲುಮ್ಯೆನಗಾಗಿ 2ಬಯಲಿಗೆ ಬಿನ್ನಹವ ಮಾಡ್ಯೇನುಬಯಸುವಪರಿನೀಡುವ ದೊರೆ ನೀನುಭಯವಿಲ್ಲದೆ ಮೊರೆ ಹೊಕ್ಕೆನು ನೀಡಾಭಯವರದ ಪ್ರಸನ್ವೆಂಕಟ ಪ್ರೌಢಾ 3
--------------
ಪ್ರಸನ್ನವೆಂಕಟದಾಸರು
ಕೋಪವಿದೇಕೆ ಗೋಪಾಲಕ |ರೂಪಮನದಿ |ಕಾಪಾಡು ನೀ ಕೃಪೆಯೊಳ್ ತಾಪಸರ | ಪಾಪಾರಿಯೆ ಪಚದುರೆಯರ್ ವಿಧ ವಿಧ ದೂರುವದನಾಲಿಸುತ |ದಧಿಘೃತ ಕದ್ದನೆಂದು ಬೈದಳೇ ಯಶೋದೆ ನಿನ್ನ 1ನಾರಿಯರ ಸೀರೆಯ ಕದ್ದು | ಏರಿದಾ ಮರವನೆಂದು |ದೂರುವುದಕೇಳಿಪಿತ | ಕ್ರೂರತ್ವವ ತೋರಿದನೇ ||ಕೋಪ| 2ಚಂದದಿಂದ ಬಂದು ಎನ | ಗಿಂದು ದಯತೋರಿಸಯ್ಯಾ |ಸುಂದರಾಂಗಮೂರ್ತಿಗೋವಿಂದ ದಾಸರ್ವಂದಿತನೆ 3
--------------
ಗೋವಿಂದದಾಸ