ಒಟ್ಟು 4961 ಕಡೆಗಳಲ್ಲಿ , 127 ದಾಸರು , 3302 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಬರಾಧೀಶ್ವರ ಗೌರೀಕುಮಾರ ಪ ಸಿಂಧುರವದನಾರವಿಂದ ಸುಂದರ ವಿಘ್ನಾ ಘಾಂಧಕಾರ ಶರಚ್ಚಂದಿರ ಧೀರ 1 ವರ ಪಾಶಾಂಕುಶ ದಂತಧರ ಸುಮೋದಕ ಶೂರ್ಪ ಕರಣ ತ್ವಚ್ಚರಣ ಪಂಕಜಕ್ಕಾನಮಿಪೆ 2 ಜಗನ್ನಾಥವಿಠಲನ ಮಗನಾಗಿ ದ್ವಾಪರ ಯುಗದಲ್ಲಿ ಜನಿಸಿದ ಸುಗುಣ ನೀ ಸಲಹೊ 3 ಅವರೋಹಣ ದೇವತಾ ತಾರತಮ್ಯ ಸ್ತೋತ್ರ
--------------
ಜಗನ್ನಾಥದಾಸರು
ಅಭಯವನಿತ್ತು ಕಾಯೊ ರಂಗಯ್ಯ ನಿನ್ನಡಿಗೆರಗುವೆನು ನಾನು ಪ ಭಾಷ್ಯಕಾರರಿಗೆರಗಿ ಶ್ರೀವೇದಾಂತ ಗುರುಗಳಿಗೆ ವಂದಿಸಿ ಪತಿಯ ಪಾದಾರವಿಂದಕೆ ನಮಸ್ಕರಿಸಿ ಲಕ್ಷ್ಮೀಪತಿ ನಿಮ್ಮ ಕರಗಳ ಸ್ತುತಿಸಿ ಬೇಡುವೆ ನಾನು 1 ಮತ್ಸ್ಯಾವತಾರನಾಗಿ ವಾರಿಧಿಯೊಳಗಿರ್ಪ ದೈತ್ಯನ ಕೊಂದು ಹೆಚ್ಚಿನ ವೇದವ ಅಜನಿಗೆ ತಂದಿತ್ತೆ ಭಕ್ತವತ್ಸಲ ನಿಮ್ಮ ಕರಕಮಲಗಳಿಂದ 2 ದೇವದೈತ್ಯರ ಮಧ್ಯದೀ ವಾರಿಧಿಯನ್ನು ವೇಗದಿಂದಲೆ ಮಥಿಸೇ ಆವಸುರರು ಅಪಹರಿಸಿದ ಅಮೃತವ ಸಾಧುಜನಗಿತ್ತ ಆ ವಿನೋದದ ಕರಗಳಿಂದ 3 ಕ್ರೋಢರೂಪವ ಧರಿಸಿ ಹಿರಣ್ಯಾಕ್ಷನ ಕೋರೆಯಿಂದಲೆ ಕೊಂದು ಧಾರುಣಿಯನು ತಂದು ಆದಿಮಾನವಗಿತ್ತ ವಾರಿಜಾಕ್ಷನೆ ನಿಮ್ಮ ಧೀರಹಸ್ತಗಳಿಂದ 4 ಕರುಳ ಬಗೆದ ವನಮಾಲೆಯ ಧರಿಸಿದೆ ಶ್ರೀಪರಮಪಾವನ ನಿಮ್ಮ ಕರುಣಹಸ್ತಗಳಿಂದ 5 ತಟ್ಟನೆ ಯಜ್ಞಶಾಲೆಗೆ ಬಂದು ದಾನವ ಪುಟ್ಟ ಕರಗಳಿಂದ ಅರ್ತಿಯಲಿ ಬೇಡಿದ 6 ಅಂದು ಕ್ಷತ್ರಿಯರ ಕುಲವ ಕೊಡಲಿ ಪಿಡಿದುದ್ದಂಡ ದಿಂದಲಿ ಕಡಿದು ತಂದೆಯ ನುಡಿ ಕೇಳಿ ತಾಯಿ ಶಿರವನರಿದೆ ಇಂದಿರಾಪತಿ ನಿಮ್ಮ ಆನಂದ ಕರದಿಂದ 7 ಶಶಿಮುಖಿ ಸೀತೆಗೋಸ್ಕರ ಧನುವನು ಮುರಿದ ಅಸಮಸಾಹಸ ನಿಮ್ಮ ಕುಶಲಹಸ್ತಗಳಿಂದ 8 ಘೋರ ಪ್ರಳಯಸುರನ ಸಂಹರಿಸಿದೆ ವಾರಿಜಾಕ್ಷನೆ ನಿಮ್ಮ ಧೀರಹಸ್ತಗಳಿಂದ 9 ಮಧುರೆಯೊಳಗೆ ಜನಿಸಿ ಗೋಕುಲಕೈತಂದು ಲೀಲೆಯ ತೋರಿ ಮುದದಿಂದ ಪಾಲಬೆಣ್ಣೆ ಕದ್ದು ಗೋಪಿಯರಲ್ಲಿ ಪಿ ಡಿದೆಳೆದೆ ಉಡುರಾಜನನು ಶ್ರೀಕರದೊಳು 10 ಪತಿವ್ರತೆಯ ವ್ರತವ ಭಂಗವ ಮಾಡಿ ಚಪಳಚಾರನಾಗಿ ಅತಿಶಯವಾದ ರಾಕ್ಷಸರ ಸಂಹರಿಸಿದೆ ಪೃಥವಿ ಪಾಲಿಪ ನಿಮ್ಮ ಚತುರಹಸ್ತಗಳಿಂದ 11 ಕಲ್ಯ್ಕಾವತಾರನಾಗಿ ಕುದುರೆ ಏರಿ ಸಂಹರಿಸುತಲೆ ಬಹು ಮಲಕರಗಳಿಂದ ದೇವ ಪರಮಪುರುಷ 12 ಕಂದ ಧ್ರುವ ತಾನಡವಿಯಲಿ ನಿಂದು ತಪ ಮಾಡಲು ಚಂದದಿ ಮಾಡಲು ಬಂದು ಸೇವೆಯನಿತ್ತು ಮತಿಗಾಗಿ [ಅಂದು] ಶಂಖವನೊತ್ತಿದ ಕರದೊಳು 13 ಕಾಲ ಪಿಡಿಯೆ ಗಜೇಂದ್ರ ನಿಮ್ಮ ಸ್ತುತಿಸೆ ಚಕ್ರ ಬಂದ ಕರುಣಹಸ್ತಗಳಿಂದ 14 ಅಂದು ಸುಧಾಮ ತಾನು ಶ್ರೀಹರಿಯ ಮಂದಿರಕೆ ಬರಲು ಚಂದದಿಂದಲೆ ಆತಿಥ್ಯ ಮಾಡಿ ಅವ ಕೊಂಡ ಕರಗಳಿಂದ 15 ದುರುಳ ದುಶ್ಯಾಸನ ಸಭೆಯೊಳು ದ್ರೌಪದಿಯ ಸೀರೆಯೆಳೆಯು ತಿರುವಾಗ ಹಾ ಕೃಷ್ಣ ದ್ವಾರಕಾವಾಸ ಯೆಂದು ಮೊರೆಯಿಡೆ ಕೇಳಿ ಅಕ್ಷಯವೆನುತ ನೆಚ್ಚವನೆಚ್ಚ ಕರದೊಳು 16 ಗ್ರಾಸವ ಬೇಡಲು ಪರಮಪುರುಷ ನೀನೇ ಗತಿಯೆಂದು ದ್ರೌಪದಿ ಮೊರೆಯಿಡೆ ಅಕ್ಷಯವ ಮಾಡಿದ ಕರದೊಳು * 17 ಮಂದಮತಿಯು ಜ್ಞಾನವೂ ನಿಮ್ಮ ಮಹಿಮೆ ಒಂದು ತಿಳಿಯದು ಇಂದಿರೆ ರಮಣ ಶ್ರೀರಂಗನ ದಯದಿಂದ ವಂದಿಸಿ ಬೇಡಿದೆ ಆನಂದಕರಗಹಳನ್ನು 18 ವೇದಶಾಸ್ತ್ರಗಳನ್ನು ಅರಿಯದ ಪಾಮರಸ್ತ್ರೀಜನ್ಮವು ಕಾಮ ಕ್ರೋಧವು ಲೋಭ ಮೋಹದಿಂದಲೆ ಬಿಡಿಸಿ ನಿಮ್ಮ ಪಾದದೊಳಿರಿಸೆನ್ನ ಶ್ರೀನಿವಾಸನೆ ಅಭಯವನಿತ್ತು ಕಾಯೊ 19
--------------
ಯದುಗಿರಿಯಮ್ಮ
ಅಭಾಗ್ಯಾದ ಲಕ್ಷ್ಮಿ ಹೋಗಮ್ಮ ದೊಡ್ಡಮ್ಮ ನೀ ಪ ಪೀಡೆಕಾಲುಗಳ ಮುಚ್ಚುತ ನೀವೋ ಡÉೂೀಡಿ ಪೋಗುತಲಿ ನಿಲ್ಲದೆ ವ್ಯಾಜ್ಯಗ- ಳಾಡುವ ಸ್ಥಳದಲಿ ನೆಲೆಯಾಗುತ ಹಾಳ ಗೋಡೆಯೊಳಿರುತಿಹ ಕತ್ತೆಯಂತೆ 1 ದೀಪದ ನೆರಳಲಿ ಕೋಪಿಯಮನದಲಿ ಲೋಪವಾದಕರ್ಮದಿ ಸಂತತವು ನಾಪರನೆಂಬುವ ಮಾಢನಲ್ಲಿ ನಿ- ವ್ರ್ಯಾಪಾರಿಯ ಚಿತ್ತದಿ ಯಾವಾಗಲು 2 ಪಾದ ಗದರಿಸುತಾಡುವ ಬಿರುನುಡಿಯಲಿ ನಿಂ- ದ್ಯದ ಮಾತಾಡುವವರÀ ಬಾಯಲಿನೀ ಮುದದೊಳಿದ್ದು ಅಜ್ಞಾನವ ಪಾಲಿಸೆ 3 ಪ್ರತಿದಿನದಲಿ ಅಳುತಿಹ ಸಂಸಾರದಿ ನೀ ಪತಿಯೊಡನವರೊಳಿರುತ ಮೂರ್ಖರಲಿಯ- ನೃತವಾಡಿಸಿ ನರಕವ ಪೊಂದಿಸಲು 4 ಮರವೆ ಸುಷುಪ್ತಿಯು ಬಹುವಿಧ ಮೋಹವು ನೆರೆನಂಬಿದವರಿಗೀವುತ ನೀಹಗ- ಲಿರುಳು ಕಲಿಯೊಡನೆ ಯೆಡೆಬಿಡದಲ್ಲಿಗೆ 5 ಹಾಳುಮಾಡಿಕೊಂಬುವ ಜನಗಳು ನಿ- ವೂಳಿಗವನು ಕೈಕೊಳ್ಳುತ ಬಿಡದೆ 6 ಗುರುರಾಮ ವಿಠಲನ ಶರಣ ಜನರ ಕ- ಣ್ದೆರದು ನೋಡದಿರು ಬೇಡುವೆ ನಿನ್ನನು ನಿರುತವು ನಿರ್ದಯ ಮಾಡುತ ದುರುಳರ ಪರಮ ಕೃಪಾದೃಷ್ಟಿಯಲಿ ನೋಡಲು 7
--------------
ಗುರುರಾಮವಿಠಲ
ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಅಯ್ಯಾಜಗದಯ್ಯಾ ಪ ಅಯ್ಯಾ ಜಗದಯ್ಯಾ ಜೀಯಾನಂದ ನಿಮ್ಮ ಮಹಿಮೆಯ ಅಜ ಭವಾದಿಗಳಿಗೆ ತಾಯಿಯ ಮರೆವ ಶಿಶುವಿನ ಪರಿದಣಿದೆನಾ ಪ್ರೀಯದಲಿ ಸಲಹವು ಅವಗುಣ ನೋಡದೇ 1 ಧರೆಯೊಳಗ ಸಕಲಪತಿತರನ್ನು ಉದ್ಧರಿಸಲ್ಕೆ ಪರಬೊಮ್ಮತಾನೊಂದು ರೂಪನಾಗಿ ಕರುಣದಿಂದಲಿ ಅವತರಿಸಿದನೆಂದೆನ್ನದೆ ನರನೆಂದು ಬಗೆವವನು ಗುರುತಲ್ಪಕಾ2 ಸಾಕಾರ ನಿಮೈಲನಾಗಿ ಕ್ರೀಡಿಸಿದರೆಯು ಏಕ ಮೇವಾದ್ವಿತಿಯು ಶೃತಿಯೆನುತಿರೇ ಕಾಕು ಬುದ್ದಿಯಲಿ ಪರತರ ವಸ್ತು ನಿಮಗೆಂದ ಧಿಕ ಉಂಟೆಂಬುವ ಸುರಾಪಾನಿಯು 3 ಗಗನದಂದಲಿ ಸಕಲಾತೀತನಾಗಿನೀ ಮಿಗಿಲೆನಿಸಿ ಸಂಸಾರ ಸ್ಥಿತಿಯಲಿರಲು ಅಗಣಿತತೆ ಗುಣಬಂದನವ ಕಲ್ಪಿಸುವ ಜಗದೊಳಗ ಬ್ರಹ್ಮತ್ಯಕಾರನವನು 4 ಎನಗ ತಾರಕ ವಸ್ತು ಇದೆಯೆಂದು ನಿಶ್ಚೈಸಿ ತನು ಮನರ್ಪಿಸಿ ನಿಮ್ಮ ಚರಣಾಬ್ಜಕೆ ಘನನಂಬಿ ಶರಣವನು ಪೊಕ್ಕುನೆಲೆಗೊಂಬುದಕೆ ಅನುಮಾನ ವಿಡಿವವನ ಸ್ವರ್ಣಸ್ತೇಯಾ5 ಇಂತು ಪರಿಯಾದಾ ನಾಲ್ವರ ಸಂಗಡದಲಿ ಅ ತ್ಯಂತ ಹರುಷದ ತಾವ ಬಾಳುತಿಹನು ಅಂತಿಜನ ಸಮನಾದ ಸರ್ವದ್ರೋಹಿಯವನು ಸಂತತ ಬುಧ ಜನರು ಯನುತಿರುವರು 6 ಎಂದೆಂದು ಈ ಪಂಚ ಮಹಾಪಾತಕಿಳಗಳ ಮುಖ ತಂದೆ ತೋರಿದಿರೆನ್ನ ನಯನಗಳಿಗೆ ಎಂದು ಬಿಡದೇ ಕಾಯೋ ಮಹಿಪತಿ ಸುತ ಪ್ರಾಣ ಛಂದದಲಿ ಮಂದಮತಿ ತನ ಹರಸಿಯನ್ನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಯ್ಯೊ ಸಾಕಿದೇನು ಚಂದಾ ಮೈ ಸೋಕದಿರೆಲೋ ಮುಕುಂದ ಪ ಗಂಡನುಳ್ಳ ನಿಜ ಗರತೀ ಒಡ- ಗೊಂಡು ಬದಿಗೆ ಕೈ ತರುತೀ ಬಲು ಪುಂಡಾಟಗಳ ನೀನೆಸಗುತೀ1 ಹೆಚ್ಚು ನುಡಿಯದಿರು ನಂಟು ಕಂಡು ಹುಚ್ಚು ಮಾಡುವದುಂಟೂ ನಡೆ ಬಿಚ್ಚದಿರೆಲೊ ಮೊಲೆಗಂಟೂ 2 ಶ್ರೀದವಿಠಲ ಯದುರಾಯಾ ನಿನ್ನ ಪಾದಕೆರಗುವೆನಯ್ಯಾ ನಡು- ಬೀದಿಯೊಳಗೆ ಬಿಡು ಕೈಯ್ಯಾ 3
--------------
ಶ್ರೀದವಿಠಲರು
ಅರವಿದೂರನೆ ತವ ಮಹಿಮೆಯು ಘನ್ನ ಪ ಬಂಡಿಕಾಲನು ಪಿಡಿದೆಯಂತೆ | ಹತ್ತು ಬಂಡಿರಾಯಗೆ ಸುತ ನೀನಾದಿಯಂತೆ ಬಂಡಿ ಅಸುರನ ಕೊಂದಿಯಂತೆ | ಧುರದಿ ಬಂಡಿ ನಡಸಿ ನರನ ಸಲಹಿದೆಯಣತೆ 1 ತಂದೆ ತಂದೆಗೆ ತಂದೆಯಂತೆ | ಜಗದ ತಂದೆ ನಿನಗೆ ತಂದೆ ತಾಯಿಗಳಂತೆ ತಂದೆ ನೃಪಾಲನ ಸುತೆಗೀಶನಂತೆ 2 ಸಿಂಧೂರದ್ವಯ ವರದನಂತೆ | ಮಧ್ಯ ಸಿಂಧೂರವದನವು ನಿನಗಿಹುದಂತೆ ಸಿಂಧು ಮಂದಿರ ನಿನಗಂತೆ ಶಾಮ ಸುಂದರ ನಿನಗೆ ಭಕ್ತರ ಚಿಂತೆಯಂತೆ 3
--------------
ಶಾಮಸುಂದರ ವಿಠಲ
ಅರಿ ನಿನ್ನ ನಿಜವಾ ಆನಂದಘನವಾ ಚೈತನ್ಯದಿರವಾ ಮರಣರಹಿತವಾ ಆತ್ಮಾನುಭವ ಪ ಮನವಾಣಿ ಮೀರಿ ತನು ಮೂರ ಮೀರಿ ಕಲ್ಪನ ತೀರೀ ತಾ ನಿರ್ವಿಕಾರಿ ಅದೇ ನೀನು ತಿಳಿಯೈ ಇದು ನೀನಲ್ಲ 1 ಜಗವಿದು ಕನಸೋ ಪುಸಿಯೆಂದೆಣೆಸೋ ಮನದಿ ವಿವೇಕವ ಮಾಡಿ ನಿಶ್ಚಯಿಸೋ ಶಂಕರಬೋಧಾ ಇದುವೇ ಮೋದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಅರಿ ಬೇಗನೇ ಪರಮಾತ್ಮ ನೀನೈ ಪರತತ್ವನಾ ತ್ವರಿತದಲಿ ತಿಳಿಯೊ ಪ ಮೂರು ತಾಣಗಳ ಮೀರಿ ಗೋಚರಿಪ ತೋರುತಿಹ ಈ ದೇಹಾದಿಗಳಿಗೆ ಬೇರೆಯಾಗಿಪುದೆ ಪರಮಪದವು ಧೀರ ನೀನರಿಯೊ ಅದೆ ನಾನು ಎಂದು 1 ಕೋಶಪಂಚಕವ ಲೇಸಾಗಿ ಕಳೆದು ವಾಸನೆಯ ಪಾಶವನೆ ಹರಿದೊಗೆದು ಕ್ಲೇಶ ಪಡುವದನು ತ್ಯಜಿಸಿ ಮುದದಿ ನಾಶರಹಿತಾದ ಪದವು ತಾನೆಂದು 2 ಜನನಮರಣಗಳಿಗಾಚೆಗಿರುವಂಥ ಮನವಾಣಿಗಳಿಗೆ ನಿಲುಕದಿರುವಂಥ ಘನಪದವು ಇದುವೆ ಪರಮಾತ್ಮನೈ ಅನುನಯದಿ ಪೇಳ್ವ ಗುರುಶಂಕರಾರ್ಯ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ ಪ ಸಿರಿದೇವಿಯು ಕಿರುಬೆರಳಲ್ಲಿರುವ ಸೊಬಗನ್ನುಅರಿಯಲಾರಳೊ ದೇವಅ ಇಂದಿರಾದೇವಿಯು ಅರಿಯಲಾರಳು ದೇವಬೃಂದಾರಕರೆಲ್ಲ ನಿಂದು ಯೋಚಿಪರುನಂದತೀರ್ಥರ ಮತದೊಳಗೆ ಬಂದವರೆಲ್ಲಎಂದಿಗಾದರು ಪರಮಾನಂದ ಪೊಂದುವರು1 ಮಾನವರು ಹೀನಮಾರ್ಗದೊಳು ಮುಳುಗಿಹರುಜ್ಞಾನಿಗಳು ನಿಂದು ಧ್ಯಾನಿಪರು ನಿನ್ನನೀನೆ ದಯಮಾಡಿ ಸಲಹೊ ಎನ್ನನು ಕೃಷ್ಣಕಾನನದೊಳು ಕಣ್ಣುಮುಚ್ಚಿ ಬಿಟ್ಟಿಹರೊ 2 ಜಲದೊಳಗಿನ ಕಪ್ಪೆ ಜಲದ ಸವಿಯರಿಯದುಜಲದ ಸುಗಂಧವ ಜಲವರಿಯದುನೆಲೆಯ ಕಂಡವರ್ಯಾರು ನೆಲೆಯಾದಿಕೇಶವನೆಸುಲಲಿತ ತತ್ತ್ವವನು ಸುಲಭ ಮಾರ್ಗದಿ ತೋರೊ 3
--------------
ಕನಕದಾಸ
ಅರುಣೋದಯಕೆ ಮುಂಚೆ ಬಲು ಕತ್ತಲಂತೆ ಪ ಸಿರಿ ಬರುವುದಕೆ ಮುಂಚೆ ಮುಖ ಸುತ್ತು ಜನಕೆ ಅ.ಪ ಹೊಟ್ಟಿ ಹಸಿದರೆ ಅನ್ನ ಬಹಳ ರುಚಿಯಂತೆ ಕೆಟ್ಟು ಬದುಕುವ ಮನುಜ ಬಲು ಘಟ್ಟಿಯಂತೆ ಸಿಟ್ಟು ಮಾಡುವ ಮನುಜ ಕೊನೆಗೆ ಕುರಿಯಂತೆ ಬಿಟ್ಟಿ ಬಯಸುವ ನರನು ಬಲು ಮೋಸವಂತೆ 1 ಸುಳ್ಳು ಹೇಳುವ ನರಗೆ ಪರದಾಟವಂತೆ ಜಳ್ಳುರಾಶಿಯ ನೋಡೆ ದೊಡ್ಡಗಿರಿಯಂತೆ ಕಳ್ಳ ಒಳಗಿರಲಲ್ಲಿ ಶಾಂತಿಯಿಲ್ಲಂತೆ ಕುಳ್ಳ ಹೋರಾಡಿದರೆ ಜಯವಿಲ್ಲವಂತೆ 2 ಭಾರಿ ಮಳೆ ಸುರಿಯಲಿರೆ ಬಹಳ ಬಿಸಿಲಂತೆ ಊರು ಸೇರುವ ಮುನ್ನ ಬಹಳ ದಣಿಯಂತೆ ಕೀರುತಿಯ ಪಡೆಯುವಗೆ ಬಹು ಶತ್ರುವಂತೆ ಮೂರು ಜ್ಞಾನಿಗಳಿರಲು ಭಾರಿ ಸಭೆಯಂತೆ 3 ಮುಳ್ಳಿರುವ ಗಿಡಗಳಲಿ ಬಹು ಪುಷ್ಪವಂತೆ ಹಳ್ಳದಲಿ ಸಿಗುವ ಜಲ ಬಹಳ ರುಚಿಯಂತೆ ಹಳ್ಳಿಗಾರನ ಸತ್ಯ ಬಹಳ ಒರಟಂತೆ ಎಳ್ಳು ಕಾಳುಗಳು ಶನಿಯ ಓಡಿಸುವುದಂತೆ 4 ಮುಟ್ಟಲಾಗದ ನಾಯಿ ದಾಸಾನುದಾಸ ಶ್ರೇಷ್ಠರೆಂದರಿತಿರುವರೆಲ್ಲ ಬಲು ಮೋಸ ಧಟ್ಟನೆ ಹೊಳೆಯುವಗೆ ಬಲು ಮನವಿಕಾಸ ಬಿಟ್ಟಿರುವ ಮನುಜನಿಗೆ ಜಗದಿ ಸುಖವಾಸ 5 ಮುದಿತನವು ಭೂಷಣವು ಸ್ಥಾನವಿರುವವರಿಗೆ ಕುದಿಯುವುದೆ ಭೂಷಣವು ಕ್ಷೀರಜಲದಲ್ಲಿ ಹೆದರುವುದೆ ಭೂಷಣವು ದುಷ್ಟಸಂಗದಲಿ ಗದಗದವೆ ಭೂಷಣವು ಭಕ್ತಿರಸದಲ್ಲಿ 6 ತನ್ನ ತಾ ಶೋಧಿಸಲು ಬಲು ದುಃಖವಂತೆ ಅನ್ಯರನು ಶೋಧಿಸಲು ಸಂತೋಷವಂತೆ ಕನ್ನಡಿಯ ನೋಡದಿರೆ ಬಲು ಚೆಲುವನಂತೆ ಕನ್ನಡಿಯ ನೋಡಿದರೆ ತಾನಳುವನಂತೆ 7 ನಗರ ಸುಂದರಲ್ಲಂತೆ ಬಚ್ಚಿಟ್ಟ ಧನವು ತಾ ಕದ್ದವನಿಗಂತೆ ಸ್ವಚ್ಛ ಬಡತನದವಗೆ ಬಲು ಭಕುತಿಯಂತೆ ಬಿಚ್ಚೊಲೆ ಗಿರಿಜೆಗತಿ ಪ್ರಿಯವಸ್ತುವಂತೆ 8 ಗುಂಡು ಬ್ರಾಹ್ಮಣ ಬರಲು ಅಪಶಕುನವಂತೆ ಹೆಂಡದಾ ಪೀಪಾಯಿ ಬಲು ಶಕುನವಂತೆ ಮಂಡೆ ಬೋಳಿರುವವಳು ಬರಬಾರದಂತೆ ತೊಂಡು ಸೂಳೆಯು ಬರಲು ಬಹಳ ಶಕುನವಂತೆ 9 ಖ್ಯಾತಿ ಬಾರದು ನರಗೆ ಬದುಕಿರುವ ತನಕ ಗೋತ ಹೊಡೆದವನು ಬಲು ಗುಣಶಾಲಿಯಂತೆ ನೀತಿ ಹೇಳುವ ಸ್ಥಳದಲೊಬ್ಬರಿಲ್ಲಂತೆ ಕೋತಿ ಕುಣಿಯುತಿರಲು ನೂರು ಜನರಂತೆ 10 ಬಹು ಧನಿಕ ಬಲು ಬಲಗೆ ಮಕ್ಕಳಿಲ್ಲಂತೆ ದಹಿಸುತಿಹ ದಾರಿದ್ರಗೆ ವರ್ಷಕೊಂದಂತೆ ಅಮೃತ ಸಮವಂತೆ ಸಿಹಿಯಾದ ಕ್ಷೀರ ಮಕ್ಕಳಿಗೆ ಬೇಡಂತೆ 11 ಸಾಲಿಗ್ರಾಮ ತೊಳೆಯಲತಿ ಬೇಸರಂತೆ ಸಾಲು ಎಮ್ಮೆಯ ತೊಳೆಯಲಿ ಉತ್ಸಾಹವಂತೆ ಶೀಲವಾಡುವ ನುಡಿಗೆ ಸಂದೇಹವಂತೆ ಗಾಳಿ ಸುದ್ದಿಗಳೆಲ್ಲ ಬಲು ಸತ್ಯವಂತೆ 12 ಒಳಿತವನು ಜಗದಲ್ಲಿ ತಲೆ ಎತ್ತನಂತೆ ಕಲಿಪುರುಷನಂಥವನು ಬಲು ಮೇಲೆಯಂತೆ ಹುಲಿ ಚಿರತೆ ಕರಡಿಗಳ ಬಲಿಯ ಕೊಡರಂತೆ ಗೆಳತಿ ಮಾರಿಗೆ ಕುರಿಯ ಬಲಿಯೆ ಬೇಕಂತೆ 13 ಅತಿ ಚೆಲುವೆ ಸತಿಯಲ್ಲಿ ಹಿತವಿಲ್ಲವಂತೆ ಗತಿಗೆಟ್ಟ ನಾರಿಯಲಿ ಅತಿ ಮೋಹವಂತೆ ಇತರ ಜನರೇಳಿಗೆಗೆ ಹೊಟ್ಟಿಯುರಿಯಂತೆ ಪ್ರತಿಕ್ಷಣವು ತನಗಾಗಿ ಹಂಬಲಕೆಯಂತೆ 14 ಭೂಮಿ ಎಲ್ಲವು ಇನ್ನು ಉಳುವಾತಗಂತೆ ಭೂಮಿಯೊಡೆಯಗೆ ದೊಡ್ಡನಾಮ ಬಿತ್ತಂತೆ ರಾಮರಾಜ್ಯದಿ ಕಾರು ಓಡಿಸುವವಗಂತೆ ಆ ಮದುವೆ ಕನ್ಯೆಯು ಪುರೋಹಿತಗಂತೆ 15 ಬಕಳಿಸುವ ನಾಯಕರೆ ಸರಕಾರವಂತೆ ಪ್ರಕೃತಿ ನಡೆನುಡಿ ನೀತಿಗೆ ಧಿಕ್ಕಾರವಂತೆ ಸುಖದ ಅನುಭವ ಜನಕೆ ಕುದುರೆ ಕೊಂಬಂತೆ ಮುಖವಿಲ್ಲ ಕಣ್ಣಿಲ್ಲ ಸುಖರಾಜ್ಯವಂತೆ 16 ಚಂದ್ರಲೋಕಕೆ ಪಯಣ ಕಾದಿರುವುದಂತೆ ಮುಂದಲ್ಲಿ ನೆಲಕೆ ಬಲು ಕಟ್ಟು ನಿಟ್ಟಂತೆ ಮುಂದರಿದ ಜನಕಲ್ಲಿ ಸ್ಥಾನವಿಹುದಂತೆ ಹಿಂದುಳಿದ ಗುಂಪಿಗವಕಾಶವಿಲ್ಲಂತೆ 17 ಪುಷ್ಪಾಕ್ಷತೆಯ ಪೂಜೆ ಗೋಮಾತೆಗಂತೆ ಶುಷ್ಕ ತೃಣವನಕೆಲ್ಲ ಮಳೆಗಳ ಕಂತೆ ನಿಷ್ಫಲದ ಗಿಡಬಳ್ಳಿ ತೋಟದಲ್ಲಂತೆ ಪುಷ್ಕಳದ ಫಲ ವೃಕ್ಷಗಳು ಸೌದೆಗಂತೆ 18 ಬರಿಯ ಪಾತ್ರೆಗಳಲಿ ಬಹಳ ಸದ್ದಂತೆ ಅರಿಯುವಜ್ಞಾನಿಗಳು ತಲೆಹರಟೆಯಂತೆ ಅರಿತವನು ನುರಿತನಾದರು ಬೇಡವಂತೆ ಬದಿಯ ಬಹು ದಡ್ಡನಿಗೆ ಮಾರ್ಯಾದೆಯಂತೆ19 ರೈಲು ಉರುಳಿಸೆ ರಾಜ್ಯಕಧಿಕಾರಿಯಂತೆ ಥೈಲಿಯಿದ್ದರೆ ಖೂನಿ ಮಾಡಬಹುದಂತೆ ಶೈಲವೇರುವ ನರನು ಮೇಧಾವಿಯಂತೆ 20 ನರಬಲಿಯ ಕೊಡುವವರು ಹಿರಿಯ ಜನರಂತೆ ಹಿರಿಯ ಮಾರ್ಗದ ಜನರು ಧರೆ ಭಾರವಂತೆ ಗುರುಗಳಿಗೆ ತಿರುಮಂತ್ರ ಹೇಳಬೇಕಂತೆ ಸುರಿಸುವರು ಧನಧಾನ್ಯ ಸುರಿಮಳೆಗಳಂತೆ21 ಮಂತ್ರವಾದಿಯು ನೋಡಿ ಗ್ರಹಭಯವಿದೆಂದ ಯಂತ್ರದಲಿ ನೋಡಿದವ ಹೃದಯರೋಗೆಂದ ಚಿಂತಿಸುತ ಪಂಡಿತನು ಮೋಹಿನಿಯಿದೆಂದ ಅಂತ್ಯದಲಿ ರೋಗಿ ತನಗೊಂದಿಲ್ಲವೆಂದ 22 ಶಿಂಗಪ್ಪ ಕದ್ದು ತಾ ಜೈಲು ಸೇರಿದನು ಕಾಂಗ್ರಪ್ಪ ಜೈಲಿನಿಂದ ಬಂದು ಕುಳತಿಹನು ಹೇಂಗ್ರಪ್ಪ ಬದುಕುವುದು ಎಂದು ಫಲವೇನು ನುಂಗ್ರಪ್ಪ ಸುಖ ದು:ಖಗಳನು ಸಹಿಸುತಲಿ 23 ವೇದಾಂತಿಯಾಗೆನಲು ಹೊಟ್ಟೆಗಿಲ್ಲಂತೆ ಕಾದಾಡಿ ಬದುಕಲನುಭವವಿಲ್ಲವಂತೆ ಓದು ಬದುಕೆಂದರವಕಾಶವಿಲ್ಲಂತೆ ಆದುದಾಯಿತು ಹರಿಗೆ ಶರಣು ಹೊಡಿ ತಮ್ಮ25 ಯಮನು ತಲ್ಲಣಿಸುವನು ಸ್ಥಳವಿಲ್ಲವಂತೆ ಸುಮನಸರು ಆಳುತಿಹರು ಜನವಿಲ್ಲವಂತೆ ಕಮಲೆರಮಣಗೆ ಬಂತು ಪೀಕ್ಲಾಟವಂತೆ ಎಮಗೆಂಥ ಕಷ್ಟವು ಪ್ರಸನ್ನ ಹರಿಯಿರಲು26
--------------
ವಿದ್ಯಾಪ್ರಸನ್ನತೀರ್ಥರು
ಅರ್ಚನೆ ಬಗೆ ಕೇಳಿ ಲೋಕ ಪ ಕಣ್ಣು ಮುಚ್ಚಿ ಕುಳಿತರೆ ಕೊಡ ಹರಿ ಮುಕ್ತಿಲೋಕಾ ಅ.ಪ ಜಡವ ಪೂಜಿಸಿದರಲ್ಲೇನೊ ತಾನು | ಜಡ ತುಲ್ಯ | ನಾಗಿದ್ದಕೆ ಸಮವೇನು || ಕೆಡದಿರು ಇದರೊಳಗೆ ನೀನು ತಿಳಿ | ಒಡನೆ ಕರ್ಮಗಳೆಲ್ಲೇನುಂಟು ಕಾಣೋ 1 ಏಕಾಂತದಲಿ ನಿನ್ನ ಮನಸು ಅ | ನೇಕವಾಗುವುದು ನಿರಂತರ ಗುಣಿಸು || ನೀ ಕೇಳು ಯೋಚಿಸಿ ಗಣಿಸು | ಸರ್ವ ಆಕಾರದಲ್ಲಿ ಶ್ರೀ ಹರಿಯನ್ನೆ ನೆನಸು 2 ತ್ರಿವಿಧ ಜೀವರು ಮಾಡುವಂಥ ನಡತಿ | ಹವಣವ ನೋಡಿದು ಬಿಡು ನಿನ್ನ ಪಂಥ || ಕವಿಗಳೊಡನೆ ಸುಪಂಥದಿಂದ | ಪವಮಾನಮತ ಪೊಂದಿ ಭಜಿಪುದು ಇಂಥ 3 ದ್ಯುಣುಕ ಪಿಡಿದು ಬಹುಕಾಲತನಕ | ನಿತ್ಯ ಸುಶೀಲ || ಗುಣವಂತನಾಗೊ ನೀ ಬಹುಳ ಸುಖ- | ವನಧಿ ರಂಗನ ವ್ಯಾಪಾರವೆನ್ನೊ ಬಾಲ 4 ಆವಾಗ ಮರೆಯದಿರು ಹರಿಯ ಕಂಡ | ಠಾವಿನಲಿ ಯೋಚಿಸು ಅರಗಳಿಗೆ ಬಯಸದಿರು ಸಿರಿಯ || ದೇವ ವಿಜಯವಿಠ್ಠಲ ದೊರೆಯ ನಿನ್ನ ಭಾವದಲಿ ತಿಳಿಯೊ ಆತನ ಚರಿಯಾ 5
--------------
ವಿಜಯದಾಸ
ಅಲ್ಲಿಂದಲ್ಲೆದೆಮಾ ಅಲ್ಲಿಂದಲ್ಲೆದೆ ಘನಗುರುಮಹಿಮೆ ಧ್ರುವ ಅಲ್ಲಿಂದಲ್ಲಿದ್ದು ತಿಳಿಯದು ಲೋಕಾ 1 ಅಲ್ಯಾವನಾದರ ಅಲ್ಲೆವೇ ತಿಳಿದಾ 2 ಬಲ್ಲಮಹಿಮರ ಬಲಗೊಂಡು ಕೇಳಿ 3 ಒಳಗಲ್ಲ ಹೊರಗಲ್ಲ ಒಳಿತಾಗಿ ಕೇಳಿ4 ಕೆಳಗಲ್ಲ ಮ್ಯಾಲಲ್ಲ ತಿಳಿದುಕೊಂಡು ನೋಡಿ 5 ಹಿಂದಲ್ಲ ಮುಂದಲ್ಲ ಸಂಧಿಸಿ ನೋಡಿ 6 ಎಡಕಲ್ಲ ಬಲಕಲ್ಲ ಪಡಕೊಂಡು ನೋಡಿ 7 ದೂರಲ್ಲ ಸಾರ್ಯಲ್ಲ ಅರಿತಿನ್ನು ನೋಡಿ 8 ಬೆಡಗಿನ ಮಾತಲ್ಲ ಕಡಗಂಡು ನೋಡಿ 9 ಸ್ಥೂಲಲ್ಲ ಸೂಕ್ಷ್ಮಲ್ಲ ಭೇದಿಸಿ ನೋಡಿ 10 ಮನದಿರಗಿ ಉನ್ಮನವಾಗಲಿಕ್ಕೆ 11 ಕಣ್ಣದಿರಗಿ ಕಣ್ಣ ನೋಡಲಿಕ್ಕೆ 12 ಎಚ್ಚತ್ತು ಅಲ್ಲಿವೆ ಯೋಚಿಸಲಿಕ್ಕೆ 13 ಅರವಿನ ಮುಂದ ಮರವಿನ ಹಿಂದ 14 ಜಾಗ್ರ ನಿದ್ರಿ ಮಧ್ಯ ಅರುವಾಗಲಿಕ್ಕೆ 15 ಗುರುಕೃಪೆಯಿಂದಲಿ ಗುರುತಿಟ್ಟು ನೋಡಿ16 ಸಾಧಕನಾದರ ಸಾಧಿಸಬಹುದಿದು 17 ಭೇದಿಸೇನೆಂದರೆ ಭೇದಿಸಬಹುದಿದು 18 ಸೂರ್ಯಾಡೇನಂದರ ಸೂರ್ಯಾಡಬಹುದಿದು 19 ಖೂನಹೇಳಿದ ಮ್ಯಾಲ ಙÁ್ಞನೇನಬಹುದು 20 ಹೆಜ್ಜೆ ಹೇಳಿದ ಮ್ಯಾಲ ಸಜ್ಜನ ಅವನೀಗ 21 ಚೆನ್ನಾಗ್ಹೇಳಿದ ಮ್ಯಾಲ ಮನ್ನಿಸಬಹುದಿದು 22 ಗುರುತಹೇಳಿದ ಮ್ಯಾಲ ಗುರುಸ್ವರೂಪ ತಾಂ 23 ಸರಗಹೇಳಿದ ಮ್ಯಾಲ ಶರಣೆಂಬುದಾತಗ 24 ಅಲ್ಲಿಂದಲ್ಲೆಂಬುದನುಭವಾಗಬೇಕು 25 ಅನುಭವದೋರಿದ ಘನಗುರು ನಮ್ಮಯ್ಯ 26 ಲೇಸು ಲೇಸು ನಮ್ಮ ಭಾಸ್ಕರ ಗುರುದಯ 27 ಭಾಸುತ ಭಾಸ್ಕರಕೋಟಿ ತೇಜಾದನು 28 ದಾಸಮಹಿಪತಿಗೆ ಲೇಸು ಲೇಸಾಯಿತು 29
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವತಾರತ್ರಯ ಚರಣ ಸೇವಕರನ್ನು ಪೊರೆದ ಪ್ರಾಣೇಶನ್ನಹರುಷಾದಿ ವಂದಿಸಿ ವರಬೇಡಿರೈ ಪ ಕರುಣ ಸಾಗರ ಕಲ್ಪತರು ಭಕ್ತ ಕುಮುದ ಚಂದಿರನೆನಿಸುತಭೀಷ್ಟ ಸುರಿಸುವ ನೋಡಿರೈ ಅ.ಪ. ಸುದತಿ ಜಾನಕಿಯಾಪದಕೆರಗಿ ಪೇಳಿದ ಮುದದಿ ರಾಮನಹೃದಯ ವಾರುತಿಯಾಮುದ್ರಿಕೆಯ ಸಲಿಸುತ ವದಗಿದಸುರತ ಒಡೆದ ಕೀರುತಿಯಾಪಿಡಿಯಲ್ಕೆ ಕ್ಷಣದೊಳು ಕದನಕಂಠಕನೆನಿಪರಾವಣನೆದುರಿಸಿ ಗರ್ವ ಶಿಕ್ಷಿಸಲುಪುಚ್ಛದಲಿ ಪಟ್ಟಣ ಸುಟ್ಟು ದಹಿಸಿದಸದಯಕಾಮನ ಕಾರ್ಯ ಪೂರ್ತಿಯಾ 1 ದುರುಳ ಹರಣ ಸಂನುತ ಚರಣ ಕಮಲª Àಧರೆಯೊಳಗೆ ಪರಿಪರಿ ಮೆರೆದಾ 2 ಮರಳಿ ಭೂಸುರನು ಮಂದಿರದೊಳು ಜನಿಸಿತಾಗುರು ಮಧ್ವಮುನಿಯೆಂದು ಕರೆಸೀದನುವರವೇದವ್ಯಾಸರಾ ಕರುಣಪಡೆದು ದೇಶ ಸಂಚರಿಸಿದಾನಿಂದಕರ ಧಿಕ್ಕರಿಸಿದಾ ಸೇವಕರನುದ್ಧರಿಸಿದಾಗ್ರಂಥಗಳ ರಚಿಸಿ ಭರದಿ ಕಲಿ ಸಂಕರನೋಳ್ವಾದಿಸಿದಾಗುರು ಇಂದಿರೇಶನೆ ಧರೆಗೆ ಪಿತನೆಂದರುಹಿ ಸಾಧಿಸಿದಾಕರಕಂಜಜಾತದಿ ಕರಕೆ ಶಾಸ್ತ್ರದರಿವ ಬೋಧಿಸಿದಾನವರತ್ನ ಭಾಸಿತ ಕರಣಕುಂಡಲಮಕುಟ ಸಕಲಾಭರಣ ಭೂಷಿತಸುಮನಸೋತ್ತುಮ ಮುನಿಪ ಮಾನಂದಾತ್ಮಬುಜಗುಣದರಸೆ ಘನಸುಂದರ ಸುಖಪ್ರದ 3
--------------
ಗುರುಇಂದಿರೇಶರು
ಅವನಿಯೊಳವತರಿಸಿದ ವ್ಯಾಸರಾಯ ಭೂಸುರಜನವರ್ಯ ಸುವಿನೋದವ ಪಡೆದರು ಸುರನರಜನರು ಪ ಪವನಸುತರ ಮತ ಭುವಿಯಲಿ ಸುಲಭದಿ ವಿವರಿಸಿ ಜನರಿಗೆ ಪ್ರವಚನವೆಸಗಲು ಅ.ಪ ಗುರು ಬ್ರಹ್ಮಣ್ಯರ ವರಪದ ಕಮಲಗಳ ಪರತÀರ ಭಕುತಿಯಲಿ ಪರಿಪರಿ ಸೇವಿಸಿ ಗುರುಕರುಣದಲಿ ಹರುಷವ ಪೊಂದುತಲಿ ವರವ ಪಡೆದ ಭೂಸುರ ರಾಮಾರ್ಯರ ವರಸತಿಯುದರದಿ ವಹ್ನಿಪುರದೊಳವ ತರಿಸುವ ಧರೆಯೊಳು ಸುಜನಗಣವನು ದ್ಧರಿಸಲು ಮುದದಲಿ ಸಿರಿಪತಿಭಕುತನು 1 ಅತಿಬಾಲ್ಯದಿ ಗುರ್ವಾಜ್ಞೆಯನನುಸರಿಸಿ ಯತಿಯಾಶ್ರಮವಹಿಸಿ ಕ್ಷಿತಿಯೊಳಪರೋಕ್ಷಜ್ಞಾನಿಗಳೆಂದು ಪ್ರಥೆಯನು ಪೊಂದಿದ ಲಕ್ಷ್ಮೀನಾರಾಯಣ ಯತಿಯಲಿ ಶಾಸ್ತ್ರಾಮೃತ ಪಾನ ಮಾಡುತ ಅತಿ ಸುಲಭದ ಶ್ರುತಿಗಳ ಸಾರವ ಕ್ಷಿತಿ ಸುರರೊಳಗತಿ ಹಿತದಲಿ ಅರುಹಲು 2 ಗಜಗಹ್ವರ ದೇಶದ ನರಪತಿಗಳಿಗೆ ನಿಜವರ ಕರುಣದಲಿ ವಿಜಯಾಭ್ಯುದಯಗಳನು ಸತತ ಪೊಂದಿಸುತ ರಜತಕನಕ ನವಮಣಿಗಣಯುತ ವಾ ರಿಜವನು ಪೋಲುವ ಸಿಂಹಾಸನದಲಿ ಸುಜನ ಸಮೂಹಕೆ ನಿಜಪದಯುಗಳಾಂಬುಜ ಸೇವೆ ನೀಡಲು 3 ನಂದತೀರ್ಥರ ವರಶಾಸ್ತ್ರಗಳನ್ನು ಚಂದದಿ ವಿವರಿಸಲು ಚಂದ್ರಿಕಾ ನ್ಯಾಯಾಮೃತ ಮೊದಲಾದ ಗ್ರಂಥಗಳನು ರಚಿಸಿ ಮಂದಜನಕೆ ಮುಚುಕುಂದನ ಶುಭಗುಣ ವೃಂದಗಳನು ಸುಖದಿಂದ ಬೋಧಿಸಲು ಅಂದಪದಗಳನು ರಚಿಸುತ ಶುಭಗುಣ ಸಾಂದ್ರನ ಭಜನಾನಂದ ಪೊಂದಿಸಲು 4 ವಿಜಯೀಂದ್ರ ವಾದಿರಾಜ ಮೊದಲಾದ ನಿಜವರ ಶಿಷ್ಯರುಗಳ ವ್ರಜಕೆ ಶಾಸ್ತ್ರಾರ್ಥಗಳನು ಬೋಧಿಸುತ ಪುರಂದರ ಸುಜನ ಶಿರೋಮಣಿ ಕನಕ ಪ್ರಮುಖ ಪೂಜಿತ ಪದಯುಗಳಾಂಬುಜ ಯತಿಶೇಖರ ವಿಜಯಸಾರಥಿಯು ಪ್ರಸನ್ನನಾಗಲೆಂದು 5
--------------
ವಿದ್ಯಾಪ್ರಸನ್ನತೀರ್ಥರು