ಒಟ್ಟು 301 ಕಡೆಗಳಲ್ಲಿ , 69 ದಾಸರು , 276 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಸಿರ ನಾಮವ ಹಾಡೆ | ತಂಗಿ ಪ ದಾಸರು ಬಂದರೆ ಕೈ ಜೋಡಿಸಿ ವಂದಿಸೆ ತೋಷದಿ ವರಗಳ ಸೀಡುವರಮ್ಮ ಅ.ಪ ಪರಿಮಳ ಭರದಲಿ ಮೆರೆಯುವ ಹೂಗಳ ಅರಸಿ ತಂದಿರುವಳು ನೀನಲ್ಲವೇ ಪರಮ ಮಂಗಳಕರ ಸರಸಿಜಪಾದಕೆ ಹರುಷದೊಳರ್ಪಿಸೆ ಮರೆಯದಿರಮ್ಮ 1 ಮಂದರಧರ ಗೋವಿಂದನು ಮನದಲಿ ನಿಂದಿರುವನು ತಾನೆಂದೆಣಿಸಮ್ಮ ಬಂಧಿಸಿ ಪಂಚೇಂದ್ರಿಯಗಳನೆಲ್ಲ ವಂದಿಸಿ ಕೈಪಿಡಿ ಎಂದು ಬೇಡಮ್ಮ 2 ಅಂಗನೆಯರ ಭಾವಭಂಗಿಗೆ ನಲಿಯುವ ಮಾಂಗಿರಿಯರಸನು ನಿಜವಮ್ಮ ಇಂಗಿತವರಿತು ಗೋಪಾಂಗನೆಯರಿಗಾ- ಲಿಂಗನವಿತ್ತವನಿವನಮ್ಮ 3 ಇವನಮ್ಮ ಮನದೈವ ಗೋಪಾಲನು ಇವನಮ್ಮ ಪರದೈವ ನೀಲಾಂಗನು ಭವದೂರ ಸುಕುಮಾರ ಸಿರಿಲೋಲನು ನವನೀತ ದಧಿಚೋರ ಸುವಿಲಾಸನು 4 ಪರಮಾರ್ಥ ಚರಿತಾರ್ಥ ವರದಾತನು ಪರತತ್ವ ಚಿರತತ್ವ ಗುರುವೀತನು ದುರಿತಾರಿ ಉಪಕಾರಿ ಪರಮಾತ್ಮನು ಸಿರಿರಂಗ ಮಾಂಗಿರಿಯ ದೊರೆಯೀತನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸೇರಿ ಸುಖಿಸುತಿರು ಮನುಜಾ ಗುರು ಶುಭ ಚರಣ ಸರೋಜ ಪ ಉದಧಿ ದಾಂಟಿ ಧಾರುಣಿಜಳಿಗೆ ಮುದ್ರಿಕೆಯಿತ್ತು ಜವದಿ ಶ್ರೀ ರಘುವರಗೆ ವಿನಯದಿ ಕ್ಷೇಮ ವಾರುತಿಯನು ಪೇಳಿದವನಂಘ್ರಿ ಮುದದಿ 1 ಇಂದು ಕುಲದಿ ಪಾಂಡು ನೃಪನ ಪುತ್ರ ನೆಂದು ಕರಿಸಿ ದುಷ್ಟ ಕೌರವಾಂತಕನ ನಂದ ನಂದನನೊಲಿಸಿದನ ದೃಪದ ನಂದಿನಿಯಳಿಗೆ ಪುಷ್ಪವ ತಂದಿತ್ತವನ 2 ಮಧ್ಯಗೇಹ ನೆಂಬೊದ್ವಿಜನ ಗೃಹದಿ ಮಧ್ವಾಭಿದಾನದಿ ಜನಿಸಿ ಮಾಯ್ಗಳನ ಗೆದ್ದು ಸಚ್ಛಾಸ್ತ್ರ ರಚಿಸಿದನ ಸುಪ್ರ ಸಿದ್ಧ ಸಿದ್ಧ ಕಾರ್ಪರ ನರಹರಿಗತಿ ಪ್ರಿಯನ 3
--------------
ಕಾರ್ಪರ ನರಹರಿದಾಸರು
ಸೇವೆ ಸುಖವೋ ಶ್ರೀ ಹರಿಸೇವೆ ಸುಖವೊ ಸೇವೆ ಗಿಂದಧಿಕ ಸುಖ ಸಾಯೋಜ್ಯಮುಕುತಿಪದದೊಳಿಲ್ಲ ಧ್ರುವ ಇಂದುಕುಲದೀಪಕನ ಎಂದೆಂದು ಬಿಡದೆ ಭಾವಲಿಟ್ಟು ಮೂರ್ತಿ ಸ್ಮರಿಸುವ 1 ದಾಸನಾಗಿ ವಾಸುದೇವನ ಪಾದಕಮಲಾರಾಧಿಸುವ 2 ವಿಹಿತಕಿಂತ ವಿಹಿತದೋರಿ ಕುಡುವ ಸ್ವಹಿತವೆಂದು ಕೀರ್ತಿಯನೆ ಕೊಂಡಾಡುತಿಹ್ಯ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೇವೆಮಾಡಿ ಹರಿಯ ನವವಿಧಪರಿಯ ಧ್ರುವ ಪಥ ಕೂಡಿ ಗೋವಿಂದನಾಮ ಪಾಡಿ ಅವಿದ್ಯುಪಾಧೀಡ್ಯಾಡಿ 1 ಯುಕ್ತಿಗೆ ವಿವೇಕ ಭಕ್ತ ಸಂರಕ್ಷಕ ಮುಕ್ತಿಗಿಂದಧಿಕ ಭಕ್ತಿನಿಜಸುಖ 2 ಸೇವೆಸುಖ ಹರಿಯ ಮಹಿಪತಿ ದೊರೆಯ ಸೇವಿಸಲೀಪರಿಯ ಭವನಾಶ ಖರಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಣೆ ಮಾತ್ರದಿ ಸ್ವತಂತ್ರ ದೊರಕುವುದು ಜಗದೊಳಗೆ ಶ್ರೀಹರಿ ಸ್ಮರಣೆ ಪ ಸ್ಮರಣೆ ಮಾತ್ರ ಸ್ವತಂತ್ರವೆಂದರೆ ಪರಮ ಭಗವದ್ಗೀತೆ ಅಪ್ಪಣೆ ಕರುಣಾಸಾಗರ ದಧಿಯಚೋರನೂ ಶರಣುಪಾರ್ಥಗೆ ಅರುಹು ಮಾಡಿಹ 1 ಸುಲಭದಿಂದಲಿ ಶ್ರವಣಮನನಾಗೀ ಜಗದೊಳಗೆ ನಿನಗೆ ಫಲಿತವಾಗೊ ನಿಧಿ ಧ್ಯಾನಾಗೀ ಕೊಲುಮೆತಿತ್ತಿಯನೂದಲಾಗುವ ಫಲವು ಕಂಡು ಕಾಣದಿರುವೆಯೊ ಕಲೆಯ ತೊಟ್ಟನು ನೀ ಗಲಾ ಪರಸುಳುಹಿನೊಳಗೆ ಹೊಕ್ಕಿ ಮಾಡೊ 2 ಬೆಂಗಳೂರಿಗೆ ಪೋಗಿ ನಿಂದಲ್ಲಿ ವೋ ಮಾಯಜೀವಾ ಮಂಗಳಾಂಗ ಶುಭಾಂಗಣದಲ್ಲಿ ತಂಗಿ ತಾನೆ ನಿಮಿಷ ನಿಮಿಷಕೆ ಸಂಗಮೇಶ್ವರನಾಗಿ ನಿಜದಾ ಬಂಗೆಲೆಯೊಳಗಿರುವ ತುಲಶೀರಾಮತಾ ನಿಜಲೀಗನೇಳಿದ 3
--------------
ಚನ್ನಪಟ್ಟಣದ ಅಹೋಬಲದಾಸರು
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹತ್ತಿಲಿಹÀ ವಸ್ತುನೋಡೊ ಮನವೆ ನಿತ್ಯ ನಿಜನಿರ್ಗುಣವ ಕೂಡೊ ಮನವೆ ಧ್ರುವ ಅತ್ತಲಿತ್ತಲಾಗದಿರು ಮನವೆ ಚಿತ್ತ ಚಂಚಲ ಮಾಡದಿರೆನ್ನ ಮನವೆ ಉತ್ತುಮ ಸುಪಥ ನೋಡು ಮನವೆ ನೆತ್ತಿಯೊಳಿಹ ಸುವಸ್ತು ಕೂಡೊ ಮನವೆ 1 ಹೋಕಹೋಗದಂತೆ ಎನ್ನ ಮನವೆ ಏಕರಸವಾಗಿ ಕೂಡೊ ಎನ್ನ ಮನವೆ ನಾಲ್ಕು ಶೂನ್ಯವ ಮೆಟ್ಟಿ ನೋಡು ಮನವೆ ಜೋಕೆಯಿಂದ ಜ್ಯೋತಿರ್ಮಯ ಕೂಡೊ ಮನವೆ 2 ಧನ್ಯವಿದು ರಾಜಯೋಗಮನವೆ ಭಿನ್ನವಿಲ್ಲದೆ ಬೆರೆದು ಕೂಡೊ ಮನವೆ ಚೆನ್ನಾಗಿ ಚಿನ್ಮಯ ನೋಡು ಮನವೆ ಅನ್ಯಪಥವಿನ್ಯಾತಕ ನೋಡು ಮನವೆ 3 ಗರ್ವಗುಣ ಹಿಡಿಯದಿರು ಮನವೆ ನಿರ್ವಿಕಲ್ಪನ ತಿಳಿದು ನೋಡು ಮನವೆ ಪೂರ್ವಪುಣ್ಯಹಾದಿ ಇದು ಮನವೆ ಸರ್ವರೊಳು ವಸ್ತುಮಯ ಒಂದೆ ಮನವೆ 4 ದೃಷ್ಟಿಸಿ ಆತ್ಮನ ನೋಡು ಮನವೆ ಪುಷ್ಟವಾಗಿ ಘನದೋರುವದು ಮನವೆ ಭ್ರಷ್ಟವಾಗಿ ಬಾಳಬ್ಯಾಡ ಮನವೆ ನಿಷ್ಠನಾಗಿ ನಿಜನೆಲೆಯಗೊಳ್ಳ ಮನವೆ 5 ಏರಿ ಆರುಚಕ್ರ ನೋಡು ಮನವೆ ಪರಮಾನಂದ ಸುಪಥ ಕೂಡೊ ಮನವೆ ಆರು ಅರಿಯದ ಹಾದಿ ಮನವೆ ತೋರಿಕೊಡುವ ಸದ್ಗುರು ಎನ್ನ ಮನವೆ 6 ಹರಿಭಕ್ತಿಯೊಳಗಿರು ಮನವೆ ಸಿರಿ ಸದ್ಗತಿ ಸುಖವ ಕೂಡೊ ಮನವೆ ಗುರುವಾಕ್ಯ ನಂಬಿ ನಡೆ ಮನವೆ ಪರಲೋಕಕ್ಕೆ ಸೋಪಾನವಿದು ಮನವೆ 7 ಪರದ್ರವ್ಯಗಲ್ಪದಿರು ಮನವೆ ಪರಸತಿಯ ನೋಡದಿರೆನ್ನ ಮನವೆ ಪರರ ನಿಂದ್ಯ ಮಾಡದಿರು ಮನವೆ ದಾರಿ ಹೋಗದಿರು ದುಷ್ಟರ ನೀ ಮನವೆ 8 ಸಜ್ಜನರ ಸಂಗ ಮಾಡೊ ಮನವೆ ಹೆಜ್ಜೆವಿಡಿದು ಪರಲೋಕ ಕೂಡೊ ಮನವೆ ಭೆಜ್ಜರಿಕೆ ಹಿಡಿಯೊ ಎನ್ನ ಮನವೆ ದುರ್ಜನರ ಸಂಗ ಮಾಡಬ್ಯಾಡೊ ಮನವೆ 9 ಕಂಗಳ ತೆರೆದು ನೋಡು ಮನವೆ ಮಂಗಳಾತ್ಮನ ಶ್ರೀಪಾದ ಕೂಡೊ ಮನವೆ ಹಿಂಗದಂತೆ ಕೂಡೊ ಬ್ಯಾಗೆ ಮನವೆ ಗಂಗೆಯೊಳು ಜಲಬೆರೆದಂತೆ ಮನವೆ 10 ಭೇದ ಬುದ್ಧಿಯ ಮಾಡಬ್ಯಾಡ ಮನವೆ ಸಾಧುಸಂತರ ಸುಬೋಧ ಕೇಳು ಮನವೆ ಭೇದಿಸಿ ತಿಳಿದುನೋಡು ಮನವೆ ಸದಮಲ ಬ್ರಹ್ಮ ಸೂಸುತಿದೆ ಮನವೆ 11 ಯುಕ್ತಿ ನಿನಗಿದು ನೋಡು ಮನವೆ ಭಕ್ತವತ್ಸಲ ಸ್ಮರಿಸು ಮನವೆ ಮುಕ್ತಿಯಿಂದಧಿಕಸುಖ ಮನವೆ ಭಕ್ತಿರಸದೊಳು ಮುಳಗ್ಯಾಡು ಮನವೆ 12 ಲೇಸು ಲೇಸು ಮಹಿಪತಿ ಸು ಮನವೆ ದಾಸನಾಗಿರುವ ವಾಸುದೇವನ ಮನವೆ ಭಾಸಿ ಪಾಲಿಪನ ಕೂಡೊ ಎನ್ನ ಮನವೆ ಭಾಸ್ಕರ ಮೂರ್ತಿಯ ನೋಡು ಮನವೆ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿ ಪುಟ್ಟಿಸಿದಾ ವೃಕ್ಷದಿ ಪುಟ್ಟಿದ ಎಳೆಸಸಿಯೆ ಬಾಳೆನ್ನ ಕುಲದಾ ಬೆಳದಿಂಗಳೆ ಪ. ತಂದೆ ತಾಯಿಯ ಮಾತು ಮರೆಯದಿರು ಎಲೆಸಸಿಯೆ ಇಂದಿರಾಪತಿ ಕರುಣಕ್ಕೆ ಪಾತ್ರನೆಂದೆನಿಸಿ ಇಂದು ನೀನಖಿಳಜನ ಸಂದಣಿಯೊಳು ಬೆಳಗು ಚಂದ್ರ ಬಾನೊಳಗೆಸೆವ ತೆರನಂತೆ ಪೊಳೆದು1 ಬಾ ಹಿರಿಮೆ ಬೇಡವು ನಿನಗೆ ಹಿರಿಯರಾಜ್ಞೆಲಿರಿರಲು ಕರೆಕರೆಯುಬಾರದೊ ತರಳ ಶಿಶುವೆ ಹಿರಿಮೆಗೆ ಕೊರತೆಯುಂಟೆ ಗುರುಹಿರಿಯರಾಜ್ಞೆಯಲಿರಲು ದುರುಳರನು ಸರಸದೊಳು ಕೆಣಕದಿರು ಎಲೆಸಸಿಯೆ 2 ದಧಿ ಮಧುರಾಕಿಂತ ಅಧಿಕದ ಚೊಕ್ಕ ಮಾತುಗಳಾಡು ನಿನ್ನ ದಿಟ್ಟ ಬಾಯೊಳಗೆ ಚಿಕ್ಕವನಲ್ಲವೇ ಭಕ್ತಪ್ರಲ್ಹಾದ ಧ್ರುವ ಕೇಳೊ ಅವರಂತೆ ಚಿಕ್ಕ ಶ್ರೀ ಶ್ರೀನಿವಾಸನ ಹರಕೆಯಲಿ ಬಾಳೊ 3
--------------
ಸರಸ್ವತಿ ಬಾಯಿ
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹರಿಯ ಮರೆದುದಕಿಂತ ಪಾಪವಿಲ್ಲಾ | ಹರಿ ಸ್ಮರಣೆಯಿಂದಧಿಕ ಪುಣ್ಯ ಮತ್ತೊಂದಿಲ್ಲಾ ಪ ಗೋಹತ್ಯ ಸುರಾಪಾನ ಕನಕತಸ್ಕರ ಸುಜನ- | ಕಪಟ ವ್ಯಸನ || ಬಾಹಿರವಾಗ್ ದ್ವೇಷ ಪರದಾರಗಮನ ವಿ- | ವಾಹಗಳ ಮಾಣಿಸುವ ಪಾಪಕಿಂತಲಿ ಮೇಲು 1 ಗಂಗಾನದಿಯಲ್ಲಿ ಸ್ನಾನ ಪ್ರಣವ ಆಚಮನ | ಹಿಂಗದಲೆ ಗಾಯತ್ರಿ ಮಂತ್ರ ಮೌನ || ಕರುಂಗ ದಾನ-ಧರ್ಮ ವೃತ್ತಿ ಕ್ಷೇತ್ರ ರತುನ | ಬಂಗಾರಯಿತ್ತಧಿಕ ಬಹಳ ಪುಣ್ಯ ಮೇಲು 2 ಹಾಸ್ಯ ವಿರೋಧ ಮದ ಮತ್ಸರ ಪರಕಾರ್ಯ | ದಾಸ್ಯದಲಿ ಕೆಡಿಸುವ ಶಠನ ಲೋಭಿ || ವೈಶ್ವ ದೇವಾಹಿತ ಅತಿಥಿಗಳ ನಿಂದ್ಯರ- | ಹಸ್ಯ ದೂರುವ ಬಲು ಪಾಪಕಿಂತಲು ಮೇಲು 3 ಭಾಗವತ ಪುರಾಣ | ಸಾರ್ಥತ್ಯವಾದ ಪ್ರವಚನ ಶಾಸ್ತ್ರ || ಸಾರ ಪ್ರಬಂಧ | ಅರ್ಥ ಪೇಳುವ ಬಲು ಪುಣ್ಯಕಿಂತಲಿ ಮೇಲು4 ಮಿತ್ರಘ್ನ್ಯಗರಳ ಪ್ರಯೋಗ ಗರ್ಭಿಣಿವಧ | ಗೋತ್ರಸಂಸರ್ಗ ಬಲು ಪ್ರಾಣಹಿಂಸಾ || ಕ್ಷೇತ್ರ ಅಪಹಾರ ಕ್ಷುದ್ರವಾಣಿ ನಿಜಕ- | ಳತ್ರದಿ ದ್ರೋಹ ಬಲು ಪಾಪಕಿಂತಲಿ ಮೇಲು 5 ಕರ್ಮ ಸರ್ವದಲ್ಲಿ ಗಯಾ ಶ್ರಾದ್ಧ | ಭೂಧರ ಸಮಾಗಮ ಸತ್ ಶ್ರªಣಾ || ಆದಿತ್ಯ ಚಂದ್ರ ಉಪರಾಗ ಪರ್ವಣಿ ನಾನಾ | ರಾಧನೆಯರೆ ಬಲು ಪುಣ್ಯಕಿಂತಲು ಮೇಲು 6 ಆವಾವ ಪಾಪ-ಪುಣ್ಯಗಳದವರ ಕಿಂಕರವು | ದೇವನ ನೆನಸಿದಂಥ ನೆನೆಯದಂಥ || ಜೀವರೊಳಗೊಬ್ಬ ಮುಕ್ತನು ಒಬ್ಬ ತಮಯೋಗ್ಯ | ಕೈವಲ್ಯಪತಿ ನಮ್ಮ ವಿಜಯವಿಠ್ಠಲ ಪ್ರೇರಕ7
--------------
ವಿಜಯದಾಸ
ಹೊಡಿ ಚೋಕ ಒಡೆಯ ಶ್ರೀ ಹರಿಪಾದ ಪೊಡವಿತ್ರಯದಧಿಕೆಂದು ಪ ಸಾಧು ಸಜ್ಜನರಿಗೆ ಆಧಾರವಾದ ಪಾದ ಪಾದ ಬಹು ಮಿಗಿಲೆಂದು 1 ಪಾರವಾರಿಧಿ ಕಡೆದು ಪೀರಿದಮೃತಪಾದ ಘೋರರಕ್ಕಸರೊದೆದಪಾರಮಹಿಮ ಪಾದೆಂದು 2 ಗೋವಳರಾಳಿದ ಪಾವನ ಶ್ರೀಪಾದ ದೇವ ಶ್ರೀರಾಮಪಾದಕಾವಪಾದೀಡಿಲ್ಲೆಂದು 3
--------------
ರಾಮದಾಸರು
(ಧರ್ಮಸ್ಥಳ ಮಂಜುನಾಥನನ್ನು ನೆನೆದು)ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥಲೋಕೇಶಮಾಡುನಿರ್ಭಯಪ.ಪಾಕಹಪ್ರಮುಖದಿವೌಕಸಮುನಿಜನಾ-ನೀಕವಂದಿತಪದಕೋಕನದಕೋವಿದಅ.ಪ.ಪಾಪಾತ್ಮಪಾಪಸಂಭವ ನಾನೆಂಬುವದಕಾ-ಕ್ಷೇಪವೇನಿಲ್ಲೋಮಾಧವಶ್ರೀಪರಮೇಶ್ವರ ಕೋಪಕಲುಷಹರತಾಪತ್ರಯಶಮನಾಪದ್ಭಾಂಧವಗೋಪತುರಂಗ ಮಹಾಪುರುಷ ಗಿರೀಶ 1ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ-ನಾಮ ಪಾಪವಿಮೋಚನವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮಕಾಮಾರಿ ನಿನ್ನ ನಾ ಮರೆಹೊಕ್ಕೆನುಹೇ ವiಹಾದೇವ ಸೋಮಚೂಡಾಮಣಿ 2ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ-ಬ್ರಹ್ಮ ಸುಜ್ಞಾನದಾಯಕನಿರ್ಮಲನಿತ್ಯಸತ್ಕರ್ಮಪ್ರೇರಕ ಗಜ-ಚರ್ಮಾಂಬರಧರ ದುರ್ಮತಿಪ್ರಹರಭರ್ಮಗರ್ಭಜಭವಾರ್ಣವತಾರಕ3ಕಪ್ಪಕಾಣಿಕೆಗಳನು ತರಿಸುವರ-ಣ್ಣಪ್ಪದೈವವೆ ದೂತನುತಪ್ಪದೆ ಚಂದಯ ಹೆಗ್ಗಡೆಯರ ಮನದೊಳಿಪ್ಪ ದಧಿಮಥನ ತುಪ್ಪದಂತೆಸೆವಕರ್ಪೂರಗೌರ ಸರ್ಪವಿಭೂಷಣ 4ಪೊಡವಿಗಧಿಕವಾಗಿಹ ಕುಡುಮಪುರ-ಕ್ಕೊಡೆಯ ಭಕ್ತಭಯಾಪಹಕಡಲಶಯನ ಲಕ್ಷ್ಮೀನಾರಾಯಣಗತಿ-ಬಿಡೆಯದವನು ನಿನ್ನಡಿಗೆರಗುವೆವರಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
139-6ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಸ್ವರ್ಣಪುರಿಯಲಿ ಜಗತ್ ಪ್ರಖ್ಯಾತ ಸ್ವಾಮಿಗಳುಘನಮಹಿಮ ಸೂರಿವರ ಸತ್ಯಬೋಧಾರ್ಯರಸನ್ನಮಿಸಿ ಈ ಮಹಾಮೂರ್ತಿಗಳಾಹ್ವಾನದಿದಿನ ಕೆಲವು ನಿಂತರು ಜಗನ್ನಾಥ ಆರ್ಯ 1ಮೂರ್ಜಗವು ಅರಿವುದು ಸತ್ಯ ಬೋಧರ ಮಹಿಮೆವಾಜಿಮುಖ ಕೋಡ ನೃಹರಿ ರಾಮಪ್ರಿಯರುಪ್ರಜ್ವಲಿಪ ಸೂರ್ಯನ್ನ ರಾತ್ರಿಯಲಿ ತೋರಿಹರುಭಜಕರಸುರಧೇನುನಿವ್ರ್ಯಾಜ ಕರುಣೆ2ಶಿಷ್ಯರ ಸಹ ಜಗನ್ನಾಥದಾಸರು ತಮ್ಮನಿಯಮಗಳ ತಪ್ಪದೇ ಭಾಗವತಧರ್ಮಕಾಯವಾಙ್ಮನ ಶುದ್ಧಿಯಲಿ ಜ್ಞಾನ ಭಕ್ತಿಸಂಯುತದಿ ಮಾಳ್ಪುದು ಕಂಡರು ಮುನಿಗಳು 3ಹರಿದಾಸವರ ಜಗನ್ನಾಥದಾಸಾರ್ಯರಲಿಹರಿಯ ಒಲಿಮೆ ಅಪರೋಕ್ಷದ ಮಹಿಮೆನೇರಲ್ಲಿ ತಾ ಕಂಡು ಬಹುಪ್ರೀತಿ ಮಾಡಿದರುಹರಿಪ್ರಸಾದದ ಸವಿಯ ಅರಿತ ಆ ಗುರುಗಳು 4ಸ್ವರ್ಣಪುರಿಯಿಂದ ಜಗನ್ನಾಥದಾಸಾರ್ಯರುದಿಗ್ವಿಜಯದಿಂದಲಿ ಶಿಷ್ಯ ಜನಗುಂಪುಸೇವಕರ ಸಹ ಊರು ಊರಿಗೆ ಪೋದರುಆ ಎಲ್ಲ ಕ್ಷೇತ್ರದಲು ಧರ್ಮ ಪ್ರಚಾರ 5ಧರ್ಮ ಪ್ರಚಾರ ಹರಿಭಜನೆ ಪೂಜಾದಿಗಳುನಮಿಸಿ ಬೇಡುವವರ ಅನಿಷ್ಟ ಪರಿಹಾರಕರ್ಮಜ ದಾರಿದ್ರ್ಯಾದಿಗಳ ಕಳೆದು ಸಂಪದವಧರ್ಮ ಆಚರಣೆ ಬುದ್ಧಿಯ ಒದಗಿಸಿದರು 6ಸುರಪುರಾದಿ ಬಹು ಸ್ಥಳದಲ್ಲಿ ಪ್ರಮುಖರುಹರಿಭಕ್ತರು ಮಂಡಲೇಶ್ವರರು ಇವರಚರಣಕೆರಗಿ ಬಹು ಅನುಕೂಲ ಕೊಂಡರುಹರಿವಾಯು ಒಲಿಮೆ ಎಷ್ಟೆಂಬೆ ದಾಸರಲಿ 7ವರಪ್ರದ ವರದಾ ತೀರದಲಿ ಸಶಿಷ್ಯಧೀರೇಂದ್ರ ಯತಿವರ್ಯರ ಕಂಡು ನಮಿಸಿಆ ರಿತ್ತಿ ಕ್ಷೇತ್ರದಲಿ ವಾಸಮಾಡಿಹರುಧೀರೇಂದ್ರ ತೀರ್ಥರ ಅನುಗ್ರಹ ಕೊಂಡು 8ಸೂರಿಕುಲ ತಿಲಕರು ಉದ್ದಾಮ ಪಂಡಿತರುಧೀರೇಂದ್ರ ಗುರುಗಳು ಕಾರುಣ್ಯಶರಧಿಊರೊಳಗೆ ಹನುಮನ ಗುಡಿ ಇಹುದು ಪಾಶ್ರ್ವದಿಇರುವ ರಸ್ತೆಯ ಮೇಲೆ ದಾಸರ ಮನೆಯು 9ಸೋದಾಪುರ ಪೋಗೆ ತ್ರಿವಿಕ್ರಮ ದೇವರಮಂದಿರದ ಧ್ವಜಸ್ತಂಭದಲ್ಲಿವಾದಿರಾಜರು ಹಂಸಾರೂಢರಾಗಿರುವವರ್ಗೆವಂದಿಸಿ ತ್ರಿವಿಕ್ರಮರಾಯಗೆ ನಮಿಸಿದರು 10ಬದರಿಯಿಂದಲಿ ಈ ಸರಥ ತ್ರಿವಿಕ್ರಮನಭೂತರಾಜರ ಕೈಯಿಂದೆತ್ತಿ ತರಿಸಿಸೋದಾಪುರದಲ್ಲಿ ಪ್ರತಿಷ್ಠೆ ಮಾಡಿಹರುವಾದಿರಾಜರು ಭಾವಿಸಮೀರ ಲಾತವ್ಯ 11ಜಗನ್ನಾಥದಾಸರು ತ್ರಿವಿಕ್ರಮಗೆ ವಂದಿಸಿಅಗಾಧ ಸುಪವಿತ್ರೆ ಧವಳಗಂಗಾಸ್ನಾನಭಕುತಿಯಿಂ ಮಾಡಿ ಶಿವಹನುಮ ಕೃಷ್ಣರಿಗೆಬಾಗಿ ಅಶ್ವತ್ಥಸ್ಥರಿಗೆ ನಮಿಸಿದರು 12ಬಯಲಲ್ಲಿ ವೃಂದಾವನಗಳಲಿ ಗುರುಗಳಿಗೆವಿನಯದಿ ವಂದಿಸಿ ಭೂತನಾಥಗೆ ಬಾಗಿಶ್ರೀವ್ಯಾಸ ದೇವನಿಗೆ ಸನ್ನಮಿಸಿ ವೇದವೇದ್ಯರಿಗು ವಾದಿರಾಜರಿಗು ನಮಿಸಿದರು 13ಚತುದ್ರ್ವಾರ ಗೃಹದಲ್ಲಿ ಪಂಚವೃಂದಾವನವುಮಧ್ಯ ವೃಂದಾವನದಿ ಶ್ರೀವಾದಿರಾಜರುವೃಂದಾವನ ಮಹಿಮೆ ಚೆನ್ನಾಗಿ ತಿಳಿಯದಕೆಭಕ್ತಿ ಶ್ರದ್ಧೆಯಲಿ ನೋಡಿ ವೃಂದಾವನಾಖ್ಯಾನ 14ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗನಾಥನಿಗೆ ಎರಗಿ ಮಹಿಷೂರುಗರಳುಂಡ ಈಶ್ವರನ ಕ್ಷೇತ್ರಕ್ಕೆ ಪೋದರು 15ಕೇಶವನ ಪೂಜಿಸುತ ಪರ್ವತ ಗುಹೆಯಲ್ಲಿವಾಸಮಾಡುವ ಮಹಾ ಕರುಣಾಂಬುನಿಧಿಯುದಾಸಜನಪ್ರಿಯ ಶ್ರೀ ಪುರುಷೋತ್ತಮರಂಘ್ರಿಬಿ¸ಜಯುಗಳದಿ ನಾ ಶರಣು ಶರಣಾದೆ 16ಮಹಿಷೂರು ರಾಜ್ಯದ ಸರ್ಕಾರಿನಲ್ಲಿಮಹೋನ್ನತ ಸ್ಥಾನ ವಹಿಸಿದಧಿಕಾರಿಮಹಾಪಂಡಿತರುಗಳ ಸಭೆಯನ್ನು ಕೂಡಿಸಿವಿಹಿತದಿ ದಾಸರ ಪೂಜೆ ಮಾಡಿದನು 18ನಿರ್ಭಯದಿ ದಾಸರು ಘನತತ್ವ ವಿಷಯಗಳಸಭ್ಯರಿಗೆ ತಿಳಿಯದಿದ್ದವು ಸಹ ವಿವರಿಸಿದಸೊಬಗನ್ನು ಕಂಡು ವಿಸ್ಮಿತರು ಆದರು ಆಸಭೆಯಲ್ಲಿ ಕುಳಿತಿದ್ದ ದೊಡ್ಡ ಪಂಡಿತರು 19ಭಾಗವತಧರ್ಮದ ಪದ್ಧತಿ ಅನುಸರಿಸಿಭಗವಂತನ ಭಜನೆ ಸಭ್ಯರ ಮುಂದೆಆಗ ದಾಸರ ಅಪರೋಕ್ಷದ ಮಹಿಮೆರಂಗನೇ ಸಭ್ಯರಿಗೆ ತೋರಿಸಿಹನು 20ದಾಸರು ಶಿಷ್ಯರೊಡೆ ಯಾತ್ರೆ ಮಾಡಿದ್ದುಮೈಸೂರು, ಕೊಂಗು, ಕೇರಳ, ಚೋಳ, ಪಾಂಡ್ಯದೇಶಗಳು ಎಲ್ಲೆಲ್ಲೂ ಮರ್ಯಾದೆ ಸ್ವೀಕರಿಸಿಈಶಾರ್ಪಣೆ ಸರ್ವ ವೈಭವವೆನ್ನುವರು 21ಶ್ರೀಪಾದರಾಜರ ನಮಿಸಿ ವೆಂಕಟಗಿರಿಸುಪವಿತ್ರ ಘಟಿಕಾದ್ರಿ ಶ್ರೀಕಂಚಿಉಡುಪಿಶ್ರೀಪನ ಇಂಥಾ ಕ್ಷೇತ್ರಗಳಿಗೆ ಪೋಗಿಸ್ವಪುರಕ್ಕೆ ತಿರುಗಿದರು ಪೂಜ್ಯ ದಾಸಾರ್ಯ 22ಶ್ರೀಪಾದರಾಜರು ಪವಿತ್ರ ವೃಂದಾವನದಿಶ್ರೀಪತಿ ನರಹರಿ ಶಿಂಶುಮಾರನ್ನರೂಪಗುಣ ಕ್ರಿಯಾಮಹಿಮೆ ಧ್ಯಾನಿಸುತ ಇಹರುತಿರುಪತಿಮಾರ್ಗನರಸಿಂಹ ತೀರ್ಥದಲಿ23ಪುರುಷೋತ್ತಮರ ಸುತ ಬ್ರಹ್ಮಣ್ಯರ ಕುವರಶ್ರೀಕೃಷ್ಣ ಪ್ರಿಯತರ ವ್ಯಾಸಯತಿರಾಜಸೂರಿಕುಲ ಶಿರೋರತ್ನ ಶ್ರೀಪಾದರಾಜರಲಿಭಾರಿವಿದ್ಯೆಕಲಿತು ಪ್ರಖ್ಯಾತರಾದರು24ಹರಿರೂಪ ಗುಣಕ್ರಿಯ ಮಹಿಮೆಗಳ ಚೆನ್ನಾಗಿಪರಿಪರಿ ಸುಸ್ವರ ರಾಗದಲಿ ಕೀರ್ತನೆಸಂರಚಿಸಿ ಪಂಡಿತರು ಪಾಮರರು ಸರ್ವರಿಗುವರಸಾಧು ತತ್ವ ಬೋಧಿಸಿಹರು ದಾಸರು25ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಇತಿ ಸಪ್ತಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಇ. ಶ್ರೀಹರಿ ಲಕ್ಷ್ಮಿಯರುಅಂಗಳದೊಳಗಾಡೋ ರಂಗಪರಹೆಂಗಳ ಮನೆಗ್ಹೋಗ ಬ್ಯಾಡೋ ನೀಲಾಂಗ ಪದಧಿಘೃತಚೋರನೆನ್ನುವರು ನಿನ್ನಬೆದರಿಸಿ ಜರೆವರು ಪದುಮನೇತ್ರೆಯರುವಿಧವಿಧದಲಿ ಬಾಧಿಸುವರು ಕೊರಳಪದಕದ ಸರವನ್ನು ಸೆಳೆದುಕೊಳ್ಳುವರು 1ಕಿರುಕುಳ ....ನಿನ್ನ ಮನಕರಕರಿಸುವದೆನಗಿನಿತು ಕೇಳಣ್ಣಕರುಗಳ ಬಿಡ ಹೇಳಿ ಮುನ್ನಾ ಬಲುಹಗರಣಗೈಯ್ಯುವರೆನ್ನಾ ಸಂಪನ್ನಾ 2ನುಡಿಯಲಾಲಿಸುಮುದ್ದು ಕಂದಾ ನಿನ-ಗಿಡುವೆನಕ್ಷತೆ ವಸ್ತ್ರಾಭರಣ ಸುಗಂಧಾಕೊಡುವೆನುದಧಿಘೃತದಿಂದಾ ಕಾೈದಕಡಬು ಕಜ್ಜಾಯ ಅತಿರಸವಾ ಗೋವಿಂದಾ 3
--------------
ಗೋವಿಂದದಾಸ
ಇದೆಕೊದಧಿಮಥಿಸಿ ಹೊಸ ಬೆಣ್ಣೆ ಕೊಡುವೆನೊಪದುಮನಾಭನೆ ಗೊಲ್ಲ ಗೋರಸಕೆ ಗೋಳಿಡಬ್ಯಾಡೊ ಪ.ಮಲತ ಹಾಲು ಹುಳಿಮೊಸರು ತಂಗಳ ಬೆಣ್ಣೆನಳಿನಾಕ್ಷ ನಿನಗೇನು ರುಚಿಯೊ ಕಂದಕಳವಿನ ಮಾತ್ಯಾಕೆ ಹಸುಳೆ ಗೋವಳೆಯರಗೆಳತನವ್ಯಾತಕೊ ನಿನಗೆ ರಂಗಮ್ಮ 1ಮನೆ ಮನೆ ತಿರುಗಲು ತಿರುಕರ ಮಗನೇನೊಮನೆಯಲೇನು ಗೋರಸ ಕೊರತ್ಯಾಗಿದೈಅನುದಿನವಿಗಡೆÉೀರು ದೂರುತಲೈದಾರೆದಣಿದೆನಾರೋಪಣೆಯಕೇಳಿಕೃಷ್ಣಮ್ಮ2ಎನ್ನ ಮುದ್ದಿನಮೂರ್ತಿಎನ್ನ ಭಾಗ್ಯದ ನಿಧಿಯೆಎನ್ನ ಚಿತ್ತದ ಚಿಂತಾಮಣಿಯೆಚಿನ್ನರರಸನಾದ ಪ್ರಸನ್ವೆಂಕಟ ಕೃಷ್ಣನನ್ನಾಣೆ ಕಣ್ಣ ಮುಂದಿರೊ ನಮ್ಮಮ್ಮ 3
--------------
ಪ್ರಸನ್ನವೆಂಕಟದಾಸರು