ಒಟ್ಟು 1862 ಕಡೆಗಳಲ್ಲಿ , 111 ದಾಸರು , 1415 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಮನ ಅನ್ಯಕ್ಕೆರಗುತ್ತಿದೆ ಪ ಪತಿ ಅಂಗ ಸಂಗದೊಳಿರುತಿದ್ದು ಇದ್ದುಸತಿ ಉಪಪತಿಯನ್ನು ಬಯಸುವಂತೆಶ್ರುತಿ ತತ್ವ ಶಾಸ್ತ್ರಗಳರಿತಿದ್ದು ಇದ್ದು ದು-ರ್ಮತಿ ದುಷ್ಟ ಚರಿತೆಗೆ ಎಳೆಯುತಿದೆ ಎನ್ನ1 ನಿತ್ಯ ಉಣುತಿದ್ದು ಇದ್ದುಸುರೆಯ ಚಿಂತಿಸಿ ರುಚಿಗೊಳ್ಳುವಂತೆಕರಿ-ಸುರನದಿಯಲ್ಲಿ ಮೀಯುತಿದ್ದು ಇದ್ದುಪರಮ ಹರುಷದಿ ಕೆಸರ ಚೆಲ್ಲಿಕೊಂಬಂತೆ 2 ಪರಮ ಪಾವನ ಗುಣಪೂರ್ಣನೆ ನಿನ್ನಚರಣಯುಗಳವನ್ನು ಧ್ಯಾನಿಸುತನೆರೆಹೊರೆಯಲಿ ಮನ ಹೋಗದಂದದಲಿಕರುಣಿಸಿ ನಿಲ್ಲಿಸೊ ಸಿರಿಕೃಷ್ಣರಾಯ 3
--------------
ವ್ಯಾಸರಾಯರು
ಎನ್ನನುದ್ಧರಿಸಲಾಗದೆ ಚೆನ್ನರಾಯ ಪ. ಎನ್ನನುದ್ಧರಿಸಲಾಗದೆ ಚೆನ್ನರಾಯ ಬಿನ್ನೈಸುವೆಇನ್ನು ಬೇರೆ ಗತಿಯ ಕಾಣೆ ನಿನ್ನ ಚರಣಕಮಲದಾಣೆ ಅ.ಪ. ನಿಗಮ ಉಸುರುತಿರಲು ನಿನ್ನಚರಣವನ್ನು ಶಿರದೊಳಾಂತೆ ಎನ್ನ ಮೇಲಣಕರುಣವಿಲ್ಲದದೇನುಕಾರಣ ಸಲಹಬೇಕುಸುರರ ಮಸ್ತಕದ ಸುಭೂಷಣ 1 ಹಿಂದೆ ನಾನನಾಥನಾಗಿ ಒಂದೆರಡ[ಲ್ಲಾ]ನೇಕ ಜನ್ಮದಿಬಂದು ನರಕಯಾತನೆಯಲ್ಲಿ ನೊಂದು ಬೆಂದು ಬಾಯಬಿಡುತಬಂದೆ ನಿನ್ನ ಪೆಸರುಗೊಂಡೆನೊ ಸನಾಥನಾಗಿಮುಂದೆ ನಾಮಸುಧೆಯನುಂಡೆನೊ ನೀ ಕೃಪಾಳುಎಂದು ನುಡಿವರನ್ನು ಕಂಡೆನೊ 2 ಹಲವು ಮಾತನಾಡಲೇನು ಒಲಿವುದಿನ್ನು ಹರಿಯೆ ನಿನ್ನಸಲಿಗೆಯೊಳೀ ಬಿನ್ನಪವನು ಸಲಿಸುತಿಹೆನು ಮುಂದಕಿನ್ನುಜಲುಮ ಬಾರದಂತೆ ವರವನು ಇತ್ತು ಎನ್ನಸಲಹೊ ದೊರೆಯೆ ನಿನ್ನ ಕರೆಯೆನೊ ಮುಂದೆ ಮುಕುತಿ-ಲಲನೆಯೊಡನೆ ಸುಖದಲಿರುವೆನು 3 ದೇಶವರಿಯೆ ನಾನು ನಿನ್ನ ದಾಸನೆಂದು ಡಂಗುರವನು ಹೊ-ಯಿಸಿ ತಿರುಗುತಿರÀಲು ಮೋಹಪಾಶವೆನ್ನ ಸುತ್ತಿಕೊಂಡುಘಾಸಿ ಮಾಡುತಿರಲು ಬಿಡಿಸದೆ ಇರುವ ಪಂಥವಾಸಿಯೇನು ಇನ್ನು ಅಲೆಸದೆ ಸಲಹೊ ಸ-ರ್ವೇಶ ನಂಬಿದವನ ಕೆಡಿಸದೆ 4 ಎನ್ನ ದುರ್ಗುಣವನ್ನು ಮರೆದು ನಿನ್ನ ಸದ್ಗುಣದಿ ಪೊರೆದುಮನ್ನಿಸಿದರೆ ಲೋಕದೊಳಗೆ ಧನ್ಯನಹೆನು ಜನಮವೆತ್ತಿಉನ್ನತಾಹುದು ನಿನ್ನ ಕೀರುತಿ ನಾಶವಾಹುದುಎನ್ನ ಭವದ ಬಹಳ ಧಾವತಿ ಸಲಹೊಚೆನ್ನ ಹಯವದನಮೂರುತಿ 5
--------------
ವಾದಿರಾಜ
ಎಲ್ಲರ ಮಾತು ನಿಜ | ಇದು ಅಲ್ಲ ಎಂಬುದು ಸಜ ಪ ಬಲ್ಲವರು ಮನದಲಿ ಯೋಚಿಪುದು ಸು- ಸೂರಿ ಜನಗಳಿಗೆ ಅ.ಪ ಅಂತರ್ಯಾಮಿಯ ವೀಕ್ಷಾ | ಇದು ಅ ದ್ವೈತ ಮತದ ದೀಕ್ಷಾ ಸ್ವಾಂತದಿ ನೋಡೆ ಪ್ರಪಂಚಕಾಯ ಭಗ ವಂತನೆಂಬುದು ವಿಶಿಷ್ಟಾದ್ವೈತವು 1 ಅಣುರೇಣು ತೃಣಕಾಷ್ಠದಲಿ | ನೋಡೆ ಅ- ವನೇ ವ್ಯಾಪಿಸಿಹನಲ್ಲಿ ರೇಣು ಬೇರೆ ಅವನೇ ಬೇರೆ ಅನಿಲಾಂತರ್ಗತನಾಗಿ ಸಮಸ್ತದಿ 2 ಮೂರು ವಿಧದ ಜೀವಗಳು ಕರ್ಮ ಮೂರಾಗಿ ತೋರುವ ಗುರುರಾಮ ವಿಠಲನು 3
--------------
ಗುರುರಾಮವಿಠಲ
ಎಲ್ಲವು ನಿನ್ನಾಧೀನ | ನಾ ಬಲ್ಲೆನೆಂಬುದಜ್ಞಾನ ಪ ವಿಧಿ ಪರಿಯಂತವು ನೀ- ನಿಲ್ಲದೆ ಕದಲದು ನಿಜವಿದು ನಿಜವಿದು ಅ.ಪ ಸುಖವನಪೇಕ್ಷಿಸುತಿಹರು | ದು- ಸಖ ನೀನೆನ್ನದೆ ದಾರಾ ಪುತ್ರಾ- ದ್ಯಖಿಳ ಸಂಪದವ ಬಯಸಿ ಕೆಡುವರು 1 ಹಣ ಸಂಪಾದಿಸುವದಕು | ಸ- ದ್ಗುಣ ವಂತನೆನಿಸುವದಕೂ ಹೆಣಕೆ ಸಮಾನನು ಇವನೆಂಬುವದಕೂ | ಹಿರಿಯ- ನೆನಿಸಿ ಪೂಜಿಸಿ ಕೊಂಬುವುದಕೂ 2 ನೀನೊಲಿದರೆ ವಿಷವಮೃತ | ಬರಿ- ಜ್ಞಾನಿಗಳರಿಯುವರೀ ನಾನಾ ಬಗೆ 3 ಜ್ಞಾನ ಭಕ್ತಿಯು ವಿರಾಗ | ವೆಂ- ಬೀನಿದಾನವೇ ಯೋಗ ಆನಂದ ಪಡುವುದೇ ಬಲು ತ್ಯಾಗ 4 ಕ್ಷೇಮದಿಂದಲಿರುವದಕೂ | ನಿ- ರ್ನಾಮವೈದಿ ಕೆಡುವುದಕೂ ಪಾಮರ ಜೀವರು ತಾವರಿಯರು ಗುರು ರಾಮ ವಿಠಲ ನೀನಾ ಮಮತೆ ಕೊಡದಿರೆ 5
--------------
ಗುರುರಾಮವಿಠಲ
ಎಲ್ಲಾ ಶಾಸ್ತ್ರದ ಸಾರದ ತಿಳಲ್ಮನ ದಲ್ಲಿ ಹರಿಯನು ಕಾಂಬುದಕೆ ಪ. ಮನದಲಿ ಹರಿಯನು ಕಾಂಬುವ ಸೊಬಗು ಬಲ್ಲಿದ ವೈಕುಂಠಕೋಡ್ವದಕೆ ಅ. ವಿಧಿನೀಷೇಧಗಳಾಚರಿಸುವುದು ವಿಧ ವಿಧ ಜೀವರ ಸಾಧನಕೆ ವಿಧ ವಿಧ ಸಾಧನ ನಂತರ ತಿಳಿವುದು ವಿಧಿ ಜನಕನ ಪದಪಿಡಿವುದಕೆ 1 ಸ್ನಾನಜಪಾಹ್ನೀಕಗಳೆಲ್ಲವು ತನ್ನ ಧ್ಯಾನಕೆ ಶ್ರೀಹರಿ ನಿಲ್ವುದಕೆ ಧ್ಯಾನಕೆ ಶ್ರೀಹರಿ ನಿಂತ ಮೇಲೆ ಸು ಜ್ಞಾನದಿಂದ ತನ್ನರಿವುದಕೆ 2 ನೆಲೆ ಇಲ್ಲದ ಕರ್ಮಾಳಿಗಳ್ ದೇಹದ ಮಲಿನ ತೊಳೆದು ಶುದ್ಧಿಗೈವುದಕೆ ಮಲಿನ ತೊಳೆದು ಮನಶುದ್ಧದಿ ಹೃದಯದಿ ಇಳೆಯರಸನ ನೆಲೆ ಅರಿವುದಕೆ 3 ಅಗ್ನಿ ಹೋತ್ರಯಜ್ಞಾದಿ ಕಾರ್ಯಗಳ್ ಶೀಘ್ರದಿ ಹರಿಯನು ಕಾಂಬುದಕೆ ಶೀಘ್ರದಿ ಹರಿಯನು ಕಂಡ ಮ್ಯಾಲೆ ಇವು ಅಗ್ರಜವಲ್ಲೆಂದರಿವುದಕೆ 4 ರಂಗನ ಮೂರ್ತಿಯನಿಟ್ಟು ಪೂಜಿಸುವುದು ಅಂಗÀದಲ್ಲಿ ತಾನು ಕಾಂಬುದಕೆ ಅಂಗದಲ್ಲಿ ತಾನು ಕಂಡ ಮೇಲೆ ಇವು ಅಂಗಡಿ ಎಂತೆಂದರಿವುದಕೆ 5 ನಿತ್ಯ ನೈಮಿತ್ತಿಕ ಕರ್ಮಗಳೆಲ್ಲವು ಚಿತ್ತದಿ ಹರಿಯನು ತೋರ್ಪುದಕೆ ಚಿತ್ತದಿ ಹರಿಯನು ಕಂಡ ಮೇಲೆ ಇವು ಮತ್ರ್ಯರಿಗೆಸಗಿ ಮೌನಾಗ್ವುದಕೆ 6 ಚಾಂದ್ರಾಯಣ ವ್ರತ ಉಪವಾಸಗಳು ಇಂದ್ರಿಯ ನಿಗ್ರಹ ಮಾಡ್ವದಕೆ ಇಂದ್ರಿಯ ಚಲಿಸದೆ ಮನ ಧೃಡವಾಗಲು ಹಿಂದಿನ ಹಂಬಲ ತ್ಯಜಿಪುದಕೆ 7 ಮಧ್ವಶಾಸ್ತ್ರದ ಸಾರತತ್ವ ಮನ ಶುದ್ಧಿಯಗೈಸುತ ಸುಖಿಪುದಕೆ ಶುದ್ಧರಾದ ಶ್ರೀ ಗುರು ಕರುಣವು ಅನಿ- ರುದ್ಧನ ಹೃದಯದಿ ತೋರ್ವದಕೆ 8 ನೇಮದಿ ದ್ವಾದಶ ನಾಮಧಾರಣೆ ಹರಿ ನಾಮದ ದೇಹ ಬೆಳಗ್ವದಕೆ ಕಾಮಕ್ರೋಧವ ಬಿಡುವುದು ವಳಗಿನ ಶ್ರೀ ಮನೋಹರನನು ಕಾಂಬುದಕೆ 9 ಹೊರಗಿನ ವಸ್ತು ದೃಷ್ಟಿಸುವುದು ಶ್ರೀ ಹರಿ ವರ ವಿಶ್ವರೂಪವ ತಿಳಿವುದಕೆ ವರ ವಿಶ್ವರೂಪಧ್ಯಾನದಿಂದ ತನ್ನ ವರ ಬಿಂಬನ ಕಂಡು ನಲಿವುದಕೆ 10 ಅರಗಣ್ಣ ಮುಚ್ಚುವ ಅಭ್ಯಾಸಗಳೆಲ್ಲ ಸ್ಥಿರಮನವಾಗುವ ಕಾರಣಕೆ ಸ್ಥಿರಮನ ಶ್ರೀ ಹರಿ ದಯ ಮಾಡಲು ನೇತ್ರ ತೆರೆಯದೆ ಬಿಂಬನ ಕಾಂಬುದಕೆ 11 ಶಾಸ್ತ್ರದಿ ಪೇಳುವ ಧ್ಯಾನ ಪ್ರಕರಣವು ಶ್ರೋತ್ರದಿ ಕೇಳುತ ತಿಳಿವುದಕೆ ಗಾತ್ರದಿ ಶ್ರೀ ಗುರು ಕೃಪೆ ಮಾಡಲು ವಳ ನೇತ್ರದಿ ಸರ್ವವು ಕಾಂಬುದಕೆ 12 ಪಕ್ಷಮಾಸ ವ್ರತ ಪಾರಾಯಣ ಅಪ- ರೋಕ್ಷ ಪುಟ್ಟಲು ದಾರಿ ತೋರ್ವದಕೆ ಶಿಕ್ಷ ರಕ್ಷಕರಾದ ಗುರುಕರುಣವು ಅಪ- ರೋಕ್ಷ ಪುಟ್ಟಿಸಿ ನಿಜವರಿವುದಕೆ13 ಪರಿ ಜನರನು ಸೇವಿಸುವುದು ತನ್ನ ಪರಮಾರ್ಥತೆ ದೂರಾಗ್ವದಕೆ ಗುರುಚರಣವ ಸೇವಿಸುವುದು ಶ್ರೀ ಹರಿ ಅರಘಳಿಗಗಲದೆ ಪೊರೆವುದಕೆ 14 ಡಾಂಭಿಕ ಸಾಧನವೆಲ್ಲವು ಶ್ರೀ ಹರಿ ಡಿಂಬದೊಳಗೆ ಮರೆಯಾಗ್ವದಕೆ ನಂಬಿ ಶ್ರೀ ಹರಿ ಗುರು ಚರಣವ ಪೊಗಳ್ಪದು ಡಿಂಬದೊಳಗೆ ಹರಿ ಕಾಂಬುದಕೆ15 ಕರ್ಮ ವೈರಾಗ್ಯಗಳೆಲ್ಲವು ಪುಟ್ಟಿಸಲೂ ಭಕ್ತಿ ಜ್ಞಾನಕ್ಕೆ ಪುಟ್ಟಲು ಭಕ್ತಿ ಜ್ಞಾನ ಪಾಂಡುರಂಗ ವಿಠ್ಠಲನೊಬ್ಬನ ಪಿಡಿವುದಕೆ 16 ಯಾತ್ರೆ ತೀರ್ಥ ಚರಿಪುದು ಶ್ರೀ ಹರಿ ತನ್ನ ಗಾತ್ರದಲ್ಲಿರುವನೆಂದರಿವುದಕೆ ಗಾತ್ರವೆ ಕ್ಷೇತ್ರವೆಂದರಿತ ಮೇಲೆ ಸ ರ್ವತ್ರದಿ ವಿಠಲನ ಕಾಂಬುದಕೆ17 ಎಂತೆಂತೋ ಮಾರ್ಗಗಳರಸುವುದು ಚಿಂತನೆಗೆ ಹರಿ ನಿಲ್ವುದಕೆ ಚಿಂತನೆಗೆ ಹರಿ ನಿಂತ ಮೇಲೆ ತಾನು ಶಾಂತನಾಗಿ ಜಡನಾಗ್ವದಕೆ 18 ಹೊರಗಿನ ಸಂಸ್ಕಾರಗಳೆಲ್ಲವು ತನ್ನ ವಳಗಿನ ಸಂಸ್ಕಾರ ತೆರೆವುದಕೆ ವಳಗಿನ ಸಂಸ್ಕಾರ ತೆರೆದಮ್ಯಾಲೆ ತನ್ನ ಇರವರಿತು ಸುಖ ಸುರಿವುದಕೆ19 ಸಾಸಿರ ಜನ್ಮದ ಸಾಧನಗಳು ಹರಿ ದಾಸನಾಗಿ ತಾನು ಮೆರೆವುದಕೆ ದಾಸನಾದ ಮೇಲೆ ಕ್ಲೇಶಕೆ ಸಿಲುಕದೆ ಶ್ರೀಶನ ಹೃದಯದಿ ಕಾಂಬುದಕೆ 20 ಸಾರತತ್ವವನು ಅರಿವುದು ಗುರು ಮಧ್ವ- ಚಾರ್ಯರ ಮಾರ್ಗವ ಪಿಡಿವುದಕೆ ಪ್ರೇರಕ ಗೋಪಾಲಕೃಷ್ಣವಿಠಲ ಮನ ಸೇರಲು ಕಂಡು ತಾ ನಲಿವುದಕೆ 21
--------------
ಅಂಬಾಬಾಯಿ
ಎಲ್ಲಿ ನೋಡಿದರಲ್ಲಿ ಚನ್ನಕೇಶವನು ಪುಲ್ಲಲೋಚನನಾದ ಶ್ರೀ ಕೃಷ್ಣನು ಪ ಭೂತಳ ಪಾತಾಳ ಸಕಲ ಲೋಕಗಳಲ್ಲಿ ಭೂತ ಪ್ರೇತಾಳ ಕ್ರಿಮಿ ಜಂತುಗಳಲ್ಲಿ ಮಾತು ಚೇಷ್ಟಗಳಲ್ಲಿ ಕೆರೆ ಭಾವಿ ವನದಲ್ಲಿ ಕೋತಿ ಖಗವೃಂದ ಪಶುವರ್ಗಂಗಳಲ್ಲಿ 1 ವೇದ ಶಾಸ್ತ್ರಗಳಲ್ಲಿ ಸರ್ವ ಧರ್ಮಗಳಲ್ಲಿ ಬೋಧಕ ಮೊದಲಾದ ಗುರು ವರ್ಗದಲ್ಲಿ ಪಾದ ಪಾದಗಳಲ್ಲಿ ಸಾಧು ಸಜ್ಜನರಲ್ಲಿ ವಾದ್ಯ ಮೃದಂಗಾಗಿ ನಾದಂಗಳಲ್ಲಿ 2 ಕಣ್ಣುಗಳಿಗೆಸೆಯುವ ಸಕಲ ವಸ್ತುಗಳಲ್ಲಿ ಮಣ್ಣಿನಲಿ ಸರ್ವತ್ರ ಘನ ಸೃಷ್ಟಿಯಲ್ಲಿ ಬಣ್ಣಿಸಲ್ಕಾಗದ ಹರಿ ಕೀರ್ತನೆಗಳಲ್ಲಿ ಹೆಣ್ಣು ಹೊನ್ನು ಮಣ್ಣು ತ್ರಿವರ್ಗದಲ್ಲಿ 3 ಸಕಲ ಚರ ಪ್ರಾಣಿಯಲಿ ಅಚರ ಜೀವಗಳಲ್ಲಿ ಸಕಲ ಸ್ತ್ರೀ ಪುರುಷರಲಿ ಸುರದನುಜರಲ್ಲಿ ಸಕಲ ಧಾನ್ಯಗಳಲಿ ತಿಂಡಿ ತಿನಸುಗಳಲ್ಲಿ ಸುಖ ದುಃಖ ಬಹಿರಂಗ ಅಂತರಂಗದಲಿ 4 ದಿನದಲ್ಲಿ ನಿಶೆಯಲ್ಲಿ ಅನ್ನಪಾನಗಳಲ್ಲಿ ಅಣುರೇಣು ತೃಣಕಾಷ್ಟ ಸರ್ವ ದಿಕ್ಕಿನಲೀ ಕನಸಿನಲಿ ಮನಸಿನಲಿ ಪಂಚ ಭೂತಗಳಲ್ಲಿ ಜನನ ಮರಣಾತೀತ ಚನ್ನಕೇಶವನು 5
--------------
ಕರ್ಕಿ ಕೇಶವದಾಸ
ಎಲ್ಲಿರುವೆಯೊ ಎಂದು | ತಲ್ಲಣಗೊಳುತ್ತಿದ್ದೆ ಇಲ್ಲೆ ಬಂದೆಯೊ ದೇವನೆ ಪ. ಪುಲ್ಲಲೋಚನ ಎನ್ನ ಉಲ್ಲಾಸಗೊಳಿಸುತ ನಿಲ್ಲೊ ಹೃತ್ಕಮಲದಿ ನೀ ಬಹು ಮುದದಿ ಅ.ಪ. ಕಪಟನಾಟಕ ದೇವ | ಅಪರಿಮಿತ ಮಹಿಮ ಗುಪಿತರೂಪನೆ ನಿನ್ನನು ವಿಪುಲಮತಿಯಿಂದ ವರ್ಣಿಸಲಾಪೆನೆ ಸಪುತ ಸಪುತ ಭುವನೇಶ ಕೃಪೆಮಾಡೊ ಕೃಪಣವತ್ಸಲ ನಿನ್ನ ಕಾಣದೆ ಅಪರಿಮಿತವಾಗಿ ನೊಂದೆನಯ್ಯ ತಪಿಸುವುದು ನಿನಗುಚಿತವೆ ಹರಿ ಕೃಪೆ ಮಾಡೊ ಬೇಗ ಶ್ರೀನಿವಾಸ 1 ಹರಿ ನಿನ್ನ ಪಾದವ | ನಿರುತದಿ ಧ್ಯಾನಿಪ ವರಮತಿ ಎನಗೆ ನೀಡೊ ಗರುವಿಕೆಯನೆ ಬಿಡಿಸು ಶರಣಳ ಪೋಷಿಸು ಸುರವರ ನಿನ್ನಂಘ್ರಿಗೆರಗಿ ಬಿನ್ನೈಸುವೆ ಕರೆಕರೆಗೊಳಿಸುವುದುಚಿತವೆ ತೊರೆದರೆ ಎನ್ನ ಪೊರೆವರ್ಯಾರೊ ಥರವಲ್ಲ ನಿನಗಿನ್ನು ಕೇಳಿದು ಪೊರೆಯದಿದ್ದರೆ ನಗರೆ ಭಕ್ತರು 2 ಮಂದಮತಿಯಿವಳೆಂದು | ಹಿಂದು ಮಾಡಿದರÉನ್ನ ಕುಂದು ನಿನಗೆ ತಪ್ಪದೊ ಬಂಧನ ಬಿಡಿಸು ನೀ ಬಂಧನದೊಳಗಿಡು ಮಂದಿರ ಹೃದಯದಿ ಎಂದೆಂದಿಗಗಲದೆ ಮಂದಭಾಗ್ಯೆಯ ಮಾತು ಕಿವಿಗೆ ಮಂದಗಮನೆಯ ಮಧ್ಯೆ ಇರುವಗೆ ಮಂದಹಾಸ ಮುಖೇಂದು ವದನನೆ 3 ಅಜಸುರ ವಂದ್ಯನೆ | ಭಜಿಸಲಾಪೆನೆ ನಿನ್ನ ತ್ರಿಜಗದೊಡೆಯ ಹರಿಯೆ ವಿಜಯಸಾರಥಿ ಎನ್ನ ರಜತಮವನೆ ಕಳೆದು ಕುಜನರೊಳಿಡದಲೆ ನಿಜಗತಿ ಪಾಲಿಸೊ ಗಜವರದ ಗಂಭೀರ ದೇವನೆ ಧ್ವಜವಜ್ರೌಕುಶ ಪಾದಕಮಲನೆ ಭಜಿಸಿದವರಿಗೊಲಿವ ದೇವನೆ ಭುಜಗಭೂಷಣನಿಂದ ವಂದ್ಯನೆ 4 ಸೃಷ್ಟ್ಯಾದಿ ಕರ್ತನೆ | ಎಷ್ಟು ಬೇಡಲೊ ನಾನು ಇಷ್ಟ ದೈವÀವೆ ಕೇಳಲೊ ಭ್ರಷ್ಟತನವನೆಣಿಸದೆ ದೃಷ್ಟಿಯಿಂದಲಿ ನೋಡಿ ಕಷ್ಟಬಿಡಿಸಿದರೆ ಮುಟ್ಟಿಪೂಜಿಸುವೆನೊ ದಿಟ್ಟ ಗೋಪಾಲಕೃಷ್ಣವಿಠ್ಠಲ ಇಷ್ಟು ಬಿನ್ನಪ ನಷ್ಟ ಮಾಡದೆ ಕೊಟ್ಟು ಧೈರ್ಯವ ಮೆಟ್ಟಿ ಪಾಪವ ಸುಟ್ಟು ಕರ್ಮವ ಕೃಷ್ಣ ಸಲಹೊ 5
--------------
ಅಂಬಾಬಾಯಿ
ಎಷ್ಟು ದಿವಸ ಹೀಗೆ ಕಳೆಯಲೊ ಗೋಪಾಲಕೃಷ್ಣ ಎಷ್ಟು ದಿವಸ ಹೀಗೆ ಕಳೆಯಲೊ ಪ. ಎಷ್ಟು ದಿವಸ ಹೀಗೆ ಎನ್ನ ಸೃಷ್ಟಿಗೊಡೆಯ ಬಳಲಿಸುವೆಯೊ ಕಷ್ಟಪಡಲಾರೆ ಭವದಿ ದೃಷ್ಟಿಯಿಂದ ನೋಡಿ ಸಲಹೋ ಅ.ಪ. ನಾನಾ ಜನ್ಮದಿ ತೊಳಲಿಸಿ ಎನ್ನನು ನೀನೆ ತಂದೆಯೊ ಮಾನವತ್ವದಿ ನಾನು ಎಂಬುದು ಬಿಡಿಸಿ ಈಗ ನೀನೆ ಕರ್ತನೆನಿಸಿ ಕಾಯೋ1 ದೇಹಸ್ಥನೆಂದೆನಿಸಿ ಎನ್ನ ದೇಹ ಮಧ್ಯದಿ ಕಾಣದಿಹರೆ ದೇಹಗಳನು ಧರಿಸಲಾರೆ ದೇಹ ಮೋಹ ಬಿಡಿಸದಿಪ್ಪರೆ 2 ಭೃತ್ಯವತ್ಸಲನೆಂದು ನಿನ್ನ ಭಕ್ತರೆಲ್ಲರು ಕರೆಯುತಿಹರೊ ಪೊತ್ತ ಬಿರುದು ಬಿಡುವರೇನೊ ಭೃತ್ಯಳೆಂದು ಎನ್ನ ಸಲಹೊ3 ಪೋಗುತಿದÉ ದಿವಸ ನೋಡು ಬೇಗ ಬೇಗನೆ ದಯವ ಮಾಡು ಭೋಗದಲಿ ವೈರಾಗ್ಯ ನೀಡು ಭಾಗವತರ ಸಂಗ ಕೊಡು 4 ಕರ್ಮದಲ್ಲಿ ಶ್ರದ್ಧೆಯಿಲ್ಲ ಧರ್ಮದಲ್ಲಿ ಬುದ್ಧಿಯಿಲ್ಲ ನಿರ್ಮಲದ ಜ್ಞಾನವಿಲ್ಲ ನಿರ್ಮಲಾತ್ಮ ಬಲ್ಲೆಯಲ್ಲ 5 ಅಂಧಕಾರದಿ ಎನ್ನನಿರಿಸಿ ಚಂದವೇನೋ ಹೀಗೆ ಮಾಳ್ಪದು ಕರ್ಮ ಸ್ವೀಕರಿಸಿ ಮುಂದೆ ಕರ್ಮವಿಡದೆ ಸಲಹೋ 6 ಅಪಾರ ಜನುಮದಲ್ಲಿನ ಪಾಪ ಸಮೂಹಗಳ ತರಿದು ಶ್ರೀಪಾದ ಸ್ಮರಣೆ ನೀಡೋ ಗೋಪಾಲಕೃಷ್ಣವಿಠಲ 7
--------------
ಅಂಬಾಬಾಯಿ
ಎಷ್ಟು ಭಜಿಸಿದರು ಸಾಕಷ್ಟು ನನಗಾಗದೊ ಪ ಮೂರ್ತಿ ಅಂಗಜಪಿತ ಮೋಹನಾಂಗಚೆಂಗೊಳಲನು ನುಡಿಸುತಲಿರುವಭಂಗಿಯಲಿ ನಿನ್ನ ರೂಪಕಂಗಳಿಂದ ನೋಡಿ ನೋಡುತ 1 ಪೂರ್ಣ ಗುಣ ನಿರ್ದೋಷನೆಸುವರ್ಣಗರ್ಭ ನಿನ್ನ ಲೀಲೆವರ್ಣಿಸುತಿಹ ಕೀರ್ತನೆಯನುಕರ್ಣದಿಂದ ಕೇಳಿ ಕೇಳುತ 2 ನಿತ್ಯ ಮನಕೆ ಮುದವತಪ್ಪ ನಿನ್ನ ನಾಮ ಸುಧೆಯಚಪ್ಪರಿಸುತ ನಾಲಗೆಯಲಿಒಪ್ಪಿ ಸವಿದು ಸವಿಯುತಿರಲು 3 ಅಮಮ ನಿನ್ನ ತನುವಿನಿಂದಘಮಘಮಿಸುತ ಬರುವ ಗಂಧಅಮಿತ ಮುದವ ಮೂಗಿಗಿಡಲುರಮಿಸಿ ಮೂಸಿ ನೋಡುತಿರಲು 4 ಪಾವನತರ ನಿನ್ನಡಿಯಲಿಸೇವೆಗೊಳ್ಳು ನಿರುತದಲಿಕಾವುದಯ್ಯ ಶ್ರೀ ಗದುಗಿನದೇವ ವೀರನಾರಯಣ 5
--------------
ವೀರನಾರಾಯಣ
ಎಷ್ಟೆಷ್ಟು ಜನ್ಮಗಳ ಕಷ್ಟಂಗಳನು ಸಹಿಸಿ ನಿಷ್ಠೆಯಿಂ ತಪಗೈಯ್ದ ಶ್ರೇಷ್ಠಫÀಲದಿ ಕರವ ಪಿಡಿದೆ ಪೇಳುವದೇನು ನಡೆದ ಕಾರ್ಯಕೆ ಮನದಿ ಮಿಡುಕಲೇನು ಬಟ್ಟೆಗೇ ಗತಿಯಿಲ್ಲ ಪುಟ್ಟಿದಂತಿಹನಲ್ಲ ಹುಟ್ಟು ನೆಲೆಯರಿತಿಲ್ಲ ದಿಟ್ಟನಲ್ಲ ಅಹಿಂಸೆಯೆ ಮತ್ರ್ಯರಿಗೆ ಸಹಜಧರ್ಮವದೆಂದು ಬಹುನೀತಿ ಪೇಳುವನು ಬುದ್ಧನಿವನು ಬೆತ್ತಲೆಯೆ ಮನೆಮನೆಗೆ ಸುತ್ತುತಿಹನೆ ಉತ್ತಮಾಂಗನೆಯರ ಚಿತ್ರ ಚಲಿಸಿ ಮತನೆನ್ನಿಸಿ ನಲಿವ ಉನ್ಮತ್ರನಿವನೆ
--------------
ನಂಜನಗೂಡು ತಿರುಮಲಾಂಬಾ
ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಏಕೆ ನಿರ್ಧಯವೊ ಓ ರಾಮ ಶ್ರೀ ರಘುರಾಮ ಪ ಸ್ಮರಿಸಿ ಸ್ಮರಿಸಿ ನಾನು ಕರಗಿ ಬೆಂಡಾದೆನೊ ಕರುಣವಿಲ್ಲವೆ ನಿನಗೆ 1 ಪಾವನ ಚರಿತನೆ ಪಾವನ ಮಹಿಮನೆ ಪಾವನ ರೂಪನೆ ಬಾ 2 ಮಾನವ ಸೇವ್ಯನೆ ಧೇನುಪುರೀಶನೆ ಬಾ ಶ್ರೀ ರಘುರಾಮ ಧೇನುಪುರೀಶನೆ 3
--------------
ಬೇಟೆರಾಯ ದೀಕ್ಷಿತರು
ಏತಕೆ ನೀ ಚಿಂತಿಸುವೆ ಹೇಡಿ ಜೀವವೇ ಪ ವೀತಮೋಹರಾಗನಾಗಿ ವಿಧಿಪಿತ ದಾತತಾನೆಂದು ತಿಳಿಯಲು ಹೃತ್ತಾಪನಾಶನಾ ಅ.ಪ ಹೊನ್ನು ಹೆಣ್ಣು ಮಣ್ಣು ಮೂರು ನಂಬಬ್ಯಾಡಲೊ ನಿನ್ನೊಳಿರುವ ಮೂರ್ತಿಯನ್ನು ಅರಿತು ಬಾಳೆಲೊ 1 ವಂದಿಸುತ ಸಜ್ಜನರ ಕಂಡರಾನಂದ ಪೊಂದುತ ಸಂದೇಹಗಳೆಲ್ಲ ತೊರೆದು ಸತತ ನಲಿಯುತ 2 ಆತ್ಮವತ್ ಸರ್ವಭೂತನೆಂಬೊ ವಚನವು ಆತ್ಮನಲ್ಲಿ ಸಮರ್ಪಿಸಿದರೆ ಪಡೆವೆ ಸೌಖ್ಯವು 3 ಸಾಮಜೇಂದ್ರ ವರದ ಶ್ರೀ ಗುರುರಾಮವಿಠಲನ ಪ್ರೇಮದಿಂ ನಿಷ್ಕಾಮನಾಗಿ ಸೇವಿಸುನುದಿನ 4
--------------
ಗುರುರಾಮವಿಠಲ
ಏನಬೇಡಲೊ ಕೃಷ್ಣ ನಾಚಿಕಿಲ್ಲದೆ ಪ ಜ್ಞಾನಶೂನ್ಯನಾಗಿ ಬಹಳ ಹೀನ ಕಾರ್ಯ ಮಾಡಿ ನಾನು ಅ.ಪ. ಪರರ ವನಿತೆ ಧನಗಳಿಂಗೆ ಅರಿತು ಅರಿತು ಆಶೆಪಡುತ ದುರಿತಕೋಟಿಗಳನು ಮಾಡಿ ಪರಮ ನೀಚನೆನಿಸಿದವನು 1 ವನಗಳನು ಕಡಿಸಿ ಹಿರಿದು ಮನೆಗಳನ್ನು ರಚಿಸಿಕೊಂಡು ವನಿತೆ ಮಾತು ಕೇಳಿ ಜನನಿ ಜನಕರನ್ನು ತೊರೆದ ಪಾಪಿ 2 ಸತ್ಯ ಮತವನು ತುಚ್ಛಗೈದು ನಿತ್ಯಕರ್ಮಗಳನು ಬಿಟ್ಟು ಮತ್ತನಾಗಿ ತಿಂದು ಮಲಗಿ ಕತ್ತೆಯಂತೆ ಹೊರಳುವವನು 3 ಆರ್ತರಾದ ಜನರ ಸಲಹಿ ಕೀರ್ತಿಯನ್ನು ಹೊಂದಿ ದೇಹ ಸಾರ್ಥಕವನು ಮಾಡಿಕೊಳದೆ ಧೂರ್ತನೆನಿಸಿಕೊಳುವ ನರನು 4 ವಾಸುದೇವ ಸಕಲ ದೋಷ ರಾಸಿಗಳನು ದಹಿಸುವ ರಂ- ಗೇಶವಿಠಲರೇಯ ನಿನ್ನ ದಾಸನೆಂದು ಪೇಳದವನು 5
--------------
ರಂಗೇಶವಿಠಲದಾಸರು
ಏನಾದರಾಗಲಿ ಹರಿ ನಿನ್ನ ಸ್ಮರಣೆ ಮಾತ್ರ ಒಂದಿರಲಿ ಪ ಆಚಾರಿಯೆನಲಿ ಬಹು ದು | ರಾಚಾರಿಯೆನಲಿ ಜನರೆಲ್ಲನೀಚನೆಂದೆನಲಿ ಅನದಿರಲಿ 1 ಜ್ಞಾನಿ ಎಂದೆನಲಿ ದುರ್ಮಾರ್ಗ | ನಾನೆನಲಿ ಜನರೆಲ್ಲ ಬಹು ಮಾನವಂತನೆನಲಿ ಅನದಿರಲಿ 2 ಪಾಪಿಯಾಗಿರಲಿ ಬಹು ಸಂ | ತಾಪಿಯಾಗಿರಲಿ ಜನರೆಲ್ಲಪಾಪಿಯೆಂದೆನಲಿ ಅನದಿರಲಿ 3 ರಾಗವೇ ಬರಲಿ ಬಹು ವೈ | ಭೋಗವೇ ಬರಲಿ ವಿಷಯ ನಿಯೋಗವೇ ಬರಲಿ ಬರದಿರಲಿ 4 ಒಲಿದರೆ ನೀ ವ್ಯಾಸವಿಠಲ ಜನ | ರೆಲ್ಲ ಮತ್ತ್ಹಳಿಯುತಿರಲಿ ಇರದಿರಲಿ ಏನಾದರಾಗಲಿ ಹರಿಯೆ 5
--------------
ವ್ಯಾಸವಿಠ್ಠಲರು