ಒಟ್ಟು 3042 ಕಡೆಗಳಲ್ಲಿ , 124 ದಾಸರು , 2171 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ತಾ ಸುಖವೊ ಮತ್ತಾವನಂದವೊ | ಈ ಉಡುಪಿ ಯಾತ್ರಿ ಮಾಡಿದ ಮನುಜಗೆ ಪ ಮನದೊಳಪೇಕ್ಷಿಸೆ ಅವನೀಗ ಹದಿನಾಲ್ಕು | ಮನುಗಳು ಭೂಮಿ ಆಳುವ ತನಕಾ | ಕನಕ ರಜತಪೀಠ ಗೋಕುಲದಿಂದ | ಸ | ಜ್ಬನ ಮಾರ್ಗದಲ್ಲಿ ಗುಣವಂತ ನೆನೆಸುವ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ | ಅಂದೆ ಸುರರೊಳು ಗಣನೆ ಎನ್ನಿ | ಒಂದಕ್ಕೆ ನೂರಾರು ಯಾಗ ಮಾಡಿದ ಫಲ | ತಂದು ಕೊಡುವ ಅಜನಾದಿ ಕಲ್ಪ ಪರಿಯಂತ2 ಅರ್ಧ ಮಾರ್ಗವು ಬರಲು ಬಂದೆ ದಿವಸದಲ್ಲಿ | ಸಾಧರ್À ತ್ರಿಕೋಟಿ ದೇವತೆಗಳಲಿ | ಊಧ್ರ್ವರೇತಸನಾಗಿ ಮಿಂದ ಫಲವಕ್ಕು | ಪರಿಯಂತ 3 ಕ್ಷೇತ್ರದ ಬಳಿಗಾಗಿ ಬರಲು ಅವನ ಏಳು | ಗೋತ್ರ ನೂರೊಂದು ಕುಲದವರು | ಗಾತ್ರವ ಮರೆದು ರೋಮಾಂಚನದಿಂದಲಿ | ಪಾತ್ರವನಾಡೋರು ಮೋಕ್ಷಮಾರ್ಗವ ಸಾರಿ4 ಕರವ ಜೋಡಿಸಿ ನಿಂದು | ಸನ್ನುತಿಸಿ ದರ್ಶನ ಮಾಡಲು | ಕರವ ತಿಳಿದು ಜ್ಞಾನ ಭಕುತಿ ಸಂ | ಪನ್ನ ವಿರುಕುತಿಲಿ ಗತಿಗಭಿಮುಖನಾಹ 5 ಮಧ್ವ ಸರೋವÀರದಲ್ಲಿ ಸ್ನಾನವಗೈದು | ಸಿದ್ಧಾಂತ ಕರ್ಮಗಳನನುಸರಿಸೀ | ಶುದ್ಧಾತ್ಮ ಕೃಷ್ಣನ ದೇವಾಲಯವ ಸಾರೆ | ಪೊದ್ದಿದಾ ಸತ್ಯಲೋಕದ ಸಭೆಯೊಳಗೆ 6 ಕೃಷ್ಣ ಕೃಷ್ಣ ಯೆಂದು | ನವ ವಿಧ ಪೂಜೆಯನ್ನು | ದೃಷ್ಟಿಯಿಂದಲಿ ನೋಡೆ ಅವನೆ ಮುಕ್ತಾ | ಮುಟ್ಟಿ ಪೂಜಿಸುವರ ಸತ್ಪುಣ್ಯ ವಿಜಯ | ವಿಠ್ಠಲ ತಾ ಬಲ್ಲ ನರರೆಣಿಸಲಳವಲ್ಲಾ 7
--------------
ವಿಜಯದಾಸ
ಆವ ತ್ರಾಣವು ಎನ್ನೊಳಿನಿತಿಲ್ಲವಯ್ಯ ಭಾವಜಪಿತ ನೀನೆ ದಯಮಾಡಬೇಕೊ ಪ ಗುಡಿಯ ಕಟ್ಟಿಸಲೆ ನಾ ಒಡುಕುಕವಡೆನಗಿಲ್ಲ ಬಡವರಿಗೆ ಅನ್ನಿಟ್ಟಿಲೆ ಹಿಡಿಧಾನ್ಯವಿಲ್ಲ ಕೊಡುವೆನೆನೆ ಧರ್ಮವ ಪಡೆದು ನಾ ಬಂದಿಲ್ಲ ಬಿಡುವೆನೇ ದು:ಸ್ಸಂಗ ಅಡರಿಹ್ಯರು ರಿಣವು 1 ದೃಢಧ್ಯಾತ್ಮಗೈವೆನೆನೆ ನಡೆವ ಶಕ್ತ್ಯೆನಗಿಲ್ಲ ಮಡಿಮಾಡ್ವೆನೆನೆ ಮನವು ತಡೆವಶಕ್ತಿಲ್ಲ ಸುಡಲೆ ಕಾಮಾದಿಗಳು ತೊಡರಿಹ್ಯದು ಸಂಸಾರ ನುಡಿಯಲೆ ಸತ್ಯ ಸದಾ ಬಡವನಾಗಿಹೆನು 2 ಒಡೆಯ ಶ್ರೀರಾಮ ನಿನ್ನಡಿಯ ಗುರುತರಿಯೆ ಕಡುಮೂರ್ಖ ಜನ್ಮವನು ಪಡೆದಿಹೆನು ಜಗದಿ ಒಡೆಯ ಸರ್ವಕೆ ನೀನೆ ಜಡಮತಿಯು ಗಡ ಕಡಿದು ದೃಢಭಕ್ತಿ ಸುಖವಿತ್ತು ಪಿಡಿದು ಸಲಹಯ್ಯ 3
--------------
ರಾಮದಾಸರು
ಆವ ಬಲವಿದ್ದರೇನು - ವಾಸುದೇವನಾ ಬಲವು ನಿಜವಾಗಿ ಇರದನಕ ಪ ನೊಸಲಗಣ್ಣನ ಬಲ ನಾಲ್ಕು ತೆರದ ಬಲತ್ರಿಶುಲ ಡಮರು ಅಗ್ನಿ ಫಣಿಯ ಬಲವುಪಶುಪತಿಯ ರೂಪಿನ ಬಲದ ಶಿಶುಪಾಲನಅಸುರಮರ್ದನ ಕೃಷ್ಣ ಶಿರವ ಛೇದಿಸುವಾಗ 1 ಹರನ ಕರುಣದ ಬಲವು ಸುರರ ಗೆಲಿದಾ ಬಲವುಪರಮ ಶಕ್ತಿಯು ತನ್ನ ಭುಜದ ಬಲವುಧರೆಯನೆತ್ತಿದ ಬಲವುಳ್ಳ ಹಿರಣ್ಯಾಕ್ಷನಶಿರವ ಹರಿ ವರಾಹನಾಗಿ ತರಿವಾಗ2 ಮುನ್ನ ಗೆಲಿದ ಬಲ ಮುಕ್ಕಣ್ಣ ಹರನ ಬಲಘನ್ನ ಲಂಕಿಣಿಯ ಕಾವಲಿನ ಬಲವುತನ್ನ ವಂಶದ ಬಲವುಳ್ಳ ರಾವಣನ ಶಿರವಸನ್ನುತ ರಾಘವ ಪಟ್ಟನೆ ಪಾರಿಸುವಾಗ 3 ಲಿಂಗಪೂಜೆಯ ಬಲ ನಿಶ್ಚಿಂತನಾಗಿಹ ಬಲಹಿಂಗದೆ ಹರನು ಬಾಗಿಲ ಕಾಯ್ದ ಬಲವುಮುಂಗೈಯ ಶಕ್ತಿ ಸಾವಿರ ತೋಳ ಬಾಣನತುಂಗ ವಿಕ್ರಮ ಕೃಷ್ಣ ತೋಳ ಖಂಡಿಸುವಾಗ 4 ಈಸು ದೇವರ ಬಲಗಳಿದ್ದರೆ ಫಲವೇನುವಾಸುದೇವನ ಬಲವಿಲ್ಲದವಗೆದೇಶಕಧಿಕ ಕಾಗಿನೆಲೆಯಾದಿಕೇಶವನಲೇಸಾದ ಚರಣ ಕಮಲದ ಬಲವಿರದನಕ 5
--------------
ಕನಕದಾಸ
ಆವದಿದು ಜ್ಞಾನ ಪ ಆವದಿದು ಜ್ಞಾನಾ ಬಲ್ಲವಿಕೆ ಜಾಣಾ | ಭಾವದುಗಮ ವರಿಯದೆವೆ ಜರಿದಿ ನಿಜ ಖೂನಾ 1 ಅರಹು ಆಗಲೆಂದು ಕುರುಹ ದೋರಿದೊಂದು | ಕುರುಹವಿಡದ ಕೊಡ ತಿರುಗಿ ಅರಹು ಮರದಿಂದ 2 ಕಲಿತು_ವಾಡುದು ಸೊಲ್ಲಾ ಗುಣಕ ಬಾಹುದಲ್ಲಾ | ಕಳೆದು ಅನುಮಾನ ಶಾಂತಿ ಸುಖವ ಪಡೆಯಲಿಲ್ಲಾ 3 ಅರಿಯದಿದ್ದರ ಕೀಲು ಸಾಧು ಸಂತರು ಕೇಳು | ಗರುವತನವ ನೀಗಿ ಯಲ್ಲರ ಕಿರಿಯನಾಗಿ ಬಾಳು 4 ಸಾರಥಿ | ಹೊಂದಿದವರ ನೋಡಿ ಕೊಡುವ ಮತಿ ಸ್ಫೂರ್ಥಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವರೀತಿಲಿ ಎನ್ನ ಕಾವದೇವರು ನೀನಿ ನ್ನಾವ ದೈವದ ಬಲವು ನಾನೊಲ್ಲೆ ಸ್ವಾಮಿ ಪ ಆವರೀತಿಲಿ ಬಿಡದೆ ನೀ ಎನ್ನ ಕಾಯೊ ಭಕ್ತರ ಜೀವದರಸನೆ ಭಾವಜಪಿತ ನಿನ್ನ ಬಿಟ್ಟ ನ್ನ್ಯಾವ ದೇವರು ಇಲ್ಲ ಎನಗೆ ಅ.ಪ ಕುಸುಮಾಕ್ಷ ತವಧ್ಯಾನ ನಿಶಿದಿವದೊಳು ಬಿಡದೆ ಹಸನಾಗಿ ಭಜಿಪಂಥ ಕುಶಲಮತಿ ನೀಡಿ ಪುಸಿಯ ಸಂಸಾರದ್ವೆಸನವಳುಕಿಸಿ ಅಸಮ ಸಂತಸಸುಖವ ಕರುಣಿಸಿ ಅಸುವುಪೋದರು ಪುಸಿಯನಾಡದ ಸುಶೀಲ ಮನವಿತ್ತು ಪೋಷಿಸಭವ 1 ಬಿಡದೆಕಾಡುವ ಎನ್ನ ಕಡು ಜಡಮತಿಯನ್ನು ಕಡಿದೊಡನೆ ನುಡಿಯಂತೆ ನಡೆಯನೆನ್ನೊಡಲಿಗೆ ಗಡನೆ ಸ್ಥಿರಮಾಡಿ ಎಡರು ತೊಡರಿನ ಜಡರಿನೊಳಗಿಂದ ಕಡೆಗೆ ನಿಲ್ಲಿಸಿ ಒಡೆಯ ನಿನ್ನ ಅಡಿದೃಢವನಿತ್ತು ಪಿಡಿದು ನೀ ಎನ್ನ ಬಿಡದೆ ಸಲಹೊ 2 ರತಿಪತಿಪಿತ ನೀನೆ ಗತಿಯೆಂಬ ಸಿದ್ಧಾಂತ ನುತಿಯ ಮಂತ್ರವನೆನಗೆ ಹಿತದಿಂ ಪಾಲಿಸು ಸತತ ನಿನ್ನನು ಸ್ತುತಿಪ ಭಕ್ತರ ಹಿತದ ದರುಶನ ಪ್ರಥಮವಿತ್ತೆನ್ನ ಗತಿಸದಂಥ ನಿಜಸ್ಥಿತಿಯ ಸಂಪದ ವಿತ್ತು ರಕ್ಷಿಸೋ ಶ್ರೀರಾಮ ಪ್ರಭುವೆ 3
--------------
ರಾಮದಾಸರು
ಆವಾವ ಬಗೆಯಿಂದ ಹರಿಗರ್ಪಿಸೊ ಭಾವ ಶುದ್ಧನಾಗಿ ಮುಖ್ಯತ್ವ ವಹಿಸದೆ ಪ ನೋಡುವ ನೋಟಗಳು ಹರಿಯೆ ನೋಡಿದನೆನ್ನಿ ಆಡುವ ಮಾತುಗಳು ಹರಿಯೆ ಆಡಿದನೆನ್ನಿ 1 ನಡಿವ ನಡಿಗೆ ಎಲ್ಲ ಹರಿಯೆ ನಡೆದನೆನ್ನಿ ಕೊಡುವ ದಾನಗಳು ಹರಿಯೆ ಕೊಟ್ಟನೆನ್ನಿ ಒಡನಾಡುವ ಲೀಲೆ ಹರಿಯೆ ಆಡಿದನೆನ್ನಿ ಪಿಡಿವ ಚೇಷ್ಟೆಗಳೆಲ್ಲ ಹರಿಯೆ ಪಿಡಿದನೆನ್ನಿ 2 ಕೇಳುವ ಶಬ್ದಗಳು ಹರಿಯೆ ಕೇಳಿದನೆನ್ನಿ ಹೇಳುವ ವಿಧವನಿತು ಹರಿಯೆ ಎನ್ನಿ ಮಾಲೆ ಧರಿಸುವುದು ಹರಿಯೆ ಧರಿಸಿದನೆನ್ನಿ ಮೇಲು ಸುಖ ಬಡುವುದು ಹರಿಯೆ ಎನ್ನಿ3 ಕೊಂಡ ಎನ್ನಿ ಭೂಷಣವಿಡುವುದು ಹರಿಯೆ ಎನ್ನಿ ಲೇಸು ಬಯಸುವುದು ಹರಿಯೆ ಬಯಿಪನೆನ್ನಿ ಗ್ರಾಸ ಮೆಲುವದೆಲ್ಲ ಹರಿಯೆ ಎನ್ನಿ 4 ಸತಿಯ ಕೂಡುವದೆಲ್ಲ ಹರಿಯೆ ಕೂಡಿದನೆನ್ನಿ ಹಿತವಾಗಿಪ್ಪದು ಹರಿಯೆ ಎನ್ನಿ ಸುತರ ಪಡೆದಾದಲ್ಲಿ ಹರಿಯೆ ಪಡೆದನೆನ್ನಿ ಪ್ರತಿಕೂಲವಾಗುವುದೆ ಹರಿಯೆ ಎನ್ನಿ 5 ಬಳಗ ಸಾಕುವುದೆಲ್ಲ ಹರಿಯೆ ಸಾಕಿದನೆನ್ನಿ ಸುಲಭನಾದರೆ ಹರಿಯಾದನೆನ್ನಿ ಗಲಭೆ ಮಾಡುವುದೆಲ್ಲ ಹರಿಯೆ ಮಾಡಿದನೆನ್ನಿ ಸುಳಿದಾಡುವುದೆಲ್ಲ ಹರಿಯೆ ಎನ್ನಿ 6 ಏನೆಂಬೆ ಹರಿ ಲೀಲೆ ನಿರ್ದೋಷ ನಿಸ್ಸಂಗ ಅನಂತಕಾಲಕ್ಕೂ ಎಲ್ಲಿದ್ದರು ಕಾಯ ವಿಜಯವಿಠ್ಠಲರೇಯ ನಾನಾ ವ್ಯಾಪಾರಗಳ ಮಾಳ್ಪನೆನ್ನಿ 7
--------------
ವಿಜಯದಾಸ
ಆಸೆಗೆ ಮೇರೆಯನು ನಿರ್ಮಿಸಿದಿಯಿಲ್ಲವೋ ಬೇಸರವೆ ಇಲ್ಲಿದಕೆ ಎಷ್ಟಾದರಕಟ ಪ ಅನ್ನ ಸಿಗದ್ಹೊತ್ತಿನಲಿ ಅನ್ನ ಸಿಕ್ಕರೆ ಸಾಕು ಅನ್ಯಮೇನೊಲ್ಲೆಂದು ನಿನ್ನ ಕೋರುವುದು ಅನ್ನ ಚೆನ್ನಾಗಿ ಸಿಗಲು ತಣ್ಣಗಿರದುಂಡುಟ್ಟು ಹೊನ್ನು ಚಿನ್ನಕೆ ಸೋತು ಬನ್ನಬಡಿವುದಭವ 1 ಕಡುಕ್ಷೇತ್ರ ಮಾನ್ಯತನಗಡವಿ ತುಂಬಿರ್ದರು ಮಿಡುಕುವುದು ತಡೆಯದೆ ಎಡಬಲದಲಿರುವ ಬಡವರಾಸೆಗೆ ಕಂಡು ಪಡೆವ ಲವಲವಿಕೆಯಿಂ ಬಿಡದೆ ಅವರಿಗೆ ಕೆಡುಕು ಹುಡುಕುವುದು ಹರಿಯೆ 2 ಪೊಡವಿಯೆಲ್ಲನು ಒಂದೇ ಕೊಡೆಯಿಂದಾಳಲು ಮತ್ತು ಪಡೆಯಲಿಚ್ಛಿಪುದಿತರ ಪೊಡವಿಪರ ರಾಜ್ಯ ಸುಡುಗಾಡು ಕಡೆತನಕ ಸುಡುಸುಡೀ ಆಸೆಯನು ಬಿಡಿಸೆನ್ನ ರಕ್ಷಿಸೈ ಒಡೆಯ ಶ್ರೀರಾಮ 3
--------------
ರಾಮದಾಸರು
ಆಸೆಪಡಬೇಡ ಮನುಜ ತಿಳಿಯದೆ ದುರಾಸೆ ಪಡಬೇಡ ಪ ಮೋಸ ಮಾರ್ಗಪಿಡಿದು ಮೂಢರನ್ನು ನೋಡಿ ನೋಡಿ ಅ.ಪ ಚಿಂತಿಸಿ ಭ್ರಾಂತನಾಗಿ ಸಂತೋಷವಿಲ್ಲದೆ ಸದಾ ಶಾಂತಚಿತ್ತರ ಕೂಡದೆ ಸಂತೆ ಕೂಟವನ್ನು ನಂಬಿ 1 ಮುಂದಿನ ಗತಿ ಗೋತ್ರವು ಸಂದೇಹವಾಗುವದೆಲೊ 2 ಶರಣರನಾಶ್ರಯಸದೆ ಕರೆ ಕರೆ ಸಂಸಾರದಿ3
--------------
ಗುರುರಾಮವಿಠಲ
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಇ. ದೇವತಾ ಸ್ತುತಿ ವಾಯುದೇವರು ಇನ್ನಾದರೂ ಸುಮುಖನಾಗೊ ಧ್ವರಿಯೇ ಪ ಪರಿ ವಿಧದಿಂದ ನೊಂದು ಕರಮುಗಿದುಬಾಯ್‍ತ್ಯರದು ಕೂಗಿ ಕರಿವೆ ಸದ್ಗುರುರಾಜನೆಂದು ಅ.ಪ. ಪಾದ ನಂಬಿದ ಭಕ್ತರಿಗಾನಂದಗರಿವೆನೆಂಬ ಬಿರುದಾಂಕಿತನಾಗಿ ಸದ್ವøಂದದೊಳಗಿಪ್ಪೆ ರಾಜಾಚಾರು ಗುರು ಬೃಂದಾವನಾರ್ಯರ ಪೊರೆದ ಮಂದಾಕಿನಿಧರ ಧವಳಾಖ್ಯವಾಸಾ ಭೋಜಾ 1 ಭುವನದೊಳು ಸರಿಗಾಣೆ ನಿನಗಿನ್ನು ಪರಮಾಪ್ತ ಶಿರೋಮಣಿಗಳೊಳು ಸರ್ಜಿಸಿದ ಕಾರಣ ವಜ್ರಲೇಪನ ಮಾಡಿ ಊರ್ಜಿಸುವತ್ಯರ ಮಾಡು ಎನ್ನಾ 2 ಪರಮ ಪಾಮರನು ನಾನಯ್ಯ ಪವಮಾನರಾಯಾಪಾರುಗಾಣದೆ ಶರಧಿಯೊಳು ಮುಳುಗುವ್ಯನೋಕರವಿಡಿದು ತಡಿಗೆತ್ತಿ ಕಾಪಾಡು ತಂದೆವರದಗೋಪಾಲವಿಠಲನ ಮರಿಯೇ 3
--------------
ತಂದೆವರದಗೋಪಾಲವಿಠಲರು
ಇ. ಶ್ರೀ ಹರಿಯ ಸ್ತುತಿ ತಿರುಪತಿ ಶ್ರೀನಿವಾಸ ದೇವರು ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋಗುಡ್ಡದಿ ಸೇರುತ ಬಡ್ಡಿ ಸಹಿತ ಪರದುಡ್ಡು ಸೆಳೆವರೇನೋ ಪ ಕೊಟ್ಟಾದನ್ನುಣ್ಣುತ ದೇಹವ ಪುಷ್ಟಿಸಿ ಕಾದಿರುಶಕಟ್ಟಿದ ಹಣವನು ಕಷ್ಟದಿ ಕೊಡದಿರೆ ಕುಟ್ಟಿ ಸೆಳೆದು ತರುವಿ ಚಾಳಿ ಕೆಟ್ಟದು ಕಲಿತಿರುವಿ 1 ಶಿಷ್ಟರು ಗುಡಿಯೊಳು ಬಂದರೆ ಅವರನು ಅಟ್ಟಿಸಿ ಹೊರಡಿಸುವಿಮೊಟ್ಟೆಯಲಿ ಹಣ ಕಟ್ಟಿದವರು ಬರೆ ದೃಷ್ಟಿಸಿ ಮನ್ನಿಸುವಿಚಾಳಿ ಕೆಟ್ಟದು ಕಲಿತಿರುವಿ 2 ಕಾಳಗ ನಡೆಸಿರುವಿಶ್ರೀಲೋಲನೆ ಮುಖತೋರಿಸು ಎಂದರೆ ಆಲಯಕ್ಹೋಗೆನುವಿಚಾಳಿ ಕೆಟ್ಟದು ಕಲಿತಿರುವಿ 3 ಹುಚ್ಚುನ ತೆರದೆಲೆ ಮಾತುಗಳಾಡುವಿ ನಿಶ್ಚಯ ಒಂದಿಲ್ಲಾತುಚ್ಛಿಸಿ ಎಲ್ಲವ ನಿನ್ನಲಿ ಬಂದರೆ ಮತ್ಸರ ನಡೆಸಿರುವಿಚಾಳಿ ಕೆಟ್ಟದು ಕಲಿತಿರುವಿ 4 ಶುಭ ದಾಸನಾಗಿದ್ದಿಈ ಸಮಯದೀತನು ಪೋಷಿಸಲು ವಿಷಯಾಸೆಯನಾಗಿದ್ದಿಧನರಾಸಿಯೊಳಗೆ ಬುದ್ಧಿ ಇಂದಿರೇಶನೆ ಕಲಿಸಿದ್ದಿ 5
--------------
ಇಂದಿರೇಶರು
ಇಕೋ ಈತ ವೆಂಕಟೇಶನೊ | ಭವದ | ಸಿಕ್ಕು ಬಿಡಿಸಿ ನೆನದವರಿಗೆ ಸಿಕ್ಕಿ ಮನದಿಂದಗಲದಿಪ್ಪಾ ಪ ಕರುಣ ಅರುಣ ಕಿರಣ ಪೋಲುವ | ಚರಣ ಧರಣಿ ತರುಣಿ ಸ್ಮರಿಸಿ | ಕರುಣಗಡಲಾ | ಧರಣಿಯಿಂದ ಉದ್ಧರಣೆ ಮಾಡಿದೆ ಪರಣನೀತ 1 ಮಂಡಿಯ ಮಂಡನ | ಕುಂಡಲ ಕಾಂತಿ | ಗಂಡ ಸ್ಥಳದಲಿ ಮಿರುಗೆ ತುಲಸಿ | ಕೌಸ್ತುಭ ಕಾಲ | ಪೆಂಡೆಯಿಟ್ಟು ನಂದನೀತ 2 ವಾಹನ ಆ ಖಂಡಲ ಇಕ್ಷುಕೋ | ಪರಮೇಷ್ಠಿ | ತೊಂಡರ ನಲಿದು ಕೊಂಡಾಡೆ ಚಂದಿರ ಮಂಡಲದೊಳು ಉ| ದ್ದಂಡನಾಗಿಯಿಪ್ಪಾ | ಪುಂಡ ದೈವನೀತ 3 ಪಂಜಿನಸಾಲು ಪರಂಜಳಿ ವಾದ್ಯ ವಿ | ರಂಜಿಸಲು ಜ್ಞಾನ | ಪುಂಜ ನಾರದ ಜಯ ಜಯ ಪೇಳಲು | ನಿರಂಜನ ಭಂಜನ ಈಶಾ 4 ಕರದ ಜನಕೆ ಸುರಧೇನು ಇದು | ನಿರುತದಲ್ಲಿ ಪೊರೆವ ಭಕ್ತರ | ಕರಿಯ ಕಾಯ್ದ ವಿಜಯವಿಠ್ಠಲ | ಪರಮ ಪುರುಷ ತಿರುಮಲನೀತ 5
--------------
ವಿಜಯದಾಸ
ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ ಭಜಿಸುವೆ ಪಸಾಕೊ ಸಂಸೃತಿಯಾಟವಿಷ್ಟರ ಮೇಲೆನೂಕೊ ರಾಗ ದ್ವೇಷಗಳ ಚನ್ನಾಗಿಕಾಕೋದರನಂತೆ ಕಾಡದೆ ಜನರನುಬೇಕೋ ಸಾಧನಗಳ ನೀ ಸಾಧಿಸಲು 1ಏಕೋ ಮೂಢನಂದದಿ ಸುಮ್ಮನಿರುವೆ ವಿವೇಕೋಪಚಯವ ಮಾಡು ಮನದಲಿಲೋಕೋಪಕಾರವ ನಡಸು ನಿಷ್ಕಪಟದಿಈ ಕೋಪವ ಬಿಟ್ಟರಿದಿರಾರು ನಿನಗೆ 2ಫಣ ಕೋಪಮನನಾಗಿ ಪಗಲ ಕಾಣದೆ ನಿನ್ನನಾ ಕೋಪಮೆಗೆ ಪೆಚ್ಚಿದ ನಿಜ ಸುಖವಾತಾಕೋ ಶ್ರೀ ಪಾದವನು ಗೋಪಾಲಾರ್ಯನಕೋ ಕೋ ಎಂದು ಕೊಡುವನು ಮುಕುತಿಯನು 3
--------------
ಗೋಪಾಲಾರ್ಯರು
ಇಕ್ಕೊ ಇಲ್ಲೆ ಹರಿ ಇದ್ದಾನೆ | ಸಿಕ್ಕುವಾ ಸದ್ಗುರು ಕರುಣದಲಿ ಧ್ರುವ ಆದಿ ಅನಾದಿಯ ಹಾದಿ ವಿಡಿದು | ಸಾಧಿಸಿ ನೋಡಿರಯ್ಯ ಸಜ್ಜನರು | ವೇದಾಂತದ ಸುಸಾರವಿದು | ಭೇದಿಸಿದವರಿಗೆ ಭಿನ್ನವಿಲ್ಲ 1 ತನ್ನೊಳಗಾಗಿರಲಿಕ್ಕೆ ಭಿನ್ನವ್ಯಾಕೆ | ಚೆನ್ನಾಗಿ ನೋಡುವದು ಉನ್ಮನದಲಿ | ಇನ್ನೊಬ್ಬರಿಗೆ ತಾ ತಿಳಿಯದು | ಧನ್ಯವಾದರು ಅನುಭವಿಗಳು2 ಸೆರಗು ಸಿಲ್ಕಲಿಲ್ಲ ನಾಲ್ಕರಲಿ | ಅರಹು ಆಗಲಿಲ್ಲ ಆರರಲಿ | ಪೂರಿಸಲಿಲ್ಲ ಭಾವ ಮೂರಾಗಲಿ | ತೋರಿದ ಸದ್ಗುರು ಎನ್ನೊಳಗೆ 3 ಮೋಸಹೋಯಿತು ಜಗ ವೇಷದಲಿ | ವಾಸತಿಳಿಯದೆ ವಾಸುದೇವನ | ಕಾಸಿನ ಆಶೆಗೆ ದಾಸರಾಗಿ | ಘಾಸಿ ಆಯಿತು ಭವಪಾಶದಲಿ 4 ಸಣ್ಣದೊಡ್ಡದರೊಳು ಸಾಕ್ಷವಾಗಿ | ಬಣ್ಣ ಬಣ್ಣದಲಿ ತಾ ಭಾಸುತಿಹ್ಯ | ಕಣ್ಣಾರೆ ಕಂಡು ಗುರು ಕೃಪೆಯಿಂದ | ಧನ್ಯವಾದ ಮೂಢ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ ಧ್ರುವ ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು