ಒಟ್ಟು 235 ಕಡೆಗಳಲ್ಲಿ , 62 ದಾಸರು , 217 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿರಿರಮಣ ದಯದಿಂದ ಮಂತ್ರಾಘ್ರ್ಯ ಕೊಡುವ ಬಗೆ |ಪರಮೇಷ್ಠಿಗೊಲಿದು ಪೇಳಿದನು ಇಂತೂ ಪಅಷ್ಟಾಕ್ಷರದಿ ಮಂತ್ರಾಘ್ರ್ಯ ಸಾಲಗ್ರಾಮ |ವಿಟ್ಟು ಸದ್ ಭಕ್ತಿಯಲಿ ಶಂಖದಿಂದಾ ||ಕೊಟ್ಟವಗೆ ಸಂತುಷ್ಟನಾಗಿ ಎನ್ನಯ ಸದನದೋ- |ಳಿಟ್ಟು ಸಂತೈಸುವೆನು ಬ್ರಹ್ಮ ಕೇಳೂ 1ಸತ್ಯಭಾಮಾದಿ ಮಿಕ್ಕಾದ ಮಂತ್ರಾಘ್ರ್ಯವನು |ಮತ್ಪಾದ ಜಲದಿಂದ ಪಾತ್ರಿಯಲ್ಲೀ ||ಹಸ್ತದಿಂ ಕೊಡಬೇಕು ಎನ್ನ ಪ್ರೀತಿ ಎಲೊ ಇದು |ಸತ್ಯಲೋಕಾಧಿಪನೆ ಕೇಳು ಮುದದೀ 2ಎನ್ನ ಮಂತ್ರಾಘ್ರ್ಯ ಹಸ್ತದಲಿ ಪಾತ್ರಿಯೊಳೀಯೆ |ಅನ್ಯಾಯವೆಷ್ಟೆಂದು ಪೇಳಲೀಗಾ ||ವನ್ನಜಾಸನ ಎನಗರಕ್ತವೆರದಂತಹದೊ |ಮುನ್ನವರ ಕ್ಲೇಶಕ್ಕೆಎಣಿಕೆಇಲ್ಲಾ 3ಅದರಿಂದ ತಿಳಿದು ಸಾಲಗ್ರಾಮವಿಟ್ಟು ಶಂ- |ಖದಲಿ ಕೊಡಬೇಕು ಎನ್ನಘ್ರ್ನಗಳನೂ ||ವಿಧಿಕಾಷ್ಟಗತವಹ್ನಿಮಥಿಸೆ ತೋರ್ವಂತೆ ಸ- |ರ್ವದ ತೋರ್ವೆ ನಾನು ಸಾಲಗ್ರಾಮದೀ 4ಶ್ರೀ ನಾರಿ ಪ್ರಮುಖ ಮಂತ್ರಾಘ್ರ್ಯ ಶಂಖದಲಿ ಕೊಡೆ |ನಾನೊಪ್ಪೆನವರ ಭಂಗವ ಬಡಿಸುವೇ ||ವಾಣೀಶ ತಿಳಿಯಂದು ಸ್ಮಿತ ವದನದಿಂದ ಶ್ರೀ |ಪ್ರಾಣೇಶ ವಿಠಲ ನಿರೂಪಿಸಿದನೂ 5
--------------
ಪ್ರಾಣೇಶದಾಸರು
ಶುಭವು ಶ್ರೀಹರಿಯ ನಾಮವು ಸುಜನರಿಗೆಲ್ಲಶುಭವು ಶ್ರೀಹರಿಯ ನಾಮವು ಪಶುಭವು ಶ್ರೀಹರಿಯ ನಾಮವಿಭವದಿಂ ಪೊಗಳಲುಶುಭಕೃತು ನಾಮ ಸಂವತ್ಸರದಲಿಶುಭಶುಭವೆನ್ನುತ ಪಾಡುವರನು ಸಲಹುವಅ.ಪಸಿಂಧುಶಯನ ಹರಿಯಇಂದಿರೆಸಹಿತಚಂದದಿ ಭಜಿಸುವರಮಂದರಧರಅರವಿಂದನಯನ ಶ್ರೀಮು-ಕುಂದಭಕ್ತರ ಭವಬಂಧನ ಬಿಡಿಸುವಪೊಂದಿ ಭಜಿಸುವರಾನಂದದಿ ಸಲಹುವಸುಂದರವದನಶುಭಾಂಗನು ಮುದದಲಿಇಂದ್ರಾದಿಗಳು ಆನಂದದಿ ಪೊಗಳೆ ಗೋ-ವಿಂದ ಆನಂದ ಹೃನ್ಮಂದಿರ ವಾಸನು 1ಶುಭವು ಭಕ್ತರಕಾರ್ಯಕೆ ಶ್ರೀಹರಿಯನಾಮಶುಭವು ಮುಕ್ತಿಸಾಧನಕೆಶುಭವು ಬಂಧುಗಳಿಂದ ಸದನದಿ ವೆÀುರೆಯಲುಶುಭವು ಭಕ್ತರ ವೃಂದ ಕೂಡಿ ನಲಿದಾಡಲುಶುಭಗುಣ ಶೀಲನ ಶುಭಗುಣಗಳು ಸ-ನ್ಮುದದಲಿ ಪಾಡಲು ಶುಭಕೊಡುವನುಶುಭಶುಭಶುಭವೆನ್ನುತ ನಲಿದಾಡೆ ಅ-ಶುಭಗಳನೋಡಿಸಿ ಶುಭವೀವನುಹರಿ2ಶುಭವು ಶೋಭನ ಶ್ರೀಶಗೆ ಶ್ರೀ ಸಹಿತದಿವೆÀುರೆವ ಮಹಾನುಭಾವಗೇಶುಭವೆಂದು ಪಾಡಲುಅಗಣಿತಮಹಿಮನಬಗೆಬಗೆಯಿಂದವರಘ ಪರಿಹರಿಸುವಖಗವಾಹನಶ್ರೀ ಕಮಲನಾಭ ವಿಠ್ಠಲನನು ಪಾಡುವ ಸುಜನರ ಸಲಹುವಹಗಲಿರುಳೆನ್ನದೆ ಭಜಿಸುತ ಪಾಡಿರೊಕಡಲೊಡೆಯನಪಾದಧೃಡ ಭಕುತಿಯಲಿ3
--------------
ನಿಡಗುರುಕಿ ಜೀವೂಬಾಯಿ
ಶೋಭಾನ ಪಾಂಡುರಂಗಗೆ | ಶೋಭನ ಶ್ರೀನಿವಾಸಗೆ |ಶೋಭನಉಡುಪಿನಿಲಯಾಗೇ ಪಸುಮನಸರಾಳ್ದವನ ವರಜ ಬಾ |ಕಮಲೆಸದನಮುಖಕಂಜರವಿಬಾ |ವಿಮಲ ಗುಣಾರ್ಣವನೀಲಜಲದನಿಗಾತ್ರಾ ಬಾ ||ವಾರಿಜನೇತ್ರ ಬಾ ಮಂಗಳ ಸ್ತೋತ್ರ ಬಾ |ವಹನ ಪತತ್ರಾ ಬಾ ನತಜನ ಮಿತ್ರಾ ಬಾಹಸಿಯಾ ಜಗುಲೀಗೇ 1ಅಷ್ಟನಾಮ ಒಪ್ಪುವನೇ ಬಾ |ದುಷ್ಟ ದಿತಿ ಸುತ ಮದಹರಣಾ ಬಾ |ಮುಷ್ಟಿಕ ಪ್ರಮುಖಹ ಗೋವರ್ಧನಧರ ಕೃಷ್ಣಾ ಬಾ ||ಹರಿಗತಕಷ್ಟಾ ಬಾ ತ್ರಿಜಗಚ್ಚೇಷ್ಟಾ ಬಾ |ಅಕ್ಷರಜೇಷ್ಠಾ ಬಾ ನಿರುತ ವಿಶಿಷ್ಟಾ ಬಾಹಸಿಯಾ ಜಗುಲೀಗೇ 2ಮಾತುಳರಿಪುವನಅನಳಬಾ |ಶ್ವೇತವಹನ ರಥಸಾರಥಿಬಾ |ಮಾತಿ ಶಿರ ಕಡಿದು ಬಾಹುಜರೊರಸಿದ ನಾಥಾ ಬಾ ||ಗೋಕುಲ ತ್ರಾತಾ ಬಾ ಲೋಕೈಕದಾತಾಬಾ |ವಸುದೇವ ಜಾತಾ ಬಾ ಸುಪ್ರಖ್ಯಾತಾ ಬಾಹಸಿಯಾ ಜಗುಲೀಗೇ 3ವಾಮನ ಕೇಶವ ಹಯಮುಖ ಬಾ |ಭೀಮವಿನುತನಿಃಸೀಮಾ ಬಾ |ಕಾಮಿನಿಯರ ಚೈಲಹರಣ, ಋಷಿ, ರಣಭೀಮಾ ಬಾ ||ದಶರಥ ರಾಮಾ ಬಾ ಬಾಣವಿರಾಮಾ ಬಾ |ಅಜಮುಖ ನಾಮಾ ಬಾ ಕೃಷ್ಣಾ ಪ್ರೇಮಾ ಬಾಹಸಿಯಾ ಜಗುಲೀಗೇ 4ಕಂದರ್ಪಜನಕ ನರಹರಿ ಬಾ |ಅಂದಮೃತವ ತಂದವನೇ ಬಾ |ಮಂದೇತರಮುದಘಟಜ ಪ್ರಮುಖ ಮುನಿವಂದ್ಯಾ ಬಾ ||ಕಸ್ತುರಿ ಛಂದಾ ಬಾ ದೇವ ಮುಕುಂದಾ ಬಾ |ದೇವಕಿ ಕಂದಾ ಬಾ ಸದ್ಗುಣ ವೃಂದಾ ಬಾಹಸಿಯಾ ಜಗುಲೀಗೆ 5ಕ್ಷಿತಿಧರ ಜಿನಧರ ಸಖನೇ ಬಾ |ಅತುಳಮಹಿಮನೆ ಅಜಿತನೇ ಬಾ |ಸತಿಗಮರ ಸದನದಕುಸುಮತಂದಚ್ಯುತನೇ ಬಾ ||ಮೂರುತಿ ಸುತನೆ ಬಾ ಲೋಕ ವಿತತನೆ ಬಾ |ಪೂಜಿಗುಚಿತನೆ ಬಾ ರಕ್ಷಣರತನೇ ಬಾಹಸಿಯಾ ಜಗುಲೀಗೆ 6ಪ್ರಾಣೇಶ ವಿಠ್ಠಲರಾಯಾ ಬಾ |ವೀಣಾಪಾಣೀ ಜನಕನೆ ಬಾ |ಮಾಣದೆಭಕ್ತರ ಪೊರವುತಿಹನೆ ಸತ್ರಾಣಾ ಬಾ ||ಸತ್ಯಾ ಪ್ರಾಣಾ ಬಾ ಶ್ರೀ ಪಾಠೀಣಾ ಬಾ |ನಿಜ ವಿಜ್ಞಾನಾ ಬಾನಿತ್ಯಕಲ್ಯಾಣಾ ಬಾಹಸಿಯಾ ಜಗುಲೀಗೆ 7
--------------
ಪ್ರಾಣೇಶದಾಸರು
ಶ್ರೀ ವಿಜಯೀಂದ್ರ ತೀರ್ಥರ ಚರಿತೆ110ಪ್ರಥಮ ಕೀರ್ತನೆವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿ ಯಿಂ ಶರಣಾದೆ ಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಹಂಸ ಲಕ್ಷೀಮಶ ನಾಭಿಭವ ಸನಕಾದಿಮಹಂತರ ಸೂರಿಗಳಗುರುಪರಂಪರೆಯಮಹಾ ಪುರುಷೋತ್ತ ಮದಾಸ ಶ್ರೀಮಧ್ವವನದೃಹ ಪಾದಗಳಲ್ಲಿ ನಾ ಶರಾಣು ಶರಣಾದೆ 1ಅರವಿಂದನಾಭ ನರಹರಿ ಮಾಧವತೀರ್ಥಸೂರಿಕುಲ ತಿಲಕ ಅಕ್ಷೋಭ್ಯ ಜಯತೀರ್ಥಪರವಿದ್ಯಾಕುಶಲ ಶ್ರೀ ವಿದ್ಯಾದಿರಾಜರಜಯೀಂದ್ರರ ಚರಣಂಗಳಲಿ ನಾ ಶರಣು 2ಕೋವಿದಶಿರೋಮಣಿ ಕವೀಂದ್ರ ವಾಗೀಶರುಭಾವುಕಾಗ್ರಣಿ ರಾಮಚಂದ್ರ ವಿಭುದೇಂದ್ರದೇವ ಹರಿಪ್ರಿಯ ಜಿತಾಮಿತ್ರ ಯತಿವರರು ರಘುನಂದನದೇವಿ ತುಳಸೀಪತಿಯ ಒಲಿಸಿಕೊಂಡ ಸುರೀಂದ್ರರು 3ಈ ಸರ್ವ ಗುರುಗಳಚರಣಕಮಲಗಳಲ್ಲಿನಾ ಸರ್ವದಾ ಶರಣು ಶರಣೆಂಬೆ ಮುದದಿವ್ಯಾಸಮುನಿ ಪ್ರಿಯಮಿತ್ರ ಶ್ರೀಸುರೇಂದ್ರರಕರಸರಸಿಜದಿಜಾತ ವಿಜಯೀಂದ್ರರಲಿ ಶರಣು ನಾ 4ವಿದ್ಯಾಧಿರಾಜ ಸುತ ರಾಜೀಂದ್ರತೀರ್ಥರಪದ್ಮ ಕರದುದಯ ಜಯಧ್ವಜರಹಸ್ತವೃತತಿಜೋತ್ಪನ್ನ ಪುರುಷೋತ್ತಮ ಮಹಾಮಹಿಮಯತಿಕುವರ ಸೂರಿವತ ಬ್ರಹ್ಮಣ್ಯತೀರ್ಥ 5ಬ್ರಹ್ಮಣ್ಯತೀರ್ಥಾಖ್ಯ ಖಗಕರದಿ ಅರಳಿತುಮಹಿಯಲಿ ಪ್ರಖ್ಯಾತ ವ್ಯಾಸಮುನಿಅಬ್ಜಬಹುಮಂದಿ ಈ ಸುಮನ ಪರಿಮಾಳಾಕರ್ಷಿತರುಬ್ರಹ್ಮವಿದ್ಯಾ ಮಕರಂದದಿ ಮೋದಿಸಿದರು 6ಪೂರ್ವಜನ್ಮದಿ ನಾರದರಿಂದ ಉಪದಿಷ್ಟವ್ಯಾಸರಾಜರು ಶ್ರೀಪಾದರಾಜರಲಿಸರ್ವವಿದ್ಯಾ ಕಲಿತು ವಾದಿಗಜಹರಿ ಆಗಿತತ್ವ ಬೋಧಿಸಿ ಸಜ್ಜನರ ಕಾಯ್ದಿಹರು 7ಋಜುಮಾರ್ಗದಲಿ ಇರುವ ಯತಿವಟು ಗೃಹಸ್ಥರುನಿಜಭಕ್ತಿ ಶ್ರದ್ಧೆಯಿಂದಲಿ ಶ್ರೀವ್ಯಾಸ-ರಾಜರಲಿ ವಿದ್ಯಾಭ್ಯಾಸ ಮಾಡಲು ಆಗಪ್ರಜಾಪೇಕ್ಷೆ ಭಿನೈಸಿದ ವಿಪ್ರಶಿಷ್ಯ 8ಆವಿಪ್ರೋತ್ತಮನಿಗೆ ಪ್ರಜಾ ಅನುಗ್ರಹ ಮಾಡಿಪ್ರವರ ಪುತ್ರನ ತಮ್ಮ ಮಠಕ್ಕೆ ಕೊಡಬೇಕುಅವರಜರು ಸಂತತಿ ಅಭಿವೃದ್ಧಿಗೆ ಇರಲುಈ ವಿಧದಿ ಹೇಳಿದರು ಶ್ರೀ ವ್ಯಾಸಮುನಿಯು 9ಕೊಟ್ಟವರ ತಪ್ಪದೇ ವಿಪ್ರಪತ್ನಿಗೆ ಶಿಶುಹುಟ್ಟುವ ಸಮಯದಲಿ ಗುರುಗಳು ಕೌಶೇಯತಟ್ಟೆಯ ಕಳುಹಿಸಿ ಭೂಸ್ಪರ್ಶ ಇಲ್ಲದÀಲೇಹುಟ್ಟಿದ ಮಗುವನ್ನು ಹಿಡಿಯ ಹೇಳಿದÀರು 10ಶ್ರೀಮಠಕ್ಕೆ ವಿಪ್ರನು ಆ ಬಾಲಕನನ್ನುನೇಮಿಸಿದ ರೀತಿಯಲಿ ಒಪ್ಪಿಸಿ ಅಲ್ಲಿರುಕ್ಮಿಣಿನಾಥ ವಿಠಲನ ಪೆಸರಿಂದವಿಮಲವಟು ವಿದ್ಯಾರ್ಥಿ ಸನ್ಯಾಸಿ ಆದ 11ವಿಟ್ಠಲಾಚಾರ್ಯನು ಶ್ರೀ ವ್ಯಾಸರಾಜರಲಿಶಿಷ್ಠವಿಲ್ಲದೇ ಅಷ್ಟು ಶಾಸ್ತ್ರ ಕಲಿತು ಚತುಃಷಷ್ಟಿ ವಿದ್ಯಾದಲ್ಲಿ ಸಹನಿಪುಣನಾಗಿಅಷ್ಟ ದಿಕ್ಕುಗಳಲ್ಲಿ ಪ್ರಖ್ಯಾತನಾದ 12ಇದರಲ್ಲೇನು ಆಶ್ಚರ್ಯ ಇಲ್ಲ ಸ್ವಾಭಾವಿಕವುದೇವತೆಗಳು ಧರಣಿಯಲ್ಲಿ ಜನಿಸಿದರೂಶಕ್ಯಾತ್ಮನ ಸರ್ವ ಅಣಿಮಾದಿ ಐಶ್ವರ್ಯಇದ್ದು ಸುವ್ಯಕ್ತ ವಾಗುವವು ಗುರುಕೃಪದಿ 13ಈ ವಿಠಲನೇವೇ ವಿಜಯೀಂದ್ರ ನಾಮದಲಿಭುವಿಯಲ್ಲಿ ಬೆಳಗಿದನು ಸುರರಲ್ಲಿ ಶ್ರೇಷ್ಠದೇವತಾ ಕಕ್ಷದವರಾದ ಶ್ರೀವ್ಯಾಸಮುನಿಪ್ರವರ ಸುರಗಣ ವಾದಿರಾಜರ ಸಮೇತ 14ಸರಸಿಜಾಸನಪಿತ &ಟಜquo; ¥ಸÀನ್ನ ಶ್ರೀ ನಿವಾಸನು&ಡಿಜquo;ಬರೆಸಿದ ಶ್ರೀಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ15 ಪ-ಇತಿ ಪ್ರಥಮ ಕೀರ್ತನೆ ಸಂಪೂರ್ಣಂ-ದಿತೀಯ ಕೀರ್ತನೆವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂದ ಶರಣಾದೆಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಶ್ರೀಮನೋಹರ ರಂಗನಾಥನ ಸೇವಿಸಲುಶ್ರೀಮಠ ಜರುಗಿತು ರಂಗ ಕ್ಷೇತ್ರಕ್ಕೆಸೋಮಪುಷ್ಕರಿಣಿಯಲಿ ಕಾವೇರಿ ಮಧ್ಯದಲಿಕಾಮಿತಪ್ರದ ಶ್ರೀಶರಂಗ ಇರುತಿಹನು 1ಕಾವೇರಿ ತೀರದಲ್ಲಿ ಶ್ರೀತುಳಸಿವನ ಬೆಳಸೆಆವನಸಮೀಪದಲಿ ವ್ಯಾಸಮುನಿ ಮಠವುದುರ್ವಾದ ಖಂಡನ ಸಿದ್ಧ್ದಾಂತ ಸ್ಥಾಪನದೇವತಾರ್ಚನೆ ಹರಿಕೀರ್ತನೆ ವೈಭವವು 2ಒಂದು ದಿನ ಶ್ರೀ ವ್ಯಾಸರಾಯರು ನೋಡಿದರುತಂದು ಪೂಜೆಗೆ ಇಟ್ಟ ತುಳಸೀದಳಗಳುಇಂದಿರಾಪತಿಗರ್ಪಿತವಾದ ನಿರ್ಮಾಲ್ಯಎಂದು ತಿಳಕೊಂಡರು ವಿಚಾರ ಮಾಡಿದರು 3ತಿಳಿಯ ಬಂತು ಅಂದು ಪ್ರಾತಃಕಾಲದಲಿತುಳಸೀಗೆ ಬಂದುರು ಸುರೇಂದ್ರ ಮಠದವರುತುಳಸಿ ಕೊಡುವುದಿಲ್ಲ ಎನೆ ಪೋದರು ಆ ಬಾಹ್ಮಣರುಪೇಳಿದರುಗುರುಸುರೇಂದ್ರರಿಗೆವೃತ್ತಾಂತ4ಭಾವುಕ ಶಿರೋಮಣಿವಿಜ್ಞಾನಸೂರಿಗಳುತಾವು ಕುಳಿತಲ್ಲೇ ಸುರೇಂದ್ರ ಸ್ವಾಮಿಗಳುಭವಜನಯ್ಯನಿಗೆವನತುಳಸಿ ಪೂರಾವುಭಾವಶುದ್ಧದಿ ಅರ್ಪಿಸಲು ಹರಿಕೊಂಡ 5ಶ್ರೀ ಸುರೇಂದ್ರರ ಈ ಮಹಿಮೆಯ ಶ್ಲಾಘಿಸಿಬೇಗವ್ಯಾಸರಾಯರು ತಾವೇವೆ ಪೋಗಿಕುಶಲ ಸಂಭಾಷಿಸಿ ತಮ್ಮ ಮಠಕ್ಕೆ ಬಂದುಶ್ರೀಶಾರ್ಚನೆ ಚರಿಸಲು ಆಹ್ವಾನ ಮಾಡಿದರು 6ಸೂರಿವರ ರಾಜೇಂದ್ರ ರವೀಂದ್ರರುಎರಡು ಈ ಗುರುಗಳಿಂದಲಿ ಬಂದ ಮಠಗಳುಎರಡು ಸ್ವಾಮಿಗಳು ಶ್ರೀವ್ಯಾಸ ಸುರೇಂದ್ರರಹರಿಪೂಜೆ ವೈಭವವು ವರ್ಣಿಸಲು ಅಶಕ್ಯ 7ಥಳಥಳಿಪ ಬ್ರಹ್ಮವರ್ಚಸ್ಸು ಮುಖಕಾಂತಿಯುಎಲ್ಲ ಶಾಸ್ತ್ರಜ್ಞಾನ ಪ್ರವಚನ ಪಟುತ್ವಶೀಲತ್ವ ಸೌಲಭ್ಯ ಬಾಲ್ಯ ಚಟುವಟಿಕೆಯುಸೆಳೆದವು ಸುರೇಂದ್ರರ ವಿಠಲನ ಬಳಿಗೆ 8ರಮೆಯರಸನ ಪೂಜೆತತ್ವಬೋಧÀವು ಮಾಳ್ಪತಮ್ಮ ಸಂಸ್ಥಾನದ ಉನ್ನತ ಸ್ಥಾನಕ್ಕೆತಮ್ಮ ನಂತರ ವಿಜಯೀಂದ್ರರೇ ಸರಿ ಎಂದುನೇಮಿಸಿದರು ಮನದಿ ಸುರೇಂದ್ರ ಗುರುವು 9ಅಪರೋಕ್ಷದಲು ಈವಿಠಲನ ಯೋಗ್ಯತೆಆ ಪುಣ್ಯ ಶ್ಲೋಕರು ಅರಿತು ತಾವುಅಪೇಕ್ಷಿಸುವಂತ ವಸ್ತು ಬÉೀಕೆಂದರುಶ್ರೀಪನ ಇಚ್ಫೆಯನರಿತು ವ್ಯಾಸರಾಯರಲ್ಲಿ 10ಕೇಳುವ ವಸ್ತು ಬಿಟ್ಟು ಬೇರೆ ಏನೂ ಕೊಡುವೆಕೇಳÉಲಾರೆನು ಬೇರೆ ಕೊಳ್ಳೆನು ಬೇರೆಇಲ್ಲ ವೆಂದರೆ ಊಟ ಮಾಡಿಕೊಡುತ್ತÉೀನೆ ಈಲೀಲಾ ವಿನೋದ ಮಾತುಗಳು ಕ್ರೀಡಾರ್ಥ 11ವಿಮಲ ವಿರಜಾ ಸಮ ಕಾವೇರಿ ಮಧ್ಯದಲಿರಮಾಯುಕ್ ರಂಗನಾಥನು ಹನುಮಸೇವ್ಯರಾಮ ಪೂಜಿಸಿದಂಥ ರಾಮನು ಪಟ್ಟಾಭಿರಾಮ ಶ್ರೀ ಗೋಪಾಲಕೃಷ್ಣನ ಮುಂದೆ 12ಶ್ರೀಶನ ಈ ಬಹುರೂಪ ಸನ್ನಿಧಿಯಲ್ಲಿಭೂಸುರ ವಿದ್ವಾಂಸರ ಸಭೆ ಮಧ್ಯದಲಿವ್ಯಾಸಮುನಿದತ್ತ ವಿಠಲನ ಸುರೇಂದ್ರರುಸುಸ್ವಾಗತದಿಂದ ಸ್ವೀಕಾರ ಮಾಡಿದರು 13ವಿಜಯೀಂದ್ರ ತೀರ್ಥ ಶುಭತಮ ನಾಮವಿತ್ತರುವಿಜಯಶೀಲರಾಗಿ ವಿಜಯೀಂದ್ರರುನಿಜತತ್ವ ಸಿದ್ಧಾಂತ ಸ್ಥಾಪಿಸಿ ದುರ್ಮತದುರ್ಜನ ದುರ್ವಾದ ಚೂರ್ಣ ಮಾಡಿದರು 14ಬ್ರಹ್ಮ ದಶರಥ ರಾಮಚಂದ್ರನು ಅರ್ಚಿಸಿದಭೂಮಾದಿ ಗುಣಗಣಾರ್ಣವ ದಯಾನಿಧಿಯುಕಮಲೆ ಸೀತಾಸೇವ್ಯ ಮೂಲರಾಮನ್ನಸಮ್ಮುದದಿ ಶ್ರೀವಿಜಯೀಂದ್ರರು ಪೂಜಿಸಿದರು 15ಸರಸಿಜಾಸನಪಿತ &ಟಜquo; ಪ್ರಸÀನ್ನ ಶ್ರೀನಿವಾಸ&ಡಿಜquo; ನುಬರೆಸಿದ ಶ್ರೀಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ16-ಇತಿದ್ವಿತೀಯಕೀರ್ತನೆ ಸಂಪೂರ್ಣಂ-ವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂಶರಣಾದೆ ಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಧರೆಯೊಳುತ್ತಮ ಕುಂಭಕೋಣಾಖ್ಯ ನಗರದಿಹರಿದ್ವೇಷಿಯ ಗೆದ್ದು ಅವನ ಮಠ ತೋಟಸ್ಪರ್ಧೆ ಫಣವಾದ್ದವ ತಮ್ಮಲ್ಲಿ ಸೇರಿಸಿಕೊಂಡಧೀರ ವಿಜಯೀಂದ್ರರ ಚರಣಕಾನಮಿಪೆ 1ಸಾರಂಗಹಸ್ತವರಾಹಚಕ್ರಪಾಣಿ ರಾಮಮಂಗಳಾಂಬಿಕೆಯುತ ಕುಂಭೇಶ್ವರತುಂಗಮಹಿಮಳು ಕಾವೇರಿ ಸುಧಾಸರಸ್ಸುಈ ಕುಂಭಕೋಣದ ಮಹಿಮೆ ಏನೆಂಬೆ 2ಸಂಕ್ರಂದಸ್ಮರಮೊದಲಾದ ಜಗತ್ತಿಗೆ ಗುರುವಾದಮಂಗಳಾಂಬಿಕೆ ಕುಂಭೇಶ್ವರರ ನೃಹರಿ ಸಾನಿಧ್ಯರಭಂಗವಿಲ್ಲದೆ ಪ್ರತಿದಿನ ಸೇವಿಸುವರುಸುರೇಂದ್ರಮಠ ಗುರುವು ವಿಜಯೀಂದ್ರರು 3ಭಸ್ಮಧರನು ಸರ್ವೊತ್ತ ಮನೆಂದು ವ್ಯರ್ಥದಿದುಸ್ತರ್ಕ ಮಾಡಿದ ಜಗನ್ಮಿಥ್ಯಾವಾದಿಅಪ್ಪಯ್ಯನ ಮತವ ತೃಣದಂತೆ ಮಾಡಿದತತ್ವವಾದ ಅಸಿಯಿಂದ ವಿಜಯೀಂದ್ರ ಜಯಶೀಲ 4ಸ್ವಪಕ್ಷ ಪರಪಕ್ಷ ಸರ್ವವಿದ್ವಾಂಸರುಈ ಪುಣ್ಯಶ್ಲೋಕರ ಮಹಿಮೆ ಕೊಂಡಾಡಿತಪ್ಪದೇ ಆಗಾಗ ಬಂದು ಮರ್ಯಾದೆಅರ್ಪಿಸಿ ಪೋಗುವರು ಕೃತಕೃತ್ಯಮನದಿ 5ಬಾದರಾಯಣಿ ಮಾಧ್ವ ಗ್ರಂಥಗಳನುಸರಿಸಿವೇದ ವಿರುದ್ಧ ಮತ ಖಂಡನ ಗ್ರಂಥಗಳುಚತುರೋತ್ತರ ಶತಮೇಲ್ ತತ್ವ ಬೋಧಕವಾದಗ್ರಂಥಗಳ ರಚಿಸಿದರು ಉತ್ತಮ ರೀತಿಯಲಿ 6ಅಂಬುಶಾಯಿ ಸರ್ವ ಮುಕ್ತಾಮುಕ್ತ ಆಶ್ರಯನುಅಂಭ್ರಣೀಪತಿ ಶ್ರೀಮನ್ನಾರಾಯಣಗಂಭೀರ ಶಬ್ದಾರ್ಥ ನಿರ್ವಚನ ಮಾಡಿಹರುಅಂಬುಜನಾಭ ಒಲಿವ ಪಠಿಸಿದರೆ 7ಮಧ್ವಮತ ಪರಿಮಳ ಸುಗಂಧ ಭುವಿಯಲಿ ಹರಡೇಸುಧಾದಿ ಉದ್ಗ್ರಂಥ ಪ್ರವಚನದಿ ಪಟುವುಸುಧೀಂದ್ರ ಯತಿವರಗೆ ಸಂಸ್ಥಾನ ಕೊಟ್ಟರುಮಧ್ವಮತೋದ್ಧಾರ ವಿಜಯೀಂದ್ರ ಗುರುರಾಟ್ 8ಸದ್ಭಕ್ತಿಯಿಂಶುಚಿ ಅಧಿಕಾರಿ ಇವರ ನರಸಿಂಹಾಷ್ಟಕವಪಠಿಸೆ ಭೂತ ಪ್ರೇತ ಪಿಶಾಚಾದಿಗಳ ಉಚ್ಫಾಟನವುಚೋರ ವ್ಯಾಧಿ ಮಹಜ್ವರ ಭಯಾದಿ ಕಷ್ಟಗಳು ನಿವಾರಣಸಂಧ್ಯಾಕಾಲ ಪಠನದಿ ಸದ್ಭಕ್ತಿಗೆ ಒಲಿದು ಕಾಯ್ವ ಶ್ರೀ ನರಸಿಂಹ 9ಐವತ್ತು ಮೇಲೈದು ವರ್ಷ ಸಂಸ್ಥಾನದಿನಿರ್ವಿಘ್ನ ಪೂಜಾ ಶಿಷ್ಯೋ¥ದೇಶದೇವ ಲಕ್ಷೀಶಗೆ ತಮ್ಮ ಸೇವೆ ಸಮರ್ಪಣೆ ಮಾಡಿಪವಿತ್ರತಮ ಸುಸಮಾಧಿಯನ್ನು ಹೊಂದಿದರು 10ಶಾಲಿವಾಹನಶಕ ಹದಿನೈದು ನೂರು ಹದಿನಾಲ್ಕನೇ ವರ್ಷ ಜೇಷ್ಠಬಹುಳಶೀಲತಮ ಭವದಿತ್ರಯೋದಶಿ ದಿನದಿಮಾಲೋಲ ನಾರಾಯಣಪುರಯೈದಿದರು 11ಮತ್ತೊಂದು ಅಂಶದಲಿ ಕುಳಿತು ವೃಂದಾವನದಿಉತ್ತಮ ಶ್ಲೋಕ ನಾರಾಂiÀiಣನ ಧ್ಯಾನಿಸಿಒಲಿದು ಸೇವಿಸುವರಿಗೆ ಸÀತತ ಔದಾರ್ಯದಲ್ಲಿಇತ್ತು ವರಗಳ ಸದಾ ಸಂರಕ್ಷಿಸುತಿಹರು 12ಮೂಲರಾಮನ ವಿಮಲ ಭಾವದಲಿ ಅರ್ಚಿಸಿಕುಳಿತು ವೃಂದಾವನದಿ ಧ್ಯಾನಿಸುವ ಇವರುಮೂಲ ವೃಂದಾವನ ಮಾತ್ರದಿ ಅಲ್ಲದೇಅಲ್ಲಲ್ಲಿ ಇವರು ಮೃತಿಕೆಯಲ್ಲಿಯೂ ಇಹರು 13ವಿಜಯೀಂದ್ರರಾಯರ ವೃಂದಾವನದಲಿವಿಜಯಸಖ ಸರ್ವ ಜಗಜ್ಜನ್ಮಾದಿಕರ್ತಅಜಭವಾದಿಗಳಿಂದಸೇವ್ಯಶ್ರೀನರಹರಿ ಇಹನುವಿಜಯೀಂದ್ರಗುರುಅಂತರ್ಯಾಮಿವಾಂಛಿತಪ್ರದನು14ಶ್ರೀಶನ ಸಾನಿಧ್ಯ ಪೂರ್ಣ ಇರುವುದರಿಂದಶ್ರೀಶನೊಲಿಮೆ ಪೂರ್ಣಪಾತ್ರ ಇವರಲ್ಲಿಶ್ರೀ ಸುಧೀಂದ್ರಾದಿಗಳು ದೇವವೃಂದದ ಜನರುಭೂಸುರರು ಪ್ರತಿದಿನ ಬಂದು ವಂದಿಪರು 15ವೃಂದಾವನ ದರ್ಶನ ಸೇವೆ ಪಾದೋದಕಕುಂದುಕೊರತೆ ಇರುವ ಧಾರ್ಮಿಕ ಇಷ್ಟದವುಎಂದಿಗೂ ಎನ್ನ ಕುಂದುಗಳ ಎಣಿಸದೆಬಂದು ಪ್ರತಿಕ್ಷಣ ಕಾಯುತಿಹರು ಶರಣು ಶರಣಾದೆ 16ವಿ ಎಂದರೆ ವಿಠಲ ಜ್ಞಾನಮುದವೀವಜ ಎಂದರೆ ಜಯವು ಪುಟ್ಟು ಸಾವಿಲ್ಲಯೀ ಎಂದರೆ ಜ್ಞಾನಕರ್ಮ ಪೂಜಾಫಲವುಇಂದ್ರ ಎಂದರೆ ಐಶ್ಚರ್ಯ ಸುಖವೀವ 17ಸಿಂಧೂರವರದ ಶ್ರೀಕರ ಪುರುಷೋತ್ತಮಬಿಂದುಮಾಧವ ಶ್ರೀಧರ ರಾಮಚಂದ್ರಸೈಂಧವಾಸ್ಯನು ಅಚ್ಯುತಾನಂತ ಗೋವಿಂದಎಂದಿಗೂ ಎಮ್ಮನು ಕಾಯ್ವ ಗುರುಚರಿತೆ ಪಠಿಸೆ 18ಅಂಬರೀಷ ರಕ್ಷಕನು ಅಜಾಮಿಳ ವರದನುಕಂಬದಲಿ ತೋರಿ ಪ್ರಹ್ಲಾದನ್ನ ಕಾಯ್ವವನುಈ ವೃಂದಾವನ ಗುರುಚರಿತೆ ಪಠಿಸುವರಿಗೆಸೌಭಾಗ್ಯವೀವನು ಸುಧಾಮಗೊಲಿದವನು 19ನಾರಾಯಣವಾಸುದೇವ ಸಂಕರುಷಣಪ್ರದ್ಯುಮ್ನ ಅನಿರುದ್ಧ ಲಕ್ಷ್ಮೀ ಸಮೇತವರವಾಯು ಭಾರತೀ ಸುರವೃಂದ ಸಹಿತಇರುತಿಹ ವಿಜಯೀಂದ್ರರಲಿ ಅಭಯವರದ 20ಸೌಂದರ್ಯಸಾರ ಜಗದೇಕವಂದ್ಯನು ಭೈಷ್ಮೀಸತ್ಯಾಸಮೇತವರಅಭಯದ ಅಜಿತಇಂದಿರಾಪತಿ ಕೃಷ್ಣಗರ್ಪಿತ ಈ ಗುರುಚರಿತೆಸುದರ್ಶನ ಕಂಬುಧರ ಅಖಿಲಪ್ರದ ಹರಿಗೆ 21ಸರಸಿಜಾಸನಪಿತ &ಟಜquo; ಪ್ರಸನ್ನ ಶ್ರೀ ನಿವಾಸ &ಡಿಜquo; ನುಬರೆಸಿದ ಶ್ರೀ ಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ
--------------
ಪ್ರಸನ್ನ ಶ್ರೀನಿವಾಸದಾಸರು
ಸೀತೆ ಲೋಕಮಾತೆ ರಾಮನ ಪ್ರೀತೇಭೂಮಿಜಾತೇಪಾತಕಹರೆ ಸರ್ವಾರ್ಥಸಿದ್ಧಿಕರೆ ಖ್ಯಾತಿವಂತೆ ಸುನೀತೆ ಸುರಾರ್ಚಿತೆಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ತಾಯೆಮಹಾಮಾಯೆರಾಮನ ಛಾಯೆ ವಿಮಲಕಾಯೆ ತೋಯಜಾಕ್ಷಿ ನಿನ್ನ ಸೇವೆಯ ಮಾಡಲುಸಂಗರ ಕಾರಿಣಿಯೆ ರಾಮನಅಂಗನೆಗುಣಮಣಿಯೇಭೃಂಗಕುಂತಳೆಭವಭಂಗನಿವಾರಿಣಿ ಹಿಂಗದೆನ್ನಪೊರೆಹೇಮಾಂಗಿ ಶೃಂಗಾರಿಯೆ2ಚಂದ್ರವದನೆ ದೇವೀ ರಾಮಚಂದ್ರನಸಂಜೀವೀ ಸಿಂಧುಬಂಧನ ಗೋವಿಂದನದಾಸಗೆ ಬಂದು ಮೊಗವ ತೋರಿ ಚಂದದಿ ಪಾಲಿಸೆ
--------------
ಗೋವಿಂದದಾಸ
ಹರಿಯ ನಂಬದ ನರನು ಗೂಡರಿತು ಇರದ ವಾನರನು ಶ್ರೀಹರಿಯ ಹೊಗಳದ ಕವಿಯು ಭೂಸುರರುಣ್ಣಿಸದ ಹವಿಯು ಪ.ಕರುಣವಿಲ್ಲದ ಅರಸ ಕಾಳೋರಗನಾಡುವ ಸರಸಮಾನಕಿಲ್ಲದ ಮಂತ್ರಿ ತಾ ಗರಹೊಡಕ ಕುಮಂತ್ರಿ 1ಮೆಚ್ಚು ನುಂಗುವ ದೊರೆಯು ಮೀವ ಬಚ್ಚಲಿನ ದೊಡ್ಡಹರಿಯು ಕೈಮುಚ್ಚಿ ನೀಡದ ದಾನ ಹುಸಿರಚನೆ ನಿಧಾನ 2ಧರುಮಕೆ ಕೂಡದ ಸತಿಯು ಯಮಪುರದಾರಿ ಸಂಗತಿಯು ಬಲುಚರಿಗ ಮತ್ಸರಿತನಯಅವ ಅರಗದ ಅಗ್ಗಣಿಯ3ಮೂರ್ಖನ ಗೆಳೆತನ ಜರ್ಜರಿತ ತಂತುವಿತಾನ ಒಣಕರಕರಿ ಕಲಹದ ನೆರೆಯು ಸಾಸಿರ ತೇಳಗಗಚ್ಚಿದ ಸರಿಯು 4ವಂಚಿತವಾದಿ ಬಂಧು ಪ್ರಾಣ ಮುಂಚಿಸುವ ವಿಷಬಿಂದು ಬಹುಕಾಂಚನದಾಸೆ ಬಳಗ ಪ್ರಪಂಚದಳತೆಕೊಳಗ5ಕೊಡದಿಟ್ಟ ಕೊಡಹಣವು ಸುಡುವ ಅಡವಿಲಿ ಬಿದ್ದ ಹೆಣವು ಬಾಯಿಬಡಕನ ಒಡಂಬಡಿಕೆ ಛಿದ್ರಿಡಿದ ಮಣ್ಣಿನ ಮಡಿಕೆ 6ಬ್ರಾಹ್ಮರಿಗುಣಿಸದಸದನದುರ್ಬೊಮ್ಮ ರಕ್ಕಸನ್ವದನಮದ್ಹಮ್ಮಿನಣ್ಣಗಳ ವಿದ್ಯಾ ಮಾಯಮ್ಮನ ಮಹನೈವೇದ್ಯ 7ಓದಿ ಮಲತ ಗುರುಶಿಷ್ಯ ಸದ್ಭೋಧಾಮೃತಪರಿಹೇಯ ಆಪ್ತಾಧಾರಿಲ್ಲದ ಅರಸೆ ಗ್ರಾಮಾದರಿಸುವ ಆಳರಸೆ 8ವೇತ್ತøವಿವರ್ಜಿತ ಸಭೆಯು ಲೋಕತ್ರಯದಲ್ಲಿ ಅಶುಭವು ಕಂಠತ್ರಾಣಿಲ್ಲದ ಗಾನ ಮುದಿ ಎತ್ತೆಳೆದಾಡುವಗಾಣ9ಹುಸಿನುಡಿವ ದೈವಜÕ ತಾ ಹಡದ ಮಗನಿಂದ ಅವಜÕ ದುರ್ವಸುಕಾಂಕ್ಷೆಯ ಭೇಷಜನು ಮಾನಿಸರ ಉಂಬ ಮಾಯಿ ದನುಜನು10ಶ್ರವಣ ಮನನ ಧ್ಯಾನವನು ಬಿಟ್ಟವನೆ ಜೀವಚ್ಛವನುಮಾಧವಪ್ರಸನ್ವೆಂಕಟಮೂರ್ತಿತನ್ನವರಿಗೆ ಕೊಡುವನುಅರ್ಥಿ11
--------------
ಪ್ರಸನ್ನವೆಂಕಟದಾಸರು
ಹುಚ್ಚು ಹಿಡಿಯಿತೊ - ಎನಗೆ ಹುಚ್ಚು ಹಿಡಿಯಿತು ಪಅಚ್ಯುತನ ನಾಮವೆಂಬ ಮೆಚ್ಚು ಮದ್ದು ತಲೆಗೆ ಏರಿ ಅ.ಪವಾಸುದೇವನೆಂಬ ನಾಮ ವದನದಲಿ ಒದರುವೆ - ಮಾಯಪಾಶವೆಂಬ ಬಲೆಯ ಹರಿದು ಹರಿದು ಬಿಸುಡುವೆ ||ಕೇಶವನ ಹೂವ ಎನ್ನ ಮುಡಿಗೆ ಮುಡಿಸುವೆ - ಭವದಕ್ಲೇಶವೆಂಬ ಗೋಡೆಯನ್ನು ಕೆದರಿಕೆದರಿ ಬಿಸುಡುವಂಥ 1ಕೃಷ್ಣನಂಘ್ರಿ ಕಮಲಗಳಲಿ ನಲಿದು ನಲಿದು ಬೀಳುವೆ -ಭವಕಷ್ಟವೆಂಬ ಕುಂಭಗಳನು ಒಡೆದು ಒಡೆದು ಹಾಕುವೆ ||ನಿಷ್ಠರನ್ನು ಕಂಡವರ ಹಿಂದೆ ಹಿಂದೆ ತಿರುಗುವೆಭ್ರಷ್ಟ ಮನುಜರನ್ನು ಕಂಡು ಕಲ್ಲು ಕಲ್ಲಿಲಿಕ್ಕುವಂಥ 2ಮಂದಮತಿಗಳನು ಕಂಡರೆ ಮೂಕನಾಗುವೆನು - ಹರಿಯನಿಂದೆ ಮಡುವವರ ಮೇಲೆ ಮಣ್ಣ ಚೆಲ್ಲುವೆ ||ಮಂದರಾದ್ರಿಧರನ ದಿನದೊಳನಶನನಾಗುವೆ ಎನ್ನತಂದೆ ಪುರಂದರವಿಠಲನ ಪೊಗಳಿ ಪಾಡಿ ಆಡುವಂಥ 3
--------------
ಪುರಂದರದಾಸರು